Tag: Satish Jarakiholi

  • ಬೆಳಗಾವಿ ಪಿಎಲ್‍ಡಿ ಬ್ಯಾಂಕ್‍ಗಿಂದು ಚುನಾವಣೆ – ಜಾರಕಿಹೊಳಿ ಬ್ರದರ್ಸ್ ಗೆ ಅಗ್ನಿಪರೀಕ್ಷೆ

    ಬೆಳಗಾವಿ ಪಿಎಲ್‍ಡಿ ಬ್ಯಾಂಕ್‍ಗಿಂದು ಚುನಾವಣೆ – ಜಾರಕಿಹೊಳಿ ಬ್ರದರ್ಸ್ ಗೆ ಅಗ್ನಿಪರೀಕ್ಷೆ

    ಬೆಳಗಾವಿ: ಇಂದು ಜಿಲ್ಲೆಯ ಪಿಎಲ್‍ಡಿ ಬ್ಯಾಂಕ್‍ಗೆ ಚುನಾವಣೆ ನಡೆಯಲಿದೆ. ಸಮ್ಮಿಶ್ರ ಸರ್ಕಾರಕ್ಕೂ ಇಂದೇ ನಿರ್ಣಾಯಕ ದಿನವಾಗಿದ್ದು, ಲಕ್ಷ್ಮಿ ಗೆದ್ದರೆ ಕುಮಾರಸ್ವಾಮಿ ಆಡಳಿತಕ್ಕೆ ಕೊನೆಗಾಲ ಎದುರಾಗ್ತಿದೆಯಾ ಅನ್ನೋ ಪ್ರಶ್ನೆಯೊಂದು ಮೂಡಿದೆ.

    ಇಂದಿನ ಪಿಎಲ್‍ಡಿ ಬ್ಯಾಂಕ್ ಚುನಾವಣೆ ಕುತೂಹಲ ಕೆರಳಿಸಿದ್ದು, ಜಾರಕಿಹೊಳಿ ಬ್ರದರ್ಸ್ ಮತ್ತು ಲಕ್ಷ್ಮಿ ಹೆಬ್ಬಾಳ್ಕರ್ ಸಮರ ಕ್ಲೈಮ್ಯಾಕ್ಸ್ ತಲುಪಿದೆ. 9 ಜನ ಪಿಎಲ್‍ಡಿ ಬ್ಯಾಂಕ್ ನಿರ್ದೇಶಕರನ್ನು ಹೊಂದಿರುವ ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್, ಅಧ್ಯಕ್ಷ ಸ್ಥಾನಕ್ಕೆ ತಮ್ಮ ಬೆಂಬಲಿಗರನ್ನೇ ಕೂರಿಸಲು ಹಠ ಹಿಡಿದಿದ್ದಾರೆ. ಎಲ್ಲ ಬೆಂಬಲಿತ ಪಿಎಲ್‍ಡಿ ಬ್ಯಾಂಕ್ ನಿರ್ದೇಶಕರಿಗೆ ಪೊಲೀಸ್ ರಕ್ಷಣೆಗೆ ಮನವಿ ಮಾಡಿಕೊಂಡಿದ್ದಾರೆ. ಇದನ್ನೂ ಓದಿ: ಲಕ್ಷ್ಮಿ ಹೆಬ್ಬಾಳ್ಕರ್ – ಜಾರಕಿಹೊಳಿ ಕಗ್ಗಂಟು ಬಿಡಿಸಲು ಕಾಂಗ್ರೆಸ್ ಹೈಕಮಾಂಡ್ ಎಂಟ್ರಿ!

    ಚುನಾವಣೆ ಪ್ರಕ್ರಿಯೆಯನ್ನು ವಿಡಿಯೋ ಚಿತ್ರಣ ಮಾಡಿಸಬೇಕೆಂದು ಜಿಲ್ಲಾಡಳಿತಕ್ಕೆ ಬೇಡಿಕೆ ಇಡಲಾಗಿದ್ದು, ಈಗಾಗಲೇ ಹೆಬ್ಬಾಳ್ಕರ್ ಬಣಕ್ಕೆ ನಾಮನಿರ್ದೇಶಿತ ಸದಸ್ಯ ಮಹಾದೇವ್ ಪಾಟೀಲ್ ಬೆಂಬಲ ಸೂಚಿಸಿದ್ದಾರೆ. ಇತ್ತ ಜಾರಕಿಹೊಳಿ ಸಹೋದರರು ತಮ್ಮದೇ ದಾಳ ಉರುಳಿಸಿದ್ದು, ಕಾನೂನು ಸುವ್ಯವಸ್ಥೆ ಹಾಳಾಗಬಹುದು. ಚುನಾವಣೆಯನ್ನೇ ಮುಂದೂಡಿ ಎಂದು ಜಿಲ್ಲಾಡಳಿತಕ್ಕೆ ಮನವಿ ಮಾಡಿಕೊಂಡಿದ್ದಾರೆ. ಬೆಂಬಲಿಗರನ್ನು ತಮ್ಮ ಬಳಿಯೇ ಉಳಿಸಿಕೊಂಡು ನೇರವಾಗಿ ಚುನಾವಣಾ ಸ್ಥಳಕ್ಕೆ ಕರೆದೊಯ್ಯಲು ವ್ಯವಸ್ಥೆ ಮಾಡಲಾಗಿದೆ. ಒಟ್ಟಿನಲ್ಲಿ ಗೆಲುವಿಗಾಗಿ ಎರಡು ಬಣದಿಂದ ಕೊನೆಗಳಿಗೆವರೆಗೆ ಶತ ಪ್ರಯತ್ನ ನಡೆಯಲಿದೆ.

    ಮಹಾರಾಷ್ಟ್ರದ ಅಂಬೋಲಿ ಬಳಿಯ ರೆಸಾರ್ಟ್ ನಲ್ಲಿ ಲಕ್ಷ್ಮಿ ಹೆಬ್ಬಾಳ್ಕರ್ ಪಟಾಲಂ ಬೀಡುಬಿಟ್ಟಿದೆ. ಇಂದು ಬೆಳಗ್ಗೆ ಸದಸ್ಯರು ಲಕ್ಷ್ಮಿ ಹೆಬ್ಬಾಳ್ಕರ್ ಭೇಟಿ ಬಳಿಕ ಬ್ಯಾಂಕ್‍ಗೆ ಆಗಮಿಸಲಿದ್ದಾರೆ. ಲಕ್ಷ್ಮಿ ಹೆಬ್ಬಾಳ್ಕರ್ ಸಹೋದರ ಚನ್ನರಾಜ್ ಹಟ್ಟಿಹೊಳಿ ಸಂಪರ್ಕದಲ್ಲಿರುವ ಸದಸ್ಯರು ಬೇರೆ ಯಾರ ಸಂಪರ್ಕಕ್ಕೂ ಬಂದಿಲ್ಲ ಅನ್ನೋ ಮಾಹಿತಿ ಪಬ್ಲಿಕ್ ಟಿವಿಗೆ ಉನ್ನತ ಮೂಲಗಳಿಂದ ತಿಳಿದುಬಂದಿದೆ. ಇದನ್ನೂ ಓದಿ: ಯಾವುದೇ ಕಾರಣಕ್ಕೂ ಕ್ಷಮಿಸಲ್ಲ-ರಮೇಶ್ ಜಾರಕಿಹೊಳಿ ವಿರುದ್ಧ ಡಿಕೆಶಿ ಕೆಂಡಾಮಂಡಲ!


    ಎಷ್ಟೇ ಎದುರಾಳಿಗಳು ಬಂದ್ರೂ ಕೂಡ ಮೆಟ್ಟಿ ನಿಂತಾಗ ಮಾತ್ರ ನಾಯಕರಾಗಲು ಸಾಧ್ಯ ಅಂತ ಬೆಳಗಾವಿ ಜಾರಕಿಹೊಳಿ ಬ್ರದರ್ಸ್ ವಿರುದ್ಧ ಕಾಂಗ್ರೆಸ್ ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್ ಗುಡುಗಿದ್ದಾರೆ. ರಾಜಕೀಯದಲ್ಲಿ ಇದೆಲ್ಲಾ ಸಹಜ, ಕಷ್ಟ ಬಂದಾಗ ಹೋರಾಟ ಮಾಡ್ಬೇಕು. ಒಂದೇ ಒಂದು ಹೆಜ್ಜೆ ಹಿಂದೆ ಇಡಲ್ಲ. ಏನೇ ಪರಿಸ್ಥಿತಿ ಬರಲಿ ಏನು ಬೇಕಾದ್ರೂ ಆಗ್ಲಿ. ಸಮಾಜದಲ್ಲಿ ಶಿಕ್ಷಕರಿಗೆ ಹೆದರಿದಷ್ಟು ಬೇರೆ ಯಾರಿಗೂ ಹೆದರಿಲ್ಲ. ಶಿಕ್ಷಕರ ಎದುರು ನಾನು ನಡುಗುತ್ತಿದ್ದೆ. ಇಂದು ಇಡೀ ಸಭಾಂಗಣವನ್ನೇ ನಡುಗಿಸುತ್ತೇನೆ. ನನಗೆ ಬೆಂಬಲ ಇದೆ. ಗೆಲುವು ನನ್ನದೇ ಅಂತ ಹೆಬ್ಬಾಳ್ಕರ್ ಹೇಳಿದ್ದಾರೆ. ಇದನ್ನೂ ಓದಿ: ಲಕ್ಷ್ಮೀ ಹೆಬ್ಬಾಳ್ಕರ್ ನ ಹದ್ದು ಬಸ್ತುನಲ್ಲಿ ಇಡದಿದ್ದರೇ, ಉಗ್ರ ಕ್ರಮ ಕೈಗೊಳ್ತೀವಿ: ರಮೇಶ್ ಜಾರಕಿಹೊಳಿ

    ಲಕ್ಷ್ಮೀ ಹೆಬ್ಬಾಳ್ಕರ್ ಹಾಗೂ ಜಾರಕಿಹೊಳಿ ಬ್ರದರ್ಸ್ ಬಣದಲ್ಲಿ ಯಾರ್ಯಾರು ಇದ್ದಾರೆ?
    ಲಕ್ಷ್ಮಿ ಹೆಬ್ಬಾಳ್ಕರ್ ಬಣ
    1. ಮಹಾಂತೇಶ ಪಾಟೀಲ್
    2. ಮುಷಪ್ಪ ಹಟ್ಟಿ
    3. ಬಾಪುಸಾಹೇಬ್ ಜಮಾದಾರ್
    4. ಚಿದಂಬರ ಕುಡಚಿ
    5. ಬಾಪುಗೌಡ ಪಾಟೀಲ್
    6. ಪರುಶರಾಮ ಪಾಟೀಲ್
    7. ಮಹಾದೇವ ಪಾಟೀಲ್
    8. ರೇಖಾ ಕುತ್ರೆ
    9. ಗೀತಾ ಪಿಂಗಟ್

    ಸತೀಶ ಜಾರಕಿಹೊಳಿ ಬಣ
    1. ರಾಮಪ್ಪ ಗೋಳಿ
    2. ಪ್ರಸಾದ ಪಾಟೀಲ
    3. ಸಚಿನ್ ಕೋಲಾರ
    4. ಶಂಕರ್ ನಾವಗೇಕರ್
    5. ಮಹಾಂತೇಶ್ ಉಳ್ಳಾಗಡ್ಡಿ

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

  • ಯಾವುದೇ ಕಾರಣಕ್ಕೂ ಕ್ಷಮಿಸಲ್ಲ-ರಮೇಶ್ ಜಾರಕಿಹೊಳಿ ವಿರುದ್ಧ ಡಿಕೆಶಿ ಕೆಂಡಾಮಂಡಲ!

    ಯಾವುದೇ ಕಾರಣಕ್ಕೂ ಕ್ಷಮಿಸಲ್ಲ-ರಮೇಶ್ ಜಾರಕಿಹೊಳಿ ವಿರುದ್ಧ ಡಿಕೆಶಿ ಕೆಂಡಾಮಂಡಲ!

    ಬೆಂಗಳೂರು: ರಾಜ್ಯ ರಾಜಕೀಯದಲ್ಲಿ ಭಾರೀ ಚರ್ಚೆಗೆ ಕಾರಣವಾಗಿರುವ ಸಚಿವ ಡಿಕೆ ಶಿವಕುಮಾರ್ ಹಾಗೂ ಜಾರಕಿಹೊಳಿ ಬ್ರದರ್ಸ್ ನಡುವಿನ ಗುದ್ದಾಟ ಜೋರಾಗಿದ್ದು, ತಮ್ಮ ವಿರುದ್ಧ ಮಿತ್ಯಾರೋಪ ಮಾಡಿರುವ ಮಾಜಿ ಸಚಿವ ರಮೇಶ್ ಜಾರಕಿಹೊಳಿ ವಿರುದ್ಧ ಜಲಸಂಪ್ಮೂಲ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಿಕೆ ಶಿವಕುಮಾರ್ ಕೆಂಡಾಮಂಡಲರಾಗಿದ್ದಾರೆ.

    ರಾಜ್ಯದ ರಾಜಕಾರಣದಲ್ಲಿದ್ದ ರಮೇಶ್ ಜಾರಕಿಹೊಳಿರನ್ನು ದೆಹಲಿಗೆ ಕರೆದುಕೊಂಡು ಹೋಗಿದ್ದು ನಾನು, ಅಲ್ಲದೇ ಸೋನಿಯಾ ಗಾಂಧಿ ಅವರನ್ನು ಪರಿಚಯ ಮಾಡಿಸಿ ರಾಜ್ಯದಲ್ಲಿ ಸಚಿವ ಸ್ಥಾನ ಸಿಗುಂತೆ ಮಾಡಿದೆ. ಆದರೆ ನನ್ನ ವಿರುದ್ಧವೇ ರಮೇಶ್ ಜಾರಕಿಹೊಳಿ ಅವರು ತಿರುಗಿಬಿದ್ದಿದ್ದಾರೆ. ಈ ವೇಳೆ ಸತೀಶ್ ಜಾರಕಿಹೊಳಿರನ್ನು ಕ್ಷಮಿಸಬಲ್ಲೆ ಆದರೆ ರಮೇಶ್‍ರನ್ನು ಕ್ಷಮಿಸಲ್ಲ ಎಂದು ಡಿಕೆ ಶಿವಕುಮಾರ್ ತಮ್ಮ ಆಪ್ತವಲಯದಲ್ಲಿ ಹೇಳಿಕೊಂಡಿದ್ದಾರೆ ಎಂದು ಮೂಲಗಳು ಪಬ್ಲಿಕ್ ಟಿವಿಗೆ ತಿಳಿಸಿವೆ.

    ಸಿದ್ದರಾಮಯ್ಯ ಅವರ ಸರ್ಕಾರದ ಅವಧಿಯಲ್ಲಿ ರಮೇಶ್ ಜಾರಕಿಹೊಳಿ ಅವರಿಗೆ ಸಚಿವ ಸ್ಥಾನ ನೀಡಲು ಹೆಚ್ಚು ಶ್ರಮವಹಿಸಿದೆ. ಸಹೋದರ ಸತೀಶ್ ಜಾರಕಿಹೊಳಿ ವಿರುದ್ಧ ಅವರನ್ನು ಬಲವಾಗಿ ಬೆಳೆಸಿದೆ. ಅಲ್ಲದೇ ಅಹ್ಮದ್ ಪಟೇಲ್, ಗುಲಾಂ ನಬಿ ಆಜಾದ್, ದಿಗ್ವಿಜಯ್ ಸಿಂಗ್ ಅವರಿಗೂ ಪರಿಚಯಿಸಿದೆ. ಎಐಸಿಸಿ ಅಧಿನಾಯಕಿಯಾಗಿದ್ದ ಸೋನಿಯಾ ಗಾಂಧಿಗೂ ಒಪ್ಪಿಸಿ ಸಚಿವ ಸ್ಥಾನ ಸಿಗುವಂತೆ ಮಾಡಿದೆ. ಆದರೆ ಸದ್ಯ ರಮೇಶ್ ಜಾರಕಿಹೊಳಿ ನನ್ನ ವಿರುದ್ಧವೇ ಮಾತನಾಡುತ್ತಿದ್ದಾರೆ ಎಂದು ಅಸಮಾಧಾನ ಹೊರಹಾಕಿದ್ದಾರೆ ಎನ್ನುವ ವಿಚಾರ ತಿಳಿದು ಬಂದಿದೆ.

    ಬೆಳಗಾವಿ ಜಿಲ್ಲಾ ರಾಜಕೀಯ ಕುರಿತಂತೆ ಉಂಟಾಗಿರುವ ಅಸಮಾಧಾನದಲ್ಲಿ ಕಾಂಗ್ರೆಸ್ ಪಕ್ಷದ ರಮೇಶ್ ಜಾರಕಿಹೊಳಿ ಅವರು ಬಹಿರಂಗವಾಗಿಯೇ ಸಚಿವ ಡಿಕೆ ಶಿವಕುಮಾರ್ ವಿರುದ್ಧ ಏಕವಚನದಲ್ಲಿ ವಾಗ್ದಾಳಿ ನಡೆಸಿದ್ದರು. ಅಲ್ಲದೇ ಬೆಳಗಾವಿ ಜಿಲ್ಲಾ ರಾಜಕೀಯದಲ್ಲಿ ಅನಗತ್ಯ ಹಸ್ತಕ್ಷೇಪ ಮಾಡುವ ಅಗತ್ಯವಿಲ್ಲ. ಅಲ್ಲದೇ ತಮ್ಮ ಸಮಸ್ಯೆಗೆ ತಾವೇ ಪರಿಹಾರ ಕಂಡುಕೊಳ್ಳುತ್ತೇವೆ. ಇಲ್ಲಿ ಯಾರ ಮಧ್ಯಪ್ರವೇಶದ ಬೇಡ ಎಂದು ತಿಳಿಸಿದ್ದರು. ಅಲ್ಲದೇ ಸಚಿವ ಡಿಕೆ ಶಿವಕುಮಾರ್ ಬೆಳಗಾವಿ ಜಿಲ್ಲಾ ರಾಜಕೀಯಕ್ಕೆ ಪ್ರವೇಶ ಮಾಡಿದರೆ ತಕ್ಕ ಉತ್ತರ ನೀಡುವುದಾಗಿ ಎಚ್ಚರಿಕೆ ನೀಡಿದ್ದರು. ಇದನ್ನು ಓದಿ:   ಲಕ್ಷ್ಮೀ ಹೆಬ್ಬಾಳ್ಕರ್ ನ ಹದ್ದು ಬಸ್ತುನಲ್ಲಿ ಇಡದಿದ್ದರೇ, ಉಗ್ರ ಕ್ರಮ ಕೈಗೊಳ್ತೀವಿ: ರಮೇಶ್ ಜಾರಕಿಹೊಳಿ

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

  • ಅವ್ರೆಲ್ಲಾ ನಮ್ಮ ಸೀನಿಯರ್ ಲೀಡರ್ಸ್, ನಾನೊಬ್ಬ ವರ್ಕರ್: ಡಿಕೆಶಿ ತಿರುಗೇಟು

    ಅವ್ರೆಲ್ಲಾ ನಮ್ಮ ಸೀನಿಯರ್ ಲೀಡರ್ಸ್, ನಾನೊಬ್ಬ ವರ್ಕರ್: ಡಿಕೆಶಿ ತಿರುಗೇಟು

    ನವದೆಹಲಿ: ಪಕ್ಷದ ಹೈಕಮಾಂಡ್ ಹೇಳಿದ ಕೆಲಸವನ್ನು ನಾನು ಮಾಡುತ್ತೇನೆ. ಜಾರಕಿಹೊಳಿ ಸಹೋದರರು ನಮ್ಮ ಪಕ್ಷದ ಹಿರಿಯ ಮುಖಂಡರು. ನಾನೊಬ್ಬ ಸಾಮಾನ್ಯ ಕಾರ್ಯಕರ್ತ ಎಂದು ಹೇಳುವ ಮೂಲಕ ಜಾರಕಿಹೊಳಿ ಸಹೋದರರಿಗೆ ಪರೋಕ್ಷವಾಗಿ ಜಲಸಂಪನ್ಮೂಲ ಸಚಿವ ಡಿಕೆಶಿ ತಿರುಗೇಟು ನೀಡಿದ್ದಾರೆ.

    ನಾನಗೆ ಯಾರ ಬಗ್ಗೆಯೂ ವೈಯಕ್ತಿಕ ಆಸಕ್ತಿ ಇಲ್ಲ. ಪಕ್ಷ ನನಗೆ ಸೂಚಿಸಿದ ಎಲ್ಲ ಕೆಲಸಗಳನ್ನು ನಿಷ್ಠೆಯಿಂದ ಮಾಡುತ್ತೇನೆ. ನನಗೆ ಯಾರ ಮಧ್ಯೆಯ ಹಸ್ತಕ್ಷೇಪ ಮಾಡುವ ಅವಶ್ಯಕತೆ ಇಲ್ಲ. ನಮ್ಮ ನಾಯಕರು ತಮ್ಮ ಕಷ್ಟಕ್ಕೆ ಕರೆದರೂ ಹೋಗುತ್ತೇನೆ. ಅವರ ಕಷ್ಟಗಳನ್ನು ಬಗೆಹರಿಸುವ ಪ್ರಯತ್ನ ಮಾಡಿದ್ದೇವೆ. ರಾಜ್ಯದ ಯಾವುದೇ ಜಿಲ್ಲೆಯ ನಾಯಕರು ಕರೆದ್ರೂ ನಾನು ಹೋಗುತ್ತೇನೆ. ನೀಡಿದ ಜವಾಬ್ದಾರಿಯನ್ನು ನಿಷ್ಠೆಯಿಂದ ಮಾಡುತ್ತೇನೆ ಅಂತಾ ಹೇಳಿದ್ದಾರೆ.

    ನಾಯಕರ ಬಹಿರಂಗ ಹೇಳಿಕೆಯಿಂದ ಪಕ್ಷಕ್ಕೆ ಯಾವುದೇ ತೊಂದರೆ ಆಗಿಲ್ಲ. ಈಗಾಗಲೇ ಪಕ್ಷ ಯಾರಿಗೆ ಬುದ್ದಿವಾದ ಹೇಳಬೇಕಿದೆ ಅವರಿಗೆ ಹೇಳಿದೆ. ಸ್ಥಳೀಯ ಶಾಸಕರು ಅವರ ಸಮಸ್ಯೆಯನ್ನು ಬಗೆಹರಿಸಿಕೊಳ್ಳುತ್ತಾರೆ ಅಂತಾ ತಿಳಿಸಿದ್ದಾರೆ. ಇದನ್ನೂ ಓದಿ: ಬೆಂಗ್ಳೂರಲ್ಲಿ ರಮೇಶ್ ಜಾರಕಿಹೊಳಿಯನ್ನು ಏಕಾಂಗಿಯಾಗಿ ಭೇಟಿಯಾದ್ರು ಡಿಕೆ ಸುರೇಶ್!

    ರಮೇಶ್ ಜಾರಕಿಹೊಳಿ ಹೇಳಿದ್ದೇನು..?
    ಜಿಲ್ಲೆಯಲ್ಲಿ ಪಕ್ಷದ ಪರ ಕಾರ್ಯನಿರ್ವಹಿಸಲು ನಾವು ಸಮರ್ಥವಾಗಿದ್ದು, ಇಲ್ಲಿನ ರಾಜಕಾರಣದ ಬಗ್ಗೆ ಡಿಕೆ ಶಿವಕುಮಾರ್ ಹೇಳುವ ಅವಶ್ಯಕತೆ ಇಲ್ಲ. ಜಿಲ್ಲಾ ರಾಜಕಾರಣದಲ್ಲಿ ಈ ಹಿಂದೆಯೂ ಸುಮಾರು ಬಾರಿ ಪ್ರವೇಶ ಮಾಡಲು ಸಚಿವ ಡಿಕೆ ಶಿವಕುಮಾರ್ ಅವರು ಪ್ರಯತ್ನಿಸಿದ್ದರು. ಆದರೆ ಅಂದು ಪ್ರವೇಶ ಮಾಡಲು ಬಿಡಲಿಲ್ಲ. ಇಂದು ಕೂಡ ಅಷ್ಟೇ. ಅವರು ಯಾರು ನಮಗೆ ಹೇಳಲು, ನಾವು ಪಕ್ಷ ಸಂಘಟನೆ ಮಾಡಲು ಸಮರ್ಥವಾಗಿದ್ದೇವೆ. ಪಕ್ಷಕ್ಕೆ ಒಳ್ಳೆ ಆಗುವ ಅಂಶಗಳ ಕುರಿತು ಸಲಹೆ ನೀಡಲು ಮಾತ್ರ ಸಾಧ್ಯವಿದ್ದು. ಅನಗತ್ಯವಾಗಿ ರಾಜಕೀಯ ಮಾಡಲು ಇಲ್ಲಿ ಅವಕಾಶವಿಲ್ಲ ಎಂದು ಎಂದು ಸಚಿವ ರಮೇಶ್ ಜಾರಕಿಹೊಳಿ ಖಾರವಾಗಿಯೇ ಏಕವಚನದಲ್ಲೇ ಕಿಡಿಕಾರಿದ್ದರು.

    ಲಕ್ಷ್ಮಿ ಹೆಬ್ಬಾಳ್ಕರ್ ಗೆಲವು:
    ಬೆಳಗಾವಿಯ ಪಿಎಲ್‍ಡಿ ಬ್ಯಾಂಕ್ ಚುನಾವಣಾ ಜಟಾಪಟಿಯ ಕಾನೂನು ಸಮರದಲ್ಲಿ ಶಾಸಕಿ ಲಕ್ಷ್ಮಿ ಹೆಬ್ಬಾಳಕರ್ ಅವರಿಗೆ ಮೊದಲ ಗೆಲುವಾಗಿದೆ. ಈ ಮೂಲಕ ಪಿಎಲ್‍ಡಿ ಬ್ಯಾಂಕ್ ಚುನಾವಣೆಯನ್ನು ಮುಂದೂಡಲು ನಡೆಸಿದ ಪ್ರಯತ್ನದಲ್ಲಿ ಜಾರಕಿಹೊಳಿ ಸಹೋದರರಿಗೆ ಹಿನ್ನಡೆಯಾಗಿದೆ. ಪಿಎಲ್‍ಡಿ ಬ್ಯಾಂಕ್ ಚುನಾವಣೆ ನಡೆಸುವಂತೆ ಆಗ್ರಹಿಸಿ ಜಾರಕಿಹೊಳಿ ಸಹೋದರರ ವಿರುದ್ಧ ಬೀದಿಗಿಳಿದು ಲಕ್ಷ್ಮೀ ಹೆಬ್ಬಾಳಕರ್ ಹೋರಾಟ ನಡೆಸಿದ್ದರು. ಚುನಾವಣಾಧಿಕಾರಿಯಾಗಿ ಕೆಲಸ ನಿರ್ವಹಿಸುತ್ತಿದ್ದ ಬೆಳಗಾವಿ ತಹಶೀಲ್ದಾರ್ ಚುನಾವಣೆಯನ್ನು ಮುಂದೂಡಿದ್ದರು. ಈಗ ಮಾನ್ಯ ಧಾರವಾಡ ಹೈಕೊರ್ಟ್ ಚುನಾವಣೆ ನಡೆಸುವಂತೆ ಆದೇಶ ಹೊರಡಿಸಿದೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

    https://www.youtube.com/watch?v=SmobRicNJR4

  • ಜಿಲ್ಲಾ ಸಮಸ್ಯೆಯನ್ನ ನಾವೇ ಇತ್ಯರ್ಥಪಡಿಸುತ್ತೇವೆ, ಯಾರ ಮಧ್ಯಸ್ಥಿಕೆಯೂ ಬೇಡ: ಸತೀಶ್ ಜಾರಕಿಹೊಳಿ

    ಜಿಲ್ಲಾ ಸಮಸ್ಯೆಯನ್ನ ನಾವೇ ಇತ್ಯರ್ಥಪಡಿಸುತ್ತೇವೆ, ಯಾರ ಮಧ್ಯಸ್ಥಿಕೆಯೂ ಬೇಡ: ಸತೀಶ್ ಜಾರಕಿಹೊಳಿ

    ಬೆಳಗಾವಿ: ಜಿಲ್ಲಾ ಸಮಸ್ಯೆಯನ್ನು ನಾವೇ ಇತ್ಯರ್ಥ ಮಾಡಿಕೊಳ್ಳುತ್ತೇವೆ. ನಮಗೆ ಯಾರು ಮಧ್ಯಪ್ರವೇಶ ಮಾಡುವ ಅಗತ್ಯವಿಲ್ಲ. ಎಲ್ಲ ಆಂತರಿಕ ಸಮಸ್ಯೆಗಳನ್ನು ಪಕ್ಷದಲ್ಲಿಯೇ ಚರ್ಚಿಸುತ್ತೇವೆ. ಪಕ್ಷ ಬಿಡುವ ಯೋಚನೆಯೇ ಇಲ್ಲ ಎಂದು ಮಾಜಿ ಸಚಿವ ಸತೀಶ್ ಜಾರಕಿಹೊಳಿ ಸ್ಪಷ್ಟನೆ ನೀಡಿದ್ದಾರೆ.

    ಜಿಲ್ಲೆಯಲ್ಲಿಯೇ ನಮ್ಮ ಮುಖಂಡರೂ ಇದ್ದಾರೆ. ನಮ್ಮ ಜಿಲ್ಲೆಯ ಹಿರಿಯ ನಾಯಕರು, ಮಾಜಿ ಸಚಿವರು ಎಲ್ಲರೂ ಇದ್ದಾರೆ. ಪಿಎಲ್‍ಡಿ ಬ್ಯಾಂಕ್ ಚುನಾವಣೆ ವಿಚಾರವನ್ನು ರಾಜ್ಯ, ರಾಷ್ಟ್ರ ಮಟ್ಟಕ್ಕೆ ಇದನ್ನು ತೆಗೆದುಕೊಂಡು ಹೋಗುವ ಅವಶ್ಯಕತೆ ಇಲ್ಲ. ಎಲ್ಲ ಜಿಲ್ಲೆಯಲ್ಲಿ ಎರಡರಿಂದ ಮೂರು ಗುಂಪುಗಳು ಸಹ ಇರುತ್ತವೆ. ಸಹಜವಾಗಿ ಕೆಲವು ನಾಯಕರು ಕೆಲವರಿಗೆ ಬೆಂಬಲ ಸೂಚಿಸುವುದು ಸಾಮಾನ್ಯ ಆಗಿರುತ್ತದೆ ಅಂತಾ ಅಂದ್ರು.

    ಶನಿವಾರ ಬೆಂಗಳೂರಲ್ಲಿ ಏನಾಗಿದೆ ಎಂಬುದು ನನಗೆ ಗೊತ್ತಿಲ್ಲ. ಬೆಳಗಾವಿ ಸಮಸ್ಯೆಗಳನ್ನು ನಮಗೆ ಬಿಡುವುದು ಸೂಕ್ತ. ಇದೆಲ್ಲ ಜಿಲ್ಲೆಗೆ ಸೀಮಿತವಾದ ವಿಚಾರ. ನಮ್ಮ ಜಿಲ್ಲೆಯ ಸಮಸ್ಯೆಗಳನ್ನು ನಾವೇ ಬಗೆಹರಿಸಿಕೊಳ್ಳುತ್ತೇವೆ. ನಮ್ಮಲ್ಲಿ ಏನೇ ಗೊಂದಲಗಳಿದ್ರೂ ಚುನಾವಣೆಯಲ್ಲಿ ನಾವೆಲ್ಲ ಒಂದಾಗಿ ಇರುತ್ತೇವೆ ಎಂಬುದು ಸತ್ಯ ಅಂತಾ ಹೇಳಿದ್ದಾರೆ.

    ಬಿಜೆಪಿ ಪ್ರಾಬಲ್ಯದ ನಡುವೆ ದೊಡ್ಡ ಜಿಲ್ಲೆಯಲ್ಲಿ ಕಷ್ಟಪಟ್ಟು ಪಕ್ಷ ಕಟ್ಟಿದ್ದು ನಾವು. ನಮಗೆ ಗೌರವ ಇಲ್ಲ ಅಂದ್ರೆ ಹೇಗೆ..? ಏನೇ ಇದ್ದರೂ ನಮ್ಮ ಬಳಿ ಚರ್ಚಿಸಬಹುದು. ಅದು ಬಿಟ್ಟು ನಮ್ಮ ಮೇಲೆ ಸವಾರಿ ಮಾಡಿದ್ರೆ ಹೇಗೆ..? ನಮ್ಮ ಮೇಲೆಯೇ ಸವಾರಿ ಮಾಡಿದ್ರೆ ಕೈ ಕಟ್ಟಿ ಕೂರೋಕೆ ಆಗಲ್ಲ. ನನ್ನ ಸಹೋದರ ಸತೀಶ್ ಜಾರಕಿಹೊಳಿ ವಿರುದ್ಧ ಪದೇ ಪದೇ ಜಿದ್ದಿಗೆ ಬಿದ್ದಿದ್ದಾರೆ. ಸತೀಶ್ ಜಾರಕಿಹೊಳಿಯನ್ನು ಮನವೊಲಿಸೋದು ಕಷ್ಟ ಅಂತ ಸಿದ್ದರಾಮಯ್ಯಗೆ ಲಕ್ಷ್ಮಿಹೆಬ್ಬಾಳ್ಕರ್ ವಿರುದ್ಧ ಸಚಿವ ರಮೇಶ್ ಜಾರಕಿಹೊಳಿ ದೂರು ನೀಡಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

  • ಕಾಂಗ್ರೆಸ್‍ನಲ್ಲಿ ಸ್ಫೋಟಕ ಬೆಳವಣಿಗೆ- ಸಮ್ಮಿಶ್ರ ಸರ್ಕಾರದ ಶ್ರಾವಣ ಸಂಕಟ ನಿಜ ಆಗುತ್ತಾ..?

    ಕಾಂಗ್ರೆಸ್‍ನಲ್ಲಿ ಸ್ಫೋಟಕ ಬೆಳವಣಿಗೆ- ಸಮ್ಮಿಶ್ರ ಸರ್ಕಾರದ ಶ್ರಾವಣ ಸಂಕಟ ನಿಜ ಆಗುತ್ತಾ..?

    ಬೆಂಗಳೂರು: ಆಂತರಿಕ ಕಚ್ಚಾಟದಲ್ಲಿ ಹೈರಾಣಾಗಿರುವ ಕಾಂಗ್ರೆಸ್‍ನಲ್ಲೀಗ ಬೆಳಗಾವಿ ನಾಯಕರ ಗುದ್ದಾಟ ಹೊಸದೊಂದು ಸ್ಫೋಟಕ ಬೆಳವಣಿಗೆಗೆ ಕಾರಣವಾಗಿದೆ. ಕಾಂಗ್ರೆಸ್ ಮಹಿಳಾ ಘಟಕದ ಅಧ್ಯಕ್ಷೆ, ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ಪರ ನಿಂತಿರುವ ಸಚಿವ ಡಿಕೆ ಶಿವಕುಮಾರ್ ವಿರುದ್ಧ ಜಾರಕಿಹೊಳಿ ಬ್ರದರ್ಸ್ ತಿರುಗಿಬಿದ್ದಿದ್ದಾರೆ ಎಂದು ಹೇಳಲಾಗುತ್ತಿದೆ.

    ಡಿಕೆ ಶಿವಕುಮಾರ್ ಅವರ ಹಸ್ತಕ್ಷೇಪ ಅತಿಯಾಯ್ತು. ಹೀಗೆ ಹಸ್ತಕ್ಷೇಪ ಮುಂದುವರೆದ್ರೆ ನಾವು 13 ಮಂದಿ ಶಾಸಕರು ಕಾಂಗ್ರೆಸ್ ಬಿಟ್ಟು ಬಿಜೆಪಿಗೆ ಹೋಗ ಬೇಕಾಗುತ್ತೆ ಅಂತ ಎಚ್ಚರಿಸಿದ್ದಾರಂತೆ. ಈ ಭಿನ್ನಮತ ಶಮನದ ಹೊಣೆಯನ್ನು ಸಿದ್ದರಾಮಯ್ಯಗೆ ಹೈಕಮಾಂಡ್ ನೀಡಿದ್ದು, ಇವತ್ತು ರಮೇಶ್ ಜಾರಕಿಹೊಳಿ ಮಾಜಿ ಸಿಎಂರನ್ನು ಭೇಟಿ ಆಗಿದ್ದಾರೆ.

    ಬಿಜೆಪಿ ಪ್ರಾಬಲ್ಯದ ನಡುವೆ ದೊಡ್ಡ ಜಿಲ್ಲೆಯಲ್ಲಿ ಕಷ್ಟಪಟ್ಟು ಪಕ್ಷ ಕಟ್ಟಿದ್ದು ನಾವು. ನಮಗೆ ಗೌರವ ಇಲ್ಲ ಅಂದ್ರೆ ಹೇಗೆ..? ಏನೇ ಇದ್ದರೂ ನಮ್ಮ ಬಳಿ ಚರ್ಚಿಸಬಹುದು. ಅದು ಬಿಟ್ಟು ನಮ್ಮ ಮೇಲೆ ಸವಾರಿ ಮಾಡಿದ್ರೆ ಹೇಗೆ..? ನಮ್ಮ ಮೇಲೆಯೇ ಸವಾರಿ ಮಾಡಿದ್ರೆ ಕೈ ಕಟ್ಟಿ ಕೂರೋಕೆ ಆಗಲ್ಲ. ನನ್ನ ಸಹೋದರ ಸತೀಶ್ ಜಾರಕಿಹೊಳಿ ವಿರುದ್ಧ ಪದೇ ಪದೇ ಜಿದ್ದಿಗೆ ಬಿದ್ದಿದ್ದಾರೆ. ಸತೀಶ್ ಜಾರಕಿಹೊಳಿಯನ್ನು ಮನವೊಲಿಸೋದು ಕಷ್ಟ ಅಂತ ಸಿದ್ದರಾಮಯ್ಯಗೆ ಲಕ್ಷ್ಮಿಹೆಬ್ಬಾಳ್ಕರ್ ವಿರುದ್ಧ ಸಚಿವ ರಮೇಶ್ ಜಾರಕಿಹೊಳಿ ದೂರು ನೀಡಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

    ವಿಧಾನಸಭೆ ಬಲಾಬಲ: 222 (224)
    ಅಗತ್ಯ ಸಂಖ್ಯಾಬಲ: 112
    ಬಿಜೆಪಿ- 104
    ಕಾಂಗ್ರೆಸ್- 81
    ಜೆಡಿಎಸ್- 37

    ಕಾಂಗ್ರೆಸ್ ಹೈ ಕಮಾಂಡ್‍ಗೂ ಬೆಳಗಾವಿ ರಾಜಕೀಯ ಕಲಹ ತಲೆನೋವಾಗಿದೆ. ಪಿಎಲ್‍ಡಿ ಬ್ಯಾಂಕ್ ಅಧ್ಯಕ್ಷ-ಉಪಾಧ್ಯಕ್ಷರ ಆಯ್ಕೆ ವಿಚಾರವಾಗಿ ಜಾರಕಿಹೊಳಿ ಬ್ರದರ್ಸ್ ಹಾಗೂ ಲಕ್ಷ್ಮಿ ಹೆಬ್ಬಾಳ್ಕರ್ ನಡುವಿನ ಸಂಘರ್ಷ ಭುಗಿಲೆದ್ದಿದೆ. ಶನಿವಾರ ತಡರಾತ್ರಿವರೆಗೂ ರಾಜ್ಯ ಉಸ್ತುವಾರಿ ವೇಣುಗೋಪಾಲ್ ಎರಡು ಬಣದವರ ಜೊತೆ ಪ್ರತ್ಯೇಕವಾಗಿ ಮಾತುಕತೆ ನಡೆಸಿದ್ದರು. ತಮಗಾಗುತ್ತಿರುವ ಕಿರಿಕಿರಿ ಬಗ್ಗೆ ರಮೇಶ್ ಜಾರಕಿಹೊಳಿ ಹಾಗೂ ಲಕ್ಷ್ಮಿ ಹೆಬ್ಬಾಳ್ಕರ್ ಪರಸ್ಪರ ದೂರು ನೀಡಿದ್ದಾರೆ.

    ಹೀಗೆ ರಾಜ್ಯ ನಾಯಕರಲ್ಲದೆ ಎಐಸಿಸಿ ಮಟ್ಟದಲ್ಲಿಯೂ ಲಕ್ಷ್ಮಿ ಹೆಬ್ಬಾಳ್ಕರ್ ಹಾಗೂ ಜಾರಕಿಹೊಳಿ ಸಹೋದರರ ನಡುವಿನ ಸಮಸ್ಯೆಗೆ ಪರಿಹಾರ ಸಿಗಲಿಲ್ಲ. ಕೊನೆಗೆ ಎರಡು ಬಣಕ್ಕೂ ಸದ್ಯಕ್ಕೆ ಸುಮ್ಮನಿರಿ, ಯಾರು ಬಹಿರಂಗವಾಗಿ ಮಾತನಾಡಬೇಡಿ ಅಂತ ಸೂಚನೆ ನೀಡಿ ವೇಣುಗೋಪಾಲ್ ಸುಮ್ಮನಾಗಿದ್ದಾರೆ ಎಂಬುದಾಗಿ ಪಕ್ಷದ ಮೂಲಗಳಿಂದ ತಿಳಿದುಬಂದಿತ್ತು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

    https://www.youtube.com/watch?v=Uc0gpGfnrBE

  • ಕೈ ಹೈಕಮಾಂಡ್‍ಗೆ ತಲೆನೋವಾಯ್ತು ಬೆಳಗಾವಿ ಸಂಘರ್ಷ- ಸದ್ಯಕ್ಕೆ ಸುಮ್ಮನಿರಿ ಅಂದ್ರು ವೇಣುಗೋಪಾಲ್

    ಕೈ ಹೈಕಮಾಂಡ್‍ಗೆ ತಲೆನೋವಾಯ್ತು ಬೆಳಗಾವಿ ಸಂಘರ್ಷ- ಸದ್ಯಕ್ಕೆ ಸುಮ್ಮನಿರಿ ಅಂದ್ರು ವೇಣುಗೋಪಾಲ್

    ಬೆಳಗಾವಿ: ಕಾಂಗ್ರೆಸ್ ಹೈ ಕಮಾಂಡ್‍ಗೂ ಬೆಳಗಾವಿ ರಾಜಕೀಯ ಕಲಹ ತಲೆನೋವಾಗಿದೆ. ಪಿಎಲ್‍ಡಿ ಬ್ಯಾಂಕ್ ಅಧ್ಯಕ್ಷ-ಉಪಾಧ್ಯಕ್ಷರ ಆಯ್ಕೆ ವಿಚಾರವಾಗಿ ಜಾರಕಿಹೊಳಿ ಬ್ರದರ್ಸ್ ಹಾಗೂ ಲಕ್ಷ್ಮಿ ಹೆಬ್ಬಾಳ್ಕರ್ ನಡುವಿನ ಸಂಘರ್ಷ ಭುಗಿಲೆದ್ದಿದೆ.

    ತಡರಾತ್ರಿವರೆಗೂ ರಾಜ್ಯ ಉಸ್ತುವಾರಿ ವೇಣುಗೋಪಾಲ್ ಎರಡು ಬಣದವರ ಜೊತೆ ಪ್ರತ್ಯೇಕವಾಗಿ ಮಾತುಕತೆ ನಡೆಸಿದ್ರು. ತಮಗಾಗುತ್ತಿರುವ ಕಿರಿಕಿರಿ ಬಗ್ಗೆ ರಮೇಶ್ ಜಾರಕಿಹೊಳಿ ಹಾಗೂ ಲಕ್ಷ್ಮಿ ಹೆಬ್ಬಾಳ್ಕರ್ ಪರಸ್ಪರ ದೂರು ನೀಡಿದ್ರು. ಇದನ್ನೂ ಓದಿ: ಲಕ್ಷ್ಮಿ ಹೆಬ್ಬಾಳ್ಕರ್ ವಿರುದ್ಧ ಜಾರಕಿಹೊಳಿ ಸಹೋದರರಿಂದ ರಾಜ್ಯ ನಾಯಕರಿಗೆ ದೂರು!

    ಬಿಜೆಪಿ ಪ್ರಾಬಲ್ಯದ ನಡುವೆ ದೊಡ್ಡ ಜಿಲ್ಲೆಯಲ್ಲಿ ಕಷ್ಟಪಟ್ಟು ಪಕ್ಷ ಕಟ್ಟಿದ್ದು ನಾವು. ನಮಗೆ ಗೌರವ ಇಲ್ಲಾ ಅಂದ್ರೆ ಹೇಗೆ ಎಂದು ರಮೇಶ್ ಜಾರಕಿಹೊಳಿ ಪ್ರಶ್ನಿಸಿದ್ರು. ಅಷ್ಟೇ ಅಲ್ಲ ಏನೆ ಇದ್ದರು ನಮ್ಮ ಬಳಿ ಚರ್ಚಿಸಬಹುದು. ಅದು ಬಿಟ್ಟು ನಮ್ಮ ಮೇಲೆ ಡಾಮಿನೇಟ್ ಮಾಡೋಕೆ ಬಂದ್ರೆ ಕೈಕಟ್ಟಿ ಕೂರೋಕೆ ಆಗಲ್ಲ. ಪದೇ ಪದೇ ಸಹೋದರ ಸತೀಶ್ ಜಾರಕಿಹೋಳಿ ವಿರುದ್ಧ ಜಿದ್ದಿಗೆ ಬಿದ್ದಿದ್ದಾರೆ. ಅವರನ್ನ ಮನವೊಲಿಸೋದು ಕಷ್ಟ ಅಂದ್ರು. ಇದನ್ನೂ ಓದಿ: ಸತೀಶ್ ಜಾರಕಿಹೊಳಿ ದೊಡ್ಡವರು ನನಗೆ ಆದರ್ಶ, ಮಹಾಗುರು: ಲಕ್ಷ್ಮಿ ಹೆಬ್ಬಾಳ್ಕರ್ ತಿರುಗೇಟು

    ಹೀಗೆ ರಾಜ್ಯ ನಾಯಕರಲ್ಲದೆ ಎಐಸಿಸಿ ಮಟ್ಟದಲ್ಲಿಯೂ ಲಕ್ಷ್ಮಿ ಹೆಬ್ಬಾಳ್ಕರ್ ಹಾಗೂ ಜಾರಕಿಹೊಳಿ ಸಹೋದರರ ನಡುವಿನ ಸಮಸ್ಯೆಗೆ ಪರಿಹಾರ ಸಿಗಲಿಲ್ಲ. ಕೊನೆಗೆ ಎರಡು ಬಣಕ್ಕೂ ಸದ್ಯಕ್ಕೆ ಸುಮ್ಮನಿರಿ, ಯಾರು ಬಹಿರಂಗವಾಗಿ ಮಾತನಾಡಬೇಡಿ ಅಂತ ಸೂಚನೆ ನೀಡಿ ವೇಣುಗೋಪಾಲ್ ಸುಮ್ಮನಾಗಿದ್ದಾರೆ ಎಂಬುದಾಗಿ ಪಕ್ಷದ ಮೂಲಗಳಿಂದ ತಿಳಿದುಬಂದಿದೆ. ಇದನ್ನೂ ಓದಿ; ಪಿಎಲ್‍ಡಿ ಬ್ಯಾಂಕ್ ಚುನಾವಣೆ: ಲಕ್ಷ್ಮಿ ಹೆಬ್ಬಾಳ್ಕರ್ ವಿರುದ್ಧ ಜಾರಕಿಹೊಳಿ ಸಹೋದರರು ಗರಂ

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

  • ಸತೀಶ್ ಜಾರಕಿಹೊಳಿ ದೊಡ್ಡವರು ನನಗೆ ಆದರ್ಶ, ಮಹಾಗುರು: ಲಕ್ಷ್ಮಿ ಹೆಬ್ಬಾಳ್ಕರ್ ತಿರುಗೇಟು

    ಸತೀಶ್ ಜಾರಕಿಹೊಳಿ ದೊಡ್ಡವರು ನನಗೆ ಆದರ್ಶ, ಮಹಾಗುರು: ಲಕ್ಷ್ಮಿ ಹೆಬ್ಬಾಳ್ಕರ್ ತಿರುಗೇಟು

    ಬೆಳಗಾವಿ: ಶಾಸಕ ಸತೀಶ್ ಜಾರಕಿಹೊಳಿ ದೊಡ್ಡವರು ಅವರಿಂದ ತುಂಬ ಕಲಿಯಬೇಕು, ಅವರೇ ನನಗೆ ಆದರ್ಶ, ಮಹಾ ಗುರು ಎಂದು ಪರೋಕ್ಷವಾಗಿ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ಟಾಂಗ್ ಕೊಟ್ಟಿದ್ದಾರೆ.

    ಬೆಳಗಾವಿಯಲ್ಲಿ ಮಾತನಾಡಿದ ಅವರು, ಪಿಎಲ್‍ಡಿ ಬ್ಯಾಂಕ್ ಅಧ್ಯಕ್ಷರು, ಉಪಾಧ್ಯಕ್ಷರ ಚುನಾವಣೆ ವಿಚಾರದಲ್ಲಿ ಕೆಲ ಶಕ್ತಿಗಳು ಪ್ರತಿಭಟನೆ ವೇಳೆ ಗಲಾಟೆಗೆ ಯತ್ನ ನಡೆಸಿದವು. ತಹಶೀಲ್ದಾರ್ ಏಕಾಏಕಿ ಚುನಾವಣೆ ಮುಂದೂಡಿದ್ದಾರೆ. ಈ ಮೂಲಕ ಏಕಪಕ್ಷೀಯ ನಿರ್ಧಾರ ಕೈಗೊಂಡಿದ್ದಾರೆ. ಪಿಎಲ್‍ಡಿ ಬ್ಯಾಂಕ್‍ನ 9 ಜನ ನಿರ್ದೇಶಕರು ನನ್ನ ಜೊತೆಗಿದ್ದಾರೆ. ತಹಶೀಲ್ದಾರ್ ತಪ್ಪು ಮಾಡಿದ್ರೆ ಅವರನ್ನು ಅಮಾನತು ಮಾಡಬೇಕು, ಅಲ್ಲಿಯವರೆಗೂ ಹೋರಾಟದಿಂದ ಹಿಂದೆ ಸರಿಯಲ್ಲ. ನ್ಯಾಯ ಸಿಗದಿದ್ರೆ ಬೆಳಗಾವಿ ಚನ್ನಮ್ಮ ವೃತ್ತದಲ್ಲಿ ಹೋರಾಟ ಮಾಡುವುದಾಗಿ ಎಚ್ಚರಿಸಿದರು.

    ಪಿಎಲ್‍ಡಿ ಬ್ಯಾಂಕ್ ಅಧ್ಯಕ್ಷ, ಉಪಾಧ್ಯಕ್ಷರ ಚುನಾವಣೆ ಹಿನ್ನೆಲೆ ಸೋಮವಾರ ಅಹೋರಾತ್ರಿ ಪ್ರತಿಭಟನೆ ನಡೆಸಿದ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ವಿರುದ್ಧ ಶಾಸಕ ಸತೀಶ ಜಾರಕಿಹೊಳಿ ಗುಡುಗಿದ್ದಾರೆ. ಪಿಎಲ್‍ಡಿ ಬ್ಯಾಂಕ್‍ಗೆ 20 ವರ್ಷದಿಂದ ರಾಜಕೀಯ ಮುಕ್ತ ಚುನಾವಣೆ ನಡೆದಿದೆ. ಸಚಿವರು, ಶಾಸಕರು ಯಾರೊಬ್ಬರು ಪಾಲ್ಗೊಂಡಿಲ್ಲ. ಆದರೆ ಲಕ್ಷ್ಮೀ ಹೆಬ್ಬಾಳ್ಕರ್ ನಿರ್ದೇಶಕರಿಗೆ ಆಮಿಷ ಒಡ್ಡಿದ್ದಾರೆ ಎಂದು ಆರೋಪಿಸಿದ್ದಾರೆ.

    ಶಾಸಕ ಸತೀಶ್ ಜಾರಕಿಹೊಳಿ ಕಾಲು ಕಸ ಆಗಲ್ಲ. ಮೊದಲ ಬಾರಿ ಗೆದ್ದಿದ್ದೀನಿ ಅಂತ ಮೆರಿ ಬೇಡಾ ಅಂತಾ ಬೆಳಗಾವಿಯಲ್ಲಿ ಲಕ್ಷ್ಮಿ ಹೆಬ್ಬಾಳ್ಕರ್ ವಿರುದ್ಧ ಸಚಿವ ರಮೇಶ್ ಜಾರಕಿಹೊಳಿ ವಾಗ್ದಾಳಿ ನಡೆಸಿದ್ರು. ಪಿಎಲ್‍ಡಿ ಬ್ಯಾಂಕ್ ಅಧ್ಯಕ್ಷ, ಉಪಾಧ್ಯಕ್ಷರ ಚುನಾವಣೆ ಗೊಂದಲ ವಿಚಾರದಲ್ಲಿ ಪ್ರತಿಕ್ರಿಯಿಸಿ ಪಿಎಲ್‍ಡಿ ಬ್ಯಾಂಕ್ ಚುನಾವಣೆ ವಿಚಾರದಲ್ಲಿ ರಾಜಕೀಯ ಸರಿಯಲ್ಲ, ಅಧಿಕಾರಿಗಳ ಸಭೆ ನಡೆಸಿ ಮುಂದಿನ ತೀರ್ಮಾನ ತೆಗೆದುಕೊಳ್ಳುತ್ತೇನೆ ಅಂತಾ ತಿಳಿಸಿದ್ದಾರೆ.

    ಈ ಹಿಂದಿನ ಪದ್ಧತಿಯಲ್ಲಿ ಚುನಾವಣೆ ನಡೆಸಲು ನಮ್ಮದು ಸಲಹೆ ಇದೆ. ಅವಿರೋಧವಾಗಿ ಆಯ್ಕೆ ಆಗಿರುವವರು ಶಾಸಕಿ ಹೆಬ್ಬಾಳ್ಕರ್ ಜೊತೆಗೆ ಹೋಗಿದ್ದಾರೆ. ಎಲ್ಲರೂ ಸೇರಿ ಕೆಲಸ ಮಾಡುವ ನಿರೀಕ್ಷೆ ಹೊಂದಿದ್ದೇವು. ಆದರೆ ಇದು ಹುಸಿಯಾಗಿದೆ. ಚುನಾವಣೆ ಮುಂದೂಡಿಕೆ ಚುನಾವಣಾ ಅಧಿಕಾರಿಗೆ ಅಧಿಕಾರವಿದೆ. ಪ್ರತಿಭಟನೆಯಿಂದ ಯಾವುದೇ ಪ್ರಯೋಜವಿಲ್ಲ ಎಂದ ಅವರು, ಒಂದೇ ಪಕ್ಷದಲ್ಲಿ ಇದ್ದರೂ ಗುಂಪುಗಾರಿಕೆ ಮಾಡುವುದು ಸಹಜವಾಗಿದೆ. ಈಗಲೂ ಕಾಲ ಮಿಂಚಿಲ್ಲ ಎಲ್ಲರನ್ನೂ ಒಮ್ಮತದಿಂದ ಕರೆದುಕೊಂಡು ಹೋದರೆ ಸ್ವಾಗತ ಎಂದು ಎಚ್ಚರಿಕೆ ನೀಡಿದರು

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

  • ಬೆಳಗಾವಿಯಲ್ಲಿ ಮಿಡ್‍ನೈಟ್ ಹೈಡ್ರಾಮಾ – ಪಿಎಲ್‍ಡಿ ಬ್ಯಾಂಕ್ ಎಲೆಕ್ಷನ್ ಮುಂದೂಡಿಕೆ ರಾಜಕೀಯ

    ಬೆಳಗಾವಿಯಲ್ಲಿ ಮಿಡ್‍ನೈಟ್ ಹೈಡ್ರಾಮಾ – ಪಿಎಲ್‍ಡಿ ಬ್ಯಾಂಕ್ ಎಲೆಕ್ಷನ್ ಮುಂದೂಡಿಕೆ ರಾಜಕೀಯ

    – ಕಾಂಗ್ರೆಸ್ ನಾಯಕರ ನಡುವೆಯೇ ಫೈಟ್

    ಬೆಳಗಾವಿ: ಅದು ಸ್ಥಳೀಯ ಮಟ್ಟದ ಚುನಾವಣೆ ಹಾಗಂತಾ ನಗರಸಭೆ ಅಥವಾ ಪುರಸಭೆ ಚುನಾವಣೆಯಲ್ಲಾ, ಬದಲಿಗೆ ಸಹಕಾರಿ ಬ್ಯಾಂಕ್ ಒಂದರ ಚುನಾವಣೆ. ರಾಜಕೀಯದಲ್ಲಿ ಇಬ್ಬರು ವಿರೋಧಿಗಳೆಂದು ಬಿಂಬಿಸಿಕೊಂಡ ಮಾಜಿ ಸಚಿವ ಸತೀಶ್ ಜಾರಕಿಹೋಳಿ ಹಾಗೂ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ಈ ಚುನಾವಣೆಯನ್ನ ಪ್ರತಿಷ್ಠೆಯಾಗಿ ತೆಗೆದುಕೊಂಡಿದ್ದು ಸದ್ಯ ನೇರಾ ನೇರ ಪೈಟ್ ನಡೆಸುತ್ತಿದ್ದಾರೆ.

    ಕಳೆದ ರಾತ್ರಿ ಬೆಳಗಾವಿ ತಹಶೀಲ್ದಾರ್ ಕಚೇರಿ ಮುಂಭಾಗದಲ್ಲಿ ದೊಡ್ಡ ಮಟ್ಟದ ಹೈಡ್ರಾಮ ನಡೆದು ಹೋಗಿದೆ. ಇಂದು ನಡೆಯಬೇಕಿದ್ದ ಪಿಎಲ್ ಡಿ ಬ್ಯಾಂಕ್ ನ ಚುನಾವಣೆಯನ್ನ ಇದ್ದಕ್ಕಿದ್ದಂತೆ ಕಳೆದ ರಾತ್ರಿ ಮುಂದೂಡಲಾಯ್ತು. ಇದರಿಂದ ಆಕ್ರೋಶಗೊಂಡ ಗ್ರಾಮೀಣ ಕ್ಷೇತ್ರದ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ಬೆಂಬಲಿಗರ ಜೊತೆ ತಹಶೀಲ್ದಾರ್ ಕಚೇರಿ ಮುಂದೆ ಅಹೋರಾತ್ರಿ ಧರಣಿಗೆ ಮುಂದಾದರು. ಸತೀಶ್ ಜಾರಕಿಹೋಳಿ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ್ರು.

    ಸತೀಶ್ ಬೆಂಬಲಿಗರು ಲಕ್ಷ್ಮಿ ವಿರುದ್ಧವೂ ಪ್ರತಿಭಟನೆ ನಡೆಸಿದ್ರು. ಸತೀಶ್ ಜಾರಕಿಹೋಳಿ ಬೆಂಬಲಿಗರು ತಹಶೀಲ್ದಾರ್ ಕಚೇರಿ ಕಾಂಪೌಂಡ್ ಏರಿ ಒಳ ನುಗ್ಗಲು ಯತ್ನಿಸಿದರು. ಈ ವೇಳೆ ಪೊಲೀಸರ ಜೊತೆ ವಾಗ್ವಾದ ನಡೆಸಿದ್ರು. ಕೊನೆಗೆ ಎಸ್‍ಪಿ ರಾಜಪ್ಪ ಹರಸಾಹಸ ಮಾಡಿ ಪರಿಸ್ಥಿತಿ ಹತೋಟಿಗೆ ತರುವಲ್ಲಿ ಯಶಸ್ವಿಯಾಗಿದ್ದಾರೆ. ಅಪರ ಜಿಲ್ಲಾಧಿಕಾರಿ ಸ್ಥಳಕ್ಕಾಗಮಿಸಿ ಕಾನೂನಿನ ಬಗ್ಗೆ ತಿಳಿ ಹೇಳಿ ಇಬ್ಬರ ಮನವೊಲಿಸಿ ವಾಪಸ್ ಕಳಿಸಿದರು. ಜಾರಕಿಹೊಳಿ ಬೆಂಬಲಿಗರ ಗುಂಪಿನಲ್ಲಿ ಬಿಜೆಪಿಯ ಕೆಲವು ಮುಖಂಡರು ಕಾಣಿಸಿಕೊಂಡಿದ್ದು ವಿಶೇಷವಾಗಿತ್ತು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

  • ಎಲ್ಲ ಶತ್ರಗಳು ಒಟ್ಟಾಗಿ ದಾಳಿ ಮಾಡೋದೆ ರಾಜಕಾರಣ- ಸತೀಶ್ ಜಾರಕಿಹೊಳಿ

    ಎಲ್ಲ ಶತ್ರಗಳು ಒಟ್ಟಾಗಿ ದಾಳಿ ಮಾಡೋದೆ ರಾಜಕಾರಣ- ಸತೀಶ್ ಜಾರಕಿಹೊಳಿ

    ಬೆಳಗಾವಿ: ಎಲ್ಲಾ ಶತ್ರಗಳು ಒಟ್ಟಾಗಿ ದಾಳಿ ಮಾಡುವುದನ್ನೇ ರಾಜಕಾರಣ ಎನ್ನುವುದು. ಪ್ರಧಾನಿಯಾಗಲಿ, ಗ್ರಾಮ ಪಂಚಾಯತ್ ಅಧ್ಯಕ್ಷರಾಗಲಿ ಅವರನ್ನು ಸೋಲಿಸಲು ಷಡ್ಯಂತ್ರ ನಡೆಯುತ್ತಲೇ ಇರುತ್ತದೆ ಎಂದು ಮಾಜಿ ಸಚಿವ ಸತೀಶ್ ಜಾರಕಿಹೊಳಿ ಹೇಳಿದ್ದಾರೆ.

    ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿಕೆಗೆ ಪ್ರತಿಕ್ರಿಯೆ ನೀಡಿದ ಅವರು, ರಾಜಕಾರಣದಲ್ಲಿ ಯಾರೂ ಶತ್ರುಗಳಲ್ಲ, ಮಿತ್ರರೂ ಅಲ್ಲ. ಇದು ದಿನವೂ ಬದಲಾಗುತ್ತಿರುತ್ತದೆ, ನಾವು ಜಾಗೃತರಾಗಿ ಮುನ್ನಡೆಯಬೇಕು. ಸಮಯಕ್ಕೆ ತಕ್ಕಂತೆ ನಾವು ಹೊಂದಾಣಿಕೆ ಮಾಡಿಕೊಳ್ಳಬೇಕು ಎಂದು ತಿಳಿಸಿದರು.

    2018ರ ವಿಧಾನಸಭೆ ಚುನಾವಣೆಯಲ್ಲಿ 120 ಕ್ಷೇತ್ರಗಳಿಂದ ಜಯ ಸಾಧಿಸುತ್ತೇವೆ ಎನ್ನುವ ಆಸೆ ಇತ್ತು. ಆದರೆ ರಾಜ್ಯದ ಜನತೆ ನಮಗೆ ಬಹುಮತ ನೀಡಲಿಲ್ಲ. ಹೀಗಾಗಿ ಸಮ್ಮಿಶ್ರ ಸರ್ಕಾರ ರಚನೆ ಅನಿವಾರ್ಯವಾಯಿತು. ಒಂದು ವೇಳೆ ಕಾಂಗ್ರೆಸ್ ಬಹುಮತ ಪಡೆದಿದ್ದರೆ ಸಿದ್ದರಾಮಯ್ಯ ಅವರು ಮುಖ್ಯಮಂತ್ರಿ ಆಗುತ್ತಿದ್ದರು ಎಂದರು.

    ಅವಸರದಲ್ಲಿ ಸಮ್ಮಿಶ್ರ ಸರ್ಕಾರ ರಚನೆಯಾಗಿದ್ದರೂ 5 ವರ್ಷ ಆಡಳಿತ ಮಾಡಲಿದೆ. ಎಚ್.ಡಿ.ಕುಮಾರಸ್ವಾಮಿ ಮುಖ್ಯಮಂತ್ರಿಯಾಗಿ ಹಾಗೂ ಡಾ.ಜಿ.ಪರಮೇಶ್ವರ್ ಉಪಮುಖ್ಯಮಂತ್ರಿಯಾಗಿ ಅಧಿಕಾರ ನಡೆಸಲಿದ್ದಾರೆ ಎಂದು ಸ್ಪಷ್ಟಪಡಿಸಿದ್ರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

  • ಕೆಶಿಪ್ ಹಾಸನಕ್ಕೆ ಹೋಗಲು ಬಿಡಲ್ಲ- ಸೂಪರ್ ಸಿಎಂಗೆ ಸತೀಶ್ ಜಾರಕಿಹೋಳಿ ಸೆಡ್ಡು

    ಕೆಶಿಪ್ ಹಾಸನಕ್ಕೆ ಹೋಗಲು ಬಿಡಲ್ಲ- ಸೂಪರ್ ಸಿಎಂಗೆ ಸತೀಶ್ ಜಾರಕಿಹೋಳಿ ಸೆಡ್ಡು

    ಬೆಳಗಾವಿ: ಕರ್ನಾಟಕ ರಾಜ್ಯ ಹೆದ್ದಾರಿಗಳ ಅಭಿವೃದ್ಧಿ ಯೋಜನೆ(ಕೆಶಿಪ್) ಕಚೇರಿ ಹಾಸನಕ್ಕೆ ಹೋಗಲು ನಾನು ಬಿಡುವುದಿಲ್ಲ. ನಮ್ಮಲ್ಲೇ ಹಲವು ಕೆಲಸಗಳು ಬಾಕಿ ಉಳಿದುಕೊಂಡಿವೆ. ಈ ಸಂಬಂಧ ಮುಖ್ಯಮಂತ್ರಿಗಳಿಗೆ ಮೌಖಿಕವಾಗಿ ಎಲ್ಲ ವಿಚಾರಗಳನ್ನು ತಿಳಿಸುತ್ತೇನೆ ಎಂದು ಕಾಂಗ್ರೆಸ್ ಶಾಸಕ ಸತೀಶ್ ಜಾರಕಿಹೊಳಿ ಪರೋಕ್ಷವಾಗಿ ಸೂಪರ್ ಸಿಎಂ ಹೆಚ್.ಡಿ.ರೇವಣ್ಣರಿಗೆ ಸೆಡ್ಡು ಹೊಡೆದಿದ್ದಾರೆ.

    ಕೇವಲ ಕಚೇರಿ ಸ್ಥಳಾಂತರದಿಂದ ಉತ್ತರ ಕರ್ನಾಟಕಕ್ಕೆ ಏನು ಅನ್ಯಾಯ ಆಗೋದಿಲ್ಲ. ಸ್ಥಳೀಯ ಶಾಸಕನಿಗೆ ಯಾವುದೇ ಮಾಹಿತಿ ನೀಡದೇ ಕಚೇರಿ ಸ್ಥಳಾಂತರಿಸೋದು ತಪ್ಪು. ನಮ್ಮಲ್ಲಿ ಇನ್ನು ಕೆಲಸಗಳು ನಡೆಯುತ್ತಿದ್ದು, ಹಾಗಾಗಿ ಕಚೇರಿ ಸ್ಥಳಾಂತರಿಸಲು ಬಿಡಲ್ಲ. ಈ ಬಗ್ಗೆ ಸ್ಥಳೀಯ ಶಾಸಕರ ಅಭಿಪ್ರಾಯ ಯಾಕೆ ಕೇಳಿಲ್ಲ ಅಂತಾ ಸಿಎಂ ಹಾಗೂ ಮಂತ್ರಿಗಳಿಗೆ ಪ್ರಶ್ನೆ ಮಾಡುತ್ತೇನೆ ಎಂದು ತಿಳಿಸಿದರು.

    ಸ್ಥಳೀಯ ಚುನಾವಣೆಗಳಲ್ಲಿ ಮೈತ್ರಿ ಹೊಂದಾಣಿಕೆ ಅಸಾಧ್ಯ. ಮೈತ್ರಿ ಕೇವಲ ಲೋಕಸಭೆಗೆ ಚುನಾವಣೆಗೆ ಮಾತ್ರ ಸೀಮಿತವಾಗಿದೆ. ಲೋಕಸಭೆಗೆ ನಾನು ಸ್ಪರ್ಧೆ ಮಾಡುವುದಿಲ್ಲ. ಇಲ್ಲಿಂದ ಯಾರು ಸ್ಪರ್ಧೆ ಮಾಡಿದರೂ ನಾನು ಬೆಂಬಲ ನೀಡುತ್ತೇನೆ. ಆದ್ರೂ ನನ್ನ ಹೆಸರು ಕೇಳಿ ಬರುತ್ತಿದ್ದು, ಅಭ್ಯರ್ಥಿ ಯಾರೆಂಬುದನ್ನು ಹೈಕಮಾಂಡ್ ತೀರ್ಮಾನಿಸಲಿದೆ ಎಂದು ಸ್ಪಷ್ಟಪಡಿಸಿದ್ರು.

     

    ಹಾಸನಕ್ಕೆ ಶಿಫ್ಟ್ ಆಗುವ ಕಚೇರಿಗಳು:
    ಬೆಳಗಾವಿಯಲ್ಲಿರುವ ಕೆಶಿಪ್ ಕಚೇರಿಯನ್ನು ಹಾಸನಕ್ಕೆ ಸ್ಥಳಾಂತರ ಮಾಡಲು ರಾಜ್ಯ ಸರ್ಕಾರ ಜುಲೈ 27, 2018ರಂದು ಆದೇಶ ಹೊರಡಿಸಿತ್ತು. ಬೆಳಗಾವಿ ನಗರದಲ್ಲಿರುವ ಕೆಶಿಪ್ ವಿಭಾಗದ ಮಟ್ಟದ ಕಚೇರಿಯನ್ನು ಹಾಸನಕ್ಕೆ ಹಾಗೂ ಉಪ ವಿಭಾಗೀಯ ಕಚೇರಿಯನ್ನು ಬೆಳಗಾವಿಯಿಂದ ಮಡಿಕೇರಿಗೆ ಸ್ಥಳಾಂತರಕ್ಕೆ ಸೂಚಿಸಲಾಗಿತ್ತು. ಸಕಲೇಶಪುರದ ರಾಷ್ಟ್ರೀಯ ಹೆದ್ದಾರಿ ಉಪವಿಭಾಗ ಕಚೇರಿಯನ್ನು ಹೊಳೆನರಸೀಪುರಕ್ಕೆ ಶಿಫ್ಟ್ ಮಾಡಲು ಹಾಗೂ ಬಸವನಬಾಗೇವಾಡಿಯ ಕೆಶಿಪ್ ಉಪವಿಭಾಗ ಕಚೇರಿಯನ್ನು ಬೇಲೂರಿಗೆ ಸ್ಥಳಾಂತರಿಸಲು ಆದೇಶಿಸಲಾಗಿತ್ತು. ಅಲ್ಲದೆ ಶಿವಮೊಗ್ಗ ಲೋಕೋಪಯೋಗಿ ವಿಶೇಷ ಉಪ ವಿಭಾಗೀಯ ಕಚೇರಿಯನ್ನು ಅರಸೀಕೆರೆಗೆ ಶಿಫ್ಟ್ ಮಾಡಲು ಸೂಚಿಸಲಾಗಿತ್ತು.

    ಜಿಲ್ಲೆಯಿಂದ ಕೆಶಿಪ್ ಕಚೇರಿಯನ್ನ ಹಾಸನಕ್ಕೆ ಸ್ಥಳಾಂತರ ಮಾಡಿರುವುದಕ್ಕೆ ಉತ್ತರ ಕರ್ನಾಟಕದಲ್ಲಿ ವ್ಯಾಪಕ ವಿರೋಧ ವ್ಯಕ್ತವಾಗುತ್ತಿದೆ. ಕರ್ನಾಟಕ ,ರಾಜ್ಯ ಹೆದ್ದಾರಿ ಯೋಜನೆಯನ್ನ ಬೆಳಗಾವಿಯಂದ ಸ್ಥಳಾಂತರ ಮಾಡಿರುವುದಕ್ಕೆ ಸೂಪರ್ ಸಿಎಂ ರೇವಣ್ಣ ಅವರ ವಿರುದ್ಧ ತೀವ್ರ ಖಂಡನೆ ವ್ಯಕ್ತವಾಗಿದೆ. ಸಮ್ಮಿಶ್ರ ಸರ್ಕಾರದ ಸೂಪರ್ ಸಿಎಂ ಎಂದೇ ಬಿಂಬಿತವಾಗಿರುವ ಲೋಕೋಪಯೋಗಿ ಸಚಿವ ಎಚ್.ಡಿ. ರೇವಣ್ಣ ಪ್ರಭಾವದಿಂದಲೇ ಹುದ್ದೆಗಳ ಸಮೇತವಾಗಿ ಈ ಎಲ್ಲಾ ಕಚೇರಿಗಳ ಸ್ಥಳಾಂತರಕ್ಕೆ ಆದೇಶ ಹೊರ ಬಿದ್ದಿದೆ ಎನ್ನಲಾಗಿದ್ದು, ಈ ಹಿನ್ನೆಲೆಯಲ್ಲಿ ಇದು ಉತ್ತರ ಕರ್ನಾಟಕದ ಜನತೆಯ ಆಕ್ರೋಶಕ್ಕೆ ಕಾರಣವಾಗಿದೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictvnews