Tag: Sathish Jaraki Holly

  • KPCC ಸಭೆಗೆ ಶಾಸಕಿ ಹೆಬ್ಬಾಳ್ಕರ್, ನಿಂಬಾಳ್ಕರ್ ಗೈರು

    KPCC ಸಭೆಗೆ ಶಾಸಕಿ ಹೆಬ್ಬಾಳ್ಕರ್, ನಿಂಬಾಳ್ಕರ್ ಗೈರು

    ಬೆಳಗಾವಿ: ವಾಯುವ್ಯ ಪದವೀಧರ ಮತ್ತು ಶಿಕ್ಷಕರ ಕ್ಷೇತ್ರದ ಚುನಾವಣೆ ಹಿನ್ನೆಲೆಯಲ್ಲಿ ಕಾಂಗ್ರೆಸ್ ಪಕ್ಷದಿಂದ ನಡೆದ ಸಭೆಗೆ ಶಾಸಕರಾದ ಲಕ್ಷ್ಮೀ ಹೆಬ್ಬಾಳ್ಕರ್ ಹಾಗೂ ಅಂಜಲಿ ನಿಂಬಾಳ್ಕರ್ ಗೈರಾಗಿದ್ದಾರೆ.

    ನಗರದ ಸಂಕಂ ಹೋಟೆಲ್‌ನಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ನೇತೃತ್ವದಲ್ಲಿ ನಡೆಯುತ್ತಿರುವ ಸಭೆಯಲ್ಲಿ ಮಾಜಿ ಸಚಿವ ಎ.ಬಿ.ಪಾಟೀಲ್, ವೀರಕುಮಾರ್ ಪಾಟೀಲ್ ಹಾಜರಾಗಿದ್ದು, ಶಾಸಕರಾದ ಲಕ್ಷ್ಮೀ ಹೆಬ್ಬಾಳ್ಕರ್, ಅಂಜಲಿ ನಿಂಬಾಳ್ಕರ್ ಹಾಗೂ ಮಹಾಂತೇಶ ಕೌಜಲಗಿ ಗೈರಾಗಿದ್ದಾರೆ. ಇದನ್ನೂ ಓದಿ: ನಮ್ಮಲ್ಲಿ ಯಾವುದೇ ಬಣ ಇಲ್ಲ, ಹೈಕಮಾಂಡ್‌ ಹೇಳಿದ್ದೇ ಅಂತಿಮ: ಪರಿಷತ್‌ ಟಿಕೆಟ್‌ ಬಗ್ಗೆ ಡಿಕೆಶಿ ಮಾತು

    ಕಾಂಗ್ರೆಸ್ ಪಕ್ಷದಲ್ಲೂ ಬಣ ರಾಜಕೀಯ ಶುರುವಾಗಿರುವ ಅನುಮಾನ ಮೂಡುತ್ತಿದೆ. ಇನ್ನೂ ಕಾಂಗ್ರೆಸ್ ಪಕ್ಷದಿಂದ ಮೇ 25ಕ್ಕೆ ನಾಮಪತ್ರ ಸಲ್ಲಿಕೆಗೆ ನಿರ್ಧರಿಸಲಾಗಿದೆ. ಶಿಕ್ಷಕರ ಕ್ಷೇತ್ರದ ಅಭ್ಯರ್ಥಿ ಮಾಜಿ ಸಚಿವ ಪ್ರಕಾಶ್ ಹುಕ್ಕೇರಿ, ಪದವೀಧರ ಕ್ಷೇತ್ರದ ಅಭ್ಯರ್ಥಿ ಸುನಿಲ್ ಸಂಕ ನಾಮಪತ್ರ ಸಲ್ಲಿಕೆ ಮಾಡಲಿದ್ದಾರೆ. ಇದನ್ನೂ ಓದಿ: ಸದ್ಗುರು ಜೊತೆ ಮಂಡಿ ನೋವಿನ ಬಗ್ಗೆ ಹೇಳಿಕೊಂಡ ಸಿಎಂ

    ಇನ್ನು ನಾಮಪತ್ರ ಸಲ್ಲಿಕೆ ವೇಳೆ ಪಾಲ್ಗೊಳ್ಳುವಂತೆ ವಿಪಕ್ಷ ನಾಯಕ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರಿಗೆ ಆಹ್ವಾನ ನೀಡಲಾಗುತ್ತದೆ. ಇಂದಿನ ಸಭೆಯಲ್ಲಿ ಮತದಾರರನ್ನು ಸೆಳೆಯಲು ಏನೆಲ್ಲಾ ರೂಪು ರೇಷೆಗಳನ್ನು ಸಿದ್ಧಪಡಿಸಬೇಕು ಎಂಬುದರ ಬಗ್ಗೆ ಚರ್ಚಿಸಲಾಯಿತು.

  • ಕಾಂಗ್ರೆಸ್ ಇರುವುದೇ ಸಂವಿಧಾನ ರಕ್ಷಣೆಗೆ: ಜಾರಕಿಹೊಳಿ

    ಕಾಂಗ್ರೆಸ್ ಇರುವುದೇ ಸಂವಿಧಾನ ರಕ್ಷಣೆಗೆ: ಜಾರಕಿಹೊಳಿ

    ಕೊಪ್ಪಳ: ಬಿಜೆಪಿಗರು ಪದೇ-ಪದೇ ಸಂವಿಧಾನ ಬದಲಿಸುವ ಮಾತ್ನಾಡುತ್ತಾರೆ. ಆದರೆ ಕಾಂಗ್ರೆಸ್ ಇರುವುದೇ ಸಂವಿಧಾನ ರಕ್ಷಣೆಗೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಹೇಳಿದರು.

    ಕೊಪ್ಪಳದ ಕುಷ್ಟಗಿಯಲ್ಲಿ ಇಂದು ಜರುಗಿದ ಸಂವಿಧಾನ ರಕ್ಷಣಾ ಸಮಾವೇಶದಲ್ಲಿ ಪಾಲ್ಗೊಳ್ಳುವ ಮುನ್ನಾ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಸಂವಿಧಾನ ರಕ್ಷಣೆಗಾಗಿ ಕಾಂಗ್ರೆಸಿಗರು ಬೇರೆ-ಬೇರೆ ಕಡೆ ಇಂತಹ ಕಾರ್ಯಕ್ರಮಗಳನ್ನು ಮಾಡುತ್ತಿದ್ದೇವೆ. ಇದರಿಂದ ಸಂವಿಧಾನದ ಬಗ್ಗೆ ಜನರಲ್ಲಿ ಹೆಚ್ಚೆಚ್ಚು ಅರಿವು ಮೂಡಿಸಲಾಗುತ್ತಿದೆ ಎಂದರು. ಇದನ್ನೂ ಓದಿ: ಟಿಕ್‍ಟಾಕ್, ಪಬ್‍ಜಿ ಯುವಕರ ದಾರಿ ತಪ್ಪಿಸುತ್ತೆ – ಬ್ಯಾನ್ ಮಾಡಿದ ತಾಲಿಬಾನ್

    ಮಾಜಿ ಸಿಎಂ ಸಿದ್ದರಾಮಯ್ಯ ಅವರಿಗೆ ಹಲವು ಶಾಸಕರು ಕ್ಷೇತ್ರ ಬಿಟ್ಟು ಕೊಡುವ ವಿಚಾರವಾಗಿ ಮಾತನಾಡಿದ ಅವರು, ಸಿದ್ದರಾಮಯ್ಯ ರಾಜ್ಯಮಟ್ಟದ ನಾಯಕರು. ಸಹಜವಾಗಿ ಶಾಸಕರು ನಮ್ಮ ಜಿಲ್ಲೆಯಲ್ಲಿ ಸಿದ್ದರಾಮಯ್ಯ ಅವರು ಬಂದರೆ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ ಅನ್ನೋ ಕಾರಣಕ್ಕೆ ಈ ರೀತಿ ಹೇಳುತ್ತಿದ್ದಾರೆ. ಇದೊಂದು ಟ್ರೆಂಡ್ ಆಗಿದೆ ಎಂದರು.

    ಕಾಂಗ್ರೆಸ್‍ನಲ್ಲಿ ಸಿಎಂ ಕುರ್ಚಿಗೆ ಸ್ಪರ್ಧೆ ಇದೆ ಎನ್ನುವ ಪ್ರಲ್ಹಾದ್ ಜೋಶಿ ಹೇಳಿಕೆಗೆ ಪ್ರತಿಕ್ರಿಯೆ ನೀಡಿದ ಅವರು, ಬಿಜೆಪಿಯಲ್ಲೂ ಐದಾರು ನಾಯಕರು ಸಿಎಂ ರೇಸ್‍ನಲ್ಲಿ ಇದ್ದಾರೆ. ಅದೇ ರೀತಿ ಕಾಂಗ್ರೆಸ್‍ನಲ್ಲೂ ಇದ್ದಾರೆ. ಇದು ಎಲ್ಲ ಪಕ್ಷದಲ್ಲೂ ಸಹಜ. ಇದೇನು ದೊಡ್ಡ ವಿಚಾರವಲ್ಲ. ಸಿಎಂ ಎನ್ನುವುದು ಚುನಾವಣೆ ನಂತರ ನಿರ್ಧಾರವಾಗುತ್ತದೆ ಎಂದರು.

    ಬಿಜೆಪಿ ಸರ್ಕಾರದಲ್ಲಿ ಹೊರಬರುತ್ತಿರುವ ಅಕ್ರಮ ವಿಚಾರಗಳ ಬಗ್ಗೆ ಮಾತನಾಡಿದ ಅವರು, ಎಲ್ಲ ಅಕ್ರಮದಲ್ಲೂ ಬಿಜೆಪಿ ನಾಯಕರು ಭಾಗಿಯಾಗಿದ್ದಾರೆ. ಈಗ ಒಂದೊಂದು ಹೊರಬರುತ್ತಿದೆ. ಇದರಿಂದ ತಪ್ಪಿತಸ್ಥರಿಗೆ ಶಿಕ್ಷೆಯಾಗಬೇಕು. ದೆಹಲಿಯಿಂದ ಹಿಡಿದು ಹಳ್ಳಿವರೆಗೂ ಈ ಕೆಲಸ ನಡೆದಿದೆ ಎಂದರು.

    ಬಲಪಂಕ್ತಿಯ ವಿಚಾರ ಇರುವವರನ್ನು ಉನ್ನತ ಹುದ್ದೆಗೆ ತರಲಾಗುತ್ತಿದೆ. ಇದು ದೇಶದಲ್ಲಿ ಮನುವಾದವನ್ನು ಬಿತ್ತುವ ಹುನ್ನಾರವಾಗಿದ್ದು, ಅದು ನಮ್ಮ ದೇಶದಲ್ಲಿ ಸಾಧ್ಯವಾಗುವುದಿಲ್ಲ ಎಂದರು. ಇದನ್ನೂ ಓದಿ: ಸ್ಟೈಲಿಶ್ ಆಗಿ ಕಾಣಲು ಸರಳ ಟಿಪ್ಸ್