Tag: Sara Mahesh

  • ನಮ್ಮ ಸಂಪರ್ಕದಲ್ಲಿರುವ ಬಿಜೆಪಿ ಶಾಸಕರು ರಾಜೀನಾಮೆ ನೀಡ್ತಾರೆ: ಸಾರಾ ಮಹೇಶ್

    ನಮ್ಮ ಸಂಪರ್ಕದಲ್ಲಿರುವ ಬಿಜೆಪಿ ಶಾಸಕರು ರಾಜೀನಾಮೆ ನೀಡ್ತಾರೆ: ಸಾರಾ ಮಹೇಶ್

    ಬೆಂಗಳೂರು: ಕಾಂಗ್ರೆಸ್ಸಿನ ಶಾಸಕರು ಯಾರೂ ರಾಜೀನಾಮೆ ನೀಡುವುದಿಲ್ಲ. ನಮ್ಮ ಸಂಪರ್ಕದಲ್ಲಿರುವ ಬಿಜೆಪಿ ಶಾಸಕರೇ ರಾಜೀನಾಮೆ ಕೊಡಬಹುದು ಎಂದು ಪ್ರವಾಸೋದ್ಯಮ ಸಚಿವ ಸಾರಾ ಮಹೇಶ್ ಹೇಳಿದ್ದಾರೆ.

    ಬಿಜೆಪಿಯವರ ಸಂಪರ್ಕದಲ್ಲಿ ಆರೆಂಟು ಶಾಸಕರೂ ಇಲ್ಲ. ಪಕ್ಷೇತರರು ಇಬ್ಬರು ಸೇರಿ ಮೂರ್ನಾಲ್ಕು ಶಾಸಕರು ಇದ್ದಿರಬಹುದು. ಎಲ್ಲವೂ ನಾಳೆ ಬಹಿರಂಗ ಆಗುತ್ತದೆ. ಜೆಡಿಎಸ್ ಪಕ್ಷದ ಶಾಸಕರು ಒಗ್ಗಟ್ಟಾಗಿದ್ದಾರೆ. ಸರ್ಕಾರ ಉಳಿಸಲು ನಾವು ಯಾವ ತ್ಯಾಗಕ್ಕೂ ಸಿದ್ಧ ಎಂದು ಅವರು ಈ ವೇಳೆ ತಿಳಿಸಿದರು.

     

    ಆಪರೇಷನ್ ಕಮಲ ಇಲ್ಲ: ಕಾಂಗ್ರೆಸ್‍ನ ಕೆಲ ಶಾಸಕರು ನಮ್ಮ ಸಂಪರ್ಕದಲ್ಲಿ ಇರುವುದು ನಿಜ. ಆದರೆ ಬಿಜೆಪಿ ಯಾವುದೇ ಆಪರೇಷನ್ ಕಮಲ ಮಾಡುತ್ತಿಲ್ಲ ಎಂದು ಕೇಂದ್ರ ಸಚಿವ ರಮೇಶ ಜಿಗಜಿಣಗಿ ಹೇಳಿದ್ದಾರೆ.

    ಚಿಕ್ಕೋಡಿಯಲ್ಲಿ ಮಾತನಾಡಿದ ಅವರು ಬಿಜೆಪಿಯ 104 ಶಾಸಕರು ದೆಹಲಿಯಲ್ಲಿ ಸೇರಿದ್ದು ನಿಜ. ಎಲ್ಲರೂ ಲೋಕಸಭಾ ಚುನಾವಣಾ ವಿಚಾರವಾಗಿ ನಡೆದ ಚರ್ಚೆಯಲ್ಲಿ ಭಾಗಿಯಾಗಿದ್ದರು. ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಸಲಹೆಯಂತೆ ಎಲ್ಲರೂ ಸಭೆ ನಡೆಸಿ, ಚರ್ಚೆ ಮಾಡಿದ್ದೇವೆ ಎಂದು ಸ್ಪಷ್ಟನೆ ನೀಡಿದರು.

    ಬಿಜೆಪಿಯವರನ್ನು ಬಿಟ್ಟರೆ ಬೇರೆ ಪಕ್ಷದ ಶಾಸಕರು ದೆಹಲಿಗೆ ಬಂದಿಲ್ಲ. ನಾವು ಮಾತ್ರ ಲೋಕಸಭಾ ಚುನಾವಣೆಯ ವಿಚಾರವಾಗಿ ಅಷ್ಟೇ ಚರ್ಚೆ ಮಾಡಿದ್ದೇವೆ. ಆಪರೇಷನ್ ಕಮಲದ ಬಗ್ಗೆ ಮಾತುಕತೆಯಾಗಿಲ್ಲ ಎಂದು ತಿಳಿಸಿದರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv, ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ಮೈಸೂರಿನಲ್ಲಿ ಬಿಜೆಪಿ, ಜೆಡಿಎಸ್ ಮೈತ್ರಿ – ಸುಳಿವು ಬಿಟ್ಟುಕೊಟ್ಟ ಸಚಿವ ಸಾರಾ ಮಹೇಶ್

    ಮೈಸೂರಿನಲ್ಲಿ ಬಿಜೆಪಿ, ಜೆಡಿಎಸ್ ಮೈತ್ರಿ – ಸುಳಿವು ಬಿಟ್ಟುಕೊಟ್ಟ ಸಚಿವ ಸಾರಾ ಮಹೇಶ್

    ಮೈಸೂರು: ಜಿಲ್ಲೆಯ ಮಹಾನಗರ ಪಾಲಿಕೆ ಮೇಯರ್ ಗದ್ದುಗೆಗಾಗಿ ಗುದ್ದಾಟ ಆರಂಭವಾಗಿದ್ದು ಮತ್ತೆ ರೆಸಾರ್ಟ್ ರಾಜಕಾರಣ ಶುರುವಾಗಿದೆ.

    ರಾಜ್ಯದಲ್ಲಿ ಕಾಂಗ್ರೆಸ್ ಹಾಗೂ ಜೆಡಿಎಸ್ ಮೈತ್ರಿ ಮಾಡಿಕೊಂಡು ಆಡಳಿತ ನಡೆಸುತ್ತಿದ್ದರೆ. ಇತ್ತ ಮೈಸೂರಿನಲ್ಲಿ ಜೆಡಿಎಸ್ ಹಾಗೂ ಬಿಜೆಪಿ ಮೈತ್ರಿ ಮಾಡಿಕೊಳ್ಳಲು ಮುಂದಾಗಿವೆ. ಇಂತದೊಂದು ಸುಳಿವನ್ನು ಸಚಿವ ಸಾರಾ ಮಹೇಶ್ ಬಿಟ್ಟುಕೊಟ್ಟಿದ್ದಾರೆ.

    ಸ್ಥಳೀಯ ಚುನಾವಣೆಯಲ್ಲಿ ಕಾಂಗ್ರೆಸ್ ನಿಂದ ಒಮ್ಮೆ ನೋವಾಗಿದೆ. ಮೈತ್ರಿ ವೇಳೆ ಇದ್ದಕಿದ್ದಂತೆ ನಾಮಪತ್ರ ಸಲ್ಲಿಸಿ ತೊಂದರೆ ಕೊಟ್ಟಿದ್ದರು. ಅದಕ್ಕಾಗಿ ಈ ಬಾರಿ ಮೊದಲಿಗೆ ಜೆಡಿಎಸ್‍ಗೆ ಮೇಯರ್ ಸ್ಥಾನ ಬೇಕು ಎಂದು ಕೇಳಿದ್ದೇವೆ. ಆದರೆ ಮಾಜಿ ಸಿಎಂ ಸಿದ್ದರಾಮಯ್ಯ ಹೆಚ್ಚು ಮತ ಇರುವವರಿಗೇ ಮೇಯರ್ ಸ್ಥಾನ ಎಂದು ಹೇಳಿದ್ದಾರೆ. ಸದ್ಯ ಮೇಯರ್ ಆಯ್ಕೆ ಮಾಡುವ ಮತದಾರರ ಸಂಖ್ಯೆ ಜೆಡಿಎಸ್‍ನಲ್ಲಿ ಹೆಚ್ಚಿದೆ. ನಾವು ಈಗಾಗಲೇ ಬಿಬಿಎಂಪಿಯಲ್ಲೂ ಕಾಂಗ್ರೆಸ್ಸಿಗೆ ಅಧಿಕಾರ ಬಿಟ್ಟುಕೊಟ್ಟಿದ್ದೇವೆ. ಈಗ ನಮಗೆ ಅಧಿಕಾರ ಕೇಳುತ್ತಿದ್ದೇವೆ ಎಂದು ಹೇಳಿದ್ದಾರೆ.

    ಬಿಜೆಪಿ ನಾಯಕರು ಈಗಾಗಲೇ ಜೆಡಿಎಸ್ ಜೊತೆ ಮಾತುಕತೆ ನಡೆಸಿದ್ದಾರೆ ಎಂದು ಕಾಂಗ್ರೆಸ್ಸಿಗೆ ಸಚಿವ ಸಾ.ರಾ.ಮಹೇಶ್ ನೇರವಾಗಿ ಟಾಂಗ್ ಕೊಟ್ಟಿದ್ದಾರೆ. ಜೆಡಿಎಸ್ ಸದಸ್ಯರು ಈಗಾಗಲೇ ರೆಸಾರ್ಟ್ ಗೆ ತೆರಳಿದ್ದು, ನಮ್ಮ ಸದಸ್ಯರು ಕಾಂಗ್ರೆಸ್ಸಿನಂತೆ ಹೆದರಿಕೊಂಡು ರೆಸಾರ್ಟ್ ಗೆ ಹೋಗಿಲ್ಲ. ಎಲ್ಲರೂ ಕೂತು ಸಮಾಲೋಚನೆ ನಡೆಸಲು ನಾವೇ ಕಳುಹಿಸಿಕೊಟ್ಟಿದ್ದೇವೆ. ಶಾಸಕ ತನ್ವೀರ್ ಸೇಠ್ ಈಗಾಗಲೇ ಬಂದು ಭೇಟಿಯಾಗಿ ಹೋಗಿದ್ದಾರೆ. ಮಾತುಕತೆ ನಡೆಸಿ ಮತ್ತೊಮ್ಮೆ ಬರುವುದಾಗಿ ತಿಳಿಸಿದ್ದಾರೆ ಎಂದು ಸಚಿವ ಸಾ.ರಾ.ಮಹೇಶ್ ಹೇಳಿದ್ದಾರೆ.

    ಮೈಸೂರು ಮೇಯರ್ ಚುನಾವಣೆ ಉಸ್ತುವಾರಿಯನ್ನು ಕೃಷ್ಣ ಭೈರೇಗೌಡರಿಗೆ ವಹಿಸಲಾಗಿದ್ದು, ಸಿದ್ದರಾಮಯ್ಯ ಹಾಗೂ ದಿನೇಶ್ ಗುಂಡೂರಾವ್ ಸೂಚನೆ ಮೇರೆಗೆ ಇಂದು ಮೈಸೂರಿಗೆ ಆಗಮಿಸಿ ಖಾಸಗಿ ಹೋಟೆಲ್‍ ನಲ್ಲಿ ಸಭೆ ನಡೆಸಲಿದ್ದಾರೆ. ಇತ್ತ ಮಾಜಿ ಸಿಎಂ ಸಿದ್ದರಾಮಯ್ಯರವರ ಮೈಸೂರಿನ ನಿವಾಸದಲ್ಲಿ ಕಾಂಗ್ರೆಸ್ ನಾಯಕರು ಮಾತುಕತೆ ನಡೆಸಿದ್ದಾರೆ.

    ಸಂಜೆ ಕೃಷ್ಣ ಭೈರೇಗೌಡರ ನೇತೃತ್ವದಲ್ಲಿ ನಾಳೆಯ ಮೇಯರ್ ಚುನಾವಣೆ ವಿಚಾರವಾಗಿ ಸಭೆ ನಡೆಯಲಿದ್ದು, ಮೈಸೂರಿನ ಶಾಸಕರು, ಜಿಲ್ಲಾಧ್ಯಕ್ಷರು, ನಗರಾಧ್ಯಕ್ಷರು ಮತ್ತು ನಗರ ಪಾಲಿಕೆ ಸದಸ್ಯರು ಸಭೆಯಲ್ಲಿ ಭಾಗಿಯಾಗಲಿದ್ದಾರೆ. ಸದಸ್ಯರ ಮತ್ತು ಜನಪ್ರತಿನಿಧಿಗಳ ಅಭಿಪ್ರಾಯ ಸಂಗ್ರಹಿಸಿ ಸಿದ್ದರಾಮಯ್ಯ ದಿನೇಶ್ ಗುಂಡೂರಾವ್‍ ಗೆ ಮಾಹಿತಿಯನ್ನು ಕೃಷ್ಣಭೈರೇಗೌಡ ನೀಡಲಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv
    ಪಬ್ಲಿಕ್ ಟಿವಿ ಆಪ್ ಡೌನ್ ಲೋಡ್ ಮಾಡಿ: play.google.com/publictv
    ಯೂ ಟ್ಯೂಬ್‍ನಲ್ಲಿ ಪಬ್ಲಿಕ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿ: youtube.com/publictvnewskannada
    ಫೇಸ್‍ಬುಕ್‍ನಲ್ಲಿ ಪಬ್ಲಿಕ್ ಟಿವಿಯನ್ನು ಲೈಕ್ ಮಾಡಿ: facebook.com/publictv
    ಟ್ವಿಟ್ಟರ್‌ನಲ್ಲಿ ಪಬ್ಲಿಕ್ ಟಿವಿಯನ್ನು ಫಾಲೋ ಮಾಡಿ: twitter.com/publictvnews

  • ಮತ್ತೊಂದು ಮಂಗಳ ಕಾರ್ಯಕ್ಕೆ ಸಾಕ್ಷಿಯಾದ ಮಡಿಕೇರಿ ಕಾಳಜಿ ಕೇಂದ್ರ

    ಮತ್ತೊಂದು ಮಂಗಳ ಕಾರ್ಯಕ್ಕೆ ಸಾಕ್ಷಿಯಾದ ಮಡಿಕೇರಿ ಕಾಳಜಿ ಕೇಂದ್ರ

    ಮಡಿಕೇರಿ: ಮಳೆಯಿಂದ ಕೊಡಗು ಜಿಲ್ಲೆ ತತ್ತರಿಸಿ ಹೋಗಿದ್ದು, ಸಂತ್ರಸ್ತರು ಪರಿಹಾರ ಕೇಂದ್ರದಲ್ಲಿ ಆಶ್ರಯ ಪಡೆದುಕೊಂಡಿದ್ದರು. ಪ್ರವಾಹದಿಂದ ನಿಂತುಹೋಗಿದ್ದ ಮದುವೆಯನ್ನು ಕೂಡ ಪರಿಹಾರ ಕೇಂದ್ರ ನಡೆಸಿತ್ತು. ಈಗ ಮತ್ತೊಂದು ಮಂಗಳ ಕಾರ್ಯಕ್ಕೆ ಮಡಿಕೇರಿ ಪರಿಹಾರ ಕೇಂದ್ರ ಸಾಕ್ಷಿಯಾಗಿದೆ.

    ಪರಿಹಾರ ಕೇಂದ್ರ ಕೊಡಗಿನ ಮಕ್ಕಂದೂರಿನ ರಂಜಿತಾ ಹಾಗೂ ಕೇರಳದ ಕಣ್ಣೂರಿನ ರಂಜಿತ್ ವಿವಾಹವನ್ನು ನೆರವೇರಿಸಿದೆ. ಕೊಡಗಿನಲ್ಲಿ ಜನಪ್ರಳಯವಾಗಿದ್ದರಿಂದ ರಂಜಿತಾ ಮದುವೆ ನಿಂತು ಹೋಗಿತ್ತು. ಇತ್ತ ನಿಗಧಿಯಾಗಿದ್ದ ಮದುವೆ ನಡೆಯುತ್ತದೋ ಇಲ್ಲವೋ ಅಂತ ಕುಟುಂಬದವರು ಆತಂಕದಲ್ಲಿದ್ದರು. ಆದರೆ ಪರಿಹಾರ ಕೇಂದ್ರದಿಂದ ಜಲಪ್ರಳಯಕ್ಕೆ ಸಿಲುಕಿದ್ದ ರಂಜಿತಾಳಿಗೆ ಕೊನೆಗೂ ಕಂಕಣ ಭಾಗ್ಯ ಕೂಡಿ ಬಂದಿದೆ. ಇದನ್ನೂ ಓದಿ: ಪ್ರವಾಹದಿಂದ ರದ್ದಾದ ಮದುವೆಗೆ ಮರುಜೀವ ನೀಡಿದ ಸಂಘಟನೆಗಳು!

    ರಂಜಿತಾ ಮತ್ತು ಕುಟುಂಬ ಭೂ ಕುಸಿತದಿಂದ ಮನೆ ಕಳೆದುಕೊಂಡಿದ್ದರು. ಬಳಿಕ ಮನೆ ಮಠ ಕಳೆದುಕೊಂಡು ಪರಿಹಾರ ಕೇಂದ್ರದಲ್ಲಿ ಆಶ್ರಯ ಪಡೆದಿದ್ದರು. ಈ ಬಗ್ಗೆ ಮಾಧ್ಯಮಗಳು ವರದಿ ಮಾಡಿದ್ದವು. ಬಳಿಕ ರಂಜಿತಾಳ ಮದುವೆಗೆ ಸಹಾಯದ ಮಹಾಪೂರ ಹರಿದುಬಂದಿತ್ತು. ಆದ್ದರಿಂದ ಇಂದು ಸೇವಾ ಭಾರತಿ ಹಾಗೂ ಲಯನ್ಸ್ ಕ್ಲಬ್ ನೇತೃತ್ವದಲ್ಲಿ ವಿವಾಹ ಮಹೋತ್ಸವ ನಡೆದಿದ್ದು, ಬೆಳಗ್ಗೆ 10:30 ಗಂಟೆಗೆ ಓಂಕಾರೇಶ್ವರ ದೇವಾಲಯದಲ್ಲಿ ಈ ಜೋಡಿ ದಾಪಂತ್ಯ ಜೀವನಕ್ಕೆ ಪಾದಾರ್ಪಣೆ ಮಾಡಿದ್ದಾರೆ.

    ಇಂದು ಮಧ್ಯಾಹ್ನ 12:30 ಗಂಟೆಗೆ ಬ್ರಾಹ್ಮಣರ ಕಲ್ಯಾಣ ಮಂಟಪದಲ್ಲಿ ಆರತಕ್ಷತೆ ಕಾರ್ಯಕ್ರಮವನ್ನು ಕೂಡ ಆಯೋಜನೆ ಮಾಡಲಾಗಿದೆ. ಪರಿಹಾರ ಕೇಂದ್ರದಲ್ಲಿ ರಂಜಿತಾಳ ಮದುವೆ ಮೂರನೇ ಮದುವೆಗೆ ಸಾಕ್ಷಿಯಾಗಿದೆ. ಈ ಹಿಂದೆ ಮಂಜುಳಾ ಮತ್ತು ವಾರಿಜಾ ಯುವತಿಯರಿಗೆ ಪರಿಹಾರ ಕೇಂದ್ರಗಳು ನಿಂತು ಹೋಗಿದ್ದ ಮದುವೆಯನ್ನು ಮಾಡಿಸಿದ್ದರು.

    ಸಚಿವರಿಂದ ಮಹಿಳೆಯರಿಗೆ ಬಾಗಿನ:
    ಇತ್ತ ಪ್ರಾಕೃತಿಕ ವಿಕೋಪ ಪೀಡಿತ ಕೊಡಗು ಜಿಲ್ಲೆಗೆ ಇಂದು ಉಸ್ತುವಾರಿ ಸಚಿವ ಭೇಟಿ ನೀಡಲಿದ್ದು, ಗೌರಿ ಹಬ್ಬದ ಪ್ರಯುಕ್ತ ಪರಿಹಾರ ಕೇಂದ್ರದ ಮಹಿಳೆಯರಿಗೆ ಬಾಗಿನ ನೀಡಲಿದ್ದಾರೆ. ಜಲಪ್ರಳಯ ಹಾಗೂ ಭೂ ಕುಸಿತದಿಂದ ಮನೆ ಮಠ ಕಳೆದುಕೊಂಡಿರುವ ಕುಟುಂಬಗಳು, ಹಬ್ಬ ಹರಿದಿನದ ಸಂಭ್ರಮವಿಲ್ಲದೆ ಪರಿಹಾರ ಕೇಂದ್ರದಲ್ಲಿ ಆಶ್ರಯ ಪಡೆದುಕೊಂಡಿದ್ದಾರೆ. ಆದ್ದರಿಂದ ನಿರಾಶ್ರಿತ ಮಹಿಳೆಯರಿಗೆ ಕೊಡಗು ಉಸ್ತುವಾರಿ ಸಚಿವ ಸಾ.ರಾ. ಮಹೇಶ್ ರಿಂದ ಬಾಗಿನ ನೀಡಲಿದ್ದಾರೆ. ಜೊತೆಗೆ ಧೈರ್ಯ ತುಂಬಿ ಪುನರ್ವಸತಿ ಬಗ್ಗೆ ಸಭೆ ನಡೆಸಲಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

  • ಬಿಜೆಪಿ ಒಬ್ಬ ಶಾಸಕನನ್ನ ಸೆಳೆದ್ರೆ, ಕೌಂಟರ್ ಕೊಡೋದಕ್ಕೆ ನಾವ್ ರೆಡಿ: ಸಾ.ರಾ.ಮಹೇಶ್

    ಬಿಜೆಪಿ ಒಬ್ಬ ಶಾಸಕನನ್ನ ಸೆಳೆದ್ರೆ, ಕೌಂಟರ್ ಕೊಡೋದಕ್ಕೆ ನಾವ್ ರೆಡಿ: ಸಾ.ರಾ.ಮಹೇಶ್

    -ನಾನು 20 ವರ್ಷ ಬಿಜೆಪಿಯಲ್ಲಿದ್ದವನು, ನನಗೆ ಬಹಳಷ್ಟು ಶಾಸಕರು ಆತ್ಮೀಯರು

    ಮೈಸೂರು: ಬಿಜೆಪಿ ನಮ್ಮ ಓರ್ವ ಶಾಸಕರನ್ನು ಸೆಳೆದ್ರೆ, ಕೌಂಟರ್ ಕೊಡೋದಕ್ಕೆ ನಾವು ರೆಡಿಯಾಗಿದ್ದೇವೆ ಎಂದು ಪ್ರವಾಸೋದ್ಯಮ ಹಾಗೂ ರೇಷ್ಮೆ ಸಚಿವ ಹಾಗೂ ಜೆಡಿಎಸ್ ಶಾಸಕ ಸಾ.ರಾ.ಮಹೇಶ್ ಹೇಳಿದ್ದಾರೆ.

    ಸಮ್ಮಿಶ್ರ ಸರ್ಕಾರ ರಚನೆಯಾಗಿ ಕುಮಾರಸ್ವಾಮಿ ಅವರು ಅಭಿವೃದ್ಧಿಪರವಾದ ಆಡಳಿತನ್ನು ರಾಜ್ಯದ ಜನತೆಗೆ ನೀಡುತ್ತಿದ್ದಾರೆ. ಆದ್ರೆ ಸರ್ಕಾರ ಉರುಳಿಸಲು ಸುಳ್ಳು ಹೇಳಿಕೆಗಳನ್ನು ನೀಡುವ ಮೂಲಕ ಜನರಲ್ಲಿ ಗೊಂದಲ ಹುಟ್ಟಿಸುವ ಕೆಲಸವನ್ನು ಮಾಡುತ್ತಿದ್ದಾರೆ. ಬಿಜೆಪಿಯ 10 ಶಾಸಕರು ನನ್ನ ಸಂಪರ್ಕದಲ್ಲಿರೋ ವಿಷಯ ಜೆಡಿಎಸ್ ವರಿಷ್ಠರಿಗೆ ಗೊತ್ತಿದೆ. ನಾನು ಸಹ 20 ವರ್ಷ ಬಿಜೆಪಿಯಲ್ಲಿ ಇದ್ದವನು. ಹಲವು ಶಾಸಕರು ನನಗೆ ಆತ್ಮೀಯರು ಎಂದು ಹೇಳುವ ಮೂಲಕ ಬಿಜೆಪಿ ನಾಯಕರಿಗೆ ಎಚ್ಚರಿಕೆ ನೀಡಿದ್ದಾರೆ.

    ಇದೂವರೆಗೆ ನಮ್ಮ ಯಾವ ಶಾಸಕರನ್ನು ಬಿಜೆಪಿ ಸಂಪರ್ಕಿಸಿಲ್ಲ. ಒಂದು ವೇಳೆ ಸಂಪರ್ಕಿಸಿದರೂ ನಮ್ಮ ಯಾವ ಶಾಸಕರು ಆಪರೇಷನ್ ಕಮಲಕ್ಕೆ ಒಳಗಾಗುವುದಿಲ್ಲ. ನಮ್ಮದು ಪ್ರಾದೇಶಿಕ ಪಕ್ಷವೇ ಆಗಿರಬಹುದು. ಆದ್ರೆ ನಾವು ಸುಮ್ಮನೆ ಕುಳಿತಿಲ್ಲ. ಬಿಜೆಪಿ ನಮ್ಮ ಒಬ್ಬ ಶಾಸಕನನ್ನು ಸೆಳೆದ್ರೆ, ಕೌಂಟರ್ ಕೊಡೋದಕ್ಕೆ ಸಿದ್ಧವಾಗಿದ್ದೇವೆ. ಅಲ್ಲಿ ಪ್ರಾದೇಶಿಕ ಪಕ್ಷ ಮತ್ತು ನಾಯಕರು ಶಕ್ತಿ ಏನು ಎಂಬುವುದನ್ನು ತೋರಿಸುತ್ತೇವೆ ಎಂದು ಗುಡುಗಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

  • ಕೊಡಗಿಗೆ ನೀರಿನ ಬಾಟಲ್, ಔಷಧ ಬೇಡ, ಸಂತ್ರಸ್ತರ ಖಾತೆಗೆ ಹಣ ಹಾಕಿ: ಸಾ.ರಾ. ಮಹೇಶ್

    ಕೊಡಗಿಗೆ ನೀರಿನ ಬಾಟಲ್, ಔಷಧ ಬೇಡ, ಸಂತ್ರಸ್ತರ ಖಾತೆಗೆ ಹಣ ಹಾಕಿ: ಸಾ.ರಾ. ಮಹೇಶ್

    ಮಡಿಕೇರಿ: ಕೊಡಗಿನ ಜನರಿಗೆ ಸದ್ಯಕ್ಕೆ ಕುಡಿಯುವ ನೀರಿನ ಬಾಟಲ್, ಊಟ, ಹೊದಿಕೆ, ಔಷಧ ಯಾವುದರ ಅಗತ್ಯವಿಲ್ಲ. ಅವರಿಗೆ ಬೇಕಾದ ಕುಡಿಯುವ ನೀರು, ಊಟ, ಹೊದಿಕೆ, ಔಷಧ ಎಲ್ಲವನ್ನೂ ಜಿಲ್ಲಾಡಳಿತ ಒದಗಿಸಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಸಾ.ರಾ ಮಹೇಶ್ ಹೇಳಿದ್ದಾರೆ.

    ಕೊಡಗಿಗೆ ಭೇಟಿ ನೀಡಿ ಅಲ್ಲಿನ ಜನರಿಗೆ ಭವಿಷ್ಯದಲ್ಲಿ ಮನೆ ಕಟ್ಟಿಕೊಳ್ಳಲು ಹಣದ ಅವಶ್ಯತೆ ಇದೆ. ಹೀಗಾಗಿ ನಿಮ್ಮ ಸಹಾಯ ಹಸ್ತವನ್ನು ಹಣದ ರೂಪದಲ್ಲಿ ಮುಖ್ಯ ಮಂತ್ರಿಗಳ ಪರಿಹಾರ ನಿಧಿಗೆ ನೀಡಿ ಅಥವಾ ಡಿಸಿ ಕಚೇರಿಯಲ್ಲಿ ಯಾರೆಲ್ಲ ಮನೆ ಕಳೆದುಕೊಂಡಿದ್ದಾರೆ ಅವರ ವಿವರ ಸಿಗುತ್ತದೆ. ಆ ವಿವರ ನೋಡಿ ನೀವೇ ಖುದ್ದಾಗಿ ಮನೆ ಕಳೆದು ಕೊಂಡವರಿಗೆ ಮನೆ ನಿರ್ಮಿಸಿ ಕೊಳ್ಳುವುದಕ್ಕೆ ಸಹಾಯ ಮಾಡಿ ಎಂದು ಸಾ ರಾ ಮಹೇಶ್ ಮನವಿ ಮಾಡಿದ್ದಾರೆ.

    ನಿನ್ನೆಯಿಂದ ಕಾರ್ಯಾಚರಣೆ ಬಿಗಿಯಾಗಿದ್ದು, ಈಗಾಗಲೇ 3,150 ನಿರಾಶ್ರಿತರನ್ನು ಸರ್ಕಾರ ರಕ್ಷಣೆ ಮಾಡಿದೆ. 450 ರಿಂದ 500 ಜನರು ಇನ್ನೂ ಸಂಕಷ್ಟದಲ್ಲಿದ್ದು ಅವರನ್ನು ಸುರಕ್ಷಿತ ಸ್ಥಳದಲ್ಲಿ ಇರಿಸಲಾಗಿದೆ. ನಿನ್ನೆ ರಾತ್ರಿ ಮುಖ್ಯಮಂತ್ರಿಗಳ ಆದೇಶದ ಮೇರೆಗೆ ಜೀರೋ ಟ್ರಾಫಿಕ್ ನಲ್ಲಿ ಸೇನಾ ಪಡೆಯನ್ನು ಕಲ್ಪಿಸಲಾಗಿದೆ. ಈಗಾಗಲೇ 4 ಸೇನಾ ಪಡೆ ತಂಡಗಳು ಕಾರ್ಯಾಚರಣೆ ಕೈಗೊಂಡಿದ್ದು ಅದರೊಂದಿಗೆ ವಾಯುಪಡೆ, ನೌಕಾಪಡೆ, ಪೊಲೀಸ್ ಇಲಾಖೆ ಕೂಡ ಸ್ಥಳದಲ್ಲಿ ಬೀಡುಬಿಟ್ಟಿವೆ. 31 ಆಹಾರ ಕೇಂದ್ರಗಳಿವೆ ಇದರಿಂದಾಗಿ ಸ್ವಲ್ಪ ಮಟ್ಟಿಗೆ ಜನರ ಆತಂಕ ದೂರವಾಗಿದೆ.

    ಮುಖ್ಯಮಂತ್ರಿಗಳು ಬೆಳಗ್ಗೆ 6.45 ಕ್ಕೆ ವಿಡಿಯೋ ಕಾನ್ಫರೆನ್ಸ್ ಮೂಲಕ ಕೊಡಗಿನ ಪರಿಸ್ಥಿತಿಗಳೆಲ್ಲವನ್ನೂ ತಿಳಿದುಕೊಂಡಿದ್ದಾರೆ. ಸಿಎಂ ಇಂದು ಮಧ್ಯಾಹ್ನ ಕೊಡಗಿಗೆ ಭೇಟಿ ನೀಡಿ ಅನಾಹುತ ನಡೆದಂತಹ ಕೆಲವು ಸ್ಥಳಗಳಿಗೆ ತೆರಳಲಿದ್ದಾರೆ. ಪರಿಹಾರದ ಕ್ರಮಗಳು ಏನಾಗಬೇಕು ಎಂಬುದರ ಕುರಿತು ಚರ್ಚಿಸಿ ನಂತರ ನಿರ್ಧಾರ ಕೈಗೊಳ್ಳಲಿದ್ದಾರೆ.

    ಹೆಲಿಕಾಪ್ಟರ್ ಕಾರ್ಯಾಚರಣೆ ಬಗ್ಗೆ ಕುರಿತು ಮಾತನಾಡಿದ ಸಾ ರಾ ಮಹೇಶ್ ಅವರು ಮೈಸೂರಿನ ಜಿಲ್ಲಾಧಿಕಾರಿ ಅಭಿರಾಮ್ ಅವರೊಂದಿಗೆ ಮಾತನಾಡಿ ಅಲ್ಲಿಂದ ಆಹಾರದ ವ್ಯವಸ್ಥೆ ಮಾಡಲಾಗಿದೆ. ಹವಮಾನ ಬದಲಾವಣೆ ಸರಿಯಾದರೆ ನಿರಾಶ್ರಿತರನ್ನು ಹೆಲಿಕಾಪ್ಟರ್ ಮೂಲಕವೇ ರಕ್ಷಿಸಲು ಪ್ರಯತ್ನಿಸುತ್ತೇವೆ. ಸದ್ಯಕ್ಕೆ ಸೇನಾ ಪಡೆಯಿಂದ ಆಹಾರ ವಿತರಣೆ ಮಾಡಲಾಗುತ್ತಿದೆ ಎಂದರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

  • ವರಮಹಾಲಕ್ಷ್ಮಿ ಹಬ್ಬಕ್ಕೆ ಕಡಿಮೆ ಬೆಲೆಯಲ್ಲಿ ರೇಷ್ಮೆ ಸೀರೆ!

    ವರಮಹಾಲಕ್ಷ್ಮಿ ಹಬ್ಬಕ್ಕೆ ಕಡಿಮೆ ಬೆಲೆಯಲ್ಲಿ ರೇಷ್ಮೆ ಸೀರೆ!

    ರಾಮನಗರ: ವರಮಹಾಲಕ್ಷ್ಮಿ ಹಬ್ಬಕ್ಕೆ ರಿಯಾಯಿತಿ ದರದಲ್ಲಿ ಮೈಸೂರು ಸಿಲ್ಕ್ ಸೀರೆಗಳನ್ನು ಮಾರಾಟ ಮಾಡುವುದಕ್ಕೆ ಪ್ರವಾಸೋದ್ಯಮ ಹಾಗೂ ರೇಷ್ಮೆ ಸಚಿವ ಸಾ.ರಾ ಮಹೇಶ್ ರವರು ತಿಳಿಸಿದ್ದಾರೆ.

    ರಾಮನಗರ ಜಿಲ್ಲೆಯ ಚನ್ನಪಟ್ಟಣದಲ್ಲಿನ ಕರ್ನಾಟಕ ಸಿಲ್ಕ್ ಇಂಡಸ್ಟ್ರೀಸ್ ಕಾರ್ಪೋರೇಶನ್ (ಕೆಎಸ್‍ಐಸಿ)ನ ಮೈಸೂರು ಸಿಲ್ಕ್ ಮಾರಾಟ ಮಳಿಗೆಯಲ್ಲೂ ಕೂಡಾ ಮಾರಾಟ ಮಾಡಲು ಸಿದ್ಧತೆ ನಡೆಸಲಾಗುತ್ತಿದೆ. ಈಗಾಗಲೇ ಒಂದು ಸೀರೆಯನ್ನ ಸಾರ್ವಜನಿಕರ ಪ್ರದರ್ಶನಕ್ಕೆ ಇಡಲಾಗಿದೆ. ಇನ್ನು ರೇಷ್ಮೆ ಸೀರೆಗಳ ಪ್ರಾರಂಭಿಕ ಬೆಲೆಯೇ 14 ಸಾವಿರ ರೂಪಾಯಿಗಳಿದ್ದು, ಕೇವಲ 4,500 ರೂಪಾಯಿಗೆ ಮಾರಾಟ ಮಾಡುತ್ತಿದೆ.

    ಕಡಿಮೆ ಬೆಲೆಗೆ ನೀಡುತ್ತಿರುವ ರೇಷ್ಮೆ ಸೀರೆ ಮಾತ್ರ ಸಾಕಷ್ಟು ಕಳಪೆಗುಣಮಟ್ಟದ್ದಾಗಿದೆ ಅಂತ ಗ್ರಾಹಕರು ಅಸಮಾಧಾನ ವ್ಯಕ್ತಪಡಿಸ್ತಿದ್ದಾರೆ. ಕೆಎಸ್‍ಐಸಿಯನ್ನ ಉಳಿಸುವ ನಿಟ್ಟಿನಲ್ಲಿ ಇದೀಗ ಕಾಣಿಸುತ್ತಿರುವ ಲೋಪದೋಷಗಳನ್ನ ಸರಿಪಡಿಸಿಕೊಂಡು ಸೀರೆಗಳ ಗುಣಮಟ್ಟ ಕಾಪಾಡಿಕೊಂಡು ಮಾರಾಟ ಮಾಡುವಂತೆ ಗ್ರಾಹಕರು ಮನವಿ ಮಾಡುತ್ತಿದ್ದಾರೆ.

  • ಯಾತ್ರಿ ನಿವಾಸ್ ಗೇಟ್ ಕಾಯುತ್ತ ಅರ್ಧ ಗಂಟೆ ನಿಂತ ಪ್ರವಾಸೋದ್ಯಮ ಸಚಿವ ಮಹೇಶ್

    ಯಾತ್ರಿ ನಿವಾಸ್ ಗೇಟ್ ಕಾಯುತ್ತ ಅರ್ಧ ಗಂಟೆ ನಿಂತ ಪ್ರವಾಸೋದ್ಯಮ ಸಚಿವ ಮಹೇಶ್

    ಮಂಡ್ಯ: ಯಾತ್ರಿ ನಿವಾಸ್ ಗೇಟ್ ಬಾಗಿಲು ತೆಗೆಯುವಂತೆ ಪ್ರವಾಸೋದ್ಯಮ ಸಚಿವ ಸಾರಾ ಮಹೇಶ್ ಅರ್ಧ ಗಂಟೆ ಗೇಟ್ ಮುಂದೆಯೇ ಕಾಯುತ್ತ ನಿಂತ ಘಟನೆ ನಾಗಮಂಗಲ ಪಟ್ಟಣದ ಪ್ರವಾಸಿ ಮಂದಿರದ ಆವರಣದಲ್ಲಿ ನಡೆದಿದೆ.

    ಶುಕ್ರವಾರ ನಾಗಮಂಗಲ ತಾಲೂಕಿನ ಪ್ರವಾಸ ಕೈಗೊಂಡಿದ್ದ ಸಚಿವರು, ತಾಲೂಕು ಪ್ರವಾಸಿ ಮಂದಿರಕ್ಕೆ ಭೇಟಿ ನೀಡಿ, ಸೌಮ್ಯ ಯಾತ್ರಿ ಕೇಶವ ನಿವಾಸ ಪರಿಶೀಲನೆಗೆ ಮುಂದಾಗಿದ್ದಾಗ ಘಟನೆ ನಡೆದಿದೆ.

    ಸಚಿವರು ನಾಗಮಂಗಲ ಪ್ರವಾಸಿ ಮಂದಿರದ ಅಧಿಕಾರಿಗಳ ಜೊತೆಗೆ ಸಭೆ ನಡೆಸಿ, ನಂತರ ಪ್ರವಾಸಿ ಮಂದಿರ ಸಮೀಪದ ಸೌಮ್ಯ ಕೇಶವ ಯಾತ್ರಿ ನಿವಾಸ ಪರಿಶೀಲಿಸಲು ಮುಂದಾಗಿದ್ದರು. ಆದರೆ ಸೌಮ್ಯ ಯಾತ್ರಿ ಕೇಶವ ನಿವಾಸದ ಗೇಟ್ ಬೀಗ ಯಾರ ಹತ್ತಿರವಿದೆ ಎನ್ನುವುದೇ ತಿಳಿಯದೇ ಅಧಿಕಾರಿಗಳು ಪರದಾಡಿದರು. ಸುಮಾರು 30 ನಿಮಿಷ ಗೇಟ್ ಮುಂದೆ ಕಾದು ನಿಂತರೂ ಯಾರೊಬ್ಬರು ಬಂದು ಗೇಟ್ ಬೀಗ ತೆಗೆಯಲಿಲ್ಲ.

    ಅಧಿಕಾರಿಗಳ ನಿಷ್ಕಾಳಜಿ, ಬೇಜವಾಬ್ದಾರಿಯಿಂದ ಸ್ವಲ್ಪ ಅಸಮಾಧಾನಗೊಂಡ ಸಚಿವರು ಮತ್ತೇ ಅರ್ಧ ಗಂಟೆ ನಂತರ ಮರಳಿ ಬರುತ್ತೇನೆ. ಅಷ್ಟರಲ್ಲಿಯೇ ಬೀಗ ತೆಗೆಸಿರಿ ಎಂದು ಉಪವಿಭಾಗಾಧಿಕಾರಿ ಯಶೋಧ ಅವರಿಗೆ ಸೂಚನೆ ನೀಡಿ ಪ್ರವಾಸ ಮುಂದುವರಿಸಿದರು.