Tag: sathyaraj

  • Sikandar: ಸಲ್ಮಾನ್ ಖಾನ್‌ಗೆ ತಮಿಳು ನಟ ಸತ್ಯರಾಜ್ ವಿಲನ್

    Sikandar: ಸಲ್ಮಾನ್ ಖಾನ್‌ಗೆ ತಮಿಳು ನಟ ಸತ್ಯರಾಜ್ ವಿಲನ್

    ಬಾಲಿವುಡ್ ನಟ ಸಲ್ಮಾನ್ ಖಾನ್ ನಟನೆಯ ‘ಸಿಖಂದರ್’ (Sikandar Film) ಚಿತ್ರದ ಮೇಲೆ ಭಾರೀ ನಿರೀಕ್ಷೆಯಿದೆ. ಸಾಲು ಸಾಲು ಸಿನಿಮಾಗಳ ಸೋಲಿನ ಸುಳಿಯಲ್ಲಿರುವ ಸಲ್ಮಾನ್‌ಗೆ (Salman Khan) ಯಶಸ್ಸು ಬೇಕಾಗಿದೆ. ಹಾಗಾಗಿ ದಕ್ಷಿಣದ ತಾರೆಯರಿಗೆ ಚಿತ್ರತಂಡ ಮಣೆ ಹಾಕುತ್ತಿದೆ. ಇದೀಗ ಸಲ್ಮಾನ್‌ಗೆ ಕಟ್ಟಪ್ಪ ಖ್ಯಾತಿಯ ಸತ್ಯರಾಜ್ ವಿಲನ್ ಆಗಿ ಕಾಣಿಸಿಕೊಳ್ತಿದ್ದಾರೆ.

    ವಿಲನ್ ಖಡಕ್ ಆಗಿ ಇದ್ದರೆ ತಾನೇ ಹೀರೋಗೆ ಬೆಲೆ. ಅದಕ್ಕಾಗಿ ಸಲ್ಮಾನ್ ಖಾನ್ ಎದುರು ಅಬ್ಬರಿಸಲು ‘ಬಾಹುಬಲಿ’ ಖ್ಯಾತಿಯ ಕಟ್ಟಪ್ಪ ಪಾತ್ರಧಾರಿ ಸತ್ಯರಾಜ್ ಸೂಕ್ತ ಎನಿಸಿ ‘ಸಿಖಂದರ್’ ತಂಡ ಅವರನ್ನು ಸಂಪರ್ಕಿಸಿದೆ. ಪಾತ್ರದ ಬಗ್ಗೆ ಒಂದು ಸುತ್ತಿನ ಮಾತುಕತೆ ಕೂಡ ನಡೆದಿದೆ. ಆದರೆ ಚಿತ್ರತಂಡ ಅಧಿಕೃತ ಘೋಷಣೆ ಆಗಬೇಕಿದೆ. ಇದನ್ನೂ ಓದಿ:ಶೂಟಿಂಗ್ ಮುಗಿಸಿದ ಶಿವಕಾರ್ತಿಕೇಯನ್, ಸಾಯಿ ಪಲ್ಲವಿ ನಟನೆಯ ‘ಅಮರನ್’ ಸಿನಿಮಾ

    ‘ಸಿಖಂದರ್’ ಚಿತ್ರವನ್ನು ಎ.ಆರ್ ಮುರುಗದಾಸ್ ನಿರ್ದೇಶನ ಮಾಡುತ್ತಿದ್ದಾರೆ. ಸಲ್ಮಾನ್ ಖಾನ್‌ಗೆ ಕೊಡಗಿನ ಕುವರಿ ರಶ್ಮಿಕಾ ಮಂದಣ್ಣ ನಾಯಕಿಯಾಗಿ ನಟಿಸುತ್ತಿದ್ದಾರೆ. ಖ್ಯಾತ ನಿರ್ಮಾಪಕ ಸಾಜಿದ್ ನಿರ್ಮಾಣದ ಹೊಣೆ ಹೊತ್ತಿದ್ದಾರೆ.

    ಮೊದಲ ಬಾರಿಗೆ ಸಲ್ಮಾನ್ ಖಾನ್ ಮತ್ತು ರಶ್ಮಿಕಾ ಮಂದಣ್ಣ (Rashmika Mandanna) ಜೋಡಿಯಾಗಿ ನಟಿಸುತ್ತಿರೋದ್ರಿಂದ ಸಿನಿಮಾ ನೋಡಲು ಅಭಿಮಾನಿಗಳು ಕಾತರದಿಂದ ಕಾಯುತ್ತಿದ್ದಾರೆ.

  • Narendra Modi Biopic: ಪಿಎಂ ಪಾತ್ರದಲ್ಲಿ ‘ಬಾಹುಬಲಿ’ ನಟ

    Narendra Modi Biopic: ಪಿಎಂ ಪಾತ್ರದಲ್ಲಿ ‘ಬಾಹುಬಲಿ’ ನಟ

    ಪ್ರಧಾನಿ ನರೇಂದ್ರ ಮೋದಿ (Narendra Modi) ಅವರ ಕುರಿತು ಈಗಾಗಲೇ ಬಯೋಪಿಕ್‌ವೊಂದು ಬಂದಿದೆ. ಆದರೆ ಈಗ ಮತ್ತೊಮ್ಮೆ ಮೋದಿ ಅವರ ಜೀವನ ಕಥೆಯನ್ನು ತೆರೆಯ ಮೇಲೆ ತೋರಿಸಲು ತಯಾರಿ ನಡೆಯುತ್ತಿದೆ. ಪಿಎಂ ನರೇಂದ್ರ ಮೋದಿ ಪಾತ್ರದಲ್ಲಿ ತಮಿಳಿನ ನಟ ಸತ್ಯರಾಜ್ ನಟಿಸಲಿದ್ದಾರೆ ಎಂಬ ಸುದ್ದಿ ಹರಿದಾಡುತ್ತಿದೆ.

    ಬಾಲಿವುಡ್ ಬಳಿಕ ಸೌತ್‌ನಲ್ಲಿ ಮತ್ತೊಮ್ಮೆ ಸಿನಿಮಾ ಮಾಡಿ ತೋರಿಸಲು ಚಿತ್ರತಂಡ ಸಜ್ಜಾಗಿದ್ದಾರೆ. ಈ ಬಾರಿ ಸಿ.ಎಚ್ ಕ್ರಾಂತಿ ಕುಮಾರ್ ನಿರ್ದೇಶನದಲ್ಲಿ ಚಿತ್ರ ಮೂಡಿ ಬರಲಿದೆ. ‘ಬಾಹುಬಲಿ’ (Bahubali) ಕಟ್ಟಪ್ಪ ಪಾತ್ರದಲ್ಲಿ ನಟಿಸಿದ್ದ ಸತ್ಯರಾಜ್ (Sathyaraj) ಅವರು ನರೇಂದ್ರ ಮೋದಿ ಪಾತ್ರಕ್ಕೆ ಬಣ್ಣ ಹಚ್ಚಲು ಆಫರ್ ಸಿಕ್ಕಿದೆ ಎನ್ನಲಾಗಿದೆ. ಇದನ್ನೂ ಓದಿ:ಚಂದ್ರಕಾಂತ್, ಪವಿತ್ರಾ ಮದುವೆ ರೂಮರ್ಸ್ ಬಗ್ಗೆ ಸ್ಪಷ್ಟನೆ ನೀಡಿದ ಪುತ್ರ

    ಈಗಾಗಲೇ ಸೌತ್ ಸಿನಿಮಾಗಳಲ್ಲಿ ನಟಿಸಿ ಗೆದ್ದಿರುವ ಸತ್ಯರಾಜ್ ಜೊತೆ ಚಿತ್ರತಂಡ ಸಂಪರ್ಕಿಸಿದೆ. ಸಿನಿಮಾ ಬಗ್ಗೆ ಒಂದು ಹಂತದ ಮಾತುಕತೆ ಕೂಡ ನಡೆದಿದೆ. ಆದರೆ ಪಿಎಂ ಪಾತ್ರದಲ್ಲಿ ನಟಿಸಲು ಸತ್ಯರಾಜ್ ಒಪ್ಪಿಗೆ ನೀಡಿದ್ರಾ? ಎಂಬುದು ತಿಳಿದು ಬಂದಿಲ್ಲ. ಸಿನಿಮಾತಂಡದಿಂದ ಅಧಿಕೃತ ಘೋಷಣೆ ಆಗುವವರೆಗೂ ಕಾದುನೋಡಬೇಕಿದೆ.

    ಪಿಎಂ ಬಯೋಪಿಕ್ ಬಗ್ಗೆ ಸುದ್ದಿಯಾಗುತ್ತಿದ್ದಂತೆ ಹಲವು ವಿಚಾರಗಳು ಚರ್ಚೆಯಾಗುತ್ತಿದೆ. ಈ ಹಿಂದೆ ಪೆರಿಯಾರ್ ಇವಿ ರಾಮಸ್ವಾಮಿ ಅವರ ಪಾತ್ರವನ್ನು ಮಾಡಿ ಸತ್ಯರಾಜ್ ಸೈ ಎನಿಸಿಕೊಂಡಿದ್ದರು. ಅವರ ನಟನೆಗೆ ತಮಿಳುನಾಡು ಸರ್ಕಾರದ ರಾಜ್ಯ ಪ್ರಶಸ್ತಿ ಪಡೆದುಕೊಂಡಿದ್ದರು. ಹಾಗಾಗಿ ಪಿಎಂ ಪಾತ್ರಕ್ಕೂ ಇವರೇ ಸೂಕ್ತ ಅಂತ ನೆಟ್ಟಿಗರು ಮಾತನಾಡಿಕೊಳ್ತಿದ್ದಾರೆ.

  • ಸತ್ಯರಾಜ್‌, ಶರತ್‌ಕುಮಾರ್‌ ಜೊತೆ ನಮಿತಾ ಬ್ರೇಕಪ್‌ ಮಾಡಿಕೊಂಡಿದ್ದೇಕೆ?

    ಸತ್ಯರಾಜ್‌, ಶರತ್‌ಕುಮಾರ್‌ ಜೊತೆ ನಮಿತಾ ಬ್ರೇಕಪ್‌ ಮಾಡಿಕೊಂಡಿದ್ದೇಕೆ?

    ‘ಬಾಹುಬಲಿ’ (Bahubali) ಕಟ್ಟಪ್ಪನ ಹಳೇ ಲವ್ ಸ್ಟೋರಿಗೆ ಈಗ ಜೀವ ಬಂದಿದೆ. ಅದೆಲ್ಲಿಯ ಕಟ್ಟಪ್ಪ ಅದೆಲ್ಲಿಯ ನಮಿತಾ? ಇಬ್ಬರಿಗೂ ಪ್ರೇಮಾಂಕುರ ಆಗಿದ್ದೆಲ್ಲಿ? ಇನ್ನೇನು ಮದುವೆ ಆಗಿಬಿಟ್ಟಿರು ಎನ್ನುವಾಗ ಅಡ್ಡಗಾಲು ಹಾಕಿದ ಇನ್ನೊಬ್ಬ ನಟ ಯಾರು? ಬ್ರೇಕಪ್‌ ಬಗ್ಗೆ ಇಲ್ಲಿದೆ ಮಾಹಿತಿ.

    ಬಣ್ಣದ ಲೋಕದಲ್ಲಿ ಯಾರ ಜೊತೆಯಾದರೂ ಎಲ್ಲಿ ಬೇಕಾದರೂ ಪ್ರೀತಿ ಉಕ್ಕುತ್ತದೆ. ಅದನ್ನು ಪ್ರೀತಿ ಅಂತೀರೋ. ಆಕರ್ಷಣೆ ಅಂತೀರೊ ನಿಮಗೆ ಬಿಟ್ಟಿದ್ದು. ಒಟ್ಟಿನಲ್ಲಿ ಆ ಹಸಿ ಬಿಸಿ ಏನೊ ಒಂದನ್ನು ತಂದು ಗಂಡು ಹೆಣ್ಣನ್ನು ಜಂಟಿ ಮಾಡುತ್ತದೆ. ಅದಕ್ಕೆ ಸಾಕ್ಷಿ ಬಾಹುಬಲಿಯ ಕಟ್ಟಪ್ಪ ಅಲಿಯಾಸ್ ಸತ್ಯರಾಜ್ (Sathyaraj) ಹಾಗೂ ಹಾಟ್ ಕ್ವೀನ್ ನಮಿತಾ. ಇಬ್ಬರೂ ಆ ಕಾಲದಲ್ಲಿ ಅದು ಹೇಗೊ ಜಂಟಿಯಾಗಿ ಕುಂಟಾಬಿಲ್ಲೆ ಆಡಲು ತಯಾರಾಗಿದ್ದರು. ಸತ್ಯರಾಜ್ ಮದುವೆ ಆಗಲು ಸಜ್ಜಾಗಿದ್ದರು. ಆದರೆ ಶರತ್‌ಕುಮಾರ್ ಅಡ್ಡಗಾಲು ಹಾಕಿದರು.

    ಸತ್ಯರಾಜ್‌ಗೆ ಅದಾಗಲೇ ಮದುವೆಯಾಗಿತ್ತು. ಮಕ್ಕಳೂ ಇದ್ದರು. ಆದರೆ ಮನಸಿನ ಬಿಸಿ ಕೇಳಬೇಕಲ್ಲವೆ? ನಮಿತಾ ಬಲೆಗೆ ಬಿದ್ದರು. ಇನ್ನೇನು ಮದುವೆ ಆಗಬೇಕೆನ್ನುವಾಗಲೇ ನಟ ಶರತ್‌ಕುಮಾರ್ ಕಣ್ಣು ಈಕೆ ಮೇಲೆ ಬಿತ್ತು. ಆತನೂ ಅದಾಗಲೇ ಮದುವೆ ಆಗಿದ್ದರು. ಆದರೂ ಇನ್ನೊಂದು ಸೀರೆಯ ಚಟ ಕೇಳಬೇಕಲ್ಲವೆ? ಅದಕ್ಕೆ ನಮಿತಾ ಹಿಂದೆ ಬಿದ್ದ. ನಮಿತಾ (Namitha) ಕ್ಯಾಸೆಟ್ ಚೇಂಜ್ ಮಾಡಿದರು. ಸತ್ಯರಾಜ್ ಜಾಗಕ್ಕೆ ಶರತ್ ಬಂದ. ಆಮೇಲೆ ಈಕೆ ಆತನಿಗೂ ದಕ್ಕಲಿಲ್ಲ. ಈತನಿಗೂ ಇಲ್ಲ. ಬಣ್ಣಕ್ಕೆ ನಿಯತ್ತು ಎಲ್ಲಿಯದು?

  • ಬಾಹುಬಲಿ ಕಟ್ಟಪ್ಪ ಖ್ಯಾತಿಯ ನಟ ಸತ್ಯರಾಜ್ ಅವರ ತಾಯಿ ನಿಧನ

    ಬಾಹುಬಲಿ ಕಟ್ಟಪ್ಪ ಖ್ಯಾತಿಯ ನಟ ಸತ್ಯರಾಜ್ ಅವರ ತಾಯಿ ನಿಧನ

    ರಾಜಮೌಳಿ ನಿರ್ದೇಶನದ ‘ಬಾಹುಬಲಿ’ ಸಿನಿಮಾದಲ್ಲಿ ಕಟ್ಟಪ್ಪ (Kattappa) ಪಾತ್ರವನ್ನು ಸಮರ್ಥವಾಗಿ ನಿಭಾಯಿಸಿ, ಸಾಕಷ್ಟು ಅಭಿಮಾನಿಗಳನ್ನು ಹೊಂದಿದ್ದ ನಟ ಸತ್ಯರಾಜ್ (Sathyaraj) ಅವರ ತಾಯಿ ನಾಥಂಬಳ್ ಕಾಳಿಂಗರಾಯರ್ (Nanthabal) ನಿಧನರಾಗಿದ್ದಾರೆ. ಅವರಿಗೆ 94 ವರ್ಷ ವಯಸ್ಸಾಗಿತ್ತು. ವಯೋಸಹಜ ಕಾಯಿಲೆಯಿಂದ ಅವರು ಬಳಲುತ್ತಿದ್ದರು.

    ನಿನ್ನೆ ಸಂಜೆ 4 ಗಂಟೆಯ ಹೊತ್ತಿಗೆ ನಾಥಂಬಳ್ ಅವರು ಕೊಯಮತ್ತೂರಿನ ನಿವಾಸದಲ್ಲಿ ಕೊನೆಯುಸಿರೆಳೆದಿದ್ದಾರೆ (Passed Away) ಎಂದು ಕುಟುಂಬಸ್ಥರು ತಿಳಿಸಿದ್ದಾರೆ. ಇಂದು ಅವರ ಅಂತ್ಯ ಸಂಸ್ಕಾರ ಕೊಯಮತ್ತೂರಿನಲ್ಲೇ (Coimbatore) ನಡೆಯಲಿದೆ. ನಾಥಂಬಳ್ ಅವರಿಗೆ  ಇಬ್ಬರು ಹೆಣ್ಣು ಮಕ್ಕಳು ಮತ್ತು ಒಬ್ಬ ಗಂಡು ಮಗನಿದ್ದಾನೆ.

    ತಾಯಿ ನಿಧನರಾದಾಗ ಸತ್ಯರಾಜ್ ಅವರು ಹೈದರಾಬಾದ್ ನಲ್ಲಿ ಶೂಟಿಂಗ್ ನಲ್ಲಿದ್ದರು. ಸುದ್ದಿ ತಿಳಿಯುತ್ತಿದ್ದಂತೆಯೇ ಶೂಟಿಂಗ್ ನಿಲ್ಲಿಸಿ ತೆರಳಿದ್ದಾರೆ. ಸತ್ಯರಾಜ್ ಅವರ ತಾಯಿಯ ನಿಧನಕ್ಕೆ ಚಿತ್ರರಂಗ ಕಂಬನಿ ಮಿಡಿದಿದೆ. ಸತ್ಯರಾಜ್ ಬಹುಭಾಷಾ ನಟನಾಗಿದ್ದರಿಂದ ನಾನಾ ಚಿತ್ರರಂಗಗಳು ಶೋಕ ವ್ಯಕ್ತ ಪಡಿಸಿವೆ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಬಾಹುಬಲಿ ಕಟ್ಟಪ್ಪನ ಬಗ್ಗೆ ಪ್ರಭಾಸ್ ಹೇಳಿದ್ದೇನು ಗೊತ್ತಾ?

    ಬಾಹುಬಲಿ ಕಟ್ಟಪ್ಪನ ಬಗ್ಗೆ ಪ್ರಭಾಸ್ ಹೇಳಿದ್ದೇನು ಗೊತ್ತಾ?

    ಹೈದರಾಬಾದ್: ಟಾಲಿವುಡ್ ನಟ ಪ್ರಭಾಸ್ ಅವರು ನಟ ಸತ್ಯರಾಜ್ ನನ್ನ ಲಕ್ಕಿ ಮ್ಯಾಸ್ಕಟ್ ಎಂದು ಹೇಳಿದ್ದಾರೆ.

    ನಗರದಲ್ಲಿ ನಡೆದ ರಾಧೆ ಶ್ಯಾಮ್ ಸಿನಿಮಾದ ಪ್ರೀ-ರಿಲೀಸ್ ಸಮಾರಂಭದಲ್ಲಿ ಮಾತನಾಡಿದ ಅವರು, ಸತ್ಯರಾಜ್ ಅವರು ನನ್ನ ಅದೃಷ್ಟದ ಮ್ಯಾಸ್ಕಾಟ್. ಅವರೊಂದಿಗೆ ‘ಮಿರ್ಚಿ’ ಸಿನಿಮಾದಲ್ಲಿ ಕೆಲಸ ಮಾಡಿದ್ದೆ. ಈ ಸಿನಿಮಾ ಸೂಪರ್ ಹಿಟ್ ಆಗಿತ್ತು. ನಂತರ ನಟಿಸಿದ ಬಾಹುಬಲಿ ಸಿನಿಮಾ ಕೂಡ ಬ್ಲಾಕ್ ಬಾಸ್ಟರ್ ಹಿಟ್ ಆಗಿತ್ತು. ‘ರಾಧೆ ಶ್ಯಾಮ್’ ನಮ್ಮಿಬ್ಬರ ವೃತ್ತಿ ಜೀವನದಲ್ಲಿ ಮತ್ತೊಂದು ಮೈಲಿಗಲ್ಲು ಆಗಲಿದೆ ಎಂಬ ವಿಶ್ವಾಸ ನನಗಿದೆ. ಈ ಚಿತ್ರದಲ್ಲಿ ಅವರ ಪಾತ್ರವು ಪವರ್‍ಫುಲ್ ಮತ್ತು ಕುತೂಹಲಕಾರಿಯಾಗಿದೆ ಎಂದರು.

    ‘ರಾಧೆ ಶ್ಯಾಮ್’ ಚಿತ್ರದಲ್ಲಿ ಪ್ರಭಾಸ್ 1970ರ ದಶಕದ ಹಸ್ತಸಾಮುದ್ರಿಕ ತಜ್ಞ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಇಟಲಿ, ಜಾರ್ಜಿಯಾ ಮತ್ತು ಹೈದರಾಬಾದ್‍ನ ವಿವಿಧ ಸ್ಥಳಗಳಲ್ಲಿ ಸಿನಿಮಾ ಶೂಟಿಂಗ್ ಮಾಡಲಾಗಿದೆ. ವಿಶೇಷವೆಂದರೆ ಈ ಚಿತ್ರಕ್ಕೆ ಅಮಿತಾಬ್ ಬಚ್ಚನ್ ಧ್ವನಿ ನೀಡಿದ್ದಾರೆ. ಇದನ್ನೂ ಓದಿ:  ಕಾರ್ ಅಪಘಾತದ ಬಗ್ಗೆ ಹೊಸ ಹಾಡು ರಚಿಸಿದ ಕಚ್ಚಾ ಬಾದಮ್ ಗಾಯಕ ಭುಬನ್

    ಯುವಿ ಕ್ರಿಯೇಷನ್ಸ್ ನಿರ್ಮಿಸಿರುವ ಈ ಚಿತ್ರವನ್ನು ರೆಡ್ ಜೈಂಟ್ ಮೂವೀಸ್ ಪ್ರಸ್ತುತಪಡಿಸಿದ್ದು, ಪೂಜಾ ಹೆಗ್ಡೆ ನಾಯಕಿಯಾಗಿ ನಟಿಸಿದ್ದಾರೆ. ಸಿನಿಮಾದಲ್ಲಿ ಸತ್ಯರಾಜ್ ಮತ್ತು ಜಗಪತಿ ಬಾಬು ಸೇರಿದಂತೆ ದೊಡ್ಡ ತಾರಾಬಳಗವೇ ಇದೆ.

  • ಬಾಹುಬಲಿ ಕಟ್ಟಪ್ಪ ಪಾತ್ರಧಾರಿ ನಟ ಸತ್ಯರಾಜ್‍ಗೆ ಕೊರೊನಾ ಪಾಸಿಟಿವ್

    ಬಾಹುಬಲಿ ಕಟ್ಟಪ್ಪ ಪಾತ್ರಧಾರಿ ನಟ ಸತ್ಯರಾಜ್‍ಗೆ ಕೊರೊನಾ ಪಾಸಿಟಿವ್

    ಚೆನ್ನೈ: ಕಾಲಿವುಡ್ ನಟ ಸತ್ಯರಾಜ್ ಅವರಿಗೆ ಕೊರೊನಾ ಸೋಂಕು ದೃಢಪಟ್ಟಿದೆ.

    ಬಾಹುಬಲಿ ಸಿನಿಮಾದಲ್ಲಿ ಕಟ್ಟಪ್ಪ ಪಾತ್ರದಲ್ಲಿ ಕಾಣಿಸಿಕೊಳ್ಳುವ ಮೂಲಕ ಫೇಮಸ್ ಆಗಿದ್ದ ನಟ ಸತ್ಯರಾಜ್ ಅವರು ಕೊರೊನಾ ಪಾಸಿಟವ್ ಬಂದಿದ್ದು, ಇದೀಗ ಅವರನ್ನು ಚೆನ್ನೈನ ಅಮಿಂಜಿಕ್ಕರೈನಲ್ಲಿರುವ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಶೀಘ್ರವೇ ಆಸ್ಪತ್ರೆಯಿಂದ ಅವರ ಹೆಲ್ತ್ ಬುಲೆಟಿನ್ ಹೊರಬೀಳಲಿದೆ. ಇದನ್ನೂ ಓದಿ: ಕುಟುಂಬದೊಂದಿಗೆ ಮನೆಯಲ್ಲೇ ಹುಟ್ಟುಹಬ್ಬ ಆಚರಿಸಿದ ಯಶ್

    ಮತ್ತೊಂದೆಡೆ ನಿರ್ದೇಶಕ ಪ್ರಿಯದರ್ಶನ್ ಅವರಿಗೂ ಕೊರೊನಾ ಸೋಂಕು ತಗುಲಿದ್ದು, ಅವರನ್ನು ಚೆನ್ನೈನ ಅಪೋಲೋ ಆಸ್ಪತ್ರೆಗೆ ದಾಖಲಿಸಲಾಗಿದೆ. ಚಿಕಿತ್ಸೆ ಬಳಿಕ ಕೊಂಚ ಆರೋಗ್ಯದಲ್ಲಿ ಚೇತರಿಕೆಕಂಡಿದೆ. ಇದನ್ನೂ ಓದಿ: ಪ್ರಿನ್ಸ್ ಮಹೇಶ್ ಬಾಬುಗೆ ಕೊರೊನಾ ಪಾಸಿಟಿವ್

    ಕಳೆದ ಕೆಲವು ದಿನಗಳಿಂದ ದೇಶದಲ್ಲಿ ಕೊರೊನಾ ಪ್ರಕರಣಗಳ ಸಂಖ್ಯೆ ಹೆಚ್ಚಾಗಿದ್ದು, ಕೊರೊನಾ ಮೂರನೇ ಅಲೆ ಆರಂಭವಾಗಿದೆ. ಇತ್ತೀಚೆಗಷ್ಟೇ ಟಾಲಿವುಡ್ ನಟ ಮಹೇಶ್ ಬಾಬು, ಸಂಗೀತಾ ಸಂಯೋಜಕ ಥಮನ್ ಮತ್ತು ನಟಿ ತ್ರಿಶಾ ಸೇರಿದಂತೆ ಹಲವಾರು ಸೆಲೆಬ್ರಿಟಿಗಳಿಗೆ ಕೊರೊನಾ ದೃಢಪಟ್ಟಿದೆ.

  • ಕಟ್ಟಪ್ಪ ಬಾಹುಬಲಿಯನ್ನು ಕೊಂದಿದ್ದು ಯಾಕೆ ಅನ್ನೋದು ರಿವೀಲ್ ಆಯ್ತು!

    ಕಟ್ಟಪ್ಪ ಬಾಹುಬಲಿಯನ್ನು ಕೊಂದಿದ್ದು ಯಾಕೆ ಅನ್ನೋದು ರಿವೀಲ್ ಆಯ್ತು!

    ಬೆಂಗಳೂರು: ಬಾಹುಬಲಿ-1 ಚಿತ್ರ ರಿಲೀಸ್ ಆದ ಬಳಿಕ `ಬಾಹುಬಲಿಯನ್ನು ಕಟ್ಟಪ್ಪ ಯಾಕೆ ಕೊಂದ ಎಂಬ ಪ್ರಶ್ನೆ ಎಲ್ಲರನ್ನು ಕಾಡುತ್ತಿತ್ತು. ಇದೀಗ ಈ ಮಿಲಿಯನ್ ಡಾಲರ್ ಪ್ರಶ್ನೆಗೆ ಉತ್ತರ ಸಿಕ್ಕಿದೆ ಅಂತಾ ಟಾಲಿವುಡ್ ಮೂಲಗಳಿಂದ ತಿಳಿದುಬಂದಿದೆ.

    ಏಪ್ರಿಲ್ 28 ಬಾಹುಬಲಿ-2 ಚಿತ್ರ ಬಿಡುಗಡೆಯಾಗುತ್ತಿದ್ದು, ಈ ಮೊದಲೇ ಕಟ್ಟಪ್ಪ ಬಾಹುಬಲಿಯನ್ನು ಕೊಂದಿದ್ದೇಕೆ ಎಂಬ ಪ್ರಶ್ನೆಗೆ ಉತ್ತರ ಲೀಕ್ ಆಗಿದೆ. ಕಟ್ಟಪ್ಪ ಕೊಂದಿದ್ದೇಕೆ ಎಂಬ ಪ್ರಶ್ನೆಗೆ ಉತ್ತರ ಸಿಕ್ಕಿರುವ ಸುದ್ದಿ ಆಂಧ್ರದಲ್ಲಿ ಹರಿದಾಡುತ್ತಿದೆ. ಆದ್ರೆ ಇದು ನಿಜವೋ ಸುಳ್ಳೋ ಎಂಬುವುದು ತಿಳಿದುಬಂದಿಲ್ಲ. ಯಾಕಂದ್ರೆ ಈ ಬಗ್ಗೆ ಚಿತ್ರತಂಡ ಹೇಳಿದ್ದಲ್ಲ. ಗಾಸಿಪ್ ಸುದ್ದಿಯೊಂದು ವೈರಲ್ ಆಗಿದೆ.

    ಬಾಹುಬಲಿಯನ್ನು ಕಟ್ಟಪ್ಪ ಸಾಯಿಸಲು ಕಾರಣ ಶಿವಗಾಮಿ ಕಾರಣವಂತೆ. ಬಾಹುಬಲಿ ವಿರುದ್ಧವಾಗಿ ಶಿವಗಾಮಿಗೆ ಬಲ್ಲಾಳ ದೇವ, ಆತನ ತಂದೆ ಬಿಜ್ಜಲ ದೇವ ಸುಳ್ಳು ಹೇಳುತ್ತಾರಂತೆ. ಅದನ್ನು ನಂಬಿದ ಶಿವಗಾಮಿ, ಬಾಹುಬಲಿಯನ್ನು ಸಾಯಿಸುವಂತೆ ಕಟ್ಟಪ್ಪನಿಗೆ ಆದೇಶಿಸುತ್ತಾರಂತೆ. ಇದೇ ಬಾಹುಬಲಿಯನ್ನು ಕಟ್ಟಪ್ಪ ಸಾಯಿಸಲು ಕಾರಣ ಎಂದು ಹರಿದಾಡುತ್ತಿದೆ.

    ಈ ಹಿಂದೆ ಕಟ್ಟಪ್ಪ ಉತ್ತರಿಸ್ದು ಹೀಗೆ: ಬಾಹುಬಲಿ 1 ಬಿಡುಗಡೆಯ ಬಳಿಕ ಸತ್ಯರಾಜ್ ಗೆ ಅಭಿಮಾನಿಯೊಬ್ಬರು ವೀಡಿಯೋ ಮೂಲಕ `ಬಾಹುಬಲಿಯನ್ನು ಕಟ್ಟಪ್ಪ ಕೊಂದಿದ್ಯಾಕೆ? ಅನ್ನೋ ಪ್ರಶ್ನೆ ಕೇಳಿದ್ದರಂತೆ. ಈ ಪ್ರಶ್ನೆಗೆ ಉತ್ತರಿಸಿದ ಕಟ್ಟಪ್ಪ, `ನಾನು ಎಲ್ಲೇ ಹೋದರೂ ಅಭಿಮಾನಿಗಳು ಈ ಪ್ರಶ್ನೆಯನ್ನು ಕೇಳುತ್ತಾರೆ. ಈ ಪ್ರಶ್ನೆಗೆ ನಾನು ಬೇಸರ ಮಾಡಿಕೊಂಡಿಲ್ಲ. ಅಷ್ಟೇ ಅಲ್ಲದೇ ನನ್ನ ಕುಟುಂಬದವರಿಗೂ ಈ ಪ್ರಶ್ನೆಗೆ ನಾನು ಉತ್ತರಿಸಿಲ್ಲ. ಆದರೆ ಈಗ ನಾನು ಹೇಳುತ್ತೇನೆ. ನಿರ್ದೇಶಕ ರಾಜಮೌಳಿ ಆದೇಶದ ಮೇರೆಗೆ ನಾನು ಬಾಹುಬಲಿಯನ್ನು ಕೊಂದಿದ್ದೇನೆ’ ಅಂತಾ ಹಾಸ್ಯದ ಉತ್ತರ ನೀಡಿದ್ದರು.

    ಇದೇ ಪ್ರಶ್ನೆಯನ್ನು ರಾಜಮೌಳಿ ಅವರಿಗೆ ಕೇಳಿದಾಗ `ಕಟ್ಟಪ್ಪ ನನ್ನ ಮಾತನ್ನು ಮಾತ್ರ ಕೇಳುತ್ತಾನೆ. ಬಾಹುಬಲಿಯನ್ನು ಕೊಲ್ಲಲು ನಾನು ಹೇಳಿದ್ದಕ್ಕೆ ಕಟ್ಟಪ್ಪ ಕೊಂದಿದ್ದಾನೆ’ ಅಂತಾ ಅವರೂ ಫನ್ನಿ ಉತ್ತರ ನೀಡಿದ್ದರು.

    ಒಟ್ಟಿನಲ್ಲಿ ಬಾಹುಬಲಿ 2 ಸಿನಿಮಾ ಕಥೆ ಮತ್ತು ಸನ್ನಿವೇಶಗಳ ದೃಷ್ಟಿಯಲ್ಲಿ `ಬಾಹುಬಲಿ 1’ಕ್ಕಿಂತ ವಿಭಿನ್ನವಾಗಿದೆಯಂತೆ. ಒಟ್ಟಿನಲ್ಲಿ ಬಾಹುಬಲಿಯನ್ನು ಕಟ್ಟಪ್ಪ ಕೊಂದಿರುವುದರ ಹಿಂದಿನ ನಿಜವಾದ ಕಾರಣ ತಿಳಿಯಬೇಕಾದ್ರೆ ಚಿತ್ರ ಬಿಡುಗಡೆವರೆಗೆ ಕಾದುನೋಡಬೇಕು.

    ಇದನ್ನೂ ಓದಿ: ‘ಸಾಹೋರೆ ಬಾಹುಬಲಿ’ ವೀಡಿಯೋ ಸಾಂಗ್ ಪ್ರೋಮೋ ರಿಲೀಸ್

    ಇದನ್ನೂ ಓದಿ: ಬಾಹುಬಲಿ -2 ಹೇಗಿದೆ? ಯುಎಇ ಸೆನ್ಸಾರ್ ಸದಸ್ಯ ಹೇಳಿದ್ದು ಹೀಗೆ

  • ಬಾಹುಬಲಿ-2 ರಿಲೀಸ್‍ಗೆ ಗ್ರೀನ್ ಸಿಗ್ನಲ್: ಕನ್ನಡಿಗರನ್ನು ಹೀಯಾಳಿಸೋ ಕೆಲಸ ಮಾಡ್ಬೇಡಿ

    ಬಾಹುಬಲಿ-2 ರಿಲೀಸ್‍ಗೆ ಗ್ರೀನ್ ಸಿಗ್ನಲ್: ಕನ್ನಡಿಗರನ್ನು ಹೀಯಾಳಿಸೋ ಕೆಲಸ ಮಾಡ್ಬೇಡಿ

    ಬೆಂಗಳೂರು: ಬಾಹುಬಲಿ ಚಿತ್ರದ ಬಿಡುಗಡೆಗೆ ಕನ್ನಡ ಸಂಘಟನೆಗಳು ಅಡ್ಡಿಪಡಿಸಲ್ಲ ಎಂದು ಇಂದು ಸುದ್ದಿಗೋಷ್ಠಿಯಲ್ಲಿ ತಿಳಿಸಿವೆ.

    ಒಕ್ಕೂಟದ ಪರವಾಗಿ ವಾಟಾಳ್ ನಾಗರಾಜ್ ಮಾತನಾಡಿ, ಸತ್ಯರಾಜ್ ಬಹಿರಂಗವಾಗಿ ಕ್ಷಮಾಪಣೆ ಕೇಳಬೇಕಾಗಿತ್ತು. ಅವರು ಎಲ್ಲೋ ಒಂದು ಕಡೆ ಕುಳಿತು ಹೇಳಿಕೆ ನೀಡಿದ್ದಾರೆ. ಸತ್ಯರಾಜ್ ವಿಷಾದ ವ್ಯಕ್ತಪಡಿಸಿದ ಹಿನ್ನೆಲೆಯಲ್ಲಿ ಚಿತ್ರ ಬಿಡುಗಡೆಗೆ ಅಡ್ಡಿಪಡಿಸುವುದಿಲ್ಲ ಎಂದು ತಿಳಿಸಿದರು.

    ಸದ್ಯಕ್ಕೆ ಇಲ್ಲಿಗೆ ನಾವು ಈ ವಿಷಯವನ್ನ ಕೈ ಬಿಡುತ್ತೇವೆ. ಬೇರೆ ಬೇರೆ ಹೋರಾಟಗಳಿವೆ. ಯಾರೂ ಕನ್ನಡಿಗರನ್ನು ಹೀಯಾಳಿಸುವ ಕೆಲಸ ಮಾಡಬೇಡಿ. ಮಾಧ್ಯಮಗಳ ಎದುರು ಸತ್ಯರಾಜ್ ಕ್ಷಮೆ ಕೇಳಬೇಕಿತ್ತು. ಆದರೂ ವಿಷಾದ ಕೇಳಿದ ಹಿನ್ನೆಲೆಯಲ್ಲಿ ನಾವು ಪ್ರತಿಭಟನೆ ನಡೆಸುವುದಿಲ್ಲ ಎಂದು ಹೇಳಿದರು.

    ಸತ್ಯರಾಜ್ ಮತ್ತೆ ಏನಾದ್ರೂ ಮಾತನಾಡಿದ್ರೆ, ಕರ್ನಾಟಕದಲ್ಲಿ ಮುಂದೆ ಅವರ ಯಾವ ಚಿತ್ರವೂ ಬಿಡುಗಡೆಯಾಗಲು ಬಿಡುವುದಿಲ್ಲ. ತಮಿಳುನಾಡಿನಲ್ಲಿ ಕನ್ನಡ ಸಿನಿಮಾಗಳಿಗೆ ತೊಂದರೆ ಆದ್ರೆ ಕರ್ನಾಟಕದಲ್ಲಿ ತಮಿಳು ಸಿನಿಮಾ, ತಮಿಳು ಚಾನಲ್ ಬಂದ್ ಮಾಡಲಾಗುವುದು ವಾಟಾಳ್ ನಾಗರಾಜ್ ತಿಳಿಸಿದರು.

    ನಾನು ಕನ್ನಡ ಹಾಗೂ ಕರ್ನಾಟಕದ ವಿರೋಧಿಯಲ್ಲ. ಅಂದಿನ ಹೇಳಿಕೆಗೆ ಇಂದು ಬಾಹುಬಲಿ-2 ಚಿತ್ರಕ್ಕೆ ಅಡ್ಡಿಪಡಿಸಬೇಡಿ ಎಂದು ಕನ್ನಡಿಗರಲ್ಲಿ ಶುಕ್ರವಾರ ಸತ್ಯರಾಜ್ ಮನವಿ ಮಾಡಿದ್ದರು. ಕಾವೇರಿ ಬಿಕ್ಕಟ್ಟಿನ ಸಂದರ್ಭದಲ್ಲಿ ನಾನು ಭಾವಾವೇಶದಲ್ಲಿ ಮಾತನಾಡುವಾಗ ಆ ರೀತಿಯ ಹೇಳಿಕೆ ನೀಡಿದ್ದೆ. ಈ ಹೇಳಿಕೆಯಿಂದ ಯಾರಿಗಾದರೂ ನೋವಾಗಿದ್ದರೆ ನಾನು ಕ್ಷಮೆ ಕೇಳುತ್ತೇನೆ ಎಂದು ವಿಡಿಯೋದಲ್ಲಿ ಕೇಳಿಕೊಂಡಿದ್ದಾರೆ.

    ಸತ್ಯರಾಜ್ ಕನ್ನಡಿಗರ ವಿರುದ್ಧ ಮಾತನಾಡಿದ್ದಕ್ಕೆ ಬಾಹುಬಲಿ ಚಿತ್ರದ ಬಿಡುಗಡೆಗೆ ಕನ್ನಡ ಸಂಘಟನೆಗಳು ವಿರೋಧ ವ್ಯಕ್ತಪಡಿಸಿದ್ದವು. ಈ ನಡುವೆ ಗುರುವಾರ ನಿರ್ದೇಶಕ ರಾಜಮೌಳಿ ಅವರು ಕನ್ನಡದಲ್ಲಿ ಮಾತನಾಡಿ ಸತ್ಯರಾಜ್ ಅವರ ಹೇಳಿಕೆಗೂ ಬಾಹುಬಲಿ ಚಿತ್ರ ತಂಡಕ್ಕೂ ಯಾವುದೇ ಸಂಬಂಧ ಇಲ್ಲ. ಈ ವಿಚಾರದಲ್ಲಿ ನಮಗೆ ಸಂಬಂಧ ಕಲ್ಪಿಸಬೇಡಿ ಎಂದು ಮನವಿ ಮಾಡಿದ್ದರು.

    ಕನ್ನಡ ಸಂಘಟನೆಗಳ ನಾಯಕರು ಬಾಹುಬಲಿ ಚಿತ್ರದ ಬಿಡುಗಡೆಗೆ ವಿರೋಧ ಇಲ್ಲ. ಆದರೆ ಸತ್ಯರಾಜ್ ಹೇಳಿಕೆಯನ್ನು ಖಂಡಿಸಿ ಬಿಡುಗಡೆಯನ್ನು ವಿರೋಧಿಸುತ್ತಿದ್ದೇವೆ. ಸತ್ಯರಾಜ್ ಕ್ಷಮೆ ಕೇಳಿದರೆ ಚಿತ್ರ ಕರ್ನಾಟಕದಲ್ಲಿ ಬಿಡುಗಡೆಯಾಗಲಿ ಎಂದು ಈ ಹಿಂದೆ ತಿಳಿಸಿದ್ದರು.

    https://www.youtube.com/watch?v=DIKSlBk-Rmk

    ಎಸ್‍ಎಸ್ ರಾಜಮೌಳಿ ನಿರ್ದೇಶನದ ಬಾಹುಬಲಿ ಚಿತ್ರ ಭಾರತೀಯ ಚಿತ್ರರಂಗದಲ್ಲೇ ಹೊಸ ದಾಖಲೆ ಬರೆದಿತ್ತು. ಬಿಡುಗಡೆಯಾದ 24 ಗಂಟೆಯಲ್ಲೇ 5 ಕೋಟಿಗೂ ಅಧಿಕ ವ್ಯೂ ಗಳಿಸಿದ ಮೊದಲ ಟ್ರೇಲರ್ ಎಂಬ ಹೆಗ್ಗಳಿಕೆಗೆ ಬಾಹುಬಲಿ ಪಾತ್ರವಾಗಿತತು.

    ಭಾರತದಲ್ಲಿ ಈ ಹಿಂದೆ ರಯೀಸ್ ಟ್ರೇಲರ್ ಬಿಡುಗಡೆಯಾದ 24 ಗಂಟೆಯಲ್ಲಿ 1.19 ಕೋಟಿ ವ್ಯೂ ಕಂಡಿದ್ದರೆ, ದಂಗಲ್ ಚಿತ್ರ 96 ಲಕ್ಷ ವ್ಯೂ ಕಂಡಿತ್ತು.

    ಬಿಡುಗಡೆಯಾದ ಕೆಲವೇ ಕ್ಷಣಗಳಲ್ಲಿ ವಿಶ್ವದೆಲ್ಲೆಡೆ ಬಾಹುಬಲಿ ಟ್ರೇಲರ್ ಟ್ರೆಂಡ್ ಕ್ರಿಯೇಟ್ ಮಾಡಿತ್ತು. ಜನವರಿ 26ರಂದು ರಾಜಮೌಳಿ ಪ್ರಭಾಸ್ ಮತ್ತು ಅನುಷ್ಕಾ ಶೆಟ್ಟಿ ಒಟ್ಟಿಗೆ ನಿಂತುಕೊಂಡು ಬಾಣ ಬಿಡುತ್ತಿರುವ ಪೋಸ್ಟರ್ ಬಿಡುಗಡೆ ಮಾಡಿದ್ದರು. ಇದಕ್ಕೂ ಮೊದಲು ರಾಣಾ ದಗ್ಗುಬಾಟಿ ಮತ್ತು ಪ್ರಭಾಸ್ ಅವರ ಪೋಸ್ಟರ್  ಬಿಡುಗಡೆ ಮಾಡಿದ್ದರು.

    ರಾಜಮೌಳಿ ತಂದೆ ವಿಜಯೇಂದ್ರ ಪ್ರಸಾದ್ ಬರೆದ ಕಥೆಯಾಧರಿತ ಬಾಹುಬಲಿ- 2 ಚಿತ್ರದಲ್ಲಿ ಪ್ರಭಾಸ್, ರಣಾ ದಗ್ಗುಬಾಟಿ, ಅನುಷ್ಕಾ ಶೆಟ್ಟಿ, ಸತ್ಯರಾಜ್, ತಮನ್ನಾ, ರಮ್ಯಕೃಷ್ಣ ಅಭಿನಯಿಸಿದ್ದು ವಿಶ್ವದಾದ್ಯಂತ ಏಪ್ರಿಲ್ 28 ರಂದು ತೆರೆಕಾಣಲಿದೆ.

    ಬಾಹುಬಲಿ ದಿ ಬಿಗಿನಿಂಗ್ ಚಿತ್ರ 2015ರ ಜುಲೈ 10ರಂದು ಬಿಡುಗಡೆಯಾಗಿತ್ತು. ಅಂದಾಜು 120 ಕೋಟಿ ಬಜೆಟ್ ಚಿತ್ರ ಬಾಕ್ಸ್ ಆಫೀಸ್ ನಲ್ಲಿ 650 ಕೋಟಿಗೂ ಹೆಚ್ಚು ಕಲೆಕ್ಷನ್ ಮಾಡಿತ್ತು.

     

     

    https://www.youtube.com/watch?v=mYP2ZiDaBFw

    https://www.youtube.com/watch?v=6J4v5wDplP8

  • ಬಾಹುಬಲಿ ಕರ್ನಾಟಕದಲ್ಲಿ ರಿಲೀಸ್ ಆಗುತ್ತಾ? ಶನಿವಾರ ಬೆಳಗ್ಗೆ ಗೊತ್ತಾಗುತ್ತೆ

    ಬಾಹುಬಲಿ ಕರ್ನಾಟಕದಲ್ಲಿ ರಿಲೀಸ್ ಆಗುತ್ತಾ? ಶನಿವಾರ ಬೆಳಗ್ಗೆ ಗೊತ್ತಾಗುತ್ತೆ

    ಬೆಂಗಳೂರು: ಕರ್ನಾಟಕದಲ್ಲಿ ಬಾಹುಬಲಿ ಭಾಗ 2 ರಿಲೀಸ್ ಆಗುತ್ತದೋ ಇಲ್ಲವೋ ಎನ್ನುವುದು ಶನಿವಾರ ಬೆಳಗ್ಗೆ ಪ್ರಕಟವಾಗಲಿದೆ.

    ಸತ್ಯರಾಜ್ ಅವರು ಕ್ಷಮೆ ಕೇಳಿದ ಹಿನ್ನೆಲೆಯಲ್ಲಿ ಪಬ್ಲಿಕ್ ಟಿವಿಗೆ ಪ್ರತಿಕ್ರಿಯಿಸಿದ ವಾಟಾಳ್ ನಾಗರಾಜ್, ಮಾಧ್ಯಮಗಳ ಮೂಲಕ ಸತ್ಯರಾಜ್ ಕ್ಷಮೆ ಕೇಳಿರುವ ವಿಚಾರ ಗೊತ್ತಾಗಿದೆ. ವಿವಿಧ ಸಂಘಟನೆಗಳ ಮುಖಂಡರ ಜೊತೆ ಚರ್ಚಿಸುತ್ತೇವೆ. ಈ ಸಂಬಂಧ ಇಂದು ಮಧ್ಯಾಹ್ನ ಕನ್ನಡ ಸಂಘಟನೆಗಳ ಜೊತೆ ಸಭೆ ನಡೆಸುತ್ತೇವೆ. ಸಭೆಯ ತೀರ್ಮಾನವನ್ನು ಮಧ್ಯಾಹ್ನ 3 ಗಂಟೆಗೆ ಸುದ್ದಿಗೋಷ್ಠಿ ನಡೆಸಿ ತಿಳಿಸುತ್ತೇವೆ ಎಂದು ಹೇಳಿದ್ದರು.

    ಆದರೆ ಇಂದು ನಿಗದಿಯಾಗಿದ್ದ ಸಭೆ ನಾಳೆಗೆ ಮುಂದೂಡಿಕೆಯಾಗಿದ್ದು, ಬೆಳಗ್ಗೆ 11 ಗಂಟೆಗೆ ಸುದ್ದಿಗೋಷ್ಠಿಯಲ್ಲಿ ಬಾಹುಬಲಿ ಚಿತ್ರದ ಬಿಡುಗಡೆ ವಿಚಾರವಾಗಿ ನಮ್ಮ ನಿಲುವು ಏನು ಎನ್ನುವುದನ್ನು ಕನ್ನಡ ಸಂಘಟನೆಗಳು ತಿಳಿಸಲಿವೆ.

    ನಾನು ಕನ್ನಡ ಹಾಗೂ ಕರ್ನಾಟಕದ ವಿರೋಧಿಯಲ್ಲ. ಅಂದಿನ ಹೇಳಿಕೆಗೆ ಇಂದು ಬಾಹುಬಲಿ-2 ಚಿತ್ರಕ್ಕೆ ಅಡ್ಡಿಪಡಿಸಬೇಡಿ ಎಂದು ಕನ್ನಡಿಗರಲ್ಲಿ ಸತ್ಯರಾಜ್ ಮನವಿ ಮಾಡಿದ್ದಾರೆ. ಕಾವೇರಿ ಬಿಕ್ಕಟ್ಟಿನ ಸಂದರ್ಭದಲ್ಲಿ ನಾನು ಭಾವವೇಶದಲ್ಲಿ ಮಾತನಾಡುವಾಗ ಆ ರೀತಿಯ ಹೇಳಿಕೆ ನೀಡಿದ್ದೆ. ಈ ಹೇಳಿಕೆಯಿಂದ ಯಾರಿಗಾದರೂ ನೋವಾಗಿದ್ದರೆ ನಾನು ಕ್ಷಮೆ ಕೇಳುತ್ತೇನೆ ಎಂದು ವಿಡಿಯೋದಲ್ಲಿ ಕೇಳಿಕೊಂಡಿದ್ದಾರೆ.

    ಸತ್ಯರಾಜ್ ಕನ್ನಡಿಗರ ವಿರುದ್ಧ ಮಾತನಾಡಿದ್ದಕ್ಕೆ ಬಾಹುಬಲಿ ಚಿತ್ರದ ಬಿಡುಗಡೆಗೆ ಕನ್ನಡ ಸಂಘಟನೆಗಳು ವಿರೋಧ ವ್ಯಕ್ತಪಡಿಸಿದ್ದವು. ಈ ನಡುವೆ ಗುರುವಾರ ನಿರ್ದೇಶಕ ರಾಜಮೌಳಿ ಅವರು ಕನ್ನಡದಲ್ಲಿ ಮಾತನಾಡಿ ಸತ್ಯರಾಜ್ ಅವರ ಹೇಳಿಕೆಗೂ ಬಾಹುಬಲಿ ಚಿತ್ರ ತಂಡಕ್ಕೂ ಯಾವುದೇ ಸಂಬಂಧ ಇಲ್ಲ. ಈ ವಿಚಾರದಲ್ಲಿ ನಮಗೆ ಸಂಬಂಧ ಕಲ್ಪಿಸಬೇಡಿ ಎಂದು ಮನವಿ ಮಾಡಿದ್ದರು.

    ಕನ್ನಡ ಸಂಘಟನೆಗಳ ನಾಯಕರು ಬಾಹುಬಲಿ ಚಿತ್ರದ ಬಿಡುಗಡೆಗೆ ವಿರೋಧ ಇಲ್ಲ. ಆದರೆ ಸತ್ಯರಾಜ್ ಹೇಳಿಕೆಯನ್ನು ಖಂಡಿಸಿ ಬಿಡುಗಡೆಯನ್ನು ವಿರೋಧಿಸುತ್ತಿದ್ದೇವೆ. ಸತ್ಯರಾಜ್ ಕ್ಷಮೆ ಕೇಳಿದರೆ ಚಿತ್ರ ಕರ್ನಾಟಕದಲ್ಲಿ ಬಿಡುಗಡೆಯಾಗಲಿ ಎಂದು ಈ ಹಿಂದೆ ತಿಳಿಸಿದ್ದರು.

    https://www.youtube.com/watch?v=mYP2ZiDaBFw

    https://www.youtube.com/watch?v=6J4v5wDplP8

  • ಕನ್ನಡಿಗರಲ್ಲಿ ಕ್ಷಮೆಯಾಚಿಸಿದ ಕಟ್ಟಪ್ಪ

    ಕನ್ನಡಿಗರಲ್ಲಿ ಕ್ಷಮೆಯಾಚಿಸಿದ ಕಟ್ಟಪ್ಪ

    ಚೆನ್ನೈ: ಬಾಹುಬಲಿ ಕಟ್ಟಪ್ಪ ಸತ್ಯರಾಜ್ ಕನ್ನಡಿಗರಲ್ಲಿ ಕ್ಷಮೆ ಕೇಳಿದ್ದು, ಚಿತ್ರ ಬಿಡುಗಡೆಗೆ ಅಡ್ಡಿಪಡಿಸಬೇಡಿ ಎಂದು ಮನವಿ ಮಾಡಿಕೊಂಡಿದ್ದಾರೆ.

    ನಾನು ಕನ್ನಡ ಹಾಗೂ ಕರ್ನಾಟಕದ ವಿರೋಧಿಯಲ್ಲ. ಅಂದಿನ ಹೇಳಿಕೆಯನ್ನು ವಿರೋಧಿಸಿ ಇಂದು ಬಾಹುಬಲಿ-2 ಚಿತ್ರಕ್ಕೆ ಅಡ್ಡಿಪಡಿಸಬೇಡಿ ಎಂದು ಕನ್ನಡಿಗರಲ್ಲಿ ಸತ್ಯರಾಜ್ ಮನವಿ ಮಾಡಿದ್ದಾರೆ.

    ಕಾವೇರಿ ಬಿಕ್ಕಟ್ಟಿನ ಸಂದರ್ಭದಲ್ಲಿ ನಾನು ಆವೇಶದಲ್ಲಿ ಮಾತನಾಡುವಾಗ ಆ ರೀತಿಯ ಹೇಳಿಕೆ ನೀಡಿದ್ದೆ. ಈ ಹೇಳಿಕೆಯಿಂದ ಯಾರಿಗಾದರೂ ನೋವಾಗಿದ್ದರೆ ನಾನು ಕ್ಷಮೆ ಕೇಳುತ್ತೇನೆ ಎಂದು ವಿಡಿಯೋದಲ್ಲಿ ಕೇಳಿಕೊಂಡಿದ್ದಾರೆ.

    ಸತ್ಯರಾಜ್ ಕನ್ನಡಿಗರ ವಿರುದ್ಧ ಮಾತನಾಡಿದ್ದಕ್ಕೆ ಬಾಹುಬಲಿ ಚಿತ್ರದ ಬಿಡುಗಡೆಗೆ ಕನ್ನಡ ಸಂಘಟನೆಗಳು ವಿರೋಧ ವ್ಯಕ್ತಪಡಿಸಿದ್ದವು. ಈ ನಡುವೆ ಗುರುವಾರ ನಿರ್ದೇಶಕ ರಾಜಮೌಳಿ ಅವರು ಕನ್ನಡದಲ್ಲಿ ಮಾತನಾಡಿ ಸತ್ಯರಾಜ್ ಅವರ ಹೇಳಿಕೆಗೂ ಬಾಹುಬಲಿ ಚಿತ್ರ ತಂಡಕ್ಕೂ ಯಾವುದೇ ಸಂಬಂಧ ಇಲ್ಲ. ಈ ವಿಚಾರದಲ್ಲಿ ನಮಗೆ ಸಂಬಂಧ ಕಲ್ಪಿಸಬೇಡಿ ಎಂದು ಕನ್ನಡಿಗರಲ್ಲಿ ಮನವಿ ಮಾಡಿದ್ದರು.

    https://www.youtube.com/watch?v=mYP2ZiDaBFw

    https://www.youtube.com/watch?v=6J4v5wDplP8