Tag: Satyaki Savarkar

  • Savarkar Controversy: ರಾಹುಲ್‌ ಗಾಂಧಿ ವಿರುದ್ಧ ಮತ್ತೊಂದು ಮಾನನಷ್ಟ ಕೇಸ್‌

    Savarkar Controversy: ರಾಹುಲ್‌ ಗಾಂಧಿ ವಿರುದ್ಧ ಮತ್ತೊಂದು ಮಾನನಷ್ಟ ಕೇಸ್‌

    ಮುಂಬೈ: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಗೆ (Rahul Gandhi) ಸದ್ಯಕ್ಕೆ ಸಂಕಷ್ಟ ಬೆಂಬಿಡದಂತೆ ಕಾಣ್ತಿದೆ. ಸ್ವಾತಂತ್ರ್ಯ ಹೋರಾಟಗಾರ ವಿ.ಡಿ ಸಾವರ್ಕರ್ (VD Savarkar) ಅವರ ಮೊಮ್ಮಗ, ರಾಹುಲ್ ಗಾಂಧಿ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡಿದ್ದಾರೆ.

    ಈ ಹಿಂದೆ ರಾಹುಲ್‌ ಗಾಂಧಿ ಲಂಡನ್‌ಗೆ ತೆರಳಿದ್ದಾಗ ತಮ್ಮ ಭಾಷಣದಲ್ಲಿ ವಿ.ಡಿ ಸಾವರ್ಕರ್ ವಿರುದ್ಧ ತಪ್ಪು ಆರೋಪ ಮಾಡಿದ್ದಾರೆ ಎಂಬುದಾಗಿ ಈ ಮಾನನಷ್ಟ ಮೊಕದ್ದಮೆ ಹೂಡಲಾಗಿದೆ ಎಂದು ಮೊಮ್ಮಗ ಸತ್ಯಕಿ ಸಾವರ್ಕರ್ (Satyaki Savarkar) ತಿಳಿಸಿದ್ದಾರೆ. ಸತ್ಯಕಿ ಪರ ವಕೀಲರು ಸಿಟಿ ಸಿವಿಲ್‌ ಕೋರ್ಟ್ ನಲ್ಲಿ ರಾಹುಲ್ ಗಾಂಧಿ ವಿರುದ್ಧ ಐಪಿಸಿ (IPC) ಸೆಕ್ಷನ್ 499 ಹಾಗೂ 500 ಅಡಿಯಲ್ಲಿ ಪ್ರಕರಣ ದಾಖಲಿಸಿದ್ದಾರೆ.

    ಕೋರ್ಟ್‌ ಅಧಿಕಾರಿ ಇಂದು ಗೈರು ಹಾಜರಾಗಿದ್ದ ಕಾರಣ ಪ್ರಕರಣದ ಸಂಖ್ಯೆ ಪಡೆಯಲು ಶನಿವಾರ ಆಗಮಿಸುವಂತೆ ಸೂಚಿಸಲಾಗಿದೆ ಇನ್ನೂ ಕೇಸ್ ಸಂಖ್ಯೆ ಸಿಕ್ಕಿಲ್ಲ ಎಂದು ಸತ್ಯಕಿ ಸಾವರ್ಕರ್ ಹೇಳಿದ್ದಾರೆ. ಇದನ್ನೂ ಓದಿ: ಮೋದಿ ವಿರುದ್ಧ ವಿವಾದಾತ್ಮಕ ಹೇಳಿಕೆ – ರಾಹುಲ್‌ ಗಾಂಧಿಗೆ 2 ವರ್ಷ ಜೈಲು ಶಿಕ್ಷೆ

    ರಾಗಾ ಹೇಳಿದ್ದೇನು?
    ಲಂಡನ್ ನಲ್ಲಿರುವ ಭಾರತೀಯ ಸಮುದಾಯವನ್ನುದ್ದೇಶಿಸಿ ಮಾತನಾಡುತ್ತಿದ್ದ ರಾಹುಲ್ ಗಾಂಧಿ ಸಾವರ್ಕರ್ ವಿಷಯ ಪ್ರಸ್ತಾಪಿಸಿದ್ದರು. ʻತಾವು ಹಾಗೂ ತಮ್ಮ 5-6 ಮಂದಿ ಸ್ನೇಹಿತರು ಸೇರಿ ಓರ್ವ ಮುಸ್ಲಿಂ ವ್ಯಕ್ತಿಯನ್ನು ಥಳಿಸಿದ್ದೆವು ಆಗ ತಮಗೆ ಸಂತೋಷವಾಗಿತ್ತುʼ ಎಂದು ಸಾವರ್ಕರ್ ತಮ್ಮ ಪುಸ್ತಕದಲ್ಲಿ ಬರೆದುಕೊಂಡಿರುವುದಾಗಿ ರಾಹುಲ್ ಗಾಂಧಿ ಸಭೆಗೆ ತಿಳಿಸಿದ್ದರು. ಇದನ್ನೂ ಓದಿ: ಪಂಚಮಸಾಲಿ ಮೀಸಲಾತಿಗಿಲ್ಲ ಅಡ್ಡಿ – ಮಧ್ಯಂತರ ಆದೇಶ ತೆರವುಗೊಳಿಸಿದ ಹೈಕೋರ್ಟ್

    2019ರ ಲೋಕಸಭಾ ಚುನಾವಣಾ ಪ್ರಚಾರ ಸಂದರ್ಭದಲ್ಲಿ ಕರ್ನಾಟಕದ ಕೋಲಾರದಲ್ಲಿ (Kolara) ನಡೆದ ಕಾರ್ಯಕ್ರಮದಲ್ಲಿ ಪ್ರಧಾನಿ ಮೋದಿ ಓರ್ವ ಕಳ್ಳ ಎಂದು ರಾಹುಲ್ ಗಾಂಧಿ ವಿವಾದಾತ್ಮಕ ಹೇಳಿಕೆ ನೀಡಿದ್ದರು. ಈ ಸಂಬಂಧ ವಿಚಾರಣೆ ನಡೆಸಿದ್ದ ಸೂರ್‌ ಜಿಲ್ಲಾ ನ್ಯಾಯಾಲಯ ರಾಹುಲ್‌ ಗಾಂಧಿ ಅವರಿಗೆ 2 ವರ್ಷ ಜೈಲು ಶಿಕ್ಷೆ ವಿಧಿಸಿತು. 2 ವರ್ಷ ಶಿಕ್ಷೆಗೆ ಗುರಿಯಾದ ಬೆನ್ನಲ್ಲೇ ಅವರನ್ನು ಸಂಸದ ಸ್ಥಾನದಿಂದ ಅನರ್ಹಗೊಳಿಸಲಾಯಿತು.

  • ಹಿಂದೂಗಳು ಒಟ್ಟಾಗಿರಬೇಕೆಂಬುದು ಸಾವರ್ಕರ್ ಕನಸಾಗಿತ್ತು – ಮೊಮ್ಮಗ ಸಾತ್ಯಕಿ ಸಾವರ್ಕರ್

    ಹಿಂದೂಗಳು ಒಟ್ಟಾಗಿರಬೇಕೆಂಬುದು ಸಾವರ್ಕರ್ ಕನಸಾಗಿತ್ತು – ಮೊಮ್ಮಗ ಸಾತ್ಯಕಿ ಸಾವರ್ಕರ್

    ಶಿವಮೊಗ್ಗ: ಹಿಂದೂಗಳು (Hindu Community) ಒಗ್ಗಟ್ಟಾಗಿರಬೇಕೆಂಬುದು ಸಾವರ್ಕರ್ (VD Savarkar) ಅವರ ಕನಸಾಗಿತ್ತು ಎಂದು ವಿ.ಡಿ ಸಾವರ್ಕರ್ ಅವರ ಮೊಮ್ಮಗ ಸಾತ್ಯಕಿ ಅಶೋಕ್‌ ಸಾವರ್ಕರ್ (Satyaki Ashok Savarkar) ಹೇಳಿದ್ದಾರೆ.

    ಶಿವಮೊಗ್ಗದಲ್ಲಿ (Shivamogga) `ಸಾವರ್ಕರ್ ಸಾಮ್ರಾಜ್ಯ’ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಶಿವಮೊಗ್ಗದಲ್ಲಿ ಸಾವರ್ಕರ್ ಅವರಿಗೆ ಆಗಸ್ಟ್ 13 ರಂದು ಅಪಮಾನಿಸಲಾಗಿತ್ತು. ಶಿವಮೊಗ್ಗದ ಯುವ ದೇಶಪ್ರೇಮಿಗಳು ಇದನ್ನು ಮರೆಯಲಿಲ್ಲ. ಆದರೆ ಹಿಂದೂಗಳು ಒಗ್ಗಟ್ಟಾಗಿರಬೇಕೆಂಬುದು ಸಾವರ್ಕರ್ ಅವರ ಕನಸಾಗಿತ್ತು ಎಂದು ನೆನಪಿಸಿಕೊಂಡಿದ್ದಾರೆ. ಇದನ್ನೂ ಓದಿ: ಬುದ್ಧಿವಂತರು ಯಾವಾಗಲು ಏಕಾಂಗಿಯಾಗಿಯೇ ಕೆಲಸ ಮಾಡ್ತಾರೆ.. ಯಾಕೆ ಗೊತ್ತಾ?

    ಸಾವರ್ಕರ್ ಅವರ ಹಿಂದುತ್ವದ (Hinduism) ಮಂತ್ರ ವಾಕ್ಯ ಎಲ್ಲರೂ ಜ್ಞಾಪಕವಿಟ್ಟುಕೊಳ್ಳಬೇಕು. ಭಾರತದ ಮೇಲೆ ಅನೇಕ ಆಕ್ರಮಣಗಳಾಗಿವೆ. ಆದರೆ ಅನೇಕ ಮಹನೀಯರು, ಯೋಧರು, ಶಿವಾಜಿ ಮಹರಾಜ್, ರಾಣಪ್ರತಾಪ್ ಸಿಂಗ್‌ರಂತಹ ಪರಾಕ್ರಮಿಗಳು ಹಿಂದೂಸ್ಥಾನವನ್ನು ಉಳಿಸಲು ತ್ಯಾಗ, ಬಲಿದಾನ ಮಾಡಿದ್ದಾರೆ. ಇಂದಿನ ಈ ದೀಪ ಬೆಳಗಿಸಿರುವುದು, ಇಡೀ ವಿಶ್ವವೇ ನೋಡುತ್ತಿದೆ ಎಂದಿದ್ದಾರೆ. ಇದನ್ನೂ ಓದಿ: ಭಾರತ್ ಜೋಡೋ ಪಾದಯಾತ್ರೆ – ಕೈ-ಕೈ ಹಿಡಿದು ಹೆಜ್ಜೆ ಹಾಕಿದ ರಾಹುಲ್, ರಮ್ಯಾ

    ಈ ಕಾರ್ಯಕ್ರಮದ ಮೂಲಕ ದೇಶಭಕ್ತರನ್ನು ಎಚ್ಚರಿಸುವ ಕೆಲಸವಾಗಬೇಕು. ಸಾವರ್ಕರ್ ಅವರು ಹೊಂದಿದ್ದ ಧೇಯೋದ್ದೇಶಗಳನ್ನು ನಾಡಿನೆಲ್ಲೆಡೆ ಮತ್ತೆ ಪಸರಿಸಬೇಕು. ಅನೇಕ ದುಷ್ಟಶಕ್ತಿಗಳು ದೇಶದ ಮೇಲೆ ಆಕ್ರಮಣ ಮಾಡಲು ಹೊಂಚು ಹಾಕುತ್ತಿದ್ದು, ಇದನ್ನು ಮೆಟ್ಟಿ ನಿಲ್ಲುವ ಯೋಜನೆ ನಾವೆಲ್ಲರೂ ರೂಪಿಸಬೇಕು ಎಂದು ಕರೆ ನೀಡಿದ್ದಾರೆ.

    Live Tv
    [brid partner=56869869 player=32851 video=960834 autoplay=true]