Tag: School girls

  • ಮಹಾರಾಷ್ಟ್ರ | ರಕ್ತದ ಕಲೆ ಕಂಡುಬಂದಿದ್ದಕ್ಕೆ ಬಲವಂತವಾಗಿ ವಿದ್ಯಾರ್ಥಿನಿಯರ ಬಟ್ಟೆ ಬಿಚ್ಚಿಸಿದ ಪ್ರಿನ್ಸಿಪಾಲ್‌

    ಮಹಾರಾಷ್ಟ್ರ | ರಕ್ತದ ಕಲೆ ಕಂಡುಬಂದಿದ್ದಕ್ಕೆ ಬಲವಂತವಾಗಿ ವಿದ್ಯಾರ್ಥಿನಿಯರ ಬಟ್ಟೆ ಬಿಚ್ಚಿಸಿದ ಪ್ರಿನ್ಸಿಪಾಲ್‌

    ಮುಂಬೈ: ಮಹಾರಾಷ್ಟ್ರದ (Maharashtra) ಶಾಲೆಯೊಂದರಲ್ಲಿ ಪ್ರಾಂಶುಪಾಲನೊಬ್ಬ ಬಲವಂತವಾಗಿ ಬಾಲಕಿಯರ ಋತುಚಕ್ರ (Periods) ಪರೀಕ್ಷಿಸಿದ ಅಮಾನವೀಯ ಘಟನೆ ತಡವಾಗಿ ಬೆಳಕಿಗೆ ಬಂದಿದೆ.

    5-10ನೇ ತರಗತಿ ವಿದ್ಯಾರ್ಥಿನಿಯರು ಸಂಸ್ಥೆಯ ಸ್ನಾನ ಗೃಹದಲ್ಲಿ ರಕ್ತದ ಕಲೆಗಳು ಕಂಡು ಬಂದ ನಂತರ ಪ್ರಾಂಶುಪಾಲ (School Principal) ಮತ್ತು ಸಿಬ್ಬಂದಿ ಮುಟ್ಟಾಗುತ್ತಿದೆಯೇ ಎಂದು ಪರೀಕ್ಷಿಸಲು ಬಲವಂತವಾಗಿ ಬಟ್ಟೆ ಬಿಚ್ಚಿಸಿದ್ದಾರೆ ಎಂದು ವರದಿಯಾಗಿದೆ. ಘಟನೆ ತಿಳಿದು ಪ್ರಾಂಶುಪಾಲ ಇತರ ಸಿಬ್ಬಂದಿ ವಿರುದ್ಧ ಕ್ರಮಕ್ಕೆ ಒತ್ತಾಯಿಸಿದ್ದಾರೆ. ಇದನ್ನೂ ಓದಿ: ಅಕ್ರಮ ಸಂಬಂಧಕ್ಕೆ ಅಡ್ಡಿ – ಪತಿಯನ್ನು ಕೊಂದು ಅಪಘಾತದಂತೆ ಬಿಂಬಿಸಿದ್ದ ಪತ್ನಿ, ಪ್ರಿಯಕರ ಅರೆಸ್ಟ್

    ಶಾಲಾ ಸಭಾಂಗಣಕ್ಕೆ ವಿದ್ಯಾರ್ಥಿನಿಯರನ್ನ ಕರೆದ ಪ್ರಾಂಶುಪಾಲರು ನೆಲದ ಮೇಲೆ ಕಂಡು ಬಂದ ರಕ್ತದ ಕಲೆಗಳನ್ನ ಚಿತ್ರಗಳನ್ನ ತೋರಿಸಿದ್ದಾರೆ. ನಂತರ ವಿದ್ಯಾರ್ಥಿಯರನ್ನ ಮುಟ್ಟಾಗುತ್ತಿರುವವರು ಮತ್ತು ಮುಟ್ಟಾಗದಿರುವವರು ಪ್ರತ್ಯೇಕ ಸಾಲಿನಲ್ಲಿ ನಿಲ್ಲುವಂತೆ ಸೂಚಿಸಿದ್ದಾರೆ. ಈ ವೇಳೆ 10 ರಿಂದ 12 ವರ್ಷ ವಯಸ್ಸಿನ ಕೆಲ ಹುಡುಗಿಯರನ್ನ ಒಬ್ಬೊಬ್ಬರಾಗಿ ಪರೀಕ್ಷಿಸುವಂತೆ ಮಹಿಳಾ ಸಿಬ್ಬಂದಿಗೆ ಹೇಳಿದ್ದಾರೆ. ಆದ್ರೆ ಅವರು ಮುಟ್ಟಾಗಿರಲಿಲ್ಲ ಎಂದು ತಿಳಿದುಬಂದಿದೆ. ಇದನ್ನೂ ಓದಿ: ಗಾಂಜಾ ಮತ್ತಿನಲ್ಲಿ ಬಾಲಕಿಯ ರೇಪ್ ಮಾಡಿ ಹತ್ಯೆ – ಕಾಮುಕ ಅರೆಸ್ಟ್

    ತಪಾಸಣೆಯ ಸಮಯದಲ್ಲಿ ಮಹಿಳಾ ಸಿಬ್ಬಂದಿ ವಿದ್ಯಾರ್ಥಿನಿಯರ ಒಳಉಡುಪುಗಳನ್ನ ಮುಟ್ಟಿದ್ದಾರೆ. ಈ ವೇಳೆ ಸ್ಯಾನಿಟರಿ ನ್ಯಾಪ್ಕಿನ್‌ ಬಳಸುತ್ತಿದ್ದ ಓರ್ವ ವಿದ್ಯಾರ್ಥಿನಿಯನ್ನ ಕಂಡುಕೊಂಡಿದ್ದಾರೆ. ಆದ್ರೆ ಆಕೆ ಮುಟ್ಟಾದ ವಿದ್ಯಾರ್ಥಿನಿಯರ ಸಾಲಿನಲ್ಲಿ ನಿಂತಿದ್ದಳು. ಬಳಿಕ ತಮ್ಮ ಮಕ್ಕಳಿಂದ ವಿಷಯ ತಿಳಿದ ಪೋಷಕರು ಶಾಲೆಗ ವಿರುದ್ಧ ಪ್ರತಿಭಟನೆ ನಡೆಸಿದ್ದಾರೆ. ಅಲ್ಲದೇ ಬುಧವಾರ ಶಾಲಾ ಆಡಳಿತ ಮಂಡಳಿ ವಿರುದ್ಧ ದೂರು ದಾಖಲಿಸಿದ್ದಾರೆ. ಇದನ್ನೂ ಓದಿ: ಯುವತಿಯರ ಅಸಭ್ಯ ಫೋಟೋ, ವಿಡಿಯೋ ಪೋಸ್ಟ್ – ಯುವಕ ಅರೆಸ್ಟ್

    ಶಾಲಾ ಪ್ರಾಂಶುಪಾಲರು, ಒಬ್ಬ ಸಿಬ್ಬಂದಿ, ಇಬ್ಬರು ಶಿಕ್ಷಕರು ಮತ್ತು ಇಬ್ಬರು ಟ್ರಸ್ಟಿಗಳು ಸೇರಿದಂತೆ 6 ಜನರ ವಿರುದ್ಧ ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ (ಪೋಕ್ಸೊ) ಕಾಯ್ದೆಯಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಈ ಸಂಬಂಧ ಪ್ರಕರಣ ದಾಖಲಿಸಿಕೊಂಡ ಪೊಲೀಸರು ಶಾಲೆಯ ಪ್ರಾಂಶುಪಾಲರು ಮತ್ತು ಸಿಬ್ಬಂದಿ ಇಬ್ಬರನ್ನೂ ಬಂಧಿಸಲಾಗಿದ್ದು, ಉಳಿದ ನಾಲ್ವರಿಗಾಗಿ ಶೋಧ ನಡೆಸಲಾಗಿದೆ ಎಂದು ಮಹಾರಾಷ್ಟ್ರದ ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

  • ಮಂಡ್ಯದಲ್ಲಿ ಶಾಲಾ ಹೆಣ್ಮಕ್ಕಳ ಬೆತ್ತಲೆ ಫೋಟೋ ಕ್ಲಿಕ್ಕಿಸಿ ಬ್ಲ್ಯಾಕ್‌ಮೇಲ್‌ – ವಿಕೃತ ಕಾಮಿ ಅಂದರ್‌!

    ಮಂಡ್ಯದಲ್ಲಿ ಶಾಲಾ ಹೆಣ್ಮಕ್ಕಳ ಬೆತ್ತಲೆ ಫೋಟೋ ಕ್ಲಿಕ್ಕಿಸಿ ಬ್ಲ್ಯಾಕ್‌ಮೇಲ್‌ – ವಿಕೃತ ಕಾಮಿ ಅಂದರ್‌!

    ಮಂಡ್ಯ: ತನ್ನ ಬಳಿ ಕ್ರೀಡೆ ಹಾಗೂ ಚಿತ್ರಕಲೆ (Sports, Painting) ಕಲಿಯಲು ಬರುತ್ತಿದ್ದ ಪ್ರೌಢ ಶಾಲೆಯೊಂದರ ವಿದ್ಯಾರ್ಥಿನಿಯರ ಬೆತ್ತಲೆ ಚಿತ್ರ ಕ್ಲಿಕ್ಕಿಸಿ ಬ್ಲ್ಯಾಕ್‌ಮೇಲ್‌ ಮಾಡುತ್ತಿದ್ದ ವಿಕೃತ ಕಾಮುಕನೊಬ್ಬನನ್ನು ಪೊಲೀಸರು (Mandya Police) ಬಂಧಿಸಿರುವ ಘಟನೆ ಮಂಡ್ಯದಲ್ಲಿ ನಡೆದಿದೆ.

    ಮಂಡ್ಯ ಜಿಲ್ಲೆ ಪಾಂಡವಪುರ ತಾಲೂಕಿನ ಜಕ್ಕನಹಳ್ಳಿಯಲ್ಲಿ ಘಟನೆ ನಡೆದಿದೆ. ತಾಲೂಕಿನ ಅಮೃತಹಳ್ಳಿಯ ಯೋಗಿ ಬಂಧಿತ ಆರೋಪಿಯಾಗಿದ್ದಾನೆ. ಅಲ್ಲದೇ ವಿದ್ಯಾರ್ಥಿನಿಯರ ಮೇಲೆ ಲೈಂಗಿಕ ದೌರ್ಜನ್ಯವೂ ಎಸಗಿದ್ದಾನೆ ಎಂಬ ಆರೋಪವೂ ಕೇಳಿಬಂದಿದೆ. ಇದನ್ನೂ ಓದಿ: ಶಾಲೆಯಿಂದ ಹೊರಗೆ ಉಳಿದಿದ್ದ ನನ್ನನ್ನು ರಾಜಪ್ಪ ಮೇಸ್ಟ್ರು ಶಾಲೆಗೆ ಸೇರಿಸದಿದ್ದರೆ ನಾನು ಸಿಎಂ ಆಗ್ತಿರಲಿಲ್ಲ

    ಈ ಸಂಬಂಧ ನಾಲ್ವರು ವಿದ್ಯಾರ್ಥಿನಿಯರ ಹೇಳಿಕೆ ಆಧರಿಸಿ, ಜಿಲ್ಲಾ ಮಕ್ಕಳ ಹಕ್ಕುಗಳ ರಕ್ಷಣಾ ಘಟಕ (Child Rights Protection Unit) ಕಾನೂನು ಪರಿವೀಕ್ಷಣಾಧಿಕಾರಿ ಎಸ್‌.ಎಂ. ಶೈಲಜಾ ನೀಡಿದ ದೂರಿನ ಅನ್ವಯ ಪೊಲೀಸರು ಆರೋಪಿಯನ್ನ ಬಂಧಿಸಿದ್ದಾರೆ. ಲೈಂಗಿಕ ದೌರ್ಜನ್ಯಕ್ಕೆ ಒಳಗಾದ ವಿದ್ಯಾರ್ಥಿನಿಯರು 15 ರಿಂದ 17 ವರ್ಷ ವಯಸ್ಸಿನವರು ಎಂದು ತಿಳಿದುಬಂದಿದೆ. ಇದನ್ನೂ ಓದಿ: ಹತ್ರಾಸ್ ಸತ್ಸಂಗದಿಂದ ನಾಸಿಕ್‌ನ ಕುಂಭಮೇಳದವರೆಗೆ; ಭಾರತದಲ್ಲಿ ನಡೆದ ಕಾಲ್ತುಳಿತ ದುರಂತಗಳಿವು

    ಆಸಾಮಿ ತಗಲಾಕ್ಕೊಂಡಿದ್ದು ಹೇಗೆ?
    ಆರೋಪಿ ಯೋಗಿ ವಿದ್ಯಾರ್ಥಿನಿಯರು ಸಂತ್ರಸ್ತ ವಿದ್ಯಾರ್ಥಿನಿಯರು ಓದುತ್ತಿದ್ದ ಪ್ರೌಢಶಾಲೆಯಲ್ಲೇ ಹಳೆಯ ವಿದ್ಯಾರ್ಥಿಯಾಗಿದ್ದ. ಶಾಲೆ ಸಮೀಪದಲ್ಲೇ ಸ್ವಂತ ತರಬೇತಿ ಕೇಂದ್ರ ನಡೆಸುತ್ತಿದ್ದ. ಕೆಲ ವಿದ್ಯಾರ್ಥಿನಿಯರಿಗೆ ಕ್ರೀಡೆ, ಚಿತ್ರಕಲೆಯಲ್ಲಿ ಆಸಕ್ತಿ, ಇದ್ದ ಕಾರಣ, ತರಬೇತಿಗೆ ಸೇರಿಕೊಂಡಿದ್ದರು. ತನ್ನ ಬಳಿ ಬರುವ ವಿದ್ಯಾರ್ಥಿನಿಯರಿಗೆ ಮೊದಲು ಅಣ್ಣನಂತೆ ನಾಟಕವಾಡಿ ನಂಬಿಸುತ್ತಿದ್ದ.

    ತರಬೇತಿ ಕೇಂದ್ರದ ಪಿಟಿ ರೂಮಿನಲ್ಲೇ ಇರುತ್ತಿದ್ದ ಈತ ವಿದ್ಯಾರ್ಥಿನಿಯರು ಬಟ್ಟೆ ಬದಲಿಸುವಾಗ ತನ್ನ ಮೊಬೈಲ್‌ನಿಂದ ಬೆತ್ತಲೆ, ಅರೆಬೆತ್ತಲೆ ಫೋಟೋಗಳನ್ನು ತೆಗೆದು, ಪೋಷಕರಿಗೆ ಕಳುಹಿಸುವುದಾಗಿ ಬೆದರಿಕೆ ಒಡ್ಡುತ್ತಿದ್ದ. ತನ್ನೊಂದಿಗೆ ಮಲಗುವಂತೆ ಬಲವಂತ ಮಾಡುತ್ತಿದ್ದ. ತರಬೇತಿ ನೀಡುವ ವೇಳೆ ಕೆಟ್ಟದ್ದಾಗಿ ವರ್ತಿಸುತ್ತಿದ್ದ. ಒಂದೊಮ್ಮೆ ಅದೇ ಗ್ರಾಮದ ವಿದ್ಯಾರ್ಥಿನಿಯೋರ್ವಳಿಗೆ ಐಸ್‌ಕ್ರೀಮ್‌ ಕೊಡಿಸಿ, ಪ್ರಜ್ಞೆ ತಪ್ಪಿಸುವಂತೆ ಮಾಡಿದ್ದ. ಬಳಿಕ ಆಕೆಯ ಬೆತ್ತಲೆ ಫೋಟೋ ಕ್ಲಿಕ್ಕಿಸಿ, ನೀನು ನನ್ನೊಂದಿಗೆ ಮಲಗದಿದ್ದರೆ, ನಿಮ್ಮ ಪೋಷಕರಿಗೆ ಫೋಟೋ ತೋರಿಸುವುದಾಗಿ ಬೆದರಿಸಿದ್ದ ಎಂದು ದೂರಿನಲ್ಲಿ ತಿಳಿಸಲಾಗಿದೆ.

    ಈ ಸಂಬಂಧ ಜಿಲ್ಲಾ ಮಕ್ಕಳ ಹಕ್ಕುಗಳ ರಕ್ಷಣಾ ಘಟಕಕ್ಕೆ ವಿದ್ಯಾರ್ಥಿನಿಯರು ಪತ್ರ ಬರೆದು ಅಳಲು ತೋಡಿಕೊಂಡಿದ್ದಾರೆ. ಬಳಿಕ ಜಿಲ್ಲಾ ಮಕ್ಕಳ ಹಕ್ಕುಗಳ ರಕ್ಷಣಾ ಘಟಕದ ಅಧಿಕಾರಿಗಳು ಪೊಲೀಸ್‌ ಠಾಣೆಗೆ ನೀಡಿದ ದೂರಿನ ಮೇಲೆ ಯೋಗಿ ಎಂಬಾತನನ್ನ ಬಂಧಿಸಿ, ಎಫ್‌ಐಆರ್‌ ದಾಖಲಾಗಿದೆ. ಪೋಕ್ಸೋ ಕೇಸ್‌ ಜೊತೆಗೆ ಬಿಎನ್‌ಎಸ್ (ಭಾರತೀಯ ನ್ಯಾಯ ಸಂಹಿತೆ) ಸೆಕ್ಷನ್‌ 354 ಎ, 354 ಡಿ, 509 ಅಡಿಯಲ್ಲಿ ಕೇಸ್ ದಾಖಲಿಸಿ ಜೈಲಿಗೆ ಕಳುಹಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಇದನ್ನೂ ಓದಿ: ಗ್ಯಾರಂಟಿಗಳ ಭಾರದಿಂದ ಕಂಗೆಟ್ಟ ಸರ್ಕಾರ -ಆಪರೇಷನ್ ಬಿಪಿಎಲ್ ಕಾರ್ಡ್‌ಗೆ ಪ್ಲಾನ್!

  • ಹಿಜಬ್ ಧರಿಸಿದ ಹಿಂದೂ ಹೆಣ್ಮಕ್ಕಳು – ವ್ಯಾಪಕ ವಿರೋಧದ ಬೆನ್ನಲ್ಲೇ ಸಿಎಂ ತನಿಖೆಗೆ ಆದೇಶ

    ಹಿಜಬ್ ಧರಿಸಿದ ಹಿಂದೂ ಹೆಣ್ಮಕ್ಕಳು – ವ್ಯಾಪಕ ವಿರೋಧದ ಬೆನ್ನಲ್ಲೇ ಸಿಎಂ ತನಿಖೆಗೆ ಆದೇಶ

    ಭೋಪಾಲ್: ಕರ್ನಾಟದಲ್ಲಿ ಹಿಜಬ್ ಬ್ಯಾನ್ (Hijab Ban) ವಿಚಾರ ಸದ್ಯ ನ್ಯಾಯಾಲಯ ಹಂತದಲ್ಲಿದೆ. ಈ ನಡುವೆ ಮಧ್ಯಪ್ರದೇಶದ (Madhya Pradesh) ಶಾಲೆಯೊಂದರಲ್ಲಿ ಹಿಂದೂ ವಿದ್ಯಾರ್ಥಿನಿಯರೂ ಹಿಜಬ್ ಧರಿಸಿದ್ದು, ಭಾರೀ ವಿವಾದಕ್ಕೆ ಕಾರಣವಾಗಿದೆ.

    ಮಧ್ಯಪ್ರದೇಶದ ದಾಮೋಹ್ ಜಿಲ್ಲೆಯ ಶಾಸಗಿ ಶಾಲೆಯೊಂದು ತನ್ನ ಬೋರ್ಡ್ ಪರೀಕ್ಷೆಯ ಟಾಪರ್ಸ್‌ಗಳ ಪೋಸ್ಟರ್ ಅನ್ನು ಬಿಡುಗಡೆ ಮಾಡಿತ್ತು. ಅದರಲ್ಲಿ ಕೆಲವು ಮುಸ್ಲಿಮರಲ್ಲದ ವಿದ್ಯಾರ್ಥಿನಿಯರೂ ಹಿಜಬ್ ಧರಿಸಿರುವುದು ಕಂಡುಬಂದಿತ್ತು. ಈ ಪೋಸ್ಟರ್‌ಗಳು ಜಾಲತಾಣದಲ್ಲಿ ಹರಿದಾಡುತ್ತಿದ್ದಂತೆ ಶಾಲಾ ಮಂಡಳಿ ಮುಸ್ಲಿಮರಲ್ಲದ ವಿದ್ಯಾರ್ಥಿಗಳಿಗೆ (Non Muslims Students) ಹಿಜಬ್ ಧರಿಸಲು ಒತ್ತಾಯಿಸಿದೆ ಎಂದು ವಿಶ್ವಹಿಂದೂ ಪರಿಷತ್ (VHP), ಬಜರಂಗದಳ ಹಾಗೂ ABVP ಸಂಘಟನೆಗಳು ಆರೋಪಿಸಿದ್ದು, ಅಲ್ಲಿನ ಸಿಎಂ ಕೂಡ ತನಿಖೆಗೆ ಆದೇಶಿಸಿದ್ದಾರೆ.

    ಹಿಜಬ್ ಧರಿಸಿದ ಆರೋಪಗಳು ಕೇಳಿಬರುತ್ತಿದ್ದಂತೆ ರಾಷ್ಟ್ರೀಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ ಅಧ್ಯಕ್ಷ ಪ್ರಿಯಾಂಕ್ ಕನೂಂಗೊ ಅವರು ದಾಮೋಹ್ ಜಿಲ್ಲಾಧಿಕಾರಿಗಳಿಗೆ ಈ ವಿಷಯ ತಿಳಿಸಿದ್ದರು. ಮಧ್ಯಪ್ರದೇಶದ ಗೃಹ ಸಚಿವ ನರೋತ್ತಮ್ ಮಿಶ್ರಾ ಸಹ ತನಿಖೆಗೆ ಆದೇಶಿಸಿದ್ದರು. ಈ ನಡುವೆ ಜಿಲ್ಲಾ ಶಿಕ್ಷಣಾಧಿಕಾರಿಗಳು ವಿದ್ಯಾರ್ಥಿನಿಯರ ಕುಟುಂಬವನ್ನು ಸಂಪರ್ಕಿಸಿದಾಗ ಈ ಸಂಬಂಧ ಪೋಷಕರು ಯಾವುದೇ ದೂರು ನೀಡಿರಲಿಲ್ಲ ಎಂಬುದು ಕಂಡುಬಂದಿತ್ತು. ಇದನ್ನೂ ಓದಿ: ಹಿಂದೂ ಹೆಣ್ಮಕ್ಕಳಿಗೂ ಹಿಜಬ್ ಕಡ್ಡಾಯಗೊಳಿಸಿತಾ ಈ ಶಾಲೆ?

    ಈ ನಡುವೆ ಶಾಲೆಯ ಆಡಳಿತ ಮಂಡಳಿ ನಿರ್ದೇಶಕ ಮುಷ್ತಾಖ್ ಮೊಹಮ್ಮದ್, ಇಲ್ಲಿ ವಿದ್ಯಾರ್ಥಿನಿಯರು ಹಿಜಬ್ ಧರಿಸಿಲ್ಲ, ಬದಲಿಗೆ ಸ್ಕಾರ್ಫ್ ಧರಿಸಿದ್ದಾರೆ. ಇದು ಶಾಲಾ ಡ್ರೆಸ್‌ಕೋಡ್‌ನ ಭಾಗವಾಗಿದೆ. ಇಲ್ಲಿ ಯಾವುದೇ ವಿದ್ಯಾರ್ಥಿನಿಯರ ಸಂಸ್ಕೃತಿ ಮತ್ತು ಸಂಪ್ರದಾಯಕ್ಕೆ ವಿರುದ್ಧವಾಗಿ ನಾವು ನಡೆದುಕೊಳ್ಳಲಾಗುವುದಿಲ್ಲ ಎಂದು ಹೇಳಿದ್ದಾರೆ. ಇದನ್ನೂ ಓದಿ: ಮಣಿಪುರದಲ್ಲಿ ಕೋಮು ಸಂಘರ್ಷ: ಅನಧಿಕೃತ ಶಸ್ತ್ರಾಸ್ತ್ರಗಳನ್ನು ಕೂಡಲೇ ಒಪ್ಪಿಸಿ – ದಂಗೆಕೋರರಿಗೆ ಅಮಿತ್‌ ಶಾ ವಾರ್ನಿಂಗ್‌

    HIJAB 2

    ಇನ್ನೂ ಈ ಸಂಬಂಧ ತನಿಖೆಗೆ ಆದೇಶಿಸಿರುವ ಸಿಎಂ ಶಿವರಾಜ್ ಸಿಂಗ್ ಚೌಹಾಣ್ (Shivraj Singh Chouhan), ಯಾವುದೇ ಶಾಲೆಯೂ ಹೆಣ್ಣುಮಕ್ಕಳು ಹಿಜಬ್ ಧರಿಸುವಂತೆ ಒತ್ತಾಯಿಸುವುದಿಲ್ಲ. ಅದು ಅವರ ಸಂಸ್ಕೃತಿ ಮತ್ತು ಸಂಪ್ರದಾಯಗಳಿಗೂ ಹೊಂದಿಕೆಯಾಗಲ್ಲ. ದಾಮೋಹ್ ಜಿಲ್ಲೆ ಶಾಲೆಯ ವಿಷಯ ನನ್ನ ಗಮನಕ್ಕೆ ಬಂದಿದೆ. ನಾನು ಸ್ಥಳೀಯ ಆಡಳಿತಕ್ಕೆ ತನಿಖೆ ನಡೆಸಲು ಪೂರ್ಣ ಅನುಮತಿ ನೀಡಿದ್ದೇನೆ. ಸೂಕ್ತ ಆಧಾರಗಳ ಮೇಲೆ ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ.

  • ಕಾಲೇಜ್ ವಿದ್ಯಾರ್ಥಿನಿ ಆತ್ಮಹತ್ಯೆ – ತಮಿಳುನಾಡಿನಲ್ಲಿ 2 ವಾರಗಳ ಅಂತರದಲ್ಲಿ 4ನೇ ಕೇಸ್

    ಕಾಲೇಜ್ ವಿದ್ಯಾರ್ಥಿನಿ ಆತ್ಮಹತ್ಯೆ – ತಮಿಳುನಾಡಿನಲ್ಲಿ 2 ವಾರಗಳ ಅಂತರದಲ್ಲಿ 4ನೇ ಕೇಸ್

    ಚೆನ್ನೈ: ತಮಿಳುನಾಡಿನಲ್ಲಿ ಶಾಲಾ-ಕಾಲೇಜ್ ವಿದ್ಯಾರ್ಥಿನಿಯರ ಸರಣಿ ಆತ್ಮಹತ್ಯೆ ಮುಂದುವರಿದಿದೆ. ನಿನ್ನೆ 11ನೇ ತರಗತಿ ವಿದ್ಯಾರ್ಥಿನಿಯೊಬ್ಬಳು ಮನೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.

    11ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದ ವಿದ್ಯಾರ್ಥಿನಿ ಶಿವಕಾಶಿಯಲ್ಲಿರುವ ತನ್ನ ಮನೆಯಲ್ಲಿ ಆತ್ಮಹತ್ಯೆಗೆ ಶರಣಾಗಿದ್ದಾಳೆ. ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ. ಯಾವುದೇ ಡೆತ್‍ನೋಟ್ ಕೂಡ ಪತ್ತೆಯಾಗಿಲ್ಲ. ಈ ಬಗ್ಗೆ ತಮಿಳುನಾಡು ಪೊಲೀಸರು ತನಿಖೆ ಆರಂಭಿಸಿದ್ದು ವಿದ್ಯಾರ್ಥಿನಿ ಹೊಟ್ಟೆ ನೋವಿನ ಸಮಸ್ಯೆಯಿಂದ ಬಳಲುತ್ತಿದ್ದಳು ಎಂದು ಹಿರಿಯ ಪೊಲೀಸ್ ಅಧಿಕಾರಿ ಸ್ಥಳೀಯ ಮಧ್ಯಮಗಳಿಗೆ ಮಾಹಿತಿ ಹಂಚಿಕೊಂಡಿದ್ದಾರೆ. ಇದನ್ನೂ ಓದಿ: 6 ವರ್ಷ ತುಂಬಿದರಷ್ಟೇ 1ನೇ ಕ್ಲಾಸ್‌ಗೆ ಪ್ರವೇಶ – ಗೊಂದಲಕ್ಕೆ ಕಾರಣವಾದ ಆದೇಶ

    ಈ ಪ್ರಕರಣ ಸೇರಿದಂತೆ ಈಗಾಗಲೇ ಕಳೆದ ಎರಡು ವಾರಗಳ ಅಂತರದಲ್ಲಿ ನಾಲ್ಕು ವಿದ್ಯಾರ್ಥಿನಿಯರ ಆತ್ಮಹತ್ಯೆ ಪ್ರಕರಣ ತಮಿಳುನಾಡಿನಲ್ಲಿ ದಾಖಲಾಗಿದೆ. ಕೆಲ ದಿನಗಳ ಹಿಂದೆ ಚಿನ್ನ ಸೇಲಂ ಸಮೀಪದ ಕಣಿಯಮೂರ್‌ನಲ್ಲಿ ವಸತಿ ಶಾಲೆಯ ಹಾಸ್ಟೆಲ್‍ನಲ್ಲಿ 12ನೇ ತರಗತಿ ವಿದ್ಯಾರ್ಥಿನಿ ಶವವಾಗಿ ಪತ್ತೆಯಾಗಿದ್ದಳು. ನಂತರ ಡೆತ್‍ನೋಟ್ ಸಿಕ್ಕಿತ್ತು. ಶಾಲೆಯ ಶಿಕ್ಷಕರು ತನಗೆ ಚಿತ್ರಹಿಂಸೆ ನೀಡಿದ್ದಾರೆ ಎಂದು ಸೂಸೈಡ್ ನೋಟ್‍ನಲ್ಲಿ ಉಲ್ಲೇಖಿಸಲಾಗಿತ್ತು. ಇದರಿಂದ ರೊಚ್ಚಿಗೆದ್ದ ಜನ ಶಾಲೆಯ ಬಸ್ ಸೇರಿದಂತೆ ವಾಹನಗಳನ್ನು ಸುಟ್ಟು ಹಿಂಸಾತ್ಮಕ ಪ್ರತಿಭಟನೆ ನಡೆಸಿದ್ದರು. ಇದನ್ನೂ ಓದಿ: ತಮಿಳುನಾಡು ವಿದ್ಯಾರ್ಥಿನಿ ಆತ್ಮಹತ್ಯೆ ಪ್ರಕರಣ – ಪ್ರಾಂಶುಪಾಲರು, ಶಿಕ್ಷಕರು ಸೇರಿ ಐವರು ಅರೆಸ್ಟ್

    ಆ ಬಳಿಕ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಶಾಲೆಯ ಪ್ರಾಂಶುಪಾಲರು, ಇಬ್ಬರು ಶಿಕ್ಷಕರು ಸೇರಿ ಐವರನ್ನು ಪೊಲೀಸರು ಬಂಧಿಸಿದ್ದರು. ಇದಾದ ಬಳಿಕ ರಾಜ್ಯದಲ್ಲಿ ಮತ್ತೆ ವಿದ್ಯಾರ್ಥಿನಿಯರ ಆತ್ಮಹತ್ಯೆ ಪ್ರಕರಣ ಮುಂದುವರಿದಿದೆ.

    ತಮಿಳುನಾಡಿನಲ್ಲಿ ಹದಿಹರೆಯದ ವಿದ್ಯಾರ್ಥಿನಿಯರ ಸಾವಿನ ಬಗ್ಗೆ ಕಳವಳ ವ್ಯಕ್ತಪಡಿಸಿರುವ ಮುಖ್ಯಮಂತ್ರಿ ಸ್ಟಾಲಿನ್, ಆತ್ಮಹತ್ಯೆ ಒಂದೇ ಪರಿಹಾರವಲ್ಲ. ಆತ್ಮಹತ್ಯೆ ಯೋಚನೆಯನ್ನು ಕೈಬಿಡಿ ಎಂದು ಯುವಜನತೆಗೆ ಮನವಿ ಮಾಡಿಕೊಂಡಿದ್ದಾರೆ.

    Live Tv
    [brid partner=56869869 player=32851 video=960834 autoplay=true]