Tag: Schedule

  • ಶಾಲಾ ಮಕ್ಕಳಿಗೆ ಪೂರ್ಣ ಪ್ರಮಾಣದ ತರಗತಿ – ದಸರಾಗೆ 14 ದಿನ ರಜೆ

    ಶಾಲಾ ಮಕ್ಕಳಿಗೆ ಪೂರ್ಣ ಪ್ರಮಾಣದ ತರಗತಿ – ದಸರಾಗೆ 14 ದಿನ ರಜೆ

    ಬೆಂಗಳೂರು: 2022-23ನೇ ಸಾಲಿನ ಶೈಕ್ಷಣಿಕ ವರ್ಷದ ವೇಳಾಪಟ್ಟಿಯನ್ನು ಶಿಕ್ಷಣ ಇಲಾಖೆ ಬಿಡುಗಡೆ ಮಾಡಿದೆ. ಕೊರೊನಾದಿಂದ ಎರಡು ವರ್ಷ ಸಂಪೂರ್ಣ ತರಗತಿಗಳು ನಡೆದಿರಲಿಲ್ಲ. ಆದರೆ ಈ ವರ್ಷ ಪೂರ್ಣ ಪ್ರಮಾಣದ ತರಗತಿಗಳು ನಡೆಸಲು ವೇಳಾಪಟ್ಟಿ ಪ್ರಕಟ ಮಾಡಲಾಗಿದೆ.

    ಈ ಶೈಕ್ಷಣಿಕ ವರ್ಷದಲ್ಲಿ 270 ದಿನಗಳನ್ನು ಶೈಕ್ಷಣಿಕ ಚಟುವಟಿಕೆಗಳಿಗೆ ಮೀಸಲು ಇಡಲಾಗಿದೆ. ಈ ವರ್ಷದ ದಸರಾಗೆ 14 ದಿನ ರಜೆ ಘೋಷಣೆ ಮಾಡಲಾಗಿದೆ. ವಿದ್ಯಾರ್ಥಿಗಳಿಗೆ ಆಪ್ತ ಸಮಾಲೋಚನೆ ಕಾರ್ಯಕ್ರಮವನ್ನು ಇಲಾಖೆ ಈ ಬಾರಿ ಹಮ್ಮಿಕೊಂಡಿದೆ. ಸರ್.ಎಂ. ವಿಶ್ವೇಶ್ವರಯ್ಯ ದಿನಾಚರಣೆ, ಮಹಾತ್ಮ ಗಾಂಧಿ, ಲಾಲ್ ಬಹಾದ್ದೂರ್ ಶಾಸ್ತ್ರಿ ಜಯಂತಿ, ಕನಕದಾಸರ ಜಯಂತಿ, ಸಂವಿಧಾನ ದಿನ, ಸಾವಿತ್ರ ಬಾಯಿ ಫುಲೆ, ವಿವೇಕಾನಂದರು ಸೇರಿದಂತೆ ಹಲವು ದಿನಾಚರಣೆ ಮತ್ತು ದಾರ್ಶನಿಕರ ಜಯಂತಿ ಆಚರಣೆಗೆ ಸೂಚನೆ ನೀಡಲಾಗಿದೆ. ಇದನ್ನೂ ಓದಿ: ಸಂಪ್ರದಾಯಕ್ಕೆ ಬ್ರೇಕ್‌ – ಸೂರ್ಯಾಸ್ತದ ಬಳಿಕ ಕೆಂಪು ಕೋಟೆಯಲ್ಲಿ ಮೋದಿ ಭಾಷಣ

    ಶಿಕ್ಷಣ ಇಲಾಖೆ ಶೈಕ್ಷಣಿಕ ವೇಳಾಪಟ್ಟಿಗೆ ಖಾಸಗಿ ಶಾಲೆಗಳು ವಿರೋಧ ವ್ಯಕ್ತಪಡಿಸಿವೆ. ಖಾಸಗಿ ಶಾಲೆಗಳ ಸಂಘಟನೆ ಕ್ಯಾಮ್ಸ್ ನಿಂದ ವೇಳಾಪಟ್ಟಿ ವಿರೋಧ ಮಾಡಿದ್ದು, ವೇಳಾಪಟ್ಟಿಯಲ್ಲಿ ಕೆಲವು ಗೊಂದಲಗಳಿವೆ, ಅದನ್ನು ಸರಿ ಮಾಡುವಂತೆ ಒತ್ತಾಯಿಸಿದ್ದಾರೆ.

    ಅಕ್ಟೋಬರ್ ತಿಂಗಳಿನಲ್ಲಿ 22 ದಿನ ಶೈಕ್ಷಣಿಕ ಚಟುವಟಿಕೆ ಮಾಡುವಂತೆ ನಿಗಧಿ ಮಾಡಲಾಗಿದೆ. ಆದರೆ ಅಕ್ಟೋಬರ್ ತಿಂಗಳಿನಲ್ಲಿ ದಸರಾಗೆ 14 ದಿನ ರಜೆ ನೀಡಲಾಗಿದೆ. ದೀಪಾವಳಿ ರಜೆ ಸೇರಿ 14-16 ದಿನ ಅಕ್ಟೋಬರ್ ತಿಂಗಳಲ್ಲಿ ಕಡಿಮೆ ಆಗಲಿದೆ. 14 ದಿನ ರಜೆ ಕೊಟ್ಟು 22 ದಿನ ಚಟುವಟಿಕೆಗಳನ್ನು ನಡೆಸಿ ಎನ್ನುವುದು ಸರಿಯಲ್ಲ. ಈ ಬಗ್ಗೆ ಶಿಕ್ಷಣ ಇಲಾಖೆ ಸ್ಪಷ್ಟನೆ ನೀಡಬೇಕು ಎಂದು ಕ್ಯಾಮ್ಸ್ ಕಾರ್ಯದರ್ಶಿ ಶಶಿಕುಮಾರ್ ಒತ್ತಾಯ ಮಾಡಿದ್ದಾರೆ. 2022-23ನೇ ಸಾಲಿನ ಶೈಕ್ಷಣಿಕ ವೇಳಾಪಟ್ಟಿ ಹೀಗಿದೆ. ಇದನ್ನೂ ಓದಿ: ಸರ್ಕಾರದ ವಿರುದ್ಧ ಬಾರುಕೋಲು ಬೀಸುತ್ತೇನೆ: ಸಿದ್ದರಾಮಯ್ಯ


    ಯಾವ ದಿನ ಏನು?

    ಮೇ 16 – ಶಾಲೆಗಳು ಪ್ರಾರಂಭ
    ಮೇ 16 ರಿಂದ 20 – ಶಾಲಾ ದಾಖಲಾತಿ ಪ್ರಕ್ರಿಯೆ
    ಮೇ 17 ರಿಂದ 31 – ಕಲಿಕಾ ಚೇತರಿಕೆ ಕಾರ್ಯಕ್ರಮ
    ಮೇ 28 – ಪೋಷಕರು, ತಾಯಂದಿರ ಸಭೆ
    ಜೂನ್ 1 – ಪ್ರಸಕ್ತ ಸಾಲಿನ ಪಠ್ಯ ಬೋಧನೆಗೆ ಚಾಲನೆ
    ಅಕ್ಟೋಬರ್ 3 ರಿಂದ 16 – ದಸರಾ ರಜೆ
    ಅಕ್ಟೋಬರ್ 17 ರಿಂದ 25 – ಅರ್ಧ ವಾರ್ಷಿಕ ಪರೀಕ್ಷೆಗಳು
    2023 ಫೆಬ್ರವರಿ 20 ರಿಂದ 25 – ಪೂರ್ಣ ಸಿದ್ದತಾ ಪರೀಕ್ಷೆ
    2023 ಮಾರ್ಚ್ 23 ರಿಂದ 31 – ವಾರ್ಷಿಕ ಪರೀಕ್ಷೆ

  • ಇಂದಿನಿಂದ ಸಿಇಟಿ ಪರೀಕ್ಷೆಗೆ ಅರ್ಜಿ ಸಲ್ಲಿಕೆ ಪ್ರಾರಂಭ

    ಇಂದಿನಿಂದ ಸಿಇಟಿ ಪರೀಕ್ಷೆಗೆ ಅರ್ಜಿ ಸಲ್ಲಿಕೆ ಪ್ರಾರಂಭ

    – ಆನ್‍ಲೈನ್ ಮೂಲಕ ಅರ್ಜಿ ಸಲ್ಲಿಕೆಗೆ ಅವಕಾಶ

    ಬೆಂಗಳೂರು: ಕೊರೊನಾ ಎರಡನೇ ಅಲೆ ಮಧ್ಯೆ ಶಿಕ್ಷಣ ಇಲಾಖೆ 2021ನೇ ಸಾಲಿನ ಸಿಇಟಿ ಪರೀಕ್ಷೆಗೆ ಅರ್ಜಿ ಸಲ್ಲಿಸುವ ಪ್ರಕ್ರಿಯೆಯನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರ(ಕೆಇಎ) ಪ್ರಾರಂಭ ಮಾಡಿದೆ. ಇಂದಿನಿಂದ ಜುಲೈ 10ರ ವರೆಗೆ ಆನ್‍ಲೈನ್ ಮೂಲಕ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿದೆ.

    ಆಗಸ್ಟ್ 28 ಮತ್ತು 29ರಂದು ಸಿಇಟಿ ಪರೀಕ್ಷೆ ನಡೆಸಲು ಕೆಇಎ ಈಗಾಗಲೇ ವೇಳಾಪಟ್ಟಿ ಪ್ರಕಟ ಮಾಡಿದೆ. ಹೀಗಾಗಿ ಇದೀಗ ಅರ್ಜಿ ಸಲ್ಲಿಸುವ ಪ್ರಕ್ರಿಯೆ ಆರಂಭಿಸಲಾಗಿದ್ದು, ಪರೀಕ್ಷೆ ಬರೆಯಲು ಆಸಕ್ತಿ ಇರುವ ವಿದ್ಯಾರ್ಥಿಗಳು ಆನ್‍ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.

    ಎಂಜಿನಿಯರಿಂಗ್, ಯೋಗ, ನ್ಯಾಚುರೋಪತಿ, ಬಿ-ಫಾರ್ಮ್, ಕೃಷಿ ವಿಜ್ಞಾನ, ವೆಟರಿನರಿ ಕೋರ್ಸ್ ಸೀಟು ಹಂಚಿಕೆಗೆ ರಾಜ್ಯ ಸರ್ಕಾರ ಸಿಇಟಿ ನಡೆಸುತ್ತದೆ. ಈ ಹಿನ್ನೆಲೆಯಲ್ಲಿ ಪರೀಕ್ಷೆಗೆ ನೋಂದಣಿ ಮಾಡಿಕೊಳ್ಳಲು ಆನ್ ಲೈನ್ ಮೂಲಕ ಅರ್ಜಿ ಸಲ್ಲಿಕೆಗೆ ವಿದ್ಯಾರ್ಥಿಗಳಿಗೆ ಅವಕಾಶ ನೀಡಿದೆ. ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ವೇಳಾಪಟ್ಟಿ ಹೀಗಿದೆ.

    ಕೆಇಎ ವೇಳಾಪಟ್ಟಿ
    – ಆನ್‍ಲೈನ್ ಮೂಲಕ ಅರ್ಜಿ ಸಲ್ಲಿಕೆ- ಜೂನ್ 15 ರಿಂದ ಜುಲೈ 10ವರೆಗೆ
    – ಆನ್‍ಲೈನ್ ಮೂಲಕ ಶುಲ್ಕ ಪಾವತಿಗೆ ಕೊನೆ ದಿನ- ಜುಲೈ 13
    – ವಿಶೇಷ ಪ್ರವರ್ಗಗಳ ದಾಖಲಾತಿ ಸಲ್ಲಿಕೆ- ಜುಲೈ 14 ರಿಂದ ಜುಲೈ 20
    – ಆನ್‍ಲೈನ್ ಅರ್ಜಿ ಮಾಹಿತಿ ತಿದ್ದುಪಡಿ- ಜುಲೈ 19 ರಿಂದ ಜುಲೈ 22
    – ಸಿಇಟಿ ಪರೀಕ್ಷೆಗೆ ಪ್ರವೇಶ ಪತ್ರ ಡೌನ್‍ಲೋಡ್ ಮಾಡಿಕೊಳ್ಳುವುದು- ಆಗಸ್ಟ್ 13ರಿಂದ

  • ಚೆನ್ನೈ ಜೊತೆ ಮೊದಲ ಪಂದ್ಯ, ಮೂರನೇ ದಿನ ಬೆಂಗಳೂರು ಮ್ಯಾಚ್

    ಚೆನ್ನೈ ಜೊತೆ ಮೊದಲ ಪಂದ್ಯ, ಮೂರನೇ ದಿನ ಬೆಂಗಳೂರು ಮ್ಯಾಚ್

    – ಕೊನೆಗೂ ಪ್ರಕಟವಾಯ್ತು ಐಪಿಎಲ್ ವೇಳಾಪಟ್ಟಿ

    ಅಬುಧಾಬಿ: ಕ್ರೀಡಾ ಪ್ರೇಮಿಗಳು ನಿರೀಕ್ಷೆ ಮಾಡುತ್ತಿದ್ದ ಐಪಿಎಲ್-2020ರ ವೇಳಾಪಟ್ಟಿ ಬಿಡುಗಡೆಯಾಗಿದ್ದು, ಸೆಪ್ಟಂಬರ್ 19ರಿಂದ ಪಂದ್ಯಗಳು ಆರಂಭವಾಗಲಿವೆ.

    ಮೊದಲ ಪಂದ್ಯವನ್ನು ಸಂಪ್ರಾದಯದಂತೆ ಕಳೆದ ಟೂರ್ನಿಯಲ್ಲಿ ಫೈನಲ್ ಆಡಿದ್ದ ಮುಂಬೈ ಇಂಡಿಯನ್ಸ್ ತಂಡ ಮತ್ತು ಚೆನ್ನೈ ಸೂಪರ್ ಕಿಂಗ್ಸ್ ತಂಡಗಳು ಆಡಲಿವೆ. ನಂತರ ಎರಡನೇ ಪಂದ್ಯದಲ್ಲಿ ಡೆಲ್ಲಿ ಮತ್ತು ಪಂಜಾಬ್ ತಂಡಗಳು ಮುಖಾಮುಖಿಯಾಗಲಿದ್ದು, ಮೂರನೇ ಪಂದ್ಯ ಆರ್‌ಸಿಬಿ ಮತ್ತು ಹೈದರಾಬಾದ್ ತಂಡಗಳ ನಡುವೆ ನಡೆಯಲಿದೆ.

    ಈ ಮೊದಲು ಆಟಗಾರರಲ್ಲಿ ಮತ್ತು ಸಿಬ್ಬಂದಿಯಲ್ಲಿ ಕೊರೊನಾ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಮೊದಲ ಪಂದ್ಯವನ್ನು ಚೆನ್ನೈ ಆಡುವುದು ಅನುಮಾನ ಎಂದು ವರದಿಯಾಗಿತ್ತು. ಆದರೆ ಈಗ ಈ ಅನುಮಾನಕ್ಕೆ ವೇಳಾಪಟ್ಟಿ ಉತ್ತರ ನೀಡಿದೆ.

    ಟೂರ್ನಿಯಲ್ಲಿ ನವೆಂಬರ್ ಮೂರರವರೆಗೆ ಒಟ್ಟು 56 ಪಂದ್ಯಗಳು ನಡೆಯಲಿದ್ದು, 45ದಿನಗಳ ಕಾಲ ಲೀಗ್ ಹಂತದ ಪಂದ್ಯಗಳು ನಡೆಯಲಿವೆ. ವಾರದ ದಿನದಲ್ಲಿ ಎಂದಿನಂತೆ ಕೇವಲ ಒಂದೇ ಪಂದ್ಯ ನಡೆಯುತ್ತದೆ. ಈ ಪಂದ್ಯ ಭಾರತೀಯ ಕಾಲಮಾನ ಸಂಜೆ 7.30ಕ್ಕೆ ಆರಂಭವಾಗಲಿದೆ. ಇನ್ನೂ ಶನಿವಾರ ಮತ್ತು ಭಾನುವಾರ ಎರಡು ಪಂದ್ಯಗಳಿದ್ದು, ಮೊದಲ ಪಂದ್ಯ ಮಧ್ಯಾಹ್ನ 3.30ಕ್ಕೆ ಆರಂಭವಾಗಲಿದೆ. ಎರಡನೇ ಪಂದ್ಯ 7.30ಕ್ಕೆ ಆರಂಭವಾಗಲಿದೆ.

    ದುಬೈ, ಶಾರ್ಜಾ ಮತ್ತು ಅಬುಧಾಬಿ ಮೈದಾನದಲ್ಲಿ ಪಂದ್ಯಗಳು ನಡೆಯಲಿವೆ. ಮೊದಲ ಪಂದ್ಯ ಅಬುಧಾಬಿ ಸ್ಟೇಡಿಯಂನಲ್ಲಿ ನಡೆಯಲಿದೆ. ಕೊನೆಯ ಲೀಗ್ ಪಂದ್ಯ ಶಾರ್ಜಾ ಮೈದಾನದಲ್ಲಿ ನಡೆಯಲಿದೆ. ಲೀಗ್ ಹಂತದ ಪಂದ್ಯಗಳ ವೇಳಾಪಟ್ಟಿಯನ್ನು ಮಾತ್ರ ಬಿಸಿಸಿಐ ಬಿಡುಗಡೆ ಮಾಡಿದ್ದು, ನಂತರ ನಡೆಯುವ ಕ್ವಾಲಿಫಯರ್, ಫೈನಲ್ ಪಂದ್ಯದ ಸ್ಥಳಗಳ ಮಾಹಿತಿಯನ್ನು ಪ್ರಕಟಿಸಿಲ್ಲ.

    ಇಂದು ಬಿಡುಗಡೆ ಮಾಡಿರುವ ಐಪಿಎಲ್ ವೇಳಾಪಟ್ಟಿಯನ್ನು ಬಿಸಿಸಿಐ ಕಳೆದ ತಿಂಗಳಲ್ಲೇ ಬಿಡುಗಡೆ ಮಾಡಬೇಕಾಗಿತ್ತು. ಇದರ ಮಧ್ಯೆ ಚೆನ್ನೈ ಸೂಪರ್ ಕಿಂಗ್ಸ್ ತಂಡದ ಆಟಗಾರಿಗೆ ಮತ್ತು ಸಿಬ್ಬಂದಿ ವರ್ಗದವರಗೆ ಕೊರೊನಾ ಪಾಸಿಟಿವ್ ಬಂದಿತ್ತು ಹೀಗಾಗಿ ತಡವಾಗಿತ್ತು. ನಂತರ ಕಳೆದ ಶುಕ್ರವಾರ ವೇಳಾಪಟ್ಟಿ ಬಿಡುಗಡೆಯಾಗಲಿದೆ ಎಂದು ಹೇಳಲಾಗಿತ್ತು. ಆದರೆ ಅಂದು ಕೂಡ ಆಗಿರಲಿಲ್ಲ.

    ಕಳೆದ ಮಾರ್ಚ್ ತಿಂಗಳಿನಲ್ಲೇ ನಡೆಯಬೇಕಿದ್ದ ಪ್ರಪಂಚದ ಅತ್ಯಂತ ಶ್ರೀಮಂತ ಕ್ರಿಕೆಟ್ ಟೂರ್ನಿ ಐಪಿಎಲ್ ಕೊರೊನಾ ಕಾರಣದಿಂದ ಮುಂದಕ್ಕೆ ಹೋಗಿತ್ತು. ಈ ನಡುವೆ ಭಾರತದಲ್ಲಿ ಕೊರೊನಾ ನಿಯಂತ್ರಣಕ್ಕೆ ಬಾರದ ಹಿನ್ನೆಲೆ ಐಪಿಎಲ್ ಅನ್ನು ಯುಎಇಯಲ್ಲಿ ಆಡಿಸಲು ಬಿಸಿಸಿಐ ತೀರ್ಮಾನ ಮಾಡಿತ್ತು. ಅಂತಯೇ ಈಗಾಗಲೇ ಎಲ್ಲ ತಂಡಗಳು ಯುಎಇ ತಲುಪಿದ್ದಿ. ಸೆಪ್ಟೆಂಬರ್ 19ರಿಂದ ಐಪಿಎಲ್ ಹಂಗಾಮ ಆರಂಭವಾಗಲಿದೆ.

  • ಸಿಎಸ್‍ಕೆ ದೀಪಕ್ ಚಹರ್‌ಗೆ ಕೊರೊನಾ – ಮುಂದಕ್ಕೆ ಹೋಗುತ್ತಾ ಐಪಿಎಲ್?

    ಸಿಎಸ್‍ಕೆ ದೀಪಕ್ ಚಹರ್‌ಗೆ ಕೊರೊನಾ – ಮುಂದಕ್ಕೆ ಹೋಗುತ್ತಾ ಐಪಿಎಲ್?

    – ಬಿಸಿಸಿಐ ಲೆಕ್ಕಾಚಾರವೇನು?

    ಅಬುಧಾಬಿ: ಶುಕ್ರವಾರ ಚೆನ್ನೈ ಸೂಪರ್ ಕಿಂಗ್ಸ್ ತಂಡದ ಓರ್ವ ವೇಗದ ಬೌಲರ್ ಮತ್ತು ಕೆಲ ಸಹಾಯಕ ಸಿಬ್ಬಂದಿಗೆ ಕೊರೊನಾ ಪಾಸಿಟವ್ ಬಂದಿದೆ ಎಂಬ ಸುದ್ದಿ ಹೊರಬಿದ್ದಿತ್ತು.

    ಆದರೆ ಸಿಎಸ್‍ಕೆ ತಂಡದಲ್ಲಿ ಯಾವ ವೇಗಿಗೆ ಕೊರೊನಾ ಪಾಸಿಟಿವ್ ಬಂದಿದೆ ಎಂದು ತಿಳಿದಿರಲಿಲ್ಲ. ಈಗ ಆ ಮಾಹಿತಿ ಹೊರಬಂದಿದ್ದು, ಚೆನ್ನೈ ಸೂಪರ್ ಕಿಂಗ್ಸ್ ತಂಡದ ಪ್ರಮುಖ ವೇಗಿ ದೀಪಕ್ ಚಹರ್‌ಗೆ ಕೊರೊನಾ ಪಾಸಿಟಿವ್ ಬಂದಿದೆ ಎಂಬ ಮಾಹಿತಿ ಲಭಿಸಿದೆ. ದೀಪಕ್ ಚಹರ್ ಜೊತೆಗೆ ತಂಡದ 10 ಸಹಾಯಕ ಸಿಬ್ಬಂದಿಗೂ ಕೊರೊನಾ ಪಾಸಿಟಿವ್ ಬಂದಿದೆ.

    ಐಪಿಎಲ್ ಆರಂಭವಾಗಲು ಕೇವಲ ಇನ್ನು 20 ದಿನ ಮಾತ್ರ ಬಾಕಿ ಉಳಿದಿದೆ. ಇದರ ಮಧ್ಯೆ ಮುಂದಿನ ವಾರದಲ್ಲಿ ಬಿಸಿಸಿಐ ಐಪಿಎಲ್ ಪಂದ್ಯಗಳ ಔಪಚಾರಿಕ ವೇಳಾಪಟ್ಟಿಯನ್ನು ಬಿಡುಗಡೆ ಮಾಡುವ ಯೋಜನೆಯನ್ನು ಹೊಂದಿತ್ತು. ಆದರೆ ಈಗ ಪರಿಸ್ಥಿತಿ ಸ್ವಲ್ಪ ಬಿಗುಡಯಾಸಿದ್ದು, ಸದ್ಯಕ್ಕೆ ಪರಿಸ್ಥಿತಿ ಹಿಡಿತಕ್ಕೆ ಬರುವವರೆಗೂ ವೇಳಾಪಟ್ಟಿಯನ್ನು ಬಿಡುಗಡೆ ಮಾಡುವುದು ಬೇಡ ಎಂದು ಬಿಸಿಸಿಐ ತೀರ್ಮಾನಿಸಿದೆ. ಹೀಗಾಗಿ ಐಪಿಎಲ್ ಮತ್ತೆ ಮುಂದಕ್ಕೆ ಹೋಗುತ್ತಾ ಎಂಬ ಅನುಮಾನ ಮೂಡಿದೆ.

    ಸದ್ಯ ಪರಿಸ್ಥಿತಿಯನ್ನು ನಿಭಾಯಿಸಲು ಸಾಕಷ್ಟು ಕ್ರಮಗಳನ್ನು ನಾವು ಕೈಗೊಂಡಿದ್ದೇವೆ. ಈಗ ಪಂದ್ಯಾವಳಿಗಳನ್ನು ತಕ್ಷಣದ ಆರಂಭ ಮಾಡಬೇಕು ಎಂಬ ಯಾವುದೇ ತುರ್ತು ಪರಿಸ್ಥಿತಿಯಿಲ್ಲ. ಈಗ ಆಗಿರುವ ಬೆಳವಣಿಗೆಯಿಂದಾಗಿ ಪಂದ್ಯಗಳ ಘೋಷಣೆ ವಿಳಂಬವಾಗಿದೆ. ಪರಿಸ್ಥಿತಿ ನಮ್ಮ ಹಿಡಿತಕ್ಕೆ ಬಂದ ನಂತರ ನಾವು ವೇಳಾಪಟ್ಟಿಯನ್ನು ಬಿಡುಗಡೆ ಮಾಡುತ್ತೇವೆ ಎಂದು ಬಿಸಿಸಿಐನ ಉನ್ನತ ಮೂಲಗಳು ಮಾಧ್ಯಮಗಳಿಗೆ ತಿಳಿಸಿವೆ.

    ಚೆನ್ನೈ ಸೂಪರ್ ಕಿಂಗ್ಸ್ ತಂಡ ಅಗಸ್ಟ್ 21ರಂದೇ ಯುಎಇಗೆ ತೆರಳಿತ್ತು. ಎಂದಿನಂತೆ ಎಲ್ಲ ಆಟಗಾರರಿಗೆ ಭಾರತದಲ್ಲೂ ಕೂಡ ಒಂದು ಬಾರಿ ಕೊರೊನಾ ಟೆಸ್ಟ್ ಮಾಡಲಾಗಿತ್ತು. ಅಂತೆಯೇ ಯುಎಇಗೆ ತೆರಳಿದ ತಂಡ ಅಲ್ಲಿ ಆರು ದಿನಗಳ ಕಾಲ ಕ್ವಾರಂಟೈನ್‍ಗೆ ಒಳಗಾಗಿತ್ತು. ಶುಕ್ರವಾರಕ್ಕೆ ಆ ಅವಧಿ ಮುಗಿಯಲಿದ್ದು, ಚೆನ್ನೈ ತಂಡ ಅಭ್ಯಾಸ ನಡೆಸಬೇಕಿತ್ತು. ಆದರೆ ಕೊರೊನಾ ಟೆಸ್ಟ್ ನಲ್ಲಿ ತಂಡದ ಸದಸ್ಯರಿಗೆ ಕೊರೊನಾ ಪಾಸಿಟಿವ್ ಪತ್ತೆಯಾಗಿತ್ತು. ಹೀಗಾಗಿ ತಂಡ ಸೆಪ್ಟೆಂಬರ್ 1ರಿಂದ ಅಭ್ಯಾಸ ಆರಂಭಿಸಲಿದೆ.

    ಕೊರೊನಾ ವೈರಸ್ ಕಾರಣದಿಂದಲೇ ಕಳೆದ ಮಾರ್ಚ್‍ನಲ್ಲೇ ನಡೆಯಬೇಕಿದ್ದ, ಐಪಿಎಲ್-2020 ಮುಂದಕ್ಕೆ ಹೋಗಿತ್ತು. ಭಾರತದಲ್ಲಿ ಕೊರೊನಾ ಹಿಡಿತಕ್ಕೆ ಸಿಗದ ಹಿನ್ನೆಲೆ ಸೋಂಕಿನ ಪ್ರಮಾಣ ಕಮ್ಮಿ ಇರುವ ಯುಎಇಯಲ್ಲಿ ಐಪಿಎಲ್ ನಡೆಸಲು ಬಿಸಿಸಿಐ ತೀರ್ಮಾನ ಮಾಡಿದೆ. ಅಂತೆಯೇ ಸೆಪ್ಟೆಂಬರ್ 19ರಿಂದ ಐಪಿಎಲ್ ಆರಂಭವಾಗಲಿದೆ. ಆದರೆ ಅದಕ್ಕೂ ಮುನ್ನವೇ ಐಪಿಎಲ್ ಮೇಲೆ ಕೊರೊನಾ ಕರಿನೆರಳು ಬಿದ್ದಿದೆ.

  • ದ್ವಿತೀಯ ಪಿಯು ಪರೀಕ್ಷೆಯ ಅಧಿಕೃತ ವೇಳಾಪಟ್ಟಿ ಪ್ರಕಟ

    ದ್ವಿತೀಯ ಪಿಯು ಪರೀಕ್ಷೆಯ ಅಧಿಕೃತ ವೇಳಾಪಟ್ಟಿ ಪ್ರಕಟ

    ಬೆಂಗಳೂರು: 2019-20ನೇ ಸಾಲಿನ ದ್ವಿತೀಯ ಪಿಯು ವೇಳಾಪಟ್ಟಿ ಪ್ರಕಟವಾಗಿದೆ. ಮಾರ್ಚ್ 1ರಿಂದ 23 ವರೆಗೆ ಪರೀಕ್ಷೆಗಳು ನಡೆಯಲಿವೆ. ಈ ಸಂಬಂಧ ಇಂದು ಪಿಯು ಬೋರ್ಡ್ ಅಂತಿಮ ವೇಳಾಪಟ್ಟಿಯನ್ನು ಪ್ರಕಟಗೊಳಿಸಿದೆ. ಮಾರ್ಚ್ 4 ರಂದು ಇತಿಹಾಸ, ಭೌತಶಾಸ್ತ್ರ, ಬೇಸಿಕ್ ಗಣಿತ ನಡೆದರೆ ಮಾರ್ಚ್ 24 ರಂದು ಕೊನೆಯದಾಗಿ ಇಂಗ್ಲಿಷ್ ಪರೀಕ್ಷೆ ನಡೆಯಲಿದೆ.

    ವೇಳಾಪಟ್ಟಿ ಹೀಗಿದೆ:
    ಮಾರ್ಚ್ 4 – ಇತಿಹಾಸ, ಭೌತಶಾಸ್ತ್ರ, ಬೇಸಿಕ್ ಗಣಿತ
    ಮಾರ್ಚ್ 5 – ತಮಿಳು, ತೆಲಗು, ಮಲೆಯಾಳಂ, ಮರಾಠಿ, ಅರೇಬಿಕ್, ಫ್ರೆಂಚ್
    ಮಾರ್ಚ್ 6 – ಕರ್ನಾಟಕ ಸಂಗೀತ, ಹಿಂದುಸ್ಥಾನಿ ಸಂಗೀತ

    ಮಾರ್ಚ್ 7 – ಬಿಸಿನೆಸ್ ಸ್ಟಡೀಸ್, ಸಮಾಜಶಾಸ್ತ್ರ, ರಸಾಯನಶಾಸ್ತ್ರ,
    ಮಾರ್ಚ್ 9ರಂದು ಇನ್ಫಾರ್ಮೇಶನ್ ಟೆಕ್ನಾಲಜಿ, ರಿಟೇಲ್, ಆಟೋಮೊಬೈಲ್, ಹೆಲ್ತ್ ಕೇರ್ ಹಾಗೂ ಬ್ಯುಟಿ ಅಂಡ್ ವೆಲ್‌ನೆಸ್
    ಮಾರ್ಚ್ 10 – ಉರ್ದು
    ಮಾರ್ಚ್ 11 – ಐಚ್ಛಿಕ ಕನ್ನಡ, ಅಕೌಂಟೆನ್ಸಿ, ಗಣಿತ

    ಮಾರ್ಚ್ 12 – ಭೂಗೋಳಶಾಸ್ತ್ರ
    ಮಾರ್ಚ್ 13 – ಎಜುಕೇಶನ್ (ಶಿಕ್ಷಣ)
    ಮಾರ್ಚ್ 14 – ಮನಃಶಾಸ್ತ್ರ, ಎಲೆಕ್ಟ್ರಾನಿಕ್, ಕಂಪ್ಯೂಟರ್ ಸೈನ್ಸ್

    ಮಾರ್ಚ್ 16 – ಲಾಜಿಕ್, ಹೋಮ್ ಸೈನ್ಸ್, ಭೂ ವಿಜ್ಞಾನ
    ಮಾರ್ಚ್ 17 – ಅರ್ಥಶಾಸ್ತ್ರ, ಜೀವಶಾಸ್ತ್ರ
    ಮಾರ್ಚ್ 18 – ಹಿಂದಿ
    ಮಾರ್ಚ್ 19 – ಕನ್ನಡ

    ಮಾರ್ಚ್ 20 – ಸಂಸ್ಕೃತ
    ಮಾರ್ಚ್ 21 – ರಾಜ್ಯಶಾಸ್ತ್ರ, ಲೆಕ್ಕಶಾಸ್ತ್ರ
    ಮಾರ್ಚ್ 23 – ಇಂಗ್ಲಿಷ್

    ಬಹುದಿನಗಳಿಂದ ವಿದ್ಯಾರ್ಥಿಗಳು ಪರೀಕ್ಷೆಯ ವೇಳಾಪಟ್ಟಿಗೆ ಕಾಯುತ್ತಿದ್ದರು. ಪರೀಕ್ಷಾ ಸಮಯ ಲಭ್ಯವಾಗಿದ್ದು, ಸಮಯಕ್ಕನುಗುಣವಾಗಿ ಅಭ್ಯಾಸದಲ್ಲಿ ತೊಡಗಿಕೊಳ್ಳಬೇಕಿದೆ.

  • ಕಿವೀಸ್, ಟೀಂ ಇಂಡಿಯಾ ದ್ವಿಪಕ್ಷೀಯ ಕ್ರಿಕೆಟ್ ವೇಳಾಪಟ್ಟಿ ಪ್ರಕಟ

    ಕಿವೀಸ್, ಟೀಂ ಇಂಡಿಯಾ ದ್ವಿಪಕ್ಷೀಯ ಕ್ರಿಕೆಟ್ ವೇಳಾಪಟ್ಟಿ ಪ್ರಕಟ

    ನವದೆಹಲಿ: ವಿಶ್ವಕಪ್ ಸರಣಿಯಲ್ಲಿ ಟೀಂ ಇಂಡಿಯಾ ಸೇರಿದಂತೆ ವಿಶ್ವ ಕ್ರಿಕೆಟ್ ತಂಡಗಳು ಬ್ಯುಸಿಯಾಗಿದೆ. ಇತ್ತ ಮುಂದಿನ ವರ್ಷದ ಆರಂಭದಲ್ಲಿ ಟೀಂ ಇಂಡಿಯಾ ಕೈಗೊಳ್ಳಲಿರುವ ನ್ಯೂಜಿಲೆಂಡ್ ಪ್ರವಾಸ ವೇಳಾಪಟ್ಟಿಯನ್ನು ಬಿಡುಗಡೆಯಾಗಿದೆ.

    ಟೀಂ ಇಂಡಿಯಾ ನ್ಯೂಜಿಲೆಂಡ್ ವಿರುದ್ಧ 5 ಟಿ20, 2 ಟೆಸ್ಟ್ ಹಾಗೂ 3 ಏಕದಿನ ಪಂದ್ಯಗಳನ್ನು ಆಡಲಿದೆ. ಇದೇ ಮೊದಲ ಬಾರಿಗೆ ಬಿಸಿಸಿಐ 5 ಪಂದ್ಯಗಳ ಟಿ20 ಸರಣಿಯನ್ನ ಆಯೋಜಿಸಿದೆ.

    2020 ಜನವರಿ 24 ರಿಂದ ಟೂರ್ನಿ ಆರಂಭವಾಗಲಿದ್ದು, ಮೊದಲು ಟಿ20 ಪಂದ್ಯಳು ನಡೆಯಲಿದೆ. ಆ ಬಳಿಕ ಫೆ. 5 ರಿಂದ ಏಕದಿನ ಹಾಗೂ ಫೆ.21 ರಿಂದ ಟೆಸ್ಟ್ ಪಂದ್ಯಗಳು ಆರಂಭಗೊಳ್ಳಲಿದೆ.

    ವೇಳಾಪಟ್ಟಿ ಇಂತಿದೆ

    ಟಿ-20 ಸರಣಿ:

    ಜನವರಿ 24 – ಆಕ್ಲೆಂಡ್
    ಜನವರಿ 26 – ಆಕ್ಲೆಂಡ್
    ಜನವರಿ 29 – ಹ್ಯಾಮಿಲ್ಟನ್
    ಜನವರಿ 31 – ವೆಲ್ಲಿಂಗ್ಟನ್
    ಫೆಬ್ರವರಿ 02 – ತೌರಂಗ

    ಏಕದಿನ ಸರಣಿ:
    ಫೆಬ್ರವರಿ 05 – ಹ್ಯಾಮಿಲ್ಟನ್
    ಫೆಬ್ರವರಿ 08 – ಆಕ್ಲೆಂಡ್
    ಫೆಬ್ರವರಿ 11 – ತೌರಂಗ

    ಟೆಸ್ಟ್ ಸರಣಿ:
    ಫೆಬ್ರವರಿ 21 ರಿಂದ 25 – ವೆಲ್ಲಿಂಗ್ಟನ್
    ಫೆಬ್ರವರಿ 29 ರಿಂದ ಮಾ.04 – ಕ್ರೈಸ್ಟ್ ಚರ್ಚ್

  • ಐಪಿಎಲ್ 2019: ಮೊದಲ ಪಂದ್ಯದಲ್ಲೇ ಆರ್‌ಸಿಬಿ-ಚೆನ್ನೈ ಹಣಾಹಣಿ

    ಐಪಿಎಲ್ 2019: ಮೊದಲ ಪಂದ್ಯದಲ್ಲೇ ಆರ್‌ಸಿಬಿ-ಚೆನ್ನೈ ಹಣಾಹಣಿ

    ಮುಂಬೈ: ಇಂಡಿಯನ್ ಪ್ರೀಮಿಯರ್ ಲೀಗ್ 2019 ಆವೃತ್ತಿಯ ಮೊದಲ ಹಂತದ ವೇಳಾಪಟ್ಟಿ ಬಿಡುಗಡೆಯಾಗಿದ್ದು, ಮಾರ್ಚ್ 23 ರಂದು ಮೊದಲ ಪಂದ್ಯ ಚೆನ್ನೈನಲ್ಲಿ ನಡೆಯಲಿದೆ.

    2018 ಆವೃತಿಯ ಚಾಂಪಿಯನ್ಸ್ ಚೆನ್ನೈ ಸೂಪರ್ ಕಿಂಗ್ಸ್ ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು ಮಧ್ಯೆ ಮೊದಲ ಪಂದ್ಯ ನಡೆಯಲಿದೆ. ಸದ್ಯ 2 ವಾರಗಳ ವೇಳಾಪಟ್ಟಿ ಮಾತ್ರ ಬಿಡುಗಡೆಯಾಗಿದ್ದು ಲೋಕಸಭಾ ಚುನಾವಣೆಯ ದಿನಾಂಕವನ್ನು ಕೇಂದ್ರ ಚುನಾವಣಾ ಆಯೋಗ ಪ್ರಕಟಿಸಿದ ಬಳಿಕ ಮುಂದಿನ ಐಪಿಎಲ್ ವೇಳಾಪಟ್ಟಿ ಬಿಡುಗಡೆಯಾಗಲಿದೆ.

    ಸದ್ಯ ಬಿಡುಗಡೆ ಆಗಿರುವ ವೇಳಾಪಟ್ಟಿಯ ಅನ್ವಯ 17 ಪಂದ್ಯಗಳ ದಿನಾಂಕ ನಿಗದಿ ಆಗಿದೆ. ಮಾರ್ಚ್ 23 ರಿಂದ ಏಪ್ರಿಲ್ 5 ರವರೆಗೂ ಪಂದಗಳು ನಡೆಯಲಿದೆ. ಮಾರ್ಚ್ 24, 30 ಮತ್ತು 31 ರಂದು ಎರಡು ಪಂದ್ಯಗಳು ನಡೆಯಲಿದೆ.

    ಡೆಲ್ಲಿ ಕ್ಯಾಪಿಟಲ್ಸ್, ಆರ್ ಸಿಬಿ ತಂಡಗಳು 5 ಪಂದ್ಯಗಳನ್ನು ಈ ಅವಧಿಯಲ್ಲಿ ಆಡಲಿದ್ದು, ಉಳಿದ 6 ತಂಡಗಳು ತಲಾ 4 ಪಂದ್ಯಗಳನ್ನು ಆಡಲಿದೆ. ಉಳಿದಂತೆ ಡೆಲ್ಲಿ, ಆರ್ ಸಿಬಿ 3 ಪಂದ್ಯ ತವರಿನಲ್ಲಿ, 3 ಪಂದ್ಯ ಹೊರಗೆ ಆಡಲಿವೆ. ಇನ್ನುಳಿದ ತಂಡಗಳು ತಲಾ ಎರಡು ಪಂದ್ಯಗಳನ್ನು ಆಡಲಿದೆ.

    ಏಪ್ರಿಲ್ ಮತ್ತು ಮೇ ತಿಂಗಳಿನಲ್ಲಿ ಲೋಕಸಭಾ ಚುನಾವಣೆಗಳು ನಡೆಯಲಿರುವ ಕಾರಣ ಕ್ರಿಕೆಟ್ ಮತ್ತು ಚುನಾವಣೆ ಎರಡಕ್ಕೂ ರಾಜ್ಯ ಸರ್ಕಾರಗಳು ಭದ್ರತೆ ಕಲ್ಪಿಸುವುದು ಕಷ್ಟವಾಗುತ್ತದೆ. ಭದ್ರತಾ ಕಾರಣ ಮತ್ತು ಕೇಂದ್ರ ಸರ್ಕಾರ ಭಾರತದಲ್ಲೇ ಆಯೋಜನೆಗೆ ಒಪ್ಪಿಗೆ ನೀಡದ ಹಿನ್ನೆಲೆಯಲ್ಲಿ ವಿದೇಶದಲ್ಲಿ ಐಪಿಎಲ್ ನಡೆಸುವ ಬಗ್ಗೆ ಚರ್ಚೆ ನಡೆದಿದೆ ಎಂದು ಈ ಹಿಂದೆ ವರದಿಯಾಗಿತ್ತು. ಸುಪ್ರೀಂ ಕೋರ್ಟ್ ನೇಮಿಸಿದ ಆಡಳಿತ ಸಮಿತಿ ಜನವರಿ 8 ರಂದು ನವದೆಹಲಿಯಲ್ಲಿ ಈ ಬಾರಿ ಐಪಿಎಲ್ ಪಂದ್ಯಾಟವನ್ನು ಎಲ್ಲಿ ನಡೆಸಬೇಕು ಎನ್ನುವುದರ ಬಗ್ಗೆ ಸಭೆ ನಡೆಸಿತ್ತು ಅಂತಿಮವಾಗಿ ಭಾರತದಲ್ಲೇ ಟೂರ್ನಿ ನಡೆಸಲು ತೀರ್ಮಾನ ತೆಗೆದುಕೊಂಡಿತ್ತು.

    2009ರ ಲೋಕಸಭಾ ಚುನಾವಣೆಯ ಸಮಯದಲ್ಲಿ ದಕ್ಷಿಣ ಆಫ್ರಿಕಾದಲ್ಲಿ ಎಲ್ಲ ಪಂದ್ಯಗಳು ನಡೆದಿತ್ತು. 2014ರಲ್ಲಿ ಏಪ್ರಿಲ್ 16 ರಿಂದ ಏಪ್ರಿಲ್ 30ರ ವರೆಗಿನ ಪಂದ್ಯಗಳು ದುಬೈ, ಅಬುದಾಬಿ, ಶಾರ್ಜಾದಲ್ಲಿ ನಡೆದಿದ್ದರೆ ನಂತರ ಜೂನ್ 1ರವರೆಗಿನ ಪಂದ್ಯಗಳು ಭಾರತದಲ್ಲಿ ನಡೆದಿತ್ತು. ಚುನಾವಣಾ ಆಯೋಗ ಈಗಾಗಲೇ ರಾಜಕೀಯ ಪಕ್ಷಗಳ ಜೊತೆ ಸಭೆ ನಡೆಸಿದ್ದು, ಏಪ್ರಿಲ್ ಎರಡನೇ ವಾರ ಮೊದಲ ಹಂತದ ಚುನಾವಣೆ ನಡೆಯುವ ಸಾಧ್ಯತೆಯಿದೆ. 2014ರಲ್ಲಿ ಏಪ್ರಿಲ್ 7 ರಿಂದ ಆರಂಭಗೊಂಡು ಮೇ 12 ರವರೆಗೆ ಒಟ್ಟು 9 ಹಂತಗಳಲ್ಲಿ ಚುನಾವಣೆ ನಡೆದು ಮೇ 16 ರಂದು ಫಲಿತಾಂಶ ಪ್ರಕಟವಾಗಿತ್ತು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ದ್ವಿತೀಯ ಪಿಯು ಪರೀಕ್ಷಾ ವೇಳಾಪಟ್ಟಿ ಪ್ರಕಟ

    ದ್ವಿತೀಯ ಪಿಯು ಪರೀಕ್ಷಾ ವೇಳಾಪಟ್ಟಿ ಪ್ರಕಟ

    ಬೆಂಗಳೂರು: 2018-19ನೇ ಸಾಲಿನ ದ್ವಿತೀಯ ಪಿಯು ವೇಳಾಪಟ್ಟಿ ಪ್ರಕಟವಾಗಿದೆ. ಮಾರ್ಚ್ 1 ರಿಂದ 18 ವರೆಗೆ ಪರೀಕ್ಷೆಗಳು ನಡೆಯಲಿವೆ. ಇಂದು ಪಿಯು ಬೋರ್ಡ್ ವೇಳಾಪಟ್ಟಿಯನ್ನು ಪ್ರಕಟಗೊಳಿಸಿದೆ.

    ವೇಳಾಪಟ್ಟಿ ಹೇಗಿದೆ:
    ಮಾರ್ಚ್ 1 – ಅರ್ಥಶಾಸ್ತ್ರ, ಭೌತಶಾಸ್ತ್ರ, ಮಾರ್ಚ್ 2 – ಎನ್.ಎಸ್.ಕ್ಯೂ.ಎಫ್, ಮಾರ್ಚ್ 5 – ತಮಿಳು, ತೆಲುಗು, ಮಲೆಯಾಳಂ, ಮರಾಠಿ, ಅರೇಬಿಕ್, ಫ್ರೆಂಚ್, ಮಾರ್ಚ್ 06 – ತರ್ಕಶಾಸ್ತ್ರ, ಭೂಗರ್ಭ ಶಾಸ್ತ್ರ, ಶಿಕ್ಷಣ, ಗೃಹವಿಜ್ಞಾನ, ಮಾರ್ಚ್ 07 – ಐಚ್ಛಿಕ ಕನ್ನಡ, ಲೆಕ್ಕಶಾಸ್ತ್ರ, ಗಣಿತ, ಮಾರ್ಚ್ 8- ಉರ್ದು, ಸಂಸ್ಕೃತ, ಮಾರ್ಚ್ 9- ರಾಜ್ಯಶಾಸ್ತ್ರ, ಸಂಖ್ಯಾಶಾಸ್ತ್ರ, ಮಾರ್ಚ್ 11- ವ್ಯವಹಾರ ಅಧ್ಯಾಯನ, ಸಮಾಜಶಾಸ್ತ್ರ, ರಸಾಯನಶಾಸ್ತ್ರ, ಮಾರ್ಚ್ 12- ಭೂಗೋಳ ಶಾಸ್ತ್ರ, ಕರ್ನಾಟಕ ಸಂಗೀತ, ಹಿಂದೂಸ್ತಾನಿ ಸಂಗೀತ, ಮಾರ್ಚ್ 13 – ಮನಃಶಾಸ್ತ್ರ, ಎಲೆಕ್ಟ್ರಾನಿಕ್ಸ್, ಗಣಕ ವಿಜ್ಞಾನ, ಮಾರ್ಚ್ 14- ಇತಿಹಾಸ, ಜೀವಶಾಸ್ತ್ರ, ಬೇಸಿಕ್ ಮ್ಯಾಥ್ಸ್, ಮಾರ್ಚ್ 15- ಹಿಂದಿ, ಮಾರ್ಚ್ 16- ಕನ್ನಡ, ಮಾರ್ಚ್ 18 – ಇಂಗ್ಲೀಷ್

    ಬಹುದಿನಗಳಿಂದ ವಿದ್ಯಾರ್ಥಿಗಳು ಪರೀಕ್ಷೆಯ ವೇಳಾಪಟ್ಟಿಗೆ ಕಾಯುತ್ತಿದ್ದರು. ಪರೀಕ್ಷಾ ಸಮಯ ಲಭ್ಯವಾಗಿದ್ದು, ಸಮಯಕ್ಕನುಗುಣವಾಗಿ ಅಭ್ಯಾಸದಲ್ಲಿ ತೊಡಗಿಕೊಳ್ಳಬೇಕಿದೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ಮಹಿಳಾ ಕಂಡಕ್ಟರ್‌ಗಳ ಅರ್ಧ ಗಂಟೆ ಬೀದಿ ರಂಪಾಟ- ವಿಡಿಯೋ ವೈರಲ್

    ಮಹಿಳಾ ಕಂಡಕ್ಟರ್‌ಗಳ ಅರ್ಧ ಗಂಟೆ ಬೀದಿ ರಂಪಾಟ- ವಿಡಿಯೋ ವೈರಲ್

    ಗದಗ: ಪಾಳಿ ವಿಷಯಕ್ಕೆ ಸಂಬಂಧಪಟ್ಟಂತೆ ಇಬ್ಬರು ಮಹಿಳಾ ಕಂಡಕ್ಟರ್‌ಗಳು  ಬೀದಿ ರಂಪಾಟ ಮಾಡಿಕೊಂಡ ಘಟನೆ ಗದಗನ ಜಿಮ್ಸ್ ಆಸ್ಪತ್ರೆಯ ಆವರಣದಲ್ಲಿ ನಡೆದಿದೆ.

    ಕಳೆದ ಎರಡು ದಿನಗಳ ಹಿಂದೆ ನಡೆದ ಈ ಬೀದಿ ರಂಪಾಟದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಫುಲ್ ವೈರಲ್ ಆಗಿದ್ದು ಸಾರ್ವಜನಿಕರ ಚರ್ಚೆಗೆ ಎಡೆ ಮಾಡಿಕೊಟ್ಟಿದೆ. ನಗರ ಸಾರಿಗೆಯ ಇಬ್ಬರು ನಿರ್ವಾಹಕಿಯರು ಪಾಳಿಯ ವಿಷಯಕ್ಕೆ ಬಾಯಿಗೆ ಬಂದಂತೆ ಅವಾಚ್ಯ ಪದಗಳನ್ನು ಬಳಸಿ ಬೈದಾಡಿಕೊಂಡಿದ್ದಾರೆ. ಸುಮಾರು ಅರ್ಧ ಗಂಟೆಗೂ ಹೆಚ್ಚು ಕಾಲ ಕಿತ್ತಾಡಿಕೊಂಡ ಮಹಿಳಾ ಕಂಡಕ್ಟರ್‌ಗಳ ಈ ಬೀದಿ ರಂಪಾಟಕ್ಕೆ ಸಾರ್ವಜನಿಕರು ಆಕ್ರೋಶ ವ್ಯಕ್ತ ಪಡಿಸಿದ್ದಾರೆ.

    ಅಷ್ಟೇ ಅಲ್ಲದೆ ಎರಡು ಬಸ್ಸುಗಳಲ್ಲಿ ಇದ್ದ ಪ್ರಯಾಣಿಕರು ಯಾಕಾದರೂ ಈ ಸರ್ಕಾರಿ ಬಸ್ ಏರಿದೆ ಅಂತ ಕಿಡಿಕಾರಿದ್ದಾರೆ. ನಿರ್ವಾಹಕಿಯರ ಹಾದಿ ರಂಪಾಟ ನೋಡಿದ ಮೇಲಾಧಿಕಾರಿಗಳು ಇಬ್ಬರಿಗೂ ಕ್ಲಾಸ್ ತೆಗೆದುಕೊಂಡು ಎಚ್ಚರಿಕೆ ನೀಡಿ ಕಳುಹಿಸಿದ್ದಾರೆ ಎಂದು ಮಾಹಿತಿ ಮೂಲಗಳಿಂದ ತಿಳಿದುಬಂದಿದೆ.

    https://www.youtube.com/watch?v=efo0zDEVT-w

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ಗಮನಿಸಿ, ದ್ವಿತೀಯ ಪಿಯುಸಿ ಪೂರಕ ಪರೀಕ್ಷೆ ವೇಳಾಪಟ್ಟಿ ಬದಲಾವಣೆ

    ಗಮನಿಸಿ, ದ್ವಿತೀಯ ಪಿಯುಸಿ ಪೂರಕ ಪರೀಕ್ಷೆ ವೇಳಾಪಟ್ಟಿ ಬದಲಾವಣೆ

    ಬೆಂಗಳೂರು: ಜೂನ್ 8 ರಿಂದ ನಡೆಯಬೇಕಿದ್ದ ಪೂರಕ ಪರೀಕ್ಷೆಗಳ ದಿನಾಂಕ ಬದಲಾವಣೆಯಾಗಿದ್ದು, ಪರಿಷ್ಕೃತ ವೇಳಾಪಟ್ಟಿಯನ್ನು ಪಿಯು ಮಂಡಳಿ ತನ್ನ ವೆಬ್‍ಸೈಟ್ ನಲ್ಲಿ ಪ್ರಕಟಿಸಿದೆ.

    ಈ ಕುರಿತು ಪಿಯು ಬೋರ್ಡ್ ನಿರ್ದೇಶಕಿ ಶಿಖಾ ಅವರು ಆದೇಶ ನೀಡಿದ್ದು, ಬೆಂಗಳೂರು ನಗರದ ಜಯನಗರ ಕ್ಷೇತ್ರದ ವಿಧಾನಸಭಾ ಚುನಾವಣೆ ಹಾಗೂ ಪರಿಷತ್ ಚುನಾವಣೆ ಹಿನ್ನೆಲೆ ವೇಳಾಪಟ್ಟಿ ಬದಲಾವಣೆ ಮಾಡಲಾಗಿದೆ ಎಂದು ತಿಳಿಸಿದ್ದಾರೆ.

    ಈ ಹಿಂದೆ ಜೂನ್ 8 ರಿಂದ ಪೂರಕ ಪರೀಕ್ಷೆ ದಿನಾಂಕ ನಿಗದಿಯಾಗಿತ್ತು. ಆದರೆ ಚುನಾವಣೆಗಳು ಹಾಗೂ ಎಸ್‍ಎಸ್‍ಎಲ್‍ಸಿ ಪೂರಕ ಪರೀಕ್ಷೆ ಹಿನ್ನೆಲೆಯಲ್ಲಿ ವೇಳಾಪಟ್ಟಿ ಬದಲಾವಣೆ ಮಾಡಲಾಗಿದೆ. ಪರಿಷ್ಕೃತ ವೇಳಾಪಟ್ಟಿಯಂತೆ ಜೂನ್ 29 ರಿಂದ ದ್ವೀತಿಯ ಪಿಯುಸಿ ಪೂರಕ ಪರೀಕ್ಷೆ ಪ್ರಾರಂಭವಾಗಲಿದೆ.

    ವೇಳಾಪಟ್ಟಿಗಾಗಿ ಇಲ್ಲಿ ಕ್ಲಿಕ್ ಮಾಡಿ: http://pue.kar.nic.in/