Tag: Saroj Khan

  • ಖ್ಯಾತ ನೃತ್ಯ ಸಂಯೋಜಕಿ ಸರೋಜ್ ಖಾನ್ ಇನ್ನಿಲ್ಲ

    ಖ್ಯಾತ ನೃತ್ಯ ಸಂಯೋಜಕಿ ಸರೋಜ್ ಖಾನ್ ಇನ್ನಿಲ್ಲ

    ಮುಂಬೈ: ಬಾಲಿವುಡ್‍ನ ಹಿರಿಯ ನೃತ್ಯ ಸಂಯೋಜಕಿ ಸರೋಜ್ ಖಾನ್ (71) ಹೃದಯಾಘಾತದಿಂದ ಮೃತಪಟ್ಟಿದ್ದಾರೆ.

    ಕೆಲ ದಿನಗಳ ಹಿಂದೆ ಸರೋಜ್ ಖಾನ್ ಅವರು ಉಸಿರಾಟದ ತೊಂದರೆಯಿಂದ ಬಳಲುತ್ತಿದ್ದರು. ಹೀಗಾಗಿ ಅವರನ್ನು ಮುಂಬೈನ ಬಾಂದ್ರಾದಲ್ಲಿರುವ ಗುರು ನಾನಕ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಇದೀಗ ಹೃದಯಾಘಾತವಾಗಿ ಚಿಕಿತ್ಸೆ ಫಲಕಾರಿಯಾಗದೆ ಸರೋಜ್ ಖಾನ್ ನಿಧನರಾಗಿದ್ದಾರೆ.

    71 ವರ್ಷದ ಸರೋಜ್ ಖಾನ್ ಅವರು ಉಸಿರಾಟದಿಂದ ಬಳಲುತ್ತಿದ್ದರು. ಹೀಗಾಗಿ ಶನಿವಾರ ಅವರನ್ನು ಕುಟುಂಬದವರು ಆಸ್ಪತ್ರೆಗೆ ದಾಖಲು ಮಾಡಿದ್ದರು. ಆರಂಭದಲ್ಲಿಯೇ ಇವರಿಗೆ ಕೊರೊನಾ ಪರೀಕ್ಷೆ ಮಾಡಿಸಲಾಗಿತ್ತು. ಈ ವರದಿಯಲ್ಲಿ ನೆಗೆಟಿವ್ ಬಂದಿತ್ತು.

    ಉಸಿರಾಟದ ತೊಂದರೆ ಮತ್ತು ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಸರೋಜ್ ಖಾನ್ ಇಂದು ನಸುಕಿನ ಜಾವ ಹೃದಯಾಘಾತವಾಗಿ ಆಸ್ಪತ್ರೆಯಲ್ಲಿಯೇ ಕೊನೆಯುಸಿರೆಳೆದಿದ್ದಾರೆ ಎಂದು ವೈದ್ಯರು ಹೇಳಿದರು.

    ಸರೋಜ್ ಖಾನ್ 1974 ರಲ್ಲಿ ಬಿಡುಗಡೆಯಾದ ಹಿಂದೆ ‘ನಾಮ್’ ಸಿನಿಮಾದ ಮೂಲಕ ನೃತ್ಯ ಸಂಯೋಜಕಿಯಾಗಿ ಚಿತ್ರರಂಗಕ್ಕೆ ಎಂಟ್ರಿ ಕೊಟ್ಟಿದ್ದರು. ನಂತರ ಸುಮಾರು ನಾಲ್ಕು ದಶಕಗಳ ಕಾಲ ಚಿತ್ರರಂಗದಲ್ಲಿ ಕೆಲಸ ಮಾಡಿದ್ದಾರೆ. ಸುಮಾರು 2 ಸಾವಿರಕ್ಕೂ ಅಧಿಕ ಹಾಡುಗಳಿಗೆ ನೃತ್ಯ ಸಂಯೋಜನೆ ಮಾಡಿದ್ದಾರೆ.

    ‘ಡೋಲಾ ರೆ ಡೋಲಾ’, ಏಕ್ ದೋ ತೀನ್’, ಚೋಲಿ ಕೆ ಪೀಚೆ ಕ್ಯಾಹೆ’, ಸೇರಿದಂತೆ ಇನ್ನೂ ಅನೇಕ ಸೂಪರ್ ಹಿಟ್ ಹಾಡುಗಳಿಗೆ ನೃತ್ಯ ಸಂಯೋಜನೆ ಮಾಡಿದ್ದಾರೆ. ಸರೋಜ್ ಖಾನ್ ಅವರಿಗೆ ಮೂರು ಬಾರಿ ರಾಷ್ಟ್ರ ಪ್ರಶಸ್ತಿ ದೊರಕಿದೆ.

  • ಫಿಲ್ಮ್ ಇಂಡಸ್ಟ್ರಿ ರೇಪ್‍ಗೆ ಬದಲಾಗಿ ತುತ್ತು ಅನ್ನ ನೀಡುತ್ತೆ: ಸರೋಜ್ ಖಾನ್

    ಫಿಲ್ಮ್ ಇಂಡಸ್ಟ್ರಿ ರೇಪ್‍ಗೆ ಬದಲಾಗಿ ತುತ್ತು ಅನ್ನ ನೀಡುತ್ತೆ: ಸರೋಜ್ ಖಾನ್

    ಮುಂಬೈ: ಸಿನಿಮಾ ಉದ್ಯಮದಲ್ಲಿ ಕೆಲವು ದಿನಗಳಿಂದ ‘ಕಾಸ್ಟಿಂಗ್ ಕೌಚ್’ ಕುರಿತಾಗಿ ಭಾರೀ ಚರ್ಚೆಗಳು ನಡೆಯುತ್ತಿವೆ. ಬಾಲಿವುಡ್ ಖ್ಯಾತ ನೃತ್ಯ ಸಂಯೋಜಕಿ ಸರೋಜ್ ಖಾನ್ ಕಾಸ್ಟಿಂಗ್ ಕೌಚ್ ಪರ ಹೇಳಿಕೆ ನೀಡುವ ಮೂಲಕ ಅಚ್ಚರಿಯನ್ನುಂಟು ಮಾಡಿದ್ದಾರೆ.

    ಬಾಲಿವುಡ್ ಕಾಸ್ಟಿಂಗ್ ಕೌಚ್ ನೆಪದಲ್ಲಿ ನಡೆಸುವ ರೇಪ್‍ಗೆ ಬದಲಾಗಿ ನಟಿಗೆ ಅನ್ನವನ್ನು ನೀಡುತ್ತದೆ ಅಂತಾ ಖಾಸಗಿ ಕಾರ್ಯಕ್ರಮದಲ್ಲಿ ಭಾಗಿಯಾಗಿದ ವೇಳೆ ಮಾಧ್ಯಮಗಳಿಗೆ ತಿಳಿಸಿದ್ದಾರೆ.

    ಕಾಸ್ಟಿಂಗ್ ಕೌಚ್ ಕಿರುಕುಳ ಬಾಬಾ ಅಝಮ್ ಕಾಲದಿಂದಲೂ ನಡೆದುಕೊಂಡು ಬಂದಿದೆ. ಸಿನಿಮಾ ಅಂಗಳದಲ್ಲಿರುವ ಪ್ರತಿಯೊಬ್ಬ ಹುಡುಗಿಯ ಮೇಲೆ ಒಬ್ಬರಾದ್ರೂ ಕೈ ಹಾಕುವ ಪ್ರಯತ್ನ ಮಾಡ್ತಾರೆ. ಇಂತಹ ಪ್ರಕರಣದಲ್ಲಿ ಸರ್ಕಾರದ ಪ್ರತಿನಿಧಿಗಳು ಸಹ ಇರ್ತಾರೆ. ಸರ್ಕಾರದ ಪ್ರತಿನಿಧಿಗಳು ಫಿಲ್ಮ್ ಇಂಡಸ್ಟ್ರಿಯ ಹಿಂದೆ ಯಾಕೆ ಬೀಳುತ್ತಾರೋ ಗೊತ್ತಾಗುತ್ತಿಲ್ಲ. ಕೊನೆ ಪಕ್ಷದಲ್ಲಿ ಸಿನಿಮಾದವರು ರೇಪ್ ಬದಲಾಗಿ ನಟಿಗೆ ತುತ್ತು ಅನ್ನವಾದ್ರೂ ನೀಡ್ತಾರೆ ಅಂತಾ ಹೇಳಿದ್ದಾರೆ.

    ಈ ಎಲ್ಲ ವಿಷಯಗಳು ನಟಿಯ ಮೇಲೆ ನಿರ್ಧರಿಸಲ್ಪಡುತ್ತವೆ. ನಟಿ ಲೈಂಗಿಕ ಕಿರುಕುಳಕ್ಕೆ ಒಳಗಾಗಲು ಇಷ್ಟ ಪಡದೇ ಇದ್ದರೆ ದೂರ ಉಳಿಯುವ ಸ್ವಾತಂತ್ರ್ಯ ಆಕೆಗಿದೆ. ಅವಳಲ್ಲಿ ನಟನೆಯ ಕಲೆ ಇದ್ರೆ, ಆಕೆ ಎಲ್ಲಿಯಾದ್ರೂ ಬದುಕಬಹುದು. ಆದ್ರೆ ಫಿಲ್ಮ್ ಇಂಡಸ್ಟ್ರಿಗೆ ಅವಮಾನಿಸುವಂತಹ ಹೇಳಿಕೆಗಳನ್ನು ನೀಡಬಾರದು. ಫಿಲ್ಮ್ ಇಂಡಸ್ಟ್ರಿ ನಮಗೆ ತಂದೆ-ತಾಯಿ. ಹೀಗಾಗಿ ಅನಾವಶ್ಯಕ ಹೇಳಿಕೆಗಳನ್ನು ನೀಡಬಾರದು ಅಂತಾ ಸರೋಜ್ ಖಾನ್ ತಿಳಿಸಿದ್ದಾರೆ. ಇದನ್ನೂ ಓದಿ: ಪೊಲೀಸ್ ಠಾಣೆ ಮೆಟ್ಟಿಲೇರಿದ್ರು ಬಟ್ಟೆ ಬಿಚ್ಚಿ ಶ್ರೀರೆಡ್ಡಿಗೆ ತಿರುಗೇಟು ಕೊಟ್ಟ ಸ್ಯಾಂಡಲ್ ವುಡ್ ನಟಿ

    ಸರೋಜ್ ಖಾನ್ ಹೇಳಿಕೆಗೆ ಪ್ರತಿಕ್ರಿಯಿಸಿರುವ ಟಾಲಿವುಡ್ ನಟಿ ಶ್ರೀರೆಡ್ಡಿ, ಇದೂವರೆಗೂ ಸರೋಜ್ ಖಾನ್ ಮೇಡಂ ಮೇಲಿದ್ದ ಗೌರವವೆಲ್ಲಾ ಕಡಿಮೆಯಾಗಿದೆ. ಸಿನಿಮಾ ರಂಗದಲ್ಲಿರುವ ಒಬ್ಬ ಹಿರಿಯ ಕಲಾವಿದೆಯಾಗಿ, ಯುವ ನಟಿಯರಿಗೆ ಒಳ್ಳೆಯ ದಾರಿಯನ್ನು ತೋರಿಸಬೇಕು. ಅದರ ಬದಲಾಗಿ ನಟಿಯರು ನಿರ್ಮಾಪಕರ ಗುಲಾಮರು ಇದ್ದಂತೆ ನಿಮ್ಮ ಹೇಳಿಕೆ ಇದೆ ಅಂತಾ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ: ಬಟ್ಟೆ ಬಿಚ್ಚಿ ಶ್ರೀರೆಡ್ಡಿಗೆ ತಿರುಗೇಟು ಕೊಟ್ಟ ಕನ್ನಡದ ನಟಿ ಕವಿತಾ!

  • ಏಕ್, ದೋ, ತೀನ್..! ವಿವಾದದ ಬಗ್ಗೆ ಕೊನೆಗೂ ಮೌನ ಮುರಿದ ಸರೋಜ್ ಖಾನ್

    ಏಕ್, ದೋ, ತೀನ್..! ವಿವಾದದ ಬಗ್ಗೆ ಕೊನೆಗೂ ಮೌನ ಮುರಿದ ಸರೋಜ್ ಖಾನ್

    ಮುಂಬೈ: ಹಿರಿಯ ನೃತ್ಯ ನಿರ್ದೇಶಕಿ ಸರೋಜ್ ಖಾನ್‍ರವರು ಏಕ್ ದೋ ತೀನ್ ಗೀತೆಯ ವಿವಾದದ ಬಗ್ಗೆ ಮಾತನಾಡಿದ್ದಾರೆ. ನೃತ್ಯ ನಿರ್ದೇಶಕರಾದ ಅಹ್ಮದ್ ಖಾನ್ ಮತ್ತು ಗಣೇಶ್ ಆಚಾರ್ಯರ ಪರಿಶ್ರಮದ ಬಗ್ಗೆ ಹೆಮ್ಮೆ ಹಾಗೂ ಸಂತಸ ವ್ಯಕ್ತಪಡಿಸಿದ್ದಾರೆ ಮತ್ತು ಅವರಿಗೆ ನನ್ನ ಆಶೀರ್ವಾದ ಎಂದಿಗೂ ಇರುತ್ತದೆ ಎಂದು ಹೇಳಿದ್ದಾರೆ.

    ಏಕ್, ದೋ, ತೀನ್,  ಚಾರ್ ಹಾಡಿನ ವಿರುದ್ಧ ಕಾನೂನು ಕ್ರಮ ತೆಗೆದುಕೊಳ್ಳುವ ಪ್ರಶ್ನೆಯೇ ಉದ್ಭವವಾಗುವುದಿಲ್ಲ. ನನ್ನ ಮತ್ತು ಅಹ್ಮದ್ ಖಾನ್ ನಡುವೆ ಗುರು ಶಿಷ್ಯರ ಸಂಬಂಧವಿದೆ. ಇಲ್ಲಿ ಒಬ್ಬರಿಗಿಂತ ಒಬ್ಬರು ಭಿನ್ನವಾಗಿದ್ದು, ಯಾವುದೇ ರೀತಿಯ ಸ್ಪರ್ಧೆ ಇರುವುದಿಲ್ಲ. ಹಳೆ ಗೀತೆಗಿಂತ ಹೊಸ ಹಾಡು ಉತ್ತಮವೆಂಬ ಅಂಶ ತಪ್ಪು ಏಕೆಂದರೆ ಈ ಗೀತೆಯನ್ನು ಏಕ್ ದೋ ತೀನ್ ತಂಡಕ್ಕೆ ಸಮರ್ಪಿಸಿದ್ದಾರೆ ಮತ್ತು ಬಾಘೀ-2 ಚಿತ್ರ ತಂಡವು ಬಹಳ ಶ್ರಮಪಟ್ಟಿದೆ ಅಂತಾ ಸರೋಜ್ ಖಾನ್ ಅಂದಿದ್ದಾರೆ.

    ಈ ಹಿಂದೆ ಸರೋಜ್ ಖಾನ್ ಇದೇ ಹಾಡಿಗೆ ನೃತ್ಯ ಸಂಯೋಜನೆ ಮಾಡಿದ್ದರು. ಅಂದು ಇದೇ ಗೀತೆಗೆ ಅಹ್ಮದ್ ಖಾನ್‍ರವರು ಸಹಾಯಕ ನೃತ್ಯ ನಿರ್ದೇಶಕರಾಗಿ ಮತ್ತು ಗಣೇಶ್ ಆಚಾರ್ಯರವರು ಗೀತೆಯ ಹಿನ್ನೆಲೆ ನರ್ತಕರಾಗಿ ಕಾಣಿಸಿಕೊಂಡಿದ್ದರು. ಬಾಘೀ-2 ಚಿತ್ರದಲ್ಲಿ ಸಾಜಿದ್ ನಾಡಿಯದ್ವಾಲ ಮತ್ತು ನಿರ್ದೇಶಕ ಅಹ್ಮದ್ ಖಾನ್ ಈ ಗೀತೆಯನ್ನು ಅಳವಡಿಸಿಕೊಂಡಿದ್ದಾರೆ.

    ಏನಿದು ವಿವಾದ: ಮಾಧುರಿ ದೀಕ್ಷಿತ್ ನರ್ತಿಸಿದ ಹಾಡಿನ ನ್ಯೂ ವರ್ಷನ್ ಗೆ ಮರ್ಡರ್-2 ಖ್ಯಾತಿಯ ಸುಂದರಿ ಜಾಕ್ವೇಲಿನ್ ತುಂಬಾ ಸೆಕ್ಸಿಯಾಗಿ ಕಾಣಿಸಿಕೊಂಡಿದಕ್ಕೆ ಕೆಲವರು ಸಾಮಾಜಿಕ ಜಾಲತಾಣಗಳಲ್ಲಿ ಅಸಮಾಧಾನವನ್ನ ಹೊರಹಾಕಿದ್ರು. ಮಾಧುರಿ ದೀಕ್ಷಿತ್ ಸಹ ತಮ್ಮ ಹಾಡಿಗೆ ಜಾಕ್ವೇಲಿನ್ ಮಾಡಿರುವ ಡ್ಯಾನ್ಸ್ ನೋಡಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ ಎನ್ನಲಾಗಿದೆ. ಜಾಕ್ವೇಲಿನ ‘ಏಕ್ ದೋ ತೀನ್ ಚಾರ್’ ಹಾಡಿನ ಮೂಲಕ ನಾನು ನಿಮಗೆ ಗೌರವ ಸಲ್ಲಿಸುತ್ತಿದ್ದೇನೆ ಎಂಬ ಸಂದೇಶವನ್ನು ಸಹ ರವಾನೆ ಮಾಡಿದ್ದು, ಮಾಧುರಿ ಮಾತ್ರ ಯಾವುದಕ್ಕೂ ಉತ್ತರ ನೀಡಿಲ್ಲ ಅಂತಾ ಹೇಳಲಾಗುತ್ತಿದೆ.