Tag: Satish Jarakiholi

  • ಸರ್ಕಾರ ಉರುಳಿಸುವ ಹಂತಕ್ಕೆ ಬಂತಾ ಇಬ್ಬರ ವೈಯಕ್ತಿಕ ಪ್ರತಿಷ್ಠೆ!

    ಸರ್ಕಾರ ಉರುಳಿಸುವ ಹಂತಕ್ಕೆ ಬಂತಾ ಇಬ್ಬರ ವೈಯಕ್ತಿಕ ಪ್ರತಿಷ್ಠೆ!

    ಬೆಂಗಳೂರು: ಸಂಕ್ರಾಂತಿಗೆ ರಾಜ್ಯ ರಾಜಕಾರಣದಲ್ಲಿ ಮಹಾಕ್ರಾಂತಿ ಆಗಲಿದೆ ಎಂಬ ಮಾತುಗಳು ರಾಜಕೀಯ ಅಂಗಳದಲ್ಲಿ ಕೇಳಿ ಬಂದಿದ್ದವು. ಈ ಮಾತಿಗೆ ಪೂರಕ ಎಂಬಂತೆ ಮಂಗಳವಾರ ಮುಳಬಾಗಿಲು ಮತ್ತು ರಾಣೇಬೆನ್ನೂರು ಕ್ಷೇತ್ರದ ಪಕ್ಷೇತರ ಶಾಸಕರಾದ ಹೆಚ್.ನಾಗೇಶ್, ಆರ್ ಶಂಕರ್ ಸಮ್ಮಿಶ್ರ ಸರ್ಕಾರಕ್ಕೆ ನೀಡಿದ್ದ ಬೆಂಬಲ ವಾಪಸ್ ಪಡೆದರು. ಆದ್ರೆ ಸರ್ಕಾರ ಉರುಳಿಸಲು ಕಾಂಗ್ರೆಸ್ ನಾಯಕರಿಬ್ಬರ ಪ್ರತಿಷ್ಠೆಯ ಕಾರಣವಾಯ್ತಾ ಎಂಬ ಚರ್ಚೆಗಳು ರಾಜ್ಯದಲ್ಲಿ ಶುರುವಾಗಿವೆ.

    ಸರ್ಕಾರ ರಚನೆಯ ಬಳಿಕ ಬೆಳಗಾವಿಯ ರಾಜಕಾರಣ ಮೈತ್ರಿಗೆ ದೊಡ್ಡ ತಲೆನೋವನ್ನು ತಂದಿತ್ತು. ಬೆಳಗಾವಿ ಸಾಹುಕಾರರು ಅಂತಾನೇ ಕರೆಸಿಕೊಳ್ಳುವ ಸತೀಶ್ ಜಾರಕಿಹೊಳಿ ಮತ್ತು ರಮೇಶ್ ಜಾರಕಿಹೊಳಿ ವಿರುದ್ಧ ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್ ತಿರುಗಿ ಬಿದ್ದಿದ್ದರು. ಈ ಮೂವರ ಜಗಳ ಸರ್ಕಾರದ ಆರಂಭದ ದಿನದಲ್ಲಿ ದಿನಕ್ಕೊಂದು ಟ್ವಿಸ್ಟ್ ಗಳನ್ನು ಪಡೆದುಕೊಂಡಿತ್ತು. ಬೆಳಗಾವಿಯ ಪಿಎಲ್‍ಡಿ ಬ್ಯಾಂಕ್ ಚುನಾವಣೆ ಮತ್ತು ಅಧ್ಯಕ್ಷರ ನೇಮಕಾತಿ ವಿಷಯ ರೆಸಾರ್ಟ್ ತಲುಪಿತ್ತು. ಒಂದು ಕಡೆ ಲಕ್ಷ್ಮಿ ಹೆಬ್ಬಾಳ್ಕರ್ ರಾತ್ರೋರಾತ್ರಿ ಧರಣಿ ಕುಳಿತು, ಪಿಎಲ್‍ಡಿ ಬ್ಯಾಂಕ್ ಸದಸ್ಯರನ್ನು ರಹಸ್ಯ ತಾಣದಲ್ಲಿ ಇರಿಸಿದರು.

    ಲಕ್ಷ್ಮಿ ಹೆಬ್ಬಾಳ್ಕರ್ ನಡೆಗೆ ಕೋಪಗೊಂಡ ಜಾರಕಿಹೊಳಿ ಸೋದರರು ತಮ್ಮ ಬಣದ ಅಭ್ಯರ್ಥಿಯ ಗೆಲುವಿಗಾಗಿ ಬಹಿರಂಗ ಹೇಳಿಕೆ ನೀಡಲು ತೊಡಗಿದರು. ಕೊನೆಗೆ ಈ ಸಮರಕ್ಕೆ ಕಾಂಗ್ರೆಸ್ ಟ್ರಬಲ್ ಶೂಟರ್ ಸಚಿವ ಡಿಕೆ ಶಿವಕುಮಾರ್ ಎಂಟ್ರಿ ಕೊಟ್ಟರು. ಬೆಳಗಾವಿ ರಾಜಕಾರಣಕ್ಕೆ ಶಿವಕುಮಾರ್ ಅವರು ಎಂಟ್ರಿ ನೀಡಿದ್ದು ತಪ್ಪು ಎಂದು ಜಾರಕಿಹೊಳಿ ಬ್ರದರ್ಸ್ ಗುಡುಗಿದರು. ಕೊನೆಗೆ ಪಕ್ಷದ ವರಿಷ್ಠ, ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ್ ಖಂಡ್ರೆ ನೇತೃತ್ವದಲ್ಲಿ ನಡೆದ ಸಂಧಾನ ಸಭೆಯಲ್ಲಿ ಲಕ್ಷ್ಮಿ ಹೆಬ್ಬಾಳ್ಕರ್ ಗೆಲುವಿನ ನಗೆ ಬೀರಿದರು. ಅಂದು ಕಾಂಗ್ರೆಸ್ ನಾಯಕರು ನೀಡುತ್ತಿದ್ದ ಹೇಳಿಕೆಗಳು ಬಿಜೆಪಿ ಆಪರೇಷನ್ ಕಮಲ ನಡೆಸುವಂತೆ ಪ್ರೇರಪಣೆ ನೀಡಿದವು ಎಂಬ ಮಾತುಗಳಿವೆ.

    ಈ ವಿವಾದ ಬಗೆಹರಿದ್ರೂ ಡಿಕೆ ಶಿವಕುಮಾರ್ ಮತ್ತು ರಮೇಶ್ ಜಾರಕಿಹೊಳಿ ಇಬ್ಬರ ನಡುವಿನ ಮುನಿಸು ಮಾತ್ರ ಶಮನಗೊಂಡಿರಲಿಲ್ಲ. ಇದಾದ ಕೆಲ ದಿನಗಳ ಬಳಿಕ ಬೆಳಗಾವಿಗೆ ಹೋದ ಡಿಕೆ ಶಿವಕುಮಾರ್ ರೈತರಿಗೆ ಜ್ಯೂಸ್ ಕುಡಿಸಿ ರೈತರ ಪ್ರತಿಭಟನೆಗೆ ತೆರೆ ಎಳೆಯುವ ಮೂಲಕ ತಮ್ಮ ವಿರೋಧಿಗಳಿಗೆ ಪರೋಕ್ಷವಾಗಿ ತಿರುಗೇಟು ನೀಡಿದ್ದರು. ಸಂಪುಟ ವಿಸ್ತರಣೆ ವೇಳೆಯೂ ರಮೇಶ್ ಜಾರಕಿಹೊಳಿ ಅವರಿಗೆ ಕೊಕ್ ನೀಡಿ ಸತೀಶ್ ಜಾರಕಿಹೊಳಿ ಅವರನ್ನು ಸಚಿವರನ್ನಾಗಿ ಮಾಡಿದ್ದರ ಹಿಂದೆ ಡಿ.ಕೆ.ಶಿವಕುಮಾರ್ ಪ್ಲಾನ್ ಇತ್ತು ಎಂಬುವುದು ಕಾಂಗ್ರೆಸ್ ವಲಯದ ಇನ್‍ಸೈಡ್ ಸ್ಟೋರಿ.

    ಡಿಕೆ ಶಿವಕುಮಾರ್ ಹಾಗೂ ಲಕ್ಷ್ಮಿ ಹೆಬ್ಬಾಳ್ಕರ್ ಮೇಲಿನ ಕೋಪಕ್ಕೆ ತಮ್ಮ ಸಚಿವ ಸ್ಥಾನದ ಜವಬ್ದಾರಿಯನ್ನು ಸರಿಯಾಗಿ ನಿರ್ವಹಿಸದೆ ಪಕ್ಷದ ನಾಯಕರ ಕೈಗು ಸಿಗದೆ ಆಪರೇಷನ್ ಕಮಲಕ್ಕೆ ಅಸಮಧಾನಿತ ಶಾಸಕರನ್ನ ಒಟ್ಟುಗೂಡಿಸುವ ಪ್ರಯತ್ನಕ್ಕೆ ರಮೇಶ್ ಜಾರಕಿಹೊಳಿ ಮುಂದಾದರು. ಸಚಿವ ಸ್ಥಾನ ಕಳೆದುಕೊಂಡ ಬಳಿಕ ರಮೇಶ್ ಜಾರಕಿಹೊಳಿ ಅಜ್ಞಾತ ಸ್ಥಳದಲ್ಲಿ ಉಳಿದುಕೊಂಡು ದೆಹಲಿಯಲ್ಲಿ ಬಿಜೆಪಿಯ ಹಿರಿಯ ನಾಯಕರನ್ನು ಭೇಟಿಯಾಗಿದ್ದರು ಎಂಬ ಸುದ್ದಿಗಳು ಹರಿದಾಡಿದ್ದವು. ಒಟ್ಟಿನಲ್ಲಿ ಮೂವರ ಜಗಳ ಆಪರೇಷನ್ ಕಮಲಕ್ಕೆ ಮುನ್ನುಡಿ ಆಯ್ತಾ ಎಂದು ಸಾರ್ವಜನಿಕರು ಮಾತನಾಡಿಕೊಳ್ಳುತ್ತಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ಗಣೇಶ್ ಹುಕ್ಕೇರಿ ಬಿಜೆಪಿ ಸೇರೋ ಬಗ್ಗೆ ಸತೀಶ್ ಜಾರಕಿಹೊಳಿ ಸ್ಪಷ್ಟನೆ

    ಗಣೇಶ್ ಹುಕ್ಕೇರಿ ಬಿಜೆಪಿ ಸೇರೋ ಬಗ್ಗೆ ಸತೀಶ್ ಜಾರಕಿಹೊಳಿ ಸ್ಪಷ್ಟನೆ

    – ಊಹಾಪೋಹಗಳಿಗೆ ಶಾಸಕ ಖಡಕ್ಕಾಗಿ ಪ್ರತಿಕ್ರಿಯೆ

    ಬೆಳಗಾವಿ: ಚಿಕ್ಕೋಡಿ ಕಾಂಗ್ರೆಸ್ ಶಾಸಕ ಗಣೇಶ್ ಹುಕ್ಕೇರಿ ಅವರು ಬಿಜೆಪಿ ಸೇರುವ ವಿಚಾರ ಸತ್ಯಕ್ಕೆ ದೂರವಾಗಿದೆ. ಹಲವು ತಿಂಗಳಿನಿಂದ ಇಂತಹ ಸುದ್ದಿಗಳು ಕೇಳಿಬರುತ್ತಿವೆ. ಜನವರಿ 19ರಂದು ಬಿಜೆಪಿ ಸೇರುವ ಬಗ್ಗೆ ಹೇಳಿದ್ದಾರೆ. ಅಲ್ಲಿಯವರೆಗೆ ತಾಳ್ಮೆಯಿಂದ ಕಾಯೋಣ ಎಂದು ಅರಣ್ಯ ಸಚಿವ ಸತೀಶ್ ಜಾರಕಿಹೊಳಿ ತಿಳಿಸಿದ್ದಾರೆ.

    ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪಕ್ಷದಲ್ಲಿ ಗಣೇಶ್ ಹುಕ್ಕೇರಿಗೆ ಯಾವುದೇ ಅಸಮಾಧಾನ ಇಲ್ಲ. ಈಗಾಗಲೇ ಅವರ ತಂದೆ ಸಂಸದರಿದ್ದಾರೆ. ಗಣೇಶ್ ಹುಕ್ಕೇರಿಗೂ ವರಿಷ್ಠರು ಪಕ್ಷದಲ್ಲಿ ಉನ್ನತ ಸ್ಥಾನ ನೀಡಿದ್ದಾರೆ. ಏಳು ತಿಂಗಳಿಂದ ಇದನ್ನೇ ಹೇಳುತ್ತಿದ್ದಾರೆ. ಅಮಿತ್ ಶಾ ಜೊತೆ ಇದ್ದಾರಾ ಅಥವಾ ಮೋದಿ ಜೊತೆಗೆ ನಮ್ಮ ಶಾಸಕರು ಇದ್ದಾರೆಯಾ ಹೇಳಿ. ಇನ್ನೂ ಯಾರು ಬಿಜೆಪಿಗೆ ಹೋಗಿಲ್ಲ ಹೋದಾಗ ನೋಡೋಣ ಅಂತ ಅವರು ಹೇಳಿದ್ರು.

    ಯಾರು ಎಲ್ಲೂ ಹೋಗಲ್ಲ, ನಮ್ಮ ಪಕ್ಷ ಸುರಕ್ಷಿತವಾಗಿದೆ. ಕೆಲವರು ವೈಯಕ್ತಿಕ ಕೆಲಸದ ಮೇಲೆ ದೆಹಲಿಯಲ್ಲಿದ್ದಾರೆ. ಬಿಜೆಪಿಯವರು ಆರು ತಿಂಗಳಿನಿಂದ ಹೇಳ್ತಾನೆ ಇದ್ದಾರೆ ಅದನ್ನ ಪ್ರೂವ್ ಮಾಡೋಕು ಆಗ್ತಿಲ್ಲ. ಯಾರಾದ್ರೂ ದೊಡ್ಡ ಅಮೌಂಟ್ ಕೊಡ್ತೀನಿ ಅಂದ್ರೆ ಕೆಲವರು ಸ್ವಲ್ಪ ಯೋಚನೆ ಮಾಡ್ತಾರೆ. ಶನಿವಾರ ನಾನು, ಅವರು ಎರಡು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದೆವು. ಗಣೇಶ್ ಹುಕ್ಕೇರಿ ಅವರು ಬಿಜೆಪಿಗೆ ಹೋಗಲ್ಲ. ಹಲವು ತಿಂಗಳಿನಿಂದ ಇಂತಹ ಸುದ್ದಿಗಳು ಕೇಳಿಬರುತ್ತಿವೆ. ಆದರೆ ಯಾವುದೇ ಶಾಸಕರು ಬಿಜೆಪಿ ಸೇರಿಲ್ಲ. ಜನವರಿ 19ರಂದು ಬಿಜೆಪಿ ಸೇರುವ ಬಗ್ಗೆ ಹೇಳಿದ್ದರೆ ಆ ಬಗ್ಗೆ ಕಾದು ನೋಡೋಣ. ಒಟ್ಟಿನಲ್ಲಿ ನಮ್ಮ ಪಕ್ಷ ಸುಭದ್ರವಾಗಿದೆ ಅಂತ ಅವರು ಸ್ಪಷ್ಟಪಡಿಸಿದ್ರು.

    ಗಣೇಶ್ ಸ್ಪಷ್ಟನೆ:
    ಜನವರಿ 19ರಂದು ಶಾಸಕ ಗಣೇಶ್ ಹುಕ್ಕೇರಿಯವರು ಕಾಂಗ್ರೆಸ್ ಬಿಟ್ಟು ಬಿಜೆಪಿ ಸೇರುತ್ತಾರೆ ಎಂಬ ಊಹಾಪೋಹಗಳಿಗೆ ಸ್ವರ್ತ ಗಣೇಶ್ ಹುಕ್ಕೇರುಯವರೇ ಪ್ರತಿಕ್ರಿಯೆ ನೀಡಿದ್ದಾರೆ. ಈ ಬಗ್ಗೆ ಟ್ವೀಟ್ ಮಾಡಿರುವ ಅವರು, ಹುಟ್ಟಿದಾಗಿನಿಂದ ಕಾಂಗ್ರೆಸ್ ಪಕ್ಷ ನನ್ನ ಮನೆ. ನನ್ನ ಮನೆಯನ್ನು ನಾನ್ಯಾಕೆ ತೊರೆದು ಹೋಗಲಿ ಎಂದು ಹೇಳುವ ಮೂಲಕ ಕಾಂಗ್ರೆಸ್ ಬಿಡುವ ಪ್ರಶ್ನೆಯೇ ಇಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

     ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ತಮ್ಮ ಎಲ್ಲಿ ಹೋದ್ರು ಪ್ರಶ್ನೆಗೆ ಅಣ್ಣ ಸತೀಶ್ ಜಾರಕಿಹೊಳಿ ಉತ್ತರ

    ತಮ್ಮ ಎಲ್ಲಿ ಹೋದ್ರು ಪ್ರಶ್ನೆಗೆ ಅಣ್ಣ ಸತೀಶ್ ಜಾರಕಿಹೊಳಿ ಉತ್ತರ

    ಚಿತ್ರದುರ್ಗ: ಸಂಪುಟ ಪುನಾರಚನೆಯ ಬಳಿಕ ಮಾಜಿ ಸಚಿವ ರಮೇಶ್ ಜಾರಕಿಹೊಳಿ ಯಾವ ನಾಯಕರ ಸಂಪರ್ಕಕ್ಕೂ ಸಿಗುತ್ತಿಲ್ಲ. ಇತ್ತ ಕಾಂಗ್ರೆಸ್ ಹೈಕಮಾಂಡ್ ಸೋದರ ಮನವೊಲಿಸಲು ಸತೀಶ್ ಜಾರಕಿಹೊಳಿ ಅವರನ್ನೇ ನೇಮಿಸಿತ್ತು. ಇಂದು ಚಿತ್ರದುರ್ಗ ಜಿಲ್ಲೆಯ ಜವನಗೊಂಡನಹಳ್ಳಿಯಲ್ಲಿ ಮಾತನಾಡಿದ ಅರಣ್ಯ ಸಚಿವ ಸತೀಶ್ ಜಾರಕಿಹೊಳಿ ತಮ್ಮ ಎಲ್ಲಿ ಹೋದ್ರು ಎಂಬ ಪ್ರಶ್ನೆಗೆ ಉತ್ತರಿಸಿದ್ದಾರೆ.

    ಸತೀಶ್ ಜಾರಕಿಹೊಳಿ ಹೇಳಿದ್ದೇನು?
    ಕಾಂಗ್ರೆಸ್‍ಗೆ ಆಪರೇಷನ್ ಕಮಲದ ಭೀತಿ ಇಲ್ಲ. ಸೋದರ ರಮೇಶ್ ಜಾರಕಿಹೊಳಿ ವೈಯಕ್ತಿಕ ಕೆಲಸದ ಮೇಲೆ ಹೋಗಿರಬಹುದು. ರಮೇಶ್ ಜಾರಕಿಹೊಳಿ ಅವರು ಇನ್ನೋರ್ವ ಸೋದರ, ಬಿಜೆಪಿ ನಾಯಕ ಬಾಲಚಂದ್ರ ಜಾರಕಿಹೊಳಿ ಸಂಪರ್ಕದಲ್ಲಿರಬಹುದು. ಅದರ ಅರ್ಥ ಕಾಂಗ್ರೆಸ್ ತೊರೆದು ಬಿಜೆಪಿ ಸೇರ್ತಾರೆ ಅಂತಾ ಅಲ್ಲ. ಸಚಿವ ಸ್ಥಾನ ಕಳೆದುಕೊಂಡಿದ್ದರಿಂದ ಅಸಮಾಧಾನಗೊಂಡಿದ್ದಾರೆ. ಆದ್ರೆ ಎಲ್ಲಿಯೂ ಹೋಗಲ್ಲ. ಇನ್ನು ಪಕ್ಷ ಬಿಡುವ ವಿಚಾರ ನನಗೆ ಗೊತ್ತಿಲ್ಲ, ಮುಂದೆ ಏನು ಆಗುತ್ತೆ ಕಾದುನೋಡೋಣ ಎಂದು ಅಡ್ಡಗೋಡೆಯ ಮೇಲೆ ದೀಪವಿಟ್ಟಂತೆ ಹೇಳಿದರು.

    ರಮೇಶ್ ಜಾರಕಿಹೊಳಿ ಖಾಸಗಿ ವಿಚಾರಕ್ಕಾಗಿ ಬಿಜೆಪಿ ವರಿಷ್ಠರನ್ನು ಭೇಟಿ ಮಾಡಿರುವ ಸಾಧ್ಯತೆಗಳಿವೆ. ಬಿಜೆಪಿ ಕುದುರೆ ವ್ಯಾಪಾರಕ್ಕೆ ಮುಂದಾಗಿದ್ದೆ ಎಂಬ ಮಾಜಿ ಸಿಎಂ ಸಿದ್ದರಾಮಯ್ಯರ ಹೇಳಿಕೆಯಲ್ಲಿ ಸತ್ಯಾಂಶವಿದೆ ಎಂದು ಹೇಳಿದರು.

    ಇದೇ ವೇಳೆ ಜೆಡಿಎಸ್ ಮುಖಂಡ ಬಸವರಾಜ್ ಹೊರಟ್ಟಿ ಹೇಳಿಕೆ ಪ್ರತಿಕ್ರಿಯಿಸಿದ ಸಚಿವರು, ಮಹಾರಾಷ್ಟ್ರಕ್ಕೆ ಜೈ ಅನ್ನುವವರು ಯಾರು ಶಾಸಕರಾಗಿಲ್ಲ. ಕಾಂಗ್ರೆಸ್ ಮತ್ತು ಬಿಜೆಪಿಯವರು ಬೆಳಗಾವಿಯಲ್ಲಿ ಶಾಸಕರಾಗಿದ್ದಾರೆ ಎಂದು ತಿರುಗೇಟು ನೀಡಿದರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv, ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ರಮೇಶ್ ಬದ್ಲು ಸತೀಶ್, ಇಬ್ರೂ ಒಂದೇ ಮನೆಯವ್ರು ಅಲ್ವಾ: ಜಮೀರ್ ಅಹ್ಮದ್

    ರಮೇಶ್ ಬದ್ಲು ಸತೀಶ್, ಇಬ್ರೂ ಒಂದೇ ಮನೆಯವ್ರು ಅಲ್ವಾ: ಜಮೀರ್ ಅಹ್ಮದ್

    -ನಾನು ಯಾವಾಗಲೂ ಸೇಫ್

    ಬೆಂಗಳೂರು: ದೆಹಲಿಯ ಸಭೆಯಲ್ಲಿ ನಾನು ಭಾಗವಹಿಸಿದ್ದೆ. ಆದರೆ ನಾವು ಇರೋವರೆಗೂ ಯಾವುದೇ ತೀರ್ಮಾನ ಹೊರ ಬಂದಿರಲಿಲ್ಲ. ಇದೀಗ ಕೆಲ ಮಾಹಿತಿ ಲಭ್ಯವಾಗಿದ್ದು, ಎಂಟಿಬಿ ನಾಗರಾಜ್, ತುಕಾರಾಂ, ತಿಮ್ಮಾಪುರ, ರಹೀಂ ಖಾನ್, ಶಿವಳ್ಳಿ, ಪರಮೇಶ್ವರ್ ನಾಯ್ಕ್ ಅವರಿಗೆ ಸಚಿವ ಸ್ಥಾನ ಬಹುತೇಕ ಖಚಿತ ಎಂದು ಹೇಳಲಾಗುತ್ತಿದೆ. ಇತ್ತ ಎಂ.ಬಿ.ಪಾಟೀಲ್ ಅವರ ಹೆಸರು ಸಹ ಫೈನಲ್ ಪಟ್ಟಿಯಲ್ಲಿದೆಯಂತೆ ಎಂದು ಸಚಿವ ಜಮೀರ್ ಅಹ್ಮದ್ ಹೇಳಿದ್ದಾರೆ.

    ನಗರದ ದೇವನಹಳ್ಳಿ ಏರ್ ಪೋರ್ಟ್ ನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾನು ಸೇಫ್ ಆಗಿದ್ದೇನೆ. ಮೊದಲ ಬಾರಿ ಸಚಿವ ಸಂಪುಟ ರಚನೆಯಲ್ಲಿ ನಾನು ಲಾಭಿ ಮಾಡುವುದಕ್ಕೆ ಮುಂದಾಗಿಲ್ಲ. ಪಕ್ಷದ ನಿಷ್ಠಾವಂತರಿಗೆ ಖಂಡಿತವಾಗಿ ಸ್ಥಾನ ಸಿಗುತ್ತೆ ಎಂಬ ನಂಬಿಕೆ ನನ್ನಲ್ಲಿದ್ದರಿಂದ ಅಂದು ದೆಹಲಿಗೂ ಹೋಗದೇ ಬೆಂಗಳೂರಿನಲ್ಲಿಯೇ ಇದ್ದೆ. ಪಕ್ಷ ನನಗೆ ಸಚಿವ ಸ್ಥಾನ ನೀಡಿದ್ದು, ಪ್ರಾಮಾಣಿಕತೆಯಿಂದ ಕೆಲಸ ಮಾಡುತ್ತಿದ್ದೇನೆ ಎಂದರು.

    ರಮೇಶ್ ಜಾರಕಿಹೊಳಿ ಮತ್ತು ಆರ್.ಶಂಕರ್ ಅವರನ್ನು ಸಚಿವ ಸಂಪುಟದಿಂದ ಕೈ ಬಿಡಲಾಗಿದೆ ಎಂಬ ವಿಷಯ ಮಾಧ್ಯಮಗಳಿಂದ ಗೊತ್ತಾಗಿದೆ. ಬೆಳಗಾವಿಯಲ್ಲಿ ರಮೇಶ್ ಬದಲು ಸತೀಶ್ ಅವರಿಗೆ ಸಚಿವ ಸ್ಥಾನ ನೀಡಿದ್ದಾರೆ. ಒಂದೇ ಕುಟುಂಬದವರಿಗೆ ಸಚಿವ ಸ್ಥಾನ ನೀಡಿದ್ದಾರೆ. ಪಕ್ಷದ ಕೆಲವು ನಿಯಮಗಳಡಿ ಸಚಿವ ಸ್ಥಾನ ಸಿಗುತ್ತದೆ. ಹೈಕಮಾಂಡ್ ಬಳಿ ಎಲ್ಲರ ಮಾಹಿತಿ ಇರುತ್ತದೆ. ಅರ್ಹತೆ ನೋಡಿ ಸ್ಥಾನಮಾನ ಕೊಡ್ತಾರೆ. ಹೈಕಮಾಂಡ್ ನಿರ್ಣಯಕ್ಕೆ ನಾವು ಬದ್ಧರಾಗಿರುತ್ತೇವೆ ಎಂದು ಅವರು ಸ್ಪಷ್ಟಪಡಿಸಿದರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ಸಚಿವ ಸ್ಥಾನದಿಂದ ಕೈ ಬಿಟ್ರೂ ಸಹೋದರ ಪಕ್ಷದಲ್ಲೇ ಇರ್ತಾರೆ: ಸತೀಶ್ ಜಾರಕಿಹೊಳಿ

    ಸಚಿವ ಸ್ಥಾನದಿಂದ ಕೈ ಬಿಟ್ರೂ ಸಹೋದರ ಪಕ್ಷದಲ್ಲೇ ಇರ್ತಾರೆ: ಸತೀಶ್ ಜಾರಕಿಹೊಳಿ

    ಬೆಳಗಾವಿ: ಸಂಪುಟ ವಿಸ್ತರಣೆ ಹಿನ್ನೆಲೆಯಲ್ಲಿ ರಮೇಶ್ ಜಾರಕಿಹೊಳಿ ಅವರನ್ನು ಸಚಿವ ಸ್ಥಾನದಿಂದ ಕೈ ಬಿಟ್ಟರೂ ಅವರು ಪಕ್ಷದಲ್ಲೇ ಇರ್ತಾರೆ, ಜೊತೆಗೂಡಿ ಇಬ್ಬರು ಕೆಲಸ ಮಾಡ್ತೀವಿ ಎಂದು ಶಾಸಕ ಸತೀಶ್ ಜಾರಕಿಹೊಳಿ ಪ್ರತಿಕ್ರಿಯಿಸಿದ್ದಾರೆ.

    ಇಂದು ಮೈತ್ರಿ ಸರ್ಕಾರದ ಸಂಪುಟ ವಿಸ್ತರಣೆ ನಡೆಯುವ ಹಿನ್ನೆಲೆಯಲ್ಲಿ ಮಾಧ್ಯಮದೊಂದಿಗೆ ಸತೀಶ್ ಜಾರಕಿಹೊಳಿ ಮಾತನಾಡಿ, ಸಂಪುಟ ಸೇರ್ಪಡೆ ಬಗ್ಗೆ ಈವರೆಗೂ ಪಕ್ಷದಿಂದ, ಸರ್ಕಾರದಿಂದ ಅಧಿಕೃತವಾಗಿ ಮಾಹಿತಿ ಬಂದಿಲ್ಲ. ಆದ್ರೆ ಮಾಧ್ಯಮಗಳಿಂದ ಸಂಪುಟ ಸೇರ್ಪಡೆ ಬಗ್ಗೆ ಗೊತ್ತಾಗಿದೆ ಅಂದ್ರು.

    ನನ್ನನ್ನು ಈ ಹಿಂದೆ ಸಚಿವ ಸ್ಥಾನದಿಂದ ಕೈಬಿಟ್ಟಿದ್ದು ಅವಮಾನವಲ್ಲ. ನಮ್ಮ ಪಕ್ಷದ ತೀರ್ಮಾನವನ್ನು ಹಿಂದೆಯೂ ಒಪ್ಪಿದ್ದೇವೆ. ಸಂಪುಟ ವಿಸ್ತರಣೆಯಿಂದ ಸರ್ಕಾರಕ್ಕೆ ಯಾವುದೇ ತೊಂದರೆಯಿಲ್ಲ. ನನಗಿರಬಹುದು ಬೇರೆಯವರಿಗೆ ಇರಬಹುದು ಯಾವುದೇ ತೊಂದರೆಯಿಲ್ಲ ಎನ್ನುವ ಮೂಲಕ ಸಹೋದರ ರಮೇಶ ಜಾರಕಿಹೊಳಿಯನ್ನು ಸಚಿವ ಸ್ಥಾನದಿಂದ ಕೈ ಬಿಟ್ಟರು ಸರ್ಕಾರಕ್ಕೆ ತೊಂದರೆಯಿಲ್ಲ, ಇಬ್ಬರು ಜೊತೆಗೂಡಿ ಕೆಲಸ ಮಾಡ್ತೀವಿ ಎಂದು ಪರೋಕ್ಷವಾಗಿ ಹೇಳಿದರು.

    ನಾನು ಮಂತ್ರಿ ಆದ್ರೆ ಬೆಳಗಾವಿ ಜಿಲ್ಲೆಗೆ ಮತ್ತೆ ರಾಜಕೀಯ ವೈಭವೀಕರಣ ಬರಲಿದೆ. ಇದರಿಂದ ಜಿಲ್ಲೆಯ ಅಭಿವೃದ್ಧಿಗೆ ಅನುಕೂಲ ಆಗುತ್ತದೆ. ಎಲ್ಲಾ ಶಾಸಕರು ಸೇರಿ ಕೆಲಸ ಮಾಡ್ತುತ್ತೇವೆ. ರಮೇಶ್ ಪಕ್ಷದಲ್ಲೇ ಇರ್ತಾರೆ. ಅವರ ಜೊತೆಗೆ ನಾನು ಮಾತನಾಡುತ್ತೇನೆ. ಜಿಲ್ಲಾ ಮುಖಂಡರು ಅವರ ಜೊತೆಗೆ ಮಾತನಾಡುತ್ತಾರೆ. ಬರುವ ಲೋಕಸಭಾ ಚುನಾವಣೆಯನ್ನು ಎಲ್ಲರು ಒಟ್ಟಾಗಿ ಎದುರಿಸುತ್ತೇವೆ ಅಂತ ತಿಳಿಸಿದ್ರು.

    ಕಾಂಗ್ರೆಸ್ ಪಕ್ಷ ಗಟ್ಟಿಯಾಗಿದೆ, ನಮ್ಮಲ್ಲಿ ಒಗ್ಗಟ್ಟಿದೆ. ಯಾವ ಖಾತೆ ನೀಡ್ತಾರೆ ಎನ್ನುವುದು ಗೊತ್ತಿಲ್ಲ. ಯಾವುದೇ ಒಳ್ಳೆಯ ಖಾತೆ ನೀಡಿದರು ಕೆಲಸ ಮಾಡುತ್ತೇವೆ. ಸಾರ್ವಜನಿಕವಾಗಿ ಒಳ್ಳೆಯ ಕೆಲಸ ಮಾಡುವ ಖಾತೆ ನೀಡಿದರೆ ಖುಷಿಯಾಗುತ್ತೆ. ಈಗಿರುವ ಖಾಲಿ ಖಾತೆಯಲ್ಲಿ ಯಾವುದಾದರೂ ಒಂದು ಖಾತೆ ನೀಡ್ತಾರೆ ಅಂತಾ ಊಹಿಸಿದ್ದೇನೆ ಎಂದು ಸತೀಶ್ ಜಾರಕಿಹೊಳಿ ತಿಳಿಸಿದರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ಲಕ್ಷ್ಮಿ -ಸತೀಶ್ ಜಾರಕಿಹೊಳಿ ನಡುವೆ ಬಸ್ ವಾರ್!

    ಲಕ್ಷ್ಮಿ -ಸತೀಶ್ ಜಾರಕಿಹೊಳಿ ನಡುವೆ ಬಸ್ ವಾರ್!

    ಬೆಳಗಾವಿ: ಕಾಂಗ್ರೆಸ್ ಮಹಿಳಾ ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್ ಮತ್ತು ಶಾಸಕ ಸತೀಶ್ ಜಾರಕಿಹೊಳಿ ನಡುವೆ ಬಸ್ ಯುದ್ಧ ಆರಂಭವಾಗಿದ್ದು, ಇದರಿಂದ ಇಬ್ಬರು ಜಿದ್ದಿಗೆ ಬಿದ್ದಿದ್ದಾರೆ ಎಂದು ಮಾತು ಕೇಳಿ ಬಂದಿದೆ.

    ಶಾಸಕಿ ಲಕ್ಷ್ಮಿ ಕಳೆದ ಒಂದು ವಾರದ ಹಿಂದೆ ಬೆಳಗಾವಿಯ ಸುವರ್ಣ ಸೌಧದ ಎದುರು ತನ್ನ ಗ್ರಾಮೀಣ ಕ್ಷೇತ್ರಗಳಿಗೆ ಓಡಾಡಲು 10 ಬಸ್ಸುಗಳ ಸೇವೆಗೆ ಚಾಲನೆ ನೀಡಿದ್ದರು. ಇದಾದ ಬೆನ್ನಲ್ಲೇ ಎರಡು ದಿನಗಳ ಹಿಂದೆ ಯಮಕನಮರಡಿ ಶಾಸಕ ಸತೀಶ್ ಜಾರಕಿಹೊಳಿ ಕೂಡಾ ಬೆಳಗಾವಿಯ ಸಿಟಿ ಬಸ್ ನಿಲ್ದಾಣದಲ್ಲಿ ತಮ್ಮ ಕ್ಷೇತ್ರಕ್ಕೆ 10 ಬಸ್ಸುಗಳ ಸೇವೆಗೆ ಚಾಲನೆ ನೀಡಿದ್ದಾರೆ.

    ಶಾಸಕಿ ಲಕ್ಷ್ಮಿ ಹತ್ತು ಬಸ್ಸುಗಳಿಗೆ ಚಾಲನೆ ನೀಡಿದರೆ, ಜಾರಕಿಹೊಳಿ ಸಹ 10 ಬಸ್ಸುಗಳ ಸೇವೆಯನ್ನು ದಿಢೀರ್ ಆರಂಭಿಸಿದ್ದು, ಈಗ ಚರ್ಚೆ ಆರಂಭವಾಗಿದೆ. ಇದರಿಂದ ಕ್ಷೇತ್ರದ ಅಭಿವೃದ್ಧಿಯ ಕಾಮಗಾರಿ ಹೆಸರಿನಲ್ಲಿ ಇಬ್ಬರ ನಡುವೆ ಕೋಲ್ಡ್ ವಾರ್ ನಡೆಯುತ್ತಿದೆ ಎನ್ನುವ ಮಾತು ಕೇಳಿ ಬಂದಿದೆ.

    ಇತ್ತ ಬೆಳಗಾವಿಯ ಸಿಟಿ ಬಸ್ ನಿಲ್ದಾಣದಲ್ಲಿ ನಡೆದಿದ್ದ ಸತೀಶ್ ಜಾರಕಿಹೊಳಿ ಕಾರ್ಯಕ್ರಮಕ್ಕೆ ಜಿಲ್ಲಾಧಿಕಾರಿ ಪಾಲ್ಗೊಂಡಿದ್ದರು. ಆದರೆ ಲಕ್ಷ್ಮಿ ಹೆಬ್ಬಾಳ್ಕರ್ ಸಮಾರಂಭಕ್ಕೆ ಡಿಸಿ ಹೋಗಿರಲೇ ಇಲ್ಲ. ಆದರೆ ಈ ಬಗ್ಗೆ ಸ್ವತಃ ಡಿಸಿ ಅವರೇ ಸ್ಪಷ್ಟನೆ ನೀಡಬೇಕಿದೆ.

    ನಮ್ಮ ಕ್ಷೇತ್ರದಲ್ಲಿ ವಿದ್ಯಾರ್ಥಿಗಳು ಓಡಾಡಲು ಕಷ್ಟ ಪಡುತ್ತಿದ್ದಾರೆ. ಆದ್ದರಿಂದ ಹೆಚ್ಚಿನ ಬಸ್ ಸೌಲಭ್ಯವನ್ನು ಒದಗಿಬೇಕು ಎಂದು ಇಬ್ಬರು ನಾಯಕರು ಕೇಳಿದ್ದರು. ಲಕ್ಷ್ಮಿ ಹೆಬ್ಬಾಳ್ಕರ್ ಮತ್ತು ರಮೇಶ್ ಜಾರಕಿಹೊಳಿ ಪ್ರಭಾವಿ ನಾಯಕರಾದ ಹಿನ್ನೆಲೆಯಲ್ಲಿ ಸಾರಿಗೆ ಅಧಿಕಾರಿಗಳು ಯಾರ ಬೇಡಿಕೆ ಈಡೇರಿಸಬೇಕು ಎನ್ನುವ ಗೊಂದಲಕ್ಕೆ ಈಡಾಗಿ ಕೊನೆಗೆ ಇಬ್ಬರ ಕ್ಷೇತ್ರಗಳಿಗೆ 10 ಬಸ್ಸುಗಳ ಸೇವೆಯನ್ನು ಆರಂಭಿಸಿದ್ದಾರೆ ಎನ್ನುವ ವಿಚಾರ ಮೂಲಗಳಿಂದ ಸಿಕ್ಕಿದೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv ಮತ್ತು Live  ವೀಕ್ಷಿಸಲು  ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್  ಮಾಡಿ: play.google.com/publictv

  • ಸತೀಶ್ ಜಾರಕಿಹೊಳಿ ಬೆಂಬಲಿಗನಿಗೆ ಚಾಕು ಇರಿದ ಲಕ್ಷ್ಮಿ ಹೆಬ್ಬಾಳ್ಕರ್ ಬೆಂಬಲಿಗ

    ಸತೀಶ್ ಜಾರಕಿಹೊಳಿ ಬೆಂಬಲಿಗನಿಗೆ ಚಾಕು ಇರಿದ ಲಕ್ಷ್ಮಿ ಹೆಬ್ಬಾಳ್ಕರ್ ಬೆಂಬಲಿಗ

    ಬೆಳಗಾವಿ: ಜಿಲ್ಲೆಯಲ್ಲಿ ಜಾರಕಿಹೊಳಿ ಸಹೋದರರ ಮತ್ತು ಲಕ್ಷ್ಮಿ ಹೆಬ್ಬಾಳ್ಕರ್ ನಡುವಿನ ಶೀತಲ ಸಮರ ಮುಂದುವರೆದಿದೆ. ಸದ್ಯ ನಾಯಕರು ಸಮಾಧಾನಗೊಂಡಿದ್ದರೆ, ಬೆಂಬಲಿಗರು ಮಾತ್ರ ಶತ್ರುತ್ವವನ್ನು ಕಾರುತ್ತಿದ್ದಾರೆ.

    ಬೆಳಗಾವಿ ಗ್ರಾಮಾಂತರ ಕ್ಷೇತ್ರದ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ಬೆಂಬಲಿಗ ಮಾರಿಹಾಳ ಗ್ರಾ.ಪಂ ಉಪಾಧ್ಯಕ್ಷ ತೌಸಿಫ್ ಫಣಿಬಂದ ಎಂಬಾತ ಶಾಸಕ ಸತೀಶ ಜಾರಕಿಹೊಳಿ ಬೆಂಬಲಿಗ ಆಸೀಫ್ ಮುಲ್ಲ ಎಂಬಾತನ ಹತ್ಯೆಗೆ ಯತ್ನಿಸಿದ್ದಾನೆ. ಸದ್ಯ ಗಾಯಾಳು ಅಸೀಪ್ ಮುಲ್ಲಾನನ್ನು ನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

    ವಿಷಯ ತಿಳಿದು ಆಸ್ಪತ್ರೆಗೆ ಆಗಮಿಸಿ ಬೆಂಬಲಿಗನ ಆರೋಗ್ಯ ವಿಚಾರಿಸಿದರು. ಘಟನೆ ಬಳಿಕ ಆರೋಪಿ ತೌಸಿಫ್ ನಾಪತ್ತೆಯಾಗಿದ್ದಾನೆ. ಪೊಲೀಸರು ಆರೋಪಿ ಬಂಧನಕ್ಕಾಗಿ ವಿಶೇಷ ಜಾಲ ಬೀಸಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv 

  • ಸಿದ್ದರಾಮಯ್ಯರ ಸಂಧಾನಕ್ಕೆ ಬಾಗ್ತಾರಾ ಜಾರಕಿಹೊಳಿ ಬ್ರದರ್ಸ್?

    ಸಿದ್ದರಾಮಯ್ಯರ ಸಂಧಾನಕ್ಕೆ ಬಾಗ್ತಾರಾ ಜಾರಕಿಹೊಳಿ ಬ್ರದರ್ಸ್?

    ಬೆಂಗಳೂರು: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಸಚಿವ ರಮೇಶ್ ಜಾರಕಿಹೊಳಿ ಭೇಟಿ ಮಾಡುವ ಸಾಧ್ಯತೆಗಳಿವೆ. ಭಾನುವಾರವಷ್ಟೇ ದೂರವಾಣಿ ಮೂಲಕ ಮಾತುಕತೆ ನಡೆಸಿದ್ದ ಸಿದ್ದರಾಮಯ್ಯ ಅವರ ಇಂದಿನ ಸಂಧಾನ ಸಕ್ಸಸ್ ಆಗುತ್ತಾ ಅನ್ನೋದನ್ನು ಕಾದು ನೋಡಬೇಕಾಗಿದೆ.

    ಕಾಂಗ್ರೆಸ್ ಹೈಕಮಾಂಡ್ ಕೊಟ್ಟಿರುವ ಟಾಸ್ಕ್ ಅನ್ನು ಸಿದ್ದರಾಮಯ್ಯ ಸಮರ್ಥವಾಗಿ ನಿಭಾಯಿಸ್ತಾರಾ ಅನ್ನುವ ಪ್ರಶ್ನೆಯೊಂದು ಮೂಡಿದೆ. ಹೀಗಾಗಿ ಇಂದಿನ ಮೆಗಾ ಪೊಲಿಟಿಕಲ್ ಟರ್ನ್ ಸಿದ್ದರಾಮಯ್ಯ ಮೇಲೆ ನಿಂತಿದೆ. ಕಾಂಗ್ರೆಸ್ ಹೈಕಮಾಂಡ್ ಶಾಸಕರನ್ನು ಸಮಾಧಾನಪಡಿಸುವ ಹೊಣೆ ಸಿದ್ದರಾಮಯ್ಯಗೆ ಕೊಟ್ಟಿದೆ. ಆದ್ರೆ ಎಲ್ಲ ಅಸಮಾಧಾನಿತ ಶಾಸಕರು ಸಿದ್ದರಾಮಯ್ಯ ಮಾತು ಕೇಳ್ತಾರಾ? ಅಥವಾ ಸಿದ್ದು ಮಾತು ಕೇಳದೇ ಕಮಲ ಮನೆಯ ಬಾಗಿಲು ತಟ್ಟುತ್ತಾರಾ ಅನ್ನುವ ಹಲವು ಪ್ರಶ್ನೆಗಳಿಗೆ ಇಂದು ಉತ್ತರ ಸಿಗಲಿದೆ. ಇದನ್ನೂ ಓದಿ: ಕೈ ನಾಯಕರ ಜೊತೆ ವೇಣುಗೋಪಾಲ್ ಸಭೆಯಲ್ಲಿ ಏನಾಯ್ತು: ಇಲ್ಲಿದೆ ಇನ್‍ಸೈಡ್ ಸ್ಟೋರಿ

    ಸಿದ್ದರಾಮಯ್ಯ ಸಂಧಾನ ವಿಫಲವಾದ್ರೆ ರಮೇಶ್ ಜಾರಕಿಹೊಳಿ ಅವರು ರಾಜೀನಾಮೆ ನೀಡುವ ಸಾಧ್ಯತೆಗಳು ಹೆಚ್ಚಾಗಿರುವ ಕುರಿತು ಚರ್ಚೆಗಳು ನಡೆಯುತ್ತಿರುವುದಾಗಿ ಪಕ್ಷದ ಮೂಲಗಳಿಂದ ತಿಳಿದುಬಂದಿದೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

  • ನಾಳೆಯೇ ಸರ್ಕಾರ ಪತನ ಆಗ್ಬಹುದು ನಮಗೇನು ಗೊತ್ತು – ಸತೀಶ್ ಜಾರಕಿಹೊಳಿ ಹೊಸ ಬಾಂಬ್

    ನಾಳೆಯೇ ಸರ್ಕಾರ ಪತನ ಆಗ್ಬಹುದು ನಮಗೇನು ಗೊತ್ತು – ಸತೀಶ್ ಜಾರಕಿಹೊಳಿ ಹೊಸ ಬಾಂಬ್

    ಬೆಳಗಾವಿ: ಸಮ್ಮಿಶ್ರ ಸರ್ಕಾರ ಬೀಳಿಸಲು ಬಿಜೆಪಿ ಮುಖಂಡರು ಪ್ರಯತ್ನಿಸುತ್ತಿದ್ದಾರೆ ಎಂದು ಸಿಎಂ ಎಚ್‍ಡಿ ಕುಮಾರಸ್ವಾಮಿ ಆರೋಪ ಮಾಡುತ್ತಿದ್ದರೆ ಇತ್ತ ಮಾಜಿ ಸಚಿವ ಸತೀಶ್ ಜಾರಕಿಹೊಳಿ ಪಕ್ಷದ ಕೆಲ ಶಾಸಕರು ಪಕ್ಷ ತೊರೆದರೆ ನಾವು ಏನು ಮಾಡಲು ಸಾಧ್ಯವಿಲ್ಲ ಎಂದು ಹೇಳುವ ಮೂಲಕ ಹೊಸ ಬಾಂಬ್ ಸಿಡಿಸಿದ್ದಾರೆ.

    ಬಿಜೆಪಿ ಅಪರೇಷನ್ ಕಮಲ ಕುರಿತು ನಗರದಲ್ಲಿ ಪ್ರತಿಕ್ರಿಯೆ ನೀಡಿದ ಸತೀಶ್ ಜಾರಕಿಹೊಳಿ ಅವರು, ಈ ಹಿಂದೆ ಕಾಂಗ್ರೆಸ್ ಪಕ್ಷದ ಇಬ್ಬರು ಶಾಸಕರು ಪಕ್ಷ ಬಿಟ್ಟು ಹೋಗಿ ಮತ್ತೆ ಬಂದರು. ಸದ್ಯದ ಪರಿಸ್ಥಿತಿಯಲ್ಲಿ ಅಂತಹ ಶಾಸಕರು ಯಾರು ಪಕ್ಷದಲ್ಲಿ ಇಲ್ಲ. ಆದರೆ ಒಂದೊಮ್ಮೆ ಪಕ್ಷದ ಇತರೇ ಶಾಸಕರು ಬಿಟ್ಟು ಹೋದರೆ ನಾವು ಏನು ಮಾಡಲು ಸಾಧ್ಯವಿಲ್ಲ ಎಂದು ಹೇಳಿ ಸಂಚಲನ ಮೂಡಿಸಿದ್ದಾರೆ.

    ಸಮ್ಮಿಶ್ರ ಸರ್ಕಾರಕ್ಕೆ ಜಾರಕಿಹೊಳಿ ಸಹೋದರರಿಂದ ತೊಂದರೆ ಆಗಲಿದೆಯಾ ಎಂಬ ಪ್ರಶ್ನೆಗೆ ಉತ್ತರಿಸಿ, ಯಾವುದೇ ಕಾರಣಕ್ಕೂ ನಮ್ಮ ಕಾರಣದಿಂದ ಸರ್ಕಾರಕ್ಕೆ ತೊಂದರೆ ಬರುವುದಿಲ್ಲ ಎಂದು ಸ್ಪಷ್ಟಪಡಿಸಿದರು. ನಮ್ಮಲ್ಲಿ ಯಾವುದೇ ಸಮಸ್ಯೆ ಇಲ್ಲ, ಕಾಂಗ್ರೆಸ್ ಪಕ್ಷ ತೊರೆದು ಕೆಲ ಶಾಸಕರು ಹೋದರೆ ನಾವು ಏನು ಮಾಡಲು ಸಾಧ್ಯವಿಲ್ಲ. ನಾಳೆಯೇ ಸರ್ಕಾರ ಪತನ ಆಗಬಹುದು ನಮಗೇನು ಗೊತ್ತು? ಬೇರೆಯಾದರೂ ಹೋಗಬಹುದು ನಾವು ಪಕ್ಷ ಬಿಟ್ಟು ಹೋಗಲ್ಲ ಎಂದರು.

    ಇದೇ ವೇಳೆ ಮಾಜಿ ಸಿಎಂ, ಸಮನ್ವಯ ಸಮಿತಿ ಅಧ್ಯಕ್ಷ ಸಿದ್ದರಾಮಯ್ಯ ಅವರ ಮನೆಗೆ ಕಾಂಗ್ರೆಸ್ ವರಿಷ್ಠರ ಭೇಟಿ ವಿಚಾರವಾಗಿ ಪ್ರತಿಕ್ರಿಯೆ ನೀಡಿದ ಅವರು, ರಾಜ್ಯದ ಸಮ್ಮಿಶ್ರ ಸರ್ಕಾರದಲ್ಲಿ ಉದ್ಭವವಾಗಿರುವ ಸಮಸ್ಯೆಗಳ ಬಗೆಹರಿಸಲು ವರಿಷ್ಠರು ಬಂದಿದ್ದಾರೆ. ಈ ರೀತಿಯ ಸಭೆಗಳು ನಡೆಯವುದು ಸಾಮಾನ್ಯ. ಮೇಲಿಂದ ಮೇಲೆ ಇಂತಹ ಸಭೆ ನಡೆಯುವುದು ರಾಜಕೀಯ ಸಹಜವಾದ ಪ್ರಕ್ರಿಯೆ. ಸಿದ್ದರಾಮಯ್ಯ ಅವರು ಸಮನ್ವಯ ಸಮಿತಿ ಅಧ್ಯಕ್ಷರಾಗಿರುವುದರಿಂದ ಸಿಎಂ ಸೇರಿದಂತೆ ಎಷ್ಟೇ ದೊಡ್ಡವರಾದರು ಚರ್ಚೆ ಮಾಡಲೇಬೇಕು. ಇದು ನಮ್ಮ ಪಕ್ಷದ ನಿಯಮವಾಗಿದೆ ಎಂದರು.

    ಜಾರಕಿಹೊಳಿ ಸಹೋದರರಿಗೆ ಸಿದ್ದರಾಮಯ್ಯ ಬ್ರೇಕ್ ಹಾಕಲಿದ್ದಾರೆ ಎನ್ನುವ ಪ್ರಶ್ನೆಗೆ ಉತ್ತರಿಸಿದ ಮಾಜಿ ಸಚಿವರು, ಸಿದ್ದರಾಮಯ್ಯ ಅವರು ನನಗೆ ಆಗಲಿ, ರಮೇಶ್ ಅವರಿಗೆ ಆಗಲಿ ಹೇಳುವ ಅವಶ್ಯಕತೆ ಇಲ್ಲ. ಅಂತಹ ಸಮಸ್ಯೆಗಳು ಉದ್ಭವವಾಗಿಲ್ಲ. ಸದ್ಯ ಇದರಲ್ಲಿ ನಮ್ಮ ಪಾತ್ರವೇನು ಇಲ್ಲ. ಪಕ್ಷದ ಕೆಲಸವನಷ್ಟೇ ನಾವು ಮಾಡುತ್ತೇವೆ ಎಂದು ತಿಳಿಸಿದರು.

  • ಮಾಧ್ಯಮಗಳ ಮುಂದೆ ಹೀರೋ ಆಗೋದು ಬೇಡ-ಜಾರಕಿಹೊಳಿ ಬ್ರದರ್ಸ್ ಗೆ ಕೆ.ಎಚ್.ಮುನಿಯಪ್ಪ ಸಲಹೆ

    ಮಾಧ್ಯಮಗಳ ಮುಂದೆ ಹೀರೋ ಆಗೋದು ಬೇಡ-ಜಾರಕಿಹೊಳಿ ಬ್ರದರ್ಸ್ ಗೆ ಕೆ.ಎಚ್.ಮುನಿಯಪ್ಪ ಸಲಹೆ

    ಬೆಂಗಳೂರು: ಏನೇ ಸಮಸ್ಯೆಗಳಿದ್ದರೂ ಪಕ್ಷದೊಳಗೆ ಬಗೆಹರಿಸಿಕೊಳ್ಳಬೇಕು. ಅದನ್ನು ಬಿಟ್ಟು ಜಾರಕಿಹೊಳಿ ಸಹೋದರರು ಮಾಧ್ಯಮಗಳ ಮುಂದೆ ಹೀರೋ ಆಗೋದು ಬೇಡ ಎಂದು ಸಂಸದ ಕೆ.ಎಚ್.ಮುನಿಯಪ್ಪ ಸಲಹೆ ನೀಡಿದರು.

    ಶನಿವಾರ ಕುಮಾರಕೃಪ ಅತಿಥಿ ಗೃಹದಲ್ಲಿ ನಡೆದ ಸಭೆಯ ಬಳಿಕ ಮಾತನಾಡಿದ ಕೆ.ಎಚ್.ಮುನಿಯಪ್ಪ, ಕಾಂಗ್ರೆಸ್ ಶಿಸ್ತಿನ ಪಕ್ಷವಾಗಿದ್ದು, ಯಾರು ಅಶಿಸ್ತಿನಿಂದ ನಡೆದುಕೊಳ್ಳಬಾರದು, ಜಾರಕಿಹೊಳಿ ಸಹೋದರರ ಅಶಿಸ್ತಿಗೆ ಕಡಿವಾಣ ಹಾಕಲು ಸಲಹೆ ನೀಡಿದ್ದೇನೆ. ಏನೇ ಸಮಸ್ಯೆ ಇದ್ರೂ ಪಕ್ಷದ ಚೌಕಟ್ಟಿನೊಳಗೆ ಚರ್ಚಿಸಬೇಕು ಅಲ್ಲೇ ಇತ್ಯರ್ಥಪಡಿಸಿಕೊಳ್ಳಬೇಕು. ನಾನು ಪಕ್ಷದ ಹಿರಿಯ ನಾಯಕನಾಗಿದ್ದು ಪಕ್ಷದ ಪ್ರಧಾನ ಕಾರ್ಯದರ್ಶಿಗಳಿಗೆ ಕೆಲವೊಂದು ಸಲಹೆ ನೀಡಿದ್ದೇನೆ. ಸಚಿವ ಸಂಪುಟದ ವಿಸ್ತರಣೆ ಬಗ್ಗೆ ನನಗೆ ಯಾವುದೇ ಮಾಹಿತಿಯಿಲ್ಲ ಅಂತ ಸಂಸದ ಕೆ.ಎಚ್.ಮುನಿಯಪ್ಪ ಹೇಳಿದರು.

    ಜಾರಕಿಹೊಳಿ ಸಹೋದರರನ್ನು ಬಿಜೆಪಿ ಸಂಪರ್ಕಿಸಿದ್ದು, ಆಪರೇಷನ್ ಕಮಲದಡಿಯಲ್ಲಿ ಪಕ್ಷಕ್ಕೆ ಕರೆತರುವ ಸಿದ್ಧತೆಯೂ ನಡೆದಿದೆ ಎಂದು ಹೇಳಲಾಗುತ್ತಿದೆ. ಈ ಕುರಿತು ಪ್ರತಿಕ್ರಿಯಿಸಿರುವ ರಮೇಶ್ ಜಾರಕಿಹೊಳಿ, ಸಿದ್ದರಾಮಯ್ಯ ಬಂದ ಮೇಲೆ ತಮ್ಮ ಮುಂದಿನ ನಿರ್ಧಾರ ತಿಳಿಸುವುದಾಗಿ ಸ್ಪಷ್ಟಪಡಿಸಿದ್ದಾರೆ. ಇಂದು ಜಾರಕಿಹೊಳಿ ಸಹೋದರರ ಸಿದ್ದರಾಮಯ್ಯನವರನ್ನು ಭೇಟಿ ಆಗಲಿದ್ದಾರೆ.

    ದೇವನಹಳ್ಳಿ ವಿಮಾನ ನಿಲ್ದಾಣದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಮಾಜಿ ಸಿಎಂ ಸಿದ್ದರಾಮಯ್ಯ, ಜಾರಕಿಹೊಳಿ ಸಹೋದರರ ಸಮಸ್ಯೆ ಬಗ್ಗೆ ಮಾಹಿತಿಗಳಿಲ್ಲ. ವಿದೇಶ ಪ್ರವಾಸ ಚೆನ್ನಾಗಿತ್ತು. ಪ್ರಸ್ತುತ ಯಾವುದೇ ರಾಜಕೀಯ ವಿದ್ಯಮಾನಗಳ ಬಗ್ಗೆ ಮಾಹಿತಿ ಇಲ್ಲ. ಕಾಂಗ್ರೆಸ್ ಶಾಸಕರು ಬಿಜೆಪಿ ಸಂಪರ್ಕದಲ್ಲಿದ್ದಾರೆ ಹೇಳಿಕೆಗೆ ಪ್ರತಿಕ್ರಿಯಿಸಿದ ಸಿದ್ದರಾಮಯ್ಯ, ಅವರು ಯಾವಗಲೂ ಸುಳ್ಳುಗಳನ್ನು ಹೇಳಿಕೊಂಡು ಬರುತ್ತಿದ್ದಾರೆ. ಮುಂದಿನ ದಿನಗಳಲ್ಲಿ ಅಗತ್ಯ ಬಿದ್ದರೆ ಮಾತ್ರ ಸಮನ್ವಯ ಸಮಿತಿ ಕರೆಯಲಾಗುತ್ತದೆ ಎಂದು ಸ್ಪಷ್ಟನೆ ನೀಡಿದರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv