Tag: sea

  • ಗೋಕರ್ಣ ಸಮುದ್ರದಲ್ಲಿ ಮುಳುಗುತ್ತಿದ್ದ ವಿದ್ಯಾರ್ಥಿಗಳಿಬ್ಬರ ರಕ್ಷಣೆ

    ಗೋಕರ್ಣ ಸಮುದ್ರದಲ್ಲಿ ಮುಳುಗುತ್ತಿದ್ದ ವಿದ್ಯಾರ್ಥಿಗಳಿಬ್ಬರ ರಕ್ಷಣೆ

    ಕಾರವಾರ: ಸಮದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ವಿದ್ಯಾರ್ಥಿಗಳನ್ನು ಜೀವರಕ್ಷಕ ಸಿಬ್ಬಂದಿಗಳು ರಕ್ಷಣೆ ಮಾಡಿದ ಘಟನೆ ಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲೂಕಿನ ಗೋಕರ್ಣದ ಮುಖ್ಯ ಕಡಲತೀರದಲ್ಲಿ ನಡೆದಿದೆ.

    ಉತ್ತರ ಪ್ರದೇಶ ಮೂಲದ ರಮೇಶ್ ಯಾದವ್ ಮಧ್ಯಪ್ರದೇಶ ಮೂಲದ ಕಮಲೇಶ್ ಕುಮಾರ್ ರಕ್ಷಿಸಲ್ಪಟ್ಟ ವಿದ್ಯಾರ್ಥಿಗಳಾಗಿದ್ದಾರೆ.

    ಬೆಂಗಳೂರಿನಿಂದ ಏಳು ಜನ ವಿದ್ಯಾರ್ಥಿಗಳ ತಂಡ ಪ್ರವಾಸಕ್ಕೆಂದು ಗೋಕರ್ಣಕ್ಕೆ ಆಗಮಿಸಿದ್ರು, ಈ ಸಂದರ್ಭದಲ್ಲಿ ಮುಖ್ಯ ಕಡಲ ತೀರದಲ್ಲಿ ನೀರಿಗೆ ಇಳಿದಾಗ ಅಲೆಗೆ ಎರಡು ಜನ ಕೊಚ್ಚಿ ಹೋಗಿದ್ದರು.

    ಕೂಡಲೇ ಸಮಯ ಪ್ರಜ್ಞೆ ಮೆರೆದ ಜೀವರಕ್ಷಕ ಸಿಬ್ಬಂದಿ ಮೋಹನ್ ಅಂಬಿ, ರಾಜು ಅಂಬಿ, ಚಂದ್ರಕಾಂತ್ ಹಾಗೂ ಪುರುಷೋತ್ತಮ್ ಹರಿಕಾಂತ್ ಎಂಬವರು ರಮೇಶ್ ಯಾದವ್ ಹಾಗೂ ಕಮಲೇಶ್ ಕುಮಾರ್ ರನ್ನು ರಕ್ಷಿಸಿದ್ದಾರೆ.

    ಈ ಸಂಬಂಧ ಗೋಕರ್ಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

  • ಸಮುದ್ರದಲ್ಲಿ ಆಟವಾಡಲು ಹೋಗಿ ಇಬ್ಬರು ಬಾಲಕರು ನೀರುಪಾಲು

    ಸಮುದ್ರದಲ್ಲಿ ಆಟವಾಡಲು ಹೋಗಿ ಇಬ್ಬರು ಬಾಲಕರು ನೀರುಪಾಲು

    ಕಾರವಾರ: ಆಟವಾಡಲು ಸಮುದ್ರಕ್ಕೆ ತೆರಳಿದ್ದ ಬಾಲಕರು ಶವವಾಗಿ ಪತ್ತೆಯಾಗಿರುವ ಘಟನೆ ಉತ್ತರಕನ್ನಡ ಜಿಲ್ಲೆಯ ಭಟ್ಕಳ ತಾಲೂಕಿನ ಮುರ್ಡೇಶ್ವರದ ಸಣ್ಣಬಾವಿ ಗ್ರಾಮದಲ್ಲಿ ತಡರಾತ್ರಿ ನಡೆದಿದೆ.

    ಗಣೇಶ ನಾಯ್ಕ(10) ಮತ್ತು ವಿನಾಯಕ ನಾಯ್ಕ(09) ಮೃತ ದುರ್ದೈವಿಗಳು. ಸೋಮವಾರ ಸಮುದ್ರದಲ್ಲಿ ಆಟವಾಡುತ್ತಿದ್ದ ವೇಳೆ ಅಲೆಗಳಿಗೆ ಸಿಕ್ಕು ಕೊಚ್ಚಿ ಹೋಗಿದ್ದರು. ತಡರಾತ್ರಿ ಹುಡುಕಾಟ ನಡೆಸಿದರೂ ಇಬ್ಬರ ಸುಳಿವು ಸಿಕ್ಕಿರಲಿಲ್ಲ.

    ಇಂದು ಬೆಳಿಗ್ಗೆ ಗ್ರಾಮದ ಕಡಲತೀರದಲ್ಲಿ ಬಾಲಕರ ಶವ ಪತ್ತೆಯಾಗಿದೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮುರ್ಡೇಶ್ವರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

     

  • ವಿಡಿಯೋ: ಪ್ರಾಣಕ್ಕೆ ಎರವಾದ ಸೆಲ್ಫೀ- ನೋಡನೋಡ್ತಿದ್ದಂತೆ ಸಮುದ್ರದ ಅಲೆಯಲ್ಲಿ ಕೊಚ್ಚಿ ಹೋದ್ರು

    ವಿಡಿಯೋ: ಪ್ರಾಣಕ್ಕೆ ಎರವಾದ ಸೆಲ್ಫೀ- ನೋಡನೋಡ್ತಿದ್ದಂತೆ ಸಮುದ್ರದ ಅಲೆಯಲ್ಲಿ ಕೊಚ್ಚಿ ಹೋದ್ರು

    ರಾಜ್‍ಕೋಟ್: ರಾಜಸ್ಥಾನ ಮೂಲದ ಮೂವರು ಯುವಕರು ಡಿಯು ವಿನ ಪ್ರಸಿದ್ಧ ನಾಗೋವಾ ಬೀಚ್‍ನಲ್ಲಿ ಸೆಲ್ಫೀ ತೆಗೆಯುವ ವೇಳೆ ಅಲೆಗಳೊಂದಿಗೆ ಕೊಚ್ಚಿ ಹೋದ ಘಟನೆ ಭಾನುವಾರದಂದು ನಡೆದಿದೆ.

    ಯುವಕರು ಸಮುದ್ರದ ಮಧ್ಯೆ ಸೆಲ್ಫೀ ತೆಗೆಯುತ್ತಿದ್ದ ವೇಳೆ ಈ ದುರ್ಘಟನೆ ನಡೆದಿದೆ ಎಂದು ಡಿಯು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

    ಇಲ್ಲಿನ ಅಧೀಕಾರಿಗಳು ಸಮುದ್ರದಲ್ಲಿ ಸೆಲ್ಫೀ ತೆಗೆಯಬಾರದೆಂದು ಎಚ್ಚರಿಕೆ ನೀಡಿದ್ದರೂ ಕೂಡ ಯುವಕರು ನಿಯಮವನ್ನು ಗಾಳಿಗೆ ತೂರಿ ಸೆಲ್ಫೀ ತೆಗೆಯುತ್ತಿದ್ದರು. ಈ ವೇಳೆ ಅಲೆಗಳ ಅಬ್ಬರ ಜೋರಾಗಿತ್ತು. ಯುವಕರಿದ್ದ ಬಂಡೆಯ ಮೇಲೆ ಜೋರಾದ ಅಲೆ ಬಂದಿದ್ದು, ನೋಡನೋಡ್ತಿದ್ದಂತೆ ನೀರಿನಲ್ಲಿ ಕೊಚ್ಚಿ ಹೋಗಿದ್ದಾರೆ.

    ಘಟನೆಯಲ್ಲಿ ಮೂವರು ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದು, ಓರ್ವ ಯುವಕ ಈಜಿ ದಡ ಸೇರಿ ಪ್ರಾಣ ಉಳಿಸಿಕೊಂಡಿದ್ದಾನೆಂದು ಪೊಲೀಸರು ಹೇಳಿದ್ದಾರೆ. ಯುವಕರೆಲ್ಲರೂ ಡಿಯುವಿನ ಕೆವ್ಡಿ ಗ್ರಾಮದಲ್ಲಿ ಕೆಲಸಕ್ಕಾಗಿ ಬಂದಿದ್ದರು ಎಂದು ವರದಿಯಾಗಿದೆ.

    https://www.youtube.com/watch?v=5cwGtIMOYLw

  • ಬೇರ್ಪಟ್ಟಿದೆ ಲಕ್ಷ ಕೋಟಿ ಟನ್ ತೂಕದ ಹಿಮಬಂಡೆ: ಭಾರತದ ಮೇಲಾಗುವ ಪರಿಣಾಮ ಏನು?

    ಬೇರ್ಪಟ್ಟಿದೆ ಲಕ್ಷ ಕೋಟಿ ಟನ್ ತೂಕದ ಹಿಮಬಂಡೆ: ಭಾರತದ ಮೇಲಾಗುವ ಪರಿಣಾಮ ಏನು?

    ಲಂಡನ್: ಜಾಗತಿಕ ತಾಪಮಾನದಿಂದಾಗಿ ಭಾರೀ ದೊಡ್ಡ ಹಿಮಬಂಡೆಯೊಂದು ಅಂಟಾರ್ಟಿಕಾದಲ್ಲಿರುವ ವಿಶ್ವದ ಅತ್ಯಂತ ದೊಡ್ಡ ಹಿಮಬಂಡೆಯಾಗಿರುವ ಲಾರ್ಸೆನ್ ಸಿ ಯಿಂದ ಜುಲೈ 10- 12ರ ಮಧ್ಯಭಾಗದಲ್ಲಿ ಬೇರ್ಪಟ್ಟಿದೆ.

    ಈ ಹಿಮಬಂಡೆ ಸರಿ ಸುಮಾರು 5 ಸಾವಿರ 800 ಚದರ ಕಿ.ಮೀ. ಅಷ್ಟು ದೊಡ್ಡದಾಗಿದ್ದು, ಒಂದು ಲಕ್ಷ ಕೋಟಿ ಟನ್ ತೂಕವಿದೆ. ಅಂದ್ರೆ ಬರೋಬ್ಬರಿ ನಾಲ್ಕು ದೆಹಲಿಯಷ್ಟು ದೊಡ್ಡದು. ಈ ಹಿಮಬಂಡೆ ತುಂಡಾಗಿರುವುದಿಂದ ವಿಶ್ವದಲ್ಲೇ ಭಾರೀ ಪ್ರತಿಕೂಲ ಪರಿಣಾಮವಾಗಲಿದೆ ಅಂತ ವಿಜ್ಞಾನಿಗಳು ಅಂದಾಜಿಸಿದ್ದಾರೆ. ವಿಶೇಷವಾಗಿ ದಕ್ಷಿಣ ಧ್ರುವದ ಬಳಿ ಸಂಚರಿಸುವ ಹಡಗುಗಳಿಗೆ ಗಂಭೀರ ಅಪಾಯವಾಗಲಿದೆ ಎಂದು ವಿಜ್ಞಾನಿಗಳು ಎಚ್ಚರಿಸಿದ್ದಾರೆ.

    ಭಾರತದ ಮೇಲಾಗುವ ಪರಿಣಾಮ ಏನು?
    ಭಾರತ ಪರ್ಯಾಯ ದ್ವೀಪರಾಷ್ಟ್ರ. ಮೂರು ಕಡೆ ನೀರಿನಿಂದ ತುಂಬಿದೆ. ಹೀಗಾಗಿ, ತುಂಡಾಗಿರುವ ಮಂಜುಗಡ್ಡೆ ನಿಧಾನವಾಗಿ ಕರಗಲು ಆರಂಭಿಸುತ್ತದೆ. ಆಗ ಸಮುದ್ರ ಮಟ್ಟ ಏರಿಕೆಯಾಗೋದು ಸಾಮಾನ್ಯ. ಹಾಗಾಗಿ, ಭಾರತದ ಕಡಲ ಕಿನಾರೆಯಲ್ಲಿ ನೀರಿನ ಪ್ರಮಾಣ ಹೆಚ್ಚಾಗಲಿದೆ. ಅರಬ್ಬಿಸಮುದ್ರದ ಮುಂಬೈ, ಹಿಂದೂ ಮಹಾಸಾಗರದ ಚೆನ್ನೈ, ಬಂಗಾಳಕೊಲ್ಲಿಯ ಕೊಲ್ಕತ್ತಾದ ಮೇಲೆ ಪರಿಣಾಮ ಆಗಲಿದೆ.

    2050ರೊಳಗೆ ಸಮುದ್ರ ಏರಿಕೆಯಾಗಲಿರುವ ಬಗ್ಗೆ ವಿಜ್ಞಾನಿಗಳು ಅಂದಾಜಿಸಿದ್ದು 2100ನೇ ಇಸ್ವಿಯೊಳಗಾಗಿ 30 ರಿಂದ 100 ಸೆ.ಮೀ. ನೀರು ಏರಿಕೆಯಾಗಬಹುದು. ಕೆಲವು ಪ್ರದೇಶದಲ್ಲಿ 200 ರಿಂದ 300 ಸೆ.ಮೀ. ಸಾಗರ ಮಟ್ಟ ಏರಿಕೆಯಾಗಬಹುದು.

    ಈಗಾಗಲೇ ಸುಂದರ್‍ಬನ್ಸ್ ಹಾಗೂ ಮಜೌಲಿಯಲ್ಲಿ ಸಮುದ್ರ ಮಟ್ಟ ಏರಿಕೆಯಾಗುತ್ತಿದ್ದು, ಭಾರತ, ಚೀನಾ, ಬಾಂಗ್ಲಾದೇಶ ಸೇರಿದಂತೆ ಹಲವು ದೇಶಗಳಿಗೆ ಸಮಸ್ಯೆಯಾಗಬಹುದು. ಪ್ರಮುಖವಾಗಿ ದಕ್ಷಿಣ ಏಷ್ಯಾ ಹಾಗೂ ಆಗ್ನೇಯಾ ಏಷ್ಯಾ ದೇಶಗಳಿಗೆ ತೊಂದರೆಯಾಗಲಿದೆ.

    ನೀರಿನ ಮಟ್ಟ ಏರಿಕೆಯಾದಲ್ಲಿ ವಾತಾವರಣದಲ್ಲಿ ಹವಾಮಾನ ವೈಪರಿತ್ಯವಾಗಿ ಮಳೆ ಮೇಲೆ ಪರಿಣಾಮ ಆಗಬಹುದು. ಇದರಿಂದಾಗಿ ಹಲವು ದೇಶಗಳಲ್ಲ ಪ್ರವಾಹ ಹೆಚ್ಚಾಗುವ ಸಾಧ್ಯತೆಯಿದೆ.

    ಪಬ್ಲಿಕ್ ಟಿವಿ ಬಿಗ್ ಬುಲೆಟಿನ್ ನಲ್ಲಿ ಪರಿಸರವಾದಿ ಅಕ್ಷಯ್ ಹೆಬ್ಳಿಕರ್ ಮಾತನಾಡಿ, ಸದ್ಯಕ್ಕೆ ಏನೂ ಪರಿಣಾಮ ಆಗುವುದಿಲ್ಲ. 15-20 ವರ್ಷದಲ್ಲಿ ಭಾರತದ ಮೇಲೆ ಖಂಡಿತವಾಗಿಯೂ ಪರಿಣಾಮ ಬೀರುತ್ತದೆ. ವಿಶೇಷವಾಗಿ ಸಮುದ್ರದಲ್ಲಿ ಜೀವ ವೈವಿಧ್ಯಗಳ ಮೇಲೆ ಭಾರೀ ಪರಿಣಾಮ ಬೀರುತ್ತದೆ. ಸಿಹಿ ನೀರು ಉಪ್ಪು ನೀರಿಗಳು ಸೇರುವುದರಿಂದ ಜಲಚರಗಳ ಮೇಲೆ ಪರಿಣಾಮ ಬೀರಲಿದೆ ಎಂದು ತಿಳಿಸಿದರು.

     

  • ಇಸ್ರೇಲ್‍ನಲ್ಲಿ ಸಮುದ್ರ ನೀರನ್ನು ಕುಡಿದ ಮೋದಿ!

    ಇಸ್ರೇಲ್‍ನಲ್ಲಿ ಸಮುದ್ರ ನೀರನ್ನು ಕುಡಿದ ಮೋದಿ!

    ಟೆಲ್ ಅವೀವ್: ಇಸ್ರೇಲ್ ಪ್ರವಾಸದಲ್ಲಿರುವ ಪ್ರಧಾನಿ ನರೇಂದ್ರ ಮೋದಿ ಅವರು ಗುರುವಾರ ಉಪ್ಪುನೀರಿನ ಶುದ್ಧೀಕರಣ ಘಟಕವನ್ನು ವೀಕ್ಷಿಸಿದರು.

    ಪ್ರವಾಸದ ಕೊನೆಯ ದಿನ ಮೋದಿ ಅವರು ಡೋರ್ ಬೀಚ್ ಗೆ ಭೇಟಿ ನೀಡಿ ಸಮುದ್ರ ನೀರಿನಿಂದ ಉಪ್ಪಿನಂಶ ತೆಗೆಯುವ ಘಟಕವನ್ನು ವೀಕ್ಷಿಸಿದರು. ಈ ಸಂದರ್ಭದಲ್ಲಿ ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತಾನ್ಯಾಹು ಜೊತೆಗಿದ್ದರು.

    ಇಬ್ಬರು ನಾಯಕರು ಸಮುದ್ರ ದಂಡೆಯಲ್ಲಿ ನಿಂತು ಮಾತನಾಡಿದರು. ಇದಾದ ಬಳಿಕ ಎರಡೂ ದೇಶದ ಪ್ರಧಾನಿಗಳು ಶುದ್ಧೀಕರಿಸಿದ ಸಮುದ್ರದ ನೀರನ್ನು ಕುಡಿದರು.

    ಸಮುದ್ರ ನೀರಿನಿಂದ ಉಪ್ಪಿನಂಶ ತೆಗೆದು ಅದನ್ನು ಕುಡಿಯುವ ನೀರಾಗಿ ಪರಿವರ್ತಿಸುವುದಕ್ಕೆ Desalination ಎಂದು ಕರೆಯಲಾಗುತ್ತದೆ. 2005ರಲ್ಲಿ ಇಸ್ರೇಲ್ ಮೊದಲ ಬಾರಿಗೆ ಈ ರೀತಿಯ ಘಟಕವನ್ನು ತೆರೆದಿದೆ. ಇಂದು ಇಸ್ರೇಲ್ ಶೇ.40ರಷ್ಟು ಕುಡಿಯುವ ನೀರಿಗೆ ಸಮುದ್ರವನ್ನೇ ನೆಚ್ಚಿಕೊಂಡಿದೆ.

    ಪ್ರಸ್ತುತ ಅಮೆರಿಕ, ಸಿಂಗಾಪುರ, ಸೌದಿ ಅರೇಬಿಯಾ ಸೇರಿದಂತೆ ವಿವಿಧ ದೇಶಗಳು ಈ ರೀತಿಯ ಘಟಕಗಳು ಸ್ಥಾಪನೆಯಾಗಿದೆ.

     

  • ವರ್ಷಪೂರ್ತಿ ನೀರಿನಲ್ಲೇ ವಾಸ ಮಾಡ್ತಾರೆ ಈ ಜನ!

    ವರ್ಷಪೂರ್ತಿ ನೀರಿನಲ್ಲೇ ವಾಸ ಮಾಡ್ತಾರೆ ಈ ಜನ!

    ಕೌಲಾಲಂಪುರ: ಸಮುದ್ರದದಲ್ಲಿ ಹಡುಗಗಳಲ್ಲಿ ಜನರು ಜೀವನ ಮಾಡುವುದು ನಿಮಗೆ ಗೊತ್ತೆ ಇದೆ. ಆದರೆ ಮಲೇಷಿಯಾದಲ್ಲಿರುವ ಒಂದು ಬುಡಕಟ್ಟು ಜನಾಂಗದ ಸದಸ್ಯರು ವರ್ಷಪೂರ್ತಿ ಸಮುದ್ರದಲ್ಲಿ ಮೇಲೆ ಮನೆ ಮಾಡುತ್ತಿದ್ದಾರೆ.

    ಹೌದು, ಮಲೇಷ್ಯಾದ ಬಜೌ ಬುಡಕಟ್ಟು ಸಮುದಾಯದ ಸದಸ್ಯರು ಸಮುದ್ರದ ಮೇಲೆ ಸಣ್ಣ ಮನೆಯನ್ನು ನಿರ್ಮಿಸಿ ತಮ್ಮ ಜೀವನವನ್ನು ಕಳೆಯುತ್ತಾರೆ.

    ಸಣ್ಣ ಸಮುದಾಯವಾಗಿರುವ ಇವರು ಭೂಮಿಮೇಲೆ ನೆಲೆಸುವುದಿಲ್ಲ. ಬರೀ ನೀರಿನ ಮೇಲೆ ಬುದುಕುವುದು ಇವರ ವಿಶೇಷತೆ. ಸಮುದ್ರದ ಅಂಚಿನಲ್ಲಿ ನೀರಿನೊಳಗೆ ಮನೆಕಟ್ಟಿ ಜೀವನ ನಡೆಸುವ ಸಂಪ್ರದಾಯ ಅನಾದಿಕಾಲದಿಂದ ಬಂದಿದೆ.

    ನಾಗರಿಕತೆಗಳು ಬೆಳೆದಿದ್ದರೂ ಇನ್ನೂ ಯಾಕೆ ಇಲ್ಲೆ ಇದ್ದೀರಿ ಎಂದು ಪ್ರಶ್ನಿಸಿದ್ದಕ್ಕೆ, ನಮ್ಮ ಹಿರಿಯರು ಈ ವ್ಯವಸ್ಥೆಯಲ್ಲಿ ನೆಲೆಸಿದ್ದರು. ನಾವು ಈ ರೀತಿಯ ಮನೆಯಲ್ಲಿ ನೆಲೆಸಿ ಹಿರಿಯರ ಸಂಪ್ರದಾಯವನ್ನು ಮುಂದುವರೆಸುತ್ತಿದ್ದೇವೆ ಎಂದು ಉತ್ತರಿಸುತ್ತಾರೆ.

     

    ಮೀನು ಹಿಡಿಯುವ ಇವರು ಮೂಲತಃ ಫಿಲಿಪೈನ್ಸ್ ಮೂಲದವರಾಗಿದ್ದು, ಇನ್ನು ಮಲೇಷ್ಯಾ ಸರ್ಕಾರ ಇವರಿಗೆ ಪೌರತ್ವ ನೀಡಿಲ್ಲ.

     

    https://www.youtube.com/watch?v=8tJmFYeKLlg

  • ಉಳ್ಳಾಲದ ಮೊಗವೀರಪಟ್ಟಣದಲ್ಲಿ ಇಬ್ಬರು ಯುವಕರು ಸಮುದ್ರಪಾಲು

    ಉಳ್ಳಾಲದ ಮೊಗವೀರಪಟ್ಟಣದಲ್ಲಿ ಇಬ್ಬರು ಯುವಕರು ಸಮುದ್ರಪಾಲು

    ಮಂಗಳೂರು: ಸಮುದ್ರಕ್ಕಿಳಿದ ಇಬ್ಬರು ಯುವಕರು ಸಾವನ್ನಪ್ಪಿರುವ ಘಟನೆ ಮಂಗಳೂರು ಹೊರವಲಯದ ಉಳ್ಳಾಲದ ಮೊಗವೀರಪಟ್ಟಣ ಸಮುದ್ರ ಕಿನಾರೆಯಲ್ಲಿ ನಡೆದಿದೆ.

    ತುಮಕೂರು ಜಿಲ್ಲೆಯ ಶಿರಾ ತಾಲೂಕಿನಿಂದ ಉಳ್ಳಾಲ ಸಯ್ಯದ್ ಮದನಿ ದರ್ಗಾಕ್ಕೆ ಹತ್ತು ಮಂದಿ ಕುಟುಂಬ ಸದಸ್ಯರೊಂದಿಗೆ ಆಗಮಿಸಿದ್ದ 19 ವರ್ಷದ ಶಾರೂಖ್ ಮತ್ತು 20 ವರ್ಷದ ಹಯಾಝ್ ಸಮುದ್ರಕ್ಕಿಳಿದಿದ್ದರು. ಸಮುದ್ರದ ಅಬ್ಬರದ ಅಲೆಗಳ ಜೊತೆ ಆಟವಾಡುತ್ತಿದ್ದರು. ಈ ಸಂದರ್ಭದಲ್ಲಿ ನೀರಿನ ಸೆಳೆತಕ್ಕೆ ಇಬ್ಬರು ಯುವಕರು ಕೊಚ್ಚಿ ಹೋಗಿದ್ದಾರೆ.

    ಮಳೆಗಾಲದ ಸಂದರ್ಭವಾಗಿರೋದ್ರಿಂದ ಸಮುದ್ರದ ಅಬ್ಬರ ಕೂಡಾ ಜಾಸ್ತಿಯಾಗಿದೆ. ಹಾಗಾಗಿ ಮೃತ ದೇಹದ ಶೋಧ ಕಾರ್ಯಕ್ಕೂ ತೊಡಕು ಉಂಟಾಗುತ್ತಿದೆ. ಮಳೆಗಾಲದಲ್ಲಿ ಸಮುದ್ರ ರಭಸದಿಂದ ಕೂಡಿದ್ರೂ, ಎಚ್ಚರಿಕೆಯ ನಿಯಮ ಮೀರಿ ಪ್ರವಾಸಿಗರು ಸಮುದ್ರಕ್ಕಿಳಿಯುತ್ತಿದ್ದು ವಾರದೊಳಗೆ ಐದು ಮಂದಿ ಸಮುದ್ರಪಾಲಾಗಿ ಸಾವನ್ನಪ್ಪಿರೋದು ದುರಂತ.

  • ಗೋಕರ್ಣದಲ್ಲಿ ಸಮುದ್ರಪಾಲಾಗುತ್ತಿದ್ದ ಐವರು ವಿದ್ಯಾರ್ಥಿಗಳನ್ನ ರಕ್ಷಿಸಿದ ಪೊಲೀಸ್ ಪೇದೆ

    ಗೋಕರ್ಣದಲ್ಲಿ ಸಮುದ್ರಪಾಲಾಗುತ್ತಿದ್ದ ಐವರು ವಿದ್ಯಾರ್ಥಿಗಳನ್ನ ರಕ್ಷಿಸಿದ ಪೊಲೀಸ್ ಪೇದೆ

    ಕಾರವಾರ: ಸಮುದ್ರದಲ್ಲಿ ನೀರುಪಾಲಾಗುತ್ತಿದ್ದ ಐವರನ್ನು ಪೊಲೀಸ್ ಪೇದೆಯೊಬ್ಬರು ಪ್ರವಾಸಿ ಮಿತ್ರರ ಸಹಾಯದಿಂದ ರಕ್ಷಿಸುವ ಮೂಲಕ ಸಮಯ ಪ್ರಜ್ಞೆ ಮೆರೆದಿದ್ದಾರೆ.

    ಚೆನ್ನೈ ವಿಶ್ವವಿದ್ಯಾಲಯವೊಂದರಲ್ಲಿ ಎಂಜನಿಯರಿಂಗ್ ಕೊನೆಯ ವರ್ಷದಲ್ಲಿ ಓದುತ್ತಿರುವ ವೀರಭದ್ರ ಭಾಸ್ಕರ(30), ಅವಿನಾಶ್ ನಳನ(28), ಅರ್ಪಿತಾ ಶ್ಯಾಮ್(25), ಚಿತ್ರಾ ಗೋವಿಂದರಾವ್ (24) ಹಾಗೂ ರಮ್ಯಾ (26) ಸಮುದ್ರದ ಸುಳಿಯಿಂದ ರಕ್ಷಿಸಲ್ಪಟ್ಟ ವಿದ್ಯಾರ್ಥಿಗಳಾಗಿದ್ದಾರೆ. ಆರು ಜನರ ತಂಡದೊಂದಿಗೆ ಗೋಕರ್ಣಕ್ಕೆ ಪ್ರವಾಸಾರ್ಥವಾಗಿ ಆಗಮಿಸಿದ್ದರು. ಈ ವಿದ್ಯಾರ್ಥಿಗಳು ಆಂಧ್ರಪ್ರದೇಶ ರಾಜ್ಯದ ರಾಜಮಂಡ್ರಿ ನಿವಾಸಿಗಳು ಎಂದು ತಿಳಿದುಬಂದಿದೆ.

    ಇವರೆಲ್ಲರೂ ರವಿವಾರ ಸಾಯಂಕಾಲ ಈಜಾಡಲು ಸಮುದ್ರಕ್ಕೆ ಇಳಿದಿದ್ದರು. 6 ಜನರಲ್ಲಿ ಇಬ್ಬರು ಸುಳಿಗೆ ಸಿಲುಕಿ ಕೊಚ್ಚಿಕೊಂಡು ಹೋಗುತ್ತಿದ್ದಾಗ ಅವರನ್ನು ರಕ್ಷಿಸಲು ಮತ್ತೆ ಮೂವರು ಸಹಪಾಠಿಗಳು ಸಮುದ್ರದ ಮಧ್ಯಕ್ಕೆ ಸಾಗಿದ್ದರು. ಒಟ್ಟಾರೆಯಾಗಿ 5 ಜನ ಪ್ರವಾಸಿಗರು ಸುಳಿಯಲ್ಲಿ ಸಿಲುಕಿಕೊಂಡಿದ್ದನ್ನು ಗಮನಿಸಿದ ಗೋಕರ್ಣ ಪೊಲೀಸ್ ಪೇದೆ ರಾಘವೇಂದ್ರ ನಾಯಕ್ ಹಾಗೂ ಪ್ರವಾಸಿ ಮಿತ್ರ ಗಜೇಂದ್ರ ಎಂಬವರು ತಮ್ಮ ಜೀವವನ್ನೇ ಪಣಕ್ಕಿಟ್ಟು ಸಮವಸ್ತ್ರದಲ್ಲಿಯೇ ಸಮುದ್ರಕ್ಕೆ ಧುಮುಕಿ 5 ಜನರನ್ನು ರಕ್ಷಿಸುವಲ್ಲಿ ಸಫಲರಾಗಿದ್ದಾರೆ.

    ಲೈಫ್ ಗಾರ್ಡ ಸಿಬ್ಬಂದಿ ಬೇರೆಡೆ ತರಬೇತಿ ನಿಮಿತ್ತ ತೆರಳಿದ್ದ ವೇಳೆಯೇ ಈ ಘಟನೆ ನಡೆದಿದ್ದು ಗೋಕರ್ಣ ಪೊಲೀಸ್ ಮತ್ತು ಪ್ರವಾಸಿ ಮಿತ್ರರ ಸಾಧನೆಗೆ ನಾಗರಿಕರು ಅಭಿನಂದನೆ ಸಲ್ಲಿಸಿದ್ದಾರೆ.

     

  • ಬೋಟ್‍ನಲ್ಲಿ ಕುಳಿತಿದ್ದ ಬಾಲಕಿಯನ್ನು ಏಕಾಏಕಿ ನೀರಿಗೆಳೆದ ಕಡಲಸಿಂಹ! ಶಾಕಿಂಗ್ ವಿಡಿಯೋ ನೋಡಿ

    ಬೋಟ್‍ನಲ್ಲಿ ಕುಳಿತಿದ್ದ ಬಾಲಕಿಯನ್ನು ಏಕಾಏಕಿ ನೀರಿಗೆಳೆದ ಕಡಲಸಿಂಹ! ಶಾಕಿಂಗ್ ವಿಡಿಯೋ ನೋಡಿ

    ಒಟ್ಟಾವ: ಬೋಟ್‍ನಲ್ಲಿ ಕುಳಿತಿದ್ದ ಬಾಲಕಿಯನ್ನು ಕಡಲ ಸಿಂಹ ಸೀಲ್ ಎಳೆದೊಯ್ದ ಘಟನೆ ಕೆನಡಾದ ಪಶ್ಚಿಮ ಕರಾವಳಿಯಲ್ಲಿ ನಡೆದಿದೆ. ಈ ವಿಡಿಯೋ ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

    ಬೋಟ್‍ನಿಂದ ಈಜುತ್ತಿದ್ದ ಸೀಲ್‍ಗೆ ಆಹಾರ ಎಸೆದಿದ್ದಾರೆ. ಇತ್ತ ಬಾಲಕಿಯೊಬ್ಬಳು ಮಾತನಾಡುತ್ತಾ ನಗುತ್ತಾ ಬೋಟ್ ಬದಿಯಲ್ಲಿ ಬಂದು ಕುಳಿತಿದ್ದಾಳೆ. ಆಹಾರವನ್ನು ಅರಸುತ್ತಿದ್ದ ಸೀಲ್ ಗೆ ಬಾಲಕಿ ಬಿಳಿ ಬಟ್ಟೆ ಧರಿಸಿ ಕುಳಿತಿರುವುದು ಕಂಡಿತು. ಹೀಗಾಗಿ ತನಗೆ ಆಹಾರ ಸಿಕ್ಕಿತ್ತೆಂದು ಸೀಲ್ ಹಾರಿ ಆಕೆಯ ಅಂಗಿಯನ್ನು ಕಚ್ಚಿ ನೀರಿಗೆಳೆದಿದೆ. ಈ ವೇಳೆ ಅಲ್ಲಿದ್ದವರು ಆಶ್ಚರ್ಯಗೊಂಡು ಕೂಗಾಡಿದ್ದಾರೆ. ಆದ್ರೆ ಅಲ್ಲೇ ಇದ್ದ ವ್ಯಕ್ತಿಯೊಬ್ಬರು ಕೂಡಲೇ ಸಮುದ್ರಕ್ಕೆ ಹಾರಿ ಹುಡುಗಿಯನ್ನು ರಕ್ಷಿಸಿದ್ದಾರೆ. ಘಟನೆಯಲ್ಲಿ ಹುಡುಗಿ ಪಾರಾಗಿದ್ದು, ವ್ಯಕ್ತಿಯ ಕೈಗೆ ಗಾಯಗಳಾಗಿವೆ. ಆದ್ರೆ ನೀರಿನಿಂದ ರಕ್ಷಿಸಿದ ಕೂಡಲೇ ಬಾಲಕಿಯನ್ನು ಆಕೆಯ ಪೋಷಕರು ಕರೆದುಕೊಂಡು ಹೋಗಿದ್ದಾರೆ.

    ಘಟನೆಯ ಸಂಪೂರ್ಣ ದೃಶ್ಯವನ್ನು ಮೈಕೆಲ್ ಫುಜಿವಾರಾ ಎಂಬವರು ಸೆರೆಹಿಡಿದಿದ್ದು, ಬಳಿಕ ಸಾಮಾಜಿಕ ಜಾಲತಾಣ ಯೂಟ್ಯೂಬ್ ಗೆ ಕಳೆದ ಶನಿವಾರ ಅಪ್ ಲೋಡ್ ಮಾಡಿದ್ದಾರೆ. ಅಪ್ ಲೋಡ್ ಮಾಡಿದ ದಿನನೇ ಸುಮಾರು ಒಂದೂವರೆ ಲಕ್ಷ ವ್ಯೂ ವಿಡಿಯೋವನ್ನು ನೋಡಿದ್ದು, ಇದೂವರೆಗೆ 67.49 ವ್ಯೂ ಕಂಡಿದೆ.

  • ವಿಡಿಯೋ: ಆಹಾರ ಅರಸಿ ಕಾಡಿನಿಂದ ನಾಡಿಗೆ ಬಂದು, ದಾರಿ ತಿಳಿಯದೇ ಸಮುದ್ರಕ್ಕೆ ಬಿದ್ದ ಕಡವೆ

    ವಿಡಿಯೋ: ಆಹಾರ ಅರಸಿ ಕಾಡಿನಿಂದ ನಾಡಿಗೆ ಬಂದು, ದಾರಿ ತಿಳಿಯದೇ ಸಮುದ್ರಕ್ಕೆ ಬಿದ್ದ ಕಡವೆ

    ಕಾರವಾರ: ಇಂದು ಬೆಳಗ್ಗೆ ಕಾಡಿನಿಂದ ನಾಡಿಗೆ ಬಂದ ಕಡವೆಯೊಂದು ಬೀದಿ ನಾಯಿಗಳಿಂದ ತಪ್ಪಿಸಿಕೊಳ್ಳಲು ಹೋಗಿ ಕಾರವಾರ ನಗರದ ಆಲಿಗದ್ದಾ ಕಡಲ ತೀರದ ಸಮುದ್ರದಲ್ಲಿ ಬಿದ್ದಿತ್ತು.

    ಸಮುದ್ರದಲ್ಲಿ ಸುಮಾರು ಒಂದು ಘಂಟೆಗಳ ಕಾಲ ಕಡವೆ ಈಜುತ್ತಿರುವುದನ್ನು ಗಮನಿಸಿದ ಸ್ಥಳೀಯ ಮೀನುಗಾರರು ಅರಣ್ಯ ಇಲಾಖೆಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕಾಗಮಿಸಿದ ಅರಣ್ಯ ಇಲಾಖೆ ಕೋಸ್ಟ್ ಗಾರ್ಡ್ ಸಿಬ್ಬಂದಿ ಸ್ಥಳಿಯ ಮೀನುಗಾರರ ಸಹಾಯದಿಂದ ಕಡವೆಯನ್ನು ರಕ್ಷಿಸಿದ್ದಾರೆ.

    ಮೂರು ವರ್ಷದ ಪ್ರಾಯದ ಕಡವೆಯನ್ನು ರಕ್ಷಿಸಿ, ಚಿಕಿತ್ಸೆ ನೀಡಿ ಅದನ್ನು ಮರಳಿ ಕಾಡಿಗೆ ಬಿಡಲಾಗಿದೆ.

    https://www.youtube.com/watch?v=2jYcc65S2uQ