Tag: saudi arabia

  • ಟಾಯ್ಲೆಟ್‌ನಲ್ಲಿ ಸಮೋಸಾ ತಯಾರಿಕೆ – 30 ವರ್ಷಗಳ ಬಳಿಕ ರೆಸ್ಟೊರೆಂಟ್ ಬಂದ್

    ಟಾಯ್ಲೆಟ್‌ನಲ್ಲಿ ಸಮೋಸಾ ತಯಾರಿಕೆ – 30 ವರ್ಷಗಳ ಬಳಿಕ ರೆಸ್ಟೊರೆಂಟ್ ಬಂದ್

    ರಿಯಾದ್: ಬರೋಬ್ಬರಿ 30 ವರ್ಷಗಳಿಂದ ಶೌಚಾಲಯದಲ್ಲಿ ಸಮೋಸಾ ಹಾಗೂ ಇತರ ಖಾದ್ಯಗಳನ್ನು ತಯಾರಿಸುತ್ತಿದ್ದ ಉಪಹಾರ ಗೃಹವನ್ನು ಪತ್ತೆ ಹಚ್ಚಿ, ಮುಚ್ಚಿಸಿರುವ ಘಟನೆ ಸೌದಿ ಅರೇಬಿಯಾದ ಜೆಡ್ಡಾ ನಗರದಲ್ಲಿ ನಡೆದಿದೆ.

    ಕೇಳಿದಂತೆಯೇ ವಾಕರಿಕೆ ಬರುವಂತಹ ವಿಚಿತ್ರ ಆಹಾರ ಸಂಸ್ಕೃತಿಯನ್ನು ಅನುಸರಿಸಿಕೊಂಡಿದ್ದ ಸೌದಿ ಅರೇಬಿಯಾದ ಉಪಹಾರ ಗೃಹದ ಬಗ್ಗೆ ಅಲ್ಲಿನ ಸ್ಥಳೀಯ ಅಧಿಕಾರಿಗಳು ಮಾಹಿತಿ ಪಡೆದಿದ್ದರು. ಇದೀಗ ಬರೋಬ್ಬರಿ 3 ದಶಕಗಳ ಬಳಿಕ ಅದನ್ನು ಮುಚ್ಚಿಸಲಾಗಿದೆ. ಇದನ್ನೂ ಓದಿ: ಬಾತ್‌ರೂಮ್‌ ಗೋಡೆಯಲ್ಲಿ ಸಿಕ್ತು 60 ವರ್ಷದ ಮೆಕ್‍ಡೊನಾಲ್ಡ್ಸ್ ಊಟ!

    ಉಪಹಾರ ಗೃಹದ ಟಾಯ್ಲೆಟ್‌ನಲ್ಲಿ ತಿಂಡಿ ಹಾಗೂ ಊಟವನ್ನು ತಯಾರಿಸಲಾಗುತ್ತಿದ್ದು, ಅವಧಿಯನ್ನು ಮೀರಿರುವ ಆಹಾರ ಪದಾರ್ಥಗಳನ್ನೂ ಬಳಕೆ ಮಾಡಿರುವುದಾಗಿ ಅಧಿಕಾರಿಗಳು ಕಡುಹಿಡಿದಿದ್ದಾರೆ. ಇದೀಗ ಅಸಹ್ಯಕರವಾಗಿ ಖಾದ್ಯವನ್ನು ತಯಾರಿಸುತ್ತಿದ್ದ ರೆಸ್ಟೊರೆಂಟ್ ಅನ್ನು ಅಧಿಕಾರಿಗಳು ಮುಚ್ಚಿದ್ದಾರೆ. ಇದನ್ನೂ ಓದಿ: 118 ವರ್ಷದ ಸನ್ಯಾಸಿನಿ ವಿಶ್ವದ ಅತ್ಯಂತ ಹಿರಿಯ ವ್ಯಕ್ತಿ

    ಸೌದಿ ಅರೇಬಿಯಾದಲ್ಲಿ ನೈರ್ಮಲ್ಯಕ್ಕೆ ಸಂಬಂಧಿಸಿದಂತೆ ಉಪಹಾರ ಗೃಹಗಳನ್ನು ಮುಚ್ಚಿರುವುದು ಇದೇ ಮೊದಲೇನಲ್ಲ. ಜನವರಿಯಲ್ಲಿ ಜೆಡ್ಡಾದ ಪ್ರಸಿದ್ಧ ಷವರ್ಮಾ ರೆಸ್ಟೋರೆಂಟ್ ಅನ್ನು ಮುಚ್ಚಲಾಗಿತ್ತು. ಈ ರೆಸ್ಟೋರೆಂಟ್‌ನಲ್ಲಿ ತಯಾರಿಸಲಾದ ಖಾದ್ಯಗಳಲ್ಲಿ ಸತ್ತ ಇಲಿಗಳು ಕಂಡುಬಂದಿತ್ತು. ಅದರ ವೀಡಿಯೋಗಳು ವೈರಲ್ ಆಗುತ್ತಿದ್ದಂತೆ ಉಪಹಾರ ಗೃಹವನ್ನು ಮುಚ್ಚಲಾಗಿತ್ತು.

  • ಯುಎಇಯಿಂದ ಜಮ್ಮು- ಕಾಶ್ಮೀರದಲ್ಲಿ 70 ಸಾವಿರ ಕೋಟಿ ಹೂಡಿಕೆ; 7 ಲಕ್ಷ ಉದ್ಯೋಗ ಸೃಷ್ಟಿಯ ಗುರಿ

    ಯುಎಇಯಿಂದ ಜಮ್ಮು- ಕಾಶ್ಮೀರದಲ್ಲಿ 70 ಸಾವಿರ ಕೋಟಿ ಹೂಡಿಕೆ; 7 ಲಕ್ಷ ಉದ್ಯೋಗ ಸೃಷ್ಟಿಯ ಗುರಿ

    ನವದೆಹಲಿ/ಶ್ರೀನಗರ: ಇದೇ ಮೊದಲಬಾರಿಗೆ ಭಾರತ ಹಾಗೂ ಅರಬ್ ಸಂಯುಕ್ತ ಸಂಸ್ಥಾನ (ಯುಎಇ)ದ ಭಾರತದಲ್ಲಿ ವ್ಯಾಪಾರಕ್ಕಾಗಿ ಹೂಡಿಕೆ ಮಾಡಲು ನಿರ್ಧರಿಸಿದ್ದು, 36 ಸದಸ್ಯರ ನಿಯೋಗವು ಭಾರತದ ಜಮ್ಮು ಮತ್ತು ಕಾಶ್ಮೀರದಲ್ಲಿ ವ್ಯಾಪಾರ ನಡೆಸಲು ಅನ್ವೇಷಣೆ ನಡೆಸಿದೆ. ಅಲ್ಲದೆ, ಸುಮಾರು 70 ಸಾವಿರ ಕೋಟಿ ರೂ. ಹೂಡಿಕೆ ಮಾಡಲು ಮುಂದಾಗಿವೆ.

    ವಿದೇಶಿ ಹೂಡಿಕೆದಾರರಿಂದ ಮುಂದಿನ 6 ತಿಂಗಳಲ್ಲಿ ಸುಮಾರು 70 ಸಾವಿರ ಕೋಟಿ ಹೂಡಿಕೆ ಬರುವ ನಿರೀಕ್ಷೆಯಿದ್ದು, ಈಗಲೇ 27 ಸಾವಿರ ಕೋಟಿ ಹೂಡಿಕೆಗೆ ಸರ್ಕಾರ ಅನುಮತಿ ನೀಡಿದೆ. ಇನ್ನು 6 ತಿಂಗಳೊಳಗೆ 70 ಕೋಟಿ ದಾಟಲಿದೆ ಎಂದು ಜಮ್ಮು-ಕಾಶ್ಮೀರದ ಸರ್ಕಾರ ತಿಳಿಸಿದೆ.

    4 ದಿನ ಕಾಶ್ಮೀರಕ್ಕೆ ಭೇಟಿ ನೀಡುತ್ತಿರುವ ಸೌದಿ ಅರೇಬಿಯಾ, ಹಾಂಕಾಂಗ್ ಸೇರಿದಂತೆ ಮಧ್ಯಪ್ರಾಚ್ಯದ ಪ್ರತಿನಿಧಿಗಳು ಜಮ್ಮು ಕಾಶ್ಮೀರದಲ್ಲಿ ಹೆಚ್ಚಾಗಿ ಆರೋಗ್ಯ, ಶಿಕ್ಷಣ ಮತ್ತು ಪ್ರವಾಸೋದ್ಯಮ ಕ್ಷೇತ್ರದ ಮೇಲೆ ಹೂಡಿಕೆ ಮಾಡಲು ನಿರ್ಧರಿಸಿದ್ದಾರೆ. ಕಾಶ್ಮೀರವು ಸುರಕ್ಷಿತ ಸ್ಥಳವಾಗಿರುವುದರಿಂದ ಇಲ್ಲಿ ಹೂಡಿಕೆ ಮಾಡಲು ನಿರ್ಧರಿಸಿದ್ದಾರೆ. ಈ ಹೂಡಿಕೆಯಿಂದ ಜಮ್ಮು ಮತ್ತು ಕಾಶ್ಮೀರದಲ್ಲಿ ಲಕ್ಷಾಂತರ ಮಂದಿಗೆ ಉದ್ಯೋಗ ಸಿಗಲಿದೆ. ಜೊತೆಗೆ ಮುಂಬರುವ ವಿದೇಶಿ ಉದ್ಯಮಿಗಳಿಗೆ ಮಾರುಕಟ್ಟೆ ಮುಕ್ತ ಅವಕಾಶವನ್ನು ಕಲ್ಪಿಸಿಕೊಡುತ್ತದೆ. ಅಲ್ಲದೆ, ಈ ಹೂಡಿಕೆಯಿಂದಾಗಿ ಯುಎಇ ಮತ್ತು ಭಾರತದ ನಡುವಿನ ಸಂಬಂಧವು ಬಲಗೊಳ್ಳುತ್ತದೆ ಎಂದು ಹೇಳಿದೆ.

    ಈ ಹೂಡಿಕೆಯಿಂದ 6 ರಿಂದ 7 ಲಕ್ಷ ಜನರಿಗೆ ಉದ್ಯೋಗಾವಕಾಶ ಸಿಗಲಿದ್ದು, ಶೇ.75 ಉದ್ಯೋಗ ಸ್ಥಳೀಯರಿಗೇ ನೀಡಲಾಗುತ್ತದೆ. ಮುಂದಿನ ದಿನಗಳಲ್ಲಿ ಉಳಿದ ಜಿಲ್ಲೆಗಳಿಗೂ ಉದ್ಯೋಗಾವಕಾಶ ವಿಸ್ತರಿಸಲಾಗುತ್ತದೆ ಎಂದು ಕೈಗಾರಿಕೆ ಮತ್ತು ವಾಣಿಜ್ಯ ವಿಭಾಗದ ಪ್ರಧಾನ ಕಾರ್ಯದರ್ಶಿ ರಂಜನ್ ಪ್ರಕಾಶ್ ಠಾಕೂರ್ ತಿಳಿಸಿದ್ದಾರೆ. ಇದನ್ನೂ ಓದಿ: ಬಪ್ಪನಾಡಿನಲ್ಲಿ ಮುಸ್ಲಿಂ ವ್ಯಾಪಾರಿಗಳಿಗೆ ನಿಷೇಧ – ಸಾಮರಸ್ಯ ಎತ್ತಿಹಿಡಿದ ಕ್ಷೇತ್ರದ ಆಡಳಿತ ಮಂಡಳಿ

    ಅಲ್ಲದೆ, ಯುಎಇ ಸಂಸ್ಥಾನವು ಲೋಹಗಳು, ಖನಿಜಗಳು, ಪೆಟ್ರೋ ಕೆಮಿಕಲ್‍ಗಳು ಮತ್ತು ಪೆಟ್ರೋಲಿಯಂ ಸೇರಿದಂತೆ ಸುಮಾರು 90 ಪ್ರತಿಶತ ಸರಕುಗಳ ಮೇಲೆ ಸುಂಕ ಕಡಿತಗೊಳಿಸುವ ಮುಕ್ತ ವ್ಯಾಪಾರ ಒಪ್ಪಂದಕ್ಕೆ ಫೆಬ್ರವರಿಯಲ್ಲೇ ಭಾರತದೊಂದಿಗೆ ಸಹಿ ಹಾಕಿವೆ. ಇದನ್ನೂ ಓದಿ: ಕತ್ತಿಗೆ ಮಚ್ಚು ಹಿಡಿದು ಮನೆಯ ಸದಸ್ಯರ ಕೂಡಿ ಹಾಕಿ ಫಿಲ್ಮಿ ಸ್ಟೈಲ್‌ ದರೋಡೆ

  • ರಷ್ಯಾ ತೈಲ ನಿಷೇಧ- ಅಮೆರಿಕ ಅಧ್ಯಕ್ಷರ ಫೋನ್‌ ಕರೆಗೂ ಕ್ಯಾರೆ ಎನ್ನದ ಸೌದಿ ಅರೇಬಿಯಾ, ಯುಎಇ

    ರಷ್ಯಾ ತೈಲ ನಿಷೇಧ- ಅಮೆರಿಕ ಅಧ್ಯಕ್ಷರ ಫೋನ್‌ ಕರೆಗೂ ಕ್ಯಾರೆ ಎನ್ನದ ಸೌದಿ ಅರೇಬಿಯಾ, ಯುಎಇ

    ವಾಷಿಂಗ್ಟನ್‌: ರಷ್ಯಾದಿಂದ ಆಮದಾಗುತ್ತಿದ್ದ ತೈಲಕ್ಕೆ ಅಮೆರಿಕ ನಿರ್ಬಂಧ ವಿಧಿಸಿದೆ. ಇದರ ನಡುವೆಯೇ ತೈಲ ಶ್ರೀಮಂತ ರಾಷ್ಟ್ರಗಳಾದ ಸೌದಿ ಅರೇಬಿಯಾ ಮತ್ತು ಸಂಯುಕ್ತ ಅರಬ್‌ ಒಕ್ಕೂಟ (ಯುಎಇ) ಸಂಪರ್ಕಿಸಲು ಅಮೆರಿಕ ಮುಂದಾಗಿದೆ. ಆದರೆ ಅಮೆರಿಕ ಅಧ್ಯಕ್ಷರ ಫೋನ್‌ ಕರೆಗೂ ಈ ಎರಡೂ ದೇಶಗಳ ರಾಜರು ಕ್ಯಾರೆ ಎಂದಿಲ್ಲ.

    ಸೌದಿ ಅರೇಬಿಯಾದ ರಾಜ ಮಹಮ್ಮದ್‌ ಬಿನ್‌ ಸಲ್ಮಾನ್‌ ಮತ್ತು ಸಂಯುಕ್ತ ಅರಬ್‌ ಒಕ್ಕೂಟದ ಶೇಖ್‌ ಮಹಮ್ಮದ್‌ ಬಿನ್‌ ಜಯಾದ್‌ ಅಲ್‌ ನಹ್ಯಾನ್‌ ಅವರು ಅಮೆರಿಕ ಅಧ್ಯಕ್ಷ ಜೋ ಬೈಡೆನ್‌ ಅವರೊಂದಿಗೆ ಫೋನ್‌ ಕರೆಯಲ್ಲಿ ಮಾತನಾಡಲು ನಿರಾಕರಿಸಿದ್ದಾರೆ. ಇದನ್ನೂ ಓದಿ: ಉಕ್ರೇನ್‌ ಸರ್ಕಾರ ಉರುಳಿಸಲು ಯತ್ನಿಸಿಲ್ಲ: ರಷ್ಯಾ

    ರಷ್ಯಾದಿಂದ ಆಮದಾಗುತ್ತಿದ್ದ ತೈಲಕ್ಕೆ ನಿರ್ಬಂಧ ವಿಧಿಸಿದ ಅಮೆರಿಕವು ತೈಲ ಶ್ರೀಮಂತ ರಾಷ್ಟ್ರಗಳಾದ ಸೌದಿ ಅರೇಬಿಯಾ, ಯುಎಇ ಅನ್ನು ಭೇಟಿಯಾಗಲು ಯೋಜನೆ ರೂಪಿಸಿತ್ತು. ಸೌದಿ ಮತ್ತು ಯುಎಇ ಅಧಿಕಾರಿಗಳು ಬೈಡೆನ್‌ ಆಡಳಿತದೊಂದಿಗೆ ಸಂವಾದ ನಡೆಸಲು ನಿರಾಕರಿಸಿದ್ದಾರೆ.

    ಕೆಲವು ನಿರೀಕ್ಷೆಗಳನ್ನಿಟ್ಟುಕೊಂಡು ಫೋನ್‌ ಕರೆ ಮಾಡಲಾಗಿತ್ತು. ಆದರೆ ಅದು ಸಾಧ್ಯವಾಗಲಿಲ್ಲ ಎಂದು ಸೌದಿ ಮತ್ತು ಯುಎಇ ನಿಲುವಿನ ಬಗ್ಗೆ ಅಮೆರಿಕ ಅಧಿಕಾರಿಗಳು ಪ್ರತಿಕ್ರಿಯಿಸಿದ್ದಾರೆ. ಇದನ್ನೂ ಓದಿ: ಪುಟಿನ್‍ನ್ನು ತಡೆಯದಿದ್ದರೇ ಯಾರೂ ಸುರಕ್ಷಿತವಾಗಿರಲ್ಲ: ಉಕ್ರೇನ್ ಅಧ್ಯಕ್ಷರ ಪತ್ನಿ

    Joe Biden

    2018ರಲ್ಲಿ ಪತ್ರಕರ್ತ ಜಮಾಲ್‌ ಖಶೋಗ್ಗಿ ಹತ್ಯೆ ಆರೋಪವನ್ನು ಸೌದಿ ರಾಜ ಮೊಹಮ್ಮದ್‌ ಬಿನ್‌ ಸಲ್ಮಾನ್‌ ಮೇಲೆ ಅಮೆರಿಕ ಹೊರಿಸಿತ್ತು. ಅಮೆರಿಕ ಮಾಜಿ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಆಡಳಿತವು ಸಹಿ ಹಾಕಿದ್ದ ಒಪ್ಪಂದವನ್ನು ರದ್ದುಪಡಿಸುವ ಮೂಲಕ ಸೌದಿ ಅರೆಬಿಯಾಕ್ಕೆ ಶಸ್ತ್ರಾಸ್ತ್ರಗಳ ಮಾರಾಟವನ್ನು ಬೈಡೆನ್‌ ಆಡಳಿತ ಸ್ಥಗಿತಗೊಳಿಸಿತ್ತು. ಇರಾನ್‌ ಪರಮಾಣು ಒಪ್ಪಂದವನ್ನು ಪುನರುಜ್ಜೀವನಗೊಳಿಸುವ ಯುಎಸ್‌ ಅಧ್ಯಕ್ಷರ ಪ್ರಯತ್ನ ಮತ್ತು ಆಸ್ಟ್ರಿಯಾದ ವಿಯೆನ್ನಾದ ಮಾತುಕತೆ ನಡೆಸುವುದು ಸೌದಿಯನ್ನು ಕೆರಳಿಸಿತ್ತು.

    ಸುನ್ನಿ ಮುಸ್ಲಿಂ ಸೌದಿ ಅರೇಬಿಯಾ ಮತ್ತು ಅದರ ಶಿಯಾ ಪ್ರತಿಸ್ಪರ್ಧಿ ಇರಾನ್‌ ಎರಡರೊಂದಿಗೂ ರಷ್ಯಾ ಸೌಹಾರ್ದ ಸಂಬಂಧವನ್ನು ಹೊಂದಿದೆ. ಜೊತೆಗೆ ಸಿರಿಯಾದಲ್ಲಿ ಮಿಲಿಟರಿ ಹಸ್ತಕ್ಷೇಪ ಮಾಡಿದ ವಾಷಿಂಗ್ಟನ್‌ ವಿರುದ್ಧ ಇಡೀ ಮಧ್ಯಪ್ರಾಚ್ಯದೊಂದಿಗೆ ಅಧ್ಯಕ್ಷ ಪುಟಿನ್‌ ನಾಗರಿಕ ಯುದ್ಧದಲ್ಲಿ ಅಧ್ಯಕ್ಷ ಬಶರ್‌ ಅಸ್ಸಾದ್‌ ಅವರ ಬೆಂಬಲಕ್ಕೆ ನಿಂತಿದ್ದರು. ಇದನ್ನೂ ಓದಿ: ಉಕ್ರೇನ್ ನಟನ ಸಾವಿನ ಬೆನ್ನಲ್ಲೆ ಅವರ ಕೊನೆಯ ಪೋಸ್ಟ್ ವೈರಲ್

    ರಷ್ಯಾದ ತೈಲ ಆಮದು ರದ್ದುಗೊಳಿಸುತ್ತಿದ್ದಂತೆ ಅಮೆರಿಕವು ತೈಲ ಶ್ರೀಮಂತ ರಾಷ್ಟ್ರ ಸೌದಿ ಅರೇಬಿಯಾ ಮತ್ತು ಯುಎಇನೊಂದಿಗೆ ಸಂಬಂಧವನ್ನು ಗಟ್ಟಿಗೊಳಿಸಿಕೊಳ್ಳಲು ಹರಸಾಹಸಪಟ್ಟಿದೆ. ಆದರೆ ಯುಎಇ ವಿದೇಶಾಂಗ ಸಚಿವಾಲಯವು ಕರೆಯನ್ನು ಮರು ನಿಗದಿಪಡಿಸಲಾಗುವುದು ಎಂದು ಸ್ಪಷ್ಟಪಡಿಸಿದೆ.

  • ಹಾರ್ಟ್ ಇಮೋಜಿ ಕಳುಹಿಸಿದ್ರೆ 20 ಲಕ್ಷ ದಂಡ

    ಹಾರ್ಟ್ ಇಮೋಜಿ ಕಳುಹಿಸಿದ್ರೆ 20 ಲಕ್ಷ ದಂಡ

    ರಿಯಾದ್: ಇಂದು ಹೆಚ್ಚಿನ ಸಂವಹನ ಇಮೋಜಿಗಳಲ್ಲಿಯೇ ಮುಗಿದು ಹೋಗುತ್ತದೆ.  ಕುಟುಂಬಸ್ಥರು ಕುಳಿತು ಹರಟೆ ಹೊಡೆಯುವ ಕಾಲ ಬದಲಾಗಿದೆ. ಸೋಶಿಯಲ್ ಮೀಡಿಯಾ ಮೂಲಕವಾಗಿಯೇ ಇಂದು ಹೆಚ್ಚಿನ ಸಂವಹನ ನಡೆಯುತ್ತದೆ. ವಾಟ್ಸಪ್‌, ಮೆಸೆಂಜರ್ ಆ್ಯಪ್‍ನಲ್ಲಿ ಹಾರ್ಟ್ ಇಮೋಜಿಗಳನ್ನು ಕಳುಹಿಸಿದರೆ ಜೈಲು ಶಿಕ್ಷೆ, 20 ಲಕ್ಷ ದಂಡವನ್ನು ಹಾಕಿರುವುದು ಸೌದಿ ಅರೇಬಿಯಾದಲ್ಲಿ ಸುದ್ದಿಯಾಗಿದೆ.

    ಇಂಥಹದ್ದೊಂದು ವಿಚಿತ್ರ ಕಾನೂನು ಜಾರಿ ಮಾಡಿರುವುದು ಸೌದಿ ಅರೇಬಿಯಾದಲ್ಲಿ. ಯಾರಿಗಾದರೂ ಕೆಂಪು ಬಣ್ಣದ ಹೃದಯದ ಇಮೋಜಿ ಕಳುಹಿಸಿ ತಪ್ಪಿತಸ್ಥರೆಂದು ಸಾಬೀತಾದರೆ 2ರಿಂದ 5 ವರ್ಷಗಳ ಕಾಲ ಶಿಕ್ಷೆಯನ್ನು ಎದುರಿಸಬೇಕಾಗುತ್ತದೆ. ಇದಲ್ಲದೆ, ಕಳುಹಿಸುವವರಿಗೆ 20 ಲಕ್ಷ ದಂಡವನ್ನು ವಿಧಿಸಬಹುದಾಗಿದೆ. ಸೌದಿ ಅರೇಬಿಯಾದ ಆ್ಯಂಟಿ ಫ್ರಾಡ್ ಅಸೋಸಿಯೇಶನ್ ಈ ಕುರಿತು ಆದೇಶ ಹೊರಡಿಸಿದೆ.

    ಕೆಂಪು ಹೃದಯದ ಇಮೋಜಿಯನ್ನು ಕಳುಹಿಸುವುದು ಅಪರಾಧವಾಗಿದೆ. ಆನ್‍ಲೈನ್ ಚಾಟಿಂಗ್ ಸಮಯದಲ್ಲಿ ಸ್ವೀಕರಿಸುವವರು ಪ್ರಕರಣ ದಾಖಲಿಸಿದರೆ, ಈ ಕಿರುಕುಳವು ಅಪರಾಧದ ವರ್ಗಕ್ಕೆ ಬರುತ್ತದೆ. ಸಂದೇಶವನ್ನು ಸ್ವೀಕರಿಸಿದವರು ದೂರು ಸಲ್ಲಿಸಿದರೆ ನ್ಯಾಯಾಲಯದಲ್ಲಿ ಅಪರಾಧ ಸಾಬೀತಾದರೆ, ಶಿಕ್ಷೆ, ದಂಡ ವಿಧಿಸಲಾಗುತ್ತದೆ. ಇದನ್ನೂ ಓದಿ: ವಿರಾಟ್ ಅಭಿಮಾನಿಗಳಿಗಿಲ್ಲ ಗಡಿರೇಖೆ – ಪಾಕ್ ಕ್ರಿಕೆಟ್ ಲೀಗ್‍ನಲ್ಲಿ ರಾರಾಜಿಸಿದ ಕೊಹ್ಲಿ ಪೋಸ್ಟರ್

  • ‘ಮರಳಿ ಬರುತ್ತಿದ್ದೇನೆ’ – 56ರ ಹರೆಯದಲ್ಲೂ ಜಿಮ್‍ನಲ್ಲಿ ಬೆವರಿಳಿಸುತ್ತಿದ್ದಾರೆ ಸಲ್ಲು

    ‘ಮರಳಿ ಬರುತ್ತಿದ್ದೇನೆ’ – 56ರ ಹರೆಯದಲ್ಲೂ ಜಿಮ್‍ನಲ್ಲಿ ಬೆವರಿಳಿಸುತ್ತಿದ್ದಾರೆ ಸಲ್ಲು

    ಮುಂಬೈ: ಬಾಲಿವುಡ್ ಸುಲ್ತಾನ್ ಸಲ್ಮಾನ್ ಖಾನ್ ಮತ್ತೆ ಜಿಮ್‍ಗೆ ಮರಳಿದ್ದು, ಫೋಟೋವನ್ನು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ.

    ಸಲ್ಮಾನ್ ತಮ್ಮ ಜಿಮ್ ಬಾಡಿಗೆ ಹೆಚ್ಚು ಫೇಮಸ್. ಸಲ್ಲು ತಮ್ಮ ದೇಹಕ್ಕೆ ಕೊಡುವ ಕಸರತ್ತು ನೋಡಿಯೇ ಎಷ್ಟೋ ಜನರು ಅವರ ಅಭಿಮಾನಿಗಳಾಗುತ್ತಾರೆ. ಸಲ್ಲು ಜಿಮ್ ನಲ್ಲಿ ವರ್ಕೌಟ್ ಮಾಡುತ್ತಿದ್ದ ಫೋಟೋವನ್ನು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದು, ‘ಮರಳಿ ಬರುತ್ತಿದೆ’ ಎಂದು ಬರೆದು ಪೋಸ್ಟ್ ಮಾಡಿದ್ದಾರೆ. ಫೋಟೋ ನೋಡಿದ ಅಭಿಮಾನಿಗಳು ‘ಸುಲ್ತಾನ್ ಬ್ಯಾಕ್’ ಎಂದು ಕಮೆಂಟ್ ಮಾಡುತ್ತಿದ್ದಾರೆ. ಇದನ್ನೂ ಓದಿ: ‘ನನ್ನ ಹೆಸರು ಸಲ್ಮಾನ್ ಖಾನ್’ ಎಂದು ಹಾಲಿವುಡ್ ನಟನಿಗೆ ಪರಿಚಯ ಮಾಡಿಕೊಂಡ ಸಲ್ಲು

     

    View this post on Instagram

     

    A post shared by Salman Khan (@beingsalmankhan)

    ಈ ಫೋಟೋದಲ್ಲಿ, ಸಲ್ಲು ಜಿಮ್‍ನಲ್ಲಿ ಪುಲ್ಲೋವರ್ ಮಾಡುತ್ತಿದ್ದು, ಅವರ ಲ್ಯಾಡ್ಸ್ ಸಖತ್ ಆಗಿದೆ. ಫೋಟೋ ನೋಡಿದ ಅಭಿಮಾನಿಗಳು ‘ನಮ್ಮ ಬಾಯ್ ಹಿಂತಿರುಗಿದರು’ ಎಂದು ಬರೆದರೆ, ‘ಮರಳಿ ಸ್ವಾಗತ’ ಎಂದು ಮತ್ತೊಬ್ಬ ಅಭಿಮಾನಿ ಕಮೆಂಟ್ ಮಾಡಿದ್ದಾರೆ. ಸಲ್ಲು ಮತ್ತೆ ವರ್ಕೌಟ್ ಮಾಡುತ್ತಿರುವುದನ್ನು ನೋಡಿ ಅಭಿಮಾನಿಗಳು ಸಖತ್ ಖುಷ್ ಆಗಿದ್ದಾರೆ.

    ಈ ವಾರದ ಆರಂಭದಲ್ಲಿ, ಸೌದಿ ಅರೇಬಿಯಾದ ರಿಯಾದ್‍ನಲ್ಲಿ ನಡೆದ ಜಾಯ್ ಅವಾಡ್ರ್ಸ್ 2022 ರಲ್ಲಿ ಸಲ್ಮಾನ್ ಅವರನ್ನು ಗೌರವಿಸಲಾಗಿತ್ತು. ತಮ್ಮ ಇನ್‍ಸ್ಟಾಗ್ರಾಮ್‍ನಲ್ಲಿ ಅವಾರ್ಡ್ ಫೋಟೋಗಳನ್ನು ಶೇರ್ ಮಾಡಿಕೊಂಡಿದ್ದರು. ಈ ಅವಾರ್ಡ್ ಕಾರ್ಯಕ್ರಮದಲ್ಲಿ ಸಲ್ಲು ‘ಪರ್ಸನ್ ಆಫ್ ದಿ ಇಯರ್’ ಪ್ರಶಸ್ತಿಯನ್ನು ಸ್ವೀಕರಿಸಿದರು.

    ಈ ಫೋಟೋಗೆ, ನನ್ನ ಸಹೋದರ ಬು ನಾಸರ್, ನಿಮ್ಮನ್ನು ಭೇಟಿಯಾಗಿ ಸಂತೋಷವಾಯಿತು ಎಂದು ಬರೆದು ಪೋಸ್ಟ್ ಮಾಡಿದ್ದಾರೆ. ಸಲ್ಲು ಈ ಅವಾರ್ಡ್ ಕಾರ್ಯಕ್ರಮಕ್ಕೆ ಹೋಗಿದ್ದ ವೀಡಿಯೋಗಳು ಸೋಶಿಯಲ್ ಮೀಡಿಯಾದಲ್ಲಿ ಸಖತ್ ಸದ್ದು ಮಾಡಿತ್ತು. ಅದರಲ್ಲಿಯೂ ಸಲ್ಲು ಹಾಲಿವುಡ್ ಸೂಪರ್ ಸ್ಟಾರ್ ಜಾನ್ ಟ್ರಾವೋಲ್ಟಾ ಅವರನ್ನು ಭೇಟಿ ಮಾಡಿ ‘ನನ್ನ ಹೆಸರು ಸಲ್ಮಾನ್ ಖಾನ್’ ಎಂದು ತಮ್ಮನ್ನು ಪರಿಚಯ ಮಾಡಿಕೊಂಡಿದ್ದ ವಿಡಿಯೋ ವೈರಲ್ ಆಗಿತ್ತು.

     

    View this post on Instagram

     

    A post shared by Salman Khan (@beingsalmankhan)

    ಅವಾರ್ಡ್ ಸ್ವೀಕರಿಸಿದ ವೇಳೆ ವೇದಿಕೆ ಮೇಲೆ ಮಾತನಾಡಿದ ಅವರು, ನನ್ನನ್ನು ಸುಮಾರು 12 ವರ್ಷ ವಯಸ್ಸಿನವನಾಗಿದ್ದಾಗ ನೀವು ನೋಡಿದ್ದೀರಿ. ಈಗ ನನಗೆ 56 ವರ್ಷ ಎಂದು ತಮ್ಮ ವೃತ್ತಿಜೀವನದ ಬಗ್ಗೆ ಮಾತನಾಡಿದರು. ಇದನ್ನೂ ಓದಿ: ಮಣಿರತ್ನಂ ಸಿನಿಮಾದಲ್ಲಿ ನಾಯಕಿ ಆಗಲು ನಾನು ಚಿತ್ರರಂಗಕ್ಕೆ ಬಂದಿದ್ದೆ : ಅದಿತಿ ರಾವ್

    ಸಲ್ಲು ಶೂಟಿಂಗ್ ನಲ್ಲಿ ಬ್ಯುಸಿಯಾಗಿದ್ದು, ‘ಟೈಗರ್-3’ ಸಿನಿಮಾ ರಿಲೀಸ್ ಗಾಗಿ ಅಭಿಮಾನಿಗಳು ಕಾಯುತ್ತಿದ್ದಾರೆ. ಈ ಸಿನಿಮಾದಲ್ಲಿ ಕತ್ರಿನಾ ಕೈಫ್ ಮತ್ತು ಇಮ್ರಾನ್ ಹಶ್ಮಿ ಸಹ ಕಾಣಿಸಿಕೊಳ್ಳಲಿದ್ದಾರೆ. ಸಲ್ಲು ‘ಭಜರಂಗಿ ಭಾಯಿಜಾನ್’ ಸಿನಿಮಾದ ಸೀಕ್ವೆಲ್ ಮಾಡುವುದಾಗಿ ಮಾಧ್ಯಮಗಳ ಮೂಲಕ ಖಚಿತಪಡಿಸಿದ್ದಾರೆ.

  • ಸೌದಿ ಅರೇಬಿಯಾದಲ್ಲಿ ಯೋಗ ಉತ್ಸವ – ಸಾವಿರಕ್ಕೂ ಹೆಚ್ಚು ಜನ ಭಾಗಿ

    ರಿಯಾದ್: ಸೌದಿ ಅರೇಬಿಯಾದಲ್ಲಿ ಇದೇ ಮೊದಲ ಬಾರಿಗೆ ಯೋಗ ಉತ್ಸವ ಆಯೋಜನೆಗೊಂಡಿದೆ. ಜನವರಿ 29ರಂದು ಪ್ರಾರಂಭವಾದ ಕಾರ್ಯಕ್ರಮದಲ್ಲಿ 1 ಸಾವಿರಕ್ಕೂ ಹೆಚ್ಚು ಜನರು ಭಾಗವಹಿಸಿದ್ದಾರೆ.

    ಜೆಡ್ಡಾದಲ್ಲಿರುವ ಕಿಂಗ್ ಅಬ್ದುಲ್ಲಾಎಕನಾಮಿಕ್ ಸಿಟಿಯಲ್ಲಿನ ಜುಮನ್ ಪಾರ್ಕ್‌ನಲ್ಲಿ ಯೋಗ ಉತ್ಸವ ನಡೆಯುತ್ತಿದ್ದು, ಫೆಬ್ರವರಿ 1ರ ವರೆಗೆ ನಡೆಯಲಿದೆ. ಕಾರ್ಯಕ್ರಮವನ್ನು ಸೌದಿ ಯೋಗ ಸಮಿತಿ ಆಯೋಜಿಸಿದ್ದು, ಬಹುತೇಕ ಸೌದಿಯ ಯೋಗ ಶಿಕ್ಷಕರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದಾರೆ. ಇದನ್ನೂ ಓದಿ: ಆರೋಗ್ಯ ಕಾರ್ಯಕರ್ತರು ಸೇನಾನಿಗಳಂತೆ ಕೆಲಸ ಮಾಡಿದ್ದಾರೆ: ಕೋವಿಂದ್

    ಸೌದಿ ಅರೇಬಿಯಾದ ಒಲಿಂಪಿಕ್ ಸಮಿತಿ ಸ್ಥಾಪಿಸಿರುವ ಸೌದಿ ಯೋಗ ಸಮಿತಿ ಸರ್ಕಾರಿ ಭಾಗವಾಗಿದ್ದು, 2021ರ ಮೇ 16ರಂದು ಯೋಗವನ್ನು ಉತ್ತೇಜಿಸಲು ಪ್ರಾರಂಭವಾಯಿತು. ನೌಲ್ ಅಲ್ ಮರ್ವಾಯ್ ಅವರನ್ನು ಈ ಸಂಸ್ಥೆಯ ಅಧ್ಯಕ್ಷನನ್ನಾಗಿ ನೇಮಿಸಲಾಗಿದೆ. ಸೌದಿ ಯೋಗ ಸಮಿತಿ ಹಾಗೂ ಆಯುಶ್ ಸಚಿವಾಲಯ ಈ ಉತ್ಸವದಲ್ಲಿ ಜಂಟಿಯಾಗಿ ಕಾರ್ಯ ನಿರ್ವಹಿಸುತ್ತಿದೆ. ಇದನ್ನೂ ಓದಿ: ಬೆಂಗಳೂರು ವಿವಿಯಲ್ಲಿ ಪ್ರತಿಭಟನೆ ವೇಳೆ ಮಾರಾಮಾರಿ – ವಿದ್ಯಾರ್ಥಿಗಳ ಮೇಲೆ ಲಾಠಿ ಚಾರ್ಜ್

    ಭರತ ಹಾಗೂ ಸೌದಿ ಅರೇಬಿಯಾ ಇದೇ ಮೊದಲ ಬಾರಿಗೆ ಜಂಟಿಯಾಗಿ ಯೋಗ ಕಾರ್ಯಕ್ರಮ ಆಯೋಜಿಸಿದೆ. ಯೋಗ ತರಬೇತಿಯೊಂದಿಗೆ ಪ್ರಾರಂಭವಾದ ಕಾರ್ಯಕ್ರಮದಲ್ಲಿ ಏಷ್ಯನ್ ಗೇಮ್ಸ್‌ನಲ್ಲಿ ಪದಕ ಗೆದ್ದಿದ್ದ ಅರವ್ ಪ್ರದಿಶಾ ಅವರನ್ನು ಸನ್ಮಾನಿಸಲಾಗಿದೆ.

  • ಉಗ್ರ ಚಟುವಟಿಕೆಗಳಿಗೆ ಹೆಬ್ಬಾಗಿಲು – ತಬ್ಲಿಘಿ ಸಂಘಟನೆಯನ್ನು ನಿಷೇಧಿಸಿದ ಸೌದಿ ಸರ್ಕಾರ

    ಉಗ್ರ ಚಟುವಟಿಕೆಗಳಿಗೆ ಹೆಬ್ಬಾಗಿಲು – ತಬ್ಲಿಘಿ ಸಂಘಟನೆಯನ್ನು ನಿಷೇಧಿಸಿದ ಸೌದಿ ಸರ್ಕಾರ

    ರಿಯಾದ್‌: ಮಹತ್ವದ ಬೆಳವಣಿಗೆಯಲ್ಲಿ ಸೌದಿ ಅರೇಬಿಯಾ ಸರ್ಕಾರ ಸುನ್ನಿ ಇಸ್ಲಾಮಿಕ್ ಸಂಘಟನೆಯಾಗಿರುವ ತಬ್ಲಿಘಿ ಜಮಾತ್ ಅನ್ನು ನಿಷೇಧಿಸಿದೆ. ಈ ಸಂಘಟನೆ ಭಯೋತ್ಪಾದನೆ ಚಟುವಟಿಕೆಗಳಿಗೆ ಹೆಬ್ಬಾಗಿಲು ಎಂದಿರುವ ಸರ್ಕಾರ ಈ ಸಂಘಟನೆಯಿಂದ ದೂರ ಇರುವಂತೆ ಪ್ರಜೆಗಳಿಗೆ ಎಚ್ಚರಿಕೆ ನೀಡಿದೆ.

    ಮುಂದಿನ ಶುಕ್ರವಾರದ ಪ್ರಾರ್ಥನೆಯ ಸಮಯದಲ್ಲಿ ಈ ಕುರಿತು ಜನರಿಗೆ ಮಾಹಿತಿಯನ್ನು ನೀಡಬೇಕೆಂದು ಮಸೀದಿಗಳ ಮುಖ್ಯಸ್ಥರಿಗೆ ಸೌದಿ ಇಸ್ಲಾಮಿಕ್ ವ್ಯವಹಾರಗಳ ಸಚಿವಾಲಯ ಸೂಚಿಸಿದೆ.

    ಈ ಸಂಬಂಧ ಹೇಳಿಕೆ ಬಿಡುಗಡೆ ಮಾಡಿದ ಇಸ್ಲಾಮಿಕ್‌ ವ್ಯವಹಾರ ಸಚಿವ ಡಾ. ಅಬ್ದುಲ್ಲತೀಫ್‌ ಆಲ್‌ ಶೇಖ್‌, ಶುಕ್ರವಾರ ಪ್ರಾರ್ಥನೆ ನಡೆಯುವ ವೇಳೆ ಎಲ್ಲ ಮಸೀದಿಗಳ ಮುಖ್ಯಸ್ಥರು ತಬ್ಲಿಘಿ ಮತ್ತು ದಾವಾ ಸಂಘಟನೆಯ ಬಗ್ಗೆ ಎಚ್ಚರಿಕೆ ನೀಡಿ 4 ಅಂಶಗಳ ಬಗ್ಗೆ ಹೇಳಬೇಕು ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಪಾಕ್‍ನೊಂದಿಗೆ ಮಾತುಕತೆ ಇಲ್ಲದೇ ಉಗ್ರವಾದ ಅಂತ್ಯ ಅಸಾಧ್ಯವಾಗಿದೆ: ಫಾರೂಕ್ ಅಬ್ದುಲ್ಲಾ

    4 ಅಂಶಗಳು ಯಾವುದು?
    1. ಈ ಸಂಘಟನೆಯ ಜೊತೆ ನಂಟು ಹೊಂದುವುದನ್ನು ನಿಷೇಧಿಸಲಾಗಿದೆ ಎಂಬುದನ್ನು ತಿಳಿಸಬೇಕು.
    2. ತಬ್ಲಿಘಿಗಳ ಪ್ರಮುಖ ತಪ್ಪು ನಡೆಗಳ ಬಗ್ಗೆ ವಿವರಿಸಬೇಕು.
    3. ಭಯೋತ್ಪಾನೆಗೆ ಹೆಬ್ಬಾಗಿಲು, ತಪ್ಪು ಮಾರ್ಗದರ್ಶನ ನೀಡುವ ಈ ಸಂಘಟನೆಯಿಂದ ದೂರ ಇರುವಂತೆ ಹೇಳಬೇಕು.
    4. ತಬ್ಲಿಘಿ ಸಂಘಟನೆಯಿಂದ ಸಮಾಜಕ್ಕೆ ಇರುವ ಅಪಾಯದ ಬಗ್ಗೆ ವಿವರಿಸಬೇಕು.

    ತಬ್ಲಿಘಿಗಳು ಯಾರು?
    ಬ್ರಿಟಿಷರ ಅವಧಿಯಲ್ಲಿ 1926 ರಲ್ಲಿ ಭಾರತದಲ್ಲಿ ಹುಟ್ಟಿಕೊಂಡ ತಬ್ಲಿಘಿ ಜಮಾತ್ ಸುನ್ನಿ ಇಸ್ಲಾಮಿಕ್ ಮಿಷನರಿ ಸಂಘಟನೆಯಾಗಿದೆ. ಮುಸ್ಲಿಂ ಸಂಪ್ರದಾಯ, ಆಚರಣೆ, ಉಡುಪುಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕೆಂದು ಎಂದು ಪ್ರತಿಪಾದಿಸುತ್ತದೆ. ಜಗತ್ತಿನಾದ್ಯಂತ 35 ರಿಂದ 40 ಕೋಟಿ ಅನುಯಾಯಿಗಳು ಇದ್ದಾರೆ ಎಂದು ಅಂದಾಜಿಸಲಾಗಿದೆ. ರಾಜಕೀಯ ಚಟುವಟಿಕೆಯಿಂದ ದೂರ ಇದ್ದು ಧರ್ಮ ಪ್ರಚಾರ ಮಾತ್ರ ನಮ್ಮ ಕೆಲಸ ಎಂದು ಸಂಘಟನೆ ಹೇಳಿಕೊಳ್ಳುತ್ತದೆ.‌ ಇದನ್ನೂ ಓದಿ: ಹಿಂದೂ ಧರ್ಮಕ್ಕೆ ಮತಾಂತರಗೊಂಡ ಕೇರಳದ ಖ್ಯಾತ ಸಿನಿಮಾ ನಿರ್ದೇಶಕ ಅಲಿ ಅಕ್ಬರ್

    ಕಳೆದ ವರ್ಷ ಕೋವಿಡ್ ಮೊದಲ ಅಲೆಯ ಸಮಯದಲ್ಲಿ ಭಾರತದಲ್ಲಿ ಲಾಕ್‌ಡೌನ್ ನಿಯಮಗಳನ್ನು ಉಲ್ಲಂಘಿಸಿ ದೆಹಲಿಯ ನಿಜಾಮುದ್ದೀನ್ ಪ್ರದೇಶದಲ್ಲಿ ಸಾಮೂಹಿಕ ಸಭೆಯ ಆಯೋಜಿಸಿದ್ದಕ್ಕೆ ಈ ಸಂಘಟನೆಯ ವಿರುದ್ಧ ಮೊದಲ ಬಾರಿಗೆ ದೇಶದಲ್ಲಿ ಭಾರೀ ಟೀಕೆಗಳು ವ್ಯಕ್ತವಾಗಿತ್ತು.

    ತಬ್ಲಿಘಿಗಳು ನೇರವಾಗಿ ಉಗ್ರ ಕೃತ್ಯದಲ್ಲಿ ಭಾಗಿಯಾದ ಬಗ್ಗೆ ಉದಾಹರಣೆ ಇಲ್ಲ. ಆದರೆ ಈ ಸಂಘಟನೆ ನೀಡುವ ವಿಪರೀತ ಧರ್ಮ ಬೋಧನೆಯಿಂದ ಇದರ ಅನುಯಾಯಿಗಳು ತೀವ್ರವಾದಿ ಮುಸ್ಲಿಮ್‌ ಸಂಘಟನೆಗಳಿಗೆ ಸೇರುತ್ತಾರೆ ಎನ್ನುವುದು ಅಮೆರಿಕದ ಆರೋಪ.

  • 22,572 ಕೋಟಿ ರೂ ಪಾಕಿಸ್ತಾನಕ್ಕೆ ಸಾಲ ನೀಡಿದ ಸೌದಿ ಅರೇಬಿಯಾ

    22,572 ಕೋಟಿ ರೂ ಪಾಕಿಸ್ತಾನಕ್ಕೆ ಸಾಲ ನೀಡಿದ ಸೌದಿ ಅರೇಬಿಯಾ

    ಇಸ್ಲಾಮಾಬಾದ್: ಪಾಕಿಸ್ತಾನ ಸರ್ಕಾರ ಸಿಬ್ಬಂದಿಗೆ 3 ತಿಂಗಳಿಂದ ವೇತನ ನೀಡಿಲ್ಲ ಎನ್ನುವ ಸುದ್ದಿಯಾಗಿತ್ತು. ಇದೀಗ ಆರ್ಥಿಕ ಮುಗ್ಗಟ್ಟಿನಿಂದ ನಲುಗುತ್ತಿರುವ ಪಾಕಿಸ್ತಾನಕ್ಕೆ ಮಿತ್ರರಾಷ್ಟ್ರ ಸೌದಿ ಅರೇಬಿಯಾದ ನೆರವಿಗೆ ಬಂದಿದೆ.

    ಸೌದಿ ಅರೇಬಿಯಾ, ಪಾಕ್‍ಗೆ 3 ಬಿಲಿಯನ್ ಡಾಲರ್ ಅಂದರೆ 22,572 ಕೋಟಿ ರೂ. ಸಾಲ ನೀಡಿದೆ. ಒಂದು ತಿಂಗಳ ಹಿಂದೆಯಷ್ಟೆ ಪಾಕ್ ಪ್ರಧಾನಿ ಇಮ್ರಾನ್ ಖಾನ್ ಸೌದಿಗೆ ಭೇಟಿ ನೀಡಿ ರಾಜಕುಮಾರ ಮೊಹಮದ್ ಬಿನ್ ಸಲ್ಮಾನ್ ಅವರೊಂದಿಗೆ ಮಾತುಕತೆ ನಡೆಸಿದ್ದರು. ಇದನ್ನೂ ಓದಿ: ಇಮ್ರಾನ್‌ ಖಾನ್‌ ಸರ್ಕಾರ ಮಾನ ಹರಾಜು ಹಾಕಿದ ಪಾಕ್‌ ರಾಯಭಾರ ಕಚೇರಿ

    ಸೌದಿ ಭೇಟಿ ಸಂದರ್ಭ ಪಾಕ್‍ಗೆ ಆರ್ಥಿಕ ನೆರವು ನೀಡುವ ಬಗ್ಗೆ ಇಮ್ರಾನ್ ಪ್ರಸ್ತಾಪಿಸಿದ್ದರು ಎನ್ನಲಾಗಿದೆ. ಈ ಸಂದರ್ಭ 4.2 ಬಿಲಿಯನ್ ಡಾಲರ್ ನೆರವು ನೀಡಲು ಸೌದಿ ಸಮ್ಮತಿ ಸೂಚಿಸಿತ್ತು ಎನ್ನಲಾಗಿದೆ. ಅದರಲ್ಲಿ 3 ಬಿಲಿಯನ್ ಡಾಲರ್ ಹಣವನ್ನು ಸೌದಿ ಇದೀಗ ಪಾಕ್‍ಗೆ ನೀಡಿದೆ. ಇದನ್ನೂ ಓದಿ: ಜನವರಿ 1 ರಿಂದ ಎಟಿಎಂ ಶುಲ್ಕ ಹೆಚ್ಚಳ

    ಸರ್ಕಾರ ಸಂಬಳ ಪಾವತಿಸಿಲ್ಲ ಎಂದು ಆರೋಪಿಸಿ ಪಾಕಿಸ್ತಾನದ ಪ್ರಧಾನಿ ಇಮ್ರಾನ್‌ ಖಾನ್‌ ಅವರನ್ನು ಟೀಕಿಸಿದ ವೀಡಿಯೋ ಹಾಗೂ ಪೋಸ್ಟ್‌ಗಳು ಸರ್ಬಿಯಾದಲ್ಲಿರುವ ಪಾಕಿಸ್ತಾನದ ರಾಯಭಾರ ಕಚೇರಿಯ ಅಧಿಕೃತ ಟ್ವಿಟರ್‌ ಖಾತೆಯಿಂದಲೇ ಶೇರ್‌ ಆಗಿದ್ದು, ಇದು ಪ್ರಧಾನಿ ಇಮ್ರಾನ್‌ ಅವರನ್ನು ಮುಜುಗರಕ್ಕೀಡು ಮಾಡಿದೆ.

    ದೇಶದಲ್ಲಿ ಹಣದುಬ್ಬರ ಹೆಚ್ಚುತ್ತಿರುವ ಕಾರಣ, ಸರ್ಕಾರಿ ಅಧಿಕಾರಿಗಳಾಗಿ ನಾವು ನಿಮಗಾಗಿ 3 ತಿಂಗಳಿಂದ ಸಂಬಳವಿಲ್ಲದೇ ಕೆಲಸ ಮಾಡಿದ್ದೇವೆ. ಶಾಲೆ ಶುಲ್ಕ ಕಟ್ಟಿಲ್ಲ ಎಂದು ನಮ್ಮ ಮಕ್ಕಳನ್ನು ಶಾಲೆಯಿಂದ ಹೊರಹಾಕಲಾಗಿದೆ. ಇದು ಹೊಸ ಪಾಕಿಸ್ತಾನವೇ ಎಂದು ರಾಯಭಾರಿ ಕಚೇರಿಯಿಂದ ಟ್ವೀಟ್‌ ಮಾಡಲಾಗಿತ್ತು.

    ಈ ಕುರಿತು ಪ್ರತಿಕ್ರಿಯಿಸಿರುವ ಪಾಕಿಸ್ತಾನ ವಿದೇಶಾಂಗ ಸಚಿವಾಲಯ, ಸರ್ಬಿಯಾದಲ್ಲಿರುವ ಪಾಕಿಸ್ತಾನ ರಾಯಭಾರಿ ಕಚೇರಿಯ ಅಧಿಕೃತ ಟ್ವಿಟರ್‌, ಫೇಸ್‌ಬುಕ್‌, ಇನ್‌ಸ್ಟಾಗ್ರಾಮ್‌ ಖಾತೆಗಳು ಹ್ಯಾಕ್‌ ಆಗಿವೆ. ಪೋಸ್ಟ್‌ಗಳನ್ನು ಅಳಿಸಿ ಹಾಕಲಾಗಿದೆ ಎಂದು ತಿಳಿಸಿತ್ತು.

  • ಸೌದಿ ಅರೇಬಿಯಾದಲ್ಲಿ ಓಮಿಕ್ರಾನ್‌ ಮೊದಲ ಪ್ರಕರಣ ಪತ್ತೆ- ಉತ್ತರ ಆಫ್ರಿಕಾದಿಂದ ಬಂದ ವ್ಯಕ್ತಿಯಲ್ಲಿ ಸೋಂಕು!

    ಸೌದಿ ಅರೇಬಿಯಾದಲ್ಲಿ ಓಮಿಕ್ರಾನ್‌ ಮೊದಲ ಪ್ರಕರಣ ಪತ್ತೆ- ಉತ್ತರ ಆಫ್ರಿಕಾದಿಂದ ಬಂದ ವ್ಯಕ್ತಿಯಲ್ಲಿ ಸೋಂಕು!

    ರಿಯಾದ್: ಸೌದಿ ಅರೇಬಿಯಾದಲ್ಲಿ ಕೊರೊನಾ ವೈರಸ್‌ ರೂಪಾಂತರಿ ಓಮಿಕ್ರಾನ್‌ ದೃಢಪಟ್ಟ ಮೊದಲ ಪ್ರಕರಣ ವರದಿಯಾಗಿದೆ. ಉತ್ತರ ಆಫ್ರಿಕಾದಿಂದ ವಾಪಸ್ಸಾಗಿದ್ದ ವ್ಯಕ್ತಿ ಸೋಂಕು ಕಾಣಿಸಿಕೊಂಡಿದೆ ಆರೋಗ್ಯ ಸಚಿವಾಲಯ ವರದಿ ಮಾಡಿದೆ.

    ಓಮಿಕ್ರಾನ್‌ ಪೀಡಿತ ವ್ಯಕ್ತಿಯನ್ನು ಐಸೊಲೇಷನ್‌ನಲ್ಲಿ ಇರಿಸಲಾಗಿದೆ. ವ್ಯಕ್ತಿಯ ಆರೋಗ್ಯದ ಕುರಿತು ನಿಗಾ ವಹಿಸಲಾಗಿದೆ. ಅಲ್ಲದೇ ಆತನ ಸಂಪರ್ಕಕ್ಕೆ ಬಂದವರ ಕುರಿತು ಮಾಹಿತಿ ಸಂಗ್ರಹಿಸಲಾಗುತ್ತಿದೆ ಎಂದು ಸಚಿವಾಲಯ ತಿಳಿಸಿದೆ. ಇದನ್ನೂ ಓದಿ: OMICRON ಭೀತಿ- 30,000 ಬೆಡ್ ಸಜ್ಜು ಮಾಡಿದ ದೆಹಲಿ ಸರ್ಕಾರ

    ದಕ್ಷಿಣ ಆಫ್ರಿಕಾದ ಏಳು ದೇಶಗಳಿಂದ ವಿಮಾನ ಸಂಚಾರಕ್ಕೆ ಸೌದಿ ಅರೇಬಿಯಾ ನಿರ್ಬಂಧ ವಿಧಿಸಿತ್ತು. ಆದರೆ ಉತ್ತರ ಆಫ್ರಿಕಾದೊಂದಿಗಿನ ವಿಮಾನ ಸಂಚಾರಕ್ಕೆ ಯಾವುದೇ ನಿರ್ಬಂಧ ವಿಧಿಸಿರಲಿಲ್ಲ ಎನ್ನಲಾಗಿದೆ.

    ಕೋವಿಡ್‌ ಸಾಂಕ್ರಾಮಿಕ ಸಂದರ್ಭದಲ್ಲಿ ವಿಧಿಸಿದ್ದ ಕೆಲವು ನಿರ್ಬಂಧಗಳನ್ನು ಸೌದಿ ಅರೇಬಿಯಾ ತೆರವುಗೊಳಿಸಿದೆ. ಮುಸ್ಲಿಮರು ಹಬ್ಬಗಳ ಸಂದರ್ಭದಲ್ಲಿ ಪರಸ್ಪರರು ಆಲಿಂಗನ ಮಾಡಿಕೊಂಡು ಶುಭಕೋರುವ ವಿಧಾನಕ್ಕೆ ಅಕ್ಟೋಬರ್‌ನಿಂದ ಮತ್ತೆ ಅವಕಾಶ ಕಲ್ಪಿಸಲಾಗಿತ್ತು. ಇದನ್ನೂ ಓದಿ: ಕೋವಿಡ್ ಹಾಟ್‌ಸ್ಪಾಟ್‌ಗಳಿಂದ ಸ್ಯಾಂಪಲ್‌ ಕಳುಹಿಸಿ: ರಾಜ್ಯಗಳಿಗೆ ಕೇಂದ್ರ ಸೂಚನೆ

    ಸೌದಿ ಅರೇಬಿಯಾದಲ್ಲಿ ಸುಮಾರು 3.5 ಕೋಟಿ ಜನಸಂಖ್ಯೆ ಇದೆ. ಈವರೆಗೆ ಕೋವಿಡ್‌ ದೃಢಪಟ್ಟ 5,49,000 ಪ್ರಕರಣಗಳು ವರದಿಯಾಗಿವೆ. ಈ ಪೈಕಿ 8,836 ಮಂದಿ ಮೃತಪಟ್ಟಿದ್ದಾರೆ. ದೇಶದಲ್ಲಿ ಇದುವರೆಗೆ 4.7 ಕೋಟಿ ಡೋಸ್‌ ಕೋವಿಡ್‌ ಲಸಿಕೆ ನೀಡಲಾಗಿದೆ.

  • ಸೌದಿಯಲ್ಲಿ ಉಡುಪಿ ವ್ಯಕ್ತಿಗೆ ಐಎಸ್‍ಎಫ್ ನೆರವು – 21 ವರ್ಷದ ಬಳಿಕ ತವರಿಗೆ

    ಸೌದಿಯಲ್ಲಿ ಉಡುಪಿ ವ್ಯಕ್ತಿಗೆ ಐಎಸ್‍ಎಫ್ ನೆರವು – 21 ವರ್ಷದ ಬಳಿಕ ತವರಿಗೆ

    ದಮ್ಮಾಮ್/ಉಡುಪಿ: ಕಳೆದ ಇಪ್ಪತ್ತೊಂದು ವರ್ಷಗಳಿಂದ ಸೌದಿ ಅರೇಬಿಯಾದಿಂದ ತಾಯ್ನಾಡಿಗೆ ಮರಳದೆ ಕುಟುಂಬದಿಂದ ದೂರವಾಗಿದ್ದು ಗಂಭೀರ ಕಾಯಿಲೆ ಪೀಡಿತರಾಗಿದ್ದ 68ರ ಹರೆಯದ ಉಡುಪಿ ತೋನ್ಸೆ ಮೂಲದ ವ್ಯಕ್ತಿಯನ್ನು ತವರಿಗೆ ಮರಳಿಸುವಲ್ಲಿ ಇಂಡಿಯನ್ ಸೋಶಿಯಲ್ ಫೋರಂ (ಐಎಸ್‍ಎಫ್) ಯಶಸ್ವಿಯಾಗಿದೆ. ಸಂತ್ರಸ್ತ ವ್ಯಕ್ತಿ ಇತ್ತೀಚೆಗೆ ವಂದೇ ಭಾರತ್ ವಿಮಾನದ ಮೂಲಕ ಮಂಗಳೂರು ತಲುಪಿದ್ದಾರೆ.

    ಉಡುಪಿ ತೋನ್ಸೆ ಯ ಪ್ರಭಾಕರ್, ಕಳೆದ ನಲ್ವತ್ತು ವರ್ಷಗಳಿಂದ ಸೌದಿ ಅರೇಬಿಯಾದ ದಮ್ಮಾಮ್ ನಲ್ಲಿ ಟೈಲರ್ ವೃತ್ತಿ ಮಾಡುತ್ತಿದ್ದು. 2000ನೇ  ಇಸವಿಯಲ್ಲಿ ಕೊನೆಯ ಬಾರಿಗೆ ತಾಯ್ನಾಡಿಗೆ ಹೋಗಿ ಬಂದಿದ್ದರು. ನಂತರ ತವರಿಗೆ ಹಿಂದಿರುಗಿರಲಿಲ್ಲ. ಇತ್ತೀಚೆಗೆ ವಾಟ್ಸಪ್‍ನಲ್ಲಿ ಪ್ರಭಾಕರ್ ರವರು ಚಿಂತಾಜನಕ ಸ್ಥಿತಿಯಲ್ಲಿರುವ ವಿಷಯ ವೈರಲ್ ಆಗಿತ್ತು ಮಾತ್ರವಲ್ಲದೆ ಊರಿನಿಂದ ಎಸ್.ಡಿ.ಪಿ.ಐ. ಪಕ್ಷ ಕೂಡಾ ಐ.ಎಸ್.ಎಫ್ ದಮ್ಮಾಂ ಘಟಕವನ್ನು ಸಂಪರ್ಕಿಸಿ ಸಹಾಯ ನೀಡಲು ಕೋರಿತ್ತು. ಹೊಟ್ಟೆ ಸಂಬಂಧಿ ಕಾಯಿಲೆಯಿಂದ ನರಳುತ್ತಿದ್ದ ಅವರು ರಕ್ತಭೇದಿ ಮಾಡುತ್ತಿದ್ದರು ಮತ್ತು ಚಿಕಿತ್ಸೆಯಿಲ್ಲದೆ ನರಳುತ್ತಿದ್ದರು.

    ಮಾಹಿತಿ ಕಲೆ ಹಾಕಿದ ಇಂಡಿಯನ್ ಸೋಶಿಯಲ್ ಫೋರಂ ದಮ್ಮಾಮ್ ಘಟಕ ವೆಲ್ಫೇರ್ ವಿಭಾಗದ ಮುಹಮ್ಮದ್ ಅಲಿ ಮೂಳೂರು ರವರ ನೇತೃತ್ವದ ಲ್ಲಿ ಒಂದು ತಂಡ ರಚಿಸಿತು. ಅದರಂತೆ ಇಬ್ರಾಹೀಂ ಕೃಷ್ಣಾಪುರ ಹಾಗೂ ಇಮ್ರಾನ್ ಕಾಟಿಪಳ್ಳ ರವರು ಜೊತೆಗೂಡಿ ದಮ್ಮಾಮ್ ನ ಸೀಕೊದಲ್ಲಿ ಪ್ರಭಾಕರ್ ರವರನ್ನು ಪತ್ತೆಮಾಡಿತ್ತು.  ನೈರ್ಮಲ್ಯ ರಹಿತ ಕೊಠಡಿಯೊಂದರಲ್ಲಿ ಚಿಂತಾಜನಕ ಸ್ಥಿತಿಯಲ್ಲಿ ಪ್ರಭಾಕರ್  ಪತ್ತೆಯಾಗಿದ್ದರು. ನಾಲ್ಕು ವರ್ಷಗಳಿಂದ ಅವರ ಇಕಾಮಾ ನವೀಕರಣಗೊಂಡಿರಲಿಲ್ಲ. ಈ ಸಂದರ್ಭದಲ್ಲಿ ತಕ್ಷಣವೇ ಐ.ಎಸ್.ಎಫ್ ಅವರನ್ನು ಅಲ್ ಖೋಬಾರ್ ನ ಖಾಸಗಿ ಆಸ್ಪತ್ರೆಯೊಂದಕ್ಕೆ ಸೇರಿಸಿ ಪ್ರಾರ್ಥಮಿಕ ಚಿಕಿತ್ಸೆಯ ಏರ್ಪಾಡು ಮಾಡಿತ್ತು ಆದರೆ  ಇಕಾಮ ಮತ್ತು ಆರೋಗ್ಯ ವಿಮೆ ಅವಧಿ ಮುಗಿದ ಕಾರಣ ಅವರನ್ನು ನಂತರ ಕಿಂಗ್ ಫಹದ್ ಯೂನಿವರ್ಸಿಟಿ ಆಸ್ಪತ್ರೆಗೆ ವರ್ಗಾಯಿಸಲು ವೆಲ್ಫೇರ್ ತಂಡ ನಿರ್ಧರಿಸಿತು. ಅಲ್ಲಿ ಸುಮಾರು ಎರಡು ವಾರದ ವರೆಗೆ ಅಚ್ಚುಕಟ್ಟಿನ ಶುಶ್ರೂಷೆ ಗಳನ್ನು ನೀಡಿದ ಆಸ್ಪತ್ರೆ ,ಅವರನ್ನು ಎಲ್ಲಾ ತರದ ಪರೀಕ್ಷೆಗೆ ಒಳಪಡಿಸಿ, ಅವರಿಗೆ ಗಂಭೀರ ಕಾಯಿಲೆ ಇರುವುದು ಅಲ್ಲಿನ ವೈದ್ಯರ ತಂಡ ಪತ್ತೆ ಹಚ್ಚಿತು. ಹೆಚ್ಚಿನ ಚಿಕಿತ್ಸೆಗಾಗಿ ತವರಿಗೆ ಮರಳಿಸುವುದು ಅನಿವಾರ್ಯವಾಗಿತ್ತು.

    ಇನ್ನೊಂದು ಕಡೆ ಅವರ ಪ್ರಾಯೋಜಕ ರನ್ನು ಸಂಪರ್ಕಿಸಿದ ತಂಡ, ಅವರ ಪಾಸ್ ಪೋರ್ಟ್ ಅವಧಿ ಕೂಡಾ ಮುಗಿದಿರುವುದನ್ನು ಮನಗಂಡಿತು. ಐ.ಎಸ್. ಎಫ್. ತಕ್ಷಣವೇ ಭಾರತೀಯ ರಾಯಭಾರಿ ಕಚೇರಿಯನ್ನು ಸಂಪರ್ಕಿಸಿ ಪ್ರಭಾಕರ್ ಮಾಹಿತಿಯನ್ನು ಸ್ಥೂಲವಾಗಿ ವಿವರಿಸಿತು ಮತ್ತು ಊರಿಗೆ ತೆರಳಲು ಔಪಚಾರಿಕವಾಗಿ ಬೇಕಾದ ದಾಖಲೆ ಪತ್ರಗಳನ್ನು ಕೋರಿತ್ತು. ಅದರಂತೆ ತಕ್ಷಣ ಸ್ಪಂದಿಸಿದ ಭಾರತೀಯ ರಾಯಭಾರಿ ಕಚೇರಿ, ಔಪಚಾರಿಕವಾಗಿ ದೃಡೀಕರಣ ಪತ್ರವನ್ನು ಹಾಗೂ ಎಮರ್ಜೆನ್ಸಿ ಸರ್ಟಿಫಿಕೇಟ್ ಬಿಡುಗಡೆಗೊಳಿಸಿ ಊರಿಗೆ ಮರಳಲು ಅನುಕೂಲ ಮಾಡಿಕೊಟ್ಟಿತು. ನಿರಂತರ ಸೌದಿ ಕಾರ್ಮಿಕ ಸಚಿವಾಲಯದ ಸಂಪರ್ಕದಲ್ಲಿದ್ದ ವೆಲ್ಫೇರ್ ತಂಡ ಅವರ ಫೈನಲ್ ಎಕ್ಸಿಟ್ ಗೆ ಬೇಕಾದ ಏರ್ಪಾಟುಗಳನ್ನೂ ಕೂಡಾ ಮಾಡಿ ಮುಗಿಸಿತು.

    ಪ್ರಭಾಕರ್ ತವರು ತಲುಪಿದ ಬಳಿಕ ವರ ಚಿಕಿತ್ಸೆಗೆ ಸಂಬಂಧಿಸಿದ ಏರ್ಪಾಟುಗಳನ್ನು ಮಾಡುವಂತೆ ಐ.ಎಸ್.ಎಫ್ ಸಮಿತಿ ಊರಿನ ಎಸ್.ಡಿ.ಪಿ.ಐ ಪಕ್ಷವನ್ನು ಕೋರಿದ್ದು ಪಕ್ಷದ ಕಾರ್ಯಕರ್ತರು ಅವರನ್ನು ವಿಮಾನ ನಿಲ್ದಾಣದಿಂದ ಆಂಬ್ಯುಲೆನ್ಸ್ ಮೂಲಕ ಎಂ.ಐ.ಒ ಆಸ್ಪತ್ರೆಗೆ ಕರೆದೊಯ್ದಿದ್ದು, ಮುಂದಿನ ವ್ಯವಸ್ಥೆಯನ್ನು ಕಲ್ಪಿಸಲಾಗುತ್ತಿದೆ.

    ಇದೊಂದು ಕಠಿಣ ಹಾಗೂ ತುರ್ತು ಸೇವೆಯ ಕೆಲಸವಾಗಿದ್ದು, ನಿರಂತರವಾಗಿ ಎರಡು ವಾರಗಳ ಕಾಲ ಬಹಳ ಅಚ್ಚುಕಟ್ಟಾಗಿ ನಿರ್ವಹಿಸಿದ ವೆಲ್ಫೇರ್ ಟೀಂ ಗೆ ಐ.ಎಸ್. ಎಫ್. ಅಭಿನಂದನೆ ಸಲ್ಲಿಸಿದೆ. ಭಾರತೀಯ ರಾಯಭಾರಿ ಕಚೇರಿ ಯ ತಕ್ಷಣದ ಸ್ಪಂದನೆ ಹಾಗೂ ಟಿಕೆಟ್ ಹಾಗೂ ಇನ್ನಿತರ ಕೆಲಸಗಳಿಗೆ ಹಣಕಾಸಿನ ನೆರವು ನೀಡಿದ ಎಂಎಎಸ್‍ಎ ಸಂಘಟನೆಯ ಅಧ್ಯಕ್ಷರಾದ ಸತೀಶ್ ಬಜಾಲ್, ಐಎಸ್‍ಎಫ್ ಹಿತೈಷಿ, ಉದಾರಿ ಜಾಯ್ ಫೆನಾರ್ಂಡಿಸ್ ಹಾಗೂ ದಮ್ಮಾಮ್ ಹೆಲ್ತ್ ಕ್ಲಿನಿಕ್ ನ ವೈದ್ಯ ಡಾ.ಮುಹಮ್ಮದ್ ವಾಸೀಂ ಭಟ್ಕಳ್ ರವರನ್ನೂ ಕೂಡಾ ಐಎಸ್‍ಎಫ್ ಈ ಸಂದರ್ಭದಲ್ಲಿ ಅಭಿನಂದಿಸಿ ಮುಂದೆಯೂ ಎಲ್ಲರ ಸಹಕಾರ ಇದ್ದರೆ ಖಂಡಿತ ಎಂತಹ ಕಠಿಣ ಪರಿಸ್ಥಿತಿ ಬಂದರೂ ನಿಭಾಯಿಸಲು ಸಾಧ್ಯ ಎಂದು ಇಂಡಿಯನ್ ಸೋಷಿಯಲ್ ಫೋರಂ ತಿಳಿಸಿದೆ.