Tag: Satellite Phone

  • ಪಹಲ್ಗಾಮ್‌ ದಾಳಿ| ಚೀನಾ ಲಿಂಕ್‌ ಬಗ್ಗೆ ತನಿಖೆಗೆ ಇಳಿದ ಎನ್‌ಐಎ!

    ಪಹಲ್ಗಾಮ್‌ ದಾಳಿ| ಚೀನಾ ಲಿಂಕ್‌ ಬಗ್ಗೆ ತನಿಖೆಗೆ ಇಳಿದ ಎನ್‌ಐಎ!

    ನವದೆಹಲಿ: ಪಹಲ್ಗಾಮ್ ಬಳಿ ದಾಳಿ (Pahalgam Terror Attack) ನಡೆದ ದಿನ ಅದೇ ಪ್ರದೇಶದಲ್ಲಿ ಮತ್ತು ಅದೇ ಸಮಯದಲ್ಲಿ ಹುವಾವೇ ಉಪಗ್ರಹ ಫೋನೊಂದು (Huawei Satellite Phone) ಸಕ್ರೀಯವಾಗಿದ್ದ ವಿಚಾರ ರಾಷ್ಟ್ರೀಯ ತನಿಖೆ ದಳದ (NIA) ಪ್ರಾಥಮಿಕ ತನಿಖೆಯಿಂದ ಬೆಳಕಿಗೆ ಬಂದಿದೆ.

    ಹೌದು. ಭಾರತದಲ್ಲಿ ಚೀನಾ ನಿರ್ಮಿತ ಹುವಾವೇ ಕಂಪನಿ ಸಾಧನ ಬಳಕೆಗೆ ನಿರ್ಬಂಧ ಇದೆ. ಹೀಗಿದ್ದರೂ ದಾಳಿ ನಡೆದ ಪ್ರದೇಶದಲ್ಲಿ ಏಕೈಕ ಹುವಾವೇ ಸ್ಯಾಟಲೈಟ್‌ ಫೋನ್‌ ಸಕ್ರಿಯವಾಗಿತ್ತು ಎಂಬ ವಿಚಾರ ಎನ್‌ಐಎ ಮೂಲಗಳನ್ನು ಆಧಾರಿಸಿ ಮಾಧ್ಯಮವೊಂದು ವರದಿ ಮಾಡಿದೆ.

    ಹುವಾವೇ ಉಪಗ್ರಹ ಫೋನ್‌ಗಳನ್ನು ಪಾಕಿಸ್ತಾನ (Pakistan) ಅಥವಾ ವಿದೇಶದಿಂದ ಭಾರತಕ್ಕೆ ಕಳ್ಳಸಾಗಣೆ ಮಾಡಿರುವ ಸಾಧ್ಯತೆ ಇದೆ. ಈಗ ಈ ಫೋನಿನ ಮೂಲದ ಬಗ್ಗೆ ಎನ್‌ಐಎ ತನಿಖೆಗೆ ಇಳಿದಿದಿದ್ದು ವಿದೇಶಿ ಸಂಸ್ಥೆಗಳಿಂದ ಸಹಾಯ ಪಡೆಯಲು ಮುಂದಾಗಿದೆ. ಇದನ್ನೂ ಓದಿ: ಪಾಕ್‌ ಮೇಲೆ ಡಿಜಿಟಲ್‌ ಸ್ಟ್ರೈಕ್‌ – ಬಿಬಿಸಿಗೂ ಬಿಸಿ ಮುಟ್ಟಿಸಿದ ಸರ್ಕಾರ

    ಹುವಾವೇ ಕಂಪನಿ ಉಪಗ್ರಹ ಸಂವಹನ ವೈಶಿಷ್ಟ್ಯ ಹೊಂದಿರುವ ಹಲವಾರು ಸ್ಮಾರ್ಟ್‌ಫೋನ್‌ಗಳನ್ನು ತಯಾರಿಸುತ್ತಿದೆ. ಹುವಾವೇ ಮೇಟ್ 60 ಪ್ರೊ, ಪಿ60 ಸರಣಿ ಮತ್ತು ನೋವಾ 11 ಅಲ್ಟ್ರಾ ಸ್ಯಾಟಲೈಟ್‌ ಫೋನ್‌ಗಳಾಗಿವೆ. ಈ ಸಾಧನಗಳನ್ನು ಚೀನಾ ಟೆಲಿಕಾಂ ನಿರ್ವಹಿಸುವ ಚೀನಾದ ಟಿಯಾಂಟಾಂಗ್ -1 ಉಪಗ್ರಹ ನೆಟ್‌ವರ್ಕ್‌ಗೆ ಸಂಪರ್ಕಿಸುವಂತೆ ವಿನ್ಯಾಸಗೊಳಿಸಲಾಗಿದೆ.

    ಈ ಫೋನ್‌ಗಳು ಉಪಗ್ರಹ ಆಂಟೆನಾ ಮತ್ತು ವಿಶೇಷ ಚಿಪ್‌ಗಳನ್ನು ಒಳಗೊಂಡಿರುತ್ತವೆ. ಇದು ಬಾಹ್ಯ ಉಪಕರಣಗಳಿಲ್ಲದೆ ಸಂಪರ್ಕ ಸಾಧಿಸಲು ಅನುವು ಮಾಡಿಕೊಡುತ್ತದೆ. ಸೇವೆಗಳಿಗೆ ಚೀನಾ ಟೆಲಿಕಾಂ ಕಂಪನಿಯ ಸಿಮ್ ಕಾರ್ಡ್‌ಗಳು ಮತ್ತು ಚಂದಾದಾರಿಕೆ ಯೋಜನೆಗಳು ಬೇಕಾಗುತ್ತವೆ. ತುರ್ತು ಬಳಕೆಗಾಗಿ ವಿನ್ಯಾಸಗೊಳಿಸಲಾದ ಈ ಫೋನ್‌ಗಳು ಕಡಿಮೆ-ಬ್ಯಾಂಡ್‌ವಿಡ್ತ್ ಧ್ವನಿ, ಪಠ್ಯ ಸೇವೆ, ಇಂಟರ್‌ನೆಟ್‌ ಸೇವೆಗಳನ್ನು ನೀಡುತ್ತವೆ. ಸೆಲ್ಯುಲಾರ್ ವ್ಯಾಪ್ತಿ ಇಲ್ಲದ ಪ್ರದೇಶಗಳಲ್ಲಿಯೂ ಸಹ ಕಾರ್ಯನಿರ್ವಹಿಸುತ್ತವೆ. ಇದನ್ನೂ ಓದಿ: ಯುದ್ಧದ ಬಿಸಿಗೆ ಬೆದರಿ ಸಾಮೂಹಿಕ ರಾಜೀನಾಮೆ ನೀಡುತ್ತಿದ್ದಾರೆ ಪಾಕ್‌ ಸೈನಿಕರು!

    ಹಿಂದೆ ಉಗ್ರಗಾಮಿಗಳು ತುರಾಯ ಸ್ಯಾಟಲೈಟ್‌ ಫೋನ್‌ಗಳನ್ನು ಬಳಸುತ್ತಿದ್ದರು. ಈ ಫೋನ್‌ಗಳಲ್ಲಿ ಅಂಟೆನಾ ಇರುವ ಕಾರಣ ಸುಲಭವಾಗಿ ಗುರುತಿಸಬಹುದಾಗಿತ್ತು. ಆದರೆ ಹುವಾವೇ ಸ್ಯಾಟಲೈಟ್‌ ಫೋನ್‌ಗಳು ಸ್ಮಾರ್ಟ್‌ಫೋನ್‌ಗಳಂತೆ ವಿನ್ಯಾಸ ಮಾಡಲಾಗಿರುವ ಕಾರಣ ಅಷ್ಟು ಸುಲಭವಾಗಿ ಗುರುತಿಸಲು ಸಾಧ್ಯವಾಗುವುದಿಲ್ಲ.

    ಉಗ್ರರು ದಾಳಿ ನಡೆಸಿದ ಸಂದರ್ಭದಲ್ಲಿ ಒಬ್ಬಾತ ಫೋನ್‌ ಕರೆಯಲ್ಲಿ ಸಕ್ರಿಯವಾಗಿದ್ದ ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದರು.

    ವಿದೇಶಿ ಸ್ಯಾಟಲೈಟ್‌ ಫೋನ್‌ಗಳಿಗೆ ನಿರ್ಬಂಧ
    2008ರ ಮುಂಬೈ ದಾಳಿ ಸಂದರ್ಭದಲ್ಲಿ ಉಗ್ರರು ಸ್ಯಾಟಲೈಟ್‌ ಫೋನ್‌ ಬಳಸಿ ಕೃತ್ಯ ಎಸಗಿದ್ದರು. ಪಾಕಿಸ್ತಾನದ ಹ್ಯಾಂಡ್ಲರ್‌ಗಳ ಜೊತೆ ಸ್ಯಾಟಲೈಟ್‌ ಫೋನ್‌ ಮೂಲಕ ಸಂಪರ್ಕದಲ್ಲಿದ್ದರು. ಈ ಪ್ರಕರಣದ ಬಳಿಕ ಭಾರತದಲ್ಲಿ ಸ್ಯಾಟಲೈಟ್‌ ಫೋನ್‌ ಬಳಕೆಗೆ ನಿರ್ಬಂಧ ಹೇರಲಾಗಿದೆ. ಇದನ್ನೂ ಓದಿ: ರಕ್ಷಣಾ ಸಾಮಾಗ್ರಿ ಹೊತ್ತುಕೊಂಡು ಬಂದ ಟರ್ಕಿ ವಿಮಾನ ಪಾಕ್‌ನಲ್ಲಿ ಲ್ಯಾಂಡ್‌

    ನಿಯಮ ಏನು ಹೇಳುತ್ತದೆ?
    ಭಾರತದ ವೈರ್‌ಲೆಸ್ ಆಕ್ಟ್‌ನ ಸೆಕ್ಷನ್ 6 ಮತ್ತು ಇಂಡಿಯನ್ ಟೆಲಿಗ್ರಾಫ್ ಆಕ್ಟ್‌ನ ಸೆಕ್ಷನ್ 20 ರ ಅಡಿಯಲ್ಲಿ ಭಾರತದಲ್ಲಿ ತುರಾಯಾ/ಇರಿಡಿಯಮ್ ಸ್ಯಾಟಲೈಟ್ ಫೋನ್‌ಗಳ ಬಳಕೆ ಕಾನೂನುಬಾಹಿರವಾಗಿದೆ. ಭಾರತಕ್ಕೆ ಪ್ರಯಾಣಿಸುವ ಎಲ್ಲಾ ವ್ಯಕ್ತಿಗಳಿಗೆ ಥುರಾಯ/ಇರಿಡಿಯಮ್ ಸ್ಯಾಟಲೈಟ್ ಫೋನ್‌ಗಳ ಬಳಕೆಯನ್ನು ಭಾರತದಲ್ಲಿ ಅನುಮತಿಸಲಾಗುವುದಿಲ್ಲ ಎಂದು ಸಲಹೆ ನೀಡಲಾಗುತ್ತದೆ.

    ವಿದೇಶಿಗರು ಭಾರತಕ್ಕೆ ತುರಾಯ/ಇರಿಡಿಯಮ್ ಉಪಗ್ರಹ ಫೋನ್‌ಗಳನ್ನು ತರುವುದನ್ನು ನಿಷೇಧಿಸಲಾಗಿದೆ. ಪ್ರಯಾಣಿಕರು ಭಾರತಕ್ಕೆ ಸಾಗಿಸುವ ಉಪಗ್ರಹ ಫೋನ್‌ಗಳನ್ನು ಬಂಧಿಸಲಾಗುತ್ತದೆ/ಜಪ್ತಿ ಮಾಡಲಾಗುತ್ತದೆ. ಭಾರತೀಯ ಟೆಲಿಗ್ರಾಫ್ ಕಾಯಿದೆಯ ಸಂಬಂಧಿತ ವಿಭಾಗಗಳ ಅಡಿಯಲ್ಲಿ ಪ್ರಯಾಣಿಕರಿಗೆ ದಂಡ ವಿಧಿಸಬಹುದು.

    ಭಾರತದಲ್ಲೂ ಸೇವೆ ಇದೆ:
    ಬಿಎಸ್‌ಎನ್‌ಎಲ್‌ ಕಂಪನಿ ಉಪಗ್ರಹ ಫೋನ್‌  ಸೇವೆ ನೀಡುತ್ತಿದೆ. ಸೇವೆಯು ಭಾರತದ ಸಂಪೂರ್ಣ ಭೌಗೋಳಿಕ ಪ್ರದೇಶಕ್ಕೆ ನೀಡುತ್ತದೆ. ಅದರಲ್ಲೂ ಭಾರತ ಸರ್ಕಾರದ ಮಾರ್ಗಸೂಚಿಗಳ ಪ್ರಕಾರ ಕೆಲವು ಪ್ರದೇಶಗಳಲ್ಲಿ ಬಳಕೆಗೆ ನಿರ್ಬಂಧ ಇದೆ. ಅಮೆರಿಕದ ಗ್ಲೋಬ್‌ಸ್ಟಾರ್‌ ಕಂಪನಿಯ ಸ್ಯಾಟಲೈಟ್‌ ಫೋನ್‌ ಅಮೆರಿಕ ಸೇರಿದಂತೆ 120 ದೇಶಗಳಲ್ಲಿ ಬಳಕೆಗೆ ಅನಮತಿ ಇದೆ

    ಹೇಗೆ ಒಂದು ಸಿಮ್‌ ಖರೀದಿಸುವಾಗ ದಾಖಲೆಗಳನ್ನು ಸಲ್ಲಿಸಬೇಕಾಗುತ್ತದೋ ಅದೇ ರೀತಿಯ ದಾಖಲೆ ನೀಡಬೇಕು. ಅದರ ಜೊತೆಗೆ ಯಾವ ಕಾರಣಕ್ಕೆ ಈ ಫೋನ್‌ ಅಗತ್ಯವಿದೆ? ಯಾವ ಅವಧಿಗೆ ಈ ಫೋನ್‌? ಎಲ್ಲಿ ಬಳಕೆ ಮಾಡಲಾಗುತ್ತದೆ? ಈ ಎಲ್ಲ ಪ್ರಶ್ನೆಗಳಿಗೆ ಉತ್ತರವನ್ನು ನೀಡಿದ ಬಳಿಕ ಗ್ರಾಹಕರ ನೀಡಿದ ಮಾಹಿತಿ ಸರಿ ಇದ್ದಲ್ಲಿ ಸ್ಯಾಟಲೈಟ್‌ ಫೋನ್‌ ಸಿಗುತ್ತದೆ.

  • ಯಾದಗಿರಿಯಲ್ಲಿ ಮತ್ತೆ ಸ್ಯಾಟಲೈಟ್ ಫೋನ್ ಸದ್ದು – ಪಾಕಿಸ್ತಾನಕ್ಕೆ ಕಾಲ್!

    ಯಾದಗಿರಿಯಲ್ಲಿ ಮತ್ತೆ ಸ್ಯಾಟಲೈಟ್ ಫೋನ್ ಸದ್ದು – ಪಾಕಿಸ್ತಾನಕ್ಕೆ ಕಾಲ್!

    ಯಾದಗಿರಿ: ನಗರದಲ್ಲಿ ಮತ್ತೆ ಸ್ಯಾಟಲೈಟ್ ಪೋನ್ (Satellite Phone) ಸದ್ದು ಮಾಡಿದೆ. ಯಾದಗಿರಿ ಜಿಲ್ಲೆಯ ಸುರಪುರ (Surapura) ತಾಲೂಕಿನ ಶೆಳ್ಳಗಿಯಿಂದ ನಿಷೇಧಿತ ಸ್ಯಾಟಲೈಟ್ ಫೋನ್ ಮೂಲಕ ಪಾಕಿಸ್ತಾನಕ್ಕೆ (Pakistan) ಕರೆ ಹೋಗಿರುವುದು ತಡವಾಗಿ ಬೆಳಕಿಗೆ ಬಂದಿದೆ.

    ಸೆಪ್ಟೆಂಬರ್ 17 ರಂದು ಶೆಳ್ಳಗಿ ಗ್ರಾಮದ ಕೃಷಿ ಪ್ರದೇಶವೊಂದರಿಂದ ನಸುಕಿನ ಜಾವ 3 ಗಂಟೆ ಸುಮಾರಿಗೆ ಕರೆ ಹೋಗಿದೆ. ಸೆಪ್ಟೆಂಬರ್ 17 ರಂದು ಪಾಕ್‌ಗೆ ಕರೆ ಹೋಗಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಕಲ್ಯಾಣ ಕರ್ನಾಟಕ ವಿಮೋಚನಾ ದಿನಾಚರಣೆ ದಿನದಂದೇ ಸ್ಯಾಟಲೈಟ್ ಪೋನ್ ಕರೆ ಹೋಗಿದ್ದು, ಚೀನಾ ನಿರ್ಮಿತ ಸ್ಯಾಟಲೈಟ್ ಪೋನ್‌ನಿಂದ ಕರೆ ಮಾಡಲಾಗಿದೆ. ಸೆಪ್ಟೆಂಬರ್ 19 ರಂದು ಈ ಬಗ್ಗೆ ಕೇಂದ್ರಕ್ಕೆ ಮಾಹಿತಿ ಸಿಕ್ಕಿದ್ದು, ಜಿಪಿಎಸ್ ಲೊಕೇಶನ್ ಆಧಾರದ ಮೇಲೆ ಕೇಂದ್ರ ಸಂಸ್ಥೆಯ ಪೋಲಿಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

    2 ವರ್ಷದ ಹಿಂದೆ ಯಾದಗಿರಿ ತಾಲೂಕಿನ ಹೆಡಗಿಮದ್ರಾ ಗ್ರಾಮದ ಹೊರವಲಯದಿಂದ ಪಾಕಿಸ್ತಾನಕ್ಕೆ ಸ್ಯಾಟಲೈಟ್ ಕರೆ ಹೋಗಿತ್ತು. 2021 ಏಪ್ರಿಲ್ ತಿಂಗಳಲ್ಲಿ ಹೆಡಗಿಮದ್ರಾದಿಂದ ಪಾಕ್‌ಗೆ ಸ್ಯಾಟಲೈಟ್ ಕರೆ ಮಾಡಲಾಗಿತ್ತು. ಅದೇ ರೀತಿ 2014 ರಲ್ಲಿ ಮೊಸ್ಟ್ ವಾಂಟೆಡ್ ಉಗ್ರರು ಯಾದಗಿರಿಯಲ್ಲಿ ಅಡಗಿದ್ದರು. 2014 ರಲ್ಲಿ ಮುಂಬೈ ಹಾಗೂ ಹೈದರಾಬಾದ್‌ನ ರಾಷ್ಟ್ರೀಯ ತನಿಖಾ ಸಂಸ್ಥೆ (NIA) ಅಧಿಕಾರಿಗಳು ಯಾದಗಿರಿಗೆ ಭೇಟಿ ನೀಡಿದ್ದರು. ಇದನ್ನೂ ಓದಿ: ಹೊಸ ವರ್ಷಾಚರಣೆ – ಬ್ರಿಗೇಡ್‌ ರಸ್ತೆಯಲ್ಲಿ ಜೋಡಿಗಳಿಗೆ ಪ್ರತ್ಯೇಕ ಮಾರ್ಗ

    ಮಧ್ಯಪ್ರದೇಶ ಖಂಡ್ವಾ ಜೈಲಿನಿಂದ ತಪ್ಪಿಸಿಕೊಂಡಿದ್ದ ಸಿಮಿ ಉಗ್ರ ಮಹಿಬೂಬ ಗುಡ್ಡು ಸೇರಿದಂತೆ ಕೆಲವರು ಯಾದಗಿರಿಯಲ್ಲಿ ಅಡಗಿದ್ದರು. ಈಗ ಯಾದಗಿರಿಯಿಂದ ಮತ್ತೆ ಪಾಕಿಸ್ತಾನಕ್ಕೆ ಸ್ಯಾಟಲೈಟ್ ಕರೆ ಹೋಗಿರುವ ಮಾಹಿತಿ ತಡವಾಗಿ ಬೆಳಕಿಗೆ ಬಂದಿದೆ. ಇದನ್ನೂ ಓದಿ: ಸಂಸತ್‌ ಸ್ಮೋಕ್‌ ಬಾಂಬ್‌ ಕೇಸ್‌ – ಟಿಎಂಸಿ ಶಾಸಕನ ಜೊತೆ ಆರೋಪಿ – ಫೋಟೋ ಹರಿಬಿಟ್ಟ ಬಿಜೆಪಿ

  • ಕರ್ನಾಟಕ-ಕೇರಳ ಗಡಿಯಲ್ಲಿ ರಿಂಗಣಿಸಿ ಆತಂಕ ಸೃಷ್ಟಿಸಿದ ಸ್ಯಾಟಲೈಟ್ ಫೋನ್

    ಕರ್ನಾಟಕ-ಕೇರಳ ಗಡಿಯಲ್ಲಿ ರಿಂಗಣಿಸಿ ಆತಂಕ ಸೃಷ್ಟಿಸಿದ ಸ್ಯಾಟಲೈಟ್ ಫೋನ್

    ಮಂಗಳೂರು: ಕರ್ನಾಟದ (Karnataka) ಕರಾವಳಿಯ ಪಶ್ಚಿಮ ಘಟ್ಟ, ಗ್ರಾಮಾಂತರ ಪ್ರದೇಶದಲ್ಲಿ ಸಾಕಷ್ಟು ಬಾರಿ ರಿಂಗಣಿಸಿದ್ದ ಸ್ಯಾಟಲೈಟ್ ಫೋನ್ (Satellite Phone) ಇದೀಗ ಮತ್ತೆ ರಿಂಗಣಿಸಿದೆ. ಕರ್ನಾಟಕ – ಕೇರಳ ಗಡಿಯಲ್ಲಿ ಈ ಸ್ಯಾಟಲೈಟ್ ಫೋನ್ ಮತ್ತೆ ರಿಂಗಣಿಸಿ ಆತಂಕ ಸೃಷ್ಟಿಸಿದೆ.

     

    ಕೇರಳದ (Kerala) ಸ್ಪೆಷಲ್ ಬ್ರಾಂಚ್ ಪೊಲೀಸ್ ಅಧಿಕಾರಿಗಳು ತನಿಖೆ ಚುರುಕುಗೊಳಿಸಿದ್ದು, ಗುಪ್ತಚರ ಸಂಸ್ಥೆಗಳು ಸ್ಯಾಟಲೈಟ್ ಫೋನ್‍ನ ಲೊಕೇಶನ್ ಟ್ರೇಸ್ ಮಾಡಿದೆ. ಕೇರಳ-ಕರ್ನಾಟಕ ಗಡಿಯ ಕಾಸರಗೋಡು, ಸ್ವರ್ಗ, ಪಾಣಾಜೆ ವ್ಯಾಪ್ತಿಯಲ್ಲಿ ಸ್ಯಾಟಲೈಟ್ ಫೋನ್ ಬಳಕೆ ಆಗಿರೋದು ಬೆಳಕಿಗೆ ಬಂದಿದೆ. ಇದನ್ನೂ ಓದಿ: ದೇಶ ಕಾಯುವಾಗ ನಾವು ನಿಯತ್ತಿನ ನಾಯಿಗಳೇ – ಸಿದ್ದುಗೆ ಸಿ.ಟಿ ರವಿ ಗುದ್ದು

    ಇತ್ತೀಚಿಗೆ ಮಂಗಳೂರಿನಲ್ಲಿ ನಡೆದ ಕುಕ್ಕರ್ ಬಾಂಬ್ ಸ್ಫೋಟದ ವೇಳೆಯೂ ಸ್ಯಾಟಲೈಟ್ ಫೋನ್ ಸದ್ದು ಮಾಡಿದ್ದರಿಂದ ಇದೀಗ ಮತ್ತೆ ಆತಂಕ ಸೃಷ್ಟಿಯಾಗಿದೆ. ಜಿಲ್ಲೆಯಾದ್ಯಂತ ಪೊಲೀಸರು ಹೈಅಲರ್ಟ್ ಆಗಿದ್ದಾರೆ. ಇದನ್ನೂ ಓದಿ: ನನ್ನ ಮೈ ಮೇಲೆ ದೇವರು ಬರುತ್ತೆ, ವೆಂಕಟೇಶ್ವರ ನನ್ನ ಪತಿ- ಮಹಿಳೆ ಮೇಲೆ ದೌರ್ಜನ್ಯ ಪ್ರಕರಣಕ್ಕೆ ಟ್ವಿಸ್ಟ್

    Live Tv
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k

  • ಸ್ಯಾಟಲೈಟ್ ಫೋನ್ ಸಾಗಿಸ್ತಿದ್ದ ರಷ್ಯಾದ ಮಾಜಿ ಸಚಿವ ಭಾರತದ ವಿಮಾನ ನಿಲ್ದಾಣದಲ್ಲಿ ಬಂಧನ

    ಸ್ಯಾಟಲೈಟ್ ಫೋನ್ ಸಾಗಿಸ್ತಿದ್ದ ರಷ್ಯಾದ ಮಾಜಿ ಸಚಿವ ಭಾರತದ ವಿಮಾನ ನಿಲ್ದಾಣದಲ್ಲಿ ಬಂಧನ

    ಡೆಹ್ರಾಡೂನ್: ಸೂಕ್ತ ದಾಖಲೆಗಳಿಲ್ಲದೆ ಸ್ಯಾಟಲೈಟ್ ಫೋನ್ (Satellite Phone) ಅನ್ನು ಸಾಗಿಸುತ್ತಿದ್ದ ರಷ್ಯಾದ ಮಾಜಿ ಸಚಿವರನ್ನು (Ex Russian Minister) ಉತ್ತರಾಖಂಡದ ಡೆಹ್ರಾಡೂನ್ ವಿಮಾನ ನಿಲ್ದಾಣದಲ್ಲಿ (Dehradun Airport) ಭಾನುವಾರ ಬಂಧಿಸಲಾಗಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

    ಯಾವುದೇ ಪೂರ್ವಾನುಮತಿ ಇಲ್ಲದೇ ಉಪಗ್ರಹ ಫೋನ್‌ಗಳನ್ನು ವಿಮಾನ ನಿಲ್ದಾಣದಲ್ಲಿ ಅನುಮತಿಸಲಾಗುವುದಿಲ್ಲ. ಹೀಗಾಗಿ 1998 ರಿಂದ 1999ರ ವರೆಗೆ ರಷ್ಯಾದ ಕೃಷಿ ಮತ್ತು ಆಹಾರ ಸಚಿವರಾಗಿದ್ದ ವಿಕ್ಟರ್ ಸೆಮೆನೋವ್ (Victor Semenov) (64) ಅವರನ್ನು ಡೆಹ್ರಾಡೂನ್‌ನ ವಿಮಾನ ನಿಲ್ದಾಣದಲ್ಲಿ ಭದ್ರತಾ ತಪಾಸಣೆ ಸಂದರ್ಭದಲ್ಲಿ ಸಿಐಎಸ್‌ಎಫ್ ಸಿಬ್ಬಂದಿ ತಡೆದಿದ್ದಾರೆ. ಇದನ್ನೂ ಓದಿ: ಬೆಂಗಳೂರಿನಲ್ಲಿ ಧರ್ಮ ದಂಗಲ್ – ಹಿಂದೂ ಸಂಘಟನೆಯ 25ಕ್ಕೂ ಹೆಚ್ಚು ಕಾರ್ಯಕರ್ತರು ವಶಕ್ಕೆ

    ಮಾಸ್ಕೋದಲ್ಲಿ ನೆಲೆಸಿರುವ ಸೆಮೆನೋವ್ ಅವರು ಇಂಡಿಗೋ ವಿಮಾನದಲ್ಲಿ ದೆಹಲಿಗೆ ತೆರಳಬೇಕಿತ್ತು. ತಪಾಸಣೆ ವೇಳೆ ಸ್ಯಾಟಲೈಟ್ ಫೋನ್ ಹೊಂದಿರುವುದರ ಬಗ್ಗೆ ಅಧಿಕಾರಿಗಳು ದಾಖಲೆಗಳನ್ನು ಕೇಳಿದಾಗ ಅವರು ನೀಡಲು ಸಾಧ್ಯವಾಗಿಲ್ಲ. ತುರ್ತು ಸಂದರ್ಭದಲ್ಲಿ ವೈಯಕ್ತಿಕ ಬಳಕೆಗಾಗಿ ತಾವು ಸ್ಯಾಟಲೈಟ್ ಫೋನ್ ಅನ್ನು ಕೊಂಡೊಯ್ಯುತ್ತಿದ್ದುದಾಗಿ ಸೆಮೆನೋವ್ ತಿಳಿಸಿದ್ದಾರೆ. ಇದನ್ನೂ ಓದಿ: ಉತ್ತರ ಭಾರತದಾದ್ಯಂತ 20 ಕಡೆ NIA ದಾಳಿ

    Live Tv
    [brid partner=56869869 player=32851 video=960834 autoplay=true]

  • ಕುಕ್ಕರ್‌ ಬಾಂಬ್‌ ಸ್ಫೋಟಕ್ಕೂ ಮುನ್ನ ದಿನ  ಕರಾವಳಿಯಲ್ಲಿ ರಿಂಗಣಿಸಿದ್ದ ಸ್ಯಾಟಲೈಟ್‌ ಫೋನ್‌

    ಕುಕ್ಕರ್‌ ಬಾಂಬ್‌ ಸ್ಫೋಟಕ್ಕೂ ಮುನ್ನ ದಿನ ಕರಾವಳಿಯಲ್ಲಿ ರಿಂಗಣಿಸಿದ್ದ ಸ್ಯಾಟಲೈಟ್‌ ಫೋನ್‌

    ಮಂಗಳೂರು: ಕುಕ್ಕರ್‌ ಬಾಂಬ್‌ ಸ್ಫೋಟಕ್ಕೂ(Mangaluru Blast Case) ಮುನ್ನ ಕರಾವಳಿಯಲ್ಲಿ ಸ್ಯಾಟಲೈಟ್ ಫೋನ್ (Satellite Phone) ರಿಂಗಣಿಸಿದ ವಿಚಾರ ಈಗ ಪೊಲೀಸ್‌ ಮೂಲಗಳಿಂದ ತಿಳಿದು ಬಂದಿದೆ.

    ಹೌದು. ನವೆಂಬರ್‌ 19 ಶನಿವಾರ ಸಂಜೆ  ಸ್ಫೋಟ ನಡೆದಿದ್ದರೆ ನ.18ರಂದು ದಕ್ಷಿಣ ಕನ್ನಡದ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಕಕ್ಕಿಂಜೆಯಲ್ಲಿ(Kakkinje) ಸ್ಯಾಟಲೈಟ್ ಫೋನ್ ಮೂಲಕ ಕರೆ ಹೋಗಿದೆ.

    ಅರಣ್ಯ ಪ್ರದೇಶದಲ್ಲಿ ನಿಷೇಧಿತ ತುರಾಯ (Thuraya) ಕಂಪನಿಯ ಸ್ಯಾಟಲೈಟ್ ಫೋನ್ ಬಳಸಲಾಗಿರುವ ಮಾಹಿತಿ ಈಗ ಸಿಕ್ಕಿದೆ. ಸ್ಯಾಟಲೈಟ್ ಫೋನ್ ಜಾಗವನ್ನು ಬೇಹುಗಾರಿಕಾ ಏಜೆನ್ಸಿಗಳು ಪತ್ತೆ ಮಾಡಿದ್ದು ಪೊಲೀಸರು ಈಗ ಈ ಕೋನದಲ್ಲೂ ತನಿಖೆ ಆರಂಭಿಸಿದ್ದಾರೆ.

    ದಕ್ಷಿಣ ಕನ್ನಡ ಜಿಲ್ಲೆಯ ಎರಡು, ಉಡುಪಿ ಒಂದು ಕಡೆ ಮತ್ತು ಉತ್ತರ ಕನ್ನಡ ಜಿಲ್ಲೆಯ ಅರಣ್ಯ ಪ್ರದೇಶದಿಂದ ಸ್ಯಾಟಲೈಟ್ ಫೋನ್ ಮೂಲಕ ಕರೆ ಹೋಗಿದೆ. ಸುಮಾರು 5 ವರ್ಷಗಳಿಂದ ಕರಾವಳಿ ಮತ್ತು ಮಲೆನಾಡಿನಲ್ಲಿ ಸ್ಯಾಟಲೈಟ್ ಫೋನ್ ಸದ್ದು ಮಾಡುತ್ತಿವೆ.

    ಯುನೈಟೆಡ್‌ ಅರಬ್‌ ಎಮಿರೇಟ್ಸ್‌ ಮೂಲದ ತುರಾಯ ಕಂಪನಿ ಯುರೋಪ್, ಮಧ್ಯಪ್ರಾಚ್ಯ, ಉತ್ತರ, ಮಧ್ಯ ಮತ್ತು ಪೂರ್ವ ಆಫ್ರಿಕಾ, ಏಷ್ಯಾ ಮತ್ತು ಆಸ್ಟ್ರೇಲಿಯಾ ಸೇರಿದಂತೆ ಒಟ್ಟು 161 ದೇಶಗಳಿಗೆ ಧ್ವನಿ ಸೇವೆಗಳನ್ನು ನೀಡುತ್ತಿದೆ. ಇದನ್ನೂ ಓದಿ: ರೂಮಿನ ಹತ್ರ ಬಂದಾಗ ಸಡನ್ ಲಾಕ್ – ಕನ್ನಡಕ ಧರಿಸಿ ಓಡಾಟ

    ಸ್ಯಾಟಲೈಟ್‌ ಫೋನ್‌ ಬಳಕೆಗೆ ನಿಷೇಧ:
    ರಾಷ್ಟ್ರೀಯ ಭದ್ರತೆಗೆ ಧಕ್ಕೆ ತರುತ್ತದೆ ಎಂಬ ಕಾರಣಕ್ಕೆ ಭಾರತದಲ್ಲಿ ಸ್ಯಾಟಲೈಟ್‌ ಫೋನ್‌ ಬಳಕೆಯನ್ನು ಕೇಂದ್ರ ಸರ್ಕಾರ ನಿಷೇಧಿಸಿದೆ.

    ವೈರ್‌ಲೆಸ್ ಕಾಯ್ದೆಯ ಸೆಕ್ಷನ್ 6 ಮತ್ತು ಇಂಡಿಯನ್ ಟೆಲಿಗ್ರಾಫ್ ಆಕ್ಟ್‌ನ ಸೆಕ್ಷನ್ 20ರ ಅಡಿಯಲ್ಲಿ ಭಾರತದಲ್ಲಿ ತುರಾಯ/ಇರಿಡಿಯಮ್ ಸ್ಯಾಟಲೈಟ್ ಫೋನ್‌ಗಳ ಬಳಕೆಯನ್ನು ಕಾನೂನುಬಾಹಿರ ಎಂದು ಘೋಷಿಸಿದೆ

    ಭಾರತಕ್ಕೆ ಪ್ರಯಾಣಿಸುವ ಎಲ್ಲಾ ವ್ಯಕ್ತಿಗಳಿಗೆ ತುರಾಯ/ಇರಿಡಿಯಮ್ ಸ್ಯಾಟಲೈಟ್ ಫೋನ್‌ಗಳ ಬಳಕೆಯನ್ನು ಭಾರತದಲ್ಲಿ ಅನುಮತಿಸಲಾಗುವುದಿಲ್ಲ ಎಂದು ಸಲಹೆ ನೀಡಲಾಗುತ್ತದೆ. ವಿದೇಶಿಯರು ಭಾರತಕ್ಕೆ ಉಪಗ್ರಹ ಫೋನ್‌ಗಳನ್ನು ತರುವುದಕ್ಕೂ ನಿಷೇಧ ಹೇರಲಾಗಿದೆ. ಭಾರತಕ್ಕೆ ಬರುವಾಗ ಉಪಗ್ರಹ ಫೋನ್‌ಗಳಿದ್ದರೆ ಪ್ರಯಾಣಿಕರನ್ನು ಬಂಧಿಸಲಾಗುತ್ತದೆ. ಅಷ್ಟೇ ಅಲ್ಲದೇ ಟೆಲಿಗ್ರಾಫ್ ಕಾಯಿದೆಯ ಸಂಬಂಧಿತ ವಿಭಾಗಗಳ ಅಡಿಯಲ್ಲಿ ದಂಡ ವಿಧಿಸಲಾಗುತ್ತದೆ.

    Live Tv
    [brid partner=56869869 player=32851 video=960834 autoplay=true]

  • ಕೋಸ್ಟ್ ಗಾರ್ಡ್ ಭದ್ರತಾ ಶಕ್ತಿ ಹೆಚ್ಚಿಸಲು ಕೇಂದ್ರ ಸರ್ಕಾರ ಪ್ಲ್ಯಾನ್‌ – ಮನೋಜ್ ಬಾಡ್ಕರ್

    ಕೋಸ್ಟ್ ಗಾರ್ಡ್ ಭದ್ರತಾ ಶಕ್ತಿ ಹೆಚ್ಚಿಸಲು ಕೇಂದ್ರ ಸರ್ಕಾರ ಪ್ಲ್ಯಾನ್‌ – ಮನೋಜ್ ಬಾಡ್ಕರ್

    ಕಾರವಾರ: ಉತ್ತರ ಕನ್ನಡ (Uttara Kannada) ಜಿಲ್ಲೆಯ ಕರಾವಳಿ ಭಾಗದಲ್ಲಿ ಈ ಹಿಂದಿನಿಂದಲೂ ಸ್ಯಾಟ್‌ಲೈಟ್ ಫೋನ್ (Satellite Phone) ಆಕ್ಟೀವ್ ಆಗಿದ್ದು ಕೇಂದ್ರದ ಗುಪ್ತದಳ, ಸ್ಥಳೀಯ ಪೊಲೀಸರಿಗೆ (Police) ದೊಡ್ಡ ತಲೆನೋವಾಗಿ ಪರಿಣಮಿಸಿದೆ. ಅದಕ್ಕಾಗಿ ಕೋಸ್ಟ್ ಗಾರ್ಡ್‌ನ (Coast Guard) ಭದ್ರತಾ ಶಕ್ತಿಯನ್ನ ಮತ್ತಷ್ಟು ಹೆಚ್ಚಿಸಲು ಭಾರತ ಸರ್ಕಾರ ಯೋಜನೆ ರೂಪಿಸಿದೆ ಎಂದು ಭಾರತೀಯ ತಟರಕ್ಷಕ ಪಡೆಯ ಪಶ್ಚಿಮ ವಲಯ ಕಮಾಂಡರ್ ಮನೋಜ್ ಬಾಡ್ಕರ್ ತಿಳಿಸಿದ್ದಾರೆ.

    ಕಾರವಾರದ (Karwar) ಕೋಸ್ಟ್‌ಗಾರ್ಡ್‌ ಕಚೇರಿಗೆ ಆಗಮಿಸಿದ್ದ ಮನೋಜ್ ಬಾಡ್ಕರ್ ಈ ಕುರಿತು ಪ್ರತಿಕ್ರಿಯಿಸಿದ್ದಾರೆ. ಕೋಸ್ಟ್ ಗಾರ್ಡ್ನ ಭದ್ರತಾ ಶಕ್ತಿ ಮತ್ತಷ್ಟು ಹೆಚ್ಚಿಸಲು ಕೇಂದ್ರ ಸರ್ಕಾರ (Central Government) ಯೋಜನೆ ರೂಪಿಸಿದೆ. ಅದಕ್ಕಾಗಿ ಕೋಸ್ಟಲ್ ಸೆಕ್ಯುರಿಟಿ ಮೆಕ್ಯಾನಿಸಂ ರೂಪಿಸಲಾಗಿದೆ. ಇದರಲ್ಲಿ ಕೋಸ್ಟ್ ಚೈನ್ ಆ್ಯಪ್ ಸ್ಟಾಟಿಸ್ಟಿಕ್ಸ್ ಚೈನ್ ಸೆನ್ಸಾರ್ ಇದೆ. 30 ನಾಟಿಕಲ್ ಮೈಲ್‌ನಲ್ಲಿ ಒಂದೊಂದು ರೆಡಾರ್ ಇದೆ. ಅಲ್ಲಿ ಸಿಸಿ ಕ್ಯಾಮೆರಾ ಕೂಡ ಇರುತ್ತದೆ. ಯಾವುದೇ ಬೋಟ್‌ಗಳು ರೆಡಾರ್ ಹತ್ತಿರ ಬರುತ್ತಿದ್ದಂತೆ ಗೊತ್ತಾಗುತ್ತದೆ. ಇದು ಸಮುದ್ರದಲ್ಲಿ (Sea) ಭದ್ರತಾ ದೃಷ್ಟಿಯಿಂದ ಮತ್ತಷ್ಟು ಉಪಯೋಗವಾಗುತ್ತದೆ. 200 ನಾಟಿಕಲ್ ಮೈಲಿವರೆಗೆ ಸಮುದ್ರದಲ್ಲಿ ಪೆಟ್ರೋಲ್ ಚೈನ್ (Petrol Chain) ಸಹ ಇದೆ ಎಂದು ವಿವರಿಸಿದ್ದಾರೆ.

    5ಕ್ಕೂ ಹೆಚ್ಚು ಸ್ಯಾಟ್‌ಲೈಟ್ ಫೋನ್ ವಶ:
    ತೈಮೋರ್ ಸ್ಯಾಟ್‌ಲೈಟ್ ಫೋನ್‌ಗಳನ್ನ (Satellite Phone) ಎಲ್ಲಾ ದೇಶಗಳಲ್ಲಿ ಉಪಯೋಗಿಸಲು ಅವಕಾಶವಿದೆ. ಆದರೇ ನಮ್ಮ ದೇಶದಲ್ಲಿ ಮಾತ್ರ ನಿಷೇಧವಿದೆ. ಹೀಗಾಗಿ ವಿದೇಶದಿಂದ ಬಂದ ಹಡಗುಗಳು ಭಾರತದ ಗಡಿ ಪ್ರವೇಶಿಸಿದ ನಂತರ ಈ ಫೋನ್‌ಗಳನ್ನ ಸೀಲ್ಡ್ ಮಾಡಿ ಇಡಬೇಕು. ಕೆಲವು ಬಾರಿ ಗೊತ್ತಿಲ್ಲದೇ ಉಪಯೋಗಿಸುತ್ತಾರೆ. ಇಂತಹ 5ಕ್ಕೂ ಹೆಚ್ಚು ಸ್ಯಾಟ್‌ಲೈಟ್ ಫೋನ್‌ಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ತಿಳಿಸಿದ್ದಾರೆ.

    ಕರಾವಳಿ ಪ್ರದೇಶದಲ್ಲಿ ಪ್ರತಿ 30 ಮೈಲಿಗೆ ಒಂದು ರೆಡಾರ್ ಹಾಕಲಾಗಿದೆ. ಇದರೊಂದಿಗೆ ಕ್ಯಾಮೆರಾ (Camera) ಅಳವಡಿಸಲಾಗಿದೆ. ಅಂಕೋಲ ತಾಲೂಕಿನ ಬೇಲಿಕೇರಿ ಬಂದರಿನಲ್ಲಿ ರೆಡಾರ್ (Redar) ಹಾಕುತ್ತೇವೆ. ಮೀನುಗಾರರು ಸಮುದ್ರದ ಭದ್ರತಾ ದೃಷ್ಟಿಯಿಂದ ಕಣ್ಣು, ಕಿವಿ ಇದ್ದಂತೆ. ಮೀನುಗಾರರ ರಕ್ಷಣೆಗಾಗಿ ನಾವು ಕೆಲಸ ಮಾಡುತ್ತೇವೆ. ಈ ವರ್ಷದಲ್ಲಿ ಕೋಸ್ಟ್ ಗಾರ್ಡ್ ವಲಯದಲ್ಲಿ 720 ಜನರ ಜೀವ ರಕ್ಷಣೆ ಮಾಡಲಾಗಿದೆ ಎಂದು ಮಾಹಿತಿ ನೀಡಿದ್ದಾರೆ.

    ಕಾರವಾರದಲ್ಲಿ ಕೋಸ್ಟ್ ಗಾರ್ಡ್ಗೆ ಸಂಬಂಧಿಸಿದ ಸ್ವಂತ ಕಟ್ಟಡವಿಲ್ಲ. ಹಾಗಾಗಿ ಕಡಲ ತೀರದಲ್ಲೇ ಸ್ವಂತ ಕಟ್ಟಡ ನಿರ್ಮಾಣ ಮಾಡಲು ಪ್ರಯತ್ನಿಸುತ್ತಿದ್ದೇವೆ. ಆದರೆ ಇದಕ್ಕೆ ಮೀನುಗಾರರ ವಿರೋಧವಿದ್ದು, ಮನವೊಲಿಸುವ ಪ್ರಯತ್ನವೂ ನಡೆಯುತ್ತಿದೆ. ಈಗಾಗಲೇ ಅಮದಳ್ಳಿಯಲ್ಲಿ 26 ಎಕರೆ ಪ್ರದೇಶ ಖರೀದಿ ಮಾಡಿದ್ದು, 2 ವರ್ಷಗಳಲ್ಲಿ ಕಟ್ಟಡ ಕಾಮಗಾರಿ ಮುಗಿಯಲಿದೆ ಎಂದು ತಿಳಿಸಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ಕರಾವಳಿ, ಮಲೆನಾಡಿನಲ್ಲಿ ಮತ್ತೆ ಸ್ಯಾಟಲೈಟ್ ಫೋನ್ ಆಕ್ಟೀವ್ – 10 ದಿನಗಳಲ್ಲಿ 4 ಕಡೆ ರಿಂಗಣಿಸಿದ ಲೊಕೇಷನ್ ಟ್ರೇಸ್

    ಕರಾವಳಿ, ಮಲೆನಾಡಿನಲ್ಲಿ ಮತ್ತೆ ಸ್ಯಾಟಲೈಟ್ ಫೋನ್ ಆಕ್ಟೀವ್ – 10 ದಿನಗಳಲ್ಲಿ 4 ಕಡೆ ರಿಂಗಣಿಸಿದ ಲೊಕೇಷನ್ ಟ್ರೇಸ್

    ಮಂಗಳೂರು: ರಾಜ್ಯ ಕರಾವಳಿ ಮತ್ತು ಮಲೆನಾಡು ಭಾಗದಲ್ಲಿ ಮತ್ತೆ ಸ್ಯಾಟಲೈಟ್ ಫೋನ್ ರಿಂಗಣಿಸಿದೆ. ಹತ್ತು ದಿನಗಳ ಅಂತರದಲ್ಲಿ ನಾಲ್ಕೂ ಕಡೆಗಳಲ್ಲಿ ಈ ಸಿಕ್ರೇಟ್ ಫೋನ್‍ನ ಲೊಕೇಷನ್ ಟ್ರೇಸ್ ಆಗಿದೆ.

    ರಾಜ್ಯ ಕರಾವಳಿ ಮತ್ತು ಮಲೆನಾಡಿನಲ್ಲಿ ಮತ್ತೆ ಸ್ಯಾಟಲೈಟ್ ಫೋನ್ ಆಕ್ಟೀವ್ ಆಗಿದೆ. ದಕ್ಷಿಣಕನ್ನಡ ಜಿಲ್ಲೆಯ ಎರಡು ಕಡೆ, ಉತ್ತರಕನ್ನಡ, ಚಿಕ್ಕಮಗಳೂರು ಜಿಲ್ಲೆಯ ಒಂದೊಂದು ಕಡೆ ಈ ಸೀಕ್ರೆಟ್ ಫೋನ್ ರಿಂಗಣಿಸಿದೆ. ಕರಾವಳಿಯ ದಟ್ಟಾರಣ್ಯ ಪ್ರದೇಶಗಳಲ್ಲಿ ಸ್ಯಾಟಲೈಟ್ ಫೋನ್ ಇಂಟರ್‍ಸೆಪ್ಟ್ ಆಗಿರುವ ಬಗ್ಗೆ ಆಂತರಿಕ ಭದ್ರತಾ ದಳದ ಅಧಿಕಾರಿಗಳಿಗೆ ಕೇಂದ್ರ ಬೇಹುಗಾರಿಕಾ ಅಧಿಕಾರಿಗಳು ಮಾಹಿತಿ ರವಾನಿಸಿದ್ದಾರೆ. ಉತ್ತರಕನ್ನಡ ಜಿಲ್ಲೆಯಲ್ಲಿ ಯಲ್ಲಾಪುರ-ಸಿರಸಿಯ ಮಧ್ಯ ಇರುವ ದಟ್ಟಾರಣ್ಯ ಪ್ರದೇಶದಲ್ಲಿ ಇದರ ಲೊಕೇಶನ್ ಟ್ರೇಸ್ ಆಗಿದೆ. ಮಂಗಳೂರಿನಲ್ಲಿ ನಗರ ಹೊರವಲಯದ ನಾಟೆಕಲ್, ಕುಳಾಯಿಯಲ್ಲಿ ನಿಗೂಢ ವ್ಯಕ್ತಿಗಳು ಈ ಫೋನ್ ಮೂಲಕ ಸಂಪರ್ಕ ಸಾಧಿಸಿದ್ದಾರೆ. ಸ್ಯಾಟಲೈಟ್ ಫೋನ್ ಮೂಲಕ ಸಂಪರ್ಕ ಸಾಧಿಸಿದ ನಿಗೂಢ ವ್ಯಕ್ತಿಗಳ ಶೋಧ ಕಾರ್ಯಕ್ಕೆ ಆಂತರಿಕ ಭದ್ರತಾ ದಳದ ಅಧಿಕಾರಿಗಳು ಇಳಿದಿದ್ದಾರೆ. ಇದನ್ನೂ ಓದಿ: ಬೆಂಗಳೂರಿನಲ್ಲಿ ಈದ್ಗಾ ಮೈದಾನ ವಿವಾದ- ಗ್ರೌಂಡ್‍ನಲ್ಲಿ ಹಿಂದೂ ಸಂಘಟನೆಯ ಮುಖಂಡರ ಹೈಡ್ರಾಮಾ

    ಮೇ 23 ರಿಂದ ಮೇ 29ರ ಅಂತರದಲ್ಲಿ ಸ್ಯಾಟಲೈಟ್ ಫೋನ್ ಮೂಲಕ ಸಂಪರ್ಕ ಸಾಧಿಸಿರುವ ಮಾಹಿತಿ ಇದೆ. ನೆಟ್ ವರ್ಕ್ ಇಲ್ಲದ ಪ್ರದೇಶಗಳಲ್ಲಿ ಈ ಸ್ಯಾಟಲೈಟ್ ಪೋನ್ ಬಳಕೆ ಕುರಿತಾದ ನಿಗೂಢ ಕರೆಗಳನ್ನು ಭದ್ರತಾ ಅಧಿಕಾರಿಗಳು ಗಂಭೀರವಾಗಿ ಪರಿಗಣಿಸಿದ್ದಾರೆ.

    ಹಡಗಿನಲ್ಲಿರುವ ಕ್ಯಾಪ್ಟನ್‍ಗಳಿಗೆ ಈ ಫೋನ್ ಬಳಕೆ ಮಾಡುವುದಕ್ಕೆ ಅವಕಾಶವಿದೆ. ಆದರೆ ದಟ್ಟಾರಣ್ಯ ಪ್ರದೇಶದಲ್ಲಿ ಇಂತಹ ಫೋನ್ ಆಕ್ಟೀವ್ ಆಗಿರೋದು ಹಲವು ಅನುಮಾನಕ್ಕೆ ಕಾರಣವಾಗಿದೆ. ಕರಾವಳಿ ಭಾಗದಲ್ಲಿ ಉಗ್ರರ ಸ್ಲೀಪರ್ ಸೆಲ್‍ಗಳು ವರ್ಕ್ ಮಾಡುತ್ತಿದೆಯಾ ಎಂಬ ಸಂಶಯವನ್ನು ಮೂಡಿಸಿದೆ. ಇದರ ಜೊತೆ ನಕ್ಸಲ್ ಚಟುವಟಿಕೆ ನಡೆಸುತ್ತಿರುವವರು ಈ ಸ್ಯಾಟಲೈಟ್ ಫೋನ್ ಯೂಸ್ ಮಾಡುತ್ತಿದ್ದಾರ ಎಂಬ ಪ್ರಶ್ನೆಯನ್ನು ಮೂಡಿಸಿದೆ. ಚಿಕ್ಕಮಗಳೂರಿನಲ್ಲಿ ಕಡೂರು-ಬೀರೂರು ನಡುವಿನ ಅರಣ್ಯ ಪ್ರದೇಶದಲ್ಲಿ ಇದು ಯೂಸ್ ಆಗಿರುವುದು ಈ ಸಂಶಯಗಳಿಗೆ ಇನ್ನಷ್ಟು ಪುಷ್ಟಿ ನೀಡಿದೆ. ಕಳೆದ ವರ್ಷ ಜನವರಿ ತಿಂಗಳಲ್ಲಿ 10 ದಿನಗಳಲ್ಲಿ ಮೂರು ಬಾರಿ ಸ್ಯಾಟಲೈಟ್ ಫೋನ್ ಬಳಕೆ ಮಾಡಿರುವ ಮಾಹಿತಿ ಅಧಿಕಾರಿಗಳಿಗೆ ಲಭ್ಯವಾಗಿತ್ತು. ಇದೀಗ ಮತ್ತೆ ಈ ಸ್ಯಾಟಲೈಟ್ ಕರೆ ಸದ್ದು ಮಾಡಿರೋದು ಆತಂಕಕ್ಕೆ ಕಾರಣವಾಗಿದೆ. ಇದನ್ನೂ ಓದಿ: ಸೂ.. ಮಕ್ಕಳಾ ಅಂತ ಕಾಂಗ್ರೆಸ್ ಪಕ್ಷದವರನ್ನ ನಿಂದಿಸಿದ ಬಿಜೆಪಿ ಸಂಸದ

  • ಗೋಹತ್ಯೆ ನಿಷೇಧ ಕಾಯ್ದೆ ವಿಫಲವಾಗಲು ಬಿಡಬೇಡಿ- ಪೊಲೀಸರಿಗೆ ಆರಗ ಜ್ಞಾನೇಂದ್ರ ಸೂಚನೆ

    ಗೋಹತ್ಯೆ ನಿಷೇಧ ಕಾಯ್ದೆ ವಿಫಲವಾಗಲು ಬಿಡಬೇಡಿ- ಪೊಲೀಸರಿಗೆ ಆರಗ ಜ್ಞಾನೇಂದ್ರ ಸೂಚನೆ

    ಉಡುಪಿ: ರಾಜ್ಯದಲ್ಲಿ ಗೋಹತ್ಯಾ ನಿಷೇಧ ಕಾಯ್ದೆ ವಿಫಲವಾಗಲು ಪೊಲೀಸರು ಬಿಡಬಾರದು, ಈಗಿರುವ ಕಾನೂನು ಕಠಿಣವಾಗಿದೆ. ಅದನ್ನು ಕಟ್ಟುನಿಟ್ಟಾಗಿ ಜಾರಿಗೆ ತನ್ನಿ ಎಂದು ಗೃಹಸಚಿವ ಆರಗ ಜ್ಞಾನೇಂದ್ರ ಎಚ್ಚರಿಕೆ ನೀಡಿದ್ದಾರೆ.

    ಉಡುಪಿಯಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಕರಾವಳಿಯಲ್ಲಿ ಹೆಚ್ಚುತ್ತಿರುವ ಕಳ್ಳತನ ಪ್ರಕರಣಗಳ ಕುರಿತು ಕಳವಳ ವ್ಯಕ್ತಪಡಿಸಿದರು. ಗೋಹತ್ಯಾ ನಿಷೇಧ ಕಾಯ್ದೆ ಜಾರಿಯಲ್ಲಿ ಇದೆ. ಈ ಕಾಯ್ದೆ ವಿಫಲ ಆಗಿಲ್ಲ, ವಿಫಲ ಆಗಲೂ ಬಾರದು. ಗೋಹತ್ಯೆ ಹೆಚ್ಚುತ್ತಿರುವುದರಿಂದ ಸಾಮಾಜಿಕ ಅಶಾಂತಿಗೂ ಕಾರಣವಾಗಿದೆ. ಅಕ್ರಮ ಗೋ ಸಾಗಾಟ, ಗೋಹತ್ಯೆ ಶೇಕಡ 100ರಷ್ಟು ನಿಲ್ಲಿಸಬೇಕು. ಈ ಬಗ್ಗೆ ಪೊಲೀಸ್ ಅಧಿಕಾರಿಗಳ ಜೊತೆ ಮಾತನಾಡುತ್ತೇನೆ. ಗೋವು ಕಳ್ಳರಿಗೆ ಸೂಕ್ತ ಶಿಕ್ಷೆ ಆಗಲಿದೆ ಎಂದರು. ಇದನ್ನೂ ಓದಿ: ಸಿದ್ದರಾಮಯ್ಯ, ಕುಮಾರಸ್ವಾಮಿ ವೋಟಿಗಾಗಿ ಜೊಲ್ಲು ಸುರಿಸ್ತಿದ್ದಾರೆ: ಆರಗ ಜ್ಞಾನೇಂದ್ರ

    ಕಾಡಿನಿಂದ ಸ್ಯಾಟಲೈಟ್ ಕರೆ- ಶೀಘ್ರ ಪತ್ತೆ:
    ಕರಾವಳಿ ಮತ್ತು ಮಲೆನಾಡಿನ ಕಾಡುಗಳಿಂದ ಸ್ಯಾಟಲೈಟ್ ಕರೆಗಳು ಹೋಗುತ್ತಿರುವ ಬಗ್ಗೆ ಮಾತನಾಡಿದ ಸಚಿವರು, ಅಜ್ಞಾತ ಸ್ಥಳಗಳಿಂದ ಸ್ಯಾಟಲೈಟ್ ಕರೆ ಹೋಗಿರುವ ಬಗ್ಗೆ ವರದಿಯಾಗಿದ್ದು, ಕರಾವಳಿ ಮಲೆನಾಡು ಕಾಡಿನಿಂದ ಎಷ್ಟು ಕರೆಗಳು ಹೋಗಿದೆ ಎಂಬ ಬಗ್ಗೆ ನನಗೆ ಮಾಹಿತಿಯಿಲ್ಲ. ಕೇಂದ್ರ ಸರ್ಕಾರದ ತಂಡ ನಮ್ಮ ಪೊಲೀಸ ಜೊತೆ ಸಂಪರ್ಕದಲ್ಲಿದೆ. ಇದು ರಾಷ್ಟ್ರೀಯ ಭದ್ರತೆಯ ಪ್ರಶ್ನೆ ಹಾಗಾಗಿ ಈ ಬಗ್ಗೆ ಹೆಚ್ಚೇನೂ ಮಾತನಾಡಲು ಸಾಧ್ಯವಿಲ್ಲ. ಯಾವುದೇ ಅರಣ್ಯ ಪ್ರದೇಶದಿಂದ ಕರೆ ಹೋಗಿರಲಿ. ಕರೆ ಮಾಡಿದವರನ್ನು ಪತ್ತೆಮಾಡಿ ಸೂಕ್ತಕ್ರಮ ಕೈಗೊಳ್ಳುತ್ತೇವೆ ಎಂದು ಎಚ್ಚರಿಕೆ ಕೊಟ್ಟಿದ್ದಾರೆ. ಇದನ್ನೂ ಓದಿ: ಚಲಿಸುವ ರೈಲಿನಲ್ಲಿ ಸಾಮೂಹಿಕ ಅತ್ಯಾಚಾರ- ನಾಲ್ವರ ಬಂಧನ

  • ಯಾದಗಿರಿಯಿಂದ ಪಾಕಿಸ್ತಾನಕ್ಕೆ ಸ್ಯಾಟಲೈಟ್ ಕರೆ: ಕಲಬುರಗಿಯ ಐಎಸ್‍ಡಿ ತಂಡ ಭೇಟಿ

    ಯಾದಗಿರಿಯಿಂದ ಪಾಕಿಸ್ತಾನಕ್ಕೆ ಸ್ಯಾಟಲೈಟ್ ಕರೆ: ಕಲಬುರಗಿಯ ಐಎಸ್‍ಡಿ ತಂಡ ಭೇಟಿ

    ಕಲಬುರಗಿ: ಯಾದಗಿರಿ ತಾಲೂಕಿನ ಹೆಡಗಿಮದ್ರ ಗ್ರಾಮದ ಗುಡ್ಡಗಾಡು ಪ್ರದೇಶದಿಂದ ಪಾಕಿಸ್ತಾನಕ್ಕೆ ನಿಷೇಧಿತ ಸ್ಯಾಟಲೈಟ್ ಪೋನ್ ಕರೆ ಹೋಗಿರುವ ಬಗ್ಗೆ ಮಾಹಿತಿ ಲಭ್ಯವಾಗಿದೆ.

    ಈಗಾಗಲೇ ಕಳೆದ ಏಪ್ರಿಲ್ ತಿಂಗಳಲ್ಲಿ ಪಾಕಿಸ್ತಾನಕ್ಕೆ ಕರೆ ಹೋಗಿರುವ ಶಂಕೆ ಹಿನ್ನೆಲೆಯಲ್ಲಿ ಕಲಬುರಗಿಯಿಂದ ಐಎಸ್‍ಡಿ ತಂಡ ಬಂದು ತನಿಖೆ ನಡೆಸಿದೆ.

    ಕರೆ ಹೋಗಿರುವ ಬಗ್ಗೆ ಮಾಹಿತಿ ಬಂದ ಹಿನ್ನಲೆ ಗ್ರಾಮಕ್ಕೆ ಭೇಟಿ ನೀಡಿದ ಕಲಬುರಗಿ ಐಎಸ್‍ಡಿ ಇನ್ಸ್‌ಪೆಕ್ಟರ್‌ ಮಹಾದೇವಪ್ಪ ಪಂಚಮುಖಿ ನೇತೃತ್ವದ ತಂಡ ಮಾಹಿತಿ ಕಲೆ ಹಾಕಿದೆ. ಮಾಹಿತಿ ಕಲೆ ಹಾಕಿದ ತಂಡ ಎಡಿಜಿಪಿ ಅವರಿಗೆ ವರದಿ ಒಪ್ಪಿಸಿದೆ. ಇದನ್ನೂ ಓದಿ: ತುಮಕೂರು ಲಾಡ್ಜ್‌ನಲ್ಲಿ ಸುರಂಗ- ಸುರಂಗದೊಳಗೆ ವೇಶ್ಯಾವಾಟಿಕೆ 

    ಯಾದಗಿರಿ ಬಳಿಯಿಂದ ಸ್ಯಾಟ್‍ಲೈಟ್ ಪೋನ್ ಮೂಲಕ ಪಾಕಿಸ್ತಾನಕ್ಕೆ ಕರೆ ಮಾಡಿರುವ ಖಚಿತ ಮಾಹಿತಿ ಪೊಲೀಸ್ ಗುಪ್ತದಳಕ್ಕೆ ಸಿಕ್ಕಿದೆ. ಆದರೆ ಕರೆ ಮಾಡಿದವರು ಯಾರು ಎಂಬುದರ ಬಗ್ಗೆ ಇಲ್ಲಿಯವರೆಗೆ ಯಾವ ಸುಳಿವು ಸಹ ಸಿಕ್ಕಿಲ್ಲ, ಇದೀಗ ಗುಪ್ತಚರ ಪೊಲೀಸರು ಮತ್ತು ಆಂತರಿಕ ಭದ್ರತೆ ಪೊಲೀಸರು ಕರೆ ಮಾಡಿದ ವ್ಯಕ್ತಿಗಾಗಿ ತೀವ್ರ ಶೋಧ ನಡೆಸುತ್ತಿದ್ದಾರೆ.

  • ಕಾರವಾರದಲ್ಲಿ ನಿರ್ಬಂಧಿತ ಸ್ಯಾಟಲೈಟ್ ಫೋನ್ ಆ್ಯಕ್ಟಿವ್- ಐಎಸ್‍ಡಿಯಿಂದ ಅರಣ್ಯದಲ್ಲಿ ಕೂಂಬಿಂಗ್‌  ಕಾರ್ಯಚರಣೆ

    ಕಾರವಾರದಲ್ಲಿ ನಿರ್ಬಂಧಿತ ಸ್ಯಾಟಲೈಟ್ ಫೋನ್ ಆ್ಯಕ್ಟಿವ್- ಐಎಸ್‍ಡಿಯಿಂದ ಅರಣ್ಯದಲ್ಲಿ ಕೂಂಬಿಂಗ್‌ ಕಾರ್ಯಚರಣೆ

    ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಶಿರವಾಡ ಭಾಗದ ಅರಣ್ಯ ವ್ಯಾಪ್ತಿಯಲ್ಲಿ ನಿರ್ಬಂಧಿತ ಸ್ಯಾಟಲೈಟ್ ಫೋನ್ ಬಳಕೆ ಮಾಡುತ್ತಿರುವ ಕುರಿತು ಕೇಂದ್ರ ಆಂತರಿಕ ಭದ್ರತಾ ವಿಭಾಗ(ಐಎಸ್‍ಡಿ), ಸ್ಥಳೀಯ ಪೊಲಿಸರು, ಅರಣ್ಯ ಇಲಾಖೆಯ ಐದು ಜನರನ್ನೊಳಗೊಂಡ ತಂಡ ಕೊಮಿಂಗ್ ಕಾರ್ಯಾಚರಣೆ ನಡೆಸುತ್ತಿದೆ.

    ಸೋಮವಾರದಿಂದ ಈವರೆಗೆ ಹಲವು ಬಾರಿ ಶಿರವಾಡದ ಜಾಂಬಾ ಗ್ರಾಮದ ಅರಣ್ಯ ವ್ಯಾಪ್ತಿಯ ಐದು ಕಿಲೋಮೀಟರ್ ವ್ಯಾಪ್ತಿಯಲ್ಲಿ ನಿಷೇಧಿತ ಸ್ಯಾಟಲೈಟ್ ಫೋನ್ ಬಳಕೆ ಮಾಡಿರುವುದನ್ನು ಪತ್ತೆ ಹಚ್ಚಲಾಗಿದೆ. ಕಾರವಾರದಲ್ಲಿ ಕೈಗಾ ಅಣುಸ್ತಾವರ, ನೌಕಾ ದಳದ ಕೇಂದ್ರವಿದ್ದು, ಇದರ ಭದ್ರತಾ ದೃಷ್ಟಿಯಿಂದ ಟ್ರ್ಯಾಕ್ ಆದ ನಿರ್ಬಂಧಿತ ಸ್ಯಾಟಲೈಟ್ ಫೋನ್ ಯಾರು ಬಳಕೆ ಮಾಡುತಿದ್ದಾರೆ ಎಂಬ ಬಗ್ಗೆ ತನಿಖೆ ಚುರುಕು ಗೊಳಿಸಲಾಗಿದೆ. ಟ್ರ್ಯಾಕ್ ಆದ ಅರಣ್ಯ ವ್ಯಾಪ್ತಿಯಲ್ಲಿ ಕೂಮಿಂಗ್ ಕಾರ್ಯಾಚರಣೆ ಮುಂದುವರೆದಿದೆ. ಇನ್ನು ಜಿಲ್ಲೆಯಲ್ಲಿ ಪದೇ ಪದೆ ಸ್ಯಾಟಲೈಟ್ ಫೋನ್ ಟ್ರ್ಯಾಕ್ ಆಗುತಿದ್ದು, ಸಿದ್ದಾಪುರ, ಕಾರವಾರ, ಯಲ್ಲಾಪುರ ಭಾಗದಲ್ಲಿ ಸಹ ಈ ಹಿಂದೆ ಹತ್ತಕ್ಕೂ ಹೆಚ್ಚುಬಾರಿ ಟ್ರ್ಯಾಕ್ ಆಗಿದೆ.

    ಇದೇ ಮೊದಲಲ್ಲ
    ಉತ್ತರ ಕನ್ನಡದಿಂದ ಸ್ಯಾಟಲೈಟ್ ಕರೆ ಹೋದ ಮಾಹಿತಿ ಬರುತ್ತಿರುವುದು ಇದೇ ಮೊದಲಲ್ಲ. ಈ ಹಿಂದೆಯೂ ಹಲವು ಬಾರಿ ಕರೆಯ ಬಗ್ಗೆ ಪೊಲೀಸ್ ಇಲಾಖೆ ತನಿಖೆ ನಡೆದಿದೆ. 2019ರ ಸೆಪ್ಟೆಂಬರ್‍ನಲ್ಲಿ ಕೈಗಾ ಸಮೀಪದ ಕಾಡಿನಿಂದ ಸ್ಯಾಟಲೈಟ್ ಕರೆ ಹೋದ ಬಗ್ಗೆ ಮಾಹಿತಿ ಇದ್ದ ಕಾರಣ, ಅದನ್ನು ಹುಡುಕಲು ಹೋದ ಕಾರವಾರ ಡಿವೈಎಸ್‍ಪಿ ಶಂಕರ್ ಮಾರಿಹಾಳ ನಾಪತ್ತೆಯಾಗಿ ಆತಂಕ ಸೃಷ್ಟಿಸಿದ್ದರು. ಕಾಡು ಪ್ರಾಣಿ ನೋಡಿ ಭಯಗೊಂಡ ಅವರು ಒಂದು ರಾತ್ರಿ ಕಾಡಿನಲ್ಲೇ ಕಳೆದು ಮರುದಿನ ಬೆಳಗ್ಗೆ ಮರಳಿದ್ದರು.

    ತಿಂಗಳ ಹಿಂದೆ ಮಾಜಾಳಿ ಕಡಲ ತೀರದಿಂದ ಸ್ಯಾಟಲೈಟ್ ಕರೆ ಹೋದ ಬಗ್ಗೆ ಮಾಹಿತಿ ಬಂದಿತ್ತು. ಕಳೆದ ವರ್ಷ ಸಿದ್ದಾಪುರ ತಾಲೂಕಿನ ನಿಲ್ಕುಂದ ಸಮೀಪದಿಂದ ಸ್ಯಾಟಲೈಟ್ ಕರೆ ಹೋದ ಮಾಹಿತಿ ಸಿಕ್ಕಿತ್ತು. ಭಟ್ಕಳದ ಐಎಸ್‍ಡಿ ಅಧಿಕಾರಿಗಳು ತೆರಳಿ ಸ್ಥಳೀಯರನ್ನು ವಿಚಾರಣೆಗೊಳಪಡಿಸಿದ್ದರು. ಕಾರವಾರ ಬಂದರು ಸಮೀಪ ಎರಡು ಮೂರು ಬಾರಿ ಸ್ಯಾಟಲೈಟ್ ಕರೆಯ ಸುಳಿವು ಸಿಕ್ಕಿ ಪೊಲೀಸರು ಹುಡುಕಾಟ ನಡೆಸಿದ್ದರು. ಆದರೆ ಇದುವರೆಗೂ ಯಾವುದೇ ಶಂಕಿತರೂ ಪತ್ತೆಯಾಗಿಲ್ಲ.

    ಏನಿದು ಸ್ಯಾಟಲೈಟ್ ಕರೆ?
    ಸ್ಥಳೀಯ ದೂರ ಸಂಪರ್ಕ ಕಂಪನಿಗಳ ಸಂಪರ್ಕ ಜಾಲದ ಸಹಕಾರವಿಲ್ಲದೇ ನೇರವಾಗಿ ಉಪಗ್ರಹ ಸಹಾಯದಿಂದ ಕರೆ ಮಾಡಬಹುದಾದ ಸಾಧನಕ್ಕೆ ಸ್ಯಾಟಲೈಟ್ ಫೋನ್ ಎನ್ನಲಾಗುತ್ತದೆ. ಇದರಿಂದ ಮಾಡುವ ಕರೆ ಹೆಚ್ಚು ವೆಚ್ಚದಾಯಕವಾಗಿದೆ. ಇದನ್ನು ಸಾಮಾನ್ಯ ಜನರು ಬಳಸುವುದು ಕಡಿಮೆ. ಭಾರತದಲ್ಲಿ ಕೇಂದ್ರೀಯ ದೂರ ಸಂಪರ್ಕ ಇಲಾಖೆಯ ಅನುಮತಿಯೊಂದಿಗೆ ಲಿಮರ್‍ಸೆಟ್ ಎಂಬ ಸ್ಯಾಟಲೈಟ್ ಫೋನ್‍ನ್ನು ಬಳಕೆ ಮಾಡಲು ಅನುಮತಿ ಇದೆ. ವಿಮಾನ ಹಾಗೂ ರೈಲಿನಲ್ಲಿ ಪ್ರಯಾಣಿಸುವಾಗ ಫೋನ್ ಕೊಂಡೊಯ್ಯಲು ವಿಶೇಷ ಅನುಮತಿ ಪತ್ರವೂ ಬೇಕು. ತುರಾಯಾ, ಇರೀಡಿಯಂ ಮುಂತಾದ ಕಂಪನಿಗಳ ಸ್ಯಾಟಲೈಟ್ ಫೋನ್ ಬಳಕೆ ಈ ಹಿಂದೆ ದೇಶದಲ್ಲಿತ್ತು.

    2011ರ ಮುಂಬೈ ದಾಳಿಯ ನಂತರ 2012ರಲ್ಲಿ ಈ ಕಂಪನಿಗಳ ಫೋನ್ ಬಳಕೆಯನ್ನು ನಿಷೇಧಿಸಲಾಗಿದೆ. ಈ ಸಂಬಂಧ ಡಿಜಿ ಶಿಪ್ಪಿಂಗ್ ಕೂಡ ವಿಶೇಷ ಆದೇಶ ಹೊರಡಿಸಿದೆ. ಉಗ್ರಗಾಮಿಗಳು, ಭೂಗತ ಪಾತಕಿಗಳು ಸ್ಥಳೀಯ ಭದ್ರತಾ ವ್ಯವಸ್ಥೆಯ ಕಣ್ಣು ತಪ್ಪಿಸಿ ಇದನ್ನು ಬಳಸುತ್ತವೆ ಎಂಬ ಅನುಮಾನದಿಂದ ಈ ಕರೆಯ ಬಗ್ಗೆ ದೇಶದ ಎಲ್ಲ ಭದ್ರತಾ ವಿಭಾಗಗಳು ವಿಶೇಷ ಗಮನ ನೀಡುತ್ತವೆ.

    ಜಿಲ್ಲೆಯಲ್ಲಿ ಆತಂಕ ಏಕೆ?
    ಉತ್ತರ ಕನ್ನಡ ಜಿಲ್ಲೆಯ ಕಾರವಾರದಲ್ಲಿ ಸೀಬರ್ಡ್ ನೌಕಾನೆಲೆ, ಕೈಗಾ ಅಣು ವಿದ್ಯುತ್ ಸ್ಥಾವರ ಹಲವು ಅಣೆಕಟ್ಟುಗಳು, ವಾಣಿಜ್ಯ ಬಂದರನ್ನು ಹೊಂದಿದೆ. ದಟ್ಟ ಕಾಡೂ ಇರುವುದರಿಂದ ವಿಚ್ಛಿದ್ರಕಾರಿ ಶಕ್ತಿಗಳು ಇಲ್ಲಿ ಅಟ್ಟಹಾಸ ಮೆರೆಯುವ ಸಾಧ್ಯತೆ ಇದೆ. ಇದರಿಂದ ಉತ್ತರ ಕನ್ನಡದ ಸ್ಯಾಟಲೈಟ್ ಕರೆಗಳ ಬಗ್ಗೆ ಭದ್ರತಾ ಸಂಸ್ಥೆಗಳು ಹೆಚ್ಚಿನ ಗಮನ ನೀಡುತ್ತವೆ. ಭಟ್ಕಳದಲ್ಲಿ ಇಂಥ ವಿಚಾರಗಳ ಬಗ್ಗೆ ಮಾಹಿತಿ ಕಲೆ ಹಾಕಲು ಐಎಸ್‍ಡಿ ಪ್ರತ್ಯೇಕ ವಿಭಾಗವನ್ನು ಕೇಂದ್ರ ಸರ್ಕಾರ ಇರಿಸಿದೆ. ನೌಕಾ ದಳದ ಗುಪ್ತ ಇಲಾಖೆ ಸಹ ಇದರ ಬಗ್ಗೆ ಹೆಚ್ಚಿನ ತನಿಖೆ ಕೈಗೊಳ್ಳುತ್ತದೆ.

    ರಾಷ್ಟ್ರೀಯ ಭದ್ರತಾ ದೃಷ್ಟಿಯಿಂದ ಕಾರವಾರ ಅತೀ ಮುಖ್ಯ ಪ್ರದೇಶವಾಗಿದೆ. ಈ ಹಿನ್ನಲೆಯಲ್ಲಿ ಕಾರವಾರದಲ್ಲಿ ರಾಷ್ಟ್ರೀಯ ಭದ್ರತಾ ದಳ, ಕೇಂದ್ರ ಇಂಟಲಿಜನ್ಸಿಗಳು ಸ್ಯಾಟಲೈಟ್ ಮೂಲಕವೂ ಇಲ್ಲಿನ ಆಗುಹೊಗುಗಳ ಬಗ್ಗೆ ಹದ್ದಿನ ಕಣ್ಣಿಟ್ಟಿರುತ್ತವೆ. ಕಾರವಾರದ ನೌಕಾನೆಲೆ ಉಗ್ರಗಾಮಿಗಳ, ವಿರೋಧಿ ರಾಷ್ಟ್ರಗಳ ಮುಖ್ಯ ಟಾರ್ಗೆಟ್ ಸಹ ಆಗಿದ್ದು, ಇಲ್ಲಿನ ರಹಸ್ಯಗಳು ಭದ್ರತೆಗಳ ಮಾಹಿತಿ ವೈರಿಗಳಿಗೆ ಸಿಗದಂತೆ ಕಾಪಾಡುವುದು ಅತ್ಯವಶ್ಯ. ಇದಲ್ಲದೇ ವೈರಿಗಳು ದಾಳಿ ನಡೆಸದಂತೆ ತಡೆಯಲು ಸಿದ್ಧವಿರಬೇಕಿದ್ದು, ಮುಂಬೈನಲ್ಲಿ ದಾಳಿ ನಡೆಸಿದಂತೆ ಇಲ್ಲಿಯೂ ದಾಳಿ ನಡೆಯುವ ಸಾಧ್ಯತೆಗಳಿರುತ್ತವೆ. ಹೀಗಾಗಿ ಕಟ್ಟೆಚ್ಚರ ವಹಿಸುವುದು ಅನಿವಾರ್ಯವಾಗಿದೆ.

    ರಕ್ಷಣಾ ಸಿಬ್ಬಂದಿಗೆ ತಾಂತ್ರಿಕ ಸಮಸ್ಯೆ!
    ಆಂತರಿಕಾ ಭದ್ರತಾ ಸಿಬ್ಬಂದಿ ಹೇಳುವಂತೆ ಸ್ಯಾಟಲೈಟ್ ಸಿಗ್ನಲ್ ಟ್ರ್ಯಾಕ್ ಆದಾಗ ತಕ್ಷಣ ಕಾರ್ಯೋನ್ಮುಖವಾಗಬೇಕಾಗುತ್ತದೆ. ಆದರೆ ಕಾರವಾರದಲ್ಲಿ ಬಂದರು ಇದೆ. ಇಲ್ಲಿ ಬರುವ ಅಂತರಾಷ್ಟ್ರೀಯ ಹಡಗುಗಳಲ್ಲಿ ಸ್ಯಾಟಲೈಟ್ ಫೋನ್ ಬಳಕೆ ಇರುತ್ತದೆ. ಇಂತಹ ಸಂದರ್ಭದಲ್ಲಿ ಎಲ್ಲೋ ಬಳಸಿದ ಸಿಗ್ನಲ್ ಮತ್ತೆಲ್ಲೋ ಟ್ರ್ಯಾಕ್ ಆಗುವ ಸಮಸ್ಯೆಗಳು ಸಹ ಇದೆ. ಇದು ಪತ್ತೆ ಹಚ್ಚುವಲ್ಲಿ ವಿಘ್ನ ತಂದೊಡ್ಡುತ್ತದೆ, ಅದಲ್ಲದೆ ಕೆಲವು ಖಾಸಗಿ ವಿಮಾನಗಳಲ್ಲಿ ಸ್ಯಾಟಲೈಟ್ ಫೋನ್ ಬಳಸುವುದರಿಂದ ಈ ಭಾಗದಲ್ಲಿ ಹಾರಾಡಿದ ವಿಮಾನದ ಸಿಗ್ನಲ್ ಟ್ರ್ಯಾಕ್ ಆಗುತ್ತದೆ. ಹೀಗಾಗಿ ಇಂತಹದ್ದೇ ಎಂದು ಹುಡುಕುವುದು ಕಷ್ಟವಾಗಿದೆ. ಜಿಲ್ಲೆಯಲ್ಲಿ ಈ ವರೆಗೆ ವಿವಿಧ ಭಾಗದಲ್ಲಿ 10ಕ್ಕೂ ಹೆಚ್ಚುಬಾರಿ ಸ್ಯಾಟಲೈಟ್ ಫೋನ್ ಟ್ರ್ಯಾಕ್ ಆಗಿದ್ದು, ಈ ವರೆಗೆ ಯಾವ ಮೂಲ ಎಂಬುದು ಪತ್ತೆಯಾಗಿಲ್ಲ.