Tag: Sathish jarkiholi

  • ನಾನು ಈಗಲೂ ಲಿಂಗಾಯತ ಪ್ರತ್ಯೇಕ ಧರ್ಮದ ಹೋರಾಟದ ಪರ ಇದ್ದೇನೆ: ಸತೀಶ್ ಜಾರಕಿಹೊಳಿ

    ನಾನು ಈಗಲೂ ಲಿಂಗಾಯತ ಪ್ರತ್ಯೇಕ ಧರ್ಮದ ಹೋರಾಟದ ಪರ ಇದ್ದೇನೆ: ಸತೀಶ್ ಜಾರಕಿಹೊಳಿ

    ಚಿಕ್ಕೋಡಿ: ನಾನು ಈಗಲೂ ಸಹ ಲಿಂಗಾಯತ ಪ್ರತ್ಯೇಕ ಧರ್ಮದ ಹೋರಾಟದ ಪರವೇ ಇದ್ದೇನೆ ಎಂದು ಶಾಸಕ ಸತೀಶ್ ಜಾರಕಿಹೊಳಿ ಹೇಳಿದ್ದಾರೆ.

    ರಾಯಬಾಗ ತಾಲೂಕಿನ ಭಾವನ ಸೌದತ್ತಿ ಗ್ರಾಮದಲ್ಲಿ ಖಾಸಗಿ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಡಿಕೆ ಶಿವಕುಮಾರ್‍ರವರ ಲಿಂಗಾಯತ ಪ್ರತ್ಯೇಕ ಧರ್ಮ ಹೋರಾಟ ತಪ್ಪೊಪ್ಪಿಗೆ ಅವರ ವೈಯಕ್ತಿಕ ಅಭಿಪ್ರಾಯ. ಅವರ ಹೇಳಿಕೆಗೂ ಪಕ್ಷಕ್ಕೂ ಯಾವುದೇ ಸಂಬಂಧವಿಲ್ಲ. ಲಿಂಗಾಯತ ಧರ್ಮ ಹೋರಾಟವನ್ನು ಕಾಂಗ್ರೆಸ್ ಪಕ್ಷ ಸರಿಯಾಗಿ ಪ್ರಸ್ತುತ ಪಡಿಸಲು ಆಗದೆ ನಾವು ಎಡವಿದ್ದೇವೆ. ನಾನು ಈಗಲೂ ಬಸವೇಶ್ವರರ ಪ್ರತ್ಯೇಕ ಲಿಂಗಾಯತ ಧರ್ಮ ಹೋರಾಟದ ಪರವೇ ಇದ್ದೇನೆ ಎಂದು ಹೇಳಿದ್ದಾರೆ.

    ಜನರಿಗೆ ಹಾಗೂ ಪಕ್ಷಕ್ಕೆ ಅನುಕೂಲ ಆಗಲಿ ಎಂದು ಹೋರಾಟಕ್ಕೆ ಕೈ ಹಾಕಿದ್ದೇವು. ಆದರೆ ಈಗ ಅದು ಮುಗಿದು ಹೋದ ಅಧ್ಯಾಯ ಆಗಿದೆ. ಸಮಾಜದ ವಿಷಯದಲ್ಲಿ ಭಿನ್ನಾಭಿಪ್ರಾಯಗಳು ಇದ್ದರೂ, ಪಕ್ಷದ ವಿಷಯಕ್ಕೆ ಬಂದರೆ ನಾವು ಒಗ್ಗಟ್ಟಾಗಿದ್ದೇವೆ. ಈ ವಿಷಯದಲ್ಲಿ ನಾನು ಖಂಡಿತ ಎಂ.ಬಿ.ಪಾಟೀಲರ ಬೆಂಬಲಕ್ಕೆ ನಿಲ್ಲುತ್ತೇನೆ ಎಂದು ಹೇಳುವ ಮೂಲಕ ಡಿಕೆಶಿಗೆ ಪರೋಕ್ಷವಾಗಿ ಟಾಂಗ್ ನೀಡಿದರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

  • ಬೆಳಗಾವಿ ವಿಷಯಕ್ಕೆ ಡಿಕೆಶಿ ಎಂಟ್ರಿಯಾಗಿದ್ರಿಂದ್ಲೆ ಗೊಂದಲ ಸೃಷ್ಟಿಯಾಗಿದ್ದು: ಸತೀಶ್ ಜಾರಕಿಹೊಳಿ

    ಬೆಳಗಾವಿ ವಿಷಯಕ್ಕೆ ಡಿಕೆಶಿ ಎಂಟ್ರಿಯಾಗಿದ್ರಿಂದ್ಲೆ ಗೊಂದಲ ಸೃಷ್ಟಿಯಾಗಿದ್ದು: ಸತೀಶ್ ಜಾರಕಿಹೊಳಿ

    ಬೆಂಗಳೂರು: ಬೆಳಗಾವಿಯಲ್ಲಿ ಸಚಿವ ಡಿ.ಕೆ.ಶಿವಕುಮಾರ್ ಮಧ್ಯಪ್ರವೇಶದಿಂದ ಗೊಂದಲವಾಗಿದ್ದು, ಇನ್ನು ಮುಂದೆ ಅವರು ಯಾವುದೇ ಕಾರಣಕ್ಕೂ ತಲೆ ಹಾಕಬಾರದು ಎಂದು ಸತೀಶ್ ಜಾರಕಿಹೊಳಿ ಎಚ್ಚರಿಕೆ ನೀಡಿದ್ದಾರೆ.

    ಬೆಳಗಾವಿ ವಿಚಾರದ ಕುರಿತು ಪಬ್ಲಿಕ್ ಟಿವಿಯೊಂದಿಗೆ ಮಾತನಾಡಿದ ಅವರು, ಬೆಳಗಾವಿ ವಿಚಾರಕ್ಕೆ ಡಿಕೆಶಿಯವರು ಪ್ರವೇಶಿಸಿದ್ದಕ್ಕೆ ಗೊಂದಲ ಸೃಷ್ಟಿಯಾಗಿತ್ತು. ಹೀಗಾಗಿ ಅವರು ಬೆಳಗಾವಿ ವಿಚಾರಕ್ಕೆ ಯಾವುದೇ ಕಾರಣಕ್ಕೂ ಮಧ್ಯ ಪ್ರವೇಶ ಮಾಡುವಂತಿಲ್ಲ. ನಮ್ಮ ಸಮಸ್ಯೆಯನ್ನು ರಾಜ್ಯ ಕಾಂಗ್ರೆಸ್ ನಾಯಕರು ವಿಚಾರಿಸಿ, ಬಗೆಹರಿಸಿದರೇ ಎಲ್ಲಾ ಸರಿ ಹೋಗುತ್ತೆ. ನಾನು ಕೂಡ ಮುಖ್ಯಮಂತ್ರಿಯಾಗಬೇಕು ಅದಕ್ಕೆ ಇನ್ನೂ ಸಮಯವಿದೆ ಎಂದು ಹೇಳಿದರು.

    ಕಳೆದ ನಾಲ್ಕು ತಿಂಗಳಿನಿಂದಲೂ ಬಿಜೆಪಿ ನಾಯಕರ ಒತ್ತಡ ನಮ್ಮ ಮೇಲಿದೆ. ಆದರೆ ನಾವು ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು. ಈ ಸರ್ಕಾರಕ್ಕೆ ನಮ್ಮಿಂದ ಯಾವುದೇ ಸಮಸ್ಯೆ ಆಗುವುದಿಲ್ಲ. ನನ್ನ ಸಹೋದರನ ಜೊತೆ ಸಮಸ್ಯೆಗಳ ಬಗ್ಗೆ ಇಂದು ಚರ್ಚೆ ನಡೆಸುತ್ತೇನೆ. ಯಾವೆಲ್ಲಾ ಬಿಜೆಪಿ ನಾಯಕರ ಜೊತೆ ಸಂಪರ್ಕದಲ್ಲಿದ್ದಾರೆ ಅನ್ನೋದು ನನಗೆ ಗೊತ್ತಿಲ್ಲ ಎಂದು ತಿಳಿಸಿದರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

  • ಲಕ್ಷ್ಮೀ ಹೆಬ್ಬಾಳ್ಕರ್, ನನ್ನ ಸಮಸ್ಯೆ ಒಂದೇ ಆಗಿದೆ – ಸತೀಶ್ ಜಾರಕಿಹೊಳಿ

    ಲಕ್ಷ್ಮೀ ಹೆಬ್ಬಾಳ್ಕರ್, ನನ್ನ ಸಮಸ್ಯೆ ಒಂದೇ ಆಗಿದೆ – ಸತೀಶ್ ಜಾರಕಿಹೊಳಿ

    ಬೆಳಗಾವಿ: ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ಸೇರಿದಂತೆ ತನಗೂ ಸಚಿವ ಸ್ಥಾನ ನೀಡಿಲ್ಲ. ನಾವಿಬ್ಬರೂ ಸೇರಿಕೊಂಡು ನಮಗೆ ಸಚಿವ ಸ್ಥಾನ ತಪ್ಪಿಸಿದವರು ಯಾರು ಎಂದು ಹುಡುಕಾಟ ನಡೆಸಬೇಕಿದೆ ಎಂದು ಯಮಕನಮರಡಿ ಕಾಂಗ್ರೆಸ್ ಶಾಸಕ ಸತೀಶ್ ಜಾರಕಿಹೋಳಿ ಹೇಳಿದ್ದಾರೆ.

    ಲಕ್ಷ್ಮೀ ಹೆಬ್ಬಾಳ್ಕರ್ ಗೆ ಮಂತ್ರಿ ಸ್ಥಾನ ಕೈ ತಪ್ಪಿದ ವಿಚಾರ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಜಾರಕಿಹೊಳಿ ಅವರು, ಅವರಿಗೂ ಸಚಿವ ಸ್ಥಾನ ತಪ್ಪಿದೆ. ನನಗೂ ಸಚಿವ ಸ್ಥಾನ ತಪ್ಪಿದೆ. ಹೀಗಿರುವಾಗ ಯಾರು ಯಾರಿಗೆ ಸಚಿವ ಸ್ಥಾನ ತಪ್ಪಿಸಿದರು ಎನ್ನುವ ಮಾತೇ ಉದ್ಭವಿಸುವುದಿಲ್ಲ. ಆದರೆ ಅವರು ಸಚಿವ ಸ್ಥಾನ ತಪ್ಪಿದ್ದಕ್ಕೆ ಕಣ್ಣೀರು ಹಾಕಿದ್ದಾರೆ, ನಾನು ಹಾಕಲಿಲ್ಲ ಅಷ್ಟೇ. ನಾವಿಬ್ಬರೂ ಸೇರಿಕೊಂಡು ನಮಗೆ ಸಚಿವ ಸ್ಥಾನ ತಪ್ಪಿಸಿದವರು ಯಾರು ಅಂತಾ ಹುಡುಕಾಡಬೇಕಿದೆ ಎಂದು ಹೇಳಿದ್ದಾರೆ.

    ಸಚಿವ ಸ್ಥಾನದ ನೀಡುವಲ್ಲಿ ಪಕ್ಷದಲ್ಲಿ ಉಂಟಾಗಿರುವ ತಾರತಮ್ಯದ ಕುರಿತು ಈಗಾಗಲೇ ತಮ್ಮ ಅಸಮಾಧಾನವನ್ನು ನಾಯಕರಿಗೆ ತಿಳಿಸಿದ್ದು, ಸೋಮವಾರವೇ ಎಐಸಿಸಿ ಕಾರ್ಯದರ್ಶಿ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದೇನೆ. ಕಾರ್ಯಕರ್ತರ ಒತ್ತಾಯಕ್ಕೆ ಮಣಿದು ನಾನು ರಾಜೀನಾಮೆ ಸಲ್ಲಿಸಿದ್ದೇನೆ. ಮುಂದೆ ಅತೃಪ್ತ ಶಾಸಕರಿಗೆ ಸಚಿವ ಸ್ಥಾನ, ಸೂಕ್ತ ಸ್ಥಾನಮಾನ ನೀಡಬೇಕು ಎಂದರು.

    ಇದೇ ವೇಳೆ ಶುಕ್ರವಾರ ರಾಜ್ಯ ಉಸ್ತುವಾರಿ ವೇಣುಗೋಪಾಲ್ ಸಮ್ಮುಖದಲ್ಲಿ ಬೆಂಗಳೂರಲ್ಲಿ ಸಭೆ ನಡೆಯಲಿದೆ ಎಂದು ತಿಳಿಸಿದ ಅವರು, ಸಭೆಯಲ್ಲಿ ಭಾಗವಹಿಸುತ್ತೇನೆ. ಆದರೆ ನಾನೇನು ಸಚಿವ ಸ್ಥಾನದ ಆಕಾಂಕ್ಷಿಯಲ್ಲ. ಪಕ್ಷದಲ್ಲಿದ್ದುಕೊಂಡೇ ಚರ್ಚೆ ಮಾಡುತ್ತೇವೆ. ನಮ್ಮ ಬೇಡಿಕೆಯನ್ನ ಕೇಳುತ್ತೇವೆ. ಸಮಿಶ್ರ ಸರ್ಕಾರಕ್ಕೆ ಯಾವುದೇ ತೊಂದರೆಯಾವುದಿಲ್ಲ ಎಂದು ತಿಳಿಸಿದರು.

    ಸದ್ಯ ಪಕ್ಷದಲ್ಲಿ ಉಂಟಾಗಿರುವ ಗೊಂದಲ ಹಾಗೂ ಸಮಸ್ಯೆಗಳು ಬಗೆಹರಿಯಲಾರದ ಸಮಸ್ಯೆಗಳಲ್ಲ. ಶೀಘ್ರವೇ ಈ ಕುರಿತ ಎಲ್ಲವೂ ಬಗೆಹರಿಯಲಿದೆ. ಆದರೆ ನಾನು ರಾಜೀನಾಮೆ ನೀಡಿರುವ ಕುರಿತು ಕೆಲ ನಾಯಕರು ನನ್ನ ಜೊತೆ ಮಾತನಾಡಿದ್ದಾರೆ. ಆದರೂ ರಾಜೀನಾಮೆಯಿಂದ ಯಾವುದೇ ಕಾರಣಕ್ಕೂ ಹಿಂದೆ ಸರಿಯುವುದಿಲ್ಲ ಎಂದು ಸ್ಪಷ್ಟ ಪಡಿಸಿದರು.

    ರಾಜ್ಯದ ವಾಲ್ಮೀಕಿ ಸಮುದಾಯದ ಪ್ರಮುಖ ನಾಯಕರಾಗಿರುವ ಸತೀಶ್ ಜಾರಕಿಹೊಳಿ ಅವರು ಯಮಕನಮರಡಿ ಕ್ಷೇತ್ರದಿಂದ ಮೂರು ಬಾರಿ ಶಾಸಕರಾಗಿ ಆಯ್ಕೆ ಆಗಿದ್ದಾರೆ.

     

  • ಬೆಳಗಾವಿ ದಕ್ಷಿಣ ಕ್ಷೇತ್ರದಿಂದ ಎಂಡಿ ಲಕ್ಷ್ಮಿನಾರಾಯಣ್‍ಗೆ ಟಿಕೆಟ್- ಸಿಎಂ ವಿರುದ್ಧ ಸತೀಶ್ ಜಾರಕಿಹೋಳಿ ಗರಂ

    ಬೆಳಗಾವಿ ದಕ್ಷಿಣ ಕ್ಷೇತ್ರದಿಂದ ಎಂಡಿ ಲಕ್ಷ್ಮಿನಾರಾಯಣ್‍ಗೆ ಟಿಕೆಟ್- ಸಿಎಂ ವಿರುದ್ಧ ಸತೀಶ್ ಜಾರಕಿಹೋಳಿ ಗರಂ

    ಬೆಳಗಾವಿ: ಜಿಲ್ಲೆಯ ದಕ್ಷಿಣ ವಿಧಾನಸಭಾ ಕ್ಷೇತ್ರದ ಟಿಕೆಟ್ ಹಂಚಿಕೆ ವಿವಾದದಿಂದ ಸಿಎಂ ಸಿದ್ದರಾಮಯ್ಯ ಹಾಗೂ ಮಾಜಿ ಸಚಿವ ಸತೀಶ್ ಜಾರಕಿಹೋಳಿ ನಡುವೆ ಮತ್ತೊಂದು ಸುತ್ತಿನ ಮುನಿಸಿಗೆ ಕಾರಣವಾಗುವ ಸಾಧ್ಯತೆ ಇದೆ.

    ಕೆಪಿಸಿಸಿ ಹಿಂದುಳಿದ ಘಟಕದ ಅಧ್ಯಕ್ಷ ಹಾಲಿ ಪರಿಷತ್ ಸದಸ್ಯ ಎಂ.ಡಿ.ಲಕ್ಷ್ಮಿ ನಾರಾಯಣ್ ಈ ವಿವಾದದ ಮೂಲ. ಬೆಳಗಾವಿ ದಕ್ಷಿಣ ವಿಧಾನಸಭಾ ಕ್ಷೇತ್ರದಲ್ಲಿ 35 ಸಾವಿರ ನೇಕಾರ ಸಮುದಾಯದ ಮತದಾರರಿದ್ದಾರೆ. ಆದ್ದರಿಂದ ನೇಕಾರ ಸಮುದಾಯದ ಲಕ್ಷ್ಮಿನಾರಾಯಣ್‍ಗೆ ಬೆಳಗಾವಿ ದಕ್ಷಿಣ ಟಿಕೆಟ್ ಎಂದು ಸಿಎಂ ಘೋಷಿಸಿದ್ದಾರೆ. ಇದು ಜಿಲ್ಲೆಯ ಪ್ರಭಾವಿ ನಾಯಕ ಸತೀಶ್ ಜಾರಕಿಹೋಳಿ ಕಣ್ಣು ಕೆಂಪಾಗಿಸಿದೆ.

    ಜಿಲ್ಲಾ ಮುಖಂಡರ ಅನುಮತಿ ಪಡೆಯದೆ ತುಮಕೂರಿನ ಲಕ್ಷ್ಮಿನಾರಾಯಣ್ ಹೆಸರನ್ನು ಸಿಎಂ ಘೋಷಿಸಿದ್ದು ಹೇಗೆ? ಎಂದು ಸತೀಶ್ ಜಾರಕಿಹೋಳಿ ಸಿಟ್ಟಾಗಿದ್ದು, ಜಿಲ್ಲಾ ಮುಖಂಡರ ಸಮ್ಮುಖದಲ್ಲಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಅದು ಹೇಗೆ ಟಿಕೆಟ್ ಕೊಟ್ಟು ಸಿಎಂ ಗೆಲ್ಲಿಸ್ತಾರೆ ನೋಡೋಣ ಎಂದಿದ್ದಾರೆ.

    ಅಲ್ಲದೆ ಇವರೊಬ್ಬರೆನಾ ಹಿಂದುಳಿದ ವರ್ಗದ ನಾಯಕ? ನಾನು ನೋಡ್ತೀನಿ ಎಂದು ಅಸಮಧಾನ ಹೊರಹಾಕಿದ್ದಾರೆ. ರಾಜ್ಯ ನಾಯಕರ ಬಳಿಯೂ ಅಸಮಧಾನ ತೋಡಿಕೊಂಡಿದ್ದಾರೆ ಎನ್ನಲಾಗಿದೆ.