ಮಂಗಳೂರು: ಕಾವೂರು ಸರ್ಕಾರಿ ಸಂಯುಕ್ತ ಪ್ರೌಢಶಾಲೆಯ ನವೀಕರಣಗೊಂಡ ಶಾಲಾ ಕಟ್ಟಡದ ಉದ್ಘಾಟನಾ ಸಮಾರಂಭ ನಡೆಯಿತು. ನವೀಕೃತ ಕಟ್ಟಡವನ್ನು ಕ್ಯಾನ್ ಫಿನ್ ಹೋಮ್ ಲಿಮಿಟೆಡ್ನ ಪ್ರಬಂಧಕ ಉಮೇಶ್ ಪೈ ಉದ್ಘಾಟಿಸಿದರು.
ಕಟ್ಟಡ ಉದ್ಘಾಟಿಸಿ ಮಾತನಾಡಿದ ಉಮೇಶ್ ಪೈ ಅವರು, ವಿದ್ಯಾರ್ಥಿಗಳು ಸೌಲಭ್ಯಗಳನ್ನು ಉಪಯೋಗಿಸಿಕೊಂಡು ಸತ್ಪ್ರಜೆಗಳಾಗಿ ದೇಶದ ಏಳಿಗೆಗಾಗಿ ಜೀವನ ನಡೆಸಿರಿ ಎಂದು ಕರೆ ನೀಡಿದರು.

ಮುಖ್ಯ ಅತಿಥಿಗಳಾದ ಮಂಗಳೂರು ಉತ್ತರ ವಲಯ ಶಿಕ್ಷಣಾಧಿಕಾರಿ ಮಂಜುಳಾ ಮಾತನಾಡಿ, ಒದಗಿಸಿದ ಸೌಲಭ್ಯಗಳು ವಿದ್ಯಾರ್ಥಿಗಳಲ್ಲಿ ನಾಯಕತ್ವ ಗುಣ ಸಂವಹನ ಕೌಶಲ್ಯ ಬೆಳೆಸಿಕೊಳ್ಳಲು ಸಹಕಾರಿಯಾಗಬೇಕು. ಕ್ಯಾನ್ ಫಿನ್ ಹೋಮ್ಸ್ ಇವರ ಉದಾರತೆಯ ಸಮಾಜದ ಉಳಿದ ಸಂಘ ಸಂಸ್ಥೆಗಳಲ್ಲಿ ಇದ್ದಲ್ಲಿ ವಿದ್ಯಾ ಸಂಸ್ಥೆಗಳು ಬೆಳೆಯುತ್ತವೆ. ಅದರ ಉಪಯೋಗ ಬಡ ವಿದ್ಯಾರ್ಥಿಗಳಿಗೆ ಸಿಗುವಂತಾಗಲಿ ಎಂದು ತಿಳಿಸಿದರು.

ಕ್ಯಾನ್ ಪಿನ್ ಹೋಮ್ಸ್ ಲಿಮಿಟೆಡ್ನವರು 10 ಲಕ್ಷ ರೂಪಾಯಿ ವೆಚ್ಚದಲ್ಲಿ ನವೀಕರಣ ಕಾರ್ಯ ನಡೆದಿದೆ. ಈ ವೇಳೆ ಗುತ್ತಿಗೆದಾರ ಸುಧೀರ್ ರಾಜ್, ಸುಮಂತ್ ರಾವ್, ಫೆಲ್ಸಿ ರೇಗೋ, ರಮಾನಂದ ಭಂಡಾರಿ, ಜಗದೀಶ್, ನಾಗೇಶ್ ನಾಯಕ್ ಮತ್ತಿತರು ಉಪಸ್ಥತಿರಿದ್ರು. ಶಾಲಾ ಮುಖ್ಯ ಶಿಕ್ಷಕ ಮಲ್ಲೇಶ್ ನಾಯ್ಕ್ ಎ.ಸಿ ಸ್ವಾಗತಿಸಿದರು. ಸಹ ಶಿಕ್ಷಕ ನಾಗೇಶ್ ನಾಯಕ್ ವಂದನಾರ್ಪಣೆಗೈದರು. ಸುಭಾಷಿಣಿ ಕಾರ್ಯಕ್ರಮವನ್ನು ನಿರೂಪಿಸಿದರು.








