Tag: sea

  • ಸಮುದ್ರದ ಸುಳಿಯಲ್ಲಿ ಸಿಕ್ಕಿಬಿದ್ದ ಪ್ರವಾಸಿಗನ ರಕ್ಷಿಸಿದ ಲೈಫ್ ಗಾರ್ಡ್ ಸಿಬ್ಬಂದಿ

    ಸಮುದ್ರದ ಸುಳಿಯಲ್ಲಿ ಸಿಕ್ಕಿಬಿದ್ದ ಪ್ರವಾಸಿಗನ ರಕ್ಷಿಸಿದ ಲೈಫ್ ಗಾರ್ಡ್ ಸಿಬ್ಬಂದಿ

    ಕಾರವಾರ: ಸರ್ಫಿಂಗ್ ಮಾಡುವ ವೇಳೆ ಸಮುದ್ರ ಸುಳಿಗೆ ಸಿಕ್ಕಿ ಬಿದ್ದಿದ್ದ ಪ್ರವಾಸಿಗನನ್ನು ಪ್ರವಾಸೋದ್ಯಮ ಇಲಾಖೆಯ ಲೈಫ್ ಗಾರ್ಡ್ ಸಿಬ್ಬಂದಿ ರಕ್ಷಣೆ ಮಾಡಿದ್ದಾರೆ.

    ಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲೂಕಿನ ಕುಡ್ಲೆ ಬೀಚ್ ನಲ್ಲಿ ಈ ಘಟನೆ ನಡೆದಿದ್ದು, ಅಖಿಲೇಶ್ (30) ರನ್ನು ರಕ್ಷಣೆ ಮಾಡಲಾಗಿದೆ. ಅಖಿಲೇಶ್ ಸಮುದ್ರದಲ್ಲಿ ಸರ್ಫಿಂಗ್ ಮಾಡಲು ತೆರಳಿದ್ದ ವೇಳೆ ಅವಘಡ ಸಂಭವಿಸಿದೆ. ಲೈಫ್ ಗಾರ್ಡ್ ಗಳ ಕಾರ್ಯ ವಿಡಿಯೋದಲ್ಲಿ ಸೆರೆಯಾಗಿದ್ದು, ಅವರ ಕಾರ್ಯವನ್ನು ನೋಡಿದ ಮಂದಿ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

    ಅಖಿಲೇಶ್ ಡೆಹ್ರಾಡೂನ್ ಮೂಲದರಾಗಿದ್ದು, ಇಂದು ಕುಡ್ಲೆ ಬೀಚ್‍ನಲ್ಲಿ ಸರ್ಫಿಂಗ್ ಮಾಡಲು ತೆರಳಿದ್ದರು. ಈ ವೇಳೆ ಸಮುದ್ರದಲ್ಲಿ ನೀರಿನ ಸುಳಿ ನಿರ್ಮಾಣವಾಗಿದ್ದು, ಸರ್ಫಿಂಗ್ ಮಾಡುವ ವೇಳೆ ಆಯಾ ತಪ್ಪಿ ಅಖಿಲೇಶ್ ಸುಳಿಯಲ್ಲಿ ಸಿಲುಕಿದ್ದರು. ಅಪಾಯದಲ್ಲಿ ಸಿಲುಕಿದ ಅವರು ರಕ್ಷಣೆಗಾಗಿ ಮೊರೆ ಇಟ್ಟಿದ್ದು, ಇದನ್ನು ಗಮನಿಸಿದ ಪ್ರವಾಸೋದ್ಯಮ ಇಲಾಖೆಯ ಲೈಫ್ ಗಾರ್ಡ್ ಸಿಬ್ಬಂದಿ ಸಂಜೀವ್ ಹೋಸ್ಕಟ್ಟಾ, ನಿತ್ಯಾನಂದ ಹರಿಕಂತ್ರ ಸಮುದ್ರಕ್ಕೆ ಇಳಿದು ಅಖಿಲೇಶ್ ಅವರನ್ನು ರಕ್ಷಣೆ ಮಾಡಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

  • ಉದ್ಘಾಟನೆಗೆ ಸಿದ್ಧಗೊಂಡಿದೆ ಜಗತ್ತಿನ ಉದ್ದದ ಸಮುದ್ರ ಸೇತುವೆ

    ಉದ್ಘಾಟನೆಗೆ ಸಿದ್ಧಗೊಂಡಿದೆ ಜಗತ್ತಿನ ಉದ್ದದ ಸಮುದ್ರ ಸೇತುವೆ

    ಬೀಜಿಂಗ್: ಚೀನಾ-ಹಾಂಕಾಂಗ್ ಮಧ್ಯೆ ಸೇತುವೆಯೊಂದು ನಿರ್ಮಾಣವಾಗಿದ್ದು ಈಗ ಜಗತ್ತಿನಲ್ಲಿಯೇ ಅತೀ ಉದ್ದದ ಸಮುದ್ರ ಸೇತುವೆ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ.

    2009ರಲ್ಲಿ ಆರಂಭವಾಗಿದ್ದ ಈ ಸೇತುವೆಯ ನಿರ್ಮಾಣ ಕಾರ್ಯ ಮುಕ್ತಾಯವಾಗಿದ್ದು, ಬರೋಬ್ಬರಿ 55 ಕಿಲೋ ಮೀಟರ್ ಉದ್ದವಿರುವ ಈ ಸೇತುವೆ ಅಕ್ಟೋಬರ್ 24 ರಂದು ಉದ್ಘಾಟನೆಯಾಗಲಿದೆ. ಚೀನಾ ಝಹೈನಿಂದ ಹಾಂಕಾಂಗ್ ನ ಮಕಾವೋಗೆ ಪ್ರಯಾಣ ಮಾಡಲು ಕೇವಲ 30 ನಿಮಿಷ ಸಾಗುತ್ತದೆ. ಇದಕ್ಕೂ ಮೊದಲು ಎರಡು ನಗರಗಳ ನಡುವೆ ಪ್ರಯಾಣಿಸಲು 3 ಗಂಟೆ ಬೇಕಾಗಿತ್ತು.

    ಆರಂಭದಲ್ಲಿ ಸೇತುವೆಯನ್ನು ನೇರವಾಗಿ ಹಾಂಕಾಂಗ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಸಂಪರ್ಕ ಕಲ್ಪಿಸಲು ಯೋಜನೆ ಸಿದ್ಧಪಡಿಸಲಾಗಿತ್ತು. ಆದರೆ ಇದರಿಂದ ಟ್ರಾಫಿಕ್ ಸಮಸ್ಯೆ ಹೆಚ್ಚಾಗಬಹುದು ಎಂದು ಚಿಂತಿಸಿದ ಹಾಂಕಾಂಗ್ ಯೋಜನೆಯ ಪ್ಲಾನ್ ಬದಲಿಸಲು ತಿಳಿಸಿತ್ತು ಎಂದು ಮಾಧ್ಯಮಗಳು ವರದಿ ಮಾಡಿದೆ.

    ಈ ಸೇತುವೆ ನಿರ್ಮಾಣಕ್ಕೆ ಚೀನಾ 9.83 ಲಕ್ಷ ಕೋಟಿ ರೂ. ಹಣ ವೆಚ್ಚಮಾಡಿದೆ. ಸೇತುವೆ ಮೇಲೆ ಪ್ರಯಾಣ ಮಾಡಲು ಟೋಲ್ ದರ ನಿಗದಿ ಮಾಡಲಾಗಿದೆ. 2030ರ ವೇಳೆಗೆ ಪ್ರತಿದಿನ ಸೇತುವೆಯಲ್ಲಿ 29,100 ವಾಹನಗಳು ಚಲಿಸಬಹುದು ಎಂದು ಅಂದಾಜಿಸಿದೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

  • ಸಮುದ್ರಕ್ಕೆ ನುಗ್ಗಿತ್ತು 47 ಪ್ರಯಾಣಿಕರಿದ್ದ ವಿಮಾನ!- ವಿಡಿಯೋ ನೋಡಿ

    ಸಮುದ್ರಕ್ಕೆ ನುಗ್ಗಿತ್ತು 47 ಪ್ರಯಾಣಿಕರಿದ್ದ ವಿಮಾನ!- ವಿಡಿಯೋ ನೋಡಿ

    ಪಲಿಕಿರ್: ತಾಂತ್ರಿಕ ದೋಷದಿಂದಾಗಿ 47 ಜನರಿದ್ದ ಪ್ರಯಾಣಿಕ ವಿಮಾನವೊಂದು ರನ್ ವೇಯಿಂದ ಮುನ್ನುಗ್ಗಿ ಸಮುದ್ರಕ್ಕೆ ಬಿದ್ದಿರುವ ಘಟನೆ ದಕ್ಷಿಣ ಪೆಸಿಫಿಕ್ ಸಾಗರದ ದ್ವೀಪ ರಾಷ್ಟ್ರವಾದ ಮೈಕ್ರೋನೇಷ್ಯಾದ ಛುಕ್ ಪ್ರದೇಶದಲ್ಲಿ ನಡೆದಿದೆ.

    ಕಳೆದ ಶುಕ್ರವಾರ ತಾಂತ್ರಿಕ ದೋಷದಿಂದಾಗಿ ಬೋಯಿಂಗ್ 737 ವಿಮಾನವು, ನಿಲ್ದಾಣದ ರನ್ ವೇ ನಿಂದ ಮುನ್ನುಗ್ಗಿ ಸಮುದ್ರಕ್ಕೆ ಬಿದ್ದಿದೆ. ಕೂಡಲೇ ವಿಮಾನ ನಿಲ್ದಾಣ ಸಿಬ್ಬಂದಿ ಹಾಗೂ ರಕ್ಷಣಾ ಪಡೆಗಳು ವಿಮಾನದಲ್ಲಿದ್ದ ಎಲ್ಲಾ 47 ಮಂದಿಯನ್ನು ಸುರಕ್ಷಿತವಾಗಿ ರಕ್ಷಿಸಿದ್ದಾರೆ. ಅಲ್ಲದೇ ವಿಮಾನ ಸಮುದ್ರಕ್ಕೆ ನುಗ್ಗುತ್ತಲೇ ಕೆಲವು ಪ್ರಯಾಣಿಕರು ವಿಮಾನದ ತುರ್ತು ಬಾಗಿಲನ್ನು ತೆರೆದು, ಸಮುದ್ರದಲ್ಲಿ ಈಜಿ ದಡ ಸೇರುವ ಮೂಲಕ ತಮ್ಮ ಪ್ರಾಣವನ್ನು ಉಳಿಸಿಕೊಂಡಿದ್ದಾರೆ.

    ಅಪಘಾತವಾದ ಬೋಯಿಂಗ್ 737 ವಿಮಾನವು ಪಪುವಾ ನ್ಯೂಗಿನಿಯಾ ರಾಷ್ಟ್ರೀಯ ವಿಮಾನಯಾನ ಸಂಸ್ಥೆಯಾದ `ಏರ್ ನ್ಯೂಗಿನಿ’ಗೆ ಸೇರಿದ್ದಾಗಿದೆ. ವಿಮಾನದಲ್ಲಿ 36 ಪ್ರಯಾಣಿಕರು ಹಾಗೂ 11 ಮಂದಿ ಸಿಬ್ಬಂದಿಯಿದ್ದರು. ವಿಮಾನವು ವೆನೋ ವಿಮಾನ ನಿಲ್ದಾಣದಲ್ಲಿ ಲ್ಯಾಂಡಿಂಗ್ ಆಗುವ ವೇಳೆ, ತಾಂತ್ರಿಕ ದೋಷದಿಂದ ನಿಯಂತ್ರಣಕ್ಕೆ ಬಾರದೆ ರನ್ ವೇ ದಾಟಿ ಸಮುದ್ರದ ಕಡೆ ನುಗ್ಗಿದೆ.

    ಘಟನೆ ಸಂಬಂಧ ಏರ್ ನ್ಯೂಗಿನಿಯಾ ವಿಮಾನಯಾನ ಸಂಸ್ಥೆ ತನಿಖೆ ಕೈಗೊಂಡಿದೆ. ಅಲ್ಲದೇ ವೆನೋ ವಿಮಾನದ ಸುತ್ತಮುತ್ತ ಭಾರೀ ಮಳೆ ಬಿದ್ದ ಹಿನ್ನೆಲೆಯಲ್ಲಿ ಪೈಲೆಟ್‍ಗಳು ರನ್‍ವೇ ಅನ್ನು ಗುರುತಿಸುವಲ್ಲಿ ವಿಫಲರಾಗಿದ್ದೇ ಅವಘಡಕ್ಕೆ ಕಾರಣ ಎಂಬುದಾಗಿ ಪ್ರಾಥಮಿಕ ವರದಿಯಿಂದ ತಿಳಿದುಬಂದಿದೆ.

    https://twitter.com/burebasgal/status/1045486053040091136

    ವಿಮಾನ ಸಮುದ್ರಕ್ಕೆ ಬಿದ್ದು, ಅರ್ಧ ಮುಳುಗಿದ್ದರೂ ನಮಗೆ ವಿಮಾನ ಮುಳುಗುತ್ತಿರುವ ವಿಚಾರ ಗೊತ್ತೆ ಆಗಿರಲಿಲ್ಲ. ರಕ್ಷಣಾ ಸಿಬ್ಬಂದಿಯವರು ಸ್ಥಳಕ್ಕೆ ಬಂದಾಗ ನಮಗೆ ವಿಮಾನ ಅವಘಡ ಸಂಭವಿಸಿರುವ ಬಗ್ಗೆ ತಿಳಿಯಿತು ಎಂದು ಭಾರೀ ದುರಂತದಿಂದ ಪಾರಾದ ಪ್ರಯಾಣಿಕರು ಹೇಳಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

  • ಸೈಂಟ್ ಮೇರೀಸ್ ಭೂಲೋಕದ ಮೇಲಿನ ಸ್ವರ್ಗ- ಸಮುದ್ರದ ಒಡಲಲ್ಲಿ ದಿನಪೂರ್ತಿ ಖುಷಿ

    ಸೈಂಟ್ ಮೇರೀಸ್ ಭೂಲೋಕದ ಮೇಲಿನ ಸ್ವರ್ಗ- ಸಮುದ್ರದ ಒಡಲಲ್ಲಿ ದಿನಪೂರ್ತಿ ಖುಷಿ

    ದು ಭೂಲೋಕದ ಮೇಲಿನ ಸ್ವರ್ಗ..! ಕಳೆದ ನಾಲ್ಕು ತಿಂಗಳಿಂದ ಆ ಸ್ವರ್ಗಕ್ಕೆ ಬಾಗಿಲು ಹಾಕಲಾಗಿತ್ತು. ಸ್ವರ್ಗಕ್ಕೆ ಹೋಗಲಾಗದೆ, ಜನರೆಲ್ಲಾ ಭೂಮಿ ಮೇಲೆಯೇ ಅಲೆದಾಡುತ್ತಿದ್ದರು. ಇದೀಗ ಸ್ವರ್ಗದ ಬಾಗಿಲು ತೆರೆದಿದ್ದು ಜನ ಹಾಡುತ್ತಾ.. ಕುಣಿಯುತ್ತಾ ಮಸ್ತ್ ಮಜಾ ಮಾಡುತ್ತಾ ಸುಂದರ ಸ್ವರ್ಗಕ್ಕೆ ಟ್ರಿಪ್ ಶುರು ಮಾಡಿದ್ದಾರೆ.

    ಕಣ್ಣು ಹಾಯಿಸಿದಲ್ಲೆಲ್ಲಾ ನೀಲಿ ನೀರು.., ರಭಸವಾಗಿ ಬೀಸೋ ತಂಗಾಳಿ.., ಆಕಾಶದಲ್ಲಿ ಹಾರಾಡೋ ಅನುಭವ..
    ಈ ಖುಷಿ ಒಟ್ಟಿಗೆ ಒಂದೇ ಕಡೆ ಸಿಗಬೇಕಾದ್ರೆ ನೀವು ಉಡುಪಿಗೆ ಬರಬೇಕು. ಮಲ್ಪೆಗೆ ಬಂದು ಸೈಂಟ್ ಮೇರೀಸ್ ದ್ವೀಪಕ್ಕೆ ಹೋಗುವ ಬೋಟ್ ಹತ್ತಬೇಕು. ಬೋಟ್ ಹತ್ತುತ್ತಿದ್ದಂತೆ ಕಿವಿಗೆ ಡೀಜೆ ಮ್ಯೂಸಿಕ್ ಅಪ್ಪಳಿಸುತ್ತದೆ. ಕೆಳಗೆ ಸಮುದ್ರ.. ಮೇಲೆ ಆಗಸ ಕಿವಿಗಪ್ಪಳಿಸೋ ಹಾಡು ಯಾರಿಗುಂಟು ಯಾರಿಗಿಲ್ಲ ಅಷ್ಟು ಎಂಜಾಯ್ ಮಾಡಬಹುದು.

    ಮಳೆಗಾಲದಲ್ಲಿ ಮೂರೂವರೆ ತಿಂಗಳು ಸಂಪೂರ್ಣ ಬಂದ್ ಆಗಿದ್ದ ಉಡುಪಿಯ ಸೈಂಟ್ ಮೇರೀಸ್ ಪ್ರವಾಸ ಇದೀಗ ಮತ್ತೆ ಆರಂಭವಾಗಿದೆ. ಬೆಳಗ್ಗೆ 10 ಗಂಟೆಯಿಂದ ಟ್ರಿಪ್ ಶುರುವಾಗುತ್ತದೆ. ಸಂಜೆಯ ತನಕ ನಾಲ್ಕು ಸುತ್ತ ನೀರು ನಡುವೆ ಇರುವ ಭೂಲೋಕದ ಸ್ವರ್ಗಕ್ಕೆ ಹೋಗಿ ಎಂಜಾಯ್ ಮಾಡಬಹುದು. ಮಲ್ಪೆ ಬೋಟ್ ಪಾಯಿಂಟ್ ನಿಂದ ಆರೂವರೆ ಕಿಲೋಮೀಟರ್ ದೂರವಿರುವ ಸೈಂಟ್ ಮೇರೀಸ್ ದ್ವೀಪದ ಕೂಗಳತೆ ದೂರದಲ್ಲಿ ದೊಡ್ಡ ಬೋಟನ್ನು ನಿಲ್ಲಿಸಲಾಗುತ್ತದೆ. ಸಮುದ್ರದ ಮಧ್ಯೆಯೇ ಮತ್ತೊಂದು ಚಿಕ್ಕ ಬೋಟ್‍ಗೆ ಎಲ್ಲಾ ಪ್ರವಾಸಿಗರನ್ನು ಶಿಫ್ಟ್ ಮಾಡಲಾಗುತ್ತದೆ. ಆ ಬೋಟ್ ದ್ವೀಪ ತಲುಪುತ್ತದೆ. ದೊಡ್ಡ ಬೋಟ್ ಮಲ್ಪೆಗೆ ವಾಪಾಸ್ಸಾಗುತ್ತದೆ

    ಫೋಟೋಗಳಲ್ಲಿ ಸೈಂಟ್ ಮೇರೀಸನ್ನು ಕಣ್ತುಂಬಿಕೊಂಡಿದ್ದ ಮೈಸೂರಿನ ಮಾಲಿನಿ ಮತ್ತು ಅವರ ಕುಟುಂಬ ಉಡುಪಿಗೆ ಬಂದಿತ್ತು. ಸೈಂಟ್ ಮೆರೀಸ್ ಗೂ ಭೇಟಿ ನೀಡಿದೆ. ಜೀವನದಲ್ಲೇ ಮೊದಲ ಬಾರಿಗೆ ಸಮುದ್ರದಲ್ಲಿ ಯಾನ ಮಾಡಿದ ಅನುಭವ ಈ ಕುಟುಂಬಕ್ಕೆ ಸಿಕ್ಕಿದೆ. ಪಬ್ಲಿಕ್ ಟಿವಿ ಜೊತೆ ಮಾತನಾಡಿದ ಮಾಲಿನಿ, ನಾನು ಗಾಳಿಯಲ್ಲಿ ತೇಲಾಡುತ್ತಿರುವ ಅನುಭವವಾಗುತ್ತಿದೆ. ಅದ್ಭುತ ಅನ್ನೋದನ್ನು ನಾನಿಲ್ಲಿ ಕಂಡುಕೊಂಡೆ ಎಂದು ಹೇಳಿದರು. ಸುಮಾರು 15 ಕಿಲೋಮೀಟರ್ ಅರಬ್ಬಿ ಸಮುದ್ರದಲ್ಲಿ ಯಾನ ಮಾಡಿ ಬಹಳ ಖುಷಿಯಾಯ್ತು ಅಂತ ಹೇಳಿದರು.

    ಪ್ರವಾಸಿಗ ನಿರಂಜನ್ ಮಾತನಾಡಿ, ಎರಡನೆ ಬಾರಿಗೆ ಸೈಂಟ್ ಮೆರೀಸ್ ನೋಡ್ತಾಯಿದ್ದೇನೆ. ಮಕ್ಕಳೂ ಬಹಳ ಎಂಜಾಯ್ ಮಾಡಿದ್ದಾರೆ. ಮತ್ತೆ ಮತ್ತೆ ಸೈಂಟ್ ಮೇರೀಸ್‍ಗೆ ಬರಬೇಕೆಂದು ಡಿಸೈಡ್ ಮಾಡಿದ್ದೇವೆ ಎಂದರು.

    ಭಾರತವನ್ನು ಕಂಡು ಹಿಡಿದ ಕಲ್ಲಿಕೋಟೆಗೆ ಹೋಗುವ ಮೊದಲು ಸೈಂಟ್ ಮೇರೀಸ್ ದ್ವೀಪಕ್ಕೆ ಬಂದಿದ್ದ. ಇಲ್ಲಿನ ಸೌಂದರ್ಯವನ್ನು ಆತ ಬಹಳ ವರ್ಣಿಸಿದ್ದ. ಸೈಂಟ್ ಮೇರೀಸ್ ದ್ವೀಪದಲ್ಲಿ ಕಾಣಸಿಗುವ ವಿಭಿನ್ನಾಕಾರದ ಕಲ್ಲುಗಳು ಎಲ್ಲರನ್ನು ಸೆಳೆಯುತ್ತದೆ. ಕಲ್ಲಿನ ಮೇಲೆ ಅಪ್ಪಳಿಸೋ ತೆರೆಗಳನ್ನು ಅನುಭವಿಸೋದೆ ಚಂದ. ಸೂರ್ಯಾಸ್ತದ ಸಂದರ್ಭದಲ್ಲಿ ಇದ್ರಂತೂ ಇಡೀ ಸಮುದ್ರ ಬಂಗಾರದ ಬಣ್ಣದಲ್ಲಿ ಹೊಳೆಯುತ್ತದೆ. ಈ ಬಾರಿ ಸೇಫ್ಟಿ ದೃಷ್ಟಿಯಿಂದ ದೊಡ್ಡ ಬೋಟ್, ಅದರಲ್ಲೊಂದು ವಾಶ್ ರೂಮನ್ನೂ ನಿರ್ಮಾಣ ಮಾಡಲಾಗಿದೆ. ದೇಶ ವಿದೇಶದ ಪ್ರವಾಸಿಗರಿಗೆ ಇದು ಬಹಳ ಇಷ್ಟವಾಗಿದೆ.

    ಬೋಟ್ ಮಾಲೀಕ ಪ್ರಕಾಶ್ ಕೊಡವೂರು, ಮಾತನಾಡಿ ಬೋಟ್‍ನಲ್ಲಿ ಲೈಫ್ ಜಾಕೆಟ್- ಕುಡಿಯುವ ನೀರಿನ ವ್ಯವಸ್ಥೆ ಎಲ್ಲವನ್ನೂ ಮಾಡಲಾಗಿದೆ. 250 ರುಪಾಯಿ ಟಿಕೆಟ್‍ನಲ್ಲಿ ಸೈಂಟ್ ಮೇರೀಸ್ ಕಣ್ತುಂಬಿಕೊಳ್ಳಬಹುದು. ಮಕ್ಕಳಿಗೆ 150 ರುಪಾಯಿ ಟಿಕೆಟ್ ನಿಗದಿ ಮಾಡಲಾಗಿದೆ ಎಂದು ಮಾಹಿತಿ ನೀಡಿದರು.

    ಮಳೆಗಾಲ ಆರಂಭವಾಗುವವರೆಗೆ ಸೈಂಟ್ ಮೇರೀಸ್ ಎಂಬ ಭೂಲೋಕದ ಮೇಲಿನ ಸ್ವರ್ಗ ಓಪನ್ ಇರುತ್ತದೆ. ಅರ್ಧಗಂಟೆ ದೊಡ್ಡ ಬೋಟ್‍ನಲ್ಲಿ ಪಯಣ, ಅಲ್ಲಿಂದ ಸಣ್ಣ ಬೋಟ್ ಮೂಲಕ ದ್ವೀಪಕ್ಕೆ ಶಿಫ್ಟ್, ಅಲ್ಲಿ ಬೇಕಾದಷ್ಟು ಸುತ್ತಾಟ, ಮತ್ತೆ ಎರಡು ಬೋಟ್‍ಗಳಲ್ಲಿ ಮಲ್ಪೆಗೆ ವಾಪಾಸ್. ಇಷ್ಟಕ್ಕೆ ತಗಲುವ ವೆಚ್ಚ 250 ರೂಪಾಯಿ ಮಾತ್ರ. ತಮಗೆ ಬೇಕಾದ ತಿಂಡಿ- ಊಟ ಕೊಂಡೊಯ್ದು ಫ್ಯಾಮಿಲಿ.. ಫ್ರೆಂಡ್ಸ್ .., ಲವ್ವರ್ಸ್ ಸಿಕ್ಕಾಪಟ್ಟೆ ಎಂಜಾಯ್ ಮಾಡಬಹುದು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

  • 6 ಗಂಟೆ ಸಮುದ್ರದಲ್ಲಿ ಈಜಿ ಸಾವನ್ನೇ ಗೆದ್ದು ಬಂದ ಮೀನುಗಾರ!

    6 ಗಂಟೆ ಸಮುದ್ರದಲ್ಲಿ ಈಜಿ ಸಾವನ್ನೇ ಗೆದ್ದು ಬಂದ ಮೀನುಗಾರ!

    ಮಂಗಳೂರು: ಮೀನುಗಾರಿಕೆಗೆ ಹೊರಟಿದ್ದ ಬೋಟ್‍ನಿಂದ ಸಮುದ್ರಕ್ಕೆ ಬಿದ್ದಿದ್ದ ಮೀನುಗಾರ 6 ಗಂಟೆಗಳ ಬಳಿಕ ಸುರಕ್ಷಿತವಾಗಿ ಪತ್ತೆಯಾಗಿದ್ದಾರೆ.

    ಗುರುವಾರ ಬೆಳಗ್ಗೆ ಮೀನುಗಾರಿಕೆಗೆ ಹೋಗಿದ್ದಾಗ ಸಂಜೆಯ ವೇಳೆ ಬೋಟ್‍ನಲ್ಲಿದ್ದ ತಮಿಳುನಾಡಿನ ಕಾರ್ಮಿಕ ನಾಗರಾಜ್ ಆಯತಪ್ಪಿ ಸಮುದ್ರಕ್ಕೆ ಬಿದ್ದಿದ್ದರು. ತಕ್ಷಣವೇ ಅವರ ರಕ್ಷಣೆಗೆ ಮುಂದಾಗಿದ್ದರೂ ನಾಗರಾಜ್ ಸುಳಿವು ಸಿಕ್ಕಿರಲಿಲ್ಲ. ಬಳಿಕ ಸುಮಾರು 40 ಬೋಟ್‍ಗಳಲ್ಲಿ ಸಮುದ್ರದಲ್ಲಿ ಹುಡುಕಾಟ ನಡೆಸಲಾಗಿತ್ತು. ಆದ್ರೂ ನಾಗರಾಜ್ ಮಾತ್ರ ಪತ್ತೆಯಾಗಿರಲಿಲ್ಲ.

    ಕೊನೆಗೆ ಎನ್‍ಎಂ ಪಿಟಿ ಯಿಂದ ಹೊರಟ ಕೋಸ್ಟ್‍ಗಾರ್ಡ್ ನೌಕೆಯವರು ಆ ಸ್ಥಳದಲ್ಲಿ ಹುಡುಕಾಡಿ ಸಮುದ್ರಕ್ಕೆ ಬಿದ್ದ ಕಾರ್ಮಿಕನನ್ನು ಪತ್ತೆ ಹಚ್ಚಿ ರಕ್ಷಿಸಿ ರಾತ್ರಿ ನವಮಂಗಳೂರಿಗೆ ಕರೆತಂದಿದ್ದಾರೆ. ಒಟ್ಟಿನಲ್ಲಿ ಸಮುದ್ರದಲ್ಲಿ ಸುಮಾರು 6 ಗಂಟೆಗಳ ಕಾಲ ಈಜಿ ನಾಗರಾಜ್ ಸಾವನ್ನೇ ಗೆದ್ದು ಬಂದಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

  • ಅಲೆಗಳ ಹೊಡೆತಕ್ಕೆ ಸಿಲುಕಿ ಮಾರ್ಗಮಧ್ಯಯೇ ಕೆಟ್ಟು ನಿಂತ ದೋಣಿಗಳು: ಮೂವರ ರಕ್ಷಣೆ!

    ಅಲೆಗಳ ಹೊಡೆತಕ್ಕೆ ಸಿಲುಕಿ ಮಾರ್ಗಮಧ್ಯಯೇ ಕೆಟ್ಟು ನಿಂತ ದೋಣಿಗಳು: ಮೂವರ ರಕ್ಷಣೆ!

    ಉಡುಪಿ: ಮಲ್ಪೆ ಬಂದರಿನಿಂದ ಆಳ ಸಮುದ್ರ ಮೀನುಗಾರಿಕೆಗೆ ತೆರಳಿದ್ದ ಮೀನುಗಾರಿಕಾ ದೋಣಿಯು ಕೋಡಿಬೆಂಗ್ರೆ ಸಮೀಪ ಮುಳುಗಡೆಯಾಗಿದ್ದು, ಮತ್ತೆರಡು ದೋಣಿಗಳು ಸುರತ್ಕಲ್ ಹಾಗೂ ಭಟ್ಕಳ ಸಮೀಪ ತಾಂತ್ರಿಕ ತೊಂದರೆಯಿಂದಾಗಿ ಸಮುದ್ರ ಮಧ್ಯೆಯೇ ಸಿಲುಕಿಕೊಂಡಿವೆ.

    ಮಲ್ಪೆ ತೊಟ್ಟಂನ ಶಕುಂತಲ ಕರ್ಕೇರ ಎಂಬವರ ಹನುಮ ಸಾನಿಧ್ಯ ಹೆಸರಿನ ದೋಣಿಯು ಮಲ್ಪೆ ಬಂದರಿನಿಂದ ಮೀನುಗಾರಿಕೆಗೆ ಹೊರಟ್ಟಿದ್ದು, ಕೋಡಿಬೆಂಗ್ರೆಯ ಸುಮಾರು 12 ನಾಟಿಕಲ್ ಮೈಲಿ ದೂರದಲ್ಲಿ ತಾಂತ್ರಿಕ ದೋಷದಿಂದಾಗಿ ದೋಣಿಯು ಅಲ್ಲೇ ನಿಂತುಕೊಂಡಿದೆ. ಸಮುದ್ರದಲ್ಲಿನ ಭಾರೀ ಗಾಳಿಮಳೆಯ ಪರಿಣಾಮ ಕೆಟ್ಟು ನಿಂತ ದೋಣಿಯು ಏಳು ಮೈಲಿ ದೂರದವರೆಗೆ ದಡಕ್ಕೆ ಬಂದು ಕಲ್ಲಿಗೆ ಬಡಿದಿದೆ. ಈ ವೇಳೆ ದೋಣಿಯೊಳಗೆ ನೀರು ನುಗ್ಗಿ ನೋಡ ನೋಡುತ್ತಿದ್ದಂತೆ ಮುಳುಗುಡೆಯಾಗಿದೆ.

    ದೋಣಿಯಲ್ಲಿದ್ದ ಮೂವರು ಮೀನುಗಾರರನ್ನು ಸಮೀಪದಲ್ಲಿದ್ದ ಭವ್ಯತ ಮತ್ತು ಲಕ್ಷ್ಮೀ ಪಂಡರಿ ಎಂಬ ಹೆಸರಿನ ದೋಣಿಯ ಮೀನುಗಾರರು ರಕ್ಷಿಸಿದ್ದಾರೆ. ನಂತರ ಮುಳುಗಡೆಯಾಗುತ್ತಿದ್ದ ದೋಣಿಯನ್ನು ಇತರೆ ದೋಣಿಗಳ ಸಹಾಯದಿಂದ ಹಗ್ಗ ಕಟ್ಟಿ ದಡಕ್ಕೆ ಎಳೆದು ತರಲಾಗಿದೆ. ಈ ಅವಘಡದಿಂದಾಗಿ ಸುಮಾರು 9 ಲಕ್ಷ ರೂ. ನಷ್ಟವಾಗಿದೆ ಎಂದು ಅಂದಾಜಿಸಲಾಗಿದೆ.

    ಇದಲ್ಲದೇ ಎರಡು ದಿನಗಳ ಹಿಂದೆ ಮಲ್ಪೆ ಬಂದರಿನಿಂದ ಆಳ ಸಮುದ್ರಕ್ಕೆ ಮೀನುಗಾರಿಕೆಗೆ ತೆರಳಿದ್ದ ವಿಶ್ವಾಸ್ ಎಂಬ ದೋಣಿ ಸುರತ್ಕಲ್ ಸಮೀಪದ 35 ನಾಟಿಕಲ್ ಹಾಗೂ ಲಕ್ಷ್ಮೀ ಜನಾರ್ದನ್ ಎಂಬ ದೋಣಿಯು ಭಟ್ಕಳ ಸಮೀಪದ 40 ನಾಟಿಕಲ್ ದೂರದ ಸಮುದ್ರದಲ್ಲಿ ಇಂಜಿನ್ ಸಮಸ್ಯೆ ಯಿಂದ ಕೆಟ್ಟು ನಿಂತಿರುವ ಬಗ್ಗೆ ವರದಿಯಾಗಿದೆ. ವಿಶ್ವಾಸ್ ಬೋಟಿನಲ್ಲಿ ಒಟ್ಟು 9 ಮಂದಿ ಮತ್ತು ಲಕ್ಷ್ಮೀ ಜನಾರ್ದನ್ ಬೋಟಿನಲ್ಲಿ ಎಂಟು ಮಂದಿ ಮೀನುಗಾರರಿದ್ದಾರೆ ಎಂದು ತಿಳಿದುಬಂದಿದೆ.

    ಈ ಬಗ್ಗೆ ದೋಣಿಯವರು ಹಾಗೂ ಮಲ್ಪೆ ಮೀನುಗಾರರ ಸಂಘದವರು ಈಗಾಗಲೇ ಕರಾವಳಿ ಕಾವಲು ಪಡೆಯವರಿಗೆ ಮಾಹಿತಿ ನೀಡಿದ್ದು, ಭಾರೀ ಮಳೆಯಿಂದ ಕಡಲ ಅಬ್ಬರ ತೀವ್ರಗೊಂಡಿರುವುದರಿಂದ ಈ ದೋಣಿಗಳ ರಕ್ಷಣಾ ಕಾರ್ಯಕ್ಕೆ ಅಡ್ಡಿಯಾಗಿದೆ. ಈ ಬೋಟಿನಲ್ಲಿರುವ ಮೀನುಗಾರರು ಇದೀಗ ಸಂರ್ಪಕದಲ್ಲಿದ್ದು, ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ ಎಂಬ ಮಾಹಿತಿಗಳು ಲಭ್ಯವಾಗಿವೆ.

    ನಮ್ಮ ಕಾರ್ಯಾಚರಣೆಯ ವ್ಯಾಪ್ತಿ ಐದು ನಾಟಿಕಲ್ (9.25 ಕಿ.ಮೀ) ದೂರವಾಗಿರುವುದರಿಂದ ಈ ಕುರಿತು ಈಗಾಗಲೇ ಮಂಗಳೂರು ಹಾಗೂ ಕಾರವಾರ ಕೋಸ್ಟ್ ಗಾರ್ಡ್ ಗಳಿಗೆ ಮಾಹಿತಿ ರವಾನಿಸಲಾಗಿದೆ ಎಂದು ಮಲ್ಪೆ ಕರಾವಳಿ ಕಾವಲು ಪಡೆಯ ಡಿವೈಎಸ್ಪಿ ಜೈಶಂಕರ್ ತಿಳಿಸಿದ್ದಾರೆ.

    ಈಗಾಗಲೇ ಮೀನುಗಾರಿಕೆಗೆ ತೆರಳಿ ಹಿಂದಿರುಗುತ್ತಿರುವ ದೋಣಿಗಳಲ್ಲಿರುವ ಮೀನುಗಾರರ ಸಂಪರ್ಕ ಮಾಡಿದ್ದು, ಕೆಟ್ಟು ನಿಂತಿರುವ ದೋಣಿಗಳಲ್ಲಿರುವ ಮೀನುಗಾರರನ್ನು ರಕ್ಷಿಸುವಂತೆ ಹೇಳಿದ್ದೇವೆ. ಅಲ್ಲದೇ ಸಮುದ್ರದಲ್ಲಿ ಸಾಕಷ್ಟು ಏರಿಳೀತ ಕಂಡುಬರುತ್ತಿರುವುದರಿಂದ ಯಾರಿಗೂ ಸಮುದ್ರಕ್ಕೆ ತೆರಳಲು ಸಾಧ್ಯವಾಗುತ್ತಿಲ್ಲ. ಯಾರು ಕೂಡ ಮೀನುಗಾರಿಕೆಗೆ ತೆರಳದಂತೆ ಈಗಾಗಲೇ ಸೂಚನೆಯನ್ನು ನೀಡಲಾಗುತ್ತಿದೆ ಎಂದು ಜೈಶಂಕರ್ ಹೇಳಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictvnews

  • ಕುಮಟಾದಲ್ಲಿ ಸಮುದ್ರಪಾಲಾಗಿದ್ದ ಯುವಕನ ಮೃತದೇಹವನ್ನು ಹೊರತೆಗೆದ ನೌಕಾಪಡೆ

    ಕುಮಟಾದಲ್ಲಿ ಸಮುದ್ರಪಾಲಾಗಿದ್ದ ಯುವಕನ ಮೃತದೇಹವನ್ನು ಹೊರತೆಗೆದ ನೌಕಾಪಡೆ

    ಕಾರವಾರ: ಕುಮಟಾದ ವನ್ನಳ್ಳಿಯಲ್ಲಿ ಸಮುದ್ರಪಾಲಾಗಿದ್ದ ಯುವಕನ ಮೃತದೇಹವನ್ನು ನೌಕಾದಳದ ಹೆಲಿಕಾಪ್ಟರ್ ಸಹಾಯದಿಂದ ಹೊರತೆಗೆಯಲಾಗಿದೆ.

    ಆನಂದ ಮೊಗೇರ್ (31) ಆಗಸ್ಟ್ 5 ರಂದು ವನ್ನಳ್ಳಿ ಕಡಲತೀರದಲ್ಲಿ ಬಂಡೆ ಮೇಲಿಂದ ಕಾಲುಜಾರಿ ಸಮುದ್ರದಲ್ಲಿ ಬಿದ್ದಿದ್ದರು. ಮರುದಿನ ಆನಂದ್ ಮೃತದೇಹ ಕಾಲುಜಾರಿ ಬಿದ್ದ ಜಾಗದಲ್ಲೇ ಪತ್ತೆಯಾಗಿತ್ತು. ಆದರೆ ಪೊಲೀಸ್ ಸಿಬ್ಬಂದಿ ಹಾಗೂ ಅಗ್ನಿಶಾಮಕ ದಳದ ಸಿಬ್ಬಂದಿ ಎಷ್ಟೇ ಪ್ರಯತ್ನ ಪಟ್ಟರೂ ನೀರಿನ ರಭಸದಿಂದಾಗಿ ಮೃತದೇಹವನ್ನು ದಡಕ್ಕೆ ತರಲು ಸಾಧ್ಯವಾಗಿರಲಿಲ್ಲ.

    ಸುಮುದ್ರದಲ್ಲಿ ನೀರಿನ ರಭಸ ಹೆಚ್ಚಾಗಿದ್ದರಿಂದ ನೌಕಾದಳದವರ ಸಹಾಯ ಪಡೆದುಕೊಂಡು, ನುರಿತ ಮುಳುಗು ತಜ್ಞರು ಕೂಡ ಪ್ರಯತ್ನ ಪಟ್ಟಿದ್ದರೂ ಸಾಧ್ಯವಾಗಲಿಲ್ಲ. ಈ ಹಿನ್ನೆಲೆಯಲ್ಲಿ ಸೇನೆಯ ಹೆಲಿಕಾಪ್ಟರ್ ಮೂಲಕ ಕೊನೆಯ ಪ್ರಯತ್ನ ನಡೆಸಿದರು. ಮೃತದೇಹವಿರುವ ಪ್ರದೇಶದ ಬಳಿ ಹೆಲಿಕಾಪ್ಟರ್ ನಿಂದ ಉಂಟಾದ ಗಾಳಿಯ ರಭಸಕ್ಕೆ ಶವ ದಡಕ್ಕೆ ತೇಲಿ ಬರುವಂತೆ ಮಾಡಲಾಯಿತು.

    ಸತತ ಮೂರು ದಿನಗಳ ಶತಪ್ರಯತ್ನದಿಂದಾಗಿ ಕೊನೆಗೂ ಕೊಳೆತ ಸ್ಥಿತಿಯಲ್ಲಿ ಮೃತದೇಹವನ್ನು ಸಮುದ್ರದಿಂದ ಹೊರತೆಗೆದಿದ್ದಾರೆ. ಘಟನೆ ಸಂಬಂಧ ಕುಮಟಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictvnews

  • ಅಲೆಗಳ ಅಬ್ಬರಕ್ಕೆ ಕೊಚ್ಚಿ ಹೋದ ಬೆಂಗ್ಳೂರು ಯುವಕ

    ಅಲೆಗಳ ಅಬ್ಬರಕ್ಕೆ ಕೊಚ್ಚಿ ಹೋದ ಬೆಂಗ್ಳೂರು ಯುವಕ

    ಕಾರವಾರ: ಕುಟುಂಬದೊಂದಿಗೆ ಪ್ರವಾಸಕ್ಕೆ ಬಂದ ವೇಳೆ ಸಮುದ್ರಕ್ಕಿಳಿದಿದ್ದ ಯುವಕನೊಬ್ಬ ಕೊಚ್ಚಿ ಹೋದ ಘಟನೆ ಭಟ್ಕಳ ತಾಲೂಕಿನ ಮುರುಡೇಶ್ವರದಲ್ಲಿ ನಡೆದಿದೆ.

    ಬೆಂಗಳೂರು ಮೂಲದ ಕಿರಣಕುಮಾರ್(18) ನೀರಿನಲ್ಲಿ ಕೊಚ್ಚಿ ಹೋದ ಯುವಕ. ಮತ್ತೊಬ್ಬ ಕಾರ್ತಿಕ್ ಮುನಿರಾಜು (20) ಯುವಕನನ್ನು ರಕ್ಷಣೆ ಮಾಡಲಾಗಿದೆ. ಬೆಂಗಳೂರಿನ ಯಲಹಂಕದ ಚಂದ್ರಶೇಖರ, ಸುರೇಶ, ಗೌರಮ್ಮ, ಚೈತ್ರಾ, ಗೌರಮ್ಮ, ಸಂದೇಶ್ ಮತ್ತು ಶ್ರೀನಿವಾಸ್ ಸೇರಿ ಒಟ್ಟು 9 ಜನ ಕುಟುಂಬ ಸದಸ್ಯರು ಪ್ರವಾಸಕ್ಕೆಂದು ಮುರುಡೇಶ್ವರಕ್ಕೆ ಬಂದಿದ್ದರು.

    ಇವರಲ್ಲಿ ನಾಲ್ವರು ಸಮುದ್ರಕ್ಕೆ ಈಜಲು ತೆರಳಿದ್ದರು. ಈ ವೇಳೆ ಇಬ್ಬರು ಅಲೆಗಳ ಅಬ್ಬರಕ್ಕೆ ಕೊಚ್ಚಿ ಹೋಗಿದ್ದರು. ಇದನ್ನು ಗಮನಿಸಿದ ಸ್ಥಳೀಯರು ಹಾಗೂ ಲೈಫ್ ಗಾರ್ಡ್ ಸಿಬ್ಬಂದಿ ತಕ್ಷಣ ಸಮುದ್ರಕ್ಕೆ ಇಳಿದು ಓರ್ವನನ್ನು ರಕ್ಷಣೆ ಮಾಡಿದ್ದಾರೆ. ಆದರೆ ಇನ್ನೊಬ್ಬ ನಾಪತ್ತೆಯಾಗಿದ್ದಾನೆ. ಯುವಕನಿಗಾಗಿ ಶೋಧಕಾರ್ಯ ನಡೆಸಲಾಗುತ್ತಿದೆ.

    ಈ ಬಗ್ಗೆ ಮುರುಡೇಶ್ವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

    https://www.youtube.com/watch?v=RX9Cyag8y7g

  • ಸಮುದ್ರದಲ್ಲಿ ಅಲೆಗಳ ಹೊಡೆತಕ್ಕೆ ಮುಳುಗುತ್ತಿದ್ದ ನಾಲ್ವರು ಮೀನುಗಾರರ ರಕ್ಷಣೆ

    ಸಮುದ್ರದಲ್ಲಿ ಅಲೆಗಳ ಹೊಡೆತಕ್ಕೆ ಮುಳುಗುತ್ತಿದ್ದ ನಾಲ್ವರು ಮೀನುಗಾರರ ರಕ್ಷಣೆ

    ಕಾರವಾರ: ಮೀನುಗಾರಿಕೆ ನಡೆಸಿ ವಾಪಾಸಾಗುತ್ತಿದ್ದ ನಾಲ್ಕು ಜನ ಮೀನುಗಾರರು ಅರಬ್ಬಿ ಸಮುದ್ರದಲ್ಲಿ ಅಲೆಗಳ ಹೊಡೆತಕ್ಕೆ ಮುಳುಗುತ್ತಿದ್ದರು. ಈ ವೇಳೆ ಸ್ಥಳೀಯ ಮೀನುಗಾರರು ಮುಳುಗುತ್ತಿದ್ದವರನ್ನು ರಕ್ಷಣೆ ಮಾಡಿದ ಘಟನೆ ಉತ್ತರ ಕನ್ನಡ ಜಿಲ್ಲೆಯ ಭಟ್ಕಳದ ಅರಬ್ಬಿ ಸಮುದ್ರದಲ್ಲಿ ನಡೆದಿದೆ.

    ಭಟ್ಕಳದ ಬೆಳ್ನಿ ಗ್ರಾಮದ ತಿಮ್ಮಪ್ಪ ಮೊಗೇರ್, ರಾಮಚಂದ್ರ ಖಾರ್ವಿ, ಗಣಪತಿ ಖಾರ್ವಿ ಮತ್ತು ಶ್ರೀನಿವಾಸ್ ಖಾರ್ವಿ ಅವರನ್ನು ರಕ್ಷಣೆ ಮಾಡಲಾಗಿದೆ. ನಾಲ್ವರನ್ನು ಭಟ್ಕಳದ ಮುಂಡಳ್ಳಿಯ ಮೀನುಗಾರರು ರಕ್ಷಣೆ ಮಾಡಿದ್ದಾರೆ.

    ಈ ನಾಲ್ವರು ಅರಬ್ಬಿ ಸಮುದ್ರದಲ್ಲಿ ಪಾತಿ ದೋಣಿಯಲ್ಲಿ ಮೀನುಗಾರಿಕೆ ನಡೆಸಿ ಮರಳಿ ವಾಪಸ್ಸಾಗುತ್ತಿದ್ದರು. ಈ ವೇಳೆ ಅಲೆಗಳ ಹೊಡೆತಕ್ಕೆ ದೋಣಿ ಮಗಚಿ ನಾಲ್ವರು ಮೀನುಗಾರರು ಸಮುದ್ರಪಾಲಾಗಿದ್ದರು. ಇದನ್ನು ಗಮನಿಸಿದ ಸ್ಥಳೀಯ ಮೀನುಗಾರರು ಪ್ರಾಣಾಪಾಯದಲ್ಲಿದ್ದ ನಾಲ್ವರನ್ನು ರಕ್ಷಿಸಿದ್ದಾರೆ.

    ಈ ಘಟನೆ ಭಟ್ಕಳ ಗ್ರಾಮೀಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

  • ಮಳೆಯ ಅಬ್ಬರ – ಅರಬ್ಬೀ ಸಮುದ್ರದಲ್ಲಿ ಬೊಬ್ಬಿರಿಯುತ್ತಿವೆ ರಕ್ಕಸ ಗಾತ್ರದ ಅಲೆಗಳು!

    ಮಳೆಯ ಅಬ್ಬರ – ಅರಬ್ಬೀ ಸಮುದ್ರದಲ್ಲಿ ಬೊಬ್ಬಿರಿಯುತ್ತಿವೆ ರಕ್ಕಸ ಗಾತ್ರದ ಅಲೆಗಳು!

    ಉಡುಪಿ: ಕರಾವಳಿಯಲ್ಲಿ ವರುಣ ಅಬ್ಬರಿಸಿ ಬೊಬ್ಬಿರಿಯುತ್ತಿದ್ದಾನೆ. ಜೋರು ಮಳೆ ಅರಬ್ಬೀ ಸಮುದ್ರವನ್ನು ಬುಡಮೇಲು ಮಾಡುತ್ತಿದೆ. ಸಮುದ್ರ ತೀರದಲ್ಲಿ ರಕ್ಕಸ ಗಾತ್ರದ ಅಲೆಗಳು ಏಳುತ್ತಿದ್ದು, ಸಮುದ್ರ ತಟದ ಜನರು ಭಯಭೀತರಾಗಿದ್ದಾರೆ. ಕರಾವಳಿ ಕಡಲಿನ ಅಲೆಗೆ ಮೀನುಗಾರಿಕಾ ರಸ್ತೆಗಳೆಲ್ಲಾ ಕೊಚ್ಚಿ ಹೋಗುವ ಪರಿಸ್ಥಿತಿ ನಿರ್ಮಾಣವಾಗಿದೆ. ಇದನ್ನೂ ಓದಿ: ಉಡುಪಿಗೆ ಮೆಕ್ನು ಚಂಡಮಾರುತ ಎಫೆಕ್ಟ್ – 500ಮೀ. ದೂರದಿಂದ್ಲೇ ಅಬ್ಬರಿಸಿಕೊಂಡು ಅಪ್ಪಳಿಸುತ್ತಿವೆ ಅಲೆಗಳು

    ಕಡಲ್ಕೊರೆತ ಕರಾವಳಿಗಿದು ಬೆಂಬಿಡದೆ ಕಾಡುವ ಸಮಸ್ಯೆಯಾಗಿದೆ. ಈ ಬಾರಿ ಮುಂಗಾರು ಆರಂಭವಾದ ಮೊದಲ ವಾರದಲ್ಲೇ ಸಮುದ್ರದಲ್ಲಿ ಕಡಲ್ಕೊರೆತ ಶುರುವಾಗಿದೆ. ಉಡುಪಿ ಜಿಲ್ಲೆಯ ಹೆಜಮಾಡಿಯಿಂದ ಶೀರೂರುವರೆಗೆ ಅಲ್ಲಲ್ಲಿ ರಕ್ಕಸ ಗಾತ್ರದ ಅಲೆಗಳು ದಡಕ್ಕಪ್ಪಳಿಸುತ್ತಿದೆ. ಮಲ್ಪೆಯ ಪಡುಕೆರೆ ವ್ಯಾಪ್ತಿಯಲ್ಲಿ ತೀವ್ರ ಕಡಲ್ಕೊರೆತವಾಗುತ್ತಿದೆ. ಇದನ್ನೂ ಓದಿ: ಅರಬ್ಬೀ ಸಮುದ್ರದ ನೀರಿನ ಬಣ್ಣ ಬದಲು- ಸ್ಥಳೀಯರಲ್ಲಿ ಆತಂಕ

    ಈ ಭಾಗದಲ್ಲಿ ಸಾವಿರಕ್ಕೂ ಹೆಚ್ಚು ಕುಟುಂಬಗಳು ವಾಸಿಸುತ್ತಿವೆ. ಪಡುಕೆರೆ ಸಿಕ್ಕಾಪಟ್ಟೆ ಡೇಂಜರಸ್. ಇಲ್ಲಿ ಒಂದು ಕಡೆಯಿಂದ ನದಿ, ಇನ್ನೊಂದು ಕಡೆಯಿಂದ ಸಮುದ್ರ, ಇವೆರಡರ ನಡುವೆ ಜನ ವಾಸಿಸಬೇಕು. ಈ ನಡುವೆ ಸಾವಿರಾರು ತೆಂಗಿನ ಮರಗಳು ಗಾಳಿಯ ರಭಸಕ್ಕೆ ನಲುಗಿಹೋಗಿದೆ.

    ಕೇರಳ, ಗೋವಾ- ಮಹಾರಾಷ್ಟ್ರದಲ್ಲಿ ಸಮುದ್ರದ ಅಬ್ಬರಕ್ಕೆ ಅಲ್ಲಿನ ಸರ್ಕಾರಗಳು ಲಗಾಮು ಹಾಕಿದೆ. ಆದರೆ ಇಲ್ಲಿ ಕಡಲ್ಕೊರೆತ ಸಾಂಪ್ರದಾಯಿಕ ಸಮಸ್ಯೆಯಾಗಿದೆ. ಹೀಗಾಗಿ ಸರ್ಕಾರ ಈ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳಬೇಕಾಗಿದೆ.