Tag: scandal

  • Scam 2003- ವೆಬ್ ಸರಣಿ ರೂಪದಲ್ಲಿ ತೆಲಗಿ ಛಾಪಾ ಕಾಗದ ಹಗರಣ: ಟ್ರೈಲರ್ ರಿಲೀಸ್

    Scam 2003- ವೆಬ್ ಸರಣಿ ರೂಪದಲ್ಲಿ ತೆಲಗಿ ಛಾಪಾ ಕಾಗದ ಹಗರಣ: ಟ್ರೈಲರ್ ರಿಲೀಸ್

    ಭಾರತದ ಆರ್ಥಿಕ ವ್ಯವಸ್ಥೆಯನ್ನೇ ಬುಡಮೇಲು ಮಾಡಿದ್ದ ನಕಲಿ ಛಾಪಾ ಕಾಗದ ಹರಣವನ್ನು (Stamp Paper Scam) ವೆಬ್ ಸರಣಿಗೆ ಅಳವಡಿಸಿದ್ದಾರೆ ನಿರ್ದೇಶಕ ಹನ್ಸಲ್ ಮೆಹ್ತಾ. ಇದೀಗ ಸರಣಿಯ ಟ್ರೈಲರ್ ಕೂಡ ಬಿಡುಗಡೆಯಾಗಿದ್ದು, ಈ ಹಗರಣದ (Scandal) ರೂವಾರಿ ಕರೀಂ ಲಾಲ್ ತೆಲಗಿಯ (Karimlal Telgi) ಹಲವು ರೂಪಗಳನ್ನು ಈ ಸರಣಿಯಲ್ಲಿ ತೋರಿಸಲಾಗುತ್ತಿದೆ.

    ಭಾರತೀಯ ಅತೀ ದೊಡ್ಡ ಹರಗಣದಲ್ಲಿ ಛಾಪಾ ಕಾಗದ ಹರಣವೂ ಒಂದು. ಸರಿಸುಮಾರು 32 ಸಾವಿರ ಕೋಟಿ ಮೊತ್ತದ ಹಗರಣ ಇದಾಗಿದ್ದು, ಈ ಹರಣದಲ್ಲಿ ರಾಜಕಾರಣಿಗಳು, ಐಎಎಸ್ ಅಧಿಕಾರಿಗಳು, ಐಪಿಎಸ್ ಅಧಿಕಾರಿಗಳು ಸೇರಿದಂತೆ ಹಲವರು ಭಾಗಿಯಾಗಿದ್ದರು ಎಂದು ಹೇಳಲಾಗಿತ್ತು. ಈ ಹಗರಣವನ್ನೇ ವೆಬ್ ಸರಣಿ ರೂಪದಲ್ಲಿ ತರಲಾಗುತ್ತಿದೆ. ಈ ಸರಣಿಗೆ ‘ಸ್ಕ್ಯಾಮ್ 2003’ (Scam 2003)ಎಂದು ಹೆಸರಿಡಲಾಗಿದೆ. ಇದನ್ನೂ ಓದಿ:2ನೇ ಮಗುವಿನ ಹೆಸರನ್ನ ರಿವೀಲ್‌ ಮಾಡಿದ ‘ಯೇ ಜವಾನಿ ಹೇ ದಿವಾನಿ’ ನಟಿ

    ಈ ತೆಲಗಿ ಕರ್ನಾಟಕದವನು ಆಗಿದ್ದರಿಂದ ಮತ್ತು ಆತನನ್ನು ಬಂಧಿಸಿದ್ದು, ವಿಚಾರಣೆ ಮಾಡಿದ್ದು, ಜೈಲಿನಲ್ಲಿ ಇರಿಸಿದ್ದು ಕರ್ನಾಟಕದಲ್ಲೇ ಆಗಿರುವುದರಿಂದ ಕನ್ನಡಿಗರಿಗೆ ಈ ಸರಣಿ (Web Series) ತುಂಬಾ ಕುತೂಹಲ ಮೂಡಿಸಿದೆ. ಈ ಹಗರಣದೊಂದಿಗೆ ಬೆಸೆದುಕೊಂಡಿದ್ದ ಅಧಿಕಾರಿಗಳು, ಪತ್ರಕರ್ತರು, ರಾಜಕಾರಣಿಗಳ ಕಥೆಯೂ ಇರಲಿದೆಯಾ ಎನ್ನುವುದು ಸದ್ಯಕ್ಕೆ ಸಸ್ಪೆನ್ಸ್.

    ಈ ಸರಣಿಯು ಸೆಪ್ಟೆಂಬರ್ 2 ರಿಂದ ಸ್ಟ್ರೀಮಿಂಗ್ ಆಗಲಿದ್ದು, ತೆಲಗಿ ಪಾತ್ರದಲ್ಲಿ ಮುಖೇಶ್ ತಿವಾರಿ (Mukesh Tiwari) ನಟಿಸಿದ್ದಾರೆ. ಉಳಿದ ಪಾತ್ರಗಳ ಬಗ್ಗೆ ಇನ್ನೂ ಹೆಚ್ಚಿನ ಮಾಹಿತಿ ಸಿಕ್ಕಿಲ್ಲ. ಆದರೆ, ಹಿನ್ನೆಲೆಯಲ್ಲಿ ಸಂಭಾಷಣೆ ಬಳಸಿಕೊಂಡು, ಟ್ರೈಲರ್ ಕುತೂಹಲ ಮೂಡಿಸುತ್ತಿದೆ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ನಟಿ ಅರ್ಪಿತಾ ಮುಖರ್ಜಿ ಮನೆ ಮೇಲೆ ಇಡಿ ದಾಳಿ: ‘ಸೆಕ್ಸ್ ಆಟಿಕೆ’ ಕಂಡು ಅಧಿಕಾರಿಗಳು ಗಾಬರಿ

    ನಟಿ ಅರ್ಪಿತಾ ಮುಖರ್ಜಿ ಮನೆ ಮೇಲೆ ಇಡಿ ದಾಳಿ: ‘ಸೆಕ್ಸ್ ಆಟಿಕೆ’ ಕಂಡು ಅಧಿಕಾರಿಗಳು ಗಾಬರಿ

    ಶ್ಚಿಮ ಬಂಗಾಳದ ಶಿಕ್ಷಕರ ನೇಮಕಾತಿ ಹಗರಣ ದಿನಕ್ಕೊಂದು ತಿರುವು ಪಡೆದುಕೊಳ್ಳುತ್ತಿದೆ. ಈಗಾಗಲೇ ಹಗರಣದ ರೂವಾರಿ, ಪಶ್ಚಿಮ ಬಂಗಾಳದ ಸಚಿವರಾಗಿದ್ದ ಪಾರ್ಥ ಚಟರ್ಜಿಯನ್ನು ಬಂಧಿಸಲಾಗಿದೆ. ಸಚಿವ ಸ್ಥಾನದಿಂದಲೂ ವಜಾ ಮಾಡಲಾಗಿದೆ. ಅಲ್ಲದೇ, ಸಚಿವರಿಗೆ ಆಪ್ತೆಯಾಗಿದ್ದ, ನಟಿ ಅರ್ಪಿತಾ ಮುಖರ್ಜಿ ಮನೆಯ ಮೇಲೆ ದಾಳಿ ಮಾಡಿ ಅಪಾರ ಚಿನ್ನಾಭರಣ ಮತ್ತು 21 ಕೋಟಿ ರೂಪಾಯಿ ನಗದನ್ನು ವಶಪಡಿಸಿಕೊಳ್ಳಲಾಗಿದೆ. ಆ ಸಮಯದಲ್ಲಿ ನಟಿಯ ಮನೆಯಲ್ಲಿ ಅಪಾರ ಪ್ರಮಾಣದಲ್ಲಿ ಸೆಕ್ಸ್ ಟಾಯ್ಸ್ ಪತ್ತೆಯಾಗಿವೆಯಂತೆ.

    ಅರ್ಪಿತಾ ಅವರ ಮನೆಯ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ ಮಾಡಿದಾಗ ಬರೋಬ್ಬರಿ 21 ಕೋಟಿ ರೂಪಾಯಿ ನಗದು ಸಿಕ್ಕಿದೆ. ಜೊತೆಗೆ ಲೈಂಗಿಕ ಕ್ರಿಯೆಗೆ ಬಳಸುವಂತಹ ಆಟಿಕೆಗಳು ಕೂಡ ಪತ್ತೆಯಾಗಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಆಟಿಕೆಗಳು ಮಾತ್ರವಲ್ಲ, ಸಾಕಷ್ಟು ಪ್ರಮಾಣದಲ್ಲಿ ಬೆಳ್ಳಿ ಬಟ್ಟಲುಗಳನ್ನು ಕೂಡ ಅಧಿಕಾರಿಗಳು ವಶಪಡಿಸಿಕೊಂಡಿದ್ದಾರಂತೆ. ಸಾಮಾನ್ಯವಾಗಿ ಪಶ್ಚಿಮ ಬಂಗಾಳದಲ್ಲಿ ಮದುವೆಯ ಸಂದರ್ಭದಲ್ಲಿ ಬೆಳ್ಳಿ ಬಟ್ಟಲು ಕೊಡುವುದು ವಾಡಿಕೆ. ಹಾಗಾಗಿ ಈ ಬಟ್ಟಲು ಅಲ್ಲಿಗೆ ಬಂದಿದ್ದು ಯಾಕೆ ಎನ್ನುವ ಕುರಿತು ತನಿಖೆ ನಡೆಸಲಾಗುತ್ತಿದೆಯಂತೆ. ಇದನ್ನೂ ಓದಿ:ವಿಕ್ರಾಂತ್ ರೋಣ ಸಿನಿಮಾ ಬಗ್ಗೆ ಅಪಪ್ರಚಾರ: ಗರಂ ಆದ ಸುದೀಪ್ ಅಭಿಮಾನಿಗಳು

     

    ಅರ್ಪಿತಾ ಅವರನ್ನು ಕೂಡ ಬಂಧನ ಮಾಡಲಾಗಿದ್ದು, ಸೆಕ್ಸ್ ಟಾಯ್ಸ್ ಕುರಿತಾಗಿಯೂ ತನಿಖೆ ನಡೆಸಲಾಗುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಭಾರತದಲ್ಲಿ ಸೆಕ್ಸ್ ಟಾಯ್ಸ್ ನಿಷೇಧ. ಹಾಗಾಗಿ ಅವುಗಳನ್ನು ಎಲ್ಲಿಂದ ತರಿಸಲಾಗಿತ್ತು ಮತ್ತು ಯಾಕೆ ಅಷ್ಟೊಂದು ಆಟಿಕೆಗಳನ್ನು ಈ ಮನೆಯಲ್ಲಿ ಇಡಲಾಗಿತ್ತು ಎನ್ನುವ ಕುರಿತಾಗಿಯೂ ತನಿಖೆ ನಡೆಸಲಾಗುತ್ತಿದೆಯಂತೆ.

    Live Tv
    [brid partner=56869869 player=32851 video=960834 autoplay=true]

  • ಪೆಗಾಸಸ್ ಮೂಲಕ ಗೂಢಚರ್ಯೆ – ಅಂತಿಮ ವರದಿ ಸಲ್ಲಿಕೆಗೆ ಕಾಲಾವಕಾಶ ವಿಸ್ತರಣೆ

    ಪೆಗಾಸಸ್ ಮೂಲಕ ಗೂಢಚರ್ಯೆ – ಅಂತಿಮ ವರದಿ ಸಲ್ಲಿಕೆಗೆ ಕಾಲಾವಕಾಶ ವಿಸ್ತರಣೆ

    ನವದೆಹಲಿ: ಪೆಗಾಸಸ್ ಮೂಲಕ ಕೇಂದ್ರ ಸರ್ಕಾರ ಗೂಢಚರ್ಯೆ ನಡೆಸಿರುವ ಆರೋಪಕ್ಕೆ ಸಂಬಂಧಿಸಿದಂತೆ ತನಿಖೆ ನಡೆಯುತ್ತಿದೆ. ನ್ಯಾ.ರವೀಂದ್ರನ್ ನೇತೃತ್ವದ ಸಮಿತಿಗೆ ವರದಿ ಸಲ್ಲಿಸಲು ಸುಪ್ರೀಂಕೋರ್ಟ್ ಹೆಚ್ಚುವರಿ ಕಾಲಾವಕಾಶ ನೀಡಿದೆ. ಇಂದು ಪ್ರಕರಣ ವಿಚಾರಣೆ ನಡೆಸಿದ ಮುಖ್ಯ ನ್ಯಾ.ಎನ್.ವಿ.ರಮಣ ನೇತೃತ್ವದ ತ್ರಿ ಸದಸ್ಯ ಪೀಠ ಜೂನ್ 28 ವರೆಗೂ ಸಮಯ ವಿಸ್ತರಿಸಿದೆ.

    ಪ್ರಕರಣದ ತನಿಖೆಗೆ ಸಂಬಂಧಿಸಿದಂತೆ ಇಂದು ಸಮಿತಿ ತನ್ನ ಮಧ್ಯಂತರ ವರದಿಯನ್ನು ಸುಪ್ರೀಂಕೋರ್ಟ್‍ಗೆ ಸಲ್ಲಿಕೆ ಮಾಡಿತು. ಸಮಿತಿಯು 29 ಮೂಬೈಲ್ ಸಾಧನಗಳನ್ನು ತನಿಖೆಗೆ ಒಳಪಡಿಸಿದೆ. ಈ ಪ್ರಕ್ರಿಯೆ ಮುಗಿಸಲು ಹೆಚ್ಚುವರಿ ಸಮಯದ ಅವಶ್ಯಕತೆ ಇದೆ. ಹೀಗಾಗಿ ಸಮಯ ವಿಸ್ತರಿಸಬೇಕು ಎಂದು ಸಮಿತಿ ಪರ ವಕೀಲರು ಮನವಿ ಮಾಡಿದರು. ಇದನ್ನೂ ಓದಿ: ಕೆನಡಾ ಸಂಸತ್ತಿನಲ್ಲಿ ಕನ್ನಡದ ಕಂಪು ಬೀರಿದ ಚಂದ್ರ ಆರ್ಯ ಮನೆಯಲ್ಲಿ ಸಂತಸ

    ಇದಕ್ಕೆ ಪ್ರತಿಕ್ರಿಯಿಸಿದ ಕೋರ್ಟ್, ತಾಂತ್ರಿಕ ವರದಿ ಪಡೆದ ಬಳಿಕ ನ್ಯಾಯಾಧೀಶರು ತಮ್ಮ ಅಭಿಪ್ರಾಯವನ್ನು ಕೂಡಾ ತಿಳಿಸಬೇಕು, ಅದಕ್ಕೆ ಸಮಯ ಬೇಕಾಗಬಹುದು. ಹೀಗಾಗಿ ಸಮಯ ವಿಸ್ತರಿಸಲಾಗುತ್ತಿದೆ ಎಂದು ತನ್ನ ಆದೇಶದಲ್ಲಿ ತಿಳಿಸಿದೆ. ಆದರೆ ನಾಲ್ಕು ವಾರಗಳಲ್ಲಿ ಎಲ್ಲ ಪ್ರಕ್ರಿಯೆಗಳು ಅಂತ್ಯವಾಗಬೇಕು. ಅಂತಿಮ ವರದಿಯನ್ನು ಸಲ್ಲಿಸಬೇಕು ಎಂದು ಸೂಚಿಸಿದ ಕೋರ್ಟ್ ವಿಚಾರಣೆ ಮುಂದೂಡಿತು.

    ಹಗರಣದ ತನಿಖೆಗಾಗಿ ಕಳೆದ ವರ್ಷ ಅಕ್ಟೋಬರ್‌ನಲ್ಲಿ ಸುಪ್ರೀಂ ಕೋರ್ಟ್ ಮೂವರು ಸದಸ್ಯರ ತಜ್ಞರ ಸಮಿತಿಯನ್ನು ನೇಮಿಸಿತ್ತು. ಸುಪ್ರೀಂಕೋರ್ಟ್‍ನ ಮಾಜಿ ನ್ಯಾಯಮೂರ್ತಿ ಆರ್.ವಿ.ರವೀಂದ್ರನ್ ಅವರ ನೇತೃತ್ವದಲ್ಲಿ ಮತ್ತು ಅಲೋಕ್ ಜೋಶಿ(ಮಾಜಿ IPS ಅಧಿಕಾರಿ) ಮತ್ತು ಡಾ.ಸಂದೀಪ್ ಒಬೆರಾಯ್, ಉಪ ಸಮಿತಿಯ ಅಧ್ಯಕ್ಷರು (ಇಂಟರ್ನ್ಯಾಷನಲ್ ಆರ್ಗನೈಸೇಶನ್ ಆಫ್ ಸ್ಟ್ಯಾಂಡರ್ಡೈಸೇಶನ್/ಇಂಟರ್ನ್ಯಾಷನಲ್ ಎಲೆಕ್ಟ್ರೋ-ಟೆಕ್ನಿಕಲ್ ಕಮಿಷನ್/ಜಾಯಿಂಟ್ ಟೆಕ್ನಿಕಲ್ ಕಮಿಟಿ) ರನ್ನು ಸಮಿತಿ ಒಳಗೊಂಡಿದೆ. ಇದನ್ನೂ ಓದಿ: ಪೊಲೀಸರ ಮುಂದೆ ಶರಣಾಗಲು ಹೆಚ್ಚಿನ ಸಮಯ ಕೇಳಿದ ಸಿಧು 

    ಏನಿದು ಪ್ರಕರಣ?
    2017ರಲ್ಲಿ 2 ಶತಕೋಟಿ ಡಾಲರ್‌ ಮೌಲ್ಯದ ಅತ್ಯಾಧುನಿಕ ಶಸ್ತ್ರಾಸ್ತ್ರ ಹಾಗೂ ಗುಪ್ತಚರ ಸಾಧನಗಳ ಖರೀದಿ ಸಂಬಂಧ ಭಾರತ ಮತ್ತು ಇಸ್ರೇಲ್‌ ಮಧ್ಯೆ ಒಪ್ಪಂದ ನಡೆದಿತ್ತು. ಈ ಸಂದರ್ಭದಲ್ಲಿ ಇಸ್ರೇಲಿ ಪೆಗಾಸಸ್‌ ತಂತ್ರಾಂಶವನ್ನೂ ಭಾರತ ಖರೀದಿಸಿದೆ ಎಂಬ ಆರೋಪ ಬಂದಿದೆ.

    ಭಾರತ ಸೇರಿದಂತೆ ಹಲವಾರು ದೇಶಗಳಲ್ಲಿ ಪತ್ರಕರ್ತರು, ಮಾನವ ಹಕ್ಕುಗಳ ರಕ್ಷಕರು, ರಾಜಕಾರಣಿಗಳು ಮತ್ತು ಇತರರ ಮೇಲೆ ಕಣ್ಣಿಡಲು ಸರ್ಕಾರಗಳು ಪೆಗಾಸಸ್‌ ಸಾಫ್ಟ್‌ವೇರ್‌ ಅನ್ನು ಬಳಸುತ್ತಿವೆ. ಪೆಗಾಸಸ್‌ ತಂತ್ರಾಂಶದ ಮೂಲಕ ಕೇಂದ್ರ ಸರ್ಕಾರ ನಮ್ಮ ಮೇಲೆ ಕಣ್ಗಾವಲು ಇರಿಸಿದೆ ಎಂದು ಪತ್ರಕರ್ತರು, ರಾಜಕೀಯ ನಾಯಕರು ದೂರಿದ್ದರು. ಆದರೆ ನಿರ್ದಿಷ್ಟ ಜನರ ಮೇಲೆ ತನ್ನಿಂದ ಯಾವುದೇ ಕಣ್ಗಾವಲು ಇಲ್ಲ ಎಂದು ಕೇಂದ್ರ ಸರ್ಕಾರ ಆರೋಪಗಳನ್ನು ತಳ್ಳಿ ಹಾಕಿತ್ತು.

  • ಬಿಟ್‍ಕಾಯಿನ್ ಬಗ್ಗೆ ತನಿಖೆ ಆಗಲಿ, ತಪ್ಪಿತಸ್ಥರು ಯಾರೇ ಇರಲಿ ಶಿಕ್ಷೆಯಾಗಲಿ: ಡಾ.ಜಿ ಪರಮೇಶ್ವರ್

    ಬಿಟ್‍ಕಾಯಿನ್ ಬಗ್ಗೆ ತನಿಖೆ ಆಗಲಿ, ತಪ್ಪಿತಸ್ಥರು ಯಾರೇ ಇರಲಿ ಶಿಕ್ಷೆಯಾಗಲಿ: ಡಾ.ಜಿ ಪರಮೇಶ್ವರ್

    ಗದಗ: ಬಿಟ್‍ಕಾಯಿನ್ ಬಗ್ಗೆ ತನಿಖೆ ಆಗಬೇಕು, ತಪ್ಪಿತಸ್ಥರು ಯಾರೇ ಇರಲಿ ಶಿಕ್ಷೆಯಾಗಬೇಕು ಎಂದು ಮಾಜಿ ಡಿಸಿಎಮ್ ಡಾ. ಜಿ ಪರಮೇಶ್ವರ್ ( G Parameshwara)ಆಗ್ರಹಿಸಿದ್ದಾರೆ.

    ಗದಗ ನಗರಕ್ಕೆ ಖಾಸಗಿ ಕಾರ್ಯಕ್ರಮಕ್ಕೆ ಆಗಮಿಸಿದ್ದರು. ನಂತರ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಸಿಎಂ ತಲೆ ದಂಡ ಆಗುತ್ತೆ ಅಂತಾ ನಾವು ಹೇಳಲು ಹೇಗೆ ಸಾಧ್ಯ? ಸಿಎಮ್ ತಲೆದಂಡ ಆಗ್ಬೇಕಾದರೆ ಅವರಾಗಲಿ, ಅವರ ಕುಟುಂಬದವರಾಗಲಿ ಭಾಗಿಯಾಗಿರಬೇಕು. ತನಿಖೆ ಮಾಡಿ ಅವರ ಹೆಸರು ಬಂದರೆ ನಾವು ಹೇಳಬಹುದು. ಅವು ಕೇವಲ ಊಹೆ ಅನ್ನೋ ಮೂಲಕ ಪ್ರಿಯಾಂಕ್ ಖರ್ಗೆ ಹೇಳಿಕೆಗೆ ಅಸಮ್ಮತಿ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ:  ಇಸ್ಪೀಟ್ ಅಡ್ಡೆ ನಡೆಸುತ್ತಿದ್ದ ನಟ ನಾಗಶೌರ್ಯ ತಂದೆ ಬಂಧನ

    ಬಿಟ್ ಕಾಯಿನ್ ವಿಚಾರವಾಗಿ ಸಮಗ್ರ ತನಿಖೆಯಾಗಬೇಕು. ಸಾವಿರಾರು ಕೋಟಿ ರೂಪಾಯಿ ಹಗರಣ ಆಗಿರುವ ಬಗ್ಗೆ ಅನುಮಾನವಿದೆ. ಯಾರು ತಪ್ಪಿತಸ್ಥರು ಅವರಿಗೆ ಶಿಕ್ಷೆ ಆಗಬೇಕು. ಹ್ಯಾಕರ್ ಶ್ರೀಕಿ ಜೊತೆ ಯಾರಿದ್ದಾರೆ ಅನ್ನೋದು ಗೊತ್ತಿಲ್ಲ. ಎಲ್ಲವೂ ಊಹಾಪೋಹ, ರಾಜಕಾರಣಿಗಳಿದ್ದಾರೆ, ಅಧಿಕಾರಿಗಳಿದ್ದಾರೆ, ಬ್ಯುಸಿನೆಸ್ ಮ್ಯಾನ್‍ಗಳಿದ್ದಾರೆ ಎನ್ನಲಾಗಿದೆ. ಅವರು ಯಾರೇ ಇರಲಿ ಅವರಿಗೆ ಸಿಕ್ಷೆಯಾಗಲೇಬೇಕು ಎಂದು ಒತ್ತಾಯಿಸಿದರು. ಇದನ್ನೂ ಓದಿ: ಪ್ರಿಯಾಂಕ್ ಖರ್ಗೆ ಹೇಳಿಕೆಗೆ ಪ್ರತಿಕ್ರಿಯೆ ಕೊಡಲ್ಲ: ಬೊಮ್ಮಾಯಿ ಗರಂ

    ದಲಿತರು ಸಿಎಂ ಆದರೆ ಖುಷಿ ಪಡುತ್ತೇನೆ ಎಂಬ ಸಿದ್ದರಾಮಯ್ಯ ಹೇಳಿಕೆ ವಿಚಾರಕ್ಕೆ ಪ್ರತಿಕ್ರಿಯಿಸಿದ ಅವರು, ಮೊದಲು ಪಕ್ಷವನ್ನು ಅಧಿಕಾರಕ್ಕೆ ತರುವ ಕೆಲಸ ಆಗಬೇಕು. ನಂತರ ಶಾಸಕಾಂಗ ಸಭೆಯಲ್ಲಿ ಸಿಎಂ ಬಗ್ಗೆ ನಿರ್ಧಾರ ಆಗುತ್ತದೆ.ಯಾರನ್ನು ಸಿಎಂ ಮಾಡಬೇಕು ಎಂದು ಹೈಕಮಾಂಡ್ ತೀರ್ಮಾನ ಮಾಡುತ್ತಾರೆ. ಈಗಲೇ ಸಿಎಂ ಯಾರು ಅಂತಾ ಹೇಳಲು ಸಾಧ್ಯವಿಲ್ಲ ಎಂದಿದ್ದಾರೆ. ಇದನ್ನೂ ಓದಿ:  ಬಿಟ್‌ಕಾಯಿನ್‌ ಹಗರಣದಲ್ಲಿ ಸಿಎಂ ತಲೆದಂಡ ಪಡೆಯಲಿದೆ: ಪ್ರಿಯಾಂಕ್ ಖರ್ಗೆ

    ಪರಿಷತ್ ಚುನಾವಣೆಗೆ ಕಾಂಗ್ರೆಸ್ 25 ಕ್ಯಾಂಡಿಡೆಟ್ ಹಾಕುತ್ತೇವೆ. 25ರಲ್ಲಿ ಕಳೆದ ಬಾರಿ ಮೆಜಾರಿಟಿ ನಾವೇ ಗೆದ್ದಿದ್ದು, ಈ ಬಾರಿಯೂ ಗೆಲ್ಲುತ್ತೇವೆ. ಕೆಲವರು ವಿಧಾನ ಸಭೆಗೆ ಹೊಗ್ತಾರೆ. ಇನ್ನು ಕೆಲವರು ಸಂಸದರಾಗುತ್ತೇವೆ ಅಂತಿದ್ದಾರೆ ಅವರನ್ನು ಹೊರತು ಪಡಿಸಿ ಬೇರೆಯವರಿದ್ದಾರೆ. ಬೇರೆಯವರಿಗೆ ಅವಕಾಶ ಮಾಡಿಕೊಡುತ್ತೇವೆ. ಪ್ರತಿ ಚುನಾವಣೆಯಂತೆ ಈ ಚುನಾವಣೆಯನ್ನೂ ಸೀರಿಯಸ್ಸಾಗೇ ಮಾಡ್ತೀವಿ ಎಂದ್ರು. ಈ ವೇಳೆ ಮಾಜಿ ಸಂಸದ ಐ.ಜಿ ಸನದಿ ಸೇರಿದಂತೆ ಅನೇಕ ಕಾಂಗ್ರೆಸ್ ನಾಯಕರು, ಕಾರ್ಯಕರ್ತರಿದ್ದರು.

  • ಹೈ ಕೋರ್ಟ್ ಮೆಟ್ಟಿಲೇರಿದ ಐಎಂಎ ಬಹುಕೋಟಿ ವಂಚನೆ ಪ್ರಕರಣ

    ಹೈ ಕೋರ್ಟ್ ಮೆಟ್ಟಿಲೇರಿದ ಐಎಂಎ ಬಹುಕೋಟಿ ವಂಚನೆ ಪ್ರಕರಣ

    ಬೆಂಗಳೂರು: ಐಎಂಎ ಬಹುಕೋಟಿ ಹಗರಣದ ಕುರಿತು ಇಂದು ಎಸ್‍ಐಟಿ ಪೊಲೀಸರು ತನಿಖೆ ಆರಂಭಿಸಿದ್ದು, ಇತ್ತ ಹಗರಣಕ್ಕೆ ಸಂಬಂಧಿಸಿದಂತೆ ಮೊಹಮ್ಮದ್ ತಾಹೀರ್ ಎಂಬವರು ಹೈ ಕೋರ್ಟಿಗೆ ರಿಟ್ ಅರ್ಜಿ ಸಲ್ಲಿಕೆ ಮಾಡಿದ್ದಾರೆ.

    ಹಗರಣಕ್ಕೆ ಸಂಬಂಧಿಸಿದಂತೆ ವಕೀಲ ಮೊಹಮ್ಮದ್ ತಹೀರ್ ಅವರು ಮನ್ಸೂರ್ ಹಾಗೂ ಸರ್ಕಾರ, ಉತ್ತರ ವಿಭಾಗದ ಎಸಿ ಅವರನ್ನು ಪಾರ್ಟಿ ಮಾಡಿ ರಿಟ್ ಅರ್ಜಿ ಸಲ್ಲಿಕೆ ಮಾಡಿದ್ದಾರೆ.

    ಸರ್ಕಾರ ಮನ್ಸೂರ್ ಗೆ ಸೇರಿದ ಚರ ಮತ್ತು ಸ್ಥಿರಾಸ್ತಿಗಳನ್ನು ಸೀಜ್ ಮಾಡುತ್ತಿದೆ. ಈ ವೇಳೆ ಸಾಕಷ್ಟು ಚಿನ್ನಾಭರಣ ಮತ್ತು ವಜ್ರದ ಆಭರಣಗಳನ್ನು ಜಪ್ತಿ ಮಾಡಲಾಗುತ್ತದೆ. ಈ ಸಂದರ್ಭದವನ್ನು ಕೆಲ ಸ್ವಾರ್ಥಿಗಳು ದುರುಪಯೋಗ ಪಡಿಸಿಕೊಳ್ಳುವ ಸಾಧ್ಯತೆ ಇದ್ದು, ಸೀಜ್ ಮಾಡುವ ವಸ್ತುಗಳನ್ನು ಸಾಗಿಸುವ ಮಾರ್ಗದಲ್ಲೇ ನಾಪತ್ತೆ ಆಗುವ ಸಾಧ್ಯತೆಯಿದೆ ಎಂದು ತಿಳಿಸಿದ್ದಾರೆ.

    ಮನ್ಸೂರ್ ಅವರ ಆಸ್ತಿಗಳನ್ನು ಜಪ್ತಿ ಮಾಡುವ ವೇಳೆ ಎಲ್ಲಾ ವಸ್ತುಗಳನ್ನು ಕ್ಯಾಮೆರಾ ಕಣ್ಗಾವಲಿನಲ್ಲಿ ಸೀಜ್ ಮಾಡಬೇಕು. ಅಲ್ಲದೇ ಸೀಜ್ ಮಾಡುವ ಪ್ರತಿಯೊಂದು ವಸ್ತುವಿನ ಬಗ್ಗೆ ಕೆಪಿಐಡಿಎಫ್‍ಇ 2004 ರಂತೆ ವಿವರ ದಾಖಲಿಸಬೇಕು ಎಂದು ಉತ್ತರ ವಿಭಾಗದ ಎಸಿ ಹಾಗೂ ಸರ್ಕಾರಕ್ಕೆ ಆದೇಶಿಸುವಂತೆ ಅರ್ಜಿಯಲ್ಲಿ ತಾಹೀರ್ ನ್ಯಾಯಾಲಯಕ್ಕೆ ಮನವಿ ಮಾಡಿದ್ದಾರೆ.

    ಇತ್ತ ಇಂದು ಪ್ರಕರಣ ವಿಚಾರಣೆ ಕೈಗೆತ್ತಿಕೊಂಡಿರುವ ಎಸ್‍ಐಟಿ ತಂಡ ಶಾಂತಿನಗರದಲ್ಲಿ ಇರುವ ಐಎಂಎ ಕಚೇರಿಗೆ ಅಧಿಕೃತವಾಗಿ ಬೀಗ ಮುದ್ರೆ ಹಾಕಿದೆ. ಇತ್ತ ಮನ್ಸೂರ್ ಕಾರು ಬೆಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಪತ್ತೆಯಾಗಿದ್ದು, ಪೊಲೀಸರು ಕಾರನ್ನು ವಶಕ್ಕೆ ಪಡೆದಿದ್ದಾರೆ. ಅಲ್ಲದೇ ಮನ್ಸೂರ್ ವಿದೇಶಕ್ಕೆ ತೆರಳಿರುವ ಬಗ್ಗೆಯೂ ಹೆಚ್ಚಿನ ತನಿಖೆ ನಡೆಸಿದ್ದಾರೆ.

  • ಆರೋಗ್ಯ ಇಲಾಖೆಯ ದೊಡ್ಡ ಹಗರಣ-ಒಂದಲ್ಲ, ಎರಡಲ್ಲ ಬರೋಬ್ಬರು 150 ಕೋಟಿ ಹಗರಣ!

    ಆರೋಗ್ಯ ಇಲಾಖೆಯ ದೊಡ್ಡ ಹಗರಣ-ಒಂದಲ್ಲ, ಎರಡಲ್ಲ ಬರೋಬ್ಬರು 150 ಕೋಟಿ ಹಗರಣ!

    ಬೆಂಗಳೂರು: ಸರ್ಕಾರಿ ಅಧಿಕಾರಿಗಳು ಹೇಗೆ ದುಡ್ಡು ಮಾಡೋದು ಹೇಗೆ ಅಂತ ತಿಳಿದುಕೊಳ್ಳಬೇಕಾ? ಹಾಗಾದ್ರೆ ಆರೋಗ್ಯ ಇಲಾಖೆ ಎಂಜಿನಿಯರ್ ಗಳನ್ನ ನೋಡಬೇಕು. ಆರೋಗ್ಯ ಕೇಂದ್ರದ ಹೆಸರಲ್ಲಿ ಕೋಟಿ ಕೋಟಿ ಹಣ ನುಂಗಿ ನೀರು ಕುಡಿದಿದ್ದಾರೆ.

    ನಮ್ಮ ಆರೋಗ್ಯ ಇಲಾಖೆಯ ಎಂಜಿನಿಯರ್ ಗಳು ಎಷ್ಟು ಬುದ್ದಿವಂತರು ಅನ್ನೋದಕ್ಕೆ ಈ ಸ್ಟೋರಿ ನೋಡಲೇಬೇಕು. ಪ್ರಾಥಮಿಕ ಆರೋಗ್ಯ ಕೇಂದ್ರ ಕಟ್ಟಡ ಕಾಮಗಾರಿಯಲ್ಲಿ ಕೋಟಿ ಕೋಟಿ ಹಣ ಮಾಡಿ ದುಡ್ಡು ಮಾಡೋರಿಗೆ ಮಾದರಿಯಾಗಿದ್ದಾರೆ. ಪ್ರತಿ ತಾಲೂಕಿನಲ್ಲಿ ನಿರ್ಮಾಣವಾಗಿರೋ ಆರೋಗ್ಯ ಕೇಂದ್ರದಲ್ಲೂ ಎಂಜಿನಿಯರ್ ಗಳು ದುಡ್ಡು ಮಾಡೋ ಅಂಶ ಆರ್ ಟಿಐನಲ್ಲಿ ಬಯಲಾಗಿದೆ. ಸ್ವತಃ ಜಿಲ್ಲಾ ಆರೋಗ್ಯ ಇಲಾಖೆ ಅಧಿಕಾರಿಗಳು ಆರೋಗ್ಯ ಕೇಂದ್ರ ಬೇಡ ಅಂತ ಪತ್ರ ಬರೆದಿದ್ದರು 1.20 ಕೋಟಿ ವೆಚ್ಚದಲ್ಲಿ ಆರೋಗ್ಯ ಕೇಂದ್ರ ಕಟ್ಟಿದ್ದಾರೆ. ದಾವಣಗೆರೆ ಜಿಲ್ಲೆಯ ವಡ್ನಾಳ್ ಗ್ರಾಮದಲ್ಲಿ ಈ ರೀತಿಯ ಬಹು ದೊಡ್ಡ ಹಗರಣ ನಡೆದಿದೆ.

    ಇದು ಕೇವಲ ದಾವಣಗೆರೆ ಕಥೆ ಮಾತ್ರವಲ್ಲ. ಪ್ರತೀ ಜಿಲ್ಲೆಯಲ್ಲಿ 2-3 ಆರೋಗ್ಯ ಕೇಂದ್ರಗಳನ್ನ ಅನಾವಶ್ಯಕವಾಗಿ ಕಟ್ಟಿದ್ದಾರಂತೆ. 2017-18 ನೇ ಸಾಲಿನಲ್ಲಿ ನಿರ್ಮಾಣವಾಗಿರೋ 100-200 ಕೇಂದ್ರಗಳಲ್ಲಿ 50ಕ್ಕೂ ಹೆಚ್ಚು ಕೇಂದ್ರಗಳು ಬೋಗಸ್ ಆಗಿವೆಯಂತೆ. ಇದರಲ್ಲಿ ಸುಮಾರು 150 ಕೋಟಿ ಹಗರಣ ನಡೆದಿರುವ ಶಂಕೆ ಮೂಡಿದೆ. ಇನ್ನು ಆಶ್ಚರ್ಯ ಸಂಗತಿ ಅಂದ್ರೆ ಚುನಾವಣೆ ಸಮಯದಲ್ಲಿ ನೀತಿ ಸಂಹಿಂತೆ ಇದ್ದರು ಹಣ ಬಿಡುಗಡೆಯಾಗಿದೆ. ಅಲ್ಲದೆ 1.20 ಕೋಟಿಗೆ ಪ್ರಾರಂಭವಾಗುವ ಕಾಮಗಾರಿ ಮುಗಿಯೋಕೆ 1.60 ಕೋಟಿ ದಾಟುತ್ತಂತೆ. ವಿಚಿತ್ರ ಅಂದ್ರೆ ಕಾಮಗಾರಿ ಮುಗಿಯದೇ ಇದ್ರು ಟೆಂಡರ್‍ದಾರನಿಗೆ ಹಣ ಬಿಡುಗಡೆಯಾಗಿದೆಯಂತೆ.

    ಜನರಿಗೆ ಅನುಕೂಲವಾಗಲಿ ಅಂತ ಪ್ರಾಥಮಿಕ ಆರೋಗ್ಯ ಕೇಂದ್ರ ಸ್ಥಾಪನೆಗೆ ಸರ್ಕಾರ ಮುಂದಾಗಿತ್ತು. ಆದರೆ ಅವಶ್ಯಕತೆಯೇ ಇಲ್ಲದೆ ಇರೋ ಕಡೆ ಆರೋಗ್ಯ ಕೇಂದ್ರ ಸ್ಥಾಪಿಸಿ ಇದರಲ್ಲೂ ಹಣ ಮಾಡಿದ್ದಾರೆ. ಇದು ಕೇವಲ ಒಂದು ಜಿಲ್ಲೆಯ ಸ್ಯಾಂಪಲ್. ಇಡೀ ರಾಜ್ಯದಲ್ಲಿ ಇಂತಹ ಎಷ್ಟು ಕೇಂದ್ರಗಳು ಸ್ಥಾಪನೆ ಆಗಿರಬೇಕು. ಈ ಬಗ್ಗೆ ಆರೋಗ್ಯ ಇಲಾಖೆ ಸಚಿವರು ಏನ್ ಕ್ರಮ ತೆಗೆದುಕೊಳ್ಳುತ್ತಾರೆ ಎಂಬುದನ್ನು ಮುಂದಿನ ದಿನಗಳಲ್ಲಿ ತಿಳಿಯಬೇಕಿದೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

  • ಇಂದಿರಾ ಕ್ಯಾಂಟೀನ್‍ನಲ್ಲಿ ಭ್ರಷ್ಟಾಚಾರ ಹೇಗೆ ನಡೆಯುತ್ತಿದೆ: ದಾಖಲೆಯೊಂದಿಗೆ ಅಕ್ರಮ ಬಿಚ್ಚಿಟ್ಟ ರಾಮದಾಸ್

    ಇಂದಿರಾ ಕ್ಯಾಂಟೀನ್‍ನಲ್ಲಿ ಭ್ರಷ್ಟಾಚಾರ ಹೇಗೆ ನಡೆಯುತ್ತಿದೆ: ದಾಖಲೆಯೊಂದಿಗೆ ಅಕ್ರಮ ಬಿಚ್ಚಿಟ್ಟ ರಾಮದಾಸ್

    ಬೆಂಗಳೂರು: ಇಂದಿರಾ ಕ್ಯಾಂಟೀನ್ ಅವ್ಯವಹಾರ ದಾಖಲೆಗಳನ್ನು ನೀಡಲು ಮುಂದಾಗಿದ್ದೆ, ಈ ವೇಳೆ ಆಡಳಿತ ಪಕ್ಷವು ಹಿಟ್ ಅಂಡ್ ರನ್ ಅಂತ ಹೇಳಿತು. ಆದರೆ ಇದು ಹಿಟ್ ಅಂಡ್ ರನ್ ಅಲ್ಲ, ಹಿಟ್ ಅಂಡ್ ಕ್ಯಾಚ್ ಎಂದು ಬಿಜೆಪಿ ಶಾಸಕ ಎಸ್.ಎ.ರಾಮದಾಸ್ ವ್ಯಂಗ್ಯವಾಡಿದರು.

    ವಿಧಾನಸೌಧದಲ್ಲಿ ಮಾತನಾಡಿದ ಅವರು, ಬಜೆಟ್ ಅಧಿವೇಶನದಲ್ಲಿ ಇಂದಿರಾ ಕ್ಯಾಂಟೀನ್ ಅವ್ಯವಹಾರದ ಬಗ್ಗೆ ಪ್ರಸ್ತಾಪ ಮಾಡಿದ್ದೆ. ಆದರೆ ದಾಖಲೆಗಳ ಸಮೇತ ಆರೋಪ ಮಾಡುವಂತೆ ಸರ್ಕಾರ ಸೂಚಿಸಿತ್ತು. ಅದನ್ನು ಚಾಲೆಂಜ್ ಆಗಿ ತೆಗೆದುಕೊಂಡು ನಾನು ದಾಖಲೆಗಳ ಸಮೇತ ಬಂದಿದ್ದೆ. ಹೀಗಾಗಿ ಇವತ್ತು ಕಲಾಪದಲ್ಲಿ ಚರ್ಚೆಗೆ ತೆಗೆದುಕೊಳ್ಳಬೇಕು ಅಂತಾ ಎಂದು ಮನವಿ ಮಾಡಿದ್ದೆ. ಇದಕ್ಕೆ ಸಭಾಧ್ಯಕ್ಷ ರಮೇಶ್ ಕುಮಾರ್ ಅವರು ಅವಕಾಶ ನೀಡಲಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.

    ಇಂದಿರಾ ಕ್ಯಾಂಟೀನ್ ಹಗರಣ ಸಂಬಂಧ ಹೈಕೋರ್ಟ್ ನಲ್ಲಿ ದೂರು ನೀಡುತ್ತೇನೆ. ಅಕ್ರಮಕ್ಕೆ ಒಂದು ತಾರ್ಕಿಕ ಅಂತ್ಯ ಕಾಣುವವರೆಗೂ ಹೋರಾಟ ಮಾಡುತ್ತೇನೆ ಎಂದು ಅವರು ಗರಂ ಆಗಿಯೇ ಮಾತನಾಡಿದರು.

    ರಾಮದಾಸ್ ಆರೋಪಗಳೇನು?
    ರಾಜ್ಯದಲ್ಲಿ 308 ಇಂದಿರಾ ಕ್ಯಾಂಟೀನ್‍ಗಳು ಇದ್ದು, ಪ್ರತಿನಿತ್ಯ 6.75 ಲಕ್ಷ ಮಂದಿಗೆ ಅನುಕೂಲವಾಗುತ್ತದೆ. ರಾಜ್ಯ ಸರ್ಕಾರ ಪ್ರತಿ ತಿಂಗಳು ಇದಕ್ಕಾಗಿ 24 ಕೋಟಿ ರೂ. ನೀಡುತ್ತದೆ. ಆದರೆ ಸರಾಸರಿ ಕೇವಲ 100 ರಿಂದ 150 ಮಂದಿ ಮಾತ್ರ ಅನುಕೂಲ ಆಗುತ್ತಿದೆ. ಲೆಡ್ಜ್‍ರಗಳನ್ನು ಇಟ್ಟು ಲೆಕ್ಕಕೊಡದೇ ಸುಳ್ಳು ಲೆಕ್ಕ ಕೊಡುತ್ತಿದ್ದಾರೆ. ಹೊರ ರಾಜ್ಯದವರಿಗೆ ಮಾತ್ರ ಇಂದಿರಾ ಕ್ಯಾಂಟೀನ್‍ಗಳಲ್ಲಿ ಕೆಲಸ ಕೊಟ್ಟಿದ್ದಾರೆ. ಒಂದೇ ದಿನ ಎರಡು ಒಪ್ಪಂದಗಳನ್ನು ಮಾಡಿಕೊಳ್ಳುತ್ತಾರೆ. ಒಂದು ಒಪ್ಪಂದದಲ್ಲಿ 57 ರೂ., 60 ರೂ. ರೀತಿ ಒಪ್ಪಂದ ಆಗಿದೆ. ದಿನಕ್ಕೆ ಮೂರು ಹೊತ್ತಿನ ಒಂದು ಊಟಕ್ಕೆ ಈ ದರ ಕೊಟ್ಟಿದ್ದಾರೆ. ಹೆಚ್ಚಳವಾಗಿರುವ ಹಣದಲ್ಲಿ ಯಾರಿಗೆ ಕಿಕ್‍ಬ್ಯಾಕ್ ಹೋಗುತ್ತದೆ ಎನ್ನುವುದನ್ನ ಸ್ಪಷ್ಟಪಡಿಸಬೇಕು. ದುಬೈ ಮೂಲದ ಕೆಇಎಫ್, ಇನ್‍ಫ್ರಾ ಲಿಮಿಟೆಡ್‍ಗೆ ಗುತ್ತಿಗೆ ನೀಡಿ ಅಕ್ರಮ ಎಸಗಲಾಗುತ್ತಿದೆ ಎಂದು ಎಂದು ಆರೋಪಿಸಿದರು.