Tag: Saran

  • Bihar | ಕಳ್ಳಭಟ್ಟಿ ಸೇವಿಸಿ 20 ಮಂದಿ ಸಾವು

    Bihar | ಕಳ್ಳಭಟ್ಟಿ ಸೇವಿಸಿ 20 ಮಂದಿ ಸಾವು

    ಪಾಟ್ನಾ: ಕಳ್ಳಭಟ್ಟಿ ಸೇವಿಸಿ 20 ಮಂದಿ ಸಾವಿಗೀಡಾಗಿರುವ ಘಟನೆ ಬಿಹಾರ (Bihar) ರಾಜ್ಯದ ಸಿವಾನ್ ಮತ್ತು ಸರನ್ ಜಿಲ್ಲೆಯಲ್ಲಿ ನಡೆದಿದೆ.

    ಅಧಿಕಾರಿಗಳ ಮಾಹಿತಿ ಪ್ರಕಾರ ಕಳ್ಳಭಟ್ಟಿ (Liquior) ಸೇವನೆಯಿಂದ 6 ಜನ ಸಾವನ್ನಪ್ಪಿದ್ದರು. 12 ಮಂದಿ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಅಧಿಕಾರಿಗಳು ಮೃತರ ಹಾಗೂ ಚಿಕಿತ್ಸೆಗೆ ಒಳಪಟ್ಟವರ ಯಾವುದೇ ಗುರುತನ್ನು ಬಹಿರಂಗಪಡಿಸಿಲ್ಲ.ಇದನ್ನೂ ಓದಿ: ಮದುವೆಯಾದ 12 ವರ್ಷಗಳ ಬಳಿಕ ಚೊಚ್ಚಲ ಮಗುವಿನ ನಿರೀಕ್ಷೆಯಲ್ಲಿ ರಾಧಿಕಾ ಆಪ್ಟೆ

    ಸಿವಾನ್ ಜಿಲ್ಲೆಯ ಮ್ಯಾಜಿಸ್ಟ್ರೇಟ್ ಮುಕುಲ್ ಕುಮಾರ್ ಗುಪ್ತಾ ಮಾತನಾಡಿ, ಮಘಾರ್ ಮತ್ತು ಔರಿಯಾ ಪಂಚಾಯತ್ ವ್ಯಾಪ್ತಿಯಲ್ಲಿ ಮೂವರು ಸಾವನ್ನಪ್ಪಿದ್ದು, ಬೆಳಗ್ಗೆ 7:30 ಸುಮಾರಿಗೆ ಮಾಹಿತಿ ಲಭಿಸಿದೆ. ತಕ್ಷಣವೇ ಸ್ಥಳಕ್ಕೆ ಅಧಿಕಾರಗಳ ತಂಡವನ್ನು ಕಳುಹಿಸಲಾಗಿದ್ದು, 12 ಜನರನ್ನು ಸಮೀಪದ ಆಸ್ಪತ್ರೆಗೆ ರವಾನಿಸಲಾಯಿತು. ಈ ವೇಳೆ ಮಾರ್ಗಮಧ್ಯೆ ಇನ್ನೋರ್ವ ಸಾವನ್ನಪ್ಪಿದ್ದಾನೆ ಎಂದು ತಿಳಿಸಿದ್ದಾರೆ.

    ಸದ್ಯ ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗಾಗಿ ಕಳುಹಿಸಲಾಗಿದ್ದು, ವರದಿಯ ಬಳಿಕ ಸಾವಿಗೆ ನಿಖರ ಕಾರಣ ಏನು ಎಂಬುವುದನ್ನು ತಿಳಿಸಲಾಗುವುದು ಎಂದರು. ಸದ್ಯ ಎರಡು ಜಿಲ್ಲೆಯಲ್ಲಿ ಆಡಳಿತ ಮಂಡಳಿಯು ತನಿಖೆ ನಡೆಸುತ್ತಿದೆ. ಜೊತೆಗೆ ಮಘಾರ್ ಮತ್ತು ಔರಿಯಾ ಪಂಚಾಯಿತಿ ವ್ಯಾಪ್ತಿಯ ಇಬ್ಬರು ಚೌಕಿದಾರ್‌ರನ್ನು ಇಲಾಖೆಯು ಅಮಾನತುಗೊಳಿಸಿದೆ.

    ಮತ್ತೊಂದು ಪ್ರಕರಣದಲ್ಲಿ, ಅ.16ರಂದು ಕಳ್ಳಭಟ್ಟಿ ಸೇವಿಸಿ ಇಬ್ಬರು ಸಾವನ್ನಪ್ಪಿದ್ದು, ಮೂವರು ಆಸ್ಪತ್ರೆಗೆ ದಾಖಲಾಗಿರುವ ಘಟನೆ ಬಿಹಾರ ರಾಜ್ಯದ ಇಬ್ರಾಹಿಂಪುರ ಪ್ರದೇಶದಲ್ಲಿ ನಡೆದಿದೆ.

    ಸರನ್ ಜಿಲ್ಲಾ ಮ್ಯಾಜಿಸ್ಟ್ರೇಟ್ ಅಮನ್ ಸಮೀರ್ ಮಾತನಾಡಿ, ಮೂವರು ಚಿಕಿತ್ಸೆ ಪಡೆಯುತ್ತಿದ್ದು, ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ. ವರದಿಯ ನಂತರ ಸಾವಿನ ನಿಖರವಾದ ಕಾರಣ ತಿಳಿಸಲಾಗುವುದು ಹಾಗೂ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಹೂಚ್ ಸೇವಿಸಿರುವ ಮಾಹಿತಿ ಲಭಿಸಿದ್ದು, ತನಿಖೆ ನಡೆಸುತ್ತಿದ್ದೇವೆ ಎಂದು ತಿಳಿಸಿದರು.

    2016ರ ಏಪ್ರಿಲ್‌ನಲ್ಲಿ ಬಿಹಾರ ಸರ್ಕಾರವು ಮದ್ಯ ಮಾರಾಟ ಮತ್ತು ಸೇವನೆಯನ್ನು ನಿಷೇಧಿಸಿದೆ. ನಿಷೇಧಿಸಿದ ನಂತರ ಅಕ್ರಮ ಮದ್ಯ ಸೇವನೆಯಿಂದ 150ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದಾರೆ ಎಂದು ಬಿಹಾರ ಸರ್ಕಾರ ತಿಳಿಸಿದೆ.ಇದನ್ನೂ ಓದಿ: ಮಲ್ಲೇಶ್ವರಂ ಸ್ಫೋಟದಲ್ಲಿ ಭಾಗಿಯಾಗಿದ್ದ ಉಗ್ರನಿಂದ ಸೆಂಟ್ರಲ್ ಜೈಲಿನಿಂದಲೇ ಹನಿಟ್ರ್ಯಾಪ್?

  • ಬಿಹಾರದಲ್ಲಿ ಆರ್ಕೆಸ್ಟ್ರಾ ನಡೆಯುತ್ತಿದ್ದ ವೇಳೆ ಕುಸಿದ ಟಿನ್ ಶೆಡ್ – ನೂರಾರು ಜನರಿಗೆ ಗಾಯ, 10 ಮಂದಿ ಗಂಭೀರ

    ಬಿಹಾರದಲ್ಲಿ ಆರ್ಕೆಸ್ಟ್ರಾ ನಡೆಯುತ್ತಿದ್ದ ವೇಳೆ ಕುಸಿದ ಟಿನ್ ಶೆಡ್ – ನೂರಾರು ಜನರಿಗೆ ಗಾಯ, 10 ಮಂದಿ ಗಂಭೀರ

    ಬಿಹಾರ: ಆರ್ಕೆಸ್ಟ್ರಾ ಕಾರ್ಯಕ್ರಮ ನಡೆಯುತ್ತಿದ್ದ ವೇಳೆ ಟಿನ್ ಶೆಡ್ ಕುಸಿದು ಅವಘಡ ಸಂಭವಿಸಿದ್ದು, ನೂರಾರು ಮಂದಿ ಗಾಯಗೊಂಡಿರುವ ಘಟನೆ ಬಿಹಾರದ (Bihar) ಸರನ್ ಜಿಲ್ಲೆಯಲ್ಲಿ ನಡೆದಿದೆ. ಘಟನೆ ಕುರಿತ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್ ಆಗುತ್ತಿದೆ.

    ಛಾಪ್ರಾದ (Chhapra) ಸಿಸುಪರ್‌ನಲ್ಲಿ ಮಹಾವೀರ ಮೇಳದ ವೇಳೆ ಈ ಘಟನೆ ನಡೆದಿದೆ. ಬಿಹಾರ ಸರನ್ (Saran) ಜಿಲ್ಲೆಯಲ್ಲಿ ನಡೆದ ಸಂಗೀತ ಕಾರ್ಯಕ್ರಮದಲ್ಲಿ ಸಾವಿರಾರು ಮಂದಿ ಭಾಗಿಯಾಗಿದ್ದು, ಕಿಕ್ಕಿರಿದು ಕುಣಿಯುತ್ತಿದ್ದ ವೇಳೆ ಶಿಥಿಲಗೊಂಡು ಶೆಡ್ ಬಿದ್ದಿದ್ದು, ನೂರಾರು ಮಂದಿ ಗಾಯಗೊಂಡಿದ್ದಾರೆ. ಇದನ್ನೂ ಓದಿ: ಡಿಲೀಟ್‌ ಮಾಡಿದ್ರೂ ಸಿಕ್ತು ವಿಡಿಯೋ – ಸ್ಫೋಟಕ FSL ವರದಿಯಲ್ಲಿ ಏನಿದೆ?

    ಕಾರ್ಯಕ್ರಮ ವೀಕ್ಷಿಸಲು ದಾರಿಯುದ್ದಕ್ಕೂ ಗ್ರಾಮಸ್ಥರು ನಿಂತಿದ್ದರು. ಕೆಲವರು ಟಿನ್ ಶೆಡ್‌ನ ಮೇಲೆ ಹತ್ತಿದ್ದು ಶೆಡ್ ಬೀಳುವುದಕ್ಕೆ ಕಾರಣವಾಗಿರಬಹುದು ಎಂದು ಶಂಕಿಸಲಾಗಿದೆ. ಘಟನೆ ಸಂಭವಿಸಿದ ತಕ್ಷಣ ಜನರು ಚಲ್ಲಾಪಿಲ್ಲಿಯಾಗಿ ಓಡಲು ಪ್ರಾರಂಭಿಸಿದ್ದು, ಕಾಲ್ತುಳಿತದ ಪರಿಸ್ಥಿತಿ ನಿರ್ಮಾಣವಾಯಿತು ಎಂದು ವರದಿಗಳು ತಿಳಿಸಿವೆ. ಇದನ್ನೂ ಓದಿ: ಬೆಳಗಾವಿ: ಸಾಲಗಾರ ಪತಿಯನ್ನು ಹತ್ಯೆಗೈದು ಸಹಜ ಸಾವು ಎಂದು ಬಿಂಬಿಸಿದ್ದ ಪತ್ನಿ, ಅತ್ತೆ ಅರೆಸ್ಟ್

    ಗಾಯಾಳುಗಳನ್ನು ತಕ್ಷಣ ಸ್ಥಳಿಯ ಆಸ್ಪತ್ರೆಗೆ ರವಾನಿಸಿ ಚಿಕಿತ್ಸೆ ನೀಡಲಾಯಿತು. ಈ ಪೈಕಿ 10 ಮಂದಿಯ ಸ್ಥಿತಿ ಗಂಭೀರವಾಗಿದೆ ಎಂದು ಪೊಲೀಸ್ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಇದನ್ನೂ ಓದಿ: ಹಗರಣಗಳಿಂದಾಗಿ ಕಾಂಗ್ರೆಸ್ ಸರ್ಕಾರ ಕೋಮಾಗೆ ಜಾರಿದೆ, ಅಭಿವೃದ್ಧಿ ನಡೆಯುತ್ತಿಲ್ಲ: ಅಶೋಕ್

  • ಇಬ್ಬರು ಭದ್ರತಾ ಸಿಬ್ಬಂದಿಗೆ ಗುಂಡಿಕ್ಕಿ ಬ್ಯಾಂಕ್‍ನಲ್ಲಿ 13.28 ಲಕ್ಷ ಲೂಟಿ

    ಇಬ್ಬರು ಭದ್ರತಾ ಸಿಬ್ಬಂದಿಗೆ ಗುಂಡಿಕ್ಕಿ ಬ್ಯಾಂಕ್‍ನಲ್ಲಿ 13.28 ಲಕ್ಷ ಲೂಟಿ

    ಪಾಟ್ನಾ: ಸರ್ಕಾರಿ ಸ್ವಾಮ್ಯದ ಬ್ಯಾಂಕ್ (Bank) ಒಂದರ ಇಬ್ಬರು ಭದ್ರತಾ ಸಿಬ್ಬಂದಿಯನ್ನು (Security guards) ದುಷ್ಕರ್ಮಿಗಳು ಗುಂಡಿಕ್ಕಿ ಕೊಂದು 13.28 ಲಕ್ಷ ರೂ. ದೋಚಿರುವ ಘಟನೆ ಬಿಹಾರದ (Bihar) ಸರನ್‍ನಲ್ಲಿ (Saran) ಗುರುವಾರ ನಡೆದಿದೆ.

    ಮಧ್ಯಾಹ್ನ 12.30 ರ ಸುಮಾರಿಗೆ ಐವರು ಶಸ್ತ್ರಸಜ್ಜಿತ ಅಪರಿಚಿತ ವ್ಯಕ್ತಿಗಳು (Armed assailants) ಬ್ಯಾಂಕ್‍ಗೆ ನುಗ್ಗಿದ್ದಾರೆ. ಭದ್ರತಾ ಸಿಬ್ಬಂದಿ ವಿರೋಧಿಸಿದಾಗ ಅವರ ಮೇಲೆ ಗುಂಡು ಹಾರಿಸಿದ್ದಾರೆ. ಚಿಕಿತ್ಸೆ ವೇಳೆ ಇಬ್ಬರೂ ಸಿಬ್ಬಂದಿ ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಇದನ್ನೂ ಓದಿ: ಸಮನ್ಸ್ ಹಿಡಿದು ಠಾಣೆಯ ಮೇಲೇರಿ ಆತ್ಮಹತ್ಯೆಗೆ ಯತ್ನಿಸಿದ ಮಹಿಳೆ

    ಗಣೇಶ್ ಶಾ ಮತ್ತು ರಾಮ್ ನರೇಶ್ ರೈ ದುಷ್ಕರ್ಮಿಗಳ ಗುಂಡಿಗೆ ಬಲಿಯಾದ ಸಿಬ್ಬಂದಿ. ಆರೋಪಿಗಳ ಪತ್ತೆಗೆ ಪೊಲೀಸರು ಸಿಸಿಟಿವಿ (CCTV) ದೃಶ್ಯಾವಳಿಗಳನ್ನು ಪರಿಶೀಲನೆ ನಡೆಸುತ್ತಿದ್ದಾರೆ. ತಪ್ಪಿತಸ್ಥರನ್ನು ಶೀಘ್ರದಲ್ಲೇ ಬಂಧಿಸಲಾಗುವುದು ಎಂದು ಪೊಲೀಸರು ಹೇಳಿದ್ದಾರೆ. ಇದನ್ನೂ ಓದಿ: ಭೀಕರ ಸ್ಫೋಟ – ಡೈರಿ ಫಾರ್ಮ್‌ನಲ್ಲಿದ್ದ 18,000 ಹಸುಗಳು ಸಾವು

  • ಬಿಹಾರದ ಕಳ್ಳಾಭಟ್ಟಿ ದುರಂತ – 70ಕ್ಕೇರಿದ ಸಾವಿನ ಸಂಖ್ಯೆ, ಕಳ್ಳಸಾಗಾಟ ಮಾಡುತ್ತಿದ್ದವನ ಬಂಧನ

    ಬಿಹಾರದ ಕಳ್ಳಾಭಟ್ಟಿ ದುರಂತ – 70ಕ್ಕೇರಿದ ಸಾವಿನ ಸಂಖ್ಯೆ, ಕಳ್ಳಸಾಗಾಟ ಮಾಡುತ್ತಿದ್ದವನ ಬಂಧನ

    ಪಾಟ್ನಾ: ಬಿಹಾರದಲ್ಲಿ (Bihar) ಕಳೆದೊಂದು ವಾರದಿಂದ ಮದ್ಯ (Liquor) ಸೇವಿಸಿ ಸಾವನ್ನಪ್ಪಿದವರ ಸಂಖ್ಯೆ 70ಕ್ಕೇರಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ವಿಶೇಷ ತನಿಖಾ ತಂಡ (SIT) ಸರನ್ ಜಿಲ್ಲೆಯಲ್ಲಿ (Saran) ಕಳ್ಳಾಭಟ್ಟಿಯನ್ನು ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ ಆರೋಪಿಯನ್ನು ಬಂಧಿಸಿದೆ. ಆತನಿಂದ 2.17 ಲಕ್ಷ ರೂ. ನಗದು ವಶಪಡಿಸಿಕೊಳ್ಳಲಾಗಿದೆ.

    ಆರೋಪಿಯನ್ನು ಅಖಿಲೇಶ್ ಕುಮಾರ್ ಯಾದವ್ ಅಲಿಯಾಸ್ ಅಖಿಲೇಶ್ ರೈ ಎಂದು ಗುರುತಿಸಲಾಗಿದೆ. ಕಳ್ಳಾಭಟ್ಟಿ ಸೇವಿಸಿ ಜನರು ಸಾವನ್ನಪ್ಪಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಮಶ್ರಖ್ ಹಾಗೂ ಇಶುಪುರ್ ಪೊಲೀಸ್ ಠಾಣೆಗಳಲ್ಲಿ ದಾಖಲಾಗಿರುವ 2 ಎಫ್‌ಐಆರ್‌ಗಳಲ್ಲಿ ಆರೋಪಿಗಳ ಹೆಸರು ಇಲ್ಲವಾದರೂ ಎಸ್‌ಐಟಿ ತನಿಖೆಯ ವೇಳೆ ಅಖಿಲೇಶ್ ಭಾಗಿಯಾಗಿರುವುದು ಖಚಿತವಾಗಿದೆ. ಇದನ್ನೂ ಓದಿ: 16ರ ಬಾಲಕಿ ಮೇಲೆ 8 ಕಾಮುಕರಿಂದ ಸತತ 12 ಗಂಟೆ ಗ್ಯಾಂಗ್ ರೇಪ್

    ಆರೋಪಿಯ ವಿರುದ್ಧ ಈ ಹಿಂದೆಯೂ ಅಬಕಾರಿ ಕಾಯ್ದೆಯಡಿ 4 ಪ್ರಕರಣಗಳು ದಾಖಲಾಗಿವೆ. ಬಿಹಾರದ ಸರನ್‌ನಲ್ಲಿ ಕಳೆದ ಬುಧವಾರದಿಂದ ಇಲ್ಲಿಯವರೆಗೆ ಮದ್ಯ ಸೇವಿಸಿ 70 ಜನರು ಸಾವನ್ನಪ್ಪಿದ್ದಾರೆ.

    ಸರನ್‌ನಲ್ಲಿ ನಡೆದ ಕಳ್ಳಾಭಟ್ಟಿ ದುರಂತ (Bihar Hooch Tragedy) ರಾಷ್ಟ್ರೀಯ ಮಟ್ಟದಲ್ಲಿ ಬೆಳಕಿಗೆ ಬಂದಿದ್ದು, ಸರನ್ ಪೊಲೀಸರು ಅಕ್ರಮ ಮದ್ಯ ವ್ಯಾಪಾರ, ಸಾಗಣೆ, ಕಳ್ಳಸಾಗಣೆ ಹಾಗೂ ಅಕ್ರಮ ಮದ್ಯ ತಯಾರಿಕೆಯಲ್ಲಿ ತೊಡಗಿರುವ ಶಂಕಿತರನ್ನು ಪತ್ತೆ ಹಚ್ಚಲು ಹಾಗೂ ಬಂಧಿಸಲು ಕಾರ್ಯಾಚರಣೆ ಪ್ರಾರಂಭಿಸಿದ್ದಾರೆ. ಇದನ್ನೂ ಓದಿ: ದಟ್ಟ ಮಂಜಿನಿಂದ ಕಾಣದಂತಾದ ರಸ್ತೆ – ಸರಣಿ ಅಪಘಾತದಿಂದಾಗಿ 22 ವಾಹನಗಳು ಜಖಂ

    Live Tv
    [brid partner=56869869 player=32851 video=960834 autoplay=true]

  • ಕೆಜಿಎಫ್‍ಗೆ ಎಂಟ್ರಿ ಕೊಟ್ಟ ತಮಿಳು ನಟ ಸರಣ್!

    ಕೆಜಿಎಫ್‍ಗೆ ಎಂಟ್ರಿ ಕೊಟ್ಟ ತಮಿಳು ನಟ ಸರಣ್!

    ಬೆಂಗಳೂರು: ರಾಕಿಂಗ್ ಸ್ಟಾರ್ ಯಶ್ ಅಭಿನಯದ ಕೆಜಿಎಫ್2 ಮೊದಲ ಭಾಗವನ್ನು ಮೀರಿಸುವಂತೆ ಸದ್ದು ಮಾಡುತ್ತಿರೋದು ಸುಳ್ಳಲ್ಲ. ಅದರಲ್ಲಿಯೂ ತಾರಾಗಣಕ್ಕೆ ಘಟಾನುಘಟಿ ನಟರು ಬಂದು ಸೇರಿಕೊಳ್ಳುವ ಮೂಲಕವೂ ಈ ಚಿತ್ರ ಸುದ್ದಿಯಾಗುತ್ತಿದೆ. ಇತ್ತೀಚೆಗಷ್ಟೇ ಅಧೀರನಾಗಿ ಖ್ಯಾತ ಬಾಲಿವುಡ್ ನಟ ಸಂಜಯ್ ದತ್ ಆಗಮನವಾಗಿದೆ. ಅವರ ಭಾಗದ ಚಿತ್ರೀಕರಣವೂ ನಡೆಯುತ್ತಿದೆ. ಇದೇ ಹೊತ್ತಲ್ಲಿ ತಮಿಳು ನಟ ಸರಣ್ ಕೂಡಾ ಆಗಮಿಸಿದ್ದಾರೆ.

    ಸರಣ್ ಕೆಜಿಎಫ್ ಚಿತ್ರತಂಡ ಸೇರಿಕೊಂಡಿರೋದರ ಬಗ್ಗೆ ಅವರೇ ಸಾಮಾಜಿಕ ಜಾಲತಾಣಗಳಲ್ಲಿ ಖುಷಿಯಿಂದ ಕೆಲ ಸಂಗತಿಗಳನ್ನು ಹಂಚಿಕೊಂಡಿದ್ದಾರೆ. ಯಶ್ ಎಂಬ ಅದ್ಭುತ ವ್ಯಕ್ತಿತ್ವದ ಅದ್ಭುತ ನಟನೊಂದಿಗೆ ನಟಿಸಲು ಅವಕಾಶ ಸಿಕ್ಕ ಬಗ್ಗೆ ಖುಷಿಗೊಂಡಿರೋ ಸರಣ್, ಯಶ್ ತೆರೆಯ ಮುಂದೆ ಮಾತ್ರವಲ್ಲದೇ ತೆರೆಯ ಹಿಂದೆಯೂ ಸ್ಫೂರ್ತಿದಾಯಕ ವ್ಯಕ್ತಿತ್ವ ಹೊಂದಿರುವವರೆಂದು ಕೊಂಡಾಡಿದ್ದಾರೆ. ಅಂದಹಾಗೆ ಈ ಸರಣ್ ತಮಿಳಿನಲ್ಲಿ ಕಾದಲ್, ವಿಶ್ವರೂಪಂ, ವಾಡಾಚೆನ್ನೈ ಮುಂತಾದ ಚಿತ್ರಗಳಲ್ಲಿ ನಟಿಸೋ ಮೂಲಕ ಪ್ರಸಿದ್ಧಿ ಹೊಂದಿರುವ ನಟ. ಅವರಿಗೆ ಕೆಜಿಎಫ್‍ನಲ್ಲಿಯೂ ಖದರ್ ಹೊಂದಿರೋ ಪಾತ್ರವೇ ಸಿಕ್ಕಿದೆಯಂತೆ.

    ಕೆಜಿಎಫ್ ಚಿತ್ರೀಕರಣ ಕೋಲಾರದ ಕೆಜಿಎಫ್ ಗೋಲ್ಡ್ ಫೀಲ್ಡ್‍ನಲ್ಲಿ ಸಾಂಗವಾಗಿ ನೆರವೇರುತ್ತಿತ್ತು. ಆದರೆ ಈ ಚಿತ್ರೀಕರಣದಿಂದ ಪರಿಸರಕ್ಕೆ ಹಾನಿಯಾಗಿ ಸ್ಥಳೀಯರಿಗೂ ತೊಂದರೆಯಾಗಿದೆ ಎಂದು ಆರೋಪಿಸಿ ವ್ಯಕ್ತಿಯೋರ್ವರು ದೂರು ದಾಖಲಿಸಿದ್ದರು. ಈ ಸಂಬಂಧವಾಗಿ ಚಿತ್ರೀಕರಣಕ್ಕೆ ತಡೆಯಾಜ್ಞೆ ನೀಡಿ ನ್ಯಾಯಾಲಯ ಆದೇಶ ಹೊರಡಿಸಿದೆ. ಆದರೆ ಕೆಜಿಎಫ್ ಭಾಗ ಒಂದರ ಹಂತದಲ್ಲಿಯೇ ಹಲವಾರು ಅಡೆತಡೆಗಳನ್ನು ಮೀರಿಕೊಂಡು ಬಂದಿರೋ ಚಿತ್ರತಂಡ ಈ ಕಂಟಕವನ್ನೂ ಸಮರ್ಥವಾಗಿ ಎದುರಿಸೋದರಲ್ಲಿ ಸಂಶಯವೇನಿಲ್ಲ. ಇದೆಲ್ಲದರ ನಡುವೆಯೇ ಸಂಜಯ್ ದತ್ ನಂತರ ಸರಣ್ ಆಗಮನವಾಗಿದೆ. ಇನ್ನೂ ಒಂದಷ್ಟು ಕಲಾವಿದರು ಹೀಗೆಯೇ ಕೆಜಿಎಫ್ ತಂಡ ಸೇರಿಕೊಳ್ಳಲಿದ್ದಾರೆ.