Tag: School Teacher

  • ಮದ್ಯ ಕುಡಿಸಿ ವಿದ್ಯಾರ್ಥಿಯೊಂದಿಗೆ ಸೆಕ್ಸ್‌ – ಪಾಠ ಹೇಳಿಕೊಡಲು ಹೋದ ಶಿಕ್ಷಕಿ ಹೀಗೆ ಮಾಡೋದಾ?

    ಮದ್ಯ ಕುಡಿಸಿ ವಿದ್ಯಾರ್ಥಿಯೊಂದಿಗೆ ಸೆಕ್ಸ್‌ – ಪಾಠ ಹೇಳಿಕೊಡಲು ಹೋದ ಶಿಕ್ಷಕಿ ಹೀಗೆ ಮಾಡೋದಾ?

    – ನೆಚ್ಚಿನ ವಿದ್ಯಾರ್ಥಿಗಳಿಗೆ ನಗ್ನ ಫೋಟೋ ಕಳಿಸುತ್ತಿದ್ದಳಂತೆ ಶಿಕ್ಷಕಿ

    ವಾಷಿಂಗ್ಟನ್‌: ತನ್ನ ವಿದ್ಯಾರ್ಥಿಗಳಿಗೆ (Students) ಆಗಾಗ್ಗೆ ನಗ್ನ ಫೋಟೋಗಳನ್ನು ಕಳುಹಿಸೋದು, ಬಾರ್‌ಗಳಲ್ಲಿ ಮದ್ಯ ತಂದು ಕುಡಿಸುವುದರ ಜೊತೆಗೆ ವಿದಾರ್ಥಿಯೊಂದಿಗೆ ಲೈಂಗಿಕ ಕ್ರಿಯೆ ನಡೆಸುತ್ತಿದ್ದ ಆರೋಪಗಳ ಮೇಲೆ ಲೂಯಿಸಿಯಾಬದ ಶೀಕ್ಷಕಿಯನ್ನು (US School Teacher) ಬಂಧಿಸಿರುವ ಘಟನೆ ಅಮೆರಿಕದ ನ್ಯೂಯಾರ್ಕ್‌ ನಗರದಲ್ಲಿ ನಡೆದಿದೆ.

    ಅಲೆಕ್ಸಾ ವಿಂಗರ್ಟರ್‌ (35) ಬಂಧಿತ ಶಿಕ್ಷಕಿ. ತನ್ನ ಪುರುಷ ವಿದ್ಯಾರ್ಥಿಗಳಿಗೆ ಸ್ಥಳೀಯ ಬಾರ್‌ಗಳಿಂದ ಮದ್ಯ (Alcohol) ತಂದು ಕೊಡುವುದಲ್ಲದೇ, ಓರ್ವ ವಿದ್ಯಾರ್ಥಿಯೊಂದಿಗೆ ಸೆಕ್ಸ್‌ ನಡೆಸಿದ್ದಾಳೆ ಎಂಬ ಆರೋಪದ ಮೇಲೆ ಪೊಲೀಸರು ಬಂಧಿಸಿದ್ದಾರೆ. ಕಳೆದ ಮಾರ್ಚ್‌ ತಿಂಗಳಲ್ಲಿ ನಡೆದಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಇದನ್ನೂ ಓದಿ: ಕ್ರೀಡಾ ವಿದ್ಯಾರ್ಥಿಯೊಂದಿಗೆ ಕಾರಿನಲ್ಲಿ ಸೆಕ್ಸ್‌ – ಶಿಕ್ಷಕಿಯನ್ನ ರೆಡ್‌ಹ್ಯಾಂಡಾಗಿ ಹಿಡಿದು ಪೊಲೀಸರಿಗೊಪ್ಪಿಸಿದ ತಾಯಿ

    ಯಾವ ಸಿನಿಮಾಗೂ ಕಡಿಮೆಯಿಲ್ಲ ಈಕೆ ಸ್ಟೋರಿ?
    ಹೌದು. ಶಾಲೆಗೆ ಹೋಗಿ ಪಾಠ ಹೇಳಿಕೊಡಬೇಕಾದ ಶಿಕ್ಷಕಿ ಸ್ಥಳೀಯ ಬಾರ್‌ಗಳಿಂದ ಮದ್ಯ ತಂದು ವಿದ್ಯಾರ್ಥಿಗಳಿಗೆ ಕೊಡುತ್ತಿದ್ದಳಂತೆ, ಅಷ್ಟೇ ಕೆಲ ವಿದ್ಯಾರ್ಥಿಗಳಿಗೆ ತನ್ನ ಬೆತ್ತಲೆ ಫೋಟೋಗಳನ್ನು ಕಳಿಸಿಕೊಡುತ್ತಿದ್ದಂತೆ. ಇಂತಹ ಕೃತ್ಯ ನಡೆಸುತ್ತಿದ್ದಾಲೇ ಮದ್ಯ ಕುಡಿದು ಅರೆ ಪ್ರಜ್ಞಾವಸ್ಥೆಯಲ್ಲಿದ್ದ ಓರ್ವ ವಿದ್ಯಾರ್ಥಿಯೊಂದಿಗೆ ಲೈಂಗಿಕ ಕ್ರಿಯೆ ಸಹ ನಡೆಸಿದ್ದಾಳೆ ಎಂದು ಪೊಲೀಸ ತನಿಖೆಯಲ್ಲಿ ಬಯಲಾಗಿದೆ. ಇದನ್ನೂ ಓದಿ: ಗಾಳಿಯಲ್ಲಿ ಹಾರಿ ಮರಕ್ಕೆ ಅಪ್ಪಳಿಸಿದ ಕಾರು – ಅಮೆರಿಕದಲ್ಲಿ ಮೂವರು ಭಾರತದ ಮಹಿಳೆಯರು ಸಾವು

    ಕಳೆದ ಮಾರ್ಚ್‌ನಲ್ಲಿ ಈಕೆಯನ್ನು ಬಂಧಿಸಿದ ಬಳಿಕ ಸ್ಲೈಡೆಲ್ ಪೊಲೀಸರು ಪ್ರಾಥಮಿಕ ವಿಚಾರಣೆಗೆ ಒಳಪಡಿಸಿದ್ದರು. ಈ ವೇಳೆ ಆಕೆಯ ಮೊಬೈಲ್‌ ಅನ್ನು ಪರಿಶೀಲಿಸಿದಾಗ, ವಿದ್ಯಾರ್ಥಿಗಳಿಗೆ ಬೆತ್ತಲೆ ಫೋಟೋಗಳನ್ನು ಕಳುಹಿಸಿರುವುದು ಹಾಗೂ ಸೆಕ್ಸ್‌ ಚಾಟ್‌ ನಡೆಸಿರುವುದು ಬಯಲಾಗಿದೆ. ಅಲ್ಲದೇ ಈಕೆ 18 ವರ್ಷ ಪುರುಷ ವಿದ್ಯಾರ್ಥಿಯೊಂದಿಗೆ ಸೆಕ್ಸ್‌ ನಡೆಸಿದ್ದಾಳೆ ಎಂಬುದೂ ತನಿಖೆಯಲ್ಲಿ ಪುರಾವೆಗಳೊಂದಿಗೆ ಸಾಬೀತಾಗಿದೆ. ಈಕೆ ತನ್ನ ವಿದ್ಯಾರ್ಥಿಗಳಿಗೆ ಸ್ಥಳೀಯ ಬಾರ್‌ಗಳಿಂದ ಮದ್ಯ ತಂದು ಕೊಡುತ್ತಿದ್ದುದ್ದಕ್ಕೆ ವೀಡಿಯೋ ಆಧಾರಗಳು ಸಿಕ್ಕಿವೆ ಈ ಹಿನ್ನೆಲೆಯಲ್ಲಿ ಆಕೆಯನ್ನ ಮುಂದಿನ ವಿಚಾರಣೆಗೆ ಒಳಪಡಿಸಿದ್ದಾರೆ ಎಂದು ಹೇಳಲಾಗಿದೆ.

    ಟೀಚರ್‌ ಸಸ್ಪೆಂಡ್‌: ವಿಂಗರ್ಟರ್‌ ಸೇಂಟ್ ಟಮ್ಮನಿ ಪ್ಯಾರಿಷ್ ಸ್ಕೂಲ್‌ನಲ್ಲಿ ಕೆಲಸ ಮಾಡುತ್ತಿದ್ದಳು, ಆದ್ರೆ ಯಾವ ವಿಷಯ ಬೋಧಿಸುತ್ತಿದ್ದಳು ಎಂಬುದು ತಿಳಿದುಬಂದಿಲ್ಲ. ಸದ್ಯ ಶಾಲಾ ಮಂಡಳಿ ಆಕೆಯನ್ನ ಕೆಲಸದಿಂದ ವಜಾಗೊಳಿಸಿದೆ. ನಮ್ಮ ವಿದ್ಯಾರ್ಥಿಗಳ ಸುರಕ್ಷತೆಗೆ ಧಕ್ಕೆ ತರುವ ಯಾವುದೇ ನಡವಳಿಕೆಯನ್ನು ಸಹಿಸುವುದಿಲ್ಲ ಎಂದು ಮಂಡಳಿ ಹೇಳಿದೆ. ಈ ಶಾಲೆಯಲ್ಲಿ ಸುಮಾರು 40,000 ವಿದ್ಯಾರ್ಥಿಗಳಿದ್ದಾರೆ. ಇದನ್ನೂ ಓದಿ: ಲಂಡನ್‌ನಲ್ಲಿರುವ ಭಾರತೀಯ ಹೈಕಮಿಷನ್‌ ಮೇಲೆ ದಾಳಿ ಕೇಸ್‌ – ಖಲಿಸ್ತಾನಿ ಪರ ಆರೋಪಿ ಬಂಧನ

  • ಕಾರಿನಲ್ಲೇ ವಿದ್ಯಾರ್ಥಿ ಜೊತೆ ರಾಸಲೀಲೆ – ಬೆತ್ತಲೆಯಾಗಿ ಸಿಕ್ಕಿಬಿದ್ದ ಇಂಗ್ಲಿಷ್ ಶಿಕ್ಷಕಿ ಅರೆಸ್ಟ್

    ಕಾರಿನಲ್ಲೇ ವಿದ್ಯಾರ್ಥಿ ಜೊತೆ ರಾಸಲೀಲೆ – ಬೆತ್ತಲೆಯಾಗಿ ಸಿಕ್ಕಿಬಿದ್ದ ಇಂಗ್ಲಿಷ್ ಶಿಕ್ಷಕಿ ಅರೆಸ್ಟ್

    ನ್ಯೂಯಾರ್ಕ್: ಅಮೆರಿಕದ (America) ನ್ಯೂಜೆರ್ಸಿಯ (New Jersey) ವಿವಾಹಿತ ಶಿಕ್ಷಕಿಯೊಬ್ಬಳು (School Teacher) ಅಸ್ಸನ್‍ಪಿಂಕ್ ವನ್ಯಜೀವಿ ನಿರ್ವಹಣಾ ಪ್ರದೇಶದ ವಿದ್ಯಾರ್ಥಿಯೊಬ್ಬನ ಮೇಲೆ ಲೈಂಗಿಕ ದೌರ್ಜನ್ಯ (Sexually Assaulting) ಎಸಗಿದ್ದಾರೆ ಎಂದು ಆರೋಪಿಸಲಾಗಿದೆ.

    ಶಿಕ್ಷಕಿ ಜೆಸ್ಸಿಕಾ ಸಾವಿಕಿ (37) ಟ್ರೆಂಟನ್‍ನ ಹ್ಯಾಮಿಲ್ಟನ್ ಹೈಸ್ಕೂಲ್‌ನ ಇಂಗ್ಲಿಷ್ ಶಿಕ್ಷಕಿ ಎಂದು ಗುರುತಿಸಲಾಗಿದೆ. ಸಾವಿಕಿ ಮತ್ತು ಶಾಲಾ ವಿದ್ಯಾರ್ಥಿಯನ್ನು ನ್ಯೂಜೆರ್ಸಿಯ ವನ್ಯಜೀವಿ ಪರಿವೀಕ್ಷಕರು ನಗ್ನ ಸ್ಥಿತಿಯಲ್ಲಿ ಪತ್ತೆ ಹಚ್ಚಿದ್ದಾರೆ. ವನ್ಯಜೀವಿ ನಿರ್ವಹಣಾ ಪ್ರದೇಶದಲ್ಲಿ ಕಾರಿನ ಹಿಂಬದಿ ಸೀಟ್‍ನಲ್ಲಿ 16 ವರ್ಷದ ವಿದ್ಯಾರ್ಥಿಯೊಂದಿಗೆ ಶಾಲಾ ಶಿಕ್ಷಕಿ ಲೈಂಗಿಕ ಕ್ರಿಯೆ ನಡೆಸಿದ್ದಾಳೆ ಎಂದು ಸಾಕ್ಷಿಗಳು ಸಿಕ್ಕಿವೆ. ಅಲ್ಲದೇ ಆಕೆ ವಿಚಾರಣೆ ವೇಳೆ ವಿದ್ಯಾರ್ಥಿಯೊಂದಿಗೆ ಐದು ಬಾರಿ ಅಸುರಕ್ಷಿತ ಲೈಂಗಿಕ ಕ್ರಿಯೆ ನಡೆಸಿದ್ದಾಗಿ ಒಪ್ಪಿಕೊಂಡಿದ್ದಾಳೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಇದನ್ನೂ ಓದಿ: ಮಗು ಮಾಡಿಕೊಳ್ಳುವ ವಿಚಾರಕ್ಕೆ ಗಲಾಟೆ – ಪತ್ನಿಯ ಉಸಿರುಗಟ್ಟಿಸಿ ಹತ್ಯೆಗೈದ ಪತಿ

    ಆರೋಪಿ ಶಿಕ್ಷಕಿಯನ್ನು ಸೋಮವಾರ ಬಂಧಿಸಿ ಕಸ್ಟಡಿಗೆ ತೆಗೆದುಕೊಳ್ಳಲಾಗಿದೆ. ಮುಂದಿನ ವಿಚಾರಣೆಯವರೆಗೂ ಮಾನ್‍ಮೌತ್ ಕೌಂಟಿ ಸಂಸ್ಥೆಯಲ್ಲಿ ಇರಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

    ಈ ಬಗ್ಗೆ ಪ್ರತಿಕ್ರಿಯಿಸಿರುವ ಶಾಲಾ ಆಡಳಿತ ಮಂಡಳಿ, ಆರೋಪಿಯ ನಡವಳಿಕೆ ಶಾಲಾ ವೃತ್ತಿಪರ ಮಾನದಂಡಗಳಿಗೆ ವಿರುದ್ಧವಾಗಿದೆ. ಉದ್ಯೋಗಿಯ ವೈಯಕ್ತಿಕ ನಡವಳಿಕೆಯಿಂದ ಶಾಲೆ ದೂರ ಉಳಿಯಲಿದೆ. ನಮ್ಮ ವಿದ್ಯಾರ್ಥಿಗಳಿಗೆ ಹಾನಿಯುಂಟು ಮಾಡುವ ಯಾವುದೇ ಅಪರಾಧಗಳನ್ನು ನಾವು ಸಹಿಸುವುದಿಲ್ಲ ಎಂದು ತಿಳಿಸಿದೆ.

    ಆಕೆಯ ಬಂಧನದ ನಂತರ ಶಿಕ್ಷಕಿಯ ಪ್ರೊಫೈಲ್‌ನ್ನು  ಶಾಲೆಯ ವೆಬ್‍ಸೈಟ್‌ನ ಶಿಕ್ಷಕರ ಡೈರೆಕ್ಟರಿಯಿಂದ ತೆಗೆದುಹಾಕಲಾಗಿದೆ. ಆಕೆ ಏಳು ವರ್ಷಗಳಿಂದ ಶಾಲೆಯಲ್ಲಿ ಕೆಲಸ ಮಾಡುತ್ತಿದ್ದಳು ಎಂದು ತಿಳಿದು ಬಂದಿದೆ. ಇದನ್ನೂ ಓದಿ: ಇಬ್ಬರು ಮಕ್ಕಳನ್ನು ಕೊಂದಿದ್ದ ತಾಯಿ ಜೈಲಿನಲ್ಲೇ ನೇಣಿಗೆ ಶರಣು

  • ಮದುವೆ ಒಪ್ಪಂದಕ್ಕೆ ಒಪ್ಪದ ಶಿಕ್ಷಕಿಯ ಅಪಹರಣ

    ಮದುವೆ ಒಪ್ಪಂದಕ್ಕೆ ಒಪ್ಪದ ಶಿಕ್ಷಕಿಯ ಅಪಹರಣ

    ಹಾಸನ: ಮದುವೆ (Marriage) ಒಪ್ಪಂದಕ್ಕೆ ಒಪ್ಪದ ಹಿನ್ನೆಲೆಯಲ್ಲಿ ಶಾಲಾ ಶಿಕ್ಷಕಿಯನ್ನು ಕಿಡ್ನಾಪ್ (Teacher Kidnap) ಮಾಡಿದ ಪ್ರಕರಣವೊಂದು ಹಾಸನದಲ್ಲಿ ಬೆಳಕಿಗೆ ಬಂದಿದೆ.

    ಹಾಸನ (Hassan) ಹೊರವಲಯದ ಬಿಟ್ಟಗೌಡನಹಳ್ಳಿಯ ಬಳಿ ಇಂದು ಬೆಳ್ಳಂಬೆಳಗ್ಗೆ ಸಿನಿಮೀಯ ರೀತಿಯಲ್ಲಿ ಈ ಘಟನೆ ನಡೆದಿದೆ. ಬೆಳಗ್ಗೆ ಶಾಲೆಗೆ ತೆರಳಲು ಹೊರಟಿದ್ದ ಶಿಕ್ಷಕಿಯನ್ನು ಈಕೆಯ ಸಂಬಂಧಿ ರಾಮು ಅಪಹರಿಸಿರುವ ಆರೋಪ ಕೇಳಿಬಂದಿದೆ. ಇದನ್ನೂ ಓದಿ: Breaking- ಹೆಂಡತಿ ಮತ್ತೆ ಬಂದರೆ ರಾಣಿ ಹಾಗೆ ನೋಡ್ಕೋತೀನಿ: ಮದುವೆ ಬಗ್ಗೆ ಬಾಯ್ಬಿಟ್ಟ ವರ್ತೂರ್

    15 ದಿನಗಳ ಹಿಂದೆ ರಾಮು ಮತ್ತು ಪೋಷಕರು ಮದುವೆ ಪ್ರಸ್ತಾಪದೊಂದಿಗೆ ಶಿಕ್ಷಕಿ ಮನೆಗೆ ಬಂದಿದ್ದರು. ಈ ವೇಳೆ ಮದುವೆ ಪ್ರಸ್ತಾಪಕ್ಕೆ ಯುವತಿ ಹಾಗೂ ಯುವತಿ ಕುಟುಂಬ ಸದಸ್ಯರು ವಿರೋಧ ವ್ಯಕ್ತಪಡಿಸಿದ್ದರು. ಈ ಹಿನ್ನೆಲೆಯಲ್ಲಿ ಶಿಕ್ಷಕಿ ಮದುವೆಗೆ ಒಪ್ಪಿಲ್ಲವೆಂದು ಆಕೆಯನ್ನು ಕಿಡ್ನಾಪ್ ಮಾಡಿದ್ದಾರೆ ಎಂದು ಶಿಕ್ಷಕಿಯ ಕುಟುಂಬಸ್ಥರು ಗಂಭೀರ ಆರೋಪಿಸಿದ್ದಾರೆ. ಇದನ್ನೂ ಓದಿ: ಮನೆಬಾಗಿಲಿಗೇ ಅಂಗನವಾಡಿ ಕಾರ್ಯಕರ್ತೆಯರು – ದುಡ್ಡು ಜಮೆಯಾಗದ `ಗೃಹಲಕ್ಷ್ಮಿ’ಯರ ದಾಖಲೆ ಸಂಗ್ರಹ

    ಹಾಸನ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು, ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

  • ಇನ್ಮುಂದೆ ಖಾಸಗಿ ಶಾಲಾ ಶಿಕ್ಷಕರಿಗೂ ರಾಷ್ಟ್ರೀಯ ಪ್ರಶಸ್ತಿ ನೀಡಲು ಕೇಂದ್ರ ನಿರ್ಧಾರ

    ಇನ್ಮುಂದೆ ಖಾಸಗಿ ಶಾಲಾ ಶಿಕ್ಷಕರಿಗೂ ರಾಷ್ಟ್ರೀಯ ಪ್ರಶಸ್ತಿ ನೀಡಲು ಕೇಂದ್ರ ನಿರ್ಧಾರ

    ನವದೆಹಲಿ: ಕೇಂದ್ರ ಸರ್ಕಾರ ಮಹತ್ವದ ನಿರ್ಧಾರವೊಂದನ್ನು ತೆಗೆದುಕೊಂಡಿದೆ. ಇನ್ನು ಮುಂದೆ ಖಾಸಗಿ ಶಾಲೆಗಳ ಶಿಕ್ಷಕರಿಗೂ (Private School Teacher) ರಾಷ್ಟ್ರೀಯ ಪ್ರಶಸ್ತಿ (National Awards to Teachers 2023) ನೀಡಲು ಕೇಂದ್ರ ನಿರ್ಧರಿಸಿದೆ.

    ಇಷ್ಟು ದಿನ ಸರ್ಕಾರಿ ಶಾಲಾ ಶಿಕ್ಷಕರಿಗಷ್ಟೇ ರಾಷ್ಟ್ರೀಯ ಪ್ರಶಸ್ತಿ ನೀಡಲಾಗುತ್ತಿತ್ತು. ಇದೀಗ ಕೇಂದ್ರ ಹೊಸ ನಿಯಮವನ್ನು ಜಾರಿಗೆ ತಂದಿದ್ದು, ಈ ವರ್ಷದಿಂದ ಖಾಸಗಿ ಶಾಲೆಗಳಲ್ಲಿ ಸೇವೆ ಸಲ್ಲಿಸುತ್ತಿರುವ ಅತ್ಯತ್ತಮ ಶಿಕ್ಷಕರಿಗೂ ರಾಷ್ಟ್ರೀಯ ಪ್ರಶಸ್ತಿ ನೀಡಲು ತೀರ್ಮಾನಿಸಿದೆ. ಇದನ್ನೂ ಓದಿ: ಸಿಎಂ ಸಿದ್ದರಾಮಯ್ಯರನ್ನು ಭೇಟಿ ಮಾಡಿದ ಚಿತ್ರೋದ್ಯಮದ ಗಣ್ಯರು

    ರಾಷ್ಟ್ರೀಯ ಶಿಕ್ಷಕರ ಪ್ರಶಸ್ತಿ 2023ಕ್ಕೆ ಕೇಂದ್ರ ಸರ್ಕಾರ ಅರ್ಜಿ ಆಹ್ವಾನ ಮಾಡಿದೆ. ಜುಲೈ 15 ರವರೆಗೆ ಆನ್‌ಲೈನ್ ಮೂಲಕ ಉತ್ತಮ ಶಿಕ್ಷಕ ಪ್ರಶಸ್ತಿಗೆ ಅರ್ಜಿ ಸಲ್ಲಿಸಲು ಸಮಯಾವಕಾಶ ನೀಡಲಾಗಿದೆ. ಅತ್ಯುತ್ತಮ ಶಿಕ್ಷಕರಿಗೆ ಹಾಗೂ 10 ವರ್ಷ ಸತತವಾಗಿ ಸೇವೆ ಸಲ್ಲಿಸಿರುವ ಖಾಸಗಿ ಶಿಕ್ಷಕರಿಗೂ ಪ್ರಶಸ್ತಿ ನೀಡಲು ನಿರ್ಧರಿಸಲಾಗಿದೆ. ಇದನ್ನೂ ಓದಿ: ಕೃಷಿ ಇಲಾಖೆ ಅಧಿಕಾರಿಗಳ ಮನೆ ಮೇಲೆ ಲೋಕಾಯುಕ್ತ ರೇಡ್ – 2 ಆಮೆಗಳು ಪತ್ತೆ

    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_title” view=”carousel” /]

  • ವರದಕ್ಷಿಣೆ ಕಿರುಕುಳ – ಶಾಲಾ ಕೊಠಡಿಯಲ್ಲೇ ವಿಷ ಸೇವಿಸಿ ಶಿಕ್ಷಕಿ ಆತ್ಮಹತ್ಯೆ

    ವರದಕ್ಷಿಣೆ ಕಿರುಕುಳ – ಶಾಲಾ ಕೊಠಡಿಯಲ್ಲೇ ವಿಷ ಸೇವಿಸಿ ಶಿಕ್ಷಕಿ ಆತ್ಮಹತ್ಯೆ

    ವಿಜಯನಗರ: ವರದಕ್ಷಿಣೆ ಕಿರುಕುಳಕ್ಕೆ ಬೇಸತ್ತು ಖಾಸಗಿ ಶಾಲಾ ಶಿಕ್ಷಕಿಯೊಬ್ಬರು (School Teacher) ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ವಿಜಯನಗರದಲ್ಲಿ (Vijayanagara) ನಡೆದಿದೆ.

    ಬಸಮ್ಮ ಅಲಿಯಾಸ್‌ ರೂಪಾ (34) ಆತ್ಮಹತ್ಯೆ ಮಾಡಿಕೊಂಡ ಶಿಕ್ಷಕಿ. ಇವರು ಹಡಗಲಿಯ ನ್ಯಾಷನಲ್‌ ಶಾಲೆಯಲ್ಲಿ ಶಿಕ್ಷಕಿಯಾಗಿದ್ದರು. ಶಾಲಾ ಕೊಠಡಿಯಲ್ಲೇ ವಿಷ ಸೇವಿಸಿ ಆತ್ಮಹತ್ಯೆಗೆ ಶರಣಾಗಿದ್ದಾರೆ. ಇದನ್ನೂ ಓದಿ: ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡರು ಅಸ್ಪತ್ರೆಯಿಂದ ಡಿಸ್ಚಾರ್ಜ್

    ಪತಿ ಅರ್ಜುನ್‌ ಪರಶೆಟ್ಟಿ ಕೂಡ ಅದೇ ಶಾಲಾಯಲ್ಲಿ ಶಿಕ್ಷಕನಾಗಿದ್ದ. ರೂಪಾ ಮತ್ತು ಅರ್ಜುನ್‌ ಪರಸ್ಪರ ಪ್ರೀತಿಸಿ 10 ವರ್ಷಗಳ ಹಿಂದೆ ಮದುವೆಯಾಗಿದ್ದರು. ನಂತರ ಪತಿ ಹಾಗೂ ಆತನ ಕುಟುಂಬದವರಿಂದ ರೂಪಾಗೆ ವರದಕ್ಷಿಣೆ ಕಿರುಕುಳ ನೀಡಲಾಗಿದೆ. ಇದರಿಂದ ಮನನೊಂದು ರೂಪಾ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎನ್ನಲಾಗಿದೆ.

    ನ್ಯಾಷನಲ್‌ ಶಾಲೆ ಅರ್ಜುನ್‌ ಕುಟುಂಬದ ಒಡೆತನಕ್ಕೆ ಸೇರಿದ್ದಾಗಿದೆ. ಗಂಡ-ಹೆಂಡತಿ ಇಬ್ಬರೂ ಶಾಲೆಯಲ್ಲಿ ಶಿಕ್ಷಕರಾಗಿ ಸೇವೆ ಸಲ್ಲಿಸುತ್ತಿದ್ದರು. ಪತಿ ಮನೆಯವರು ವರದಕ್ಷಿಣೆ ಕಿರುಕುಳ ನೀಡುತ್ತಿದ್ದರಿಂದ ಬೇಸತ್ತಿದ್ದರು. ಭಾನುವಾರ ಪರೀಕ್ಷೆ ಕೆಲಸದ ನೆಪದಲ್ಲಿ ಶಾಲೆಗೆ ಬಂದು ಆತ್ಮಹತ್ಯೆಗೆ ಶರಣಾಗಿದ್ದಾರೆ. ಡೆತ್‌ನೋಟ್‌ ಬರೆದಿಟ್ಟು ರೂಪಾ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಇದನ್ನೂ ಓದಿ: ಪಂಚರತ್ನ ಪ್ರಚಾರದ ವೇಳೆ ಜೆಡಿಎಸ್ ವಾಹನದ ಮೇಲೆ ಕಲ್ಲುತೂರಾಟ – ಚಾಲಕನಿಗೆ ಗಾಯ

    ಈ ಸಂಬಂಧ ಹಡಗಲಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪತಿ ಅರ್ಜುನ್‌, ಅತ್ತೆ ಅಂಬಿಕಾ, ನಾದಿನಿ ಸಂಗೀತಾ ಸೇರಿದಂತೆ ಆರು ಮಂದಿ ವಿರುದ್ಧ ಕೇಸ್‌ ದಾಖಲಾಗಿದೆ.

  • ಪುಲ್ವಾಮಾ ದಾಳಿ ಒಂದು ವ್ಯವಸ್ಥಿತ ಪಿತೂರಿ – ವಾಟ್ಸಪ್‌ ಸ್ಟೇಟಸ್‌ ಹಾಕಿದ ಸರ್ಕಾರಿ ಶಾಲಾ ಶಿಕ್ಷಕ

    ಪುಲ್ವಾಮಾ ದಾಳಿ ಒಂದು ವ್ಯವಸ್ಥಿತ ಪಿತೂರಿ – ವಾಟ್ಸಪ್‌ ಸ್ಟೇಟಸ್‌ ಹಾಕಿದ ಸರ್ಕಾರಿ ಶಾಲಾ ಶಿಕ್ಷಕ

    ಕೊಪ್ಪಳ: ಪುಲ್ವಾಮಾ ದಾಳಿ (Pulwama Attack) ಒಂದು ವ್ಯವಸ್ಥಿತ ಪಿತೂರಿ ಎಂದು ಸರ್ಕಾರಿ ಶಾಲಾ ಶಿಕ್ಷಕರೊಬ್ಬರು ವಾಟ್ಸಪ್‌ ಸ್ಟೇಟಸ್‌ ಹಾಕಿದ್ದ ಘಟನೆ ಕೊಪ್ಪಳದಲ್ಲಿ ನಡೆದಿದೆ.

    ಕೊಪ್ಪಳ (Koppala) ಜಿಲ್ಲೆ ಕನಕಗಿರಿ ತಾಲೂಕಿನ ಗೋಡಿನಾಳ ಗ್ರಾಮದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲಾ ಶಿಕ್ಷಕ ತಮ್ಮ ಸ್ಟೇಟಸ್‌ನಲ್ಲಿ ಪುಲ್ವಾಮಾ ದಾಳಿ ಕುರಿತು ಪೋಸ್ಟ್‌ ಹಾಕಿದ್ದಾರೆ. ಇದನ್ನೂ ಓದಿ: ಪುಲ್ವಾಮಾ ದಾಳಿಗೆ 4 ವರ್ಷ: ಆ ಒಂದು ಕರಾಳ ದಿನದಲ್ಲಿ ನಡೆದಿದ್ದೇನು?

    ಸ್ಟೇಟಸ್‌ನಲ್ಲಿ ಏನಿದೆ?
    ಪುಲ್ವಾಮಾ ದಾಳಿ ಒಂದು ವ್ಯವಸ್ಥಿತ ಪಿತೂರಿ. ಇಲ್ಲಿ ಅಧಿಕಾರಕ್ಕಾಗಿ ಏನೆಲ್ಲ ನಡೆಯುತ್ತದೆ ಎನ್ನುವುದಕ್ಕೆ ಇದೊಂದು ಜ್ವಲಂತ ಉದಾಹರಣೆ. ಮಡಿದ ವೀರರಿಗೆ ಸ್ಮರಣೆಗಳು. ಇದೇ ವ್ಯವಸ್ಥೆ ಮುಂದುವರಿದರೆ ಭಾರತದ ಭವಿಷ್ಯವೂ ಬ್ಲ್ಯಾಕ್‌ ಡೇ ಆಗಿ ಪರಿಣಮಿಸಬಹುದು. ಈಗ ನಾವು ಎಚ್ಚೆತ್ತುಕೊಳ್ಳಬೇಕು. ದೇಶ ಮೊದಲು ಎಂದು ಸ್ಟೇಟಸ್‌ನಲ್ಲಿ ಬರೆದುಕೊಂಡಿದ್ದರು.

    2019ರ ಫೆಬ್ರವರಿ 14ರಂದು ಭಾರತೀಯ ಸೇನೆ (Indian Army) ಭದ್ರತಾಪಡೆಗಳ ಮೇಲೆ ನಡೆದ ದಾಳಿಯಲ್ಲಿ 40 ಸಿಆರ್‌ಪಿಎಫ್ (CRPF) ಯೋಧರು ಹುತಾತ್ಮರಾಗಿದ್ದರು. ಜೈಶ್-ಎ-ಮೊಹಮ್ಮದ್ (JEM) ಸಂಘಟನೆಯ ಉಗ್ರಗಾಮಿಗಳು ನಡೆಸಿದ್ದ ಆತ್ಮಾಹುತಿ ಬಾಂಬ್ ದಾಳಿಯಲ್ಲಿ ಸೇನೆಯ ವಾಹನದಲ್ಲಿ ಹೋಗುತ್ತಿದ್ದ ಯೋಧರು ಕ್ಷಣಾರ್ಧದಲ್ಲಿ ಜೀವ ಕಳೆದುಕೊಂಡರು. ಇದನ್ನೂ ಓದಿ: ಪುಲ್ವಾಮಾ ದಾಳಿಯನ್ನು ಸಂಭ್ರಮಿಸಿದ್ದ ಎಂಜಿನಿಯರಿಂಗ್‌ ವಿದ್ಯಾರ್ಥಿಗೆ 5 ವರ್ಷ ಜೈಲು

    Live Tv
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k

  • ಶೀಲ ಶಂಕಿಸಿ ಪತ್ನಿಯನ್ನು ಭೀಕರವಾಗಿ ಕೊಂದ ಶಾಲೆ ಶಿಕ್ಷಕ

    ಶೀಲ ಶಂಕಿಸಿ ಪತ್ನಿಯನ್ನು ಭೀಕರವಾಗಿ ಕೊಂದ ಶಾಲೆ ಶಿಕ್ಷಕ

    ಕಲಬುರಗಿ: ಶೀಲವನ್ನು ಶಂಕಿಸಿ ವ್ಯಕ್ತಿಯೊಬ್ಬ ತನ್ನ ಪತ್ನಿಯನ್ನು ಭೀಕರವಾಗಿ ಹತ್ಯೆ ಮಾಡಿದ ಘಟನೆ ಕಲಬುರಗಿ (Kalaburagi) ನಗರದ ಅಂಬಿಕಾ ಕಾಲೋನಿಯಲ್ಲಿ ನಡೆದಿದೆ.

    ನಗರದ ಅಂಬಿಕಾ ಕಾಲೋನಿಯ ಫರೀದಾ ಬೇಗಂ (39) ಪತಿ ಎಜಾಜ್ ಅಹ್ಮದ್‌ನಿಂದ ಕೊಲೆಯಾದ ದುರ್ದೈವಿ. ಕಳೆದ 13 ವರ್ಷದ ಹಿಂದೆ ಈಕೆಯ ಜೊತೆಗೆ ವಿವಾಹ ಆಗಿದ್ದ ಅಹ್ಮದ್‌, ರಾತ್ರಿ ವೇಳೆ ಮನೆಯಲ್ಲಿ ಮಲಗಿದ್ದ ಸಂದರ್ಭದಲ್ಲಿ ತಲೆಯ ಮೇಲೆ ಕಲ್ಲು ಎತ್ತಿ ಹಾಕಿ ಭೀಕರವಾಗಿ ಕೊಲೆ ಮಾಡಿದ್ದಾನೆ. ಇದನ್ನೂ ಓದಿ: ಸೇತುವೆ ತಡೆಗೋಡೆಗೆ ಕಾರು ಡಿಕ್ಕಿ – ನಾಲ್ವರು ಸ್ಥಳದಲ್ಲೇ ಸಾವು

    ಅನೈತಿಕ ಸಂಬಂಧ ಹಾಗೂ ವರದಕ್ಷಿಣೆ ಕಿರುಕುಳ ಆರೋಪದ ಹಿನ್ನೆಲೆಯಲ್ಲಿ ಕೊಲೆ ಮಾಡಿದ್ದಾನೆ ಎಂದು ಪ್ರಾಥಮಿಕ ವರದಿಯಲ್ಲಿ ತಿಳಿದುಬಂದಿದೆ.

    ಪತಿ-ಪತ್ನಿ ಇಬ್ಬರು ಸರ್ಕಾರಿ ಶಾಲೆಯಲ್ಲಿ ಶಿಕ್ಷಕರಾಗಿ ಕೆಲಸ ಮಾಡುತ್ತಿದ್ದರು. ನಿತ್ಯ ಶಾಲೆಗೆ ಹೋಗದಂತೆ ಪತಿ ಪೀಡಿಸುತ್ತಿದ್ದ ಎಂದು ಮಾಹಿತಿ ಬಂದಿದ್ದು, ಸ್ಟೇಶನ್ ಬಜಾರ್ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇದನ್ನೂ ಓದಿ: ಲವ್ವರ್ ಹತ್ಯೆಗೂ ಮುನ್ನ ಗೆಳೆಯರ ಜೊತೆ ಎಂಗೇಜ್ಮೆಂಟ್ ಪಾರ್ಟಿ ಮಾಡಿದ್ದ ಕೊಲೆಗಡುಕ!

    Live Tv
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k

  • ಶಾಲಾ ಶಿಕ್ಷಕನಿಂದ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ

    ಶಾಲಾ ಶಿಕ್ಷಕನಿಂದ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ

    – ಶಿಕ್ಷಕನ ವಿರುದ್ಧ ಗ್ರಾಮಸ್ಥರು ಆಕ್ರೋಶ

    ಹಾವೇರಿ: ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಹಿನ್ನೆಲೆ ಶಿಕ್ಷಕನ ವಿರುದ್ಧ ವಿದ್ಯಾರ್ಥಿನಿಯ ಪೋಷಕರು ಮತ್ತು ಗ್ರಾಮಸ್ಥರ ಆಕ್ರೋಶ ವ್ಯಕ್ತಪಡಿಸಿದ ಘಟನೆ ಹಾವೇರಿ ಜಿಲ್ಲೆ ರಾಣೆಬೆನ್ನೂರು ತಾಲೂಕಿನ ದೇವರಗುಡ್ಡ ಗ್ರಾಮದಲ್ಲಿ ನಡೆದಿದೆ.

    ದೇವರಗುಡ್ಡ ಗ್ರಾಮದ ಮಾಲತೇಶ್ ಪ್ರೌಢಶಾಲೆ ಶಿಕ್ಷಕ ಮಲ್ಲಪ್ಪ ತಳವಾರ ವಿರುದ್ಧ ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮಲ್ಲಪ್ಪ ಆನ್‍ಲೈನ್ ಕ್ಲಾಸ್ ನಡೆಯುತ್ತಿರಬೇಕಾದರೆ 10ನೇ ತರಗತಿ ವಿದ್ಯಾರ್ಥಿನಿಯ ಫೋನ್ ನಂಬರ್ ಅನ್ನು ತೆಗೆದುಕೊಂಡಿದ್ದಾನೆ. ನಂತರ ಆಕೆಗೆ ಅಶ್ಲೀಲ ಮೆಸೇಜ್ ಗಳನ್ನ ಕಳಿಸಿ, ಲೈಂಗಿಕ ಕಿರುಕುಳ ನೀಡಲು ಪ್ರಾರಂಭಿಸಿದ್ದಾನೆ. ಈ ಹಿನ್ನೆಲೆ ವಿದ್ಯಾರ್ಥಿನಿಯ ಕುಟುಂಬ ಮಲ್ಲಪ್ಪನ ವಿರುದ್ಧ ದೂರು ನೀಡಿದ್ದು, ಆತನನ್ನು ಶಾಲೆಯಿಂದ ಅಮಾನತು ಮಾಡಲಾಗಿದೆ. ಇದನ್ನೂ ಓದಿ: ಇಸ್ರೋ ಖಾಸಗೀಕರಣ – ಬೆಂಗಳೂರಿನ ಕಛೇರಿ ಗುಜರಾತ್‍ಗೆ ವರ್ಗಾವಣೆ ಖಂಡಿಸಿ ಪ್ರತಿಭಟನೆ

    ಶಿಕ್ಷಕನ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ಶಿಕ್ಷಣ ಇಲಾಖೆ ಅಧಿಕಾರಿಗಳಿಗೆ ಗ್ರಾಮಸ್ಥರು ಹಾಗೂ ವಿದ್ಯಾರ್ಥಿನಿಯ ಪೋಷಕರು ಆಗ್ರಹಿಸಿದ್ದಾರೆ. ಸ್ಥಳಕ್ಕೆ ರಾಣೆಬೆನ್ನೂರು ಗ್ರಾಮೀಣ ಠಾಣೆ ಪಿಎಸ್‍ಐ ವಸಂತ ಹಾಗೂ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

  • ನೇಣು ಬಿಗಿದುಕೊಂಡು ಶಿಕ್ಷಕಿ ಆತ್ಮಹತ್ಯೆ

    ನೇಣು ಬಿಗಿದುಕೊಂಡು ಶಿಕ್ಷಕಿ ಆತ್ಮಹತ್ಯೆ

    ಚಿತ್ರದುರ್ಗ: ಎಸ್‍ಡಿಎಂಸಿ ಸದಸ್ಯ ಹಾಗೂ ಸಹ-ಶಿಕ್ಷಕರ ಕಿರುಕುಳ ಆರೋಪದಿಂದ ಮನನೊಂದ ಶಿಕ್ಷಕಿ ಆತ್ಮಹತ್ಯೆಗೆ ಶರಣಾದ ಘಟನೆ ಚಿತ್ರದುರ್ಗ ಜಿಲ್ಲೆಯ ಮೊಳಕಾಲ್ಮೂರು ತಾಲೂಕಿನ ರಾಂಪುರದ ಅಕ್ಕಮಹಾದೇವಿ ಬಡಾವಣೆಯಲ್ಲಿ ನಡೆದಿದೆ.

    ದೇವಸಮುದ್ರ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಮತ್ತು ಪ್ರೌಢಶಾಲೆಯ ಮುಖ್ಯಶಿಕ್ಷಕಿ ತಿಪ್ಪೀರಮ್ಮ(46) ನೇಣಿಗೆ ಶರಣಾದ ದುರ್ದೈವಿಯಾಗಿದ್ದಾರೆ. ವಿದ್ಯಾರ್ಥಿಗಳಿಗೆ ವಿತರಿಸುವ ಶೂ ಖರೀದಿಯಲ್ಲಿ ತಿಪ್ಪೀರಮ್ಮ ಅವ್ಯವಹಾರ ಎಸಗಿದ್ದಾರೆ ಎಂದು ದೂರು ನೀಡಲಾಗಿತ್ತು. ಈ ಕುರಿತು ಇಲಾಖಾ ಅಧಿಕಾರಿಗಳು ತನಿಖೆಯನ್ನು ನಡೆಸಿದ್ದರು. ತನಿಖೆ ಬಳಿಕ ಮುಖ್ಯಶಿಕ್ಷಕಿ ತಿಪ್ಪಿರಮ್ಮರನ್ನು ಚನ್ನಮ್ಮನ ಹಳ್ಳಿ ಶಾಲೆಗೆ ವರ್ಗಾವಣೆ ಮಾಡಿದ್ದರು. ಇದರಿಂದ ಅವಮಾನ ತಾಳಲಾರದೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಹೇಳಲಾಗಿದೆ.

    ಎಸ್‍ಡಿಎಂಸಿ ಸದಸ್ಯ ಲಿಂಗಪ್ಪ, ಸಹಶಿಕ್ಷಕಿ ಸವಿತಾ, ಶಾಂತಮ್ಮ ಹಾಗೂ ಸಹಶಿಕ್ಷಕ ರಮೇಶ್ ಪ್ರತಿನಿತ್ಯ ವಿನಾಕಾರಣ ಕಿರುಕುಳ ನೀಡುತ್ತಿದ್ದರು ಎಂದು ಕುಟುಂಬದ ಸದಸ್ಯರೊಂದಿಗೆ ತಿಪ್ಪೀರಮ್ಮ ಅಳಲು ತೋಡಿಕೊಂಡಿದ್ದರು ಎಂದು ತಿಳಿದುಬಂದಿದೆ.

    ಈ ಸಂಬಂಧ ರಾಂಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.