Tag: Sarbananda Sonowal

  • ಬಿಹು ಕಾರ್ಯಕ್ರಮದಲ್ಲಿ ವಾದ್ಯ ನುಡಿಸಿದ ಮೋದಿ

    ಬಿಹು ಕಾರ್ಯಕ್ರಮದಲ್ಲಿ ವಾದ್ಯ ನುಡಿಸಿದ ಮೋದಿ

    ನವದೆಹಲಿ: ಕೇಂದ್ರ ಸಚಿವ ಸರ್ಬಾನಂದ ಸೋನೊವಾಲ್ ಅವರು ಆಯೋಜಿಸಿದ್ದ ರೊಂಗಾಲಿ ಬಿಹು ಕಾರ್ಯಕ್ರಮದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಭಾಗವಹಿಸಿ ವಿಶೇಷ ವಾದ್ಯಗಳನ್ನು ನುಡಿಸಿದರು. ಇದೀಗ ಈ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ.

    ಕೇಂದ್ರ ಸಚಿವ ಸರ್ಬಾನಂದ ಸೋನೊವಾಲ್ ನಿವಾಸದಲ್ಲಿ ಪಾಲ್ಗೊಂಡ ಪ್ರಧಾನಿ ಮೊದಲಿಗೆ ಅಸ್ಸಾಂನ ತಬಲ ಬಾರಿಸಿ, ಬಳಿಕ ವಿಶೇಷ ವಾದ್ಯವನ್ನು ನುಡಿಸಿದರು. ಈ ಮೂಲಕ ಅಸ್ಸಾಂ ಜನತೆಗೆ ಹೊಸ ವರ್ಷದ ಶುಭಾಶಯ ಕೋರಿದರು. ನಂತರ ಮನೋರಂಜನಾ ಕಾರ್ಯಕ್ರಮವನ್ನು ವೀಕ್ಷಿಸಿದರು. ಇದಾದ ಬಳಿಕ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದ ಕಲಾವಿದರು ಹಾಗೂ ಅತಿಥಿಗಳೊಂದಿಗೆ ಸಂವಾದ ನಡೆಸಿದರು.

    ಸೋನೊವಾಲ್ ಅವರು ಈ ಬಗ್ಗೆ ಮಾತನಾಡಿ, ಬಿಹು ಕಾರ್ಯಕ್ರಮದಲ್ಲಿ ಮೋದಿ ಅವರು ಭಾಗವಹಿಸಿದ್ದು ಮಹತ್ವ ಪಡೆದುಕೊಂಡಿದೆ ಎಂದ ಅವರು ಸಮಾರಂಭದಲ್ಲಿ ಪ್ರಧಾನಿ ಅವರು ಭಾಗವಹಿಸಿದ್ದಕ್ಕಾಗಿ ಶ್ಲಾಘಿಸಿದರು. ಇದರಿಂದಾಗಿ ಅಸ್ಸಾಮಿ ಜನರ ಮತ್ತು  ಸಂಸ್ಕೃತಿಯ ಮೇಲಿನ ಅವರ ಪ್ರೀತಿಯನ್ನು ಪ್ರತಿಬಿಂಬಿಸುತ್ತದೆ ಎಂದು ಹೇಳಿದರು.

    ಅಸ್ಸಾಂನಲ್ಲಿ ಅದ್ದೂರಿಯಾಗಿ ಆಚರಿಸುವ ಹಬ್ಬಗಳಲ್ಲಿ ಒಂದಾದ ಬೊಹಾಂಗ್ ಬಿಹು ಅಥವಾ ರೊಂಗಾಲಿ ಬಿಹು ಪ್ರತಿವರ್ಷ ಏಪ್ರಿಲ್ ತಿಂಗಳಲ್ಲಿ ಆಚರಿಸಲಾಗುತ್ತದೆ. ಇದು ಸುಗ್ಗಿಯ ಆರಂಭವನ್ನು ಸೂಚಿಸುತ್ತದೆ. ಜೊತೆಗೆ ಅಸ್ಸಾಂ ಜನತೆಗೆ ಹೊಸವರ್ಷದ ಆಚರಣೆಯಾಗಿದೆ. ಇದನ್ನೂ ಓದಿ: ಗಲಭೆಯನ್ನು ನಿಯಂತ್ರಿಸುವಲ್ಲಿ ಅಮಿತ್ ಶಾ ಸಂಪೂರ್ಣ ವಿಫಲ: ಶರದ್ ಪವಾರ್

    ಕರ್ನಾಟಕದಲ್ಲಿ ಯುಗಾದಿ ಆಚರಿಸಿದಂತೆ ಅಸ್ಸಾಂ ಜನತೆ ಹೊಸ ವರ್ಷವನ್ನು ರೊಂಗಾಲಿ ಬಿಹುವಾಗಿ ಆಚರಿಸುತ್ತಾರೆ. ನವ ದೆಹಲಿಯಲ್ಲಿ ಪ್ರಧಾನಿ ಮೋದಿ ರೊಂಗಾಲಿ ಬಿಹು ಆಚರಿಸುವ ಮೂಲಕ ಅಸ್ಸಾಂ ಜನತೆಗೆ ವಿಶೇಷ ಸಂದೇಶ ಸಾರಿದ್ದಾರೆ.  ಇದನ್ನೂ ಓದಿ: ರಾಜೀನಾಮೆ ಪತ್ರವನ್ನು ಸೋನಿಯಾ ಗಾಂಧಿ ಬಳಿ ಶಾಶ್ವತವಾಗಿ ಇರಿಸಲಾಗಿದೆ: ರಾಜಸ್ಥಾನ ಸಿಎಂ

  • ಉಡುಪಿಯಲ್ಲಿ ಧರ್ಮಸ್ಥಳದ ಆಯುರ್ವೇದ ಆಸ್ಪತ್ರೆ ಉದ್ಘಾಟನೆ

    ಉಡುಪಿಯಲ್ಲಿ ಧರ್ಮಸ್ಥಳದ ಆಯುರ್ವೇದ ಆಸ್ಪತ್ರೆ ಉದ್ಘಾಟನೆ

    ಉಡುಪಿ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಸಂಸ್ಥೆಗಳ ರತ್ನಶ್ರೀ ಆರೋಗ್ಯಧಾಮ ಉಡುಪಿಯ ಆಯುರ್ವೇದ ಆಸ್ಪತ್ರೆಯನ್ನು ಕೇಂದ್ರ ಆಯುಷ್, ಬಂದರು ಮತ್ತು ಜಲಸಾರಿಗೆ ಸಚಿವ ಸರ್ಬಾನಂದ ಸೋನೋವಾಲ ಉದ್ಘಾಟಿಸಿದರು.

    ಉಡುಪಿಯ ಕುತ್ಪಾಡಿ ಯಲ್ಲಿರುವ ಎಸ್‍ಡಿಎಂ ಆಯುರ್ವೇದ ಕಾಲೇಜು ಮತ್ತು ಆಸ್ಪತ್ರೆಯ ವಠಾರದಲ್ಲಿ ನೂತನ ಸುಸಜ್ಜಿತ ಆಯುರ್ವೇದ ಆಸ್ಪತ್ರೆ ಸೇವಾರಂಭ ಆಗಿದೆ. ಆಸ್ಪತ್ರೆ ಉದ್ಘಾಟನೆ ನಂತರ ಸಭಾಕಾರ್ಯಕ್ರಮ ನಡೆಯಿತು. ಈ ಸಂದರ್ಭದಲ್ಲಿ ಮಾತನಾಡಿದ ಆಯುಷ್ ಇಲಾಖೆ ಸಚಿವರು, ಪ್ರಧಾನಿ ಮೋದಿ ಆಯುಷ್ ಇಲಾಖೆಗೆ ಶಕ್ತಿಕೊಟ್ಟಿದ್ದಾರೆ. 2014ರ ನಂತರ ದೇಶಾದ್ಯಂತ ಆಯುಷ್ ಇಲಾಖೆ ವಿಸ್ತಾರಗೊಂಡಿದೆ. ಎಸ್‍ಡಿಎಂ ಸಂಸ್ಥೆ ಆಯುರ್ವೇದ ವಿಚಾರದಲ್ಲಿ ಮಹತ್ವದ ಹೆಜ್ಜೆ ಇಟ್ಟಿದೆ. ಶ್ರಮದ ಫಲದಿಂದ ಧರ್ಮಸ್ಥಳ ಸಂಸ್ಥೆ ಸಾಧನೆ ಮಾಡುತ್ತಿದೆ ಸೇವಾ ಸಮರ್ಪಣೆ ಮತ್ತು ವೀರೇಂದ್ರ ಹೆಗ್ಗಡೆಯವರ ಮನೋಭಾವದಿಂದ ಇಷ್ಟೆಲ್ಲಾ ಸಾಧನೆ ಸಾಧ್ಯ ಆಗಿದೆ ಎಂದು ಶ್ಲಾಘಿಸಿದರು.

    ಆಯುರ್ವೇದ ವೈದ್ಯ ಪದ್ಧತಿಯಿಂದ ಸ್ವಸ್ಥ ಸಮಾಜ ನಿರ್ಮಾಣ ಆಗಲಿದೆ. ಎಲ್ಲಾ ಚಿಕಿತ್ಸಾ ಪದ್ಧತಿಗಳ ದೇಹ ಒಂದೇ ಆಗಿರುತ್ತದೆ ಆದರೆ ಆಯುರ್ವೇದ ಚಿಕಿತ್ಸೆಯಲ್ಲಿ ಯಾವುದೇ ಅಡ್ಡಪರಿಣಾಮಗಳು ಇರುವುದಿಲ್ಲ. ಕಳೆದ ಏಳು ವರ್ಷದಲ್ಲಿ ಆಯುಷ್ ಇಲಾಖೆ ದೇಶಾದ್ಯಂತ ಬಹಳ ವಿಸ್ತಾರವಾಗಿ ಬೆಳೆದಿದೆ. ಎಲ್ಲಾ ರೋಗಗಳಿಗೂ ಆಯುರ್ವೇದ ಚಿಕಿತ್ಸೆ ಫಲಕಾರಿ. ದೇಶಾದ್ಯಂತ ಸಂಶೋಧನೆಗಳು, ಪ್ರಯೋಗಗಳು ಈ ನಿಟ್ಟಿನಲ್ಲಿ ನಡೆಯುತ್ತಿದೆ ಎಂದರು. ಇದನ್ನೂ ಓದಿ: ನೆಟ್ಟಿಗರ ಮನಗೆದ್ದ ನ್ಯೂಸ್‍ಪೇಪರ್ ಬಾಯ್

    ಆಯುರ್ವೇದದ ವಿಶ್ವಾಸಾರ್ಹತೆ ಇತ್ತೀಚೆಗೆ ಹೆಚ್ಚಾಗುತ್ತಿದೆ. ಜನರಿಗೆ ಆಯುರ್ವೇದದ ಮೇಲೆ ನಂಬಿಕೆ ಬರುತ್ತಿದೆ. ಆಯುರ್ವೇದ ಚಿಕಿತ್ಸೆಯನ್ನು ಮೈಗೂಡಿಸಿಕೊಳ್ಳುವ ಮೂಲಕ ನವಭಾರತ ನಿರ್ಮಾಣಕ್ಕೆ ಕೈ ಜೋಡಿಸೋಣ. ನರೇಂದ್ರ ಮೋದಿ ಈ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ ಇಟ್ಟಿದ್ದಾರೆ. ದೇಶದ ಯೋಗ, ಆಯುರ್ವೇದ, ನ್ಯಾಚುರೋಪತಿ ವಿಶ್ವಕ್ಕೆ ಮಾದರಿಯಾಗುತ್ತಿದೆ. ಪ್ರಕೃತಿ ವಿರುದ್ಧವಾದ ಯಾವುದೇ ವೈದ್ಯಕೀಯ ಚಿಕಿತ್ಸೆಗಳಿಗೆ ಜನ ಒಳಗಾಗಬಾರದು. ಪ್ರಕೃತಿಗೆ ಪೂರಕವಾದ ಚಿಕಿತ್ಸೆಯ ಪಡೆಯೋಣ ಎಂದು ನುಡಿದರು.

    ಕಾರ್ಯಕ್ರಮದಲ್ಲಿ ಧರ್ಮಸ್ಥಳ ಧರ್ಮಾಧಿಕಾರಿ ಡಾ. ವೀರೇಂದ್ರ ಹೆಗ್ಗಡೆ, ಕೇಂದ್ರ ಕೃಷಿ ಸಚಿವೆ ಶೋಭಾ ಕರಂದ್ಲಾಜೆ, ಸಚಿವ ಕೋಟ ಶ್ರೀನಿವಾಸ್ ಪೂಜಾರಿ, ಉಡುಪಿ ಶಾಸಕ ರಘುಪತಿ ಭಟ್, ಮಾಜಿ ಸಚಿವ ಪ್ರಮೋದ್ ಮಧ್ವರಾಜ್, ಹರ್ಷೇಂದ್ರ ಕುಮಾರ್, ಡಾ. ಸುರೇಂದ್ರ ಕುಮಾರ್, ಡಾ. ಮಮತಾ ಮತ್ತು ಎಸ್‍ಡಿಎಂ ಶಿಕ್ಷಣ ಸಂಸ್ಥೆಗಳ ಮುಖ್ಯಸ್ಥರು, ಸಿಬ್ಬಂದಿ ಉಪಸ್ಥಿತರಿದ್ದರು. ಇದನ್ನೂ ಓದಿ: ಹುಟ್ಟುಹಬ್ಬದ ಪಾರ್ಟಿಗೆ ಆಗಮಿಸಿದ ಟೆಕ್ಕಿ ಸಾವು

  • ಒಂದೇ ದಿನ 644 ಉಗ್ರರ ಶರಣಾಗತಿ

    ಒಂದೇ ದಿನ 644 ಉಗ್ರರ ಶರಣಾಗತಿ

    – ಅಪಾರ ಪ್ರಮಾಣದ ಶಸ್ತ್ರಾಸ್ತ್ರ ವಾಪಸ್
    – ಶರಣಾದ ವ್ಯಕ್ತಿಗಳಿಗೆ ಪುನರ್ವಸತಿ ಕ್ರಮ

    ಗುವಾಹಟಿ: ಅಚ್ಚರಿಯ ಬೆಳವಣಿಗೆಯೊಂದರಲ್ಲಿ ಅಸ್ಸಾಂನಲ್ಲಿ ನಿಷೇಧಕ್ಕೆ ಒಳಗಾದ ಉಗ್ರ ಸಂಘಟನೆಗಳ ಒಟ್ಟು 644 ಸದಸ್ಯರು ಸರ್ಕಾರಕ್ಕೆ ಶರಣಾಗಿ, ಸಮಾಜದ ಮುಖ್ಯ ವಾಹಿನಿಗೆ ಬರುವ ನಿರ್ಧಾರ ಕೈಗೊಂಡಿದ್ದಾರೆ.

    ದೇಶದಲ್ಲೆ ಅಶಾಂತಿ ಸೃಷ್ಟಿಗೆ ಭಯೋತ್ಪಾದಕರು ತೀವ್ರ ಪ್ರಯತ್ನ ನಡೆಸುತ್ತಿರುವ ಸಂದರ್ಭದಲ್ಲಿ ಭಾರೀ ಪ್ರಮಾಣದಲ್ಲಿ ಉಗ್ರರು ಶರಣಾಗಿರುವುದು ವಿಶೇಷ. ಇಷ್ಟು ಪ್ರಮಾಣದ ಉಗ್ರರು ಉಗ್ರವಾದವನ್ನು ತ್ಯಜಿಸಿ ಒಂದೇ ದಿನದಲ್ಲಿ ಶರಣಾಗುವುದು ಇದೆ ಮೊದಲು ಎಂದು ವರದಿಯಾಗಿದೆ.

    ಅಸ್ಸಾಂ ಮುಖ್ಯಮಂತ್ರಿ ಸರ್ಬಾನಂದ ಸೋನೊವಾಲ್ ಸಮ್ಮುಖದಲ್ಲಿ ನಿಷೇಧಿತ ಎನ್‍ಡಿಎಫ್‍ಡಿ, ಯುಎಲ್‍ಎಫ್‍ಎ, ಕೆಎಲ್‍ಒ, ಸಿಪಿಐ(ನಕ್ಸಲ್), ಎನ್‍ಎಸ್‍ಎಲ್‍ಎ, ಎಡಿಎಫ್ ಹಾಗೂ ಎನ್‍ಎಲ್‍ಎಫ್‍ಬಿ ಬಂಡುಕೋರ ಸಂಘಟನೆಗಳ 644 ಸದಸ್ಯರು ತಮ್ಮ ಸಂಘಟನೆಗಳನ್ನು ತೊರೆದು ಶರಣಾದರು.

    ಈ ಸಂದರ್ಭದಲ್ಲಿ ಉಗ್ರರು 177 ಶಸ್ತ್ರಾಸ್ತ್ರಗಳು, 58 ಸಿಡಿಮದ್ದುಗಳು, 1.93 ಕೆಜಿ ತೂಕದ ಸ್ಫೋಟಕಗಳು, 52 ಗ್ರೆನೇಡ್‍ಗಳು, 71 ಬಾಂಬ್‍ಗಳು, 3 ರಾಕೆಟ್ ಲಾಂಚರ್ ಗಳು 306 ಸ್ಫೋಟಕ ಸಾಧನಗಳು ಹಾಗೂ 15 ಚೂಪಾದ ಆಯುಧಗಳನ್ನು ಸರ್ಕಾರಕ್ಕೆ ಒಪ್ಪಿಸಿದ್ದಾರೆ.

    ಮುಖ್ಯಮಂತ್ರಿ ಸೋನೊವಾಲ್ ಈ ಕಾರ್ಯಕ್ರಮದಲ್ಲಿ ಮಾತನಾಡಿ, ಶರಣಾದ ವ್ಯಕ್ತಿಗಳಿಗೆ ಸರ್ಕಾರದಲ್ಲಿರುವ ಯೋಜನೆಗಳಡಿ ಪುನರ್ವಸತಿ ಕ್ರಮ ಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದ್ದಾರೆ. ಅಷ್ಟೇ ಅಲ್ಲದೇ ಅಸ್ಸಾಂ ಅಭಿವೃದ್ಧಿಗಾಗಿ ಸಮಾಜದ ಮುಖ್ಯವಾಹಿನಿಗೆ ವಾಪಸ್ಸಾದ ನಿಮ್ಮ ಬಗ್ಗೆ ಜನ ಹೆಮ್ಮೆ ಪಡುತ್ತಾರೆ. ಇದೇ ರೀತಿಯಾಗಿ ಮತ್ತಷ್ಟು ವ್ಯಕ್ತಿಗಳು ಶರಣಾಗಿ ಭಾರತದ ಅಭಿವೃದ್ಧಿಗೆ ಸಹಕಾರ ನೀಡಬೇಕೆಂದು ಮನವಿ ಮಾಡಿದರು.

  • CAA ವಿರೋಧಿಸಿ ಪ್ರತಿಭಟನೆ – SIT ತನಿಖೆಗೆ ಮುಂದಾದ ಸರ್ಕಾರ

    CAA ವಿರೋಧಿಸಿ ಪ್ರತಿಭಟನೆ – SIT ತನಿಖೆಗೆ ಮುಂದಾದ ಸರ್ಕಾರ

    ಗುವಾಹಟಿ: ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ಪ್ರತಿಭಟನೆ ಸಂಧರ್ಭದಲ್ಲಿ ನಡೆದ ಹಿಂಸಾತ್ಮಕ ಘಟನೆಗಳನ್ನು ತನಿಖೆ ನಡೆಸಲು ಅಸ್ಸಾಂ ಸರ್ಕಾರ ಮುಂದಾಗಿದೆ. ಈ ಸಂಬಂಧ ವಿಶೇಷ ತನಿಖಾ ತಂಡವನ್ನು ರಚಿಸಿರುವ ಸಿಎಂ ಸರ್ಬಾನಂದ ಸೋನೊವಾಲ್ ಹಿಂಸಾಚಾರದಲ್ಲಿ ಭಾಗಿಯಾಗಿ ಶಾಂತಿ ಕದಡಿದವರನ್ನ ಬಿಡುವುದಿಲ್ಲ ಎಂದು ಎಚ್ಚರಿಕೆ ನೀಡಿದ್ದಾರೆ.

    ಅಸ್ಸಾಂ ಜನರೊಂದಿಗೆ ಉಳಿಯಲಿದೆ ಇದಕ್ಕಾಗಿ ನಾವು ಯಾವ ಶಾಸನಗಳನ್ನು ಬೇಕಾದರು ಜಾರಿಗೆ ತರುತ್ತೇವೆ. ಅಸ್ಸಾಂ ಒಪ್ಪಂದ ಆರನೇ ಷರತ್ತು ಜಾರಿಗೆ ತರಲು ಎಲ್ಲ ಸೂಕ್ತ ಕ್ರಮಗಳನ್ನು ತೆಗೆದುಕೊಳ್ಳುವ ಭರವಸೆಯನ್ನು ಪ್ರಧಾನಿ ನರೇಂದ್ರ ಮೋದಿ ಮತ್ತು ಗೃಹ ಸಚಿವ ಅಮಿತ್ ಶಾ ನೀಡಿದ್ದಾರೆ ಎಂದು ಸಿಎಂ ಸರ್ಬಾನಂದ ಸೋನೊವಾಲ್ ಅಸ್ಸಾಂ ಜನರಿಗೆ ಅಭಯ ನೀಡಿದ್ದಾರೆ.

    ಶುಕ್ರವಾರದಿಂದ ಇಂಟರ್ನೆಟ್ ಎಂದಿನಂತೆ ಕಾರ್ಯನಿರ್ವಹಿಸುತ್ತಿದೆ. ಆದರೆ ಸಾಮಾಜಿಕ ಜಾಲತಾಣಗಳ ಮೇಲೆ ಸರ್ಕಾರ ನಿಗಾ ವಹಿಸಿದ್ದು ಶಾಂತಿ ಕದಡುವ ಪೋಸ್ಟ್ ಹಾಕುವ ಮುನ್ನ ಎಚ್ಚರಿಕೆ ಇರಲಿ, ಜನರು ಜಾಗರೂಕರಾಗಿ ಎಂದು ಮನವಿ ಮಾಡಿದ್ದಾರೆ.

    ಶಾಂತಿ ಕಾಪಾಡುವ ನಿಟ್ಟಿನಲ್ಲಿ ಸಾರ್ವಜನಿಕರು ಸಹಕರಿಸಬೇಕು ಮತ್ತು ಸಾಮಾಜಿಕ ಜಾಲತಾಣಗಳಲ್ಲಿ ಪೊಸ್ಟ್ ಶೇರ್ ಮಾಡುವ ಮುನ್ನ ಎಚ್ಚರಿಕೆ ಇರಲಿ ಶಾಂತಿ ಸುವ್ಯವಸ್ಥೆ ಕದಡಿದರೆ ಕ್ರಮ ತೆಗೆದುಕೊಳ್ಳಲಾಗುವುದು ಎಂದು ಅಸ್ಸಾಂ ಪೊಲೀಸ್ ಟ್ವೀಟ್ ಮಾಡಿದ್ದಾರೆ.

    CAA ವಿರೋಧಿಸಿ ಅಸ್ಸಾಂನಲ್ಲಿ ಬೃಹತ್ ಪ್ರತಿಭಟನೆಗಳು ನಡೆದು ಹಿಂಸಾತ್ಮಕ ರೂಪ ಪಡೆದುಕೊಂಡಿತ್ತು ಈ ವೇಳೆ ಸಾಕಷ್ಟು ಆಸ್ತಿ-ಪಾಸ್ತಿ ಹಾನಿಯಾಗಿತ್ತು ಈ ಹಿನ್ನೆಲೆ 24 ಗಂಟೆಗಳ ಇಂಟರ್ನೆಟ್ ಸ್ಥಗಿತಗೊಳಿಸಲಾಗಿತ್ತು. ಶುಕ್ರವಾರ ಗುವಾಹಟಿ ಹೈಕೋರ್ಟ್ ಸೂಚನೆ ಹಿನ್ನೆಲೆ ಇಂಟರ್ನೆಟ್ ಸಂಪರ್ಕ ನೀಡಲಾಗಿದೆ.

  • ಅಸ್ಸಾಂನ ಕ್ರೀಡಾ ರಾಯಭಾರಿಯಾಗಿ ಹಿಮಾದಾಸ್ ಆಯ್ಕೆ

    ಅಸ್ಸಾಂನ ಕ್ರೀಡಾ ರಾಯಭಾರಿಯಾಗಿ ಹಿಮಾದಾಸ್ ಆಯ್ಕೆ

    ದಿಸ್ಪುರ್: ಭಾರತದ ಕ್ರೀಡಾಪಟು ಹಿಮಾದಾಸ್ ಅವರನ್ನು ರಾಜ್ಯಕ್ಕೆ ಮೊದಲ ಕ್ರೀಡಾ ರಾಯಭಾರಿ ಆಗಿ ಮುಖ್ಯಮಂತ್ರಿ ಸರಬಾನಂದ ಸೊನೋವಾಲ್ ರವರು ಆಯ್ಕೆ ಮಾಡಿದ್ದಾರೆ.

    ಇತ್ತೀಚೆಗೆ ಫಿನ್ ಲ್ಯಾಂಡ್ ನಲ್ಲಿ ನಡೆದ ವಿಶ್ವ ಜೂನಿಯರ್ ಅಥ್ಲೆಟಿಕ್ಸ್ ಕ್ರೀಡಾಕೂಟದಲ್ಲಿ ಭಾರತದ ಅಥ್ಲೀಟ್ ಹಿಮಾದಾಸ್ ಚಿನ್ನದ ಪದಕ ಗೆದ್ದು ದೇಶದ ಗೌರವ ಹೆಚ್ಚಿಸಿದ್ದರು. ಈ ವೇಳೆ ಸಿಎಂ ಸೊನೋವಾಲ್ ರಾಜ್ಯದ ಕ್ರೀಡಾ ರಾಯಭಾರಿ ಎಂದು ಘೋಷಣೆಯನ್ನು ನೀಡಿದ್ದರು. ಇದೇ ಮೊದಲ ಬಾರಿಗೆ ಅಸ್ಸಾಂ ನಲ್ಲಿ ಕ್ರೀಡಾ ರಾಯಭಾರಿಯನ್ನು ಆಯ್ಕೆ ಮಾಡಿದ್ದಾರೆ.

    ಫ್ರಾನ್ಸ್ ನಲ್ಲಿ ಆಯೋಜಿಸಿದ ಮಹಿಳಾ 400 ಮೀಟರ್ ಓಟದ ಸ್ಪರ್ಧೆಯಲ್ಲಿ ಭಾಗವಹಿಸಿ 51.46 ಸೆಕೆಂಡ್ ಗಳಲ್ಲಿ ಸ್ಪರ್ಧೆಯನ್ನು ಪೂರ್ಣಗೊಳಿಸಿ ಚಿನ್ನದ ಪದಕಕ್ಕೆ ಮುತ್ತಿಟ್ಟಿದ್ದರು. ಈ ಮೂಲಕ 18 ನೇ ವಯಸ್ಸಿನಲ್ಲಿಯೇ ಇತಿಹಾಸವನ್ನು ಸೃಷ್ಟಿಸುವಲ್ಲಿ ಹಿಮಾದಾಸ್ ಯಶಸ್ವಿಯಾದರು.

    ಈ ಮುಂಚಿನ ಓಟದ ಹಿಮಾದಾಸ್ ರವರ ಸಾಧನೆಗೆ ಸಿಎಂ ಅಭಿನಂದಿಸಿದ್ದು, ಹಿಮಾದಾಸ್‍ರವರ ಸ್ಫೂರ್ತಿಯಿಂದ, ಅವಕಾಶಗಳಿಂದ ಮತ್ತು ಸಾಧನೆಗಳಿಂದ ಅಸ್ಸಾಂನ ಬೆಳವಣಿಗೆಗೆ ಪೂರಕವಾಗಲಿವೆ ಎಂದರು.

    ಅಂದಹಾಗೇ ಹಿಮಾದಾಸ್ ಅವರು ವಿಶ್ವ ಜೂನಿಯರ್ ಅಥ್ಲೆಟಿಕ್ಸ್ ಕ್ರೀಡಾಕೂಟದಲ್ಲಿ 51.46 ಸೆಕೆಂಡ್ ಗಳಲ್ಲಿ ಓಟವನ್ನು ಪೂರ್ಣಗೊಳಿಸಿದ್ದು, ಆದರೆ ಕಳೆದ ತಿಂಗಳು ಗುವಾಹತಿಯಲ್ಲಿ ನಡೆದ ನ್ಯಾಷನಲ್ ಚಾಂಪಿಯನ್ ಶಿಪ್ ನಲ್ಲಿ ಕೇವಲ 51.13 ಸೆಕೆಂಡ್ ಗಳಲ್ಲಿ 400 ಮೀಟರ್ ದೂರವನ್ನು ಕ್ರಮಿಸಿದ್ದರು.