Tag: sasikanth senthil

  • ಪ್ರಾಮಾಣಿಕರಾಗಿದ್ರೆ ಸೆಂಥಿಲ್‌ ಸಿಎಂ ಬಳಿ ಮಾತಾಡಿ ಸಿಬಿಐ, ಎನ್ಐಎಗೆ ಕೊಡಲಿ :  ರೆಡ್ಡಿ ಸವಾಲು

    ಪ್ರಾಮಾಣಿಕರಾಗಿದ್ರೆ ಸೆಂಥಿಲ್‌ ಸಿಎಂ ಬಳಿ ಮಾತಾಡಿ ಸಿಬಿಐ, ಎನ್ಐಎಗೆ ಕೊಡಲಿ : ರೆಡ್ಡಿ ಸವಾಲು

    ಬಳ್ಳಾರಿ: ಕಾಂಗ್ರೆಸ್‌ ಸಂಸದ ಸಸಿಕಾಂತ್‌ ಸೆಂಥಿಲ್‌ (Sasikanth Senthil) ಪ್ರಾಮಾಣಿಕರಾಗಿದ್ದರೆ ಧರ್ಮಸ್ಥಳ ಬುರುಡೆ ಪ್ರಕರಣವನ್ನು (Dharmasthala Case) ಸಿಎಂ ಸಿದ್ದರಾಮಯ್ಯನವರ ಬಳಿ ಮಾತನಾಡಿ ಸಿಬಿಐ, ಎನ್ಐಎಗೆ ಕೊಡಲು ತಿಳಿಸಲಿ ಎಂದು ಗಂಗಾವತಿ ಶಾಸಕ ಜನಾರ್ದನ ರೆಡ್ಡಿ (Janardhana Reddy) ಸವಾಲು ಎಸೆದಿದ್ದಾರೆ.

    ತನ್ನ ವಿರುದ್ಧ ಸೆಂಥಿಲ್‌ ಮಾನನಷ್ಟ ಪ್ರಕರಣ ಹೂಡಿದ ಬಗ್ಗೆ ಬಳ್ಳಾರಿಯ ನಿವಾಸದಲ್ಲಿ ಪ್ರತಿಕ್ರಿಯೆ ನೀಡಿದ ಅವರು, ಇಡೀ ವಿಶ್ವಕ್ಕೆ ಹಿಂದೂ (Hindu) ಧರ್ಮದ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತರಲು ಎಡಪಂಥೀಯ ಮನಸ್ಥಿತಿ, ನಗರ ನಕ್ಸಲರು ಭಾಗಿಯಾಗಿ ಷಡ್ಯಂತ್ರ ರೂಪಿಸಿದ್ದಾರೆ ಎಂದು ವಾಗ್ದಾಳಿ ನಡೆಸಿದರು.

    ಕೆಲವರು ಧರ್ಮಸ್ಥಳದ ಬಗ್ಗೆ ಭಯದ ವಾತಾವರಣ ಸೃಷ್ಟಿಸಿ ಅಪಪ್ರಚಾರ ಮಾಡಿದರು. ಚಿನ್ನಯ್ಯ, ಸುಜಾತಾ ಭಟ್ ಅವರನ್ನು ಕರೆದುಕೊಂಡು ಬಂದು ಅಪಪ್ರಚಾರ ಮಾಡಲು ಹೊರಟಿದ್ದರು. ಮಾಧ್ಯಮ ಹಾಗೂ ಎಸ್ಐಟಿಯಿಂದ ಈ ವಿಚಾರ ಹೊರಗಡೆ ಹೊರಗಡೆ ಬಂದಿದೆ ಎಂದರು. ಇದನ್ನೂ ಓದಿ:  ಬುರುಡೆ ಕೇಸಲ್ಲಿ ಸೆಂಥಿಲ್ ಹೆಸರು – ಶಾಸಕ ಜನಾರ್ದನ ರೆಡ್ಡಿ ವಿರುದ್ಧ ಕ್ರಿಮಿನಲ್ ಮಾನನಷ್ಟ ಮೊಕದ್ದಮೆ ದಾಖಲು

     

    ಈ ಷಡ್ಯಂತ್ರದ ಹಿಂದೆ ಕರ್ನಾಟಕದಲ್ಲಿ ಐಎಎಸ್ ಅಧಿಕಾರಿ ಆಗಿ ಕೆಲಸ ಮಾಡಿದ್ದ ಸಸಿಕಾಂತ್ ಸೆಂಥಿಲ್ ಕೈವಾಡ ಇದೆ ಎನ್ನುವುದನ್ನು ಹೇಳಿದ್ದು ನಾನು. ಮುಸುಕುಧಾರಿ ಮೂಲವನ್ನು ಹೇಳಿದ್ದು ನಾನು. ಎಡಪಂಥೀಯ ವಿಚಾರಾಧಾರೆಗಳನ್ನ ಇಟ್ಕೊಂಡು ಐಎಎಸ್ ಆಗಿ ಸೆಂಥಿಲ್‌ ಕೆಲಸ ಮಾಡಿದ್ದಾರೆ ಎಂದು ದೂರಿದರು.

    ಹಿಂದೂ ಧರ್ಮ, ಸಂಘಪರಿವಾರದ ಬಗ್ಗೆ ಮಾತಾಡುತ್ತಿದ್ದ ಅವರು ರಾಜೀನಾಮೆ ಕೊಟ್ಟು ಕಾಂಗ್ರೆಸ್ (Congress) ಸೇರಿದರು. ಹಿಂದೂ ಧರ್ಮದ ಮೇಲೆ ನಂಬಿಕೆ ಇಲ್ಲದ ಡಿಎಂಕೆ ಜೊತೆ ಮೈತ್ರಿ ಮಾಡಿಕೊಂಡಿದ್ದಾರೆ. ಅದೇ ಸಸಿಕಾಂತ್ ಸೆಂಥಿಲ್ ಇಂದು ನನ್ನ ಮೇಲೆ ಮಾನನಷ್ಡ ಮೊಕದ್ದಮೆ ಹೂಡಿದ್ದಾರೆ ಎಂದರು. ಇದನ್ನೂ ಓದಿ: ಧರ್ಮಸ್ಥಳದಲ್ಲಿ ಶವ ಹೂತಿಟ್ಟ ಪ್ರಕರಣ – ʻಕೈʼ ಸಂಸದ ಸಸಿಕಾಂತ್ ಸೆಂಥಿಲ್ ಫಸ್ಟ್‌ ರಿಯಾಕ್ಷನ್‌

    ಈಗಾಗಲೇ ಸಮೀರ್, ಜಯಂತ್, ಮಟ್ಟಣ್ಣನವರ್‌ ಎಲ್ಲರನ್ನೂ ಎಸ್ಐಟಿಯವರು ಕರೆಯುತ್ತಿದ್ದಾರೆ. ಸಸಿಕಾಂತ್ ಅವರ ಮನೆ ಮೆಟ್ಟಿಲು ಹತ್ತೋದು ಮಾತ್ರ ಬಾಕಿ ಇತ್ತು. ಸರ್ಕಾರವನ್ನು ಮೀರಿ ಅವರ ಮನೆ ಮೆಟ್ಟಿಲು ಹತ್ತೋದು ಅಷ್ಟು ಸುಲಭ ಅಲ್ಲ. ಇದರ ಹಿಂದೆ ಯಾವುದೋ ಒಂದು ವಿದೇಶಿ ಉಗ್ರವಾದ ಸಂಘಟನೆ ಇದೆ ಅನಿಸುತ್ತಿದೆ. ಅದಕ್ಕಾಗಿ ಇದನ್ನು ಎನ್ಐಎ ಹಾಗೂ ಸಿಬಿಐ ತನಿಖೆ ಆಗಬೇಕು ಎಂದು ನಾನು ಹೇಳಿದ್ದೆ ಎಂದು ಸಮರ್ಥಿಸಿದರು.

     

    ಸಸಿಕಾಂತ್ ಸೆಂಥಿಲ್ ಹೂಡಿರುವ ಮಾನನಷ್ಡ ಮೊಕದ್ದಮೆ ಕೇಸ್ ಎದುರಿಸಿಲು ನಾನು ಸಿದ್ಧನಿದ್ದೇನೆ. ಅವರು ಕೋರ್ಟ್, ಲಾ ಬಗ್ಗೆ ಮಾತಾಡ್ತಿದ್ದಾರೆ. ಅವರು ಪಾರ್ಲಿಮೆಂಟ್ ಮೇಂಬರ್ ಇದ್ದಾರೆ. ಮಾನನಷ್ಟ ಮೊಕದ್ದಮೆ ಹಾಕಲಿ, ಅದರ ಜೊತೆಗೆ ಇದನ್ನ ಎನ್ಐಎಗೆ ಕೊಡಲು ಸಿಎಂ ಬಳಿ ಮನವಿ ಮಾಡಲಿ. ಇದರಲ್ಲಿ ನನ್ನ ಪಾತ್ರ ಇಲ್ಲ ಅನ್ನೋದನ್ನ ತೋರಿಸಲಿ. ನಾನು ಬಹಳ ಸ್ಪಷ್ಟವಾಗಿ ಸೆಂಥಿಲ್ ಹೆಸರು ತೆಗೆದುಕೊಂಡೇ ಹೇಳಿದ್ದೇನೆ. ನಾನು ಅದನ್ನ ಲೀಗಲ್ ಆಗಿ ಫೈಟ್ ಮಾಡುತ್ತೇನೆ ಎಂದರು.

    ಸಿಬಿಐಗೆ ಜನಾರ್ದನರೆಡ್ಡಿ ವಿರುದ್ದ ನಾನು ದಾಖಲೆ ನೀಡಿದ್ದಕ್ಕೆ ನನ್ನ ಮೇಲೆ ಆರೋಪ ಮಾಡಿದ್ದಾರೆ ಎಂಬ ಸೆಂಥಿಲ್‌ ಹೇಳಿಕೆಗೆ ಪ್ರತಿಕ್ರಿಯಿಸಿದ ಜನಾರ್ದನರೆಡ್ಡಿ, ಸುಮ್ನೇ ಏನೋ ಮಾತನಾಡಬೇಕು ಅಂತಾ ಅವನು ಮಾತನಾಡುವುದು ಬೇಡ. ನಾನು ಅರೆಸ್ಟ್ ಆದ ಮಾರನೇ ದಿನ ಅವನು ಬಳ್ಳಾರಿಗೆ ಬಂದಿದ್ದಾನೆ ಎಂದು ಏಕವಚನದಲ್ಲಿ ವಾಗ್ದಾಳಿ ನಡೆಸಿದರು.

     

     

  • ಧರ್ಮಸ್ಥಳ ಕೇಸ್ | ಅಣ್ಣಾಮಲೈ ವಿಚಾರಣೆ ಯಾಕಿಲ್ಲ? – ಸಸಿಕಾಂತ್ ಸೆಂಥಿಲ್

    ಧರ್ಮಸ್ಥಳ ಕೇಸ್ | ಅಣ್ಣಾಮಲೈ ವಿಚಾರಣೆ ಯಾಕಿಲ್ಲ? – ಸಸಿಕಾಂತ್ ಸೆಂಥಿಲ್

    ಬೆಂಗಳೂರು: ಧರ್ಮಸ್ಥಳದಲ್ಲಿ ಶವ ಹೂತಿಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂಸದ ಸಸಿಕಾಂತ್ ಸೆಂಥಿಲ್ (Sasikanth Senthil) ಸ್ಫೋಟಕ ತಿರುವು ಕೊಟ್ಟಿದ್ದಾರೆ. ಈ ಪ್ರಕರಣದಲ್ಲಿ ತಮಿಳುನಾಡಿನ ಬಿಜೆಪಿ ನಾಯಕ ಅಣ್ಣಾಮಲೈ (Annamalai) ವಿಚಾರಣೆ ಯಾಕೆ ಮಾಡುತ್ತಿಲ್ಲ ಎಂದು ಅವರು ಪ್ರಶ್ನಿಸಿದ್ದಾರೆ.

    ಬೆಂಗಳೂರಿನಲ್ಲಿ (Bengaluru) ಅವರು ಸುದ್ದಿಗಾರರೊಂದಿಗೆ ಅವರು ಮಾತನಾಡಿದರು. ಈ ವೇಳೆ, ಧರ್ಮಸ್ಥಳ ಕೇಸ್‍ಗೆ ತಮಿಳುನಾಡಿನ ಲಿಂಕ್ ಇದೆ ಎಂಬ ಆರೋಪ ಕೇಳಿಬರುತ್ತಿದೆ. ಹಾಗಾದರೆ ಇಲ್ಲಿ ಹಲವು ಮಂದಿ ತಮಿಳುನಾಡಿನ ಅಧಿಕಾರಿಗಳು ಕೆಲಸ ಮಾಡಿದ್ದಾರೆ. ಅದೇ ರೀತಿ ಅಣ್ಣಾಮಲೈ ಅವರು ಸಹ ಐಪಿಎಸ್ ಅಧಿಕಾರಿಯಾಗಿದ್ದವರು.  ಅಣ್ಣಾಮಲೈ ಅವರಿಗೆ ತಲೆ ಬುರುಡೆ ಬಗ್ಗೆ ಯಾಕೆ ವಿಚಾರಣೆ ಮಾಡಿಲ್ಲ ಎಂದು ಪ್ರಶ್ನಿಸಿದ್ದಾರೆ. ಇದನ್ನೂ ಓದಿ: ಬುರುಡೆ ಕೇಸಲ್ಲಿ ಸೆಂಥಿಲ್ ಹೆಸರು – ಶಾಸಕ ಜನಾರ್ದನ ರೆಡ್ಡಿ ವಿರುದ್ಧ ಕ್ರಿಮಿನಲ್ ಮಾನನಷ್ಟ ಮೊಕದ್ದಮೆ ದಾಖಲು

    ನಮ್ಮ ವಿರುದ್ಧ ಯಾಕೆ ಆರೋಪ ಮಾಡ್ತಾ ಇದ್ದಾರೆ?  ಅಣ್ಣಾಮಲೈ ವಿರುದ್ಧ ಯಾಕೆ ವಿಚಾರಣೆ ಮಾಡ್ತಿಲ್ಲ? ಅವರ ವಿಚಾರಣೆಯನ್ನೂ ಮಾಡ್ಬೇಕಲ್ವಾ ಎಂದಿದ್ದಾರೆ.

    ಧರ್ಮಸ್ಥಳ `ಬುರುಡೆ’ ಪ್ರಕರಣದಲ್ಲಿ ತಮ್ಮ ಹೆಸರು ಪ್ರಸ್ತಾಪಿಸಿ ಆರೋಪ ಮಾಡಿದ್ದಕ್ಕಾಗಿ ಸೆಂಥಿಲ್ ಅವರು ಗಂಗಾವತಿ ಶಾಸಕ ಜನಾರ್ದನ ರೆಡ್ಡಿ (Janardhana Reddy) ವಿರುದ್ಧ ಕ್ರಿಮಿನಲ್ ಮಾನನಷ್ಟ ಮೊಕದ್ದಮೆ (Criminal Defamation Case) ಹೂಡಿದ್ದಾರೆ. 42 ಎಸಿಎಂಎಂ ನ್ಯಾಯಾಲಯದಲ್ಲಿ ಪಿಸಿಆರ್ ಫೈಲ್ ಮಾಡಿದ್ದು, ಸೆ.11ಕ್ಕೆ ಈ ಅರ್ಜಿ ವಿಚಾರಣೆ ನಡೆಯಲಿದೆ. ಇದನ್ನೂ ಓದಿ: ಧರ್ಮಸ್ಥಳ ಕೇಸ್;‌ ಕೇರಳ ಕಮ್ಯುನಿಸ್ಟ್‌ ಪಕ್ಷದ ಸಂಸದನ ಮುಂದೆ ಬುರುಡೆ ಇಟ್ಟಿದ್ದ ಗ್ಯಾಂಗ್‌

  • ಬುರುಡೆ ಕೇಸಲ್ಲಿ ಸೆಂಥಿಲ್ ಹೆಸರು – ಶಾಸಕ ಜನಾರ್ದನ ರೆಡ್ಡಿ ವಿರುದ್ಧ ಕ್ರಿಮಿನಲ್ ಮಾನನಷ್ಟ ಮೊಕದ್ದಮೆ ದಾಖಲು

    ಬುರುಡೆ ಕೇಸಲ್ಲಿ ಸೆಂಥಿಲ್ ಹೆಸರು – ಶಾಸಕ ಜನಾರ್ದನ ರೆಡ್ಡಿ ವಿರುದ್ಧ ಕ್ರಿಮಿನಲ್ ಮಾನನಷ್ಟ ಮೊಕದ್ದಮೆ ದಾಖಲು

    – ಬರುಡೆ ಎಲ್ಲಿಂದ ಬಂತು ನನಗೆ ಗೊತ್ತಿಲ್ಲ, ಆದ್ರೂ ನನ್ನ ಹೆಸರು ತಗೊಂಡಿದ್ದಾರೆ
    – ಜನಾರ್ದನ ರೆಡ್ಡಿ ಕೋರ್ಟಲ್ಲಿ ಉತ್ತರಿಸಲಿ ಎಂದ ಸಂಸದ ಸೆಂಥಿಲ್‌

    ಬೆಂಗಳೂರು/ನವದೆಹಲಿ: ಗಂಗಾವತಿ ಶಾಸಕ ಜನಾರ್ದನ ರೆಡ್ಡಿ (Janardhana Reddy) ವಿರುದ್ಧ ತಮಿಳುನಾಡಿನ ಕಾಂಗ್ರೆಸ್‌ ಸಂಸದ ಸಸಿಕಾಂತ್ ಸೆಂಥಿಲ್ ಕ್ರಿಮಿನಲ್‌ ಮಾನನಷ್ಟ ಮೊಕದ್ದಮೆ (Criminal Defamation Case) ಹೂಡಿದ್ದಾರೆ.

    ಧರ್ಮಸ್ಥಳ ʻಬುರುಡೆʼಪ್ರಕರಣದಲ್ಲಿ ತಮ್ಮ ಹೆಸರು ಪ್ರಸ್ತಾಪಿಸಿ ಆರೋಪ ಮಾಡಿದ್ದಕ್ಕಾಗಿ ಕ್ರಿಮಿನಲ್‌ ಮಾನನಷ್ಟ ಮೊಕದ್ದಮೆ ಹೂಡಿರುವುದಾಗಿ ಸೆಂಥಿಲ್‌ (Sasikanth Senthil) ಹೇಳಿದ್ದಾರೆ. 42 ಎಸಿಎಂ ನ್ಯಾಯಾಲಯದ ನ್ಯಾಯಾಧೀಶರ ಮುಂದೆ ಪಿಸಿಆರ್ ಫೈಲ್‌ ಮಾಡಿದ್ದು, ಸೆಪ್ಟೆಂಬರ್‌ 11ಕ್ಕೆ ವಿಚಾರಣೆ ನಡೆಯಲಿದೆ. ಇದನ್ನೂ ಓದಿ: ಧರ್ಮಸ್ಥಳದಲ್ಲಿ ಶವ ಹೂತಿಟ್ಟ ಪ್ರಕರಣ – ʻಕೈʼ ಸಂಸದ ಸಸಿಕಾಂತ್ ಸೆಂಥಿಲ್ ಫಸ್ಟ್‌ ರಿಯಾಕ್ಷನ್‌

    ಈ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿರುವ ಸೆಂಥಿಲ್‌, ಬುರುಡೆ ಕೇಸ್‌ನಲ್ಲಿ (Dharmasthala Case) ನನ್ನ ಹೆಸರು ತಗೊಂಡಿದ್ದಾರೆ. ಆದ್ದರಿಂದ ಮೊಕದ್ದಮೆ ಹೂಡಿದ್ದೇನೆ. ಅವರು ಕೋರ್ಟ್‌ನಲ್ಲಿ ಉತ್ತರಿಸಲಿ ಎಂದು ಹೇಳಿದ್ದಾರೆ. ಇದನ್ನೂ ಓದಿ: ಬುರುಡೆ ಕೇಸ್‌ ಹಿಂದೆ ಕೈ ಸಂಸದ ಶಶಿಕಾಂತ್‌ ಸೆಂಥಿಲ್‌ ಇದ್ದಾರೆ: ಯಶ್‌ಪಾಲ್‌ ಸುವರ್ಣ

    ಈ ಹ್ಯಾಂಗಲ್‌ನಲ್ಲಿ ಯಾರು ಸ್ಟೋರಿ ತಗೊಂಡು ಬಿಲ್ಡ್ ಮಾಡ್ತಿದ್ದಾರೆ ಅವರನ್ನು ಕೂಡ ತಗೊಳ್ತಿನಿ. ಈ ಕೇಸಲ್ಲಿ ನನ್ನ ಹೆಸರು ಯಾಕೆ ಬಂತು, ಗೊತ್ತಿಲ್ಲ. ನನ್ನ ಹೆಸರನ್ನ ತಮಿಳುನಾಡಿನ ಮಾಜಿ ಪೊಲೀಸ್ ಅಧಿಕಾರಿ ಅಲ್ಲಿ ತಗೊಂಡಿದ್ದಾರೆ. ಇದು ಹೀಗೆ ಬಿಟ್ಟರೆ, ಒಂದು ಸ್ಟೋರಿ ಕ್ರಿಯೇಟ್‌ ಆಗುತ್ತೆ. ನಾನು ಲೀಗಲ್‌ ಸಿಸ್ಟಮ್‌ನಲ್ಲಿ ಹೋಗ್ತೀದ್ದೀನಿ. ಸತ್ಯ ಏನಿದೆ ತನಿಖೆಯಿಂದ ಹೊರ ಬರಲಿ ಎಂದು ಒತ್ತಾಯಿಸಿದ್ದಾರೆ. ಇದನ್ನೂ ಓದಿ: ಮಾಸ್ಕ್‌ಮ್ಯಾನ್‌ಗೆ ಬುರುಡೆ ಕೊಟ್ಟಿದ್ದೇ ಕೈ ಸಂಸದ ಸಸಿಕಾಂತ್‌ ಸೆಂಥಿಲ್: ಜನಾರ್ದನ ರೆಡ್ಡಿ

    Janardhana Reddy

    ಮುಂದುವರಿದು… ಧಾರ್ಮಿಕ ವಿಚಾರ ಪೊಲಿಟಿಕಲಿ ತಗೊಳ್ತಿದ್ದಾರೆ. ಯಾರೋ ಒಬ್ಬರು ಸೆಂಥಿಲ್ ಕ್ರಿಶ್ಚಿಯನ್ ಅಂತಾ ಹೇಳಿದ್ದಾರೆ. ನಾನು ಇವರನ್ನು ಲಾಸ್ಟ್ ನೋಡಿದ್ದು, ಬಳ್ಳಾರಿಯಲ್ಲಿ. ನನ್ನ ಮೊದಲ ದಿನವೇ ಇವರು ಅರೆಸ್ಟ್ ಆಗಿದ್ದರು. ಅನಂತರ ಇವರ ರಾಯಾಲ್ಟಿಯನ್ನ ತಡೆದಿದ್ದೆ. ಕರ್ನಾಟಕ ಪ್ರಾಪರ್ಟಿ ಲೂಟಿ ಮಾಡಿದ ವ್ಯಕ್ತಿ. ಜಡ್ಜ್‌ಗಳನ್ನೂ ಬಿಟ್ಟಿಲ್ಲ. ಅವರಿಗೆ ಬೇರೆ ಯಾರೋ ಹೇಳಿರಬಹುದು. ತಮಿಳುನಾಡಿನ ಪಾಲಿಟಿಕ್ಸ್‌ಗೆ ಇವರನ್ನ ಸೇರಿಸಲೂ ಇರಬಹುದು. ಆದ್ರೆ ಕರ್ನಾಟಕ ಜನ ಬುದ್ದಿವಂತರು ಇದ್ದಾರೆ. ಅವರಿಗೆ ಎಲ್ಲಾ ಗೊತ್ತಿದೆ ಎಂದಿದ್ದಾರೆ ಸೆಂಥಿಲ್. ಇದನ್ನೂ ಓದಿ: ನಮಗೆ ಬುರುಡೆ ಕೊಟ್ಟಿದ್ದು ಗಿರೀಶ್‌ ಮಟ್ಟಣ್ಣನವರ್‌: ಎಸ್‌ಐಟಿ ಮುಂದೆ ಜಯಂತ್‌ ಹೇಳಿಕೆ

    ಬುರುಡೆ ಎಲ್ಲಿಂದ ಬಂತು ನನಗೆ ಗೊತ್ತಿಲ್ಲ:
    ಕರ್ನಾಟಕದ ಸಂಪತ್ತು ಲೂಟಿ ಮಾಡಿ ಜೈಲು ಶಿಕ್ಷೆ ಅನುಭವಿಸಿರೊ ವ್ಯಕ್ತಿ ನನ್ನ ಮೇಲೆ ಆಧಾರ ರಹಿತ ಆರೋಪ ಮಾಡಿದ್ದಾರೆ. ಅವರ ವಿರುದ್ಧ ಕೋರ್ಟ್‌ನಲ್ಲಿ ಕ್ರಿಮಿನಲ್ ಮಾನನಷ್ಟ ಮೊಕದ್ದಮೆ ಹಾಕಿದ್ದೇನೆ. ರೈಟ್ ವಿಂಗ್ ಪಾಲಿಟಿಕ್ಸ್ ವಿರೋಧ ಮಾಡಿಕೊಂಡು ಬಂದವನು ಆ ವ್ಯಕ್ತಿ. ಹೀಗಾಗಿ ನನ್ನನ್ನ ಟಾರ್ಗೆಟ್ ಮಾಡಿ ಆರೋಪ ಮಾಡಲಾಗಿದೆ. ಆರಂಭದಲ್ಲಿ ಸಿಂಪಲ್ ವಿಚಾರ ಮಾತನಾಡಬಾರದು ಅಂದುಕೊಂಡಿದ್ದೆ, ಆದ್ರೆ ದಿನೇ ದಿನೇ ನನ್ನ ಹೆಸರು ಕೆಡಿಸುವ ಕೆಲಸ ಆಗ್ತಿದೆ. ಆದ್ದರಿಂದ ಕೇಸ್‌ ದಾಖಲಿಸಿದ್ದೇನೆ. ದೆಹಲಿಯಲ್ಲಿ ನನಗೆ ಇನ್ನೂ ಮನೆ ಕೊಟ್ಟಿಲ್ಲ ಈ ಸರ್ಕಾರ. ಆ ಬರುಡೆ ಎಲ್ಲಿಂದ ಬಂತು, ಎಲ್ಲಿ ಸಿಗ್ತು ಅಂತಾನೂ ನನಗೆ ಗೊತ್ತಿಲ್ಲ ಎಂದಿದ್ದಾರೆ.

    ಜನಾರ್ಧನ ರೆಡ್ಡಿ ಆರೋಪ ಏನು?
    ಮಾಜಿ ಐಎಎಸ್‌ ಅಧಿಕಾರಿ, ತಮಿಳುನಾಡಿನ ಕಾಂಗ್ರೆಸ್‌ ಸಂಸದ ಸಸಿಕಾಂತ್‌ ಸೆಂಥಿಲ್ ಮಾಸ್ಕ್‌ಮ್ಯಾನ್‌ಗೆ ಬುರುಡೆ ಕೊಟ್ಟು ಕಳುಹಿಸಿದ್ದಾರೆ ಎಂದು ಜನಾರ್ದನ ರೆಡ್ಡಿ ಗಂಭೀರ ಆರೋಪಿಸಿದ್ದರು. ಇದನ್ನೂ ಓದಿ: ಹೆಗ್ಗಡೆ ವಿರುದ್ಧ ಅಪಪ್ರಚಾರಕ್ಕೆ ಕೊಡಗಿನಲ್ಲೂ ನಡೆದಿತ್ತು ಹುನ್ನಾರ – ರೆಡಿಮೇಡ್ ದೂರಿನ ಪ್ರತಿ ನೀಡಿದ್ದ ಬುರುಡೆ ಗ್ಯಾಂಗ್‌

  • ಧರ್ಮಸ್ಥಳ ವಿರುದ್ಧ ಷಡ್ಯಂತ್ರಕ್ಕೆ ವಿದೇಶದಿಂದ ಫಂಡಿಂಗ್‌ – ಭರತ್ ಶೆಟ್ಟಿ ಬಾಂಬ್‌

    ಧರ್ಮಸ್ಥಳ ವಿರುದ್ಧ ಷಡ್ಯಂತ್ರಕ್ಕೆ ವಿದೇಶದಿಂದ ಫಂಡಿಂಗ್‌ – ಭರತ್ ಶೆಟ್ಟಿ ಬಾಂಬ್‌

    – ಸೌಜನ್ಯ ಪ್ರಕರಣ ಮರು ತನಿಖೆಯಾಗಲಿ ಎಂದ ಬಿಜೆಪಿ ಶಾಸಕ

    ಬೆಂಗಳೂರು: ಧರ್ಮಸ್ಥಳ (Dharmasthala) ವಿರುದ್ಧ ಷಡ್ಯಂತ್ರಕ್ಕೆ ವಿದೇಶಿ ಹಣ ಬಳಕೆ ಆಗಿದೆ ಅನ್ನೋದು ನಮ್ಮ ಗುಮಾನಿ ಎಂದು ಶಾಸಕ ಡಾ.ಭರತ್ ಶೆಟ್ಟಿ (Bharath Shetty) ಹೇಳಿದ್ದಾರೆ.

    ವಿಧಾನಸೌಧ ಆವರಣದಲ್ಲಿ ʻಪಬ್ಲಿಕ್‌ ಟಿವಿʼ (Public TV- ಜೊತೆಗೆ ಮಾತನಾಡಿದ ಅವರು, ಇಡಿ ಅಥವಾ ಎನ್‌ಐಎ ತನಿಖೆಗೆ ಸಾಕಷ್ಟು ಒತ್ತಾಯ ಕೇಳಿಬರ್ತಿದೆ. ನಮ್ಮ ಕೋಟಾ ಶ್ರೀನಿವಾಸ ಪೂಜಾರಿ ಕೇಂದ್ರಕ್ಕೆ ಪತ್ರ ಬರೆದಿದ್ದಾರೆ. ಧರ್ಮಸ್ಥಳ ವಿರುದ್ಧ ಷಡ್ಯಂತ್ರಕ್ಕೆ ವಿದೇಶಿ ಹಣ (Foreign Fund) ಬಳಕೆ ಆಗಿದೆ ಅನ್ನೋದು ನಮ್ಮ ಗುಮಾನಿ. ಕೆಲವು ನಂಬಲರ್ಹ ಮೂಲಗಳಿಂದ ಫಾರಿನ್ ಫಂಡ್ ಬಂದಿದೆ ಅಂತ ನಮಗೆ ಮಾಹಿತಿ ಬಂದಿದೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಧರ್ಮಸ್ಥಳದಲ್ಲಿ ಶವ ಹೂತಿಟ್ಟ ಪ್ರಕರಣ – ʻಕೈʼ ಸಂಸದ ಸಸಿಕಾಂತ್ ಸೆಂಥಿಲ್ ಫಸ್ಟ್‌ ರಿಯಾಕ್ಷನ್‌

    ಎನ್ಐಎ (NIA) ಅಥವಾ ಇಡಿ ತನಿಖೆಯಾದ್ರೆ ಯಾರೆಲ್ಲರ ಬ್ಯಾಂಕ್ ಖಾತೆಗಳಿಗೆ ಎಷ್ಟೆಲ್ಲ ಹಣ ಎಲ್ಲೆಲ್ಲಿಂದ ಬಂದಿದೆ ಅನ್ನೋದು ಗೊತ್ತಾಗುತ್ತೆ. ಈಗಾಗಲೇ ಷಡ್ಯಂತ್ರ ಇದೆ ಅಂತ ನಾವೂ ಹೇಳ್ತಿದೀವಿ, ಕಾಂಗ್ರೆಸ್‌ನವ್ರೂ ಹೇಳ್ತಿದ್ದಾರೆ. ಆದ್ದರಿಂದ ಇಡಿ ಅಥವಾ ಎನ್‌ಐಎ ತನಿಖೆಗೆ ಕೊಡಲಿ ಎಂದು ಹೇಳಿದ್ದಾರೆ. ಇದನ್ನೂ ಓದಿ: ಬಿಎಂಟಿಸಿ ಬಸ್ಸು ಹತ್ತುವ ವೇಳೆ ಬಾಗಿಲು ಬಂದ್‌- ಚಕ್ರಕ್ಕೆ ಸಿಲುಕಿ ಪ್ರಯಾಣಿಕ ಸಾವು

    ಇನ್ನೂ ಸೌಜನ್ಯ ಪ್ರಕರಣದಲ್ಲೂ ನ್ಯಾಯ ಸಿಗಬೇಕು. ಕೆಲವರು ಸೌಜನ್ಯ ಹತ್ಯೆ ಬಗ್ಗೆ ದಾಖಲೆ ಇದೆ, ಅಂತಾರಲ್ಲ ಅವರು ಎಸ್ಐಟಿಗೆ ಅದನ್ನು ಕೊಡಲಿ. ಎಸ್ಐಟಿ ಅವರಿಗೆ ಸೌಜನ್ಯ ಕೇಸ್ ತನಿಖೆ ಮಾಡಲು ಅವಕಾಶ ಇದ್ರೆ ತನಿಖೆ ಮಾಡಲಿ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಅನಾಮಿಕ ವ್ಯಕ್ತಿಯ ಮಂಪರು ಪರೀಕ್ಷೆ ಆಗದೇ ತಿಮರೋಡಿ ಬಂಧನವಾಗದೇ ತನಿಖೆ ನಡೆಯಬಾರದು: ಮಾಜಿ ಸಚಿವ ಅಭಯಚಂದ್ರ ಜೈನ್

    ನ್ನೂ ಧರ್ಮಸ್ಥಳ ಪ್ರಕರಣದಲ್ಲಿ ಸಂಸದ ಸಸಿಕಾಂತ್ ಸೆಂಥಿಲ್ ಹೆಸರೂ ಇದರಲ್ಲಿ ಕೇಳಿಬರ್ತಿದೆ. ಸೆಂಥಿಲ್, ಸ್ಟಾಲಿನ್ ಅವರಿಗೆ ಮೆಸೇಂಜರ್ ಆಗಿದ್ದಾರೆ. ಅವರು ಹಿಂದೂ ಧರ್ಮದ ವಿರುದ್ಧ ಹಲವು ಕಡೆ ಭಾಷಣ ಮಾಡಿದ್ದಾರೆ. ಧರ್ಮಸ್ಥಳ ವಿಚಾರದಲ್ಲೂ ಅವರ ಪಾತ್ರ ಇರುವ ಅನುಮಾನ ಇದೆ. ಎನ್ಐಎ ತನಿಖೆ ನಡೆದರೆ ಈ ವಿಚಾರವನ್ನೂ ತನಿಖೆ ಮಾಡಲಿ ಎಂದು ಆಗ್ರಹಿಸಿದ್ದಾರೆ.   

  • ಧರ್ಮಸ್ಥಳದಲ್ಲಿ ಶವ ಹೂತಿಟ್ಟ ಪ್ರಕರಣ – ʻಕೈʼ ಸಂಸದ ಸಸಿಕಾಂತ್ ಸೆಂಥಿಲ್ ಫಸ್ಟ್‌ ರಿಯಾಕ್ಷನ್‌

    ಧರ್ಮಸ್ಥಳದಲ್ಲಿ ಶವ ಹೂತಿಟ್ಟ ಪ್ರಕರಣ – ʻಕೈʼ ಸಂಸದ ಸಸಿಕಾಂತ್ ಸೆಂಥಿಲ್ ಫಸ್ಟ್‌ ರಿಯಾಕ್ಷನ್‌

    – ರೆಡ್ಡಿ ಕೃತ್ಯಗಳನ್ನ ಬಯಲಿಗೆಳೆದಿದ್ದಕ್ಕೆ ನನ್ನ ವಿರುದ್ಧ ಆರೋಪ ಎಂದ ಸಂಸದ
    – ʻವೋಟ್ ಚೋರಿʼ ಪ್ರಕರಣದ ಗಮನ ಬೇರೆಡೆಗೆ ಸೆಳೆಯಲು ಬಿಜೆಪಿ ಯತ್ನ

    ನವದೆಹಲಿ: ಧರ್ಮಸ್ಥಳದಲ್ಲಿ ನೂರಾರು ಶವಗಳನ್ನು ಹೂತಿಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ತಮಿಳುನಾಡಿನ ಕಾಂಗ್ರೆಸ್‌ ಸಂಸದ ಸಸಿಕಾಂತ್ ಸೆಂಥಿಲ್ (Sasikanth Senthil) ಮೊದಲ ಪ್ರತಿಕ್ರಿಯೆ ನೀಡಿದ್ದಾರೆ.

    ಮಾಸ್ಕ್‌ಮ್ಯಾನ್‌ಗೆ ಬುರುಡೆ ಕೊಟ್ಟಿದ್ದೇ ಕೈ ಸಂಸದ ಸಸಿಕಾಂತ್‌ ಸೆಂಥಿಲ್ ಎಂಬ ಶಾಸಕ ಜನಾರ್ದನ ರೆಡ್ಡಿ (Janardhana Reddy) ಆರೋಪಕ್ಕೆ ಅವರು ಪ್ರತಿಕ್ರಿಯೆ ನೀಡಿದ್ದಾರೆ. ಇದನ್ನೂ ಓದಿ: ಮಾಸ್ಕ್‌ಮ್ಯಾನ್‌ಗೆ ಬುರುಡೆ ಕೊಟ್ಟಿದ್ದೇ ಕೈ ಸಂಸದ ಸಸಿಕಾಂತ್‌ ಸೆಂಥಿಲ್: ಜನಾರ್ದನ ರೆಡ್ಡಿ

    Janardhana Reddy

    ದೆಹಲಿಯಲ್ಲಿ ʻಪಬ್ಲಿಕ್‌ ಟಿವಿ; ಜೊತೆಗೆ ಮಾತನಾಡಿರುವ ಸೆಂಥಿಲ್, ಜನಾರ್ದನ ರೆಡ್ಡಿ ಹೇಳಿಕೆಗಳು ಆಧಾರ ರಹಿತ, ಅದರಲ್ಲಿ ಯಾವುದೇ ಸತ್ಯವಿಲ್ಲ. ಬಳ್ಳಾರಿಯಲ್ಲಿ ನಾನು ಸಹಾಯಕ ಆಯುಕ್ತನಾಗಿದ್ದಾಗ ಅವರ ಅಪರಾಧಗಳನ್ನ ಬಹಿರಂಗಪಡಿಸುವಲ್ಲಿ ಪ್ರಮುಖ ಪಾತ್ರ ವಹಿಸಿದ್ದೇನೆ. ನನ್ನ ಕೆಲಸದ ಭಾಗವಾಗಿ ನಾನು ಇದನ್ನು ಮಾಡಿದ್ದೇನೆ. ಬಹುಶಃ ಆ ಕಾರಣಗಳಿಂದ ನನ್ನ ಮೇಲೆ ಈ ಆರೋಪ ಮಾಡಿರಬಹುದು. ಇದನ್ನ ಹೊರತುಪಡಿಸಿ ಇದು ಬಿಜೆಪಿಯ ಹತಾಶ ರಾಜಕೀಯವಾಗಿರಬಹುದು ಎಂದು ತಿರುಗೇಟು ನೀಡಿದ್ದಾರೆ.

    ಇತ್ತಿಚೇಗೆ ಕರ್ನಾಟಕದಲ್ಲಿ ಹೊರ ಬಂದ ʻವೋಟ್ ಚೋರಿʼ ಪ್ರಕರಣದ ಗಮನವನ್ನ ಬೇರೆಡೆ ಸೆಳೆಯುವ ಪ್ರಯತ್ನಕ್ಕಾಗಿ ರೆಡ್ಡಿ ಆರೋಪ ಮಾಡಿರಬಹುದು. ವದಂತಿಗೆ ನಾನು ಹೆಚ್ಚು ಪ್ರತಿಕ್ರಿಯೆ ನೀಡುವುದಿಲ್ಲ ಎಂದು ಹೇಳಿದ್ದಾರೆ. ಇದನ್ನೂ ಓದಿ: ಸಚಿವ ಸೆಂಥಿಲ್‌ ಬಾಲಾಜಿಗೆ ಶೀಘ್ರವೇ ಬೈಪಾಸ್‌ ಸರ್ಜರಿ ಅಗತ್ಯ – ಇಡಿ ಅರೆಸ್ಟ್‌ ಬೆನ್ನಲ್ಲೇ ವೈದ್ಯರ ಸಲಹೆ

    ಜನಾರ್ಧನ ರೆಡ್ಡಿ ಆರೋಪಗಳೇನು?
    ಮಾಜಿ ಐಎಎಸ್‌ ಅಧಿಕಾರಿ, ತಮಿಳುನಾಡಿನ ಕಾಂಗ್ರೆಸ್‌ ಸಂಸದ ಸಸಿಕಾಂತ್‌ ಸೆಂಥಿಲ್ ಮಾಸ್ಕ್‌ಮ್ಯಾನ್‌ಗೆ ಬುರುಡೆ ಕೊಟ್ಟು ಕಳುಹಿಸಿದ್ದಾರೆ ಎಂದು ಜನಾರ್ದನ ರೆಡ್ಡಿ ಗಂಭೀರ ಆರೋಪಿಸಿದ್ದರು.

    ಕಳೆದ 15-20 ದಿನದಿಂದ ಧರ್ಮಸ್ಥಳದ ವಿಚಾರದಲ್ಲಿ ಸಾಕಷ್ಟು ಅಪಪ್ರಚಾರ ನಡೆಯುತ್ತಿದೆ. ಬಳ್ಳಾರಿ ಮೂಲದ ಅನ್ಯಮತಿಯ ಯುಟ್ಯೂಬರ್ ಒಬ್ಬ ಸೌಜನ್ಯ ಪ್ರಕರಣದ ಬಗ್ಗೆ ಮಾತನಾಡಿದ ವಿಡಿಯೋಗೆ ಮಿಲಿಯನ್ಸ್ ವ್ಯೂವ್ಸ್ ಬಂತು. ಆಗ ಎಡ ಪಂತಿಯ ಮೂವರು ಸೇರಿಕೊಂಡು ಇದನ್ನ ದೊಡ್ಡ ಮಟ್ಟಕ್ಕೆ ಕೊಂಡೊಯ್ಯಲು ಮುಂದಾದರು. ಕರ್ನಾಟಕ, ಭಾರತ ಅಷ್ಟೇ ಅಲ್ಲ ಈ ಜಗತ್ತಿನಲ್ಲಿ ಕೋಟ್ಯಂತರ ಜನ ನಂಬುವ ಸತ್ಯ ದೇವರು ಧರ್ಮಸ್ಥಳ. ಇಂತಹ ಧರ್ಮಸ್ಥಳದ ಬಗ್ಗೆ ಎಡಪಂತಿಯರು ಸಸಿಕಾಂತ್‌ ಸೆಂಥಿಲ್ ಕಾಂಗ್ರೆಸ್ ಹೈಕಮಾಂಡ್ ಮೇಲೆ ಒತ್ತಡ ತಂದಿದ್ದಾರೆ. ಹೈಕಮಾಂಡ್ ಸರ್ಕಾರಕ್ಕೆ ಒತ್ತಡ ಹಾಕಿದ್ದರಿಂದ ವಿಶೇಷ ತನಿಖಾ ತಂಡ ರಚನೆಯಾಗಿದೆ. ಧರ್ಮಸ್ಥಳ ಬುರುಡೆ ರಹಸ್ಯದ ಮಾಸ್ಟರ್‌ ಮೈಂಡ್‌ ಸೆಂಥಿಲ್‌.

    ಹೈಕಮಾಂಡ್ ಸೂಚನೆಯಿಂದ ಕಾಂಗ್ರೆಸ್ ಸರ್ಕಾರ ಈಗ ಟ್ರ್ಯಾಪ್‌ನಲ್ಲಿ ಸಿಲುಕಿದೆ. ಅಭಿಮನ್ಯು ಚಕ್ರವ್ಯೂಹದಲ್ಲಿ ಸಿಲುಕಿದಂತೆ ಎಸ್‌ಐಟಿ ತನಿಖೆ ಮೂಲಕ ಚಕ್ರವ್ಯೂಹದಲ್ಲಿ ಸಿಲುಕಿದೆ. ಷಡ್ಯಂತ್ರ ನಡೆದಿದೆ ಎಂದು ಡಿಸಿಎಂ ಡಿಕೆ ಶಿವಕುಮಾರ್‌ ಅವರೇ ಹೇಳಿದ್ದಾರೆ. ಧರ್ಮಸ್ಥಳದ ವಿರುದ್ಧ ವ್ಯವಸ್ಥಿತವಾದ ಈ ಅಪಪ್ರಚಾರ ನಡೆದಿದೆ ಎಂದು ದೂರಿದ್ದರು. ಇದನ್ನೂ ಓದಿ: ಬುರುಡೆ ಕೇಸ್‌ ಹಿಂದೆ ಕೈ ಸಂಸದ ಶಶಿಕಾಂತ್‌ ಸೆಂಥಿಲ್‌ ಇದ್ದಾರೆ: ಯಶ್‌ಪಾಲ್‌ ಸುವರ್ಣ

  • ಮಾಸ್ಕ್‌ಮ್ಯಾನ್‌ಗೆ ಬುರುಡೆ ಕೊಟ್ಟಿದ್ದೇ ಕೈ ಸಂಸದ  ಸಸಿಕಾಂತ್‌ ಸೆಂಥಿಲ್: ಜನಾರ್ದನ ರೆಡ್ಡಿ

    ಮಾಸ್ಕ್‌ಮ್ಯಾನ್‌ಗೆ ಬುರುಡೆ ಕೊಟ್ಟಿದ್ದೇ ಕೈ ಸಂಸದ ಸಸಿಕಾಂತ್‌ ಸೆಂಥಿಲ್: ಜನಾರ್ದನ ರೆಡ್ಡಿ

    – ಇಡೀ ಪ್ರಕರಣದ ಮಾಸ್ಟರ್‌ ಮೈಂಡ್‌ ಕೈ ಸಂಸದ

    ಬೆಂಗಳೂರು: ಮಾಜಿ ಐಎಎಸ್‌ ಅಧಿಕಾರಿ, ತಮಿಳುನಾಡಿನ ಕಾಂಗ್ರೆಸ್‌ ಸಂಸದ ಸಸಿಕಾಂತ್‌ ಸೆಂಥಿಲ್ (Sasikanth Senthil) ಮಾಸ್ಕ್‌ಮ್ಯಾನ್‌ಗೆ (Maskman) ಬುರುಡೆ (Skull) ಕೊಟ್ಟು ಕಳುಹಿಸಿದ್ದಾರೆ ಎಂದು ಮಾಜಿ ಸಚಿವ, ಹಾಲಿ ಶಾಸಕ ಜನಾರ್ದನ ರೆಡ್ಡಿ (Janardhana Reddy) ಗಂಭೀರ ಆರೋಪ ಮಾಡಿದ್ದಾರೆ.

    ಪಬ್ಲಿಕ್‌ ಟಿವಿ ಜೊತೆ ಮಾತನಾಡಿದ ಅವರು, ಕಳೆದ 15-20 ದಿನದಿಂದ ಧರ್ಮಸ್ಥಳದ ವಿಚಾರದಲ್ಲಿ ಸಾಕಷ್ಟು ಅಪಪ್ರಚಾರ ನಡೆಯುತ್ತಿದೆ. ಬಳ್ಳಾರಿ ಮೂಲದ ಅನ್ಯಮತಿಯ ಯುಟ್ಯೂಬರ್ ಒಬ್ಬ ಸೌಜನ್ಯ ಪ್ರಕರಣದ ಬಗ್ಗೆ ಮಾತನಾಡಿದ ವಿಡಿಯೋಗೆ ಮಿಲಿಯನ್ಸ್ ವ್ಯೂವ್ಸ್ ಬಂತು. ಆಗ ಎಡ ಪಂತಿಯ ಮೂವರು ಸೇರಿಕೊಂಡು ಇದನ್ನ ದೊಡ್ಡ ಮಟ್ಟಕ್ಕೆ ಕೊಂಡೊಯ್ಯಲು ಮುಂದಾದರು ಎಂದು ಹೇಳಿದರು. ಇದನ್ನೂ ಓದಿ: ಧರ್ಮಸ್ಥಳ ಬುರುಡೆ ಕೇಸ್‌| ಯಾರದ್ದೋ ಫೋಟೋ ತೋರಿಸಿ ಪುತ್ರಿ ಎಂದು ಸುಳ್ಳು ಹೇಳಿದ ಸುಜಾತ ಭಟ್‌!

     

    ಕರ್ನಾಟಕ, ಭಾರತ ಅಷ್ಟೇ ಅಲ್ಲ ಈ ಜಗತ್ತಿನಲ್ಲಿ ಕೋಟ್ಯಂತರ ಜನ ನಂಬುವ ಸತ್ಯ ದೇವರು ಧರ್ಮಸ್ಥಳ. ಇಂತಹ ಧರ್ಮಸ್ಥಳದ ಬಗ್ಗೆ ಎಡಪಂತಿಯರು ಸಸಿಕಾಂತ್‌ ಸೆಂಥಿಲ್ ಕಾಂಗ್ರೆಸ್ ಹೈಕಮಾಂಡ್ ಮೇಲೆ ಒತ್ತಡ ತಂದಿದ್ದಾರೆ. ಹೈಕಮಾಂಡ್ ಸರ್ಕಾರಕ್ಕೆ ಒತ್ತಡ ಹಾಕಿದ್ದರಿಂದ ವಿಶೇಷ ತನಿಖಾ ತಂಡ ರಚನೆಯಾಗಿದೆ. ಧರ್ಮಸ್ಥಳ ಬುರುಡೆ ರಹಸ್ಯದ ಮಾಸ್ಟರ್‌ ಮೈಂಡ್‌ ಸೆಂಥಿಲ್‌ ಎಂದಿದ್ದಾರೆ.

    ಹೈಕಮಾಂಡ್ ಸೂಚನೆಯಿಂದ ಕಾಂಗ್ರೆಸ್ ಸರ್ಕಾರ ಈಗ ಟ್ರ್ಯಾಪ್‌ನಲ್ಲಿ ಸಿಲುಕಿದೆ. ಅಭಿಮನ್ಯು ಚಕ್ರವ್ಯೂಹದಲ್ಲಿ ಸಿಲುಕಿದಂತೆ ಎಸ್‌ಐಟಿ ತನಿಖೆ ಮೂಲಕ ಚಕ್ರವ್ಯೂಹದಲ್ಲಿ ಸಿಲುಕಿದೆ. ಷಡ್ಯಂತ್ರ ನಡೆದಿದೆ ಎಂದು ಡಿಸಿಎಂ ಡಿಕೆ ಶಿವಕುಮಾರ್‌ ಅವರೇ ಹೇಳಿದ್ದಾರೆ. ಧರ್ಮಸ್ಥಳದ ವಿರುದ್ಧ ವ್ಯವಸ್ಥಿತವಾದ ಈ ಅಪಪ್ರಚಾರ ನಡೆದಿದೆ ಎಂದು ಹೇಳಿದರು.

    ಈ ಪ್ರಕರಣ ಸಿಬಿಐ, ಎನ್‌ಐಎ ತನಿಖೆ ನಡೆಸಬೇಕು. ಇಲ್ಲದೇ ಇದ್ದರೆ ಹೈಕೋರ್ಟ್ ಅಥವಾ ಸುಪ್ರಿಂ ಕೋರ್ಟ್ ಜಡ್ಜ್ ಮೂಲಕ ತನಿಖೆ ಆಗಬೇಕು. ಸರ್ಕಾರ ನಿರ್ಧಾರ ಮಾಡದೇ ಇದ್ದರೆ ನಾನೇ ಇದರ ವಿರುದ್ದ ಕೋರ್ಟ್ ಗೆ ಹೋಗಲು ನಿರ್ಧರಿಸಿದ್ದೇನೆ ಎಂದರು.

  • ಬುರುಡೆ ಕೇಸ್‌ ಹಿಂದೆ ಕೈ ಸಂಸದ ಶಶಿಕಾಂತ್‌ ಸೆಂಥಿಲ್‌ ಇದ್ದಾರೆ: ಯಶ್‌ಪಾಲ್‌ ಸುವರ್ಣ

    ಬುರುಡೆ ಕೇಸ್‌ ಹಿಂದೆ ಕೈ ಸಂಸದ ಶಶಿಕಾಂತ್‌ ಸೆಂಥಿಲ್‌ ಇದ್ದಾರೆ: ಯಶ್‌ಪಾಲ್‌ ಸುವರ್ಣ

    ಮಂಗಳೂರು: ಧರ್ಮಸ್ಥಳದ ಬುರುಡೆ ಪ್ರಕರಣದ (Dharmasthala Mass Burial Case) ಅನಾಮಿಕನ ಹಿಂದೆ ಕಾಂಗ್ರೆಸ್‌ ಸಂಸದ ಶಶಿಕಾಂತ್‌ ಸೆಂಥಿಲ್‌ (Sasikanth Senthil) ಇದ್ದಾರೆ ಎಂದು ಉಡುಪಿಯ ಬಿಜೆಪಿ ಶಾಸಕ ಯಶ್‌ಪಾಲ್‌ ಸುವರ್ಣ (Yashpal Suvarna) ಸ್ಫೋಟಕ ಆರೋಪ ಮಾಡಿದ್ದಾರೆ.

    ಧರ್ಮಸ್ಥಳ ದೇವಸ್ಥಾನಕ್ಕೆ (Dharmasthala) ಭೇಟಿ ನೀಡಿ ಪಬ್ಲಿಕ್‌ ಟಿವಿ ಜೊತೆ ಮಾತನಾಡಿದ ಅವರು, ಈ ಷಡ್ಯಂತ್ರ ಮಾಡಿದವರ ಮೂಲಕ್ಕೆ ಹೋಗಬೇಕು. ದಕ್ಷಿಣ ಕನ್ನಡದ ಮಾಜಿ ಜಿಲ್ಲಾಧಿಕಾರಿ ಶಶಿಕಾಂತ್‌ ಸೆಂಥಿಲ್‌ ಅವರನ್ನು ತನಿಖೆಗೆ ಒಳಪಡಿಸಿದರೆ ಸತ್ಯ ಸಂಗತಿ ಬಯಲಾಗಲಿದೆ ಎಂದು ಹೇಳಿದರು.  ಇದನ್ನೂ ಓದಿ: ಎಡಪಂಥೀಯರನ್ನ ಕೇಳಿ ತನಿಖೆಗೆ ಕೊಟ್ಟಿದ್ದಾರೆ, ಸಿಎಂ ರಾಜ್ಯದ ಜನರ ಕ್ಷಮೆ ಕೇಳಬೇಕು: ವಿಜಯೇಂದ್ರ ಕಿಡಿ

     

    ಅಂದು ಬ್ರಿಟಿಷರು ಬಂದು ಹಿಂದೂಗಳನ್ನು ಒಡೆದು ಆಳಿದ್ದರು. ಈಗ ಕಮ್ಯೂನಿಸ್ಟರು ಹಿಂದೂ ಸಮಾಜದ ಒಳಗೆ ವಿಷ ಬೀಜ ಬಿತ್ತುವ ಕೆಲಸ ಮಾಡುತ್ತಿದ್ದಾರೆ. ದಬ್ಬಾಳಿಕೆ ಮಾಡಿ ಹಿಂದೂಗಳನ್ನು ಒಡೆಯಲು ಮುಂದಾಗುತ್ತಿದ್ದಾರೆ ಎಂದರು.

    ದೇವರ ಸ್ಮರಣೆಯಿಂದ ನಮ್ಮ ದಿನ ಆರಂಭವಾಗುತ್ತದೆ. ಮತ ಬ್ಯಾಂಕ್‌ಗಾಗಿ ಕಾಂಗ್ರೆಸ್‌ ರಾಜಕೀಯ ಮಾಡುತ್ತಿದೆ. ಈ ಷಡ್ಯಂತ್ರಕ್ಕೆ ಮುಂದಿನ ದಿನಗಳಲ್ಲಿ ಜನರು ತಕ್ಕ ಉತ್ತರ ನೀಡಲಿದ್ದಾರೆ ಎಂದು ತಿಳಿಸಿದರು.  ಇದನ್ನೂ ಓದಿ: ಧರ್ಮಸ್ಥಳ ಕ್ಷೇತ್ರದ ಅಪಪ್ರಚಾರದ ಹಿಂದೆ ಮತಾಂತರ ಮಾಫಿಯಾ: ಸಿ.ಟಿ ರವಿ

    ಗೃಹ ಸಚಿವರು ಸದನದಲ್ಲಿ ರಾಜಕೀಯವನ್ನು ಬಿಟ್ಟು ಸರಿಯಾದ ಉತ್ತರ ನೀಡಲಿ. ಧರ್ಮದ ವಿರುದ್ಧದ ಅವಹೇಳನ, ಷಡ್ಯಂತ್ರವನ್ನು ನಾವು ಸಹಿಸುವುದಿಲ್ಲ. ಮಂಜುನಾಥ ಸ್ವಾಮಿ ಎಲ್ಲಾ ಷಡ್ಯತ್ರಗಳಿಗೆ ಉತ್ತರ ಕೊಡುತ್ತಾನೆ ಎಂದು ಹೇಳಿದರು.

  • ಎನ್‌ಆರ್‌ಸಿ, ಎನ್‌ಪಿಆರ್‌ಗೆ ದಾಖಲೆ, ಮಾಹಿತಿ ನೀಡಬೇಡಿ- ಸಸಿಕಾಂತ್ ಸೆಂಥಿಲ್

    ಎನ್‌ಆರ್‌ಸಿ, ಎನ್‌ಪಿಆರ್‌ಗೆ ದಾಖಲೆ, ಮಾಹಿತಿ ನೀಡಬೇಡಿ- ಸಸಿಕಾಂತ್ ಸೆಂಥಿಲ್

    – ಮೋದಿ ತುಘಲಕ್ ಸರ್ಕಾರ ನಡೆಸ್ತಿದ್ದಾರೆ

    ಚಿಕ್ಕಬಳ್ಳಾಪುರ: ಸಿಎಎ, ಎನ್‌ಆರ್‌ಸಿ ಹಾಗೂ ಎನ್‍ಪಿಆರ್ ಗಳ ಬಗ್ಗೆ ಪ್ರತಿಯೊಬ್ಬರಿಗೂ ಅರಿವು ಮೂಡಿಸಿ, ಸರ್ವೆ ಮಾಡಲು ಬಂದಾಗ ಅಧಿಕಾರಿಗಳಿಗೆ ಯಾವುದೇ ಮಾಹಿತಿ ನೀಡಬೇಡಿ. ಒಂದು ವೇಳೆ ನೀಡಿದರೆ ನಿಮ್ಮ ಅಸ್ತಿತ್ವವನ್ನು ಕಳೆದುಕೊಳ್ಳುತ್ತಿರಿ ಎಂದು ಸ್ವಯಂ ನಿವೃತ್ತಿ ಹೊಂದಿರುವ ಐಎಎಸ್ ಅಧಿಕಾರಿ ಸಸಿಕಾಂತ್ ಸೆಂಥಿಲ್ ತಿಳಿಸಿದರು.

    ಸಿಎಎ ಹಾಗೂ ಎನ್‌ಆರ್‌ಸಿ ವಿರೋಧಿಸಿ ಚಿಂತಾಮಣಿ ನಗರದಲ್ಲಿ ಪ್ರಗತಿಪರ ಓಕ್ಕೂಟಗಳ ನೇತೃತ್ವದಲ್ಲಿ ಕಪ್ಪುಪಟ್ಟಿ ಧರಿಸಿ ಮೌನ ಪ್ರತಿಭಟನೆ ನಡೆಸಲಾಯಿತು. ಮೌನ ಪ್ರತಿಭಟನಾ ರ‍್ಯಾಲಿ  ನಡೆಸಿ ನಂತರ ನಡೆದ ವಿಚಾರ ಸಂಕಿರಣದಲ್ಲಿ ಸೆಂಥಿಲ್ ಮಾತನಾಡಿದರು. ಅಧಿಕಾರಿಗಳು ಮಾಹಿತಿ ಕೇಳಲು ಬಂದರೆ ನಾವು ಮಾಹಿತಿ ನೀಡುವುದಿಲ್ಲವೆಂದು ವಾಪಸ್ ಕಳುಹಿಸಿ. ದೇಶದ 11 ರಾಜ್ಯಗಳು ಈ ಕಾಯ್ದೆಗಳನ್ನು ಜಾರಿ ಮಾಡಲ್ಲವೆಂದು ತಿಳಿಸಿವೆ. 2 ರಾಜ್ಯಗಳು ಇವುಗಳ ವಿರುದ್ಧ ರೆಗ್ಯುಲೇಷನ್ ಪಾಸ್ ಮಾಡಿವೆ. ನಾವು ಸಹ ಆ ಮಾರ್ಗದಲ್ಲಿಯೇ ಈ ಕಾಯ್ದೆಗಳನ್ನು ತಿರಸ್ಕರಿಸಬೇಕು ಎಂದರು.

    ಇದು ದೇಶದ ಸಮಸ್ಯೆಯಲ್ಲ, ನಮ್ಮ ನಿಮ್ಮ ಮನೆಯ ಸಮಸ್ಯೆ, ಇಂತಹ ಕಾಯ್ದೆಗಳನ್ನು ತಿರಸ್ಕರಿಸದೆ ಇವರನ್ನು ಹೀಗೆಯೇ ಬಿಟ್ಟರೆ ದೇಶವನ್ನು ಮಾರಿಬಿಡುತ್ತಾರೆ. ಆದ್ದರಿಂದ ಎಲ್ಲರೂ ಇದನ್ನು ಪ್ರತಿಭಟಿಸಬೇಕು ಎಂದು ತಿಳಿಸಿದರು.

    ನಮ್ಮ ದೇಶ ಸೆಕ್ಯೂಲರ್ ಸಿದ್ಧಾಂತ ಇರುವಂತಹದು ಅಂದ ಮಾತ್ರಕ್ಕೆ ಧರ್ಮ ಇಲ್ಲವೆಂದಲ್ಲ. ಆದರೆ ನಮ್ಮ ಸಂವಿಧಾನದ ಕಾಯ್ದೆಗಳನ್ನು ಧರ್ಮದ ಆಧಾರದ ಮೇಲೆ ರೂಪಿಸಬಾರದು, ಎನ್‌ಆರ್‌ಸಿ ಹಾಗೂ ಎನ್‍ಪಿಆರ್ ಗಳು ಅಕ್ರಮ ನುಸುಳುಕೋರರನ್ನು ತಡೆಗಟ್ಟಲು ಮಾತ್ರ. ಆದರೆ ದೇಶದ ಎಲ್ಲರನ್ನೂ ನಿಲ್ಲಿಸಿ ಅವರ ಪೌರತ್ವದ ಬಗ್ಗೆ ಪ್ರಶ್ನೆ ಮಾಡುವುದಲ್ಲ ಎಂದರು.

    ಪ್ರಧಾನಿ ಮೋದಿಯವರು ಒಂದು ರೀತಿಯ ತುಘಲಕ್ ದರ್ಬಾರ್ ನಡೆಸುತ್ತಿದ್ದಾರೆ. ಅವರ ಸುತ್ತಲಿನ ಎಲ್ಲರೂ ಕಳ್ಳರು, ಇದನ್ನು ಯಾರಾದರೂ ಪ್ರಶ್ನೆ ಮಾಡಿದರೆ ಅವರನ್ನು ದೇಶವಿರೋಧಿಗಳು ಎಂದು ಬಿಂಬಿಸುತ್ತಾರೆ. ನೋಟು ಅಮಾನ್ಯೀಕರಣ, ಜಿಎಸ್‍ಟಿ ಮುಂತಾದ ಕೆಲವು ತಪ್ಪು ನಿರ್ಣಯಗಳಿಂದ ದೇಶದ ಆರ್ಥಿಕ ಪರಿಸ್ಥಿತಿ ಶೇ.2ರಷ್ಟು ಕುಸಿದಿದೆ, ಅನೇಕ ಕೈಗಾರಿಕೆಗಳು ಮುಚ್ಚಿವೆ ಎಂದು ಮೋದಿ ವಿರುದ್ಧ ಕಿಡಿಕಾರಿದರು.

  • ಕೇಂದ್ರ ಶಿಕ್ಷಣ ನೀತಿ ಸರಿಯಿಲ್ಲ- ಮಾಜಿ ನಕ್ಸಲನ ಭೇಟಿಗೆ ಬಂದ ಸಸಿಕಾಂತ್ ಸೆಂಥಿಲ್

    ಕೇಂದ್ರ ಶಿಕ್ಷಣ ನೀತಿ ಸರಿಯಿಲ್ಲ- ಮಾಜಿ ನಕ್ಸಲನ ಭೇಟಿಗೆ ಬಂದ ಸಸಿಕಾಂತ್ ಸೆಂಥಿಲ್

    ರಾಯಚೂರು: ಕೇಂದ್ರ ಸರ್ಕಾರ ಜಾರಿಗೊಳಿಸಲು ಹೊರಟಿರುವ ನೂತನ ಶಿಕ್ಷಣ ನೀತಿ ಕೇಂದ್ರೀಕೃತ ಯೋಜನೆಯಾಗಿದೆ ಎಂದು ಐಎಎಸ್ ವೃತ್ತಿಗೆ ರಾಜೀನಾಮೆ ನೀಡಿರುವ ಸಸಿಕಾಂತ್ ಸೆಂಥಿಲ್ ಹೇಳಿದ್ದಾರೆ.

    ರಾಯಚೂರಿನಲ್ಲಿ ಬಂಧನಕ್ಕೊಳಗಾಗಿರುವ ಮಾಜಿ ನಕ್ಸಲ್ ದೊಡ್ಡಿಪಾಳ್ಯ ನರಸಿಂಹ ಮೂರ್ತಿಯನ್ನು ಸಸಿಕಾಂತ್ ಸೆಂಥಿಲ್ ಭೇಟಿ ಮಾಡಲು ಬಂದಿದ್ದರು. ಈ ವೇಳೆ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ತಪ್ಪು ಮಾಹಿತಿಯಿಂದ ನರಸಿಂಹ ಮೂರ್ತಿ ಬಂಧನವಾಗಿದೆ. ಹೀಗಾಗಿ ಅವರನ್ನು ನೋಡಲು ರಾಯಚೂರಿಗೆ ಬಂದಿದ್ದೇನೆ. ನಾನು ಜನರ ಜೊತೆಗೆ ಇರುತ್ತೇನೆ, ಸರ್ಕಾರದ ಹಿಡನ್ ಅಜೆಂಡಾಗಳ ಕುರಿತು ಜನರಿಗೆ ಮಾಹಿತಿ ನೀಡುತ್ತೇನೆ. ನಾನು ಅಧಿಕಾರದಲ್ಲಿ ಇದ್ದಾಗ ಹಲವು ನಕ್ಸಲ್‍ರನ್ನು ಹೊರಗೆ ತರಲು ಕೆಲಸ ಮಾಡಿದ್ದೇನೆ ಎಂದು ತಿಳಿಸಿದರು.

    ಕೇಂದ್ರ ಸರ್ಕಾರದ ಹೊಸ ಶಿಕ್ಷಣ ನೀತಿ ಯೋಜನೆ ಪ್ರಧಾನ ಮಂತ್ರಿಗಳ ಕೈಯಲ್ಲಿ ಇರುವುದರಿಂದ ಹೆಚ್ಚಿನ ಅನುದಾನಕ್ಕೆ ಒತ್ತು ನೀಡಲ್ಲ. ಈ ನೀತಿಯು ಪ್ರಾಥಮಿಕ ಶಿಕ್ಷಣವನ್ನು ಪಡೆಯುವ ವಿದ್ಯಾರ್ಥಿಗಳ ಶೈಕ್ಷಣಿಕ ಹಕ್ಕನ್ನು ಕಸಿದು ಕೊಂಡಂತಾಗುತ್ತದೆ. ಇದರಿಂದ ರಾಷ್ಟ್ರೀಯ ಶಿಕ್ಷಣ ನೀತಿ ಒಕ್ಕೂಟಕ್ಕೆ ಧಕ್ಕೆಯಾಗುತ್ತದೆ ಎಂದು ಅಸಮಧಾನ ವ್ಯಕ್ತಪಡಿಸಿದರು.

    ಕೇಂದ್ರ ಸರ್ಕಾರದ ಈ ನಡೆಯ ಕುರಿತು ಸಾಕಷ್ಟು ಟೀಕೆಗಳು ವ್ಯಕ್ತವಾಗುತ್ತಿದ್ದರೂ ಗಣನೆಗೆ ತೆಗೆದುಕೊಳ್ಳುತ್ತಿಲ್ಲ. ನಾನು ದೇಶದಲ್ಲಿ ಪರಿಸ್ಥಿತಿ ಸರಿ ಇಲ್ಲವೆಂದು ರಾಜೀನಾಮೆ ನೀಡಿದ್ದೇನೆ. ಯಾವುದೇ ಕಾರಣಕ್ಕೂ ಮತ್ತೆ ಕೆಲಸಕ್ಕೆ ಮರಳುವುದಿಲ್ಲ. ಈ ವಿಚಾರ ಈಗಾಗಲೇ ಸರ್ಕಾರದ ಗಮನಕ್ಕೂ ತಂದಿದ್ದೇನೆ ಎಂದು ಸಸಿಕಾಂತ್ ಸೆಂಥಿಲ್ ಸ್ಪಷ್ಟಪಡಿಸಿದರು.

  • ಪಿಒಕೆ ವಶಕ್ಕೆ ಪಡೆಯುತ್ತೇವೆ, ರಾಮಮಂದಿರ ಕಟ್ಟುತ್ತೇವೆ: ಸೆಂಥಿಲ್ ವಿರುದ್ಧ ಸುನೀಲ್ ಕುಮಾರ್ ಕಿಡಿ

    ಪಿಒಕೆ ವಶಕ್ಕೆ ಪಡೆಯುತ್ತೇವೆ, ರಾಮಮಂದಿರ ಕಟ್ಟುತ್ತೇವೆ: ಸೆಂಥಿಲ್ ವಿರುದ್ಧ ಸುನೀಲ್ ಕುಮಾರ್ ಕಿಡಿ

    ಉಡುಪಿ: ಸಂಸದ ಅನಂತ್‍ಕುಮಾರ್ ಹೆಗ್ಡೆ ಬೆನ್ನಲ್ಲೇ ಶಾಸಕ ಸುನೀಲ್ ಕುಮಾರ್ ಅವರು ದಕ್ಷಿಣ ಕನ್ನಡ ಜಿಲ್ಲಾಧಿಕಾರಿಯಾಗಿದ್ದ ಸಸಿಕಾಂತ್ ಸೆಂಥಿಲ್ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

    ನೂತನ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರಿಗೆ ನಗರದಲ್ಲಿ ಅಭಿನಂದನೆ ಸಲ್ಲಿಸಲಾಯಿತು. ಈ ವೇಳೆ ಮಾತನಾಡಿದ ಶಾಸಕರು, ಪ್ರಧಾನಿ ಮೋದಿ ನಿಲುವನ್ನು ವಿರೋಧಿಸಿ ರಾಜೀನಾಮೆ ಕೊಟ್ಟಿದ್ದೀರಿ. ಮುಂದೆ ನಿಮ್ಮಂತವರು ಆತ್ಮಹತ್ಯೆಯನ್ನೂ ಕೂಡ ಮಾಡಿಕೊಳ್ಳಬೇಕಾಗುತ್ತದೆ. ಕಾಶ್ಮೀರ, ರಾಮಮಂದಿರ ವಿಚಾರದಲ್ಲಿ ಸೆಂಥಿಲ್ ಅವರಿಗೆ ಅಸಮಾಧಾನವಂತೆ. ಕೇವಲ 370ನೇ ವಿಧಿ ಅಲ್ಲ, ಪಿಒಕೆ ಒಳಗೆ ಪ್ರವೇಶ ಮಾಡುತ್ತೇವೆ. ರಾಮ ಮಂದಿರವನ್ನೂ ಕಟ್ಟುತ್ತೇವೆ ಎಂದು ಸವಾಲು ಹಾಕಿದರು.

    ಒಬ್ಬ ಜಿಲ್ಲಾಧಿಕಾರಿ ರಾಜೀನಾಮೆ ಕೊಟ್ಟರೆ ನಮ್ಮ ನಿಲುವು ಬದಲಾಗುವುದಿಲ್ಲ. ನೀವು ತಮಿಳುನಾಡಿನಲ್ಲಿ ಯಾವುದೋ ರಾಜಕೀಯ ಪಕ್ಷದಿಂದ ಚುನಾವಣೆಗೆ ನಿಲ್ಲುವುದಕ್ಕಾಗಿ ದೇಶದ ವ್ಯವಸ್ಥೆಯನ್ನು ಪ್ರಶ್ನೆ ಮಾಡಬೇಡಿ. ಕಾಶ್ಮೀರದ ಕುರಿತಂತೆ ರಾಮ ಮಂದಿರದ ಕುರಿತಂತೆ ನಮ್ಮ ಪಕ್ಷದ ನಿಲುವು ಬದಲಾಗುವುದಿಲ್ಲ. ಜಗತ್ತು ಭಾರತದ ಆಡಳಿತವನ್ನು ಒಪ್ಪಿಕೊಳ್ಳುತ್ತೆ. ಭಾರತದ ನಾಗರಿಕರು ಪ್ರಧಾನಿ ನರೇಂದ್ರ ಮೋದಿ ಅವರ ಕೆಲಸ ಮೆಚ್ಚಿದೆ ಎಂದು ಸುನೀಲ್ ಹೇಳಿದರು.

    ಸಂಸದ ಅನಂತ್‍ಕುಮಾರ್ ಹೆಗ್ಡೆ ಅವರು ಸೋಮವಾರ ಟ್ವೀಟ್ ಮೂಲಕ ಸಸಿಕಾಂತ್ ಸೆಂಥಿಲ್ ವಿರುದ್ಧ ವಾಗ್ದಾಳಿ ನಡೆಸಿದ್ದರು. ಕೇಂದ್ರ ಸರ್ಕಾರ ಸಂಸತ್‍ನಲ್ಲಿ ಬಹುಮತದಿಂದ ಕೈಗೊಂಡ ನಿರ್ಧಾರವನ್ನು ಸರ್ಕಾರಿ ಅಧಿಕಾರಿ ಪ್ರಶ್ನಿಸಬಾರದು. ಅಂತಹ ದುಸ್ಸಾಹಸಕ್ಕೆ ಸೆಂಥಿಲ್ ಕೈಹಾಕಿದ್ದಾರೆ. ಇದಕ್ಕಿಂತ ದೊಡ್ಡ ದ್ರೋಹ ಮತ್ತೊಂದಿಲ್ಲ ಎಂದು ಗುಡುಗಿದ್ದರು.

    ಸಂಬಂಧಪಟ್ಟ ಅಧಿಕಾರಿಗಳು ಸಸಿಕಾಂತ್ ಸೆಂಥಿಲ್ ಅವರ ವಿರುದ್ಧ ಕ್ರಮ ಕೈಗೊಳ್ಳಬೇಕು. ರಾಜ್ಯಪಾಲರಿಗೂ ಕ್ರಮಕೈಗೊಳ್ಳುವ ಅಧಿಕಾರವಿದೆ. ಜನರು ಕೂಡ ಇದನ್ನು ಬಯಸುತ್ತಿದ್ದಾರೆ. ಅಭಿವ್ಯಕ್ತಿ ಸ್ವಾತಂತ್ರ್ಯದ ಹೆಸರಿನಲ್ಲಿ ಇಂತಹ ದುಷ್ಕೃತ್ಯ ಎಸಗಿದ್ದಾರೆ. ಇದರ ಹಿಂದೆ ಇರುವ ಕೈಗಳ ಕೈವಾಡ ಬೆಳಕಿಗೆ ಬರಬೇಕು. ಹೀಗಾಗಿ ತನಿಖೆ ಅಗತ್ಯವಾಗಿದೆ ಎಂದು ಒತ್ತಾಯಿಸಿದ್ದರು.

    ಅನಂತ್‍ಕುಮಾರ್ ಹೆಗ್ಡೆ ಅವರು ಭಾನುವಾರ ಸಸಿಕಾಂತ್ ಸೆಂಥಿಲ್ ಅವರ ಪತ್ರಿಕಾ ಹೇಳಿಕೆಯ ತುಣುಕನ್ನು ಟ್ವೀಟ್ ಮಾಡಿ, ಈತ ಮಾಡಬೇಕಾದ ಮೊದಲ ಕೆಲಸವೆಂದರೆ ಕೂಡಲೇ ತನ್ನ ನಿಲುವನ್ನು ಬೆಂಬಲಿಸಿದವರೊಂದಿಗೆ ಪಾಕಿಸ್ತಾನಕ್ಕೆ ವಲಸೆ ಹೋಗುವುದು. ಇದು ಪ್ರಾಯೋಗಿಕವಾಗಿಯೂ ಸುಲಭ ಮತ್ತು ಅಂತಿಮ ಪರಿಹಾರ ಕೂಡ. ಇಲ್ಲೇ ಇದ್ದು ದೇಶ ಒಡೆಯುವ ಬದಲು, ಅಲ್ಲಿಗೆ ಹೋಗಿ ನಮ್ಮ ದೇಶ ಮತ್ತು ನಮ್ಮ ಸರ್ಕಾರದ ವಿರುದ್ಧ ನೇರ ಹೋರಾಟ ಮಾಡುವುದು ಒಳಿತು. ಇದರಲ್ಲಾದರೂ ನಿಯತ್ತು ತೋರಿಸಲಿ ಎಂದು ಹೇಳಿದ್ದರು.