Tag: SaReGaMaPa

  • ಸರಿಗಮಪ ಖ್ಯಾತಿಯ ಅಂಧ ಗಾಯಕಿ ಮಂಜಮ್ಮ ನಿಧನ

    ಸರಿಗಮಪ ಖ್ಯಾತಿಯ ಅಂಧ ಗಾಯಕಿ ಮಂಜಮ್ಮ ನಿಧನ

    ತುಮಕೂರು: ತಮ್ಮ ಸುಮಧುರ ಕಂಠದಿಂದ ಸರಿಗಮಪ (Saregamapa) ಕಾರ್ಯಕ್ರಮದಲ್ಲಿ ಭಾಗವಹಿಸಿ, ಇಡೀ ರಾಜ್ಯದ ಜನರ ಮನೆಮಾತಾಗಿದ್ದ ಅಂಧ ಗಾಯಕಿ ಮಂಜಮ್ಮ ಅನಾರೋಗ್ಯದಿಂದ ನಿಧನರಾಗಿದ್ದಾರೆ.

    ಕಿಡ್ನಿ ಸಮಸ್ಯೆಯಿಂದ ಬಳಲುತ್ತಿದ್ದ ಮಂಜಮ್ಮ (Manjamma) ಇಂದು (ಜ.28) ವಿಕ್ಟೋರಿಯಾ ಆಸ್ಪತ್ರೆಯಲ್ಲಿ (Victoria Hosi ಕೊನೆಯುಸಿರೆಳೆದಿದ್ದಾರೆ.ಇದನ್ನೂ ಓದಿ: ಫೈನಾನ್ಸ್ ಕಿರುಕುಳ: 3 ವರ್ಷ ಜೈಲು, 1 ಲಕ್ಷದ ವರೆಗೆ ದಂಡ – ಗುರುವಾರ ಸರ್ಕಾರದಿಂದ ಸುಗ್ರೀವಾಜ್ಞೆ

    ;

    ಮಧುಗಿರಿ ತಾಲೂಕಿನ ಡಿವಿ ಹಳ್ಳಿ ಗ್ರಾಮದ ನಿವಾಸಿ ಮಂಜಮ್ಮ ಹಾಗೂ ತಂಗಿ ರತ್ನಮ್ಮ ಹುಟ್ಟು ಅಂಧರು. ದಂಡಿನ ಮಾರಮ್ಮ ದೇವಸ್ಥಾನದಲ್ಲಿ ಹಾಡು ಹಾಡಿ ಭಕ್ತಾದಿಗಳು ಕೊಟ್ಟ ಹಣದಿಂದ ತುತ್ತಿನ ಚೀಲ ತುಂಬಿಸಿಕೊಳ್ಳುತ್ತಿದ್ದರು. ಇವರ ಪ್ರತಿಭೆ ಗುರುತಿಸಿ ಝೀ ಕನ್ನಡದ ಸರಿಗಮಪ ಕಾರ್ಯಕ್ರಮದಲ್ಲಿ ಅವಕಾಶ ನೀಡಲಾಗಿತ್ತು. ಆ ಮುಖೇನ ಕರ್ನಾಟಕದ ಜನರ ಮನೆ ಮಾತಾಗಿದ್ದರು.

    2019ರಲ್ಲಿ ನಟ ಜಗ್ಗೇಶ್ ತಮ್ಮ ಸ್ವಂತ ಹಣದಿಂದ ಅವರಿಗಾಗಿ ಮನೆಯ ನಿರ್ಮಾಣ ಮಾಡಿಕೊಟ್ಟಿದ್ದರು. ಇನ್ನೂ ಸಂಗೀತ ನಿರ್ದೇಶಕ ಅರ್ಜುನ್ ಜನ್ಯ ಅವರು ಮಂಜಮ್ಮ ಹಾಗೂ ರತ್ನಮ್ಮ ಅವರಿಗೆ ಪ್ರತಿ ತಿಂಗಳು ಆಹಾರ ಪದಾರ್ಥಗಳನ್ನು ಕಳುಹಿಸಿಕೊಡುವ ಮೂಲಕ ನೆರವಾಗಿದ್ದರು.ಇದನ್ನೂ ಓದಿ: PUBLiC TV Impact | ಹಾಲಿಗೆ ನೀರು ಕಲಬೆರಕೆ ಮಾಡಿರೋದು ತನಿಖೆಯಲ್ಲಿ ಧೃಢ – ಸಿಬ್ಬಂದಿ, ಅಧಿಕಾರಿಗಳು ವಜಾ

  • ಅಂಧ ಸಹೋದರಿಯರ ಕಷ್ಟಕ್ಕೆ ಮಿಡಿದ ‘ಕಾಮಿಡಿ ಕಿಲಾಡಿಗಳು 3’ರ ದಾನಪ್ಪ

    ಅಂಧ ಸಹೋದರಿಯರ ಕಷ್ಟಕ್ಕೆ ಮಿಡಿದ ‘ಕಾಮಿಡಿ ಕಿಲಾಡಿಗಳು 3’ರ ದಾನಪ್ಪ

    ಬೆಂಗಳೂರು: ಕನ್ನಡ ಖಾಸಗಿ ವಾಹಿನಿಯಲ್ಲಿ ಪ್ರಸಾರವಾಗುವ ‘ಕಾಮಿಡಿ ಕಿಲಾಡಿಗಳು ಸೀಸನ್ 3’ ರಿಯಾಲಿಟಿ ಶೋಗೆ ಶನಿವಾರ ಅದ್ಧೂರಿ ತೆರೆಬಿದ್ದಿದೆ. ಈ ಶೋನ ಎರಡನೇ ರನ್ನರ್ ಅಪ್ ಆದ ದಾನಪ್ಪ ಅವರು ಸರಿಗಮಪ ಸ್ಪರ್ಧಿಗಳಾದ ಅಂಧ ಸಹೋದರಿಯರು ರತ್ನಮ್ಮ ಮತ್ತು ಮಂಜಮ್ಮ ಅವರ ನೆರವಿಗೆ ನಿಂತಿದ್ದಾರೆ.

    ಹೌದು. ದಾನಪ್ಪ ಅವರು ತಮಗೆ ಸಿಕ್ಕ ನಗದು ಬಹುಮಾನದಲ್ಲಿ 10 ಸಾವಿರ ರೂಪಾಯಿಯನ್ನು ರತ್ನಮ್ಮ ಮತ್ತು ಮಂಜಮ್ಮ ಅವರಿಗೆ ನೀಡುವುದಾಗಿ ಗ್ರ್ಯಾಂಡ್ ಫಿನಾಲೆ ವೇದಿಕೆ ಮೇಲೆ ಘೋಷಿಸಿದ್ದಾರೆ. ದಾನಪ್ಪ ಅವರು ಅಂಧ ಸಹೋದರಿಯರ ಸಹಾಯಕ್ಕೆ ಮುಂದಾಗಿರೋದು ಎಲ್ಲರ ಮನಗೆದ್ದಿದೆ. ಇದನ್ನೂ ಓದಿ: ಕೊಟ್ಟ ಮಾತು ಉಳಿಸಿಕೊಂಡ ಜಗ್ಗೇಶ್ – ಅಂಧ ಸೋದರಿಯರಿಗೆ ಮನೆ ರೆಡಿ

    ಉಡುಪಿಯ ರಾಕೇಶ್ ‘ಕಾಮಿಡಿ ಕಿಲಾಡಿಗಳು ಸೀಸನ್ 3’ರ ವಿನ್ನರ್ ಪಟ್ಟ ತಮ್ಮದಾಗಿಸಿಕೊಂಡಿದ್ದು, ಹಾಸನದ ಸಂತೋಷ್ ರನ್ನರ್ ಅಪ್ ಆಗಿದ್ದಾರೆ. ಇತ್ತ ಕೋಳಿ ಕಳ್ಳ ಖ್ಯಾತಿಯ ಮನೋಹರ್ ಹಾಗೂ ಬಾ ಮಲಿಕೋ ಖ್ಯಾತಿಯ ದಾನಪ್ಪ ಅವರು ಎರಡನೇ ರನ್ನರ್ ಅಪ್ ಸ್ಥಾನವನ್ನು ಹಂಚಿಕೊಂಡಿದ್ದಾರೆ. ವಿನ್ನರ್‍ಗೆ 8 ಲಕ್ಷ ರೂಪಾಯಿ ಹಾಗೂ ರನ್ನರ್ ಅಪ್‍ಗೆ 4 ಲಕ್ಷ ರೂಪಾಯಿ ನಗದು ಬಹುಮಾನ ಹಾಗೂ ಟ್ರೋಫಿ ನೀಡಲಾಗಿದೆ. ಇತ್ತ ಎರಡನೇ ರನ್ನರ್ ಅಪ್ ಸ್ಥಾನವನ್ನು ಹಂಚಿಕೊಂಡ ಮನೋಹರ್ ಹಾಗೂ ದಾನಪ್ಪ ಇಬ್ಬರಿಗೂ ಸೇರಿ 2 ಲಕ್ಷ ರೂ. ನಗದು ಬಹುಮಾನ ಹಾಗೂ ಟ್ರೋಪಿ ನೀಡಿ ಅಭಿನಂದಿಸಲಾಗಿದೆ. ಇದನ್ನೂ ಓದಿ: ‘ಕಾಮಿಡಿ ಕಿಲಾಡಿಗಳು 3’ರ ವಿನ್ನರ್ ಉಡುಪಿಯ ರಾಕೇಶ್ ಪೂಜಾರಿ

    ಸರಿಗಪಮ ಶೋಗೆ ತುಮಕೂರಿನ ಮಧುಗಿರಿ ತಾಲೂಕಿನ ರತ್ನಮ್ಮ ಮತ್ತು ಮಂಜಮ್ಮ ಇಬ್ಬರು ಸಹೋದರಿಯರು ಬಂದಿದ್ದರು. ಈ ವೇಳೆ ತಮ್ಮ ಕಷ್ಟವನ್ನು ಹೇಳಿಕೊಂಡಿದ್ದರು. ಸಹೋದರಿಯ ನೋವಿನ ಕಥೆ ಕೇಳಿದ ಜಗ್ಗೇಶ್ ಅವರ ಕಷ್ಟಕ್ಕೆ ಸಹಾಯದ ಹಸ್ತ ಚಾಚಿದ್ದರು.

    ಅಲ್ಲದೇ ಸಹೋದರಿಯರ ಬಗ್ಗೆ ಸೋಶಿಯಲ್ ಮಿಡಿಯಾದಲ್ಲಿ “ದೇವರ ಮಕ್ಕಳ ಸ್ಥಿತಿಕಂಡು ಭಾವುಕನಾದೆ. ತಡಮಾಡದೆ ಇವರಿಗೆ ಸೂರು ಕಲ್ಪಿಸಿಕೊಡುವಂತೆ ರಾಯರ ಪ್ರೇರಣೆಯಾಯಿತು. ಆ ಕಾರ್ಯಕ್ಕೆ ಶಿರಬಾಗಿ ಮಾಡಿಕೊಡಲು ಕೊರಟಗೆರೆ ಜಗ್ಗೇಶ್ ಅಭಿಮಾನಿಗಳ ಸಂಘದ ಫ್ರೆಂಡ್ಸ್ ಗ್ರೂಪ್‍ಗೆ ಜವಾಬ್ಧಾರಿ ನೀಡಿರುವೆ. ಈ ಕಲಾವಿದರ ಕೂಗು ರಾಯರ ಮಡಿಲು ಸೇರಿತು” ಎಂದು ಬರೆದುಕೊಂಡಿದ್ದರು. ಕೊಟ್ಟ ಮಾತಿನಂತೆ ಮನೆ ಕಟ್ಟಿಕೊಟ್ಟ ಜಗ್ಗೇಶ್ ಅವರು, ತಮ್ಮ ಪತ್ನಿ ಪರಿಮಳ ಅವರ ಜೊತೆ ಮಾರ್ಚ್ 12ರಂದು ಗೃಹಪ್ರವೇಶ ಮಾಡಿ ಮನೆಯ ಕೀಲಿಯನ್ನು ರತ್ನಮ್ಮ ಮತ್ತು ಮಂಜಮ್ಮ ಅವರಿಗೆ ನೀಡಲಿದ್ದಾರೆ. ಈ ಬಗ್ಗೆ ಸ್ವತಃ ಜಗ್ಗೇಶ್ ಅವರೇ ತಮ್ಮ ಇನ್‍ಸ್ಟಾಗ್ರಾಮ್‍ನಲ್ಲಿ ಹಂಚಿಕೊಂಡಿದ್ದಾರೆ.

    ಸಹೋದರಿಯರಿಗೆ ಹುಟ್ಟಿನಿಂದ ಕಣ್ಣಿಲ್ಲ. ಇವರು ಒಟ್ಟು ನಾಲ್ಕು ಜನ ಮಕ್ಕಳು, ಅವರಲ್ಲಿ ಇಬ್ಬರಿಗೆ ಕಣ್ಣಿಲ್ಲ. ಗಂಡು ಮಗ ಇದ್ದನು. ಆತನೂ ಕೂಡ ಕಾಯಿಲೆಯಿಂದ ಮೃತಪಟ್ಟಿದ್ದಾನೆ. ತಾಯಿಯೂ ಕೂಡ ಸಾವನ್ನಪ್ಪಿದ್ದು, ಅಜ್ಜಿ ಜೊತೆ ವಾಸವಾಗಿದ್ದಾರೆ. ತಂದೆಯೂ ಕಾಯಿಲೆಯಿಂದ ಬಳಲುತ್ತಿದ್ದಾರೆ. ಕಷ್ಟದಲ್ಲೂ ಅಂಧ ಸಹೋದರಿಯರು ಸಂಸಾರದ ಜವಾಬ್ದಾರಿಯನ್ನು ಹೊತ್ತಿದ್ದಾರೆ. ಊಟಕ್ಕಾಗಿ ರತ್ಮಮ್ಮ ಮತ್ತು ಮಂಜಮ್ಮ ಊರಿನ ದಂಡಿನ ಮಾರಮ್ಮ ದೇವಾಲಯದ ಮುಂದೆ ಹಾಡು ಹೇಳಲು ಶುರು ಮಾಡಿದ್ದರು. ಅಲ್ಲಿಗೆ ಬರುವ ಭಕ್ತರು ನೀಡುವ ಹಣದಿಂದ ಸಂಸಾರವನ್ನು ನಡೆಸುತ್ತಿದ್ದಾರೆ.

    https://www.instagram.com/p/B88YTrMpH2C/

  • ಸರಿಗಮಪ ಕಾರ್ಯಕ್ರಮಕ್ಕೆ ಮರಳಿದ ಗಾಯಕ ವಿಜಯ್ ಪ್ರಕಾಶ್

    ಸರಿಗಮಪ ಕಾರ್ಯಕ್ರಮಕ್ಕೆ ಮರಳಿದ ಗಾಯಕ ವಿಜಯ್ ಪ್ರಕಾಶ್

    ಬೆಂಗಳೂರು: ಖಾಸಗಿ ವಾಹಿನಿಯಲ್ಲಿ ಪ್ರಸಾರವಾಗುವ ‘ಸರಿಗಮಪ’ ಕಾರ್ಯಕ್ರಮಕ್ಕೆ ಗಾಯಕ ವಿಜಯ್ ಪ್ರಕಾಶ್ ಮರಳುತ್ತಿದ್ದಾರೆ.

    ‘ಸರಿಗಮಪ’ ಕಾರ್ಯಕ್ರಮದಲ್ಲಿ ವಿಜಯ್ ಪ್ರಕಾಶ್ ಜೊತೆ ಗಾಯಕರಾದ ರಾಜೇಶ್ ಕೃಷ್ಣನ್ ಹಾಗೂ ಅರ್ಜುನ್ ಜನ್ಯ ತೀರ್ಪುಗಾರಾಗಿದ್ದಾರೆ. ಆದರೆ ಕೆಲವು ವಾರಗಳಿಂದ ವಿಜಯ್ ಪ್ರಕಾಶ್ ಕಾರ್ಯಕ್ರಮಕ್ಕೆ ಆಗಮಿಸುತ್ತಿಲ್ಲ. ಇದರಿಂದ ಅವರ ಅಭಿಮಾನಿಗಳು ಬೇಸರಗೊಂಡಿದ್ದರು.

    ವಿಜಯ್ ಪ್ರಕಾಶ್ ಕಾರ್ಯಕ್ರಮಕ್ಕೆ ಗೈರಾಗಿರುವುದನ್ನು ಗಮನಿಸಿದ ವೀಕ್ಷಕರು ನೀವು ಏಕೆ ಕಾರ್ಯಕ್ರಮಕ್ಕೆ ಬರುತ್ತಿಲ್ಲ? ನೀವು ಕಾರ್ಯಕ್ರಮಕ್ಕೆ ಯಾವಾಗ ಹಿಂತಿರುಗುತ್ತೀರಿ ಎಂದು ಸಾಮಾಜಿಕ ಜಾಲತಾಣದಲ್ಲಿ ಅವರನ್ನು ಪ್ರಶ್ನಿಸಿದ್ದರು.

    ವೀಕ್ಷಕರ ಪ್ರಶ್ನೆಗೆ ವಿಜಯ್ ಪ್ರಕಾಶ್ ಪ್ರತಿಕ್ರಿಯಿಸಿ, ಮುಂದಿನ ವಾರ ಕಾರ್ಯಕ್ರಮಕ್ಕೆ ಮರಳುವುದಾಗಿ ಹೇಳಿದ್ದಾರೆ. ಅಲ್ಲದೆ ಇಷ್ಟು ಸಂಚಿಕೆಗಳಲ್ಲಿ ಏಕೆ ಬಂದಿಲ್ಲ ಎಂಬುದನ್ನು ಕೂಡ ಕಾರ್ಯಕ್ರಮದಲ್ಲೇ ಹೇಳುವುದಾಗಿ ರೀ-ಟ್ವೀಟ್ ಮಾಡಿದ್ದಾರೆ.

    ಏಪ್ರಿಲ್ 7ರಂದು ವಿಜಯ್ ಪ್ರಕಾಶ್ ಅವರ ತಂದೆ ವಿದ್ವಾನ್ ಎಲ್ ರಾಮಶೇಷ ಅವರು ಮೈಸೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದರು. ತಂದೆ ನಿಧನರಾಗಿದ್ದಾಗ ವಿಜಯ್ ಅವರು ಅಮೆರಿಕ ಪ್ರವಾಸದಲ್ಲಿದ್ದರು. ಈ ವಿಷಯ ತಿಳಿದ ತಕ್ಷಣ ವಿಜಯ್ ಅವರು ಅಮೆರಿಕದಿಂದ ಹಿಂತಿರುಗಿದ್ದರು.

  • ರಾಯಚೂರಿಗೆ ಹನುಮಂತ ಭೇಟಿ – ಸೆಲ್ಫಿಗಾಗಿ ಮುಗಿಬಿದ್ದ ಜನ

    ರಾಯಚೂರಿಗೆ ಹನುಮಂತ ಭೇಟಿ – ಸೆಲ್ಫಿಗಾಗಿ ಮುಗಿಬಿದ್ದ ಜನ

    ರಾಯಚೂರು: ಖಾಸಗಿ ವಾಹಿನಿಯಲ್ಲಿ ಪ್ರಸಾರವಾಗುತ್ತಿದ್ದ ‘ಸರಿಗಮಪ’ ಕಾರ್ಯಕ್ರಮದ ರನ್ನರ್ ಅಪ್ ಹನುಮಂತ ರಾಯಚೂರಿಗೆ ಆಗಮಿಸಿದ್ದ ವೇಳೆ ಅಭಿಮಾನಿಗಳು ಸೆಲ್ಫಿಗಾಗಿ ಮುಗಿಬಿದ್ದಿದ್ದಾರೆ.

    ಕರ್ನಾಟಕದ ಮನೆ ಮಾತಾಗಿರುವ ಹನುಮಂತನನ್ನು ನೋಡಲು ಬಿಸಿಲನಾಡು ರಾಯಚೂರಿನಲ್ಲಿ ಜನ ಮುಗಿಬಿದ್ದರು. ರಾಯಚೂರಿನ ಮಸ್ಕಿಯಲ್ಲಿ ನಡೆದ ಸಂತ ಸೇವಾಲಾಲ್ ಮಹಾರಾಜ್ ಜಯಂತಿಗೆ ಮುಖ್ಯ ಅತಿಥಿಯಾಗಿ ಬಂದಿದ್ದ ಹನುಮಂತಣ್ಣನನ್ನು ನೋಡಲು ಭಾರೀ ಸಂಖ್ಯೆಯಲ್ಲಿ ಜನ ಆಗಮಿಸಿದ್ದರು.

    ಕಾರ್ಯಕ್ರಮದಲ್ಲಿ ಹನುಮಂತನಿಗೆ ಲಂಬಾಣಿ ಸಮಾಜದವರು ಅವರದೇ ಶೈಲಿಯ ಟೋಪಿ ಹಾಗೂ ಶಾಲು ಹಾಕಿ ಸನ್ಮಾನಿಸಿದರು. ಮಸ್ಕಿ ಪಟ್ಟಣದ ಪ್ರಮುಖ ರಸ್ತೆಗಳಲ್ಲಿ ನಡೆದ ಬಂಜಾರ್ ಉತ್ಸವದ ಮೆರವಣಿಗೆಯಲ್ಲಿ ಭಾಗವಹಿಸಿದ ಹನುಮಂತನಿಗೆ ಕೈಬೀಸಿ ಜನ ಅಭಿಮಾನ ಮೆರೆದು ಸೆಲ್ಫಿಗಾಗಿ ಮುಗಿಬಿದ್ದರು. ಅಲ್ಲದೇ ಮನೆ, ಕಟ್ಟಡಗಳ ಮೇಲೆ ನಿಂತು ಮಹಿಳೆಯರು ಹಾಗೂ ಚಿಕ್ಕ ಮಕ್ಕಳು ಕುತೂಹಲದ ಕಣ್ಣುಗಳಿಂದ ಬಿಸಿಲಲ್ಲಿ ಕಾದು ಹನುಮಂತನನ್ನು ನೋಡಿ ಖುಷಿಪಟ್ಟರು.

    ಇತ್ತೀಚೆಗೆ ಕಲಬುರಗಿ ಜಿಲ್ಲೆಯ ಯಡ್ರಾಮಿ ತಾಲೂಕಿನಲ್ಲಿ ಸಂತ ಸೇವಾಲಾಲ ಜಯಂತಿಯನ್ನು ಅದ್ಧೂರಿಯಾಗಿ ಮಾಡಲಾಗಿತ್ತು. ಈ ಕಾರ್ಯಕ್ರಮಕ್ಕೆ ಮುಖ್ಯ ಅಥಿತಿಯಾಗಿ ಸರಿಗಮಪ ಸೀಸನ್ 15ರ ರನ್ನರಪ್ ಹನುಮಂತ ಹಾಗೂ ಸೀಸನ್ 13ರ ಚಾಂಪಿಯನ್ ಸುನಿಲ್ ಗುಜಗುಂಡ ಅವರನ್ನು ಅಭಿಮಾನಿಗಳು ಪ್ರೀತಿಯಿಂದ ಸ್ವಾಗತಿಸಿದ್ದರು. ಆ ಕಾರ್ಯಕ್ರಮದಲ್ಲಿ ಹನುಮಂತ ಅವರೇ ಕೇಂದ್ರ ಬಿಂದುವಾಗಿದ್ದರು. ಹನುಮಂತ ಅವರನ್ನು ಪ್ರೀತಿಯಿಂದ ಅಭಿಮಾನಿಗಳು ಯಡ್ರಾಮಿ ಪಟ್ಟಣದ ಪ್ರಮುಖ ವೃತಗಳಲ್ಲಿ ಮೆರವಣಿಗೆ ಮೂಲಕ ವೇದಿಕೆಗೆ ಕರೆತಂದು ಗೌರವಿಸಿದ್ದರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ಚಾಲೆಂಜಿಂಗ್ ಸ್ಟಾರ್ ಚಿತ್ರಕ್ಕೆ ಹನುಮಂತನ ಗಾನಾಭಿಷೇಕ..!

    ಚಾಲೆಂಜಿಂಗ್ ಸ್ಟಾರ್ ಚಿತ್ರಕ್ಕೆ ಹನುಮಂತನ ಗಾನಾಭಿಷೇಕ..!

    ಬೆಂಗಳೂರು: ಕುರಿಗಾಯಿ ಅಂತಾನೇ ಖ್ಯಾತಿ ಪಡೆದಿರುವ ಸರಿಗಮಪ ಕಾರ್ಯಕ್ರಮದ ಸ್ಪರ್ಧಿ ಹನುಮಂತನಿಗೆ ಈಗಾಗಲೇ ಸಿನಿಮಾದಲ್ಲಿ ಹಾಡುವ ಅವಕಾಶ ಸಿಕ್ಕಿದೆ. ಇದರ ಬೆನ್ನಲ್ಲೆ ಮತ್ತೊಂದು ಸಿನಿಮಾದಲ್ಲಿ ಹಾಡುವ ಅವಕಾಶ ದೊರೆತಿದೆ.

    ಹನುಮಂತನಿಗೆ ಚಾಲೆಂಜಿಂಗ್ ಸ್ಟಾರ್ ದರ್ಶನ್ ಸಿನಿಮಾದಲ್ಲಿ ಹಾಡುವ ಅವಕಾಶ ಸಿಕ್ಕಿದೆ. ಈ ಮೂಲಕ ಮತ್ತೊಮ್ಮೆ ಹನುಮಂತನಿಗೆ ಅದೃಷ್ಟ ಒಲಿದು ಬಂದಿದೆ. ಈ ಹಿಂದೆ ಸರಿಗಮಪ ವೇದಿಕೆಯಲ್ಲಿಯೇ ಯೋಗರಾಜ್ ಭಟ್ರು ಸಿನಿಮಾದಲ್ಲಿ ಹಾಡುವಂತೆ ಅವಕಾಶ ಕೊಟ್ಟಿದ್ದರು. ಭಟ್ರು ಹಾಡಿಗೆ ಟ್ಯೂನ್ ಮಾಡೋದಾಗಿ ಸಂಗೀತ ನಿರ್ದೇಶಕ ಅರ್ಜುನ್ ಜನ್ಯಾ ಅವರು ಹೇಳಿದ್ದರು. ಈ ಹಾಡಿಗೆ ಧ್ವನಿಯಾಗಿ ಹನುಮಂತ ಹಾಡಲಿದ್ದಾರೆ. ಹನುಮಂತ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿನಯಿಸುತ್ತಿರುವ ಮುಂದಿನ ಚಿತ್ರದಲ್ಲಿ ಹಾಡುತ್ತಾನೆ ಎಂದು ತಿಳಿದುಬಂದಿದೆ. ಇದನ್ನೂ ಓದಿ: ಸರಿಗಮಪ ಕಾರ್ಯಕ್ರಮದಲ್ಲಿ ದಾಖಲೆ ಬರೆದ ಹನುಮಂತ!

    ನಟ ದರ್ಶನ್ ಮುಂದಿನ ಚಿತ್ರ ‘ರಾಬರ್ಟ್’ ಗಾಗಿ ಅರ್ಜುನ್ ಜನ್ಯಾ ಟ್ಯೂನ್ ಮಾಡುತ್ತಿದ್ದಾರೆ. ಈ ಚಿತ್ರದ ಒಂದು ಹಾಡಿಗೆ ಯೋಗರಾಜ್ ಭಟ್ರು ಹಾಡು ಬರೆಯಲಿದ್ದಾರೆ ಎನ್ನಲಾಗುತ್ತಿದೆ. ಇದೇ ಹಾಡನ್ನ ಹನುಮಂತನ ಕೈಯಿಂದಲೇ ಹಾಡಿಸಬೇಕು ಎಂದು ಅರ್ಜುನ್ ಜನ್ಯಾ ತೀರ್ಮಾನ ಮಾಡಿದ್ದಾರಂತೆ. ಈ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲೂ ಭಾರೀ ಚರ್ಚೆಯಾಗುತ್ತಿದೆ.

    ಖಾಸಗಿ ವಾಹಿನಿಯಲ್ಲಿ ಪ್ರಸಾರವಾಗುವ `ಸರಿಗಮಪ’ ಕಾರ್ಯಕ್ರಮದ ಸ್ಪರ್ಧಿ ಆಗಿರುವ ಕುರಿಗಾಹಿ ಹನುಮಂತ ದಾಖಲೆ ಮಾಡಿದ್ದರು. ಸರಿಗಮಪ ಕಾರ್ಯಕ್ರಮದ ಎಲ್ಲಾ ಸ್ಪರ್ಧಿಗಳಿಗೆ ವಾರಕ್ಕೆ ಇಂತಿಷ್ಟು ಹಣವನ್ನು ಸಂಭಾವನೆಯಾಗಿ ನೀಡುತ್ತಾರೆ. ಅದೇ ರೀತಿ ಹನುಮಂತ ಅವರಿಗೆ 10 ಸಾವಿರ ರೂ.ಯನ್ನು ಸಂಭಾವನೆಯಾಗಿ ಪಡೆಯುತ್ತಿದ್ದರು ಎಂದು ಹೇಳಲಾಗಿತ್ತು. ಆದರೆ ಈಗ ಅವರ ಸಂಭಾವನೆ 25 ರಿಂದ 30 ಸಾವಿರಕ್ಕೆ ಏರಿಕೆಯಾಗಿದೆ ಎಂಬ ಸುದ್ದಿ ಕೇಳಿ ಬಂದಿತ್ತು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv 

  • ಸರಿಗಮಪ ಕಾರ್ಯಕ್ರಮದಲ್ಲಿ ದಾಖಲೆ ಬರೆದ ಹನುಮಂತ!

    ಸರಿಗಮಪ ಕಾರ್ಯಕ್ರಮದಲ್ಲಿ ದಾಖಲೆ ಬರೆದ ಹನುಮಂತ!

    ಬೆಂಗಳೂರು: ಖಾಸಗಿ ವಾಹಿನಿಯಲ್ಲಿ ಪ್ರಸಾರವಾಗುವ ‘ಸರಿಗಮಪ’ ಕಾರ್ಯಕ್ರಮದ ಸ್ಪರ್ಧಿ ಆಗಿರುವ ಕುರಿಗಾಹಿ ಹನುಮಂತ ದಾಖಲೆ ಮಾಡಿದ್ದಾರೆ.

    ಸರಿಗಮಪ ಕಾರ್ಯಕ್ರಮದ ಎಲ್ಲಾ ಸ್ಪರ್ಧಿಗಳಿಗೆ ವಾರಕ್ಕೆ ಇಂತಿಷ್ಟು ಹಣವನ್ನು ಸಂಭಾವನೆಯಾಗಿ ನೀಡುತ್ತಾರೆ. ಅದೇ ರೀತಿ ಹನುಮಂತ ಅವರಿಗೆ 10 ಸಾವಿರ ರೂ.ಯನ್ನು ಸಂಭಾವನೆಯಾಗಿ ಪಡೆಯುತ್ತಿದ್ದರು ಎಂದು ಹೇಳಲಾಗಿತ್ತು. ಆದರೆ ಈಗ ಅವರ ಸಂಭಾವನೆ 25 ರಿಂದ 30 ಸಾವಿರಕ್ಕೆ ಏರಿಕೆಯಾಗಿದೆ ಎಂಬ ಸುದ್ದಿ ಕೇಳಿ ಬರುತ್ತಿದೆ. ಇದನ್ನೂ ಓದಿ: ರಿಯಾಲಿಟಿ ಶೋ ನಲ್ಲಿ ಶಾಲೆಯ ದಿನಗಳನ್ನು ನೆನಪಿಸಿಕೊಂಡ ಆ್ಯಂಕರ್ ಅನುಶ್ರೀ

    ಉತ್ತರ ಕರ್ನಾಟಕದ ಹಾವೇರಿ ಜಿಲ್ಲೆಯ ಚಿಲ್ಲೂರು ಬುಡ್ನಿ ತಾಂಡಾದಲ್ಲಿದ್ದ ಹನುಮಂತ ಗಾನ ಪ್ರತಿಭೆಗೆ ಖುದ್ದು ಹಂಸಲೇಖ ಬೆರಗಾಗಿದ್ದರು. ಅಲ್ಲದೇ ಜನಪದ ಕಲೆಯನ್ನು ಉಳಿಸುವ ಕಲಾವಿದ ನೀನೆಂದು ಹನುಮಂತನಿಗೆ ಹರಸಿದ್ದರು. ಕಾರ್ಯಕ್ರಮಕ್ಕೆ ಬಂದಿದ್ದ ಅನೇಕ ಸಿನಿಮಾ ಮಂದಿ ಹನುಮಂತನಿಗೆ ಅವಕಾಶ ಕೊಡುವುದಾಗಿ ಹೇಳಿದರು. ಅದೇ ರೀತಿ ಯೋಗರಾಜ್ ಭಟ್ ಅವರು ಕೂಡ `ನಮ್ ಬಯಲು ಸೀಮೆ ಕಡೆ ಹುಡುಗ. ನನ್ ಸಿನ್ಮಾದಲ್ಲಿ ಹಾಡಿಸ್ತಿನಿ’ ಎಂದು ಹೇಳಿ ಹನುಮಂತನಿಗೆ ಅವಕಾಶ ನೀಡಿದ್ದರು. ಇದನ್ನೂ ಓದಿ: ಸರ್ಪ್ರೈಸ್ ನೋಡಿ ದೊಡ್ಡ ವೇದಿಕೆಯಲ್ಲೇ ಕಣ್ಣೀರಿಟ್ಟ ಹನುಮಂತ

    ಯೋಗರಾಜ್ ಭಟ್ ಕೂಡ ಮೂಲತಃ ಹಾವೇರಿ ಜಿಲ್ಲೆಯವರಾಗಿದ್ದಾರೆ. ಯೋಗರಾಜ್ ಭಟ್ ಅವರಿಗೆ ಸಂಗೀತ ಅಂದರೆ ದೇವರ ಸಮಾನ. ಆದ್ದರಿಂದ ಸಂಗೀತ ಪ್ರಿಯರನ್ನು ಗೌರವಿಸುವ ಭಟ್ರು ಹನುಮಂತನ ಕಂಠಕ್ಕೆ ಸೂಕ್ತ ಬಹುಮಾನ ಕೊಡುವುದಕ್ಕೆ ಮನಸ್ಸು ಮಾಡಿದ್ದರು. ಯೋಗರಾಜ್ ಅವರು ಹನುಮಂತ ಹಾಡುವುದಕ್ಕೆ ಸುಲಭವಾಗುವ ಪದದಲ್ಲಿ ತಾವೇ ಸಾಹಿತ್ಯ ಬರೆಯೋಕೆ ಸಿದ್ಧರಾಗಿದ್ದರು. ಸರಿಗಮಪ ಕಾರ್ಯಕ್ರಮದ ಜಡ್ಜ್ ಆಗಿರುವ ಅರ್ಜುನ್ ಜನ್ಯ ಅವರ ಸಂಗೀತ ನಿರ್ದೇಶನದಲ್ಲಿ ಈ ಹಾಡು ಮೂಡಿಬರಲಿದೆ.  ಇದನ್ನೂ ಓದಿ: ಓದಿಲ್ಲ, ಸಂಗೀತ ತರಬೇತಿ ಪಡೆದಿಲ್ಲ, ಕುರಿ ಮೇಯಿಸುತ್ತಾ ಸರಿಗಮಪ ವೇದಿಕೆಯೇರಿದ ಹನುಮಂತನ ಕಥೆ

    ಶನಿವಾರ ಮತ್ತು ಭಾನುವಾರ ಪ್ರಸಾರವಾಗುವ ಸರಿಗಮಪ ಕಾರ್ಯಕ್ರಮದಲ್ಲಿ ಹನುಮಂತ ಸ್ಟಾರ್ ಸಿಂಗರ್ ಆಗಿದ್ದಾರೆ. ಶನಿವಾರ ಉಳಿದೆಲ್ಲ ಗಾಯಕರೂ ಹಾಡುತ್ತಾರೆ. ಆದರೆ ಹನುನಂತನ ಭಾನುವಾರ ಹಾಡುತ್ತಾರೆ. ಹಾಗಾಗಿ ಪ್ರೇಕ್ಷಕರು ಹನುಮಂತ ಹಾಡನ್ನು ಕೇಳಲು ಭಾನುವಾರ ರಾತ್ರಿವರೆಗೆ ಕಾಯುತ್ತಾರೆ. ಹನುಮಂತ ಹಾಡಿಗೆ ಪ್ರೇಕ್ಷಕರಲ್ಲದೇ ತೀರ್ಪುಗಾರರಾದ ರಾಜೇಶ್ ಕೃಷ್ಣನ್, ವಿಜಯ್ ಪ್ರಕಾಶ್, ಅರ್ಜುನ್ ಜನ್ಯ ಹಾಗೂ ಮಹಾಗುರು ನಾದಬ್ರಹ್ಮ ಹಂಸಲೇಖ ಅವರು ಮನ ಸೋತಿದ್ದಾರೆ.

    ಈ ಹಿಂದೆ ವಾಹಿನಿ ಹನುಮಂತನಿಗೆ ಒಂದು ಸರ್ಪ್ರೈಸ್ ನೀಡಿತ್ತು. ಆ ಸರ್ಪ್ರೈಸ್ ನೋಡಿ ಹನುಮಂತ ವೇದಿಯ ಮೇಲೆಯೇ ಕಣ್ಣೀರು ಹಾಕಿದ್ದರು. ಖಾಸಗಿ ವಾಹಿನಿಯಲ್ಲಿ `ಜೀ ಕುಟುಂಬ ಅವಾರ್ಡ್ ಕಾರ್ಯಕ್ರಮ ಪ್ರಸಾರವಾಗಿತ್ತು. ಈ ಪ್ರಶಸ್ತಿ ಕಾರ್ಯಕ್ರಮದಲ್ಲಿ ಕಿರುತೆರೆಯಲ್ಲಿ ನಟಿಸಿ ಜನರ ಮೆಚ್ಚುಗೆಯನ್ನು ಪಡೆದಿರುವ ನಟ-ನಟಿ ಸೇರಿದಂತೆ ಕಲಾವಿದರಿಗೆ ಪ್ರಶಸ್ತಿ ನೀಡಿ ಪ್ರೋತ್ಸಾಹಿಸಲಾಗಿತ್ತು. ಇದೇ ಕಾರ್ಯಕ್ರಮದಲ್ಲಿ ಜನತೆ ಮೆಚ್ಚಿದೆ ಅಚ್ಚುಮೆಚ್ಚಿನ ಸ್ಪರ್ಧಿಗೆ ಪ್ರಶಸ್ತಿ ನೀಡಿ ಗೌರವಿಸಲಾಯಿತು. ಈ ಪ್ರಶಸ್ತಿಗೆ 5 ಮಂದಿ ನಾಮಿನೇಟ್ ಆಗಿದ್ದರು. ಆದರೆ ಕೊನೆಯಲ್ಲಿ ಸರಿಗಮಪ ಸೀಸನ್ 5ರ ಸ್ಪರ್ಧಿ ಹನುಮಂತನಿಗೆ ಪ್ರಶಸ್ತಿ ಲಭಿಸಿತ್ತು. ಈ ಸಂದರ್ಭದಲ್ಲಿ ಹನುಮಂತ ಪ್ರಶಸ್ತಿಯನ್ನು ಸ್ವೀಕರಿಸಿ ಆನಂದಭಾಷ್ಪ ಸುರಿಸಿದ್ದರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ಅನುಶ್ರೀಗೆ ಕೊಟ್ಟ ಮಾತಿನಂತೆ ನಡೆದ್ಕೊಂಡ ಹನುಮಂತನ ತಾಯಿ

    ಅನುಶ್ರೀಗೆ ಕೊಟ್ಟ ಮಾತಿನಂತೆ ನಡೆದ್ಕೊಂಡ ಹನುಮಂತನ ತಾಯಿ

    ಬೆಂಗಳೂರು: ಸರಿಗಮಪ ಕಾರ್ಯಕ್ರಮದಲ್ಲಿ ಕುರಿಗಾಯಿ ಎಂದೇ ಖ್ಯಾತಿಯಾಗಿರುವ ಹನುಮಂತ ಅವರ ತಾಯಿ ಶೀಲವ್ವ ಅವರು ಕೊನೆಗೂ ನಿರೂಪಕಿ ಅನುಶ್ರೀ ಆಸೆಯನ್ನು ನೆರವೇರಸಿದ್ದು, ಈ ಮೂಲಕ ಅವರು ಕೊಟ್ಟ ಮಾತಿನಂತೆ ನಡೆದುಕೊಂಡಿದ್ದಾರೆ.

    ಈ ಬಗ್ಗೆ ಅನುಶ್ರೀ ತಮ್ಮ ಫೇಸ್‍ಬುಕ್, ಇನ್ಸ್ ಸ್ಟಾಗ್ರಾಂನಲ್ಲಿ ಹೇಳಿಕೊಂಡಿದ್ದಾರೆ. “ತಮ್ಮ ಹನುಮಂತ ಕೊಟ್ಟ ಕೊಡಿಗೆ, ಅವರ ತಾಯಿಯ ಉಡುಗೆ” ಎಂದು ಬರೆದು ಕೊಂಡಿದ್ದು, ಅವರ ತಾಯಿ ಕೊಟ್ಟ ಉಡುಪನ್ನು ತೊಟ್ಟು ಹನುಮಂತ ಮತ್ತು ತಾಯಿ ಶೀಲವ್ವ ಜೊತೆ ಸೆಲ್ಫಿ ತೆಗೆದುಕೊಂಡಿರುವ ಫೋಟೋವನ್ನು ಪೋಸ್ಟ್ ಮಾಡಿದ್ದಾರೆ. ಇದನ್ನೂ ಓದಿ: ರಿಯಾಲಿಟಿ ಶೋ ನಲ್ಲಿ ಶಾಲೆಯ ದಿನಗಳನ್ನು ನೆನಪಿಸಿಕೊಂಡ ಆ್ಯಂಕರ್ ಅನುಶ್ರೀ

    ಇಂದು ಪ್ರಸಾರವಾಗುವ ಸರಿಗಮಪ ಕಾರ್ಯಕ್ರಮ ಪ್ರೋಮೋವನ್ನು ವಾಹಿನಿ ತನ್ನ ಫೇಸ್‍ಬುಕ್ ನಲ್ಲಿ ಅಪ್ಲೋಡ್ ಮಾಡಿದೆ. ಅದರಲ್ಲಿ ಮೊದಲಿಗೆ ಹನುಮಂತ್ ದಿವಂಗತ ಡಾ. ರಾಜ್‍ಕುಮಾರ್ ಅಭಿನಯದ ‘ಸಂಪತ್ತಿಗೆ ಸವಾಲ್, ಸಿನಿಮಾದ ಯಾರೇ ಕೂಗಾಡಲಿ, ಊರೇ ಹೋರಾಡಲಿ’ ಹಾಡನ್ನು ಹಾಡಿದ್ದಾರೆ. ಆಗ ಅನುಶ್ರೀ ಹನುಮಂತನ ತಾಯಿ ಕೊಟ್ಟಿರುವ ಉಡುಗೆ ತೊಟ್ಟು ವೇದಿಕೆಯ ಮೇಲೆ ಎಂಟ್ರಿಕೊಟ್ಟಿದ್ದಾರೆ. ಅನುಶ್ರೀ ಅವರನ್ನು ಆ ಉಡುಪಿನಲ್ಲಿ ನೋಡಿ ಸಂಗೀತ ನಿರ್ದೇಶಕ ಹಂಸಲೇಖ ಅವರು, ಈ ಭೂಷಣ ಧರಿಸಿರುವುದರಿಂದ ನಮಗೆ ಹೆಮ್ಮೆ, ಗೌರವವಾಗಿದೆ ಎಂದು ಖುಷಿಯಿಂದ ಹೇಳಿದ್ದಾರೆ. ಇದನ್ನೂ ಓದಿ: ಸರ್ಪ್ರೈಸ್ ನೋಡಿ ದೊಡ್ಡ ವೇದಿಕೆಯಲ್ಲೇ ಕಣ್ಣೀರಿಟ್ಟ ಹನುಮಂತ

    https://www.instagram.com/p/BsQCrpuhQN4/

    ಅನುಶ್ರೀಗೆ ನೀಡಿರುವ ಉಡುಗೊರೆಯಲ್ಲಿ ಒಂದು ವಿಶೇಷತೆ ಇದೆ. ಅದೇನೆಂದರೆ ಅವರು ಧರಿಸಿದ್ದ ಉಡುಪಿನಲ್ಲಿದ್ದ ಮುತ್ತು-ಹವಳ, ಮಣಿ, ಕನ್ನಡಿ ಎಲ್ಲವನ್ನು ಹನುಮಂತನ ತಾಯಿ ಶೀಲವ್ವ ಅವರು ಸ್ವತಃ ತಮ್ಮ ಕೈಯಾರೆ ಪೋಣಿಸಿದ್ದಾರೆ. ಶೀಲವ್ವ ಪ್ರೀತಿಯಿಂದ ಕೊಟ್ಟಂತಹ ಉಡುಗೆಯಿಂದ ಅನುಶ್ರೀ ಸಂತಸ ಪಟ್ಟಿದ್ದು, ಪ್ರತಿಯಾಗಿ ವೇದಿಕೆಯ ಮೇಲೆಯೇ ಶೀಲವ್ವ ಅವರ ಕೆನ್ನೆಗೆ ಒಂದು ಮುತ್ತು ಕೊಟ್ಟಿದ್ದಾರೆ.

    ಈ ಹಿಂದೆ ಜೀ ಕುಟುಂಬ ಅವಾರ್ಡ್ಸ್ ಕಾರ್ಯಕ್ರಮದಲ್ಲಿ ಹನುಮಂತನ ತಾಯಿ ಶೀಲವ್ವ ಅವರನ್ನು ವೇದಿಕೆಯ ಮೇಲೆ ಕರೆಸಿದ್ದರು. ಈ ವೇಳೆ ನಿರೂಪಕಿ ಅನುಶ್ರೀ, ಶೀಲವ್ವ ಧರಿಸಿದ್ದ ಉಡುಗೆಯನ್ನು ತನಗೂ ಕೊಡಿಸುವಂತೆ ಕೇಳಿಕೊಂಡಿದ್ದರು. ಅಂದರಂತೆಯೇ ಅವರ ತಾಯಿ ಅನುಶ್ರೀಗಾಗಿ ಲಂಬಾಣಿ ಶೈಲಿಯ ಉಡುಗೆಯನ್ನು ತಂದು ಕೊಟ್ಟಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv, ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ಕುರಿಗಾಯಿ ಹನುಮಂತರಿಗೆ ಒಲಿದು ಬಂತು ಅದೃಷ್ಟ

    ಕುರಿಗಾಯಿ ಹನುಮಂತರಿಗೆ ಒಲಿದು ಬಂತು ಅದೃಷ್ಟ

    ಬೆಂಗಳೂರು: ಸಂಗೀತ ತರಬೇತಿಗೆ ಹೋಗದೆ, ಕುರಿಕಾಯುತ್ತಾ ಹಾಡುಗಳನ್ನು ಹಾಡಿಕೊಂಡು ಇಂದು ಸರಿಗಮಪ ವೇದಿಕೆಯನ್ನೇರಿ ಜನರ ಮೆಚ್ಚುಗೆಯನ್ನು ಗಳಿಸಿರುವ ಹಾವೇರಿಯ ಹನುಮಂತ ಅವರಿಗೆ ಅದೃಷ್ಟ ಒಲಿದು ಬಂದಿದೆ.

    ಹನುಮಂತ ಅವರ ಪ್ರತಿಭೆ ನೋಡಿ ಗಾಯಕ ವಿಜಯ್ ಪ್ರಕಾಶ್ ಅವರು, ತಾವೇ ಹನುಮಂತನಿಗೆ ಸಂಗೀತ ಕಲಿಸುವ ಭರವಸೆ ನೀಡಿದ್ದಾರೆ. ಹನುಮಂತ ‘ಸರಿಗಮಪ ಸೀಸನ್ 15’ ಮೆಗಾ ಆಡಿಷನ್ ನಲ್ಲಿ ಆಯ್ಕೆಯಾಗಿದ್ದು, ‘ನಿನ್ನೊಳಗ ನೀನು ತಿಳಿದು ನೋಡಣ್ಣ..’ ಎಂಬ ಜನಪದ ಗೀತೆಯನ್ನ ಹಾಡಿದ್ದರು. ಇವರ ಹಾಡನ್ನು ಕೇಳಿ ತೀರ್ಪುಗಾರರು ಮೆಚ್ಚುಗೆಯನ್ನು ಸೂಚಿಸಿದ್ದಾರೆ. ಅಷ್ಟೇ ಅಲ್ಲದೇ ಮಹಾ ಗುರುಗಳಾದ ಹಂಸಲೇಖ ಅವರು ತಮ್ಮ ಹೆಗಲ ಮೇಲೆ ಇದ್ದ ಕೌದಿಯನ್ನು ಹನುಮಂತರಿಗೆ ಹಾಕಿ, ಅವರು ಹಾಕಿದ್ದ ಟವೆಲ್ ಅನ್ನು ತಮ್ಮ ಹೆಗಲ ಮೇಲೆ ಹಾಕಿಸಿಕೊಂಡಿದ್ದರು. ಇದನ್ನೂ ಓದಿ: ಓದಿಲ್ಲ, ಸಂಗೀತ ತರಬೇತಿ ಪಡೆದಿಲ್ಲ, ಕುರಿ ಮೇಯಿಸುತ್ತಾ ಸರಿಗಮಪ ವೇದಿಕೆಯೇರಿದ ಹನುಮಂತನ ಕಥೆ

    ಇದೇ ವೇಳೆ ನೀನು ಹಾಡನ್ನು ಅದ್ಭುತವಾಗಿ ಹಾಡಿದೆ. ನೀನು ಹಾಡು ಕಲಿಯುತ್ತಿದ್ದೀಯಾ ಎಂದು ಕೇಳುವುದು ಸರೀನಾ.. ಇಲ್ವಾ.. ಗೊತ್ತಿಲ್ಲ. ಆದರೆ, ನಾನು ನನಗೆ ಗೊತ್ತಿರುವಷ್ಟು ಸಂಗೀತವನ್ನು ನಿನ್ನ ಜೊತೆಗೆ ಹಂಚಿಕೊಳ್ಳುತ್ತೇನೆ ಅಂತ ವಿಜಯ್ ಪ್ರಕಾಶ್ ಹೇಳುವ ಮೂಲಕ ಹನುಮಂತನಿಗೆ ತಾವೇ ಸಂಗೀತ ಕಲಿಸುವ ಭರವಸೆಯನ್ನು ನೀಡಿದ್ದಾರೆ.

    ನನ್ನ ಜೀವನದ ಪಯಣದಲ್ಲಿ ನಾನು ಅನೇಕರನ್ನು ಭೇಟಿ ಮಾಡಿದ್ದೇನೆ. ಶಕ್ತಿಶಾಲಿ ಇರುವವರು, ಶ್ರೀಮಂತರು ಮತ್ತು ಚಾಣಾಕ್ಷರು ಹೀಗೆ ಎಲ್ಲರನ್ನು ನೋಡಿದ್ದೇನೆ. ಆದರೆ ಜೀವನವನ್ನ ಜೀವಿಸುತ್ತಿರುವ ಒಬ್ಬ ವ್ಯಕ್ತಿಯನ್ನು ಇಂದು ಭೇಟಿ ಮಾಡಿದೆ. ಭಗವಂತನ ಸೃಷ್ಟಿಯಲ್ಲಿ ಬದುಕನ್ನ ಹೇಗೆ ಬದುಕಬೇಕು ಎಂದು ತೋರಿಸುವ ಒಬ್ಬ ವ್ಯಕ್ತಿಯನ್ನ ಮೊದಲ ಬಾರಿಗೆ ಭೇಟಿಯಾಗುತ್ತಿದ್ದೇನೆ ಎಂದು ವಿಜಯ ಪ್ರಕಾಶ್ ಹನುಮಂತನ ಬಗ್ಗೆ ಮಾತನಾಡಿದ್ದಾರೆ.

    ಈ ವೇದಿಕೆ ಮೇಲೆ ಬಹಳ ಗೌರವ ಬರುತ್ತಿದೆ. ಕುರಿ ಕಾಯಿಸುವ ಒಬ್ಬ ಹುಡುಗ ಈ ವೇದಿಕೆ ಮೇಲೆ ಬಂದಿದ್ದಾನೆ. ಇದು ಎಷ್ಟೋ ಜನಪದರ ಕನಸಾಗಿದೆ. ಜೀವಿಸಲು ಯೋಚನೆ ಮಾಡುವವನು ಬುದ್ಧಿವಂತ, ಯೋಚನೆನೇ ಮಾಡದೆ ಜೀವಿಸುವವನು ಹನುಮಂತ ಎಂದು ಸಂಗೀತ ನಿರ್ದೇಶಕ ಹಂಸಲೇಖ ಅವರು ಹೇಳಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv 

  • ಸರಿಗಮಪ ರಿಯಾಲಿಟಿ ಶೋಗೆ ಮಹಾಗುರು ಎಂಟ್ರಿನಲ್ಲಿಯೇ ಸಂಚಲನ ಮೂಡಿಸುತ್ತಿದೆ ನ್ಯೂ ವರ್ಷನ್ ಸಾಂಗ್

    ಸರಿಗಮಪ ರಿಯಾಲಿಟಿ ಶೋಗೆ ಮಹಾಗುರು ಎಂಟ್ರಿನಲ್ಲಿಯೇ ಸಂಚಲನ ಮೂಡಿಸುತ್ತಿದೆ ನ್ಯೂ ವರ್ಷನ್ ಸಾಂಗ್

    ಬೆಂಗಳೂರು: ಸಂಗೀತ ಪ್ರತಿಭೆಯನ್ನು ಗುರುತಿಸುವ ಜೀ ಕನ್ನಡ ವಾಹಿನಿಯ ಜೂನಿಯರ್. ಸರಿಗಮಪ ರಿಯಾಲಿಟಿ ಶೋ ಇಂದಿನಿಂದ ಪ್ರಾರಂಭವಾಗಲಿದೆ. ಈ ಬಾರಿ  ನಾದ ಬ್ರಹ್ಮ ಹಂಸಲೇಖ ಮಹಾಗುರುಗಳಾಗಿ ನವ ಪ್ರತಿಭೆಗಳಿಗೆ ಸಂಗೀತ ಪಾಠವನ್ನು ಹೇಳಲಿದ್ದಾರೆ.

    ಇಂದು ಜೀ ವಾಹಿನಿ ತನ್ನ ಫೇಸ್ ಬುಕ್ ನಲ್ಲಿ ಹಳೆಯ ಎವರ್ ಗ್ರೀನ್ ಹಾಡುಗಳಿಗೆ ನ್ಯೂ ವರ್ಷನ್ ಹಾಡಿರುವ ವಿಡಿಯೋವನ್ನು ಅಪ್ಲೋಡ್ ಮಡಿಕೊಂಡಿದೆ. ವಿಶೇಷವೆಂದರೆ ಸರಿಗಮಪ ರಿಯಾಲಿಟಿ ಶೋನ ಹಳೆಯ ಆವೃತ್ತಿಯ ಜೂನಿಯರ್ ಮತ್ತು ಸೀನಿಯರ್ ಸ್ಪರ್ಧಿಗಳ ಸುಮಧುರ ಕಂಠದಲ್ಲಿ ಹಾಡು ಮೂಡಿದೆ. ವಿಡಿಯೋದಲ್ಲಿ ಇಂಪನಾ, ಅರವಿಂದ್, ಸಾನ್ವಿ ಶೆಟ್ಟಿ ಸೇರಿದಂತೆ ಹಲವರ ಕಂಠದಲ್ಲಿ ಹಾಡನ್ನು ಕೇಳಬಹುದು.

    ಈಗಾಗಲೇ ಜೀ ವಾಹಿನಿಗೆ ಹಂಸಲೇಖ ಎಂಟ್ರಿ ಆಗುತ್ತಿರುವ ವಿಷಯವನ್ನು ಅಭಿಮಾನಿಗಳಿಗೆ ವಿಶೇಷ ಪ್ರೋಮೋಗಳ ಮೂಲಕ ತಿಳಿಸಿದೆ. ಈ ಆವೃತ್ತಿಯಲ್ಲಿ ರಾಜೇಶ್ ಕೃಷ್ಣಣ್ ವೈಯಕ್ತಿಕ ಕಾರಣಗಳಿಂದ ತೀರ್ಪುಗಾರರ ಸ್ಥಾನದಿಂದ ಹೊರ ಬಂದಿದ್ದು, ಅವರ ಗುರು ಹಂಸಲೇಖ ಮಹಾಗುರುಗಳಾಗಿ ಬಂದಿದ್ದಾರೆ. ಎಂದಿನಂತೆ ವಿಜಯ್ ಪ್ರಕಾಶ್ ಮತ್ತು ಅರ್ಜುನ್ಯ ಜನ್ಯ ತೀರ್ಪುಗಾರರಾಗಿ ಹಂಸಲೇಖ ಅವರಿಗೆ ಸಾಥ್ ನೀಡಲಿದ್ದಾರೆ. ಮಾತಿನ ಚಿನುಕುರುಳಿ ಅನುಶ್ರೀ ಕಾರ್ಯಕ್ರಮದ ನಿರೂಪಣೆ ಮಾಡಲಿದ್ದಾರೆ.