Tag: school bus

  • ಖಾಸಗಿ ಸ್ಕೂಲ್ ಬಸ್, ಟಂಟಂ ರಿಕ್ಷಾ ಡಿಕ್ಕಿ – ಓರ್ವ ಸಾವು

    ಖಾಸಗಿ ಸ್ಕೂಲ್ ಬಸ್, ಟಂಟಂ ರಿಕ್ಷಾ ಡಿಕ್ಕಿ – ಓರ್ವ ಸಾವು

    ಹಾವೇರಿ: ಖಾಸಗಿ ಸ್ಕೂಲ್ ಬಸ್ ಮತ್ತು ಟಂಟಂ ರಿಕ್ಷಾ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ ಓರ್ವ ಸ್ಥಳದಲ್ಲೇ ಮೃತಪಟ್ಟು ಇಬ್ಬರು ಗಾಯಗೊಂಡ ಘಟನೆ ಹಾವೇರಿ ಜಿಲ್ಲೆ ರಾಣೇಬೆನ್ನೂರು ತಾಲೂಕಿನ ಅರೇಮಲ್ಲಾಪುರ ಗ್ರಾಮದ ಬಳಿ ನಡೆದಿದೆ.

    ಮೃತನನ್ನ ರಿಕ್ಷಾ ಚಾಲಕ ಮೂವತ್ತೆರಡು ವರ್ಷ ವಯಸ್ಸಿನ ಬೀರಪ್ಪ ಹೂಲಿಕಟ್ಟಿ ಎಂದು ಗುರುತಿಸಲಾಗಿದೆ. ರಿಕ್ಷಾದಲ್ಲಿ ಕುಳಿತಿದ್ದ ಅರವತ್ತು ನಾಲ್ಕು ವರ್ಷದ ಪರಸಪ್ಪ ಮತ್ತು ಮೂವತ್ತೇಳು ವರ್ಷದ ನಿಂಗಪ್ಪ ಎಂಬುವರು ಘಟನೆಯಲ್ಲಿ ಗಾಯಗೊಂಡಿದ್ದಾರೆ. ಗಾಯಾಳುಗಳನ್ನ ತಾಲೂಕು ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ.

    ಸ್ಕೂಲ್ ಬಸ್ ನಲ್ಲಿ ವಿದ್ಯಾರ್ಥಿಗಳು ಯಾರು ಇರಲಿಲ್ಲ. ರಾಣೇಬೆನ್ನೂರು ಗ್ರಾಮೀಣ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಪ್ರಕರಣ ನಡೆದಿದೆ.

  • 40ಕ್ಕೂ ಹೆಚ್ಚು ಮಕ್ಕಳಿದ್ದ ಶಾಲಾ ಬಸ್ ಪಲ್ಟಿ- ಓರ್ವ ಸಾವು

    40ಕ್ಕೂ ಹೆಚ್ಚು ಮಕ್ಕಳಿದ್ದ ಶಾಲಾ ಬಸ್ ಪಲ್ಟಿ- ಓರ್ವ ಸಾವು

    ಮಂಡ್ಯ: ಬೆಳಗ್ಗೆ 40ಕ್ಕೂ ಹೆಚ್ಚು ಮಂದಿ ವಿದ್ಯಾರ್ಥಿಗಳು ಪ್ರಯಾಣಿಸುತ್ತಿದ್ದ ಶಾಲಾ ಬಸ್ ಅಯತಪ್ಪಿ ಹಳ್ಳಕ್ಕೆ ಬಿದ್ದಿದ್ದು, ಎದುರಿನಿಂದ ಬರುತ್ತಿದ್ದ ಸ್ಕೂಟಿ ಸವಾರ ಬಸ್ಸಿಗೆ ಗುದ್ದಿ ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಮದ್ದೂರು ತಾಲೂಕಿನ ಕೆ.ಹೊನ್ನಲಗೆರೆ ಗ್ರಾಮದ ಹೊರವಲಯದಲ್ಲಿ ನಡೆದಿದೆ.

    ಮದ್ದೂರು ಆರ್.ಕೆ ವಿದ್ಯಾ ಸಂಸ್ಥೆಯ ಶಾಲಾ ಬಸ್ ಹಳ್ಳಕ್ಕೆ ಬಿದ್ದಿದೆ. ಮಕ್ಕಳನ್ನು ಶಾಲೆಗೆ ಕರೆದೊಯ್ಯುತ್ತಿದ್ದ ಬಸ್ಸಿನಲ್ಲಿ 40ಕ್ಕೂ ಹೆಚ್ಚು ವಿದ್ಯಾರ್ಥಿಗಳು ಪ್ರಯಾಣಿಸುತ್ತಿದ್ದರು. ಈ ವೇಳೆ ಅಯತಪ್ಪಿ ಬಸ್ ಹಳ್ಳಕ್ಕೆ ಬಿದ್ದಿದೆ. ಅಪಘಾತದಲ್ಲಿ ಮಕ್ಕಳಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಅವರನ್ನು ಮದ್ದೂರು ಸರ್ಕಾರಿ ಆಸ್ಪತ್ರೆಗೆ ಚಿಕಿತ್ಸೆಗೆಂದು ರವಾನಿಸಲಾಗಿದೆ.

    ಇದೇ ಸಂದರ್ಭದಲ್ಲಿ ಸ್ಕೂಟಿಯಲ್ಲಿ ಬರುತ್ತಿದ್ದ ವ್ಯಕ್ತಿಯೊರ್ವ ಬಸ್ಸಿಗೆ ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲಿಯೇ ಮೃತಪಟ್ಟಿದ್ದಾನೆ. ಡಿ.ಹೊಸುರು ಗ್ರಾಮದ ಕರಿಯಪ್ಪ ಅವರ ಪುತ್ರ ಮಧು(21) ಮೃತಪಟ್ಟ ದುರ್ದೈವಿ. ಬೆಳಗ್ಗೆ ಮಗುವನ್ನು ಸ್ಕೂಟಿಯಲ್ಲಿ ಶಾಲೆಗೆ ಬಿಟ್ಟು ಬರುತ್ತಿದ್ದ ವೇಳೆ ಈ ಅಪಘಾತವಾಗಿ ಸಾವನ್ನಪ್ಪಿದ್ದಾನೆ.

    ಸದ್ಯ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿದ್ದು, ಕೆ. ಹೊನ್ನಲಗೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv ಮತ್ತು Live  ವೀಕ್ಷಿಸಲು  ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್  ಮಾಡಿ: play.google.com/publictv

  • ಶಾಲಾ ಬಸ್ಸಿನೊಳಗೆ ನುಗ್ಗಿ ಅವಳಿ ಮಕ್ಕಳ ಕಿಡ್ನಾಪ್ – ನದಿಯಲ್ಲಿ ಶವವಾಗಿ ಪತ್ತೆ

    ಶಾಲಾ ಬಸ್ಸಿನೊಳಗೆ ನುಗ್ಗಿ ಅವಳಿ ಮಕ್ಕಳ ಕಿಡ್ನಾಪ್ – ನದಿಯಲ್ಲಿ ಶವವಾಗಿ ಪತ್ತೆ

    ಭೋಪಾಲ್: ಫೆಬ್ರವರಿ 12 ರಂದು ಶಾಲಾ ಬಸ್ಸಿಗೆ ನುಗ್ಗಿ ದುಷ್ಕರ್ಮಿಗಳು ಉದ್ಯಮಿಯೊಬ್ಬರ 6 ವರ್ಷದ ಅವಳಿ ಮಕ್ಕಳನ್ನು ಕಿಡ್ನಾಪ್ ಮಾಡಿದ್ದರು. ಈಗ ಆ ಮಕ್ಕಳು ಶವವಾಗಿ ಪತ್ತೆಯಾಗಿರುವ ಘಟನೆ ಮಧ್ಯ ಪ್ರದೇಶದಲ್ಲಿ ನಡೆದಿದೆ.

    ಉತ್ತರ ಪ್ರದೇಶದ ಬಂಡಾದಲ್ಲಿರುವ ಯಮುನಾ ನದಿಯೊಂದರಲ್ಲಿ ಶವವಾಗಿ ಮಕ್ಕಳು ಪತ್ತೆಯಾಗಿದ್ದಾರೆ. ಈ ಸಂಬಂಧ ಆರು ಆರೋಪಿಗಳನ್ನು ಬಂಧಿಸಲಾಗಿದ್ದು, ಆರೋಪಿಗಳನ್ನು ಪದ್ಮ್ ಶುಕ್ಲಾ, ರಾಮ್ಕೇಶ್, ಪಿಂಟ ಯಾದವ್, ರಾಕೇಶ್ ದ್ವಿವೇದಿ, ಅಲೋಕ್ ಸಿಂಗ್ ಮತ್ತು ವಿಕ್ರಮಿಜಿತ್ ಸಿಂಗ್ ಎಂದು ಗುರುತಿಸಲಾಗಿದೆ. ಇಬ್ಬರು ಮಕ್ಕಳನ್ನು ಕಲ್ಲಿಗೆ ಕಟ್ಟಿಗೆ ನದಿಗೆ ಎಸೆದಿದ್ದಾರೆ. ಶವಗಳು ನದಿಯ ಮೇಲೆ ತೇಲಿ ಬಂದಾಗ ಪತ್ತೆಯಾಗಿವೆ ಎಂದು ಹಿರಿಯ ಪೊಲೀಸ್ ಅಧಿಕಾರಿ ಚಂಚಲ್ ಶೇಖರ್ ತಿಳಿಸಿದ್ದಾರೆ.

    ಅಪಹರಿಸಿದ್ದು ಹೇಗೆ?
    ಫೆಬ್ರವರಿ 12 ರಂದು ಚಿತ್ರಕೂಟದಲ್ಲಿ ಶಾಲಾ ಬಸ್ಸಿಗೆ ಇಬ್ಬರು ಮುಸುಕುಧಾರಿ ಪುರುಷರು ಬಂದೂಕುಗಳನ್ನು ಹಿಡಿದುಕೊಂಡು ನುಗ್ಗಿದ್ದಾರೆ. ಬಳಿಕ ಗನ್ ತೋರಿಸಿ ತೈಲ ಉದ್ಯಮಿ ಬ್ರಿಜೇಶ್ ರಾವತ್ ಎಂಬವರ ಇಬ್ಬರು ಮಕ್ಕಳನ್ನು ಅಪಹರಿಸಿಕೊಂಡು ಹೋಗಿದ್ದರು. ಮಕ್ಕಳನ್ನು ಕಿಡ್ನಾಪ್ ಮಾಡಿರುವ ದೃಶ್ಯ ಶಾಲೆಯ ಬಸ್ಸಿನಲ್ಲಿದ್ದ ಕ್ಯಾಮೆರಾದಲ್ಲಿ ಸೆರೆಯಾಗಿದ್ದು, ಅದರಲ್ಲಿ ಇಬ್ಬರು ಬಂದೂಕು ಹಿಡಿದಿದ್ದು, ಹಳದಿ ಬಟ್ಟೆಯಿಂದ ಮುಖವನ್ನು ಮುಚ್ಚಿಕೊಂಡಿರುವುದನ್ನು ಕಾಣಬಹುದಾಗಿದೆ ಎಂದು ಮಧ್ಯಪ್ರದೇಶ ಪೊಲೀಸರು ತಿಳಿಸಿದ್ದಾರೆ.

    ಆರೋಪಿಗಳು ಉದ್ಯಮಿಯಿಂದ ದೊಡ್ಡ ಮೊತ್ತದ ಹಣವನ್ನು ಪಡೆದುಕೊಳ್ಳಲು ಕಿಡ್ನಾಪ್ ಮಾಡಿದ್ದರು. ಈ ಕುರಿತು ಪ್ರಕರಣ ದಾಖಲಿಸಿಕೊಂಡಿದ್ದ ಮಧ್ಯಪ್ರದೇಶ ಪೊಲೀಸರು ಅಪಹರಣಕಾರರನ್ನು ಪತ್ತೆಹಚ್ಚಲು ಸಹಾಯ ಮಾಡುವರಿಗೆ 50 ಸಾವಿರ ರೂ. ಬಹುಮಾನ ನೀಡುವುದಾಗಿ ಫೋಷಣೆ ಮಾಡಿದ್ದರು. ಅಪಹರಣದ ನಂತರ “ಬಬುಲಿ ಕೋಲ್” ಎಂದು ಕರೆಯಲ್ಪಡುವ ಗ್ಯಾಂಗ್ ಮಕ್ಕಳನ್ನು ಅರಣ್ಯಕ್ಕೆ ಕರೆದುಕೊಂಡು ಹೋಗಿರಬಹುದೆಂದು ಪೊಲೀಸರು ಶಂಕಿಸಿದ್ದರು.

    ಅವಳಿ ಮಕ್ಕಳ ಕಿಡ್ನಾಪ್ ಹತ್ಯೆಯನ್ನು ಖಂಡಿಸಿ ಚಿತ್ರಕೂಟದಲ್ಲಿ ಜನರು ಪ್ರತಿಭಟನೆ ಮಾಡಿದ್ದಾರೆ. ಮಕ್ಕಳ ಸಾವಿನ ಸುದ್ದಿ ಬಂದಾಗ ಸ್ಥಳೀಯರು ಅಂಗಡಿಗಳು ಮತ್ತು ಇತರ ವ್ಯಾಪಾರದ ಅಂಗಡಿಯನ್ನು ಮುಚ್ಚುವಂತೆ ಒತ್ತಾಯಿಸಿದ್ದರು. ಸದ್ಯಕ್ಕೆ ಈ ಕುರಿತು ಆರು ಆರೋಪಿಗಳನ್ನು ಬಂಧಿಸಿ ವಿಚಾರಣೆ ಮುಂದುವರಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

    ಹಾಡಹಗಲೇ ಇಬ್ಬರನ್ನು ಮಕ್ಕಳನ್ನು ಅಪಹರಣ ಮಾಡಿರುವುದು ಜನರನ್ನು ಆಘಾತಗೊಳ್ಳುವಂತೆ ಮಾಡಿದೆ. ಮಕ್ಕಳು ಪ್ರತಿ ದಿನ ಶಾಲೆಗೆ 4 ಕಿ.ಮೀ. ಪ್ರಯಾಣಿಸುತ್ತಿದ್ದರು ಎಂದು ಪೊಲೀಸ್ ಅಧಿಕಾರಿ ಸಂತೋಷ್ ಸಿಂಗ್ ಗೌರ್ ಹೇಳಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ಶಾಲಾ ಬಸ್‍ಗೆ ಮತ್ತೊಂದು ಬಸ್ ಡಿಕ್ಕಿ- 12 ವಿದ್ಯಾರ್ಥಿಗಳಿಗೆ ಗಾಯ, ಓರ್ವನ ಕಾಲು ಮುರಿತ

    ಶಾಲಾ ಬಸ್‍ಗೆ ಮತ್ತೊಂದು ಬಸ್ ಡಿಕ್ಕಿ- 12 ವಿದ್ಯಾರ್ಥಿಗಳಿಗೆ ಗಾಯ, ಓರ್ವನ ಕಾಲು ಮುರಿತ

    ಬೆಂಗಳೂರು: ಶಾಲಾ ಬಸ್‍ಗೆ ಮತ್ತೊಂದು ಬಸ್ ಡಿಕ್ಕಿ ಹೊಡೆದ ಪರಿಣಾಮ ವಿದ್ಯಾರ್ಥಿಯೊಬ್ಬನ ಕಾಲು ಮುರಿದ ಘಟನೆ ಬೆಂಗಳೂರಿನ ಬಾಗಲೂರು ಸಂತೆ ಬಳಿ ನಡೆದಿದೆ.

    ನಾಗಾರ್ಜುನ ಕಾಲೇಜ್ ಬಸ್‍ಗೆ ಡೆಲ್ಲಿ ಪಬ್ಲಿಕ್ ಸ್ಕೂಲ್ ಬಸ್ ಡಿಕ್ಕಿ ಹೊಡೆದಿದೆ. ಪರಿಣಾಮ ಕಾಲೇಜ್‍ನ 13 ಮಂದಿ ವಿದ್ಯಾರ್ಥಿಗಳಿಗೆ ಗಂಭೀರ ಗಾಯವಾಗಿದೆ. ಕುಡಿದ ಮತ್ತಿನಲ್ಲಿ ಡೆಲ್ಲಿ ಪಬ್ಲಿಕ್ ಸ್ಕೂಲ್ ಬಸ್ ನ ಚಾಲಕ ಸ್ಕೂಲ್ ಬಸ್ ಚಲಾಯಿಸಿದ್ದೇ ಘಟನೆ ಕಾರಣ ಎಂದು ಹೇಳಲಾಗುತ್ತಿದೆ.

    ಡೆಲ್ಲಿ ಪಬ್ಲಿಕ್ ಸ್ಕೂಲ್ ಬಸ್ ಮೊದಲಿಗೆ ರಸ್ತೆ ಪಕ್ಕದಲ್ಲಿ ನಿಂತಿದ್ದ ನಾಗಾರ್ಜುನ ಕಾಲೇಜ್ ಬಸ್‍ಗೆ ಡಿಕ್ಕಿ ಹೊಡೆದಿದೆ. ನಂತರ ಟ್ರಾನ್ಸ್‍ಫಾರ್ಮರ್ ಗೆ ಡಿಕ್ಕಿ ಹೊಡೆದಿದೆ. ಈ ಘಟನೆಯಲ್ಲಿ ನಿತೀಶ್ ಎನ್ನುವ ವಿದ್ಯಾರ್ಥಿಯ ಕಾಲು ಮುರಿದಿದೆ ಹಾಗೂ ಸಂಜಯ್ ಎನ್ನುವ ವಿದ್ಯಾರ್ಥಿಗೆ ಆರು ಸ್ಟಿಚ್ ಹಾಕಲಾಗಿದೆ.

     

    ಅಪಘಾತ ಮಾಡಿದ ನಂತರ ಡೆಲ್ಲಿ ಪಬ್ಲಿಕ್ ಸ್ಕೂಲ್ ಚಾಲಕ ಸ್ಥಳದಿಂದ ಎಸ್ಕೇಪ್ ಆಗಿದ್ದಾನೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • 12 ಮಂದಿ ವಿದ್ಯಾರ್ಥಿಗಳಿದ್ದ ಶಾಲಾ ಬಸ್ ಪಲ್ಟಿ

    12 ಮಂದಿ ವಿದ್ಯಾರ್ಥಿಗಳಿದ್ದ ಶಾಲಾ ಬಸ್ ಪಲ್ಟಿ

    ಗದಗ: ಸ್ಟೇರಿಂಗ್ ಕಟ್ಟಾದ ಪರಿಣಾಮ ಶಾಲಾ ಮಕ್ಕಳಿದ್ದ ಶಾಲಾ ಬಸ್ ಪಲ್ಟಿಯಾಗಿರುವ ಘಟನೆ ಗದಗ ತಾಲೂಕಿನ ಕಲ್ಲೂರ ಗ್ರಾಮದ ಬಳಿ ನಡೆದಿದೆ.

    ಗದಗ ತಾಲೂಕಿನ ಹೊಸಳ್ಳಿಯ ಬೂದಿಶ್ವರ ವಿದ್ಯಾಪೀಠಕ್ಕೆ ಸೇರಿದ ಶಾಲಾ ಬಸ್ ಇದಾಗಿದ್ದು, ಶಾಲೆಗೆ ಮಕ್ಕಳನ್ನು ಕರೆದುಕೊಂಡು ಹೋಗುವ ಸಂದರ್ಭದಲ್ಲಿ ಈ ಅಪಘಡ ಸಂಭವಿಸಿದೆ. ಸದ್ಯಕ್ಕೆ ಬಸ್ ಅಪಘಾತದಿಂದ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ.

    ಈ ಬಸ್ ಕಲ್ಲೂರು, ಚಿಂಚಲಿ, ಅಂತೂರ, ಬೆಂತೂರ ಗ್ರಾಮದ ಮಕ್ಕಳನ್ನ ಶಾಲೆಗೆ ಕರೆದುಕೊಂಡು ಹೋಗುತ್ತಿತ್ತು. ಎಂದಿನಂತೆ ಇಂದು ಕೂಡ ಬಸ್ ಮೊದಲಿಗೆ ಒಂದು ಗ್ರಾಮದ ಮಕ್ಕಳನ್ನು ಕರೆದುಕೊಂಡು ಇನ್ನೊಂದು ಗ್ರಾಮಕ್ಕೆ ಹೋಗುತ್ತಿತ್ತು. ಈ ವೇಳೆ ಸ್ಟೇರಿಂಗ್ ಕಟ್ಟಾಗಿ ಚಾಲಕನ ಜಾಗರೂಕತೆಯಿಂದ ಕಲ್ಲೂರ ಗ್ರಾಮದ ಬಳಿ ಬಸ್ ರಸ್ತೆ ಪಕ್ಕದಲ್ಲಿ ಪಲ್ಟಿಯಾಗಿದೆ.

    ಈ ಅಪಘಾತದಲ್ಲಿ ಮಕ್ಕಳಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಯಾವುದೇ ರೀತಿಯ ಅಪಾಯ ಸಂಭವಿಸಿಲ್ಲ. ಬಸ್ಸಿನಲ್ಲಿ 12 ವಿದ್ಯಾರ್ಥಿಗಳು ಇದ್ದರು. ಸದ್ಯಕ್ಕೆ ಗಾಯಗೊಂಡ ಮಕ್ಕಳನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗಿದೆ.

    ಈ ಘಟನೆ ಗದಗ ಗ್ರಾಮೀಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ಶಾಲಾ ಬಸ್ಸಿಗೆ ಹಿಂಬದಿಯಿಂದ ಲಾರಿ ಡಿಕ್ಕಿ- ಕ್ಷಣಾರ್ಧದಲ್ಲಿ ತಪ್ಪಿತು ಭಾರೀ ಅನಾಹುತ

    ಶಾಲಾ ಬಸ್ಸಿಗೆ ಹಿಂಬದಿಯಿಂದ ಲಾರಿ ಡಿಕ್ಕಿ- ಕ್ಷಣಾರ್ಧದಲ್ಲಿ ತಪ್ಪಿತು ಭಾರೀ ಅನಾಹುತ

    ಬಾಗಲಕೋಟೆ: ನಗರದ ಮುಚಖಂಡಿ ಕ್ರಾಸ್‍ನಲ್ಲಿ ಲಾರಿಯೊಂದು ಶಾಲಾ ಬಸ್‍ಗೆ ಡಿಕ್ಕಿ ಹೊಡೆದ ಪರಿಣಾಮ ಬಸ್ಸು ಟಂಟಂಗೆ ಡಿಕ್ಕಿ ಹೊಡೆದಿದೆ. ಅದೃಷ್ಟವಶಾತ್ ಬಸ್ಸಿನಲ್ಲಿ ಇದ್ದ ಶಾಲಾ ವಿದ್ಯಾರ್ಥಿಗಳು ಪ್ರಾಣಾಪಾಯದಿಂದ ಪಾರಾಗಿದ್ದಾರೆ.

    ಬೆಳಂಬೆಳಗ್ಗೆ ನಗರದ ವಿದ್ಯಾಗಿರಿಯ ಲಯನ್ಸ್ ಆಂಗ್ಲಮಾಧ್ಯಮ ಶಾಲಾ ವಿದ್ಯಾರ್ಥಿಗಳು ಇದ್ದ ಶಾಲಾ ಬಸ್ಸಿಗೆ ಹಿಂಬದಿಯಿಂದ ಬಂದ ಲಾರಿಯೊಂದು ಡಿಕ್ಕಿ ಹೊಡೆದಿದೆ. ಲಾರಿ ಡಿಕ್ಕಿ ಹೊಡೆದ ರಭಸಕ್ಕೆ ಬಸ್ಸು ಪಕ್ಕದಲ್ಲಿ ಚಲಿಸುತ್ತಿದ್ದ ಟಂಟಂಗೆ ಡಿಕ್ಕಿ ಹೊಡೆದಿದೆ. ತಕ್ಷಣ ಚಾಲಕ ಬಸ್ಸನ್ನು ನಿಲ್ಲಿಸಿದ್ದಾನೆ. ಚಾಲಕನ ಸಮಯ ಪ್ರಜ್ಞೆಯಿಂದ ಭಾರೀ ಅನಾಹುತದಿಂದ ವಿದ್ಯಾರ್ಥಿಗಳು ಪಾರಾಗಿದ್ದಾರೆ.

    ಘಟನಾ ಸ್ಥಳಕ್ಕೆ ಬಾಗಲಕೋಟೆ ಸಂಚಾರಿ ಪೋಲಿಸರು ಭೇಟಿ ನೀಡಿ ಪರಿಶೀಲನೆ ನಡೆಸಿ, ನಂತರ ಸುರಕ್ಷಿತವಾಗಿ ವಿದ್ಯಾರ್ಥಿಗಳನ್ನು ಶಾಲೆಗೆ ಕಳುಹಿಸಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv
    ಪಬ್ಲಿಕ್ ಟಿವಿ ಆಪ್ ಡೌನ್ ಲೋಡ್ ಮಾಡಿ: play.google.com/publictv
    ಯೂ ಟ್ಯೂಬ್‍ನಲ್ಲಿ ಪಬ್ಲಿಕ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿ: youtube.com/publictvnewskannada
    ಫೇಸ್‍ಬುಕ್‍ನಲ್ಲಿ ಪಬ್ಲಿಕ್ ಟಿವಿಯನ್ನು ಲೈಕ್ ಮಾಡಿ: facebook.com/publictv
    ಟ್ವಿಟ್ಟರ್‌ನಲ್ಲಿ ಪಬ್ಲಿಕ್ ಟಿವಿಯನ್ನು ಫಾಲೋ ಮಾಡಿ: twitter.com/publictvnews

  • ಮೂರೂವರೆ ವರ್ಷದ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ ಎಸಗಿದ ಶಾಲಾ ಬಸ್ ಚಾಲಕ!

    ಮೂರೂವರೆ ವರ್ಷದ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ ಎಸಗಿದ ಶಾಲಾ ಬಸ್ ಚಾಲಕ!

    ಲಕ್ನೋ: ಮೂರೂವರೆ ವರ್ಷದ ವಿದ್ಯಾರ್ಥಿನಿಯ ಮೇಲೆ ಶಾಲೆಯ ಬಸ್ ಚಾಲಕನೊಬ್ಬ ಅತ್ಯಾಚಾರ ಎಸಗಿದ ಘಟನೆ ಉತ್ತರ ಪ್ರದೇಶದ ಗ್ರೇಟರ್ ನೋಯ್ಡಾದಲ್ಲಿ ನಡೆದಿದೆ. ಚಾಲಕನ ವಿರುದ್ಧ ಯಾವುದೇ ಕ್ರಮ ಕೈಗೊಳ್ಳದೆ ಶಾಲೆಯ ಆಡಳಿತ ಮಂಡಳಿ ಅಮಾನವೀಯತೆ ಮೆರೆದಿದೆ.

    ಏನಿದು ಪ್ರಕರಣ?:
    ಸಂತ್ರಸ್ತ ಬಾಲಕಿ ನೋಯಿಡಾದ ಖಾಸಗಿ ಶಿಶುವಿಹಾರಕ್ಕೆ ಬಸ್‍ನಲ್ಲಿ ಹೋಗುತ್ತಿದ್ದಳು. ಎಂದಿನಂತೆ ಅಕ್ಟೋಬರ್ 9ರಂದು ಬಾಲಕಿ ಬಸ್‍ನಲ್ಲಿ ಮನೆಗೆ ಮರಳುತ್ತಿದ್ದಾಗ ಚಾಲಕ ಅತ್ಯಾಚಾರ ಎಸಗಿದ್ದಾನೆ. ಇದರಿಂದ ಗಾಬರಿಗೊಂಡಿದ್ದ ಬಾಲಕಿ ಬಸ್‍ನಿಂದ ಇಳಿದು, ಅಳುತ್ತಲೇ ತಂದೆಯನ್ನು ಸೇರಿಕೊಂಡಿದ್ದಾಳೆ ಎಂದು ಸಂತ್ರಸ್ತ ಬಾಲಕಿ ತಾಯಿ ಹೇಳಿದ್ದಾರೆ.

    ಮಗಳನ್ನು ಸಂತೈಸಿ ಕೇಳಿದಾಗ, ಚಾಲಕ ಎಸಗಿದ ಕೃತ್ಯ ವಿವರಿಸಿದ್ದಾಳೆ. ಅಷ್ಟೇ ಅಲ್ಲದೆ ಆತನು ವಿಡಿಯೋ ಮಾಡಿಕೊಂಡು, ಯಾರಿಗೂ ಹೇಳಬೇಡ ಅಂತಾ ಎಚ್ಚರಿಕೆ ನೀಡಿ, ಹಲ್ಲೆ ಮಾಡಿದ್ದಾನೆಂದು ಮಗಳು ಕಣ್ಣಿರಿಟ್ಟಿದ್ದಾಳೆ ಎಂದು ಸಂತ್ರಸ್ತ ಬಾಲಕಿ ಪೋಷಕರು ದೂರಿದ್ದಾರೆ.

    ಈ ಸಂಬಂಧ ಚಾಲಕನ ವಿರುದ್ಧ ಸೂಕ್ತ ಕ್ರಮಕೈಗೊಳ್ಳುವಂತೆ ಶಾಲೆಯ ಆಡಳಿತ ಮಂಡಳಿಗೆ ದೂರು ದಾಖಲಾಗಿತ್ತು. ಆದರೆ ಅವರು ಇಲ್ಲಿಯವರೆಗೂ ಯಾವುದೇ ಕ್ರಮಕೈಗೊಳ್ಳಲಿಲ್ಲ. ಹೀಗಾಗಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಸಂತ್ರಸ್ತ ಬಾಲಕಿ ಕುಟುಂಬಸ್ಥರು ಗುರುವಾರ ದೂರು ನೀಡಿದ್ದಾರೆ ಎಂದು ಗೌತಮ್ ಬುದ್ಧನಗರ ಗ್ರಾಮಾಂತರ ಪೊಲೀಸ್ ಅಧೀಕ್ಷಕ ವಿನೀತ್ ಜೈಸ್ವಾಲ್ ತಿಳಿಸಿದ್ದಾರೆ.

    ಈ ಸಂಬಂಧ ಚಾಲಕನ ವಿರುದ್ಧ ಪೊಕ್ಸೋ ಕಾಯ್ದೆ ಅಡಿ ಸುರಜ್‍ಪುರ್ ಪೊಲೀಸ್ ಠಾಣೆಯಲ್ಲಿ ಎಫ್‍ಐಆರ್ ದಾಖಲಾಗಿದೆ. ಬಾಲಕಿಯನ್ನು ಶುಕ್ರವಾರ ವೈದ್ಯಕೀಯ ಪರೀಕ್ಷೆಗೆ ಒಳಪಡಿಸಿದ್ದಾರೆ. ಇತ್ತ ಆರೋಪಿ ಚಾಲಕನ ಪತ್ತೆಗಾಗಿ ಪೊಲೀಸರು ಬಲೆ ಬೀಸಿದ್ದಾರೆ ಎಂದು ವರದಿಯಾಗಿದೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

  • ಖಾಸಗಿ ಶಾಲಾ ಬಸ್, ಬೈಕ್ ನಡುವೆ ಭೀಕರ ಅಪಘಾತ- ಇಬ್ಬರು ದುರ್ಮರಣ

    ಖಾಸಗಿ ಶಾಲಾ ಬಸ್, ಬೈಕ್ ನಡುವೆ ಭೀಕರ ಅಪಘಾತ- ಇಬ್ಬರು ದುರ್ಮರಣ

    ಬೆಂಗಳೂರು: ಬೆಳ್ಳಂ ಬೆಳ್ಳಗೆ ಖಾಸಗಿ ಶಾಲಾ ಬಸ್ ಹಾಗೂ ಬೈಕ್ ನಡುವೆ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಸ್ಥಳದಲ್ಲೇ ಬೈಕ್ ಸವಾರರಿಬ್ಬರು ಸಾವಿಗಿಡಾಗಿರುವ ಘಟನೆ ಬೆಂಗಳೂರು ಹೊರವಲಯ ಆನೇಕಲ್ ತಾಲೂಕಿನ ಬಿದರಗುಪ್ಪೆ ಗ್ರಾಮದ ಬಳಿ ನಡೆದಿದೆ.

    ಖಾಸಗಿ ಶಾಲಾ ಬಸ್ ಹಾಗೂ ಬೈಕ್ ನಡುವೆ ಮುಖಾಮುಖಿ ಡಿಕ್ಕಿಯಾಗಿದ್ದು ಬೈಕಿನಲ್ಲಿದ್ದ ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಡಿಕ್ಕಿಯ ರಭಸಕ್ಕೆ ಬೈಕ್ ಸ್ವಲ್ಪ ದೂರಕ್ಕೆ ಬಿದ್ದು ಬೆಂಕಿ ಹೊತ್ತಿ ಉರಿದಿದ್ದು ಬಾರಿ ಅನಾಹುತ ತಪ್ಪಿದಂತಾಗಿದೆ.

    ಶಾಲಾ ಬಸ್ ನಲ್ಲಿ 10ಕ್ಕೂ ಹೆಚ್ಚು ಮಕ್ಕಳಿದ್ದು ಬಾರಿ ಅನಾಹುತದಿಂದ ಪಾರಾಗಿದ್ದಾರೆ. ನಂತರ ಬೇರೊಂದು ಬಸ್ ವ್ಯವಸ್ಥೆ ಮಾಡಿ ಮಕ್ಕಳನ್ನು ಶಾಲೆಗೆ ಕಳುಹಿಸಲಾಗಿದೆ. ಈ ಘಟನೆ ನಡೆದ ಬಳಿಕ ಶಾಲಾ ಬಸ್ ಚಾಲಕ ಪರಾರಿಯಾಗಿದ್ದು, ಮೃತರ ವಿವರ ಇನ್ನು ತಿಳಿದು ಬಂದಿಲ್ಲ.

    ಸದ್ಯ ಸ್ಥಳಕ್ಕೆ ಅತ್ತಿಬೆಲೆ ಪೊಲೀಸರು ಭೇಟಿ ನೀಡಿ ಪ್ರಕರಣ ದಾಖಲು ಮಾಡಿಕೊಂಡಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

  • ಸ್ಕೂಲ್ ಬಸ್ ಮೇಲೆ ಏಣಿ ಇಟ್ಟು 70 ವಿದ್ಯಾರ್ಥಿಗಳ ರಕ್ಷಣೆ- ವಿಡಿಯೋ

    ಸ್ಕೂಲ್ ಬಸ್ ಮೇಲೆ ಏಣಿ ಇಟ್ಟು 70 ವಿದ್ಯಾರ್ಥಿಗಳ ರಕ್ಷಣೆ- ವಿಡಿಯೋ

    ಜೈಪುರ: ಶಾಲೆಯ ಬಸ್ಸೊಂದು ಅಂಡರ್ ಪಾಸ್‍ನಲ್ಲಿ ಸಿಲುಕಿಕೊಂಡು, ಅದರಲ್ಲಿದ್ದ 70 ಮಕ್ಕಳು ಪ್ರಾಣಾಪಾಯದಿಂದ ಪಾರಾದ ಘಟನೆ ರಾಜಸ್ಥಾನದ ಸಿಕರ್ ನಲ್ಲಿ ನಡೆದಿದೆ.

    ರೈಲ್ವೇ ಮಾರ್ಗದ ಕೆಳಗೆ ವಾಹನ ಸಂಚಾರಕ್ಕೆ ಅಂಡರ್ ಪಾಸ್ ನಿರ್ಮಾಣ ಮಾಡಲಾಗಿದೆ. ಈ ಮಾರ್ಗವಾಗಿ ಬಸ್ಸು ಚಾಲನೆ ಮಾಡಿದ ಪರಿಣಾಮ, 3 ರಿಂದ 4 ಅಡಿ ಕೆಸರು ಮಿಶ್ರಿತ ನೀರಿನಲ್ಲಿ ಬಸ್ಸು ಸಿಲುಕಿಕೊಂಡಿತ್ತು.

    ಕೊನೆಗೆ ಸ್ಥಳೀಯರು ಬಸ್ಸಿನ ಮೇಲೆ ಏಣಿ ಇಟ್ಟು, ಮಕ್ಕಳನ್ನು ಒಬ್ಬರಂತೆ ಸೇತುವೆ ಮೇಲೆ ಹತ್ತಿಸಲಾಯಿತು. ಮಕ್ಕಳ ರಕ್ಷಣಾ ಕಾರ್ಯಾಚರಣೆ ನೋಡಲು ಅನೇಕರು ಸೇರಿದ್ದರು.

    ಇಂತಹದ್ದೇ ಘಟನೆ ಉತ್ತರ ಪ್ರದೇಶದ ಖಾರ್ಕೊಡ್‍ನಲ್ಲಿ ನಡೆದಿತ್ತು. ಶಾಲೆಯಿಂದ ಮನೆಗೆ ಹೊರಟಿದ್ದ ಬಸ್ಸು ಅಂಡರ್ ಪಾಸ್ ಮೂಲಕ ಹೋಗುವಾಗ ಮಳೆ ನೀರಿನಲ್ಲಿ ಸಿಲುಕಿತ್ತು. ಅದೃಷ್ವಶಾತ್ ಚಾಲಕ, ನಿರ್ವಾಹಕ ಹಾಗೂ ಸ್ಥಳೀಯರ ಸಹಾಯದಿಂದ ಬಸ್ಸಿನಲ್ಲಿದ್ದ 21 ವಿದ್ಯಾರ್ಥಿಗಳನ್ನು ರಕ್ಷಣೆ ಮಾಡಲಾಗಿತ್ತು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

  • ಅಣ್ಣನ ಕಳುಹಿಸಲು ಹೋದ ಒಂದೂವರೆ ವರ್ಷದ ಕಂದಮ್ಮ ಶಾಲಾ ಬಸ್ಸಿಗೆ ಬಲಿ!

    ಅಣ್ಣನ ಕಳುಹಿಸಲು ಹೋದ ಒಂದೂವರೆ ವರ್ಷದ ಕಂದಮ್ಮ ಶಾಲಾ ಬಸ್ಸಿಗೆ ಬಲಿ!

    ಹೈದರಾಬಾದ್: ಅಣ್ಣನ ಶಾಲಾ ಬಸ್ಸಿನಡಿ ಸಿಲುಕಿ 18 ತಿಂಗ್ಳು(ಒಂದೂವರೆ ವರ್ಷದ) ಹೆಣ್ಣು ಮಗು ದಾರುಣವಾಗಿ ಮೃತಪಟ್ಟ ಘಟನೆ ಹೈದಾರಾಬಾದ್ ನ ಬೊಂಗ್ಳೂರು ಎಂಬಲ್ಲಿ ನಡೆದಿದೆ.

    ಈ ಘಟನೆ ಸೋಮವಾರ ಬೆಳಗ್ಗೆ ನಡೆದಿದ್ದು, ಮೃತ ದುರ್ದೈವಿ ಕಂದಮ್ಮನನ್ನು ಪ್ರತೀಕಾ ಎಂದು ಗುರುತಿಸಲಾಗಿದೆ. ಸದ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಬಸ್ ಚಾಲಕ ಸತ್ತಯ್ಯನನ್ನು ಆದಿಭಟ್ಲಾ ಪೊಲೀಸರು ಬಂಧಿಸಿದ್ದಾರೆ.

    ಘಟನೆ ವಿವರ:
    ಪ್ರತೀಕಾ, ಬೊಂಗ್ಳೂರು ಅಂತಪುರಂ ಕಾಲೊನಿಯ ವೆಂಕಟೇಶ್ ಹಾಗೂ ಚಂದನ ದಂಪತಿಯ ಪುತ್ರಿ. ಈಕೆಯ ಅಣ್ಣ ಪ್ರಜ್ವಲ್, ಬೊಂಗ್ಳೂರು ಸಾಹಿತಿ ವಿದ್ಯಾಲಯ ನರ್ಸರಿ ಶಾಲೆಗೆ ಹೋಗುತ್ತಿದ್ದಾನೆ ಅಂತ ಆದಿಭಟ್ಳಾ ಸಬ್ ಇನ್ಸ್ ಪೆಕ್ಟರ್ ಮೋಹನ್ ರೆಡ್ಡಿ ತಿಳಿಸಿದ್ದಾರೆ.

    ಸೋಮವಾರ ಬೆಳಗ್ಗೆ 8.30ರ ಸುಮಾರಿಗೆ ಚಂದನ, ಪ್ರಜ್ವಲ್ ಹಾಗೂ ಪ್ರತೀಕಾ ಮನೆಯ ಹತ್ತಿರವೇ ಶಾಲಾ ಬಸ್ಸಿಗಾಗಿ ಕಾಯುತ್ತಿದ್ದರು. ಸ್ವಲ್ಪ ಸಮಯದಲ್ಲೇ ಬಸ್ ಬಂದಿದೆ. ಬಸ್ ಬಂದ ಕೂಡಲೇ ಅದರಲ್ಲಿದ್ದ ಆಯ ಕೆಳಗಿಳಿದು ಪ್ರಜ್ವಲ್ ನನ್ನು ಬಸ್ ಗೆ ಹತ್ತಿಸಿದ್ದಾರೆ. ಇತ್ತ ತಾಯಿ ಮಗನ ಬ್ಯಾಗ್ ಹಿಡಿದುಕೊಂಡಿದ್ದು, ಅದನ್ನು ಆತನಿಗೆ ಕೊಡುವಲ್ಲಿ ನಿರತರಾಗಿದ್ದರು. ಹೀಗಾಗಿ ಮಗಳು ಪ್ರತೀಕಾ ಕಡೆ ಅವರು ಗಮನಹರಿಸಿರಲಿಲ್ಲ. ಪರಿಣಾಮ ಪ್ರತೀಕಾ ಬಸ್ ನ ಮುಂದುಗಡೆ ತೆರಳಿದ್ದಾಳೆ. ಇದನ್ನು ಚಾಲಕ ಕೂಡ ಗಮನಿಸಿರಲಿಲ್ಲ. ಅಲ್ಲದೇ ಬಸ್ಸನ್ನು ಏಕಾಏಕಿ ಚಲಾಯಿಸಿದ್ದಾನೆ. ಈ ವೇಳೆ ಬಸ್ ಮುಂಬದಿಯಿದ್ದ ಪ್ರತೀಕಾ ಬಸ್ಸಿನ ಚಕ್ರದಡಿ ಸಿಲುಕಿ ಸ್ಥಳದಲ್ಲೇ ಮೃತಪಟ್ಟಿದ್ದಾಳೆ ಅಂತ ಎಸ್‍ಐ ವಿವರಿಸಿದ್ದಾರೆ.

    ಮಗು ಸಾವನ್ನಪ್ಪಿರುವ ವಿಚಾರ ಬೆಳಕಿಗೆ ಬರುತ್ತಿದ್ದಂತೆಯೇ ಚಾಲಕ ಬಸ್ ಬಿಟ್ಟು ಸ್ಥಳದಿಂದ ಪರಾರಿಯಾಗಿದ್ದಾನೆ. ಕೂಡಲೇ ಸ್ಥಳೀಯರು ಘಟನಾ ಸ್ಥಳದಲ್ಲಿ ಜಮಾಯಿಸಿದ್ದು, ಆರೋಪಿ ಚಾಲಕನನ್ನು ಶೀಘ್ರವೇ ಬಂಧಿಸುವಂತೆ ಆಗ್ರಹಿಸಿದ್ದರು.

    ತಲೆಮರೆಸಿಕೊಂಡಿದ್ದ ಚಾಲಕನನ್ನು ಕೊನೆಗೂ ಆದಿಭಟ್ಲಾ ಪೊಲೀಸರು ಬಂಧಿಸಿದ್ದಾರೆ. ಚಾಲಕ ಸತ್ತಯ್ಯನ ಜೊತೆ ಲೈಸನ್ಸ್ ಇದ್ದು, ಘಟನೆ ನಡೆದ ವೇಳೆ ಆತ ಮದ್ಯಪಾನ ಮಾಡಿರಲಿಲ್ಲ ಅಂತ ತಿಳಿಸಿದ್ದಾರೆ. ಸದ್ಯ ಚಾಲಕನ ವಿರುದ್ಧ ಐಪಿಸಿ ಸೆಕ್ಷನ್ 304- ಎ(ವೇಗದ ಚಾಲನೆ ಅಥವಾ ಅಜಾಗರೂಕತೆ) ಅಡಿಯಲ್ಲಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv