Tag: schools

  • 9ನೇ ತರಗತಿ ವಿದ್ಯಾರ್ಥಿಗಳಿಗೆ ಪುಸ್ತಕ ನೋಡಿ ಪರೀಕ್ಷೆ ಬರೆಯಲು ಅವಕಾಶ – ಹೇಗಿರಲಿದೆ ಎಕ್ಸಾಂ?

    9ನೇ ತರಗತಿ ವಿದ್ಯಾರ್ಥಿಗಳಿಗೆ ಪುಸ್ತಕ ನೋಡಿ ಪರೀಕ್ಷೆ ಬರೆಯಲು ಅವಕಾಶ – ಹೇಗಿರಲಿದೆ ಎಕ್ಸಾಂ?

    ಷ್ಟು ದಿನ ಮನೆಯಲ್ಲಿ ಕಂಠಪಾಠ ಮಾಡಿಕೊಂಡು ಹೋಗಿ ಶಾಲೆಯಲ್ಲಿ ಪರೀಕ್ಷೆ ಬರೆಯುತ್ತಿದ್ದ ಮಕ್ಕಳಿಗೆ ಸಿಬಿಎಸ್‌ಇ ಗುಡ್‌ನ್ಯೂಸ್‌ ಕೊಟ್ಟಿದೆ. ಇನ್ಮುಂದೆ ಓದಿಕೊಂಡು ಹೋಗಿ ಪರೀಕ್ಷೆ ಬರೆಯುವ ಅಗತ್ಯವಿಲ್ಲ. ಮಕ್ಕಳ ಟೆನ್ಷನ್‌ ಪರಿಹರಿಸುವ ಸಲುವಾಗಿ 2026-27ನೇ ಶೈಕ್ಷಣಿಕ ವರ್ಷದಿಂದ ಜಾರಿಗೆ ಬರುವಂತೆ 9ನೇ ತರಗತಿ ವಿದ್ಯಾರ್ಥಿಗಳಿಗೆ ತೆರೆದ ಪುಸ್ತಕ (ಓಪನ್ ಬುಕ್) ಪರೀಕ್ಷೆ ಜಾರಿಗೊಳಿಸಲು ಕೇಂದ್ರೀಯ ಮಾಧ್ಯಮಿಕ ಶಿಕ್ಷಣ ಮಂಡಳಿ ಸಿಬಿಎಸ್ಇ ನಿರ್ಧಾರ ಕೈಗೊಂಡಿದೆ.

    ಈ ಹೊಸ ನೀತಿ ಜಾರಿಯಾದಲ್ಲಿ ವಿದ್ಯಾರ್ಥಿಗಳು ಪಠ್ಯಪುಸ್ತಕ ನೋಡಿಕೊಂಡು ಪರೀಕ್ಷೆ ಬರೆಯಲು ಅವಕಾಶ ಸಿಗಲಿದೆ. ಹಾಗಿದ್ರೆ ಏನಿದು ತೆರೆದ ಪುಸ್ತಕ ಪರೀಕ್ಷಾ ಪದ್ಧತಿ? ಪರೀಕ್ಷೆಗಳು ಹೇಗೆ ನಡೆಯಲಿದೆ? ಪ್ರಯೋಜನಗಳೇನು ಎಂಬ ಕುರಿತು ಇಲ್ಲಿ ವಿವರಿಸಲಾಗಿದೆ.

    ತೆರೆದ ಪುಸ್ತಕ ಪರೀಕ್ಷೆ:
    ಕೇಂದ್ರೀಯ ಮಾಧ್ಯಮ ಶಿಕ್ಷಣ ಮಂಡಳಿ ಪರೀಕ್ಷಾ ಪದ್ಧತಿಯಲ್ಲಿ ಬದಲಾವಣೆ ಮಾಡಲಾಗಿದೆ. ಮುಂದಿನ ಶೈಕ್ಷಣಿಕ ವರ್ಷದಿಂದ ತೆರೆದ ಪುಸ್ತಕ ಪರೀಕ್ಷಾ ಪದ್ಧತಿ ಜಾರಿ ಮಾಡಲಾಗುತ್ತಿದೆ. ಹೀಗಾಗಿ ಇನ್ಮುಂದೆ ವಿದ್ಯಾರ್ಥಿಗಳು ಪಠ್ಯ ಪುಸ್ತಕ ನೋಡಿ ಪರೀಕ್ಷೆ ಬರೆಯಲು ಅವಕಾಶ ಇರುತ್ತದೆ. ಹಳೆಯ ಪರೀಕ್ಷಾ ಪದ್ಧತಿ ಕಂಠ ಪಾಠಕ್ಕೆ ಸಮಯ ಕೊಡುತ್ತೆ ಅನ್ನೋ ವಾದ ಇತ್ತು. ಈಗಿನ ಹೊಸ ಪರೀಕ್ಷಾ ಪದ್ಧತಿ ವಿದ್ಯಾರ್ಥಿ ಸಾಮರ್ಥ್ಯವನ್ನ ಗಣನೆಗೆ ತೆಗೆದುಕೊಳ್ಳುತ್ತದೆ. ಇಂತಹ ಕ್ರಮ ಆಯ್ಕೆ ಮಾಡುವ ಅನುಸರಿಸುವ ಹಕ್ಕು ಆಯಾ ಶಾಲೆಗಳಿಗೆ ಬಿಟ್ಟಿರುತ್ತದೆ. ರಾಷ್ಟ್ರೀಯ ಪಠ್ಯಕ್ರಮದ ಚೌಕಟ್ಟು -2023 ರಾಷ್ಟ್ರೀಯ ಶಿಕ್ಷಣ ನೀತಿ 2020ರ ಸಮನ್ವಯದೊಂದಿಗೆ ಹೊಸ ಪಠ್ಯಕ್ರಮವನ್ನು ಜಾರಿಗೊಳಿಸಲಾಗುತ್ತಿದೆ.

    ಹಳೆಯ ಪರೀಕ್ಷಾ ಪದ್ಧತಿ ಕಂಠಪಾಠಕ್ಕೆ ಹೆಚ್ಚು ಪ್ರಾಮುಖ್ಯತೆ ನೀಡಿದರೆ ಹೊಸ ನೀತಿಯು ಸಾಮರ್ಥ್ಯ ಆಧಾರಿತ ಕಲಿಕೆಗೆ ಮಹತ್ವ ಕೊಡುತ್ತದೆ. ಮುಖ್ಯ ಕಲಿಕಾ ವಿಷಯಗಳಾದ ಭಾಷೆ, ಗಣಿತ, ವಿಜ್ಞಾನ ಸಮಾಜ ವಿಜ್ಞಾನವನ್ನು ಇದು ಒಳಗೊಳ್ಳಲಿದೆ. ಈ ಕ್ರಮವನ್ನು ಆಯ್ಕೆ ಮಾಡಿಕೊಳ್ಳುವ ಅಥವಾ ಬಿಡುವ ಸ್ವಾತಂತ್ರ್ಯವನ್ನು ಶಾಲೆಗಳಿಗೆ ನೀಡಲಾಗಿದೆ.

    ತೆರೆದ ಪುಸ್ತಕ ಪರೀಕ್ಷೆ ಎಂದರೇನು?
    ತೆರೆದ ಪುಸ್ತಕ ಪರೀಕ್ಷೆಗಳನ್ನು ಜಾರಿಗೆ ತಂದ ನಂತರ 9ನೇ ತರಗತಿಯ ವಿದ್ಯಾರ್ಥಿಗಳು ಪರೀಕ್ಷೆಯ ಸಮಯದಲ್ಲಿ ಪ್ರಶ್ನೆಗಳಿಗೆ ಉತ್ತರಿಸುವಾಗ ಪಠ್ಯಪುಸ್ತಕಗಳು, ತರಗತಿ ಟಿಪ್ಪಣಿಗಳು, ಗ್ರಂಥಾಲಯ ಪುಸ್ತಕಗಳನ್ನು ಬಳಸುವ ಅವಕಾಶವಿರುತ್ತದೆ. 9ನೇ ತರಗತಿಯಲ್ಲಿ ತೆರೆದ ಪುಸ್ತಕ ಪುಸ್ತಕ ಪರೀಕ್ಷೆಗಳನ್ನು ಪ್ರತಿ ಅವಧಿಗೆ 3 ಪೆನ್ನು-ಪೇಪರ್ ಮೌಲ್ಯಮಾಪನಗಳ ಭಾಗವಾಗಿ ಸಂಯೋಜಿಸಲಾಗುತ್ತದೆ. ಇದು ಭಾಷೆ, ಗಣಿತ, ವಿಜ್ಞಾನ ಹಾಗೂ ಸಮಾಜ ವಿಜ್ಞಾನಗಳಂತಹ ಪ್ರಮುಖ ವಿಷಯಗಳನ್ನು ಒಳಗೊಂಡಿದೆ. ಶಾಲೆಗಳು ಇದನ್ನು ಶಿಫಾರಸು ಮಾಡುತ್ತವೆ. ಆದರೆ ಅದರ ಅನುಷ್ಠಾನವು ಕಡ್ಡಾಯವಾಗಿರುವುದಿಲ್ಲ.

    ಹೇಗಿರಲಿದೆ ತೆರೆದ ಪುಸ್ತಕ ಪರೀಕ್ಷೆ?
    -ಅಧ್ಯಯನವು ಪೂರ್ಣಗೊಳಿಸಲು ತೆಗೆದುಕೊಂಡ ಸಮಯ ಹಾಗೂ ಪಾಲುದಾರರಿಂದ ಪ್ರತಿಕ್ರಿಯೆಯಂತಹ ಅಂಶಗಳನ್ನು ಮೌಲ್ಯಮಾಪನ ಮಾಡಿದೆ.
    -ಸಿಬಿಎಸ್‌ಇ ( CBSE) ತೆರೆದ ಪುಸ್ತಕ ಮೌಲ್ಯಮಾಪನ ಸ್ವರೂಪವು ಭಾಷೆಗಳು, ಗಣಿತ, ವಿಜ್ಞಾನ ಮತ್ತು ಸಮಾಜ ವಿಜ್ಞಾನದಂತಹ ಪ್ರಮುಖ ಮುಖ ವಿಷಯಗಳನ್ನು ಒಳಗೊಂಡಿರುತ್ತದೆ.
    -ಪರೀಕ್ಷೆಯ ಸಮಯದಲ್ಲಿ ವಿದ್ಯಾರ್ಥಿಗಳು ಪಠ್ಯ ಪುಸ್ತಕಗಳು, ತರಗತಿ ಟಿಪ್ಪಣಿಗಳು ಮತ್ತು ಇತರ ಅನುಮೋದಿತ ಸಂಪನ್ಮೂಲಗಳನ್ನು ಉಲ್ಲೇಖಿಸಬಹುದು.
    -ಈ ಸ್ವರೂಪವನ್ನು ಅಳವಡಿಸಿಕೊಳ್ಳಬೇಕೋ ಅಥವಾ ಬೇಡವೋ ಎಂಬುದು ಶಾಲೆಗಳಿಗೆ ಬಿಟ್ಟದ್ದು, ಅದು ಒಂದು ಆಯ್ಕೆಯಾಗಿರುತ್ತದೆ ಎಂದು CBSE ಹೇಳಿದೆ. ಪ್ರತಿ ಶೈಕ್ಷಣಿಕ ಅವಧಿಯಲ್ಲಿ ನಡೆಸುವ ಮೂರು ಪೆನ್ನು-ಪೇಪರ್ ಪರೀಕ್ಷೆಗಳ ಭಾಗವಾಗಿ ಮೌಲ್ಯಮಾಪನ ಇರುತ್ತದೆ.
    -CBSE ಪರೀಕ್ಷೆಗಳು ವರ್ಷಕ್ಕೆ 2 ಬಾರಿ ನಡೆಯಲಿವೆ ಎಂದು ಕೆಲವು ತಿಂಗಳ ಹಿಂದೆಯೇ ಘೋಷಿಸಲಾಗಿತ್ತು.
    -ಈ ಎರಡನೇ ಹಂತದ ಪರೀಕ್ಷೆಯು ವಿದ್ಯಾರ್ಥಿಗಳಿಗೆ ಐಚ್ಛಿಕವಾಗಿರುತ್ತದೆ ಎಂದು ಸಿಬಿಎಸ್‌ಇ ತಿಳಿಸಿದೆ. ಎರಡನೇ ಹಂತದ ಪರೀಕ್ಷೆ ವಿಶೇಷವಾಗಿ ಸುಧಾರಣೆಗಾಗಿ ಇರುತ್ತದೆ.

    ತೆರೆದ ಪುಸ್ತಕ ಪರೀಕ್ಷೆ ಪ್ರಯೋಜನವೇನು?
    ಈ ಉಪಕ್ರಮವು ಮಕ್ಕಳು ಪರೀಕ್ಷೆಯ ಸಮಯದಲ್ಲಿ ನೀಡಲಾದ ಪುಸ್ತಕಗಳು ಹಾಗೂ ಟಿಪ್ಪಣಿಗಳನ್ನು ಹೇಗೆ ಬಳಸುತ್ತಿದ್ದಾರೆ ಎಂಬುದನ್ನು ತೋರಿಸುತ್ತದೆ. ಇದು ಅವರ ಸಾಮರ್ಥ್ಯವನ್ನು ನಿರ್ಣಯಿಸುತ್ತದೆ.

    ಈ ಪರೀಕ್ಷೆಯೂ ವಿದ್ಯಾರ್ಥಿಗಳಲ್ಲಿ ಕಂಠಪಾಠ ಮಾಡುವ ಅಭ್ಯಾಸವನ್ನು ತೆಗೆದುಹಾಕುವ ಪ್ರಯತ್ನವಾಗಿದೆ. ಬದಲಾಗಿ, ಅನ್ವಯಿಸುವ ಹಾಗೂ ವಿಶ್ಲೇಷಿಸುವ ಸಾಮರ್ಥ್ಯವನ್ನು ಪರೀಕ್ಷಿಸಲಾಗುತ್ತದೆ.

    2014ರಲ್ಲೂ ಸಹ ನಡೆದಿತ್ತು ಪರೀಕ್ಷೆ:
    CBSE ಓಪನ್-ಬುಕ್ ಪರೀಕ್ಷೆಯನ್ನು ಬಳಸುತ್ತಿರುವುದು ಇದೇ ಮೊದಲಲ್ಲ. ಇದಕ್ಕೂ ಮೊದಲು, ಮಂಡಳಿಯೂ 2014ರಲ್ಲಿ ಓಪನ್-ಬುಕ್ ಪರೀಕ್ಷೆಯನ್ನು ಸಹ ನಡೆಸಿತ್ತು. ನಂತರ ಅದನ್ನು ಓಪನ್ ಟೆಕ್ಸ್ ಬೇಸ್ಟ್ ಅಸೆಸ್ಟೆಂಟ್ (OTBA) ಎಂದು ಹೆಸರಿಸಲಾಯಿತು. ಈ ಅವಧಿಯಲ್ಲಿ, 9ನೇ ತರಗತಿಯಲ್ಲಿ ಹಿಂದಿ, ಇಂಗ್ಲಿಷ್, ಗಣಿತ ಮತ್ತು ಸಮಾಜ ವಿಜ್ಞಾನದ ಅಂತಿಮ ಪರೀಕ್ಷೆಗಳಲ್ಲಿ ಮತ್ತು 11ನೇ ತರಗತಿಯಲ್ಲಿ ಅರ್ಥಶಾಸ್ತ್ರ, ಜೀವಶಾಸ್ತ್ರ ಮತ್ತು ಭೂಗೋಳಶಾಸ್ತ್ರದಲ್ಲಿ OTBA ಅನ್ನು ಪ್ರಯತ್ನಿಸಲಾಯಿತು. ಆದಾಗ್ಯೂ, ವಿದ್ಯಾರ್ಥಿಗಳಲ್ಲಿ ವಿಮರ್ಶಾತ್ಮಕ ಚಿಂತನಾ ಕೌಶಲ್ಯಗಳನ್ನು ಅಭಿವೃದ್ಧಿಪಡಿಸುವಲ್ಲಿ OTRAಯಶಸ್ವಿಯಾಗಿಲ್ಲ ಎಂದು ಕಾರಣ ನೀಡಿ 2017-18ರಲ್ಲಿ ಅದನ್ನು ನಿಲ್ಲಿಸಲಾಯಿತು.

  • ಭಿಕ್ಷೆ ಬೇಡಿದ ಹಣ ವಿದ್ಯಾರ್ಥಿಗಳ ಸಮವಸ್ತ್ರಕ್ಕೆ ದಾನ – ಮಂಗಳಮುಖಿ ರಾಜಮ್ಮ ಕಾರ್ಯಕ್ಕೆ ಸಿಎಂ ಶ್ಲಾಘನೆ

    ಭಿಕ್ಷೆ ಬೇಡಿದ ಹಣ ವಿದ್ಯಾರ್ಥಿಗಳ ಸಮವಸ್ತ್ರಕ್ಕೆ ದಾನ – ಮಂಗಳಮುಖಿ ರಾಜಮ್ಮ ಕಾರ್ಯಕ್ಕೆ ಸಿಎಂ ಶ್ಲಾಘನೆ

    ಬಳ್ಳಾರಿ: ಭಿಕ್ಷೆ ಬೇಡಿದ ಹಣವನ್ನು ವಿದ್ಯಾರ್ಥಿಗಳ ಸಮವಸ್ತ್ರಕ್ಕಾಗಿ ದಾನ ಮಾಡಿದ ಕಂಪ್ಲಿ ತಾಲೂಕಿನ ಸುಗ್ಗೇನಹಳ್ಳಿಯ ಮಂಗಳಮುಖಿ ಪಿ.ರಾಜಮ್ಮ ಅವರನ್ನು ಸಿಎಂ ಸಿದ್ದರಾಮಯ್ಯ ಅಭಿನಂದಿಸಿದ್ದಾರೆ.

    ಈ ಬಗ್ಗೆ ಪತ್ರ ಬರೆದಿರುವ ಸಿಎಂ, ರಾಜಮ್ಮರ ಸಾಮಾಜಿಕ ಕಳಕಳಿ ಅನನ್ಯ, ಅವರು ಎದುರಿಸುವ ಸವಾಲಿನ ನಡುವೆಯೂ ಸೇವೆ ಆದರ್ಶವಾದ್ದು ಎಂದು ಕೊಂಡಾಡಿದ್ದಾರೆ. ಸಮಾಜದಲ್ಲಿ ಸಕಾರಾತ್ಮಕ ಬದಲಾವಣೆಗೆ ರಾಜಮ್ಮ ಅವರ ನಿಸ್ವಾರ್ಥ ಸೇವೆ ಮಾದರಿ ಎಂದು  ಪತ್ರದಲ್ಲಿ ಉಲ್ಲೇಖಿಸಿದ್ದಾರೆ. ಇದನ್ನೂ ಓದಿ: 34 ವರ್ಷಗಳ ಬಳಿಕ ಸಹಪಾಠಿಗಳ ಪುನರ್ ಮಿಲನ – ಸವಿನೆನಪುಗಳ ಮೆಲುಕು!

    ಶಾಲೆಗೆ ಹೋಗಲು ಸಾಧ್ಯವಾಗದ ಮಕ್ಕಳಿಗೆ ಸಹ ರಾಜಮ್ಮ ಆಸರೆಯಾಗಿದ್ದಾರೆ. ಭೀಕ್ಷೆ ಬೇಡಿ ತಂದ ಹಣದಿಂದ ಸಮವಸ್ತ್ರ, ಬಟ್ಟೆ, ಪುಸ್ತಕ ಇನ್ನಿತರ ಸಾಮಗ್ರಿಗಳನ್ನ ನೀಡಿ ಪ್ರೋತ್ಸಾಹಿಸುತ್ತಿದ್ದಾರೆ. ಈ ಮೂಲಕ ಸರ್ಕಾರಿ ಶಾಲೆಗಳ ಅಭಿವೃದ್ಧಿಗೆ ಹಾಗೂ ಬಡ ವಿದ್ಯಾರ್ಥಿಗಳ ಏಳ್ಗೆಗೆ ಶ್ರಮಿಸುತ್ತಿದ್ದಾರೆ. ಇದನ್ನೂ ಓದಿ: ಎಸ್‌ಐಟಿ ತನಿಖೆ ಮುಗಿಯೋವರೆಗೂ ಧಾರ್ಮಿಕ ಸ್ಥಳದ ಪಾವಿತ್ರತೆ ಎಲ್ಲರೂ ಕಾಪಾಡಬೇಕು: ಯು.ಟಿ. ಖಾದರ್

  • ಎಲ್ಲಾ ಶಾಲೆಗಳಲ್ಲಿ ಕಡ್ಡಾಯವಾಗಿ 6 ದಿನ ಮೊಟ್ಟೆ ವಿತರಿಸಬೇಕು: ಶಿಕ್ಷಣ ಇಲಾಖೆ ಆದೇಶ

    ಎಲ್ಲಾ ಶಾಲೆಗಳಲ್ಲಿ ಕಡ್ಡಾಯವಾಗಿ 6 ದಿನ ಮೊಟ್ಟೆ ವಿತರಿಸಬೇಕು: ಶಿಕ್ಷಣ ಇಲಾಖೆ ಆದೇಶ

    ಬೆಂಗಳೂರು: ರಾಜ್ಯದ ಎಲ್ಲಾ ಸರ್ಕಾರಿ ಶಾಲೆಗಳಲ್ಲಿ ಕಡ್ಡಾಯವಾಗಿ 6 ದಿನ ಮೊಟ್ಟೆ ವಿತರಿಸಬೇಕು ಎಂದು ಶಿಕ್ಷಣ ಇಲಾಖೆ ಆದೇಶ ಹೊರಡಿಸಿದೆ.

    1-10 ನೇ ತರಗತಿ ವರೆಗೂ ವಾರದ 6 ದಿನ ಮೊಟ್ಟೆ ಕೊಡುವ ಕಾರ್ಯಕ್ರಮ ಸರ್ಕಾರ ಘೋಷಣೆ ಮಾಡಿದೆ. ಆದರೆ, ಕೆಲವು ಶಾಲೆಗಳಲ್ಲಿ SDMC ಸೂಚನೆ ಮೇರೆಗೆ 3 ದಿನ ಮೊಟ್ಟೆ, 3 ದಿನ ಬಾಳೆಹಣ್ಣು ಕೊಡುವ ಕೆಲಸ ಆಗ್ತಿದೆ. ಸೋಮವಾರ ಮತ್ತು ಶನಿವಾರ ಮೊಟ್ಟೆ ಕೊಡದ ಬಾಳೆಹಣ್ಣು ಕೊಡ್ತಿದ್ದಾರೆ. ಇದನ್ನೂ ಓದಿ: ಶಿರಸಿ ನಗರಸಭೆಯಲ್ಲಿ 21 ಲಕ್ಷ ಮೌಲ್ಯದ ಐರನ್ ಪೈಪ್ ಕಳ್ಳತನ ಕೇಸ್‌ – ನಗರಸಭೆ ಕಮಿಷನರ್, ಮಾಜಿ ಅಧ್ಯಕ್ಷ ಸೇರಿ 7 ಆರೋಪಿಗಳು

    762 ಶಾಲೆಗಳಲ್ಲಿ ಪರಿಶೀಲನೆ ಮಾಡಿದಾಗ ಸುಮಾರು 568 ಶಾಲೆಗಳಲ್ಲಿ ಮೊಟ್ಟೆ ಕಡ್ಡಾಯವಾಗಿ ಕೊಡುತ್ತಿಲ್ಲದ ಬಗ್ಗೆ ದೂರುಗಳು ಬಂದಿವೆ. ಈ ಹಿನ್ನೆಲೆಯಲ್ಲಿ 568 ಶಾಲೆಗಳಿಗೆ ಭೇಟಿ ನೀಡಿ SDMC ಅವರಿಗೆ ತಿಳುವಳಿಕೆ ಹೇಳಬೇಕು ಎಂದು DDPIಗಳಿಗೆ ಶಿಕ್ಷಣ ಇಲಾಖೆ ಸೂಚನೆ ನೀಡಿದೆ.

    ಪಿಎಂ ಪೋಷಣ್‌ ಶಕ್ತಿ ನಿರ್ಮಾಣದ ನಿರ್ದೇಶಕರು ಈ ಆದೇಶ ಹೊರಡಿಸಿದ್ದಾರೆ. ಇದನ್ನೂ ಓದಿ: ನಮಗೆ ಕುಡಿಯೋಕೆ ನೀರು ಕೊಡಿ: ಸಿಎಂಗೆ ವಿದ್ಯಾರ್ಥಿನಿ ಪತ್ರ

  • ಸದ್ಯ ಶಾಲೆಗಳಿಗೆ ಯಾವುದೇ ಕೊರೊನಾ ಮಾರ್ಗಸೂಚಿ ಇಲ್ಲ: ಮಧು ಬಂಗಾರಪ್ಪ

    ಸದ್ಯ ಶಾಲೆಗಳಿಗೆ ಯಾವುದೇ ಕೊರೊನಾ ಮಾರ್ಗಸೂಚಿ ಇಲ್ಲ: ಮಧು ಬಂಗಾರಪ್ಪ

    ಬೆಂಗಳೂರು: ರಾಜ್ಯದಲ್ಲಿ ಕೊರೊನಾ (Corona) ಆತಂಕ ಏರ್ಪಟ್ಟಿದ್ದು, ಸದ್ಯಕ್ಕೆ ಶಾಲೆಗಳಿಗೆ ಯಾವುದೇ ಮಾರ್ಗಸೂಚಿ ಇಲ್ಲ ಎಂದು ಶಾಲಾ ಶಿಕ್ಷಣ ಸಚಿವ ಮಧು ಬಂಗಾರಪ್ಪ (Madhu Bangarappa) ತಿಳಿಸಿದ್ದಾರೆ.

    ಬೆಂಗಳೂರಿನಲ್ಲಿ (Bengaluru) ಪಬ್ಲಿಕ್ ಟಿವಿಯೊಂದಿಗೆ ಮಾತನಾಡಿದ ಅವರು, ಮೇ 29ರಿಂದ ಶಾಲೆಗಳು ಪ್ರಾರಂಭವಾಗುತ್ತಿದೆ. ಸದ್ಯದ ಪರಿಸ್ಥಿತಿಯಲ್ಲಿ ಯಾವುದೇ ಮಾರ್ಗಸೂಚಿ ಶಾಲೆಗಳಿಗೆ ಕೊಡೋದಿಲ್ಲ. ಆದರೆ ಎಚ್ಚರಿಕೆ, ಮುಂಜಾಗ್ರತಾ ಕ್ರಮವಹಿಸಲು ಸೂಚನೆ ನೀಡಲಾಗಿದೆ ಎಂದು ಹೇಳಿದ್ದಾರೆ. ಇದನ್ನೂ ಓದಿ: ಮತ್ತೊಮ್ಮೆ ಭಾರತದ ಜೊತೆ ಶಾಂತಿ ಮಾತುಕತೆಯ ಪ್ರಸ್ತಾಪ ಇರಿಸಿದ ಪಾಕ್‌

    ಆರೋಗ್ಯ ಇಲಾಖೆ ಮಾರ್ಗಸೂಚಿಗಳನ್ನ ಕೊಟ್ಟರೆ ಅದನ್ನ ಅನುಷ್ಠಾನಕ್ಕೆ ತರುತ್ತೇವೆ. ಆರೋಗ್ಯ ಇಲಾಖೆ ಮತ್ತು ಕೇಂದ್ರ ಸರ್ಕಾರ ಕೊಡುವ ಮಾರ್ಗಸೂಚಿಯನ್ನೂ ನಾವು ಜಾರಿ ಮಾಡುತ್ತೇವೆ. ಇಲ್ಲಿವರೆಗೆ ಆರೋಗ್ಯ ಇಲಾಖೆ ಯಾವುದೇ ಮಾರ್ಗಸೂಚಿ ಕೊಟ್ಟಿಲ್ಲ ಎಂದಿದ್ದಾರೆ. ಇದನ್ನೂ ಓದಿ: ಗಾಂಧಿನಗರದಲ್ಲಿ ಒಬ್ಬರಿಗೆ ಕೊರೊನಾ ಪಾಸಿಟಿವ್ – ಎರಡೇ ದಿನದಲ್ಲಿ ಕೋವಿಡ್ ಪಾಸಿಟಿವ್ ದರ ದುಪ್ಪಟ್ಟು ಏರಿಕೆ

    ಸೋಮವಾರ ಸಿಎಂ ಸಭೆ ಮಾಡಿದ್ದಾರೆ. ಸಿಎಂ ನಿರ್ದೇಶನ ಪಾಲನೆ ಮಾಡುತ್ತೇವೆ. ಮುಂಜಾಗ್ರತಾ ಕ್ರಮವಾಗಿ ಮಾಸ್ಕ್ ಹಾಕೋದು ಒಳ್ಳೆಯದು. ಆರೋಗ್ಯದಲ್ಲಿ ವ್ಯತ್ಯಾಸ ಇರೋ ಮಕ್ಕಳು ಶಾಲೆಗೆ ಬರೋದು ಬೇಡ ಎಂದು ಸೋಮವಾರ ನಡೆದ ಸಿಎಂ ಸಭೆಯಲ್ಲಿ ನಿರ್ಧಾರ ಆಗಿದೆ. ಶಿಕ್ಷಕರು, ಮಕ್ಕಳು, ಪೋಷಕರು ಎಚ್ಚರಿಕೆಯಿಂದ ಇರೋದು ಒಳ್ಳೆಯದು ಎಂದು ಹೇಳಿದ್ದಾರೆ.

  • ದಕ್ಷಿಣ ಕನ್ನಡ ಜಿಲ್ಲಾದ್ಯಂತ ಶಾಲಾ-ಕಾಲೇಜುಗಳಿಗೆ 2 ದಿನ ರಜೆ ಘೋಷಣೆ

    ದಕ್ಷಿಣ ಕನ್ನಡ ಜಿಲ್ಲಾದ್ಯಂತ ಶಾಲಾ-ಕಾಲೇಜುಗಳಿಗೆ 2 ದಿನ ರಜೆ ಘೋಷಣೆ

    – ಮೈಸೂರಿನಲ್ಲಿ ಜಿಲ್ಲೆಯ ಎಲ್ಲಾ ಅಂಗನವಾಡಿ ಕೇಂದ್ರಗಳಿಗೆ ರಜೆ

    ಮಂಗಳೂರು: ಮುಂಗಾರು ಮಳೆ (Monsoon Rain) ಕರ್ನಾಟಕ ಪ್ರವೇಶಿಸಿದೆ. ಅವಧಿ ಪೂರ್ವ ನೈಋತ್ಯ ಮುಂಗಾರು ಮಳೆ ರಾಜ್ಯಾದ್ಯಂತ ಖುಷಿ ತಂದಿದೆ. ಆದ್ರೆ ಕರಾವಳಿ ಭಾಗದಲ್ಲಿ ಸತತ 2ನೇ ದಿನವೂ ಭಾರಿ ಮಳೆಯಾಗುತ್ತಿದ್ದು ಜನಜೀವನ ಅಸ್ತವ್ಯಸ್ತಗೊಂಡಿದೆ. ಈ ಹಿನ್ನಲೆಯಲ್ಲಿ ದಕ್ಷಿಣ ಕನ್ನಡ (Dakshina Kannada) ಜಿಲ್ಲೆಯಾದ್ಯಂತ ಶಾಲಾ ಕಾಲೇಜುಗಳಿಗೆ 2 ದಿನ ರಜೆ ಘೋಷಿಸಲಾಗಿದೆ.

    ಮಳೆಯ ಆರ್ಭಟ ಮುಂದುವರಿದ ಹಿನ್ನೆಲೆಯಲ್ಲಿ ಜಿಲ್ಲೆಗೆ ರೆಡ್‌ ಅಲರ್ಟ್‌ ಘೋಷಣೆಯಾಗಿದ್ದು, ಮೇ 27 ಮತ್ತು ಮೇ 28ರಂದು ಜಿಲ್ಲಾದ್ಯಂತ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಇದನ್ನೂ ಓದಿ: ಕೇರಳ | ಮುಳುಗಿದ ಕಾರ್ಗೋ ಶಿಪ್‌ – ಅಲೆಯ ಅಬ್ಬರಕ್ಕೆ ತೇಲಿಬಂದ ಕಂಟೇನರ್‌; ಮುಟ್ಟದಂತೆ ಜನರಿಗೆ ಸೂಚನೆ

    ಜಿಲ್ಲೆಯ ಎಲ್ಲಾ ಸರ್ಕಾರಿ, ಖಾಸಗಿ ಹಾಗೂ ಅನುದಾನಿತ ಶಾಲಾ ಕಾಲೇಜುಗಳು, ಅಂಗನವಾಡಿ ಕೇಂದ್ರಗಳು ಪ್ರಾಥಮಿಕ, ಫೌಡಶಾಲೆ, ಪದವಿಪೂರ್ವ ಕಾಲೇಜುಗಳಿಗೆ ರಜೆ ಘೋಷಿಸಿ ಜಿಲ್ಲಾಡಳಿತ ರಜೆ ಘೋಷಿಸಿದೆ. ಇದನ್ನೂ ಓದಿ: ಮುಂಬೈನಲ್ಲಿ 107 ವರ್ಷದ ದಾಖಲೆ ಮುರಿದ ಮಳೆ – 75 ವರ್ಷದಲ್ಲಿ ಮೊದಲ ಬಾರಿಗೆ ಅವಧಿ ಪೂರ್ವ ಮುಂಗಾರು

    ಮೈಸೂರಲ್ಲಿ ಅಂಗನವಾಡಿ ಕೇಂದ್ರಗಳಿಗೆ ರಜೆ:
    ಇನ್ನೂ ಮೈಸೂರು ಜಿಲ್ಲೆಯಲ್ಲಿ ಗಾಳಿ-ಮಳೆ ಹಿನ್ನೆಲೆ ಮಂಗಳವಾರವೂ (ಮೇ 26) ಜಿಲ್ಲೆಯ ಎಲ್ಲಾ ಅಂಗನವಾಡಿ ಕೇಂದ್ರಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಮಕ್ಕಳ ಸುರಕ್ಷತೆ ಹಿತದೃಷ್ಟಿಯಿಂದ ಮುಂಜಾಗ್ರತಾ ಕ್ರಮ ಕೈಗೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿ ಲಕ್ಷ್ಮಿಕಾಂತರೆಡ್ಡಿ ತಿಳಿಸಿದ್ದಾರೆ.

  • ಕೋವಿಡ್ ಮಧ್ಯೆ ಶಾಲಾ ಕಾಲೇಜುಗಳು ಆರಂಭ – ಆರೋಗ್ಯ ಇಲಾಖೆಯಿಂದ ಹೈ ಅಲರ್ಟ್!

    ಕೋವಿಡ್ ಮಧ್ಯೆ ಶಾಲಾ ಕಾಲೇಜುಗಳು ಆರಂಭ – ಆರೋಗ್ಯ ಇಲಾಖೆಯಿಂದ ಹೈ ಅಲರ್ಟ್!

    – ಮುಂಜಾಗ್ರತಾ ಕ್ರಮ ಜಾರಿ ಸಾಧ್ಯತೆ

    ಬೆಂಗಳೂರು: ರಾಜ್ಯದಲ್ಲಿ ಕೋವಿಡ್ (Covid) ಸಂಖ್ಯೆ ಹೆಚ್ಚಾಗುತ್ತಿದೆ. ಇದರ ಮಧ್ಯೆ ಶಾಲಾ – ಕಾಲೇಜುಗಳು ಆರಂಭ ಆಗುತ್ತಿದ್ದು, ಪೋಷಕರಲ್ಲಿ ಆತಂಕ ಹೆಚ್ಚಿಸಿದೆ. ಶಾಲಾ-ಕಾಲೇಜುಗಳಲ್ಲಿ ಕೋವಿಡ್ ನಿಯಂತ್ರಣಕ್ಕೆ ಪ್ರಾಥಮಿಕ ಮುಂಜಾಗ್ರತಾ ಕ್ರಮ ಜಾರಿ ಆಗುವ ಸಾಧ್ಯತೆ ಇದೆ.

    ಈಗಾಗಲೇ ಕೆಲವೊಂದು ಖಾಸಗಿ ಶಾಲಾ-ಕಾಲೇಜ್‌ಗಳಲ್ಲಿ ಮುಂಜಾಗ್ರತಾ ಕ್ರಮ ರಿಲೀಸ್ ಆಗಿದ್ದು, ಶಿಕ್ಷಣ ಇಲಾಖೆಯಿಂದ ಪ್ರಾಥಮಿಕ ಮುಂಜಾಗ್ರತಾ ಕ್ರಮ ಜಾರಿಯಾಗುವ ಸಾಧ್ಯತೆ ಇದೆ. ಮೇ 29ರಿಂದ ಬಹುತೇಕ ಶಾಲೆಗಳು ಶುರುವಾಗುತ್ತಿದ್ದು, ಶಿಕ್ಷಣ ಇಲಾಖೆ, ಆರೋಗ್ಯ ಇಲಾಖೆ (Health Department) ಜೊತೆ ಮಾತನಾಡಿ ಮುಂಜಾಗ್ರತಾ ಕ್ರಮ ಕೈಗೊಳ್ಳುವ ಸಾಧ್ಯತೆ ಇದೆ. ಇದನ್ನೂ ಓದಿ: ಉತ್ತರಾಖಂಡ | ಭಾರೀ ಮಳೆಗೆ ಭೂಕುಸಿತ – ಹೆದ್ದಾರಿಯಲ್ಲಿ 6ಕಿ.ಮೀ ಟ್ರಾಫಿಕ್‌

    ಮಾರ್ಗಸೂಚಿ ಏನಿರಬಹುದು?
    * ಶಾಲಾ ಆವರಣದಲ್ಲಿ ಶಿಕ್ಷಕರು, ವಿದ್ಯಾರ್ಥಿಗಳು ಕಡ್ಡಾಯವಾಗಿ ಮಾಸ್ಕ್ ಧರಿಸುವುದು.
    * ಪ್ರಾರ್ಥನೆ, ಊಟದ ಸಮಯದಲ್ಲಿ ಸಾಮಾಜಿಕ ಅಂತರ ಕಾಯ್ದುಕೊಳ್ಳುವುದು.
    * ಆರೋಗ್ಯದಲ್ಲಿ ವ್ಯತ್ಯಾಸ ಇರೋ ವಿದ್ಯಾರ್ಥಿಗಳು, ಶಿಕ್ಷಕರು, ಸಿಬ್ಬಂದಿಗಳು ಶಾಲೆಗೆ ಬಾರದಂತೆ ಸೂಚನೆ ನೀಡುವುದು.
    * ಆರೋಗ್ಯ ತೊಂದರೆ ಇರೋ ವಿದ್ಯಾರ್ಥಿಗಳನ್ನು ಪ್ರತ್ಯೇಕ ಕೊಠಡಿಯಲ್ಲಿ ಇರಿಸುವುದು.
    * ಶಾಲಾ-ಕಾಲೇಜುಗಳಲ್ಲಿ ಸ್ಯಾನಿಟೈಸರ್ ಬಳಕೆ ಮಾಡುವುದು.
    * ಶಾಲಾ ಶೌಚಾಲಯ, ಕುಡಿಯುವ ನೀರಿನಲ್ಲಿ ಶುಚಿತ್ವ ಕಾಪಾಡಲು ಆದ್ಯತೆ ಕೊಡುವುದು.

    ಇನ್ನು ಈ ಬಗ್ಗೆ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಪ್ರತಿಕ್ರಿಯಿಸಿದ್ದು, ಶಾಲೆ ಆರಂಭವಾಗಲು ಇನ್ನೂ ಸಮಯ ಇದೆ. ಈಗಲೇ ನಿರ್ಧಾರ ಮಾಡಲ್ಲ. ಒಂದು ವಾರ ನೋಡಿಕೊಂಡು ಶಾಲೆ ವಿಚಾರದಲ್ಲಿ ಏನು ಮಾಡಬೇಕು ನೋಡುತ್ತೇವೆ ಎಂದಿದ್ದಾರೆ. ಇದನ್ನೂ ಓದಿ: ನೈತಿಕ ಮೌಲ್ಯಗಳ ಕೊರತೆ – ಆರ್‌ಜೆಡಿಯಿಂದ ಪುತ್ರ ತೇಜ್ ಪ್ರತಾಪ್‌ರನ್ನ ಹೊರದಬ್ಬಿದ ಲಾಲು ಪ್ರಸಾದ್‌ ಯಾದವ್‌

  • Hassan| ಶಾಲೆಗೆಂದು ಮೀಸಲಿಟ್ಟಿದ್ದ ಜಾಗ ವಕ್ಫ್ ಹೆಸರಿಗೆ – ಹೆಚ್‌ಕೆ ಸುರೇಶ್ ನೇತೃತ್ವದಲ್ಲಿ ಬೃಹತ್ ಪ್ರತಿಭಟನೆಗೆ ಕರೆ

    Hassan| ಶಾಲೆಗೆಂದು ಮೀಸಲಿಟ್ಟಿದ್ದ ಜಾಗ ವಕ್ಫ್ ಹೆಸರಿಗೆ – ಹೆಚ್‌ಕೆ ಸುರೇಶ್ ನೇತೃತ್ವದಲ್ಲಿ ಬೃಹತ್ ಪ್ರತಿಭಟನೆಗೆ ಕರೆ

    ಹಾಸನ: ಸರ್ಕಾರಿ ಶಾಲೆಗೆಂದು ಮೀಸಲಿಟ್ಟಿದ್ದ ಜಾಗವನ್ನು ವಕ್ಫ್ ಮಂಡಳಿ (Waqf Board) ಗುಳುಂ ಮಾಡಿದ ಘಟನೆ ಹಾಸನದಲ್ಲಿ (Hassan) ನಡೆದಿದೆ. ರಾಜ್ಯಾದ್ಯಂತ ವಕ್ಫ್ ವಿವಾದ ತೀವ್ರಗೊಂಡ ಬೆನ್ನಲ್ಲೇ ಹಾಸನದಲ್ಲಿ ಮೊದಲ ಪ್ರಕರಣ ಬೆಳಕಿಗೆ ಬಂದಿದೆ.

    ಬೇಲೂರು (Belur) ತಾಲೂಕಿನ, ಹಳೇಬೀಡು ಹೋಬಳಿ, ಘಟ್ಟದಹಳ್ಳಿ ಗ್ರಾಮದಲ್ಲಿ ಪ್ರಕರಣ ಬೆಳಕಿಗೆ ಬಂದಿದೆ. ಗ್ರಾಮದ ಸರ್ಕಾರಿ ಶಾಲೆಗೆಂದು ಭೂದಾನ ಮಾಡಿದ್ದ ಜಾಗ ವಕ್ಫ್ ಹೆಸರಿಗೆ ಮಾಡಲಾಗಿದೆ. ಘಟ್ಟದಹಳ್ಳಿ ಗ್ರಾಮದ ಶಾಲೆಗೆ 38 ಗುಂಟೆ ಜಾಗವನ್ನು ಭೂದಾನ ಮಾಡಲಾಗಿತ್ತು. ಸರ್ವೆ ನಂಬರ್ 435ರಲ್ಲಿ 38 ಗುಂಟೆ ಭೂಮಿಯನ್ನು ಸರ್ಕಾರಿ ಶಾಲೆಗೆ ದಾನ ಮಾಡಲಾಗಿತ್ತು. ಪಹಣಿಯಲ್ಲಿ ಭೂದಾನ ಶಾಲೆಗೋಸ್ಕರ ಎಂದು ನಮೂದಾಗಿತ್ತು. ಇದನ್ನೂ ಓದಿ: Raichur | ಎಗ್ಗಿಲ್ಲದೆ ಕಲಬೆರಕೆ ಸೇಂದಿ ಮಾರಾಟ- ಅಧಿಕಾರಿಗಳ ದಾಳಿ ವೇಳೆ 500 ಗ್ರಾಂ ಸಿಎಚ್ ಪೌಡರ್ ಜಪ್ತಿ

    ವಕ್ಫ್ ಭೂವಿವಾದದ ನಂತರ ಪಹಣಿ ಪರಿಶೀಲನೆ ನಡೆಸಿದಾಗ ವಕ್ಫ್ ಎಂದು ಹೆಸರು ನಮೂದಾಗಿರುವುದು ಬೆಳಕಿಗೆ ಬಂದಿದೆ. ಸರ್ಕಾರಿ ಶಾಲೆಗೆ ಭೂದಾನ ಮಾಡಿದ್ದ 38 ಗುಂಟೆ ಜಾಗವನ್ನು ವಕ್ಫ್ ಬೋರ್ಡ್ ನುಂಗಿದೆ. ಶಾಲೆಗೆಂದು ಮೀಸಲಿಟ್ಟಿದ್ದ ಜಾಗವನ್ನು ವಕ್ಫ್ ತನ್ನ ಹೆಸರಿಗೆ ಮಾಡಿಕೊಂಡಿದೆ. ವಕ್ಫ್ ಬೋರ್ಡ್ ವಿರುದ್ಧ ಶಾಸಕ ಹೆಚ್‌ಕೆ ಸುರೇಶ್ ಆಕ್ರೋಶ ವ್ಯಕ್ತಪಡಿಸಿದ್ದು, ಇಂದು ಬೇಲೂರಿನಲ್ಲಿ ಬೃಹತ್ ಪ್ರತಿಭಟನೆಗೆ ಕರೆ ನೀಡಿದ್ದಾರೆ. ಇದನ್ನೂ ಓದಿ: ಲಾರಿ, ಕಾರು ನಡುವೆ ಅಪಘಾತ- ದಂಪತಿ ಸ್ಥಳದಲ್ಲೇ ಸಾವು

  • ಕೊಡಗಿನಲ್ಲಿ ಧಾರಾಕಾರ ಮಳೆ; ಜು.18 ರಂದು ಶಾಲೆಗಳಿಗೆ ರಜೆ

    ಕೊಡಗಿನಲ್ಲಿ ಧಾರಾಕಾರ ಮಳೆ; ಜು.18 ರಂದು ಶಾಲೆಗಳಿಗೆ ರಜೆ

    – 2 ದಿನ ರೆಡ್ ಅಲರ್ಟ್ ಘೋಷಣೆ

    ಮಡಿಕೇರಿ: ಕೊಡಗು (Kodagu) ಜಿಲ್ಲೆಯಾದ್ಯಂತ ಧಾರಾಕಾರ ಮಳೆಯಾಗುತ್ತಿದ್ದು, ಜು.18 ಮತ್ತು 19 ರಂದು ರೆಡ್ ಅಲರ್ಟ್ ಘೋಷಿಸಲಾಗಿದೆ. ಸೋಮವಾರಪೇಟೆಯ ಶಾಂತಳ್ಳಿಯಲ್ಲಿ ಕಳೆದ 24 ಗಂಟೆಗಳಲ್ಲಿ ದಾಖಲೆಯ 10 ಇಂಚು ಮಳೆ ಸುರಿದಿದೆ. ಕಾವೇರಿಯ ಉಗಮ ಸ್ಥಾನ ತಲಕಾವೇರಿ ವ್ಯಾಪ್ತಿಯ ಭಾಗಮಂಡಲದಲ್ಲಿ 7 ಇಂಚು ಮಳೆಯಾಗಿದೆ.

    ಶಾಲೆಗಳಿಗೆ ರಜೆ
    ಜಿಲ್ಲೆಯಲ್ಲಿ ವ್ಯಾಪಕ ಮಳೆಯಾಗುತ್ತಿರುವ ಕಾರಣ ಜು.18 ರಂದು ಪದವಿ ಮತ್ತು ಸ್ನಾತಕೋತ್ತರ ಪದವಿ ಕಾಲೇಜುಗಳನ್ನು ಹೊರತು ಪಡಿಸಿ ಉಳಿದ ಎಲ್ಲಾ ಅಂಗನವಾಡಿ ಹಾಗೂ ಶಾಲಾ, ಕಾಲೇಜುಗಳಿಗೆ ಜಿಲ್ಲಾಧಿಕಾರಿ ವೆಂಕಟ್ ರಾಜಾ ಅವರು ರಜೆ ಘೋಷಿಸಿದ್ದಾರೆ. ಜನವರಿಯಿಂದ ಇಲ್ಲಿಯವರೆಗಿನ ಮಳೆ 1347.30 ಮಿ.ಮೀ, ಕಳೆದ ವರ್ಷ ಇದೇ ಅವಧಿಯಲ್ಲಿ 594.88 ಮಿ.ಮೀ ಮಳೆಯಾಗಿತ್ತು. ಇದನ್ನೂ ಓದಿ: ಉಡುಪಿಯ ಹಲವೆಡೆ ನೆರೆ ಪರಿಸ್ಥಿತಿ; ಹಾಸನ, ಕೊಡಗಿನನಲ್ಲಿ ಭೂಕುಸಿತದ ಅವಾಂತರ; ಕಪಿಲಾ ನದಿ ತೀರದಲ್ಲೂ ಪ್ರವಾಹ ಭೀತಿ!

    ಬ್ರಹ್ಮಗಿರಿಯ ತಪ್ಪಲಿನಲ್ಲಿ ಸುರಿಯುತ್ತಿರುವ ಭಾರೀ ಮಳೆಯಿಂದ ಏರ್ಪಟ್ಟಿರುವ ಕಾವೇರಿಯ ಪ್ರವಾಹದಿಂದ ನದಿ ಪಾತ್ರದ ಹಲ ಗ್ರಾಮಗಳ ಸಂಪರ್ಕ ಕಡಿತವಾಗಿದ್ದು, ಬಿರುಮಳೆಯಿಂದ ಜಿಲ್ಲೆಯಾದ್ಯಂತ ಅವಘಡಗಳ ಸರಮಾಲೆ ಮುಂದುವರೆದಿದೆ. ಭಾಗಮಂಡಲ ಮತ್ತು ತಲಕಾವೇರಿ ವ್ಯಾಪ್ತಿಯಲ್ಲಿ ಕಿರು ತೊರೆಗಳು ಉಕ್ಕಿ ಹರಿದು ಕಾವೇರಿಯ ಪ್ರವಾಹದ ಮಟ್ಟ ಮತ್ತಷ್ಟು ಹೆಚ್ಚಿದೆ. ಭಾಗಮಂಡಲದ ಅಯ್ಯಂಗೇರಿ ರಸ್ತೆ ಹಾಗೂ ಮಡಿಕೇರಿಯನ್ನು ಸಂಪರ್ಕಿಸುವ ರಸ್ತೆಯ ಮೇಲೆ ನೀರು ಹರಿಯುತ್ತಿದ್ದು, ಗ್ರಾಮೀಣರ ಬದುಕು ಅಸ್ತವ್ಯಸ್ತಗೊಂಡಿದೆ.

    ಸೇತುವೆ ಮುಳುಗಡೆ
    ದಕ್ಷಿಣ ಕೊಡಗಿನಲ್ಲಿ ವ್ಯಾಪಕ ಮಳೆಯಾಗುತ್ತಿದ್ದು, ಲಕ್ಷ್ಮಣ ತೀರ್ಥ ನದಿ ಉಕ್ಕಿ ಹರಿದು ಪ್ರವಾಹ ಏರ್ಪಟ್ಟಿದೆ. ಇದರ ಪರಿಣಾಮ ಶ್ರೀಮಂಗಲ-ನಾರಿ ಸೇತುವೆ ಮುಳುಗಡೆಯಾಗಿದ್ದು, ಸಮಪರ್ಕ ಕಡಿತಗೊಂಡಿದೆ. ಭಾರೀ ಮಳೆಯಿಂದ ಕಾವೇರಿ ನದಿ ಉಕ್ಕಿ ಹರಿಯುತ್ತಿದ್ದು, ಇದರ ಪರಿಣಾಮ ಮಡಿಕೇರಿ-ವಿರಾಜಪೇಟೆ ಮುಖ್ಯ ರಸ್ತೆಯ ಬೇತ್ರಿ ಸೇತುವೆ ಮೇಲೆ ನೀರು ಬರಲು ಇನ್ನು ಕೆಲವೆ ಅಡಿ ಬಾಕಿ ಉಳಿದಿದೆ. ಮಳೆಯ ಪ್ರಮಾಣ ಹೆಚ್ಚಿದಲ್ಲಿ ಸೇತುವೆ ಮುಳುಗಡೆಯಾಗುವ ಸಂಭವವಿದೆ. ಇದನ್ನೂ ಓದಿ: ಉತ್ತರ ಕನ್ನಡ ಜಿಲ್ಲೆಯ ಭೂಕುಸಿತ ದುರಂತ – ಜಿಲ್ಲಾಧಿಕಾರಿಯಿಂದ ಮಾಹಿತಿ ಪಡೆದ ಕೇಂದ್ರ ಸಚಿವ ಹೆಚ್‌ಡಿಕೆ

    ಕಾವೇರಿ ನದಿ ಪಾತ್ರದಲ್ಲಿ ಬರುವ ನಾಪೋಕ್ಲುವಿನಿಂದ ಮೂರ್ನಾಡುವಿಗೆ ಸಂಪರ್ಕ ಕಲ್ಪಿಸುವ ಮುಖ್ಯ ರಸ್ತೆಯ ಬೊಳಿಬಾಣೆಯಲ್ಲಿ, ರಸ್ತೆಯ ಮೇಲೆ 4 ಅಡಿಯಷ್ಟು ಪ್ರವಾಹದ ನೀರು ಆವರಿಸಿದ್ದು, ಸಂಪರ್ಕ ಸಂಪೂರ್ಣ ಕಡಿತವಾಗಿದೆ. ಚೆರಿಯಪರಂಬು- ಕಲ್ಲುಮೊಟ್ಟೆ ಸಂಪರ್ಕರಸ್ತೆ, ನಾಪೋಕ್ಲು -ಬಲಮುರಿ ಮಾರ್ಗದ ಮಕ್ಕಿಕಡವು ರಸ್ತೆ ಜಾಲಾವೃತಗೊಂಡು ಸಂಚಾರ ಸಂಪೂರ್ಣ ಸ್ಥಗಿತವಾಗಿದೆ.

    ಈ ಹಿನ್ನೆಲೆ ವಾಹನ ಸಂಚಾರ ನಾಪೋಕ್ಲು, ಕೊಟ್ಟಮುಡಿ, ಕೇಮಾಟ್, ಕುಯ್ಯಂಗೇರಿ, ಹೊದ್ದೂರು ಬಳಸು ಹಾದಿಯನ್ನು ಅವಲಂಬಿಸುವಂತಾಗಿದೆ. ನಾಪೋಕ್ಲು-ಕೊಟ್ಟಮುಡಿ ಬೆಟ್ಟಗೇರಿ ಮಡಿಕೇರಿ ರಸ್ತೆ ಸಂಚಾರಕ್ಕೆ ಮುಕ್ತವಾಗಿದೆ. ಮಳೆಯ ಅಬ್ಬರ ಇದೇ ರೀತಿ ಮುಂದುವರೆದರೆ ನಾಪೋಕ್ಲು- ಕೊಟ್ಟಮುಡಿ ಸಂಪರ್ಕ ರಸ್ತೆ ಸೇರಿದಂತೆ ನಾಪೋಕ್ಲು ವ್ಯಾಪ್ತಿಯ ಎಲ್ಲಾ ಪ್ರಮುಖ ರಸ್ತೆಗಳ ಸಂಚಾರ ಕಡಿತಗೊಳ್ಳುವ ಸಾಧ್ಯತೆ ಇದೆ.

  • ಕರಾವಳಿ ಜಿಲ್ಲೆಗಳಲ್ಲಿ ಭಾರೀ ಮಳೆ – ಕುಂದಾಪುರ, ಬ್ರಹ್ಮಾವರ ತಾಲೂಕಿನ ಶಾಲೆಗಳಿಗೆ ರಜೆ ಘೋಷಣೆ

    ಕರಾವಳಿ ಜಿಲ್ಲೆಗಳಲ್ಲಿ ಭಾರೀ ಮಳೆ – ಕುಂದಾಪುರ, ಬ್ರಹ್ಮಾವರ ತಾಲೂಕಿನ ಶಾಲೆಗಳಿಗೆ ರಜೆ ಘೋಷಣೆ

    ಉಡುಪಿ: ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಮಳೆಯ ಆರ್ಭಟ (Heavy Rain) ಹೆಚ್ಚಾಗಿದೆ. ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಪ್ರವಾಹ ಪರಿಸ್ಥಿತಿ ನಿರ್ಮಾಣ ಆಗಿದೆ. ಈ ಹಿನ್ನೆಲೆಯಲ್ಲಿ ಉಡುಪಿ (Udupi) ಜಿಲ್ಲೆಯ ಎರಡು ತಾಲೂಕುಗಳಲ್ಲಿ ಶಾಲೆಗಳಿಗೆ ರಜೆ ಘೋಷಿಸಲಾಗಿದೆ.

    ಉಡುಪಿ ಜಿಲ್ಲೆಯ ಕುಂದಾಪುರ (Kundapura), ಬ್ರಹ್ಮಾವರ (Brahmavara) ತಾಲೂಕಿನಲ್ಲಿ ಅಂಗನವಾಡಿ, ಪ್ರಾಥಮಿಕ ಶಾಲೆ, ಪ್ರೌಢಶಾಲೆ, ಪದವಿ ಪೂರ್ವ ವಿಭಾಗಕ್ಕೆ ರಜೆ (Holiday For School) ಘೋಷಿಸಲಾಗಿದೆ. ಪದವಿ, ಸ್ನಾತಕೊತ್ತರ ಪದವಿ, ಡಿಪ್ಲೊಮಾ, ಎಂಜಿನಿಯರಿಂಗ್, ಐಟಿಐ ವಿದ್ಯಾಸಂಸ್ಥೆಗಳು ಎಂದಿನಂತೆ ನಡೆಯಲಿವೆ. ಅಲ್ಲದೇ ಉಡುಪಿ, ಬೈಂದೂರು, ಕಾಪು, ಕಾರ್ಕಳ, ಹೆಬ್ರಿಯಲ್ಲಿ ಶಾಲಾ, ಕಾಲೇಜುಗಳು ಎಂದಿನಂತೆ ಕಾರ್ಯನಿರ್ವಹಿಸಲಿವೆ ಎಂದು ಸಂಬಂಧಪಟ್ಟ ಅಧಿಕಾರಿಗಳು ತಿಳಿಸಿದ್ದಾರೆ.

    ಪ್ರವಾಹ ಪರಿಸ್ಥಿತಿ ನಿರ್ಮಾಣ:
    ಮಳೆಯ ಆರ್ಭಟ ಹೆಚ್ಚಿದ ಹಿನ್ನೆಲೆಯಲ್ಲಿ ಅಂಕೋಲದ ಸೇರಿ ವಿವಿಧೆಡೆ ಮಳೆಗೆ ಮನೆ, ಸೇತುವೆ, ರಸ್ತೆಗಳು ಜಲಾವೃತವಾಗಿದೆ. ಹೊನ್ನಾವರದ ವರ್ನಕ್ಕೇರಿ ಬಳಿ ಹೆದ್ದಾರಿ ಮೇಲೆ ಗುಡ್ಡ ಕುಸಿದಿದ್ದು, ಸಂಚಾರಕ್ಕೆ ಅಡಚಣೆಯಾಗಿದೆ. ಹೊನ್ನಾವರದ ಗುಂಡಬಾಳ ನದಿ ಉಕ್ಕಿ ಹರಿದು, 50 ಮನೆಗಳಿಗೆ ನೀರು ನುಗ್ಗಿದೆ.

    ಮಳೆ ನೀರಿನೊಂದಿಗೆ ತೇಲಿಬಂತು ಹೆಬ್ಬಾವು:
    ಕದಂಬ ನೌಕಾನೆಲೆಯ ಕಾಂಪೌಂಡ್, ಅವೈಜ್ಞಾನಿಕ ಹೆದ್ದಾರಿ ಕಾಮಗಾರಿ ಕಾರಣ ಆರಗಾ ಗ್ರಾಮ ಜಲಾವೃತದ ಭೀತಿ ಎದುರಿಸ್ತಿದೆ. ಜನರ ರಕ್ಷಣೆಗೆ ಎನ್‌ಡಿಆರ್‌ಎಫ್, ಬೋಟ್ ನಿಯೋಜಿಸಲಾಗಿದೆ. ಈ ನಡುವೆ ಕಾರವಾರದ ಸೋನಾರವಾಡದಲ್ಲಿ ಮಳೆಯ ನೀರಿನೊಂದಿಗೆ 12 ಅಡಿ ಉದ್ದದ ಹೆಬ್ಬಾವು ಮನೆಯೊಳಕ್ಕೆ ತೇಲಿಬಂದ ದೃಶ್ಯವೂ ಕಂಡುಬಂದಿದೆ.

    ಇನ್ನು, ಉಡುಪಿಯಲ್ಲಿ ಸೌಪರ್ಣಿಕಾ ನದಿ ಮೈದುಂಬಿದೆ. ಬೈಂದೂರು ತಾಲೂಕಿನ ನಾವುಂದ ಬಡಾಕೆರೆ ಜಲಾವೃತವಾಗಿದೆ. 100ಕ್ಕೂ ಅಧಿಕ ಮನೆಗಳಿಗೆ ನೀರು ನುಗ್ಗಿದೆ. ಮಂಗಳೂರಿನ ಕೆತ್ತಿಕ್ಕಲ್‌ನಲ್ಲಿ ಗುಡ್ಡ ಕುಸಿಯುತ್ತಿದೆ. ಮಣ್ಣಿನ ದಿಬ್ಬ ರಸ್ತೆ ಮೇಲೆ ಬೀಳುವ ಆತಂಕ ಎದುರಾಗಿದೆ. ಪಶ್ಚಿಮಘಟ್ಟ ಪ್ರದೇಶದಲ್ಲಿಯೂ ಮಳೆ ಅಬ್ಬರಿಸುತ್ತಿದೆ. ಬೆಳಗಾವಿಯ ಸಪ್ತ ನದಿಗಳಿಗೆ ಜೀವ ಕಳೆ ಬಂದಿದೆ. ಗೋಕಾಕ್ ಫಾಲ್ಸ್‌ನಲ್ಲಿ ಜಲವೈಭವ ಕಂಡುಬರುತ್ತಿದೆ. ಬೆಳಗಾವಿ-ಸಾವಗಾಂವ ಜಿಲ್ಲಾ ಮುಖ್ಯರಸ್ತೆ ಬಿರುಕು ಬಿಟ್ಟಿರುವುದು ಕಂಡುಬಂದಿದೆ.

  • ರಾಮಮಂದಿರ ಉದ್ಘಾಟನೆಗೆ ರಜೆ ಕೊಡೋ ಬಗ್ಗೆ ಬಿಜೆಪಿಯವ್ರು ಹೇಳಿಕೊಡಬೇಕಿಲ್ಲ: ಡಿಕೆ ಶಿವಕುಮಾರ್

    ರಾಮಮಂದಿರ ಉದ್ಘಾಟನೆಗೆ ರಜೆ ಕೊಡೋ ಬಗ್ಗೆ ಬಿಜೆಪಿಯವ್ರು ಹೇಳಿಕೊಡಬೇಕಿಲ್ಲ: ಡಿಕೆ ಶಿವಕುಮಾರ್

    – ಸಿದ್ದರಾಮಯ್ಯ ಹೆಸರಲ್ಲಿ ರಾಮ ಇದ್ದಾನೆ. ನನ್ನ ಹೆಸರಲ್ಲಿ ಶಿವ ಇದ್ದಾನೆ ಎಂದ ಡಿಕೆಶಿ

    ಬೆಂಗಳೂರು: ರಾಮನ ಪ್ರತಿಷ್ಠಾಪನೆ ಕಾರ್ಯಕ್ರಮಕ್ಕೆ ಸರ್ಕಾರದಿಂದ ರಜೆ ಕೊಡೋದಿಲ್ಲ ಅಂತ ಡಿಸಿಎಂ ಡಿಕೆ ಶಿವಕುಮಾರ್ (DK Sivakumar) ಪರೋಕ್ಷವಾಗಿ ಸ್ಪಷ್ಟಪಡಿಸಿದ್ದಾರೆ.

    ರಾಮಲಲ್ಲಾ ಪ್ರಾಣಪ್ರತಿಷ್ಠಾಪನೆ ಕಾರ್ಯಕ್ರಮಕ್ಕೆ ರಜೆ ಘೋಷಣೆ ‌ಮಾಡಲು ಬಿಜೆಪಿಯಿಂದ (BJP) ಒತ್ತಾಯ ವಿಚಾರಕ್ಕೆ ಪ್ರತಿಕ್ರಿಯೆ ‌ನೀಡಿದ ಅವರು, ನಾವು ನಮ್ಮ ಭಕ್ತಿ, ನಮ್ಮ ಗೌರವ, ನಮ್ಮ ಧರ್ಮ ಪ್ರಚಾರಕ್ಕೆ ನಾವು ಏನು ಮಾಡಲ್ಲ. ನಮ್ಮ ಭಾವನೆ ಇದೆಯಲ್ಲ. ನಮ್ಮ ಮಂತ್ರಿಗಳೇ ಎಲ್ಲಾ ದೇವಸ್ಥಾನಗಳಲ್ಲಿ ಮಾಡಬೇಕಾದ ಆಚರಣೆಗಳಿಗೆ ಆದೇಶ ಹೊರಡಿಸಿದ್ದಾರೆ ಎಂದು ಹೇಳಿದ್ದಾರೆ.

    ಪೂಜೆ, ಪುನಸ್ಕಾರ ಏನು ಮಾಡಬೇಕೋ ಆ ಕೆಲಸ ಮಾಡ್ತಿದ್ದೇವೆ. ನಮ್ಮ ಪ್ರಾರ್ಥನೆಗೆ ಫಲ ನಮಗೆ ದೊರೆಯುತ್ತದೆ ಅನ್ನೋ ನಂಬಿಕೆಯಿದೆ. ಹೀಗಾಗಿ ಎಲ್ಲರೂ ಪ್ರಾರ್ಥನೆ ಮಾಡಿಕೊಳ್ಳಿ ಅಂತ ಹೇಳ್ತಿದ್ದೇವೆ ಎಂದರು. ಇದನ್ನೂ ಓದಿ: ಪ್ರಾಣಪ್ರತಿಷ್ಠೆ ಸಮಯಕ್ಕೆ ಮೈಸೂರಿನಲ್ಲೂ ವಿಶೇಷ ಪೂಜೆ – ಶ್ರೀರಾಮನಿಗೆ ಸಪ್ತ ನದಿಗಳ ನೀರಿನಿಂದ ಜಲಾಭೀಷೇಕ!

    ಸಿದ್ದರಾಮಯ್ಯ (Siddaramaiah) ಹೆಸರಲ್ಲಿ ರಾಮ ಇದ್ದಾನೆ. ನನ್ನ ಹೆಸರಲ್ಲಿ ಶಿವ ಇದ್ದಾನೆ. ನಮಗೆ ಯಾರೂ ಹೇಳಿಕೊಡಬೇಕಿಲ್ಲ. ಯಾರು ಒತ್ತಡ ಹಾಕೋದು ಬೇಕಿಲ್ಲ. ನಮ್ಮ ಕರ್ತವ್ಯ ನಾವು ಮಾಡ್ತೀವಿ. ರಾಜಕಾರಣದಲ್ಲಿ ಧರ್ಮ ಇರಬೇಕು. ಧರ್ಮದಲ್ಲಿ ರಾಜಕಾರಣ ಇರಬಾರದು ಎಂದು ತಿರುಗೇಟು ನೀಡಿದ್ದಾರೆ. ಇದನ್ನೂ ಓದಿ: ಸಿಎಂ ತವರಲ್ಲಿ ಶ್ರೀರಾಮನ ಹೆಸರಿನ ಲಕ್ಷ ದೀಪೋತ್ಸವಕ್ಕೆ ಅನುಮತಿ ರದ್ದು – ರಾಮಭಕ್ತರಿಂದ ಆಕ್ಷೇಪ