Tag: saregamapa Program

  • ಹೊಸ ವರ್ಷಕ್ಕೆ ಕುರಿಗಾಯಿ ಹನುಮಂತನಿಗೆ ಬಂಪರ್ ಲಾಟರಿ!

    ಹೊಸ ವರ್ಷಕ್ಕೆ ಕುರಿಗಾಯಿ ಹನುಮಂತನಿಗೆ ಬಂಪರ್ ಲಾಟರಿ!

    ಬೆಂಗಳೂರು: ಸರಿಗಮಪ ಸಂಗೀತ ಕಾರ್ಯಕ್ರಮದ ಮೂಲಕ ಕರುನಾಡಿನಲ್ಲಿ ಗಾಯಕ ಹನುಮಂತ ಚಿರಪರಿಚಿತರಾಗಿದ್ದಾರೆ. ಮೊದಲ ಹಾಡಿನಿಂದ ಈವರೆಗೂ ಹನುಮಂತ ಹಾಡುವ ಪರಿ ನೋಡಿದರೆ ಸಾಕಷ್ಟು ಬದಲಾಗಿರುವುದು ಗಮನಕ್ಕೆ ಬರುತ್ತದೆ. ಈಗ ಹೊಸ ವರ್ಷದ ಪ್ರಯುಕ್ತ ಹನುಮಂತನಿಗೆ ಬಂಪರ್ ಆಫರ್ ಬಂದಿದೆ.

    ಹೊಸ ವರ್ಷ ಆರಂಭವಾಗುವ ಹೊಸ್ತಿಲಲ್ಲಿ ಹನುಮಂತನ ಪಾಲಿನ ಅದೃಷ್ಟದ ಬಾಗಿಲು ತೆರೆದಿದೆ. ಸಿನಿಮಾ ಸಂಗೀತಕ್ಕೆ ಹಿನ್ನೆಲೆ ಗಾಯಕನಾಗುವ ಅವಕಾಶ ಸಿಕ್ಕಿದೆ. ಈಗಾಗಲೇ ಅನೇಕರು ಹನುಮಂತ ಸರಿಗಮಪ ಸಂಗೀತ ಕಾರ್ಯಕ್ರಮದಲ್ಲಿ ಪಳಗಿದ ಬಳಿಕ ಸಿನಿಮಾದಲ್ಲಿ ಹಾಡಿಸುವುದಕ್ಕೆ ಪ್ಲಾನ್ ಮಾಡಿದ್ದಾರೆ. ಆದರೆ ಹೆಸರಾಂತ ನಿರ್ದೇಶಕ ಯೋಗರಾಜ್ ಭಟ್ರು ಮಾತ್ರ ಹನುಮಂತನಿಗೆ ಹೊಸ ವರ್ಷಕ್ಕೆ ಪಾರಿತೋಷಕ ನೀಡಿದ್ದಾರೆ.

    ಇದುವರೆಗೆ ಸರಿಗಮಪ ವೇದಿಕೆಯಲ್ಲಿ ಹಾಡುತ್ತಿದ್ದ ಹನುಮಂತನ ಬಗ್ಗೆ ನಿರ್ದೇಶಕ ಕಮ್ ಸಾಹಿತಿ ಯೋಗರಾಜ್ ಭಟ್ರು ಕೇಳಿದ್ದರು. ಆದರೆ ನೇರವಾಗಿ ಹನುಮಂತ ಹಾಡೋದನ್ನ ನೋಡಿರಲಿಲ್ಲ. ಈ ವಾರ ಪ್ರಸಾರವಾದ ಸರಿಗಮಪ ಕಾರ್ಯಕ್ರಮದಲ್ಲಿ ಯೋಗರಾಜ್ ಭಟ್, ಜಯಂತ್ ಕಾಯ್ಕಿಣಿ, ವಿ.ನಾಗೇಂದ್ರ ಪ್ರಸಾದ್ ಅತಿಥಿಗಳಾಗಿ ಆಗಮಿಸಿದ್ದರು. ಈ ವೇಳೆ ಅತಿಥಿಗಳ ಮುಂದೆ ಅಲ್ಲಾಡ್ಸು ಅಲ್ಲಾಡ್ಸು ಹಾಡು ಹೇಳಿ ಹನುಮಂತ ರಂಜಿಸಿದ್ದರು.

    ಹನುಮಂತ ಹಾಡಿನ ಸೊಬಗಿಗೆ ಭಟ್ರು ಫಿದಾ ಆಗಿದ್ದು, ಕೂಡಲೇ ತಮ್ಮ ಜಿಲ್ಲೆಯ ಹಳ್ಳಿಯ ಪ್ರತಿಭೆಯನ್ನ ಸಿನಿಮಾದಲ್ಲಿ ಬೆಳೆಸುವುದಕ್ಕೆ ಮುಂದಾಗಿದ್ದು, ಮುಂದಿನ ಸಿನಿಮಾದಲ್ಲಿ ಹನುಮಂತನಿಗೆ ಅವಕಾಶ ಕೊಡುವುದಾಗಿ ಭಟ್ರು ಹೇಳಿದ್ದಾರೆ. ಅಷ್ಟೇ ಅಲ್ಲದೇ ತಮ್ಮ ಸಿನಿಮಾಗೆ ಸರಿಗಮಪ ವೇದಿಕೆಯಲ್ಲೇ ಆಹ್ವಾನ ನೀಡಿದ್ದಾರೆ.

    ಯೋಗರಾಜ್ ಭಟ್ರೂ ಕೂಡ ಮೂಲತಃ ಹಾವೇರಿ ಜಿಲ್ಲೆಯವರಾಗಿದ್ದಾರೆ. ಯೋಗರಾಜ್ ಭಟ್ರರಿಗೆ ಸಂಗೀತ ಅಂದರೆ ದೇವರ ಸಮಾನ. ಆದ್ದರಿಂದ ಸಂಗೀತ ಪ್ರಿಯರನ್ನ ಗೌರವಿಸುವ ಭಟ್ರು ಹನುಮಂತನ ಕಂಠಕ್ಕೆ ಸೂಕ್ತ ಬಹುಮಾನ ಕೊಡುವುದಕ್ಕೆ ಮನಸ್ಸು ಮಾಡಿದ್ದಾರೆ. ಭಟ್ರು ಹನುಮಂತ ಹಾಡುವುದಕ್ಕೆ ಸುಲಭವಾಗುವ ಪದದಲ್ಲಿ ತಾವೇ ಸಾಹಿತ್ಯ ಬರೆಯೋಕೆ ಸಿದ್ಧರಾಗಿದ್ದಾರೆ. ಸರಿಗಮಪ ಕಾರ್ಯಕ್ರಮದ ಜಡ್ಜ್ ಆಗಿರುವ ಅರ್ಜುನ್ ಜನ್ಯ ಅವರ ಸಂಗೀತ ನಿರ್ದೇಶನದಲ್ಲಿ ಈ ಹಾಡು ಮೂಡಿಬರಲಿದೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv, ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ಹಾಡು ಹೇಳಲು ಬಂದ 7 ತಿಂಗ್ಳ ಗರ್ಭಿಣಿ – ವೇದಿಕೆಯಲ್ಲೇ ಸೀಮಂತ

    ಹಾಡು ಹೇಳಲು ಬಂದ 7 ತಿಂಗ್ಳ ಗರ್ಭಿಣಿ – ವೇದಿಕೆಯಲ್ಲೇ ಸೀಮಂತ

    ಬೆಂಗಳೂರು: ಹಾಡು ಹಾಡಲು ಏಳು ತಿಂಗಳ ಗರ್ಭಿಣಿ ಆಗಮಿಸಿದ್ದು, ಅವರಿಗೆ ವೇದಿಕೆಯ ಮೇಲೆಯೇ ಸೀಮಂತ ಮಾಡಿರುವ ಅಪರೂಪದ ಘಟನೆ ಖಾಸಗಿ ವಾಹಿನಿಯಲ್ಲಿ ಪ್ರಸಾರವಾಗುವ ‘ಸರಿಗಮಪ’ ಕಾರ್ಯಕ್ರಮದಲ್ಲಿ ನಡೆದಿದೆ.

    ಭಾನುವಾರ ‘ಸರಿಗಮಪ ಸೀಸನ್ 15’ ರ ಮೆಗಾ ಆಡಿಷನ್ ಪ್ರಸಾರವಾಗಿತ್ತು. ಈ ಆಡಿಷನ್ ನಲ್ಲಿ 7 ತಿಂಗಳ ಗರ್ಭಿಣಿ ಸಂಧ್ಯಾ ಸ್ಪರ್ಧಿಯಾಗಿ ಭಾಗಿಯಾಗಿದ್ದರು. ಇದೇ ಮೊದಲ ಬಾರಿ ಈ ಕಾರ್ಯಕ್ರಮದಲ್ಲಿ ಗರ್ಭಿಣಿ ಬಂದು ಹಾಡು ಹಾಡಿದ್ದಾರೆ. ಗರ್ಭಿಣಿ ಸಂಧ್ಯಾ ಅವರ ಆತ್ಮಸ್ಥೈರ್ಯ ನೋಡಿ ಎಲ್ಲರು ಮೆಚ್ಚುಗೆಯನ್ನು ಸೂಚಿಸಿದ್ದಾರೆ.

    ಸಂಧ್ಯಾ ಅವರು ಮೊದಲ ಆಡಿಷನ್ ನಲ್ಲಿ ಆಯ್ಕೆಯಾಗಿದ್ದರು. ಮೆಗಾ ಆಡಿಷನ್ ನಲ್ಲಿ ಸಂಧ್ಯಾ ‘ನಮ್ಮೂರ ಮಂದಾರ ಹೂವೆ’ ಸಿನಿಮಾದ ‘ಓಂಕಾರದಿ’ ಹಾಡನ್ನು ಹಾಡಿದ್ದಾರೆ. ನಂತರ ತುಂಬು ಗರ್ಭಿಣಿ ಸಂಧ್ಯಾ ಅವರಿಗೆ ವಾಹಿನಿ ಕಡೆಯಿಂದ ಸೀಮಂತ ಮಾಡಲಾಗಿದೆ.

    ”ಸರಿಗಮಪದ ಶೋದ ಎಲ್ಲ ಎಪಿಸೋಡ್ ಗಳನ್ನು ನೋಡು, ಕೇಳಿ ಆನಂದಪಡು. ಅದನ್ನು ನಿನ್ನ ಮಗುವಿಗೆ ಧಾರೆ ಏರಿ. ದೇವಭಾಷೆಯನ್ನು ಅನುವಾದಿಸಿ ಕರ್ನಾಟಕಕ್ಕೆ ಕೊಡು. ಆಲ್ ದಿ ಬೆಸ್ಟ್” ಎಂದು ಮಹಾಗುರುಗಳಾದ ಹಂಸಲೇಖ ಅವರು ಹೇಳಿ ಹಾರೈಸಿದ್ದಾರೆ.

    “ಒಂದು ಗಾಯನದ ದೃಷ್ಟಿಕೋನದಿಂದ ನೋಡಿದರೆ ಇನ್ನು ಸ್ವಲ್ಪ ಸಾಧನೆ ಬೇಕು. ಆದರೆ ಹಾಡಿಗಿಂತ ಬಹು ಮುಖ್ಯವಾದ ಕೆಲಸವನ್ನು ಭಗವಂತ ನಿಮಗೆ ನೀಡಿದ್ದಾನೆ. ನಿಮಗೆ ಆಯಸ್ಸು, ಆರೋಗ್ಯ ಎಲ್ಲವನ್ನು ದೇವರು ನೀಡಲಿ ಅಂತ ಕೇಳಿಕೊಳ್ಳುತ್ತೇನೆ” ಎಂದು ವಿಜಯ್ ಪ್ರಕಾಶ್ ಶುಭಾಶಯವನ್ನು ತಿಳಿಸಿದ್ದಾರೆ. ಇನ್ನು ಅರ್ಜುನ್ ಜನ್ಯ ಅವರು ನಿಮ್ಮ ಜೊತೆಗೆ ನಿಮ್ಮ ಮಗು ಕೂಡ ವೇದಿಕೆ ಮೇಲೆ ಬಂದಿದೆ. ಅದು ತುಂಬ ದೊಡ್ಡ ವಿಷಯ ಎಂದಿದ್ದಾರೆ.

    ನಿಮ್ಮ ಹಾಡು ಕೇಳಿ ನನಗೆ ನಮ್ಮ ತಾಯಿ ನೆನಪಾದರು. ನಾನು ನಮ್ಮ ತಾಯಿಯ ಹೊಟ್ಟೆಯಲ್ಲಿ ಇದ್ದಾಗ ಎಂಟು ತಿಂಗಳವರೆಗೆ ಅವರು ಸಂಗೀತ ಕಾರ್ಯಕ್ರಮಗಳನ್ನು ನೋಡುತ್ತಿದ್ದರು. ಆ ನೆನಪು ನನಗೆ ಮೂಡುವಂತೆ ಮಾಡಿದ್ದೀರಾ. ನಿಮ್ಮ ಉತ್ಸಾಹವನ್ನು ಮೆಚ್ಚಬೇಕು ಎಂದು ರಾಜೇಶ್ ಕೃಷ್ಣನ್ ಅವರು ಹೇಳಿದ್ದಾರೆ.

    ಸಂಧ್ಯಾ ಅವರು ಮೆಗಾ ಆಡಿಷನ್ ನಲ್ಲಿ ಆಯ್ಕೆ ಆಗಲಿಲ್ಲ. ವೇದಿಕೆಯ ಮೇಲೆ ಪತ್ನಿಯ ಸೀಮಂತ ಮಾಡಿದಕ್ಕೆ ಅವರ ಪತಿ ವಿಷ್ಣು ಕೂಡ ಸಂತಸ ವ್ಯಕ್ತಪಡಿಸಿದ್ದರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv