Tag: Sarabjot Singh

  • ಸರ್ಕಾರಿ ಕೆಲಸ ತಿರಸ್ಕರಿಸಿದ ಒಲಿಂಪಿಕ್ಸ್‌ ಶೂಟಿಂಗ್‌ನಲ್ಲಿ ಕಂಚು ಗೆದ್ದ ಸರಬ್ಜೋತ್‌ ಸಿಂಗ್‌

    ಸರ್ಕಾರಿ ಕೆಲಸ ತಿರಸ್ಕರಿಸಿದ ಒಲಿಂಪಿಕ್ಸ್‌ ಶೂಟಿಂಗ್‌ನಲ್ಲಿ ಕಂಚು ಗೆದ್ದ ಸರಬ್ಜೋತ್‌ ಸಿಂಗ್‌

    ಚಂಡೀಗಢ: 10 ಮೀ ಏರ್‌ ಪಿಸ್ತೂಲ್‌ ಮಿಶ್ರ ತಂಡ ವಿಭಾಗದಲ್ಲಿ ಮನು ಭಾಕರ್‌ ಜೊತೆಗೂಡಿ ಕಂಚು ಗೆದ್ದಿದ್ದ ಸರಬ್ಜೋತ್‌ ಸಿಂಗ್‌ (Sarabjot Singh), ತಮ್ಮ ಕೈಗೆ ಬಂದ ಸರ್ಕಾರಿ ಕೆಲಸದ ಆಫರ್‌ ಅನ್ನು ನಿರಾಕರಿಸಿದ್ದಾರೆ.

    ಪ್ಯಾರಿಸ್‌ ಒಲಿಂಪಿಕ್ಸ್‌ನಲ್ಲಿ ಈ ಜೋಡಿ ಕಂಚು ಗೆದ್ದಿತ್ತು. ಪದಕ ಗೆದ್ದು ಭಾರತಕ್ಕೆ ವಾಪಸ್‌ ಆದ ಸರಬ್ಜೋತ್‌ ಸಿಂಗ್‌ಗೆ ಹರಿಯಾಣ ಸರ್ಕಾರ ಕೆಲಸ ನೀಡಿತು. ಆದರೆ ಕ್ರೀಡಾಪಟು ಸರ್ಕಾರಿ ಕೆಲಸವನ್ನು ತಿರಸ್ಕರಿಸಿದ್ದಾರೆ. ಅದಕ್ಕೆ ಕಾರಣವನ್ನೂ ಬಹಿರಂಗಪಡಿಸಿದ್ದಾರೆ. ಇದನ್ನೂ ಓದಿ: ಪ್ಯಾರಿಸ್‌ ಒಲಿಂಪಿಕ್ಸ್‌ ಹಬ್ಬಕ್ಕಿಂದು ಅದ್ಧೂರಿ ತೆರೆ – ಭಾರತದ ಧ್ವಜಧಾರಿಯಾಗಲಿದ್ದಾರೆ ಮನು ಭಾಕರ್‌

    ಸರ್ಕಾರಿ ಉದ್ಯೋಗ ಪಡೆದುಕೊಳ್ಳಲು ಇದು ಸರಿಯಾದ ಸಮಯವಲ್ಲ. ಶೂಟಿಂಗ್‌ನಲ್ಲಿ ಇನ್ನೂ ನಾನು ಗುರಿ ಸಾಧಿಸಿಲ್ಲ. ಇಂತಹ ಸಮಯದಲ್ಲಿ ಶೂಟಿಂಗ್‌ ನನ್ನ ಪ್ರಮುಖ ಆದ್ಯತೆ ಎಂದು ಸಿಂಗ್‌ ತಿಳಿಸಿದ್ದಾರೆ.

    ಕೆಲಸ ಚೆನ್ನಾಗಿದೆ. ಆದರೆ ನಾನು ಈಗ ಅದನ್ನು ತೆಗೆದುಕೊಳ್ಳುವುದಿಲ್ಲ. ನಾನು ಮೊದಲು ನನ್ನ ಶೂಟಿಂಗ್ ಮೇಲೆ ಗಮನ ಕೇಂದ್ರೀಕರಿಸಲು ಬಯಸುತ್ತೇನೆ. ನನ್ನ ಕುಟುಂಬದವರೂ ನನಗೆ ಯೋಗ್ಯವಾದ ಕೆಲಸ ಕೊಡಿ ಎಂದು ಕೇಳುತ್ತಿದ್ದಾರೆ. ಆದರೆ ನಾನು ಶೂಟಿಂಗ್ ಮುಂದುವರಿಸಲು ಬಯಸುತ್ತೇನೆ. ನಾನು ತೆಗೆದುಕೊಂಡ ನಿರ್ಧಾರಗಳಿಗೆ ವಿರುದ್ಧವಾಗಿ ಹೋಗಲು ನಾನು ಬಯಸುವುದಿಲ್ಲ, ಆದ್ದರಿಂದ ನಾನು ಈಗ ಕೆಲಸ ಮಾಡಲು ಸಾಧ್ಯವಿಲ್ಲ ಎಂದು ಸರಬ್ಜೋತ್‌ ಸಿಂಗ್‌ ಸ್ಪಷ್ಟಪಡಿಸಿದ್ದಾರೆ. ಇದನ್ನೂ ಓದಿ: ಕ್ಷಮಿಸಿ.. ಆದರೆ ನಾವು ನಿಯಮ ಪಾಲಿಸಲೇಬೇಕು: ಫೋಗಟ್‌ ಅನರ್ಹತೆ ಬಗ್ಗೆ ಅಂತಾರಾಷ್ಟ್ರೀಯ ಕುಸ್ತಿ ಫೆಡರೇಷನ್‌ ಪ್ರತಿಕ್ರಿಯೆ

    ನನ್ನ ಮುಖ್ಯ ಗುರಿಯನ್ನು ನಾನು ಇನ್ನೂ ಸಾಧಿಸಿಲ್ಲ. ನಾನು ನನ್ನ ಮುಖ್ಯ ಗುರಿಯನ್ನು 2028 ರಲ್ಲಿ ಪೂರ್ಣಗೊಳಿಸುತ್ತೇನೆ. ನಾನು 2028 ರಲ್ಲಿ ಚಿನ್ನಕ್ಕಾಗಿ ಶೂಟ್ ಮಾಡಲು ಬಯಸುತ್ತೇನೆ ಎಂದು ತಿಳಿಸಿದ್ದಾರೆ.

  • ಪ್ಯಾರಿಸ್ ಒಲಿಂಪಿಕ್ಸ್‌ನಲ್ಲಿ ಕಂಚು ಗೆದ್ದ ಮನು ಭಾಕರ್, ಸರಬ್ಜೋತ್ ಸಿಂಗ್‌ಗೆ ಪಿಎಂ, ಸಿಎಂ ಅಭಿನಂದನೆ

    ಪ್ಯಾರಿಸ್ ಒಲಿಂಪಿಕ್ಸ್‌ನಲ್ಲಿ ಕಂಚು ಗೆದ್ದ ಮನು ಭಾಕರ್, ಸರಬ್ಜೋತ್ ಸಿಂಗ್‌ಗೆ ಪಿಎಂ, ಸಿಎಂ ಅಭಿನಂದನೆ

    – ನಮ್ಮ ಅಥ್ಲೀಟ್‌ಗಳಿಂದ ಭಾರತದ ಚೈತನ್ಯ ಬೆಳಗುತ್ತಿದೆ

    ಪ್ಯಾರಿಸ್/ಬೆಂಗಳೂರು: ಒಲಿಂಪಿಕ್ಸ್‌ನಲ್ಲಿ ನಡೆದ 10 ಮೀ. ಏರ್ ಪಿಸ್ತೂಲ್ ಮಿಶ್ರ ವಿಭಾಗದಲ್ಲಿ ಭಾರತಕ್ಕೆ ಮತ್ತೊಂದು ಕಂಚಿನ ಪದಕ ತಂದುಕೊಟ್ಟ ಮನು ಭಾಕರ್, ಸರಬ್ಜೋತ್ ಸಿಂಗ್‌ಗೆ ಪ್ರಧಾನಿ ನರೇಂದ್ರ ಮೋದಿ ಹಾಗೂ ಮುಖ್ಯಮಂತ್ರಿ ಸಿದ್ದರಾಮಯ್ಯ ಅಭಿನಂದನೆ ಸಲ್ಲಿಸಿದ್ದಾರೆ.

    ಪ್ಯಾರಿಸ್ ಒಲಿಂಪಿಕ್ಸ್ನಲ್ಲಿ ಮನು ಭಾಕರ್ ಮತ್ತು ಸರಬ್ಜೋತ್ ಸಿಂಗ್ ದಕ್ಷಿಣ ಕೊರಿಯಾದ ಜೋಡಿಯನ್ನು ಸೋಲಿಸಿ ಭಾರತಕ್ಕೆ 2ನೇ ಪದಕವನ್ನು ಗೆದ್ದುಕೊಟ್ಟಿದ್ದಾರೆ. ಈ ಕುರಿತು ಪ್ರಧಾನಿ ಮೋದಿ, ಸಿಎಂ ಸಿದ್ದರಾಮಯ್ಯ ಎಕ್ಸ್‌ನಲ್ಲಿ ಪೋಸ್ಟ್ ಹಾಕುವ ಮೂಲಕ ಅಭಿನಂದನೆ ಸಲ್ಲಿಸಿದ್ದಾರೆ.

    ಎಕ್ಸ್‌ನಲ್ಲಿ ಮೋದಿ ಸಂದೇಶ:
    ನಾವು ಹೆಮ್ಮೆ ಪಡುವುದನ್ನು ಮುಂದುವರಿಸಿದ ನಮ್ಮ ಶೂಟರ್‌ಗಳಿಗೆ ಅಭಿನಂದನೆಗಳು. 10 ಮೀಟರ್ ಏರ್ ಪಿಸ್ತೂಲ್ ಮಿಶ್ರ ತಂಡ ಸ್ಪರ್ಧೆಯಲ್ಲಿ ಕಂಚಿನ ಪದಕ ಗೆದ್ದಿದ್ದಕ್ಕಾಗಿ ಸರಬ್ಜೋತ್ ಸಿಂಗ್ ಹಾಗೂ ಮನು ಭಾಕರ್ ಇಬ್ಬರಿಗೂ ಅಭಿನಂದನೆ ಸಲ್ಲಿಸುತ್ತೇನೆ. ಇಬ್ಬರೂ ಉತ್ತಮ ಕೌಶಲ್ಯ ಮತ್ತು ಟೀಮ್ ವರ್ಕ್ ತೋರಿದ್ದಾರೆ. ಭಾರತವು ನಂಬಲಾಗದಷ್ಟು ಸಂತೋಷವಾಗಿದೆ. ಮನು ಅವರಿಗೆ, ಇದು ಅವರ ಸತತ ಎರಡನೇ ಒಲಿಂಪಿಕ್ ಪದಕವಾಗಿದ್ದು, ಅವರ ಸ್ಥಿರ ಶ್ರೇಷ್ಠತೆ ಮತ್ತು ಸಮರ್ಪಣೆಯನ್ನು ಪ್ರದರ್ಶಿಸುತ್ತದೆ ಎಂದು ಬರೆದುಕೊಂಡಿದ್ದಾರೆ.

    ಸಿಎಂ ಸಿದ್ದರಾಮಯ್ಯ ಸಂದೇಶ:
    ನಮ್ಮ ಅಥ್ಲೀಟ್‌ಗಳಿಂದ ಭಾರತದ ಚೈತನ್ಯ ಬೆಳಗುತ್ತಿದೆ. ಒಲಿಂಪಿಕ್ಸ್‌ನಲ್ಲಿ 10 ಮೀ. ಏರ್ ಪಿಸ್ತೂಲ್‌ನಲ್ಲಿಕಂಚಿನ ಪದಕ ಬಾಚಿಕೊಂಡ ಮನು ಭಾಕರ್ ಹಾಗೂ ಸರಬ್ಜೋತ್ ಸಿಂಗ್ ಅವರಿಗೆ ಅಭಿನಂದನೆಗಳು. ಇಡೀ ಭಾರತ ಈ ಸ್ಫೂರ್ತಿದಾಯಕ ಪ್ರದರ್ಶನ ಮತ್ತು ಸಾಧನೆಯನ್ನು ಸಂಭ್ರಮಿಸುತ್ತದೆ ಎಂದು ಬರೆದುಕೊಂಡಿದ್ದಾರೆ.

    ಮಹಿಳೆಯರ 10 ಮೀಟರ್ ಏರ್‌ಪಿಸ್ತೂಲ್ ವಿಭಾಗದಲ್ಲಿ ಕಂಚಿನ ಪದಕ ಗೆಲ್ಲುವ ಮೂಲಕ ಭಾರತದ ಪದ ಪದಕಗಳ ಖಾತೆ ತೆರೆದ ಮನು ಭಾಕರ್, ಈಗ ಮಿಶ್ರ ವಿಭಾಗದಲ್ಲೂ ಪದಕಕ್ಕೆ ಮುತ್ತಿಟ್ಟಿದ್ದಾರೆ. ಈ ಮೂಲಕ ಒಂದೇ ಒಲಿಂಪಿಕ್ಸ್ ಕ್ರೀಡಾಕೂಟದಲ್ಲಿ ಎರಡು ಪದಕ ಪಡೆದ ಭಾರತದ ಮೊದಲ ಮಹಿಳಾ ಕ್ರೀಡಾಪಟು ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ.

  • ಒಲಿಂಪಿಕ್ಸ್‌ನಲ್ಲಿ ಎರಡನೇ ಪದಕ – ಶೂಟಿಂಗ್‌ನಲ್ಲಿ ಭಾರತಕ್ಕೆ ಕಂಚು

    ಒಲಿಂಪಿಕ್ಸ್‌ನಲ್ಲಿ ಎರಡನೇ ಪದಕ – ಶೂಟಿಂಗ್‌ನಲ್ಲಿ ಭಾರತಕ್ಕೆ ಕಂಚು

    ಪ್ಯಾರಿಸ್‌: ಒಲಿಂಪಿಕ್ಸ್‌ನಲ್ಲಿ ಭಾರತ ಎರಡನೇ ಪದಕವನ್ನು ಪಡೆದುಕೊಂಡಿದೆ. 10 ಮೀಟರ್‌ ಏರ್‌ ಪಿಸ್ತೂಲ್‌ ಮಿಶ್ರ ವಿಭಾಗದಲ್ಲಿ ಮನು ಭಾಕರ್‌ (Manu Bhaker) ಮತ್ತು ಸರಬ್ಜೋತ್ ಸಿಂಗ್‌ (Sarabjot Singh)  ಕಂಚಿನ ಪದಕ ಗೆದ್ದಿದ್ದಾರೆ.

    ಮಹಿಳೆಯರ ವೈಯಕ್ತಿಕ ವಿಭಾಗದಲ್ಲಿ ಮನು ಭಾಕರ್‌ ಕಂಚಿನ ಪದಕವನ್ನು ಗೆದ್ದುಕೊಂಡಿದ್ದರು. ಈಗ ಮಿಶ್ರ ವಿಭಾಗದಲ್ಲೂ ಮನುಭಾಕರ್‌ ಪದಕಕ್ಕೆ ಮುತ್ತಿಟ್ಟಿದ್ದಾರೆ.  ಈ ಮೂಲಕ ಒಂದೇ ಒಲಿಂಪಿಕ್ಸ್‌ (Olympics Games)  ಕ್ರೀಡಾಕೂಟದಲ್ಲಿ ಎರಡು ಪದಕ ಪಡೆದ  ಭಾರತದ ಮೊದಲ ಮಹಿಳಾ ಕ್ರೀಡಾಪಟು ಎಂಬ ಹೆಗ್ಗಳಿಕೆಗೆ ಪಾತ್ರವಾಗಿದ್ದಾರೆ.

    ಮನು ಭಾಕರ್ ಮತ್ತು ಸರಬ್ಜೋತ್ ಸಿಂಗ್ ದಕ್ಷಿಣ ಕೊರಿಯಾದ ಜೋಡಿಯನ್ನು ಸೋಲಿಸಿ ಭಾರತಕ್ಕೆ 2 ನೇ ಪದಕವನ್ನು ಗೆದ್ದುಕೊಟ್ಟಿದ್ದಾರೆ.