Tag: Scrappage Policy

  • ವಾಹನ ಗುಜುರಿ ನೀತಿ ಭಾರತದ ಅಭಿವೃದ್ಧಿ ಪಯಣದಲ್ಲಿ ಮಹತ್ವದ ಮೈಲಿಗಲ್ಲಾಗಿದೆ: ಮೋದಿ

    ವಾಹನ ಗುಜುರಿ ನೀತಿ ಭಾರತದ ಅಭಿವೃದ್ಧಿ ಪಯಣದಲ್ಲಿ ಮಹತ್ವದ ಮೈಲಿಗಲ್ಲಾಗಿದೆ: ಮೋದಿ

    ನವದೆಹಲಿ: ವಾಹನ ಗುಜುರಿ ನೀತಿಗೆ ಇಂದು ಚಾಲನೆ ನೀಡಿರುವುದು ಭಾರತದ ಅಭಿವೃದ್ಧಿ ಪಯಣದಲ್ಲಿ ಮಹತ್ವದ ಮೈಲಿಗಲ್ಲಾಗಿದೆ ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಹೇಳಿದ್ದಾರೆ.

    ಈ ಬಗ್ಗೆ ಸರಣಿ ಟ್ವೀಟ್ ಮಾಡಿರುವ ಪ್ರಧಾನಿ, “ವಾಹನ ಸ್ಕ್ರ್ಯಾಪೇಜ್ ನೀತಿಗೆ ಇಂದು ಚಾಲನೆ ನೀಡಿರುವುದು ಭಾರತದ ಅಭಿವೃದ್ಧಿ ಪ್ರಯಾಣದಲ್ಲಿ ಮಹತ್ವದ ಮೈಲಿಗಲ್ಲಾಗಿದೆ. ಸ್ಕ್ರ್ಯಾಪಿಂಗ್ ಮೂಲಸೌಕರ್ಯ ಸ್ಥಾಪನೆಗಾಗಿ ಗುಜರಾತ್‍ನಲ್ಲಿ ಹೂಡಿಕೆದಾರರ ಶೃಂಗಸಭೆಯು ಹೊಸ ಶ್ರೇಣಿಯ ಸಾಧ್ಯತೆಗಳನ್ನು ತೆರೆದಿಟ್ಟಿದೆ. ಈ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವಂತೆ ನಾನು ನಮ್ಮ ಯುವ ಮತ್ತು ನವೋದ್ಯಮಗಳನ್ನು ವಿನಂತಿಸುತ್ತೇನೆ. ಇದನ್ನೂ ಓದಿ: 20 ವರ್ಷದ ಹಳೆಯ ವಾಹನಗಳು ಗುಜುರಿಗೆ – ಸೀತಾರಾಮನ್‌ ಹೇಳಿದ್ದು ಏನು? ಏನಿದು ಗುಜುರಿ ನೀತಿ?

    ಅನರ್ಹ ಮತ್ತು ಮಾಲಿನ್ಯಕಾರಕ ವಾಹನಗಳನ್ನು ಪರಿಸರಸ್ನೇಹಿ ವಿಧಾನದ ಮೂಲಕ ಹಂತ ಹಂತವಾಗಿ ತೊಡೆದು ಹಾಕುವುದು ವಾಹನ ಗುಜರಿ ನೀತಿಯಾಗಿದೆ. ನಮ್ಮ ಗುರಿ ಕಾರ್ಯಸಾಧುವಾದ ಚಲಾವಣೆಯ ಆರ್ಥಿಕತೆಯನ್ನು ಸೃಷ್ಟಿಸುವುದು ಮತ್ತು ಎಲ್ಲ ಪಾಲುದಾರರಿಗೆ ಮೌಲ್ಯವನ್ನು ತಂದು ಅವರನ್ನು ಪರಿಸರಕ್ಕೆ ಜವಾಬ್ದಾರರನ್ನಾಗಿ ಮಾಡುವುದಾಗಿದ್ದು, ಅನರ್ಹ ಮತ್ತು ಮಾಲಿನ್ಯಕಾರಕ ವಾಹನಗಳನ್ನು ಪರಿಸರ ಸ್ನೇಹಿ ರೀತಿಯಲ್ಲಿ ವಿಲೇವಾರಿ ಮಾಡಲು ವಾಹನ ಸ್ಕ್ರ್ಯಾಪಿಂಗ್ ನೀತಿಯು ಸಹಾಯ ಮಾಡುತ್ತದೆ. ಕಾರ್ಯಸಾಧ್ಯವಾದ ವರ್ತುಲ ಆರ್ಥಿಕತೆಯನ್ನು (#circulareconomy) ಅಭಿವೃದ್ಧಿಪಡಿಸುವುದು ಹಾಗೂ ಪರಿಸರದ ಬಗ್ಗೆ ಜವಾಬ್ದಾರಿಯೊಂದಿಗೆ ಎಲ್ಲಾ ಮಧ್ಯಸ್ಥಗಾರರಿಗೆ ಮೌಲ್ಯವನ್ನು ತರುವುದು ನಮ್ಮ ಉದ್ದೇಶವಾಗಿದೆ.” ಎಂದಿದ್ದಾರೆ. ಇದನ್ನೂ ಓದಿ: ಹಳೆಯ ಕಾರು ಗುಜುರಿಗೆ ಹಾಕಿ ಹೊಸ ಕಾರು ಖರೀದಿಸಿದರೆ ಶೇ.5 ರಿಯಾಯಿತಿ

    ಹೂಡಿಕೆದಾರರ ಶೃಂಗಸಭೆ ಉದ್ದೇಶಿಸಿ ಪ್ರಧಾನಮಂತ್ರಿ ಭಾಷಣ:
    ನರೇಂದ್ರ ಮೋದಿ ಅವರು ಇಂದು ವೀಡಿಯೋ ಕಾನ್ಫರೆನ್ಸ್ ಮೂಲಕ ಗುಜರಾತ್ ನ ಹೂಡಿಕೆದಾರರ ಶೃಂಗಸಭೆಯನ್ನುದ್ದೇಶಿಸಿ ಭಾಷಣ ಮಾಡಿದರು. ಸ್ವಯಂಪ್ರೇರಿತ ವಾಹನ ಆಧುನೀಕರಣ ಕಾರ್ಯಕ್ರಮ ಅಥವಾ ವಾಹನ ಗುಜರಿ ನೀತಿಯಡಿಯಲ್ಲಿ ವಾಹನ ಗುಜರಿ ಮೂಲಸೌಕರ್ಯ ಸ್ಥಾಪನೆಗೆ ಬಂಡವಾಳ ಆಕರ್ಷಿಸುವ ಉದ್ದೇಶದಿಂದ ಈ ಶೃಂಗಸಭೆಯನ್ನು ಆಯೋಜಿಸಲಾಗಿತ್ತು. ಅಲ್ಲದೆ ಅಲ್ಲಂಗ್ ನಲ್ಲಿ ಸಮಗ್ರ ಗುಜರಿ ತಾಣ ಅಭಿವೃದ್ಧಿಗೆ ಹಡಗು ಒಡೆಯುವ ಉದ್ಯಮದ ಜೊತೆ ಸಮನ್ವಯ ಸಾಧಿಸುವುದಕ್ಕೆ ಹೆಚ್ಚಿನ ಒತ್ತು ನೀಡಲಾಗುವುದು. ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವರು ಹಾಗೂ ಗುಜರಾತ್ ಮುಖ್ಯಮಂತ್ರಿ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು. ಇದನ್ನೂ ಓದಿ: ಹಳೆ ವಾಹನಗಳ ಗುಜರಿ ನೀತಿಯ ಕರಡು ರೆಡಿ – ಮರು ನೋಂದಣಿ, ನವೀಕರಣಕ್ಕೆ 8 ಪಟ್ಟು ಶುಲ್ಕ

  • ಗುಜುರಿ ನೀತಿಯಿಂದ 50 ಸಾವಿರ ಉದ್ಯೋಗ ಸೃಷ್ಟಿ – ಗಡ್ಕರಿ

    ಗುಜುರಿ ನೀತಿಯಿಂದ 50 ಸಾವಿರ ಉದ್ಯೋಗ ಸೃಷ್ಟಿ – ಗಡ್ಕರಿ

    ನವದೆಹಲಿ: ಬಜೆಟ್‌ನಲ್ಲಿ ಮಂಡನೆಯಾದ ನೂತನ ಸ್ವಯಂ ಪ್ರೇರಿತ ಗುಜುರಿ ನೀತಿಯಿಂದ ಅಂದಾಜು 50 ಸಾವಿರ ಉದ್ಯೋಗಗಳು ಸೃಷ್ಟಿಯಾಗಲಿದೆ ಎಂದು ಕೇಂದ್ರ ಸಾರಿಗೆ ಸಚಿವ ನಿತಿನ್‌ ಗಡ್ಕರಿ ತಿಳಿಸಿದ್ದಾರೆ.

    ತಮ್ಮ ನಿವಾಸದಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಮುಂದಿನ 15 ದಿನಗಳ ಒಳಗಡೆ ಗುಜುರಿ ನೀತಿಯ ಬಗ್ಗೆ ಸಮಗ್ರವಾದ ವಿವರವನ್ನು ಪ್ರಕಟಿಸಲಾಗುವುದು. ಈ ನೀತಿಯಿಂದ ದೇಶದಲ್ಲಿ ಅಂದಾಜು 10 ಸಾವಿರ ಕೋಟಿ ರೂ. ಹೂಡಿಕೆಯಾಗಲಿದೆ ಎಂದು ಹೇಳಿದರು.

    ಪ್ರಸ್ತುತ ಭಾರತದಲ್ಲಿ 20 ವರ್ಷ ಮೇಲ್ಪಟ್ಟ 51 ಲಕ್ಷ, 15 ವರ್ಷ ಮೇಲ್ಪಟ್ಟ 34 ಲಕ್ಷ ಲಘು ಮೋಟಾರು ವಾಹನಗಳಿವೆ. 15 ವರ್ಷ ಮೇಲ್ಪಟ್ಟ 17 ಲಕ್ಷ ಮಧ್ಯಮ ಮತ್ತು ಭಾರೀ ಗಾತ್ರದ ವಾಹನಗಳಿವೆ. ಈ ವಾಹನಗಳು ಯಾವುದೇ ಫಿಟ್‌ನೆಸ್‌ ಪ್ರಮಾಣಪತ್ರವನ್ನು ಹೊಂದಿಲ್ಲ. ಹೊಸ ವಾಹನಗಳಿಗೆ ಹೋಲಿಸಿದರೆ ಈ ವಾಹನಗಳು 10-12 ಪಟ್ಟು ಮಾಲಿನ್ಯವನ್ನು ಹೊರ ಹಾಕುತ್ತಿವೆ ಎಂದು ವಿವರಿಸಿದರು.

    ಮೆಟಲ್‌(ಲೋಹ) ತ್ಯಾಜ್ಯ ಮರುಬಳಕೆ, ಸುಧಾರಿತ ಸುರಕ್ಷತೆ, ವಾಯುಮಾಲಿನ್ಯ ಮತ್ತು ಇಂಧನ ಆಮದು ಕಡಿಮೆ ಮಾಡುವುದರ ಜೊತೆಗೆ ಹೂಡಿಕೆಯನ್ನು ಉತ್ತೇಜಿಸಲು ಹೊಸ ನೀತಿ ಸಹಾಯವಾಗಲಿದೆ ಎಂದು ಅದರ ಪ್ರಯೋಜನವನ್ನು ತಿಳಿಸಿದರು.

    ಬಜೆಟ್‌ನಲ್ಲಿ ಹೆದ್ದಾರಿ ಕ್ಷೇತ್ರಕ್ಕೆ 1,18,000 ಕೋಟಿ ರೂ. ಅನುದಾನ ನೀಡಿದ್ದನ್ನು ಸ್ವಾಗತಿಸಿದ ಗಡ್ಕರಿ ಇದರಿಂದಾಗಿ ದೇಶದಲ್ಲಿ ರಸ್ತೆ ಜಾಲವನ್ನು ವಿಸ್ತರಿಸಲು ಸಹಾಯವಾಗಲಿದೆ ಎಂದು ಹೇಳಿದರು.

    ಬಜೆಟ್‌ ಭಾಷಣದಲ್ಲಿ ಸ್ವಯಂಪ್ರೇರಿತ ಗುಜುರಿ ನೀತಿ ಜಾರಿಯ ಬಗ್ಗೆ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ ಪ್ರಸ್ತಾಪ ಮಾಡಿದ್ದಾರೆ. 20 ವರ್ಷ ಮೇಲ್ಪಟ್ಟ ಖಾಸಗಿ ವಾಹನ, 15 ವರ್ಷ ಮೇಲ್ಪಟ್ಟ ವಾಣಿಜ್ಯ  ವಾಹನಗಳು ಫಿಟ್‌ನೆಸ್ ಪರೀಕ್ಷೆಗೆ ಒಳಗಾಗಬೇಕು ಎಂದು ಹೇಳಿದ್ದರು ಇದನ್ನೂ ಓದಿ : ಏನಿದು ಗುಜುರಿ ನೀತಿ? ದರ ನಿಗದಿ ಹೇಗೆ?