Tag: Satish jarkiholi

  • ಡಿಕೆಶಿ, ಜಾರಕಿಹೊಳಿ ಅಲ್ಲ.. ಮಲ್ಲಿಕಾರ್ಜುನ ಖರ್ಗೆ ರಾಜ್ಯದ ಸಿಎಂ ಆಗ್ತಾರೆ: ಯತ್ನಾಳ್ ಬಾಂಬ್

    ಡಿಕೆಶಿ, ಜಾರಕಿಹೊಳಿ ಅಲ್ಲ.. ಮಲ್ಲಿಕಾರ್ಜುನ ಖರ್ಗೆ ರಾಜ್ಯದ ಸಿಎಂ ಆಗ್ತಾರೆ: ಯತ್ನಾಳ್ ಬಾಂಬ್

    – ವಿಜಯೇಂದ್ರ ಮತ್ತೆ ಬಿಜೆಪಿ ರಾಜ್ಯಾಧ್ಯಕ್ಷ ಆದ್ರೆ ಹೊಸ ಪಕ್ಷ ಕಟ್ತೀನಿ ಎಂದ ಶಾಸಕ

    ಬೆಳಗಾವಿ: ಡಿಕೆಶಿ, ಸತೀಶ್ ಜಾರಕಿಹೊಳಿ ಇಬ್ಬರೂ ಸಿಎಂ ಆಗಲ್ಲ. ಮಲ್ಲಿಕಾರ್ಜುನ ಖರ್ಗೆ ರಾಜ್ಯದ ಮುಖ್ಯಮಂತ್ರಿ ಆಗಲಿದ್ದಾರೆ ಎಂದು ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ (Basanagouda Patil Yatnal) ಸ್ಫೋಟಕ ಹೇಳಿಕೆ ನೀಡಿದ್ದಾರೆ.

    ಬೆಳಗಾವಿಯಲ್ಲಿ ಕನೇರಿ ಮಠದ ಸ್ವಾಮೀಜಿ ಬೆಂಬಲಿಸಿ ನಡೆದ ಸಭೆಯ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಯತ್ನಾಳ್, ಕಾಂಗ್ರೆಸ್‌ನಲ್ಲಿ ಸ್ಪರ್ಧೆಯಲ್ಲಿರುವ ಯಾವ ನಾಯಕರೂ ಸಿಎಂ ಆಗಲ್ಲ. ರಾಜ್ಯದ ಸಾರಥ್ಯ ಬ್ಲ್ಯಾಕ್ ಹಾರ್ಸ್ ಕೈಗೆ ಸಿಗಲಿದೆ. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ರಾಜ್ಯದ ಮುಖ್ಯಮಂತ್ರಿ ಆಗಲಿದ್ದಾರೆ. ಡಿಕೆಶಿಯೂ ಸಿಎಂ ಆಗಲ್ಲ, ಸತೀಶ್ ಜಾರಕಿಹೊಳಿ ಕೂಡ ಸಿಎಂ ಆಗಲ್ಲ. ಒಮ್ಮೆ ಸಿಎಂ ಆಗಬೇಕು ಎಂದು ಮಲ್ಲಿಕಾರ್ಜುನ ಖರ್ಗೆ ಕಾಯುತ್ತಿದ್ದಾರೆ. ಸಿಎಂ ಪುತ್ರ ಕೂಡ ಬೆಳಗಾವಿಗೆ ಬಂದು ಸತೀಶ್ ಜಾರಕಿಹೊಳಿ ಹೆಸರು ಹೇಳಿ ಹೋಗಿದ್ದಾರೆ. ಆದರೆ, ನಾಯಕತ್ವ ಬದಲಾವಣೆ ಆಗಲಿದೆ. ಮಲ್ಲಿಕಾರ್ಜುನ ಖರ್ಗೆ ಸಿಎಂ ಆಗಲಿದ್ದಾರೆ ಎಂದು ಭವಿಷ್ಯ ನುಡಿದರು. ಇದನ್ನೂ ಓದಿ: ಶ್ರೀರಾಮುಲು ಕಾಂಗ್ರೆಸ್ ಪಕ್ಷಕ್ಕೆ ಕೊಟ್ಟ ಹಣವನ್ನೇ ಬಿಹಾರ ಚುನಾವಣೆಗೆ ಕಳುಹಿಸಿದ್ದೇವೆ: ಡಿಕೆಶಿ ಟಾಂಗ್‌

    ಡಿಕೆಶಿಯನ್ನ ಸಿಎಂ ಮಾಡ್ತೀನಿ ಅಂತ ನೀವು ಡಿಸೈಡ್ ಮಾಡಿದ್ರೆ, ನಾನು ಸತೀಶ್ ಪರವಾಗಿ ನಿಲ್ತೀನಿ ಅಂತ ಸಿದ್ದರಾಮಯ್ಯ ಸಂದೇಶ ಕೊಟ್ಟಿದ್ದಾರೆ. ತಮ್ಮ ಮಗನನ್ನು ಕಳಿಸಿ ಸಂದೇಶ ಸಾರಿದ್ದಾರೆ ಸಿಎಂ ಸಿದ್ದರಾಮಯ್ಯ ಯತ್ನಾಳ್ ಆರೋಪ ಮಾಡಿದ್ದಾರೆ.

    ವಿಜಯೇಂದ್ರ ಮರಳಿ ರಾಜ್ಯ ಬಿಜೆಪಿ ಅಧ್ಯಕ್ಷರಾದ್ರೆ ನಾನು ಹೊಸ ಪಕ್ಷ ಕಟ್ಟುತ್ತೇನೆ. ಕರ್ನಾಟಕ ರಾಜ್ಯದಲ್ಲಿ ಜೆಸಿಬಿ ಹೆಸರಲ್ಲಿ ಹೊಸ ಪಕ್ಷ ಕಟ್ಟುತ್ತೇನೆ. ಜೆ ಅಂದ್ರೆ ಜೆಡಿಎಸ್‌ನಲ್ಲಿ, ಸಿ ಅಂದ್ರೆ ಕಾಂಗ್ರೆಸ್ ಹಾಗೂ ಬಿ ಅಂದ್ರೆ ಬಿಜೆಪಿಯಲ್ಲಿ ನೊಂದವರು ನಮ್ಮ ಪಕ್ಷ ಸೇರುತ್ತಾರೆ. ಈಗ ಬಿಜೆಪಿಯಲ್ಲಿರುವ 50 ಕ್ಕೂ ಅಧಿಕ ಶಾಸಕರ ಬೆಂಬಲ ನನಗಿದೆ. ಹೆಚ್ಚಿನ ಸಂಖ್ಯೆಯ ಸಂಸದರ ಬೆಂಬಲವೂ ನನಗಿದೆ. ಹೀಗಾಗಿ, ಯಾವುದೇ ಕಾರಣಕ್ಕೂ ಬಿಜೆಪಿ ಹೈಕಮಾಂಡ್ ವಿಜಯೇಂದ್ರರನ್ನು ಅಧ್ಯಕ್ಷ ಮಾಡಬಾರದು. ಒಂದು ವೇಳೆ ವಿಜಯೇಂದ್ರ ಅಧ್ಯಕ್ಷರಾದ್ರೆ ನಾನು ಜೆಸಿಬಿ ಪಕ್ಷ ಕಟ್ಟುವೆ. ಜೆಸಿಬಿ ಪಾರ್ಟಿ ರಚನೆಗೆ ಎಲ್ಲ ರೀತಿಯ ಸಿದ್ಧತೆ ಮಾಡಿದ್ದೇವೆ. ವಿಜಯೇಂದ್ರ ನೇಮಿಸಿದ ಮರುದಿನವೇ ಪಕ್ಷ ಆ್ಯಕ್ಟಿವ್ ಆಗಲಿದೆ. ನಾನು ಹೋದ ಕಡೆಗಳಲ್ಲಿ ಜನಬೆಂಬಲ ಸಿಗ್ತಿದೆ. ಹಿಂದುತ್ವದ ಆಧಾರದ ಮೇಲೆ ಪಕ್ಷ ಕಟ್ಟುವೆ ಎಂದು ತಿಳಿಸಿದರು. ಇದನ್ನೂ ಓದಿ: ಹಣೆಯಲ್ಲಿ ಬರೆದಿದ್ದರೆ ಡಿ.ಕೆ.ಶಿವಕುಮಾರ್ ಸಿಎಂ ಆಗ್ತಾರೆ, ಇಲ್ಲದಿದ್ದರೆ ಇಲ್ಲ: ಡಿ.ಕೆ.ಸುರೇಶ್

    ನರೇಂದ್ರ ಮೋದಿ ಜನರಿಂದ ಆದ ನಾಯಕ. ದೇಶದಲ್ಲಿ ಒಂದು ಸಂಚಲನ ಆಯ್ತು. ಮೋದಿಯವರ ನಂತರ ಯೋಗಿ ಆದಿತ್ಯನಾಥ್ ಪಿಎಂ ಆಗಬೇಕು ಎಂದು ಜನ ಬಯಸಿದ್ದಾರೆ. ಹಾಗೆಯೇ ರಾಜ್ಯದ ಜನರ ಆಶಾವಾದವಿದೆ. ಜನರಲ್ಲಿ ಯತ್ನಾಳ್ ಸಿಎಂ ಆಗಬೇಕು ಎನ್ನುವುದಿದೆ. ಇಲ್ಲಾವಾದರೆ ನಂದು ಜೆಸಿಬಿ ಪಾರ್ಟಿ ರೆಡಿ ಇದೆ. ಮುಂದಿನ ಚುನಾವಣೆವಣೆಯೊಳಗೆ ಹೈಕಮಾಂಡ್ ಕರೆಯಲಿ. ಕರೆಯದಿದ್ದರೆ ನಂದು ಜೆಸಿಪಿ ಪಾರ್ಟಿ ರೆಡಿ ಇದೆ ಎಂದು ಹೇಳಿದರು.

  • ಯತೀಂದ್ರ ಅಹಿಂದ ನಾಯಕತ್ವಕ್ಕೆ ಹೇಳಿದ್ದು, ಸಿಎಂ ಸ್ಥಾನಕ್ಕೆ ಅಲ್ಲ: ಸತೀಶ್ ಜಾರಕಿಹೊಳಿ

    ಯತೀಂದ್ರ ಅಹಿಂದ ನಾಯಕತ್ವಕ್ಕೆ ಹೇಳಿದ್ದು, ಸಿಎಂ ಸ್ಥಾನಕ್ಕೆ ಅಲ್ಲ: ಸತೀಶ್ ಜಾರಕಿಹೊಳಿ

    – ದಲಿತ ಸಿಎಂ ವಿಚಾರ; ಅವಕಾಶ ಬರುವವರೆಗೆ ಕಾಯಬೇಕು, ಈಗ ಅವಕಾಶ ಇಲ್ಲ

    ಬೆಂಗಳೂರು: ಸಿಎಂ ಸ್ಥಾನದ ವಿಚಾರವೇ ಬೇರೆ, ಯತೀಂದ್ರ ಸಿದ್ದರಾಮಯ್ಯ (Yathindra Siddaramaiah) ಹೇಳಿರೋದೇ ಬೇರೆ. ಸಿಎಂ ಸ್ಥಾನವಾಗಲೀ, ಕೆಪಿಸಿಸಿ ಅಧ್ಯಕ್ಷ ಸ್ಥಾನದ ಬಗ್ಗೆಯಾಗಲಿ ಹೇಳಿಲ್ಲ ಎಂದು ಯತೀಂದ್ರ ಹೇಳಿಕೆಯನ್ನ ಸಚಿವ ಸತೀಶ್ ಜಾರಕಿಹೊಳಿ (Satish Jarkiholi)  ಮತ್ತೆ ಸಮರ್ಥಿಸಿಕೊಂಡಿದ್ದಾರೆ.

    ಈ ವಿಚಾರವಾಗಿ ಬೆಂಗಳೂರಲ್ಲಿ (Bengaluru) ಮಾತನಾಡಿದ ಅವರು, ನಾನು 30 ವರ್ಷದಿಂದ ಅಹಿಂದ ಭಾಗ. ಜೆಡಿಎಸ್‌ನಲ್ಲಿ ಇದ್ದಾಗಲೂ ಅಹಿಂದ ಭಾಗವೇ, ಈಗಲೂ ಅಹಿಂದ ಭಾಗವೇ. ಪರಮೇಶ್ವರ್, ಮಹದೇವಪ್ಪ ಎಲ್ಲರೂ ಅಹಿಂದ ಭಾಗವೇ. ಯತೀಂದ್ರ ಎಲ್ಲಿಯೂ ಸಿಎಂ ಸ್ಥಾನವಾಗಲೀ. ಅಧ್ಯಕ್ಷ ಸ್ಥಾನದ ಬಗ್ಗೆಯಾಗಲಿ ಕೇಳಿಲ್ಲ ಎಂದಿದ್ದಾರೆ.

     ಸಿಎಂ ಸ್ಥಾನದ ವಿಚಾರವೇ ಬೇರೆ, ಯತೀಂದ್ರ ಹೇಳಿರೋದೇ ಬೇರೆ. ನಾವೇನೂ ಸಿಎಂ ಸ್ಥಾನ ಕೇಳಿಲ್ಲ. ಯಾರು ಯತೀಂದ್ರ ಹೇಳಿಕೆ ವಿರೋಧಿಸುತ್ತಿದ್ದಾರೋ, ಅವರು ತಪ್ಪು ತಿಳಿದುಕೊಂಡಿದ್ದಾರೆ. ಅಹಿಂದ ಒಕ್ಕೂಟ, ಅಹಿಂದ ಹೋರಾಟ ಮೊದಲಿನಿಂದಲೂ ಇದೆ ಎಂದಿದ್ದಾರೆ. ಇದನ್ನೂ ಓದಿ: ಸಮಾಜದಲ್ಲಿ ದ್ವೇಷಪೂರಿತ ಭಾಷಣ ಮಾಡುವವರ ವಿರುದ್ಧ ಎಫ್‌ಐಆರ್: ಸಿದ್ದರಾಮಯ್ಯ

    ಅಹಿಂದ ನಾಯಕತ್ವಕ್ಕೂ, ಸಿಎಂ ಗಾದಿಗೂ ಯಾವುದೇ ಸಂಬಂಧ ಇಲ್ಲ. ಯತೀಂದ್ರ ಅವರು ಅಹಿಂದ ನಾಯಕತ್ವ ಮುನ್ನಡೆಸುತ್ತಾರೆ ಎಂಬ ಅರ್ಥದಲ್ಲಿ ಹೇಳಿದ್ದಾರೆ. ನೋಡೋಣ ಸನ್ನಿವೇಶ, ಸಂದರ್ಭ ನೋಡಿ ನಿರ್ಧಾರ ಮಾಡುತ್ತೇನೆ. ಸಿಎಂ ಗಾದಿಗೆ ನಾನೇನು ಈಗ ಕೇಳಿಲ್ಲ. ಮುಂದೆ ನೋಡೋಣ ಎಂದು ಹೇಳಿದ್ದಾರೆ.

    ಅವಕಾಶಕ್ಕಾಗಿ ಕಾಯಬೇಕು
    ದಲಿತ ಸಿಎಂ ಆಯ್ಕೆ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ ಅವರು, ಅವಕಾಶ ಬರುವವರೆಗೂ ಕಾಯಬೇಕು. ಈಗಂತೂ ಅವಕಾಶ ಇಲ್ಲ. ಸಮಯಕ್ಕಾಗಿ ಕಾಯಬೇಕು. ಅವಕಾಶ ಸೃಷ್ಟಿ ಆಗಬೇಕು ಅಲ್ಲಿ ತನಕ ಕಾಯಬೇಕು ಎಂದಿದ್ದಾರೆ. ಇದನ್ನೂ ಓದಿ: ಡಿಕೆಶಿ, JDS ಟ್ರಂಕ್ ವಾರ್ – ಹೆಚ್‌ಡಿಕೆ ಸಾಧನೆ ಪಟ್ಟಿ ಬಿಡುಗಡೆ ಮಾಡಿ ಟಾಂಗ್

    ನವೆಂಬರ್ ಕ್ರಾಂತಿ ಎಲ್ಲ ಆಗಲ್ಲ. ಇನ್ನೊಂದು 20 ರಿಂದ 30 ದಿನ ಇದೆ ಅಷ್ಟೇ. ಏನಾಗುತ್ತೆ ನೋಡೋಣ. ಕ್ರಾಂತಿ ಆಗೋದಕ್ಕೆ ಹೈಕಮಾಂಡ್ ಬಿಡಬೇಕಲ್ವ? ಹೈಕಮಾಂಡ್ ಹಾಗೆಲ್ಲ ಮಾಡೋಕೆ ಬಿಡಲ್ಲ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

    ಏಕನಾಥ್ ಶಿಂಧೆ ಒಬ್ಬರೇ, ಅಜಿತ್ ಪವಾರ್ ಕೂಡ ಒಬ್ಬರೇ, ಇನ್ನೊಬ್ಬ ಏಕನಾಥ್ ಶಿಂಧೆ, ಪವಾರ್ ಹುಟ್ಟಿಕೊಳ್ಳಲು ಸಾಧ್ಯವಿಲ್ಲ ಎಂದು ಡಿಕೆಶಿ ಬಣಕ್ಕೆ ಮಾರ್ಮಿಕವಾಗಿ ಟಕ್ಕರ್ ಕೊಟ್ಟಿದ್ದಾರೆ.

    2028ರ ಚುನಾವಣೆ ಆಗಬೇಕು. ಅವತ್ತು ಸ್ಥಿತಿಗತಿ ನೋಡಿಕೊಂಡು ನಿರ್ಧಾರ ಮಾಡೋಣ. ಪಕ್ಷದ ಹೈಕಮಾಂಡ್ ಯಾರನ್ನು ಏನು ಮಾಡಬೇಕು ನಿರ್ಧಾರ ಮಾಡ್ತಾರೆ. ಪಕ್ಷಕ್ಕೂ 70 ವರ್ಷದ ಅನುಭವ ಇದೆ. ಅವರು ಎಲ್ಲವನ್ನೂ ನಿರ್ಧಾರ ಮಾಡ್ತಾರೆ. ಡಿಕೆಶಿ ಡೆಡ್‌ಲೈನ್ ಬಗ್ಗೆ ನನಗೆ ಮಾಹಿತಿ ಇಲ್ಲ. ಪಾರ್ಟಿ ಕಚೇರಿಗಳನ್ನ ಎಲ್ಲಾ ಕಡೆ ಮಾಡಬೇಕು ಅಂತ ಅವರ ಕನಸಿದೆ ಎಂದಿದ್ದಾರೆ.

  • ಯತೀಂದ್ರ ಹೇಳಿಕೆ ನಾಯಕತ್ವ ಕುರಿತಲ್ಲ, ಸತೀಶ್ ಜಾರಕಿಹೊಳಿಗಿರುವ ಸೈದ್ಧಾಂತಿಕ ಬದ್ಧತೆ ಹಿನ್ನೆಲೆಯಲ್ಲಿ ಮಾತಾಡಿದ್ದಾರೆ – ಪರಮೇಶ್ವರ್

    ಯತೀಂದ್ರ ಹೇಳಿಕೆ ನಾಯಕತ್ವ ಕುರಿತಲ್ಲ, ಸತೀಶ್ ಜಾರಕಿಹೊಳಿಗಿರುವ ಸೈದ್ಧಾಂತಿಕ ಬದ್ಧತೆ ಹಿನ್ನೆಲೆಯಲ್ಲಿ ಮಾತಾಡಿದ್ದಾರೆ – ಪರಮೇಶ್ವರ್

    ಬೆಂಗಳೂರು: ಯತೀಂದ್ರ ಹೇಳಿಕೆ ನಾಯಕತ್ವ ಕುರಿತಲ್ಲ, ಸತೀಶ್ ಜಾರಕಿಹೊಳಿಗಿರುವ (Satish Jarkiholi) ಸೈದ್ಧಾಂತಿಕ ಬದ್ಧತೆ ಹಿನ್ನೆಲೆಯಲ್ಲಿ ಮಾತಾಡಿದ್ದಾರೆ ಎಂದು ಗೃಹ ಸಚಿವ ಪರಮೇಶ್ವರ್ (G Parameshwar) ತಿಳಿಸಿದ್ದಾರೆ.

    ಬೆಂಗಳೂರಿನಲ್ಲಿ ಮಾತನಾಡಿದ ಅವರು, ಮುಂದಿನ ನಾಯಕತ್ವ ದೃಷ್ಟಿಯಲ್ಲಿಟ್ಟುಕೊಂಡು ಸತೀಶ್ ಜಾರಕಿಹೊಳಿ ಅವರ ಹೆಸರನ್ನು ಯತೀಂದ್ರ ಹೇಳಿಲ್ಲ. ಸತೀಶ್ ಜಾರಕಿಹೊಳಿ ಸಿದ್ದರಾಮಯ್ಯನವರ ಉತ್ತರಾಧಿಕಾರಿ ಅಂತ ಯತ್ರೀಂದ್ರ ಹೇಳಿಲ್ಲ. ಸೈದ್ಧಾಂತಿಕ ಹಿನ್ನೆಲೆಯಲ್ಲಿ ಹೇಳಿದ್ದಾರೆ. ಸೈದ್ಧಾಂತಿಕವಾಗಿ ಸಿದ್ದರಾಮಯ್ಯ ದಾರಿಯಲ್ಲೇ ಸತೀಶ್ ಹೋಗ್ತಾರೆ ಅಂತ ಹೇಳಿದ್ದಾರೆ. ಅಹಿಂದ ಪ್ರಾರಂಭವಾದಾಗ ಸತೀಶ್ ಜಾರಕಿಹೊಳಿ ಬಹಳ ಮುಖ್ಯ ಪಾತ್ರ ವಹಿಸಿದ್ದರು. ಆ ಹಿನ್ನೆಲೆಯಲ್ಲಿ ಹೇಳಿದ್ದಾರೆ ಅದರಲ್ಲಿ ತಪ್ಪೇನಿದೆ? ಲೀಡರ್‌ಶಿಪ್ ದೃಷ್ಟಿಯಿಂದ ಮಾತನಾಡಿಲ್ಲ. ಅವರು ಪಕ್ಷದ ಬದ್ಧತೆ, ಸಮಾಜದ ಬದ್ಧತೆ ಬಗ್ಗೆ ಮಾತನಾಡಿದ್ದಾರೆ ಎಂದು ಸ್ಪಷ್ಟನೆ ಕೊಟ್ಟಿದ್ದಾರೆ.ಇದನ್ನೂ ಓದಿ: ಜೆಡಿಎಸ್ ರಾಜ್ಯಾಧ್ಯಕ್ಷರ ಬದಲಾವಣೆ ಚರ್ಚೆ ಸದ್ಯಕ್ಕೆ ಇಲ್ಲ: ಹೆಚ್‌ಡಿಕೆ

    ಇನ್ನು ಸಿಎಂ ಬದಲಾವಣೆ ಮಾಡಿದರೆ ನೀವೂ ರೇಸ್‌ನಲ್ಲಿದ್ದೀರಾ ಎಂಬ ಪ್ರಶ್ನೆಗೆ ಉತ್ತರಿಸಿದ ಅವರು, ನಮಲ್ಲಿ ತೀರ್ಮಾನ ಮಾಡುವುದು ಹೈಕಮಾಂಡ್. ಆ ಸಂದರ್ಭ ಬಂದಾಗ ಸಿಎಲ್‌ಪಿ ಕರೀತಾರೆ. ಎಂಎಲ್‌ಎಗಳ ಅಭಿಪ್ರಾಯ ತೆಗೆದುಕೊಳ್ಳುತ್ತಾರೆ. ಹೈಕಮಾಂಡ್‌ನಿಂದ ಬರುವ ವೀಕ್ಷಕರು ಹೈಕಮಾಂಡ್‌ಗೆ ಮಾಹಿತಿ ಕೊಡ್ತಾರೆ. ತೆಗೆದುಕೊಂಡ ತೀರ್ಮಾನದ ಬಗ್ಗೆ ಆ ಸಂದರ್ಭದಲ್ಲಿ ಅನೌನ್ಸ್ ಮಾಡ್ತಾರೆ. ಇದು ನಮ್ಮಲ್ಲಿರುವ ಪದ್ಧತಿ ಅದನ್ನ ಶಾರ್ಟ್ಕಟ್ ಮಾಡೋದು ನನಗೆ ಗೊತ್ತಿಲ್ಲ ಎಂದು ಹೇಳಿದ್ದಾರೆ.

  • ನಮ್ದೇನಿದ್ದರೂ 2028ಕ್ಕೆ ಸಿಎಂ ಕ್ಲೈಮ್‌, ಯತೀಂದ್ರ ಹೇಳಿಕೆ ಅದು ವೈಯಕ್ತಿಕ: ಸತೀಶ್‌ ಜಾರಕಿಹೊಳಿ

    ನಮ್ದೇನಿದ್ದರೂ 2028ಕ್ಕೆ ಸಿಎಂ ಕ್ಲೈಮ್‌, ಯತೀಂದ್ರ ಹೇಳಿಕೆ ಅದು ವೈಯಕ್ತಿಕ: ಸತೀಶ್‌ ಜಾರಕಿಹೊಳಿ

    ಬೆಳಗಾವಿ: ನಮ್ಮದು ಏನೇ ಇದ್ದರೂ 2028ಕ್ಕೆ ಸಿಎಂ ಸ್ಥಾನದ ಕ್ಲೈಮ್‌ ಮಾಡುತ್ತೇವೆ. ಯತೀಂದ್ರ ಹೇಳಿಕೆ ಅದು ಅವರ ವೈಯಕ್ತಿಕ ಅಭಿಪ್ರಾಯ ಎಂದು ಲೋಕೋಪಯೋಗಿ ಇಲಾಖೆ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಸತೀಶ್‌ ಜಾರಕಿಹೊಳಿ (Satish Jarkiholi) ಹೇಳಿದ್ದಾರೆ.

    ಸಿದ್ದರಾಮಯ್ಯ ಪುತ್ರ ಯತೀಂದ್ರ ಹೇಳಿಕೆಗೆ ಸಂಬಂಧಿಸಿದಂತೆ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಅವರು, ಎಲ್ಲರನ್ನು ಜೊತೆಗೆ ಕರೆದುಕೊಂಡು ಹೋಗುವ ಕೆಲಸ ಮಾಡುತ್ತೇವೆ. ಏನೇ ಆಗಲಿ ಅದನ್ನು ಪಕ್ಷ ನಿರ್ಧಾರ ಮಾಡಲಿದೆ ಎಂದು ತಿಳಿಸಿದರು.  ಇದನ್ನೂ ಓದಿ:  ಯಾವುದೇ ಕ್ಷಣದಲ್ಲಿ ಹೇಮಾವತಿ ಡ್ಯಾಂನಿಂದ ನೀರು ಹೊರಕ್ಕೆ – ಸುರಕ್ಷಿತ ಸ್ಥಳಕ್ಕೆ ತೆರಳುವಂತೆ ಸೂಚನೆ

     

    ಯತಿಂದ್ರ (Yathindra Siddaramaiah) ಅವರು ಅವರ ವೈಯಕ್ತಿಕ ಹೇಳಿಕೆ ನೀಡಿದ್ದಾರೆ. ಅಂತಿಮವಾಗಿ ಯಾರು ನಾಯಕ ಎನ್ನುವುದನ್ನು ಪಕ್ಷದ ಶಾಸಕರು ನಿರ್ಧಾರ ಮಾಡುತ್ತಾರೆ. ಅಹಿಂದ ನಾಯಕತ್ವ ಇಲ್ಲದೇ ಪಕ್ಷ ಸಂಘಟನೆ ಮಾಡಲು ಸಾಧ್ಯವಿಲ್ಲ ಎಂದು ಹೇಳಿದರು. ಇದನ್ನೂ ಓದಿ:  ಇಂದಿನಿಂದ ಸರ್ಕಾರಿ ಶಾಲೆಗಳು ಪುನಾರಂಭ

    ಎಲ್ಲವನ್ನೂ ಕಾಕತಿಯಲ್ಲಿ ನಿಂತು ನಿರ್ಧಾರ ಮಾಡಲು ಸಾಧ್ಯವಿಲ್ಲ. ಡಿಸೆಂಬರ್‌ ಕ್ರಾಂತಿಯ ಬಗ್ಗೆ ನಮಗೆ ಗೊತ್ತೇ ಇಲ್ಲ ಎಂದು ತಿಳಿಸಿದರು.  ಇದನ್ನೂ ಓದಿ:  ಸಿದ್ದರಾಮಯ್ಯ ನಂತರ ಸತೀಶ್ ಜಾರಕಿಹೊಳಿಗೆ ನಾಯಕತ್ವ- ಡಿಕೆಶಿಗೆ ಯತೀಂದ್ರ ಚೆಕ್‌ಮೇಟ್

    ಸಿದ್ದರಾಮಯ್ಯನವರ ನಂತರ ಪಕ್ಷವನ್ನು ಮುನ್ನಡೆಸುವ ವಿಚಾರಕ್ಕೆ, ಎಲ್ಲವನ್ನೂ ಕಾದು ನೋಡೋಣ ಎಂದು ಜಾರಕಿಹೊಳಿ ಉತ್ತರಿಸಿದರು.

  • ಮುಂದಿನ ಸಿಎಂ ವಿಚಾರದಲ್ಲಿ ನನ್ನ ಬಗ್ಗೆ ಚರ್ಚೆ ಬೇಡ, ಯತೀಂದ್ರ ಹೇಳಿಕೆ ಬಗ್ಗೆ ಅವರನ್ನೇ ಕೇಳಿ: ಡಿಕೆಶಿ ತಿರುಗೇಟು 

    ಮುಂದಿನ ಸಿಎಂ ವಿಚಾರದಲ್ಲಿ ನನ್ನ ಬಗ್ಗೆ ಚರ್ಚೆ ಬೇಡ, ಯತೀಂದ್ರ ಹೇಳಿಕೆ ಬಗ್ಗೆ ಅವರನ್ನೇ ಕೇಳಿ: ಡಿಕೆಶಿ ತಿರುಗೇಟು 

    ರಾಯಚೂರು: ರಾಜ್ಯದಲ್ಲಿ ಮುಂದಿನ ಸಿಎಂ ಯಾರು ಅನ್ನೋ ಚರ್ಚೆ ವಿಚಾರದಲ್ಲಿ ನನ್ನ ಬಗ್ಗೆ ಯಾರೂ ಚರ್ಚೆ ಮಾಡುವ ಅವಶ್ಯಕತೆಯಿಲ್ಲ. ಪಾರ್ಟಿ ಏನು ಹೇಳುತ್ತದೆಯೋ ಅದರಂತೆ ನಾವು ಒಟ್ಟಿಗೆ ಕೆಲಸ ಮಾಡಿಕೊಂಡು ಹೋಗ್ತಿವಿ ಅಂತ ನಾನು ಸಿದ್ದರಾಮಯ್ಯ (Siddaramaiah) ಹೇಳಿದ್ದೇವೆ. ಅದಕ್ಕೆ ನಾನು ಬದ್ದನಾಗಿದ್ದೇನೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ (D.K Shivakumar) ಹೇಳಿದ್ದಾರೆ.

    ಮಂತ್ರಾಲಯದಲ್ಲಿ ದೇವಾಲಯಕ್ಕೆ ಭೇಟಿ ಬಳಿಕ ಮಾಧಯಮಗಳ ಜೊತೆ ಅವರು ಮಾತನಾಡಿದರು. ಈ ವೇಳೆ, ಮುಂದಿನ ಮುಖ್ಯಮಂತ್ರಿ ಕುರಿತು ಯತೀಂದ್ರ ಸಿದ್ದರಾಮಯ್ಯ (Yathindra Siddaramaiah) ಹೇಳಿಕೆಗೆ ಅವರು ಪ್ರತಿಕ್ರಿಯಿಸಿದರು. ಅದರ ಬಗ್ಗೆ ಅವರು ಏನು ಹೇಳಿದ್ದಾರೆ ನನಗೆ ಗೊತ್ತಿಲ್ಲ. ಈ ಬಗ್ಗೆ ಅವರನ್ನೇ ಕೇಳಿ. ಅದನ್ನ ನನ್ನ ಕೇಳಿದ್ರೆ ನಾನು ಏನು ಹೇಳಲಿ ಎಂದು ಪ್ರತಿಕ್ರಿಯಿಸಲು ನಿರಾಕರಿಸಿದ್ದಾರೆ . ಇದನ್ನೂ ಓದಿ: ಡಿಕೆಶಿ ಟೆಂಪಲ್ ರನ್ – ರಾಯರ ಅನುಗ್ರಹಕ್ಕಾಗಿ ತುಲಾಭಾರ ನೆರವೇರಿಸಿದ ಡಿಸಿಎಂ

    ನನಗೆ ಪಕ್ಷ ಎಲ್ಲಾ ಕೊಟ್ಟಿದೆ. ಪಕ್ಷದ ಅಧ್ಯಕ್ಷನಾಗಿದ್ದೇನೆ. ಡಿಸಿಎಂ ಆಗಿ ರಾಜ್ಯದಲ್ಲಿ ಇತಿಹಾಸ ಬರೆಯುತ್ತಿದ್ದೇನೆ. ದೊಡ್ಡ ದೊಡ್ಡ ಕೆಲಸ ನಿಭಾಯಿಸಿದ್ದೇನೆ. ನೀರಾವರಿ ಕ್ಷೇತ್ರದಲ್ಲಿ ಇತಿಹಾಸ ಬರಿತಿದಿನಿ. ಮಹಾದಾಯಿ, ಮೇಕೆದಾಟು ಹೋರಾಟ ಮಾಡಿದಿನಿ. ಪಕ್ಷ ನನಗೆ ಏನೇನು ಕೊಡಬೇಕು ಎಲ್ಲಾ ಕೊಟ್ಟಿದೆ ಎಂದಿದ್ದಾರೆ. ಇದನ್ನೂ ಓದಿ: ಮಹಾಘಟಬಂಧನ್‌ನಲ್ಲಿ ಮುಂದುವರಿದ ಬಿಕ್ಕಟ್ಟು – 24 ಗಂಟೆಯಲ್ಲಿ ಸ್ಪಷ್ಟನೆ ಸಿಗುತ್ತೆ: ತೇಜಸ್ವಿ ಯಾದವ್

    ಬೆಳಗಾವಿಯ ರಾಯಬಾಗ ತಾಲೂಕಿನ ಕಪಲಗುದ್ದಿ ಗ್ರಾಮದಲ್ಲಿ ಶ್ರೀ ಸಂತ ಕನಕದಾಸರ ಮೂರ್ತಿ ಲೋಕಾರ್ಪಣೆ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದ ಸಿಎಂ ಸಿದ್ದರಾಮಯ್ಯ ಪುತ್ರ ಯತಿಂದ್ರ ಅವರು ಸಚಿವ ಸತೀಶ ಜಾರಕಿಹೊಳಿಯವರೇ ಮುಂದಿನ ಮುಖ್ಯಮಂತ್ರಿ ಎನ್ನುವ ಮುನ್ಸೂಚನೆಯನ್ನ ನೀಡಿದ್ದರು.

    ನಮ್ಮ ತಂದೆಯವರು ತಮ್ಮ ರಾಜಕೀಯ ಕೊನೆಗಾಲದಲ್ಲಿದ್ದಾರೆ‌. ವೈಚಾರಿಕವಾಗಿ ಪ್ರಗತಿಪರ ತತ್ವ ಆಲೋಚನೆ ಇರುವ ನಾಯಕರು ಬೇಕು. ಸತೀಶ್‌ ಜಾರಕಿಹೊಳಿಯವರು (SatishJar kiholi) ಈ ಜವಾಬ್ದಾರಿ ನಿಭಾಯಿಸುತ್ತಾರೆ. ಜಾರಕಿಹೊಳಿ ಅವರು ಮಾದರಿಯಾಗಿ ನಮ್ಮನ್ನು ಮುನ್ನಡೆಸುತ್ತಾರೆ ಎಂದಿದ್ದರು.

  • ಮುಂದಿನ ಸಿಎಂ ಸತೀಶಣ್ಣನೇ ಆಗ್ಲಿ – ಜಾರಕಿಹೊಳಿ ಪರ ಬ್ಯಾಟ್ ಬೀಸಿದ ರಾಜು ಗೌಡ

    ಮುಂದಿನ ಸಿಎಂ ಸತೀಶಣ್ಣನೇ ಆಗ್ಲಿ – ಜಾರಕಿಹೊಳಿ ಪರ ಬ್ಯಾಟ್ ಬೀಸಿದ ರಾಜು ಗೌಡ

    ಬಾಗಲಕೋಟೆ: ಮುಂದಿನ ಸಿಎಂ ಸತೀಶಣ್ಣನೇ  (Satish Jarkiholi) ಆಗ್ಲಿ ಎಂದು ಬಿಜೆಪಿ (BJP) ಮಾಜಿ ಸಚಿವ ರಾಜು ಗೌಡ (Raju Gowda) ಸಚಿವ ಸತೀಶ್ ಜಾರಕಿಹೊಳಿ ಪರ ಬ್ಯಾಟ್ ಬೀಸಿದ್ದಾರೆ.

    ಮುಧೋಳ ನಗರದಲ್ಲಿ ವೀರ ಜಡಗಣ್ಣ ಬಾಲಣ್ಣ ಅವರ ಕಂಚಿನ ಪುತ್ಥಳಿ ಅನಾವರಣ ಮಾಡಿ ಅವರು ಮಾತನಾಡಿದರು. ಈ ವೇಳೆ, ಸ್ವತಂತ್ರ ವೀರ ಯೋಧ ಜಡಗಣ್ಣ ಬಾಲಣ್ಣಗೆ ಜಾರಕಿಹೊಳಿಯವರನ್ನು ಹೋಲಿಸಿ, ಹಾಡಿ ಹೊಗಳಿದ್ದಾರೆ. ನಮ್ಮ ಸಮಾಜಕ್ಕೆ ಸತೀಶಣ್ಣ (ಸತೀಶ್ ಜಾರಕಿಹೊಳಿ) ಜಡಗಣ್ಣ ಬಾಲಣ್ಣ ಇದ್ದಂತೆ. ಮಾತು ಕಡಿಮೆ ಆದ್ರೆ ಪ್ಲ್ಯಾನ್ ಹಾಕಿದ್ರೆ ಕರೆಕ್ಟ್ ಏಟು ಹಾಕ್ತಾನೆ ನಮ್ಮಣ್ಣ. ವೀರ ಯೋಧ ಜಡಗಣ್ಣ ಬಾಲಣ್ಣ ಅವ್ರು ಬ್ರಿಟೀಷರ ಎದುರು ಶಸ್ತ್ರತ್ಯಾಗ ಮಾಡಿರಲಿಲ್ಲ. ನೀನು ಶಸ್ತ್ರ ತ್ಯಾಗ ಮಾಡಬೇಡ ಎಂದಿದ್ದಾರೆ. ಇದನ್ನೂ ಓದಿ: ಪಕ್ಷ‌ ನಿಷ್ಠೆಗೆ ಫಲ ಸಿಗಲಿದೆ ತಾಳ್ಮೆಯಿಂದಿರಿ – ಡಿಕೆಶಿಗೆ ಖರ್ಗೆ ಅಭಯ, 1 ಗಂಟೆಗೂ ಹೆಚ್ಚುಕಾಲ ಮಾತುಕತೆ

    ಈ ಬಾರಿ ನನಗೆ ಮುಖ್ಯಮಂತ್ರಿ ಆಸೆ ಇಲ್ಲ, ಮುಂದಿನ ಸಾರಿ ಆಗ್ತೇನೆ ಎಂದು ಹೇಳುತ್ತಿದ್ದೀಯ. ಅದೆಲ್ಲ ಬೇಡ ಇದೇ ಡಿಸೆಂಬರ್‍ನಲ್ಲಿ ಮುಖ್ಯಮಂತ್ರಿ ಆಗು. ನಿಮ್ಮನ್ನು ಮುಖ್ಯಮಂತ್ರಿ ಆಗಿ ನೋಡಬೇಕೆಂಬ ಆಸೆ ನಮ್ಮದು. ನಾವು ನಿಮ್ಮ ರಕ್ತವನ್ನೇ ಹಂಚಕೊಂಡು ಹುಟ್ಟೀವಿ, ನಾವೇನು ಹಗುರಿಲ್ಲ ಸುರಪುರ ಬ್ಯಾಡ್ರು. ಹಿಂದೆ ಬ್ರಿಟೀಷರನ್ನೂ ಬಿಟ್ಟಿಲ್ಲ, ಔರಂಗಜೇಬನನ್ನೂ ಬಿಟ್ಟಿಲ್ಲ ಎಂದಿದ್ದಾರೆ.

    2028ಕ್ಕೆ (ಕಾಂಗ್ರೆಸ್) ನೀವು ಬರಲ್ಲ, ನಾವು (ಬಿಜೆಪಿ) ಬರುತ್ತೇವೆ, ನಿಮಗೆ ಬಿಟ್ಟುಕೊಡಲ್ಲ. ಈಗ ಆದ್ರೆ ನಮ್ಮ ಆಸೆ ಈಡೇರುತ್ತೆ. ನಿಮ್ಮ ಆಸೆನೂ ಈಡೇರುತ್ತೆ ಎಂದಿದ್ದಾರೆ. ಇದನ್ನೂ ಓದಿ: 24 ಗಂಟೆಯಲ್ಲಿ 300 ನಕ್ಸಲರ ಶರಣಾಗತಿ – ಭಯೋತ್ಪಾದನೆ ಮುಕ್ತ ಪ್ರದೇಶಗಳಲ್ಲಿ ಈ ಬಾರಿ ಶಾಂತಿಯ ದೀಪಾವಳಿ: ಮೋದಿ

  • ಬೆಳಗಾವಿ | ಸಹಕಾರ ಕ್ಷೇತ್ರಕ್ಕೂ ಕಾಲಿಟ್ಟ ರೆಸಾರ್ಟ್ ರಾಜಕೀಯ

    ಬೆಳಗಾವಿ | ಸಹಕಾರ ಕ್ಷೇತ್ರಕ್ಕೂ ಕಾಲಿಟ್ಟ ರೆಸಾರ್ಟ್ ರಾಜಕೀಯ

    ಬೆಳಗಾವಿ: ಸಹಕಾರ ಕ್ಷೇತ್ರಕ್ಕೂ ಸಹ ರೆಸಾರ್ಟ್ ರಾಜಕೀಯ ಕಾಲಿಟ್ಟಿದೆ. ಇಷ್ಟು ದಿನಗಳ ಕಾಲ ಶಾಸಕರು ರಾಜಕಾರಣದಲ್ಲಿ ರೆಸಾರ್ಟ್ ರಾಜಕೀಯ (Resort Politics) ಮಾಡ್ತಿದ್ರು. ಆದರೆ ಬೆಳಗಾವಿ (Belagavi) ಡಿಸಿಸಿ ಬ್ಯಾಂಕ್ ವಿಚಾರದಲ್ಲಿ ಸದ್ಯ ಮತದಾನದ ಹಕ್ಕು ಪಡೆದ ಪಿಕೆಪಿಎಸ್ ನಿರ್ದೇಶಕರಿಗೆ ಟೂರ್ ಭ್ಯಾಗ್ಯ ಒದಗಿ ಬಂದಿದೆ.

    ಗೋವಾ, ಮಹಾರಾಷ್ಟ್ರ, ಉತ್ತರ ಭಾರತದ ಧಾರ್ಮಿಕ ಕ್ಷೇತ್ರಗಳಿಗೆ ಪಿಕೆಪಿಎಸ್ ಸದಸ್ಯರು ಟೂರ್ ಹೊರಟಿದ್ದಾರೆ. ಡಿಸಿಸಿ ಬ್ಯಾಂಕ್‌ನ 16 ಸ್ಥಾನಗಳ ಪೈಕಿ 9 ನಿರ್ದೇಶಕರು ಈಗಾಗಲೇ ಅವಿರೋಧ ಆಯ್ಕೆಯಾಗಿದ್ದು, ಇನ್ನೂ 7 ಸ್ಥಾನಗಳಿಗೆ ಚುನಾವಣೆ ನಿಗದಿಯಾಗಿದೆ. ನಿಪ್ಪಾಣಿ, ಹುಕ್ಕೇರಿ, ಅಥಣಿ, ರಾಯಭಾಗ, ರಾಮದುರ್ಗ, ಕಿತ್ತೂರು, ಬೈಲಹೊಂಗಲದಲ್ಲಿ ಚುನಾವಣೆ ನಡೆಯಲಿದೆ. ಇದನ್ನೂ ಓದಿ: ಚಿತ್ರದುರ್ಗದಲ್ಲಿ ಭ್ರಷ್ಟ ಅಧಿಕಾರಿಗೆ ಬೆಳ್ಳಂಬೆಳಗ್ಗೆ ಶಾಕ್; ಕೃಷಿ ಇಲಾಖೆ ಎಡಿ ಮನೆ ಮೇಲೆ ಲೋಕಾಯುಕ್ತ ದಾಳಿ

    ಜಾರಕಿಹೊಳಿ ಹಾಗೂ ಕತ್ತಿ ಸವದಿ ಬಣಗಳ ಮಧ್ಯೆ ಡಿಸಿಸಿ ಬ್ಯಾಂಕ್ ತೆಕ್ಕೆಗೆ ಪಡೆಯಲು ಜಿದ್ದಾಜಿದ್ದಿಯೂ ನಡೆದಿದೆ. ಅಡ್ಡ ಮತದಾನ, ಮತದಾರರ ಸೆಳೆಯುವ ಭೀತಿಯ ಕಾರಣ ಮತದಾರರನ್ನು ಬೇರೆಡೆ ಸ್ಥಳಾಂತರ ಮಾಡಲಾಗಿದೆ. ಅಕ್ಟೋಬರ್ 19ಕ್ಕೆ ನಡೆಯುವ ಚುನಾವಣೆಗೆ ಮತದಾನ ಮಾಡಲು ನೇರವಾಗಿ ಮತದಾರರು ಬರಲಿದ್ದಾರೆ. ಹೈಟೆಕ್ ಟಿಟಿಯಲ್ಲಿ ಬೇರೆ ಬೇರೆ ರಾಜ್ಯಗಳ ರೆಸಾರ್ಟ್ಗಳಿಗೆ ಮತದಾರರನ್ನು ಶಿಫ್ಟ್ ಮಾಡಲಾಗಿದೆ. ಮತದಾರರು ಭದ್ರತಾ ಸಿಬ್ಬಂದಿ ಕಣ್ಗಾವಲಿನಲ್ಲಿಯೇ ಇರಲಿದ್ದು, ರೆಸಾರ್ಟ್ಗೆ ತೆರಳುವ ಮತದಾರರಿಗೆ ಮೊಬೈಲ್ ಬಳಕೆಗೆ ಅವಕಾಶ ನೀಡಿಲ್ಲ ಎಂದು ತಿಳಿದು ಬಂದಿದೆ.

  • DCC Bank Election| ಮೇಲೆ ಕುಳಿತವನು ಆಟ ಆಡಿಸ್ತಾನೆ, ನಾವೆಲ್ಲ ಗೊಂಬೆಗಳು: ಲಕ್ಷ್ಮಣ ಸವದಿ

    DCC Bank Election| ಮೇಲೆ ಕುಳಿತವನು ಆಟ ಆಡಿಸ್ತಾನೆ, ನಾವೆಲ್ಲ ಗೊಂಬೆಗಳು: ಲಕ್ಷ್ಮಣ ಸವದಿ

    – ರೋಚಕತೆ ಪಡೆದ ಡಿಸಿಸಿ ಬ್ಯಾಂಕ್‌ ಚುನಾವಣೆ
    – ನಾಮಪತ್ರ ಸಲ್ಲಿಕೆ ಮಾಡಿದ ಸವದಿ, ರಾಜು ಕಾಗೆ
    – ಮೊದಲ ಬಾರಿಗೆ ಡಿಸಿಸಿ ಚುನಾವಣೆಗೆ ಕಾಗೆ ಎಂಟ್ರಿ

    ಬೆಳಗಾವಿ: ನಮ್ಮ ಸಮಿತಿ ಸದಸ್ಯರ ಸಂಖ್ಯೆ ಒಂಬತ್ತಾಗುತ್ತೋ? ಹನ್ನೊಂದಾಗುತ್ತೋ? ಹದಿನೈದಾಗುತ್ತೋ ನೋಡೋಣ. ಮೇಲೆ ಕುಳಿತವನು ಆಟ ಆಡಿಸ್ತಾನೆ. ನಾವೆಲ್ಲ ಗೊಂಬೆಗಳು, ಹೇಳಿದಂತೆ ಆಟ ಆಡುತ್ತೇವೆ ಎಂದು ಮಾಜಿ ಡಿಸಿಎಂ, ಅಥಣಿ ಕಾಂಗ್ರೆಸ್‌ ಶಾಸಕ ಲಕ್ಷ್ಮಣ ಸವದಿ (Laxman Savadi) ಹೇಳಿದ್ದಾರೆ.

    ಡಿಸಿಸಿ ಬ್ಯಾಂಕ್ ಚುನಾವಣೆ (DCC Bank Election) ದಿನದಿಂದ ದಿನಕ್ಕೂ ರೋಚಕತೆ ಪಡೆಯುತ್ತಿದೆ. ಬೆಳಗಾವಿ ಡಿಸಿಸಿ ಬ್ಯಾಂಕ್ ಚುನಾವಣೆ ಅಖಾಡದಲ್ಲಿ ಈಗಾಗಲೇ ಕತ್ತಿ ಜಾರಕಿಹೊಳಿ, ಹಾಗೂ ಹುಕ್ಕೇರಿ, ಜೊಲ್ಲೆ ಮನೆತನಗಳಿದ್ದು ಈಗ ಶಾಸಕರಾದ ಲಕ್ಷ್ಮಣ ಸವದಿ, ರಾಜು ಕಾಗೆ (Raju Kage) ಶಕ್ತಿ ಪ್ರದರ್ಶನ ಮಾಡಿದ್ದಾರೆ.

    ಅಥಣಿ ತಾಲೂಕಿನಿಂದ ನಿರ್ದೇಶಕ ಸ್ಥಾನಕ್ಕೆ ಮಾಜಿ ಡಿಸಿಎಂ ಲಕ್ಷ್ಮಣ ಸವದಿ ಹಾಗೂ ಕಾಗವಾಡ ತಾಲೂಕಿನಿಂದ ನಿರ್ದೇಶಕ ಸ್ಥಾನಕ್ಕೆ ‌ರಾಜು ಕಾಗೆ ಸ್ಪರ್ಧೆ ಮಾಡುತ್ತಿದ್ದಾರೆ. ಇಂದು ಇಬ್ಬರೂ ಏಕಾಕಾಲಕ್ಕೆ ಆಗಮಿಸಿ ಬೃಹತ್ ಮೆರವಣಿಗೆ ಮೂಲಕ ನಾಮಪತ್ರ ಸಲ್ಲಿಕೆ ಮಾಡಿದ್ದಾರೆ. ಇದನ್ನೂ ಓದಿ:  ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ – ವಾಲಿಬಾಲ್‌ ಕೋಚ್‌ ವಿರುದ್ಧ ಲೈಂಗಿಕ ಕಿರುಕುಳ ಆರೋಪ

    ನಾವೂ ಯಾರ ಬಣದಲ್ಲೂ ಇಲ್ಲ ಎನ್ನುವ ಮೂಲಕ ಜಾರಕಿಹೊಳಿ ಸಹೋದರರಿಗೆ (Jarkiholi Brothers) ಶಾಸಕ ಕಾಗೆ ಶಾಕ್ ಕೊಟ್ಟಿದ್ದಾರೆ. ಮೊದಲ ಬಾರಿಗೆ ಡಿಸಿಸಿ ಬ್ಯಾಂಕ್ ಅಖಾಡಕ್ಕೆ ಶಾಸಕ ರಾಜು ಕಾಗೆ ಎಂಟ್ರಿಯಾಗುತ್ತಿದ್ದು ರಾಜು ಕಾಗೆಯವರನ್ನು ಗೆಲ್ಲಿಸುವ ಹೊಣೆ ಅಥಣಿ ಶಾಸಕ ಲಕ್ಷ್ಮಣ ಸವದಿ ಹೊತ್ತಿದ್ದಾರೆ. ಕಾಗೆ ವಿರುದ್ಧ ಮಾಜಿ ಸಚಿವ ಶ್ರೀಮಂತ ಪಾಟೀಲ ಪುತ್ರ ಕಣಕ್ಕಿಳಿದಿದ್ದು ಲಕ್ಷ್ಮಣ ಸವದಿ ವಿರುದ್ಧ ಮಾಜಿ ಶಾಸಕ ಮಹೇಶ ಕುಮಟಳ್ಳಿ ಸ್ಪರ್ಧೆ ಮಾಡುತ್ತಿದ್ದಾರೆ.

    ಈ ವೇಳೆ ಮಾತನಾಡಿದ ಲಕ್ಷ್ಮಣ ಸವದಿ, ನಾನು ಹಾಗೂ ರಾಜು ಕಾಗೆ ಒಂದೇ ಸಮಿತಿಯಲ್ಲಿದ್ದು ನಮ್ಮ ಸಮಿತಿಗೆ ಬರುವ ಎಲ್ಲರಿಗೂ ಸ್ವಾಗತ ಮಾಡುತ್ತೇವೆ. ಹೋಗುವವರಿಗೂ ಧನ್ಯವಾದ ಹೇಳಿ ಕಳಿಸುತ್ತೇವೆ ಎಂದರು. ಇದನ್ನೂ ಓದಿ: ಕುಕ್ಕರ್ ಬ್ರ್ಯಾಂಡ್ ಪ್ರೆಸ್ಟೀಜ್ ಸಂಸ್ಥಾಪಕ ಟಿಟಿ ಜಗನ್ನಾಥನ್ ನಿಧನ

    ನಮ್ಮ ಜೊತೆ ಯಾರೂ ಇಲ್ಲ ಎನ್ನುತ್ತೀರಿ. ಆದರೆ ಬಣ ಮಾಡುತ್ತಿರುವುದು ಯಾಕೆ ಎಂಬ ಪ್ರಶ್ನೆಗೆ, ಸಸಿ ನೆಡುವ ವೇಳೆ ಒಂದೇ ಇರುತ್ತೆ. ಬಳಿಕ ಎಲೆ, ಕಾಯಿ, ಹೂವು ಎಲ್ಲವೂ ಬರುತ್ತದೆ ಎನ್ನುವ ಮೂಲಕ ಮಾರ್ಮಿಕವಾಗಿ ತಮ್ಮ ಗುಂಪಿನ ಸದಸ್ಯರ ಸಂಖ್ಯೆ ಹೆಚ್ಚಾಗಲಿದೆ ಎಂಬ ಸುಳಿವು ನೀಡಿದರು.

  • ನಾವು ಮಾಡಿರೋದು ಪೊಲಿಟಿಕಲ್ ಮೀಟಿಂಗ್ ಅಲ್ಲ: ಪರಮೇಶ್ವರ್

    ನಾವು ಮಾಡಿರೋದು ಪೊಲಿಟಿಕಲ್ ಮೀಟಿಂಗ್ ಅಲ್ಲ: ಪರಮೇಶ್ವರ್

    – ಸಿಎಂ ಡಿನ್ನರ್ ಪಾರ್ಟಿ ಅಜೆಂಡಾ ಊಟ ಅಷ್ಟೆ, ನವೆಂಬರ್ ಕ್ರಾಂತಿ ಯಾವುದು ಇಲ್ಲ

    ಬೆಂಗಳೂರು: ನಾನು, ಸತೀಶ್ ಜಾರಕಿಹೊಳಿ, ಮಹದೇವಪ್ಪ ಯಾವುದೇ ಪೊಲಿಟಿಕಲ್ ಮೀಟಿಂಗ್ ಮಾಡಿಲ್ಲ ಎಂದು ಗೃಹಸಚಿವ ಪರಮೇಶ್ವರ್ (Parameshwar) ಸ್ಪಷ್ಟಪಡಿಸಿದ್ದಾರೆ.

    ಗುರುವಾರ ಮಹದೇವಪ್ಪ, ಪರಮೇಶ್ವರ್, ಸತೀಶ್ ಜಾರಕಿಹೊಳಿ (Satish Jarkiholi) ಅಪಾರ್ಟ್ಮೆಂಟ್‌ನಲ್ಲಿ ಸಭೆ ಮಾಡಿದ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ ಅವರು, ಆ ಸಭೆಯಲ್ಲಿ ಯಾವುದೇ ವಿಶೇಷ ಇಲ್ಲ. ಮಾಧ್ಯಮಗಳಿಗೆ ಯಾವ ರೀತಿ ಕಣ್ಣಿಗೆ ಕಾಣಿಸುತ್ತೆ ಅಂತ ಗೊತ್ತಿಲ್ಲ. ಹಾಗೆ ಸಭೆ ಮಾಡಿರೋದು ಮೊದಲ ಬಾರಿ ಅಲ್ಲ. ಅನೇಕ ಬಾರಿ ನಾನು ಜಾರಕಿಹೊಳಿ, ಮಹದೇವಪ್ಪ ಸಭೆ ಮಾಡಿದ್ದೇವೆ. ನಾವೆಲ್ಲ ಸ್ನೇಹಿತರು, ಕೆಲವು ವಿಷಯಗಳು ಚರ್ಚೆ ಮಾಡಬೇಕು ಅಂದಾಗ ಭೇಟಿ ಮಾಡುತ್ತೇವೆ. ಅದು ಪೊಲಿಟಿಕಲ್ ಮೀಟಿಂಗ್ ಅಲ್ಲ ಎಂದು ಸ್ಪಷ್ಟನೆ ನೀಡಿದ್ದಾರೆ. ಇದನ್ನೂ ಓದಿ: ಸಂಪುಟ ಪುನರ್‌ಚನೆ ವದಂತಿ ಬೆನ್ನಲ್ಲೇ ಮೂವರು ಸಚಿವರಿಂದ ಬ್ರೇಕ್‌ಫಾಸ್ಟ್‌ ಮೀಟಿಂಗ್‌

    ರಾಜಣ್ಣ ಮಂತ್ರಿ ಅಲ್ಲ ಅದಕ್ಕೆ ಬಂದಿರಲಿಲ್ಲ. ನಿನ್ನೆ ಕ್ಯಾಬಿನೆಟ್ ಸಭೆ ಇತ್ತು. ಕೆಲವು ವಿಷಯ ಸೂಕ್ಷ್ಮ ಇತ್ತು ಹಾಗೇ ಮಾತಾಡಿಕೊಂಡು, ತಿಂಡಿ ತಿಂದು ಹೋಗೋಣ ಅಂತ ಸಭೆ ಮಾಡಿದ್ವಿ. ಅದೊಂದು ಸಾಮಾನ್ಯ ಮೀಟಿಂಗ್ ಅಷ್ಟೇ. ಈ ಹಿಂದೆ ಬೇಕಾದಷ್ಟು ಬಾರಿ ನಾವು ಸಭೆ ಮಾಡಿದ್ದೇವೆ. ಇದೇನು ಮೊದಲ ಸಭೆ ಅಲ್ಲ. ಸತೀಶ್ ಜಾರಕಿಹೊಳಿ, ಮಹದೇವಪ್ಪ ಮನೆಯಲ್ಲಿ ಅನೇಕ ಬಾರಿ ಮೀಟ್ ಮಾಡಿದ್ದೇವೆ. ಹೊಸದೇನು ಅಲ್ಲ ಎಂದಿದ್ದಾರೆ.

    ದಲಿತ ನಾಯಕರ ಬೇಡಿಕೆ ಕಾಂಗ್ರೆಸ್‌ನಲ್ಲಿ ಈಡೇರುತ್ತಿಲ್ಲ ಅಂತ ಯಾರು ಹೇಳಿದ್ರು? ಹೆಚ್ಚುವರಿ ಡಿಸಿಎಂ ಬೇಕು ಅಂತ ನಾನು ಹೇಳಿರಲಿಲ್ಲ. ಯಾರು ಹೇಳಿದ್ರು, ಯಾರು ಒತ್ತಾಯ ಮಾಡಿದ್ರು? ಸತೀಶ್ ಜಾರಕಿಹೊಳಿ, ರಾಜಣ್ಣ ಒತ್ತಾಯ ಮಾಡಿರೋದು ನನಗೆ ಗೊತ್ತಿಲ್ಲ. ಸತೀಶ್ ಜಾರಕಿಹೊಳಿ, ನಾವು ಜನರಲ್ ಆಗಿ ಮಾತಾಡಿದ್ದೇವೆ. ಇದೇ ರೀತಿ ಆಗಬೇಕು ಅಂತ ನಾವ್ಯಾರು ಮಾತಾಡಿಲ್ಲ ಎಂದು ತಿಳಿಸಿದ್ದಾರೆ.

    ಸಿಎಂ ಡಿನ್ನರ್ ಸಭೆ ಅಜೆಂಡಾ ಊಟ ಅಷ್ಟೇ
    ಸಿಎಂ ಡಿನ್ನರ್ ಮೀಟಿಂಗ್ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ ಅವರು, ಸಿಎಂ ಹಿಂದೆಯೂ ಅನೇಕ ಬಾರಿ ಊಟಕ್ಕೆ ಕರೆದಿದ್ದಾರೆ. ತುಂಬಾ ದಿನ ಆಗಿತ್ತು. ಹೀಗಾಗಿ ಊಟಕ್ಕೆ ಕರೆದಿದ್ದಾರೆ. ಡಿನ್ನರ್ ಕರೆಯೋದಕ್ಕೆ ಏನು ವಿಶೇಷತೆ ಇಲ್ಲ. ಊಟ ಹಾಕ್ತಾರೆ, ಊಟ ಮಾಡಿಕೊಂಡು ಬರುತ್ತೇವೆ. ಸಿಎಂ ಡಿನ್ನರ್ ಸಭೆ ಅಜೆಂಡಾ ಊಟ ಅಷ್ಟೇ. ಸಿಎಂ ಊಟಕ್ಕೆ ಕರೆದಿರೋದು ಒಂದು ಸಾಮಾನ್ಯ ಮೀಟಿಂಗ್ ಅಷ್ಟೆ. ಜಾಸ್ತಿ ದಿನ ಆಗಿದೆ ಅಂತ ಊಟಕ್ಕೆ ಕರೆದಿದ್ದಾರೆ ಎಂದು ಹೇಳಿದ್ದಾರೆ.

    ಕಾಂಗ್ರೆಸ್‌ನಲ್ಲಿ ನವೆಂಬರ್ ಕ್ರಾಂತಿ ವಿಚಾರವಾಗಿ ಮಾತನಾಡಿದ ಅವರು, ಎಲ್ಲಿದೆ ನವೆಂಬರ್ ಕ್ರಾಂತಿ? ಯಾರು ಹೇಳಿದ್ರು ನವೆಂಬರ್ ಕ್ರಾಂತಿ ಅಂತ? ಯಾವ ಕ್ರಾಂತಿಯೂ ಇಲ್ಲ. ಸಂಪುಟ ಪುನಾರಚನೆ ಆಗೋದು ಎಲ್ಲಾ ಸಿಎಂ ಅವರನ್ನ ಕೇಳಬೇಕು. ಸಂಪುಟ ಪುನರಾಚನೆ ಇದ್ಯಾ, ಯಾರನ್ನಾದ್ರು ಹೊಸಬರನ್ನ ಮಂತ್ರಿಯಾಗಿ ತಗೋತೀರಾ ಅಂತ ಸಿಎಂ ಅವರನ್ನ ಕೇಳಿ ಎಂದಿದ್ದಾರೆ.

    ಹೈಕಮಾಂಡ್ ಸಚಿವರ ಮೌಲ್ಯಮಾಪನ ಏನು ಮಾಡಿಲ್ಲ. ಸಚಿವರ ಬಗ್ಗೆ ಬೇರೆ ಬೇರೆ ಸಮಯದಲ್ಲಿ ಮಾಹಿತಿ ತಗೊಂಡಿದ್ರು. ಇದೆಲ್ಲ ಸಾಮಾನ್ಯವಾಗಿ ಹಾಗೂ ನಿರಂತರವಾಗಿ ನಡೆಯುತ್ತದೆ. ಅದಕ್ಕೂ ಇದಕ್ಕೂ ಹೋಲಿಕೆ ಮಾಡೋದು ಸರಿಯಲ್ಲ. ಕಾಂಗ್ರೆಸ್‌ನಲ್ಲಿ ಯಾವುದೇ ಕ್ರಾಂತಿ ಇಲ್ಲ ಎಂದು ತಿಳಿಸಿದ್ದಾರೆ.

  • ಸಿಎಂ ಆಗೋಕೆ ಹೆಲಿಕಾಪ್ಟರ್ ಖರೀದಿಸಿದ್ದಾರೆ ಅನ್ನೋದು ತಪ್ಪು ಕಲ್ಪನೆ – ಸತೀಶ್ ಜಾರಕಿಹೊಳಿ ಪರ ಬೋಸರಾಜು ಬ್ಯಾಟಿಂಗ್

    ಸಿಎಂ ಆಗೋಕೆ ಹೆಲಿಕಾಪ್ಟರ್ ಖರೀದಿಸಿದ್ದಾರೆ ಅನ್ನೋದು ತಪ್ಪು ಕಲ್ಪನೆ – ಸತೀಶ್ ಜಾರಕಿಹೊಳಿ ಪರ ಬೋಸರಾಜು ಬ್ಯಾಟಿಂಗ್

    ರಾಯಚೂರು: ಸಿಎಂ ಆಗಲು ಪ್ರಚಾರಕ್ಕಾಗಿ ಹೆಲಿಕಾಪ್ಟರ್ ಖರೀದಿ ಮಾಡಿದ್ದಾರೆ ಅನ್ನೋದು ತಪ್ಪು ಕಲ್ಪನೆ ಎಂದು ಸಣ್ಣ ನೀರಾವರಿ ಸಚಿವ ಎನ್.ಎಸ್ ಬೋಸರಾಜು (NS Bosaraju) ಅವರು ಸತೀಶ್ ಜಾರಕಿಹೊಳಿ ಪರ ಬ್ಯಾಟಿಂಗ್ ಮಾಡಿದ್ದಾರೆ.

    ರಾಯಚೂರಿನಲ್ಲಿ ಮಾತನಾಡಿದ ಅವರು, ಸತೀಶ್ ಜಾರಕಿಹೊಳಿ ಯಾವಾಗಲೂ ಹೆಲಿಕಾಪ್ಟರ್‌ನಲ್ಲಿ ಓಡಾಡುತ್ತಾರೆ. ನಮ್ಮನ್ನೂ ಕರೆದುಕೊಂಡು ಹೋಗ್ತಾರೆ. ಸಿಎಂ ಆಗಲು ಪ್ರಚಾರಕ್ಕೆ ಹೆಲಿಕಾಪ್ಟರ್ ಖರೀದಿ ಮಾಡಿದ್ದಾರೆ ಅನ್ನೋದು ತಪ್ಪು ಕಲ್ಪನೆ. ಸಿಎಂ ಆಗಬೇಕು ಅಂತಾ ಎಲ್ಲರಿಗೂ ಇರುತ್ತೆ, ನಮಗೂ ಇರುತ್ತೆ ಎಂದು ಹೇಳಿದ್ದಾರೆ.ಇದನ್ನೂ ಓದಿ: 30 ಕೋಟಿ ಮೌಲ್ಯದ ಇಟಲಿ ಮೇಡ್‌ ಅಗಸ್ಟ ಹೆಲಿಕಾಪ್ಟರ್‌ ಖರೀದಿಸಿದ ಸತೀಶ್‌ ಜಾರಕಿಹೊಳಿ

    ನಾನು ಸತೀಶ್ ಜಾರಕಿಹೊಳಿ ಬಹಳ ವರ್ಷಗಳಿಂದ ರಾಜಕೀಯ ಮಾಡುತ್ತಿದ್ದೇವೆ. ಪಕ್ಷನಿಷ್ಟರಾಗಿ ಪಕ್ಷಕ್ಕೆ ಬದ್ಧರಾಗಿದ್ದೇವೆ, ಹೇಳುವವರಿಗೆ ಬುದ್ಧಿ ಇಲ್ಲ. ಸಚಿವ ಸಂಪುಟದಲ್ಲಿರುವ ಎಲ್ಲಾ ಸಚಿವರು ಪಕ್ಷಕ್ಕೆ ನಿಷ್ಠಾವಂತರಾಗಿದ್ದೇವೆ. ಬೇರೆ ಪಕ್ಷದಿಂದ ಬಂದವರು ಪಕ್ಷಕ್ಕೆ ಬದ್ಧರಾಗಿದ್ದಾರೆ. ಮುಖ್ಯಮಂತ್ರಿಗಳು ಕೂಡ ಬೇರೆ ಪಕ್ಷದಿಂದ ಬಂದವರು. ಅವರು ಪಕ್ಷಕ್ಕೆ ಬದ್ಧರಾಗಿ ಸಾಮಾಜಿಕ, ಆರ್ಥಿಕ ಶೈಕ್ಷಣಿಕವಾಗಿ ಅಭಿವೃದ್ಧಿ ಕೆಲಸ ಮಾಡುತ್ತಿದ್ದಾರೆ ಎಂದು ತಿಳಿಸಿದ್ದಾರೆ.

    ಇನ್ನೂ ಜಾತಿಗಣತಿ ಮಾಡುತ್ತಿರುವುದು ಯಾವುದೇ ಜಾತಿ ಧರ್ಮಕ್ಕೆ ಸಂಬಂಧಪಟ್ಟದ್ದಲ್ಲ. 7 ಕೋಟಿ ಜನರ ಸಾಮಾಜಿಕ, ಹಾಕಲು ಸರ್ವೇ ಮಾಡುತ್ತೇವೆ. ಜಾತಿಯಲ್ಲಿ ಕ್ರಿಶ್ಚಿಯನ್ ಶಬ್ದ ಬಳಕೆ ತೆಗೆದುಹಾಕಲು ಸಿಎಂ ಹೇಳಿದ್ದಾರೆ. ಜನರ ಭಾವನೆಗಳಿಗೆ ಸರ್ಕಾರ ಸ್ಪಂದಿಸುತ್ತಿದೆ, ಯಾರೂ ಇದಕ್ಕೆ ವಿರೋಧ ವ್ಯಕ್ತಪಡಿಸಿಲ್ಲ, ಎಲ್ಲರೂ ಒಟ್ಟಾಗಿ ಸಮೀಕ್ಷೆ ಮಾಡ್ತಾರೆ ಎಂದಿದ್ದಾರೆ.ಇದನ್ನೂ ಓದಿ: 60 ದಿನ ಜಾತಿಗಣತಿ ಮುಂದೂಡಿ, 15 ದಿನ ಕಾಲಮಿತಿ ಹೆಚ್ಚಿಸಿ – ಒಕ್ಕಲಿಗ ಸಭೆಯಲ್ಲಿ ನಿರ್ಣಯ