Tag: scorpio

  • ತಪಾಸಣೆ ವೇಳೆ ಪೊಲೀಸರಿಗೆ ಗುದ್ದಿದ ಕಾರು – ಓರ್ವ ಮಹಿಳಾ ಕಾನ್‌ಸ್ಟೆಬಲ್ ಸಾವು, ಇಬ್ಬರು ಅಧಿಕಾರಿಗೆ ಗಾಯ

    ತಪಾಸಣೆ ವೇಳೆ ಪೊಲೀಸರಿಗೆ ಗುದ್ದಿದ ಕಾರು – ಓರ್ವ ಮಹಿಳಾ ಕಾನ್‌ಸ್ಟೆಬಲ್ ಸಾವು, ಇಬ್ಬರು ಅಧಿಕಾರಿಗೆ ಗಾಯ

    ಪಾಟ್ನಾ: ವಾಹನ ತಪಾಸಣೆ ನಡೆಸುತ್ತಿದ್ದ ವೇಳೆ ವೇಗವಾಗಿ ಬಂದ ಸ್ಕಾರ್ಪಿಯೋ ಕಾರು ಪೊಲೀಸರಿಗೆ ಡಿಕ್ಕಿಯೊಡೆದ ಪರಿಣಾಮ ಓರ್ವ ಮಹಿಳಾ ಕಾನ್ಸ್‌ಟೆಬಲ್‌ (Woman Constable) ಸಾವನ್ನಪ್ಪಿದ್ದು, ಇಬ್ಬರು ಅಧಿಕಾರಿಗಳು ಗಾಯಗೊಂಡಿರುವ ಘಟನೆ ಪಾಟ್ನಾದ ಅಟಲ್ ಪಥ್‌ನಲ್ಲಿ (Atal Path) ನಡೆದಿದೆ.

    ಬುಧವಾರ ತಡರಾತ್ರಿ ಪಾಟ್ನಾದ (Patna) ಶ್ರೀಕೃಷ್ಣ ಪುರಿ ಪ್ರದೇಶದ ಅಟಲ್ ಪಥ್‌ನಲ್ಲಿ ಗಸ್ತಿನಲ್ಲಿದ್ದ ಪೊಲೀಸರ ತಂಡ ವಾಹನ ತಪಾಸಣೆ ನಡೆಸುತ್ತಿತ್ತು. ಶ್ರೀಕೃಷ್ಣ ಪುರಿ ಪೊಲೀಸ್ ಠಾಣೆಯ ಸಬ್-ಇನ್ಸ್‌ಪೆಕ್ಟರ್, ಸಹಾಯಕ ಸಬ್-ಇನ್ಸ್‌ಪೆಕ್ಟರ್ ಮತ್ತು ಮಹಿಳಾ ಕಾನ್‌ಸ್ಟೆಬಲ್ ಸ್ಥಳದಲ್ಲಿದ್ದರು. ಕಾರು ತಪಾಸಣೆ ನಡೆಸುವ ವೇಳೆ ವೇಗವಾಗಿ ಬಂದ ಮತ್ತೊಂದು ಕಾರು (Scorpio SUV) ತಪಾಸಣೆ ನಡೆಸುತ್ತಿದ್ದ ವಾಹನಕ್ಕೆ ಡಿಕ್ಕಿ ಹೊಡೆಡಿದೆ. ಪರಿಣಾಮ ಕಾನ್ಸ್‌ಟೆಬಲ್‌ ಇಬ್ಬರು ಅಧಿಕಾರಿಗಳು ಗಾಯಗೊಂಡಿದ್ದಾರೆ. ಇದನ್ನೂ ಓದಿ:  `ದಿ ಇಂಡಿಯಾ ಹೌಸ್ʼ ಸಿನಿಮಾ ಶೂಟಿಂಗ್‌ ಸೆಟ್‌ನಲ್ಲಿ ನೀರಿನ ಟ್ಯಾಂಕರ್‌ ಸ್ಫೋಟ – ಹಲವರಿಗೆ ಗಾಯ

    ಗಾಯಗೊಂಡ ಪೊಲೀಸರನ್ನ ತಕ್ಷಣ ಹತ್ತಿರದ ಆಸ್ಪತ್ರೆಗೆ ಸಾಗಿಸಲಾಯಿತು. ಆದ್ರೆ ಚಿಕಿತ್ಸಾ ಸಮಯದಲ್ಲಿ ಮಹಿಳಾ ಕಾನ್‌ಸ್ಟೆಬಲ್ ಸಾವನ್ನಪ್ಪಿದ್ದಾರೆ. ಉಳಿದ ಇಬ್ಬರು ಚೇತರಿಸಿಕೊಳ್ಳುತ್ತಿದ್ದಾರೆ ಎಂದು ಪಾಟ್ನಾ ಹಿರಿಯ ಪೊಲೀಸ್ ವರಿಷ್ಠಾಧಿಕಾರಿ ಅವ್ಕಾಶ್ ಕುಮಾರ್ ತಿಳಿಸಿದ್ದಾರೆ. ಇದನ್ನೂ ಓದಿ: ಮೋದಿ 11 ವರ್ಷದಲ್ಲಿ ಸಾಧನೆಗಳನ್ನ ಕಡಿದು ಕಟ್ಟೆ ಹಾಕಿದ್ದಾರೆ – ದೇಶದ ಭದ್ರತೆ, ರೈತರ ವಿಚಾರದಲ್ಲಿ ಕೇಂದ್ರ ಫೇಲ್: ಪ್ರದೀಪ್‌ ಈಶ್ವರ್‌

    ಅಪಘಾತದ ಬಳಿಕ ಸ್ಕಾರ್ಪಿಯೋ ಚಾಲಕ ಸ್ಥಳದಿಂದ ಪರಾರಿಯಾಗಿದ್ದಾನೆ. ಆದ್ರೆ ವಾಹನವನ್ನ ವಶಪಡಿಸಿಕೊಂಡಿದ್ದು, ಕಾರಿನಲ್ಲಿದ್ದ ಇಬ್ಬರನ್ನು ಪೊಲೀಸರು ಬಂಧಿಸಿದ್ದಾರೆ. ಚಾಲಕನಿಗಾಗಿ ಬಲೆ ಬೀಸಿದ್ದಾರೆ. ಇದನ್ನೂ ಓದಿ: ಭಯೋತ್ಪಾದನೆ ವಿರುದ್ಧದ ಹೋರಾಟದಲ್ಲಿ ಪಾಕ್‌ ಮಹಾನ್‌ ಪಾಲುದಾರ; ಪಾಕ್‌ ಹೊಗಳಿದ ಅಮೆರಿಕ

  • ಮನೆ ಮುಂದೆ ನಿಲ್ಲಿಸಿದ್ದ 14 ಲಕ್ಷ ಮೌಲ್ಯದ ಸ್ಕಾರ್ಪಿಯೋ ಕಾರು ಕಳ್ಳತನ

    ಮನೆ ಮುಂದೆ ನಿಲ್ಲಿಸಿದ್ದ 14 ಲಕ್ಷ ಮೌಲ್ಯದ ಸ್ಕಾರ್ಪಿಯೋ ಕಾರು ಕಳ್ಳತನ

    ಹಾವೇರಿ: ಮನೆ ಮುಂದೆ ನಿಲ್ಲಿಸಿದ್ದ 14 ಲಕ್ಷ ರೂಪಾಯಿ ಮೌಲ್ಯದ ಸ್ಕಾರ್ಪಿಯೋ ಕಾರು (Scorpio Car) ಕಳ್ಳತನ ಮಾಡಿರುವ ಘಟನೆ ಹಾವೇರಿಯ (Haveri) ಸಿದ್ದಾರೋಢ ಕಾಲೊನಿಯಲ್ಲಿ ನಡೆದಿದೆ.

    ಹಾಸನ ಮೂಲದ ಪ್ರಜ್ವಲ್ ಆರ್. ಎಂಬುವರಿಗೆ ಸೇರಿದ ಕಾರು ಎಂದು ಗುರುತಿಸಲಾಗಿದೆ. KA-04 NB-0449 ಸಂಖ್ಯೆಯ ಸ್ಕಾರ್ಪಿಯೋ ಕಾರನ್ನ ಕಳ್ಳರು ಕದ್ದೊಯ್ದಿದ್ದಾರೆ. ಇದನ್ನೂ ಓದಿ: ಗೆಳತಿಯೊಂದಿಗೆ ಲಿವ್‌ ಇನ್‌ನಲ್ಲಿರಲು ಮನೆಯವರ ವಿರೋಧ – ರೈಲ್ವೆ ಹಳಿಗೆ ಹಾರಿ ಯುವಕ ಆತ್ಮಹತ್ಯೆ

    ಹಾವೇರಿಯಲ್ಲಿ ಸೇಲ್ಸ್ ಎಕ್ಸಿಕ್ಯೂಟಿವ್ ಕೆಲಸ ಮಾಡುತ್ತಿದ್ದ ಪ್ರಜ್ವಲ್‌, ತಮ್ಮ ಮನೆಯ ಮುಂದೆ ಡೋರ್ ಲಾಕ್ ಮಾಡಿ ನಿಲ್ಲಿಸಿದ್ದರು. ಡೋರ್ ಲಾಕ್ ಮುರಿದು ಸ್ಕಾರ್ಪಿಯೋ ಕಾರನ್ನ ಡೈರೆಕ್ಟರ್ ಮಾಡಿ ಖದೀಮರು ಕಳ್ಳತನ ಮಾಡಿದ್ದಾರೆ. ಹಾವೇರಿ ನಗರ ಪೊಲೀಸ್ ಠಾಣೆಯಲ್ಲಿ (Haveri Police Station) ಪ್ರಕರಣ ದಾಖಲಾಗಿದೆ.  ಇದನ್ನೂ ಓದಿ: ಕಾರವಾರ | ನಡುರಸ್ತೆಯಲ್ಲೇ ನಗರಸಭೆ ಮಾಜಿ ಸದಸ್ಯನ ಬರ್ಬರ ಹತ್ಯೆ

  • Chikkaballapur| ಸಚಿವ ಡಾ.ಎಂಸಿ ಸುಧಾಕರ್ ನಿವಾಸದ ಬಳಿ ಹೊತ್ತಿ ಉರಿದ ಸ್ಕಾರ್ಪಿಯೋ ಕಾರು

    Chikkaballapur| ಸಚಿವ ಡಾ.ಎಂಸಿ ಸುಧಾಕರ್ ನಿವಾಸದ ಬಳಿ ಹೊತ್ತಿ ಉರಿದ ಸ್ಕಾರ್ಪಿಯೋ ಕಾರು

    ಚಿಕ್ಕಬಳ್ಳಾಪುರ: ಉನ್ನತ ಶಿಕ್ಷಣ ಸಚಿವ ಹಾಗೂ ಚಿಕ್ಕಬಳ್ಳಾಪುರ ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಂ.ಸಿ ಸುಧಾಕರ್ (M. C. Sudhakar) ನಿವಾಸದ ಸಮೀಪ ಸ್ಕಾರ್ಪಿಯೋ (Scorpio) ಕಾರಿಗೆ ಬೆಂಕಿ ತಗುಲಿದೆ.

    ಸಂಜೆ ಇದ್ದಕ್ಕಿದ್ದಂತೆ ನಿಲ್ಲಿಸಿದ ಕಾರಿಗೆ ಬೆಂಕಿ ಹೊತ್ತಿಕೊಂಡು ಧಗಧಗನೇ ಹೊತ್ತಿ ಉರಿದಿದೆ. ಕೂಡಲೇ ಅಕ್ಕ ಪಕ್ಕದವರು ಆಗ್ನಿಶಾಮಕ ದಳ ಸಿಬ್ಬಂದಿಗೆ ಮಾಹಿತಿ ನೀಡಿದ್ದು ಬೆಂಕಿ ನಂದಿಸಿದ್ದಾರೆ. ಇದನ್ನೂ ಓದಿ: ಕಡ್ಲೇಪುರಿಯಂತೆ ಮುಡಾ ಸೈಟ್ ಹಂಚಿಕೆ – 1962ರಲ್ಲಿ ವಶಪಡಿಸಿಕೊಂಡ ಭೂಮಿಗೆ 2023ರಲ್ಲಿ ಪರಿಹಾರ!

    ಚಿಂತಾಮಣಿ ನಗರ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಕಾರಿನ ನಂಬರ್ ಆಧರಿಸಿ ಮಾಲೀಕರ ವಿಳಾಸ ಪತ್ತೆಗೆ ಮುಂದಾಗಿದ್ದಾರೆ. ಇದನ್ನೂ ಓದಿ: ಪ್ರಜ್ವಲ್ ರೇವಣ್ಣ ವಿರುದ್ಧ ಅತ್ಯಾಚಾರ ಕೇಸ್‌; ಜಾಮೀನು ಕೋರಿ ಸುಪ್ರೀಂ ಕೋರ್ಟ್‌ಗೆ ಅರ್ಜಿ

  • ಬೆಂಗಳೂರಿನಲ್ಲಿ ಹೆಚ್ಚಾದ ರೋಡ್ ರೇಜ್ – ಶಾಲಾ ಬಸ್ ಮೇಲೆ ಪುಂಡರ ಅಟ್ಟಹಾಸ

    ಬೆಂಗಳೂರಿನಲ್ಲಿ ಹೆಚ್ಚಾದ ರೋಡ್ ರೇಜ್ – ಶಾಲಾ ಬಸ್ ಮೇಲೆ ಪುಂಡರ ಅಟ್ಟಹಾಸ

    ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ (Silicon City) ರೋಡ್ ರೇಜ್ ಪ್ರಕರಣಗಳು ಹೆಚ್ಚಾಗಿದ್ದು, ಶಾಲಾ ಬಸ್ ಮೇಲೆ ಅಟ್ಯಾಕ್ ಮಾಡಿರುವ ಘಟನೆ ಎಲೆಕ್ಟ್ರಾನಿಕ್ ಸಿಟಿಯಲ್ಲಿ ನಡೆದಿದೆ.

    ನಿನ್ನೆ (ಸೆ.16) ಸಂಜೆ ವೇಳೆ ಎಲೆಕ್ಟ್ರಾನಿಕ್ ಸಿಟಿಯಲ್ಲಿ (Electronic City) ಶಾಲಾ ಬಸ್ ಮೇಲೆ ಅಟ್ಯಾಕ್ ಮಾಡಿ ಪುಂಡರು ಅಟ್ಟಹಾಸ ಮೆರೆದಿದ್ದಾರೆ. ಈ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ.ಇದನ್ನೂ ಓದಿ: ಕೊಲೆ ಆರೋಪಿ ದರ್ಶನ್ ಸೆಲ್‌ಗೆ ಬರಲಿದೆ 32 ಇಂಚಿನ ಟಿವಿ

    KA 01 MB 5796 ವಾಹನ ನೋಂದಣಿ ಸಂಖ್ಯೆಯ ಸ್ಕಾರ್ಪಿಯೋದಲ್ಲಿದ್ದ 6-8 ಕ್ಕೂ ಹೆಚ್ಚು ದುಷ್ಕರ್ಮಿಗಳು ಶಾಲಾ ಬಸ್ ಮೇಲೆ ಅಟ್ಯಾಕ್ ಮಾಡಿದ್ದಾರೆ. ಬಸ್ ಕಿಟಕಿಯನ್ನು ಒಡೆಯುವ ಮೂಲಕ ಬಸ್‌ನಲ್ಲಿದ್ದ ಮಕ್ಕಳಿಗೆ ತೀವ್ರ ತೊಂದರೆ ನೀಡಿರುವ ದೃಶ್ಯಗಳು ಸಿಸಿಟಿವಿಯಲ್ಲಿ ಸೆರೆಯಾಗಿದೆ.

    ಶಾಲಾ ಬಸ್‌ಗಳ ಮೇಲೆಯೂ ರೋಡ್ ರೇಜ್ ಮಾಡುತ್ತಾರಾ? ಶಾಲಾ ಮಕ್ಕಳಿಗೂ ಬೆಂಗಳೂರು ಸುರಕ್ಷಿತವಾಗಿಲ್ವಾ ಎಂದು ಪೋಷಕರು ಹಾಗೂ ಸಾರ್ವಜನಿಕರು ಆಕ್ರೋಶ ಹೊರಹಾಕಿದ್ದಾರೆ. ಈ ಬಗ್ಗೆ ಸಾರ್ವಜನಿಕರು ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್ ಮಾಡಿ ಘಟನೆಗೆ ಅಸಮಾಧಾನ ವ್ಯಕ್ತಪಡಿಸಿದ್ದಾರೆ.ಇದನ್ನೂ ಓದಿ: ದಿವಾಳಿಯಾಗಿರುವ ಪಾಕಿಸ್ತಾನಕ್ಕೆ ಐಎಂಎಫ್‌ನಿಂದ ಸಿಗುತ್ತಾ ಬೂಸ್ಟರ್‌ ಡೋಸ್‌!

  • ರೇಣುಕಾಸ್ವಾಮಿ ಶವ ಸಾಗಾಟಕ್ಕೆ ಬಳಸಿದ್ದ ಸ್ಕಾರ್ಪಿಯೋ ಸೀಜ್

    ರೇಣುಕಾಸ್ವಾಮಿ ಶವ ಸಾಗಾಟಕ್ಕೆ ಬಳಸಿದ್ದ ಸ್ಕಾರ್ಪಿಯೋ ಸೀಜ್

    ಬೆಂಗಳೂರು: ಕೊಲೆಯ ಬಳಿಕ ರೇಣುಕಾಸ್ವಾಮಿ (Renukaswamy Murder Case) ಮೃತದೇಹ ಸಾಗಿಸಲು ಬಳಸಿದ್ದ ಸ್ಕಾರ್ಪಿಯೋ ಕಾರನ್ನು ಕಾಮಾಕ್ಷಿಪಾಳ್ಯ ಠಾಣೆ ಪೊಲೀಸರು ಸೀಜ್ ಮಾಡಿದ್ದಾರೆ. ಇದೀಗ ಶವ ಸಾಗಿಸಲು ನೆರವಾದ ಗ್ಯಾರೇಜ್ ಮಂಜನಿಗಾಗಿ ಪೊಲೀಸರು ತಲಾಶ್ ನಡೆಸುತ್ತಿದ್ದಾರೆ.

    ಕೆಎ 03 ಎಂಯು 8821 ನಂಬರ್ ನ ಕಾರು ಆರ್.ಆರ್.ನಗರ ದರ್ಶನ್ (Challenging Star Darshan) ಅಭಿಮಾನಿ ಸಂಘದ ಅಧ್ಯಕ್ಷನ ಮನೆ ಬಳಿ ನಿಂತಿತ್ತು. ಬುಧವಾರ ರಾತ್ರಿಯೇ ಕಾರು ವಶಕ್ಕೆ ಪಡೆದ ಪೊಲೀಸರು ಠಾಣೆಗೆ ತಂದಿದ್ದಾರೆ. ಈ ಕಾರು ಪುನಿತ್ ಎಂ.ಆರ್.ಎಂಬವರ ಹೆಸರಿನಲ್ಲಿದೆ. ಇದನ್ನೂ ಓದಿ: ದರ್ಶನ್ ವಿರುದ್ಧ ರೌಡಿ ಶೀಟ್? – ಗೃಹಸಚಿವ ಪರಮೇಶ್ವರ್ ಹೇಳಿದ್ದೇನು?

    ಚಿತ್ರದುರ್ಗದಿಂದ ರೇಣುಕಾಸ್ವಾಮಿಯನ್ನು ಜೂನ್ 8 ರಂದು ಡಿ ಬಾಸ್ ಗ್ಯಾಂಗ್ ಅಪಹರಿಸಿ ಬೆಂಗಳೂರಿಗೆ ಕರೆತಂದಿದೆ. ಬಳಿಕ ಪಟ್ಟಣಗೆರೆ ಶೆಡ್‍ನಲಿ ರೇಣುಕಾಸ್ವಾಮಿಗೆ ಚಿತ್ರಹಿಂಸೆ ನೀಡಲಾಗಿದೆ. ದೇಹಕ್ಕೆ ಸಿಗರೇಟ್‍ನಿಂದ ಸುಟ್ಟು, ಥಳಿಸಿ, ಮರ್ಮಾಂಗಕ್ಕೆ ಒದ್ದು ಭೀಕರವಾಗಿ ಹಲ್ಲೆಗೈದು ಕೊಲೆ ಮಾಡಿದೆ. ನಂತರ ಮೃತದೇಹ ಸಾಗಿಸಲು ಡಿ ಬಾಸ್‌ ಟೀಂ ಸಂಚು ರೂಪಿಸಿದೆ.

    ಆಗ ದರ್ಶನ್ 30 ಲಕ್ಷ ರೂ. ನೀಡುತ್ತೇನೆ. ಮೃತದೇಹವನ್ನು ಎಲ್ಲಾದರೂ ಬಿಸಾಕಿ ಎಂದು ತನ್ನ ಆಪ್ತ ಪ್ರದೋಶ್‌ಗೆ ಸೂಚಿಸಿದ್ದಾರೆ. ಹೀಗಾಗಿ ಪ್ರದೋಶ್ ಮತ್ತಿತರರು ಸೇರಿ ದೇಹವನ್ನು ಬಿಳಿ ಬಣ್ಣದ ಮಹೀಂದ್ರ ಸ್ಕಾರ್ಪಿಯೋ ಕಾರಿನಲ್ಲಿ ತೆಗೆದುಕೊಂಡು ಹೋಗಿ ಸುಮ್ಮನಹಳ್ಳಿಯಲ್ಲಿರುವ ಸತ್ವ ಅಪಾರ್ಟ್‍ಮೆಂಟ್ ಮುಂಭಾಗದ ಮೋರಿ ಬಳಿ ಎಸೆದು ಹೋಗಿದ್ದಾರೆ.

  • ಬೆಂಗಳೂರಿನಲ್ಲಿ ಸ್ಕಾರ್ಪಿಯೋ ಕಾರು ಹತ್ತಿಸಿ ಯುವಕನ ಕೊಲೆ

    ಬೆಂಗಳೂರಿನಲ್ಲಿ ಸ್ಕಾರ್ಪಿಯೋ ಕಾರು ಹತ್ತಿಸಿ ಯುವಕನ ಕೊಲೆ

    ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನ ಜೆಸಿ ನಗರದಲ್ಲಿ (JC Nagar) ಭೀಕರ ಕೊಲೆಯೊಂದು ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಸಿನಿಮಾ ಸ್ಟೈಲ್‍ನಲ್ಲಿ ಸ್ಕಾರ್ಪಿಯೋ (Scorpio) ಹತ್ತಿಸಿ ಯುವಕನನ್ನು ಹತ್ಯೆ ಮಾಡಲಾಗಿದೆ.

    ಮೃತನನ್ನು ಅಸ್ಗರ್ ಹಾಗೂ ಆರೋಪಿಯನ್ನು ಅಮ್ರಿನ್ ಎಂದು ಗುರುತಿಸಲಾಗಿದೆ. ಅಕ್ಟೋಬರ್ 20ರಂದು ನಡೆದ ಭೀಕರ ಹತ್ಯೆಯ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ಇದೀಗ 11 ದಿನಗಳ ಬಳಿಕ ಕೊಲೆ ರಹಸ್ಯ ಬಯಲಾಗಿದೆ. ಸ್ಕಾರ್ಪಿಯೋ ಕಾರಿನಿಂದ ಕೊಲೆ ಮಾಡುವ ದೃಶ್ಯ ಪಬ್ಲಿಕ್ ಟಿವಿಗೆ ಲಭ್ಯವಾಗಿದೆ.

    ಕೊಲೆಗೆ ಕಾರಣವೇನು..?: ಅಸ್ಗರ್ ಹಾಗೂ ಅಮ್ರಿನ್ ಪರಿಚಯಸ್ಥರು. ಅಸ್ಗರ್ ಸೆಕೆಂಡ್ ಹ್ಯಾಂಡ್ ಕಾರುಗಳನ್ನು ಮಾರಾಟ ಮಾಡುತ್ತಿದ್ದನು. ಅಂತೆಯೇ ಆರೋಪಿ, ಅಸ್ಗರ್ ಬಳಿ ಕಾರೊಂದನ್ನು ಖರೀದಿಸಿದ್ದರು. ಬಳಿಕ ನಾಲ್ಕು ಲಕ್ಷ ಹಣದ ವಿಚಾರಕ್ಕೆ ಆರೋಪಿ ಹಾಗೂ ಅಸ್ಗರ್ ಮಧ್ಯೆ ಜಗಳ ನಡೆದಿದೆ. ಈ ಗಲಾಟೆ ತಾರಕಕ್ಕೇರಿ ಅಸ್ಗರ್ ಮೇಲೆ ಆರೋಪಿ ಹಲ್ಲೆ ಮಾಡಿದ್ದನು. ಇದನ್ನೂ ಓದಿ: ಮುಕೇಶ್‌ ಅಂಬಾನಿಗೆ 3ನೇ ಬಾರಿಗೆ ಕೊಲೆ ಬೆದರಿಕೆ – ಬೇಡಿಕೆ ಮೊತ್ತ 400 ಕೋಟಿಗೆ ಏರಿಕೆ

    ಈ ಸಂಬಂಧ ಅಸ್ಗರ್, ಜೆಸಿ ನಗರ ಠಾಣೆಗೆ ದೂರು ನೀಡಿದ್ದ. ದೂರಿನ ಹಿನ್ನೆಲೆ ಜೆ.ಸಿ ನಗರ ಪೊಲೀಸರು ಆರೋಪಿ ವಿರುದ್ಧ 307 ಕೇಸ್ ಹಾಕಿದ್ದರು. ನಂತರ ಕೇಸ್ ವಾಪಸ್ ತೆಗೆದುಕೊಳ್ಳುವಂತೆ ಅಸ್ಗರ್‍ಗೆ ಆರೋಪಿ ಒತ್ತಡ ಹಾಕಿದ್ದ. ಈ ಸಂಬಂಧ ಫೋನ್ ಮಾಡಿ ಮಾತಾಡೋಣ ಅಂತಾ ಕರೆದಿದ್ದ. ಅಂತೆಯೇ ಮಾತನಾಡಲೆಂದು ಬಂದಿದ್ದ ಅಸ್ಗರ್ ಬಳಿಯೂ ಕೇಸ್ ವಾಪಸ್ ತಗೋ ಎಂದು ಅಮ್ರಿನ್ ಹೇಳಿದ್ದಾನೆ. ಈ ವೇಳೆ ಅಸ್ಗರ್, ಯಾವುದೇ ಕಾರಣಕ್ಕೂ ಕೇಸ್ ವಾಪಸ್ ತೆಗೆದುಕೊಳ್ಳಲ್ಲ ಅಂತಾ ಹೇಳಿ ಹೊರಟಿದ್ದ.

    ಅಮ್ರಿನ್ ಜೊತೆ ಮಾತನಾಡಲು ಬರುವಾಗ ಅಸ್ಗರ್ ತನ್ನ ಗೆಳೆಯನನ್ನು ಕರೆದುಕೊಂಡು ಬಂದಿದೆ. ಅಂತೆಯೇ ಜೊತೆಗಿದ್ದ ಗೆಳೆಯನ ಡ್ರಾಪ್ ಮಾಡಲು ಅಸ್ಗರ್ ಪಾಟರಿ ರಸ್ತೆಗೆ ಬಂದಿದ್ದ. ಈ ವೇಳೆ ಅಮ್ರಿನ್ ಸ್ಕಾರ್ಪಿಯೋ ಕಾರಿನಿಂದ ಬೈಕ್‍ಗೆ ಡಿಕ್ಕಿ ಹೊಡೆಸಿದ್ದಾನೆ. ಸ್ಪೀಡಾಗಿ ಬಂದು ಬೈಕ್‍ಗೆ ಡಿಕ್ಕಿ ಹೊಡೆದು ಎಸ್ಕೇಪ್ ಆಗಿದ್ದ. ಘಟನೆಯಲ್ಲಿ ಗಂಭೀರ ಗಾಯಗೊಂಡು ಅಸ್ಗರ್ ಸಾವನ್ನಪ್ಪಿದರೆ, ಆತನ ಸ್ನೇಹಿತನಿಗೆ ಕೈ ಕಾಲಿಗೆ ಗಂಭೀರ ಗಾಯಗಳಾಗಿವೆ.

    ಮೊದಲು ಆಕ್ಸಿಡೆಂಟ್ ಅಂತಾ ಪ್ರಕರಣ ದಾಖಲಿಸಿಕೊಂಡಿದ್ದ ಸಂಚಾರಿ ಪೊಲೀಸರು, ಅಸ್ಗರ್ ಗೆಳೆಯನ ಹೇಳಿಕೆ ಬಳಿಕ ಕೊಲೆ ವಿಚಾರ ಬೆಳಕಿಗೆ ಬಂದಿದೆ. ಹೀಗಾಗಿ ಪ್ರಕರಣ ಸಂಬಂಧ ಆರೋಪಿ ಅಮ್ರಿನ್ ಸೇರಿದಂತೆ ಇಬ್ಬರನ್ನು ಬಂಧಿಸಲಾಗಿದೆ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಬೈಕರ್ ಗುಂಪಿನೊಂದಿಗೆ ಮಾತಿನ ಚಕಮಕಿ – ಸವಾರನಿಗೆ ಬೇಕೆಂದು ಸ್ಕಾರ್ಪಿಯೋ ಡಿಕ್ಕಿ

    ಬೈಕರ್ ಗುಂಪಿನೊಂದಿಗೆ ಮಾತಿನ ಚಕಮಕಿ – ಸವಾರನಿಗೆ ಬೇಕೆಂದು ಸ್ಕಾರ್ಪಿಯೋ ಡಿಕ್ಕಿ

    ನವದೆಹಲಿ: ಬೈಕರ್ ಗುಂಪಿನೊಂದಿಗೆ ತೀವ್ರ ಮಾತಿನ ಚಕಮಕಿ ನಡೆದ ಹಿನ್ನೆಲೆ ಉದ್ದೇಶಪೂರ್ವಕವಾಗಿಯೇ ಸ್ಕಾರ್ಪಿಯೋ ಡ್ರೈವರ್, ಬೈಕ್ ಸವಾರನಿಗೆ ಡಿಕ್ಕಿ ಹೊಡೆದಿದ್ದಾನೆ. ವೀಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದ್ದು, ನೆಟ್ಟಿಗರು ಆಕ್ರೋಶ ಹೊರಹಾಕಿದ್ದಾರೆ.

    ದೆಹಲಿಯ ಅರ್ಜನ್ ಗಢ್ ಮೆಟ್ರೋ ನಿಲ್ದಾಣದ ಬಳಿ ಬೈಕ್ ರೈಡ್ ಮಾಡುತ್ತಿದ್ದ ಗುಂಪಿನೊಂದಿಗೆ ಸ್ಕಾರ್ಪಿಯೋ ಡ್ರೈವರ್ ಮಾತಿಗೆ ಮಾತು ಬೆಳೆಸಿ ಜಗಳವಾಡಲು ಮುಂದಾಗಿದ್ದಾನೆ. ಇದು ಅತಿರೇಕಕ್ಕೆ ಹೋಗಿದ್ದು, ಆಕ್ರೋಶಗೊಂಡ ಡ್ರೈವರ್ ಬೇಕೆಂದು ಬೈಕ್‍ಗೆ ಡಿಕ್ಕಿ ಹೊಡೆದಿದ್ದಾನೆ. ಘಟನೆಯ ಸಂಪೂರ್ಣ ವೀಡಿಯೋವನ್ನು ಬೈಕ್ ಗುಂಪಿನ ಸವಾರರೊಬ್ಬರು ಫೋನ್‍ನಲ್ಲಿ ಸೆರೆ ಹಿಡಿದಿದ್ದು, ಸೋಶಿಯಲ್ ಮೀಡಿಯಾದಲ್ಲಿ ಪೋಸ್ಟ್ ಮಾಡಿದ್ದಾರೆ. ಇದನ್ನೂ ಓದಿ: ಕೌಟುಂಬಿಕ ಕಲಹ: ಕೆರೆಗೆ ಹಾರಿದ ಒಂದೇ ಕುಟುಂಬದ ಮೂವರು ಮಹಿಳೆಯರು

    ಬೈಕರ್ ಅನುರಾಗ್ ಐ ಅಯ್ಯರ್ ಟ್ವೀಟ್‍ನಲ್ಲಿ, ಸ್ಕಾರ್ಪಿಯೋ ಕಾರ್ ಡ್ರೈವರ್ ನಮ್ಮ ಕೆಲವು ಸವಾರರನ್ನು ಕೊಲ್ಲುವುದಾಗಿ ಬೆಂದರಿಕೆ ಹಾಕಿದ್ದಾನೆ. ಅಲ್ಲದೇ ನಮ್ಮ ಸ್ನೇಹಿತನಿಗೆ ಬೇಕೆಂದು ಡಿಕ್ಕಿ ಹೊಡೆದಿದ್ದಾನೆ. ಈ ಘಟನೆಯಿಂದ ಯಾರಿಗೂ ತೀವ್ರವಾಗಿ ಗಾಯವಾಗಿಲ್ಲ ಎಂದು ಬರೆದು ವೀಡಿಯೋ ಟ್ವೀಟ್ ಮಾಡಿದ್ದಾರೆ.

    ಅನುರಾಗ್ ಅವರು ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್, ಪಿಎಂ ನರೇಂದ್ರ ಮೋದಿ ಮತ್ತು ದೆಹಲಿಯ ಡೆಪ್ಯುಟಿ ಕಮಿಷನರ್ ಆಫ್ ಪೊಲೀಸ್ ಅವರಿಗೆ ವೀಡಿಯೋ ಟ್ಯಾಗ್ ಮಾಡಿದ್ದು, ಇದಕ್ಕಾಗಿ ನಾವು ಮತ ಹಾಕುವುದಿಲ್ಲ ಮತ್ತು ತೆರಿಗೆ ಪಾವತಿಸುವುದಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಘಟನೆಯ ನಂತರ, ದೆಹಲಿ ಪೊಲೀಸರು ವಿಷಯದ ಬಗ್ಗೆ ಗಮನ ಹರಿಸಿದ್ದು, ತನಿಖೆ ನಡೆಸುತ್ತಿದ್ದಾರೆ. ಇದನ್ನೂ ಓದಿ:  ಅನುಭವ ಮಂಟಪ ದಾಖಲೆಗಳನ್ನು ಪುರಾತತ್ವ ಇಲಾಖೆ ಪರಿಶೀಲಿಸಲಿದೆ: ಬೊಮ್ಮಾಯಿ

    ಗಾಯಗೊಂಡ ಬೈಕ್ ಸವಾರನ ಸ್ನೇಹಿತ ಮಾಧ್ಯಮಗಳೊಂದಿಗೆ ಮಾತನಾಡಿದ್ದು, ನಾನು ನನ್ನ 8 ರಿಂದ 10 ಸ್ನೇಹಿತರೊಂದಿಗೆ ಗುರುಗ್ರಾಮ್‍ನಿಂದ ದೆಹಲಿಗೆ ಹಿಂದಿರುಗುತ್ತಿದ್ದೆ. ಕಾರ್ ಡ್ರೈವರ್ ನಮ್ಮ ಬಳಿ ಬಂದು ರಾಶ್ ಡ್ರೈವಿಂಗ್ ಪ್ರಾರಂಭಿಸಿದನು. ಆತ ನನ್ನ ಸ್ನೇಹಿತನಿಗೆ ಬೆದರಿಕೆ ಹಾಕಿ ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾನೆ. ಈ ಹಿನ್ನೆಲೆ ನನ್ನ ಸ್ನೇಹಿತರು ಸ್ವಲ್ಪ ನಿಧಾನವಾಗಿ ರೈಡ್ ಮಾಡುತ್ತಿದ್ದೆವು. ಅವನೇ ವೇಗವಾಗಿ ಮುಂದೆ ಬಂದು ನನ್ನ ಸ್ನೇಹಿತನಿಗೆ ಡಿಕ್ಕಿ ಹೊಡೆದಿದ್ದಾನೆ. ನಂತರ ಅಲ್ಲಿಂದ ಪರಾರಿಯಾಗಿದ್ದಾನೆ ಎಂದು ತಿಳಿಸಿದರು.

  • ವಾಜೆಗೇಟ್- ನದಿಯಲ್ಲಿ ಸಿಕ್ತು 2 ಸಿಪಿಯು, 2 ಹಾರ್ಡ್ ಡಿಸ್ಕ್, 2 ಸಿಸಿಟಿವಿ ಡಿವಿಆರ್

    ವಾಜೆಗೇಟ್- ನದಿಯಲ್ಲಿ ಸಿಕ್ತು 2 ಸಿಪಿಯು, 2 ಹಾರ್ಡ್ ಡಿಸ್ಕ್, 2 ಸಿಸಿಟಿವಿ ಡಿವಿಆರ್

    ಮುಂಬೈ: ಉದ್ಯಮಿ ಮುಕೇಶ್ ಅಂಬಾನಿ ಮನೆ ಬಳಿ ಸ್ಫೋಟಕ ಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ಭಾರೀ ತಿರುವು ಸಿಕ್ಕ ಬೆನ್ನಲ್ಲೇ ಇದೀಗ ಎನ್‍ಐಎ ಅಧಿಕಾರಿಗಳು ಸಾಕ್ಷ್ಯ ನಾಶದ ಕುರಿತು ಎನ್‍ಕೌಂಟರ್ ಸ್ಪೆಷಲಿಸ್ಟ್ ಸಚಿನ್ ವಾಜೆ ಅವರನ್ನು ಸ್ಥಳ ಪರಿಶೀಲನೆಗೆ ಕರೆದೊಯ್ದಿದ್ದರು. ಈ ವೇಳೆ ನದಿಯಲ್ಲಿ ಭಾರೀ ಪ್ರಮಾಣದ ಸಾಕ್ಷ್ಯ ಸಿಕ್ಕಿವೆ ಎಂಬ ಮಾಹಿತಿ ಲಭ್ಯವಾಗಿದೆ.

    ಬಾಂದ್ರಾದ ಮಿಥಿ ನದಿ ಬಳಿ ಎಲೆಕ್ಟ್ರಾನಿಕ್ ತುಣುಕುಗಳ ಪುರಾವೆಗಳನ್ನು ವಶಪಡಿಸಿಕೊಳ್ಳಲಾಗಿದೆ. ಸಾಕ್ಷ್ಯ ವಶಪಡಿಸಿಕೊಳ್ಳಲು ಎನ್‍ಐಎ ಅಧಿಕಾರಿಗಳು ಇಂದು ಮುಂಬೈ ಪೊಲೀಸ್‍ನಿಂದ ಅಮಾನತುಗೊಂಡ ಎಪಿಐ ಸಚಿನ್ ವಾಜೆ ಅವರನ್ನು ಮಿಥಿ ನದಿಯ ಸೇತುವೆ ಬಳಿ ಕರೆದೊಯ್ದಿದ್ದರು. ಈ ವೇಳೆ 11 ಈಜು ತಜ್ಞರಿಂದ 3 ಗಂಟೆಗೂ ಹೆಚ್ಚು ಕಾಲ ಶೋಧ ಕಾರ್ಯ ನಡೆಸಲಾಗಿದ್ದು, ಬಳಿಕ 2 ಸಿಸಿಟಿವಿ ಡಿವಿಆರ್‍ಗಳು, 2 ಸಿಪಿಯು, 2 ಹಾರ್ಡ್ ಡಿಸ್ಕ್ ಹಾಗೂ 2 ನಂಬರ್ ಪ್ಲೇಟ್‍ಗಳು ಪತ್ತೆಯಾಗಿವೆ. ಸಾಕ್ಷ್ಯ ನಾಶಪಡಿಸುವುದರ ಭಾಗವಾಗಿ ಸಚಿನ್ ವಾಜೆ ಸಹಚರ ಎಪಿಐ ರಿಯಾಜ್ ಕಾಜಿ ಈ ವಸ್ತುಗಳನ್ನು ನದಿಗೆ ಎಸೆದಿದ್ದನು ಎಂದು ತಿಳಿದುಬಂದಿದೆ.

    ಈಜು ತಜ್ಞರು ಲ್ಯಾಪ್‍ಟಾಪ್‍ನ್ನು ಸಹ ವಶಪಡಿಸಿಕೊಂಡಿದ್ದು, ಆದರೆ ಸ್ಕ್ರೀನ್ ಟ್ಯಾಮೇಜ್ ಆಗಿದೆ. ಪ್ರಿಂಟರ್ ಸೇರಿದಂತೆ ಹಲವು ವಸ್ತುಗಳನ್ನು ಸಹ ನದಿಗೆ ಎಸೆಯಲಾಗಿದೆ. ಅಲ್ಲದೆ ನದಿಗೆ ಎಸೆಯಲಾಗಿರುವ ಎರಡೂ ನಂಬರ್ ಪ್ಲೇಟ್‍ಗಳಲ್ಲಿ ಒಂದೇ ನಂಬರ್ ಇದೆ. ವಾಹನವನ್ನು ಒಂದು ವರ್ಷದ ಹಿಂದೆ ಔರಂಗಬಾದ್‍ನಿಂದ ಕಳ್ಳತನ ಮಾಡಲಾಗಿದೆ. ಈ ನಂಬರ್‍ನ್ನು ಆರ್‍ಟಿಒ ಆಗಲೇ ಬ್ಲ್ಯಾಕ್ ಲಿಸ್ಟ್‍ಗೆ ಸೇರಿಸಿದ್ದಾರೆ ಎಂಬ ಮಾಹಿತಿ ಸಹ ಲಭ್ಯವಾಗಿದೆ.

    ನಂಬರ್ ಪ್ಲೇಟ್ ಶಾಪ್ ಬಳಿ ಸಚಿನ್ ವಾಜೆ ಓಡಾಡಿರುವುದು ಸಹ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದ್ದು, ಸಸ್ಪೆಂಡ್ ಆಗಿರುವ ಎಪಿಐ ರಿಯಾಜ್ ಕಾಝಿ ನಂಬರ್ ಪ್ಲೇಟ್ ಅಂಗಡಿ ಪ್ರವೇಶಿಸುತ್ತಿರುವುದು ಹಾಗೂ ಮಾಲೀಕರೊಂದಿಗೆ ಮಾತನಾಡುವುದು ತಿಳಿದಿದೆ. ಅಲ್ಲದೆ ಅಂಗಡಿಯಿಂದ ಡಿವಿಡಿ ಹಾಗೂ ಕಂಪ್ಯೂಟರ್ ತೆಗೆದುಕೊಂಡು ಹೋಗುತ್ತಿರುವ ದೃಶ್ಯ ಸಹ ಸೆರೆಯಾಗಿದೆ. ಬಳಿಕ ಇದೆಲ್ಲವನ್ನೂ ಮಿಥಿ ನದಿಗೆ ಎಸೆಯಲಾಗಿದೆ. ಅಂಟಿಲಿಯಾದ ಬಳಿ ಸ್ಫೋಟಕ ಪತ್ತೆ ಹಾಗೂ ಬ್ಯುಸಿನೆಸ್ ಮ್ಯಾನ್ ಮನ್ಸುಖ್ ಹಿರಾನ್ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಈ ಹಿಂದೆ ಸಹ ರಿಯಾಜ್ ಕಾಝಿಗೆ ಎನ್‍ಐಎ ಹಾಗೂ ಮುಂಬೈ ಪೊಲೀಸ್‍ನ ಎಟಿಎಸ್ ನಿಂದ ಸಮನ್ಸ್ ನೀಡಲಾಗಿತ್ತು. ಸಚಿನ್ ವಾಜೆ ನಕಲಿ ನಂಬರ್ ಪ್ಲೇಟ್ ಪಡೆಯಲು ಕಾಝಿ ಸಹಾಯ ಮಾಡಿದ್ದಾನೆ ಎಂದು ಎಟಿಎಸ್ ಹಾಗೂ ಎನ್‍ಐಎ ಹಲವು ಬಾರಿ ಶಂಕೆ ವ್ಯಕ್ತಪಡಿಸಿವೆ.

    ಏನಿದು ಪ್ರಕರಣ?
    ಉದ್ಯಮಿ ಮುಖೇಶ್ ಅಂಬಾನಿ ಮನೆ ಮುಂದೆ ಸ್ಫೋಟಕ ಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ಎನ್‍ಕೌಂಟರ್ ಸ್ಪೆಷಲಿಸ್ಟ್ ಸಚಿನ್ ವಾಜೆ ಅವರನ್ನು ರಾಷ್ಟ್ರೀಯ ತನಿಖಾ ಸಂಸ್ಥೆ(ಎನ್‍ಐಎ) ಮಾರ್ಚ್ 14ರಂದು ಬಂಧಿಸಿದೆ. ಇದರ ಬೆನ್ನಲ್ಲೇ ಮುಂಬೈ ಪೊಲೀಸ್ ಇಲಾಖೆಯಿಂದ ಸಚಿನ್ ವಾಜೆ ಅವರನ್ನು ಅಮಾನತು ಸಹ ಮಾಡಲಾಗಿದೆ.

    ಅಂಬಾನಿ ಮನೆ ಬಳಿ ಫೆಬ್ರವರಿ 25 ರಂದು ಸ್ಕಾರ್ಪಿಯೋ ಕಾರಿನಲ್ಲಿ ಜಿಲೆಟಿನ್ ಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ಎನ್‍ಐಎ ಮುಂಬೈ ಪೊಲೀಸ್ ಅಧಿಕಾರಿ ಸಚಿನ್ ವಾಜೆ ಅವರನ್ನು ಎನ್‍ಐಎ ವಶಕ್ಕೆ ಪಡೆದು 12 ಗಂಟೆಗಳ ಕಾಲ ವಿಚಾರಣೆಗೆ ಒಳಪಡಿಸಿ ನಂತರ ನ್ಯಾಯಾಲಯಕ್ಕೆ ಹಾಜರು ಪಡಿಸಿತ್ತು. ನ್ಯಾಯಾಲಯದ ಆದೇಶದಂತೆ ಸಚಿನ್ ವಾಜೆ ಅವರನ್ನು ವಿಚಾರಣೆಗಾಗಿ ಮಾರ್ಚ್ 25ರ ವರೆಗೆ ಎನ್‍ಐಎ ವಶಕ್ಕೆ ಪಡೆದುಕೊಂಡಿತ್ತು.

    ಎನ್‍ಐಎ ವಕ್ತಾರರ ಪ್ರಕಾರ, “ಫೆಬ್ರವರಿ 25 ರಂದು ಕಾರ್ಮೈಕಲ್ ರಸ್ತೆ ಬಳಿ ಸ್ಫೋಟಕಗಳಿಂದ ತುಂಬಿದ್ದ ವಾಹನವನ್ನು ಇರಿಸುವಲ್ಲಿ ಸಚಿನ್ ವಾಜೆರವರ ಪಾತ್ರವಿರುವುದರಿಂದ ಸೆಕ್ಷನ್ 286 (ಸ್ಫೋಟಕ ವಸ್ತುವಿಗೆ ಸಂಬಂಧಿಸಿದಂತೆ ನಿರ್ಲಕ್ಷ್ಯದ ವರ್ತನೆ), 473 (ನಕಲಿ ಮುದ್ರೆಯನ್ನು ತಯಾರಿಸುವುದು ಅಥವಾ ಹೊಂದಿರುವುದು), 502 (2)(ಕ್ರಿಮಿನಲ್ ಬೆದರಿಕೆ), 120 ಬಿ ಅಡಿಯಲ್ಲಿ ಸಚಿನ್ ವಾಜೆರನ್ನು ಬಂಧಿಸಲಾಗಿದೆ ಎಂದು ತಿಳಿಸಿದ್ದರು.

    ಅಂಬಾನಿ ನಿವಾಸದ ಬಳಿ ಪತ್ತೆಯಾಗಿದ್ದ ಸ್ಕಾರ್ಪಿಯೋ ಕಾರಿನ ಮಾಲೀಕ ಥಾಣೆ ಉದ್ಯಮಿ ಮನ್ಸುಖ್ ಹಿರಾನ್ ಸಾವಿಗೆ ಸಂಬಂಧಿಸಿದಂತೆ ಸಚಿನ್ ವಾಜೆ ಅವರ ಪಾತ್ರವಿರುವ ಬಗ್ಗೆ ಅನುಮಾನ ವ್ಯಕ್ತವಾಗಿದೆ. ಈ ಕುರಿತಂತೆ ತನಿಖೆ ನಡೆಸಲಾಗುತ್ತಿದೆ ಎಂದು ವರದಿಯಾಗಿದೆ.

  • ಅಂಬಾನಿ ಮನೆ ಬಳಿ ನಿಲ್ಲಿಸಿದ್ದ ಕಾರು ಮಾಲೀಕ ನಿಗೂಢ ಸಾವು

    ಅಂಬಾನಿ ಮನೆ ಬಳಿ ನಿಲ್ಲಿಸಿದ್ದ ಕಾರು ಮಾಲೀಕ ನಿಗೂಢ ಸಾವು

    ಮುಂಬೈ: ಉದ್ಯಮಿ ಮುಕೇಶ್ ಅಂಬಾನಿ ನಿವಾಸದ ಮುಂದೆ ಕಾರು ನಿಲ್ಲಿಸಿದ್ದ ಪ್ರಕರಣಕ್ಕೆ ಟ್ವಿಸ್ಟ್ ಸಿಕ್ಕಿದ್ದು ಕಾರು ಮಾಲೀಕ ನಿಗೂಢವಾಗಿ ಸಾವನ್ನಪ್ಪಿದ್ದಾನೆ.

    ಜಿಲೆಟಿನ್ ಕಡ್ಡಿ ಇರಿಸಿದ್ದ ಸ್ಕಾರ್ಪಿಯೋ ಕಾರು ನಿಲ್ಲಿಸಿ, ಬೆದರಿಕೆ ಪತ್ರವನ್ನು ಸಹ ಇರಿಸಲಾಗಿತ್ತು. ಇದಕ್ಕೆ ಸಂಬಂಧಿಸಿದಂತೆ ಇದೀಗ ಆಘಾತಕಾರಿ ಬೆಳವಣಿಗೆ ನಡೆದಿದ್ದು, ಸ್ಕಾರ್ಪಿಯೋ ಕಾರ್ ಮಾಲೀಕ ಶವವಾಗಿ ಪತ್ತೆಯಾಗಿದ್ದಾನೆ.

    ಪ್ರಾಥಮಿಕ ವರದಿ ಪ್ರಕಾರ ಮನ್ಸುಕ್ ಹಿರೆನ್ ಥಾಣೆ ಕ್ರೀಕ್ ಬಳಿ ನಿಗೂಢವಾಗಿ ಸಾವನ್ನಪ್ಪಿದ್ದು, ಕಲ್ವಾ ಕ್ರೀಕ್‍ನಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ಎಂದು ಥಾಣೆ ಡಿಸಿಪಿ ಅನುಮಾನ ವ್ಯಕ್ತಪಡಿಸಿದ್ದಾರೆ. ಮುಂಬೈ ಪೊಲೀಸರು ಅಸಹಜ ಸಾವು ಅಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

    ಫೆಬ್ರವರಿ 25ರಂದು ಮುಕೇಶ್ ಅಂಬಾನಿ ಮನೆ ಬಳಿ ಜಿಲೆಟಿನ್ ಕಡ್ಡಿಗಳಿದ್ದ ಕಾರನ್ನು ನಿಲ್ಲಿಸಲಾಗಿತ್ತು. ಅಲ್ಲದೆ ಜೈಷ್-ಉಲ್-ಹಿಂದ್ ಇದರ ಹೊಣೆಯನ್ನು ಹೊತ್ತಿತ್ತು. ಭಯೋತ್ಪಾದನ ಸಂಘಟನೆಯು ಬಿಟ್‍ಕಾಯಿನ್ ಮೂಲಕ ಹಣಕ್ಕೆ ಬೇಡಿಕೆ ಇಟ್ಟಿತ್ತು.

    ಕಳೆದ ತಿಂಗಳು ನವದೆಹಲಿಯ ಇಸ್ರೇಲಿ ರಾಯಭಾರ ಕಚೇರಿಯ ಬಳಿ ನಡೆದ ಸ್ಫೋಟದ ಬಗ್ಗೆ ತನಿಖೆ ನಡೆಸಲು ರಾಷ್ಟ್ರೀಯ ತನಿಖಾ ಸಂಸ್ಥೆ(ಎನ್‍ಐಎ) ಇಸ್ರೇಲಿ ಗುಪ್ತಚರ ಸಂಸ್ಥೆ ಮೊಸಾದ್ ಜೊತೆ ಕೈ ಜೋಡಿಸಿದೆ. ಆದರೆ ಈ ವರೆಗೆ ಆರೋಪಿಗಳನ್ನು ಪತ್ತೆ ಹಚ್ಚಲು ಸಾಧ್ಯವಾಗಿಲ್ಲ ಎಂದು ಉಗ್ರ ಸಂಘಟನೆ ಟೆಲಿಗ್ರಾಂ ಮೂಲಕ ತಿಳಿಸಿತ್ತು.

    ಮಾರ್ಚ್ 1ರಂದು ಮತ್ತೆ ಹೇಳಿಕೆ ನೀಡಿ, ಈ ಘಟನೆಗೂ ನಮಗೂ ಯಾವುದೇ ಸಂಬಂಧವಿಲ್ಲ. ಜೈಷ್-ಉಲ್-ಹಿಂದ್ ಹೆಸರಿನಲ್ಲಿ ಹಂಚಿಕೊಂಡ ಹಿಂದಿನ ಸಂದೇಶ ನಕಲಿ ಎಂದು ಹೇಳಿತ್ತು.

    ಭಯೋತ್ಪಾದನಾ ಬೆದರಿಕೆ ಇದ್ದ ಹಿನ್ನೆಲೆಯಲ್ಲಿ ಈ ಪ್ರಕರಣದ ತನಿಖೆಯನ್ನು ರಾಷ್ಟ್ರೀಯ ತನಿಖಾ ದಳ(ಎನ್‍ಐಎ)ಕ್ಕೆ ವಹಿಸಬೇಕೆಂದು ಮಹಾರಾಷ್ಟ್ರದ ಮಾಜಿ ಸಿಎಂ ದೇವೇಂದ್ರ ಫಡ್ನವೀಸ್ ಆಗ್ರಹಿಸಿದ್ದಾರೆ.

    ಹಿರೆನ್ ಹೇಳಿದ್ದು ಏನು?
    ಈ ಬಗ್ಗೆ ಹೇಳಿಕೆ ನೀಡಿದ್ದ ಮನ್ಸೂಕ್ ಹಿರೆನ್, ವರ್ಷಕ್ಕೂ ಹೆಚ್ಚು ದಿನಗಳಿಂದ ಕಾರ್‍ನ್ನು ಬಳಸುತ್ತಿರಲಿಲ್ಲ. ಇತ್ತೀಚೆಗೆ ಕಾರ್‍ನ್ನು ಮಾರಬೇಕು ಎಂಬ ಉದ್ದೇಶದಿಂದ ಹೊರಗಡೆ ತೆಗೆದಿದ್ದೆ. ಆದರೆ ದಾರಿ ಮಧ್ಯೆ ಕಾರು ಕೆಟ್ಟು ನಿಂತಿತ್ತು. ಹೀಗಾಗಿ ಫೆಬ್ರವರಿ 16ರಂದು ಮುಲುಂದ್ ಏರೋ ಲಿಂಕ್ ರಸ್ತೆ ಬಳಿ ಪಾರ್ಕ್ ಮಾಡಿದೆ. ಬಳಿಕ ಮರುದಿನ ಸ್ಥಳಕ್ಕೆ ಆಗಮಿಸಿದಾಗ ಸ್ಕಾರ್ಪಿಯೋ ಕಾರನ್ನು ಯಾರೋ ಕದ್ದಿದ್ದರು ಎಂದು ಹಿರೆನ್ ಪೊಲೀಸರಿಗೆ ತಿಳಿಸಿದ್ದ. ಕಾರ್ ಕದ್ದಿರುವ ಬಗ್ಗೆ ಮನ್ಸುಕ್ ಹಿರೆನ್ ವಿಖ್ರೋಲಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದ.

  • ನೆಲಮಂಗಲ ಬಳಿ ಭೀಕರ ರಸ್ತೆ ಅಪಘಾತ- ಒಂದೇ ಕುಟುಂಬದ ಐವರು ಸ್ಥಳದಲ್ಲೇ ದುರ್ಮರಣ

    ನೆಲಮಂಗಲ ಬಳಿ ಭೀಕರ ರಸ್ತೆ ಅಪಘಾತ- ಒಂದೇ ಕುಟುಂಬದ ಐವರು ಸ್ಥಳದಲ್ಲೇ ದುರ್ಮರಣ

    ಬೆಂಗಳೂರು: ಸೋಮವಾರ ತಡರಾತ್ರಿ ಸಂಭವಿಸಿರುವ ಭೀಕರ ಅಪಘಾತದಲ್ಲಿ ಐವರು ಮೃತಪಟ್ಟಿರುವ ದಾರುಣ ಘಟನೆ ನಡೆದಿದೆ.

    ಬೆಂಗಳೂರು ಹೊರವಲಯ ನೆಲಮಂಗಲ ಸಮೀಪದ ಯಂಟಗಾನಹಳ್ಳಿ ಬಳಿ ಈ ದುರ್ಘಟನೆ ಸಂಭವಿಸಿದೆ. ಕೆಎಸ್‍ಆರ್‍ಟಿಸಿ ಐರಾವತ ಬಸ್ ಹಾಗೂ ಸ್ಕಾರ್ಪಿಯೋ ಕಾರು ನಡುವೆ ಅಪಘಾತ ಸಂಭವಿಸಿದ್ದು, ಕಾರಿನಲ್ಲಿದ್ದ ಮೂವರು ಪುರುಷರು, ಓರ್ವ ಮಹಿಳೆ, ಒಂದು ಬಾಲಕಿ ದಾರುಣ ಸಾವನ್ನಪ್ಪಿದ್ದಾರೆ.

    ಇನ್ನೂ ಧರ್ಮಸ್ಥಳದ ಮಂಜುನಾಥನ ದರ್ಶನ ಮುಗಿಸಿ ಹಾಸನ ಮಾರ್ಗವಾಗಿ ಬರುತ್ತಿದ್ದ ಕಾರು ಏಕಾಏಕಿ ಬಲ ಭಾಗದಿಂದ ಎಡಭಾಗಕ್ಕೆ ತಿರುಗಿಗೆ. ಈ ವೇಳೆ ಐರಾವತ ಬಸ್‍ಗೆ ಡಿಕ್ಕಿಯಾಗಿದೆ.

    ಕಾರು ಸಂಪೂರ್ಣ ಜಖಂಗೊಂಡರೆ ಐರಾವತ ಬಸ್, ರಾಷ್ಟ್ರೀಯ ಹೆದ್ದಾರಿ ಪಕ್ಕದಲ್ಲಿದ್ದ ಬಸ್ ನಿಲ್ದಾಣಕ್ಕೆ ನುಗ್ಗಿದೆ. ಬಸ್ ನಲ್ಲಿದ್ದ 35 ಮಂದಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಸ್ಥಳಕ್ಕೆ ಬೆಂಗಳೂರು ಗ್ರಾಮಾಂತರ ಎಎಸ್‍ಪಿ ಸುಜಿತ್ ಹಾಗೂ ನೆಲಮಂಗಲ ಟ್ರಾಫಿಕ್ ಪೊಲೀಸರು ಭೇಟಿ ಪರಿಶೀಲನೆ ನಡೆಸಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv