Tag: Satish Jarakiholi

  • ಮಕ್ಕಳೊಂದಿಗೆ ಮೀನು ಹಿಡಿದು ಸತೀಶ್ ಜಾರಕಿಹೊಳಿ ಎಂಜಾಯ್

    ಮಕ್ಕಳೊಂದಿಗೆ ಮೀನು ಹಿಡಿದು ಸತೀಶ್ ಜಾರಕಿಹೊಳಿ ಎಂಜಾಯ್

    ಬೆಳಗಾವಿ: ಗೋಕಾಕ್ ಉಪಚುನಾವಣೆ ಪ್ರಚಾರದ ಟೆನ್ಷನ್ ನಡುವೆ ಮಾಜಿ ಸಚಿವ ಸತೀಶ್ ಜಾರಕಿಹೊಳಿ ಮಕ್ಕಳೊಂದಿಗೆ ಮೀನು ಹಿಡಿದು ರಿಲ್ಯಾಕ್ಸ್ ಮೂಡಿನಲ್ಲಿದ್ದಾರೆ.

    ಜಿಲ್ಲೆಯ ಗೋಕಾಕ್ ನಗರದ ಯೋಗಿ ಕೊಳ್ಳದಲ್ಲಿ ಸತೀಶ್ ಜಾರಕಿಹೊಳಿ ಮೀನು ಹಿಡಿದಿದ್ದಾರೆ. ಕಳೆದ ಮೂರು ತಿಂಗಳಿನಿಂದ ಉಪಚುನಾವಣೆ ಹಿನ್ನೆಲೆ ಗೋಕಾಕ್ ಕ್ಷೇತ್ರದಲ್ಲಿ ಸತೀಶ್ ಅವರು ನಿರಂತರ ಸುತ್ತಾಟದಲ್ಲಿ ಬ್ಯುಸಿಯಾಗಿದ್ದರು. ಹೀಗಾಗಿ ದೀಪಾವಳಿ ಹಬ್ಬ ನಿಮಿತ್ತ ತಮ್ಮ ಓಡಾಟಕ್ಕೆ ಸತೀಶ್ ಕೊಂಚ ಬ್ರೇಕ್ ಕೊಟ್ಟಿದ್ದಾರೆ. ಫುಲ್ ರಿಲ್ಯಾಕ್ಸ್ ಆಗಿ ಮಕ್ಕಳ ಜೊತೆ ಸೇರಿ ಮೀನು ಹಿಡಿದು ಖುಷಿಪಟ್ಟಿದ್ದಾರೆ.

    ಇತ್ತ ಗೋಕಾಕ್ ಉಪಚುನಾವಣೆಗೆ ಸ್ಪರ್ಧಿಸಲು ಅನರ್ಹ ಶಾಸಕ ರಮೇಶ್ ಜಾರಕಿಹೊಳಿ ಪ್ಲಾನ್ ಮಾಡುತ್ತಿದ್ದಾರೆ. ಸುಪ್ರೀಂ ಕೋರ್ಟ್ ಅನರ್ಹತೆ ಅರ್ಜಿ ವಿಚಾರಣೆ ಮುಗಿಸಿದ್ದು, ತೀರ್ಪು ಕಾಯ್ದಿರಿಸಿದೆ. ತೀರ್ಪು ಹೇಗಿದ್ದರೂ ಚುನಾವಣೆಗೆ ನಿಲ್ಲುವ ಅವಕಾಶವಿದೆ ಎಂದು ಕಾನೂನು ತಜ್ಞರು ಹೇಳಿದ್ದಾರೆ. ವಾದ ಪ್ರತಿವಾದ ನೋಡಿದರೆ ಚುನಾವಣೆಗೆ ಅವಕಾಶ ನಿಲ್ಲುವ ಅವಕಾಶ ದೊರೆಯುವ ಭಾವನೆಯಿದೆ. ಚುನಾವಣೆ ಎದುರಿಸಲು ನಾನು ಸಿದ್ಧನಿದ್ದೇನೆ ಎಂದು ಈ ಹಿಂದೆ ರಮೇಶ್ ಜಾರಕಿಹೊಳಿ ಹೇಳಿದ್ದರು.

    ಹಾಗೆಯೇ ಸಹೋದರ ಸತೀಶ್ ಜಾರಕಿಹೊಳಿ ವಿರುದ್ಧವೂ ವಾಗ್ದಾಳಿ ನಡೆಸಿ, ಸತೀಶ್ ಮಾಡಿರುವ ದ್ರೋಹವನ್ನು ಕಥೆ ಮಾಡಿದರೆ ಅವನು ಮನೆಗೆ ಓಡಿಹೋಗುತ್ತಾನೆ. ಹುಚ್ಚನಂತೆ ಓಡಾಡುತ್ತಾ ಹೇಳಿಕೆ ನೀಡುತ್ತಿದ್ದಾನೆ. ಅವನನ್ನು ಹುಚ್ಚಾಸ್ಪತ್ರೆಗೆ ಸೇರಿಸಬೇಕಿತ್ತು. ಅವನೊಬ್ಬ ನಾಯಕನಲ್ಲ, ಅವನೊಬ್ಬ ಷಂಡ ಎಂದು ಏಕವಚನದಲ್ಲೇ ಗುಡುಗಿದ್ದರು.

    ಜಾರಕಿಹೊಳಿ ಕುಟುಂಬಕ್ಕೆ ಅಪಮಾನ ಮಾಡಬಾರದು ಎಂಬ ಕಾರಣಕ್ಕೆ ಸುಮ್ಮನಿದ್ದೇವೆ. ನಾನು ಮತ್ತು ಬಾಲಚಂದ್ರ ಜಾರಕಿಹೊಳಿ ಒಂದೇ ವೇದಿಕೆಯಲ್ಲಿ ಬಂದಾಗ ಸತೀಶ್ ಜಾರಕಿಹೊಳಿ ಮಾತುಗಳಿಗೆ ತಕ್ಕ ಉತ್ತರ ಕೊಡುತ್ತೇವೆ ಎಂದು ಕಿಡಿಕಾರಿದ್ದರು.

  • ಗೋಕಾಕ್‍ನಲ್ಲಿ ಸಹೋದರರ ಸವಾಲ್!

    ಗೋಕಾಕ್‍ನಲ್ಲಿ ಸಹೋದರರ ಸವಾಲ್!

    ಬೆಳಗಾವಿ: ಗೋಕಾಕ್ ಉಪಚುನಾವಣೆ ಇದೀಗ ಸಹೋದರತ್ವದ ಮಾತೃ ಪ್ರೇಮವನ್ನು ತೂಗೊಯ್ಯಾಲೆಯಂತಾಗಿಸಿದೆ. 25 ವರ್ಷಗಳಿಂದ ಕಾಂಗ್ರೆಸ್ ಪಕ್ಷದಿಂದ ಪ್ರತಿನಿಧಿಸಿದ ರಮೇಶ್ ಜಾರಕಿಹೊಳಿ ಅತೃಪ್ತರಾಗಿ ಕೊನೆಗೆ ಅನರ್ಹರಾಗಿದ್ದಾರೆ. ವಿಧಿಯಿಲ್ಲದೇ ಬಿಜೆಪಿಯನ್ನು ಅಪ್ಪಿಕೊಂಡ ಇವರ ನಿರ್ಧಾರವನ್ನ ಜನ ಒಪ್ಪಿಕೊಳ್ಳಲಿ ಎಂದು ಜನಾದೇಶ ಪಡೆಯಲು ಕಾತುರರಾಗಿದ್ದಾರೆ. ಆದರೆ ಅಣ್ಣ ರಮೇಶ್ ನಾಗಾಲೋಟಕ್ಕೆ ಕಾಂಗ್ರೆಸ್ಸಿನಿಂದ ಅಖಾಡಕ್ಕೆ ಇಳಿಯುತ್ತಿರುವ ಕಿರಿಯ ತಮ್ಮ ಲಖನ್ ಒಂದು ಸುತ್ತಿನ ಪ್ರಚಾರ ಮುಗಿಸಿದ್ದಾರೆ.

    10 ವರ್ಷಗಳ ಹಿಂದೆ ರಮೇಶ್ ಸಹೋದರ ಭೀಮಶಿ ಜಾರಕಿಹೊಳಿ ಬಿಜೆಪಿಯಲ್ಲಿ ಸ್ಪರ್ಧಿಸಿ ಸಾವಿರಾರು ಮತಗಳ ಅಂತರದಿಂದ ಪರಾಭವಗೊಂಡಿದ್ದರು. 2008ರ ಚುನಾವಣೆಯಲ್ಲಿ ಬಿರುಸಿನ ಸ್ಪರ್ಧೆ ಏರ್ಪಟ್ಟು 7,700 ಮತಗಳಿಂದ ತಮ್ಮನ ವಿರುದ್ಧವೇ ರಮೇಶ್ ಗೆದ್ದು ಬೀಗಿದ್ದರು. ಇದೀಗ, ಮತ್ತೆ ಸಹೋದರನ ವಿರುದ್ಧವೇ ಅಖಾಡದಲ್ಲಿ ಸೆಣಸಬೇಕಿದೆ.

    ಸತೀಶ್ ಹಾಗೂ ಲಖನ್ ಜಾರಕಿಹೊಳಿ ಕಾಂಗ್ರೆಸ್ ಪಕ್ಷದಲ್ಲಿ ಗುರುತಿಸಿಕೊಂಡರೆ ರಮೇಶ್ ಹಾಗೂ ಬಾಲಚಂದ್ರ ಜಾರಕಿಹೊಳಿ ಕಮಲದ ತೆಕ್ಕೆಯಲ್ಲಿದ್ದಾರೆ. ಇನೋರ್ವ ಸಹೋದರ ಭೀಮಶಿ ಜಾರಕಿಹೊಳಿ ಮಾತ್ರ ತಟಸ್ಥವಾಗಿ ಉಳಿದಿದ್ದು ಗೋಕಾಕ್ ಜನತೆಯಲ್ಲಿ ಕುತೂಹಲ ಕೆರಳಿಸಿದೆ.

  • ಜಾರಕಿಹೊಳಿ ಸಹೋದರರ ಗುದ್ದಾಟ- ಜಾನಪದ ಗೀತೆ ಮೂಲಕ ರಮೇಶ್‍ಗೆ ಸತೀಶ್ ಟಾಂಗ್

    ಜಾರಕಿಹೊಳಿ ಸಹೋದರರ ಗುದ್ದಾಟ- ಜಾನಪದ ಗೀತೆ ಮೂಲಕ ರಮೇಶ್‍ಗೆ ಸತೀಶ್ ಟಾಂಗ್

    -ಚುನಾವಣೆಯಲ್ಲಿ ಅವರು ಅತ್ತು ಉಳಿದ 5 ವರ್ಷ ನಿಮ್ಮನ್ನ ಅಳಿಸ್ತಾರೆ
    -ಯಾರೇ ದುಡ್ಡು ಕೊಟ್ರೂ ತಗೊಳ್ಳಿ, ಮತ ಮಾತ್ರ ನಮ್ಗೇ ಹಾಕಿ

    ಬೆಳಗಾವಿ: ಜಿಲ್ಲೆಯ ಗೋಕಾಕ್ ನಗರಸಭೆಯಲ್ಲಿ ಭಾರೀ ಅವ್ಯವಹಾರ ನಡೆದಿದೆ ಎಂದು ಆರೋಪಿಸಿರುವ ಸತೀಶ್ ಜಾರಕಿಹೊಳಿ ಅದನ್ನು ಹಾಡಿನ ಮುಖಾಂತರವೇ ಹೇಳಿ ರಮೇಶ್ ಜಾರಕಿಹೊಳಿಗೆ ಟಾಂಗ್ ಕೊಟ್ಟಿದ್ದಾರೆ.

    ಕಥೆಯ ಕೇಳಿರಣ್ಣ ದ್ರೋಹದ ಕಥೆಯ ಕೇಳಿರಣ್ಣ ಎಂಬ ಹಾಡಿನ ಮೂಲಕ ಸತೀಶ್ ಜಾರಕಿಹೊಳಿ ಗೋಕಾಕ್ ನಗರ ಮತ್ತು ತಾಲೂಕಿನಲ್ಲಿ ನೆರೆ ಬಂದಾಗ ನಡೆದ ಅವ್ಯವಹಾರ ಬಗ್ಗೆ ತಿಳಿಸಿದರು. ಇನ್ನೊಂದೆಡೆ ಮಂಗಳವಾರ ನಡೆದ ಗೋಕಾಕ್ ಪಟ್ಟಣದ ಸ್ವಚ್ಛತಾ ಕಾರ್ಯಕ್ರಮದ ಅಭಿನಂದನಾ ಕಾರ್ಯಕ್ರಮದಲ್ಲಿ ಸತೀಶ್ ಜಾರಕಿಹೊಳಿ ಸಹೋದರ ರಮೇಶ್ ಜಾರಕಿಹೊಳಿಗೆ ಟಾಂಗ್ ಕೊಟ್ಟಿದ್ದಾರೆ. ಅನರ್ಹ ಶಾಸಕ ರಮೇಶ್ ಜಾರಕಿಹೊಳಿ ಅಳಿಯ ಅಂಬಿರಾವ್ ಪಾಟೀಲ, ನಗರ ಸಭೆ ಮಾಜಿ ಅಧ್ಯಕ್ಷ ಹಾಗೂ ಹಾಲಿ ಸದಸ್ಯ ಕೊತ್ವಾಲ್, ನಾವು ಯಾವ ಹಾಡು ಬಿಡುಗಡೆಗೊಳಿಸಬೇಕು ಎಂಬ ಚಿಂತೆಯಲ್ಲಿದ್ದಾರೆ ಎಂದು ಸತೀಶ್ ಟೀಕಿಸಿದರು.

    ರಮೇಶ್ ಬೆಂಬಲಿಗ ಕೊತ್ವಾಲ ಹೋಸ 500 ರೂ. ನೋಟು ತಗೊಂರು ಬರುತ್ತಾನೆ. ಹಮಾರಾ ಆದ್ಮಿ ಅಂತ ನೀವು ಮೋಸ ಹೋಗದಿರಿ, ಆತ 500 ಕೊಟ್ಟು 500 ಕೋಟಿ ಲೂಟಿ ಮಾಡುತ್ತಾನೆ. ನನಗೆ ನಮ್ಮ ಸಮಸ್ಯೆಗಳನ್ನ ಕೇಳಲು ಶಾಸಕ ಬರಬೇಕು, ಆದರೆ ರಮೇಶ್ ಬೆಂಬಲಿಗರು ಮತ ಕೇಳಲು ಬೇರೆಯೇ ಸೋಗಿನಲ್ಲಿ ಬರುತ್ತಾರೆ. ಯಾರೇ ದುಡ್ಡು ಕೊಟ್ಟರೂ ತೆಗೆದುಕೊಳ್ಳಿ. ಆದರೆ ಮತ ಮಾತ್ರ ನಮಗೇ ಹಾಕಿ ಎಂದು ಲಖನ್ ಜಾರಕಿಹೊಳಿ ಪರ ಬ್ಯಾಟಿಂಗ್ ಮಾಡಿದರು.

    ಕೊತ್ವಾಲ, ಅಂಬಿ ಇಬ್ಬರೂ ಗೋಕಾಕ್‍ನಲ್ಲಿ ಪ್ರವಾಹಕ್ಕೆ ಮನೆ ಕಳೆದುಕೊಂಡವರ ಹೆಸರಲ್ಲಿ ಹಣ ಲೂಟಿ ಮಾಡುತ್ತಿದ್ದಾರೆ. ಗೋಕಾಕ್ ನಗರವನ್ನು ಸ್ವಚ್ಛ ಮಾಡುವ ಹೆಸರಲ್ಲಿ ಲಕ್ಷ ಲಕ್ಷ ಹಣ ಲೂಟಿ ಮಾಡುತ್ತಿದ್ದಾರೆ ಎಂದು ಆರೋಪಿಸಿದರು. ಗೋಕಾಕ್ ತಾಲೂಕಿನಲ್ಲಿ ಹೊರ ಕಾರ್ಖಾನೆ ಬರುತ್ತಿಲ್ಲ, ಕಾರ್ಖಾನೆ ಬಂದರೆ ಅದರಲ್ಲೂ ಪಾಲು ಕೊಡಿ ಅಂತ ರಮೇಶ್ ಬೆಂಬಲಿಗರು ಬಂದು ಕೇಳುತ್ತಾರೆ. ಆದ್ದರಿಂದ ಈ ಬಾರಿ ಉಪಚುಣಾವಣೆಯಲ್ಲಿ ಶಾಸಕರನ್ನ ಬದಲಾವಣೆ ಮಾಡಲೇಬೇಕು. ಸಿಎಂ ಯಡಿಯೂರಪ್ಪ ಅವರನ್ನ ಕರೆಸಿ, ಅವರು ಸ್ಟೇಜ್ ಮೆಲೆ ಕಣ್ಣೀರು ಹಾಕುತ್ತಾರೆ. ರಮೇಶ್ ಜಾರಕಿಹೊಳಿನೂ ಅಳುತ್ತಾನೆ. ಅವರು ಒಂದು ಸಾರಿ ಅತ್ತರೆ ನಿಮ್ಮನ್ನ ಐದು ವರ್ಷ ಕಣ್ಣೀರು ಹಾಕಿಸುತ್ತಾರೆ. ಆದ್ದರಿಂದ ಈ ಬಾರಿ ಲಖನ್ ಅವರನ್ನ ಆರಿಸಿ, ನಗರದ ಅಭಿವೃದ್ಧಿ ಮಾಡಲು ಅವಕಾಶ ನೀಡಿ. ಜನರಿಂದ ನಾವು ಇಷ್ಟೊಂದು ಎತ್ತರಕ್ಕೆ ಬಂದಿದ್ದೆವೆ. ಲಖನ್ ಜಾರಕಿಹೊಳಿ ಮತ್ತು ನಾನು ನಿಮ್ಮ ಪರವಾಗಿದ್ದೇವೆ ಎಂದರು.

    ನಾವೂ ನಿಮ್ಮ ಜೊತೆ ಇದ್ದೇವೆ. ಇಂತಹ 10 ಪ್ರವಾಹ ಬರಲಿ ಗೋಕಾಕ್ ಸ್ವಚ್ಛತೆಗೆ ನಾನೂ ಸದಾ ಸಿದ್ಧ. ಒಂದು ತಿಂಗಳಲ್ಲಿ 40 ಗ್ರಾಮವನ್ನ ಸ್ವಚ್ಛ ಮಾಡಿದ್ದೇವೆ. ಗೋಕಾಕ್ ನಗರದಲ್ಲಿ ಪ್ರವಾಹ ಬಂದ ಬಳಿಕ ಸ್ವಚ್ಛತೆಯನ್ನ ನಾವು ಮಾಡಿದ್ದು. ಆದರೆ ರಮೇಶ್ ಜಾರಕಿಹೊಳಿ ಹಾಗೂ ಅವರ ಬೆಂಬಲಿಗರು ನಗರಸಭೆ ಸ್ವಚ್ಛ ಮಾಡಿದೆ ಎಂದು ಒಂದು ಕೋಟಿ ಲೂಟಿ ಮಾಡಿದ್ದಾರೆ. ಲೂಟಿ ಹಣದಲ್ಲಿ ಅರ್ಧ ಕೊತ್ವಾಲ್ ಗೌಡಾ ಕಿ ಜೆಬ್ ಮೆ, ಅರ್ಧ ಅಂಬಿಗೆ ಎಂದು ಸತೀಶ್ ಮಾರ್ಮಿಕವಾಗಿ ಕಿಡಿಕಾರಿದರು.

    ಮುಂಬರುವ ದಿನಗಳಲ್ಲಿ ನಿಮ್ಮ ಪರವಾಗಿ ಇರುವಂತವರು ಶಾಸಕರಾಗಬೇಕು. ನಮ್ಮನ್ನ ಜನ ಶಾಸಕರನ್ನಾಗಿ ಮಾಡಿದ್ದಾರೆ, ಯಾವುದೇ ಶ್ರೀಮಂತಿಕೆ ನಮ್ಮನ್ನ ಶಾಸಕನನ್ನಾಗಿ ಮಾಡಿಲ್ಲ. ಅದರ ಅರಿವು ನಮಗೆ ಇರಬೇಕು. ಈ ಸ್ಥಾನಕ್ಕೆ ಎಷ್ಟು ಮಹತ್ವ ಇದೆ ಎನ್ನುವುದನ್ನು ಈ ಚುನಾವಣೆಯಲ್ಲಿ ತೋರಿಸಬೇಕು. ಈ ಬಾರಿ ಕೊತ್ವಾಲ್, ಅಂಬಿ, ರಮೇಶ್ ಜಾರಕಿಹೊಳಿ ಮೆರೆ ದರ್ಬಾರ್ ಕಿ ಟೀಮ್ ಎನ್ನುತ್ತಾರೆ. ಇವರು ಗೋಕಾಕ್‍ನ ಮೂರು ಅಮೂಲ್ಯ ರತ್ನಗಳು ಇದ್ದಂಗೆ. ಈ ಮೂರು ರತ್ನ ಹೋಗುವವರೆಗೆ ನಿಮ್ಮನ್ನ ಮಲಗಲಿಕ್ಕೆ ಬಿಡಲ್ಲ. ರಮೇಶ್ ಜಾರಕಿಹೊಳಿ ಕಾಂಗ್ರೆಸ್‍ನಲ್ಲಿ ಇದ್ದರೆ ಮತ್ತೆ ಶಾಸಕ ಆಗುತ್ತಿದ್ದ, ಆದರೆ ಈಗ ಅವರು ಬಿಜೆಪಿಗೆ ಹೋಗಿದ್ದಾರೆ ಟಾಂಗ್ ಕೊಟ್ಟರು.

  • ಸಿಎಂಗೆ ಅಧಿಕಾರ ಅನುಭವಿಸಬೇಕಿದೆ, ಸಂತ್ರಸ್ತರ ಬಗ್ಗೆ ಯಾಕೆ ಯೋಚನೆ ಮಾಡ್ತಾರೆ: ಸತೀಶ್ ಜಾರಕಿಹೊಳಿ

    ಸಿಎಂಗೆ ಅಧಿಕಾರ ಅನುಭವಿಸಬೇಕಿದೆ, ಸಂತ್ರಸ್ತರ ಬಗ್ಗೆ ಯಾಕೆ ಯೋಚನೆ ಮಾಡ್ತಾರೆ: ಸತೀಶ್ ಜಾರಕಿಹೊಳಿ

    ಬೆಳಗಾವಿ: ಸಿಎಂ ಯಡಿಯೂರಪ್ಪ ಅವರಿಗೆ ರಾಜಕೀಯ ಮಾಡಿಕೊಂಡು, ಅಧಿಕಾರ ಅನುಭವಿಸಬೇಕಿದೆ. ಅವರು ಯಾಕೆ ಪ್ರವಾಹ ಸಂತ್ರಸ್ತರ ಬಗ್ಗೆ ತಲೆ ಕೆಡಿಸಿಕೊಳ್ಳುತ್ತಾರೆ ಎಂದು ಮಾಜಿ ಸಚಿವ ಸತೀಶ್ ಜಾರಕಿಹೊಳಿ ಟಾಂಗ್ ಕೊಟ್ಟಿದ್ದಾರೆ.

    ಮಾಧ್ಯಮಗಳ ಜೊತೆ ಮಾತನಾಡಿದ ಅವರು, ರಾಜ್ಯದ ಪ್ರವಾಹ ಸಂತ್ರಸ್ತರಿಗೆ ಸ್ಪಂದಿಸದ ಸಿಎಂ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಸಿಎಂ ಬಿ.ಎಸ್. ಯಡಿಯೂರಪ್ಪ ಅವರಿಗೆ ಆಂತರಿಕ ಸಮಸ್ಯೆಗಳು ಹೆಚ್ಚಾಗಿವೆ. ಪ್ರವಾಹ ಸಂತ್ರಸ್ತರ ನೆರವಿಗೆ ಧಾವಿಸಲು ಸಿಎಂ ಬಳಿ ಸಮಯವಿಲ್ಲ. ಸಿಎಂ ಅವರಿಗೆ ಕೇವಲ ರಾಜಕೀಯ ಮಾಡಬೇಕಿದೆ. ಅಧಿಕಾರ ಅನುಭವಿಸಬೇಕಿದೆ ಅಷ್ಟೇ. ಆದ್ದರಿಂದ ಪ್ರವಾಹದಿಂದ ಜನರ ಬದುಕು ಬೀದಿಗೆ ಬಂದರೂ ಸಿಎಂ ಹೆಚ್ಚು ತಲೆ ಕೆಡಿಸಿಕೊಳ್ಳುತ್ತಿಲ್ಲ ಎಂದು ಮಾತಿನ ಚಾಟಿ ಬೀಸಿದರು.

    ಒಂದೆಡೆ ಸುಪ್ರೀಂ ಕೋರ್ಟಿನಲ್ಲಿ ಅನರ್ಹ ಶಾಸಕರ ವಿಚಾರಣೆ ಇರುವ ಕಾರಣ ಸಿಎಂ ಟೆನ್ಷನ್‍ನಲ್ಲಿದ್ದಾರೆ. ಇನ್ನೊಂದೆಡೆ ಸರ್ಕಾರಕ್ಕೆ ಏನಾಗುತ್ತೋ ಎಂಬ ಆತಂಕದಿಂದ ಸಿಎಂ ದೆಹಲಿಗೆ ತೆರಳಿದ್ದಾರೆ. ಅನರ್ಹ ಶಾಸಕರೆಲ್ಲರೂ ದೆಹಲಿಯಲ್ಲಿ ಬೀಡು ಬಿಟ್ಟಿದ್ದಾರೆ ಎಂದು ಟೀಕಿಸಿದರು. ಹಾಗೆಯೇ ಬಿಜೆಪಿ ಶ್ರಮ ಪಟ್ಟು ಅಧಿಕಾರಕ್ಕೆ ಬಂದಿಲ್ಲ. ಹೀಗಾಗಿ ಜನರ ಕಷ್ಟ ಅವರಿಗೆ ಅರಿವಾಗುತ್ತಿಲ್ಲ. ಆದ್ದರಿಂದ ಸರ್ಕಾರದ ಗಮನ ಸೆಳೆಯಲೆಂದೇ ನಾಳೆ ಕಾಂಗ್ರೆಸ್ ಬೃಹತ್ ಸಮಾವೇಶ ನಡೆಸುತ್ತಿದೆ ಎಂದು ಹೇಳುವ ಮೂಲಕ ಬಿಜೆಪಿ ಸರ್ಕಾರಕ್ಕೆ ಕಾಂಗ್ರೆಸ್ ಬಿಸಿ ಮುಟ್ಟಿಸಲಿದೆ ಎಂದು ಎಚ್ಚರಿಕೆ ನೀಡಿದರು.

  • ತ್ರಿ ಈಡಿಯಟ್ಸ್ ಅಳಿಯಂದಿರ ಮಾತು ಕೇಳಿ ರಮೇಶ್ ಬಿಜೆಪಿ ಸೇರಿದ್ದಾರೆ- ಲಖನ್ ಜಾರಕಿಹೊಳಿ

    ತ್ರಿ ಈಡಿಯಟ್ಸ್ ಅಳಿಯಂದಿರ ಮಾತು ಕೇಳಿ ರಮೇಶ್ ಬಿಜೆಪಿ ಸೇರಿದ್ದಾರೆ- ಲಖನ್ ಜಾರಕಿಹೊಳಿ

    – ಗೋಕಾಕ್ ಕೈ ಅಭ್ಯರ್ಥಿ ನಾನೇ

    ಬೆಳಗಾವಿ: ಅನರ್ಹ ಶಾಸಕ ರಮೇಶ್ ಜಾರಕಿಹೊಳಿ ಮೂರು ಜನ ಅಳಿಯಂದಿರ ಮಾತು ಕೇಳಿ ಬಿಜೆಪಿ ಸೇರಿದ್ದಾರೆ. ನಮ್ಮ ತಂದೆಯಿಂದಲೂ ಜಾರಕಿಹೊಳಿ ಕುಟುಂಬದವರು ಕಾಂಗ್ರೆಸ್ಸಿನ ನಿಷ್ಠಾವಂತ ಕಾರ್ಯಕರ್ತರು. ಆದರೆ ರಮೇಶ್ ಅಳಿಯಂದಿರ ಮಾತು ಕೇಳಿ ಬಿಜೆಪಿ ಸೇರಿದ್ದಾರೆ ಎಂದು ಸಹೋದರ ಲಖನ್ ಜಾರಕಿಹೊಳಿ ಹರಿಹಾಯ್ದಿದ್ದಾರೆ.

    ಜಿಲ್ಲೆಯ ಗೋಕಾಕ್ ತಾಲೂಕಿನ ಧೂಪದಾಳ ಗ್ರಾಮದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಗೋಕಾಕ್‍ನಲ್ಲಿ ರಮೇಶ್ ಜಾರಕಿಹೊಳಿ ಅಳಿಯಂದಿರ ಭ್ರಷ್ಟಾಚಾರ ಬಹಳ ಆಗಿದೆ. ಇದಕ್ಕೆ ಕಡಿವಾಣ ಹಾಕಲು ನಾನು ಕಾಂಗ್ರೆಸ್ಸಿನಿಂದ ಸ್ಪರ್ಧಿಸುತ್ತಿದ್ದೇನೆ ಎಂದು ಸ್ಪಷ್ಟಪಡಿಸಿದರು.

    ಸತೀಶ್, ಲಖನ್ ತಲೆ ಕೆಡಿಸುತ್ತಿದ್ದಾನೆ ಎಂಬ ರಮೇಶ್ ಜಾರಕಿಹೊಳಿ ಆರೋಪದ ಕುರಿತು ಪ್ರತಿಕ್ರಿಯಿಸಿದ ಅವರು, ಹಿಂದೆ ನಾನು ಯಮಕನಮರಡಿ ಕ್ಷೇತ್ರದಲ್ಲಿ ಕಾಂಗ್ರೆಸ್ಸಿನಿಂದ ಸ್ಪರ್ಧೆ ಮಾಡಲು ತಯಾರಿ ನಡೆಸಿದ್ದೆ. ಯಾರು ನಮಗೆ ತಲೆ ಕೆಡಸುತ್ತಿದ್ದಾರೆ ಎಂಬುದರ ಬಗ್ಗೆ ಮಾತನಾಡುವುದು ಬೇಡ. ರಮೇಶ್ ಬಿಜೆಪಿ ಸೇರಲು ಅವರ ಅಳಿಯಂದಿರು ತಲೆ ಕೆಡಿಸಿದ್ದಾರೆ. ನಮ್ಮ ಮಾತು ಕೇಳಿದ್ದರೆ ರಮೇಶ್ ಕಾಂಗ್ರೆಸ್ಸಿನಲ್ಲಿರುತ್ತಿದ್ದರು. ಸತೀಶ್ ಜಾರಕಿಹೊಳಿ ನನ್ನ ತಲೆ ಕೆಡಿಸಿಲ್ಲ. ಕಾಂಗ್ರೆಸ್ ಪಕ್ಷದಲ್ಲಿ ಇರಿ ಒಳ್ಳೆಯದಾಗುತ್ತೆ ಎಂದು ರಮೇಶ್‍ಗೆ ಹೇಳಿದ್ದೆ. ಆದರೆ ನನ್ನ ಮಾತನ್ನು ಅವರು ಕೇಳಲಿಲ್ಲ ಎಂದು ಬೇಸರ ವ್ಯಕ್ತಪಡಿಸಿದರು.

    ಅಳಿಯಂದಿರ ಮೇಲೆ ರಮೇಶ್‍ಗೆ ಬಹಳ ಪ್ರೀತಿ. ಅಳಿಯಂದಿರು ತ್ರಿ ಈಡಿಯಟ್ಸ್ ಇದ್ದ ಹಾಗೆ. ಚುನಾವಣೆ ಮಾಡುವವರೊಬ್ಬರು, ದುಡಿಯುವವರೊಬ್ಬರು ನಂತರ ಬಂದು ಮೇಯುವವರೊಬ್ಬರು. ಅಳಿಯಂದಿರ ಭ್ರಷ್ಟಾಚಾರ ಬಹಳ ಇದೆ. ಅದನ್ನ ಹೇಳಲು ಒಂದು ದಿನ ಬೇಕು. ಬ್ಲ್ಯಾಕ್ ಮೇಲ್ ಮತ್ತು ಗೂಂಡಾಗಿರಿ ರಾಜಕಾರಣ ಬಹಳ ದಿನ ನಡೆಯುವುದಿಲ್ಲ. ನಮ್ಮ ಕ್ಷೇತ್ರದ ಜನರು ಕಣ್ಣೀರಿನಲ್ಲಿ ಕೈ ತೊಳೆಯುತ್ತಿದ್ದಾರೆ. ಅವರನ್ನು ಬದುಕಿಸುವ ಸಲುವಾಗಿ ನಾನು ಸ್ಪರ್ಧಿಸುತ್ತಿದ್ದೇನೆ. ಅಂಬಿರಾವ್ ಪಾರ್ಟ್-2, 420 ಎಂದು ಲಖನ್ ವ್ಯಂಗ್ಯ ಮಾಡಿದ್ದಾರೆ.

    ಇಂದಿನಿಂದ ಪ್ರಚಾರ ಆರಂಭಿಸಿದ್ದು, ಕಾಂಗ್ರೆಸ್ಸಿನಿಂದ ನಾನೇ ಸ್ಪರ್ಧಿಸುತ್ತಿದ್ದೇನೆ. ಎದುರಾಳಿ ಯಾರು ಆಗುತ್ತಾರೆ ಗೊತ್ತಿಲ್ಲ. ಆದರೆ ಗೋಕಾಕ್ ಅಭ್ಯರ್ಥಿ ನಾನೇ. ಈಗ ಟಾಸ್ ಆಗಿದೆ ಮ್ಯಾಚ್ ಆಮೇಲೆ ಆರಂಭವಾಗುತ್ತದೆ. ನಾನು ಬ್ಯಾಟಿಂಗ್ ತೆಗೆದುಕೊಂಡಿದ್ದೇನೆ. 25 ವರ್ಷಗಳಿಂದ ಕಾಂಗ್ರೆಸ್ಸಿನಲ್ಲಿದ್ದು, ಕೈ ವರಿಷ್ಠರಿಗೆ ಮನವಿ ಮಾಡಿದ್ದೇನೆ. ಗೋಕಾಕ್ ಮತದಾರರ ನಾಡಿಮಿಡಿತ ನನಗೆ ಗೊತ್ತು. ನಮ್ಮ ಭಾಗದ ಜನರಿಗೆ ಬಹಳ ಅನ್ಯಾಯ ಆಗಿದೆ ಅದನ್ನು ಸರಿಪಡಿಸಬೇಕಿದೆ. ಉಪಚುನಾವಣೆ ಐಎಎಸ್ ಪರೀಕ್ಷೆ ಇದ್ದ ಹಾಗೆ. ಪರೀಕ್ಷೆ ಆರಂಭವಾದಾಗಲೇ ಬರಬೇಕು, ಇಂದಿನಿಂದ ನಮ್ಮ ಪರೀಕ್ಷೆ ಆರಂಭವಾಗಿದೆ. ರಮೇಶ್ ಅವರ ರಾಜಕೀಯ ಗೊತ್ತು, ಹೀಗಾಗಿಯೇ ಅದಕ್ಕೆ ತಡವಾಗಿ ಕಣಕ್ಕಿಳಿದಿದ್ದೇನೆ ಎಂದು ಲಖನ್ ತಿಳಿಸಿದರು.

  • ದಾಯಾದಿ ಕಲಹ- ತಾವೇ ಕಟ್ಟಿದ ಸಾಮ್ರಾಜ್ಯ ಕೆಡವಲು ಮುಂದಾಗಿದ್ದೇಕೆ ಜಾರಕಿಹೊಳಿ ಬ್ರದರ್ಸ್?

    ದಾಯಾದಿ ಕಲಹ- ತಾವೇ ಕಟ್ಟಿದ ಸಾಮ್ರಾಜ್ಯ ಕೆಡವಲು ಮುಂದಾಗಿದ್ದೇಕೆ ಜಾರಕಿಹೊಳಿ ಬ್ರದರ್ಸ್?

    -ಹೊಸ ತಿರುವು ಪಡೆದ ಜಾರಕಿಹೊಳಿ ಬ್ರದರ್ಸ್ ಫೈಟ್!

    ಬೆಳಗಾವಿ: ಕಳೆದ ಮೂವತ್ತು ವರ್ಷದಿಂದ ಅಣ್ಣ ತಮ್ಮಂದಿರೆಲ್ಲರೂ ಸೇರಿಕೊಂಡು ಕಟ್ಟಿದ್ದ ಕೋಟೆಯದು. ಜನರ ಒಳಿತಿಗಾಗಿ ಸಮಾಜದ ಸೇವೆಗಾಗಿ ಕಟ್ಟಿದ ಸಾಮ್ರಾಜ್ಯ ಆರಂಭದಲ್ಲಿ ಒಳೆಯ ಕೆಲಸ ಮಾಡಿತು. ಆದರೆ ಅಣ್ಣ-ತಮ್ಮಂದಿರ ರಾಜಕೀಯ ಕಿತ್ತಾಟದಿಂದ ಇಂದು ಆ ಕೋಟೆಯನ್ನ ಕಟ್ಟಿ ಬೆಳೆಸಿದ ಸಹೋದರನೇ ಕೆಡವಲು ಹೊರಟಿದ್ದಾರೆ.

    ಗೋಕಾಕ್ ಅಂದ್ರೆ ಜಾರಕಿಹೊಳಿ, ಜಾರಕಿಹೊಳಿ ಅಂದ್ರೆ ಗೋಕಾಕ್ ಅನ್ನುವಷ್ಟರ ಮಟ್ಟಿಗೆ ರಾಜ್ಯದಲ್ಲಿ ಪ್ರಸಿದ್ಧಿಯಾಗಿತ್ತು. ಈ ಜಾರಕಿಹೊಳಿ ಸಾಮ್ರಾಜ್ಯ, ಅಣ್ಣ-ತಮ್ಮಂದಿರು ಒಂದಾಗಿದ್ದರೆ ಏನೆಲ್ಲಾ ಮಾಡಬಹುದು ಅನ್ನೋದಕ್ಕೆ ಉದಾಹರಣೆ ಆಗಿತ್ತು. ಆದರೆ ಎಷ್ಟೇ ಆದರೂ ಅಣ್ಣ-ತಮ್ಮಂದಿರು ಬೆಳೆಯುತ್ತಾ ದಾಯಾದಿಗಳು ಅನ್ನುವ ಗಾದೆ ಎಂದಿಗೂ ಸುಳ್ಳಾಗಲ್ಲ ಎಂಬುದು ಮತ್ತೊಮ್ಮೆ ನಿಜ ಆಗಿದೆ.

    ಗೋಕಾಕ್ ಸಾಹುಕಾರರಾದ ಜಾರಕಿಹೊಳಿ ಬ್ರದರ್ಸ್ ನಡುವೆ ಸದ್ಯ ರಾಜಕೀಯ ಪೈಟ್ ಆರಂಭವಾಗಿದೆ. ಒಂದು ಕಡೆ ಅನರ್ಹ ಶಾಸಕ ರಮೇಶ್ ಮತ್ತು ಬಿಜೆಪಿ ಶಾಸಕ ಬಾಲಚಂದ್ರ ಇದ್ದರೆ ಇನ್ನೊಂದು ಕಡೆ ಮಾಜಿ ಸಚಿವ ಸತೀಶ್ ಮತ್ತು ಕಾಂಗ್ರೆಸ್ ಮುಖಂಡ ಲಖನ್ ಇದ್ದಾರೆ. ಈ ಅಣ್ಣ-ತಮ್ಮಂದಿರ ಜಗಳದಿಂದ ಮೂವತ್ತು ವರ್ಷದ ಹಿಂದೆ ಕಟ್ಟಿಕೊಂಡಿದ್ದ ಜಾರಕಿಹೊಳಿ ಸಾಮ್ರಾಜ್ಯವನ್ನ ಕಟ್ಟಿ ಬೆಳೆಸಿದ್ದ ಸತೀಶ್ ಕೆಡವಲು ಮುಂದಾಗಿದ್ದಾರೆ. ಕಳೆದ ಐದು ಬಾರಿ ಗೋಕಾಕ್ ನಲ್ಲಿ ಶಾಸಕನಾಗಿ ಆಡಳಿತ ನಡೆಸಿರುವ ರಮೇಶ್ ಇತ್ತಿಚೀನ ದಿನಗಳಲ್ಲಿ ಯಾವುದೇ ಕೆಲಸ ಮಾಡದೇ ಬರೀ ಬ್ಲ್ಯಾಕ್ ಮೇಲ್ ರಾಜಕಾರಣ ಮಾಡಿಕೊಂಡು ಬರುತ್ತಿದ್ದಾರೆ ಎನ್ನಲಾಗುತ್ತಿದ್ದು, ಖುದ್ದು ಸಹೋದರ ಸತೀಶ್ ಜಾರಕಿಹೊಳಿ ಅಣ್ಣನ ವಿರುದ್ಧ ಇಂತಹದ್ದೊಂದು ಆರೋಪ ಮಾಡಿದ್ದಾರೆ.

    ಗೋಕಾಕ್ ನಲ್ಲಿ ಸದ್ಯ ಕಾಂಗ್ರೆಸ್ ಕಾರ್ಯಕರ್ತರ ಮೇಲೆ ನೂರಕ್ಕೂ ಅಧಿಕ ಕೇಸ್ ದಾಖಲಾಗಿದ್ದು, ಕಾರಣವಿಲ್ಲದೇ ಈ ರೀತಿ ಪೊಲೀಸರು ಕೇಸ್ ಮಾಡುತ್ತಿದ್ದಾರೆ ಎಂದು ಖದ್ದು ಸತೀಶ್ ಜಾರಕಿಹೊಳಿ ಎಸ್.ಪಿ ಲಕ್ಷ್ಮಣ್ ಅವರಿಗೆ ಪತ್ರ ಬರೆದಿದ್ದಾರೆ. ಇದರಿಂದ ಸದ್ಯ ಗೋಕಾಕ್ ನಲ್ಲಿ ಬೇರೊಂದು ರೀತಿಯಲ್ಲಿ ರಾಜಕೀಯ ನಡೆಯುತ್ತಿದೆ ಎಂಬುದು ಸ್ಪಷ್ಟವಾಗಿ ಗೊತ್ತಾಗುತ್ತಿದೆ.

    ಕಳೆದ ಒಂದು ವಾರದ ಹಿಂದಷ್ಟೇ ರಮೇಶ್ ಜಾರಕಿಹೊಳಿ ಸಾವಿರಾರು ಜನರನ್ನ ಸೇರಿಸಿ ಸಂಕಲ್ಪ ಸಮಾವೇಶ ಮಾಡಿ ವೋಟ್ ಬ್ಯಾಂಕ್ ಗಟ್ಟಿಗೊಳಿಸಿಕೊಳ್ಳುವ ಕೆಲಸ ಮಾಡಿಕೊಂಡಿದ್ದರು. ಈ ಬೆನ್ನಲ್ಲೇ ಸದ್ಯ ಸತೀಶ್ ಕೂಡ ಬೇರೊಂದು ರೀತಿಯ ಗೇಮ್ ಆಡುತ್ತಿದ್ದು, ತಮ್ಮತ್ತ ಗೋಕಾಕ್ ಜನರನ್ನ ಸೆಳೆಯುವ ಕೆಲಸ ಮಾಡುತ್ತಿದ್ದಾರೆ ಎನ್ನಲಾಗುತ್ತಿದೆ. ಈ ಎಲ್ಲ ಬೆಳವಣಿಗೆ ನಡುವೆ ಕಳೆದ ನಾಲ್ಕು ದಿನಗಳ ಹಿಂದೆ ರಮೇಶ್ ಜಾರಕಿಹೊಳಿ ಗೋಕಾಕ್ ಅಧಿಕಾರಿಗಳ ಸಭೆ ಕರೆದು ಅಳಿಯ ಅಂಬಿರಾವ್ ಪಾಟೀಲ್ ಹೇಳಿದಂತೆ ಕೆಲಸ ಮಾಡಿ ಎಂದು ಸೂಚನೆ ಕೂಡ ನೀಡಿದ್ದಾರೆ ಎನ್ನಲಾಗಿದೆ.

    ಇದು ಸತೀಶ್ ಗೆ ನಿದ್ದೆಗೆಡಸಿದ್ದು ಈ ಕಾರಣಕ್ಕೆ ಅಳಿಯ ಅಂಬಿರಾವ್ ವಿರುದ್ಧ ಶುಕ್ರವಾರ ಹರಿಹಾಯ್ದಿದ್ದಾರೆ. ಅಷ್ಟೇ ಅಲ್ಲದೆ ಅಂಬಿರಾವ್ ಗೆ ನಮ್ಮ ಬಗ್ಗೆ ಭಯವಿಲ್ಲ. ಗೋಕಾಕ್ ನಲ್ಲಿ ಜನರ ಮೇಲೆ ಗುಲಾಮಗಿರಿ ನಡೆಸುತ್ತಿದ್ದು, ಈ ಕಾರಣಕ್ಕೆ ಜನರಿಗೆ ಸ್ವಾತಂತ್ರ್ಯ ಕೊಡಿಸಲು ಹೋರಾಟ ಮಾಡುತ್ತಿದ್ದೇನೆ. ಗೋಕಾಕ್ ಜನರಿಗೆ ಅಂಬಿರಾವ್ ಪಾಟೀಲ್ ನಿಂದ ಸ್ವಾತಂತ್ರ್ಯಗೊಳ್ಳಬೇಕಿದೆ. ಅಷ್ಟೇ ಅಲ್ಲದೆ ಮೂವತ್ತು ವರ್ಷಗಳ ಹಿಂದೆ ಜಾರಕಿಹೊಳಿ ಕೋಟೆಯನ್ನ ಸಮಾಜ ಸೇವೆ ಮಾಡಲು ಕಟ್ಟಿದ್ದೆವು. ಈಗ ಜಾರಕಿಹೊಳಿ ಶಕ್ತಿ ಒಳ್ಳೆಯದಕ್ಕೆ ಬಳಕೆ ಆಗುತ್ತಿಲ್ಲ. ಈ ಕಾರಣಕ್ಕೆ ಅದನ್ನ ಕೆಡುವ ಚಿಂತನೆಗೆ ಬಂದಿದ್ದೇವೆ. ಹೀಗೆ ಜಾರಕಿಹೊಳಿ ಕಟ್ಟಿ ಬೆಳೆಸಿದ ಸತೀಶ್ ಜಾರಕಿಹೊಳಿ ಸಹೋದರನ ವಿರುದ್ಧ ಫೈಟ್ ಗಿಳಿದಿದ್ದು ಅಷ್ಟೇ ಅಲ್ಲದೆ ತಾವೇ ಕಟ್ಟಿ ಬೆಳೆಸಿ ಕೋಟೆಯನ್ನ ಇಂದು ಕೆಡವಲು ಮುಂದಾಗಿದ್ದಾರೆ. ಇದು ಉಪಚುನಾವಣೆಯಲ್ಲಿ ಜಾರಕಿಹೊಳಿ ವಿರೋಧಿ ಬಣವನ್ನ ಸೆಳೆಯುವ ತಂತ್ರ ಕೂಡ ಅಂತಾ ಕೆಲವು ಬಿಂಬಿಸುತ್ತಿದ್ದಾರೆ.

    ಒಟ್ಟಿನಲ್ಲಿ ಅಣ್ಣ-ತಮ್ಮಂದಿರ ಜಗಳ ಕಳೆದ ಆರು ತಿಂಗಳಿನಿಂದಲೂ ಆರಂಭವಾಗಿದ್ದು, ಈಗ ಬೇರೆ ರೀತಿಯ ತಿರುವು ಪಡೆದುಕೊಂಡಿದೆ ಈ ಬ್ರದರ್ಸ್ ಫೈಟ್ ಗಂಡ ಹೆಂಡತಿ ಜಗಳದಲ್ಲಿ ಕೂಸು ಬಡವಾಯಿತು ಅನ್ನೋ ಹಾಗೆ ಇಬ್ಬರು ಅಣ್ತಮ್ಮಂದಿರ ನಡುವೆ ಸದ್ಯ ಗೋಕಾಕ್ ನಲ್ಲಿ ಯಾವುದೇ ಅಭಿವೃದ್ಧಿ ಕೆಲಸಗಳು ಆಗುತ್ತಿಲ್ಲ. ಅಧಿಕಾರಿಗಳು ತಮ್ಮ ಕೆಲಸ ಮಾಡಲು ಭಯ ಪಡುವ ಸ್ಥಿತಿ ನಿರ್ಮಾಣವಾಗಿ ಎನನ್ನೂ ಮಾಡದ ಸ್ಥಿತಿಯಲ್ಲಿದ್ದಾರೆ. ಇತ್ತ ಆಯಾ ಬೆಂಬಲಿಗರ ಮೇಲೆ ಕೇಸ್ ಕೂಡ ಆಗುತ್ತಿದ್ದು, ಈ ಎಲ್ಲ ಕಾರಣಕ್ಕೆ ಸದ್ಯ ಗೋಕಾಕ್ ನ ಜನರು ಸಿಕ್ಕು ನಲಗುವಂತಾಗಿದೆ.

  • ಕತ್ತಿ ಅಥವಾ ಬಾಲಚಂದ್ರರಿಗೆ ಸಚಿವ ಸ್ಥಾನ ಸಿಗುವ ನಿರೀಕ್ಷೆ ಇತ್ತು: ಸತೀಶ್ ಜಾರಕಿಹೊಳಿ

    ಕತ್ತಿ ಅಥವಾ ಬಾಲಚಂದ್ರರಿಗೆ ಸಚಿವ ಸ್ಥಾನ ಸಿಗುವ ನಿರೀಕ್ಷೆ ಇತ್ತು: ಸತೀಶ್ ಜಾರಕಿಹೊಳಿ

    ಬೆಳಗಾವಿ(ಚಿಕ್ಕೋಡಿ): ಶಾಸಕ ಉಮೇಶ್ ಕತ್ತಿ ಅಥವಾ ಶಾಸಕ ಬಾಲಚಂದ್ರ ಜಾರಕಿಹೊಳಿಗೆ ಸಚಿವ ಸ್ಥಾನ ಸಿಗುವ ನಿರೀಕ್ಷೆ ಇತ್ತು. ಆದರೆ ಅವರಿಬ್ಬರಿಗೂ ಸಿಕ್ಕಿಲ್ಲ ಎಂದು ಮಾಜಿ ಸಚಿವ ಸತೀಶ್ ಜಾರಕಿಹೊಳಿ ಹೇಳಿದ್ದಾರೆ.

    ಹುಕ್ಕೇರಿ ತಾಲೂಕಿನ ಪಾಶ್ಚಪೂರ ಗ್ರಾಮದಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಬೆಳಗಾವಿಯಿಂದ ಉಮೇಶ್ ಕತ್ತಿ ಅಥವಾ ಬಾಲಚಂದ್ರ ಅವರಿಗೆ ಸಚಿವ ಸ್ಥಾನ ನೀಡುತ್ತಾರೆ ಎಂದು ನಿರೀಕ್ಷೆ ಇತ್ತು. ಆದರೆ ಇಬ್ಬರಿಗೂ ಸಚಿವ ಸಂಪುಟದಲ್ಲಿ ಸ್ಥಾನ ಸಿಕ್ಕಿಲ್ಲ. ಮಂತ್ರಿಗಿರಿ ಸಿಗದೇ ಇದ್ದಿದ್ದು ಅವರ ಪಕ್ಷದ ಆಂತರಿಕ ವಿಚಾರ ಎಂದು ಬಿಜೆಪಿ ಸರ್ಕಾರದ ಸಚಿವ ಸಂಪುಟದ ಬಗ್ಗೆ ಪ್ರತಿಕ್ರಿಯಿಸಿದರು.

    ಇತ್ತ ರೆಬೆಲ್ ಶಾಸಕ ರಮೇಶ್ ಜಾರಕಿಹೊಳಿ ಬಗ್ಗೆ ಮಾತನಾಡಿ, ಅವರು ಇಂದು ಎರಡು ವಸ್ತುಗಳನ್ನ ಕಳೆದುಕೊಂಡಿದ್ದಾರೆ. ಅವರ ಆಸೆ ಪಟ್ಟಿದ್ದ ವಸ್ತು ಕೂಡ ಸಿಗಲಿಲ್ಲ, ಮಂತ್ರಿಗಿರಿಯು ಅವರಿಗೆ ಸಿಗಲಿಲ್ಲ. ರಮೇಶ ಎರಡೂ ವಸ್ತು ಕಳೆದುಕೊಂಡಿದ್ದು ನಮಗೂ ನಿರಾಶೆಯಾಗಿದೆ ಎಂದು ವ್ಯಂಗ್ಯವಾಡಿದರು.

    ಜಾರಕಿಹೊಳಿ ಕುಟುಂಬಕ್ಕೆ ಸಚಿವ ಸ್ಥಾನ ತಪ್ಪಿದ್ದು ಇದೇ ಮೊದಲೇನಲ್ಲ. ಕೆಲವೊಂದು ಸಂದರ್ಭಗಳಲ್ಲಿ ಸಚಿವ ಸ್ಥಾನ ಸಿಕ್ಕಿಲ್ಲ. ಬಾಲಚಂದ್ರ ಜಾರಕಿಹೊಳಿ ಅವರಿಗೆ ಸಚಿವ ಸ್ಥಾನ ನೀಡುವುದು ಬಿಡುವುದು ಅವರ ಪಕ್ಷದ ನಿರ್ಧಾರ ಎಂದು ಹೇಳಿದರು.

    ಇನ್ನೊಂದೆಡೆ ಸಚಿವ ಸ್ಥಾನ ಕೈತಪ್ಪಿರುವುದಕ್ಕೆ ಉಮೇಶ್ ಕತ್ತಿ ಬಂಡಾಯ ಎದ್ದಿದ್ದಾರೆ. ಈ ಬಗ್ಗೆ ಪಬ್ಲಿಕ್ ಟಿವಿ ಜೊತೆ ಮಾತನಾಡಿದ ಅವರು, ನಾನು ಶಾಸಕನಾಗಿ 35 ವರ್ಷ ಆಯಿತು. ನಾನು ಪಕ್ಷಕ್ಕೆ ನಿಷ್ಠೆಯಿಂದ ಕೆಲಸ ಮಾಡುತ್ತಿದ್ದೇನೆ. 1996ಯಿಂದ 1999ವರೆಗೂ ಮಂತ್ರಿಯಾಗಿ ಕೆಲಸ ಮಾಡಿದ್ದೇನೆ. 2008-2013ವರೆಗೂ ಕೂಡ ಮಂತ್ರಿಯಾಗಿ ಕೆಲಸ ಮಾಡಿದ್ದೇನೆ. ಈ ಬಾರಿ ಕೂಡ ಮಂತ್ರಿ ಆಗಬೇಕೆಂಬ ಆಸೆ ಇತ್ತು. ಆದರೆ ಅರ್ಧ ಸಂಪುಟ ವಿಸ್ತರಣೆ ಮಾಡಿದ್ದಾರೆ. ಈಗ ನನ್ನ ಹೆಸರನ್ನು ಕೈಬಿಟ್ಟಿದ್ದಾರೆ. ಇನ್ನು ಅರ್ಧ ಸಂಪುಟ ವಿಸ್ತರಣೆ ಮಾಡಬೇಕಿದೆ. ಕಾದು ನೋಡಬೇಕಿದೆ. ನಾನು ಮುಖ್ಯಮಂತ್ರಿ ಜೊತೆ ಮಾತನಾಡುತ್ತೇನೆ ಎಂದು ಹೇಳಿದ್ದಾರೆ.

    8 ಸಲ ಜನ ಆಶೀರ್ವಾದ ಮಾಡಿದ್ದಾರೆ. ಹಾಗಾಗಿ ಹಿರಿಯನಾಗಿದ್ದೇನೆ. ನಾನು ಚಿಕ್ಕ ವಯಸ್ಸಿನಲ್ಲೇ ಶಾಸಕನಾಗಿದ್ದೆ. 6-8 ಬಾರಿ ಶಾಸಕನಾಗಿ, 13 ವರ್ಷಗಳ ಕಾಲ ಮಂತ್ರಿಯಾಗಿ ಕೆಲಸ ಮಾಡಿದ್ದೇನೆ. ನನಗೆ ಆಸೆ ಇದೆ, ವಯಸ್ಸಿದೆ. ಕೆಲಸ ಮಾಡುವ ಹಂಬಲ ಇದೆ. ಬೆಳಗಾವಿಯಲ್ಲಿ ಅತಿವೃಷ್ಟಿಯಿಂದ ತೊಂದರೆಯಾಗುತ್ತಿದ್ದು, ಅದನ್ನು ನಿಭಾಯಿಸಬೇಕು ಎಂಬ ಮನಸ್ಸಿದೆ. ಸಿಎಂ ನನಗೆ ಮಂತ್ರಿ ಸ್ಥಾನ ಕೊಡುತ್ತಾರೆ ಎಂಬ ಭರವಸೆ ಇದೆ ಎಂದರು.

    ಬೆಳಗ್ಗೆ 6 ಗಂಟೆಯವರೆಗೂ ನನ್ನ ಹೆಸರು ಇತ್ತು. ಆದರೆ 6.10ಕ್ಕೆ ನನ್ನ ಹೆಸರನ್ನು ಕೈಬಿಟ್ಟಿದ್ದಾರೆ. ನಾನು ಹಾಗೂ ತಿಪ್ಪರೆಡ್ಡಿ ಹಿರಿಯರು. ಸಾಕಷ್ಟು ಜನರು ಆಶೀರ್ವಾದ ಮಾಡಿದ್ದಾರೆ. ಜನರ ಸೇವೆ ಮಾಡುವ ಇಚ್ಛೆ ನಮಗಿದೆ. ಅಂತಹ ಸಂದರ್ಭದಲ್ಲಿ ಹಿರಿಯರನ್ನು ಕೈಬಿಟ್ಟಿದ್ದಾರೆ ಎಂದು ಹೇಳುತ್ತಿದ್ದಾರೆ. ಯುವಕರನ್ನು ಬೆಳೆಸಬೇಕು ಎಂದು ಬಯಸುತ್ತಿದ್ದಾರೆ. ಇನ್ನು ಸಂಪುಟ ವಿಸ್ತರಣೆ ಆಗಬೇಕಿದೆ. ಕಾದು ನೋಡಬೇಕು ಎಂದು ಉಮೇಶ್ ಕತ್ತಿ ಹೇಳಿದ್ದಾರೆ.

  • ದೊಡ್ಡವರ ಜಮೀನು ಬೇಡ-ಸಣ್ಣವರ ಜಮೀನು ಬಿಡಲ್ಲ

    ದೊಡ್ಡವರ ಜಮೀನು ಬೇಡ-ಸಣ್ಣವರ ಜಮೀನು ಬಿಡಲ್ಲ

    ಬೆಳಗಾವಿ: ಅಭಿವೃದ್ದಿ ಹೆಸರಿನಲ್ಲಿ ಜಮೀನು ಕಸಿದುಕೊಂಡು ಕೆಲಸ ನಡೆಸುತ್ತಿರುವ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ, ಪ್ರಭಾವಿಗಳ ಒತ್ತಡಕ್ಕೆ ಮಣಿದು ಕೇವಲ ಸಣ್ಣ ರೈತರ ಜಮೀನಿಗೆ ಕಣ್ಣ ಹಾಕಿದೆ ಎಂಬ ಆರೋಪ ಕೇಳಿ ಬಂದಿದೆ. ಶಾಸಕಿ ಹೆಬ್ಬಾಳ್ಕರ್ ಕೂಡ ಈ ವಿಷಯದಲ್ಲಿ ಸೈಲೆಂಟ್ ಆಗಿರುವುದು ರೈತರನ್ನ ಕೆರಳಿಸುವಂತೆ ಮಾಡಿದೆ.

    ಬೆಳಗಾವಿ ತಾಲೂಕಿನ ಹೊರವಲಯದಲ್ಲಿ ಬೆಳಗಾವಿ-ಗೋವಾ ಸಂಪರ್ಕಿಸುವ ರಾಷ್ಟ್ರೀಯ ಹೆದ್ದಾರಿ 4ರ ಬೈಪಾಸ್ ರಸ್ತೆ ನಿರ್ಮಾಣವಾಗುತ್ತಿದೆ. ಇದಕ್ಕಾಗಿ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ರೈತರಿಂದ ಜಮೀನು ಕಬ್ಜಾ ಪಡೆದುಕೊಂಡು ಕೆಲಸ ಮಾಡುತ್ತಿದೆ. ಬೆಳಗಾವಿಯ ಪ್ರತಿಷ್ಠಿತ ಉದ್ಯಮಿಗಳು ಹಾಗೂ ರಾಜಕಾರಣಿಗಳ ಜಮೀನಿನ ಜಾಗದಲ್ಲಿ ನಿರ್ಮಾಣವಾಗಬೇಕಿದ್ದ ರಸ್ತೆ ಸಣ್ಣ ರೈತರ ಜಮೀನಿನಲ್ಲಿ ನಿರ್ಮಾಣವಾಗುತ್ತಿದೆ ಎನ್ನಲಾಗುತ್ತಿದೆ. ಇದು ಸಣ್ಣ ರೈತರ ಆಕ್ರೋಶಕ್ಕೆ ಕಾರಣವಾಗಿದೆ.

    ರೈತರು ತಮ್ಮ ಭೂಮಿ ಉಳಿಸಿಕೊಳ್ಳೋಕೆ ಇಷ್ಟೆಲ್ಲ ಹೋರಾಟ ಮಾಡುತ್ತಿದ್ರೆ, ಇತ್ತ ಸ್ಥಳೀಯ ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್ ಮಾತ್ರ ಒಂದು ದಿನವೂ ಇವ್ರ ಹೋರಾಟಕ್ಕೆ ಸಾಥ್ ಕೊಟ್ಟಿಲ್ಲ. ಹೀಗಾಗಿ ಲಕ್ಷ್ಮಿ ಹೆಬ್ಬಾಳ್ಕರ್ ಪ್ರಭಾವಿ ಉದ್ಯಮಿಗಳ ಪರ ನಿಂತ್ರಾ ಅನ್ನೋ ಪ್ರಶ್ನೆ ಕಾಡುತ್ತಿದೆ. ಪ್ರಭಾವಿಗಳ ಜಮೀನುಗಳು ಇಲ್ಲಿ ಇರೋದ್ರಿಂದ ಹೋರಾಟ ಮಾಡುವುದರಿಂದ ಹೆಬ್ಬಾಳ್ಕರ್ ಗೆ ತೊಂದರೆ ಆಗುತ್ತೆ ಎಂಬ ಕಾರಣಕ್ಕೆ ಇಲ್ಲಿ ಬಂದಿಲ್ಲ ಎಂಬ ಮಾತುಗಳು ಕೇಳಿ ಬರುತ್ತಿವೆ.

    ಈ ಕುರಿತು ಪ್ರತಿಕ್ರಿಯಿಸಿರುವ ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್, ಈಗಾಗಲೇ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳಿಂದ ಕಾಮಗಾರಿಯ ನೀಲ ನಕ್ಷೆಯನ್ನು ತರಿಸಿಕೊಂಡು ನೋಡಿದ್ದೇನೆ. ಫಲವತ್ತಾದ ಭೂಮಿ ಬಿಟ್ಟು ಬೇರೆ ಸ್ಥಳದಲ್ಲಿ ಬೈಪಾಸ್ ನಿರ್ಮಾಣ ಮಾಡಲು ಸಾಧ್ಯವಾಗುತ್ತಾ ಎಂಬ ಚರ್ಚೆಗಳು ನಡೆದಿವೆ. ಒಬ್ಬರಿಗೆ ಒಂದು ಇನ್ನೊಬ್ಬರಿಗೆ ಮತ್ತೊಂದು ಮಾಡುವ ಜಾಯಮಾನ ನಮ್ಮದಲ್ಲ. ಭೂಮಿ ಕಳೆದುಕೊಂಡವರು ಎಲ್ಲರೂ ರೈತರೇ ಎಂದು ತಿಳಿಸಿದ್ದಾರೆ.

    ಪ್ರಭಾವಿಗಳ ಜಮೀನು ಉಳಿಸಿಕೊಳ್ಳಲು ಕಾಮಗಾರಿಯ ಪ್ಲಾನ್ ಬದಲಾವಣೆ ಮಾಡಲಾಗಿದೆ ಎಂಬ ಮಾತುಗಳು ಕೇಳಿ ಬಂದ ಹಿನ್ನೆಲೆಯಲ್ಲಿ ಅಧಿಕಾರಿಗಳನ್ನು ಕಳುಹಿಸಿ ಪರಿಶೀಲನೆ ನಡೆಸಲಾಗಿದೆ ಎಂದು ಜಿಲ್ಲಾ ಉಸ್ತುವಾರಿ, ಸಚಿವ ಸತೀಶ್ ಜಾರಕಿಹೊಳಿ ಹೇಳುತ್ತಾರೆ.

    ಜಮೀನಿನ ಅಕ್ಕಪಕ್ಕ ಕೆಲವು ಕಡೆಗಳಲ್ಲಿ ಬರಡು ಭೂಮಿ ಇದ್ದರೂ ರೈತರ ಭೂಮಿಯನ್ನ ಪಡೆದುಕೊಳ್ಳುವ ಮುಂಚೆ ಸ್ವಲ್ಪ ಇಲಾಖೆಯವರು ಯೋಚಿಸಿ ಕೆಲಸ ಆರಂಭಿಸಿದ್ರೇ ರೈತರು ಬದುಕುತ್ತಿದ್ದರು. ಒಟ್ಟಿನಲ್ಲಿ ರೈತರಿಗೆ ಸರಿಯಾದ ಪರಿಹಾರ ಆದರೂ ಕೊಟ್ಟು ಬದುಕಿಸುವ ಕೆಲಸ ಇಲಾಖೆ ಮಾಡಬೇಕಿದೆ ಎಂದು ಸಾರ್ವಜನಿಕರು ಆಗ್ರಹಿಸಿದ್ದಾರೆ.

    [wonderplugin_video iframe=”https://www.youtube.com/watch?v=7Z2BzrhFEKQ” lightbox=0 lightboxsize=1 lightboxwidth=960 lightboxheight=540 autoopen=0 autoopendelay=0 autoclose=0 lightboxtitle=”” lightboxgroup=”” lightboxshownavigation=0 showimage=”” lightboxoptions=”” videowidth=600 videoheight=400 keepaspectratio=1 autoplay=1 loop=1 videocss=”position:relative;display:block;background-color:#000;overflow:hidden;max-width:100%;margin:0 auto;” playbutton=”https://publictv.in/wp-content/plugins/wonderplugin-video-embed/engine/playvideo-64-64-0.png”]

  • ದೇವೇಗೌಡರ ಆಶೀರ್ವಾದದಿಂದ ಸರ್ಕಾರ 4 ವರ್ಷ ಇರುತ್ತೆ: ಸತೀಶ್ ಜಾರಕಿಹೊಳಿ

    ದೇವೇಗೌಡರ ಆಶೀರ್ವಾದದಿಂದ ಸರ್ಕಾರ 4 ವರ್ಷ ಇರುತ್ತೆ: ಸತೀಶ್ ಜಾರಕಿಹೊಳಿ

    ಬಳ್ಳಾರಿ: ಮಾಜಿ ಪ್ರಧಾನಿ, ಜೆಡಿಎಸ್ ವರಿಷ್ಠರಾದ ಹೆಚ್.ಡಿ.ದೇವೇಗೌಡರ ಆಶೀರ್ವಾದದರಿಂದ ಸಮ್ಮಿಶ್ರ ಸರ್ಕಾರ ಇರುತ್ತದೆ. ದೇವೇಗೌಡರು ಪ್ರತಿಯೊಂದು ವಿಷಯವನ್ನು ಅರ್ಥಗರ್ಭಿತವಾಗಿ, ತಳಮಟ್ಟದಲ್ಲಿಯಿಂದಲೂ ಮಾಹಿತಿ ಪಡೆದು, ಪ್ರತಿಯೊಂದನ್ನು ಕೂಲಂಕುಷವಾಗಿ ಪರಿಶೀಲಿಸಿ ಮಾತನಾಡುತ್ತಾರೆ. ಮಧ್ಯಂತರ ಚುನಾವಣೆಗೆ ಸಿದ್ಧರಾಗಿ ಎಂದು ಹೇಳಲುನ ಸಾಧ್ಯವಿಲ್ಲ ಎಂದು ಸಚಿವ ಸತೀಶ್ ಜಾರಕಿಹೊಳಿ ವಿಶ್ವಾಸ ವ್ಯಕ್ತಪಡಿಸಿದರು.

    ಹೊಸಪೇಟೆ ತಾಲೂಕಿನ ಕಮಲಾಪುರದಲ್ಲಿ ಹುಲಿ ಮತ್ತು ಸಿಂಹಗಳ ಸಫಾರಿ ಲೋಕಾರ್ಪಣೆಗೊಳಿಸಿ ಮಾತನಾಡಿದ ಸಚಿವರು, ಉತ್ತರ ಕರ್ನಾಟಕದ ಬಹುದಿನಗಳ ಬೇಡಿಕೆ ನೆರೆವೇರಿದೆ. ಸದ್ಯಕ್ಕೆ ನಾಲ್ಕು ಹುಲಿ ಮತ್ತು ಸಿಂಹಗಳನ್ನು ತಂದು ಸಫಾರಿಯಲ್ಲಿ ಬಿಡಲಾಗಿದೆ. ಪ್ರತಿ ಜಿಲ್ಲೆಯಲ್ಲಿಯೂ ಜಿಯೋಲಾಜಿಕಲ್ ಪಾರ್ಕ್ ನಿರ್ಮಾಣ ಮಾಡಲು ಚಿಂತಿಸಲಾಗಿದೆ. ಈ ಯೋಜನೆಗೆ ಬೆಳಗಾವಿಯಲ್ಲಿ ಚಾಲನೆ ನೀಡಲು ಉದ್ದೇಶಿಸಲಾಗಿದೆ. ಶೀಘ್ರದಲ್ಲಿಯೇ ಬಳ್ಳಾರಿಯ ಕಿರು ಮೃಗಾಲಯವನ್ನು ಕಮಲಾಪುರಕ್ಕೆ ಶಿಫ್ಟ್ ಮಾಡಲಾಗುತ್ತದೆ ಎಂದು ತಿಳಿಸಿದರು.

    ಜಿಂದಾಲ್ ಪ್ರಕರಣಕ್ಕೆ ಸಂಬಂಧಿಸಿದಂತೆ ಸಚಿವ ಸಂಪುಟ ಉಪ ಸಮಿತಿಯನ್ನು ರಚಿಸಿದೆ. ಉಪಸಮಿತಿ ನೀಡುವ ವರದಿಯನ್ನಾಧರಿಸಿ ಸರ್ಕಾರ ತೆಗೆದುಕೊಳ್ಳುವ ನಿರ್ಧಾರಕ್ಕೆ ನಾನು ಬದ್ಧನಾಗಿರುತ್ತೇನೆ. ಇನ್ನು ಅನಿಲ್ ಲಾಡ್ ಮತ್ತು ಆನಂದ್ ಸಿಂಗ್ ಜಿಂದಾಲ್ ಕುರಿತ ಹೇಳಿಕೆಗಳು ವೈಯಕ್ತಿಕ. ಅವರಿಬ್ಬರ ಹೇಳಿಕೆಗಳಿಗೆ ನಾನು ಪ್ರತಿಕ್ರಿಯಿಸಲ್ಲ ಎಂದು ಹೇಳಿದರು.

    [wonderplugin_video iframe=”https://www.youtube.com/watch?v=7Z2BzrhFEKQ” lightbox=0 lightboxsize=1 lightboxwidth=960 lightboxheight=540 autoopen=0 autoopendelay=0 autoclose=0 lightboxtitle=”” lightboxgroup=”” lightboxshownavigation=0 showimage=”” lightboxoptions=”” videowidth=600 videoheight=400 keepaspectratio=1 autoplay=1 loop=1 videocss=”position:relative;display:block;background-color:#000;overflow:hidden;max-width:100%;margin:0 auto;” playbutton=”https://publictv.in/wp-content/plugins/wonderplugin-video-embed/engine/playvideo-64-64-0.png”]

  • ನಮ್ಮ ಸಮ್ಮಿಶ್ರ ಸರ್ಕಾರ ಆಕಾಶದಲ್ಲಿ ವಿಮಾನ ಹೋದಂತೆ: ಸತೀಶ್ ಜಾರಕಿಹೊಳಿ

    ನಮ್ಮ ಸಮ್ಮಿಶ್ರ ಸರ್ಕಾರ ಆಕಾಶದಲ್ಲಿ ವಿಮಾನ ಹೋದಂತೆ: ಸತೀಶ್ ಜಾರಕಿಹೊಳಿ

    ದಾವಣಗೆರೆ: ನಮ್ಮ ಸಮ್ಮಿಶ್ರ ಸರ್ಕಾರ ಆಕಾಶದಲ್ಲಿ ವಿಮಾನ ಹೋದಂತೆ. ಕೆಳಗೆ ನಿಂತು ನೋಡೋರಿಗೆ ಈಗ ಬೀಳುತ್ತೆ, ಆಗ ಬೀಳುತ್ತೆ ಅಂತ ಭಾಸವಾಗುತ್ತದೆ ಆದ್ರೆ ಬೀಳೋದಿಲ್ಲ ಎಂದು ಅರಣ್ಯ ಸಚಿವ ಸತೀಶ್ ಜಾರಕಿಹೊಳಿ ಹೇಳಿದ್ದಾರೆ.

    ಬಿಜೆಪಿ ನಾಯಕರು ರಾಜ್ಯದಲ್ಲಿರುವ ಕೈ-ದಳದ ದೋಸ್ತಿ ಸರ್ಕಾರ ಬಿದ್ದು, ಬಿಜೆಪಿ ಅಧಿಕಾರಕ್ಕೆ ಬರುತ್ತೆ ಎಂದು ಹೇಳಿಕೆಗಳ ಸುರಿಮಳೆಯನ್ನೇ ಹರಿಸುತ್ತಿದ್ದಾರೆ. ಆದರೆ ಮೈತ್ರಿ ನಾಯಕರು ಮಾತ್ರ ನಮ್ಮ ಸರ್ಕಾರ ಸುಭದ್ರವಾಗಿದೆ ಯಾವುದೇ ತೊಂದರೆಯಿಲ್ಲ ಎಂದು ಬಿಜೆಪಿಗೆ ತಿರುಗೇಟು ನೀಡುತ್ತಲೇ ಬರುತ್ತಿದ್ದಾರೆ. ಇದೇ ನಿಟ್ಟಿನಲ್ಲಿ ರಾಜನಹಳ್ಳಿ ವಾಲ್ಮೀಕಿ ಮಠದಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಸತೀಶ್ ಜಾರಕಿಹೊಳಿ, ವಿರೋಧ ಪಕ್ಷದ ಹೇಳಿಕೆಗೆ ವಿಮಾನದ ಕಥೆ ಹೇಳಿ ತಿರುಗೇಟು ನೀಡಿದರು.

    ನಮ್ಮ ಸಮ್ಮಿಶ್ರ ಸರ್ಕಾರ ಆಕಾಶದಲ್ಲಿ ವಿಮಾನ ಹೋದಂತೆ. ಕೆಳಗೆ ನಿಂತು ನೋಡೋರಿಗೆ ಈಗ ಬೀಳುತ್ತೆ, ಆಗ ಬೀಳುತ್ತೆ ಅಂತ ಭಾಸವಾಗುತ್ತದೆ. ಆದರೆ ವಿಮಾನ ಬೀಳೋದಿಲ್ಲ, ಯಶಸ್ವಿಯಾಗಿ ಲ್ಯಾಂಡ್ ಆಗುತ್ತೆ. ಹಾಗೆಯೇ ನಮ್ಮ ಸರ್ಕಾರ ಕೂಡ ಬೀಳೋದಿಲ್ಲ, ಸಿಎಂ ಕುಮಾರಸ್ವಾಮಿ ಅವರೇ ಇನ್ನೂ 4 ವರ್ಷ ಸಿಎಂ ಆಗಿ ಅವಧಿ ಪೂರ್ಣಗೊಳಿಸುತ್ತಾರೆ ಎಂದು ತಿಳಿಸಿದರು.

    ಸಮ್ಮಿಶ್ರ ಸರ್ಕಾರ ಸುಭದ್ರವಾಗಿ ಇರುತ್ತೆ, ಸಚಿವ ಸಂಪುಟ ವಿಸ್ತರಣೆ ನಾಳೆ ಅಂತಿಮವಾಗುತ್ತೆ. ಯಾರು ಯಾರಿಗೆ ಸಚಿವ ಸ್ಥಾನ ಕೊಡುತ್ತಾರೋ ಗೊತ್ತಿಲ್ಲ. ಸಚಿವ ಸ್ಥಾನ ಸಿಗದಿದ್ದರೆ ಅಸಮಾಧಾನ ಸಹಜ. ಆದರೆ ನಮ್ಮ ವರಿಷ್ಠರು ಆ ಅಸಮಾಧಾನ ಶಮನಗೊಳಿಸುತ್ತಾರೆ. ಸದ್ಯಕ್ಕೆ ರಮೇಶ್ ಜಾರಕಿಹೊಳಿ ತಟಸ್ಥರಾಗಿದ್ದಾರೆ. ಮಂತ್ರಿ ಮಂಡಲ ವಿಸ್ತರಣೆ ಆದ್ಮೇಲೆ ಏನ್ ಮಾಡುತ್ತಾರೋ ಕಾದು ನೋಡಬೇಕು ಎಂದರು.

    ರಾಜನಹಳ್ಳಿಯಿಂದ ರಾಜಧಾನಿಯವರೆಗೆ ವಾಲ್ಮೀಕಿ ಸ್ವಾಮೀಜಿಯಿಂದ ಪಾದಯಾತ್ರೆ ಹಿನ್ನೆಲೆ ರಾಜನಹಳ್ಳಿ ವಾಲ್ಮೀಕಿ ಮಠಕ್ಕೆ ಜಾರಕಿಹೊಳಿ ಆಗಮಿಸಿ, ಪ್ರಸನ್ನಾನಂದಪುರಿ ಸ್ವಾಮೀಜಿಯ ಜೊತೆ ನಾವೆಲ್ಲರೂ ಇದ್ದೇವೆ ಎಂದು ಭರವಸೆ ನೀಡಿದರು. ಬಳಿಕ ಮಾತನಾಡಿ, ಸುಮಾರು ಸಲ ಹಿಂದಿನ ಹಾಗೂ ಇಂದಿನ ಸರ್ಕಾರಕ್ಕೆ ಮನವಿ ಮಾಡಿದ್ದೇವೆ. ವಾಲ್ಮೀಕಿ ಜನಾಂಗಕ್ಕೆ ಮೀಸಲಾತಿಯಲ್ಲಿ ಅನ್ಯಾಯವಾಗಿದೆ. ಶೈಕ್ಷಣಿಕ ಹಾಗೂ ಉದ್ಯೋಗ ಎರಡರಲ್ಲೂ ವಾಲ್ಮೀಕಿ ಜನಾಂಗಕ್ಕೆ ಮೀಸಲಾತಿ ಅಗತ್ಯವಾಗಿ ಬೇಕು. ವರದಿಗಳು, ಕಾನೂನು ಎಲ್ಲವೂ ನಮ್ಮ ಪರವಾಗಿದೆ. ಹೀಗಾಗಿ ವಾಲ್ಮೀಕಿ ಸ್ವಾಮೀಜಿ ಪಾದಯಾತ್ರೆ ಮೂಲಕ ಸರ್ಕಾರದ ಗಮನ ಸೆಳೆಯಲು ಮುಂದಾಗಿದ್ದಾರೆ. ಬೆಂಗಳೂರಿನವರೆಗೆ ಯಾತ್ರೆ ಪೂರ್ಣಗೊಂಡ ನಂತರ ಅಲ್ಲಿ ಸಿಎಂ ಜೊತೆ ಸಭೆ ಮಾಡಿ ವಾಲ್ಮೀಕಿ ಜನಾಂಗಕ್ಕೆ ಮೀಸಲಾತಿ ನೀಡುವ ಬಗ್ಗೆ ಚರ್ಚೆ ಮಾಡಲಾಗುತ್ತೆ. ನಾವು ಈ ಜನಾಂಗದ ಜೊತೆ ಇದ್ದೇವೆ ಎಂದು ಭರವಸೆ ನೀಡಿದರು.