Tag: scam

  • ಕಾಂಗ್ರೆಸ್‌ನಿಂದ ಶುರುವಾಯ್ತು ಬಿಜೆಪಿ ಕಾಲದ ಅಕ್ರಮದ ತನಿಖೆ – ಮೊದಲ ಎಫ್‌ಐಆರ್‌ ದಾಖಲು

    ಕಾಂಗ್ರೆಸ್‌ನಿಂದ ಶುರುವಾಯ್ತು ಬಿಜೆಪಿ ಕಾಲದ ಅಕ್ರಮದ ತನಿಖೆ – ಮೊದಲ ಎಫ್‌ಐಆರ್‌ ದಾಖಲು

    ಬೆಂಗಳೂರು: ಬಿಜೆಪಿ ಸರ್ಕಾರದ (BJP Government) ಅವಧಿಯಲ್ಲಿ ನಡೆದಿದೆ ಎನ್ನಲಾದ ಅಕ್ರಮದ ತನಿಖೆಗೆ ಕಾಂಗ್ರೆಸ್‌ (Congress) ಮುಂದಾಗಿದ್ದು ಮೊದಲ ಎಫ್‌ಐಆರ್‌ ದಾಖಲಾಗಿದೆ.

    ಅಂಬೇಡ್ಕರ್ ಅಭಿವೃದ್ದಿ ನಿಗಮ ಗಂಗಾ ಕಲ್ಯಾಣ ಯೋಜನೆಯಲ್ಲಿ (Ganga Kalyana Yojane) ಅಕ್ರಮ ನಡೆದಿದೆ ಎಂದು ಆರೋಪಿಸಿ ವಿಧಾನಸೌಧ ಪೊಲೀಸ್‌ ಠಾಣೆಯಲ್ಲಿ ದೂರು ನೀಡಿದ್ದು ಎಫ್‌ಐಆರ್‌ ದಾಖಲಾಗಿದೆ. ಶೀಘ್ರವೇ ಈ ಪ್ರಕರಣ ಸಿಐಡಿಗೆ ವರ್ಗಾವಣೆಯಾಗುವ ಸಾಧ್ಯತೆಯಿದೆ.

    2 ರಿಂದ 5 ಎಕರೆ ವ್ಯಾಪ್ತಿಯೊಳಗಡೆ ಜಮೀನಿರುವವರಿಗೆ ಗಂಗಾಕಲ್ಯಾಣ ಯೋಜನೆಯಡಿ ಕೊಳವೆ ಬಾವಿ (Borwell) ನಿರ್ಮಾಣ ಮಾಡುವ ಮೂಲಕ ಅವರಿಗೆ ನೆರವಾಗುವ ಕೆಲಸ ಮಾಡಲಾಗುತ್ತಿದೆ. ಆದರೆ ಈ ಯೋಜನೆಯನ್ನು ದುರುಪಯೋಗ ಮಾಡಿಕೊಂಡು ಟೆಂಡರ್ ನಿಯಮಗಳನ್ನು ಗಾಳಿಗೆ ತೂರಿ ಹಣ ಕಬಳಿಸಿದ್ದಾರೆ. ನಕಲಿ ದಾಖಲೆ ನೀಡಿ ಕೋಟ್ಯಂತರ ರೂಪಾಯಿ ಹಣ ಬಿಡುಗಡೆ ಮಾಡಿಸಿಕೊಂಡಿದ್ದಾರೆ ಎಂದು ದೂರಿನಲ್ಲಿ ಆರೋಪಿಸಿಲಾಗಿದೆ. ಇದನ್ನೂ ಓದಿ: ಗ್ಯಾರಂಟಿ ಲಾಭ ಪಡೆಯಲು ದುಂಬಾಲು – ಬೆಂಗಳೂರಿನಲ್ಲಿ ಬಿಪಿಎಲ್ ಕಾರ್ಡ್‍ಗೆ ಫುಲ್‌ ಡಿಮ್ಯಾಂಡ್‌

    ಈ ಹಿಂದೆ 2021 ರಲ್ಲಿ ಗಂಗಾ ಕಲ್ಯಾಣ ಯೋಜನೆ ಅಕ್ರಮ ತಡೆಯಲು ಸದನ ಸಮಿತಿ ರಚನೆಯಾಗಿತ್ತು. ಡಾ.ವೈ.ಎ. ನಾರಾಯಣಸ್ವಾಮಿ ನೇತೃತ್ವದ ಗಂಗಾ ಕಲ್ಯಾಣ ವಿಶೇಷ ಸದನ ಸಮಿತಿ ಈಗಾಗಲೇ ಮಧ್ಯಂತರ ವರದಿ ಸಲ್ಲಿಸಿದೆ. ಈ ಬೆನ್ನಲ್ಲೇ ಗಂಗಾ‌ಕಲ್ಯಾಣ ಯೋಜನೆಯ ಅಕ್ರಮದ ತನಿಖೆಗೆ ಕಾಂಗ್ರೆಸ್ ಸರ್ಕಾರ ಮುಂದಾಗಿದೆ.

     

    ಗಂಗಾ ಕಲ್ಯಾಣ ಯೋಜನೆಯಡಿ ಕೊಳವೆಬಾವಿ ನಿರ್ಮಾಣ ಕಾರ್ಯದಲ್ಲಿ ಶೇ.30 ರಿಂದ 40 ರಷ್ಟು ಅಕ್ರಮ ನಡೆದಿದೆ. 100 ಕೋಟಿ ರೂ. ಅನುದಾನದಲ್ಲಿ 30ರಿಂದ 40 ಕೋಟಿ ರೂ. ದೋಚುವ ಕೆಲಸ ಮಾಡಲಾಗಿದೆ ಡಾ.ವೈ.ಎ. ನಾರಾಯಣಸ್ವಾಮಿ ಈ ಹಿಂದೆ ಹೇಳಿದ್ದರು. 2015ರಿಂದ ಕೋಟ್ಯಂತರ ರೂ. ಅಕ್ರಮ ನಡೆದಿರುವುದು ಸಮಿತಿಗೆ ಗೊತ್ತಾಗಿದೆ. ಗೋಲ್‌ಮಾಲ್‌ನಲ್ಲಿ ಭಾಗಿಯಾದವರ ವಿರುದ್ಧ ಕ್ರಮಕೈಗೊಳ್ಳುವಂತೆ ಸಮಿತಿ ಶಿಫಾರಸು ಮಾಡಲಿದೆ ಎಂದು ತಿಳಿಸಿದ್ದರು.

  • ಡಬಲ್ ಹಣ ನೀಡುವುದಾಗಿ ನಿವೃತ್ತ ನೌಕರರಿಗೆ ಬ್ಯಾಂಕ್‌ನಿಂದ ಪಂಗನಾಮ

    ಡಬಲ್ ಹಣ ನೀಡುವುದಾಗಿ ನಿವೃತ್ತ ನೌಕರರಿಗೆ ಬ್ಯಾಂಕ್‌ನಿಂದ ಪಂಗನಾಮ

    ರಾಮನಗರ: ರಾಷ್ಟ್ರೀಕೃತ ಬ್ಯಾಂಕ್‍ಗಳಿಗಿಂತ (Bank) ಹೆಚ್ಚಿನ ಬಡ್ಡಿ (Interest) ಕೊಡುತ್ತಾರೆ ಎನ್ನೋ ಆಸೆಯಿಂದ ಇದ್ದ ನಿವೃತ್ತ ನೌಕರರನ್ನು (Retired Employees) ಖಾಸಗಿ ಬ್ಯಾಂಕ್‌ (Private Bank) ಒಂದು ವಂಚಿಸಿರುವ ಘಟನೆ ರಾಮನಗರದಲ್ಲಿ (Ramanagara) ನಡೆದಿದೆ. ನಿವೃತ್ತ ನೌಕರರನ್ನು ಟಾರ್ಗೆಟ್ ಮಾಡಿದ್ದ ಬ್ಯಾಂಕ್‍ನವರು, ಡಬಲ್ ಹಣ (Money) ನೀಡೋದಾಗಿ ಹಣ ಠೇವಣಿ ಮಾಡಿಸಿಕೊಂಡು ಅವಧಿ ಮುಗಿದ ಬಳಿಕ ಹಣ ನೀಡದೆ ಕಚೇರಿಯನ್ನು ಬಂದ್ ಮಾಡಿ ಎಸ್ಕೇಪ್ ಆಗಿದ್ದಾರೆ.

    ರಾಮನಗರದ ಪಂಚವಟಿ ಮಲ್ಟಿಸ್ಟೇಟ್‌ ಕ್ರೆಡಿಟ್ ಕೋ-ಆಪರೇಟಿವ್‌ ಬ್ಯಾಂಕ್‍ನಿಂದ ಷೇರುದಾರಿಗೆ ಪಂಗನಾಮ ಹಾಕಲಾಗಿದೆ. ಹಣ ಕಳೆದುಕೊಂಡ ಷೇರುದಾರರು ಈಗ ಪೊಲೀಸರ ಮೊರೆಹೋಗಿದ್ದಾರೆ. ರಾಮನಗರದ ಐಜೂರಿನಲ್ಲಿರುವ ಪಂಚವಟಿ ಮಲ್ಟಿಸ್ಟೇಟ್‌ ಕ್ರೆಡಿಟ್ ಕೋ-ಆಪರೇಟಿವ್‌ ಬ್ಯಾಂಕ್‍ನಲ್ಲಿ ನೂರಾರು ಜನರು ಕೊಟ್ಯಂತರ ರೂ. ಹಣ ಹೂಡಿಕೆ ಮಾಡಿದ್ರು. ನಿವೃತ್ತ ನೌಕರನ್ನು ಟಾರ್ಗೆಟ್ ಮಾಡಿದ್ದ ಬ್ಯಾಂಕ್‍ನವರು ಡಬಲ್ ಹಣ ನೀಡೋದಾಗಿ ಹಣ ಠೇವಣಿ ಮಾಡಿಸಿಕೊಂಡು ಅವಧಿ ಮುಗಿದ ಬಳಿಕ ಹಣ ನೀಡದೇ ಕಚೇರಿಯನ್ನು ಬಂದ್ ಮಾಡಿ ಎಸ್ಕೇಪ್ ಆಗಿದ್ದಾರೆ. ಹೆಚ್ಚಿನ ಹಣದ ಆಸೆಗೆ ಹೂಡಿಕೆ ಮಾಡಿದ್ದ ಷೇರುದಾರರು ಇದ್ದ ಹಣವನ್ನು ಕಳೆದುಕೊಂಡು ಅತಂತ್ರರಾಗಿದ್ದಾರೆ. ಇದನ್ನೂ ಓದಿ: ಯಡ್ಡಿಯೂರಪ್ಪಗೆ ಕಲ್ಲು ಹೊಡೆದ್ರೆ BJP ಪಕ್ಷಕ್ಕೇ ಪೆಟ್ಟು – ವಿಜಯೇಂದ್ರ ಎಚ್ಚರಿಕೆ

    ಠೇವಣಿ ಹಣ ಹಿಂಪಡೆಯಲು ಹೋದಾಗ ಷೇರುದಾರರನ್ನು ಸತಾಯಿಸಿದ ಬ್ಯಾಂಕ್‍ನ ಆಡಳಿತ ಮಂಡಳಿ ಈಗ ಹಣ ಹಿಂತಿರುಗಿಸದೆ ಎಸ್ಕೇಪ್ ಆಗಿದೆ ಎಂಬ ಆರೋಪವಿದೆ. ಜಿಲ್ಲೆಯಾದ್ಯಂತ ನಮ್ಮ ಬ್ರಾಂಚ್‌ ಇದೆ. ರಾಷ್ಟ್ರೀಕೃತ ಬ್ಯಾಂಕ್‍ಗಿಂತಲೂ ಹೆಚ್ಚಿನ ಬಡ್ಡಿ ನೀಡ್ತೇವೆ ಎಂದು ಬ್ಯಾಂಕ್‍ನವರು ಕೊಟ್ಯಂತರ ರೂ. ಪಡೆದಿದ್ದಾರೆ. ಆದ್ರೆ ಈಗ ಬೆಂಗಳೂರಿನ ಕಚೇರಿಯನ್ನೂ ಸಹ ಬಂದ್ ಮಾಡಿ ಆಡಳಿತ ಮಂಡಳಿಯವರು ಎಸ್ಕೇಪ್ ಆಗಿದ್ದಾರೆ. ಈ ಸಂಬಂಧ ರಾಮನಗರ ಸೈಬರ್ ಕ್ರೈಂ ಬ್ರ್ಯಾಂಚ್‍ನಲ್ಲಿ 11 ಮಂದಿ ಷೇರುದಾರರು ದೂರು ನೀಡಿದ್ದು ಬ್ಯಾಂಕ್‍ನ 8 ಮಂದಿ ವಿರುದ್ಧ ಎಫ್‍ಐಆರ್ (FIR) ದಾಖಲಾಗಿದೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು (Police) ರಾಮನಗರದ ಬ್ರಾಂಚ್‍ನ ಬ್ಯಾಂಕ್ ದಾಖಲೆಗಳನ್ನು ಸೀಜ್ ಮಾಡಿ ತನಿಖೆ ಕೈಗೊಂಡಿದ್ದಾರೆ. ಇದನ್ನೂ ಓದಿ: ಐಸಿಯುನಲ್ಲಿ ಸ್ಯಾಂಟ್ರೋ ರವಿಗೆ ಚಿಕಿತ್ಸೆ- ಸಂಜೆ ಡಿಸ್ಚಾರ್ಜ್?

    Live Tv
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k

  • JEE Mains ಪರೀಕ್ಷೆಯಲ್ಲಿ ಅಕ್ರಮ – ಲ್ಯಾಂಡ್ ಆದ ಕೂಡಲೇ ರಷ್ಯಾ ಪ್ರಜೆ ಅರೆಸ್ಟ್

    ನವದೆಹಲಿ: ಜೆಇಇ ಮೇನ್ಸ್ (JEE Mains) ಪರೀಕ್ಷೆಯ (Exam) ವೆಬ್‌ಸೈಟ್ ಹ್ಯಾಕ್ (Hack) ಮಾಡಿದ್ದ ರಷ್ಯಾ (Russia) ಪ್ರಜೆಯನ್ನು ಸಿಬಿಐ (CBI) ಬಂಧಿಸಿದೆ.

    ಆರೋಪಿ ಮಿಖಾಯಿಲ್ ಶಾರ್ಗಿನ್‌ನನ್ನು ಸಿಬಿಐ ಪೊಲೀಸರು ದೆಹಲಿಯ ಇಂದಿರಾ ಗಾಂಧಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ವಶಕ್ಕೆ ಪಡೆದಿದ್ದಾರೆ. ಈತನ ಕುರಿತು ಸಿಬಿಐ ಲುಕೌಟ್ ನೋಟಿಸ್ ಹೊರಡಿಸಿತ್ತು. ಕಜಕಿಸ್ತಾನದಿಂದ ಆತ ದೆಹಲಿಗೆ ಲ್ಯಾಂಡ್ ಆದ ಕೂಡಲೇ ವಶಕ್ಕೆ ಪಡೆದು ಬಂಧಿಸಲಾಗಿದೆ. ಪರೀಕ್ಷೆ ಅಕ್ರಮ ಪ್ರಕರಣದಲ್ಲಿ ಈತನೇ ಮುಖ್ಯ ಹ್ಯಾಕರ್ ಆಗಿದ್ದ ಎಂದು ಸಿಬಿಐ ಮೂಲಗಳು ತಿಳಿಸಿವೆ.

    EXAM

    ಕಳೆದ ವರ್ಷ ಸಪ್ಟೆಂಬರ್‌ನಲ್ಲಿ ನಡೆದಿದ್ದ ಜೆಇಇ ಮೇನ್ಸ್ ಆನ್‌ಲೈನ್ ಪರೀಕ್ಷೆಯಲ್ಲಿ ಅಕ್ರಮ ನಡೆದಿತ್ತು. ಈ ಪರೀಕ್ಷೆಯಲ್ಲಿ ಸುಮಾರು 10 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದರು. ಟಿಸಿಎಸ್ ಸಾಫ್ಟ್‌ವೇರ್ ಹ್ಯಾಕ್ ಮಾಡಿ ಪ್ರಶ್ನೆಪತ್ರಿಕೆಯನ್ನು ಸೋರಿಕೆ ಮಾಡಿದ್ದ. ಇದನ್ನೂ ಓದಿ: ಬಡತನ, ನಿರುದ್ಯೋಗ, ಸಂಪತ್ತಿನ ಅಸಮಾನತೆ ಅಪಾಯಕಾರಿಯಾಗುತ್ತಿದೆ – RSS ಬೇಸರ

    ಇದಾದ ಬಳಿಕ ಉತ್ತರ ಪ್ರದೇಶದ ನೋಯ್ಡಾದಲ್ಲಿರುವ ಅಫಿನಿಟಿ ಎಜುಕೇಶನ್ ಹೆಸರಿನ ಖಾಸಗಿ ಕೋಚಿಂಗ್ ಸಂಸ್ಥೆಯ ಸಿಬ್ಬಂದಿ ತಲಾ 12-15 ಲಕ್ಷ ರೂ.ವರೆಗೆ ಪ್ರಶ್ನೆ ಪತ್ರಿಕೆಯನ್ನು ಮಾರಾಟ ಮಾಡಿದ್ದ.

    TET EXAM 2

    ಈ ಅಕ್ರಮ ಪ್ರಕರಣದಲ್ಲಿ ಹಲವರು ವಿದೇಶಿ ವ್ಯಕ್ತಿಗಳ ಕೈವಾಡ ಇದ್ದು ತನಿಖೆ ನಡೆಯುತ್ತಿದೆ. ಅಕ್ರಮದಲ್ಲಿ ಭಾಗಿಯಾದ 20 ವಿದ್ಯಾರ್ಥಿಗಳು ಮೂರು ವರ್ಷ ಪರೀಕ್ಷೆ ಬರೆಯದಂತೆ ನಿರ್ಬಂಧ ವಿಧಿಸಲಾಗಿದೆ. ಇದನ್ನೂ ಓದಿ: PFI ಜೊತೆ SDPIಗೆ ಯಾವುದೇ ಸಂಬಂಧವಿಲ್ಲ – ಚುನಾವಣಾ ಆಯೋಗ ಸ್ಪಷ್ಟನೆ

    Live Tv
    [brid partner=56869869 player=32851 video=960834 autoplay=true]

  • ಸವಾಲಿಗೆ ಜವಾಬ್ ವಾರ್‌ – ಡಿಕೆಶಿ ಜೊತೆ ತೊಡೆ ತಟ್ಟಿದವರೆಲ್ಲ ಇಕ್ಕಟ್ಟಿನಲ್ಲಿ ಸಿಲುಕುತ್ತಿದ್ದಾರಾ?

    ಸವಾಲಿಗೆ ಜವಾಬ್ ವಾರ್‌ – ಡಿಕೆಶಿ ಜೊತೆ ತೊಡೆ ತಟ್ಟಿದವರೆಲ್ಲ ಇಕ್ಕಟ್ಟಿನಲ್ಲಿ ಸಿಲುಕುತ್ತಿದ್ದಾರಾ?

    ಬೆಂಗಳೂರು: ಡಿಕೆಶಿ ಜೊತೆ ತೊಡೆ ತಟ್ಟಿದವರೆಲ್ಲ ಈಗ ಇಕ್ಕಟ್ಟಿನಲ್ಲಿ ಸಿಲುಕುತ್ತಿದ್ದು, ತನ್ನ ವಿರುದ್ಧ ತೊಡೆ ತಟ್ಟಿದವರನ್ನು ಎಕ್ಸ್ ಪೋಸ್ ಮಾಡಲು ಡಿಕೆ ಶಿವಕುಮಾರ್‌ ಟಾರ್ಗೆಟ್ ಫಿಕ್ಸ್ ಮಾಡಿಕೊಂಡಿದ್ದಾರಾ ಎಂಬ ಪ್ರಶ್ನೆ ಎದ್ದಿದೆ.

    ಹೌದು. ಈ ಮೊದಲ ರಾಜಕೀಯವಾಗಿ ನಾಯಕರ ಮಧ್ಯೆ ಆರೋಪ, ಪ್ರತ್ಯಾರೋಪ, ವಾಗ್ದಾಳಿ ನಡೆಯುತ್ತಿದ್ದವು. ಆದರೆ ಸಮ್ಮಿಶ್ರ ಸರ್ಕಾರ ಪತನವಾದ ಬಳಿಕ ʼಸವಾಲಿಗೆ ಜವಾಬ್ʼ ಎಂಬ ಪೊಲಿಟಿಕ್ಸ್ ಶುರುವಾಗಿದೆ.

    ʼಸವಾಲಿಗೆ ಜವಾಬ್‌ʼ ಹೋರಾಟದಲ್ಲಿ ಕಾಕತಾಳಿಯವೋ ತಂತ್ರಗಾರಿಕೆಯೋ ಗೊತ್ತಿಲ್ಲ. ಆದರೆ ಡಿಕೆಶಿ ಈ ಹೋರಾಟದಲ್ಲಿ ಜಯವನ್ನು ಸಾಧಿಸುತ್ತಿದ್ದಾರೆ.

    ವಿಧಾನಸಭಾ ಉಪಚುನಾವಣೆಯಲ್ಲಿ ಎಂಟಿಬಿ ನಾಗರಾಜ್ ಅವರನ್ನು ಚುನಾವಣೆ ಅಖಾಡದಲ್ಲಿ ಸೋಲಿಸುವುದಾಗಿ ಡಿಕೆಶಿ ಶಪಥ ಮಾಡಿದ್ದರು. ಉಪಚುನಾವಣೆಯಲ್ಲಿ ಎಂಟಿಬಿ ನಾಗರಾಜ್ ಸೋತರೆ ಪಕ್ಷೇತರವಾಗಿ ಸ್ಪರ್ಧಿಸಿದ್ದ ಶರತ್‌ ಬಚ್ಚೇಗೌಡ ಜಯಗಳಿಸಿದ್ದರು. ಇದನ್ನೂ ಓದಿ: ಡಿಕೆಶಿ ಬಂಡವಾಳ ಬಿಚ್ಚಿಡ್ತೀನಿ, ಕೊಳಕಿನ ಜಾಲ ಬಿಡಿಸ್ತೀನಿ: ಅಶ್ವಥ್ ನಾರಾಯಣ ಕಿಡಿ

    ಬೆಳಗಾವಿಯ ಪಿಎಲ್‌ಡಿ ಬ್ಯಾಂಕ್‌ ಚುನಾವಣೆಯ ಬಳಿಕ ಉಪಚುನಾವಣೆಯ ಸಂದರ್ಭದಲ್ಲಿ ರಮೇಶ್ ಜಾರಕಿಹೊಳಿ ಮತ್ತು ಡಿಕೆ ಶಿವಕುಮಾರ್‌ ಮಧ್ಯೆ ಭಾರೀ ವಾಗ್ದಾಳಿ ನಡೆದಿತ್ತು. ಆದರೆ ಸಿಡಿ ಪ್ರಕರಣದಲ್ಲಿ ರಮೇಶ್ ಜಾರಕಿಹೊಳಿ ಸಚಿವ ಸ್ಥಾನಕ್ಕೆ ರಾಜೀನಾಮೆ ‌ನೀಡಿದ್ದರು.

    ಹಿಜಬ್‌ ಗಲಾಟೆಯ ಸಂದರ್ಭದಲ್ಲಿ ಶಿವಮೊಗ್ಗದ ಕಾಲೇಜಿನಲ್ಲಿ ಹಾರಿಸಲಾದ ಕೇಸರಿ ಧ್ವಜ ಪ್ರಕರಣ ದೇಶದ್ಯಾಂತ ಸುದ್ದಿ ಮಾಡಿತ್ತು. ಈ ವೇಳೆ ಈಶ್ವರಪ್ಪಗೆ ವಿಧಾನಸಭೆಯಲ್ಲಿ ಸವಾಲು ಹಾಕಿ ಎಲ್ಲಿ ಕಳಿಸಬೇಕು‌ ಕಳುಹಿಸ್ತೀವಿ ಎಂದು ಡಿಕೆಶಿ ಗುಡುಗಿದ್ದರು. ಇದಾದ ಕೆಲ ತಿಂಗಳಿನಲ್ಲೇ ಗುತ್ತಿಗೆದಾರ ಸಂತೋಷ್‌ ಪಾಟೀಲ್‌ ಆತ್ಮಹತ್ಯೆ ಪ್ರಕರಣದಲ್ಲಿ ಈಶ್ವರಪ್ಪ ರಾಜೀನಾಮೆ ನೀಡಿದ್ದರು. ಇದನ್ನೂ ಓದಿ: ನಾವು ಗಂಡಸರಲ್ಲ, ಅವರೊಬ್ಬರೇ ಗಂಡಸರು: ಡಿ.ಕೆ.ಶಿವಕುಮಾರ್

    ರಾಮನಗರದ ಕಾರ್ಯಕ್ರಮದಲ್ಲೇ ಅಶ್ವಥ್‌ ನಾರಾಯಣ ಮತ್ತು ಡಿಕೆ ಸುರೇಶ್‌ ಮಧ್ಯೆ ಜಟಾಪಟಿ ನಡೆದಿತ್ತು. ಇದಾದ ಬಳಿಕ ಅಶ್ವಥ್‌ ನಾರಾಯಣ ಗಂಡಸ್ತನದ ಬಗ್ಗೆ ಮಾತನಾಡಿ ಸುದ್ದಿಯಾಗಿದ್ದರು. ಗಂಡಸ್ತನದ ಬಗ್ಗೆ ಮಾತನಾಡಿದ್ದ ಸಚಿವ ಅಶ್ವಥ್‌ ನಾರಾಯಣ್ ವಿರುದ್ಧ ಡಿಕೆಶಿ ಸವಾಲು ಹಾಕಿದ್ದರು. ಈಗ ಪಿಎಸ್‌ಐ ಅಕ್ರಮ ಪ್ರಕರಣದಲ್ಲಿ ಅಶ್ವಥ್‌ ನಾರಾಯಣ್ ಸಂಬಂಧಿಕರ ಮೇಲೆ ಗಂಭೀರ ಆರೋಪ ಬಂದಿದೆ.

  • ಸಹಾಯಕ ಪ್ರಾಧ್ಯಾಪಕರ ನೇಮಕಾತಿ ಪ್ರಶ್ನೆ ಪತ್ರಿಕೆ ಲೀಕ್ – ಸೌಮ್ಯಾಗೆ 13 ದಿನ ಪೊಲೀಸ್ ಕಸ್ಟಡಿ

    ಸಹಾಯಕ ಪ್ರಾಧ್ಯಾಪಕರ ನೇಮಕಾತಿ ಪ್ರಶ್ನೆ ಪತ್ರಿಕೆ ಲೀಕ್ – ಸೌಮ್ಯಾಗೆ 13 ದಿನ ಪೊಲೀಸ್ ಕಸ್ಟಡಿ

    ಬೆಂಗಳೂರು: ಸಹಾಯಕ ಪ್ರಾಧ್ಯಾಪಕರ ನೇಮಕಾತಿ ಪರೀಕ್ಷೆ ಪ್ರಶ್ನೆಪತ್ರಿಕೆ ಲೀಕ್ ಪ್ರಕರಣಕ್ಕೆ ಸಂಬಂಧಿಸಿದ ಆರೋಪಿ ಸೌಮ್ಯಾರನ್ನು 13 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ನೀಡಿ ಕೋರ್ಟ್ ಆದೇಶ ಹೊರಡಿಸಿದೆ.

    ಹೆಚ್ಚಿನ ತನಿಖೆ ನಡೆಸುವ ಅವಶ್ಯಕತೆ ಇದ್ದು, ಸೌಮ್ಯಾರನ್ನು ಕಸ್ಟಡಿಗೆ ನೀಡುವಂತೆ ಪೊಲೀಸರು ಕೇಳಿಕೊಂಡಿದ್ದರು. ಪ್ರಕರಣ ಸಂಬಂಧ ವಿಚಾರಣೆ ನಡೆಸಿದ ಒಂದನೇ ಎಸಿಎಂಎಂ ನ್ಯಾಯಾಧೀಶರಾದ ಮಧು ಅವರು ಈ ಆ ಆದೇಶ ನೀಡಿದ್ದಾರೆ. ಇದನ್ನೂ ಓದಿ: ದಿವ್ಯಾ ಹಾಗರಗಿ ಬಂಧನ ಯಾವಾಗ? – ಪ್ರಭಾವಿಗಳ ಶ್ರೀರಕ್ಷೆಯಲ್ಲಿದ್ದಾರಾ ದಿವ್ಯಾ

    ಪರೀಕ್ಷೆ ದಿನ ಎಲ್ಲರ ಹಾಜರಾತಿಗೂ ಮೊದಲು ಪರೀಕ್ಷಾ ಕೇಂದ್ರ ಉಸ್ತುವಾರಿಗಳು ಹಾಜರಿರುತ್ತಾರೆ. ಅಂದರೆ 40 ನಿಮಿಷ ಮೊದಲು ವಿದ್ಯಾರ್ಥಿಗಳಿಗಿಂತ ಮುಂಚೆ ಪ್ರಶ್ನೆಪತ್ರಿಕೆ ಕೊಠಡಿ ಇನ್ವಿಜಿಲೇಟರ್‌ಗೆ ಸಿಕ್ಕಿರುತ್ತದೆ. ಈ ಅವಧಿಯಲ್ಲಿ ಸೌಮ್ಯಾರಿಗೆ ಪ್ರಶ್ನೆಪತ್ರಿಕೆ ಸಿಕ್ಕಿರಬಹುದು ಎಂದು ಶಂಕೆ ವ್ಯಕ್ತಪಡಿಸಲಾಗಿದೆ.

    ಕೆಲ ಪ್ರಶ್ನೆಗಳನ್ನು ಅಭ್ಯರ್ಥಿಗಳಿಗೆ ಸೌಮ್ಯಾ ಕಳುಹಿಸಿರಬಹುದು. 18 ಪ್ರಶ್ನೆಗಳು ಮೊಬೈಲ್ ಸ್ಕ್ರೀನ್‌ಶಾಟ್‌ನಲ್ಲಿದ್ದು 11 ಪ್ರಶ್ನೆಗಳು ಒಂದೇ ಥರ ಇದ್ದವು. ಸದ್ಯ ಇದೇ ಆಂಗಲ್‌ನಲ್ಲಿ ಮಲ್ಲೇಶ್ವರಂ ಪೊಲೀಸರು ತನಿಖೆ ಮುಂದುವರಿಸಿದ್ದಾರೆ. ಹಗರಣದಲ್ಲಿ ಪ್ರಾಧ್ಯಾಪಕರೊಬ್ಬರ ಪಾತ್ರ ಇದೆ ಎನ್ನಲಾಗುತ್ತಿದ್ದು, ಪ್ರಕರಣವನ್ನು ಮುಚ್ಚಿಡುವ ಯತ್ನ ಕೂಡ ನಡೆಯುತ್ತಿದೆ ಎಂದು ಪೊಲೀಸರು ಶಂಕಿಸಿದ್ದಾರೆ. ಇದನ್ನೂ ಓದಿ: ಸಮನ್ಸ್ ಕಳುಹಿಸಿದರೆ ಅಲ್ಲಿಗೆ ಬಂದು ಉತ್ತರಿಸಬೇಕಿತ್ತು: ಪ್ರಿಯಾಂಕ್ ಖರ್ಗೆ ವಿರುದ್ಧ ಬಿಜೆಪಿ ಕಿಡಿ

  • ಬಿಟ್‍ಕಾಯಿನ್ ಬಗ್ಗೆ ಸುಳ್ಳಿನ ಪ್ರಚಾರ, ಬೇಜವಾಬ್ದಾರಿ ಹೇಳಿಕೆ ನೀಡಿದ್ರೆ ದೂರು: ಟೆಂಗಿನಕಾಯಿ ಮಹೇಶ್

    ಬಿಟ್‍ಕಾಯಿನ್ ಬಗ್ಗೆ ಸುಳ್ಳಿನ ಪ್ರಚಾರ, ಬೇಜವಾಬ್ದಾರಿ ಹೇಳಿಕೆ ನೀಡಿದ್ರೆ ದೂರು: ಟೆಂಗಿನಕಾಯಿ ಮಹೇಶ್

    ಹುಬ್ಬಳ್ಳಿ: ಬಿಟ್‍ಕಾಯಿನ್ ಬಗ್ಗೆ ಕಾಂಗ್ರೆಸ್ ಪಕ್ಷವು ಬಹಳ ದೊಡ್ಡ ಮಟ್ಟದಲ್ಲಿ ಪ್ರಚಾರ ಮಾಡುವ ಮೂಲಕ ಸುಳ್ಳಿನ ಪ್ರಚಾರ ಮಾಡುತ್ತಿದೆ ಎಂದು ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಟೆಂಗಿನಕಾಯಿ ಮಹೇಶ್ ಕಿಡಿಕಾರಿದ್ದಾರೆ.

    ಹುಬ್ಬಳ್ಳಿಯಲ್ಲಿಂದು ಪಕ್ಷದ ಕಚೇರಿಯಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಡಿ.ಕೆ.ಶಿವಕುಮಾರ್ ಹಾಗೂ ಸಿದ್ದರಾಮಯ್ಯ ಆಧಾರ ರಹಿತ ಹೇಳಿಕೆ ನೀಡುತ್ತಿದ್ದಾರೆ. ಹ್ಯಾರಿಸ್ ಪುತ್ರ, ಮಾಜಿ ಶಾಸಕ ರುದ್ರಪ್ಪ ಲಮಾಣಿ ಪುತ್ರನ ಹೆಸರು ಹೇಳಿದ್ದಾರೆ. ಕಾಂಗ್ರೆಸ್‍ನವರು ಕುಂಬಳಕಾಯಿ ಕಳ್ಳ ಅಂದರೆ ಹೆಗಲು ಮುಟ್ಟಿಕೊಳ್ಳುತ್ತಿದ್ದಾರೆ. ಬಿಟ್‍ಕಾಯಿನ್ ದಂಧೆ ಬಗ್ಗೆ ಸರ್ಕಾರ ಸಮಗ್ರ ತನಿಖೆ ನಡೆಸಲಾಗುತ್ತಿದೆ. ಇದೇ ರೀತಿ ಬೇಜವಾಬ್ದಾರಿ ಹೇಳಿಕೆಗಳನ್ನು ಕಾಂಗ್ರೆಸ್‍ನವರು ನೀಡಿದರೆ, ಮುಂದಿನ ದಿನಗಳಲ್ಲಿ ಪೊಲೀಸ್‍ರಲ್ಲಿ ದೂರು ನೀಡಬೇಕಾಗುತ್ತಿದೆ ಎಂದು ಕಾಂಗ್ರೆಸ್ ಪಕ್ಷದ ಕುರಿತಾಗಿ ಕಿಡಿಕಾರಿದ್ದಾರೆ. ಇದನ್ನೂ ಓದಿ:  ಪತ್ನಿಗಾಗಿ ಅಪ್ಪು ಹೇಳುತ್ತಿದ್ದ ಹಾಡು ಯಾವುದು ಗೊತ್ತಾ?

    ಕಾಂಗ್ರೆಸ್ ದಲಿತರನ್ನು ಯಾವ ರೀತಿ ನಡೆಸಿಕೊಂಡಿದೆ ಎನ್ನುವುದು ಗೊತ್ತಿದೆ. ನಿಮ್ಮದೇ ದಲಿತ ಶಾಸಕನ ಮನೆಗೆ ಬೆಂಕಿ ಹಚ್ಚಿದಾಗ ಸಿದ್ದರಾಮಯ್ಯ ಏನ್ ಮಾಡಿದರು? ಅಂಬೇಡ್ಕರ್‍ರನ್ನು ಸೋಲಿಸಿದ್ದು ಇದೇ ಕಾಂಗ್ರೆಸ್ ಹಗರಣಗಳ ಪಕ್ಷವಾಗಿದೆ. ಹಾನಗಲ್ ಉಪಚುನಾವಣೆಯಲ್ಲಿ ಕಂಡ ಸೋಲು ಯಾರೋಬ್ಬರ ಸೋಲು ಅಲ್ಲ. ಸೋಲಿನ ಬಗ್ಗೆ ಅವಲೋಕನ ನಡೆದಿದೆ ಎಂದರು. ಇದನ್ನೂ ಓದಿ: ಡೆಸರ್ಟ್ ಸಫಾರಿ ಬಳಿಕ ಬಿಕಿನಿಯಲ್ಲಿ ಜಾನ್ವಿ, ಖುಷಿ ಕಪೂರ್ ಮೋಜು, ಮಸ್ತಿ

    ಜನ ಸ್ವರಾಜ್ಯ ಯಾತ್ರೆ: ನವೆಂಬರ್ 18 ರಿಂದ 20ರವರೆಗೆ ರಾಜ್ಯದಲ್ಲಿ 4 ತಂಡಗಳಲ್ಲಿ ನಡೆಯುವ ಜನಸ್ವರಾಜ್ಯ ಯಾತ್ರೆಯಲ್ಲಿ ಮಾಜಿ ಮುಖ್ಯಮಂತ್ರಿಗಳು, ಸಚಿವರು, ಶಾಸಕರು, ಸೇರಿದಂತೆ ಪಕ್ಷದ ಮುಖಂಡರು, ಪದಾಧಿಕಾರಿಗಳು ಭಾಗವಹಿಸಲಿದ್ದಾರೆ ಎಂದು ತಿಳಿಸಿದರು. ಪತ್ರಿಕಾಗೋಷ್ಠಿಯಲ್ಲಿ ಲಿಂಗರಾಜ್ ಪಾಟೀಲ್ , ದತ್ತಮೂರ್ತಿ ಕುಲಕರ್ಣಿ. ರವಿ ನಾಯಕ್ ಉಪಸ್ಥಿತರಿದ್ದರು. ಇದನ್ನೂ ಓದಿ:  ಚೀನಾ ಕುರಿತು ಸರ್ಕಾರ ಯಾವುದೇ ಕಾರ್ಯತಂತ್ರ ಹೊಂದಿಲ್ಲ: ರಾಹುಲ್ ಗಾಂಧಿ

  • 1.72 ಕೋಟಿ ರೂ. ಸ್ವೆಟರ್ ಹಗರಣಕ್ಕೆ ಹೊಸ ಟ್ವಿಸ್ಟ್

    1.72 ಕೋಟಿ ರೂ. ಸ್ವೆಟರ್ ಹಗರಣಕ್ಕೆ ಹೊಸ ಟ್ವಿಸ್ಟ್

    ಬೆಂಗಳೂರು: ಸ್ಯಾಂಡಲ್‍ವುಡ್ ನಟ ಕೋಮಲ್ ಹೆಸರು ಕೇಳಿಬರುತ್ತೀರುವ ಸ್ವೆಟರ್ ಹಗರಣಕ್ಕೆ ಹೊಸ ಟ್ವಿಸ್ಟ್ ಸಿಕ್ಕಿದೆ.

    ನಟ ಕೋಮಲ್ ವಿರುದ್ಧ ಕೇಳಿ ಬರುತ್ತಿರುವ ಹಗರಣಕ್ಕೆ ಸಂಬಂಧಿಸಿದ ಸ್ಫೋಟಕ ವೀಡಿಯೋ ಪಬ್ಲಿಕ್ ಟಿವಿಗೆ ಲಭ್ಯವಾಗಿದೆ. 1.72 ಕೋಟಿ ರೂ. ಸ್ವೆಟರ್ ಹಗರಣಕ್ಕೆ ತಿರುವು ಸಿಕ್ಕಿದ್ದು, ಹಂಚಿಕೆ ಹಗರಣ ಕೈ ಬಿಡುವಂತೆ ಒತ್ತಡ ಹೇರಲಾಗಿದೆ. ಆರೋಪ ಕೇಳಿ ಬಂದ ಬಳಿಕ ಸಂಧಾನ ಸಭೆ ನಡೆಸಲಾಗಿದೆ. ಬಿಬಿಎಂಪಿ ಶಿಕ್ಷಣ ಸಹಾಯಕ ಆಯುಕ್ತ ಹನುಮಂತಪ್ಪ ಸಂಧಾನದಲ್ಲಿ ಭಾಗಿಯಾಗಿದ್ದರು. ದಲಿತ ಸಂಘರ್ಷ ಸಮಿತಿ ಅಧ್ಯಕ್ಷ ಡಾ.ಸಿಎಸ್ ರಘು ಜೊತೆ ಬಿಬಿಎಂಪಿ ದಲಿತ ನೌಕರರ ಸಂಘದ ಕಚೇರಿಯಲ್ಲಿ ಸಂಧಾನ ನಡೆಸಲಾಗಿದೆ. ಸಂಧಾನಕ್ಕೆ ಶಿಕ್ಷಣ ಸಹಾಯಕ ಆಯುಕ್ತ ಹನುಮಂತಪ್ಪ ಆಹ್ವಾನಿಸಿದ್ದರು.

    ಸಹೋದರ ಕೋಮಲ್ ಪರ ನಟ ಜಗ್ಗೇಶ್ ಬೆದರಿಕೆಯನ್ನು ಹಾಕಿ ಬಿಬಿಎಂಪಿ ಅಧಿಕಾರಿಗಳ ಮೇಲೆ ಒತ್ತಡ ಹೇರಿ, ಸ್ವೆಟರ್ ಟೆಂಡರ್‍ನಲ್ಲಿ ಹಣ ಬಿಡುಗಡೆ ಮಾಡುವಂತೆ ಒತ್ತಡವನ್ನು ಹೇರಿದ್ದರು. ನಟ ಜಗ್ಗೇಶ್, ನಟ ಕೋಮಲ್‍ರಿಂದ ರಾಜಕೀಯ ಒತ್ತಡ ಮಾಡಲಾಗುತ್ತಿದೆ. ಬಿಬಿಎಂಪಿ ಅಧಿಕಾರಿಗಳ ಮೇಲೆ ಒತ್ತಡ ಹಾಕಿದ್ದ ಆರೋಪ ಕೇಳಿ ಬಂದಿದೆ.

    ಕೋಮಲ್ ಅವರು ಅಧಿಕಾರಿಗಳ ಮೇಲೆ ಒತ್ತಡ ಹಾಕಿದ್ದಾರೆ. ಜಗ್ಗೇಶ್ ಅವರು ಬ್ಲ್ಯಾಕ್ ಮೇಲ್ ಮಾಡಿದ್ದಾರೆ ಇದನ್ನು ನಾವು ಖಂಡಿಸುತ್ತೇವೆ ಎಂದು ಸಂಧಾನ ಸಭೆಯಲ್ಲಿ ನಡೆದಿರುವ ವೀಡಿಯೋದಲ್ಲಿ ಹೇಳಿದ್ದಾರೆ. ಇದನ್ನೂ ಓದಿ:  ನಟ ಕೋಮಲ್ ವಿರುದ್ಧ ಸ್ವೆಟರ್ ಹಗರಣ ಆರೋಪ

    2020-21 ಸಾಲಿನಲ್ಲಿ ಪಾಲಿಕೆ ಶಾಲೆಗಳಿಗೆ ಸ್ವೆಟರ್ ಪೂರೈಕೆ ಮಾಡಲು ನಿರ್ಧಾರ ಮಾಡಲಾಗಿತ್ತು. ತರಾತುರಿಯಲ್ಲಿ ಸ್ವೆಟರ್ ಪೂರೈಕೆ ಮಾಡ್ಬೇಕಾಗಿರೋದ್ರಿಂದ ಟೆಂಡರ್ ಕರೆಯದೇ 4ಜಿ ವಿನಾಯಿತಿ ಪಡೆದು ಕರ್ನಾಟಕ ಕೈಮಗ್ಗ ನಿಗಮಕ್ಕೆ ಸ್ವೆಟರ್‍ಗಳನ್ನು ಸರಬರಾಜು ಮಾಡಲು ಆದೇಶವೂ ಆಗಿತ್ತು. ಆದರೆ ಅದನ್ನು ದುರುಪಯೋಗ ಮಾಡಿಕೊಳ್ಳಲಾಗಿದ್ದು, ಬಿಬಿಎಂಪಿಗೆ ನಟ ಕೋಮಲ್ ಸಹ ಸಾಥ್ ನೀಡಿದ್ದಾರೆ ಎಂದು ದಲಿತ ಸಂಘರ್ಷ ಸಮಿತಿ ಆರೋಪ ಮಾಡಿದೆ.

  • ಬೆಡ್ ಬ್ಲಾಕ್ ದಂಧೆ – ಖಾಸಗಿ ಆಸ್ಪತ್ರೆಗಳ ಪಿಆರ್‍ಓಗಳು, ಸಣ್ಣ ಆಸ್ಪತ್ರೆಗಳ ವೈದ್ಯರು ನೇರ ಭಾಗಿ

    ಬೆಡ್ ಬ್ಲಾಕ್ ದಂಧೆ – ಖಾಸಗಿ ಆಸ್ಪತ್ರೆಗಳ ಪಿಆರ್‍ಓಗಳು, ಸಣ್ಣ ಆಸ್ಪತ್ರೆಗಳ ವೈದ್ಯರು ನೇರ ಭಾಗಿ

    ಬೆಂಗಳೂರು: ಬೆಡ್ ಬ್ಲಾಕಿಂಗ್ ದಂಧೆಗೆ ಸಂಬಂಧಿಸಿದಂತೆ ಸ್ಫೋಟಕ ಮಾಹಿತಿಗಳು ಲಭ್ಯವಾಗುತ್ತಿದೆ. ಬ್ಲಾಕಿಂಗ್ ದಂಧೆಯಲ್ಲಿ ಇಬ್ಬರು ಮಾತ್ರ ಅಲ್ಲ 17 ಜನ ನೇರವಾಗಿ ಬೆಡ್ ಬ್ಲಾಕಿಂಗ್ ದಂಧೆಯಲ್ಲಿ ಭಾಗಿಯಾಗಿರುವ ವಿಚಾರ ಸಿಸಿಬಿ ತನಿಖೆಯ ವೇಳೆ ಬೆಳಕಿಗೆ ಬಂದಿದೆ.

    ಬಂಧಿತ ಆರೋಪಿಗಳಾದ ನೇತ್ರಾವತಿ ಮತ್ತು ರೋಹಿತ್ ಅವರ ಕರೆ ಡಿಟೇಲ್ ಪರಿಶೀಲಿಸಿದಾಗ ಸ್ಫೋಟಕ ವಿಚಾರಗಳು ಸಿಸಿಬಿ ಮೂಲಗಳಿಂದ ಲಭ್ಯವಾಗಿದೆ.

    ಕೆಲವು ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಯ ಪಿಆರ್‍ಒಗಳು, ಸಣ್ಣ ಸಣ್ಣ ಖಾಸಗಿ ಆಸ್ಪತ್ರೆಗಳಲ್ಲಿ ವೈದ್ಯರು ಈ ದಂಧೆಯಲ್ಲಿ ಭಾಗಿಯಾಗಿದ್ದರು. ವಾರ್ ರೂಂನ ಜೊತೆಯಲ್ಲಿ ನೇರವಾಗಿ ಸಂಪರ್ಕ ಹೊಂದಿದ್ದ ಇವರು ಆರೋಪಿಗಳಿಗೆ ನೇರವಾಗಿ ಕರೆ ಮಾಡಿದರ ಬಗ್ಗೆಯೂ ಮಾಹಿತಿಗಳು ಲಭ್ಯವಾಗಿದೆ.

    ಕಳೆದ ರಾತ್ರಿ ಜಯನಗರ ಪೊಲೀಸ್ ಠಾಣೆಗೆ ಜಂಟಿ ಪೊಲೀಸ್ ಆಯುಕ್ತ ಸಂದೀಪ್ ಪಾಟೀಲ್ ಭೇಟಿ ನೀಡಿ ಬೆಡ್ ಬ್ಲಾಕಿಂಗ್ ಪ್ರಕರಣದ ಬಗ್ಗೆ ಮಾಹಿತಿ ಪಡೆದಿದ್ದಾರೆ. ಸಂಜೆಯ ವೇಳೆಗೆ ಮತ್ತಷ್ಟು ಆರೋಪಿಗಳು ಬಂಧನವಾಗುವ ಸಾಧ್ಯತೆಯಿದೆ.

  • ‘ಇದು ಅತಿ ದೊಡ್ಡ ಹಗರಣ, ದೇಶವನ್ನು ಕೊಳ್ಳೆ ಹೊಡೆಯಲಾಗುತ್ತಿದೆ’ – ಸದನದಲ್ಲಿ ಕಾಂಗ್ರೆಸ್ ಕೋಲಾಹಲ

    ‘ಇದು ಅತಿ ದೊಡ್ಡ ಹಗರಣ, ದೇಶವನ್ನು ಕೊಳ್ಳೆ ಹೊಡೆಯಲಾಗುತ್ತಿದೆ’ – ಸದನದಲ್ಲಿ ಕಾಂಗ್ರೆಸ್ ಕೋಲಾಹಲ

    ನವದೆಹಲಿ: “ಇದು ಕೇಂದ್ರ ಸರ್ಕಾರದ ಅತಿ ದೊಡ್ಡ ಭ್ರಷ್ಟಾಚಾರ. ಈ ವಿಚಾರದ ಬಗ್ಗೆ ಮಾತನಾಡಲು ನಮಗೆ ಅವಕಾಶ ನೀಡಬೇಕೆಂದು” ಆಗ್ರಹಿಸಿ ಲೋಕಸಭೆಯಲ್ಲಿ ಪ್ರತಿಪಕ್ಷ ಕಾಂಗ್ರೆಸ್ ಸದಸ್ಯರು ಪ್ರತಿಭಟನೆ ನಡೆಸಿದ್ದಾರೆ.

    ಭಾರತ್ ಪೆಟ್ರೋಲಿಯಂ ಕಾರ್ಪೋರೆಷನ್ ಲಿಮಿಟೆಡ್(ಬಿಪಿಸಿಎಲ್) ಸೇರಿದಂತೆ ಕೆಲವು ಸಾರ್ವಜನಿಕ ವಲಯ ಸಂಸ್ಥೆಗಳ ಖಾಸಗೀಕರಣ ಮತ್ತು ಚುನಾವಣಾ ಬಾಂಡ್‍ಗಳನ್ನು ಬಿಡುಗಡೆ ಮಾಡಿದ್ದನ್ನು ವಿರೋಧಿಸಿ ಕಾಂಗ್ರೆಸ್ ಸದಸ್ಯರು ಇಂದು ಕೋಲಾಹಲ ಎಬ್ಬಿಸಿದರು.

    ಸುಮಾರು 15 ನಿಮಿಷಗಳ ಕಾಲ ಕಾಂಗ್ರೆಸ್ ಸದಸ್ಯರು ಸದನದ ಬಾವಿಗಿಳಿದು ಪ್ರತಿಭಟನೆ ನಡೆಸಿ, ಇದು ಕೇಂದ್ರ ಸರ್ಕಾರದ ಅತಿ ದೊಡ್ಡ ಹಗರಣ, ಖಾಸಗೀಕರಣಗೊಳಿಸಿ ದೇಶವನ್ನು ಲೂಟಿ ಮಾಡಲಾಗುತ್ತಿದೆ. ನಮಗೆ ಸದನದಲ್ಲಿ ಮಾತನಾಡಲು ಅವಕಾಶ ನೀಡಬೇಕೆಂದು ಹೇಳಿ ಸರ್ಕಾರದ ವಿರುದ್ಧ ಘೋಷಣೆ ಕೂಗಿದರು.

    ಈ ಸಂದರ್ಭದಲ್ಲಿ ಸ್ಪೀಕರ್ ಓ ಬಿರ್ಲಾ ಅವರು, ಶೂನ್ಯ ವೇಳೆಯಲ್ಲಿ ಮಾತನಾಡಲು ಅವಕಾಶ ನೀಡುತ್ತೇನೆ ಎಂದು ಭರವಸೆ ನೀಡಿದ ನಂತರ ಕೈ ಸದಸ್ಯರು ತಮ್ಮ ಸ್ಥಾನಕ್ಕೆ ಹೋಗಿ ಕುಳಿತುಕೊಂಡರು.

    ಸದನದ ಘನತೆಯನ್ನು ಯಾರೂ ಹಾಳು ಮಾಡಬಾರದು. ಈ ರೀತಿ ಮಾಡುವುದು ತಪ್ಪು. ಕಲಾಪದಲ್ಲಿ ಕ್ರೀಡಾಪಟುಗಳ ಬಗ್ಗೆ ಗಂಭೀರ ಚರ್ಚೆ ನಡೆಯತ್ತಿರುವಾಗ ಬಾವಿಗಿಳಿದು ಪ್ರತಿಭಟಿಸಬಾರದು. ಸದನದ ಘನತೆಯನ್ನು ಕಾಪಾಡುವುದು ನಮ್ಮೆಲ್ಲರ ಜವಾಬ್ದಾರಿಯಾಗಿದೆ ಎಂದು ಮನವಿ ಮಾಡಿಕೊಂಡ ಸ್ಪೀಕರ್, ನಾನು ಹೊಸಬನಾಗಿದ್ದು ನೀವು ಹಿರಿಯರಿದ್ದೀರಿ. ನಿಮ್ಮ ನಿಲುವಳಿ ಸೂಚನೆಯನ್ನು ನಾವು ಒಪ್ಪುವುದಿಲ್ಲ. ಶೂನ್ಯ ವೇಳೆ ಚರ್ಚಿಸಲು ಅನುಮತಿ ನೀಡುತ್ತೇನೆ ಎಂದು ತಿಳಿಸಿದರು.

    ಈ ವೇಳೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌದರಿ, ಇದು ದೇಶದ ಅತಿ ದೊಡ್ಡ ಹಗರಣ. ದೇಶವನ್ನು ಲೂಟಿ ಮಾಡಲಾಗುತ್ತದೆ. ನಾವು ಸದನದ ಕಲಾಪ ಸುಗಮವಾಗಿ ನಡೆಯಲು ಸಹಕಾರ ನೀಡುತ್ತೇವೆ. ನೀವು ಸದನಕ್ಕೆ ಹೊಸಬರಲ್ಲ. ಕಲಾಪದಲ್ಲಿ ಪ್ರಮುಖ ವಿಷಯಗಳು ಚರ್ಚೆಯಾಗಬೇಕು. ಇದೊಂದು ದೊಡ್ಡ ಹಗರಣವಾಗಿದ್ದು, ದೇಶವನ್ನು ಕೊಳ್ಳೆ ಹೊಡೆಯಲಾಗುತ್ತಿದೆ. ಈ ಕಾರಣಕ್ಕೆ ನಾವು ನಿಲುವಳಿ ಸೂಚನೆಗೆ ಆಗ್ರಹಿಸುತ್ತಿದ್ದೇವೆಯೇ ಹೊರತು ಸಭಾಧ್ಯಕ್ಷರಿಗೆ ಅಗೌರವ ನೀಡುತ್ತಿಲ್ಲ. ನಮ್ಮ ಮನವಿಗೆ ಸಹಕಾರ ನೀಡಬೇಕೆಂದು ಸ್ಪೀಕರ್ ಬಳಿ ಕೇಳಿಕೊಂಡರು.

    ಕೈ ನಾಯಕರ ಆರೋಪಗಳಿಗೆ ಉತ್ತರಿಸಿದ ಉತ್ತರಿಸಿದ ಸಂಸದೀಯ ವ್ಯವಹಾರಗಳ ಸಚಿವ ಪ್ರಹ್ಲಾದ್ ಜೋಷಿ, ಪ್ರಧಾನಿ ಮೋದಿಯವರು ಸ್ವಚ್ಛ ಸರ್ಕಾರ ನಡೆಸುತ್ತಿದ್ದಾರೆ. ನಮ್ಮ ಸರ್ಕಾರದಲ್ಲಿ ಭ್ರಷ್ಟಾಚಾರ ನಡೆಯುವುದಿಲ್ಲ. ನೀವು ಪ್ರತಿದಿನ ಒಂದೊಂದು ವಿಷಯಕ್ಕೆ ನಿಲುವಳಿ ಸೂಚನೆ ಹಿಡಿದುಕೊಂಡು ಬರುತ್ತೀರಿ. ಈ ರೀತಿ ನೀವು ಮಾಡಬಾರದು ಎಂದು ಹೇಳಿ ತಿರುಗೇಟು ನೀಡಿದರು.

    https://www.youtube.com/watch?v=S6bowQfTxzc

  • ತನ್ನ ತಾಯಿಯೂ ವಿಧವೆ ಅನ್ನೋದನ್ನ ಪ್ರಧಾನಿ ಮೋದಿ ಮರೆಯಬಾರದು- ಸಿದ್ದರಾಮಯ್ಯ ಟಾಂಗ್

    ತನ್ನ ತಾಯಿಯೂ ವಿಧವೆ ಅನ್ನೋದನ್ನ ಪ್ರಧಾನಿ ಮೋದಿ ಮರೆಯಬಾರದು- ಸಿದ್ದರಾಮಯ್ಯ ಟಾಂಗ್

    ಬೆಂಗಳೂರು: ತಮ್ಮ ತಾಯಿಯೂ ವಿಧವೆ ಎನ್ನವುದನ್ನು ಪ್ರಧಾನಿ ನರೇಂದ್ರ ಮೋದಿ ಮರೆಯಬಾರದು ಎಂದು ಸಿದ್ದರಾಮಯ್ಯ ಟಾಂಗ್ ಕೊಟ್ಟಿದ್ದಾರೆ.

    ರಾಜಸ್ಥಾನ ಚುನಾವಣಾ ಪ್ರಚಾರದ ವೇಳೆ ಮಾತನಾಡಿದ್ದ ಪ್ರಧಾನಿ ಮೋದಿ ಅವರು, ದೇಶದ ವಿಧವೆಯರ ವೇತನದ ಹಣವನ್ನು ಕಾಂಗ್ರೆಸ್‍ನ ವಿಧವಾ ಮಹಿಳೆ ಲೂಟಿ ಮಾಡಿದ್ದಾಳೆ ಎಂದು ಟೀಕೆ ಮಾಡಿದ್ದರು. ಇದನ್ನು ಖಂಡಿಸಿ ಸಿದ್ದರಾಮಯ್ಯ ಅವರು ಇಂದು ಟ್ವೀಟ್ ಮೂಲಕ ಕಿಡಿಕಾರಿದ್ದಾರೆ.

    ಟ್ವೀಟ್‍ನಲ್ಲಿ ಏನಿದೆ?:
    ಸನ್ಮಾನ್ಯ ಪ್ರಧಾನಿ ನರೇಂದ್ರ ಮೋದಿ ಅವರು ವಿಧವೆಯರನ್ನು ಹೀಯಾಳಿಸುವ ಮೂಲಕ ಸಮಸ್ತ ಸ್ತ್ರೀ ಕುಲವನ್ನು ಅವಮಾನಿಸಿದ್ದಾರೆ. ತಮ್ಮ ತಾಯಿ ಕೂಡ ವಿಧವೆ ಎನ್ನುವುದನ್ನು ಮರೆತಿರುವ ಮೋದಿ ಅವರು ದ್ವೇಷಾಸೂಯೆಯ ರಸಾತಲ ತಲುಪಿದ್ದಾರೆ. ಅವರು ಇಂತಹ ಮಾನಸಿಕ ಅಸ್ವಸ್ಥತೆಯಿಂದ ಹೊರಬರಲಿ ಎಂದು ಪ್ರಾರ್ಥಿಸುತ್ತೇನೆ ಎಂದು ಕಿಡಿಕಾರಿದ್ದಾರೆ.

    ಪ್ರಧಾನಿ ಮೋದಿ ಹೇಳಿದ್ದೇನು?:
    ಕಾಂಗ್ರೆಸ್ ಅನೇಕ ಹಗರಣಗಳನ್ನು ಮಾಡಿದೆ. ಅವುಗಳನ್ನು ನಾನು ಒಂದೊಂದಾಗಿ ಹೊರಗೆ ತೆಗೆಯುತ್ತಿರುವೆ. ಈ ಮೂಲಕ ಕಾಂಗ್ರೆಸ್‍ನವರ ಒಂದೊಂದೇ ಅಂಗಡಿ ಮುಚ್ಚುತ್ತಿರುವೆ. ಯುಪಿಎ ಸರ್ಕಾರದ ಅವಧಿಯಲ್ಲಿ ಹೆಣ್ಣು ಹುಟ್ಟುವ ಮೊದಲೇ ಹೆಸರಿಟ್ಟು, ಅವರನ್ನು ವಿಧವೆಯರ ಪಟ್ಟಿಗೆ ಸೇರಿಸುತ್ತಿದ್ದರು. ಬಳಿಕ ಸಿಕ್ಕ ಹಣವನ್ನು ಲೂಟಿ ಮಾಡುತ್ತಿದ್ದ ಎಂದು ಮೋದಿ ಆರೋಪಿಸಿದ್ದರು.

    ವಿಧವಾ ವೇತನದ ಹಣ ಕಾಂಗ್ರೆಸ್‍ನ ಯಾವ ವಿಧವಾ ಮಹಿಳೆಗೆ ಹೋಗುತ್ತಿತ್ತು. ಇದರಂತೆ ವೃದ್ಧಾಪ್ಯ, ದಿವ್ಯಾಂಗ, ವಿದ್ಯಾರ್ಥಿ ವೇತನ, ಮಧ್ಯಾಹ್ನ ಬಿಸಿಯೂಟ ಯೋಜನೆ ಸೇರಿದಂತೆ ಅನೇಕ ಕಡೆಗಳಲ್ಲಿ ಹಣವನ್ನು ಕಾಂಗ್ರೆಸ್ ಅವರು ಲೂಟಿ ಮಾಡಿದ್ದಾರೆ ಎಂದು ಕಿಡಿಕಾರಿದ್ದರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv