Tag: school

  • ಮಳೆಯಿಂದಾಗಿ ಮಡಿಕೇರಿ ಶಾಲಾ ಕಾಲೇಜುಗಳಿಗೆ ರಜೆ – ಮುನ್ನೆಚ್ಚರಿಕೆಯಾಗಿ ತಲಕಾವೇರಿಗೆ ನಿರ್ಬಂಧ

    ಮಳೆಯಿಂದಾಗಿ ಮಡಿಕೇರಿ ಶಾಲಾ ಕಾಲೇಜುಗಳಿಗೆ ರಜೆ – ಮುನ್ನೆಚ್ಚರಿಕೆಯಾಗಿ ತಲಕಾವೇರಿಗೆ ನಿರ್ಬಂಧ

    ಮಡಿಕೇರಿ: ಕೊಡಗಿನಲ್ಲಿ ಕಳೆದ 4 ದಿನಗಳಿಂದ ಮುಂಗಾರು ಮಳೆಯ ತೀವ್ರತೆ ಹೆಚ್ಚಾಗಿದ್ದು, ಇಂದು ಎಲ್ಲಾ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.

    ಜೀವನದಿ ಕಾವೇರಿ, ಲಕ್ಷ್ಮಣತೀರ್ಥ ನದಿಗಳಲ್ಲಿ ನೀರಿನ ಮಟ್ಟ ಹೆಚ್ಚಳವಾಗಿದೆ. ಮಳೆಯ ಪ್ರಮಾಣ ಇದೇ ರೀತಿ ಮುಂದುವರಿದರೆ ಪ್ರವಾಹ ಏರ್ಪಡುವ ಸಾಧ್ಯತೆಗಳಿದೆ. ಇನ್ನು ಭಾಗಮಂಡಲದಲ್ಲಿ ಹೆಚ್ಚು ಮಳೆಯಾಗುತ್ತಿರುವುದರಿಂದ `ತ್ರಿವೇಣಿ ಸಂಗಮ’ ದಲ್ಲಿ ನೀರಿನ ಮಟ್ಟ ಹೆಚ್ಚುತ್ತಿದೆ. ಕಾವೇರಿಯ ನೀರು ಸ್ನಾನ ಘಟ್ಟದ ಮೆಟ್ಟಿಲುಗಳನ್ನು ಮೀರಿದೆ. ಹಾಗಾಗಿ ಯಾತ್ರಾತ್ರಿಗಳಿಗೆ ತಲಕಾವೇರಿ ತೆರಳಲು ಅವಕಾಶ ನಿರಾಕರಿಸಲಾಗಿದೆ.

    ಬೆಳಗಾವಿಯಲ್ಲಿ ಮಳೆ ಅಬ್ಬರ ಮುಂದುವರೆದಿದ್ದು, ನಗರದ ಟಿಳಕವಾಡಿಯ ಹಲವು ಮನೆಗಳಿಗೆ ನೀರು ನುಗ್ಗಿ ಅವಾಂತರ ಸೃಷ್ಟಿಯಾಗಿತ್ತು. ಮಳೆಯಿಂದ ಮನೆಯಲ್ಲಿನ ಸಾಮಾಗ್ರಿಗಳು ನೀರುಪಾಲಾಗಿದ್ದು, ನೀರು ಹೊರ ಹಾಕಲು ಜನರು ಪರದಾಟ ನಡೆಸಿದ್ದರು. ಇನ್ನು ಸವದತ್ತಿ ತಾಲೂಕಿನ ಯಲ್ಲಮ್ಮನ ಗುಡ್ಡದಲ್ಲಿ ನೀರಿನ ಹರಿವು ಹೆಚ್ಚಾಗಿದ್ದರಿಂದ ದಬದಬೆ ಜಲಪಾತ ತುಂಬಿಹರಿಯುತ್ತಿದೆ. ಈ ಜಲಪಾತದಲ್ಲಿ ನೀರು ಹೆಚ್ಚಾಗಿದ್ದರಿಂದ ಅಶೋಕನಗರದಲ್ಲಿ ಇಪ್ಪತ್ತಕ್ಕೂ ಅಧಿಕ ಮನೆಗಳಿಗೆ ನೀರು ನುಗ್ಗಿತ್ತು.

    ಬೀದರ್ ಜಿಲ್ಲೆಯಾದ್ಯಂತ ವರುಣ ಅಬ್ಬರಿಸಿದ್ದಾನೆ. ಭಾರೀ ಮಳೆಯಿಂದಾಗಿ ಜನ ಜೀವನ ಅಸ್ತವ್ಯಸ್ತವಾಗಿದೆ. ಇನ್ನು ಈ ಮಧ್ಯೆ ನೀರಿನ ಸಮಸ್ಯೆಯಿಂದ ಕಂಗೆಟ್ಟಿದ್ದ ರೈತರಿಗೆ, ವರುಣನ ಆಗಮನ ಅವರ ಮೊಗದಲ್ಲಿ ಮಂದಹಾಸ ಮೂಡಿಸಿದೆ. ಇನ್ನು ಕೋಲಾರದಲ್ಲಿ ಭಾರೀ ಗಾಳಿ ಮಳೆಯಿಂದಾಗಿ ಸಿಡಿಲು ಬಡಿದು ಕರು ಸಾವನ್ನಪ್ಪಿದ್ದು, ಗೋಶಾಲೆಯ ಛಾವಣಿ ಕುಸಿದಿದೆ.

    ಶಿವಮೊಗ್ಗದ ತುಂಗಾ ಜಲಾನಯನ ಪ್ರದೇಶದಲ್ಲಿ ನಿರಂತರ ಮಳೆಯಿಂದಾಗಿ ಗಾಜನೂರು ಅಣೆಕಟ್ಟೆ ಭರ್ತಿಯಾಗಿದೆ. ಒಳಹರಿವು ಹೆಚ್ಚಾದ ಹಿನ್ನೆಲೆಯಲ್ಲಿ ಡ್ಯಾಂನ 12 ಗೇಟುಗಳನ್ನು ತೆರೆದು ನೀರು ಹೊರ ಬಿಡಲಾಗುತ್ತಿದೆ. ಇದು ಕೇವಲ 3.2 ಟಿಎಂಸಿ ಸಾಮಥ್ರ್ಯದ್ದಾಗಿದ್ದು, ರಾಜ್ಯದಲ್ಲಿಯೇ ತುಂಬಾ ಬೇಗ ನೀರು ತುಂಬುವ ಅಣೆಕಟ್ಟು ಇದಾಗಿದೆ. ಜಲಾನಯನ ಪ್ರದೇಶದಲ್ಲಿ ಅಧಿಕ ಮಳೆಯಾದ ಪರಿಣಾಮ ಅಣೆಕಟ್ಟಿನಲ್ಲಿ 9000 ಕ್ಯೂಸೆಕ್ ಒಳಹರಿವಿದ್ದು, ಅಷ್ಟೇ ಪ್ರಮಾಣದ ಹೊರ ಹರಿವನ್ನೂ ಬಿಡಲಾಗುತ್ತಿದೆ.

  • ದೃಷ್ಟಿ ಕಳೆದುಕೊಂಡ ಬಾಲಕ ಪ್ರಕರಣ- ಸ್ಕೇಲ್ ನಿಂದ ಹೊಡೆದ ಮುಖ್ಯ ಶಿಕ್ಷಕ ಅಮಾನತು

    ದೃಷ್ಟಿ ಕಳೆದುಕೊಂಡ ಬಾಲಕ ಪ್ರಕರಣ- ಸ್ಕೇಲ್ ನಿಂದ ಹೊಡೆದ ಮುಖ್ಯ ಶಿಕ್ಷಕ ಅಮಾನತು

    ಚಾಮರಾಜನಗರ: ಮುಖ್ಯ ಶಿಕ್ಷಕ ವಿದ್ಯಾರ್ಥಿಗೆ ಸ್ಕೇಲ್‍ನಿಂದ ಹೊಡೆದ ಪರಿಣಾಮ ವಿದ್ಯಾರ್ಥಿ ಕಣ್ಣಿನ ದೃಷ್ಟಿ ಕಳೆದುಕೊಂಡಿರುವ ಹಿನ್ನೆಲೆಯಲ್ಲಿ ಮುಖ್ಯಶಿಕ್ಷಕನ್ನು ಅಮಾನತು ಮಾಡಿರುವ ಘಟನೆ ಚಾಮರಾಜನಗರದಲ್ಲಿ ಜರುಗಿದೆ.

    ಚಾಮರಾಜನಗರದ ರಾಮಸಮುದ್ರದ ಬಾಲರ ಪಟ್ಟಣ ಶಾಲೆಯ ಮುಖ್ಯ ಶಿಕ್ಷಕ ಯುಸೇಫ್, ಗಿರಿಮಲ್ಲೇಶ್ ಎಂಬ ವಿದ್ಯಾರ್ಥಿಗೆ ಸ್ಕೇಲ್‍ನಿಂದ ಹೊಡೆದಿರುವ ಪ್ರಕರಣ ಮಾಧ್ಯಮದಲ್ಲಿ ಪ್ರಸಾರವಾಗುತ್ತಿದ್ದಂತೆಯೇ ಶಾಲೆಯ ಆಡಳಿತ ಮಂಡಳಿ ಮುಖ್ಯಶಿಕ್ಷಕನನ್ನು ಅಮಾನತು ಮಾಡಿದೆ. ಸ್ಕೇಲ್ ನಿಂದ ಹೊಡೆದ ಪರಿಣಾಮ ವಿದ್ಯಾರ್ಥಿ ಎಡಗಣ್ಣಿನ ದೃಷ್ಟಿ ಕಳೆದುಕೊಂಡಿದ್ದಾನೆ.

    ಏನಿದು ಘಟನೆ?;
    ಜನವರಿಯಲ್ಲಿ ಶಾಲೆಯ ಸಮಯದಲ್ಲಿ ಗಿರಿಮಲ್ಲೇಶ್ ಗಲಾಟೆ ಮಾಡುತ್ತಿದ್ದ ಎಂದು ಶಿಕ್ಷಕ ಸ್ಕೇಲ್ ಮೂಲಕ ಹೊಡೆದಿದ್ದಾನೆ. ಈ ವೇಳೆ ವಿದ್ಯಾರ್ಥಿ ಕಣ್ಣಿಗೆ ಸ್ಕೇಲ್ ಬಿದ್ದ ಕಾರಣ ವಿದ್ಯಾರ್ಥಿಯ ಕಣ್ಣಿಗೆ ಪೆಟ್ಟು ಬಿದ್ದಿದೆ. ಇದಾದ ನಂತರ ವಿದ್ಯಾರ್ಥಿ ತನಗೆ ಯಾವುದೇ ನೋವಾಗಿಲ್ಲ ಎಂದು ತಿಳಿದುಕೊಂಡಿದ್ದಾನೆ. ಇದೀಗ ವಿದ್ಯಾರ್ಥಿಗೆ ಕಣ್ಣಿನ ನೋವು ಕಾಡುತ್ತಿದ್ದ ಕಾರಣ ತಂದೆ ಸೋಮೇಶ್ ಮೈಸೂರಿನ ಆಸ್ಪತ್ರೆಗೆ ಕರೆದೊಯ್ದು ತಪಾಸಣೆ ಮಾಡಿದ್ದಾರೆ. ಈ ವೇಳೆ ಕಣ್ಣಿಗೆ ಬಲವಾದ ಪೆಟ್ಟು ಬಿದ್ದಿದೆ. ಹೀಗಾಗಿ ಈತನ ದೃಷ್ಟಿ ಹೋಗಿದೆ ಎಂದು ವೈದ್ಯರು ತಿಳಿಸಿದ್ದಾರೆ.

    ನಂತರ ಗಿರಿಮಲ್ಲೇಶ್‍ನನ್ನು ಪೋಷಕರು ವಿಚಾರಿಸಿದಾಗ ಐದು ತಿಂಗಳ ಹಿಂದೆ ಶಾಲೆಯಲ್ಲಿ ಹೀಗೆ ಆಗಿದೆ ಎಂದು ಹೇಳಿದ್ದಾನೆ. ಈ ಬಗ್ಗೆ ಗಿರಿಮಲ್ಲೇಶ್ ಪೋಷಕರು ಶಾಲೆಯ ಆಡಳಿತ ಮಂಡಳಿಯನ್ನು ಪ್ರಶ್ನಿಸಿದ್ದಾರೆ. ಇದ್ದನ್ನು ಒಪ್ಪಿಕೊಳ್ಳದ ಶಾಲಾ ಆಡಳಿತ ಮಂಡಳಿ ಮುಖ್ಯ ಶಿಕ್ಷಕ ಯುಸೇಫ್‍ರನ್ನು 10 ದಿನಗಳ ರಜೆ ಮೇಲೆ ಕಳುಹಿಸಿತ್ತು. ಆದರೆ ಇದೀಗ ಪ್ರಕರಣ ವ್ಯಾಪಕ ಚರ್ಚೆ ಆದ ಕಾರಣ ಶಾಲೆಯ ಆಡಳಿತ ಮಂಡಳಿ ಯುಸೇಫ್ ನನ್ನು ಅಮಾನತುಗೊಳಿಸಿದೆ. ಸದ್ಯ ಗಿರಿಮಲ್ಲೇಶ್ ತಮಿಳುನಾಡಿನ ಕೊಯಮತ್ತೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ.

  • ಪುಸ್ತಕಗಳನ್ನು ಹೊರಲು ಮಕ್ಕಳು ವೇಟ್ ಲಿಫ್ಟರ್ ಗಳು, ತುಂಬಿದ ಕಂಟೈನರ್ ಗಳಲ್ಲ: ಹೈಕೋರ್ಟ್

    ಪುಸ್ತಕಗಳನ್ನು ಹೊರಲು ಮಕ್ಕಳು ವೇಟ್ ಲಿಫ್ಟರ್ ಗಳು, ತುಂಬಿದ ಕಂಟೈನರ್ ಗಳಲ್ಲ: ಹೈಕೋರ್ಟ್

    ಚೆನ್ನೈ: ಪಠ್ಯ ಪುಸ್ತಕಗಳನ್ನು ಹೊರಲು ಮಕ್ಕಳು ವೇಟ್ ಲಿಫ್ಟರ್ ಗಳಾಗಲಿ, ತುಂಬಿದ ಕಂಟೈನರ್ ಗಳಾಗಲಿ ಅಲ್ಲ ಎಂದು ಹೇಳುವ ಮೂಲಕ ಮದ್ರಾಸ್ ಹೈ ಕೋರ್ಟ್ ಖಾಸಗಿ ಮತ್ತು ಸರ್ಕಾರಿ ಶಾಲೆಗಳಿಗೆ ಚಾಟಿ ಬೀಸಿದೆ.

    ಮಕ್ಕಳ ಕೈ ಚೀಲದ ಹೊರೆಯನ್ನು ಕಡಿಮೆ ಮಾಡುವಂತೆ ಹಾಗೂ 1 ಮತ್ತು 2 ನೇ ತರಗತಿ ಮಕ್ಕಳಿಗೆ ಹೋಮ್ ವರ್ಕ್ ಕೊಡದಂತೆ ರಾಜ್ಯ ಸರ್ಕಾರಗಳಿಗೆ ಆದೇಶ ನೀಡಿ ಎಂದು ಕೇಂದ್ರ ಸರ್ಕಾರಕ್ಕೆ ತನ್ನ ಮಧ್ಯಂತರ ತೀರ್ಪಿನಲ್ಲಿ ಸೂಚಿಸಿದೆ.

    ತೆಲಂಗಾಣ ಮತ್ತು ಮಹಾರಾಷ್ಟ್ರ ಸರ್ಕಾರಗಳ ಆದೇಶಗಳನ್ನು ಉಲ್ಲೇಖ ಮಾಡುತ್ತಾ ನ್ಯಾಯಮೂರ್ತಿ ಕಿರುಬಾಕರನ್ ಕೈ ಚೀಲದ ತೂಕ ಮಕ್ಕಳ ತೂಕದ 10% ಮೀರಿರಬಾರದು. ಈ ಸಂಬಂಧ “ಮಕ್ಕಳ ಶಾಲಾ ಬ್ಯಾಗ್ ನೀತಿ” ಗೆ ಸಂಬಂಧಿಸಿದಂತೆ ಮಾನದಂಡಗಳನ್ನು ರೂಪಿಸುವಂತೆ ರಾಜ್ಯಗಳಿಗೆ ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ನಿರ್ದೇಶನ ನೀಡುವಂತೆ ಕೇಂದ್ರ ಸರ್ಕಾರಕ್ಕೆ ಸೂಚಿಸಿದ್ದಾರೆ.

    ವಕೀಲ ಎಂ ಪುರುಷೋತ್ತಮನ್ ಅವರು ಎನ್‍ಸಿಇಆರ್ ಟಿ ಸಿದ್ಧಪಡಿಸಿದ ಪಠ್ಯ ಮತ್ತು ಎನ್‍ಸಿಇಆರ್ ಟಿ ಮುದ್ರಿಸಿದ ಪುಸ್ತಕಗಳನ್ನು ಮಾತ್ರ ಖರೀದಿಸುವಂತೆ ಸಿಬಿಎಸ್‍ಇ ಶಾಲೆಗಳಿಗೆ ನಿರ್ದೇಶನ ನೀಡುವಂತೆ ಸಲ್ಲಿಸಿದ್ದ ಅರ್ಜಿ ವಿಚಾರಣೆ ವೇಳೆ ಕೋರ್ಟ್ ಈ ಆದೇಶ ನೀಡಿದೆ.

    ಎನ್‍ಸಿಇಆರ್ ಟಿ ಪಠ್ಯ ಕ್ರಮ ಮತ್ತು ಬುಕ್ ಗಳನ್ನು ಕಡ್ಡಾಯ ಗೊಳಿಸುವಂತೆ ಕೇಂದ್ರಿಯ ಶಿಕ್ಷಣ ಮಂಡಳಿ (ಸಿಬಿಎಸ್‍ಇ) ಹಾಗೂ ಖಾಸಗಿ ಶಾಲೆಗಳ ಒಕ್ಕೂಟಕ್ಕೆ ಕೋರ್ಟ್ ಸೂಚಿಸಿದೆ.

    1 ಮತ್ತು 2 ನೇ ತರಗತಿಗೆ ಭಾಷೆ ಮತ್ತು ಗಣಿತ ವಿಷಯಗಳು ಮಾತ್ರ ಇರಬೇಕು. ತರಗತಿ 3 ರಿಂದ 5 ನೇ ತರಗತಿ ವರೆಗೆ ಪರಿಸರ ಅಧ್ಯಯನ ಮತ್ತು ಗಣಿತ ವಿಷಯಗಳನ್ನು ಎನ್‍ಸಿಇಆರ್ ಟಿ ಪಠ್ಯ ಕ್ರಮದ ಪ್ರಕಾರ ಬೋಧಿಸಬೇಕು. ಎನ್‍ಸಿಇಆರ್ ಟಿ ಪಠ್ಯ ಕ್ರಮದ ಪ್ರಕಾರ 1 ಮತ್ತು 2 ನೇ ತರಗತಿ ಮಕ್ಕಳಿಗೆ ಹೋಮ್ ವರ್ಕ್ ಕೊಡುವ ಹಾಗೆ ಇಲ್ಲ ಎಂದು ನ್ಯಾಯಮೂರ್ತಿಗಳು ಆದೇಶದಲ್ಲಿ ತಿಳಿಸಿದ್ದಾರೆ.

    ವೈದ್ಯರು ಹೇಳುವಂತೆ 5 ರಿಂದ 6 ವರ್ಷದ ಮಕ್ಕಳಿಗೆ ಕನಿಷ್ಠ 11 ಗಂಟೆ ನಿದ್ದೆ ಬೇಕು. ಬೆಳಗ್ಗೆ ಶಾಲೆಗೆ ಮುಂಚೆ ಹೋಗಿದ್ದರೆ ಬೇಗ ಮಲಗಬೇಕು. ಹೋಮ್ ವರ್ಕ್ ಮಕ್ಕಳ ನಿದ್ದೆಯ ಸಮಯವನ್ನು ತೆಗೆದುಕೊಳ್ಳುತ್ತಿದೆ ಎಂದು ತನ್ನ ಆದೇಶದಲ್ಲಿ ವೈದ್ಯಕೀಯ ತಜ್ಞರ ಹೇಳಿಕೆಗಳನ್ನು ಜಡ್ಜ್ ಉಲ್ಲೇಖಿಸಿದರು.

    1 ನೇ ತರಗತಿ ಪಠ್ಯ ಕ್ರಮದಲ್ಲಿ ವ್ಯಾಕರಣ ಮತ್ತು ಕಂಪ್ಯೂಟರ್ ಸೈನ್ಸ್ ವಿಷಯಗಳು ಇರುವುದು ಆಶ್ಚರ್ಯ ಮತ್ತು ಅತಂಕ ತರಿಸುವಂತದ್ದು. 5 ವರ್ಷದ ಮಗು ಹೇಗೆ ಈ ವಿಷಯಗಳನ್ನು ಗ್ರಹಿಸಬಹುದು ಎಂದು ಪ್ರಶ್ನೆ ಮಾಡಿದ್ದಾರೆ. ಸಿಬಿಎಸ್‍ಇ ಶಾಲೆಗಳು ಅಪ್ರಸ್ತುತ ವಿಷಯಗಳನ್ನು ಬೋಧಿಸಿ ಮಕ್ಕಳನ್ನು ಒತ್ತಡದಲ್ಲಿ ಸಿಲುಕಿಸುತ್ತಿದೆ ಎಂದು ಅಭಿಪ್ರಾಯಪಟ್ಟು ಖಾಸಗಿ ಮತ್ತು ಸರ್ಕಾರಿ ಶಾಲೆಗಳಿಗೆ ಚಾಟಿ ಬೀಸಿದರು.

     

  • ಮೆಕುನು ಚಂಡಮಾರುತ- ದಕ್ಷಿಣ ಕನ್ನಡ, ಉಡುಪಿ ಶಾಲಾ ಕಾಲೇಜುಗಳಿಗೆ ಇಂದು, ನಾಳೆ ರಜೆ

    ಮೆಕುನು ಚಂಡಮಾರುತ- ದಕ್ಷಿಣ ಕನ್ನಡ, ಉಡುಪಿ ಶಾಲಾ ಕಾಲೇಜುಗಳಿಗೆ ಇಂದು, ನಾಳೆ ರಜೆ

    ಉಡುಪಿ/ಮಂಗಳೂರು: ಮೆಕುನು ಚಂಡಮಾರುತದ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯ ಶಾಲಾ ಕಾಲೇಜುಗಳಿಗೆ ಎರಡು ದಿನಗಳ ರಜೆಯನ್ನು ಜಿಲ್ಲೆಯ ಜಿಲ್ಲಾಧಿಕಾರಿಗಳು ಘೋಷಣೆ ಮಾಡಿದ್ದಾರೆ.

    ಅರಬ್ಬೀ ಸಮುದ್ರದಲ್ಲಿ ವಾಯುಭಾರ ಕುಸಿತ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯಾದ್ಯಂತ ಕಳೆದ ಎರಡು ದಿನಗಳಿಂದ ಧಾರಾಕಾರ ಮಳೆಯಾಗುತ್ತಿದೆ. ಮೋಡ ಮುಸುಕಿದ ವಾತಾವರಣವಿದ್ದು ಮತ್ತೆರಡು ದಿನ ಮಳೆ ಮುಂದುವರೆಯುವ ಸಾಧ್ಯತೆಯಿದೆ. ಶಾಲಾ ಆರಂಭದಲ್ಲಿ ವಿಪರೀತ ಮಳೆಯಾಗುತ್ತಿದ್ದು ಮಕ್ಕಳು ಪರದಾಡುವಂತಾಗಿದೆ. ಈ ಹಿನ್ನೆಲೆಯಲ್ಲಿ ಜಿಲ್ಲೆಯ ಶಾಲೆಗಳಿಗೆ ಇಂದು ಮತ್ತು ನಾಳೆ ದಿನ ರಜೆ ನೀಡಲಾಗಿದೆ.

    ಈ ಬಗ್ಗೆ ಪಬ್ಲಿಕ್ ಟಿವಿ ಜೊತೆ ಮಾತನಾಡಿದ ಉಡುಪಿ ಡಿಸಿ ಪ್ರಿಯಾಂಕಾ ಮೇರಿ, ಶಾಲಾ ಮಕ್ಕಳಿಗೆ ಸಮಸ್ಯೆಯಾಗದತೆ, ಪೋಷಕರಿಗೆ ಆತಂಕವಾಗವಾರದೆಂಬ ಹಿನ್ನೆಲೆಯಲ್ಲಿ ರಜೆ ನೀಡಿರುವುದಾಗಿ ಹೇಳಿದ್ದಾರೆ.

    ಗ್ರಾಮೀಣ ಪ್ರದೇಶದ ತೊರೆಗಳು ತುಂಬಿ ತುಳುಕುತ್ತಿದ್ದು ವಿದ್ಯಾರ್ಥಿಗಳಿಗೆ ಸಮಸ್ಯೆಯಾಗದಂತೆ ಮುಂಜಾಗೃತಾ ಕ್ರಮವಾಗಿ ರಜೆ ಘೋಷಣೆ ಮಾಡಲಾಗಿದೆ. ಮೆಕುನು ಚಂಡಮಾರುತದ ಅಬ್ಬರ ಕಡಿಮೆಯಾದ ಕೂಡಲೇ ಅರಬ್ಬೀ ಸಮುದ್ರದಲ್ಲಿ ವಾಯುಭಾರ ಕುಸಿತವಾಗಿದೆ. ಹೀಗಾಗಿ ಒಂದು ವಾರದಿಂದ ಆಗಾಗ ಬಿಟ್ಟು ಬಿಟ್ಟು ಮಳೆಯಾಗುತ್ತಿದೆ.

    ವಾಯುಭಾರ ಕುಸಿತದ ಹಿನ್ನೆಲೆಯಲ್ಲಿ ಮತ್ತೆರಡು ದಿನ ಉಡುಪಿಯಲ್ಲಿ ಮಳೆಯಾಗುತ್ತದೆ ಎಂಬ ಸಂದೇಶವನ್ನು ಹವಾಮಾನ ಇಲಾಖೆ ರವಾನಿಸಿದೆ. ಮೂರು ದಿನ ಕಡ್ಡಾಯವಾಗಿ ಯಾರೂ ಕಡಲಿಗೆ ಇಳಿಯಬೇಡಿ ಅಂತ ಜಿಲ್ಲಾಡಳಿತ ಮೀನುಗಾರರಿಗೆ ಎಚ್ಚರಿಕೆ ರವಾನಿಸಿದೆ.

    ವಾಯುಭಾರ ಕುಸಿತವಾಗಿದ್ದು, ಜೂನ್ 1 ಕ್ಕೆ ಮುಂಗಾರು ಮಳೆ ಕರಾವಳಿಗೆ ಪ್ರವೇಶ ಮಾಡುತ್ತದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ. ಹೀಗಾಗಿ ಸಮಸ್ಯೆಯಾಗದಂತೆ ರಜೆ ನೀಡಿರುವುದಾಗಿ ಡಿ.ಸಿ ಹೇಳಿದ್ದಾರೆ.

  • ಹಾಜರಿ ಕೂಗಿದ್ರೆ ಎಸ್ ಸರ್ ಬದಲು ಮಕ್ಳು ಜೈ ಹಿಂದ್ ಹೇಳ್ಬೇಕು!

    ಹಾಜರಿ ಕೂಗಿದ್ರೆ ಎಸ್ ಸರ್ ಬದಲು ಮಕ್ಳು ಜೈ ಹಿಂದ್ ಹೇಳ್ಬೇಕು!

    ಭೋಪಾಲ್: ಶಾಲೆಯಲ್ಲಿ ಶಿಕ್ಷಕರು ಹಾಜರಿ ಕೂಗಿದಾಗ ಮಕ್ಕಳು “ಎಸ್ ಸರ್, ಎಸ್ ಮೇಡಂ” ಎನ್ನುವಂತಿಲ್ಲ. ಅದರ ಬದಲಿಗೆ `ಜೈ ಹಿಂದ್’ ಎಂದು ಹೇಳಬೇಕು ಎನ್ನುವ ಆದೇಶವನ್ನು ಮಧ್ಯಪ್ರದೇಶ ಸರ್ಕಾರ ಹೊರಡಿಸಿದೆ.

    2017ರ ಅಕ್ಟೋಬರ್ ತಿಂಗಳಿನಲ್ಲಿ ಸತ್ನಾ ಜಿಲ್ಲೆಯಲ್ಲಿರುವ ಶಾಲೆಗಳಲ್ಲಿ ಸರ್ಕಾರದ ಈ ಆದೇಶವನ್ನು ಪ್ರಾಯೋಗಿಕವಾಗಿ ಜಾರಿಗೆ ತರಲಾಗಿತ್ತು. ಈಗ ರಾಜ್ಯದ ಎಲ್ಲ ಸರ್ಕಾರಿ ಶಾಲೆಗಳಿಗೆ ಅನ್ವಯವಾಗುವಂತೆ ಶಿಕ್ಷಣ ಇಲಾಖೆ ಆದೇಶವನ್ನು ಜಾರಿಗೊಳಿಸಿದೆ.

    ಮಕ್ಕಳಲ್ಲಿ ದೇಶಭಕ್ತಿ ಮೂಡಿಸಲು ಹಾಗೂ ಬೆಳೆಸಲು ಈ ನಿರ್ಧಾರವನ್ನು ಸರ್ಕಾರ ಕೈಗೊಂಡಿದೆ ಎಂದು ರಾಜ್ಯ ಶಿಕ್ಷಣ ಮಂಡಳಿ ತನ್ನ ನಡೆಯನ್ನು ಸಮರ್ಥಿಸಿಕೊಂಡಿದೆ. ಸದ್ಯ 1.22 ಲಕ್ಷ ಸರ್ಕಾರಿ ಶಾಲೆಗಳು ಈ ಆದೇಶವನ್ನು ಪಾಲಿಸುತ್ತಿದ್ದು, ನಂತರ ಹಂತದಲ್ಲಿ ಖಾಸಗಿ ಶಾಲೆಗಳು ಅಳವಡಿಸಿಕೊಳ್ಳಲು ಸಲಹೆ ನೀಡುವುದಾಗಿ ಪ್ರಾಥಮಿಕ ಶಾಲಾ ಶಿಕ್ಷಣ ಸಚಿವ ವಿಜಯ್ ಶಾ ಹೇಳಿದ್ದಾರೆ.

    ಮಕ್ಕಳು ದೇಶದ ಭವಿಷ್ಯ. ಅವರಲ್ಲಿ ದೇಶದ ಮೇಲೆ ಪ್ರೀತಿ ಗೌರವ ಹಾಗೂ ಭಕ್ತಿಯನ್ನು ಬೆಳಸಬೇಕು. ಆದ್ದರಿಂದ ಜೈ ಹಿಂದ್ ಹೇಳಬೇಕು ಎಂದು ತಮ್ಮ ನಿರ್ಧಾರವನ್ನು ಈ ಹಿಂದೆ ವಿಜಯ್ ಶಾ ಸಮರ್ಥಿಸಿಕೊಂಡಿದ್ದರು.

    ಕೆಲವು ಸರ್ಕಾರಿ ಶಾಲೆಗಳಲ್ಲಿ ಶಿಕ್ಷರ ಕೊರತೆಯಿದ್ದು, ನೇಮಕಾತಿಗೆ ಸರ್ಕಾರ ಮುಂದಾಗಬೇಕು. ಶಿಕ್ಷಣ ಗುಣಮಟ್ಟಕ್ಕೆ ಗಮನ ನೀಡಬೇಕೇ ಹೊರತು, ಮಕ್ಕಳಲ್ಲಿ ಬಲವಂತವಾಗಿ ದೇಶಭಕ್ತಿ ಮೂಡಿಸಲು ಮುಂದಾಗಿರುವ ಈ ಕ್ರಮ ಸೂಕ್ತವಲ್ಲ. ಅಲ್ಲದೇ, ಇದನ್ನ ಕಡ್ಡಾಯಗೊಳಿಸಿರುವುದು ಎಷ್ಟು ಸರಿ ಎಂದು ಕಾಂಗ್ರೆಸ್ ಪಕ್ಷದ ಮುಖಂಡ ಕೆ.ಕೆ.ಮಿಶ್ರಾ ಅವರು ಪ್ರಶ್ನಿಸಿದ್ದಾರೆ.

    ಬಿಜೆಪಿ ವಕ್ತಾರ ರಾಹುಲ್ ಕೊಠಾರಿ ಅವರು ಪ್ರತಿಕ್ರಿಯಿಸಿ, ವಿದ್ಯಾರ್ಥಿಗಳಲ್ಲಿ ದೇಶಭಕ್ತಿ ಮೂಡಿಸಲು ಉತ್ತಮ ನಿರ್ಧಾರವನ್ನು ಸರ್ಕಾರ ತೆಗೆದುಕೊಂಡಿದೆ. ಈ ನಿರ್ಧಾರವನ್ನು ಧನಾತ್ಮಕವಾಗಿ ತೆಗೆದುಕೊಳ್ಳಬೇಕು ಎಂದು ಹೇಳಿದ್ದಾರೆ.

    ಮಧ್ಯಪ್ರದೇಶ ಸರ್ಕಾರವು ಈಗಾಗಲೇ ಶಾಲೆಗಳಲ್ಲಿ ಪ್ರತಿದಿನ ತ್ರಿವರ್ಣ ಧ್ವಜ ಮತ್ತು ರಾಷ್ಟ್ರಗೀತೆಯನ್ನು ಹಾಡುವುದನ್ನು ಕಡ್ಡಾಯ ಮಾಡಿದೆ.

  • ಶಾಲೆಗೆ ಹೋಗಲ್ಲ ಅಂದ ಮಗಳನ್ನು ಬೈಕಿನಲ್ಲಿ ಕಟ್ಟಿಕೊಂಡು ಹೋದ ತಂದೆ-ವಿಡಿಯೋ ವೈರಲ್

    ಶಾಲೆಗೆ ಹೋಗಲ್ಲ ಅಂದ ಮಗಳನ್ನು ಬೈಕಿನಲ್ಲಿ ಕಟ್ಟಿಕೊಂಡು ಹೋದ ತಂದೆ-ವಿಡಿಯೋ ವೈರಲ್

    ಬೀಜಿಂಗ್: ಮೊದಲಿಗೆ ಚಿಕ್ಕ ಮಕ್ಕಳು ಶಾಲೆಗೆ ಹೋಗಲು ಹಠ ಮಾಡೋದು ಸಹಜ. ಮಕ್ಕಳ ಮನವೊಲಿಸಿ ಅವರನ್ನು ಶಾಲೆಗೆ ಕಳುಹಿಸಲು ಪೋಷಕರು ನಾನಾ ಕಸರತ್ತು ಮಾಡ್ತಾರೆ. ಅಂತೆಯೇ ಕೆಲ ಮಕ್ಕಳು ದೊಡ್ಡವರಾದ ಮೇಲೆಯೂ ಶಾಲೆ ಅಂದರೆ ದೂರ ಓಡಿ ಹೋಗುವುದುಂಟು.

    ಮಕ್ಕಳ ಭವಿಷ್ಯಕ್ಕಾಗಿ ಶಿಕ್ಷಣ ಮುಖ್ಯವಾಗಿದ್ದರಿಂದ ಪೋಷಕರು ಶಿಕ್ಷೆ ನೀಡಲು ಆರಂಭಿಸುತ್ತಾರೆ. ಕೆಲವೊಮ್ಮೆ ಪೋಷಕರು ನೀಡುವ ಶಿಕ್ಷೆಗಳು ವಿಚಿತ್ರವಾಗಿದ್ದು, ಸಾರ್ವಜನಿಕರ ಟೀಕೆಗೆ ಒಳಪಡುತ್ತವೆ. ಇದನ್ನೂ ಓದಿ: ಚಲಿಸುತ್ತಿದ್ದ ಸ್ಕೂಟಿ ಹಿಂಬದಿಯಲ್ಲಿ ಕುಳಿತು ಹೋಮ್‍ವರ್ಕ್ ಬರೆದ ಬಾಲಕ: ವಿಡಿಯೋ ನೋಡಿ

    ಏಪ್ರಿಲ್ 23ರಂದು ದಕ್ಷಿಣ ಚೀನಾದ ಯುನ್ಫು ಎಂಬಲ್ಲಿ ತಂದೆಯೊಬ್ಬ ತನ್ನ ಮಗಳು ಶಾಲೆಗೆ ಹೋಗ್ತಿಲ್ಲ ಅಂತಾ ಕೋಪದಿಂದ ಆಕೆಯನ್ನು ಬೈಕಿನ ಹಿಂಬದಿಯ ಸೀಟಿಗೆ ಹಗ್ಗದಿಂದ ಕಟ್ಟಿ ಕರೆದುಕೊಂಡು ಹೋಗಿದ್ದಾನೆ. ಜನನಿಬಿಡ ರಸ್ತೆಯಲ್ಲಿ ಮಗಳನ್ನು ಬೈಕಿನಲ್ಲಿ ಕರೆದುಕೊಂಡು ಹೋಗುತ್ತಿದ್ದ ದೃಶ್ಯವನ್ನು ಜನರು ಮೊಬೈಲ್‍ಗಳಲ್ಲಿ ಚಿತ್ರೀಕರಿಸಿಕೊಂಡಿದ್ದಾರೆ. ವಿಡಿಯೋ ನೋಡಿದ ಜನರು ತಂದೆಯ ಕೆಲಸಕ್ಕೆ ಆಕ್ರೋಶ ವ್ಯಕ್ತಪಡಿಸಿದ್ದಾರೆ.

    ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದ್ದಂತೆ ಸ್ಥಳೀಯ ಪೊಲೀಸರು ತಂದೆಯನ್ನು ಕರೆಸಿ ಇನ್ನ್ಮುಂದೆ ಈ ರೀತಿ ಆಗಬಾರದೆಂದು ಮೌಖಿಕವಾಗಿ ಎಚ್ಚರಿಕೆ ನೀಡಿ ಕಳು ಹಿಸಿದ್ದಾರೆ ಎಂದು ವರದಿಯಾಗಿದೆ.

    https://youtu.be/EdHAUNaBNpY

  • ಶಾಲೆಯಲ್ಲಿಯೇ ಶಿಕ್ಷಕಿಯೊಂದಿಗೆ ಸಂಸ್ಥೆಯ ಅಧ್ಯಕ್ಷನ ಲವ್ವಿ-ಡವ್ವಿ-ಸಿಸಿಟಿವಿಯಲ್ಲಿ ಸೆರೆಯಾಯ್ತು ರೊಮ್ಯಾನ್ಸ್

    ಶಾಲೆಯಲ್ಲಿಯೇ ಶಿಕ್ಷಕಿಯೊಂದಿಗೆ ಸಂಸ್ಥೆಯ ಅಧ್ಯಕ್ಷನ ಲವ್ವಿ-ಡವ್ವಿ-ಸಿಸಿಟಿವಿಯಲ್ಲಿ ಸೆರೆಯಾಯ್ತು ರೊಮ್ಯಾನ್ಸ್

    ಬೀದರ್: ಶಾಲಾ ಶಿಕ್ಷಕಿಯೊಂದಿಗೆ ಸಂಸ್ಥೆಯ ಅಧ್ಯಕ್ಷನೋರ್ವ ಶಾಲಾ ಕಟ್ಟಡದಲ್ಲಿಯೇ ಲವ್ವಿ-ಡವ್ವಿ ನಡೆಸಿರುವ ಘಟನೆ ಜಿಲ್ಲೆಯ ಭಾಲ್ಕಿ ತಾಲೂಕಿನ ಖಾಸಗಿ ಶಿಕ್ಷಣ ಸಂಸ್ಥೆಯಲ್ಲಿ ನಡೆದಿದೆ.

    ಶಿಕ್ಷಕಿ ಮತ್ತು ಸಂಸ್ಥೆಯ ಅಧ್ಯಕ್ಷರ ರೊಮ್ಯಾನ್ಸ್ ಶಾಲಾ ಕಟ್ಟಡದಲ್ಲಿ ಅಳವಡಿಸಿದ್ದ ಸಿಸಿಟಿವಿ ಯಲ್ಲಿ ಸೆರೆಯಾಗಿವೆ. ಈ ವಿಡಿಯೋವನ್ನು ಕೆಲವರು ಸೋಶಿಯಲ್ ಮೀಡಿಯಾದಲ್ಲಿ ಅಪ್ಲೋಡ್ ಮಾಡಿಕೊಂಡಿದ್ದಾರೆ. ಸದ್ಯ ಈ ವಿಡಿಯೋ ಸ್ಥಳೀಯರ ಮೊಬೈಲ್ ನಲ್ಲಿ ಹರಿದಾಡುತ್ತಿದ್ದು, ಶಾಲಾ ಆವರಣದಲ್ಲಿ ಶಿಕ್ಷಕಿ ಮತ್ತು ಸಂಸ್ಥೆಯ ಅಧ್ಯಕ್ಷನ ವರ್ತನೆ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

    ಈ ವಿಡಿಯೋ ಯಾವ ಶಾಲೆಯದು ಎಂಬುವುದು ಮಾತ್ರ ರಿವೀಲ್ ಆಗಿಲ್ಲ. ಆದ್ರೆ ಇದು ಸ್ಥಳೀಯ ವಿಡಿಯೋ ಆಗಿದೆ ಎಂದು ಹೇಳಲಾಗಿದೆ.

  • ಕೋಲಾರದಲ್ಲಿ ಕಲ್ಯಾಣ ಮಂಟಪದಲ್ಲಿಯೇ ವಸತಿ ಶಾಲೆ ಆರಂಭಿಸಿದ್ರು!

    ಕೋಲಾರದಲ್ಲಿ ಕಲ್ಯಾಣ ಮಂಟಪದಲ್ಲಿಯೇ ವಸತಿ ಶಾಲೆ ಆರಂಭಿಸಿದ್ರು!

    ಕೋಲಾರ: ನಗರದ ಖಾದರ್ ಲೇಔಟ್‍ನ ಕಲ್ಯಾಣ ಮಂಟಪದಲ್ಲಿಯೇ ವಸತಿ ಶಾಲೆಯನ್ನು ಆರಂಭಿಸಲಾಗಿದೆ.

    ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಕೆ.ಚಂದ್ರಾರೆಡ್ಡಿ ತನ್ನ ಪತ್ನಿ ಸುಗುಣ ಹೆಸರಿನಲ್ಲಿ ಕೆಸಿಆರ್ ಎಂಬ ಫಂಕ್ಷನ್ ಹಾಲ್ ನಿರ್ಮಿಸಿದ್ರು. ಇದಕ್ಕಾಗಿ ಸರ್ವೇ ನಂಬರ್ 1ರಲ್ಲಿ ರಸ್ತೆ ಮತ್ತು ರಾಜಕಾಲುವೆ ಒತ್ತುವರಿ ಮಾಡಿದ್ದಾರೆ ಅನ್ನೋ ಆರೋಪವೂ ಕೇಳಿ ಬಂದಿತ್ತು.

    ಆದ್ರೆ ಇದೀಗ ಅದೇ ಕಟ್ಟಡದಲ್ಲಿ ಮೊರಾರ್ಜಿ ದೇಸಾಯಿ ವಸತಿ ಶಾಲೆ ಆರಂಭಿಸಲಾಗಿದೆ. ಕಳೆದ ವರ್ಷ ತರಾತುರಿಯಲ್ಲಿ ಕಟ್ಟಿರುವ ಈ ಕಟ್ಟಡದಲ್ಲಿ 37 ಮಕ್ಕಳು ದಾಖಲಾಗಿದ್ದಾರೆ. ಆದ್ರೆ ಇಲ್ಲಿ ಸರಿಯಾದ ಗಾಳಿ, ಬೆಳಕಿನ ವ್ಯವಸ್ಥೆಗಳಿಲ್ಲ. ವಿದ್ಯಾರ್ಥಿಗಳು ಹಾಗೂ ವಿದ್ಯಾರ್ಥಿನಿಯರಿಗೆ ಪ್ರತ್ಯೇಕ ಕೊಠಡಿಗಳಿಲ್ಲ ಎನ್ನಲಾಗಿದೆ.

    ಕೆ.ಚಂದ್ರಾರೆಡ್ಡಿ ತನ್ನ ಪ್ರಭಾವ ಬಳಸಿ ಗಡಿಗ್ರಾಮ ದೊಡ್ಡಪೊನ್ನಾಂಡಹಳ್ಳಿಗೆ ಮಂಜೂರಾದ ಶಾಲೆಯನ್ನು ಬಂಗಾರಪೇಟೆಯಲ್ಲಿ ಆರಂಭಿಸಿ, 1 ಲಕ್ಷದ 85 ಸಾವಿರದ 650 ರೂಪಾಯಿ ಬಾಡಿಗೆ ಪೀಕುತ್ತಿದ್ದಾನೆ ಎಂಬುದಾಗಿ ಸ್ಥಳೀಯರು ದೂರಿದ್ದಾರೆ.

  • ಶಿಷ್ಟಾಚಾರ ಮುರಿದು ಶಾಲೆಗೆ ಭೇಟಿಕೊಟ್ಟ ರಾಹುಲ್ ಗಾಂಧಿ

    ಶಿಷ್ಟಾಚಾರ ಮುರಿದು ಶಾಲೆಗೆ ಭೇಟಿಕೊಟ್ಟ ರಾಹುಲ್ ಗಾಂಧಿ

    ಉಡುಪಿ: ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿಯವರ ರಾಜ್ಯದ ಮೂರನೇ ಜನಾಶೀರ್ವಾದ ಯಾತ್ರೆ ಬಿರುಸಿನಿಂದ ನಡೆದಿದೆ. ಉಡುಪಿ ಜಿಲ್ಲೆ ಕಾಪು ತಾಲೂಕಿನ ಎರ್ಮಾಳು ಸರ್ಕಾರಿ ಶಾಲೆಯ ಮೈದಾನದಲ್ಲಿ ಇಳಿದ ರಾಹುಲ್ ಗಾಂಧಿ ಮೊದಲು ರಾಜ್ಯ, ಕೇಂದ್ರ ನಾಯಕರಿಂದ ಗೌರವ ಸ್ವೀಕರಿಸಿದರು.

    ಇದಾದ ಬಳಿಕ ಶಾಲೆಯ ಜಗಲಿಗೆ ಬಂದ ರಾಹುಲ್ ಗಾಂಧಿ, ಮಕ್ಕಳ ಜೊತೆ ಬೆರೆತರು. ಶಿಕ್ಷಣ ಮತ್ತು ಊಟದ ಬಗ್ಗೆ ವಿಚಾರಿಸಿದರು. ಶಿಕ್ಷಕಿಯ ಜೊತೆ ಮಾತುಕತೆ ಮಾಡಿದರು. ಹೇಗಿದ್ದೀರಿ? ಚೆನ್ನಾಗಿದ್ದಿರಾ? ಊಟ ಮಾಡಿದ್ರಾ? ಅಂತ ಎಲ್ಲರನ್ನು ವಿಚಾರಿಸುತ್ತಾ ಎಲ್ಲಾ ಮಕ್ಕಳ ಕೈ ಕುಲುಕಿದರು.

    ಕೈ ಕುಲುಕುತ್ತಿದ್ದಂತೆ ಸಂಭ್ರಮಿಸಿದ ಮಕ್ಕಳು ರಾಹುಲ್ ಗಾಂಧಿ ಅವರನ್ನು ಅಪ್ಪಿಕೊಂಡರು. ಎರ್ಮಾಳು ತೆಂಕದ ಸರ್ಕಾರಿ ಹೈಸ್ಕೂಲು ಮಕ್ಕಳು ರಾಹುಲ್ ಗಾಂಧಿಯವರನ್ನು ಹತ್ತಿರದಿಂದ ಕಂಡು ಖುಷಿಪಟ್ಟರು. ಅಲ್ಲಿಂದ ಎರ್ಮಾಳ್ ಗೆ ಆಗಮಿಸಿದ ರಾಹುಲ್ ಗಾಂಧಿ, ಮೀನು ಬೆಳೆಗಾರರ ಜೊತೆ ಸಂವಾದ ನಡೆಸಿದರು. ರಾಹುಲ್ ಸುಮಾರು 15 ರಿಂದ 20 ನಿಮಿಷ ಮಾತುಕತೆ ನಡೆಸಿದ ರಾಹುಲ್ ಮೀನು ಬೆಳೆಗಾರರ ಜೊತೆ ಎಳನೀರು ಸೇವಿಸಿದರು.

    ರಾಹುಲ್ ಗಾಂಧಿಗೆ ನೀರು ದೋಸೆ, ಮೀನಿನ ಖಾದ್ಯದ ವ್ಯವಸ್ಥೆ ಮಾಡಲಾಗಿತ್ತು. ನಂತರ ರಾಜಕೀಯ ತರಬೇತಿ ಕೇಂದ್ರವನ್ನು ಉದ್ಘಾಟನೆ ಮಾಡಿ ಮಾತನಾಡಿ, ದೇಶದಲ್ಲಿ ಜನ ಯೋಚಿಸುವ ರೀತಿ ಬದಲಾಗಿದೆ. ಜನರ ಅಪೇಕ್ಷೆಗೆ ತಕ್ಕಂತೆ ನಡೆದುಕೊಳ್ಳಬೇಕಾಗಿದೆ. ಸೇವಾದಳ ಸಂಸ್ಥೆ ರಾಜಕೀಯ ತರಬೇತಿ ನೀಡಲಿದ್ದು, ರಾಜ್ಯದ ಮೊದಲ ಟ್ರೈನಿಂಗ್ ಸೆಂಟರ್ ಎಂಬ ಹೆಗ್ಗಳಿಕೆಗೆ ರಾಗ್ನಾ ಪಾತ್ರವಾಗಿದೆ ಅಂದ್ರು. ರೋಡ್ ಶೋ ನಡೆಸಿದ ರಾಹುಲ್ ರಸ್ತೆ ಬದಿ ನಿಂತಿದ್ದ ಜನಕ್ಕೆ ಕೈ ಬೀಸಿದರು.

     

  • ಯುಗಾದಿ ಹಬ್ಬವನ್ನು ಅರ್ಥಪೂರ್ಣವಾಗಿ ಆಚರಿಸಿದ ಶಾಲಾ ಮಕ್ಕಳು!

    ಯುಗಾದಿ ಹಬ್ಬವನ್ನು ಅರ್ಥಪೂರ್ಣವಾಗಿ ಆಚರಿಸಿದ ಶಾಲಾ ಮಕ್ಕಳು!

    ಕಲಬುರಗಿ: ಇಂದು ರಾಜ್ಯಾದ್ಯಂತ ವಿಳಂಬನಾಮಿ ಸಂವತ್ಸರದ ಯುಗಾದಿ ಹಬ್ಬವನ್ನು ಸಂಭ್ರಮ, ಸಡಗರದಿಂದ ಆಚರಿಸಲಾಗುತ್ತಿದೆ.

    ಬಿಸಿಲನಾಡು ಕಲಬುರಗಿಯಲ್ಲಿ ಪುಟಾಣಿ ಮಕ್ಕಳು ಯುಗಾದಿ ಹಬ್ಬವನ್ನು ಅರ್ಥಪೂರ್ಣವಾಗಿ ಆಚರಿಸಿದ್ದಾರೆ. ಕಲಬುರಗಿಯ ಉದನೂರ ರಸ್ತೆಯ ಹಿರೇಗೌಡ ಲೇಔಟ್ ನಲ್ಲಿರೋ ಅಪ್ಪಾಜಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಯುಗಾದಿ ಮುನ್ನಾ ದಿನ ವಿಶಿಷ್ಟ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.

    ವಿದ್ಯಾರ್ಥಿಗಳೆಲ್ಲಾ ಪಕ್ಕಾ ಹಳ್ಳಿಸೊಗಡಿನಲ್ಲಿ ಶಾಲೆಗೆ ಆಗಮಿಸಿದ್ದರು. ಶಾಲಾ ಬಾಲಕಿಯರೆಲ್ಲಾ ಹಣೆಯಲ್ಲಿ ಕುಂಕುಮ ಬೊಟ್ಟು, ಮುಡಿಯಲ್ಲಿ ಮಲ್ಲಿಗೆ ಹೂವು, ಹಸಿರು ಇಳಕಲ್ ಸೀರೆ ತೊಟ್ಟು ಬಂದಿದ್ದರೆ, ಬಾಲಕರೆಲ್ಲಾ ಬಿಳಿ ಅಂಗಿ, ಪಂಚೆ ತೊಟ್ಟು ಕಾರ್ಯಕ್ರಮಕ್ಕೆ ಆಗಮಿಸಿ ಅತಿಥಿ ಗಣ್ಯರಿಗೆಲ್ಲಾ ಬೇವು-ಬೆಲ್ಲ ಹಂಚಿ ಸಂಭ್ರಮಿಸಿದರು.

    ಬೇವು ಬೆಲ್ಲದ ಪಾನಕವಿರುವ ಬಿಂದಿಗೆ ಪೂಜೆ ಸಲ್ಲಿಸುವ ಮೂಲಕ ಹಿರಿಯ ಸಾಹಿತಿ ಡಾ.ಸ್ವಾಮಿರಾವ್ ಕಾರ್ಯಕ್ರಮ ಉದ್ಘಾಟಿಸಿದರು.