Tag: scotland

  • ಇದು ಚರಿತ್ರೆ ಸೃಷ್ಟಿಸೊ ಅವತಾರ – U19 ಮಹಿಳಾ T20 ವಿಶ್ವಕಪ್‌ನಲ್ಲಿ ಚೊಚ್ಚಲ ಶತಕ, ಭಾರತದ ತ್ರಿಶಾ ಗೊಂಗಡಿ ದಾಖಲೆ

    ಇದು ಚರಿತ್ರೆ ಸೃಷ್ಟಿಸೊ ಅವತಾರ – U19 ಮಹಿಳಾ T20 ವಿಶ್ವಕಪ್‌ನಲ್ಲಿ ಚೊಚ್ಚಲ ಶತಕ, ಭಾರತದ ತ್ರಿಶಾ ಗೊಂಗಡಿ ದಾಖಲೆ

    ಕೌಲಾಲಂಪುರ್‌: ಕ್ರಿಕೆಟ್‌ ಮೈದಾನದಲ್ಲಿ ಆಟಗಾರರು ದಿನವೂ ಒಂದೊಂದೇ ಯಶಸ್ವಿನ ಮೆಟ್ಟಿಲನ್ನು ಹತ್ತುತ್ತಲೇ ಇರುತ್ತಾರೆ. ಯಾವುದೇ ವಯೋಮಿತಿಯ ಕ್ರಿಕೆಟ್‌ ನಡೆದರೂ ಸಹ ಅಲ್ಲಿ ದಾಖಲೆ ಬರೆಯುವುದು ಕಟ್ಟಿಟ್ಟ ಬುತ್ತಿ. ಹಾಗೆಯೇ ಮಲೇಷ್ಯಾದಲ್ಲಿ ನಡೆಯುತ್ತಿರುವ ಅಂಡರ್‌-19 ಮಹಿಳಾ ಟಿ20 ವಿಶ್ವಕಪ್ ಟೂರ್ನಿಯಲ್ಲಿ ಭಾರತೀಯ ಮಹಿಳಾ ಕ್ರಿಕೆಟ್‌ ತಂಡದ ವನಿತೆ ವಿಶ್ವದಾಖಲೆ ಬರೆದಿದ್ದಾರೆ.

    ಇಂದು ಮಲೇಷ್ಯಾದ ಕೌಲಾಲಂಪುರ್‌ ಅಂತಾರಾಷ್ಟ್ರೀಯ ಕ್ರಿಕೆಟ್‌ ಅಂಗಳದಲ್ಲಿ ಸ್ಕಾಟ್‌ಲೆಂಡ್‌ ಅಂಡರ್‌-19 ಮಹಿಳಾ ತಂಡದ (Scotland Womens Team) ವಿರುದ್ಧ ನಡೆದ ಪಂದ್ಯದಲ್ಲಿ ಟೀಂ ಇಂಡಿಯಾ ಆಟಗಾರ್ತಿ ತ್ರಿಶಾ ಗೊಂಗಡಿ (Gongadi Trisha) ಸ್ಫೋಟಕ ಶತಕ ಸಿಡಿಸಿ ಮಿಂಚಿದ್ದಾರೆ. ಕೇವಲ 53 ಎಸೆತಗಳಲ್ಲೇ ಶತಕ ಸಿಡಿಸಿದ ತ್ರಿಶಾ ಗೊಂಗಡಿ ಅಂಡರ್‌-19 ಟಿ20 ವಿಶ್ವಕಪ್‌ ಇತಿಹಾಸದಲ್ಲಿ ವಿಶ್ವದಲ್ಲೇ ಮೊದಲ ಬಾರಿಗೆ ಶತಕ ಸಿಡಿಸಿದ ಸಾಧನೆಗೆ ಪಾತ್ರರಾಗಿದ್ದಾರೆ.

    ಟಾಸ್‌ ಸೋತು ಮೊದಲು ಬ್ಯಾಟಿಂಗ್‌ ಮಾಡಿದ ಟೀಂ ಇಂಡಿಯಾ ಪರ ಆರಂಭಿಕರಾಗಿ ಕಣಕ್ಕಿಳಿದ ಗೊಂಗಡಿ ಕೇವಲ 53 ಎಸೆತಗಳಲ್ಲೇ ಶತಕ ಸಿಡಿಸಿದರು. 186.44 ಸ್ಟ್ರೈಕ್‌ರೇಟ್‌ನಲ್ಲಿ ಬ್ಯಾಟ್‌ ಬೀಸಿದ ತ್ರಿಶಾ ತಾನು ಎದಿರಿಸಿದ 59 ಎಸೆತಗಳಲ್ಲಿ 13 ಬೌಂಡರಿ, 4 ಸಿಕ್ಸರ್‌ ಸೇರಿ 110 ರನ್‌ ಸಿಡಿಸಿ ಅಜೇಯರಾಗುಳಿದರು.

    ಇದರೊಂದಿಗೆ ಮತ್ತೋರ್ವ ಆರಂಭಿಕ ಆಟಗಾರ್ತಿ ಜಿ ಕಮಲಿನಿ (G Kamalini) 42 ಎಸೆತಗಳಲ್ಲಿ 9 ಬೌಂಡರಿಗಳೊಂದಿಗೆ ಜವಾಬ್ದಾರಿಯುತ 51 ರನ್‌ ಕೊಡುಗೆ ನೀಡಿದರು. ಉಳಿದಂತೆ ಸಾನಿಕಾ ಚಲ್ಕೆ 29 ರನ್‌ಗಳಿಸಿದ್ರೆ, ವೈಡ್‌, ನೋಬಾಲ್‌ನಿಂದಲೇ ಹೆಚ್ಚುವರಿ 18 ರನ್‌ ತಂಡಕ್ಕೆ ಸೇರ್ಪಡೆಯಾಯಿತು.

    209 ರನ್‌ಗಳ ಬೃಹತ್‌ ಮೊತ್ತದ ಗುರಿ ಬೆನ್ನಟ್ಟಿದ ಸ್ಕಾಟ್‌ಲೆಂಡ್‌ ಮಹಿಳಾ ತಂಡ 14 ಓವರ್‌ಗಳಲ್ಲಿ ಕೇವಲ 58 ರನ್‌ಗಳಿಗೆ ಸರ್ವಪತನ ಕಂಡಿತು. ಪರಿಣಾಮ ಭಾರತದ ವನಿತೆಯರು 150 ರನ್‌ಗಳ ಅಂತರದಲ್ಲಿ ಭರ್ಜರಿ ಗೆಲುವು ಕಂಡಿತು.

  • T20 World Cup: ಸ್ಕಾಟ್‌ಲೆಂಡ್‌ ಬಳಿಕ ಐರ್ಲೆಂಡ್‌ ಜೆರ್ಸಿಯಲ್ಲಿ ಮಿಂಚಿದ ಕರ್ನಾಟಕದ ‘ನಂದಿನಿ’ ಬ್ರ್ಯಾಂಡ್‌!

    T20 World Cup: ಸ್ಕಾಟ್‌ಲೆಂಡ್‌ ಬಳಿಕ ಐರ್ಲೆಂಡ್‌ ಜೆರ್ಸಿಯಲ್ಲಿ ಮಿಂಚಿದ ಕರ್ನಾಟಕದ ‘ನಂದಿನಿ’ ಬ್ರ್ಯಾಂಡ್‌!

    – 5 ವಿದೇಶಿ ತಂಡಗಳಿಗೆ ಭಾರತದ ಹಾಲು ಉತ್ಪನ್ನ ಸಂಸ್ಥೆಗಳಿಂದ ಪ್ರಾಯೋಕತ್ವ

    ನವದೆಹಲಿ: ಸ್ಕಾಟ್‌ಲೆಂಡ್‌ ಬಳಿಕ ತನಗೆ ಪ್ರಾಯೋಜಕತ್ವ ವಹಿಸಿರುವ ಕರ್ನಾಟಕ ಹಾಲು ಉತ್ಪಾದಕರ ಒಕ್ಕೂಟ (KMF) ಬ್ರ್ಯಾಂಡ್‌ ಲೋಗೋ ಹೊಂದಿದ ಹೊಸ ಜೆರ್ಸಿಯನ್ನು (Ireland Jersey) ಐರ್ಲೆಂಡ್‌ ಕ್ರಿಕೆಟ್‌ ತಂಡ ಅನಾವರಣಗೊಳಿಸಿದೆ. ಈ ಮೂಲಕ ವಿದೇಶಗಳಲ್ಲೂ ಕರ್ನಾಟಕದ ನಂದಿನಿ ಬ್ರ್ಯಾಂಡ್‌ ರಾರಾಜಿಸುವಂತಾಗಿದೆ.

    ವೆಸ್ಟ್‌ ಇಂಡೀಸ್‌ ಹಾಗೂ ಯುಎಸ್‌ಎ ಆತಿಥ್ಯದಲ್ಲಿ ಆರಂಭಗೊಂಡಿರುವ 2024ರ ಟಿ20 ವಿಶ್ವಕಪ್‌ ಟೂರ್ನಿಗಾಗಿ ಐರ್ಲೆಂಡ್‌ ಮತ್ತು ಸ್ಕಾಟ್‌ಲೆಂಡ್‌ ತಂಡಗಳಿಗೆ ಕರ್ನಾಟಕ ಹಾಲು ಉತ್ಪಾದಕರ ಒಕ್ಕೂಟ ಪ್ರಾಯೋಜಕತ್ವ ವಹಿಸಿದೆ. ಐರ್ಲೆಂಡ್‌ ಬಿಡುಗಡೆಗೊಳಿಸಿದ ಕಡು ಹಸಿರು ಜೆರ್ಸಿಯ ತೋಳಿನ ಮೇಲ್ಭಾಗದಲ್ಲಿ ಕನ್ನಡ ಮತ್ತು ಇಂಗ್ಲಿಷ್‌ ಎರಡೂ ಭಾಷೆಗಳಲ್ಲೂ ʻನಂದಿನಿʼ ಬ್ರ್ಯಾಂಡ್‌ (Nandini Brand) ಲೋಗೋವನ್ನ ಮುದ್ರಿಸಲಾಗಿದೆ. ಜೊತೆಗೆ ಕೋಚ್‌ಗಳಿಗೆ ವಿತರಿಸಲಾದ ಜೆರ್ಸಿಯಲ್ಲಿ ಎದೆಯ ಭಾಗದ ಮೇಲ್ಭಾಗದಲ್ಲಿ ದೊಡ್ಡ ಪ್ರಮಾಣದ ಲೋಗೋಗಳನ್ನ ಮುದ್ರಿಸಿರುವುದು ಕಂಡುಬಂದಿದೆ. ಇದನ್ನೂ ಓದಿ: ಬಾಂಗ್ಲಾ ವಿರುದ್ಧ ಟೀಂ ಇಂಡಿಯಾಗೆ 60 ರನ್‌ಗಳ ಭರ್ಜರಿ ಜಯ

    ಒಟ್ಟಿನಲ್ಲಿ ಕರ್ನಾಟಕದ ಮನೆ-ಮನಗಳಲ್ಲಿ ಹೆಸರುವಾಸಿಯಾಗಿದ್ದ ನಂದಿನಿ ಬ್ರ್ಯಾಂಡ್‌ ಇದೀಗ ವಿದೇಶಗಳಲ್ಲಿ ತನ್ನ ಕೀರ್ತಿಪತಾಕೆ ಹಾರಿಸುವತ್ತ ಮಹತ್ವದ ಹೆಜ್ಜೆಯನ್ನಿಟ್ಟಿದೆ. ಮೂಲಗಳ ಪ್ರಕಾರ, ಈ ಎರಡೂ ತಂಡಗಳ ಪ್ರಾಯೋಜಕತ್ವಕ್ಕೆ ಕೆಎಂಎಫ್‌ ತಲಾ 2.5 ಕೋಟಿ ರೂ. ವಿನಿಯೋಗಿಸಿದೆ ಎಂದು ತಿಳಿದುಬಂದಿದೆ. ಆದ್ರೆ ಈ ಬಗ್ಗೆ ಕೆಎಂಎಫ್‌ ಯಾವುದೇ ಅಧಿಕೃತ ಮಾಹಿತಿ ಹಂಚಿಕೊಂಡಿಲ್ಲ. ಇದನ್ನೂ ಓದಿ: ಭಾರತ vs ಪಾಕಿಸ್ತಾನ T20 ವಿಶ್ವಕಪ್ ಪಂದ್ಯಕ್ಕೆ ಬೆದರಿಕೆ ಕರೆ – ಕ್ರೀಡಾಂಗಣದಲ್ಲಿ ಭದ್ರತೆ ಹೆಚ್ಚಳ

    5 ವಿದೇಶಿ ತಂಡಗಳಿಗೆ ಭಾರತೀಯ ಸಂಸ್ಥೆ ಪ್ರಾಯೋಜಕತ್ವ:
    ಭಾರತದ ಅಮುಲ್‌ ಪ್ರಸಕ್ತ ಟಿ20 ವಿಶ್ವಕಪ್‌ (T20 World Cup) ಟೂರ್ನಿಯಲ್ಲಿ ಶ್ರೀಲಂಕಾ, ದಕ್ಷಿಣ ಆಫ್ರಿಕಾ ಹಾಗೂ ಯುಎಸ್‌ಎ ತಂಡಗಳನ್ನ ಪ್ರಾಯೋಜಿಸುತ್ತಿದ್ದರೆ, ನಂದಿನಿ ಸ್ಕಾಟ್‌ಲೆಂಡ್‌ ಹಾಗೂ ಐರ್ಲೆಂಡ್‌ ತಂಡಗಳಿಗೆ ಪ್ರಾಯೋಜಕತ್ವ ವಹಿಸಿದೆ. ಒಟ್ಟಿನಲ್ಲಿ ಭಾರತೀಯ ಎರಡು ಹಾಲು ಉತ್ಪನ್ನ ಸಂಸ್ಥೆಗಳು 5 ತಂಡಗಳಿಗೆ ಪ್ರಾಯೋಜಕತ್ವ ವಹಿಸುತ್ತಿರುವುದು ದೇಶದ ಮತ್ತೊಂದು ಹೆಗ್ಗಳಿಕೆಯಾಗಿದೆ.

    ನಂದಿನಿ ‌ಪ್ರಾಯೋಜಕತ್ವದ ಕುರಿತು ಪ್ರತಿಕ್ರಿಯೆ ನೀಡಿರುವ ಕ್ರಿಕೆಟ್ ಐರ್ಲೆಂಡ್‌ (Cricket Ireland) ಸಂಸ್ಥೆ ಮುಖ್ಯ ಹಣಕಾಸು ಅಧಿಕಾರಿ ಆಂಡ್ರ್ಯೂ, ಕರ್ನಾಟಕ ಹಾಲು ಉತ್ಪಾದಕರ ಒಕ್ಕೂಟದ ಪ್ರಾಯೋಕತ್ವವು ಸಂತಸ ತಂದಿದೆ. ಟಿ20 ವಿಶ್ವಕಪ್‌ ಟೂರ್ನಿಯಲ್ಲಿ ಅಧಿಕೃತ ಪ್ರಾಯೋಜಕರಾಗಿ ನಂದಿನಿಯನ್ನು ಘೋಷಿಸಲು ಸಂತೋಷವಾಗಿದೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ವಿಶ್ವದ ನಂ.1 ಮ್ಯಾಗ್ನಸ್‌ ಕಾರ್ಲ್‌ಸನ್‌ಗೆ ಸೋಲುಣಿಸಿದ ಗ್ರ್ಯಾಂಡ್‌ಮಾಸ್ಟರ್‌ ಪ್ರಜ್ಞಾನಂದ!

    ಇನ್ನೂ ನಂದಿನಿಯ ಮಾತೃಸಂಸ್ಥೆಯಾದ ಕೆಎಂಎಫ್‌ನ ವ್ಯವಸ್ಥಾಪಕ ನಿರ್ದೇಶಕ ಎಂ.ಕೆ ಜಗದೀಶ್ ಮಾತನಾಡಿ, ಟಿ20 ವಿಶ್ವಕಪ್ ಅಭಿಯಾನಕ್ಕಾಗಿ ಐರ್ಲೆಂಡ್ ಕ್ರಿಕೆಟ್ ತಂಡದೊಂದಿಗೆ ನಮ್ಮ ಪಾಲುದಾರಿಕೆಯನ್ನು ಘೋಷಿಸಲು ನಮಗೆ ತುಂಬಾ ಸಂತೋಷವಾಗಿದೆ. ನಂದಿನಿ, ಒಂದು ಬ್ರಾಂಡ್‌ನಂತೆ, ಶ್ರೇಷ್ಠತೆ ಮತ್ತು ಶುದ್ಧತೆಯನ್ನೂ ಪ್ರತಿನಿಧಿಸುತ್ತದೆ. ಕಳೆದ 40 ವರ್ಷಗಳಲ್ಲಿ, ನಾವು ಜಾಗತಿಕ ಉಪಸ್ಥಿತಿಗೆ ವಿಸ್ತರಿಸಿದ್ದೇವೆ. ಆದ್ರೆ ವಿಶ್ವಕಪ್‌ಗಾಗಿ ಐರ್ಲೆಂಡ್‌ ಕ್ರಿಕೆಟ್‌ ಸಂಸ್ಥೆಯೊಂದಿಗಿನ ನಮ್ಮ ಪ್ರಾಯೋಜಕತ್ವವು ಜಾಗತಿಕ ಕ್ರಿಕೆಟ್‌ ಅಭಿಮಾನಿಗಳೊಂದಿಗೆ ಸಂಪರ್ಕ ಸಾಧಿಸಲು ಅನುವು ಮಾಡಿಕೊಟ್ಟಿದೆ. ಈ ಮೂಲಕ ನಮ್ಮ ಬ್ರ್ಯಾಂಡ್ ಅನ್ನು ವಿಶ್ವದಾದ್ಯಂತ ಹೆಚ್ಚಿನ ದೇಶಗಳಿಗೆ ವಿಸ್ತರಿಸುವಲ್ಲಿ ಮಹತ್ವದ ಹೆಜ್ಜೆಯನ್ನಿಟ್ಟಿದೆ ಎಂದು ಹರ್ಷ ವ್ಯಕ್ತಪಡಿಸಿದ್ದಾರೆ.

  • ಟಿ20 ವಿಶ್ವಕಪ್‌: ಸ್ಕಾಟ್ಲೆಂಟ್‌ ತಂಡದ ಜೆರ್ಸಿಯಲ್ಲಿ ಕರ್ನಾಟಕದ ‘ನಂದಿನಿ’ ಬ್ರ್ಯಾಂಡ್‌ ಲೋಗೋ

    ಟಿ20 ವಿಶ್ವಕಪ್‌: ಸ್ಕಾಟ್ಲೆಂಟ್‌ ತಂಡದ ಜೆರ್ಸಿಯಲ್ಲಿ ಕರ್ನಾಟಕದ ‘ನಂದಿನಿ’ ಬ್ರ್ಯಾಂಡ್‌ ಲೋಗೋ

    ನವದೆಹಲಿ: ಟಿ20 ಕ್ರಿಕೆಟ್‌ ವಿಶ್ವಕಪ್‌ಗಾಗಿ (T20 World Cup 2024) ತನಗೆ ಪ್ರಾಯೋಜಕತ್ವ ನೀಡಿರುವ ಕರ್ನಾಟಕ ಹಾಲು ಒಕ್ಕೂಟದ ‘ನಂದಿನಿ’ (Nandini Brand) ಬ್ರ್ಯಾಂಡ್‌ ಲೋಗೋ ಇರುವ ಜೆರ್ಸಿಯನ್ನು ಸ್ಕಾಟ್ಲೆಂಡ್‌ (Scotland) ತಂಡ ಅನಾವರಣಗೊಳಿಸಿದೆ.

    ವೆಸ್ಟ್ ಇಂಡೀಸ್ ಮತ್ತು USA ನಲ್ಲಿ ನಡೆಯುವ ಪಂದ್ಯಾವಳಿ ಜೂ.2 ರಿಂದ ಆರಂಭವಾಗಲಿದೆ. ಸ್ಕಾಟ್ಲೆಂಡ್ ಪುರುಷರ ಪ್ಲೇಯಿಂಗ್ ಶರ್ಟ್‌ಗಳ ಎಡ ತೋಳಿನ ಮೇಲೆ ನಂದಿನಿ ಲೋಗೋ ಇರುತ್ತದೆ. ಲೋಗೋದಲ್ಲಿ ‘ನಂದಿನಿ’ ಎಂದು ಕನ್ನಡ ಮತ್ತು ಇಂಗ್ಲಿಷ್ ಎರಡರಲ್ಲೂ ಬರೆಯಲಾಗಿದೆ. ಇದನ್ನೂ ಓದಿ: IPL 2024: ಆಟಕ್ಕುಂಟು ಲೆಕ್ಕಕ್ಕಿಲ್ಲದ ಪಂದ್ಯದಲ್ಲಿ ಗೆದ್ದು ಬೀಗಿದ ಪಂಜಾಬ್‌ – ಕಿಂಗ್ಸ್‌ಗೆ 5 ವಿಕೆಟ್‌ಗಳ ಜಯ!

    ನಂದಿನಿ ಬ್ರಾಂಡ್‌ನಲ್ಲಿ (Nandini Milk) ತನ್ನ ಡೈರಿ ಉತ್ಪನ್ನಗಳನ್ನು ಮಾರಾಟ ಮಾಡುವ ಕರ್ನಾಟಕ ಹಾಲು ಉತ್ಪಾದಕರ ಒಕ್ಕೂಟ (KMF), ಟಿ20 ಕ್ರಿಕೆಟ್ ವಿಶ್ವಕಪ್‌ಗಾಗಿ (T20 World Cup 2024) ಸ್ಕಾಟ್ಲೆಂಡ್ ಮತ್ತು ಐರ್ಲೆಂಡ್ ತಂಡಗಳಿಗೆ ಪ್ರಾಯೋಜಕತ್ವ ನೀಡಿದೆ. ಪ್ರತಿ ತಂಡಕ್ಕೆ ಪ್ರಾಯೋಜಕತ್ವದ ಮೊತ್ತ ಸುಮಾರು 2.5 ಕೋಟಿ ಎಂದು ಕೆಎಂಎಫ್ ಮೂಲಗಳು ತಿಳಿಸಿವೆ.

    ಜೂನ್‌ 1 ರಿಂದ 18ರ ವರೆಗೆ ಗುಂಪು ಹಂತದ ಪಂದ್ಯಗಳು ನಡೆಯಲಿದೆ. ಜೂನ್‌ 19 ರಿಂದ 24ರ ವರೆಗೆ ಸೂಪರ್‌-8 ಪಂದ್ಯಗಳು, ಜೂನ್‌ 26 ಮತ್ತು ಜೂನ್‌ 27 ರಂದು ಸೆಮಿಫೈನಲ್‌ ಪಂದ್ಯಗಳು ನಡಯೆಲಿದ್ದು, ಜೂನ್‌ 29ರಂದು ಬಾರ್ಬಡೋಸ್ ಮೈದಾನದಲ್ಲಿ ಫೈನಲ್‌ ಪಂದ್ಯ ನಡೆಯಲಿದೆ. ಗುಂಪು ಹಂತದಲ್ಲಿ ಭಾರತ ಎದುರಿಸುವ 4 ಪಂದ್ಯಗಳ ಪೈಕಿ ಮೂರು ಪಂದ್ಯಗಳು ನ್ಯೂಯಾರ್ಕ್‌ ನಗರದಲ್ಲಿ, ಒಂದು ಪಂದ್ಯ ಫ್ಲೋರಿಡಾ ನಗರದಲ್ಲಿ ನಡೆಯಲಿದೆ. ಗುಂಪು ಹಂತದಲ್ಲಿ ಜೂನ್‌ 5 ರಂದು ಐರ್ಲೆಂಡ್‌ ವಿರುದ್ಧ, ಜೂನ್‌ 12 ರಂದು ಯುಎಸ್‌ಎ ವಿರುದ್ಧ, ಜೂನ್‌ 15 ರಂದು ಕೆನಡಾ ವಿರುದ್ಧ ಭಾರತ ತಂಡ ಸೆಣಸಲಿದೆ. ಇನ್ನೂ ಬಹು ನಿರೀಕ್ಷಿತ ಹೈವೋಲ್ಟೇಜ್‌ ಕದನದಲ್ಲಿ ಜೂನ್‌ 9 ರಂದು ಪಾಕಿಸ್ತಾನ ವಿರುದ್ಧ ನ್ಯೂಯಾರ್ಕ್‌ನ ಅಂಗಳದಲ್ಲಿ ಭಾರತ ಸೆಣಸಲಿದೆ. ಇದನ್ನೂ ಓದಿ: ಹೈವೋಲ್ಟೇಜ್ ಕದನ ವಾಷ್‌ಔಟ್‌ ಆಗುವ ಸಾಧ್ಯತೆ – ಆರ್‌ಸಿಬಿ ಅಭಿಮಾನಿಗಳಲ್ಲಿ ಹೆಚ್ಚಿದ ಆತಂಕ!

    ಯಾವ ಗುಂಪಿನಲ್ಲಿ-ಯಾವ ತಂಡಗಳು?
    ಗುಂಪು-ಎ:
    ಭಾರತ, ಪಾಕಿಸ್ತಾನ, ಐರ್ಲೆಂಡ್‌, ಕೆನಡಾ, ಯುಎಸ್‌ಎ

    ಗ್ರೂಪ್‌-ಬಿ:
    ಇಂಗ್ಲೆಂಡ್‌, ಆಸ್ಟ್ರೇಲಿಯಾ, ನಮೀಬಿಯಾ, ಸ್ಕಾಟ್‌ಲೆಂಡ್‌, ಒಮನ್‌

    ಗ್ರೂಪ್‌-ಸಿ:
    ನ್ಯೂಜಿಲೆಂಡ್‌, ವೆಸ್ಟ್‌ ಇಂಡೀಸ್‌, ಅಫ್ಘಾನಿಸ್ತಾನ, ಉಗಾಂಡ, ಪಪುವಾ ನ್ಯೂ ಗಿನಿಯಾ

    ಗ್ರೂಪ್‌-ಡಿ:
    ದಕ್ಷಿಣ ಆಫ್ರಿಕಾ, ಶ್ರೀಲಂಕಾ, ಬಾಂಗ್ಲಾದೇಶ, ನೆದರ್ಲೆಂಡ್ಸ್‌, ನೇಪಾಳ

  • ಟಿ20 ವಿಶ್ವಕಪ್‌: ಐರ್ಲೆಂಡ್‌, ಸ್ಕಾಟ್ಲೆಂಡ್‌ ತಂಡಗಳಿಗೆ ಕರ್ನಾಟಕದ ‘ನಂದಿನಿ’ ಪ್ರಯೋಜಕತ್ವ

    ಟಿ20 ವಿಶ್ವಕಪ್‌: ಐರ್ಲೆಂಡ್‌, ಸ್ಕಾಟ್ಲೆಂಡ್‌ ತಂಡಗಳಿಗೆ ಕರ್ನಾಟಕದ ‘ನಂದಿನಿ’ ಪ್ರಯೋಜಕತ್ವ

    ಬೆಂಗಳೂರು: ನಂದಿನಿ ಬ್ರಾಂಡ್‌ನಲ್ಲಿ (Nandini Milk) ತನ್ನ ಡೈರಿ ಉತ್ಪನ್ನಗಳನ್ನು ಮಾರಾಟ ಮಾಡುವ ಕರ್ನಾಟಕ ಹಾಲು ಉತ್ಪಾದಕರ ಒಕ್ಕೂಟ (KMF), ಟಿ20 ಕ್ರಿಕೆಟ್ ವಿಶ್ವಕಪ್‌ಗಾಗಿ (T20 World Cup 2024) ಸ್ಕಾಟ್ಲೆಂಡ್ ಮತ್ತು ಐರ್ಲೆಂಡ್ ತಂಡಗಳಿಗೆ ಪ್ರಾಯೋಜಕತ್ವ ನೀಡಿದೆ.

    ಇದೇ ಮೊದಲ ಬಾರಿಗೆ ಕ್ರಿಕೆಟ್‌ ತಂಡಗಳಿಗೆ ಕೆಎಂಎಫ್‌ ಪ್ರಾಯೋಜಕತ್ವ ನೀಡುತ್ತಿದೆ. ಇದು ಕರ್ನಾಟಕದ ಜನತೆಗೆ ಹೆಮ್ಮೆಯ ಸಂಗತಿ ಎಂದು ಕೆಎಂಎಫ್‌ ಅಧಿಕಾರಿಗಳು ಹೇಳುತ್ತಿದ್ದಾರೆ. ಇದನ್ನೂ ಓದಿ: ಟ್ರಾವಿಸ್ ಸ್ಪೋಟಕ ಬ್ಯಾಟಿಂಗ್‌ – ಡೆಲ್ಲಿ ವಿರುದ್ಧ ಹೈದರಾಬಾದ್‌ಗೆ 67 ರನ್‌ಗಳ ಭರ್ಜರಿ ಜಯ

    ಈ ಕುರಿತು ಮಾತನಾಡಿರುವ ಕೆಎಂಎಫ್‌ನ ವ್ಯವಸ್ಥಾಪಕ ಎಂ.ಕೆ.ಜಗದೀಶ್‌, ಏ.20 ರಂದು ಒಪ್ಪಂದ ಅಧಿಕೃತಗೊಂಡಿದೆ. ಸ್ಕಾಟ್ಲೆಂಡ್‌ ಮತ್ತು ಐರ್ಲೆಂಡ್‌ (Scotland and Ireland) ತಂಡಗಳ ಆಟಗಾರರ ಜೆರ್ಸಿಯ ತೋಳಿನ ಭಾಗದ ಮೇಲೆ ಕೆಎಂಎಫ್‌ ಲೋಗೋ ಇರಲಿದೆ ಎಂದು ತಿಳಿಸಿದ್ದಾರೆ.

    ಎರಡೂ ತಂಡಗಳ ಆಟಗಾರರು ನಂದಿನಿ ಉತ್ಪನ್ನಗಳ ಜಾಹೀರಾತು, ಸಾಮಾಜಿಕ ಜಾಲತಾಣಗಳಲ್ಲಿ ನಡೆಸುವ ಅಭಿಯಾನ, ಫೋಟೋಶೂಟ್‌ಗಳಲ್ಲಿ ಭಾಗವಹಿಸಲಿದ್ದಾರೆ. ವಿಶ್ವಕಪ್‌ ವೇಳೆ ಜಾಹೀರಾತುಗಳು ಪ್ರಸಾರಗೊಳ್ಳಲಿವೆ ಎಂದು ಮಾಹಿತಿ ನೀಡಿದ್ದಾರೆ. ಇದನ್ನೂ ಓದಿ: ಆರ್‌ಸಿಬಿ ಹಸಿರು ಅಭಿಯಾನ; ಬೆಂಗ್ಳೂರು ಕೆರೆಗಳಿಗೆ ಕಾಯಕಲ್ಪ ನೀಡಲು ಮುಂದಾದ ಫ್ರಾಂಚೈಸಿಗೆ ಭೇಷ್‌ ಎಂದ ಫ್ಯಾನ್ಸ್‌

    ಮಧ್ಯಪ್ರಾಚ್ಯ, ಸಿಂಗಾಪುರ, ಭೂತಾನ್‌, ಮ್ಯಾನ್ಮಾರ್‌ ಸೇರಿದಂತೆ ಅಂತಾರಾಷ್ಟ್ರೀಯ ಮಾರುಕಟ್ಟೆಗಳಲ್ಲಿ ಕೆಎಂಎಫ್‌ ಅಸ್ತಿತ್ವ ಹೊಂದಿದೆ. ವಿಶ್ವಕಪ್‌ ವೇಳೆ ಕೆಎಂಎಫ್‌ನ ಉತ್ಪನ್ನಗಳು ಅಮೆರಿಕದಲ್ಲಿ ಲಭ್ಯವಿರಲಿದೆ ಎಂದು ತಿಳಿಸಿದ್ದಾರೆ.

    T20 ಕ್ರಿಕೆಟ್ ವಿಶ್ವಕಪ್ 2024 ಜೂನ್ 1 ರಿಂದ 29 ರವರೆಗೆ ವೆಸ್ಟ್ ಇಂಡೀಸ್ ಮತ್ತು ಯುನೈಟೆಡ್ ಸ್ಟೇಟ್ಸ್ ಆತಿಥ್ಯ ವಹಿಸಲಿವೆ. ಈ ವರ್ಷದ ಟ್ವೆಂಟಿ-20 ಕ್ರಿಕೆಟ್ ಚಾಂಪಿಯನ್‌ಶಿಪ್‌ನಲ್ಲಿ ದಾಖಲೆಯ 20 ತಂಡಗಳಿವೆ. ಇದನ್ನೂ ಓದಿ: ರಾಹುಲ್‌ ಅಬ್ಬರದ ಆಟ – ಚೆನ್ನೈ ವಿರುದ್ಧ ಲಕ್ನೋಗೆ 8 ವಿಕೆಟ್‌ಗಳ ಭರ್ಜರಿ ಜಯ

  • ವೆಬ್‌ಸೈಟ್‌ಗೆ ಅರೆಬೆತ್ತಲೆ ಫೋಟೋ ಅಪ್‌ಲೋಡ್ ಮಾಡಿ ಸಿಕ್ಕಿಬಿದ್ದ ಶಿಕ್ಷಕಿ – ಶಾಲೆಗೆಲ್ಲಾ ಡಂಗೂರ ಸಾರಿದ ವಿದ್ಯಾರ್ಥಿ

    ವೆಬ್‌ಸೈಟ್‌ಗೆ ಅರೆಬೆತ್ತಲೆ ಫೋಟೋ ಅಪ್‌ಲೋಡ್ ಮಾಡಿ ಸಿಕ್ಕಿಬಿದ್ದ ಶಿಕ್ಷಕಿ – ಶಾಲೆಗೆಲ್ಲಾ ಡಂಗೂರ ಸಾರಿದ ವಿದ್ಯಾರ್ಥಿ

    ಎಡಿನ್ಬರ್ಗ್: ಫಿಸಿಕ್ಸ್ ಶಿಕ್ಷಕಿಯೊಬ್ಬರು (Physics Teacher) ಯಡವಟ್ಟು ಮಾಡಿಕೊಂಡು ಅಮಾನತಾಗಿರುವ ಘಟನೆ ಸ್ಕಾಟ್‌ಲ್ಯಾಂಡ್‌ನಲ್ಲಿ (Scotland) ನಡೆದಿದೆ.

    ಕಿರ್ಸ್ಟಿ ಬುಕಾನ್ ಎಂಬ ಶಿಕ್ಷಕಿಯೊಬ್ಬರು (Teacher) ಅರೆಬೆತ್ತಲೆ ಫೋಟೋವನ್ನು ವೆಬ್‌ಸೈಟ್‌ನಲ್ಲಿ (Website) ಅಪ್ಲೋಡ್ ಮಾಡಿ ತನ್ನ ವಿದ್ಯಾರ್ಥಿಯೊಬ್ಬನಿಗೆ ಸಿಕ್ಕಿ ಬಿದ್ದಿದ್ದಾಳೆ. ಬಳಿಕ ಆ ವಿದ್ಯಾರ್ಥಿ ಅರೆಬೆತ್ತಲೆ ಫೋಟೋ ವಿಚಾರವನ್ನು ಶಾಲೆಗೆಲ್ಲಾ ಡಂಗೂರ ಸಾರಿದ್ದಾನೆ. ಈ ವಿಚಾರ ಆಡಳಿತ ಮಂಡಳಿ ಗಮನಕ್ಕೆ ಬಂದು ಶಿಕ್ಷಕಿಯನ್ನು ಅಮಾನತು ಮಾಡಿದೆ. ಇದನ್ನೂ ಓದಿ: ನನ್ನ ಸ್ನೇಹಿತ ಮೋದಿಯನ್ನು ನಂಬುತ್ತೇನೆ: ಫ್ರೆಂಚ್ ಅಧ್ಯಕ್ಷ

    ಕಿರ್ಸ್ಟಿ ಬುಕಾನ್ ಸ್ಕಾಟ್‌ಲ್ಯಾಂಡ್‌ನ (Scotland) ಬ್ಯಾನರ್ಮನ್ ಹೈಸ್ಕೂಲ್‌ನಲ್ಲಿ ಫಿಸಿಕ್ಸ್ ಟೀಚರ್ ಆಗಿ ಕೆಲಸ ಮಾಡುತ್ತಿದ್ದಳು. ಹಗಲು ಹೊತ್ತಿನಲ್ಲಿನ ಈಕೆಯ ಕೆಲಸಕ್ಕೂ ರಾತ್ರಿಯ ಕೆಲಸಕ್ಕೂ ಸಂಬಂಧವೇ ಇರಲಿಲ್ಲ. ಇತ್ತ ಬೆಳಗ್ಗೆ ಶಾಲೆಯಲ್ಲಿ ಪಾಠ ಮುಗಿಸಿ ಬರುತ್ತಿದ್ದ ಶಿಕ್ಷಕಿ, ಸಂಜೆ ಬೇರೆಯದ್ದೇ ಪಾಠ ಮಾಡುತ್ತಿದ್ದಳು. ಪ್ರತಿದಿನ ರಾತ್ರಿ ತನ್ನ ಬೆತ್ತಲೆ ಫೋಟೋವನ್ನು ವಿವಿಧ ವೆಬ್‌ಸೈಟ್‌ಗಳಲ್ಲಿ ಅಪ್ಲೋಡ್ ಮಾಡುತ್ತಿದ್ದಳು. ಅಲ್ಲದೇ ವಿವಿಧ ವೆಬ್‌ಸೈಟ್‌ಗಳಿಗಾಗಿ ಅರೆಬೆತ್ತಲೆ ಅವತಾರದಲ್ಲಿ ಫೋಟೋಶೂಟ್ ಕೂಡ ಮಾಡಿಸಿಕೊಂಡಿದ್ದಳು. ಇದರಿಂದ ದೊಡ್ಡ ಮೊತ್ತದ ಆದಾಯ ಗಳಿಸುತ್ತಿದ್ದಳು. ಇದನ್ನೂ ಓದಿ: ಕಿರಿಕಿರಿ ಎಂದು ರೋಗಿಗೆ ಹಾಕಿದ್ದ ವೆಂಟಿಲೇಟರ್‌ನ್ನೇ ಆಫ್ ಮಾಡಿದ ವೃದ್ಧೆ

    ಹೀಗೆಯೇ ಎಂದಿನಂತೆ ಶಿಕ್ಷಕಿ ತನ್ನ ಅರೆಬೆತ್ತಲೆ ಫೋಟೋವನ್ನು ಅಪ್‌ಲೋಡ್ ಮಾಡುತ್ತಿದ್ದಾಗ, ವಿದ್ಯಾರ್ಥಿಯೊಬ್ಬ ಶಿಕ್ಷಕಿಯ ಫೋಟೋ ನೋಡಿದ್ದಾನೆ. ನಂತರ ಬಂದವನೇ ಇಡೀ ಶಾಲೆಗೆಲ್ಲಾ ಡಂಗೂರ ಸಾರಿದ್ದಾನೆ. ಇದರಿಂದ ಮುಜುಗರಕ್ಕೀಡಾದ ಶಾಲಾ ಆಡಳಿತ ಮಂಡಳಿ ಶಿಕ್ಷಕಿಯ ಮೇಲೆ ಶಿಸ್ತು ಕ್ರಮ ಜರುಗಿಸಿದೆ. ಇದನ್ನೂ ಓದಿ: ಏಲಿಯನ್ ಅಟ್ಯಾಕ್, ಸೋಲರ್ ಸುನಾಮಿ – ವಿಶ್ವದ ಅಂತ್ಯದ ಬಗ್ಗೆ ಬಾಬಾ ವಂಗಾ ಭವಿಷ್ಯವಾಣಿ

    ಸದ್ಯ ಕೆಲಸ ಕಳೆದುಕೊಂಡಿರುವ ಶಿಕ್ಷಕಿ, ನನಗೆ 11 ವರ್ಷ ವಯಸ್ಸಿನ ಮಗನಿದ್ದಾನೆ. ಅವನು ದೀರ್ಘಕಾಲದ ಅರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದಾನೆ. ಅವನ ಚಿಕಿತ್ಸೆಗಾಗಿ ಹೆಚ್ಚಿನ ಹಣ ಬೇಕಾಗುತ್ತದೆ. ಹೀಗಾಗಿ ನನ್ನ ಖಾಸಗಿ ಫೋಟೋಗಳನ್ನು ಮಾರಿಕೊಳ್ಳುತ್ತಿದ್ದೆ ಎಂದು ಹೇಳಿಕೊಂಡಿರುವುದಾಗಿ ವರದಿಯಾಗಿದೆ.

    Live Tv
    [brid partner=56869869 player=32851 video=960834 autoplay=true]

  • ಮಹಿಳಾ ರೋಗಿಗಳಿಗೆ ಕಿಸ್‌, ಹಗ್‌ ಮಾಡಿ ಲೈಂಗಿಕ ಅಪರಾಧ- ಭಾರತ ಮೂಲದ ವೃದ್ಧ ವೈದ್ಯನಿಗೆ ಶಿಕ್ಷೆ

    ಮಹಿಳಾ ರೋಗಿಗಳಿಗೆ ಕಿಸ್‌, ಹಗ್‌ ಮಾಡಿ ಲೈಂಗಿಕ ಅಪರಾಧ- ಭಾರತ ಮೂಲದ ವೃದ್ಧ ವೈದ್ಯನಿಗೆ ಶಿಕ್ಷೆ

    ಲಂಡನ್:‌ ಸ್ಕಾಟ್ಲ್ಯಾಂಡ್‌ ವೈದ್ಯಕೀಯ ಸೇವೆ ಸಲ್ಲಿಸುತ್ತಿರುವ ಭಾರತ ಮೂಲದ ವೈದ್ಯನೊಬ್ಬ 48 ಮಹಿಳಾ ರೋಗಿಗಳ ಲೈಂಗಿಕ ಅಪರಾಧ ಎಸಗಿದ್ದು, ತಪ್ಪಿತಸ್ಥ ಎಂದು ಸಾಬೀತಾಗಿದೆ.

    72 ವಯಸ್ಸಿನ ವೈದ್ಯ ಕೃಷ್ಣ ಸಿಂಗ್ ಮೇಲೆ ಅನಾರೋಗ್ಯದ ಕಾರಣ ಆಸ್ಪತ್ರೆಗೆ ಬರುವ ಮಹಿಳಾ ರೋಗಿಗಳಿಗೆ ಚುಂಬಿಸುವುದು, ತಬ್ಬಿಕೊಳ್ಳುವುದು, ಪರೀಕ್ಷೆ ಹೆಸರಿನಲ್ಲಿ ಅನುಚಿತವಾಗಿ ವರ್ತಿಸುವುದು, ಅಶ್ಲೀಲ ಪದ ಬಳಕೆ ಸೇರಿದಂತೆ ಅನೇಕ ಆರೋಪಗಳನ್ನು ಹೊರಿಸಲಾಗಿತ್ತು. ಇದನ್ನೂ ಓದಿ: ಆತ್ಮಹತ್ಯೆಗೆ ಶರಣಾಗುತ್ತಿದ್ದಾರೆ ಶಾಂಘೈ ಜನ – ಸಾಕು ಪ್ರಾಣಿಗಳ ಮಾರಣಹೋಮ

    ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಗ್ಲಾಸ್ಗೋದಲ್ಲಿನ ಹೈಕೋರ್ಟ್‌ನಲ್ಲಿ ವಿಚಾರಣೆಯ ಸಂದರ್ಭದಲ್ಲಿ ವೈದ್ಯ ತನ್ನ ಮೇಲಿನ ಆರೋಪಗಳನ್ನು ನಿರಾಕರಿಸಿದ್ದರು. ರೋಗಿಗಳು ಸುಳ್ಳು ಹೇಳುತ್ತಿದ್ದಾರೆ ಎಂದು ವಾದಿಸಿದ್ದರು.

    ಡಾ. ಸಿಂಗ್‌ ಅವರು ಮಹಿಳೆಯರ ಮೇಲೆ ಅಪರಾಧ ಎಸಗುವ ಕೆಲಸಗಳನ್ನು ಮಾಡುತ್ತಿದ್ದರು. ಲೈಂಗಿಕ ಅಪರಾಧವು ಅವರ ವೃತ್ತಿ ಜೀವನದ ಭಾಗವೇ ಆಗಿತ್ತು ಎಂದು ಪ್ರಾಸಿಕ್ಯೂಟರ್‌ ಏಂಜೆಲಾ ಗ್ರೇ ಕೋರ್ಟ್‌ಗೆ ತಿಳಿಸಿದ್ದಾರೆ. ಇದನ್ನೂ ಓದಿ: ಅಮೆರಿಕ ನೆಲದಲ್ಲೇ ಅಮೆರಿಕಕ್ಕೆ ತಿರುಗೇಟು ನೀಡಿದ ಭಾರತ

    ಸಿಂಗ್ ಅವರು ಗೌರವಾನ್ವಿತ ಸದಸ್ಯರಾಗಿ ಗುರುತಿಸಿಕೊಂಡಿದ್ದರು. ವೈದ್ಯಕೀಯ ಕ್ಷೇತ್ರಕ್ಕೆ ಅವರ ಕೊಡುಗೆಗಾಗಿ ರಾಯಲ್ ಮೆಂಬರ್ ಆಫ್ ಆರ್ಡರ್ ಆಫ್ ದಿ ಬ್ರಿಟಿಷ್ ಎಂಪೈರ್ (MBE) ಗೌರವವನ್ನು ಸಹ ನೀಡಲಾಗಿತ್ತು. ಆದರೆ 2018 ರಲ್ಲಿ ಮಹಿಳೆಯೊಬ್ಬರು ದೂರು ನೀಡಿದ ನಂತರ ಅವರ ನಡವಳಿಕೆಯ ಬಗ್ಗೆ ತನಿಖೆ ಪ್ರಾರಂಭಿಸಲಾಯಿತು.

    ಡಾ. ಸಿಂಗ್‌ ಒಟ್ಟು 54 ಅಪರಾಧಗಳಲ್ಲಿ ಶಿಕ್ಷೆಗೆ ಗುರಿಯಾಗಿದ್ದಾರೆ. ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಾಧೀಶರು ಮುಂದಿನ ತಿಂಗಳವರೆಗೆ ಶಿಕ್ಷೆಯನ್ನು ಮುಂದೂಡಿದ್ದಾರೆ. ಸಿಂಗ್ ಅವರ ಪಾಸ್‌ಪೋರ್ಟ್ ಒಪ್ಪಿಸುವ ಷರತ್ತಿನ ಮೇಲೆ ಜಾಮೀನಿನ ಮೇಲೆ ಬಿಡುಗಡೆ ಮಾಡಲು ಅವಕಾಶ ನೀಡಿದ್ದಾರೆ. ಇದನ್ನೂ ಓದಿ: ಟ್ವಿಟ್ಟರ್ ಕಂಪನಿಯನ್ನೇ ಖರೀದಿಸುವುದಾಗಿ ಆಫರ್ ಕೊಟ್ಟ ಮಸ್ಕ್

  • ಕಳೆದು ಹೋಗಿದ್ದ ಬೆಕ್ಕು 17 ವರ್ಷಗಳ ಬಳಿಕ ಪತ್ತೆ- ಈ ರೋಚಕ ಕಥೆ ಸಖತ್ ಥ್ರಿಲ್ಲಿಂಗ್

    ಕಳೆದು ಹೋಗಿದ್ದ ಬೆಕ್ಕು 17 ವರ್ಷಗಳ ಬಳಿಕ ಪತ್ತೆ- ಈ ರೋಚಕ ಕಥೆ ಸಖತ್ ಥ್ರಿಲ್ಲಿಂಗ್

    ಎಡಿನ್‍ಬರ್ಗ್: ಸಾಕಿದ ಬೆಕ್ಕನ್ನು ಕಳೆದುಕೊಂಡಿದ್ದ ಸ್ಕಾಟ್ಲೆಂಡಿನ ಮಹಿಳೆಯೊಬ್ಬರು 17 ವರ್ಷಗಳ ಬಳಿಕ ಅದೇ ಬೆಕ್ಕನ್ನು ಮತ್ತೆ ಪಡೆದ ರೋಚಕಕಾರಿ ಘಟನೆ ನಡೆದಿದೆ.

    ಕಿಮ್‍ಕೋಲಿನ್ ಬೆಕ್ಕೊಂದನ್ನು ಸಾಕಿದ್ದರು. ಅದಕ್ಕೆ ಟಿಲ್ಲಿ ಎಂಬ ಹೆಸರಿಟ್ಟಿದ್ದರು. ಆದರೆ ಕಿಮ್‍ಕೋಲಿನ್ ಅವರು ಇಂಗ್ಲೆಂಡಿನಿಂದ ಸ್ಕಾಟ್ಲೆಂಡ್‍ನ ಮಿಡ್ಲೋಥಿಯನ್‍ಗೆ ಮನೆ ಬದಲಾವಣೆ ಮಾಡುವ ವೇಳೆ ಟಿಲ್ಲಿ ತಪ್ಪಿಸಿಕೊಂಡಿತ್ತು. ಆದರೂ ಛಲ ಬಿಡದ ಕಿಮ್ ತಮ್ಮ ಮುದ್ದಿನ ಬೆಕ್ಕು ಟಿಲ್ಲಿಯನ್ನು ಹುಡುಕುವ ಸಲುವಾಗಿ ನಿರಂತರವಾಗಿ ಪೋಸ್ಟ್‍ಗಳನ್ನು ಹಾಕಿದ್ದಾರೆ.ಇದರ ಫಲವಾಗಿ 17 ವರ್ಷಗಳ ಬಳಿಕ ಆ ಬೆಕ್ಕು ಅವರಿಗೆ ಮತ್ತೆ ಸಿಕ್ಕಿದೆ. ಇದಕ್ಕಾಗಿ ಅವರು ಬೆಕ್ಕಿಗೆ ಅಳವಡಿಸಿದ್ದ ಮೈಕ್ರೋಚಿಪ್‍ಗೆ ಧನ್ಯವಾದ ಹೇಳಿದ್ದಾರೆ.

    ಈ ಬಗ್ಗೆ ಮಾತನಾಡಿದ ಕಿಮ್‍ಕೋಲಿನ್ ಅವರು, ಟೆಲ್ಲಿ 17 ವರ್ಷಗಳ ಹಿಂದೆ ನಾಪತ್ತೆಯಾಗಿದ್ದ ಜಾಗದಲ್ಲೇ ಪ್ರತ್ಯೇಕ್ಷವಾಗಿದ್ದಾಳೆ. ಬೆಕ್ಕು ಸಿಕ್ಕಿರುವ ಸಂತೋಷವನ್ನು ನನಗೆ ತಿಳಿಸಲು ಸಾಧ್ಯವಾಗುತ್ತಿಲ್ಲ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಹಿಜಬ್‌ ಕುರಿತ ಹೈಕೋರ್ಟ್‌ ತೀರ್ಪನ್ನು ನಾನು ಒಪ್ಪಲ್ಲ: 15 ಟ್ವೀಟ್‌ ಮಾಡಿದ ಓವೈಸಿ

    20ನೇ ವರ್ಷಕ್ಕೆ ಕಾಲಿಡಲಿರುವ ಟಿಲ್ಲಿ ಟ್ಯೂಮರ್‍ನಿಂದ ಬಳಲುತ್ತಿದ್ದಾಳೆ. ಇನ್ನೂ ಕೆಲವೇ ದಿನ ಬದುಕುಳಿಯಲಿದೆ. ಈ ಹಿನ್ನೆಲೆಯಲ್ಲಿ ಬೆಕ್ಕಿಗೆ ವೈದ್ಯರು ತುರ್ತು ಚಿಕಿತ್ಸೆಯನ್ನು ನೀಡುತ್ತಿದ್ದಾರೆ. ಇದನ್ನೂ ಓದಿ: ಶಿಕ್ಷಣದಲ್ಲಿ ಮತ ರಾಜಕಾರಣ ಬೆರೆಸುವ ಹತಾಶಾ ಪ್ರಯತ್ನ ಇದಾಗಿತ್ತು: ಕೈ ವಿರುದ್ಧ ಬಿಜೆಪಿ ವಾಗ್ದಾಳಿ

     

  • 5 ವರ್ಷದ ಪೋರಿಗೆ ಬಾಯ್‍ಫ್ರೆಂಡ್ ಜೊತೆ ಮದ್ವೆ- ಸಾವಿನಂಚಿನ ಬಾಲೆಯ ಆಸೆ ಈಡೇರಿಸಿದ ಪೋಷಕರು

    5 ವರ್ಷದ ಪೋರಿಗೆ ಬಾಯ್‍ಫ್ರೆಂಡ್ ಜೊತೆ ಮದ್ವೆ- ಸಾವಿನಂಚಿನ ಬಾಲೆಯ ಆಸೆ ಈಡೇರಿಸಿದ ಪೋಷಕರು

    ಎಡಿನ್ಬರ್ಗ್(ಸ್ಕಾಟ್ಲೆಂಡ್): 5 ವರ್ಷದ ಬಾಲಕಿಯೊಬ್ಬಳು ತನ್ನ ಬೆಸ್ಟ್ ಫ್ರೆಂಡ್ ಜೊತೆ ಕುಟುಂಬಸ್ಥರ ಸಮ್ಮುಖದಲ್ಲಿ ಮದುವೆಯಾಗಿರೋ ಘಟನೆ ಸ್ಕಾಟ್ಲೆಂಡ್‍ನಲ್ಲಿ ನಡೆದಿದೆ.

    ಕ್ಯಾನ್ಸರ್‍ನಿಂದಾಗಿ ಸಾವಿನಂಚಿನಲ್ಲಿದ್ದ ಐದು ವರ್ಷದ ಈಲೀದ್ ಪ್ಯಾಟರ್ಸನ್ ಎಂಬಾಕೆ ಮದುವೆಯಾದ ಬಾಲಕಿ. ಎರಡು ವರ್ಷ ವಯಸ್ಸಿನಲ್ಲಿರುವಾಗಲಿಂದಲೇ ಬಾಲಕಿ ಕ್ಯಾನ್ಸರ್ ನಿಂದ ಬಳುತ್ತಿದ್ದಳು. ಈಕೆ ತನ್ನ ಗೆಳೆಯ ಹ್ಯಾರಿಸನ್ ಗ್ರಯರ್ ಎಂಬಾತನ್ನು ಮದುವೆಯಾಗುವ ಕನಸು ಹೊಂದಿದ್ದಳು.

    ಚಿಕ್ಕವರಾಗಿದ್ದರೂ ಇಬ್ಬರೂ ಒಬ್ಬರನೊಬ್ಬರು ಮೆಚ್ಚಿಕೊಂಡಿದ್ದರು. ಹ್ಯಾರಿಸನ್ ಕೂಡ ನಾನು ಆಕೆಯನ್ನು ಪ್ರೀತಿಸಿಸುತ್ತಿದ್ದೇನೆ. ಹಾಗೂ ಆಕೆಯನ್ನು ಮದುವೆಯಾಗುವುದಾಗಿ ಹೇಳಿಕೊಳ್ಳುತ್ತಿದ್ದನು ಅಂತಾ ಈಲೀದ್ ತಂದೆ, ತಾಯಿ ಪತ್ರಿಕೆಯೊಂದಕ್ಕೆ ತಿಳಿಸಿದ್ದಾರೆ. ಅಲ್ಲದೇ ಈಲೀದ್ ಕೂಡ ಆಸ್ಪತ್ರೆಯಲ್ಲಿ ದಾದಿಯರ ಜೊತೆ ನನಗೆ ಬಾಯ್ ಫ್ರೆಂಡ್ ಇದ್ದಾನೆ. ನಾವಿಬ್ಬರೂ ಮುಂದೊಂದು ದಿನ ಮದುವೆಯಾಗುತ್ತೇವೆ ಅಂತೆಲ್ಲ ಹೇಳುತ್ತಿದ್ದಳು.

    ಐದು ವರ್ಷದ ಪುಟ್ಟ ಬಾಲಕಿಗೆ ಕ್ಯಾನ್ಸರ್ ಇದೆ ಎಂದು ವೈದ್ಯರು ಪತ್ತೆ ಮಾಡುವಷ್ಟರಲ್ಲಿ ಅದು ಇಡೀ ದೇಹಕ್ಕೆ ಹರಡಿತ್ತು. ಹೀಗಾಗಿ ಬಾಲಕಿಯ ಪೋಷಕರು ಕೊನೆಯ ಆಸೆ ಏನೆಂಬುವುದನ್ನು ಕೇಳಿದ್ದಾರೆ. ಈ ಬಾಲಕಿ ತನ್ನ ಬಾಯ್ ಫ್ರೆಂಡ್ ಜೊತೆ ಮದುವೆಯಾಗಬೇಕು. ಇದೇ ನನ್ನ ಕೊನೆಯ ಆಸೆಗಳಲ್ಲಿ ಮೊದಲೆನೆಯದು ಎಂದಿದ್ದಾಳೆ. ಅಂತೆಯೇ ಇಬ್ಬರ ಪೋಷಕರೂ ಒಪ್ಪಿ ಅದ್ಧೂರಿಯಾಗಿಯೇ ಈಲೀದ್ ಬಾಯ್ ಫ್ರೆಂಡ್ 6 ವರ್ಷದ ಹ್ಯಾರಿಸನ್ ಜೊತೆ ಮದುವೆ ಮಾಡಿದ್ದಾರೆ. ಸೈಂಟ್ ಕ್ರಿಸ್ಟೋಫರ್‍ನ ನೆಕ್ಲೇಸ್ ಗಳನ್ನು ವಿನಿಮಯ ಮಾಡಿಕೊಂಡು ಇಬ್ಬರೂ ಮದುವೆಯಾಗಿದ್ದಾರೆ. ಮದುವೆಗೆ ಆಗಮಿಸಿದ ಎಲ್ಲರೂ ಪ್ರೀತಿಪೂರ್ವಕವಾಗಿಯೇ ಇಬ್ಬರಿಗೂ ಶುಭಾಶಯ ತಿಳಿಸಿದ್ದಾರೆ.

    ಈ ಬಗ್ಗೆ ಈಲೀದ್ ತಂದೆ ಗೈಲ್ ಪತ್ರಿಕೆಯೊಂದಕ್ಕೆ ಮಾತನಾಡಿ, ಮಗಳ ಮದುವೆ ನೋಡಿ ನಿಜಕ್ಕೂ ಒಂದು ಬಾರಿ ಕಣ್ಣೀರು ಬಂತು. ಆದ್ರೆ ಕೂಡಲೇ ನಾನು ಅಳಬಾರದು ಅಂದುಕೊಂಡು ಸುಮ್ಮನಾದೆ. ನನ್ನ ಜೀವನದಲ್ಲಿ ಇದೊಂದು ಅದ್ಭುತ ದಿನವಾಗಿದೆ ಅಂತಾ ತಿಳಿಸಿದ್ದಾರೆ.