Tag: Satpal Maharaj

  • ಪ್ರವಾಸೋದ್ಯಮ ಕ್ಷೇತ್ರದ 3 ವಿಭಾಗಳಲ್ಲಿ ರಾಷ್ಟ್ರೀಯ ಪ್ರಶಸ್ತಿ ಪಡೆದ ಉತ್ತರಾಖಂಡ್

    ಪ್ರವಾಸೋದ್ಯಮ ಕ್ಷೇತ್ರದ 3 ವಿಭಾಗಳಲ್ಲಿ ರಾಷ್ಟ್ರೀಯ ಪ್ರಶಸ್ತಿ ಪಡೆದ ಉತ್ತರಾಖಂಡ್

    ಡೆಹ್ರಾಡೂನ್: ಪ್ರವಾಸೋದ್ಯಮ ಕ್ಷೇತ್ರದ ಮೂರು ವಿಭಾಗಗಳಲ್ಲಿ ಉತ್ತರಾಖಂಡ ರಾಷ್ಟ್ರೀಯ ಮಟ್ಟದ ಪ್ರಶಸ್ತಿಗಳನ್ನು ಗೆದ್ದಿದೆ.

    ಶುಕ್ರವಾರ ಪ್ರವಾಸೋದ್ಯಮ ಸಮೀಕ್ಷೆ ಮತ್ತು ಪ್ರಶಸ್ತಿಗಳನ್ನು ವಿತರಿಸುವ ಕಾರ್ಯಕ್ರಮವನ್ನು ನವದೆಹಲಿಯಲ್ಲಿ ಆಯೋಜಿಸಲಾಯಿತು. ಈ ವೇಳೆ 9 ವಿಭಾಗಗಳಲ್ಲಿ ಭಾರತದ ಅತ್ಯುತ್ತಮ ಪ್ರವಾಸಿ ತಾಣಗಳಿಗೆ ವಿವಿಧ ಪ್ರಶಸ್ತಿಗಳನ್ನು ನೀಡಲಾಯಿತು. ಈ ಪೈಕಿ ಉತ್ತರಾಖಂಡಕ್ಕೆ ಅತ್ಯುತ್ತಮ ವನ್ಯಜೀವಿ ತಾಣ, ಅತ್ಯುತ್ತಮ ಸಾಹಸ ತಾಣ ಮತ್ತು ಅತ್ಯುತ್ತಮ ಆಧ್ಯಾತ್ಮಿಕ ತಾಣಕ್ಕೆ ಅತ್ಯುತ್ತಮ ರಾಷ್ಟ್ರೀಯ ಪ್ರಶಸ್ತಿಯನ್ನು ಲಭಿಸಿದೆ. ಇದನ್ನೂ ಓದಿ: ಬಾಗಿದ ಯೋಗಾನರಸಿಂಹ ಸ್ವಾಮಿ ಗೋಪುರದ ಕಳಶ – ಆತಂಕದಲ್ಲಿ ಭಕ್ತರು

    ಈ ಪ್ರಶಸ್ತಿಯನ್ನು ಕೇಂದ್ರ ಪ್ರವಾಸೋದ್ಯಮ ಸಚಿವ ಜಿ.ಕಿಶನ್ ರೆಡ್ಡಿ ಅವರು ಉತ್ತರಾಖಂಡದ ಪ್ರವಾಸೋದ್ಯಮ ಸಚಿವ ಸತ್ಪಾಲ್ ಮಹಾರಾಜ್ ಅವರಿಗೆ ನೀಡಿದರು. ಈ ಕುರಿತು ಕಾರ್ಯಕ್ರಮದಲ್ಲಿ ಮಾತನಾಡಿದ ರೆಡ್ಡಿ ಅವರು, ನಮ್ಮ ಪ್ರಧಾನಿ ನರೇಂದ್ರ ಮೋದಿ ಅವರ ಮಾರ್ಗದರ್ಶನದಲ್ಲಿ ದೇಶೀಯ ಪ್ರವಾಸೋದ್ಯಮವನ್ನು ಉತ್ತೇಜಿಸಲು ಮತ್ತು ಅಂತರರಾಷ್ಟ್ರೀಯ ಮಟ್ಟದಲ್ಲಿ ಭಾರತವನ್ನು ಗುರುತಿಸಿಕೊಳ್ಳಲು ಹಲವು ಕ್ರಮ ತೆಗೆದುಕೊಳ್ಳಲಾಗಿದೆ ಎಂದು ತಿಳಿಸಿದರು.

    ಈ ವೇಳೆ ಪ್ರಶಸ್ತಿ ಸ್ವೀಕರಿಸಿದ ನಂತರ ಉತ್ತರಾಖಂಡದ ಪ್ರವಾಸೋದ್ಯಮ ಸಚಿವ ಮಹಾರಾಜ್ ಮಾತನಾಡಿದ್ದು, ಕೊರೊನಾದಿಂದ ಉತ್ತರಾಖಂಡ ಪ್ರವಾಸೋದ್ಯಮವು ಕ್ಷೇಮ ಪ್ರವಾಸೋದ್ಯಮ ಮತ್ತು ಆಯುಷ್ ಕ್ಷೇತ್ರದಲ್ಲಿ ಪ್ರಮುಖ ಕೇಂದ್ರವಾಗಿ ಹೊರಹೊಮ್ಮಿದೆ ಎಂದು ಖುಷಿಯನ್ನು ವ್ಯಕ್ತಪಡಿಸಿದರು.

    ಉತ್ತರಾಖಂಡವು ತನ್ನ ನೈಸರ್ಗಿಕ ಸೌಂದರ್ಯದಿಂದ ಶತಮಾನಗಳಿಂದಲೂ ಭಾರತ ಮತ್ತು ವಿದೇಶಿ ಪ್ರವಾಸಿಗರನ್ನು ಆಕರ್ಷಿಸುತ್ತಿದೆ. ನಮ್ಮ ಉತ್ತರಾಖಂಡವು ಸಾಹಸ ಪ್ರವಾಸೋದ್ಯಮಕ್ಕೆ ಅಪಾರ ಸಾಮಥ್ರ್ಯವನ್ನು ಹೊಂದಿದೆ. ಈ ಪರಿಣಾಮ ಉತ್ತರಾಖಂಡ ಸಾಹಸ ಪ್ರಿಯರಿಗೆ ನೆಚ್ಚಿನ ಸ್ಥಳಗಳಲ್ಲಿ ಒಂದಾಗುತ್ತಿದೆ. ಸಾಹಸ ಕ್ರೀಡೆಗಳನ್ನು ಉತ್ತೇಜಿಸಲು ನಾವು ನಿರಂತರವಾಗಿ ಕೆಲಸ ಮಾಡುತ್ತಿದ್ದೇವೆ ಎಂದು ತಿಳಿಸಿದರು. ಇದನ್ನೂ ಓದಿ: ಇತಿಹಾಸ ಬರೆದ ಪವರ್ ಸ್ಟಾರ್ ಪುಣ್ಯಸ್ಮರಣೆ- ದಾಖಲೆ ಪ್ರಮಾಣದಲ್ಲಿ ನೇತ್ರದಾನಕ್ಕೆ ಅರ್ಜಿ

    ನಾವು ಹೆಚ್ಚು ಪರಿಸರ ಸ್ನೇಹಿ ಪ್ರವಾಸೋದ್ಯಮವನ್ನು ಉತ್ತೇಜಿಸುತ್ತೇವೆ. ನೌಕರರು ಮತ್ತು ಸ್ಥಳೀಯ ಸಮುದಾಯಗಳ ಅಭಿವೃದ್ಧಿಗೆ ಸರ್ಕಾರ ಯಾವಾಗಲೂ ಬದ್ಧವಾಗಿದೆ. ಅದರಲ್ಲಿಯೂ ಕೇದಾರನಾಥಕ್ಕೆ ಭೇಟಿ ನೀಡುವ ಭಕ್ತರಿಗೆ ಭವಿಷ್ಯದಲ್ಲಿ ಸೌಲಭ್ಯಗಳು ಸಿಗುವಂತೆ ಪ್ರಧಾನಿಗಳ ಮಾರ್ಗಸೂಚಿ ನೀಡಿದ್ದು, ಈ ಹಿನ್ನೆಲೆ ಕೇದಾರನಾಥದಲ್ಲಿ ಅಭಿವೃದ್ಧಿ ಕಾರ್ಯಗಳನ್ನು ಮಾಡಲಾಗುತ್ತಿದೆ ಎಂದರು.

  • ಉತ್ತರಾಖಂಡ ನೂತನ ಸಿಎಂ ಆಗಿ ಪುಷ್ಕರ್ ಸಿಂಗ್ ಧಾಮಿ ಆಯ್ಕೆ

    ಉತ್ತರಾಖಂಡ ನೂತನ ಸಿಎಂ ಆಗಿ ಪುಷ್ಕರ್ ಸಿಂಗ್ ಧಾಮಿ ಆಯ್ಕೆ

    ಡೆಹ್ರಾಡೂನ್: ತೀರ್ಥ್ ಸಿಂಗ್ ರಾವತ್ ರಾಜೀನಾಮೆಯಿಂದ ನೀಡಿದ್ದ ಹಿನ್ನೆಲೆಯಲ್ಲಿ, ಮುಖ್ಯಮಂತ್ರಿ ಸ್ಥಾನಕ್ಕೆ ಪುಷ್ಕರ್ ಸಿಂಗ್ ಧಾಮಿ ಅವರನ್ನು ಆಯ್ಕೆ ಮಾಡಲಾಗಿದ್ದು, ಪಕ್ಷದ ಕಚೇರಿಯಲ್ಲಿ ನಡೆದ ಸಿಎಲ್‍ಪಿ ಸಭೆಯಲ್ಲಿ ಸರ್ವಾನುಮತದಿಂದ ಆಯ್ಕೆ ಮಾಡಲಾಗಿದೆ.

     

    ತೀರ್ಥ್ ಸಿಂಗ್ ರಾವತ್ ನಿನ್ನೆ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ ಹಿನ್ನಲೆ ಇಂದು ಹೊಸ ಶಾಸಕಾಂಗ ಪಕ್ಷದ ನಾಯಕ ಆಯ್ಕೆಗೆ ವೀಕ್ಷಕರಾಗಿ ಹೈಕಮಾಂಡ್ ಕೇಂದ್ರ ಸಚಿವ ನರೇಂದ್ರ ಸಿಂಗ್ ತೋಮರ್ ಅವರನ್ನು ಕಳುಹಿಸಿತ್ತು. ಪಕ್ಷದ ಕಚೇರಿಯಲ್ಲಿ ಸಭೆ ನಡೆಸಿದ ನರೇಂದ್ರ ಸಿಂಗ್ ತೋಮರ್ ಶಾಸಕರ ಒಪ್ಪಿಗೆ ಮೇರೆಗೆ ಪುಷ್ಕರ್ ಸಿಂಗ್ ಧಾಮಿ ಅವರನ್ನು ಶಾಸಕಾಂಗ ಪಕ್ಷದ ನಾಯಕರನ್ನಾಗಿ ಆಯ್ಕೆ ಮಾಡಿದ್ದಾರೆ. ಇದನ್ನೂ ಓದಿ: ಉತ್ತರಾಖಂಡ್ ಮುಂದಿನ ಮುಖ್ಯಮಂತ್ರಿ ಯಾರು?

     

    ಖತೀಮ್ ಕ್ಷೇತ್ರದ ಹಾಲಿ ಶಾಸಕರಾಗಿರುವ ಪುಷ್ಕರ್ ಸಿಂಗ್ ಧಾಮಿ ಉತ್ತರಾಖಂಡನ ಹತ್ತನೇ ಸಿಎಂ ಆಗಿ ಶೀಘ್ರದಲ್ಲಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಸಿಎಲ್‍ಪಿ ಸಭೆಯಲ್ಲಿ ಸರ್ವಾನುಮತದಿಂದ ಪುಷ್ಕರ್ ಸಿಂಗ್ ಧಾಮಿ ಆಯ್ಕೆ ಮಾಡಲಾಗಿದೆ. ಇದನ್ನೂ ಓದಿ: ಅಧಿಕಾರ ವಹಿಸಿಕೊಂಡ 4 ತಿಂಗಳಿಗೆ ಉತ್ತಾರಖಂಡ ಸಿಎಂ ರಾಜೀನಾಮೆ

    ಉತ್ತರಾಖಂಡದ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡ 4 ತಿಂಗಳಿಗೆ ತೀರ್ಥ್ ಸಿಂಗ್ ರಾವತ್ ರಾಜೀನಾಮೆ ನೀಡಿದ್ದಾರೆ. ರಾವತ್ ಉತ್ತರಾಖಂಡದ ಮುಖ್ಯಮಂತ್ರಿಯಾಗಿ 2021ರ ಮಾರ್ಚ್ ತಿಂಗಳಲ್ಲಿ ಅಧಿಕಾರವಹಿಸಿಕೊಂಡಿದ್ದರು. ಆದಾದ ಬಳಿಕ ಇದೀಗ ರಾಜೀನಾಮೆಗೆ ಮುಂದಾಗಿದ್ದಾರೆ. ಈ ಕುರಿತು ಮಾತನಾಡಿರುವ ರಾವತ್, ಸಾಂವಿಧಾನಿಕ ಬಿಕ್ಕಟ್ಟಿನಿಂದಾಗಿ ರಾಜೀನಾಮೆ ನೀಡುತ್ತಿದ್ದೇನೆ. ಕೊರೊನಾದಿಂದಾಗಿ ಬೈ ಎಲೆಕ್ಷನ್ ನಡೆಯದೆ ಇರುವುದರಿಂದಾಗಿ ಈ ನಿರ್ಧಾರ ಸರಿಯೆಂದು ಭಾವಿಸುತ್ತಿದ್ದೇನೆ ಎಂದಿದ್ದರು. ಇದೀಗ ಮುಖ್ಯ ಮಂತ್ರಿ ಸ್ಥಾನಕ್ಕೆ ಪುಷ್ಕರ್ ಸಿಂಗ್ ಧಾಮಿ ಆಯ್ಕೆಯಾಗಿದ್ದಾರೆ.

  • ಅಧಿಕಾರ ವಹಿಸಿಕೊಂಡ 4 ತಿಂಗಳಿಗೆ ಉತ್ತಾರಖಂಡ ಸಿಎಂ ರಾಜೀನಾಮೆ

    ಅಧಿಕಾರ ವಹಿಸಿಕೊಂಡ 4 ತಿಂಗಳಿಗೆ ಉತ್ತಾರಖಂಡ ಸಿಎಂ ರಾಜೀನಾಮೆ

    ಡೆಹರಾಡೂನ್: ಉತ್ತರಾಖಂಡದ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡ 4 ತಿಂಗಳಿಗೆ ತೀರ್ಥ್ ಸಿಂಗ್ ರಾವತ್ ರಾಜೀನಾಮೆ ನೀಡಿದ್ದಾರೆ.

    ರಾವತ್ ಉತ್ತರಾಖಂಡದ ಮುಖ್ಯಮಂತ್ರಿಯಾಗಿ 2021ರ ಮಾರ್ಚ್ ತಿಂಗಳಲ್ಲಿ ಅಧಿಕಾರವಹಿಸಿಕೊಂಡಿದ್ದರು. ಆದಾದ ಬಳಿಕ ಇದೀಗ ರಾಜೀನಾಮೆಗೆ ಮುಂದಾಗಿದ್ದಾರೆ. ಈ ಕುರಿತು ಮಾತನಾಡಿರುವ ರಾವತ್, ಸಾಂವಿಧಾನಿಕ ಬಿಕ್ಕಟ್ಟಿನಿಂದಾಗಿ ರಾಜೀನಾಮೆ ನೀಡುತ್ತಿದ್ದೇನೆ. ಕೊರೊನಾದಿಂದಾಗಿ ಬೈ ಎಲೆಕ್ಷನ್ ನಡೆಯದೆ ಇರುವುದರಿಂದಾಗಿ ಈ ನಿರ್ಧಾರ ಸರಿಯೆಂದು ಭಾವಿಸುತ್ತಿದ್ದೇನೆ ಎಂದಿದ್ದಾರೆ.

    ಈಗಾಗಲೇ ರಾವತ್ ಕಳೆದ ಮೂರು ದಿನಗಳಿಂದ ಕೇಂದ್ರ ಬಿಜೆಪಿಯ ನಾಯಕರೊಂದಿಗೆ ಚರ್ಚಿಸಿ ಬಳಿಕ ಈ ನಿರ್ಧಾರ ಮಾಡಿದ್ದಾರೆ. ಈಗಾಗಲೇ ರಾಜೀನಾಮೆ ಪತ್ರವನ್ನು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರಾದ ಜೆ.ಪಿ ನಡ್ಡಾ ಅವರಿಗೆ ನೀಡಿದ್ದಾರೆ. ಇದಾದ ಬಳಿಕ ಉತ್ತಾರಖಂಡದ ರಾಜ್ಯಪಾಲರಾದ ಬೇಬಿ ರಾಣಿ ಮೌರ್ಯ ಅವರಿಗೆ ರಾಜೀನಾಮೆ ಪತ್ರ ಸಲ್ಲಿಸಲಿದ್ದಾರೆ. ಇದನ್ನೂ ಓದಿ : ಶಾರ್ಟ್ಸ್ ಧರಿಸಿ ಅಂಗಾಂಗ ಪ್ರದರ್ಶನಕ್ಕೆ ಕಾಲೇಜಿಗೆ ಬರೋದಾ? ಮತ್ತೆ ಮಹಿಳೆಯರ ಉಡುಪು ಪ್ರಶ್ನಿಸಿದ ಸಿಎಂ ರಾವತ್

    ತೀರ್ಥ್ ಸಿಂಗ್ ರಾವತ್ ಸಂಸತ್ ಸದಸ್ಯರಾಗಿ ಮುಖ್ಯಮಂತ್ರಿಯಾಗಿದ್ದಾರೆ. ಇದೀಗ ಸಿಎಂ ಆದ 6 ತಿಂಗಳ ಒಳಗೆ ರಾಜ್ಯ ವಿಧಾನಸಭೆ ಸದಸ್ಯರಾಗಬೇಕಾಗಿತ್ತು. ಆದರೆ ಇದೀಗ ಚುನಾವಣೆ ನಡೆಸಲು ಸಾಧ್ಯವಾಗದೆ ಇರುವ ಹಿನ್ನೆಲೆ ರಾಜೀನಾಮೆ ನೀಡಿದ್ದಾರೆ ಎಂದು ವರದಿಯಾಗಿದೆ.

    ಈ ಹಿಂದೆ ಉತ್ತರಾಖಂಡದ ಮುಖ್ಯಮಂತ್ರಿ ತೀವೇಂದ್ರ ಸಿಂಗ್ ರಾವತ್ ಕೂಡ ಇದೇ ರೀತಿಯ ಬಿಕ್ಕಟ್ಟಿನಿಂದಾಗಿ ರಾಜೀನಾಮೆ ನೀಡಿದ್ದರು ಬಳಿಕ ತೀರ್ಥ್ ಸಿಂಗ್ ರಾವತ್ ಸಿಎಂ ಆಗಿದ್ದರು. ಅದಾದ ಬಳಿಕ ಉತ್ತರಾಖಂಡದಲ್ಲಿ ಉಂಟಾದ ನಾಯಕತ್ವ ಬಿಕ್ಕಟ್ಟಿನಿಂದಾಗಿ ರಾವತ್ ಮೇಲೆ ಕೇಂದ್ರದಿಂದಲೂ ಅಲ್ಪ ಮಟ್ಟಿನ ಹಿನ್ನಡೆ ಉಂಟಾಗಿತ್ತು. ಅದಲ್ಲದೆ ಮಹಿಳೆಯರು ಧರಿಸುವ ರಿಪ್ಪಡ್ ಜೀನ್ಸ್ ಪ್ಯಾಂಟ್ ಬಗ್ಗೆ ರಾವತ್ ಹೇಳಿದ ಹೇಳಿಕೆಯಿಂದ ವ್ಯಾಪಕ ವಿರೋಧ ಕೂಡ ಉಂಟಾಗಿತ್ತು. ಇದನ್ನೂ ಓದಿ : ಗಂಗಾನದಿಯಲ್ಲಿ ಪುಣ್ಯಸ್ನಾನ ಮಾಡಿದ್ರೆ ಕೊರೊನಾ ಬರಲ್ಲ: ತೀರ್ಥ್ ಸಿಂಗ್ ರಾವತ್

    ಇದೀಗ ಮತ್ತೆ ಉತ್ತರಾಖಂಡದಲ್ಲಿ ನೂತನ ಮುಖ್ಯಮಂತ್ರಿ ಆಯ್ಕೆ ನಡೆಯಬೇಕಾಗಿದ್ದು, ಶಾಸಕರಾದ ಸತ್ಪಲ್ ಮಹಾರಾಜ್ ಮತ್ತು ದಾನ್ ಸಿಂಗ್ ರಾವತ್ ಮುಖ್ಯಮಂತ್ರಿ ಹುದ್ದೆಯ ಮುಂಚೂಣಿಯ ನಾಯಕರಾಗಿ ಗುರುತಿಸಿಕೊಂಡಿದ್ದಾರೆ.

    ಇಂದು ಮಧ್ಯಾಹ್ನ ಬಿಜೆಪಿ ಸಭೆ ಕರೆದಿದ್ದು, ಮುಂದಿನ ಮುಖ್ಯಮಂತ್ರಿ ಯಾರು ಅನ್ನೋದರ ಬಗ್ಗೆ ಚರ್ಚೆಗಳು ನಡೆದಿವೆ. ಉತ್ತರಾಖಂಡ ಬಿಜೆಪಿಯ ಮಾಜಿ ಅಧ್ಯಕ್ಷ ಬಿಶನ್ ಸಿಂಗ್ ಚುಪ್ಲಾ ಮತ್ತು ಮಾಜಿ ಸಿಎಂ ತ್ರೀವೇಂದ್ರ ಸಿಂಗ್ ಹೆಸರಗಳು ಮುಖ್ಯಮಂತ್ರಿ ರೇಸ್ ನಲ್ಲಿವೆ.