Tag: SC ST

  • ಗುತ್ತಿಗೆಯಲ್ಲಿ ಮೀಸಲಾತಿ ಕೊಡಿ – ಅಧಿಕಾರಿಗಳಿಗೆ ನರೇಂದ್ರಸ್ವಾಮಿ ಸೂಚನೆ

    ಗುತ್ತಿಗೆಯಲ್ಲಿ ಮೀಸಲಾತಿ ಕೊಡಿ – ಅಧಿಕಾರಿಗಳಿಗೆ ನರೇಂದ್ರಸ್ವಾಮಿ ಸೂಚನೆ

    – ವಿಧಾನಮಂಡಲದ ಎಸ್ಸಿ-ಎಸ್ಟಿ ಕಲ್ಯಾಣ ಸಮಿತಿಯಿಂದ ಪ್ರಗತಿ ಪರಿಶೀಲನೆ
    – ಶುಲ್ಕ ನೆಪವೊಡ್ಡಿ ಎಸ್ಸಿ-ಎಸ್ಟಿ ಮಕ್ಕಳಿಗೆ ಪ್ರವೇಶಾತಿ ನಿರಾಕರಿಸುವಂತಿಲ್ಲ ಎಂದು ಸೂಚನೆ

    ಕಲಬುರಗಿ: ಸರ್ಕಾರಿ ಮತ್ತು ಖಾಸಗಿ ಶಾಲಾ-ಕಾಲೇಜುಗಳಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಮಕ್ಕಳಿಗೆ ಶುಲ್ಕ ನೆಪವೊಡ್ಡಿ ಪ್ರವೇಶ ನಿರಾಕರಿಸುವಂತಿಲ್ಲ. ಪ್ರವೇಶ ನಿರಾಕರಿಸಿದಲ್ಲಿ ಅಂತಹ ಸಂಸ್ಥೆ-ಶಾಲೆಗಳ ವಿರುದ್ಧ ಅಟ್ರಾಸಿಟಿ ಪ್ರಕರಣಗಳು ದಾಖಲಿಸಬೇಕು ಎಂದು ಕರ್ನಾಟಕ ವಿಧಾನಮಂಡಲದ ಅನುಸೂಚಿತ ಜಾತಿ ಮತ್ತು ಅನುಸೂಚಿತ ಪಂಗಡಗಳ ಕಲ್ಯಾಣ ಸಮಿತಿಯ ಅಧ್ಯಕ್ಷ ಪಿ.ಎಂ ನರೇಂದ್ರಸ್ವಾಮಿ (P M Narendraswamy) ಹೇಳಿದರು.

    ಬುಧವಾರ ಇಲ್ಲಿನ ಜಿಲ್ಲಾ ಪಂಚಾಯತ್ ಕಚೇರಿ ಸಭಾಂಗಣದಲ್ಲಿ ಕಲಬುರಗಿ ವಿಭಾಗದ ಕಲಬುರಗಿ, ಯಾದಗಿರಿ ಹಾಗೂ ಬೀದರ ಜಿಲ್ಲೆಗಳ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಸಮುದಾಯದವರ ಅಭಿವೃದ್ಧಿ, ಕಲ್ಯಾಣ, ಏಳಿಗೆಗೆ ವಿವಿಧ ಇಲಾಖೆಗಳು ಹಮ್ಮಿಕೊಂಡಿರುವ ಕಾರ್ಯಕ್ರಮಗಳು ಹಾಗೂ ಯೋಜನೆಗಳ ಕುರಿತು ಪ್ರಗತಿ ಪರಿಶೀಲನಾ ಸಭೆ ನಡೆಸಿ ಮಾತನಾಡಿದರು.ಇದನ್ನೂ ಓದಿ: ನಮ್ರತಾ ಗೌಡ ಜೊತೆ ಕಿಶನ್ `ನವಿಲೇ’ ಡ್ಯಾನ್ಸ್

    ಸರ್ಕಾರಿ ಶಾಲೆ-ಕಾಲೇಜಿಗೆ ಬರುವವರು ಎಸ್.ಸಿ-ಎಸ್.ಟಿ (SC-ST) ಹಾಗೂ ಬಡ ಮಕ್ಕಳೇ ಜಾಸ್ತಿ. ಹೀಗಾಗಿ ಇಂತಹ ಮಕ್ಕಳಿಗೆ ವಿಶೇಷವಾಗಿ ಗ್ರಾಮೀಣ ಭಾಗದಲ್ಲಿ ಎಸ್.ಡಿ.ಎಂ.ಸಿ ಸಮಿತಿಯನ್ನು ವಿಶ್ವಾಸಕ್ಕೆ ಪಡೆದು, ಸರ್ಕಾರದ ಅನುದಾನ ಹೊರತಾಗಿ ಸ್ಥಳೀಯವಾಗಿ ಅನುದಾನ ಸಂಗ್ರಹಿಸಿ ಗುಣಮಟ್ಟದ ಶಿಕ್ಷಣ ನೀಡುವತ್ತ ಹೆಚ್ಚು ಮುತುವರ್ಜಿ ವಹಿಸಬೇಕು ಎಂದರು.

    ಸರ್ಕಾರಿ ಶಾಲೆಯಲ್ಲಿ ನೀಡಲಾಗುವ ಸೌಲಭ್ಯದಿಂದ ಖಾಸಗಿ ಶಾಲೆಗಳ ಮಕ್ಕಳೊಂದಿಗೆ ಎಸ್.ಸಿ-ಎಸ್.ಟಿ ಮಕ್ಕಳು ಸ್ಪರ್ಧೆ ಮಾಡುವುದು ತುಂಬಾ ಕಠಿಣವಾಗಿದೆ. ಇಂತಹ ಮಕ್ಕಳಿಗೆ ಮೂಲಸೌಕರ್ಯ ಕೊರತೆ, ಶಿಕ್ಷಕರನ್ನು ಅತಿಥಿ ಶಿಕ್ಷಕರ ರೂಪದಲ್ಲಿ ಒದಗಿಸುವ ಮೂಲಕ ಬೋಧನೆಯ ಕೊರತೆ ನೀಗಿಸಬೇಕಿದೆ. ಶಿಕ್ಷಣದ ಮುಕ್ತ ಅವಕಾಶ ತಳ ಸಮುದಾಯದ ಮಕ್ಕಳಿಗೆ ದೊರೆಯದಿದ್ದಲ್ಲಿ ಮುಂದೆ ಅದು ದೊಡ್ಡ ಸಾಮಾಜಿಕ ಪಿಡುಗಾಗಿ ಪರಿಣಮಿಸಬಹುದು. ನಿರುದ್ಯೋಗದಂತಹ ಸಮಸ್ಯೆ ತಲೆದೋರಬಹುದು. ಹೀಗಾಗಿ ಸರ್ಕಾರಿ-ಖಾಸಗಿ ಮಕ್ಕಳ ನಡುವೆ ಇರುವ ಅಂತರ ನಿವಾರಿಸಬೇಕೆಂದ ಅವರು, ಜಿಲ್ಲೆಯಲ್ಲಿ ಶಿಕ್ಷಣ, ಆರೋಗ್ಯ ಕ್ಷೇತ್ರದ ಸುಧಾರಣೆಗೆ ಸಿ.ಎಸ್.ಆರ್, ಡಿ.ಎಂ.ಎಫ್ ಅನುದಾನ ಬಳಸಬೇಕು ಎಂದು ಡಿ.ಸಿ.ಗೆ ನಿರ್ದೇಶನ ನೀಡಿದರು.

    ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಪ್ರಗತಿ ಪರಿಶೀಲನೆ ಸಂದರ್ಭದಲ್ಲಿ ಜನಸಂಖ್ಯೆ ಅನುಗುಣವಾಗಿ ಕಾರ್ಯಕ್ರಮ ರೂಪಿಸಬೇಕು. ಎಸ್.ಸಿ-ಎಸ್.ಟಿ ಕಾಲೋನಿ ಪ್ರದೇಶದಲ್ಲಿ ನರೇಗಾ ಕಾಮಗಾರಿ ತೆಗೆದುಕೊಳ್ಳಲಾಗಿದಿಯೇ ಎಂದು ಪ್ರಶ್ನಿಸಿದ ಸಮಿತಿ ಅಧ್ಯಕ್ಷರು, ಪ್ರಸಕ್ತ ಸಾಲಿನ ಆಯವ್ಯಯದಲ್ಲಿ ಈ ಸಮುದಾಯದ ಒಳಿತಿಗೆ 36 ಸಾವಿರ ಕೋಟಿ ರೂ. ಹಣ ಮೀಸಲಿಡಲಾಗಿದೆ. ಇದನ್ನು ಸಮರ್ಪಕವಾಗಿ ಬಳಸಿ ಸಮುದಾಯದ ಜನರ ಬದುಕಿಗೆ ಬೆಳಕಾಗಬೇಕು ಎಂದ ಅವರು, ಪ್ರತಿ ಹಳ್ಳಿಯ ಪರಿಶಿಷ್ಟ ಕಾಲೋನಿಗಳ ಪ್ರತಿ ಮನೆಗೆ ನಲ್ಲಿ ಸಂಪರ್ಕ ಕಲ್ಪಿಸಬೇಕು ಎಂದರು.ಇದನ್ನೂ ಓದಿ: ಮಹಾಲಕ್ಷ್ಮಿ ಪ್ರಕರಣದಲ್ಲಿ ಟ್ವಿಸ್ಟ್‌ – ಶಂಕಿತ ಕೊಲೆ ಆರೋಪಿ ಒಡಿಶಾದಲ್ಲಿ ಆತ್ಮಹತ್ಯೆ

    ದೇವದಾಸಿ ಪದ್ಧತಿ ನಿರ್ಮೂಲನೆಗೆ ಜಾಗೃತಿ ಕಾರ್ಯಕ್ರಮಗಳು ತೀವ್ರಗೊಳಿಸಬೇಕು. ವಸತಿ ರಹಿತರಿಗೆ ವಸತಿ ಯೋಜನೆಯಡಿ ಮನೆ ನೀಡಬೇಕು. ನಿವೇಶನ ಇಲ್ಲದಿದ್ದಲ್ಲಿ ಸರ್ಕಾರವೇ ಖರೀದಿಸಿ ಮಾಜಿ ದೇವದಾಸಿಯರಿಗೆ ನೀಡಬೇಕು. ಮಾಜಿ ದೇವದಾಸಿಯರ ಕುರಿತು ಸಮಾಜ ಬೇರೆ ದೃಷ್ಟಿಯಿಂದಲೇ ನೋಡುತ್ತದೆ. ಹೀಗಾಗಿ ಇವರ ನೆರವಿಗೆ ಬರಬೇಕಾಗಿರುವುದು ಸರ್ಕಾರ. ಹೀಗಾಗಿ ಅಧಿಕಾರಿಗಳು ಸಾಮಾಜಿಕ ನ್ಯಾಯ ದೊರಕಿಸುವ ಕೆಲಸ ಮಾಡಬೇಕು ಎಂದರು.

    ಜಾತಿ ನಿಂದನೆ ಪ್ರಕರಣದಲ್ಲಿ ಚಾರ್ಜ್‌ಶೀಟ್‌ ಸಲ್ಲಿಕೆ ವೇಳೆಯಲ್ಲಿ ಆರೋಪಿತನಿಗೆ ಶಿಕ್ಷೆಯಾಗುವ ರೀತಿಯಲ್ಲಿ ಸರಿಯಾದ ಸೆಕ್ಷನ್ ಹಾಕದ ಕಾರಣ ರಾಜ್ಯದಲ್ಲಿ ಶಿಕ್ಷೆ ಪ್ರಮಾಣ ಡಬಲ್ ಡಿಜಿಟ್ ದಾಟುತ್ತಿಲ್ಲ. ಇದೇ ವಿಷಯದಲ್ಲಿ ಯು.ಪಿ, ಬಿಹಾರನಲ್ಲಿ ಶಿಕ್ಷೆ ಪ್ರಮಾಣ ಹೆಚ್ಚಿದೆ. ಪೊಲೀಸ್ ಅಧಿಕಾರಿಗಳು ಚಾರ್ಜ್‌ಶೀಟ್‌ ಹಾಕುವಾಗ ನೊಂದ ಸಂತ್ರಸ್ತರಿಗೆ ನ್ಯಾಯ ನೀಡುವ ನಿಟ್ಟಿನಲ್ಲಿ ಸೆಕ್ಷನ್ ಹಾಕಬೇಕು ಎಂದು ಎಸ್.ಪಿ. ಅಡ್ಡೂರು ಶ್ರೀನಿವಾಸಲು ಮತ್ತು ನಗರ ಪೊಲೀಸ್ ಆಯುಕ್ತ ಡಾ.ಎಸ್.ಡಿ.ಶರಣಪ್ಪ ಅವರಿಗೆ ಸೂಚನೆ ನೀಡಿದರು.

    ಎಸ್.ಸಿ-ಎಸ್.ಟಿ ಕಾಲೋನಿಗಳಲ್ಲಿ ವಿದ್ಯುತ್ ಪೂರೈಕೆ ಬಗ್ಗೆ ಖಾತ್ರಿಪಡಿಸಿಕೊಳ್ಳಬೇಕು. ಸಮಾಜ ಕಲ್ಯಾಣ ಇಲಾಖೆಯ ತಾಲೂಕಾ ಹಂತದ ಅಧಿಕಾರಿಗಳು ಕೇಂದ್ರ ಸ್ಥಾನದಲ್ಲಿ ಕೂಡದೆ ಎಲ್ಲಾ ಇಲಾಖೆಗಳಲ್ಲಿ ಎಸ್.ಸಿ.ಪಿ-ಟಿ.ಎಸ್.ಪಿ ಕಾರ್ಯಕ್ರಮಗಳ ಮೇಲ್ವಿಚಾರಣೆ ಮಾಡುವುದಲ್ಲದೆ ಸಮಗ್ರ ಮಾಹಿತಿ ಸಂಗ್ರಹಿಸಿಕೊಂಡಿರಬೇಕು ಎಂದು ಸಮಾಜ ಕಲ್ಯಾಣ ಇಲಾಖೆಯ ಜಂಟಿ ನಿರ್ದೇಶಕ ಎಂ.ಅಲ್ಲಾಭಕ್ಷ ಅವರಿಗೆ ಖಡಕ್ ಸೂಚನೆ ನೀಡಿದರು.

    ಗುತ್ತಿಗೆಯಲ್ಲಿ ಮೀಸಲಾತಿ ಕೊಡಿ:
    ಲೋಕೋಪಯೋಗಿ, ನೀರಾವರಿ, ಜೆಸ್ಕಾಂ, ಪಿ.ಆರ್.ಇ.ಡಿ, ಸ್ಥಳೀಯ ಸಂಸ್ಥೆಗಳು ಸೇರಿದಂತೆ ವಿವಿಧ ಇಲಾಖೆಗಳ ಮೂಲಕ ಕೈಗೊಳ್ಳುವ ಸಿವಿಲ್, ಮೂಲಸೌಕರ್ಯ ಕಾಮಗಾರಿಗಳ ಪೈಕಿ 1 ಕೋಟಿ ರೂ. ವರೆಗಿನ ಕಾಮಗಾರಿಗಳಿಗೆ ಎಸ್.ಸಿ. ಗುತ್ತಿಗೆದಾರರಿಗೆ ಶೇ.17.5 ಮತ್ತು ಎಸ್.ಟಿ. ವರ್ಗದ ಗುತ್ತಿಗೆದಾರರಿಗೆ ಶೇ.7.5 ರಂತೆ ಮೀಸಲಾತಿ ಅನ್ವಯ ಗುತ್ತಿಗೆ ನೀಡಲು ಸರ್ಕಾರದ ಸ್ಪಷ್ಟ ನಿರ್ದೇಶನವಿದ್ದರು. ವಿವಿಧ ಕಾಮಗಾರಿಗಳನ್ನು ಕ್ಲಬ್ ಮಾಡಿ ಪ್ಯಾಕೇಜ್ ಆಧಾರದ ಮೇಲೆ ಟೆಂಡರ್ ಕರೆಯುತ್ತಿರುವುದಿರಂದ ಈ ವರ್ಗದ ಗುತ್ತಿಗೆದಾರರಿಗೆ ಮೀಸಲಾತಿಯಿಂದ ವಂಚಿಸಲಾಗುತ್ತಿದೆ. ಕೂಡಲೆ ಇದನ್ನು ಸರಿಪಡಿಸಿ ಸಮಪರ್ಕವಾಗಿ ಅನುಷ್ಠಾನಗೊಳಿಸಬೇಕು ಎಂದು ಎಲ್ಲಾ ಅನುಷ್ಟಾನಾಧಿಕಾರಿಗಳಿಗೆ ಸೂಚನೆ ನೀಡಿದರು.

    ಸಭೆಯಲ್ಲಿ ಸಮಿತಿ ಸದಸ್ಯರಾದ ಬಸನಗೌಡ ದದ್ದಲ, ಬಸವರಾಜ್ ಮತ್ತಿಮೂಡ್, ಕೃಷ್ಣ ನಾಯಕ, ಶಾಂತರಾಮ್ ಬುಡ್ನ ಸಿದ್ದಿ, ಜಗದೇವ್ ಗುತ್ತೇದಾರ್, ಸಮಿತಿ ಕಾರ್ಯದರ್ಶಿ ಶ್ರೀನಿವಾಸ್, ಪ್ರಾದೇಶಿಕ ಆಯುಕ್ತ ಕೃಷ್ಣ ಭಾಜಪೇಯಿ, ಜಿಲ್ಲಾ ಪಂಚಾಯತ್ ಸಿ.ಇ.ಓ ಭಂವರ್ ಸಿಂಗ್ ಮೀನಾ, ಮಹಾನಗರ ಪಾಲಿಕೆ ಆಯುಕ್ತ ಭುವನೇಶ ಪಾಟೀಲ ದೇವಿದಾಸ್ ಸೇರಿದಂತೆ ಜಿಲ್ಲೆಯ ಎಲ್ಲಾ ಜಿಲ್ಲಾ ಮಟ್ಟದ ಅಧಿಕಾರಿಗಳಿದ್ದರು.ಇದನ್ನೂ ಓದಿ: ಪುಣೆ ನಗರದಲ್ಲಿ ವರುಣಾರ್ಭಟ, ರಸ್ತೆಗಳು ಜಲಾವೃತ – ಜನಜೀವನ ಅಸ್ತವ್ಯಸ್ತ

  • ಎಸ್ಸಿ-ಎಸ್ಟಿ: ಕೆನೆಪದರ ಮೀಸಲಾತಿಗೆ ನೂರಾರು ಸಂಸದರ ವಿರೋಧ

    ಎಸ್ಸಿ-ಎಸ್ಟಿ: ಕೆನೆಪದರ ಮೀಸಲಾತಿಗೆ ನೂರಾರು ಸಂಸದರ ವಿರೋಧ

    ನವದೆಹಲಿ: ಎಸ್‌ಸಿ-ಎಸ್‌ಟಿ (SC-ST) ಒಳಮೀಸಲಾತಿ ಮತ್ತು ಕೆನೆಪದರ (Creamy Layer) ಮೀಸಲಾತಿ ಜಾರಿ ಸಂಬಂಧ ಇತ್ತೀಚಿಗೆ ಸುಪ್ರೀಂ ಕೋರ್ಟ್ (Supreme Court) ತೀರ್ಪಿನ ವಿಚಾರವಾಗಿ ನೂರಕ್ಕೂ ಹೆಚ್ಚು ಸಂಸದರು, ಪ್ರಧಾನಿಯನ್ನು ಭೇಟಿ ಮಾಡಿ ಕಳವಳ ವ್ಯಕ್ತಪಡಿಸಿದ್ದಾರೆ.

    ಯಾವುದೇ ಕಾರಣಕ್ಕೂ ಕೆನೆಪದರ ಮೀಸಲಾತಿಯನ್ನು ಜಾರಿ ಮಾಡಬಾರದು. ಇದರಿಂದ ಅನ್ಯಾಯ ಆಗುತ್ತೆ ಎಂದು ಪ್ರಧಾನಿ ಮೋದಿ ಅವರಲ್ಲಿ ಮನವಿ ಮಾಡಿದ್ದಾರೆ. ಇದಕ್ಕೆ ಪ್ರಧಾನಿ ಮೋದಿ ಸಕಾರಾತ್ಮಕವಾಗಿಯೇ ಸ್ಪಂದಿಸಿದ್ದಾರೆ ಎನ್ನಲಾಗಿದೆ. ಇದನ್ನೂ ಓದಿ: 530 ದಿನಗಳ ಬಳಿಕ ಜೈಲಿನಿಂದ ಹೊರಬಂದ AAP ನಾಯಕ ಮನೀಶ್‌ ಸಿಸೋಡಿಯಾ

    ಪ್ರಧಾನಿ ಮೋದಿ ಭೇಟಿ ಬಳಿಕ ಮಾತನಾಡಿದ ಚಿತ್ರದುರ್ಗ ಸಂಸದ ಗೋವಿಂದ ಕಾರಜೋಳ, ಯಾವುದೇ ಕಾರಣಕ್ಕೂ ಕೆನೆಪದರ ಮಿಸಲಾತಿ ಜಾರಿ ಮಾಡಲ್ಲ. ಅನುಷ್ಠಾನಕ್ಕೆ ತರಲ್ಲ ಎಂದು ಪ್ರಧಾನಿ ಭರವಸೆ ನೀಡಿದ್ದಾರೆ ಎಂದು ತಿಳಿಸಿದ್ದಾರೆ.

    ಕೆನೆಪದರ ಮೀಸಲಾತಿ ಜಾರಿ ಮಾಡಬಾರದು. ಅದರಿಂದ ಅನ್ಯಾಯ ಆಗುತ್ತೆ ಎಂದಿದ್ದೇನೆ. ಯಾವುದೇ ಕಾರಣಕ್ಕೂ ಕೆನೆಪದರ ಮೀಸಲಾತಿ ಜಾರಿ ಮಾಡಲ್ಲ. ಅನುಷ್ಠಾನಕ್ಕೆ ತರಲ್ಲ ಎಂದು ಮೋದಿ ಹೇಳಿದ್ದಾರೆ. ಇಂದು ಕೂಡ ಮನೆ ಬಾಡಿಗೆ ಕೊಡುವಾಗದ ಜಾತಿ ಕೇಳುತ್ತಾರೆ. ಕೆನೆಪದರ ಮೀಸಲಾತಿ ಪರವಾಗಿ ನಾವು ಇಲ್ಲ ಎಂದಿದ್ದಾರೆ. ಇದನ್ನೂ ಓದಿ: ವಯನಾಡು ಭೂಕುಸಿತ ಪ್ರದೇಶಕ್ಕೆ ನಾಳೆ ಮೋದಿ ಭೇಟಿ

  • ಎಸ್ಸಿ, ಎಸ್ಟಿಗಳಿಗೆ ಅವಕಾಶ ಸೃಷ್ಟಿಸದ ಕಾಂಗ್ರೆಸ್ ದಲಿತ ದ್ರೋಹಿ ಪಕ್ಷ: ಜೋಶಿ ವಾಗ್ದಾಳಿ

    ಎಸ್ಸಿ, ಎಸ್ಟಿಗಳಿಗೆ ಅವಕಾಶ ಸೃಷ್ಟಿಸದ ಕಾಂಗ್ರೆಸ್ ದಲಿತ ದ್ರೋಹಿ ಪಕ್ಷ: ಜೋಶಿ ವಾಗ್ದಾಳಿ

    ಹುಬ್ಬಳ್ಳಿ: ಎಸ್ಸಿ, ಎಸ್ಟಿ ಜನಾಂಗಕ್ಕೆ ಅವಕಾಶವೇ ಸಿಗಲಾರದಂತಹ ಪರಿಸ್ಥಿತಿ ಸೃಷ್ಟಿಸಿದ ದಲಿತ-ದ್ರೋಹಿ ಪಕ್ಷ ಕಾಂಗ್ರೆಸ್ (Congress) ಎಂದು ಕೇಂದ್ರ ಸಂಸದೀಯ ಸಚಿವ ಪ್ರಹ್ಲಾದ್ ಜೋಶಿ (Pralhad Joshi) ವಾಗ್ಧಾಳಿ ನಡೆಸಿದರು.

    ಹುಬ್ಬಳ್ಳಿಯಲ್ಲಿ (Hubballi) ಆಯೋಜಿಸಿದ್ದ ‘ಬಲವರ್ಧನೆಗಾಗಿ ಭೀಮ ಸಮಾವೇಶ’ ಕಾರ್ಯಕ್ರಮದಲ್ಲಿ ಮಾತನಾಡಿ, ಜಮ್ಮು, ಕಾಶ್ಮೀರದಂತಹ ಪ್ರಮುಖ ರಾಜ್ಯದಲ್ಲಿ ಎಸ್ಸಿ, ಎಸ್ಟಿಗಳಿಗೆ ಮನ್ನಣೆಯೇ ಇಲ್ಲದಂತಹ ಪರಿಸ್ಥಿತಿಗೆ ನೂಕಿತ್ತು ಕಾಂಗ್ರೆಸ್ ಪಕ್ಷ ಎಂದು ಆರೋಪಿಸಿದರು. ಇದನ್ನೂ ಓದಿ: ಅಬುಧಾಬಿಯಲ್ಲಿ ಮೊದಲ ಹಿಂದೂ ದೇವಾಲಯ ಉದ್ಘಾಟಿಸಿದ ಪ್ರಧಾನಿ ಮೋದಿ

    ಆ ರಾಜ್ಯದಲ್ಲಿ ಇದೀಗ ಎಲ್ಲವನ್ನೂ ಸರಿ ಮಾಡಿದ್ದೇವೆ. ಎಸ್ಸಿ, ಎಸ್ಟಿಗಳಿಗೆ ಮತ್ತು ಒಬಿಸಿಗಳಿಗೆ ಆರಕ್ಷಣೆ ಒದಗಿಸಿದೆ. ಸ್ವಲ್ಪ ತಡವಾದರೂ ಪರಿಣಾಮಕಾರಿ ಆಗಿ ಕಾನೂನು ಮತ್ತು ಸಂವಿಧಾನಾತ್ಮಕ ಕ್ರಮಗಳನ್ನು ನಮ್ಮ ಸರ್ಕಾರ ಕೈಗೊಂಡಿದೆ ಎಂದು ಹೇಳಿದರು.

    ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದಲ್ಲಿ ಬಲಾಢ್ಯ ಭಾರತವನ್ನು ಕಟ್ಟುವ ಸಂಕಲ್ಪವನ್ನು ಬಿಜೆಪಿ ಹೊಂದಿದೆ. ಕೇಂದ್ರ ಸರ್ಕಾರ ಆ ನಿಟ್ಟಿನಲ್ಲಿ ಅನೇಕ ಯೋಜನೆಗಳನ್ನು ಜಾರಿಗೊಳಿಸಿದೆ ಎಂದು ಪ್ರತಿಪಾದಿಸಿದರು. ಇದನ್ನೂ ಓದಿ: Rajyasabha Polls: ಕಾಂಗ್ರೆಸ್‌ನಿಂದ ಕರ್ನಾಟಕದ ಮೂವರಿಗೆ ಟಿಕೆಟ್

    ಡಾ. ಭೀಮರಾವ್ ಅಂಬೇಡ್ಕರ್ ಅವರಿಗೆ ಗೌರವ ಸಲ್ಲಿಸಲೆಂದು ಅವರ ಜನ್ಮಸ್ಥಳ, ಶಿಕ್ಷಣ ಸ್ಥಳ, ಪರಿನಿಬ್ಬಾಣ ಸ್ಥಳ, ದೀಕ್ಷಾ ಭೂಮಿ, ಚೈತ್ಯ ಭೂಮಿಗಳನ್ನು ಪಂಚತೀರ್ಥಗಳನ್ನಾಗಿ ಗುರುತಿಸಿ ಬಿಜೆಪಿ ಅಭಿವೃದ್ಧಿಪಡಿಸುತ್ತಿದೆ ಎಂದು ಹೇಳಿದರು.

    ಅಂಬೇಡ್ಕರ್ ಅವರ ಧ್ಯೇಯಕ್ಕೆ ಅನುಗುಣವಾಗಿ ಸಮಾಜದಲ್ಲಿ ಏಕತೆ ನೆಲೆಸಲೆಂದು, ಸಮಾಜದ ಪ್ರತಿ ವರ್ಗಕ್ಕೂ ಸಮಾನ ಹಕ್ಕುಗಳು ಮತ್ತು ಅವಕಾಶಗಳು ದೊರಕಲೆಂದು ಪ್ರಧಾನಿ ಮೋದಿ ನೇತೃತ್ವದ ಕೇಂದ್ರ ಸರ್ಕಾರ ನಿರಂತರವಾಗಿ ಶ್ರಮಿಸುತ್ತಿದ್ದು, ಅವರು ದೇಶಕ್ಕೆ ಅರ್ಪಿಸಿರುವ ಹಲವಾರು ಜನಪರ ಯೋಜನೆಗಳು ಇದಕ್ಕೆ ನಿದರ್ಶನವಾಗಿವೆ ಎಂದು ಸಚಿವ ಜೋಶಿ ಪ್ರತಿಪಾದಿಸಿದರು. ಇದನ್ನೂ ಓದಿ: ಪಶ್ವಿಮ ಬಂಗಾಳದಲ್ಲಿ ಬಿಜೆಪಿ V/S ಪೊಲೀಸ್ ಸಂಘರ್ಷ- ರಾಜ್ಯಾಧ್ಯಕ್ಷ ಸುಕಾಂತ್ ಅಸ್ವಸ್ಥ

    ಕಾರ್ಯಕ್ರಮದಲ್ಲಿ ಕೋಲಾರದ ಸಂಸದರಾದ ಮುನಿಸ್ವಾಮಿ, ಬಿಜೆಪಿ ಜಿಲ್ಲಾಧ್ಯಕ್ಷ ತಿಪ್ಪಣ್ಣ ಮಜ್ಜಗಿ, ಶಾಸಕರು ಹಾಗೂ ಎಸ್.ಸಿ. ಮೋರ್ಚಾದ ರಾಜ್ಯಾಧ್ಯಕ್ಷ ಸಿಮೆಂಟ್ ಮಂಜು, ಛಲವಾದಿ ನಾರಾಯಣಸ್ವಾಮಿ, ರಾಜ್ಯ ಎಸ್.ಸಿ. ಮೋರ್ಚಾದ ಪ್ರಧಾನ ಕಾರ್ಯದರ್ಶಿ ಮಹೇಂದ್ರ ಕಾತಾಳ, ಮಾರುತಿ ದೊಡ್ಡಮನಿ, ರಾಜು ಕೋಟೆನವರ, ರಾಜು ಕಾಂಬಳೆ, ಡಾ. ಕ್ರಾಂತಿಕಿರಣ ಉಪಸ್ಥಿತರಿದ್ದರು.

  • SC-ST ಸಮುದಾಯದ ಹಣವನ್ನು ಗ್ಯಾರಂಟಿ ಯೋಜನೆಗೆ ಬಳಕೆ ಮಾಡಬೇಡಿ: JDS ಆಗ್ರಹ

    SC-ST ಸಮುದಾಯದ ಹಣವನ್ನು ಗ್ಯಾರಂಟಿ ಯೋಜನೆಗೆ ಬಳಕೆ ಮಾಡಬೇಡಿ: JDS ಆಗ್ರಹ

    ಬೆಂಗಳೂರು: ಎಸ್‌ಸಿಪಿ-ಟಿಎಸ್‌ಪಿ (SCP-TSP) ಹಣವನ್ನು ಯಾವುದೇ ಕಾರಣಕ್ಕೂ ಗ್ಯಾರಂಟಿ (Guarantee) ಯೋಜನೆಗೆ ಬಳಸಬಾರದು ಎಂದು ಸರ್ಕಾರವನ್ನು ಜೆಡಿಎಸ್ (JDS) ಪಕ್ಷ ಒತ್ತಾಯ ಮಾಡಿದೆ. ಜೆಡಿಎಸ್ ಕಚೇರಿ ಜೆಪಿ ಭವನದಲ್ಲಿ ಸುದ್ದಿಗೋಷ್ಠಿ ನಡೆಸಿದ ಜೆಡಿಎಸ್ ಪಕ್ಷದ ಎಸ್‌ಸಿ-ಎಸ್‌ಟಿ (SC-ST) ಸಮುದಾಯದ ನಾಯಕರು ಸರ್ಕಾರದ ಕ್ರಮವನ್ನು ಖಂಡಿಸಿದರು.

    ಮಾಜಿ ಶಾಸಕ ಹೆಚ್‌ಕೆ ಕುಮಾರಸ್ವಾಮಿ ಮಾತನಾಡಿ, ಕಾಂಗ್ರೆಸ್ ಸರ್ಕಾರ ಎಸ್‌ಸಿಪಿ-ಟಿಎಸ್‌ಪಿ ಹಣವನ್ನು ಗ್ಯಾರಂಟಿ ಯೋಜನೆಗೆ ಬಳಸಿಕೊಳ್ಳುತ್ತಿದೆ. ಎಸ್‌ಸಿ-ಎಸ್‌ಟಿಗೆ ಮೀಸಲಿಟ್ಟ ಹಣವನ್ನು ಗ್ಯಾರಂಟಿ ಯೋಜನೆಗೆ ವರ್ಗಾವಣೆ ಮಾಡಿದ್ದು ಎಷ್ಟು ಸರಿ? ಇದು ಎಸ್‌ಸಿ-ಎಸ್‌ಟಿ ಸಮುದಾಯಕ್ಕೆ ಮಾಡಿದ ಅನ್ಯಾಯ. ಇದನ್ನು ಜೆಡಿಎಸ್ ಪಕ್ಷ ಖಂಡಿಸುತ್ತದೆ ಎಂದು ವಾಗ್ದಾಳಿ ನಡೆಸಿದರು.

    ಕಾಯ್ದೆಯಲ್ಲಿ 7ಡಿ ಯನ್ನು ಡಿಲೀಟ್ ಮಾಡಬೇಕು ಎಂಬ ಹೋರಾಟ ಆಗುತ್ತಿತ್ತು. ಕಾಂಗ್ರೆಸ್ ಸರ್ಕಾರ 7ಡಿ ಯನ್ನ ಕೈ ಬಿಟ್ಟಿತ್ತು. ಈಗ ಇದೇ ಸರ್ಕಾರ ಹಣ ಬಳಕೆ ಮಾಡುತ್ತಿದೆ. ನಿಮ್ಮ ಗ್ಯಾರಂಟಿ ಯೋಜನೆಗೆ ಹಣ ಬೇರೆ ಕಡೆ ಸೃಷ್ಟಿ ಮಾಡಿಕೊಳ್ಳಿ. ಅದು ಬಿಟ್ಟು ಎಸ್‌ಸಿ-ಎಸ್‌ಟಿಗೆ ಇರೋ ಅನುದಾನದಲ್ಲಿ ಯಾಕೆ ಬಳಕೆ ಮಾಡ್ತೀರಾ? ಬಜೆಟ್ ಹೆಚ್ಚಳ ಆಗಿರೋದಕ್ಕೆ ಎಸ್‌ಸಿ-ಎಸ್‌ಟಿ ಅನುದಾನ ಹೆಚ್ಚಳ ಆಗಿದೆ. ಈಗ 11 ಸಾವಿರ ಕೋಟಿ ರೂ. ಹಣವನ್ನು ಗ್ಯಾರಂಟಿಗೆ ಬಳಸೋದು ಸರಿಯಲ್ಲ ಎಂದರು.

    ಗ್ಯಾರಂಟಿ ಯೋಜನೆಗೆ ಹಣ ಬಳಕೆ ಮಾಡ್ತೀನಿ ಅಂತಿದ್ದೀರಾ. ಶಕ್ತಿ ಯೋಜನೆಯಲ್ಲಿ ಹೇಗೆ ಜನರನ್ನು ಜಾತಿ ಕೇಳ್ತೀರಾ? ಜಾತಿ ಕೇಳಿ ಫ್ರೀ ಟಿಕೆಟ್ ಕೊಡ್ತೀರಾ? ನಿವೃತ್ತ ನ್ಯಾಯಮೂರ್ತಿ ಸಂತೋಷ್ ಹೆಗ್ಡೆ ಗ್ಯಾರಂಟಿ ಯೋಜನೆ ಲಂಚ ಅಂತ ಹೇಳಿದ್ದಾರೆ. ಯಾವುದೇ ಕಾರಣಕ್ಕೂ 11 ಸಾವಿರ ಕೋಟಿ ರೂ. ಹಣವನ್ನು ಗ್ಯಾರಂಟಿ ಯೋಜನೆಗೆ ಕೊಡಬಾರದು. ಎಸ್‌ಸಿಪಿ-ಟಿಎಸ್‌ಪಿ ಹಣ ಗ್ಯಾರಂಟಿ ಯೋಜನೆಗೆ ಬಳಕೆ ಮಾಡಬಾರದು. ಈ ಹಣ ದುರುಪಯೋಗ ಮಾಡಿಕೊಳ್ಳೋದಕ್ಕೆ ಸರ್ಕಾರ ಪ್ರಯತ್ನ ಮಾಡ್ತಿದೆ. ಸರ್ಕಾರ ಕೂಡಲೇ ನಿರ್ಧಾರ ವಾಪಸ್ ಪಡೆಯಬೇಕು. ಇಲ್ಲದೆ ಹೋದರೆ ರಾಜ್ಯಾದ್ಯಂತ, ಪ್ರತಿ ಜಿಲ್ಲೆ ಕೇಂದ್ರಗಳಲ್ಲಿ ಜೆಡಿಎಸ್ ಪ್ರತಿಭಟನೆ ಮಾಡಲಿದೆ ಎಂದು ಎಚ್ಚರಿಕೆ ಕೊಟ್ಟರು. ಇದನ್ನೂ ಓದಿ: ಸರ್ಕಾರವನ್ನ ಟೀಕಿಸಿದ್ದ ಹೆಚ್‍ಡಿಕೆ ವಿರುದ್ಧ ಚಲುವರಾಯಸ್ವಾಮಿ ವಾಗ್ದಾಳಿ

    ಮಾಜಿ ಶಾಸಕ ಅಲ್ಕೋಡ್ ಹನುಮಂತಪ್ಪ ಮಾತನಾಡಿ, ಬಿಜೆಪಿ ಅವರು ಎಸ್‌ಸಿ-ಎಸ್‌ಟಿಗೆ ಅನ್ಯಾಯ ಮಾಡಿದರು ಅಂತ ಜನ ಕಾಂಗ್ರೆಸ್‌ಗೆ ಮತ ಹಾಕಿದರು. ಕಾಂಗ್ರೆಸ್ ಅವರ ಗ್ಯಾರಂಟಿಗೆ ಎಸ್‌ಸಿ-ಎಸ್‌ಟಿ ಜನ ವೋಟ್ ಹಾಕಿಲ್ಲ. ಎಸ್‌ಸಿಪಿ-ಟಿಎಸ್‌ಪಿ ಹಣವನ್ನು ಗ್ಯಾರಂಟಿಗೆ ಬಳಕೆ ಮಾಡ್ತಿದ್ದಾರೆ. ಬಿಜೆಪಿಯ ಅವಧಿಯಲ್ಲಿ ಎಸ್‌ಸಿಪಿ-ಟಿಎಸ್‌ಪಿ ಹಣ ಬೇರೆಯದಕ್ಕೆ ಬಳಕೆ ಮಾಡಿದಾಗ ಕಾಂಗ್ರೆಸ್ ಅವರು ದೊಡ್ಡ ವಿರೋಧ ಮಾಡಿದರು. ಆದರೆ ಇವತ್ತು ಕಾಂಗ್ರೆಸ್ ಅವರೇ ದೊಡ್ಡ ಅನ್ಯಾಯ ಮಾಡುತ್ತಿದ್ದಾರೆ. ಸಮುದಾಯದ ಹಣವನ್ನು ಬೇರೆಯದಕ್ಕೆ ಬಳಕೆ ಮಾಡುತ್ತಿದ್ದಾರೆ. ಕಾಂಗ್ರೆಸ್ ಎಸ್‌ಸಿ-ಎಸ್‌ಟಿ ಸಮುದಾಯಕ್ಕೆ ಮೋಸ ಮಾಡುತ್ತಿದ್ದಾರೆ. ಸಿದ್ದರಾಮಯ್ಯ ಮೇಲೆ ಇಟ್ಟ ಪ್ರೀತಿ ವಿಶ್ವಾಸ ಇವತ್ತು ಕಳೆದುಕೊಂಡಿದ್ದಾರೆ ಎಂದು ಕಿಡಿಕಾರಿದರು.

    ಸರ್ಕಾರ ಗ್ಯಾರಂಟಿಗೆ ಹಣ ಬಳಕೆ ಮಾಡೋ ನಿರ್ಧಾರ ವಾಪಸ್ ಪಡೆಯಬೇಕು. ಇಲ್ಲದೆ ಹೋದರೆ ರಾಜ್ಯಾದ್ಯಂತ ಹೋರಾಟ ಮಾಡುತ್ತೇವೆ. ಅದಕ್ಕೂ ಬಗ್ಗದೆ ಹೋದರೆ ಜಿಲ್ಲೆಗಳಲ್ಲಿ ಸಚಿವರು ಬಂದರೆ ಘೇರಾವ್ ಹಾಕೋ ಕೆಲಸ ಮಾಡುತ್ತೇವೆ ಎಂದು ಎಚ್ಚರಿಕೆ ಕೊಟ್ಟರು. ಇದನ್ನೂ ಓದಿ: ನಾನು ಯಾರಿಗೂ ಪ್ರಮಾಣ ಮಾಡ್ಬೇಕಾದ ಅವಶ್ಯಕತೆ ಇಲ್ಲ, ಕೆಲಸ ಮಾಡಿದ್ರೆ ಹಣ ಬಿಡುಗಡೆ ಆಗುತ್ತೆ, ಇಲ್ಲ ಅಂದ್ರೆ ಹಣ ಇಲ್ಲ: ಡಿಕೆಶಿ

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಗ್ಯಾರಂಟಿ ಯೋಜನೆಗಳಿಗೆ ಎಸ್ಸಿ – ಎಸ್ಟಿ ಅನುದಾನ ಬಳಕೆ; ಸಂಸತ್‌ನಲ್ಲಿ ಬಿಜೆಪಿ ದಲಿತ ಸಂಸದರ ಪ್ರತಿಭಟನೆ

    ಗ್ಯಾರಂಟಿ ಯೋಜನೆಗಳಿಗೆ ಎಸ್ಸಿ – ಎಸ್ಟಿ ಅನುದಾನ ಬಳಕೆ; ಸಂಸತ್‌ನಲ್ಲಿ ಬಿಜೆಪಿ ದಲಿತ ಸಂಸದರ ಪ್ರತಿಭಟನೆ

    ನವದೆಹಲಿ: ಕಾಂಗ್ರೆಸ್ (Congress) ಸರ್ಕಾರದ ಗ್ಯಾರಂಟಿ ಯೋಜನೆಗಳಿಗೆ (Congress Guarantee) ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡಗಳ (SC-ST) ಅಭಿವೃದ್ಧಿಗೆ ಮೀಸಲಿಟ್ಟ ಹಣ ಬಳಿಕೆ‌ ಖಂಡಿಸಿ ಬಿಜೆಪಿ ಸಂಸದರು ಪ್ರತಿಭಟನೆ ನಡೆಸಿದರು. ಸಂಸತ್‌ನಲ್ಲಿರುವ ಗಾಂಧಿ ಪ್ರತಿಮೆ ಬಳಿ ರಾಜ್ಯ ಬಿಜೆಪಿ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್ ನೇತೃತ್ವದಲ್ಲಿ ದಲಿತ ಸಂಸದರು ಪ್ರತಿಭಟನೆ ನಡೆಸಿದರು.

    ಪ್ರತಿಭಟನೆಯಲ್ಲಿ ರಾಜ್ಯ ಸಂಸದರಾದ ಮುನಿಸ್ವಾಮಿ, ಉಮೇಶ್ ಜಾಧವ್, ದೇವೇಂದ್ರಪ್ಪ, ಅಮರೇಶ ನಾಯಕ್ ಭಾಗಿಯಾಗಿದ್ದರು. ಇದೇ ವೇಳೆ ಹಲವು ರಾಜ್ಯಗಳ ಎಸ್ಸಿ-ಎಸ್ಟಿ ಸಮುದಾಯದ ಸಂಸದರು ಭಾಗಿಯಾಗಿ ಸರ್ಕಾರ ಹಾಗೂ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಘೋಷಣೆ ಕೂಗಿದರು. ಇದನ್ನೂ ಓದಿ: ಸಿದ್ದರಾಮಯ್ಯರಿಂದ ದಲಿತರಿಗೆ ಮಹಾ ಮೋಸ- ಕಾಂಗ್ರೆಸ್ ಪಕ್ಷ ವಂಚಕರ ಸಂತೆ: ಛಲವಾದಿ ನಾರಾಯಣಸ್ವಾಮಿ

     

    ಪ್ರತಿಭಟನೆ ಬಳಿಕ ಮಾತನಾಡಿದ ಬಿಜೆಪಿ ರಾಜ್ಯಧ್ಯಕ್ಷ ನಳಿನ್ ಕುಮಾರ್ ಕಟೀಲ್, ಅಹಿಂದ ಹೆಸರಿನಲ್ಲಿ ದಲಿತರ ಉದ್ಧಾರ ಮಾಡುವುದಾಗಿ ಹೇಳಿದ ಸಿದ್ದರಾಮಯ್ಯ ಅವರು ಎಸ್ಸಿ ಎಸ್ಟಿಗಳಿಗೆ ಅನ್ಯಾಯ ಮಾಡುತ್ತಿದ್ದಾರೆ. ಗ್ಯಾರಂಟಿ ಯೋಜನೆಗಳಿಗೆ ಅನುದಾನ ಹೊಂದಿಸಲು ವಿಫಲವಾಗಿ ದಲಿತ ಅಭಿವೃದ್ಧಿಗೆ ಇಟ್ಟ ಹಣವನ್ನು ಬಳಕೆಗೆ ನಿರ್ಧರಿಸಿದೆ. ಇದರ ಪರಿಣಾಮವಾಗಿ ಎಸ್ಸಿ ಎಸ್ಟಿಗೆ ಅಭಿವೃದ್ಧಿ ಕೊರತೆಯಾಗಲಿದೆ. ಈ ಹಣ ವಾಪಸ್ ಪಡೆಯಬಾರದು ಎಂದು ಸರ್ಕಾರಕ್ಕೆ ಎಚ್ಚರಿಕೆ ನೀಡಿದರು.

    ಸಂಸದ ಮುನಿಸ್ವಾಮಿ ಮಾತನಾಡಿ, ದಲಿತರ ಹೆಸರಿನಲ್ಲಿ ಅಧಿಕಾರಕ್ಕೆ ಬಂದ ಸಿದ್ದರಾಮಯ್ಯ ಟೀಂ ದಲಿತರಿಗೆ ಮೀಸಲಿಟ್ಟ ಹಣ ಬಳಕೆ ‌ಮಾಡುತ್ತಿದೆ.‌ ಗ್ಯಾರಂಟಿಗೆ ಬಳಕೆ ಮಾಡುತ್ತಿದೆ. ಈ ಮೂಲಕ ದಲಿತರಿಗೆ ಅವಮಾನ ಮಾಡುತ್ತಿದೆ. ಸರ್ಕಾರದ ನಿರ್ಧಾರದಿಂದ ದಲಿತರ ಕೇರಿಗಳ ಅಭಿವೃದ್ಧಿ ಕುಂಠಿತಗೊಳ್ಳಲಿದೆ. ಸಿಎಂ ಸಿದ್ದರಾಮಯ್ಯ ಕೂಡಲೇ ರಾಜೀನಾಮೆ ಕೊಡಬೇಕು. ಮತ್ತೆ ಕ್ಷಮೆ ಕೇಳಬೇಕು ಎಂದು ಒತ್ತಾಯಿಸಿದರು. ಇದನ್ನೂ ಓದಿ: ಅಣ್ಣ ಹೇಳಿದ್ದಾರೆ ತಮ್ಮ ಕೇಳುತ್ತಿರಬೇಕು: ಹೆಚ್‌ಡಿಕೆಗೆ ಡಿಕೆಶಿ ಟಾಂಗ್‌

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ದಲಿತರಲ್ಲಿ ಒಗ್ಗಟ್ಟು ಮೂಡಬಾರದು ಅನ್ನೋ ಭಾವನೆ ಬಿಜೆಪಿಯದ್ದು: ಧರ್ಮಸೇನಾ ಕಿಡಿ

    ದಲಿತರಲ್ಲಿ ಒಗ್ಗಟ್ಟು ಮೂಡಬಾರದು ಅನ್ನೋ ಭಾವನೆ ಬಿಜೆಪಿಯದ್ದು: ಧರ್ಮಸೇನಾ ಕಿಡಿ

    ಹಾವೇರಿ: ಬಿಜೆಪಿಯವರು (BJP) ಹತ್ತು ಹಲವಾರು ಭರವಸೆ ಕೊಟ್ಟಿದ್ದು ಬಿಟ್ಟರೆ ಯಾವುದೂ ಈಡೇರಿಲ್ಲ. ದಲಿತರಲ್ಲಿ (Dalits) ಒಗ್ಗಟ್ಟು ಮೂಡಬಾರದು ಅನ್ನೋ ಭಾವನೆ ಅವರದು. ಅಂಬೇಡ್ಕರ್ ಅವರ ಸಂವಿಧಾನದ ಅಡಿ ಕಾಂಗ್ರೆಸ್ ಕೆಲಸ ಮಾಡುತ್ತಿದೆ. ದಲಿತರ ಏಳಿಗೆಗಾಗಿ ಕಾಂಗ್ರೆಸ್ (Congress) ಹೋರಾಟ ಮಾಡುತ್ತಿದೆ ಎಂದು ಎಸ್‌ಸಿ ಕಾಂಗ್ರೆಸ್ ಘಟಕದ ರಾಜ್ಯಾಧ್ಯಕ್ಷ ಧರ್ಮಸೇನಾ (Dharmasena) ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

    ಹಾವೇರಿಯಲ್ಲಿ (Haveri) ಮಾತನಾಡಿದ ಅವರು ಜನವರಿ 8 ರಂದು ಎಸ್‌ಸಿ, ಎಸ್‌ಟಿ ಸಮಾವೇಶ ನಡೆಯಲಿದೆ. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ನೇತೃತ್ವದಲ್ಲಿ ಸಮಾವೇಶ ನಡೆಯಲಿದ್ದು, ರಾಹುಲ್, ಪ್ರಿಯಾಂಕಾ ಮತ್ತು ಸೋನಿಯಾ ಮೂವರಲ್ಲಿ ಒಬ್ಬರು ಬರುವ ನಿರೀಕ್ಷೆ ಇದೆ. ಜೀತಮುಕ್ತ ವಿಮೋಚನೆ ಮಾಡಿದ್ದು, ಮಲ ಹೊರುವ ಪದ್ಧತಿ ತೆಗೆದಿದ್ದು ಕಾಂಗ್ರೆಸ್ ಎಂದರು. ಇದನ್ನೂ ಓದಿ: ಜನವರಿ 1ರ ನಸುಕಿನ ಜಾವ 2 ಗಂಟೆವರೆಗೂ ನಮ್ಮ ಮೆಟ್ರೋ ಸಂಚರಿಸಲಿದೆ: BMRCL

    ಕೇಂದ್ರದಲ್ಲಿ ಶೇ.50 ಮೀರಲು ಆಗೋದಿಲ್ಲ ಅಂತಿದ್ದಾರೆ. ದಲಿತರಲ್ಲಿ ಗೊಂದಲ ಮೂಡಿಸುವ ಕೆಲಸವಾಗುತ್ತಿದೆ. ದಲಿತರ ಸ್ಕೀಂ ಗಳನ್ನು ಬಿಜೆಪಿಯವರು ಹಾಳು ಮಾಡಿದ್ದಾರೆ. ದಲಿತರ ಹಣವನ್ನು ಬೇರೆಯದಕ್ಕೆ ಉಪಯೋಗಿಸಬಾರದು ಎಂದು ಹೇಳಿದರು.

    2019ರಲ್ಲಿ ಪ್ರವಾಹ ಬಂದಾಗ ಸಾಕಷ್ಟು ಹಾನಿಯಾಗಿದೆ. ಮನೆ ಕೊಡಿ ಎಂದರೆ 5 ಲಕ್ಷಕ್ಕೆ 1 ಲಕ್ಷ ಕೇಳುತ್ತಿದ್ದಾರೆ. ಇದು ಕೇವಲ 40 ಪರ್ಸೆಂಟ್ ಅಲ್ಲ, ಎಷ್ಟಾಗುತ್ತದೆ ನೀವೇ ನೋಡಿ ಎಂದು ಬಿಜೆಪಿ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು. ಇದನ್ನೂ ಓದಿ: ಸುಮಲತಾ ಬಿಜೆಪಿ ಸೇರ್ಪಡೆ ಬಗ್ಗೆ ನಳಿನ್ ಕುಮಾರ್ ಕಟೀಲ್ ಸ್ಪಷ್ಟನೆ

    Live Tv
    [brid partner=56869869 player=32851 video=960834 autoplay=true]

  • ದೊಡ್ಡಗಣೇಶ ದೇಗುಲದಲ್ಲಿ ಚಪ್ಪಲಿ ಸ್ಟ್ಯಾಂಡ್‍ಗೂ ಮೀಸಲಾತಿ!

    ದೊಡ್ಡಗಣೇಶ ದೇಗುಲದಲ್ಲಿ ಚಪ್ಪಲಿ ಸ್ಟ್ಯಾಂಡ್‍ಗೂ ಮೀಸಲಾತಿ!

    ಬೆಂಗಳೂರು: ದೇವಸ್ಥಾನಕ್ಕೆ ಬಳಿಯ ಚಪ್ಪಲಿ ಸ್ಟ್ಯಾಂಡ್ ಕಾಯುವುದಕ್ಕೆ ಮೀಸಲಾತಿ(Reservation) ಇದ್ಯಾ ಎಂಬ ಪ್ರಶ್ನೆ ಎದ್ದಿದೆ. ಬೆಂಗಳೂರಿನ ಬಸವನಗುಡಿಯ ಪ್ರಸಿದ್ಧ ದೊಡ್ಡ ಗಣಪತಿ ದೇವಸ್ಥಾನ(Basavanagudi Dodda Ganapathi Temple) ಕರೆದ ಟೆಂಡರ್‌ನಿಂದಾಗಿ ಈ ಪ್ರಶ್ನೆ ಎದ್ದಿದೆ.

    ದೊಡ್ಡ ಗಣಪತಿ ದೇವಸ್ಥಾನದ ಆಡಳಿತ ಮಂಡಳಿ ಕರೆದ ಟೆಂಡರ್‌ನಲ್ಲಿ(Tender) ಇಂಥಾದ್ದೇ ಸಮುದಾಯದವರು ಭಾಗವಹಿಸಬೇಕು ಎಂಬ ಅಂಶವಿದೆ. ಬರುವ ಭಕ್ತರ ಪಾದರಕ್ಷೆ ಕಾಯಲು ಟೆಂಡರ್ ಆಹ್ವಾನಿಸಿದ್ದು, ಪರಿಶಿಷ್ಟ ವರ್ಗದವರು ಮಾತ್ರ ಪಾಲ್ಗೊಳ್ಳಬೇಕು ಎಂದು ಪ್ರಕಟಿಸಿದೆ.  ಇದನ್ನೂ ಓದಿ: ಪೊಲೀಸರು ಮ್ಯಾಚ್ ಫಿಕ್ಸಿಂಗ್ ಮಾಡೋದನ್ನು ಬಿಡಿ, ನಿಷ್ಠೆಯಿಂದ ಕೆಲಸ ಮಾಡಿ: ಅಲೋಕ್ ಕುಮಾರ್

    ಜೊತೆಗೆ ಪೂಜಾ ಸಾಮಾಗ್ರಿ ಮಾರಾಟ, ಈಡುಗಾಯಿ ಆಯ್ದುಕೊಳ್ಳುವ ಹಕ್ಕಿನ ಟೆಂಡರ್, ಎಳನೀರು ಮಾರಾಟದ ಟೆಂಡರ್ ಅನ್ನು ಸಾಮಾನ್ಯ ವರ್ಗಕ್ಕೆ ಮೀಸಲಿಡಲಾಗಿದೆ.

    ದೇವಸ್ಥಾನದ ಈ ಟೆಂಡರ್ ಪ್ರಕಟಣೆಗೆ ವ್ಯಾಪಕ ಟೀಕೆಗೆ ವ್ಯಕ್ತವಾಗಿದೆ. ಇದು ವಿವಾದ ಆಗುತ್ತಿದ್ದಂತೆ ಎಚ್ಚೆತ್ತ ದೊಡ್ಡ ಗಣೇಶ ದೇಗುಲದ ಆಡಳಿತ ಮಂಡಳಿ, ಟೆಂಡರ್ ಪ್ರಕ್ರಿಯೆಯನ್ನು ಸ್ಥಗಿತಗೊಳಿಸಿ ಪ್ರಕಟಣೆ ಹೊರಡಿಸಿದೆ.

    ಮುಜರಾಯಿ ಇಲಾಖೆ ತಹಶೀಲ್ದಾರರು ಈಗ ಈ ರೀತಿಯಾಗಿ ಹೇಗೆ ಟೆಂಡರ್ ಕರೆದಿದ್ದೀರಿ ವಿವರಣೆ ನೀಡಿ ಎಂದು ದೊಡ್ಡ ಗಣೇಶ ದೇಗುಲದ ಆಡಳಿತ ಮಂಡಳಿಗೆ ನೋಟಿಸ್‌ ನೀಡಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ಮೀಸಲಾತಿ ಹೆಚ್ಚಳ ಸುಗ್ರೀವಾಜ್ಞೆಗೆ ರಾಜ್ಯಪಾಲರಿಂದ ಅಂಕಿತ – SC, ST ಸಮುದಾಯಗಳಿಗೆ ಸರ್ಕಾರದಿಂದ ದೀಪಾವಳಿ ಗಿಫ್ಟ್‌

    ಮೀಸಲಾತಿ ಹೆಚ್ಚಳ ಸುಗ್ರೀವಾಜ್ಞೆಗೆ ರಾಜ್ಯಪಾಲರಿಂದ ಅಂಕಿತ – SC, ST ಸಮುದಾಯಗಳಿಗೆ ಸರ್ಕಾರದಿಂದ ದೀಪಾವಳಿ ಗಿಫ್ಟ್‌

    ಬೆಂಗಳೂರು: ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಸಮುದಾಯಗಳಿಗೆ ಮೀಸಲಾತಿ (SC ST Reservation) ಹೆಚ್ಚಳಕ್ಕೆ ಸಂಬಂಧಿಸಿದ ಸುಗ್ರೀವಾಜ್ಞೆಗೆ ರಾಜ್ಯಪಾಲ ಥಾವರ್‌ಚಂದ್‌ ಗೆಹ್ಲೋಟ್‌ (Thawarchand Gehlot) ಅಂಕಿತ ಹಾಕಿದ್ದಾರೆ. ಆ ಮೂಲಕ ಎಸ್‌ಸಿ, ಎಸ್‌ಟಿ ಸಮುದಾಯಗಳಿಗೆ ಸರ್ಕಾರ ದೀಪಾವಳಿ ಗಿಫ್ಟ್‌ ನೀಡಿದೆ.

    ಎಸ್ಸಿ, ಎಸ್ಟಿ ಸಮುದಾಯಗಳಿಗೆ ಕ್ರಮವಾಗಿ 2% ಮತ್ತು 4% ಮೀಸಲಾತಿಯನ್ನು ಸರ್ಕಾರ ಹೆಚ್ಚಿಸಿದೆ. ಮೀಸಲಾತಿ ಪ್ರಮಾಣ 50% ರಿಂದ 56%ಕ್ಕೆ ಹೆಚ್ಚಿಸಲಾಗಿದೆ. ಇದನ್ನೂ ಓದಿ: ಈ ಬಾರಿ ದೀಪಾವಳಿ ಹಬ್ಬಕ್ಕೆ ಸೂರ್ಯಗ್ರಹಣ ಕಾರ್ಮೋಡ

    ಇಂದಿರಾ ಸಹಾನಿ ಪ್ರಕರಣದಲ್ಲಿ ಮೀಸಲಾಗಿರುವ ಪ್ರಮಾಣ 50% ಮೀರಬಾರದೆಂದು ಸುಪ್ರೀಂ ಕೋರ್ಟ್ ಆದೇಶಿಸಿತ್ತು. ಆದರೆ ವಿಶೇಷ ಸಂದರ್ಭದಲ್ಲಿ ಮಾತ್ರ ಮೀಸಲಾತಿ ಪ್ರಮಾಣ ಹೆಚ್ಚಿಸಬಹುದೆಂದೂ ಕೋರ್ಟ್‌ ತಿಳಿಸಿತ್ತು. ಇದೀಗ ಎಸ್ಸಿ, ಎಸ್ಟಿ ಮೀಸಲಾತಿ ಹೆಚ್ಚಳ ಕ್ರಮವನ್ನು ವಿಶೇಷ ಸಂದರ್ಭದ ವ್ಯಾಪ್ತಿಗೆ ತರಲು ಸರ್ಕಾರ ಮುಂದಾಗಿದೆ.

    ಈ ಸಂಬಂಧ 9ನೇ ಶೆಡ್ಯೂಲ್‌ಗೆ ಈಗಿನ ನಿರ್ಧಾರ ಸೇರಿಸಲು ಸರ್ಕಾರ ಪ್ರಕ್ರಿಯೆ ಕೈಗೊಳ್ಳಲಿದೆ. ತಮಿಳುನಾಡು 50% ರಿಂದ 69% ಕ್ಕೆ ಮೀಸಲಾತಿ ಏರಿಸಿ 9ನೇ ಪರಿಚ್ಛೇದದ ವ್ಯಾಪ್ತಿಗೆ ಸೇರಿದೆ. ಇದೇ ಮಾದರಿ ಅನುಸರಿಸಲು ರಾಜ್ಯ ಸರ್ಕಾರ ಮುಂದಾಗಿದೆ.

    ಮೀಸಲಾತಿ ಹೆಚ್ಚಳಕ್ಕೆ ಸಂಬಂಧಿಸಿದ ಸುಗ್ರೀವಾಜ್ಞೆಗೆ ರಾಜ್ಯಪಾಲರು ಅಂಕಿತ ಹಾಕಿರುವುದನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಸ್ವಾಗತಿಸಿದ್ದಾರೆ. ಕರ್ನಾಕಟದ ಅನುಸೂಚಿತ ಜಾತಿ ಮತ್ತು ಅನುಸೂಚಿತ ಪಂಗಡಗಳ ಶಿಕ್ಷಣ ಮತ್ತು ಉದ್ಯೋಗದಲ್ಲಿ ಮೀಸಲಾತಿ ಹೆಚ್ಚಿಸುವ ಬಗ್ಗೆ ನ್ಯಾಯಮೂರ್ತಿ ನಾಗಮೋಹನ್‌ ದಾಸ್‌ ಅವರ ಶಿಫಾರಸ್ಸನ್ನು ಒಪ್ಪಿ ಆದೇಶ ಮಾಡಲು ಸಚಿವ ಸಂಪುಟ ತೀರ್ಮಾನ ತೆಗೆದುಕೊಂಡಿರುವುದು ಗೊತ್ತಿದೆ. ಇದಕ್ಕೆ ಭಾನುವಾರ ರಾಜ್ಯಪಾಲರು ಒಪ್ಪಿಗೆ ಸೂಚಿಸಿರುವುದು ಸಂತಸದ ಸಂಗತಿ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ತಿಳಿಸಿದ್ದಾರೆ. ಇದನ್ನೂ ಓದಿ: ಎಡಪಂಥೀಯರಿಂದ ದೇಶದಲ್ಲಿ ವಿಕೃತಿ ನಿರ್ಮಾಣದ ಪ್ರಯತ್ನ – ಕಲ್ಲಡ್ಕ ಪ್ರಭಾಕರ್ ಕಿಡಿ

    ಈ ಕುರಿತು ಇಂದು ಅಧಿಕೃತವಾದ ವಿಶೇಷ ರಾಜ್ಯಪತ್ರವನ್ನು ಪ್ರಕಟಿಸಲಾಗಿದೆ. ಇದರಿಂದ ಇನ್ನು ಮುಂದೆ ಅನುಸೂಚಿತ ಜಾತಿಯ ಮೀಸಲಾತಿ ಪ್ರಮಾಣ ಶೇ.15 ರಿಂದ ಶೇ.17 ಕ್ಕೆ ಏರಲಿದ್ದು, ಅನುಸೂಚಿತ ಪಂಗಡಗಳ ಮೀಸಲಾತಿ ಪ್ರಮಾಣ ಶೇ.3 ರಿಂದ ಶೇ.7 ಕ್ಕೆ ಏರಿಸಲಾಗಿದೆ. ನಮ್ಮ ಸರ್ಕಾರವು ಮೀಸಲಾತಿ ಪ್ರಮಾಣ ಹೆಚ್ಚಿಸಿ ಬದ್ದತೆಯಿದ ನಡೆದುಕೊಂಡಿದೆ. ಈ ಮೂಲಕ ಅನುಸೂಚಿತ ಜಾತಿ ಮತ್ತು ಪಂಗಡಗಳ ಜನಾಂಗಕ್ಕೆ ನಮ್ಮ ಸರ್ಕಾರ ದೀಪಾವಳಿ ಕೊಡುಗೆ ಕೊಟ್ಟಿದೆ ಎಂದು ತಿಳಿಸಿದ್ದಾರೆ.

    ರಾಜ್ಯ ಸರ್ಕಾರದ ಸುಗ್ರೀವಾಜ್ಞೆಗೆ ಅಂಕಿತ ಹಾಕಿರುವ ರಾಜ್ಯಪಾಲರಿಗೆ ನಾನು ಕೃತಜ್ಞತೆ ಸಲ್ಲಿಸುತ್ತೇನೆ. ಈ ಆಧ್ಯಾದೇಶಕ್ಕೆ ವಿಧಾನಮಂಡಲದ ಎರಡೂ ಸದನದಲ್ಲಿ ಮಂಡಿಸಿ ಒಪ್ಪಿಗೆ ಪಡೆಯಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • SC-ST ಮೀಸಲಾತಿ ಹೆಚ್ಚಳಕ್ಕೆ ಒಪ್ಪಿಗೆ – ಹಾಲಿ ಎಷ್ಟಿದೆ? ಎಷ್ಟು ಏರಿಕೆಯಾಗಿದೆ?

    SC-ST ಮೀಸಲಾತಿ ಹೆಚ್ಚಳಕ್ಕೆ ಒಪ್ಪಿಗೆ – ಹಾಲಿ ಎಷ್ಟಿದೆ? ಎಷ್ಟು ಏರಿಕೆಯಾಗಿದೆ?

    – ನಾಗಮೋಹನ್ ದಾಸ್ ವರದಿ ಜಾರಿಗೆ ಸರ್ಕಾರದ ಅಸ್ತು
    – ಶನಿವಾರ ಸರ್ಕಾರದಿಂದ ಅಧಿಕೃತ ಆದೇಶ

    ಬೆಂಗಳೂರು: ಬಹು ವರ್ಷಗಳ ಪರಿಶಿಷ್ಟ ಜಾತಿ(Scheduled Castes) ಮತ್ತು ಪರಿಶಿಷ್ಟ ಪಂಗಡಗಳ(Scheduled Tribes) ಮೀಸಲಾತಿ ಹೆಚ್ಚಳಕ್ಕೆ ಸರ್ಕಾರ ನಿರ್ಧಾರ ಮಾಡಿದೆ. ಇಂದು ಮೀಸಲಾತಿ(Reservation) ಹೆಚ್ಚಳ ಸಂಬಂಧ ಸಿಎಂ ಬೊಮ್ಮಾಯಿ(CM Basavaraj Bommai) ನೇತೃತ್ವದಲ್ಲಿ ಸರ್ವ ಪಕ್ಷಗಳ ಸಭೆ ನಡೆಯಿತು. ಸಭೆಯಲ್ಲಿ ಮೀಸಲಾತಿ ಸಂಬಂಧ ನ್ಯಾ.ನಾಗಮೋಹನ್ ದಾಸ್(Justice Nagamohan Das) ನೀಡಿರುವ ವರದಿ ಯಥಾವತ್ತಾಗಿ ಜಾರಿಗೆ ಒಮ್ಮತದ ಅಭಿಪ್ರಾಯ ಮೂಡಿತು. ಈ ಹಿನ್ನೆಲೆಯಲ್ಲಿ ಸರ್ಕಾರ ಮೀಸಲಾತಿ ಹೆಚ್ಚಳಕ್ಕೆ ಒಪ್ಪಿಗೆ ನೀಡಿದ್ದು, ನಾಳೆಯ ಕ್ಯಾಬಿನೆಟ್ ನಲ್ಲಿ ವಿಷಯ ಮಂಡಿಸಿ ಅಧಿಕೃತ ಆದೇಶ ಹೊರಡಿಸುವುದಾಗಿ ಸಿಎಂ ಬೊಮ್ಮಾಯಿ ಘೋಷಣೆ ಮಾಡಿದರು.

    ಸದ್ಯ ಪರಿಶಿಷ್ಟ ಜಾತಿಗೆ 15% ಮತ್ತು ಪರಿಶಿಷ್ಟ ಪಂಗಡಕ್ಕೆ 3% ಮೀಸಲಾತಿ ಇತ್ತು. ನ್ಯಾ.ನಾಗಮೋಹನ್ ದಾಸ್ ಸಮಿತಿ ಜನಸಂಖ್ಯೆ ಆಧಾರದಲ್ಲಿ ಎಸ್‌ಸಿ ಮೀಸಲಾತಿ 15% ನಿಂದ 17%ಗೆ ಹಾಗೂ ಎಸ್‌ಟಿ ಮೀಸಲಾತಿ 3% ನಿಂದ 7%ಗೆ ಹೆಚ್ಚಳ ಮಾಡುವಂತೆ ಸರ್ಕಾರಕ್ಕೆ ವರದಿ ಸಲ್ಲಿಸಿತ್ತು. ಇವತ್ತಿನ ಸರ್ವ ಪಕ್ಷಗಳ ಸಭೆಯಲ್ಲಿ ವರದಿ ಜಾರಿಗೆ ಎಲ್ಲಾ ಪಕ್ಷಗಳು ಒಪ್ಪಿಗೆ ನೀಡಿದ್ದು, ಮೀಸಲಾತಿ ಹೆಚ್ಚಳಕ್ಕೆ ಸರ್ಕಾರ ನಿರ್ಧಾರ ಮಾಡಿದೆ. ಇದನ್ನೂ ಓದಿ: ಇಂದಿನಿಂದ ಬೆಂಗ್ಳೂರಲ್ಲಿ ಪ್ರೊ ಕಬಡ್ಡಿ ಮೇನಿಯಾ – ತ್ರಿಬಲ್ ಹೆಡ್ಡರ್ ಮೂಲಕ ಆರಂಭ

    ಸಿದ್ದರಾಮಯ್ಯ(Siddaramaiah) ಮಾತನಾಡಿ, ಸರ್ಕಾರ ಕೂಡಲೇ ಅಧಿವೇಶನ ಕರೆದು ಮೀಸಲಾತಿ ಹೆಚ್ಚಳ ನಿರ್ಣಯ ಅಂಗೀಕಾರ ಮಾಡಬೇಕು. 9ನೇ ಅನುಚ್ಛೇದಕ್ಕೆ ಇದನ್ನ ಸೇರ್ಪಡೆ ಮಾಡಲು ಕೇಂದ್ರದ ಮೇಲೆ ಒತ್ತಾಯ ತರಬೇಕು ಅಂತ ಆಗ್ರಹ ಮಾಡಿದರು. ಮಾಜಿ ಸಿಎಂ ಕುಮಾರಸ್ವಾಮಿ ಕೂಡಾ ಶೀಘ್ರವೇ ಮೀಸಲಾತಿ ಪ್ರಕ್ರಿಯೆ ಮುಗಿಸಿ ಅಂತ ಒತ್ತಾಯ ಮಾಡಿದರು.

    ಎಸ್‌ಸಿ, ಎಸ್‌ಟಿ ಮೀಸಲಾತಿ ಹೆಚ್ಚಳ ಬಳಿಕ ಒಬಿಸಿ ಮೀಸಲಾತಿ ಕಡಿಮೆ ಆಗುತ್ತದೆ ಎಂಬ ಆತಂಕವನ್ನು ಕೂಡಾ ಸರ್ಕಾರ ನಿವಾರಣೆ ಮಾಡಿದೆ. ಯಾವುದೇ ಕಾರಣಕ್ಕೂ ಈಗ ಇರುವ 50% ಮೀಸಲಾತಿಯಲ್ಲಿ 1% ಕೂಡಾ ಬದಲಾವಣೆ ಮಾಡೋದಿಲ್ಲ ಅಂತ ಸಿಎಂ ಬೊಮ್ಮಾಯಿ ಸ್ಪಷ್ಟಪಡಿಸಿದ್ದಾರೆ. ಕಾನೂನು ಸಚಿವ ಮಾಧುಸ್ವಾಮಿ ಮೀಸಲಾತಿ ಹೆಚ್ಚಳ ಸಂಬಂಧ ಕಾನೂನು ಪ್ರಕ್ರಿಯೆ ನಡೆಸುತ್ತೇವೆ. ಮುಂದಿನ ಅಧಿವೇಶನದಲ್ಲೆ ಕಾನೂನು ತಿದ್ದುಪಡಿ ಮಾಡುತ್ತೇವೆ ಎಂದರು.

    ಸರ್ವ ಪಕ್ಷಗಳ ಸಭೆಗೂ ಮುನ್ನ ಬಿಜೆಪಿ ಕಾರ್ಯಕಾರಣಿಯಲ್ಲೂ ಮೀಸಲಾತಿ ಹೆಚ್ಚಳದ ಬಗ್ಗೆ ನಿರ್ಣಯ ತೆಗೆದುಕೊಳ್ಳಲಾಗಿತ್ತು. ಮೀಸಲಾತಿ ಹೆಚ್ಚಳ ಸಂಬಂಧ ಬಿಜೆಪಿ ಹೈಕಮಾಂಡ್ ಕೂಡಾ ಸಿಎಂ ಬೊಮ್ಮಾಯಿ ಅವರಿಗೆ ರಾತ್ರಿಯೇ ಸಂದೇಶ ರವಾನೆ ಮಾಡಿ, ಕಾಂಗ್ರೆಸ್ ನ ರಾಜಕೀಯ ತಂತ್ರಕ್ಕೆ ಪ್ರತಿತಂತ್ರದ ಮಾಸ್ಟರ್ ಸ್ಟ್ರೋಕ್ ನೀಡಿತ್ತು.

    ಹಾಲಿ ಮೀಸಲಾತಿ ಎಷ್ಟಿದೆ?
    ಎಸ್‌ಸಿ- 15%
    ಹಿಂದುಳಿದ ವರ್ಗ 2 ಎ- 15%
    ಪ್ರವರ್ಗ 1- 4%
    2ಬಿ – 4%
    3ಎ- 4%
    3ಬಿ- 5%
    ಎಸ್ ಟಿ- 3%
    ಒಟ್ಟು ಮೀಸಲಾತಿ ಪ್ರಮಾಣ: 50%

    ಎಷ್ಟು ಏರಿಕೆ ಆಗುತ್ತೆ?
    ಈಗ ಎಸ್ ಟಿಗೆ 4%, ಎಸ್‌ಸಿ 2% ಮೀಸಲಾತಿ ಹೆಚ್ಚಳ ಮಾಡಿದ್ದರಿಂದ ಒಟ್ಟು ಮೀಸಲಾತಿ ಪ್ರಮಾಣ 56% ಏರಿಕೆಯಾಗಲಿದೆ. ಮೀಸಲಾತಿ ಹೆಚ್ಚಳದಿಂದ ಎಸ್‌ಟಿ ಸಮುದಾಯಕ್ಕೆ 7%, ಎಸ್ ಸಿ ಸಮುದಾಯಕ್ಕೆ 17% ಮೀಸಲಾತಿ ದಕ್ಕಲಿದೆ.

    ಯಾರು ಯಾವುದರಲ್ಲಿ ಬರುತ್ತಾರೆ?
    ಪ್ರವರ್ಗ 1 – 95 ಜಾತಿಗಳು
    OBC (2ಎ)- 102 ಜಾತಿಗಳು
    2b -ಮುಸ್ಲಿಂ ಸಮುದಾಯ
    3ಎ- ಒಕ್ಕಲಿಗ, ಕೊಡವ, ಬಲಿಜ
    3b- ಲಿಂಗಾಯತ, ಮರಾಠ, ಕ್ರಿಶ್ಚಿಯನ್, ಬಂಟ್ಸ್‌

    Live Tv
    [brid partner=56869869 player=32851 video=960834 autoplay=true]

  • SC-ST ಗ್ರಾಹಕರಿಗೆ ಉಚಿತ ವಿದ್ಯುತ್‌ ಅನುಷ್ಠಾನಕ್ಕೆ ಹೊಸ ಆ್ಯಪ್‌

    SC-ST ಗ್ರಾಹಕರಿಗೆ ಉಚಿತ ವಿದ್ಯುತ್‌ ಅನುಷ್ಠಾನಕ್ಕೆ ಹೊಸ ಆ್ಯಪ್‌

    ಬೆಂಗಳೂರು: ರಾಜ್ಯದ ಬಡತನ ರೇಖೆಗಿಂತ ಕೆಳಗಿರುವ (ಬಿಪಿಎಲ್‌) ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಕುಟುಂಬಗಳಿಗೆ ಮಾಸಿಕ 75 ಯುನಿಟ್‌ ಗೃಹ ಬಳಕೆಯ ʼಅಮೃತ ಜ್ಯೋತಿʼ ಉಚಿತ ವಿದ್ಯುತ್‌ ಯೋಜನೆಯನ್ನು ರದ್ದುಪಡಿಸಿಲ್ಲ ಎಂದು ಬೆಸ್ಕಾಂ ಸ್ಪಷ್ಟಪಡಿಸಿದೆ.

    ಯೋಜನೆಗೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ಆಗಸ್ಟ್‌ 24, 2022 ರಂದು ಹೊರಡಿಸಿದ್ದ ಮಾರ್ಗಸೂಚಿ ಸುತ್ತೋಲೆಯನ್ನು ಇ-ಆಡಳಿತ ಇಲಾಖೆಯು ಭಾಗಶ: ಪರಿಷ್ಕರಿಸಿದ್ದರಿಂದ ಸುತ್ತೋಲೆಯನ್ನು ಸೆಪ್ಟೆಂಬರ್‌ 3, 2022 ರಂದು ಹಿಂಪಡೆಯಲಾಗಿದೆಯೇ ಹೊರತು, ಯೋಜನೆಯನ್ನು ರದ್ದುಪಡಿಸಿಲ್ಲ ಎಂದು ಬೆಸ್ಕಾಂ ಪ್ರಕಟಣೆ ತಿಳಿಸಿದೆ. ಇದನ್ನೂ ಓದಿ: ರಮ್ಯಾ ಹೇಳಿದ್ದು ನಿಜ: ಶಾಸಕ ಅರವಿಂದ ಲಿಂಬಾವಳಿ

    ಬಿಪಿಎಲ್‌ ಕುಟುಂಬದ ಎಸ್ಸಿ-ಎಸ್ಟಿ ಗ್ರಾಹಕರಿಗೆ 75 ಯುನಿಟ್‌ವರೆಗೆ ಉಚಿತ ವಿದ್ಯುತ್‌ ನೀಡುವ ಅಮೃತ ಜ್ಯೋತಿ ವಿದ್ಯುತ್‌ ಯೋಜನೆಯನ್ನು ರಾಜ್ಯ ಸರ್ಕಾರ ಮೇ 18, 2022 ರಂದು ರಾಜ್ಯಾದ್ಯಂತ ಜಾರಿಗೆ ತಂದಿತ್ತು. ಈ ಯೋಜನೆಯ ಪ್ರಯೋಜನವು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಬಿಪಿಎಲ್‌ ಕುಟುಂಬಗಳಿಗೆ ಸುಲಭ ಮತ್ತು ಸುಲಲಿತವಾಗಿ ಅನುಷ್ಠಾನಗೊಳಿಸಲು ಇ-ಆಡಳಿತ ಇಲಾಖೆಯು ಹೊಸ ಆ್ಯಪ್‌ ಒಂದನ್ನು ಅಭಿವೃದ್ಧಿಪಡಿಸುತ್ತಿದೆ.

    ಈ ಯೋಜನೆಯನ್ನು ರದ್ದುಗೊಳಿಸಲಾಗಿದೆ ಎಂಬ ತಪ್ಪು ಮಾಹಿತಿಯು ಸಾರ್ವಜನಿಕರಲ್ಲಿ ಗೊಂದಲ ಮೂಡಿಸಿದೆ. ಯೋಜನೆಯನ್ನು ಇನ್ನಷ್ಟು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಲು ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ ಎಂದು ಬೆಸ್ಕಾಂ ತಿಳಿಸಿದೆ. ಇದನ್ನೂ ಓದಿ: ಮೈಸೂರು ಮೇಯರ್, ಉಪ ಮೇಯರ್ ಎಲೆಕ್ಷನ್: ಬಿಜೆಪಿ ಬಾಯಿಗೆ ಬಿತ್ತು ಡಬಲ್ ಲಡ್ಡು!

    ಈ ಯೋಜನೆಯ ಪ್ರಯೋಜನ ಸುಮಾರು 39 ಲಕ್ಷ ಬಿಪಿಎಲ್‌ ಕುಟುಂಬಗಳ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಗ್ರಾಹಕರಿಗೆ ಸಿಗಲಿದ್ದು, ಈಗಾಗಲೇ 4 ಲಕ್ಷ ಫಲಾನುಭವಿಗಳನ್ನು ಗುರುತಿಸಲಾಗಿದೆ. ಮೇ ಮತ್ತು ಜೂನ್‌ ತಿಂಗಳ ವಿದ್ಯುತ್‌ ಬಿಲ್‌ ಮೊತ್ತವನ್ನು ಸುಮಾರು 15,000 ಫಲಾನುಭವಿಗಳಿಗೆ ನೇರ ನಗದು ವರ್ಗಾವಣೆ ಮೂಲಕ ಮರುಪಾವತಿಸಲಾಗಿದೆ ಎಂದು ಬೆಸ್ಕಾಂ ತಿಳಿಸಿದೆ. ಈ ಯೋಜನೆಯನ್ನು ಇ-ಆಡಳಿತ ಇಲಾಖೆಯ ಸಹಯೋಗದೊಂದಿಗೆ ಡಿಬಿಟಿ ವ್ಯವಸ್ಥೆಯಡಿ ಜಾರಿಗೊಳಿಸಲಾಗಿದೆ. ಫಲಾನುಭವಿ ಗ್ರಾಹಕರಿಗೆ ತಾವು ಪಾವತಿಸಿದ ಒಟ್ಟು ವಿದ್ಯುತ್‌ ಬಿಲ್ಲಿನ ಮೊತ್ತದಲ್ಲಿ 75 ಯುನಿಟ್‌ಗಳವರೆಗಿನ ವಿದ್ಯುತ್‌ ಶುಲ್ಕದ ಮೊತ್ತವನ್ನು ಅವರ ಬ್ಯಾಂಕ್‌ ಖಾತೆಗೆ ನೇರ ವರ್ಗಾವಣೆ ಮಾಡಲಾಗುತ್ತಿದೆ.

    Live Tv
    [brid partner=56869869 player=32851 video=960834 autoplay=true]