Tag: Satish Patil

  • ಸತೀಶ್ ಪಾಟೀಲ್ ಹತ್ಯೆಗೆ ಪೊಲೀಸರ ವೈಫಲ್ಯವೇ ಕಾರಣ: ಸತೀಶ್ ಜಾರಕಿಹೊಳಿ

    ಸತೀಶ್ ಪಾಟೀಲ್ ಹತ್ಯೆಗೆ ಪೊಲೀಸರ ವೈಫಲ್ಯವೇ ಕಾರಣ: ಸತೀಶ್ ಜಾರಕಿಹೊಳಿ

    ಬೆಳಗಾವಿ: ಪಾರ್ಕಿಂಗ್ ಮತ್ತು ದೇವಸ್ಥಾನದ ಜಾಗ ವಿಚಾರಕ್ಕೆ ಸಂಬಂಧಿಸಿದಂತೆ ಗೌಂಡವಾಡದಲ್ಲಿ ನಡೆದ ಸತೀಶ್ ಪಾಟೀಲ್ ಹತ್ಯೆಗೆ ಪೊಲೀಸರ ವೈಫಲ್ಯವೇ ಕಾರಣ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಆರೋಪಿಸಿದ್ದಾರೆ.

    ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಸತೀಶ್ ಜಾರಕಿಹೊಳಿ, ಪೊಲೀಸರ ವೈಫಲ್ಯವೇ ಘಟನೆಗೆ ಕಾರಣ. ಈ ಮುಂಚೆ ಕೂಡ ಸತೀಶ್ ಪಾಟೀಲ್ ಮೇಲೆ ಮೂರು ಬಾರಿ ದಾಳಿ ನಡೆದಿತ್ತು. ಆಗಲೇ ಅವರ ಮೇಲೆ ಪೊಲೀಸರು ಸೂಕ್ತ ಕ್ರಮಕೈಂಡಿದ್ದರೆ ಇಂತಹ ಘಟನೆ ಆಗುತ್ತಿರಲಿಲ್ಲ. ಕಾಕತಿ ಪೊಲೀಸ್ ಠಾಣೆಯಲ್ಲಿ ಬಹಳ ವರ್ಷಗಳಿಂದ ಪೊಲೀಸರು ಅಲ್ಲಿಯೇ ಠಿಕಾಣಿ ಹೂಡಿದ್ದಾರೆ. ಹೀಗಾಗಿ ಜನರಿಗೆ ಸರಿಯಾದ ನ್ಯಾಯ ಸಿಗುತ್ತಿಲ್ಲ. ಈ ಕುರಿತು ಪೊಲೀಸ್ ಕಮಿಷನರ್ ಅವರೊಂದಿಗೆ ಮಾತನಾಡುತ್ತೇನೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಕೇವಲ 12 ಜನರಷ್ಟೇ ಬಂಧಿಸಿದ್ದಾರೆ ಎಂದು ಕಿಡಿಕಾರಿದ್ದಾರೆ. ಇದನ್ನೂ ಓದಿ: ಕಾರ್ಯವೈಖರಿ ಪ್ರಶ್ನಿಸಿದ ಗ್ರಾಮಸ್ಥರ ಮೇಲೆ ಚಪ್ಪಲಿಯಿಂದ ಹಲ್ಲೆಗೆ ಮುಂದಾದ ಗ್ರಾ.ಪ ಅಧ್ಯಕ್ಷೆ

    ಸೂಕ್ತ ತನಿಖೆ ನಡೆಸಿ ಘಟನೆಗೆ ಕಾರಣರಾದವರನ್ನು ಬಂಧಿಸಬೇಕು. ಗ್ರಾಮದಲ್ಲಿ ಅಮಾಯಕರಿಗೆ ತೊಂದರೆ ಆಗದಂತೆ ನೋಡಿಕೊಳ್ಳಬೇಕು. ಗೌಂಡವಾಡ ಗ್ರಾಮಸ್ಥರು ಭಯ ಪಡುವ ಅವಶ್ಯಕತೆ ಇಲ್ಲ. ತೊಂದರೆ ಆಗದಂತೆ ನೋಡಿಕೊಳ್ಳಲು ಪೊಲೀಸ್ ಕಮಿಷನರ್ ಅವರೊಂದಿಗೆ ಮಾತನಾಡಲಾಗುವುದು. ಸತೀಶ್ ಪಾಟೀಲ್ ಕುಟುಂಬಸ್ಥರಿಗೆ ನ್ಯಾಯ ಕೊಡಿಸಲಾಗುವುದು ಎಂದು ಭರವಸೆ ನೀಡಿದ್ದಾರೆ.

    ಬೆಳಗಾವಿ ತಾಲೂಕಿನ ಗೌಂಡವಾಡದಲ್ಲಿ ಅಮಾಯಕರನ್ನು ಬಂಧಿಸಲಾಗುತ್ತಿದೆ. ಪೊಲೀಸರು ಮತ್ತು ಆರೋಪಿಗಳಿಂದ ನಮಗೆ ಜೀವ ಭಯ ಇದೆ ಎಂದು ಗೌಂಡವಾಡ ಗ್ರಾಮಸ್ಥರು ಸತೀಶ್ ಜಾರಕಿಹೊಳಿಗೆ ದೂರು ನೀಡಿದ್ದಾರೆ. ಈ ಹಿನ್ನೆಲೆ ಗ್ರಾಮದಿಂದ ನೇರವಾಗಿ ಕಮಿಷನರ್ ಕಚೇರಿಗೆ ತೆರಳಿದ ಸತೀಶ್ ಜಾರಕಿಹೊಳಿ ಅಮಾಯಕರನ್ನು ಟಚ್ ಮಾಡದಂತೆ ಪೊಲೀಸರಿಗೆ ವಾರ್ನಿಂಗ್ ನೀಡಿದ್ದಾರೆ. ಈ ವೇಳೆ ಬೆಳಗಾವಿ ನಗರ ಪೊಲೀಸ್ ಆಯುಕ್ತ ಎಂ.ಬಿ.ಬೋರಲಿಂಗಯ್ಯ, ಡಿಸಿಪಿ ರವೀಂದ್ರ ಗಡಾದಿ ಅವರೊಂದಿಗೆ ಅರ್ಧ ಗಂಟೆಗೂ ಅಧಿಕ ಕಾಲ ಚರ್ಚೆ ನಡೆಸಿದರು. ಅಮಾಯಕರನ್ನು ಯಾವುದೇ ಕಾರಣಕ್ಕೂ ಬಂಧಿಸಬೇಡಿ. ಉಳಿದ ಕೊಲೆ ಆರೋಪಿಗಳನ್ನು ಅರೆಸ್ಟ್ ಮಾಡಿ ಎಂದು ಎಚ್ಚರಿಕೆ ನೀಡಿದ್ದಾರೆ. ಇದನ್ನೂ ಓದಿ: 6 ವರ್ಷದ ಹಿಂದೆ ಮದುವೆ- 4ನೇ ಪತ್ನಿಗೆ ಡಿವೋರ್ಸ್ ಕೊಟ್ಟ 91ರ ರೂಪರ್ಟ್ ಮುರ್ಡೋಕ್

    Live Tv

  • ಸತೀಶ್ ಪಾಟೀಲ್ ಹತ್ಯೆ ಪ್ರಕರಣ: ಬಂಧಿತರ ಸಂಖ್ಯೆ 32ಕ್ಕೆ ಏರಿಕೆ

    ಸತೀಶ್ ಪಾಟೀಲ್ ಹತ್ಯೆ ಪ್ರಕರಣ: ಬಂಧಿತರ ಸಂಖ್ಯೆ 32ಕ್ಕೆ ಏರಿಕೆ

    ಬೆಳಗಾವಿ: ಮೂರು ದಿನಗಳ ಹಿಂದೆ ತಾಲೂಕಿನ ಗೌಂಡವಾಡ ಗ್ರಾಮದಲ್ಲಿ ನಡೆದಿದ್ದ ಸತೀಶ್ ಪಾಟೀಲ್ ಹತ್ಯೆ ಪ್ರಕರಣದಲ್ಲಿ 10 ಮಂದಿಯನ್ನು ಬಂಧಿಸಲಾಗಿದ್ದು, ಹಿಂಸಾಚಾರ ಪ್ರಕರಣದಲ್ಲಿ 22 ಆರೋಪಿಗಳನ್ನು ಕಾಕತಿ ಠಾಣೆ ಪೊಲೀಸರು ಬಂಧಿಸಿದ್ದಾರೆ.

    ಆನಂದ ಕುಟ್ರೆ(60), ಜಾಯಪ್ಪ ನೀಲಜಕರ(52), ಸುರೇಖಾ ನೀಲಜಕರ(47), ಸಂಜನಾ ನೀಲಜಕರ(21), ವೆಂಕಟೇಶ್‌ ಕುಟ್ರೆ(50), ದೌಲತ್ ಮುತಗೇಕರ(21), ಲಖನ್ ನೀಲಜಕರ(25), ಲಕ್ಷ್ಮಿ ಕುಟ್ರೆ(45), ಸಂಗೀತಾ ಕುಟ್ರೆ(45) ಹಾಗೂ ಶಶಿಕಲಾ ಕುಟ್ರೆ(50) ಬಂಧಿತರು. ಜೂನ್ 18ರ ರಾತ್ರಿ ಸತೀಶ್ ಪಾಟೀಲ್ ಹತ್ಯೆ ನಡೆದಿತ್ತು. ಕಾರು ಪಾರ್ಕಿಂಗ್ ವಿಚಾರಕ್ಕೆ ಪ್ರಾರಂಭವಾದ ಗಲಾಟೆ ಕೊಲೆಯಲ್ಲಿ ಅಂತ್ಯವಾಗಿತ್ತು. ಸತೀಶ್ ಹತ್ಯೆ ಬಳಿಕ ಗ್ರಾಮದಲ್ಲಿ ವಾಹನ, ಬಣವೆಗೆ ಉದ್ರಿಕ್ತರು ಬೆಂಕಿ ಇಟ್ಟಿದ್ದರು. ಇದನ್ನೂ ಓದಿ:  ನನ್ನ ಮಗನನ್ನು ಉಳಿಸು ದೇವರೇ – ಶಿಲುಬೆ ಮುಂದೆ ಕಂದನನ್ನು ಮಲಗಿಸಿದ ದಂಪತಿ

     

    ಹಳೆ ವೈಷಮ್ಯ
    ಗ್ರಾಮದ ದೇವಸ್ಥಾನದ ಜಾಗವನ್ನು ಕೆಲ ಪ್ರಭಾವಿಗಳು ಒತ್ತುವರಿ ಪಡೆದುಕೊಂಡಿದ್ದರು. ದೇವಸ್ಥಾನದ ಜಾಗ ಮರಳಿ ಸಿಗಬೇಕೆಂದು ಸತೀಶ್ ಪಾಟೀಲ್ ಹೋರಾಟ ಮಾಡ್ತಿದ್ದರು. ಇದೇ ವೈಷಮ್ಯಕ್ಕೆ ಸತೀಶ್ ಪಾಟೀಲ್ ಹತ್ಯೆ ಮಾಡಲಾಗಿದೆ. ಕಾಕತಿ ಪೊಲೀಸ್ ಠಾಣೆಯಲ್ಲಿ ಈ ಸಂಬಂಧ ಪ್ರಕರಣ ದಾಖಲಾಗಿತ್ತು. ಇದನ್ನೂ ಓದಿ: ಕಾರು ಪಾರ್ಕಿಂಗ್ ವಿಚಾರಕ್ಕೆ ಗಲಾಟೆ – ವ್ಯಕ್ತಿ ಬರ್ಬರ ಹತ್ಯೆ

    ಕೊಲೆ ಬಳಿಕ ನಡೆದ ಹಿಂಸಾಚಾರ ಸಂಬಂಧ ಕಾಕತಿ ಠಾಣೆ ಪೊಲೀಸರು 22 ಆರೋಪಿಗಳ ಬಂಧಿಸಿದ್ದಾರೆ. ಕೊಲೆ ಹಾಗೂ ಹಿಂಸಾಚಾರ ಎರಡೂ ಪ್ರಕರಣಗಳ ಸಂಬಂಧ ಬಂಧಿತರ ಸಂಖ್ಯೆ ಒಟ್ಟು 32ಕ್ಕೆ ಏರಿಕೆಯಾಗಿದೆ.

    Live Tv