Tag: school

  • ಭಿಕ್ಷೆ ಬೇಡುವ ಮಕ್ಕಳಿಗಾಗಿ ಶಾಲೆ ತೆರೆದ ಪೊಲೀಸರು – 450 ಮಕ್ಕಳಿಗೆ ವಿದ್ಯಾಭ್ಯಾಸ

    ಭಿಕ್ಷೆ ಬೇಡುವ ಮಕ್ಕಳಿಗಾಗಿ ಶಾಲೆ ತೆರೆದ ಪೊಲೀಸರು – 450 ಮಕ್ಕಳಿಗೆ ವಿದ್ಯಾಭ್ಯಾಸ

    ಜೈಪುರ: ಭಿಕ್ಷೆ ಬೇಡುವ ಮಕ್ಕಳಿಗಾಗಿ ರಾಜಸ್ಥಾನ ಪೊಲೀಸರು ಶಾಲೆ ತೆರೆದಿದ್ದು, 450 ಮಕ್ಕಳು ಈಗ ಈ ಶಾಲೆಯಲ್ಲಿ ಓದುತ್ತಿದ್ದಾರೆ.

    ಧರ್ಮವೀರ್ ಜಖರ್ ಅವರು 2016ರಲ್ಲಿ ರಾಜಸ್ಥಾನದ ಚುರುವಿನಲ್ಲಿ ಕರ್ತವ್ಯಕ್ಕೆ ನಿಯೋಜನೆಗೊಂಡಿದ್ದರು. ಈ ವೇಳೆ ಅವರು ಭಿಕ್ಷೆ ಬೇಡುವ ಮಕ್ಕಳಿಗಾಗಿ ಶಾಲೆ ತೆರೆದಿದ್ದಾರೆ. ಈಗ ಇವರ ಶಾಲೆಯಲ್ಲಿ 450 ಮಕ್ಕಳು ವಿದ್ಯಾಭ್ಯಾಸ ಪಡೆಯುತ್ತಿದ್ದಾರೆ.

    ಧರ್ಮವೀರ್ ಚುರು ಜಿಲ್ಲೆಯ ಮಹಿಳಾ ಪೊಲೀಸ್ ಠಾಣೆ ಬಳಿ ಈ ಶಾಲೆಯನ್ನು ತೆರೆದಿದ್ದರು. ಈ ಬಗ್ಗೆ ಪ್ರತಿಕ್ರಿಯಿಸಿದ ಅವರು ಬೀದಿಯಲ್ಲಿ ಭಿಕ್ಷೆ ಬೇಡುವ ಮಕ್ಕಳ ಕೈಯಲ್ಲಿ ತಟ್ಟೆ ಬದಲು ಪೆನ್ಸಿಲ್ ಹಾಗೂ ಪುಸ್ತಕಗಳಿರಬೇಕು. ಮಕ್ಕಳು ಓದುವ ಹಾಗೂ ಬರೆಯುವ ಮೂಲಕ ರಾಷ್ಟ್ರ ನಿರ್ಮಾಣಕ್ಕೆ ಸಹಾಯ ಮಾಡಲು ಸಾಧ್ಯವಾಗುತ್ತದೆ. ಪೊಲೀಸ್ ಠಾಣೆಯ ಸುತ್ತಮುತ್ತ ಅನೇಕ ಮಕ್ಕಳು ಭಿಕ್ಷೆ ಬೇಡುವುದನ್ನು ನಾನು ನೋಡಿದ್ದೇನೆ. ಅವರನ್ನು ಪ್ರಶ್ನಿಸಿದಾಗ ಅವರು ಅನಾಥರು ಎಂಬ ವಿಷಯ ತಿಳಿಯಿತು. ಸತ್ಯವನ್ನು ತಿಳಿಯಲು ಅವರು ವಾಸಿಸುತ್ತಿದ್ದ ಸ್ಲಂಗೆ ಹೋಗಿದ್ದೆ. ಈ ಕಾರಣಕ್ಕೆ ನಾನು ಈ ನಿರ್ಧಾರ ತೆಗೆದುಕೊಂಡೆ ಎಂದು ಹೇಳಿದರು.

    ಶಾಲೆ ಶುರು ಮಾಡುವ ಮೊದಲು ಧರ್ಮವೀರ್ ಒಂದು ಗಂಟೆಗಳ ಕಾಲ ಮಕ್ಕಳಿಗೆ ಪಾಠ ಮಾಡುತ್ತಿದ್ದರು. ಇದೇ ರೀತಿ ನಿಧಾನವಾಗಿ ‘ಅಪ್ನಿ ಪಾಠಶಾಲಾ'(ನಮ್ಮ ಶಾಲೆ) ಶಾಲೆಯ ರೂಪವನ್ನು ಪಡೆಯಿತು. ಮಹಿಳಾ ಪೇದೆಗಳು ಹಾಗೂ ಸಮಾಜ ಸೇವೆ ಮಾಡುವವರು ಧರ್ಮವೀರ್ ಅವರ ಸಹಾಯ ಮಾಡುತ್ತಾರೆ. ಈ ಶಾಲೆಯಲ್ಲಿ ಓದುವ ಸುಮಾರು 200 ಮಕ್ಕಳನ್ನು ಸರ್ಕಾರಿ ಶಾಲೆಗಳಲ್ಲಿ ದಾಖಲಿಸಲಾಗಿದೆ. ಇದರಲ್ಲಿ 90 ಮಕ್ಕಳು ಆರನೇ ಹಾಗೂ ಎಂಟನೇ ತರಗತಿ ಓದುತ್ತಿದ್ದಾರೆ.

    ಶಾಲೆಯ ಹತ್ತಿರದಲ್ಲೇ ನಮ್ಮದೊಂದು ವಾಹನವಿದ್ದು, ಅದರಲ್ಲಿ ಮಕ್ಕಳನ್ನು ಸ್ಲಂನಿಂದ ಸ್ಕೂಲ್‍ಗೆ ಕರೆದುಕೊಂಡು ಹೋಗಲಾಗುತ್ತದೆ. ಇದಲ್ಲದೆ ಮಕ್ಕಳಿಗಾಗಿ ಸ್ಕೂಲ್ ಡ್ರೆಸ್, ಶೂ, ಊಟ ಹಾಗೂ ಪುಸ್ತಕಗಳನ್ನು ಸಹ ನೀಡುತ್ತೇವೆ. ಇದೆಲ್ಲಾ ಉಚಿತವಾಗಿದ್ದು, ಇದಕ್ಕಾಗಿ ಇಲಾಖೆಯಲ್ಲಿರುವ ಸಮಾಜ ಸೇವಕರು ಹಾಗೂ ಕೆಲವು ಸಂಸ್ಥೆಗಳು ಸಹಾಯ ಮಾಡುತ್ತದೆ. ಮಕ್ಕಳನ್ನು ಶಾಲೆಗೆ ಕರೆತರುವುದು ಬಹಳ ಕಷ್ಟದ ಕೆಲಸವಾಗಿತ್ತು. ಏಕೆಂದರೆ ಮೂಲಭೂತ ಸೌಕರ್ಯ ಸಿಗದ್ದಕ್ಕೆ ಅವರು ಭಿಕ್ಷೆ ಬೇಡುತ್ತಿದ್ದರು. ಹಾಗಾಗಿ ನಾವು ಮೊದಲು ಊಟದ ವ್ಯವಸ್ಥೆ ಮಾಡಿದ್ದೆವು ಎಂದು ಧರ್ಮವೀರ್ ಹೇಳಿದರು.

    ಉತ್ತರ ಪ್ರದೇಶ ಹಾಗೂ ಬಿಹಾರ ರಾಜ್ಯದ ಕೆಲವು ಕುಟುಂಬಗಳು ಕೆಲಸ ಹುಡುಕಲು ಇಲ್ಲಿಗೆ ಬರುತ್ತಾರೆ. ನಾವು ಅವರಿಗೂ ಹಾಗೂ ಅವರ ಮಕ್ಕಳಿಗೂ ಶಾಲೆಗೆ ಬರುವಂತೆ ಪ್ರೇರೇಪಿಸಿದ್ದೆವು. ಕೆಲವು ಮಕ್ಕಳಿಗೆ ರಸ್ತೆಯಲ್ಲಿ ಕಸ ಎತ್ತಬೇಕೆಂದು ಹೇಳಲಾಗಿತ್ತು. ಏಕೆಂದರೆ ಅವರು ಈ ರೀತಿ ಮಾಡದಿದ್ದರೆ ಅವರ ಪೋಷಕರು ಶಾಲೆಗೆ ಕಳುಹಿಸಲು ನಿರಾಕರಿಸುತ್ತಿದ್ದರು. ಹಾಗಾಗಿ ಮಕ್ಕಳು ಶಾಲೆ ಮುಗಿದ ನಂತರ ಈ ಕೆಲಸವನ್ನು ಮಾಡುತ್ತಿದ್ದರು ಎಂದು ಧರ್ಮವೀರ್ ತಿಳಿಸಿದ್ದಾರೆ.

    ಈ ಶಾಲೆ ನಡೆಸಲು ಪ್ರತಿ ತಿಂಗಳು ಒಂದೂವರೆ ಲಕ್ಷ ರೂ. ಖರ್ಚು ಆಗುತ್ತದೆ. ಈ ಹಣವನ್ನು ಜನರ ದೇಣಿಗೆ ಮತ್ತು ಸಾಮಾಜಿಕ ಜಾಲತಾಣದಲ್ಲಿ ಅಭಿಯಾನದ ಮೂಲಕ ವ್ಯವಸ್ಥೆ ಮಾಡಲಾಗಿದೆ. ಅಲ್ಲದೆ ಸರ್ಕಾರದಿಂದ ನಮಗೆ ಯಾವುದೇ ಸಹಾಯವಾಗಿಲ್ಲ. ಪೊಲೀಸ್, ಸಮಾಜ ಹಾಗೂ ಶಿಕ್ಷಣ ವಿಭಾಗದ ಸಹಾಯದಿಂದ ನಾವು ಬದಲಾವಣೆ ತರಲು ಪ್ರಯತ್ನಿಸುತ್ತಿದ್ದೇವೆ. ಈ ಮಕ್ಕಳಿಗಾಗಿ ವಿಶೇಷ ಶಾಲೆ ಹಾಗೂ ಬೇರೆ ಸಿಬ್ಬಂದಿ ವ್ಯವಸ್ಥೆ ಮಾಡುವುದು ಮುಖ್ಯ. ಈ ಮಕ್ಕಳನ್ನು ಚೆನ್ನಾಗಿ ನೋಡಿಕೊಳ್ಳಬೇಕು. ಇಲ್ಲದಿದ್ದರೆ ಇವರು ಮತ್ತೆ ಯಾವತ್ತೂ ಶಾಲೆಗೆ ಬರುವುದಿಲ್ಲ ಎಂದು ಧರ್ಮವೀರ್ ತಿಳಿಸಿದ್ದಾರೆ.

  • ಮುಂದಿನ ಪೀಳಿಗೆಗೆ ಟಿಪ್ಪುವಿನ ಮೋಸದ ಇತಿಹಾಸ ಹೇಳಿಕೊಡಬಾರದು – ಪ್ರತಾಪ್ ಸಿಂಹ

    ಮುಂದಿನ ಪೀಳಿಗೆಗೆ ಟಿಪ್ಪುವಿನ ಮೋಸದ ಇತಿಹಾಸ ಹೇಳಿಕೊಡಬಾರದು – ಪ್ರತಾಪ್ ಸಿಂಹ

    ಮೈಸೂರು: ನಮ್ಮ ಮುಂದಿನ ಪೀಳಿಗೆಗೆ ಟಿಪ್ಪುವಿನ ಮೋಸದ ಇತಿಹಾಸ ಹೇಳಿಕೊಡಬಾರದು. ಈ ನಿಟ್ಟಿನಲ್ಲಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನವರ ನಿರ್ಧಾರ ಸ್ವಾಗತಾರ್ಹ ಎಂದು ಸಂಸದ ಪ್ರತಾಪ್ ಸಿಂಹ ಸಿಎಂ ಹೇಳಿಕೆಗೆ ಬೆಂಬಲ ಸೂಚಿಸಿದ್ದಾರೆ.

    ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಶಾಲೆಗಳ ಪಠ್ಯಪುಸ್ತಕದಲ್ಲಿನ ಟಿಪ್ಪು ಪಠ್ಯ ತೆಗೆದುಹಾಕುವ ಕುರಿತ ಯಡಿಯೂರಪ್ಪನವರ ನಿರ್ಧಾರಕ್ಕೆ ನಾನು ಅಭಿನಂದನೆ ಸಲ್ಲಿಸುತ್ತೇನೆ. ಮದಕರಿ ನಾಯಕನನ್ನು ಮೋಸದಿಂದ ಕೊಂದ, ಯದುವಂಶದ ಆಡಳಿತ ಕಿತ್ತುಕೊಂಡ, ಒನಕೆ ಓಬವ್ವಳನ್ನು ಸಂಚು ಮಾಡಿ ಕೊಂದ. ಹೀಗೆ ಮೋಸದಿಂದ ವಿವಿಧ ರಾಜರುಗಳನ್ನು ಕೊಂದ ಅಪ್ಪ ಮಕ್ಕಳ ಇತಿಹಾಸ ನಮ್ಮ ಮುಂದಿನ ಪೀಳಿಗೆಗೆ ಕಲಿಸುವ ಅಗತ್ಯವಿಲ್ಲ ಎಂದು ಅಭಿಪ್ರಾಯಪಟ್ಟರು.

    ಈ ಬಗ್ಗೆ ದಿಟ್ಟ ನಿರ್ಧಾರ ಕೈಗೊಂಡಿರುವ ಬಿಎಸ್‍ವೈ ಅವರಿಗೆ ಕನ್ನಡಿಗರ ಪರವಾಗಿ ಅಭಿನಂದನೆ ಸಲ್ಲಿಸುತ್ತೇನೆ. ಕನ್ನಡವನ್ನು ಪ್ರೀತಿಸುವ ಎಲ್ಲರೂ ಈ ವಿಚಾರಕ್ಕೆ ಬೆಂಬಲ ಕೊಡುತ್ತಾರೆ ಎಂದರು.

    ಟಿಪ್ಪು ವಿಚಾರದಲ್ಲಿ ವಿಪಕ್ಷಗಳ ಟೀಕೆ ಕುರಿತು ಪ್ರತಿಕ್ರಿಯಿಸಿದ ಅವರು, ಸಿದ್ದರಾಮಯ್ಯ ಹಿರಿಯರು ಅವರ ಹೇಳಿಕೆಗೆ ನಾನು ಪ್ರತಿಕ್ರಿಯಿಸುವುದಿಲ್ಲ. ಮೈಸೂರು ಮಹಾರಾಜರು ಕಟ್ಟಿದ ಕಾಲೇಜಿನಲ್ಲಿ ಅವರು ಓದಿದ್ದಾರೆ. ಅವರು ಕಟ್ಟಿದ ಜಲಾಶಯದ ನೀರು ಕುಡಿದವರು. ಅದೆ ಮಹಾರಾಜರನ್ನು ನಾಶ ಮಾಡಿದ ಅಪ್ಪ ಮಕ್ಕಳ ಜಯಂತಿ ಆಚರಿಸುವ ನಿರ್ಧಾರ ಮಾಡುತ್ತಾರೆ. ಅಂತಹವರಿಂದ ಬೇರೆ ಏನೂ ನಿರೀಕ್ಷಿಸಲು ಸಾಧ್ಯವಿಲ್ಲ ಎಂದು ಟಾಂಗ್ ನೀಡಿದರು.

    ಬಚ್ಚೆಗೌಡ ಪುತ್ರನ ಟಿಪ್ಪು ಜಯಂತಿ ಹೇಳಿಕೆ ಕುರಿತು ಪ್ರತಿಕ್ರಿಯಿಸಿದ ಅವರು, ನಾನೊಬ್ಬ ಸಂಸದನಾಗಿ ಮೈಸೂರು ಕೊಡಗು ಜನರ ಭಾವನೆಯನ್ನು ಹೇಳಿದ್ದೇನೆ ಅಷ್ಟೇ. ಬೇರೆಯವರ ಹೇಳಿಕೆ ಕುರಿತು ನನಗೆ ತಿಳಿದಿಲ್ಲ ಎಂದರು.

  • ಶಾಲಾ ಪುಸ್ತಕಗಳಲ್ಲಿ ಟಿಪ್ಪು ಪಠ್ಯ ತೆಗೆಯಲು ಚಿಂತನೆ – ಸಿಎಂ

    ಶಾಲಾ ಪುಸ್ತಕಗಳಲ್ಲಿ ಟಿಪ್ಪು ಪಠ್ಯ ತೆಗೆಯಲು ಚಿಂತನೆ – ಸಿಎಂ

    – ಮುಂದಿನ ಅಧಿವೇಶನಕ್ಕೆ ಮಾಧ್ಯಮ ನಿರ್ಬಂಧ ಇಲ್ಲ
    – ಮೂರು ಡಿಸಿಎಂ ಕೇಂದ್ರ ನಾಯಕರ ನಿರ್ಧಾರ

    ಬೆಂಗಳೂರು: ಶಾಲಾ ಪಠ್ಯ ಪುಸ್ತಕಗಳಿಂದ ಟಿಪ್ಪು ಕುರಿತ ಪಠ್ಯಗಳನ್ನು ತೆಗೆಯಲು ಚಿಂತನೆ ನಡೆಸಿದ್ದೇವೆ, ಪರಿಶೀಲಿಸಿ ತೀರ್ಮಾನ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸ್ಪಷ್ಟಪಡಿದ್ದಾರೆ.

    ಪ್ರಸ್ ಕ್ಲಬ್ ನಲ್ಲಿ ನಡೆದ ಮಾಧ್ಯಮ ಸಂವಾದದ ವೇಳೆ ಟಿಪ್ಪು ಜಯಂತಿ ಬಗ್ಗೆ ಕೇಳಲಾದ ಪ್ರಶ್ನೆಗೆ, ಸರ್ಕಾರ ಯಾವುದೇ ಕಾರಣಕ್ಕೂ ಟಿಪ್ಪು ಜಯಂತಿಯನ್ನು ಆಚರಿಸುವುದಿಲ್ಲ ಎಂದು ಉತ್ತರಿಸಿದರು.

    ಈ ಸಂದರ್ಭದಲ್ಲಿ ಶಾಲಾ ಪುಸ್ತಕದಲ್ಲಿ ಟಿಪ್ಪು ಸುಲ್ತಾನ್ ಪಠ್ಯವನ್ನು ತೆಗೆಯಲಾಗುತ್ತಾ ಎನ್ನುವ ಪ್ರಶ್ನೆಗೆ, ಶಾಲಾ ಪುಸ್ತಕಗಳಲ್ಲಿನ ಟಿಪ್ಪು ಕುರಿತ ಪಠ್ಯಗಳನ್ನು ತೆಗೆಯಲು ಚರ್ಚಿಸಿದ್ದೇವೆ. ಇದರಲ್ಲಿ ಯಾವುದೇ ಅನುಮಾನವಿಲ್ಲ. ಅಂತಹ ಯಾವುದೇ ವಿಚಾರ ಪಠ್ಯ ಪುಸ್ತಕಗಳಲ್ಲಿ ಇರಬಾರದು. ಅದಕ್ಕೆ ನಾವು ಅವಕಾಶ ಕೊಡುವುದಿಲ್ಲ. ಈ ಕುರಿತು ಪರಿಶೀಲಿಸಿ ತೀರ್ಮಾನ ಕೈಗೊಳ್ಳುತ್ತೇನೆ ಎಂದು ಹೇಳಿದರು.

    ಅಭಿವೃದ್ಧಿಯೇ ಆಡಳಿತದ ಮಂತ್ರದೊಂದಿಗೆ ಸರ್ಕಾರ ಕಾರ್ಯಾರಂಭ ಮಾಡಿದೆ. ಸರ್ಕಾರ ಬಂದ ಆರಂಭದಲ್ಲೇ ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ಯೋಜನೆಗೆ ರಾಜ್ಯ ಕೈ ಜೋಡಿಸಿತು. ಕೇಂದ್ರದ ಈ ಯೋಜನೆಯ ನೆರವಿನ ಜೊತೆಗೆ ರಾಜ್ಯದಿಂದ ಹೆಚ್ಚುವರಿ ನೆರವು ಕೊಡಲಾಗುತ್ತಿದೆ. ಮೀನುಗಾರರ, ನೇಕಾರರ ಸಾಲಮನ್ನಾ ಮಾಡಲಾಗಿದೆ ಎಂದು ಮಾಹಿತಿ ನೀಡಿದರು.

    ಸರ್ಕಾರದ ಮುಖ್ಯ ಕಾರ್ಯದರ್ಶಿ, ಹಿರಿಯ ಅಧಿಕಾರಿಗಳ ಜತೆಗೂ ಆರಂಭದಲ್ಲೇ ಸರ್ಕಾರದ ಧ್ಯೇಯೋದ್ದೇಶ ತಿಳಿಸಲಾಗಿದೆ. ಎಲ್ಲ ಜಿಲ್ಲೆಗಳ ಡಿಸಿಗಳ ಜತೆಗೆ ಸಭೆ ಮಾಡಿ ಅಗತ್ಯ ಸೂಚನೆಗಳನ್ನು ನೀಡಲಾಯಿತು. ದುರಾದೃಷ್ಟವಶಾತ್ ರಾಜ್ಯದಲ್ಲಿ ನೆರೆ, ಅತಿವೃಷ್ಟಿ ಬಂತು. ನೆರೆ ಅತಿವೃಷ್ಟಿ ಎದುರಿಸಲು ಅಧಿಕಾರಿಗಳು ಹಗಲು, ರಾತ್ರಿ ದುಡಿಯುತ್ತಿದ್ದಾರೆ. ನೆರೆ, ಬರ ಎರಡನ್ನೂ ರಾಜ್ಯ ಎದುರಿಸುತ್ತಿದೆ. 22 ಜಿಲ್ಲೆಗಳಲ್ಲಿ ನೆರೆ, 5 ಜಿಲ್ಲೆಗಳಲ್ಲಿ ಬರ ಇದೆ ಎಂದು ತಿಳಿಸಿದರು.

    ಎನ್‍ಡಿಆರ್‍ಎಫ್ ನಿಯಮದಡಿ ನಿಗದಿ ಮಾಡಿದ್ದಕ್ಕಿಂತ ಹೆಚ್ಚು ಪರಿಹಾರ ಕೊಡುತ್ತಿದ್ದೇವೆ. ಸ್ವಾತಂತ್ರ್ಯ ನಂತರ ಯಾವುದೇ ಸರ್ಕಾರ ಎನ್‍ಡಿಆರ್‍ಎಫ್ ನಿಯಮ ಮೀರಿ ಪರಿಹಾರ ಘೋಷಣೆ ಮಾಡಿರಲಿಲ್ಲ. ಪ್ರವಾಹಕ್ಕೆ ಕೇಂದ್ರದಿಂದಲೂ ಉತ್ತಮ ಸ್ಪಂದನೆ ಸಿಕ್ಕಿದೆ. ಮಧ್ಯಂತರ ಪರಿಹಾರವಾಗಿ ಕೇಂದ್ರ 1,200 ಕೋಟಿ, ರಾಜ್ಯದಿಂದ 2,969 ಕೋಟಿ ರೂ. ಪರಿಹಾರ ಬಿಡುಗಡೆ ಮಾಡಲಾಗಿದೆ. ಪ್ರವಾಹ ಪರಿಹಾರ ಕಾಮಗಾರಿಗಳಿಗೆ ಹಣದ ಕೊರತೆ ಇಲ್ಲ. ತೆರಿಗೆ ಸಂಗ್ರಹದಲ್ಲಿ ಸರ್ಕಾರ ನಿಗದಿತ ಗುರಿ ಸಾಧಿಸಿದೆ. ನಿರುದ್ಯೋಗ ಪ್ರಮಾಣ ರಾಜ್ಯದಲ್ಲಿ ಶೇ.0.7ರಷ್ಟು ಇದೆ ಎಂದು ಇದೇ ವೇಳೆ ಸಿಎಂ ಸ್ಪಷ್ಟಪಡಿಸಿದರು.

    ನೆರೆ ಸಂತ್ರಸ್ತರಿಗೆ ಮನೆ ಕಟ್ಟಲು 5 ಲಕ್ಷ ರೂ. ಪರಿಹಾರ ಕೊಡುತ್ತಿದ್ದೇವೆ. ಈ ವರೆಗೆ ಪೂರ್ಣ ಹಾನಿಯಾದ 7,481 ಮನೆಗಳಿಗೆ 5 ಲಕ್ಷ ರೂ. ಹಣ ಬಿಡುಗಡೆಯಾಗಿದೆ. ನೆರೆ ಸಂಬಂಧ ಜನರಲ್ಲಿ ಪ್ರತಿಪಕ್ಷಗಳು ಗೊಂದಲ ಹುಟ್ಟಿಸುತ್ತಿವೆ. ನಮ್ಮ ಪರಿಹಾರ ಕಾರ್ಯಗಳಲ್ಲಿ ಚ್ಯುತಿ ಆಗಿಲ್ಲ. ಅಧಿಕಾರಿಗಳು ಹಗಲು ರಾತ್ರಿ ಕೆಲಸ ಮಾಡುತ್ತಿದ್ದಾರೆ. ಪ್ರತಿಪಕ್ಷಗಳು ಗೊಂದಲ ಹುಟ್ಟಿಸುತ್ತಿರುವುದು ಸರಿಯಲ್ಲ. ನೆರೆ, ಬರ ಸನ್ನಿವೇಶದಲ್ಲೂ ರಾಜ್ಯದ ಅಭಿವೃದ್ಧಿ ಕೆಲಸಗಳನ್ನು ಕಡೆಗಣಿಸಿಲ್ಲ ಎಂದು ವಿವರಿಸಿದರು.

    ವಿಧಾನಸಭೆಯಲ್ಲಿ ಮಾಧ್ಯಮಗಳ ಚಿತ್ರೀಕರಣಕ್ಕೆ ನಿರ್ಬಂಧ ಹೇರಿದ ಕುರಿತು ಮಾತನಾಡಿದ ಅವರು, ಈ ಕುರಿತು ನಾನು ಸ್ಪೀಕರ್ ಜತೆ ಮಾತನಾಡಿ, ಮನವರಿಕೆ ಮಾಡಿದ್ದೇನೆ. ಮುಂದಿನ ಅಧಿವೇಶನದಿಂದ ಮಾಧ್ಯಮ ನಿರ್ಬಂಧ ಇರುವುದಿಲ್ಲ. ಮುಂದಿನ ಅಧಿವೇಶನದಿಂದ ಮೊದಲಿದ್ದ ವ್ಯವಸ್ಥೆಯೇ ಬರಲಿದೆ. ಮಾಧ್ಯಮಗಳಿಗೆ ಮೊದಲಿನ ಹಾಗೆ ಅವಕಾಶ ಮಾಡಿಕೊಡಲಾಗುತ್ತದೆ. ಯಡಿಯೂರಪ್ಪ ಹೇಳಿದ ಮಾತಿನಂತೆ ನಡ್ಕೋಳ್ತಾನೆ ಎಂದು ಭರವಸೆ ನೀಡಿದರು.

    ಮೂರು ಜನ ಉಪಮುಖ್ಯಮಂತ್ರಿಗಳ ಸೃಷ್ಟಿ ಕೇಂದ್ರದ ವರಿಷ್ಟರ ನಿರ್ಧಾರ. ಇದು ಕೇಂದ್ರದ ಸಹಜ ನಿರ್ಧಾರ. ಇದರಲ್ಲಿ ತಪ್ಪಿದೆ ಎಂದು ನನಗೆ ಅನಿಸುತ್ತಿಲ್ಲ. ಇದರ ಬಗ್ಗೆ ನಾನು ಹೆಚ್ಚು ಮಾತನಾಡುವುದಿಲ್ಲ. ನೂರು ದಿನದಲ್ಲಿ ನಾನು ಯಾವ ರೀತಿ ಆಡಳಿತ ಮಾಡಿದ್ದೇನೆ ಎಂದು ಜನತೆಗೆ ಗೊತ್ತು. ಉಳಿದ ಅವಧಿಯಲ್ಲೂ ಲೋಪದೋಷ ಸರಿಪಡಿಸಿಕೊಂಡು ಕೆಲಸ ಮಾಡುತ್ತೇವೆ. ಪ್ರತಿಪಕ್ಷಗಳನ್ನೂ ವಿಶ್ವಾಸಕ್ಕೆ ತಗೊಂಡು ಕೆಲಸ ಮಾಡುತ್ತೇವೆ. ಕೇಂದ್ರ ಸರ್ಕಾರ ನನ್ನ ಕೈಕಟ್ಟಿ ಹಾಕಿಲ್ಲ. ರಾಜ್ಯದ ಅಭಿವೃದ್ಧಿ ವಿಚಾರದಲ್ಲಿ ನನಗೆ ವರಿಷ್ಠರು ಫ್ರೀ ಹ್ಯಾಂಡ್ ಕೊಟ್ಟಿದ್ದಾರೆ ಎಂದರು.

    ಮೂರು ತಿಂಗಳಲ್ಲಿ ಐಎಎಸ್ ಅಧಿಕಾರಿಗಳ ಬದಲಾವಣೆ ಕುರಿತು ಮಾತನಾಡಿದ ಅವರು, ಆಡಳಿತಾತ್ಮಕ ದೃಷ್ಟಿಯಿಂದ ಕೆಲವು ತೀರ್ಮಾನ ಅನಿವಾರ್ಯ. ಹೀಗಾಗಿ ವರ್ಗಾವಣೆ ಮಾಡಲಾಗಿದೆ. ಆಡಳಿತದ ಹಿತದೃಷ್ಟಿಯಿಂದ ಕೆಲವೊಂದು ತೀರ್ಮಾನ ಮಾಡಬೇಕು. ನನ್ನ ಯಾವುದೇ ತೀರ್ಮಾನಗಳಲ್ಲಿ ಹೈಕಮಾಂಡ್ ಮಧ್ಯಪ್ರವೇಶ ಮಾಡಿಲ್ಲ. ಸಂಪುಟ ರಚನೆಯಲ್ಲೂ ಅಡ್ಡಿ ಬಂದಿಲ್ಲ ಎಂದು ಸಿಎಂ ಸ್ಪಷ್ಟಪಡಿಸಿದರು.

  • ಪ್ರೈವೇಟ್ ವ್ಯಾನಿನಲ್ಲಿ ಮಕ್ಕಳಿಗೆ ಉಸಿರಾಡೋಕೂ ಕಷ್ಟ – ಪಬ್ಲಿಕ್ ಟಿವಿ ಸ್ಟಿಂಗ್‍ನಲ್ಲಿ ಬಯಲು

    ಪ್ರೈವೇಟ್ ವ್ಯಾನಿನಲ್ಲಿ ಮಕ್ಕಳಿಗೆ ಉಸಿರಾಡೋಕೂ ಕಷ್ಟ – ಪಬ್ಲಿಕ್ ಟಿವಿ ಸ್ಟಿಂಗ್‍ನಲ್ಲಿ ಬಯಲು

    ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ಬಹುತೇಕ ಖಾಸಗಿ ಶಾಲೆಗೆ ತೆರಳುತ್ತಿರುವ ಮಕ್ಕಳು ಸೇಫ್ ಅಲ್ಲ. ಏಕೆಂದರೆ ಖಾಸಗಿ ಶಾಲೆಯ ಖಾಸಗಿ ಸ್ಕೂಲ್ ವ್ಯಾನ್, ಕ್ಯಾಬ್‍ಗಳು ಡೇಂಜರ್ ಸ್ಥಿತಿಯಲ್ಲಿದೆ. ಶಾಲೆ ಹೋಗುವ ಮಕ್ಕಳನ್ನು ಕುರಿಗಳ ಮಂದೆಯಂತೆ ತುಂಬುತ್ತಿದ್ದಾರೆ. ಈ ವಿಚಾರ ಪಬ್ಲಿಕ್ ಟಿವಿ ರಿಯಾಲಿಟಿ ಚೆಕ್ ವೇಳೆ ಬಯಲಾಗಿದೆ.

    ಸ್ಥಳ – ಕನ್ನಿಂಗ್ ಹ್ಯಾಮ್ ರೋಡ್
    ಸಮಯ – 4:00
    ಬೆಂಗಳೂರಿನ ಕನ್ನಿಂಗ್ ಹ್ಯಾಮ್ ರಸ್ತೆಯಲ್ಲಿರುವ ಪ್ರತಿಷ್ಠಿತ ಶಾಲೆಯಲ್ಲಿ ಶಾಲಾ ವಾಹನವಾದರೆ ಆರ್ ಟಿಓ ನಿಯಮದಂತೆ ಇರುತ್ತದೆ. ಜೊತೆಗೆ ಮಕ್ಕಳ ಸಂಖ್ಯೆ ಸಹ ನಿಯಮಿತವಾಗಿರುತ್ತದೆ. ಆದರೆ ಈ ಶಾಲೆಯಲ್ಲಿ ಖಾಸಗಿ ಕ್ಯಾಬ್‍ಗಳ ಕಾರುಬಾರು ಜೋರಾಗಿದೆ. ಈ ಬಗ್ಗೆ ಚಾಲಕನನ್ನು ಪ್ರಶ್ನಿಸಿದಾಗ, ಅವರು ಹೇಳಿದ್ದು ಹೀಗೆ.

    ಪ್ರತಿನಿಧಿ: ಏನ್ ಸರ್ ಇಷ್ಟೊಂದು ಸ್ಕೂಲ್ ಮಕ್ಕಳು ತುಂಬಿದ್ದೀರಾ?
    ಕ್ಯಾಬ್ ಡ್ರೈವರ್: ಎಷ್ಟೊಂದು ಮೇಡಂ
    ಪ್ರತಿನಿಧಿ: ಎಷ್ಟೊಂದು ಅಂತೀರಾ?
    ಡ್ರೈವರ್: ಚಿಕ್ಕ ಮಕ್ಕಳು ಮೇಡಂ
    ಪ್ರತಿನಿಧಿ: ಚಿಕ್ಕ ಮಕ್ಕಳು ಅಂತೀರಾ
    ಡ್ರೈವರ್: ಇರಪ್ಪ ಇಳಿಸ್ತೀನಿ ಅಲ್ಲೇ ಇರೋ
    ಪ್ರತಿನಿಧಿ: ಎಷ್ಟು ಜನ ಇದ್ದೀರಾ? ಯಾಕ್ ಸರ್ ಇಷ್ಟೊಂದು ಜನರನ್ನು ತುಂಬಿದ್ದೀರಾ.
    ಡ್ರೈವರ್: ಹಾ ಮೇಡಂ
    ಪ್ರತಿನಿಧಿ: ಇಷ್ಟೊಂದು ಜನ ತುಂಬಿದ್ದೀರಾ?
    ಡ್ರೈವರ್: ಇಲ್ಲ ಮೇಡಂ ಬರೀ ಹದಿನೈದು ಜನ ಅಷ್ಟೇ?
    ಪ್ರತಿನಿಧಿ: 15 ಜನನಾ? ಅಷ್ಟಾದ್ರೂ ಹೆಂಗ್ ಕುಳಿತು ಕೊಳ್ತಾರೆ? ಇಂದು ಮಗುವಿಗೆ ಎಷ್ಟು ಸರ್?
    ಡ್ರೈವರ್: ಎಷ್ಟು ಮೇಡಂ 600-500 ರೂ.
    ಪ್ರತಿನಿಧಿ: ನೀವ್ ಆರಾಮಾಗಿ ಕರೆದುಕೊಂಡ್ ಬಂದ್ರೆ

    ಹೊಟ್ಟೆ ಪಾಡಿಗಾಗಿ ಕ್ಯಾಬ್ ಡ್ರೈವರ್ ಗಳು ಹೀಗೆ ಕುರಿಗಳಂತೆ ಮಕ್ಕಳನ್ನ ತುಂಬುತ್ತಾರೆ. ಆದರೆ ಪೋಷಕರು ಏನ್ ಮಾಡ್ತಾ ಇದ್ದಾರೆ. 500 ರೂ. ಕೊಟ್ಟರೆ ಈ ರೀತಿ ಕುರಿ ಗಾಡಿ, 1000 ರೂ ಕೊಟ್ಟರೆ ಕ್ಯಾಬ್ ಸಿಗುತ್ತೆ. ಇದೆಲ್ಲ ಪರಿಶೀಲಿಸದೇ ನಿಮ್ಮ ಮಕ್ಕಳನ್ನ ನೀವು ಹೀಗೆ ಕಳುಹಿಸುತ್ತಿದ್ದೀರಾ.

    ಸ್ಥಳ – ಲಗ್ಗೆರೆ ರೋಡ್
    ಸಮಯ – 3.30
    ಬೆಂಗಳೂರಿನ ಲಗ್ಗೆರೆಯಲ್ಲಿರುವ ಖಾಸಗಿ ಶಾಲೆಯಲ್ಲಿ ಒಮನಿ ವ್ಯಾನ್‍ಗಳಲ್ಲಿ ಮಕ್ಕಳನ್ನು ತುಂಬುತ್ತಾರೆ. ಕೂರಲು ಸೀಟ್ ಇಲ್ಲದೇ ಮಕ್ಕಳನ್ನು ಕಾಲಿಡುವ ಜಾಗದಲ್ಲಿ ಕೂರಿಸುತ್ತಾರೆ. ಈ ಬಗ್ಗೆ ಚಾಲಕನನ್ನು ಪ್ರಶ್ನಿಸಿದಾಗ ಅವರು ಉತ್ತರಿಸಿದ್ದು ಹೀಗೆ;
    ಪ್ರತಿನಿಧಿ: ಏನ್ ಸರ್ ಇಷ್ಟೊಂದು ಜನ ತುಂಬಿದ್ದೀರಾ
    ಡ್ರೈವರ್: ಎಷ್ಟ್ ಜನ ತುಂಬಿದ್ದಾರೆ ಮೇಡಂ?
    ಪ್ರತಿನಿಧಿ: 15 ಜನ ತುಂಬಿದ್ದೀರಲ್ಲ ಸರ್
    ಡ್ರೈವರ್: 15 ಜನನಾ?

    ಸ್ಥಳ – ಶಿವಾನಂದ ಸರ್ಕಲ್
    ಸಮಯ – 9.30
    ಅಪಾಯದ ಅರಿವಿಲ್ಲದ ಮಕ್ಕಳು ಈ ಬಗ್ಗೆ ಹುಡುಕಾಟದ ಮಾತುಗಳನ್ನಾಡುತ್ತಾರೆ.
    ಪ್ರತಿನಿಧಿ: ಆರ್ ಟಿಐ ರೂಲ್ಸ್ ಪ್ರಕಾರ ಹೀಗೆ ತುಂಬುವಂತಿಲ್ಲ, ನಿಮ್ಮ ವಾಹನದಲ್ಲಿ ಎಷ್ಟು ಜನ ಹೋಗುತ್ತೀರಾ?
    ವಿದ್ಯಾರ್ಥಿನಿ: ನಮ್ಮ ವಾಹನದಲ್ಲಿ 6 ಜನನೇ. ಅದೇ ಬೇರೆ ವಾಹನ ನೋಡಿದ್ರೆ 15 – 20 ಜನ ಇರುತ್ತಾರೆ.
    ಪ್ರತಿನಿಧಿ: ಭಯ ಆಗಲ್ವ ಹೋಗುವುದಕ್ಕೆ
    ವಿದ್ಯಾರ್ಥಿನಿ: ನಾವೆಲ್ಲ ಚಿಕ್ಕವರಲ್ಲ

    ರಸ್ತೆ ಹಾಗೂ ಸಾರಿಗೆ ಪ್ರಾಧಿಕಾರ ಸುಪ್ರೀಂ ಕೋರ್ಟ್ ಸಹ ಶಾಲಾ ಮಕ್ಕಳ ವಾಹನ ಸುರಕ್ಷತೆ ಬಗ್ಗೆ ನಿರ್ದೇಶನ ನೀಡಿದೆ. ಮೋಟಾರು ವೆಹಿಕಲ್ ಕಾಯ್ದೆ ಪ್ರಕಾರ ಮಕ್ಕಳ ಕುರಿಗಳಂತೆ ತುಂಬುವಂತಿಲ್ಲ. ಏನೆಲ್ಲ ನಿಯಮಗಳು ಉಲ್ಲಂಘನೆಯಾಗಿದೆ.
    * ಪ್ರಥಮ ಚಿಕಿತ್ಸಾ ಪೆಟ್ಟಿಗೆ ಇಲ್ಲ (ಫಸ್ಟೆಡ್ ಬಾಕ್ಸ್)
    * ಮಕ್ಕಳನ್ನು ಕುರಿಗಳಂತೆ ತುಂಬಿದ್ದಾರೆ
    * ಸಿಸಿಟಿವಿ ಹಾಕಿಲ್ಲ
    * ಶಾಲಾ ಮಕ್ಕಳ ವಾಹನ ಎಂದು ಉಲ್ಲೇಖಿಸಿಲ್ಲ
    * ಮಕ್ಕಳ ಸುರಕ್ಷತೆಯ ಕ್ರಮಗಳ ಕೈಗೊಂಡಿಲ್ಲ

    12 ವರ್ಷ ಮೇಲ್ಪಟ್ಟ ಮಕ್ಕಳು ಪ್ರಯಾಣಿಸುವ ವಾಹನದ ಸೀಟ್ ಕ್ಯಾಪಸಿಟಿ ಆಧಾರದಲ್ಲಿ ಮಾತ್ರ ಪ್ರಯಾಣಿಸಬೇಕು. ಅನುಮತಿ ನೀಡಿದ ಸೀಟ್ ಗಳಲ್ಲಿ ಶೇ. ಒಂದು ಅರ್ಧಕ್ಕಿಂತ ಹೆಚ್ಚು ವಿದ್ಯಾರ್ಥಿಗಳು ಪ್ರಯಾಣಿಸಬೇಕು. ಕುರಿಗಳಂತೆ ತುಂಬುವಂತಿಲ್ಲ. ಒಂದೊಮ್ಮೆ ಪ್ರಯಾಣಿಸಿದರೆ ದಂಡ ಹಾಗೂ ಶಿಕ್ಷಾರ್ಹ ಅಪರಾಧ. ಮಕ್ಕಳನ್ನು ಹೀಗೆ ಕುರಿಗಳಂತೆ ತುಂಬಿದು, ಕಂಡರೂ ಟ್ರಾಫಿಕ್ ಪೊಲೀಸರು ನೋಡದಂತೆ ಹೋಗುತ್ತಾರೆ. ಇದನ್ನೆಲ್ಲ ಕೇಳಬೇಕಾದ ಆರ್‍ಟಿಓ ಮಾತ್ರ ನಾಪತ್ತೆ ಆಗಿದ್ದಾರೆ.

  • ಗಾಂಧೀಜಿ ಆತ್ಮಹತ್ಯೆ ಮಾಡಿಕೊಂಡಿದ್ದು ಹೇಗೆ – 9ನೇ ತರಗತಿ ಪರೀಕ್ಷೆಯಲ್ಲಿ ಪ್ರಶ್ನೆ

    ಗಾಂಧೀಜಿ ಆತ್ಮಹತ್ಯೆ ಮಾಡಿಕೊಂಡಿದ್ದು ಹೇಗೆ – 9ನೇ ತರಗತಿ ಪರೀಕ್ಷೆಯಲ್ಲಿ ಪ್ರಶ್ನೆ

    ಗಾಂಧಿನಗರ: ಶಾಲೆಯ ಪರೀಕ್ಷೆಯಲ್ಲಿ ಮಹಾತ್ಮ ಗಾಂಧೀಜಿ ಆತ್ಮಹತ್ಯೆ ಮಾಡಿಕೊಂಡಿದ್ದು ಹೇಗೆ ಎಂಬ ಪ್ರಶ್ನೆಯನ್ನು ಕಂಡು ಗುಜರಾತ್ ಶಿಕ್ಷಣಾಧಿಕಾರಿಗಳು ಆಘಾತಕ್ಕೊಳಗಾಗಿದ್ದಾರೆ.

    ಗಾಂಧಿನಗರದಲ್ಲಿನ ಅನುದಾನಿತ ಶಿಕ್ಷಣ ಸಂಸ್ಥೆ ‘ಸುಫಲಾಂ ಶಾಲಾ ವಿಕಾಸ ಸಂಕುಲ’ದ ಅಧೀನದಲ್ಲಿನ ಶಾಲೆಯಲ್ಲಿ ಗುಜರಾತಿ ಭಾಷೆಯ 9ನೇ ತರಗತಿ ಪ್ರಶ್ನೆ ಪತ್ರಿಕೆಯಲ್ಲಿ ಈ ಪ್ರಶ್ನೆಯನ್ನು ಕೇಳಲಾಗಿದೆ. ಇಂಟರ್ನಲ್ ಅಸಿಸ್ಮೆಂಟ್ ಪರೀಕ್ಷೆಯಲ್ಲಿ ಈ ಪ್ರಶ್ನೆಯನ್ನು ಕೇಳಲಾಗಿದ್ದು, ಈ ಪ್ರಶ್ನೆಯನ್ನು ನೋಡಿ ಕೆಲ ಶಿಕ್ಷಕರು ಹಾಗೂ ಶಿಕ್ಷಣಾಧಿಕಾರಿಗಳು ತಬ್ಬಿಬ್ಬಾಗಿ ಹೋಗಿದ್ದಾರೆ.

    12ನೇ ತರಗತಿಯ ವಿದ್ಯಾರ್ಥಿಗಳ ಪರೀಕ್ಷಾ ಪತ್ರಿಕೆಯಲ್ಲಿ ಅನಧಿಕೃತ ಮದ್ಯ ಮಾರಾಟ ಮತ್ತು ಮಾದಕ ವಸ್ತುಗಳ ಸೇವನೆ ಕುರಿತು ಪ್ರಶ್ನೆ ಕೇಳಲಾಗಿದ್ದು, ನಿಮ್ಮ ಪ್ರದೇಶದಲ್ಲಿ ಮದ್ಯ ಮಾರಾಟ ಹೆಚ್ಚಳ ಸಂಬಂಧ ದೂರು ನೀಡುವಂತೆ ಜಿಲ್ಲಾ ಪೊಲೀಸ್ ಮುಖ್ಯಸ್ಥರಿಗೆ ಪತ್ರ ಬರೆಯಿರಿ ಎಂದು ಕೇಳಲಾಗಿದೆ.

    ಖಾಸಗಿ ಶಾಲೆಗಳು ಹಾಗೂ ಅನುದಾನಿತ ಶಾಲೆಗಳ ಆಂತರಿಕ ಮೌಲ್ಯಮಾಪನ ಪರೀಕ್ಷೆಗಳಲ್ಲಿ ಈ ಪ್ರಶ್ನೆಗಳನ್ನು ಕೇಳಲಾಗಿದೆ. ಈ ಪ್ರಶ್ನೆಗಳು ಆಕ್ಷೇಪಾರ್ಹವಾಗಿದ್ದು, ತನಿಖೆ ಪ್ರಾರಂಭಿಸಿದ್ದೇವೆ. ವರದಿ ಬಂದ ನಂತರ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಗಾಂಧಿನಗರ ಜಿಲ್ಲೆಯ ಶಿಕ್ಷಣಾಧಿಕಾರಿ ಭರತ್ ವಾಧರ್ ತಿಳಿಸಿದ್ದಾರೆ.

    ಸುಫಲಾಂ ಶಾಲಾ ವಿಕಾಸ ಸಂಕುಲ ಎಂಬುದು ಅನುದಾನಿತ ಶಿಕ್ಷಣ ಸಂಸ್ಥೆಯಾಗಿದ್ದು, ರಾಜ್ಯ ಶಿಕ್ಷಣ ಇಲಾಖೆಗೂ ಇದಕ್ಕೂ ಯಾವುದೇ ಸಂಬಂಧವಿಲ್ಲ ಎಂದು ಭರತ್ ಸ್ಪಷ್ಟಪಡಿಸಿದ್ದಾರೆ.

  • ಶಾಲಾ ಆವರಣದಲ್ಲಿ ನೀರು ತುಂಬಿದ್ದ ಗುಂಡಿಗೆ ಬಿದ್ದು ಬಾಲಕ ಸಾವು

    ಶಾಲಾ ಆವರಣದಲ್ಲಿ ನೀರು ತುಂಬಿದ್ದ ಗುಂಡಿಗೆ ಬಿದ್ದು ಬಾಲಕ ಸಾವು

    ಬಾಗಲಕೋಟೆ: ಶಾಲಾ ಆವರಣದಲ್ಲಿದ್ದ ನೀರು ತುಂಬಿದ ಗುಂಡಿಯಲ್ಲಿ ಬಿದ್ದು ಬಾಲಕ ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಹುನಗುಂದ ತಾಲೂಕಿನ ಸೂಳೇಭಾವಿ ಗ್ರಾಮದಲ್ಲಿ ನಡೆದಿದೆ.

    8 ವರ್ಷದ ಗಣೇಶ್ ನಡಕಟ್ಟಿ ಸಾವಿಗೀಡಾದ ಬಾಲಕ. ಗ್ರಾಮದ ಸರ್ಕಾರಿ ಪ್ರಾಥಮಿಕ ಶಾಲಾ ಆವರಣದಲ್ಲಿ ಆಟವಾಡಲು ಹೋಗಿದ್ದ ವೇಳೆ, ಕೊಠಡಿ ನಿರ್ಮಾಣಕ್ಕಾಗಿ ತೋಡಿದ್ದ ಗುಂಡಿಯಲ್ಲಿ ನೀರು ತುಂಬಿತ್ತು. ಆಟವಾಡುವ ವೇಳೆ ಗಣೇಶ್ ಆಯತಪ್ಪಿ ಗುಂಡಿಯಲ್ಲಿ ಬಿದ್ದು ಸಾವಿಗೀಡಾಗಿದ್ದಾನೆ.

    ಮಳೆಯಾದ ಪರಿಣಾಮ ಕೊಠಡಿ ನಿರ್ಮಾಣಕ್ಕೆ ತೆಗೆಸಿದ್ದ ಗುಂಡಿಗಳಲ್ಲಿ ಮಳೆ ನೀರು ಶೇಖರಣೆಯಾಗಿತ್ತು. ಈ ಹಿಂದೆಯೂ ಕೆಲ ಬಾಲಕರು ಗುಂಡಿಯಲ್ಲಿ ಬಿದ್ದು ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿದ್ದರು. ಇದೀಗ ಶಾಲಾ ಸಿಬ್ಬಂದಿ ವಿರುದ್ಧ ಸ್ಥಳೀಯರ ಆಕ್ರೋಶ ವ್ಯಕ್ತಪಡಿಸಿದ್ದು, ಸೂಕ್ತ ಪರಿಹಾರಕ್ಕಾಗಿ ಆಗ್ರಹ ಮಾಡಿದ್ದಾರೆ. ಮೃತ ಬಾಲಕನ ಸಂಬಂಧಿಕರ ಆಕ್ರಂದನ ಮುಗಿಲು ಮುಟ್ಟಿದೆ. ಸ್ಥಳಕ್ಕೆ ಅಮೀನಗಢ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ.

  • ‘ನಮ್ಮನ್ನ ಬಿಟ್ಟು ಹೋಗ್ಬೇಡಿ’- ಶಿಕ್ಷಕಿಯನ್ನು ಬಿಗಿದಪ್ಪಿ ವಿದ್ಯಾರ್ಥಿಗಳ ಕಣ್ಣೀರು

    ‘ನಮ್ಮನ್ನ ಬಿಟ್ಟು ಹೋಗ್ಬೇಡಿ’- ಶಿಕ್ಷಕಿಯನ್ನು ಬಿಗಿದಪ್ಪಿ ವಿದ್ಯಾರ್ಥಿಗಳ ಕಣ್ಣೀರು

    ಕೊಪ್ಪಳ: ತಮ್ಮ ಶಾಲೆಯ ಅಚ್ಚುಮೆಚ್ಚಿನ ಶಿಕ್ಷಕಿಯ ವರ್ಗಾವಣೆಯಿಂದ ನೊಂದ ವಿದ್ಯಾರ್ಥಿಗಳು ಶಿಕ್ಷಕರನ್ನು ಶಾಲೆ ಬಿಟ್ಟು ತೆರಳದಂತೆ ಮನವಿ ಮಾಡಿ ಕಣ್ಣೀರ ಧಾರೆ ಹರಿಸಿದ ಅಪರೂಪದ ಘಟನೆ ಗಂಗಾವತಿಯ ವಿರುಪಾಪುರ ಶಾಲೆಯಲ್ಲಿ ನಡೆದಿದೆ.

    ಇಲ್ಲಿನ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಶಿಕ್ಷಕರಾದ ರಜನಿ ಅವರನ್ನು ಗಂಗಾವತಿ ತಾಲೂಕಿನ ಮರಳಿ ಗ್ರಾಮದ ಸ.ಹಿ.ಪ್ರಾ. ಶಾಲೆ ಗೆ ಕಡ್ಡಾಯ ವರ್ಗಾವಣೆ ಮಾಡಲಾಗಿತ್ತು. ಇಂದು ಶಾಲೆಗೆ ಹಾಜರಾಗಿದ್ದ ವೇಳೆ ತಮ್ಮ ನೆಚ್ಚಿನ ಶಿಕ್ಷಕಿಯ ವರ್ಗಾವಣೆ ಸಂಗತಿ ವಿದ್ಯಾರ್ಥಿಗಳಿಗೆ ತಿಳಿದು ಬಂದಿದ್ದು, ಇದರಿಂದ ನೊಂದ ವಿದ್ಯಾರ್ಥಿಗಳು ಶಿಕ್ಷಕರನ್ನು ಅಪ್ಪಿಕೊಂಡು ಶಾಲೆ ಬಿಟ್ಟು ತೆರಳದಂತೆ ಮನವಿ ಮಾಡಿದರು.

    ಕಳೆದ 10 ವರ್ಷಗಳಿಂದ ಶಾಲೆಯಲ್ಲಿ ವಿಜ್ಞಾನ ಶಿಕ್ಷಕಿಯಾಗಿ ರಜನಿ ಅವರು ಸೇವೆ ಸಲ್ಲಿಸುತ್ತಿದ್ದರು. ರಜನಿ ಅವರು ವಿದ್ಯಾರ್ಥಿಗಳ ಸರ್ವತೋಮುಖ ಅಭಿವೃದ್ಧಿಗೆ ಶ್ರಮಿಸಿ ವಿದ್ಯಾರ್ಥಿಗಳ ಪೋಷಕರ ಮನಸ್ಸನ್ನು ಗೆದ್ದಿದ್ದರು. ಶಿಕ್ಷಕಿಯ ವರ್ಗಾವಣೆಯಿಂದ ಪೋಷಕರು ಬೇಸರಗೊಂಡಿದ್ದರು. ಶಿಕ್ಷಕಿ ರಜನಿ ಅವರು ಮಕ್ಕಳೊಂದಿಗೆ ಹೊಂದಿದ್ದ ಬಾಂಧವ್ಯ ವಿದ್ಯಾರ್ಥಿಗಳು ಕಣ್ಣೀರಿಡುತ್ತಿದ್ದ ವೇಳೆ ಕಂಡು ಬಂತು. ತಮ್ಮ ವರ್ಗಾವಣೆ ಕಡ್ಡಾಯವಾಗಿರುವುದರಿಂದ ಇದನ್ನು ವಿದ್ಯಾರ್ಥಿಗಳಿಗೆ ಆರ್ಥವಾಗುವಂತೆ ಹೇಳಲಾಗದೆ ಶಿಕ್ಷಕರು ಸಮಸ್ಯೆ ಎದುರಿಸಿದ್ದರು. ಅಲ್ಲದೇ ತಮ್ಮನ್ನು ಬಿಗಿದಪ್ಪಿ ಅಳುತ್ತಿದ್ದ ವಿದ್ಯಾರ್ಥಿಗಳನ್ನು ಕಂಡ ಶಿಕ್ಷಕರು ಕೂಡ ಕಣ್ಣೀರಿಟ್ಟಿದ್ದು ಕಂಡು ಬಂತು.

    ಈ ಹಿಂದೆ ಚಿಕ್ಕಮಗಳೂರಿನ ಕೈಮರದಲ್ಲಿ ಇಂತಹದೇ ಘಟನೆ ನಡೆದಿತ್ತು. ಕೈಮರದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶಿಕ್ಷಕರಾದ ದುರ್ಗೇಶ್ ಅವರು ಸುಮಾರು 12 ವರ್ಷಗಳಿಂದ ಶಿಕ್ಷಕರಾಗಿ ಕರ್ತವ್ಯ ನಿರ್ವಹಿಸುತ್ತಿದ್ದರು. ಈ ವೇಳೆಯೂ ಶಿಕ್ಷಕರ ವರ್ಗಾವಣೆಯಿಂದ ನೊಂದ ವಿದ್ಯಾರ್ಥಿಗಳು ಶಿಕ್ಷಕರನ್ನು ತಬ್ಬಿ ಕಣ್ಣೀರಿಟ್ಟಿದ್ದರು. ವಿಡಿಯೋ ಇಲ್ಲಿದೆ….

  • ಸ್ವಲ್ಪ ಯಾಮಾರಿದ್ರೂ ನೀರುಪಾಲು- ಮೇಲ್ಸೆತುವೆ ಇಲ್ಲದ ಹಳ್ಳ ದಾಟಿ ಶಾಲೆಗೆ ಹೋಗ್ತಿದ್ದಾರೆ ವಿದ್ಯಾರ್ಥಿಗಳು

    ಸ್ವಲ್ಪ ಯಾಮಾರಿದ್ರೂ ನೀರುಪಾಲು- ಮೇಲ್ಸೆತುವೆ ಇಲ್ಲದ ಹಳ್ಳ ದಾಟಿ ಶಾಲೆಗೆ ಹೋಗ್ತಿದ್ದಾರೆ ವಿದ್ಯಾರ್ಥಿಗಳು

    ಕೊಪ್ಪಳ: ಜಿಲ್ಲೆಯ ಬಳಗೇರಿ ಗ್ರಾಮದಲ್ಲಿರುವ ಹಳ್ಳಕ್ಕೆ ಮೇಲ್ಸೆತುವೆ ಇರದ ಪರಿಣಾಮ ಜೀವ ಕೈಯಲ್ಲಿ ಇಟ್ಟುಕೊಂಡು, ಭಯದಿಂದ ತುಂಬಿ ಹರಿಯುವ ಹಳ್ಳವನ್ನು ದಾಟಿ ನೂರಾರು ವಿದ್ಯಾರ್ಥಿಗಳು ಶಾಲೆಗೆ ಹೋಗುತ್ತಿದ್ದಾರೆ.

    ಜಿಲ್ಲೆಯ ಕುಕನೂರು ತಾಲೂಕಿನ ಬಳಗೇರಿ ಗ್ರಾಮದಲ್ಲಿರುವ ಮೇಲ್ಸೆತುವೆ ಇರದ ಹಳ್ಳವನ್ನು ದಾಟಿ ವಿದ್ಯಾರ್ಥಿಗಳು ಶಾಲೆಗೆ ಹೋಗಬೇಕಾದ ಪರಸ್ಥಿತಿ ಎದುರಾಗಿದೆ. ಗುರುವಾರ ಸುರಿದ ಮಳೆಗೆ ಹಳ್ಳ ತುಂಬಿ ಹರಿಯುತ್ತಿದ್ದು, ಈ ಹಳ್ಳಕ್ಕೆ ಮೇಲ್ಸೆತುವೆ ಇರದ ಕಾರಣ ಜನರು ಹಳ್ಳದಾಚೆಗೆ ತಲುಪಬೇಕೆಂದರೆ ಹರಿಯುವ ನೀರಿನಲ್ಲೇ ನಡೆದು ಸಾಗಿ ಮತ್ತೊಂದು ಕಡೆಗೆ ಹೋಗಬೇಕಿದೆ.

    ಪ್ರತಿನಿತ್ಯ 200ಕ್ಕೂ ಹೆಚ್ಚು ವಿದ್ಯಾರ್ಥಿಗಳು ಶಾಲೆಗೆ ಹೋಗುವಾಗ ಹಾಗೂ ಶಾಲೆಯಿಂದ ಮರಳಿ ಗ್ರಾಮಕ್ಕೆ ಹಿಂದಿರುಗುವಾಗ ಇದೇ ಹಳ್ಳದಲ್ಲಿಯೇ ಸಂಚರಿಸುತ್ತಿದ್ದಾರೆ. ಹಳ್ಳವನ್ನು ದಾಟುವ ವೇಳೆಯಲ್ಲಿ ವಿದ್ಯಾರ್ಥಿಗಳಿಗೆ ಹಾಗೂ ಗ್ರಾಮಸ್ಥರಿಗೆ ಏನಾದರೂ ಅನಾಹುತ ಆಗುವ ಮೊದಲು ಜಿಲ್ಲಾಡಳಿತ ಎಚ್ಚೆತ್ತುಕೊಂಡು ಮೇಲ್ಸೆತುವೆ ನಿರ್ಮಿಸಬೇಕಿದೆ.

  • ಶಿಕ್ಷಕರ ಕಳ್ಳಾಟ – ಶಾಲೆಗೆ ಬೀಗ ಜಡಿದು ಪ್ರತಿಭಟಿಸಿದ ಗ್ರಾಮಸ್ಥರು

    ಶಿಕ್ಷಕರ ಕಳ್ಳಾಟ – ಶಾಲೆಗೆ ಬೀಗ ಜಡಿದು ಪ್ರತಿಭಟಿಸಿದ ಗ್ರಾಮಸ್ಥರು

    ಚಾಮರಾಜನಗರ: ಶಿಕ್ಷಣ ಸಚಿವರ ಉಸ್ತುವಾರಿ ಜಿಲ್ಲೆಯಲ್ಲೇ ಶಿಕ್ಷಕರ ಕಳ್ಳಾಟ ಹೆಚ್ಚಾಗಿದ್ದು, ಶಿಕ್ಷಕರು ಪದೆ ಪದೇ ಶಾಲೆಗೆ ಚಕ್ಕರ್ ಹಾಕುವ ಮೂಲಕ ಗ್ರಾಮಸ್ಥರ ಆಕ್ರೋಶಕ್ಕೆ ಗುರಿಯಾಗಿದ್ದಾರೆ.

    ಚಾಮರಾಜನಗರ ತಾಲೂಕು ಹೊಮ್ಮ ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ಶಿಕ್ಷಕರು ಶಾಲೆಗೆ ಸರಿಯಾಗಿ ಬರದಿದ್ದಕ್ಕೆ ಗ್ರಾಮಸ್ಥರು ಹಾಗೂ ಪೋಷಕರು ಬೇಸತ್ತು, ಗ್ರಾಮಸ್ಥರು ಶಾಲೆಗೆ ಬೀಗ ಜಡಿದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

    ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಕೇವಲ ಮೂವರು ಶಿಕ್ಷಕರಿದ್ದು, ಇರುವ ಶಿಕ್ಷಕರೂ ಸಹ ಸರಿಯಾಗಿ ಶಾಲೆಗೆ ಬಾರದ್ದನ್ನು ಕಂಡು ಹಾಗೂ ಮಕ್ಕಳಿಗೆ ಏನೂ ಕಲಿಸದ್ದನ್ನು ಕಂಡು ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಶಿಕ್ಷಕರು ಶಾಲೆಗೆ ಬರುವುದಿಲ್ಲ ಹೀಗಿರುವಾಗ ಶಾಲೆ ಯಾಕೆ ತೆರಯಬೇಕು ಎಂಬುದು ಗ್ರಾಮಸ್ಥರ ಪ್ರಶ್ನೆಯಾಗಿದೆ. ಮೂವರು ಶಿಕ್ಷಕರೂ ಸಹ ಪದೆ ಪದೇ ರಜೆ ಹಾಕುತ್ತಿದ್ದಾರೆ. ಇದರಿಂದ ಮಕ್ಕಳ ವಿದ್ಯಾಭ್ಯಾಸಕ್ಕೆ ತೊಂದರೆಯಾಗುತ್ತಿದೆ ಎಂದು ಗ್ರಾಮಸ್ಥರು ದೂರಿದ್ದಾರೆ.

    ಶಾಲೆಯಲ್ಲಿ 1ರಿಂದ 7 ತರಗತಿ ವರೆಗೆ ಕೇವಲ 14 ವಿದ್ಯಾರ್ಥಿಗಳು ಮಾತ್ರ ಇದ್ದಾರೆ. ವಿದ್ಯಾರ್ಥಿಗಳ ಸಂಖ್ಯೆ ಕಡಿಮೆಯಾಗಲು ಶಿಕ್ಷಕರ ವರ್ತನೆಯೇ ಕಾರಣ. ಶಿಕ್ಷಕರು ಮಕ್ಕಳಿಗೆ ಏನೂ ಹೇಳಿಕೊಡುವುದಿಲ್ಲ. ಹೆಚ್ಚು ರಜೆ ಹಾಕುತ್ತಾರೆ ಎಂದು ಗ್ರಾಮಸ್ಥರು ಕಿಡಿಕಾರಿದ್ದಾರೆ.

    ಕ್ಷೇತ್ರ ಶಿಕ್ಷಣಾಧಿಕಾರಿಗಳ ಅನುಮತಿ ಇಲ್ಲದೆ ಶಿಕ್ಷಕರು 5 ದಿನ ನಿರಂತರವಾಗಿ ರಜೆ ಪಡೆದಿದ್ದಾರೆ. ಅಲ್ಲದೆ ಇತರ ಶಿಕ್ಷಕರಿಗೆ ಬುದ್ಧಿ ಹೇಳಬೇಕಿದ್ದ ಮುಖ್ಯ ಶಿಕ್ಷಕರು ಸಹ ಪತ್ನಿಗೆ ಹುಷಾರಿಲ್ಲ ಎಂದು ರಜೆ ಹಾಕುವುದು ಇಲ್ಲವೆ ಬೆಳಗ್ಗೆ ಶಾಲೆಗೆ ಆಗಮಿಸಿ ಮಧ್ಯಾಹ್ನವೇ ಮನೆಗೆ ತೆರಳುವುದನ್ನು ಮಾಡಿದ್ದಾರೆ. ಹಲವು ದಿನಗಳಿಂದ ಮೂವರು ಶಿಕ್ಷಕರು ಸಹ ಇದೇ ರೀತಿ ಮಾಡಿದ್ದು, ಇದರಿಂದ ಗ್ರಾಮಸ್ಥರು ಬೇಸತ್ತಿದ್ದಾರೆ. ಶಿಕ್ಷಕರು ಬಾರದೇ ಪಾಠ ಪ್ರವಚನ ಸರಿಯಾಗಿ ನಡೆಯುತ್ತಿಲ್ಲ. ಶಿಕ್ಷಕರ ಗೈರಿನಿಂದ ವಿದ್ಯಾರ್ಥಿಗಳ ಭವಿಷ್ಯ ಹಾಳಾಗುತ್ತಿದೆ ಎಂದು ಅಸಮಾಧಾನ ಹೊರಹಾಕಿದ್ದಾರೆ.

    ಮೂವರು ಶಿಕ್ಷಕರು ಸಹ ಮಾತನಾಡಿಕೊಂಡು, ಪ್ರತಿ ದಿನ ಒಬ್ಬರೇ ಶಾಲೆಗೆ ಆಗಮಿಸುತ್ತಿದ್ದರು. ಉಳಿದ ಇಬ್ಬರು ಒಬ್ಬರು ರಜೆ ತೆಗೆದುಕೊಳ್ಳುತ್ತಿದ್ದರು. ಗುರುವಾರ ಇಬ್ಬರು ಶಿಕ್ಷಕರು ಬಂದಿರಲಿಲ್ಲ. ಬಂದಿದ್ದ ಒಬ್ಬ ಶಿಕ್ಷಕರು ಸಹ ಮಧ್ಯಾಹ್ನವೇ ಶಾಲೆಯ ವಿದ್ಯಾರ್ಥಿಗಳನ್ನು ಮನೆಗೆ ಕಳುಹಿಸಿ, ಶಾಲೆಗೆ ಬೀಗ ಹಾಕಿಕೊಂಡು ಹೋಗಿದ್ದಾರೆ. ಇನ್ನು ಕೆಲವು ದಿನ ಮೂವರು ಶಿಕ್ಷಕರು ಸಹ ಒಟ್ಟಿಗೆ ರಜೆ ಹಾಕುತ್ತಿದ್ದರು ಎಂದು ಗ್ರಾಮಸ್ಥರು ಕಿಡಿಕಾರಿದ್ದಾರೆ.

    ಶಿಕ್ಷಕರ ಧೋರಣೆ ಖಂಡಿಸಿ ಗ್ರಾಮಸ್ಥರು ಪ್ರತಿಭಟನೆ ನಡೆಸಿದ್ದು ಕಡೆಗೆ ಚಾಮರಾಜನಗರದ ಕ್ಷೇತ್ರ ಶಿಕ್ಷಣಾಧಿಕಾರಿ ಲಕ್ಷ್ಮಿಪತಿ ಅವರು ಶಾಲೆಗೆ ಆಗಮಿಸಿ ಸಮಸ್ಯೆ ಆಲಿಸಿದ್ದಾರೆ. ಈ ವೇಳೆ ಚಕ್ಕರ್ ಹಾಕುವ ಶಿಕ್ಷಕರನ್ನು ಕೆಲಸದಿಂದ ವಜಾಗೊಳಿಸುವಂತೆ ಗ್ರಾಮಸ್ಥರು ಆಗ್ರಹಿಸಿದ್ದಾರೆ. ಶಿಕ್ಷಕರ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳುವುದಾಗಿ ಲಕ್ಷ್ಮಿಪತಿ ಭರವಸೆ ನೀಡಿದ್ದಾರೆ.

  • ಶಾಲೆಯಲ್ಲಿ ನಿಗೂಢವಾಗಿ ಬೀಳ್ತಿದ್ದ ಕಲ್ಲುಗಳ ಅಸಲಿಯತ್ತು ಬಯಲು

    ಶಾಲೆಯಲ್ಲಿ ನಿಗೂಢವಾಗಿ ಬೀಳ್ತಿದ್ದ ಕಲ್ಲುಗಳ ಅಸಲಿಯತ್ತು ಬಯಲು

    ಬಾಗಲಕೋಟೆ: ಕಳೆದ ಒಂದು ತಿಂಗಳಿನಿಂದ ಶಾಲೆಯಲ್ಲಿ ನಿಗೂಢವಾಗಿ ಬೀಳುತ್ತಿದ್ದ ಪ್ರಕರಣವನ್ನು ಪೊಲೀಸರು ಬೇಧಿಸಿದ್ದು, ಶಾಲಾ ವಿದ್ಯಾರ್ಥಿನಿ ನಡೆಸುತ್ತಿದ್ದ ಕೃತ್ಯ ಎಂದು ಬಾಗಲಕೋಟೆ ಎಸ್‍ಪಿ ಲೋಕೇಶ್ ಜಗಲಾಸರ್ ಹೇಳಿದ್ದಾರೆ.

    ಪ್ರಕರಣದ ಕುರಿತು ಮಾಹಿತಿ ನೀಡಿದ ಎಸ್‍ಪಿ ಅವರು, ಇದು ಶಾಲಾ ಬಾಲಕಿ ನಡೆಸಿದ ಕೃತ್ಯವಾಗಿದ್ದು, ವಿದ್ಯಾರ್ಥಿನಿಯ ಶಾಲೆಯ ಬ್ಯಾಗ್‍ನಲ್ಲಿ ಕಲ್ಲುಗಳು ಪತ್ತೆಯಾಗಿವೆ. ಅಲ್ಲದೇ ಆಕೆಯೇ ತಲೆ ಮೇಲೆ ಕಲ್ಲು ಬಿದ್ದಿದೆ ಎಂದು ಹೇಳುತ್ತಿದ್ದಳು. ಈ ದೃಶ್ಯಗಳು ಸಿಸಿಟಿವಿಯಲ್ಲಿ ಸೆರೆಯಾಗಿದೆ ಎಂದು ಹೇಳಿದ್ದಾರೆ.

    ಸದ್ಯ ವಿದ್ಯಾರ್ಥಿನಿಯ ಬ್ಯಾಗಿನಲ್ಲಿ ಕಲ್ಲು ಪತ್ತೆಯಾಗಿರುವುದರಿಂದ ಪೊಲೀಸರು ಬಾಲಕಿಯ ಹೇಳಿಕೆ ಪಡೆಯಲು ಮುಂದಾಗಿದ್ದಾರೆ. ಬಾಲಕಿಗೆ ಬೇರೆ ಯಾರೋ ಈ ರೀತಿ ಮಾಡುವಂತೆ ಹೇಳಿ ಕೃತ್ಯ ನಡೆಸಿರುವ ಅನುಮಾನವಿದೆ. ಈ ಬಗ್ಗೆ ತನಿಖೆ ನಡೆಸುತ್ತಿದ್ದೇವೆ ಎಂದು ಎಸ್‍ಪಿ ತಿಳಿಸಿದ್ದಾರೆ. ಅಲ್ಲದೆ ವಿದ್ಯಾರ್ಥಿನಿ ಚಿಕ್ಕವಳು ಆಗಿರುವುದರಿಂದ ಕೌನ್ಸಿಲಿಂಗ್ ಮೂಲಕ ಮಾಹಿತಿ ಪಡೆಯಲಾಗುತ್ತಿದೆ. ಏಕೆಂದರೆ ನೇರ ಪ್ರಶ್ನೆ ಮಾಡಿದರೆ ಇದು ಅಕೆಯ ಮೇಲೆ ಪರಿಣಾಮ ಬೀರುವ ಸಾಧ್ಯತೆ ಇದೆ ಎಂದಿದ್ದಾರೆ.

    ಜಿಲ್ಲೆಯ ಇಂಜಿನವಾರಿ ಗ್ರಾಮದಲ್ಲಿ ಕಳೆದ 1 ತಿಂಗಳಿನಿಂದ ಶಾಲೆಯ ಮೇಲೆ ಕಲ್ಲು ಎಸೆಯಲಾಗುತ್ತಿತ್ತು. ಪರಿಣಾಮ ಶಾಲೆಯ ಶಿಕ್ಷಕರು ಹಾಗೂ ವಿದ್ಯಾರ್ಥಿಗಳು ಭಯಪಡುವ ವಾತಾವರಣ ನಿರ್ಮಾಣವಾಗಿತ್ತು. ಘಟನೆಯಿಂದ ಹಲವು ಮಕ್ಕಳ ತಲೆಗೆ ಗಾಯಗಳಾಗಿತ್ತು. ಇದರಿಂದ ಭಯಭೀತರಾಗಿ ಮಕ್ಕಳು ಶಾಲೆ ಬಿಟ್ಟ ಘಟನೆಗಳು ಇಡೀ ಗ್ರಾಮದಲ್ಲಿ ಭಯದ ವಾತಾವರಣ ನಿರ್ಮಾಣವಾಗಿತ್ತು. ಭಾನಾಮತಿಯ ಕಾಟದಿಂದ ಕಲ್ಲು ಬೀಳುತ್ತಿವೆ ಎಂದು ಗ್ರಾಮಸ್ಥರು ಬೆಚ್ಚಿ ಬಿದ್ದಿದ್ದರು. ಆದರೆ ಇದನ್ನು ಅಲ್ಲಗೆಳೆದಿದ್ದ ಜಿಲ್ಲಾಧಿಕಾರಿಗಳು ಹಾಗೂ ಎಸ್‍ಪಿ ಅವರು ಪ್ರಕರಣವನ್ನು ಪತ್ತೆ ಮಾಡಲು ಶಾಲೆಯಲ್ಲಿ ಸಿಸಿಟಿವಿ ಕ್ಯಾಮೆರಾ ಅಳವಡಿಸಿದ್ದರು.

    ಶಿಕ್ಷಣ ಇಲಾಖೆಯ ಸಿಬ್ಬಂದಿ ಶಾಲೆಯಲ್ಲಿ ಐದು ಸಿಸಿಟಿವಿ ಕ್ಯಾಮೆರಾ ಅಳವಡಿಸಿ, ಶಾಲೆಯ ಸುತ್ತ ಪೊಲೀಸ್ ಬಿಗಿ ಬಂದೋಬಸ್ತ್ ವ್ಯವಸ್ಥೆ ಏರ್ಪಡಿಸಿದ್ದರು. ಆ ಬಳಿಕ ಕಲ್ಲು ಬೀಳುವುದು ನಿಂತಿತ್ತು. ಶಿಕ್ಷಣ ಇಲಾಖೆಯ ಮಾರ್ಗದರ್ಶನದಲ್ಲಿ ವಿಜ್ಞಾನ ಪರಿವೀಕ್ಷಕರು, ಪವಾಡ ಬಯಲು ತಜ್ಞರು ಶಾಲೆಗೆ ಭೇಟಿ ನೀಡಿ ಪವಾಡ ಬಯಲು ಮಾಡುವ ಪ್ರಯತ್ನ ಮಾಡಿದರು. ಮಕ್ಕಳ ಮುಂದೆ ಕೆಲ ತಾಂತ್ರಿಕ ಪ್ರಯೋಗ ಮಾಡಿದ್ದರು. ಆದರೂ ಮಕ್ಕಳು ಮಾತ್ರ ಮಂತ್ರಿಸಿದಿ ನಿಂಬೆಹಣ್ಣು, ದೇವರ ಪ್ರಸಾದ ಹಿಡಿದುಕೊಂಡು ಶಾಲೆಗೆ ಆಗಮಿಸುತ್ತಿದ್ದರು.