Tag: school

  • ಶಾಲಾ ಆವರಣವಾಯ್ತು ಕೆರೆ – ಭಾರೀ ಮಳೆಗೆ 3 ಅಂತಸ್ತಿನ ಕಟ್ಟಡ ನೆಲಸಮ

    ಶಾಲಾ ಆವರಣವಾಯ್ತು ಕೆರೆ – ಭಾರೀ ಮಳೆಗೆ 3 ಅಂತಸ್ತಿನ ಕಟ್ಟಡ ನೆಲಸಮ

    ಹುಬ್ಬಳ್ಳಿ: ಕಳೆದ ಎರಡು ದಿನಗಳಿಂದ ನಿರಂತರವಾಗಿ ಸುರಿದ ಮಳೆ ನಗರದ ಹಲವೆಡೆ ಅವಾಂತರ ಸೃಷ್ಟಿಸಿದೆ. ಮಳೆಯಿಂದಾಗಿ ಶಾಲಾ ಅವರಣದಲ್ಲಿ ನೀರು ತುಂಬಿ ಕೆರೆಯಂತಾಗಿ ಮಕ್ಕಳು ಪರದಾಡುವಂತಾಗಿದೆ.

    ಧಾರವಾಡ ಜಿಲ್ಲೆ ಕುಂದಗೋಳ ತಾಲೂಕಿನ ಹಿರೇನರ್ತಿ ಗ್ರಾಮದ ಸರ್ಕಾರಿ ಪ್ರೌಢ ಶಾಲಾ ಆವರಣಕ್ಕೆ ನೀರು ನುಗ್ಗಿ ಭಾರಿ ಅವಾಂತರ ಸೃಷ್ಟಿಸಿದೆ. ನೀರು ನಿಂತ ಪರಿಣಾಮ ಮಕ್ಕಳು ಆವರಣದಿಂದ ತರಗತಿಗಳಿಗೆ ಹೋಗಲು ಪರಡಾಡುತ್ತಿದ್ದಾರೆ. ಮಳೆಯ ನೀರಿನಲ್ಲಿಯೇ ಕೆಸರು ಮಯವಾಗಿ ಮಕ್ಕಳು ತರಗತಿಗೆ ಹೋಗುತ್ತಿದ್ದಾರೆ.

    ಅಷ್ಟೇ ಅಲ್ಲದೆ ಸತತ ಎರಡು ದಿನಗಳ ಮಳೆ ಹಿನ್ನೆಲೆ ಮೂರು ಅಂತಸ್ತಿನ ಕಟ್ಟಡವೊಂದು ನೆಲಸಮವಾಗಿದೆ. ಹುಬ್ಬಳ್ಳಿಯ ಬಾರ್ದನ್‍ಗಲ್ಲಿಯಲ್ಲಿದ್ದ ಕಟ್ಟದ ಕುಸಿದಿದೆ. ನಗರದ ನಿವಾಸಿ ಸಂತೋಷ ಉಗರಗೋಳ ಅವರಿಗೆ ಸೇರಿದ ವಾಣಿಜ್ಯ ಕಟ್ಟಡ ಸತತ ಮಳೆಗೆ ನೆಲಕ್ಕೆ ಉರುಳಿದೆ. ಆದರೆ ಅದೃಷ್ಟವಶಾತ್ ಘಟನೆಯಲ್ಲಿ ಯಾವುದೇ ಪ್ರಾಣ ಹಾನಿಯಾಗಿಲ್ಲ ಎಂದು ವರದಿಯಾಗಿದೆ.

  • ಸಿಎಂ ಮುಂದೆ ಕಣ್ಣೀರಿಟ್ಟು ಶಾಲಾ ಸಮಸ್ಯೆ ಹೇಳಿದ ವಿದ್ಯಾರ್ಥಿನಿ

    ಸಿಎಂ ಮುಂದೆ ಕಣ್ಣೀರಿಟ್ಟು ಶಾಲಾ ಸಮಸ್ಯೆ ಹೇಳಿದ ವಿದ್ಯಾರ್ಥಿನಿ

    ರಾಯಚೂರು: ಮಾನ್ವಿಯ ಕರೇಗುಡ್ಡ ಗ್ರಾಮಕ್ಕೆ ಬಸ್‍ನಲ್ಲಿ ಸಿಎಂ ಗ್ರಾಮ ವಾಸ್ತವ್ಯಕ್ಕೆ ತೆರಳುತ್ತಿದ್ದಾಗ ಮಾರ್ಗಮಧ್ಯದಲ್ಲಿ ವಿದ್ಯಾರ್ಥಿನಿಯೊಬ್ಬಳು ಕಣ್ಣಿರಿಟ್ಟು ಶಾಲಾ ಸಮಸ್ಯೆಗಳನ್ನ ಹೇಳಿಕೊಂಡಿದ್ದಳು. ಈ ಸಮಸ್ಯೆಯನ್ನು ಆದಷ್ಟು ಬೇಗ ಪರಿಹರಿಸುತ್ತೇನೆ ಎಂದು ಸಿಎಂ ವಿದ್ಯಾರ್ಥಿನಿಗೆ ಭರವಸೆ ನೀಡಿದ್ದಾರೆ.

    ಜೂನ್ 26 ರಂದು ಕರೇಗುಡ್ಡ ಗ್ರಾಮದಲ್ಲಿ ಗ್ರಾಮವಾಸ್ತವ್ಯ ಮಾಡಲು ಸಿಎಂ ಬರುತ್ತಿದ್ದಾಗ ತನ್ನ ಶಾಲೆಯ ಸಮಸ್ಯೆಗಳಿಗೆ ಪರಿಹಾರ ನೀಡುವಂತೆ ವಿದ್ಯಾರ್ಥಿ ಕಣ್ಣೀರಿಟ್ಟು ಕೇಳಿಕೊಂಡಿದ್ದಳು. ವಿದ್ಯಾರ್ಥಿನಿಯ ಮನವಿಗೆ ಸ್ಪಂದಿಸಿದ ಸಿಎಂ ಕೂಡಲೇ ಪರಿಹಾರ ಒದಗಿಸುವುದಾಗಿ ಭರವಸೆಯನ್ನು ನೀಡಿದ್ದರು.

    ಸಮಸ್ಯೆ ಏನು?
    ಮಾನ್ವಿ ತಾಲೂಕಿನ ನೀರಮಾನ್ವಿ ಗ್ರಾಮದ ಆದರ್ಶ ವಿದ್ಯಾಲಯದಲ್ಲಿ 400 ಕ್ಕೂ ಹೆಚ್ಚು ವಿದ್ಯಾರ್ಥಿಗಳಿದ್ದಾರೆ. 6 ರಿಂದ 10ನೇ ತರಗತಿವರೆಗೆ ಇರುವ ಸರ್ಕಾರದ ವಿಶೇಷ ಸವಲತ್ತುಗಳ ಶಾಲೆಯಾಗಿದ್ದರೂ, ವಿದ್ಯಾರ್ಥಿಗಳಿಗೆ ಸರಿಯಾದ ಸವಲತ್ತುಗಳು ಸಿಗುತ್ತಿಲ್ಲ. ಈ ಶಾಲೆಯಲ್ಲಿ 18 ಶಿಕ್ಷಕರ ಬದಲಾಗಿ ಕೇವಲ 7 ಮಂದಿ ಶಿಕ್ಷಕರು ಮಾತ್ರ ಇದ್ದಾರೆ. ಅದರಲ್ಲೂ ಗಣಿತ, ಇಂಗ್ಲಿಷ್ ವಿಷಯಕ್ಕೆ ಶಿಕ್ಷಕರು ಇಲ್ಲದಿರುವುದು ಶಾಲೆಯ ಶೈಕ್ಷಣಿಕ ಗುಣಮಟ್ಟ ಕುಸಿಯಲು ಕಾರಣವಾಗಿದೆ.

    ಶಿಕ್ಷಕರ ಕೊರೆತೆಯಿಂದ ವಿದ್ಯಾರ್ಥಿಗಳಿಗೆ ಕಷ್ಟವಾಗುತ್ತಿದೆ. ಶಾಲಾ ಶಿಕ್ಷಕರು ಅನೇಕ ಬಾರಿ ಶಿಕ್ಷಕರ ಕೊರತೆ ಬಗ್ಗೆ ಸಂಬಂಧಪಟ್ಟ ಅಧಿಕಾರಿಗಳ ಗಮನಕ್ಕೆ ತಂದರೂ ಪ್ರಯೋಜನವಾಗಿಲ್ಲ. ಅಲ್ಲದೆ ಮಾನ್ವಿ ತಾಲೂಕಿನ ವಿವಿಧ ಗ್ರಾಮಗಳ ವಿದ್ಯಾರ್ಥಿಗಳು ಇಲ್ಲಿ ಓದುತ್ತಿರುವುದರಿಂದ ವಸತಿ ನಿಲಯದ ಅವಶ್ಯಕತೆಯೂ ಇದೆ.

    ಸಾಕಷ್ಟು ಬಾರಿ ಸಮಸ್ಯೆಗಳ ಬಗ್ಗೆ ದೂರು ಹೇಳಿದರೂ ಪ್ರಯೋಜನವಾಗದ ಹಿನ್ನೆಲೆಯಲ್ಲಿ ಇದೇ ಸರಿಯಾದ ಸಮಯ ಎಂದು ಭಾವಿಸಿ ಎಸ್‍ಡಿಎಂಸಿ ಸದಸ್ಯರು, ಪಾಲಕರು ಹಾಗೂ ಶಾಲಾ ವಿದ್ಯಾರ್ಥಿಗಳು ಸಿಎಂ ಗ್ರಾಮವಾಸ್ತವ್ಯಕ್ಕೆ ತೆರಳುತ್ತಿದ್ದಾಗ ಬಸ್ ನಿಲ್ಲಿಸಿ ತಮ್ಮ ಅಹವಾಲು ಸಲ್ಲಿಸಿದ್ದರು.

    ವಿದ್ಯಾರ್ಥಿನಿಯ ಕಣ್ಣೀರಿಗೆ ಕರಗಿ ಸಿಎಂ ಎಲ್ಲಾ ಸಮಸ್ಯೆಗಳಿಗೆ ಪರಿಹಾರ ನೀಡುವುದಾಗಿ ಹೇಳಿ ಹೋಗಿದ್ದಾರೆ. ಸಿಎಂ ನೀಡಿದ ಭರವಸೆ ಈಡೇರಿಕೆ ಆಗುತ್ತಾ? ಇಲ್ಲವೇ ಎನ್ನುವುದು ಮುಂದಿನ ದಿನಗಳಲ್ಲಿ ತಿಳಿಯಲಿದೆ.

  • ಡಿಸಿಎಂಗಾಗಿ ಮತ್ತೆ ಝೀರೋ ಟ್ರಾಫಿಕ್ – 20 ನಿಮಿಷ ಶಾಲಾ ವಿದ್ಯಾರ್ಥಿಗಳಿಗೆ ಫುಲ್ ಕಿರಿಕಿರಿ

    ಡಿಸಿಎಂಗಾಗಿ ಮತ್ತೆ ಝೀರೋ ಟ್ರಾಫಿಕ್ – 20 ನಿಮಿಷ ಶಾಲಾ ವಿದ್ಯಾರ್ಥಿಗಳಿಗೆ ಫುಲ್ ಕಿರಿಕಿರಿ

    – ಶಾಲಾ ಮಕ್ಕಳ ಬಳಿ ಕ್ಷಮೆ ಕೇಳುವೆ
    – ಬಿಜೆಪಿಗೆ ಮತ ಹಾಕಿದ್ರೂ ಸಂಕಷ್ಟಕ್ಕೆ ಸ್ಪಂದಿಸ್ತೇವೆ

    ಬೆಂಗಳೂರು: ಉಪಮುಖ್ಯಮಂತ್ರಿ ಅವರು ಮತ್ತೆ ಮತ್ತೆ ಝೀರೋ ಟ್ರಾಫಿಕ್‍ನಲ್ಲಿ ಹೋಗುತ್ತಿದ್ದು, ಇದೀಗ ಪರಮೇಶ್ವರ್ ಅವರ ಝೀರೋ ಟ್ರಾಫಿಕ್ ಪರಿಣಾಮದಿಂದ ಶಾಲಾ ವಿದ್ಯಾರ್ಥಿಗಳಿಗೆ ಕಿರಿಕಿರಿ ಉಂಟಾಗಿದೆ.

    ಆರ್.ಟಿ.ನಗರ ಪೊಲೀಸ್ ಠಾಣೆ ಬಳಿ ರಸ್ತೆ ಅಗಲೀಕರಣ ವೀಕ್ಷಣೆಗೆಂದು ಡಿಸಿಎಂ ಪರಮೇಶ್ವರ್ ಬಂದಿದ್ದರು. ಈ ಸಂದರ್ಭದಲ್ಲಿ ಪರಮೇಶ್ವರ್ ಕಾರಿನ ಹಿಂದೆ ಬೆಂಬಲಿಗರ ಸಾಲು ಸಾಲು ಕಾರುಗಳಿದ್ದವು. ಇದರಿಂದಾಗಿ ಖಾಸಗಿ ಶಾಲಾ ಬಸ್ಸಿಗೆ ತೊಂದರೆಯಾಗಿದೆ. ಪರಮೇಶ್ವರ್ ಸ್ಥಳಕ್ಕೆ ಬಂದು 20 ನಿಮಿಷ ಆದರೂ ಶಾಲಾ ಮಕ್ಕಳ ಬಸ್ ಸಿಗ್ನಲ್‍ನಲ್ಲೇ ನಿಲ್ಲಿಸಿದ್ದರು. ಕೊನೆಗೆ 20 ನಿಮಿಷಗಳ ನಂತರ ಬಸ್ ಬಿಟ್ಟಿದ್ದಾರೆ. ಇದರಿಂದ ಜನ ಪ್ರತಿನಿಧಿಗಳಿಂದ ಶಾಲಾ ಮಕ್ಕಳಿಗೆ ಕಿರಿಕಿರಿ ಉಂಟಾಗುತ್ತಿದೆ ಎಂದು ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

    ಇಂದು ಡಿಸಿಎಂ ಪರಮೇಶ್ವರ್ ಸಿಟಿ ರೌಂಡ್ಸ್ ಮಾಡುತ್ತಿದ್ದಾರೆ. ದಿಣ್ಣೂರು ಮುಖ್ಯ ರಸ್ತೆ ಅಗಲಿಕರಣ ಹಿನ್ನೆಲೆಯಲ್ಲಿ ಪರಮೇಶ್ವರ್ ಅವರು ತಪಾಸಣೆ ಮಾಡಿದ್ದಾರೆ. ಆರ್.ಟಿ.ನಗರ ಪೊಲೀಸ್ ಠಾಣೆಯಿಂದ ದಿನ್ನೂರು ಮುಖ್ಯರಸ್ತೆಗೆ ಸಂಪರ್ಕ ಕಲ್ಪಿಸುವ ರಸ್ತೆಯನ್ನು ಡಿಸಿಎಂ ಟೇಪ್ ಹಿಡಿದು ಅಳತೆ ಮಾಡಿಸಿದ್ದಾರೆ. ಡಿಸಿಎಂ ಪರಮೇಶ್ವರ್ ಗೆ ಹೆಬ್ಬಾಳ ಶಾಸಕ ಭೈರತಿ ಸುರೇಶ್, ಮೇಯರ್ ಗಂಗಾಂಬಿಕೆ, ಬಿಬಿಎಂಪಿ ಕಮಿಷನರ್ ಮಂಜುನಾಥ್ ಪ್ರಸಾದ್ ಸೇರಿದಂತೆ ಹಲವರು ಸಾಥ್ ನೀಡಿದ್ದಾರೆ.

    ಸುಸಜ್ಜಿತ ರಸ್ತೆ ಮಾಡಿ, ಸುವ್ಯವಸ್ಥಿತವಾಗಿ ಮಾಡಿಕೊಟ್ಟರೆ ರಸ್ತೆ ಅಗಲೀಕರಣ ಅವಶ್ಯಕತೆ ಇಲ್ಲ. ರಸ್ತೆಗಳಲ್ಲೂ ವಿದ್ಯುತ್ ಟ್ರಾನ್ಸ್ ಫಾರ್ಮರ್ ಗಳೇ ತುಂಬಿಕೊಂಡಿವೆ. ರಸ್ತೆಗಳು ಕಸದ ತೊಟ್ಟಿಯಾಗಿದೆ. ಜೊತೆಗೆ ರಸ್ತೆ ತುಂಬಾ ಗುಂಡಿಗಳೇ ತುಂಬಿವೆ. ಈ ಸಮಸ್ಯೆಯನ್ನು ಮೊದಲು ಪರಿಹಾರ ಮಾಡಿ. ರಸ್ತೆ ಅಗಲೀಕರಣ ಅವಶ್ಯಕತೆ ಇರುವುದಿಲ್ಲ ಎಂದು ಸಾರ್ವಜನಿಕರು ಡಿಸಿಎಂ ರೌಂಡ್ಸ್ ವೇಳೆ ದೂರು ನೀಡಿದ್ದಾರೆ.

    ದಿಣ್ಣೂರು ಮುಖ್ಯರಸ್ತೆ ಅಗಲೀಕರಣ ಬಹಳ ದಿನಗಳಿಂದ ಮಾಡಲು ಒತ್ತಡವಿತ್ತು. ನೀಲಿನಕ್ಷೆ ಪಾಲಿಕೆ ಸಿದ್ಧಪಡಿಸಿ ಹಣ ಒದಗಿಸಲಾಗಿದೆ. 80 ಅಡಿ ಅಗಲೀಕರಣ ಮಾಡಲು ಅಂದಾಜು ಮಾಡಲಾಗಿದೆ. ಇದಕ್ಕಾಗಿ ಅಂಗಡಿ, ಮನೆ ಒಡೆಯಬೇಕಾಗುತ್ತದೆ. ಎರಡು ಭಾಗದಲ್ಲಿ 10 ಅಡಿ ಅಗಲೀಕರಣ ಮಾಡಿ ಎಂದು ಸ್ಥಳೀಯರು ಬೇಡಿಕೆ ಇಟ್ಟಿದ್ದಾರೆ. ಹೀಗಾಗಿ ಸ್ಥಳೀಯರ ನಷ್ಟ ಭರಿಸುವ ಬಗ್ಗೆಯೂ ಚರ್ಚೆಯಾಗುತ್ತಿದೆ ಎಂದು ಡಿಸಿಎಂ ಪರಮೇಶ್ವರ್ ಹೇಳಿದ್ದಾರೆ.

    ಡಿಸಿಎಂ ಕ್ಷಮೆ:
    ಶಾಲಾ ಮಕ್ಕಳಿಗೆ ಝೀರೋ ಟ್ರಾಫಿಕ್ ಅಡ್ಡಿ ವಿಚಾರವಾಗಿ ಪ್ರತಿಕ್ರಿಯಿಸಿದ ಡಿಸಿಎಂ, ನಾನು ಶಾಲಾ ಮಕ್ಕಳ ಬಳಿ ಕ್ಷಮೆ ಕೇಳುವೆ. ಜೊತೆಗೆ ಎಲ್ಲರಿಗೂ ಕ್ಷಮೆ ಕೇಳುವೆ. ನಮ್ಮಿಂದ ಯಾರಿಗೆ ಬೇಸರ ಆಗಬಾರದು. ಪೊಲೀಸರಿಗೆ ಅಂಬುಲೆನ್ಸ್, ಶಾಲಾ ವಾಹನಗಳಿಗೆ ಅಡ್ಡಿ ಮಾಡಬೇಡಿ ಎಂದು ಹೇಳಿದ್ದೆ. ಆದರೂ ಈ ರೀತಿ ಕೆಲವೊಮ್ಮೆ ಆಗಿದೆ. ಇದು ನನಗೂ ಬೇಸರ ತಂದಿದೆ. ಮತ್ತೊಮ್ಮೆ ಹೀಗೆ ಆಗಲ್ಲ ಎಂದು ಶಾಲಾ ಮಕ್ಕಳ  ಮತ್ತು ಪೋಷಕರ ಬಳಿ ಕ್ಷಮೆ ಕೇಳಿದ್ದಾರೆ.

    ಲೋಕಸಭಾ ಚುನಾವಣೆಯಲ್ಲಿ ಎಲ್ಲರಿಗೂ ಮತ ಹಾಕಿದ್ದೀರಿ. ಯಾರಿಗೆ ಮತ ಹಾಕಿದ್ದೀರಿ, ಹಾಕಿಲ್ಲ ಅಂತ ಗೊತ್ತಿಲ್ಲ. ಆದರೆ ಬಿಜೆಪಿಗೆ ಹೆಚ್ಚು ಮತ ಹಾಕಿದ್ದೀರಿ, ಪರವಾಗಿಲ್ಲ. ಜನಸಮುದಾಯಕ್ಕೆ ತೊಂದರೆ ಆಗಬಾರದು ಅಷ್ಟೇ. ಜನರ ಸಂಕಷ್ಟಕ್ಕೆ ಮೈತ್ರಿ ಸರ್ಕಾರ ಸ್ಪಂದಿಸಲಿದೆ ಎಂದರು.

    ಹಲವೆಡೆ ಶುದ್ಧವಿಲ್ಲದ ನೀರು ಕೊಡುತ್ತಾರೆ ಎಂಬ ಮಾಹಿತಿ ಇದೆ. ಯಾಕೆ ಹೀಗೆ ಆಗುತ್ತೆ ಗೊತ್ತಿಲ್ಲ. ಅಪಾರ್ಟ್ ಮೆಂಟ್‍ಗಳ ಸೌಲಭ್ಯ ನೀಡುವುದರಲ್ಲಿ ವಂಚನೆ ಮಾಡಿರುವವರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು. ಬಿಬಿಎಂಪಿ, ಬಿಡಿಎ ಜನರಿಗೆ ಅನುಕೂಲ ಮಾಡಿಕೊಡಲು ಬದ್ಧನಾಗಿದ್ದೇನೆ ಎಂದು ಅಪಾರ್ಟ್ ಮೆಂಟ್ ನೀರಿನ ಪೂರೈಕೆ ಬಗ್ಗೆ ಡಿಸಿಎಂ ಗರಂ ಆಗಿದ್ದರು.

  • ಮಕ್ಕಳಿಗಾಗಿ ಶಾಲೆ ಆರಂಭಿಸಿದ ಸನ್ನಿ ಲಿಯೋನ್

    ಮಕ್ಕಳಿಗಾಗಿ ಶಾಲೆ ಆರಂಭಿಸಿದ ಸನ್ನಿ ಲಿಯೋನ್

    ಮುಂಬೈ: ಬಾಲಿವುಡ್ ಬೆಡಗಿ ಸನ್ನಿ ಲಿಯೋನ್ ಅವರು ತಮ್ಮ ಪತಿ ಡೇನಿಯಲ್ ವೆಬರ್ ಜೊತೆ ಸೇರಿ ಚಿಕ್ಕ ಮಕ್ಕಳಿಗಾಗಿ ಶಾಲೆಯನ್ನು ಆರಂಭಿಸಿದ್ದಾರೆ.

    ಮಕ್ಕಳಿಗೆ ದೈಹಿಕ ಹಾಗೂ ಬೌದ್ಧಿಕ ವಿಕಾಸಕ್ಕೆ ಕಲ್ಪಿಸುವುದು ನಮ್ಮ ಉದ್ದೇಶ. ಮಕ್ಕಳು ಕೇವಲ ಪಠ್ಯಪುಸ್ತಕಕ್ಕೆ ಮಾತ್ರ ಸೀಮಿತವಾಗಿರಬಾರದು. ಅವರು ಪ್ರಪಂಚದಲ್ಲಿ ನಡೆಯುತ್ತಿರುವ ಪ್ರತಿಯೊಂದು ವಿಷಯದ ಬಗ್ಗೆ ತಿಳಿದುಕೊಂಡಿರಬೇಕು. ಮಕ್ಕಳು ಮಜಾ ಮಾಡಬೇಕು ಎಂಬುದು ನನ್ನ ಉದ್ದೇಶ ಎಂದು ಸನ್ನಿ ಲಿಯೋನ್ ಹೇಳಿದ್ದಾರೆ. ಇದನ್ನೂ ಓದಿ: ಕೇರಳ ಸಂತ್ರಸ್ತರಿಗೆ ಆಸರೆಯಾದ ಸನ್ನಿ ಲಿಯೋನ್!

    ಸನ್ನಿ ಲಿಯೋನ್ ಅವರಿಗೆ ಮಕ್ಕಳೆಂದರೆ ತುಂಬಾನೇ ಇಷ್ಟ. ಅವರು ಮೂರು ಮಕ್ಕಳ ತಾಯಿ ಕೂಡ ಆಗಿದ್ದಾರೆ. ಅಲ್ಲದೆ ಮಕ್ಕಳ ಒಟ್ಟಾರೆ ಬೆಳವಣಿಗೆಗೆ ಆರಂಭಿಕ ಕೆಲವು ವರ್ಷಗಳು ಎಷ್ಟು ಮುಖ್ಯ ಎಂಬುದು ಸನ್ನಿ ಲಿಯೋನ್ ತಿಳಿದುಕೊಂಡಿದ್ದಾರೆ. ಇದನ್ನೂ ಓದಿ: ಕಿಡ್ನಿ ವೈಫಲ್ಯದಿಂದ ಬಳಲುತ್ತಿದ್ದ ವ್ಯಕ್ತಿಗೆ ಆಸರೆಯಾದ ಸನ್ನಿ ಲಿಯೋನ್

    ಈ ಶಾಲೆಗಾಗಿ ಸನ್ನಿ ಲಿಯೋನ್ ಸಾಕಷ್ಟು ಸಮಯ ತೆಗೆದುಕೊಂಡಿದ್ದಾರೆ. ಅಲ್ಲದೆ ಈ ಶಾಲೆಗಾಗಿ ಸಾಕಷ್ಟು ಕಠಿಣ ಶ್ರಮವನ್ನು ವಹಿಸಿದ್ದಾರೆ. ಸನ್ನಿ ಸ್ವತಃ ಕುಳಿತು ಶಾಲೆಯ ಫಿಚರ್ಸ್, ಇಂಟಿರಿಯರ್ಸ್ ಹಾಗೂ ವಿವಿಧ ಸೌಲಭ್ಯಗಳ ಬಗ್ಗೆ ಕೆಲಸ ಮಾಡಿದ್ದಾರೆ.

    ಸನ್ನಿ ಲಿಯೋನ್ ಹಾಗೂ ಅವರ ಪತಿಗೆ ಈ ಸ್ಕೂಲ್ ಒಂದು ಕನಸಾಗಿದ್ದು, ಈ ಸ್ಕೂಲ್ ಕೇವಲ ಆರ್ಟ್ ಸ್ಕೂಲ್ ಅಲ್ಲದೆ ಪ್ಲೇ ಸ್ಕೂಲ್ ಆಗಿಯೂ ಇರುತ್ತದೆ. ಈ ಶಾಲೆಯಲ್ಲಿ ಮಕ್ಕಳಿಗೆ ಆರ್ಟ್ ಹಾಗೂ ಫ್ಯೂಶನ್ ಕಲಿಯಬಹುದು.

  • ಶಾಲೆಗೆ ಬಕೆಟ್ ತೆಗೆದುಕೊಂಡು ಹೋಗ್ಲೇಬೇಕು- ಗದಗ ವಸತಿ ಶಾಲೆಯ ದುಸ್ಥಿತಿ

    ಶಾಲೆಗೆ ಬಕೆಟ್ ತೆಗೆದುಕೊಂಡು ಹೋಗ್ಲೇಬೇಕು- ಗದಗ ವಸತಿ ಶಾಲೆಯ ದುಸ್ಥಿತಿ

    ಗದಗ: ಜಿಲ್ಲೆಯಲ್ಲೊಂದು ಮೊರಾರ್ಜಿ ದೇಸಾಯಿ ವಸತಿ ಶಾಲೆ ಇದೆ. ಶಾಲೆಗೆ ಹೋಗಬೇಕಾದರೆ ಬುಕ್ಸ್, ನೋಟ್ ಬುಕ್, ಪೆನ್ನು, ಪೆನ್ಸಿಲ್ ಒಯ್ಯೋದು ಸಹಜ. ಆದರೆ ಈ ಶಾಲೆಗೆ ವಿದ್ಯಾರ್ಥಿಗಳು ಹೋಗಬೇಕಾದರೆ ಬಕೆಟ್ ತೆಗೆದುಕೊಂಡು ಹೋಗಲೇಬೇಕು.

    ಹೌದು. ಗದಗ ಜಿಲ್ಲೆಯ ಗಜೇಂದ್ರಗಡ ತಾಲೂಕಿನ ಕಾಲಕಾಲೇಶ್ವರ ಗ್ರಾಮದ ಮೊರಾರ್ಜಿ ದೇಸಾಯಿ ವಸತಿ ಶಾಲೆಯ ದುಸ್ಥಿತಿ. ಇಲ್ಲಿನ ಮಕ್ಕಳಿಗೆ ಪಾಠಕ್ಕಿಂತಲೂ ನೀರಿನದ್ದೇ ಜಾಸ್ತಿ ಚಿಂತೆಯಾಗಿದೆ. ನಿತ್ಯವೂ ಪಾಠ ಬಿಟ್ಟು ನೀರಿಗಾಗಿ ಕಾಯುವ ದುಸ್ಥಿತಿ ಇದೆ. ನೀರಿಗಾಗಿ ಮಕ್ಕಳು ಪರದಾಡುತ್ತಿದ್ದರೂ ಸಮಾಜ ಕಲ್ಯಾಣ ಇಲಾಖೆ ಅಧಿಕಾರಿಗಳು ಮಾತ್ರ ಕುಂಭಕರ್ಣ ನಿದ್ದೆಗೆ ಜಾರಿದ್ದಾರೆ. ಇದು ಮಕ್ಕಳ ಕೋಪಕ್ಕೆ ಕಾರಣವಾಗಿದೆ.

    ಒಂದ್ಕಡೆ ಸಿಎಂ ತಾವು ಹೋಗೋ ಗ್ರಾಮಗಳ ಶಾಲೆಗೆ ಸೌಲಭ್ಯ ಕೊಡಿಸಿಕೊಂಡು ಗ್ರಾಮವಾಸ್ತವ್ಯ ಮಾಡುತ್ತಿದ್ದಾರೆ. ಆದರೆ ಈ ಶಾಲೆಯಲ್ಲಿ ಇರೋ ಮೂರು ಕೊಳವೆ ಬಾವಿಗಳು ಬತ್ತಿ ಹೋಗಿವೆ. ಶಾಲೆ ಶುರುವಾಗಿ ತಿಂಗಳು ಆದರೂ ನೀರಿನ ಸಮಸ್ಯೆ ಬಗೆಹರಿಸೋಕೆ ಯಾವೊಬ್ಬ ಅಧಿಕಾರಿಯೂ ಮುಂದಾಗಿಲ್ಲ. ಶಾಲೆಗೆ ದಿನ ನಿತ್ಯವೂ ಟ್ಯಾಂಕರ್‍ನಲ್ಲಿ ನೀರು ತರಿಸಲಾಗುತ್ತದೆ. ನೀರು ಬಂದ ಕೂಡಲೇ ಬಕೆಟ್‍ನಲ್ಲಿ ನೀರು ತಂದಿಟ್ಟುಕೊಂಡು ಆ ಬಳಿಕ ಕ್ಲಾಸ್‍ಗೆ ಹೋಗಬೇಕು ಎಂದು ವಿದ್ಯಾರ್ಥಿ ಮಂಜುನಾಥ್ ತಿಳಿಸಿದ್ದಾನೆ.

    ಈ ವಸತಿ ಶಾಲೆಯಲ್ಲಿ ಒಟ್ಟು 239 ಮಂದಿ ವ್ಯಾಸಂಗ ಮಾಡುತ್ತಿದ್ದಾರೆ. ಅಷ್ಟೇ ಅಲ್ಲದೆ 10ಕ್ಕೂ ಹೆಚ್ಚು ಸಿಬ್ಬಂದಿ ಕಾರ್ಯ ನಿರ್ವಹಿಸ್ತಿದ್ದಾರೆ. ಆದರೆ ಇವರಿಗೆ ಅಲ್ಲಿ ಯಾವುದೇ ಮೂಲಭೂತ ಸೌಕರ್ಯಗಳಿಲ್ಲದೆ ನರಕಯಾತನೆ ಅನುಭವಿಸುತ್ತಿದ್ದಾರೆ ಎಮದು ವಿದ್ಯಾರ್ಥಿನಿ ಐಶ್ವರ್ಯಾ ಹೇಳಿದ್ದಾಳೆ.

    ಒಟ್ಟಿನಲ್ಲಿ ಸರ್ಕಾರ ಬಡಮಕ್ಕಳ ಶಿಕ್ಷಣಕ್ಕಾಗಿ ಕೋಟಿ ಕೋಟಿ ಖರ್ಚು ಮಾಡಿ ವಸತಿ ಶಾಲೆ ಕಟ್ಟಿಸುತ್ತದೆ. ಕೋಟಿ ಕೋಟಿ ಅನುದಾನವನ್ನೂ ಬಿಡುಗಡೆ ಮಾಡುತ್ತದೆ. ಆದರೆ ಅಧಿಕಾರಿಗಳ ನಿರ್ಲಕ್ಷ್ಯವೋ, ಧನದಾಹವೋ ಗೊತ್ತಿಲ್ಲ. ಆ ಅನುದಾನವಂತೂ ಸರಿಯಾಗಿ ಬಳಕೆಯಾಗದಿರುವುದರಿಂದ ಮಕ್ಕಳಿಗೆ ಸರಿಯಾದ ಸೌಲಭ್ಯ ಸಿಗ್ತಿಲ್ಲ. ಇನ್ನಾದ್ರೂ ಈ ಸಮಸ್ಯೆ ಬಗೆಹರಿಯುತ್ತಾ ಎಂಬುದನ್ನು ಕಾದು ನೋಡಬೇಕು.

  • ಬಿಸಿಯೂಟ ಆಹಾರ ಸಾಮಗ್ರಿ ಪೂರೈಕೆಯಲ್ಲಿ ವ್ಯತ್ಯಯ- ಮಕ್ಕಳಿಗೆ ಅರೆಹೊಟ್ಟೆ ಊಟ

    ಬಿಸಿಯೂಟ ಆಹಾರ ಸಾಮಗ್ರಿ ಪೂರೈಕೆಯಲ್ಲಿ ವ್ಯತ್ಯಯ- ಮಕ್ಕಳಿಗೆ ಅರೆಹೊಟ್ಟೆ ಊಟ

    ಚಿತ್ರದುರ್ಗ: ಕೋಟೆನಾಡು ಚಿತ್ರದುರ್ಗದ ಆರು ತಾಲೂಕುಗಳ ಪ್ರಾಥಮಿಕ ಶಾಲೆಗಳಿಗೆ ಬಿಸಿಯೂಟದ ಆಹಾರ ಸಾಮಗ್ರಿ ಪೂರೈಕೆಯಲ್ಲಿ ವ್ಯತ್ಯಯವಾಗಿದೆ. ಪರಿಣಾಮ ಶಾಲೆಯ ಅರ್ಧ ಮಕ್ಕಳಿಗೆ ಮಾತ್ರ ಊಟ ಸಿಗುತ್ತಿದೆ.

    ಸರ್ಕಾರದಿಂದ ಚಿತ್ರದುರ್ಗ ಜಿಲ್ಲೆಯ ಆರು ತಾಲೂಕುಗಳ ಹಲವು ಪ್ರಾಥಾಮಿಕ ಶಾಲೆಗಳಿಗೆ ಈ ವರ್ಷ ಬಿಸಿಯೂಟದ ಅಕ್ಕಿ ಹಾಗು ಬೇಳೆ ಸರಬರಾಜಾಗಿಲ್ಲ ಎಂಬ ಮಾತುಗಳು ಕೇಳಿ ಬರುತ್ತಿವೆ. ಹೀಗಾಗಿ ಶಾಲೆಯ ಶಿಕ್ಷಕರು ಪಕ್ಕದಲ್ಲಿರುವ ಪ್ರೌಢಶಾಲೆಯಿಂದ ದವಸ ಧಾನ್ಯ ಎರವಲು ಪಡೆದು ಮಕ್ಕಳಿಗೆ ಬಿಸಿಯೂಟ ಪೂರೈಕೆ ಮಾಡುತ್ತಿದ್ದಾರೆ. ನೂರು ಜನ ಮಕ್ಕಳಿದ್ರೆ ಕೇವಲ ಐವತ್ತು ಜನಕ್ಕೆ ಆಗುವಷ್ಟು ಜನರಿಗೆ ಬಿಸಿಯೂಟ ಸಿದ್ಧಪಡಿಸಿ ಅದರಲ್ಲೇ ಎಲ್ಲರಿಗೂ ಊಟ ನೀಡುತ್ತಿದ್ದಾರೆ ಎಂದು ಪೋಷಕರು ಹೇಳುತ್ತಿದ್ದಾರೆ.

    ಟೆಂಡರ್ ಪ್ರಕ್ರಿಯ ವೇಳೆ ಲೋಕಸಭಾ ಚುನಾವಣೆ ಬಂದಿದ್ದರಿಂದ ನೀತಿ ಸಂಹಿತೆ ಜಾರಿಯಾಗಿದ್ದರಿಂದ ಆಹಾರ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಿದೆ. ಹೀಗಾಗಿ ಪ್ರಾಥಮಿಕ ಶಾಲೆಗಳು ನೆರೆಯ ಪ್ರೌಢಶಾಲೆಗಳಿಂದ ಸಾಮಗ್ರಿಗಳನ್ನು ಹೊಂದಾಣಿಕೆ ಮಾಡಿಕೊಳ್ಳುತ್ತಿದ್ದಾರೆ. ಜಿಲ್ಲೆಯ ಕೆಲವು ಶಾಲೆಗಳಿಗೆ ಮಾತ್ರ ಈ ತೊಂದರೆಯಾಗಿದ್ದು, ಸರಿಯಾದ ಅಂಕಿ-ಅಂಶಗಳು ನನಗೆ ಗೊತ್ತಿಲ್ಲ. ಟೆಂಡರ್ ಪ್ರಕ್ರಿಯೆ ಆರಂಭವಾಗಿದ್ದು, ಬಿಸಿಯೂಟಕ್ಕೆ ದವಸ ಧಾನ್ಯ ಸರಬರಾಜು ಮಾಡದೇ ಇರೋದೇನು ಅಂತ ದೊಡ್ಡ ಸಮಸ್ಯೆ ಏನಲ್ಲ ಎಂದು ಜಿಲ್ಲೆಯ ಶಿಕ್ಷಣ ಇಲಾಖೆಯ ಉಪ ನಿರ್ದೇಶಕ ಆಂಥೋನಿ ನುಣುಚಿಕೊಳ್ತಾರೆ

    ಒಟ್ಟಾರೆ ಸರ್ಕಾರ, ಬಡ ಮಕ್ಕಳಿಗೆ ಶಾಲೆಯಲ್ಲೇ ಬಿಸಿಯೂಟ ಕೊಡುತ್ತೇವೆ ಎಂದು ಹೇಳಿಕೊಂಡು ಬರುತ್ತದೆ. ಆದರೆ ಈ ಯೋಜನೆ ಸಮರ್ಪಕವಾಗಿ ಅನುಷ್ಠಾನ ಆಗುತ್ತಿಲ್ಲ .ಹೀಗಾಗಿ ವಿದ್ಯಾರ್ಥಿಗಳಿಗೆ ಪೂರೈಕೆಯಾಗುವ ಆಹಾರ ಪದಾರ್ಥಗಳೇ ಸರಿಯಾಗಿ ಶಾಲೆಗೆ ತಲುಪುತ್ತಿಲ್ಲ.

    [wonderplugin_video iframe=”https://www.youtube.com/watch?v=7Z2BzrhFEKQ” lightbox=0 lightboxsize=1 lightboxwidth=960 lightboxheight=540 autoopen=0 autoopendelay=0 autoclose=0 lightboxtitle=”” lightboxgroup=”” lightboxshownavigation=0 showimage=”” lightboxoptions=”” videowidth=600 videoheight=400 keepaspectratio=1 autoplay=1 loop=1 videocss=”position:relative;display:block;background-color:#000;overflow:hidden;max-width:100%;margin:0 auto;” playbutton=”https://publictv.in/wp-content/plugins/wonderplugin-video-embed/engine/playvideo-64-64-0.png”]

  • ಮಣಿಕಟ್ಟು ಸೀಳಿ, ತಲೆಗೆ ಪ್ಲಾಸ್ಟಿಕ್ ಚೀಲ ಸುತ್ತಿದ ಸ್ಥಿತಿಯಲ್ಲಿ ವಿದ್ಯಾರ್ಥಿನಿ ಶವ ಪತ್ತೆ

    ಮಣಿಕಟ್ಟು ಸೀಳಿ, ತಲೆಗೆ ಪ್ಲಾಸ್ಟಿಕ್ ಚೀಲ ಸುತ್ತಿದ ಸ್ಥಿತಿಯಲ್ಲಿ ವಿದ್ಯಾರ್ಥಿನಿ ಶವ ಪತ್ತೆ

    ಕೋಲ್ಕತ್ತಾ: ಮಣಿಕಟ್ಟನ್ನು ಬ್ಲೇಡ್‍ನಿಂದ ಸೀಳಿ, ತಲೆಗೆ ಪ್ಲಾಸ್ಟಿಕ್ ಚೀಲ ಸುತ್ತಿದ ಸ್ಥಿತಿಯಲ್ಲಿ ಹತ್ತನೇ ತರಗತಿ ವಿದ್ಯಾರ್ಥಿನಿಯ ಶವವು ಶಾಲೆಯ ಬಾತ್‍ರೂಂನಲ್ಲಿ ಪತ್ತೆಯಾಗಿರುವ ಭಯಾನಕ ಘಟನೆ ಕೋಲ್ಕತ್ತಾದಲ್ಲಿ ನಡೆದಿದೆ.

    ನಗರದ ಜಿಡಿ ಬಿರ್ಲಾ ಶಾಲೆಯಲ್ಲಿ ಶುಕ್ರವಾರ ಮಧ್ಯಾಹ್ನ ವಿದ್ಯಾರ್ಥಿನಿಯ ಶವ ಪತ್ತೆಯಾಗಿದೆ. ಘಟನಾ ಸ್ಥಳದಲ್ಲಿ ಮೂರು ಪುಟಗಳ ಡೆತ್ ನೋಟ್ ಸಿಕ್ಕಿದೆ. ತೀವ್ರ ಖಿನ್ನತೆಯಿಂದ ಬಳಲುತ್ತಿದ್ದೆ ಹಾಗೂ ಕಳೆದ ಮೂರು ತಿಂಗಳಿನಿಂದ ನಿದ್ದೆ ಮಾಡಲು ಸಾಧ್ಯವಾಗುತ್ತಿರಲಿಲ್ಲ ಎಂದು ವಿದ್ಯಾರ್ಥಿನಿ ಡೆತ್‍ನೋಟ್‍ನಲ್ಲಿ ತಿಳಿಸಿದ್ದಾಳೆ.

    ಘಟನಾ ಸ್ಥಳಕ್ಕೆ ಪೊಲೀಸ್ ಜಂಟಿ ಆಯುಕ್ತ ಮುರಳೀಧರ ಶರ್ಮಾ ಸೇರಿದಂತೆ ಕೋಲ್ಕತಾ ಪೊಲೀಸರು ಭೇಟಿ ನೀಡಿದ್ದಾರೆ. ಶಾಲೆಯ ಶಿಕ್ಷಕರು, ಸಿಬ್ಬಂದಿ ಹಾಗೂ ಪೋಷಕರನ್ನು ವಿಚಾರಣೆ ನಡೆಸಿದ್ದಾರೆ. ಶಾಲೆಯ ಸಿಸಿಟಿವಿ ಕ್ಯಾಮರಾದಲ್ಲಿ ಸೆರೆಯಾದ ದೃಶ್ಯಾವಳಿಗಳನ್ನು ಪರಿಶೀಲಿಸಿದ್ದಾರೆ.

    ವಿದ್ಯಾರ್ಥಿನಿ ಶುಕ್ರವಾರ ಮಧ್ಯಾಹ್ನ 1.30ರ ಸುಮಾರಿಗೆ ತರಗತಿಯಿಂದ ಹೊರ ನಡೆದು, ಬಾತ್‍ರೂಂಗೆ ಹೋಗಿದ್ದಾಳೆ. ಒಂದು ಗಂಟೆ ಕಳೆದರೂ ವಿದ್ಯಾರ್ಥಿನಿ ಕಾಣಿಸಲಿಲ್ಲ ಎಂದು ಶಿಕ್ಷಕರು ತಿಳಿಸಿದ್ದರು. ಹೀಗಾಗಿ ಹುಡುಕಾಟ ಪ್ರಾರಂಭಿಸಿದೆವು. ಈ ವೇಳೆ ಬಾತ್‍ರೂಂನಲ್ಲಿ ವಿದ್ಯಾರ್ಥಿನಿಯ ಶವ ಪತ್ತೆಯಾಗಿದೆ. ತಕ್ಷಣವೇ ಆಕೆಯನ್ನು ಆಸ್ಪತ್ರೆಗೆ ಸಾಗಿಸಲಾಗಿದ್ದು, ಆದರೆ ಅದಾಗಲೇ ವಿದ್ಯಾರ್ಥಿನಿ ಸಾವನ್ನಪ್ಪಿರುವ ಕುರಿತು ವೈದ್ಯರು ದೃಢಪಡಿಸಿದರು ಎಂದು ಪೊಲೀಸ್ ಜಂಟಿ ಆಯುಕ್ತ ಶರ್ಮಾ ತಿಳಿಸಿದ್ದಾರೆ.

    ಸ್ಥಳದಲ್ಲಿ ಪತ್ತೆಯಾಗಿರುವ ಡೆತ್ ನೋಟ್, ಬ್ಲೇಡ್ ಹಾಗೂ ವಿದ್ಯಾರ್ಥಿನಿ ಮುಖಕ್ಕೆ ಮುಚ್ಚಲಾಗಿದ್ದ ಪ್ಲಾಸ್ಟಿಕ್ ಕವರ್ ಅನ್ನು ವಶಕ್ಕೆ ಪಡೆದು, ವಿಧಿ ವಿಜ್ಞಾನ ಪ್ರಯೋಗಾಲಯಕ್ಕೆ ಕಳುಹಿಸಲಾಗಿದೆ. ವಿದ್ಯಾರ್ಥಿನಿಯ ಮೃತ ದೇಹವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದ್ದು, ಶಾಲೆಯ ಆವರಣದಲ್ಲಿರುವ ಸಿಸಿಟಿವಿ ದೃಶ್ಯಗಳನ್ನು ಪರಿಶೀಲಿಸಲಾಗುತ್ತಿದೆ ಎಂದು ಹೇಳಿದ್ದಾರೆ.

    ವಿಧಿ ವಿಜ್ಞಾನ ತಜ್ಞರ ತಂಡವು ಶಾಲೆಗೆ ಭೇಟಿ ನೀಡಿದ್ದು, ಮಾದರಿಗಳನ್ನು ಸಂಗ್ರಹಿಸಿದೆ. ಬ್ಲೇಡ್, ಪ್ಲಾಸ್ಟಿಕ್ ಕಂಟೇನರ್ ನಲ್ಲಿ ಪತ್ತೆಯಾಗಿದ್ದು, ಅದರಲ್ಲಿ ಒಂದು ಹೊರಗಡೆ ಬಿದ್ದಿತ್ತು. ಮರಣೋತ್ತರ ಪರೀಕ್ಷೆಯ ನಂತರ ವಿದ್ಯಾರ್ಥಿ ಸಾವಿನ ಪ್ರಕರಣದ ಸತ್ಯಾಸತ್ಯತೆ ತಿಳಿಯಲಿದೆ. ಅದಕ್ಕಾಗಿ ಕಾಯುತ್ತಿದ್ದೇವೆ ಎಂದು ವಿಧಿ ವಿಜ್ಞಾನ ತಜ್ಞದ ಸದಸ್ಯ ಎ.ರೇಝಾ ಮಾಹಿತಿ ನೀಡಿದ್ದಾರೆ.

    ವಿದ್ಯಾರ್ಥಿನಿಯು ಸೌಮ್ಯ ಸ್ವಭಾವದವಳಾಗಿದ್ದು, ಇಂಡಿಯನ್ ಸ್ಟಾಟಿಸ್ಟಿಕಲ್ ಇನ್‍ಸ್ಟಿಟ್ಯೂಟ್ ಪ್ರವೇಶ ಪರೀಕ್ಷೆಗೆ ತಯಾರಿ ನಡೆಸುತ್ತಿದ್ದಳು ಎಂದು ಪ್ರಾಥಮಿಕ ವಿಚಾರಣೆ ವೇಳೆ ತಿಳಿದು ಬಂದಿದೆ.

    ಪ್ರಕರಣದ ಕುರಿತು ಆಳವಾದ ತನಿಖೆ ನಡೆಯಬೇಕು. ಶಾಲೆಯ ಭಾಗದಲ್ಲಿ ಹೆಚ್ಚು ಭದ್ರತೆ ಇದ್ದರೂ ಈ ಘಟನೆ ಹೇಗೆ ನಡೆಯಿತು? ವಿದ್ಯಾರ್ಥಿನಿ ಕಾಣೆಯಾಗಿ ಒಂದು ಗಂಟೆ ಕಳೆದರೂ ಶಾಲೆಯ ಆಡಳಿತ ಮಂಡಳಿ ಏಕೆ ಗಮನಿಸಲಿಲ್ಲ? ಭದ್ರತೆ ಎಲ್ಲಿದೆ ಎಂದು ಪೋಷಕರ ವೇದಿಕೆಯ ವಕ್ತಾರ ತನ್ಮಯ್ ಘೋಷ್ ಪ್ರಶ್ನಿಸಿದ್ದಾರೆ.

    ವಿದ್ಯಾರ್ಥಿನಿಯು ಅವಳ ತಾಯಿಯೊಂದಿಗೆ ವಾಸಿಸುತ್ತಿದ್ದಳು. ಆಕೆಯ ತಂದೆ ಸಾಫ್ಟ್‍ವೇರ್ ಎಂಜಿನಿಯರ್ ಆಗಿದ್ದು, ಹೈದರಾಬಾದ್‍ನಲ್ಲಿ ಕೆಲಸ ಮಾಡುತ್ತಿದ್ದಾರೆ. ಪುತ್ರಿಯ ಸಾವಿನ ಸುದ್ದಿ ತಿಳಿದು ಶುಕ್ರವಾರ ರಾತ್ರಿ ಕೋಲ್ಕತ್ತಾಗೆ ಆಗಮಿಸಿದ್ದಾರೆ.

    ಜಿಡಿ ಬಿರ್ಲಾ ಶಾಲೆಯು 2017ರಿಂದಲೂ ಸುದ್ದಿಯಲ್ಲಿದ್ದು, ವಿದ್ಯಾರ್ಥಿನಿಗೆ ಕಿರುಕುಳ ನೀಡಲಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಪೋಷಕರು ಬೃಹತ್ ಪ್ರತಿಭಟನೆ ನಡೆಸಿದ್ದರು. ಆಗಿನಿಂದಲೂ ಈ ಶಾಲೆ ಸದಾ ಸುದ್ದಿಯಲ್ಲಿದೆ. ಪೋಷಕರ ಪ್ರತಿಭಟನೆ ನಂತರ ಪೋಸ್ಕೊ ಕಾಯ್ದೆಯಡಿ ಇಬ್ಬರು ಶಿಕ್ಷಕರನ್ನು ಬಂಧಿಸಲಾಗಿತ್ತು.

    [wonderplugin_video iframe=”https://www.youtube.com/watch?v=7Z2BzrhFEKQ” lightbox=0 lightboxsize=1 lightboxwidth=960 lightboxheight=540 autoopen=0 autoopendelay=0 autoclose=0 lightboxtitle=”” lightboxgroup=”” lightboxshownavigation=0 showimage=”” lightboxoptions=”” videowidth=600 videoheight=400 keepaspectratio=1 autoplay=1 loop=1 videocss=”position:relative;display:block;background-color:#000;overflow:hidden;max-width:100%;margin:0 auto;” playbutton=”https://publictv.in/wp-content/plugins/wonderplugin-video-embed/engine/playvideo-64-64-0.png”]

  • ಸ್ಕೂಲ್ ಅಡ್ಮಿಶನ್ ಮಾಡಿಲ್ಲವೆಂದು ಮಹಿಳೆಯಿಂದ ಟಿಕ್‍ಟಾಕ್ ವಿಡಿಯೋ

    ಸ್ಕೂಲ್ ಅಡ್ಮಿಶನ್ ಮಾಡಿಲ್ಲವೆಂದು ಮಹಿಳೆಯಿಂದ ಟಿಕ್‍ಟಾಕ್ ವಿಡಿಯೋ

    – ಕ್ಷಮೆ ಕೇಳಿದ ಪ್ರಿನ್ಸಿಪಾಲ್

    ಮುಂಬೈ: ಶಾಲೆಯಲ್ಲಿ ಮಗನಿಗೆ ಅಡ್ಮಿಶನ್ ಕೊಡಿಸಿಲ್ಲ ಎಂದು ತಾಯಿಯೊಬ್ಬರು ಟಿಕ್‍ಟಾಕ್‍ನಲ್ಲಿ ವಿಡಿಯೋ ಮಾಡಿದ್ದು, ಈ ವಿಡಿಯೋ ವೈರಲ್ ಆಗುತ್ತಿದ್ದಂತೆ ಪ್ರಾಂಶುಪಾಲರು ಕ್ಷಮೆ ಕೇಳಿದ್ದಾರೆ.

    ಸುಜಾತ ಎಂಬವರು ತಮ್ಮ 7 ವರ್ಷದ ಮಗನಿಗೆ ಶಾಲೆಯಲ್ಲಿ ಅಡ್ಮಿಶನ್ ಮಾಡಿಸಲು ಕರೆದುಕೊಂಡು ಹೋಗಿದ್ದರು. ಸುಜಾತ ಸಿಂಗಲ್ ಪೆರೆಂಟ್ ಆಗಿದ್ದು, ಇದನ್ನು ತಿಳಿದ ಶಾಲೆಯ ಮುಖ್ಯಶಿಕ್ಷಕರು ಬಾಲಕನಿಗೆ ಅಡ್ಮಿಶನ್ ಕೊಡಲು ನಿರಾಕರಿಸಿದ್ದರು. ಹಾಗಾಗಿ ಸುಜಾತ ಈ ಘಟನೆ ಬಗ್ಗೆ ಟಿಕ್‍ಟಾಕ್‍ನಲ್ಲಿ ವಿಡಿಯೋ ಮಾಡಿದ್ದಾರೆ.

    ಸುಜಾತ ಮಾಡಿದ ಈ ವಿಡಿಯೋ ಜೂನ್ 13ರಿಂದ ವೈರಲ್ ಆಗಲು ಶುರುವಾಯಿತು. ಇದಾದ ಬಳಿಕ ಕೆಲವು ಮಂದಿ ಈ ವಿಡಿಯೋವನ್ನು ಪ್ರಧಾನಿ ನರೇಂದ್ರ ಮೋದಿ, ಸ್ಮೃತಿ ಇರಾನಿ, ಡೇವಿಡ್ ಫರ್ನಾಂಡಿಸ್ ಸೇರಿದಂತೆ ಹಲವರಿಗೆ ಟ್ಯಾಗ್ ಮಾಡಿ ಟ್ವೀಟ್ ಮಾಡಿದ್ದಾರೆ.

    https://twitter.com/KUNALPA25129276/status/1139239103667437568?ref_src=twsrc%5Etfw%7Ctwcamp%5Etweetembed%7Ctwterm%5E1139239103667437568&ref_url=https%3A%2F%2Fwww.amarujala.com%2Fphoto-gallery%2Feducation%2Fschool-denied-admission-of-child-for-having-single-parent-mother-viral-tiktok-video-helped

    ಈ ವಿಡಿಯೋ ವೈರಲ್ ಆಗುತ್ತಿದ್ದಂತೆ ವಿಚಾರ ಶಿಕ್ಷಣ ಇಲಾಖೆವರೆಗೂ ತಲುಪಿತು. ಬಳಿಕ ಮುಂಬೈ ಶಿಕ್ಷಣ ಇಲಾಖೆ ಶಾಲೆಗೆ ನೋಟಿಸ್ ನೀಡಿ ಉತ್ತರ ಕೇಳಿತ್ತು. ನೋಟಿಸ್ ಬಂದ ನಂತರ ಪ್ರಾಂಶುಪಾಲರು ಕ್ಷಮೆ ಕೇಳಿ ಪತ್ರ ಬರೆದಿದ್ದಾರೆ. ಅಲ್ಲದೆ ಬಾಲಕನಿಗೆ ಅಡ್ಮಿಶನ್ ನೀಡಲು ಒಪ್ಪಿಕೊಂಡಿದ್ದಾರೆ.

    ಪ್ರಿನ್ಸಿಪಾಲ್ ಮೊದಲು ಅಡ್ಮಿಶನ್ ಮಾಡಿಸಲು ಒಪ್ಪಿಕೊಂಡಿದ್ದರು. ಬಳಿಕ ನಾನು ಸಿಂಗಲ್ ಪೆರೆಂಟ್ ಎಂಬ ವಿಷಯ ಅವರಿಗೆ ತಿಳಿಯಿತು. ಆಗ ಅವರು ಅಡ್ಮಿಶನ್ ನೀಡಲು ನಿರಾಕರಿಸಿದ್ದರು. ಅಲ್ಲದೆ ಸಿಂಗಲ್ ಪೆರೆಂಟ್ ಮಕ್ಕಳನ್ನು ನೋಡಿಕೊಳ್ಳುವುದಕ್ಕೆ ಆಗುವುದಿಲ್ಲ ಎಂದರು ಎಂದು ಸುಜಾತ ದೂರಿದ್ದಾರೆ.

    [wonderplugin_video iframe=”https://www.youtube.com/watch?v=7Z2BzrhFEKQ” lightbox=0 lightboxsize=1 lightboxwidth=960 lightboxheight=540 autoopen=0 autoopendelay=0 autoclose=0 lightboxtitle=”” lightboxgroup=”” lightboxshownavigation=0 showimage=”” lightboxoptions=”” videowidth=600 videoheight=400 keepaspectratio=1 autoplay=1 loop=1 videocss=”position:relative;display:block;background-color:#000;overflow:hidden;max-width:100%;margin:0 auto;” playbutton=”https://publictv.in/wp-content/plugins/wonderplugin-video-embed/engine/playvideo-64-64-0.png”]

  • ಗ್ರಾಮ ವಾಸ್ತವ್ಯಕ್ಕಾಗಿ ಸಿಎಂ ರೈಲು, ಕೆಎಸ್‌ಆರ್‌ಟಿಸಿ ಯಾನ – ಸಿಎಂ ಸ್ವಾಗತಕ್ಕೆ ಸಜ್ಜಾಗಿದೆ ಚಂಡರಕಿ ಗ್ರಾಮ

    ಗ್ರಾಮ ವಾಸ್ತವ್ಯಕ್ಕಾಗಿ ಸಿಎಂ ರೈಲು, ಕೆಎಸ್‌ಆರ್‌ಟಿಸಿ ಯಾನ – ಸಿಎಂ ಸ್ವಾಗತಕ್ಕೆ ಸಜ್ಜಾಗಿದೆ ಚಂಡರಕಿ ಗ್ರಾಮ

    ಬೆಂಗಳೂರು: ಲೋಕಸಭೆ ಚುನಾವಣಾ ಪ್ರಚಾರ, ಆಪರೇಷನ್ ಕಮಲ ರಗಳೆ ಹಾಗೂ ಮೈತ್ರಿ ಪಕ್ಷದ ಜೊತೆಗಿನ ರಾಜಕೀಯದಿಂದ ಹೊರ ಬಂದಂತೆ ಇರುವ ಮುಖ್ಯಮಂತ್ರಿಗಳು ಗ್ರಾಮ ವಾಸ್ತವ್ಯಕ್ಕೆ ಮುಂದಾಗಿದ್ದಾರೆ. ಈ ಹಿನ್ನೆಲೆಯಲ್ಲಿ ಬೆಂಗಳೂರಿನಿಂದ ಯಾದಗಿರಿಗೆ ರೈಲು ಹತ್ತಿ ಪ್ರಯಾಣ ಆರಂಭಿಸಿದ್ದಾರೆ.

    ಕಳೆದ ಗ್ರಾಮ ವಾಸ್ತವ್ಯಕ್ಕಿಂತಲೂ ಭಿನ್ನವಾಗಿ ಈ ಬಾರಿಯ ಕಾರ್ಯಕ್ರಮ ಇರುತ್ತೆ ಎಂದಿರುವ ಮುಖ್ಯಮಂತ್ರಿಗಳು, ಸಮಸ್ಯೆಗೆ ಕಿವಿಗೊಟ್ಟು, ಸಾಧ್ಯವಾದಲ್ಲಿ ಸ್ಥಳದಲ್ಲೇ ಪರಿಹಾರ ನೀಡುವ ಯತ್ನಕ್ಕೆ ಮುಂದಾಗಿದ್ದಾರೆ.

    ಪಬ್ಲಿಕ್ ಟಿವಿವೊಂದಿಗೆ ತಮ್ಮ ಗ್ರಾಮ ವಾಸ್ತವ್ಯದ ಕುರಿತು ಪ್ರತಿಕ್ರಿಯೆ ನೀಡಿರುವ ಸಿಎಂ ಅವರು, ಕಳೆದ ಬಾರಿಗಿಂತ ಈ ಬಾರಿಯ ಗ್ರಾಮ ವಾಸ್ತವ್ಯ ಭಿನ್ನವಾಗಿರುತ್ತದೆ. ಏಕೆಂದರೆ ಕಳೆದ ಬಾರಿ ಮುಖ್ಯಮಂತ್ರಿಯಾಗಿದ್ದ ವೇಳೆ ನನಗೆ ಹೆಚ್ಚಿನ ಸಮಯ ಲಭಿಸಲಿಲ್ಲ. ಅಲ್ಲದೇ ಈ ಬಾರಿ ನನಗೆ ಸುಮಾರು ವರ್ಷದ ಅನುಭವವಿದ್ದು, ಯಶಸ್ವಿಯಾಗಿ ಈ ಬಾರಿ ಕಾರ್ಯಕ್ರಮ ನಡೆಯಲಿದೆ ಎಂದರು.

    ಇದೇ ವೇಳೆ ಪಬ್ಲಿಕ್ ಟಿವಿ ಗ್ರಾಮವಾಸ್ತವ್ಯದ ಬಗ್ಗೆ ಮಾಡಿರುವ ಸರಣಿ ವರದಿಗಳ ಬಗ್ಗೆ ಪ್ರತಿಕ್ರಿಯೆ ನೀಡಿ, ಗ್ರಾಮ ವಾಸ್ತವ್ಯದ ಬಗ್ಗೆ ನಿಮ್ಮ  ವರದಿಗಳ ಅಂಶಗಳನ್ನು ನಾನು ಪರಿಗಣಿಸಿದ್ದೇನೆ. ಆ ಮೂಲಕ ಮುಂದಿನ ಯೋಜನೆಯಲ್ಲಿ ಅವುಗಳನ್ನು ಅಳವಡಿಕೊಂಡಿದ್ದೇನೆ ಎಂದರು.

    ತಡವಾಗಿ ಕಾರ್ಯಕ್ರಮ ಆರಂಭವಾದ ಬಗ್ಗೆ ಪ್ರತಿಕ್ರಿಯೆ ನೀಡಿದ ಅವರು, ನನಗೆ 2ನೇ ಬಾರಿಗೆ ಶಸ್ತ್ರ ಚಿಕಿತ್ಸೆ ನಡೆದ ಬಳಿಕ ವಿಶ್ರಾಂತಿ ಪಡೆಯುವ ಅವಕಾಶ ಲಭಿಸಲಿಲ್ಲ. ಚುನಾವಣೆ, ಮೈತ್ರಿ ಸರ್ಕಾರ ಕಾರ್ಯಕ್ರಮದಲ್ಲಿ ವಿಶ್ರಾಂತಿ ಪಡೆಯುವ ಸಮಯ ಸಿಗಲಿಲ್ಲ. ಆದ್ದರಿಂದ ತಜ್ಞ ವೈದ್ಯರು ನನಗೆ ವಿಶ್ರಾಂತಿ ಪಡೆಯಲು ಸೂಚಿಸಿದ್ದರು. ಈಗ ಈ ಯೋಜನೆಗೆ ಜಾರಿಯಾಗಿದೆ ಮುಂದಿನ 4 ವರ್ಷಗಳ ಕಾಲ ಮುಂದುವರಿಯಲಿದೆ ಎಂದರು.

    ಮುಂದಿನ ದಿನಗಳಲ್ಲಿ ತಿಂಗಳಿಗೆ 4 ದಿನಗಳ ಕಾಲ ಅಂದರೆ ವಾರಕ್ಕೆ 1 ದಿನ ಗ್ರಾಮ ವಾಸ್ತವ್ಯ ನಡೆಸುವ ಉದ್ದೇಶವಿದೆ. ಈ ಬಗ್ಗೆ ನನ್ನ ಹಿರಿಯ ಅಧಿಕಾರಿಗಳು ತೀರ್ಮಾನ ಕೈಗೊಳ್ಳುತ್ತಾರೆ. ವಾರದಲ್ಲಿ 1 ದಿನ ಮಾತ್ರ ವಿಶ್ರಾಂತಿ ಪಡೆದು, ಉಳಿದ ದಿನಗಳಲ್ಲಿ ಕಾರ್ಯ ನಿರ್ವಹಿಸುವ ಉದ್ದೇಶವಿದೆ ಎಂದರು. ಅಲ್ಲದೇ ನನಗೆ ಈ ಕಾರ್ಯಕ್ರಮ ಜನ ಸಾಮಾನ್ಯರ ಜೀವನ ತಿಳಿಯಲು ಸಹಕಾರಿ ಆಗಿತ್ತು. ಕಳೆದ ಗ್ರಾಮ ವಾಸ್ತವ್ಯದಲ್ಲೂ ನಾನು ಗ್ರಾಮಸ್ಥರ ನಿರೀಕ್ಷೆಯನ್ನು ಈಡೇಸಿದ್ದು, 20 ತಿಂಗಳು ಮಾತ್ರ ಅಧಿಕಾರದಲ್ಲಿ ಇದ್ದ ಕಾರಣ ಕೆಲ ಯೋಜನೆಗಳನ್ನು ಅನುಷ್ಟಾನ ತರಲು ಸಾಧ್ಯವಾಗಿಲ್ಲ. ಈ ಬಾರಿ ನನಗೆ ಆಡಳಿತ ಅನುಭವ ಜೊತೆಯಾಗಿದ್ದು, ಜನರ ನಿರೀಕ್ಷೆಗಳನ್ನು ಈಡೇರಿಸುವ ಕಾರ್ಯ ನಡೆಯಲಿದೆ ಎಂದರು.

    ಇತ್ತ ಬೆಂಗಳೂರು ರೈಲು ನಿಲ್ದಾಣದಿಂದ ಕರ್ನಾಟಕ ಎಕ್ಸ್ ಪ್ರೆಸ್‍ನಲ್ಲಿ ಯಾದಗಿರಿಗೆ ಪಯಣಿಸಿರುವ ಸಿಎಂ ಅವರು, ಶುಕ್ರವಾರ ನಸುಕಿನ ಜಾವ 4 ಗಂಟೆಗೆ ತಲುಪಲಿದ್ದಾರೆ. ಮೆಜೆಸ್ಟಿಕ್ ರೈಲ್ವೇ ನಿಲ್ದಾಣದಿಂದ ಹೊರಟ ರೈಲು ಹಿಂದೂಪುರ, ಪೆನಕೊಂಡ ಜಂಕ್ಷನ್, ಪುಟ್ಟಪರ್ತಿ, ಅನಂತಪುರ, ಗುಂತ್ಕಲ್ ಜಂಕ್ಷನ್, ಮಂತ್ರಾಲಯ. ರಾಯಚೂರು ಜಂಕ್ಷನ್ ಮಾರ್ಗವಾಗಿ ಯಾದಗಿರಿ ತಲುಪಲಿದೆ. ಯಾದಗಿರಿಯಿಂದ ಸಿಎಂ ಅವರು ಕೆಎಸ್‍ಆರ್ ಟಿಸಿ ಬಸ್‍ನಲ್ಲಿ ಅಲ್ಲಿಂದ ಗುರುಮಿಠಕಲ್‍ನ ಚಂಡರಕಿ ಗ್ರಾಮಕ್ಕೆ ಮುಖ್ಯಮಂತ್ರಿಗಳು ತೆರಳಲಿದ್ದಾರೆ.

    ಚಂಡರಕಿ ಮಾದರಿ ಸರ್ಕಾರಿ ಪ್ರಾಥಮಿಕ ಶಾಲೆ ಮೈದಾನದಲ್ಲಿ ಬೆಳಗ್ಗೆ 10 ಗಂಟೆಯಿಂದ ಸಂಜೆ 5 ಗಂಟೆವರೆಗೆ ಜನತಾದರ್ಶನ ಮಾಡಲಿದ್ದಾರೆ. ಕಾರ್ಯಕ್ರಮಕ್ಕೆ ಬೇಕಾದ ಸಿದ್ಧತೆಗಳನ್ನು ಜಿಲ್ಲಾಡಳಿತ ಸಿದ್ಧತೆ ನಡೆಸಿದೆ. ಜನತಾದರ್ಶನ ಮುಗಿದ ಬಳಿಕ ಸಂಜೆಯೇ ಶಾಲಾ ಮಕ್ಕಳಿಂದ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿದ್ದು, ಶಾಲಾ ಶಿಕ್ಷಕರು, ಮಕ್ಕಳ ಜೊತೆ ಊಟ ಮಾಡಿ, ಶಾಲೆಯ ಕಾರ್ಯಾಲಯ ಕೊಠಡಿಯಲ್ಲಿ ವಿಶ್ರಾಂತಿ ಪಡೆಯಲಿದ್ದಾರೆ.

    [wonderplugin_video iframe=”https://www.youtube.com/watch?v=7Z2BzrhFEKQ” lightbox=0 lightboxsize=1 lightboxwidth=960 lightboxheight=540 autoopen=0 autoopendelay=0 autoclose=0 lightboxtitle=”” lightboxgroup=”” lightboxshownavigation=0 showimage=”” lightboxoptions=”” videowidth=600 videoheight=400 keepaspectratio=1 autoplay=1 loop=1 videocss=”position:relative;display:block;background-color:#000;overflow:hidden;max-width:100%;margin:0 auto;” playbutton=”https://publictv.in/wp-content/plugins/wonderplugin-video-embed/engine/playvideo-64-64-0.png”]

  • ಮದ್ವೆಯಾದ 4 ತಿಂಗಳಿಗೆ ಮಗುವಿಗೆ ಜನ್ಮ ನೀಡಿದ ಶಿಕ್ಷಕಿ

    ಮದ್ವೆಯಾದ 4 ತಿಂಗಳಿಗೆ ಮಗುವಿಗೆ ಜನ್ಮ ನೀಡಿದ ಶಿಕ್ಷಕಿ

    – ಮತ್ತೆ ಕೆಲಸಕ್ಕೆ ಹಾಜರಾಗದಂತೆ ಶಾಲಾ ಮಂಡಳಿ ಸೂಚನೆ

    ತಿರುವನಂತಪುರಂ: ಪ್ರಾಥಮಿಕ ಪಾಠ ಶಾಲೆಯ ಶಿಕ್ಷಕಿ ಮದುವೆಯಾದ 4 ತಿಂಗಳಿಗೆ ಮಗುವಿಗೆ ಜನ್ಮ ನೀಡಿದ್ದು, ಈ ಕಾರಣವನ್ನೇ ನೀಡಿ ಶಾಲಾ ಮಂಡಳಿ ಶಿಕ್ಷಕಿಯನ್ನ ಕೆಲಸಕ್ಕೆ ಹಾಜರಾಗದಂತೆ ತಿಳಿಸಿದೆ.

    ಮದುವೆಯಾದ 4 ತಿಂಗಳಿಗೆ ಹೆರಿಗೆ ರಜೆಯನ್ನು ಹೇಗೆ ನೀಡಲಾಗುತ್ತದೆ ಎಂದು ಶಾಲೆಯಿಂದ ಶಿಕ್ಷಕಿಯನ್ನು ಅಮಾನತು ಮಾಡಲಾಗಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹಿಳೆ ಸದ್ಯ ಪೊಲೀಸ್ ಠಾಣೆ ಮೆಟ್ಟಿಲೇರಿದ್ದಾರೆ.

    ಏನಿದು ಪ್ರಕರಣ:
    ಶಾಲಾ ಶಿಕ್ಷಕಿಗೆ ಈಗಾಗಲೇ ಮದುವೆಯಾಗಿದ್ದು, ಪತಿಯೊಂದಿಗೆ ವೈಮನಸ್ಸು ಉಂಟಾದ ಹಿನ್ನೆಲೆಯಲ್ಲಿ ವಿಚ್ಛೇದನ ಕೋರಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದರು. ಆದರೆ ಈ ಪ್ರಕ್ರಿಯೆ ತಡವಾಗಿ ನಡೆಯುತ್ತಿದ್ದ ಕಾರಣ ಶಿಕ್ಷಕಿ ಮತ್ತೊಬ್ಬ ಪುರುಷನೊಂದಿಗೆ ಲೀವಿಂಗ್ ಟುಗೇದರ್ ನಲ್ಲಿ ಇದ್ದರು. ಆ ಬಳಿಕ ಮೊದಲ ಪತಿಯಿಂದ ವಿಚ್ಛೇದನ ಪಡೆದ ಶಿಕ್ಷಕಿ ತಾನು ಲೀವಿಂಗ್ ಟುಗೇದರ್ ಸಂಬಂಧದಲ್ಲಿದ್ದ ಪುರುಷನನ್ನು ಮದುವೆಯಾಗಿದ್ದು, ಮದುವೆಯಾದ ನಾಲ್ಕು ತಿಂಗಳ ಬಳಿಕ ಮಗುವಿಗೆ ಜನ್ಮ ನೀಡಿದ್ದಾರೆ.

    ಸದ್ಯ ಪೊಲೀಸರಿಗೆ ದೂರು ನೀಡಿರುವ ಶಿಕ್ಷಕಿ, ತನ್ನ ವೈಯಕ್ತಿಕ ಜೀವನದ ಬಗ್ಗೆ ಪ್ರಶ್ನೆ ಮಾಡಲು ಶಾಲಾ ಆಡಳಿತ ಮಂಡಳಿ ಹಾಗೂ ಪೋಷಕರಿಗೆ ಯಾವುದೇ ಹಕ್ಕಿಲ್ಲ. ಆದ್ದರಿಂದ ತಮಗೇ ಪುನಃ ಶಾಲೆಯಲ್ಲಿ ಕೆಲಸಕ್ಕೆ ಹಾಜರಾಲು ಅವಕಾಶ ನೀಡಬೇಕೆಂದು ಕೋರಿದ್ದಾರೆ. ಶಿಕ್ಷಕಿಯ ದೂರು ಪಡೆದಿರುವ ಪೊಲೀಸರು ಸದ್ಯ ಪ್ರಕರಣದ ಬಗ್ಗೆ ವಿಚಾರಣೆ ನಡೆಸುತ್ತಿದ್ದಾರೆ.

    [wonderplugin_video iframe=”https://www.youtube.com/watch?v=7Z2BzrhFEKQ” lightbox=0 lightboxsize=1 lightboxwidth=960 lightboxheight=540 autoopen=0 autoopendelay=0 autoclose=0 lightboxtitle=”” lightboxgroup=”” lightboxshownavigation=0 showimage=”” lightboxoptions=”” videowidth=600 videoheight=400 keepaspectratio=1 autoplay=1 loop=1 videocss=”position:relative;display:block;background-color:#000;overflow:hidden;max-width:100%;margin:0 auto;” playbutton=”https://publictv.in/wp-content/plugins/wonderplugin-video-embed/engine/playvideo-64-64-0.png”]