Tag: sea

  • ಎಚ್ಚರಿಕೆಯ ನಡುವೆಯು ಪ್ರವಾಸಿಗರ ಹುಚ್ಚಾಟ – ಮುರುಡೇಶ್ವರದಲ್ಲಿ ಸಮುದ್ರದ ಪಾಲಾದ ಯುವಕ, ಇಬ್ಬರ ರಕ್ಷಣೆ

    ಎಚ್ಚರಿಕೆಯ ನಡುವೆಯು ಪ್ರವಾಸಿಗರ ಹುಚ್ಚಾಟ – ಮುರುಡೇಶ್ವರದಲ್ಲಿ ಸಮುದ್ರದ ಪಾಲಾದ ಯುವಕ, ಇಬ್ಬರ ರಕ್ಷಣೆ

    ಕಾರವಾರ: ಅಲೆಯ ಅಬ್ಬರಕ್ಕೆ (Sea Waves) ಯುವಕನೋರ್ವ ಸಮುದ್ರದಲ್ಲಿ ಕೊಚ್ಚಿ ಹೋದ ಘಟನೆ ಮುರುಡೇಶ್ವರದಲ್ಲಿ (Murdeshwar) ಸೋಮವಾರ ನಡೆದಿದೆ. ಈ ವೇಳೆ ಮುಳುಗುತ್ತಿದ್ದ ಇಬ್ಬರನ್ನು ಲೈಫ್‍ಗಾರ್ಡ್ ಸಿಬ್ಬಂದಿ ರಕ್ಷಿಸಿದ್ದಾರೆ.

    ಹುಬ್ಬಳ್ಳಿಯ ಸಂತೋಷ್ ಹುಲಿಗುಂಡ (19) ಸಮುದ್ರಪಾಲಾದ ಯುವಕನಾಗಿದ್ದು, ಹಸನ್ ಮಜಗೀಗೌಡ (20) ಹಾಗೂ ಸಂಜೀವ್ (20) ಎಂಬುವವರನ್ನು ಲೈಫ್‍ಗಾರ್ಡ್ ಸಿಬ್ಬಂದಿ ರಕ್ಷಣೆ ಮಾಡಿದ್ದಾರೆ. ಅಲೆಗೆ ಕೊಚ್ಚಿಹೋದ ಯುವಕನ ಶವಕ್ಕಾಗಿ ಶೋಧ ಕಾರ್ಯ ನಡೆಯುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಇದನ್ನೂ ಓದಿ: ತುಂಬಿ ತುಳುಕುತ್ತಿದ್ದ ಸಾರಿಗೆ ಬಸ್‍ನಿಂದ ಬಿದ್ದು ಬಾಲಕಿ ಸಾವು

    ಹುಬ್ಬಳ್ಳಿ ಹಾಗೂ ಕಲಕಟಗಿಯಿಂದ 22 ಜನ ಪ್ರವಾಸಕ್ಕೆ ಬಂದಿದ್ದು, ಸಿಗಂದೂರು (Sigandur), ಕೊಲ್ಲೂರು ಪ್ರವಾಸ ಮುಗಿಸಿ ಮುರುಡೇಶ್ವರಕ್ಕೆ ಬಂದಿದ್ದರು. ಈ ವೇಳೆ ಪ್ರವಾಸಿಗರಿಗೆ ಲೈಫ್ ಗಾರ್ಡ್ ಸಿಬ್ಬಂದಿ ಎಚ್ಚರಿಕೆ ನೀಡಿದ್ದಾರೆ. ಆದರೂ ಮೂರು ಜನ ಪ್ರವಾಸಿಗರು ಸಮುದ್ರಕ್ಕಿಳಿದಿದ್ದಾರೆ. ಇದರಿಂದ ಈ ಅವಘಡ ಸಂಭವಿಸಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಈ ಸಂಬಂಧ ಮುರುಡೇಶ್ವರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

    ನಿಷೇಧದ ನಡುವೆಯೂ ಪ್ರವಾಸಿಗರ ಹುಚ್ಚಾಟ
    ಉತ್ತರ ಕನ್ನಡ (Uttara Kannada) ಜಿಲ್ಲೆಯ ಕರಾವಳಿ ಭಾಗದಲ್ಲಿ ಪ್ರವಾಸಿಗರಿಗೆ ಕಡಲಲ್ಲಿ ಇಳಿಯದಂತೆ ನಿಷೇಧ ಹೇರಲಾಗಿದೆ. ಆದರೂ ಜಿಲ್ಲೆಯ ಮುರುಡೇಶ್ವರ ಹಾಗೂ ಗೋಕರ್ಣಕ್ಕೆ (Gokarna) ಬರುವ ಪ್ರವಾಸಿಗರು ಲೈಫ್‍ಗಾರ್ಡ್‍ಗಳ ಸೂಚನೆಯನ್ನು ಲೆಕ್ಕಿಸದೆ ಸಮುದ್ರಕ್ಕಿಳಿಯುತಿದ್ದಾರೆ. ಕಳೆದ ವರ್ಷ 11 ಜನ ಸಮುದ್ರದ ಪಾಲಾಗಿದ್ದರು. ಹೀಗಾಗಿ ಮಳೆಗಾಲ ಹಾಗೂ ಚಂಡಮಾರುತದ ಸಂದರ್ಭದಲ್ಲಿ ಜಲಸಾಹಸ ಕ್ರೀಡೆಗಳಿಗೆ ನಿಷೇಧ ಹೇರಲಾಗುತ್ತದೆ. ಬರುವ ಪ್ರವಾಸಿಗರು ಮೋಜು ಮಸ್ತಿಯಿಂದಾಗಿ ತಮ್ಮ ಜೀವಕ್ಕೆ ತಾವೇ ಆಪತ್ತು ತಂದುಕೊಳ್ಳುತಿದ್ದಾರೆ. ಇದನ್ನೂ ಓದಿ: ವಾಟ್ಸಾಪ್‍ನಲ್ಲಿ ಔರಂಗಜೇಬ್ ಡಿಪಿ ಹಾಕಿದ್ದ ವ್ಯಕ್ತಿಯ ಬಂಧನ

  • ರಾಜ್ ಠಾಕ್ರೆ ವಾರ್ನಿಂಗ್ – ಸಮುದ್ರದಲ್ಲಿ ನಿರ್ಮಾಣವಾಗುತ್ತಿದ್ದ ಅಕ್ರಮ ದರ್ಗಾವನ್ನು ಕೆಡವಿದ ಬಿಎಂಸಿ

    ರಾಜ್ ಠಾಕ್ರೆ ವಾರ್ನಿಂಗ್ – ಸಮುದ್ರದಲ್ಲಿ ನಿರ್ಮಾಣವಾಗುತ್ತಿದ್ದ ಅಕ್ರಮ ದರ್ಗಾವನ್ನು ಕೆಡವಿದ ಬಿಎಂಸಿ

    ಮುಂಬೈ: ಮಹಾರಾಷ್ಟ್ರದ (Maharashtra) ನವನಿರ್ಮಾಣ ಸೇನೆ (MNS) ನಾಯಕ ರಾಜ್ ಠಾಕ್ರೆ (Raj Thackeray) ಅಕ್ರಮವಾಗಿ ನಿರ್ಮಿಸಲಾಗುತ್ತಿದ್ದ ದರ್ಗಾದ (Dargah) ಬಗ್ಗೆ ಟ್ವೀಟ್ ಒಂದನ್ನು ಹಂಚಿಕೊಂಡ ಬಳಿಕ ಬೃಹತ್ ಮುಂಬೈ ಮುನ್ಸಿಪಲ್ ಕಾರ್ಪೊರೇಷನ್ (BMC) ಗುರುವಾರ ಮಾಹಿಮ್ ಕರಾವಳಿ ಪ್ರದೇಶದಲ್ಲಿ ನಿರ್ಮಿಸಲಾಗುತ್ತಿದ್ದ ದರ್ಗಾವನ್ನು ಕೆಡವಿ ಹಾಕಿದೆ.

    ರಾಜ್ ಠಾಕ್ರೆ ಅವರು ಮಾಹಿಮ್ ಕರಾವಳಿ ಪ್ರದೇಶದಲ್ಲಿ ಅನಧಿಕೃತವಾಗಿ ದರ್ಗಾವನ್ನು ನಿರ್ಮಿಸಲಾಗುತ್ತಿದೆ ಎಂದು ಆರೋಪಿಸಿ ಡ್ರೋನ್ ಕ್ಯಾಮೆರಾದಲ್ಲಿ ತೆಗೆಯಲಾಗಿದ್ದ ದೃಶ್ಯಗಳನ್ನು ಟ್ವಿಟ್ಟರ್‌ನಲ್ಲಿ ಹಂಚಿಕೊಂಡಿದ್ದರು. ಠಾಕ್ರೆ ಟ್ವೀಟ್ ಮಾಡಿದ ಕೇವಲ 1 ದಿನದ ಬಳಿಕ ಮುಂಬೈ ನಾಗರಿಕ ಮಂಡಳಿ ಅಕ್ರಮ ದರ್ಗಾವನ್ನು ನೆಲಸಮಗೊಳಿಸುವ ಕಾರ್ಯಾಚರಣೆಗೆ ಮುಂದಾಗಿದೆ.

    ಟ್ವೀಟ್‌ನಲ್ಲೇನಿದೆ?
    ರಾಜ್ ಠಾಕ್ರೆ ಮಾಡಿರುವ ಟ್ವೀಟ್‌ನಲ್ಲಿ, ಮಾಹಿಮ್‌ನ ಮಗ್ದೂಮ್ ಬಾಬಾ ದರ್ಗಾವನ್ನು ಸಮುದ್ರದಲ್ಲಿ ಅನಧಿಕೃತವಾಗಿ ನಿರ್ಮಾಣ ಮಾಡಲಾಗುತ್ತಿದೆ. 2 ವರ್ಷಗಳ ಹಿಂದೆ ಇಲ್ಲಿ ಏನೂ ಇರಲಿಲ್ಲ. ದರ್ಗಾ ನಿರ್ಮಾಣದ ಕಾರ್ಯಾಚರಣೆ ಹಗಲು ಹೊತ್ತಿನಲ್ಲಿ ನಡೆಯುತ್ತಿದ್ದರೂ ಇದು ಪೊಲೀಸರ ಹಾಗೂ ಪುರಸಭೆಯ ಗಮನಕ್ಕೆ ಬಂದಿಲ್ಲವೇ ಎಂದು ಟೀಕಿಸಿದ್ದರು. ಇದನ್ನೂ ಓದಿ: ರಾಹುಲ್‌ಗೆ ಬಿಗ್‌ ರಿಲೀಫ್‌ – 30 ದಿನಗಳ ಜಾಮೀನು ಮಂಜೂರು

    ಮುಖ್ಯಮಂತ್ರಿ ಏಕನಾಥ್ ಶಿಂಧೆ, ಉಪಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್, ಮುಂಬೈ ಪೊಲೀಸರಿಗೆ ವಾರ್ನಿಗ್ ನೀಡಿದ ರಾಜ್ ಠಾಕ್ರೆ, ಅನಧಿಕೃತವಾಗಿ ನಿರ್ಮಾಣವಾಗುತ್ತಿರುವ ದರ್ಗಾದ ವಿರುದ್ಧ ತಕ್ಷಣವೇ ಕ್ರಮ ತೆಗೆದುಕೊಳ್ಳಿ. ಈಗಲೇ ಇದನ್ನು ನೆಲಸಮಗೊಳಿಸಿ. ಇಲ್ಲದೇ ಹೋದಲ್ಲಿ ನಾವು ಆ ಪ್ರದೇಶದಲ್ಲಿ ದೊಡ್ಡ ಗಣಪತಿಯ ದೇವಾಲಯವನ್ನು ನಿರ್ಮಿಸುತ್ತೇವೆ ಎಂದು ಎಚ್ಚರಿಕೆ ನೀಡಿದ್ದಾರೆ.

    ಟ್ವೀಟ್ ಬೆನ್ನಲೇ ಗುರುವಾರ ಬೆಳಗ್ಗೆ ಬಿಎಂಸಿ ತಂಡ ಹೆಚ್ಚಿನ ಭದ್ರತೆಯೊಂದಿಗೆ ಸಣ್ಣ ದ್ವೀಪ ಮಾದರಿಯ ಪ್ರದೇಶದಲ್ಲಿ ನಿರ್ಮಾಣವಾಗುತ್ತಿದ್ದ ದರ್ಗಾದ ವಿರುದ್ಧ ಕ್ರಮ ಕೈಗೊಳ್ಳಲು ಮುಂದಾಗಿದೆ. ಬಿಎಂಸಿ ತಂಡ ಭಾರೀ ಪೊಲೀಸ್ ಬಂದೋಬಸ್ತ್‌ನೊಂದಿಗೆ ಜೆಸಿಬಿ ಹಾಗೂ ಇತರ ಸಲಕರಣೆಗಳೊಂದಿಗೆ ಸ್ಥಳಕ್ಕೆ ತೆರಳಿ ದರ್ಗಾವನ್ನು ನೆಲಸಮಗೊಳಿಸಿದೆ. ಇದನ್ನೂ ಓದಿ: ವಿಜಯ ಮಲ್ಯ ಬಳಿ ಸಾಲ ತೀರಿಸುವಷ್ಟು ಹಣವಿದೆ – CBIನಿಂದ 3ನೇ ಚಾರ್ಜ್‌ಶೀಟ್‌ ಸಲ್ಲಿಕೆ

  • ಭೋರ್ಗರೆವ ತೀರದಲ್ಲಿ ಹೊಯ್ಗೆಯ ಅರಮನೆ!

    ಭೋರ್ಗರೆವ ತೀರದಲ್ಲಿ ಹೊಯ್ಗೆಯ ಅರಮನೆ!

    ಮಾನವ ಏನೇನೆಲ್ಲಾ ಕಂಡುಹಿಡಿದರೂ ರಕ್ಕಸ ತೆರೆಗಳಿಂದ ಸಮುದ್ರದ (Sea) ತೀರವನ್ನು ರಕ್ಷಿಸುವುದು ಹೇಗೆ ಎನ್ನುವುದು ಮಾತ್ರ ಸವಾಲಿನ ವಿಷಯವಾಗಿಯೇ ಉಳಿದಿದೆ. ಪ್ರತಿವರ್ಷ ಮೀಟರುಗಟ್ಟಲೆ ತೀರಗಳು ಸಮುದ್ರದ ಪಾಲಾಗುತ್ತಿದ್ದು, ತೀರದ ನಿವಾಸಿಗಳು ನಿರ್ವಸತಿಕರಾಗುತ್ತಿದ್ದಾರೆ. ಕಡಲ್ಕೊರೆತಕ್ಕೆ ಕಾರಣಗಳು ಹಲವಾರು ಇದ್ದರೂ ನಿರ್ವಹಣೆ ಮಾತ್ರ ಸರ್ಕಾರಗಳಿಗೆ ಸವಾಲಾಗಿಯೇ ಉಳಿದಿದೆ. ಬಂಡೆಗಳು, ಕಾಂಕ್ರೀಟ್ ತಡೆಗಲ್ಲುಗಳು, ಮರಳಿನ ಚೀಲಗಳು, ಅಲೆಗಳ ಶಕ್ತಿಯನ್ನು ಕಡಿಮೆಗೊಳಿಸಲು ಹಲವಾರು ತಂತ್ರಜ್ಞಾನಗಳನ್ನೂ ಬಳಸಿದ ನಂತರವೂ ಸಮುದ್ರದ ಹಸಿವೆಯು ತೀರಗಳನ್ನು ಇಂಚಿಂಚಾಗಿ ನುಂಗುತ್ತಲೇ ಇದೆ ಇವೆಲ್ಲದುದರ ಮಧ್ಯೆ ಸಬೆಲ್ಲಾರಿಯಾ ಎಂಬ ದುಂಡುಹುಳ ಮಾತ್ರ ನಿರ್ಲಿಪ್ತವಾಗಿ ಅರಮನೆಯನ್ನು ಕಟ್ಟಿಕೊಂಡು ಇನ್ನಿತರ ಜೀವವೈವಿಧ್ಯಕ್ಕೂ ಆಸರೆಯಾಗಿದೆ.

    ಚಿಪ್ಪುಗಳು ಹಾಗೂ ಮರಳಿನ ಕಣಗಳಿಂದ ಕಟ್ಟಲ್ಪಟ್ಟ ಗೂಡಿನ ಸೂಕ್ಷ್ಮ ದರ್ಶಕ ನೋಟ
                                ಚಿಪ್ಪುಗಳು ಹಾಗೂ ಮರಳಿನ ಕಣಗಳಿಂದ ಕಟ್ಟಲ್ಪಟ್ಟ ಗೂಡಿನ ಸೂಕ್ಷ್ಮ ದರ್ಶಕ ನೋಟ

    ಸಬೆಲ್ಲಾರಿಯಾವು(Sabellaria sp.) ದುಂಡು ಹುಳಗಳ ಗುಂಪಿಗೆ ಸೇರಿದ 30-40 ಎಂಎಂ ಗಾತ್ರಕ್ಕೆ ಬೆಳೆಯುವ ಸಮುದ್ರ ಜೀವಿ. ಸಾಮಾನ್ಯವಾಗಿ ಬಂಡೆಗಳಿಗೆ ಅಂಟಿಕೊಂಡು ಅಥವಾ ಸಾಗರದಾಳದಲ್ಲಿ ಕಂಡುಬರುವ ಇವು, ಸಣ್ಣ ಗೂಡುಗಳನ್ನು ಕಟ್ಟಿಕೊಂಡು ಅದರೊಳಗೆ ವಾಸವಾಗಿರುತ್ತವೆ. ಇವುಗಳು ಒಂದೊಂದಾಗಿ ಇರದೆ, ಅಸಂಖ್ಯಾತ ಸಂಖ್ಯೆಯಲ್ಲಿ ವಿಸ್ತಾರವಾಗಿ ಹಬ್ಬಿಕೊಂಡು ಮರಳಿನ ಮನೆಗಳನ್ನು ಕಟ್ಟಿಕೊಳ್ಳುತ್ತವೆ. ದೂರದಿಂದ ನೋಡಿದರೆ, ಬಂಡೆಗಳಿಗೆ ತೆಳುವಾದ ಮರಳಿನ ಹೊದಿಕೆ ಹಾಕಿದಂತೆ ಕಂಡರೂ, ಬಳಿ ಹೋಗಿ ನೋಡಿದರೆ ಇವುಗಳ ಸಂಕೀರ್ಣ ಜೀವ ವ್ಯವಸ್ಥೆ ಕಂಡುಬರುತ್ತದೆ. ಈ ಹುಳಗಳು ವಿವಿಧ ಗಾತ್ರದ ಮರಳಿನ ಕಣಗಳನ್ನು, ಸೂಕ್ಷ್ಮ ಚಿಪ್ಪುಗಳನ್ನು ತನ್ನ ವಿಶೇಷ ಅಂಟು ಸ್ರವಿಕೆಯ ಸಹಾಯದಿಂದ ಜೋಡಿಸಿಕೊಂಡು ಕೊಳವೆಯಾಕೃತಿಯಲ್ಲಿ ಗೂಡುಗಳನ್ನು ಕಟ್ಟಿಕೊಳ್ಳುತ್ತವೆ. ಪ್ರತಿಯೊಂದು ಗೂಡು ನೆರೆಯ ಗೂಡುಗಳೊಂದಿಗೆ ಗಟ್ಟಿಯಾಗಿ ಅಂಟಿಕೊಂಡು ಸಹಸ್ರಾರು ಸಂಖ್ಯೆಯಲ್ಲಿರುತ್ತವೆ. ಈ ಗೂಡುಗಳನ್ನು ಗಟ್ಟಿಯಾಗಿ ಹಿಡಿದಿಡುವ ಈ ಅಂಟು ಸ್ರವಿಕೆಯು, ಅಲೆಗಳ ಅಪ್ಪಳಿಕೆಯನ್ನು ಸಮರ್ಥವಾಗಿ ತಡೆಯುವ ಸಾಮರ್ಥ್ಯವನ್ನು ಹೊಂದಿರುತ್ತದೆ. ಈ ಮರಳಿನ ದಿಬ್ಬಗಳು ಇತರೆ ಜೀವಿಗಳಿಗೂ ಆಶ್ರಯ ನೀಡಿ, ವೈವಿಧ್ಯ ಜೀವವ್ಯವಸ್ಥೆಗೆ ಆಸರೆಯಾಗಿ, ಸಹಬಾಳ್ವೆಯ ಸಂದೇಶವನ್ನೂ ನೀಡುತ್ತವೆ. ಕಡಲ ಸಸ್ಯಗಳು, ಮೀನಿನ ಮರಿಗಳು, ಸ್ಪಂಜು ಪ್ರಾಣಿಗಳು, ಕುಟುಕು ಕಣವಂತಗಳು, ಮೃದ್ವಂಗಿಗಳಂತಹ ಅನೇಕ ಅಕಶೇರುಕಗಳಿಗೂ ಈ ಗೂಡುಗಳು ಆಧಾರವಾಗಿರುತ್ತವೆ.

    ಬೆಲ್ಲಾರಿಯಾದ ಲಾರ್ವ (ಮರಿ ಹುಳ) - ಸೂಕ್ಷ್ಮ ದರ್ಶಕ ನೋಟ
                                                             ಬೆಲ್ಲಾರಿಯಾದ ಲಾರ್ವ (ಮರಿ ಹುಳ) – ಸೂಕ್ಷ್ಮ ದರ್ಶಕ ನೋಟ

    ಈ ಅಂಟುದ್ರವವು ವಿಶೇಷ ಪ್ರೋಟೀನ್ ಕಿಣ್ವಗಲಿಂದ ಮಾಡಲ್ಪಟ್ಟಿದ್ದು, ಹುಳಗಳು ಅತಿ ತೆಳುವಾದ ಹೊದಿಕೆಯನ್ನು ತಮ್ಮ ಸುತ್ತಲೂ ಸ್ರವಿಸಿ, ಅದರ ಸುತ್ತಲೂ ಮರಳಿನ ಕಣಗನ್ನು ಪೋಣಿಸಿಕೊಳ್ಳುತ್ತವೆ. ಇವುಗಳು ತಮ್ಮ ಗೂಡಿನಬಳಿ ಬರುವ ಇತರೆ ಸಣ್ಣ ಜೀವಿಗಳನ್ನು ಹಿಡಿದು ತಿನ್ನುತ್ತವೆ. ಮೇಲ್ನೋಟಕ್ಕೆ ಈ ವ್ಯವಸ್ಥೆಯು, ಅಲೆಗಳ ಅಪ್ಪಳಿಕೆಯನ್ನು ತಡೆದುಕೊಳ್ಳುವ ಸಾಮರ್ಥ್ಯವಿದ್ದಂತೆ ಕಂಡುಬಂದರೂ, ಆ ಪ್ರದೇಶದ ಬಂಡೆ ಕಲ್ಲುಗಳನ್ನು ಈ ಹುಳಗಳು ಸಂಪೂರ್ಣವಾಗಿ ಆಕ್ರಮಿಸಿ, ಅಲ್ಲಿನ ಮೂಲ ಪ್ರಬೇಧಗಳಿಗೆ ಕಂಟಕಪ್ರಾಯವಾಗುತ್ತದೋ?,ಅಥವಾ, ಸುತ್ತಲಿನ ಮರಳನ್ನು ಅಸ್ಥಿರಗೊಳಿಸುತ್ತವೋ?, ಇವುಗಳ ಸ್ರವಿಕೆಯು ಒಳಗಿಂದೊಳಗೆ ಕಲ್ಲುಗಳ ಸವಕಳಿಗೆ ಕಾರಣವಾಗಿ ತಲೆನೋವಾಗಿ ಪರಿಣಮಿಸುತ್ತದೋ? ಎಂದು ತಿಳಿಯಲು ಇವುಗಳ ಮೇಲೆ ಕಣ್ಣಿಟ್ಟು, ಸೂಕ್ತ ವೈಜ್ಞಾನಿಕ ಸಂಶೋಧನೆಯನ್ನು ಕೈಗೊಳ್ಳುವ ಅಗತ್ಯವಿದೆ.

    ಸಬೆಲ್ಲಾರಿಯಾ ಗೂಡುಗಳ ಮಾದರಿಯನ್ನು ಅಧ್ಯಯನಕ್ಕೆಂದು ಸಲಿಕೆಯಿಂದ ತೆಗೆದುಕೊಂಡಿರುವುದು
                                              ಸಬೆಲ್ಲಾರಿಯಾ ಗೂಡುಗಳ ಮಾದರಿಯನ್ನು ಅಧ್ಯಯನಕ್ಕೆಂದು ಸಲಿಕೆಯಿಂದ ತೆಗೆದುಕೊಂಡಿರುವುದು

    ಮಂಗಳೂರಿನ ಕರಾವಳಿ ಪ್ರದೇಶಗಳಲ್ಲಿ ಈ ಹುಳಗಳು ಕಂಡುಬಂದಿದ್ದು, ಉಳ್ಳಾಲ, ಸುರತ್ಕಲ್ (Ullala, Surathkal) ತೀರಗಳ ಬಂಡೆ ಕಲ್ಲುಗಳ ಮೇಲೆ ಕಾಣಸಿಗುತ್ತವೆ. ಮಂಗಳೂರಿನ ಸಂತ ಅಲೋಶಿಯಸ್ (Mangaluru St aloysius College) ಕಾಲೇಜಿನ, ಅನ್ವಯಿಕ ಜೀವಶಾಸ್ತ್ರ ಪ್ರಯೋಗಾಲಯವು, ಸಮುದ್ರ ಸಸ್ಯಗಳ ಮೇಲೆ ಕಳೆದ ಮೂರ್ನಾಲ್ಕು ವರ್ಷಗಳಿಂದ ಸಂಶೋಧನೆಯಲ್ಲಿ ತೊಡಗಿದ್ದು, ಈ ವಿಶಿಷ್ಟ ಹುಳಗಳು ಸಂಶೋಧಕರ ಗಮನ ಸೆಳೆದು, ಈ ನಿಟ್ಟಿನಲ್ಲಿ, ಆಧುನಿಕ ತಂತ್ರಜ್ಞಾನದ ಸಹಾಯದಿಂದ ಈ ಬಗ್ಗೆ ಹೆಚ್ಚಿನ ಅಧ್ಯಯನ ನಡೆಯುತ್ತಿದೆ. ಡಾ. ಲಿಯೋ ಡಿಸೋಜಾ ಹಾಗೂ ಡಾ. ಶಶಿಕಿರಣ್ ನಿವಾಸ್ ಅವರ ಮಾರ್ಗದರ್ಶನದಲ್ಲಿ, ಸುಧೀಕ್ಷಾ ಕಿರಣ್, ಸಚಿನ್ ಪಟವರ್ಧನ್, ಜೇನ್ ಜೇಮ್ಸ್, ಸುಲಕ್ಷಣಾ ಕಾರ್ಕಳ ಅವರನ್ನೊಳಗೊಂಡ ಸಂಶೋಧನಾ ತಂಡ ಈ ವಿಷಯದ ವಿವಿಧ ಆಯಾಮಗಳ ಪರಿಶೀಲನೆ ನಡೆಸುತ್ತಿದೆ.

    – ಸಚಿನ್ ಪಟವರ್ಧನ್

  • ಕನ್ಯಾಕುಮಾರಿಯಲ್ಲಿ ಮಂಗಳೂರಿನ ಮೀನುಗಾರರ ಮೇಲೆ ಹಲ್ಲೆ

    ಕನ್ಯಾಕುಮಾರಿಯಲ್ಲಿ ಮಂಗಳೂರಿನ ಮೀನುಗಾರರ ಮೇಲೆ ಹಲ್ಲೆ

    ಮಂಗಳೂರು: ಕನ್ಯಾಕುಮಾರಿ (Kanyakumari) ಸಮುದ್ರದಲ್ಲಿ (Sea) ಮಂಗಳೂರಿನ (Mangaluru) ಮೀನುಗಾರರ ಮೇಲೆ ಕಲ್ಲೆಸೆದು ಹಲ್ಲೆ ನಡೆಸಿದ ಘಟನೆ ನಡೆದಿದೆ.

    ಆಳ ಸಮುದ್ರದ ಮೀನುಗಾರಿಕೆಗೆ ಮಂಗಳೂರಿನಿಂದ ಸುಮಾರು ಏಳೆಂಟು ಬೋಟ್‍ಗಳು (Boat) ಕನ್ಯಾಕುಮಾರಿ ಬಳಿ ತೆರಳಿದ್ದರು. ಈ ವೇಳೆ ತಮಿಳುನಾಡಿನ ಕನ್ಯಾಕುಮಾರಿ ಬಳಿ ಮಂಗಳೂರು ಮೀನುಗಾರರು (Fishermen) ಮೀನುಗಾರಿಕೆ ನಡೆಸುತ್ತಿದ್ದಾಗ ತಮಿಳು ಮೀನುಗಾರರು ಅವರನ್ನು ತಡೆದಿದ್ದಾರೆ. ಇದನ್ನೂ ಓದಿ: ಬೆಂಗಳೂರಿನಲ್ಲಿ ಶಂಕಿತ ಉಗ್ರ ಟೆಕ್ಕಿಯ ಬಂಧನ

    ಅದಾದ ಬಳಿಕ ಸಮುದ್ರದ ಮಧ್ಯೆಯೇ ಹತ್ತಾರು ಬೋಟ್‍ಗಳಿಂದ ಸುತ್ತುವರಿದು ಮಂಗಳೂರಿನ ಮೀನುಗಾರರ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ. ಕಲ್ಲುಗಳನ್ನು ಎಸೆಯುತ್ತಿರುವ ವೀಡಿಯೋ ಮೀನುಗಾರರಿಂದ ಲಭ್ಯವಾಗಿದೆ. ಘಟನೆ ವೇಳೆ ಮಂಗಳೂರಿನ ಏಳೆಂಟು ಮೀನುಗಾರರಿಗೆ ಕಲ್ಲೇಟಿನಿಂದಾಗಿ ಗಾಯಗಳಾಗಿದೆ. ಇದನ್ನೂ ಓದಿ: ಗುಂಡಿಕ್ಕಿ ಬಿಜೆಪಿ ಜಿಲ್ಲಾಧ್ಯಕ್ಷನ ಕೊಲೆ- ನಕ್ಸಲರ ಕೈವಾಡ ಶಂಕೆ

    Live Tv
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k

  • ಅಯ್ಯಪ್ಪನ ದರ್ಶನ ಮುಗಿಸಿ ವಾಪಸ್ಸಾಗುತ್ತಿದ್ದ ಮಡಿಕೇರಿಯ ಯುವಕ ಸಮುದ್ರಪಾಲು

    ಅಯ್ಯಪ್ಪನ ದರ್ಶನ ಮುಗಿಸಿ ವಾಪಸ್ಸಾಗುತ್ತಿದ್ದ ಮಡಿಕೇರಿಯ ಯುವಕ ಸಮುದ್ರಪಾಲು

    ಮಡಿಕೇರಿ: ಶಬರಿಮಲೆಯ (Sabarimala) ಅಯ್ಯಪ್ಪನ ದರ್ಶನ ಮುಗಿಸಿ ವಾಪಸ್ಸಾಗುತ್ತಿದ್ದ ಮಡಿಕೇರಿಯ ಯುವಕನೋರ್ವ (Young Man) ಸಮುದ್ರಪಾಲಾಗಿ‌ ಮೃತಪಟ್ಟ ಘಟನೆ ಕೇರಳ ರಾಜ್ಯದ ಕಣ್ಣೂರು ಬೀಚ್‌ನಲ್ಲಿ ನಡೆದಿದೆ.

    ಮಡಿಕೇರಿ (Madikeri) ನಗರದ ಜಲಾಶಯ ಬಡಾವಣೆ ನಿವಾಸಿ ಶಶಾಂಕ್ (25) ಮೃತ ದುರ್ದೈವಿ. ಶನಿವಾರ ಮುಂಜಾನೆ ಈ ದುರ್ಘಟನೆ ನಡೆದಿದೆ. ಇಂದು‌ ಮಕರ‌ ಜ್ಯೋತಿ ಇರುವ ಹಿನ್ನೆಲೆಯಲ್ಲಿ ಶಬರಿಮಲೆಯಲ್ಲಿ ಹೆಚ್ಚಿನ ಜನ ಸೇರುತ್ತಾರೆ ಎಂದು ಶಶಾಂಕ್‌ನಿದ್ದ ತಂಡವೊಂದು ನಿನ್ನೆ ಸಂಜೆಯೇ ಅಯ್ಯಪ್ಪ ಸ್ವಾಮಿಯ ದರ್ಶನ ಪಡೆದಿತ್ತು. ಅಲ್ಲಿಂದ ಮರಳುತ್ತಿದ್ದ ಸಂದರ್ಭದಲ್ಲಿ ಕಣ್ಣೂರು ಬೀಚ್‌ಗೆ ತೆರಳಿದ್ದರು.

    ಕಣ್ಣೂರು ಸಮುದ್ರಕ್ಕೆ ಬಂದು ಸಮುದ್ರದಲ್ಲಿ ಕೆಲ ಸಮಯ ಕಾಲ ಕಳೆದು ಹೋಗುವಾಗ ಮೂವರು ಯುವಕರು ಸಮುದ್ರಕ್ಕೆ ಇಳಿದಿದ್ದಾರೆ. ಬೆಳಗ್ಗೆ ಸಮಯದಲ್ಲಿ ಸಮುದ್ರ ಅಲೆಗಳು ಹೆಚ್ಚಾಗಿ ಇರುವುದರಿಂದ ಮೂವರು ಯುವಕರು ಅಲೆಗಳಿಗೆ ಸಿಲುಕಿದ್ದಾರೆ. ಈ ವೇಳೆ ಮೂವರು ಯುವಕರಲ್ಲಿ ಇಬ್ಬರು ಯುವಕರನ್ನು ಸ್ಥಳೀಯರ ನೆರವಿನಿಂದ ರಕ್ಷಣೆ ಮಾಡಲಾಗಿದೆ. ಇದನ್ನೂ ಓದಿ: ಭಾವುಕರಾದ ಸಚಿವ ಮುರುಗೇಶ್ ನಿರಾಣಿ

    ಆದರೆ ಶಶಾಂಕ್ ಸಮುದ್ರ ಅಲೆಗೆ ಸಿಲುಕಿ ತುಂಬಾ ದೂರ ಹೋಗಿರುವುದರಿಂದ ಆತನ ರಕ್ಷಣೆ ‌ಮಾಡಲು ಅಸಾಧ್ಯವಾಗಿತ್ತು. ಕೆಲ ಸಮಯದ ನಂತರ ಆತನ ರಕ್ಷಣೆ ಮಾಡಲು ಸ್ಥಳೀಯರು ಮುಂದಾದ ವೇಳೆ ಶಶಾಂಕ್ ಮೃತಪಟ್ಟಿದ್ದಾನೆ‌. ಕಣ್ಣೂರಿನಲ್ಲಿ ಮರಣೋತ್ತರ ಪರೀಕ್ಷೆ ಬಳಿಕ ಮಡಿಕೇರಿಗೆ ಮೃತದೇಹ ತಲುಪಲಿದೆ. ಇದನ್ನೂ ಓದಿ: ಮೋದಿ, ಶಾ ಸಭೆ – ಜನವರಿ ಅಂತ್ಯಕ್ಕೆ ಕೇಂದ್ರ ಸಚಿವ ಸಂಪುಟ ವಿಸ್ತರಣೆ?

    Live Tv
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k

  • ಈ ವರ್ಷದಲ್ಲಿ ಅತೀ ದುಬಾರಿ ಫ್ಲ್ಯಾಟ್ ಖರೀದಿಸಿದ ನಟಿ ಮಾಧುರಿ ದೀಕ್ಷಿತ್

    ಈ ವರ್ಷದಲ್ಲಿ ಅತೀ ದುಬಾರಿ ಫ್ಲ್ಯಾಟ್ ಖರೀದಿಸಿದ ನಟಿ ಮಾಧುರಿ ದೀಕ್ಷಿತ್

    ನಿನ್ನೆಯಷ್ಟೇ ‘ದಿ ಕಾಶ್ಮೀರ್ ಫೈಲ್ಸ್’ ಸಿನಿಮಾದ ನಿರ್ದೇಶಕ ವಿವೇಕ್ ಅಗ್ನಿಹೋತ್ರಿ ದುಬಾರಿ ಫ್ಲ್ಯಾಟ್ ಖರೀದಿಸಿದ ಸುದ್ದಿ ಬಾಲಿವುಡ್ ಅಂಗಳದಿಂದ ಕೇಳಿ ಬಂದಿತ್ತು. ಇದೀಗ ಮತ್ತೊಂದು ಸುದ್ದಿ ಬಿ ಟೌನ್ ನಲ್ಲಿ ಹರಿದಾಡುತ್ತಿದ್ದು, ಈ ವರ್ಷದಲ್ಲೇ ಅತೀ ದುಬಾರಿ ಬೆಲೆಯ ಫ್ಲ್ಯಾಟ್ ಅನ್ನು ನಟಿ ಮಾಧುರಿ ದೀಕ್ಷಿತ್ ಖರೀದಿಸಿದ್ದಾರೆ. ಅದು ಪ್ರತಿಷ್ಠಿತ ಬಡಾವಣೆಯಲ್ಲಿ ಎನ್ನುವುದು ಮತ್ತೊಂದು ವಿಶೇಷ.

    ಮುಂಬೈನ ಲೋವರ್ ಪರೇಲ್ ಪ್ರದೇಶದಲ್ಲಿ ಈ ಫ್ಲ್ಯಾಟ್ ಅನ್ನುವ ಖರೀದಿ ಮಾಡಿದ್ದು, ಅದಕ್ಕೆ ಬರೋಬ್ಬರಿ 48 ಕೋಟಿ ರೂಪಾಯಿ ಎಂದು ವರದಿಯಾಗಿದೆ. ಮೊನ್ನೆಯಷ್ಟೇ ಈ ಫ್ಲ್ಯಾಟ್ ಮಾಧುರಿ ಹೆಸರಿನಲ್ಲಿ ನೋಂದಾಯಿಸಲಾಗಿದೆ. ಇಂಡಿಯಾ ಬುಲ್ಸ್ ಬ್ಲೂ ಪ್ರಾಜೆಕ್ಟರ್ ನವರಿಂದ ಈ ಫ್ಲ್ಯಾಟ್ ಅನ್ನು ಸೆಪ್ಟೆಂಬರ್ 28 ರಂದು ಮಾಧುರಿ ತಮ್ಮ ಹೆಸರಿಗೆ ಆ ಫ್ಲ್ಯಾಟ್ ಅನ್ನು ನೋಂದಾಯಿಸಿಕೊಂಡಿದ್ದಾರೆ. ಇದನ್ನೂ ಓದಿ:ಮಣಿರತ್ನಂ ನಿರ್ದೇಶನದ ‘ಪೊನ್ನಿಯಿನ್ ಸೆಲ್ವನ್’ ಮೂರು ದಿನದ ಗಳಿಕೆ 230 ಕೋಟಿಗೂ ಅಧಿಕ

    ಈ ಫ್ಲ್ಯಾಟ್ ನ ವಿಶೇಷ ಅಂದರೆ, ಸಮುದ್ರದ ಸಮೀಪದಲ್ಲೇ ಅದು ಇದ್ದು, ಸಮುದ್ರವನ್ನು ಸಮೀಪದಲ್ಲೇ ಸುಂದರವಾಗಿ ನೋಡಬಹುದಂತೆ. ಅಲ್ಲದೇ, ಜಿಮ್, ಸ್ಪಾ, ಕ್ಲಬ್ ಹೌಸ್, ಈಜುಗೊಳ ಸೇರಿದಂತೆ ಅನೇಕ ಸೌಲಭ್ಯಗಳನ್ನು ಅದು ಹೊಂದಿದೆ. 5384 ಚದರ ಅಡಿ ವಿಸ್ತೀರ್ಣ ಹೊಂದಿರುವ ಈ ಫ್ಲ್ಯಾಟ್ ಅಪಾರ್ಟ್ಮೆಂಟ್ ನ 53ನೇ ಮಹಡಿಯಲ್ಲಿ ಇದೆ ಎನ್ನುವುದು ಮತ್ತೊಂದು ವಿಶೇಷ.

    ಈ ಹಿಂದೆಯೂ ಮಾಧುರಿ ಇಂಥದ್ದೇ ಫ್ಲ್ಯಾಟ್ ವಿಚಾರಕ್ಕಾಗಿ ಸುದ್ದಿ ಆಗಿದ್ದರು. ಬರೋಬ್ಬರಿ 12.5 ಲಕ್ಷ ರೂಪಾಯಿಯಂತೆ ಬಾಡಿಗೆ ಮನೆಯಲ್ಲಿ ಅವರು ವಾಸವಿದ್ದರು. ಅತೀ ದುಬಾರಿ ಬಾಡಿಗೆ ಕೊಡುವ ನಟಿ ಎಂದೂ ಅವರನ್ನು ಕರೆಯಲಾಗುತ್ತಿತ್ತು. ಇದೀಗ ಈ ವರ್ಷದಲ್ಲಿ ದುಬಾರಿ ಫ್ಲ್ಯಾಟ್ ಖರೀದಿಸಿದ  ನಟಿ ಎಂಬ ಖ್ಯಾತಿಗೆ ಅವರು ಪಾತ್ರರಾಗಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ಸಾಗರ ರಕ್ಷಣೆ ನಮ್ಮೆಲ್ಲರ ಹೊಣೆ: ಗೆಹ್ಲೋಟ್‌

    ಸಾಗರ ರಕ್ಷಣೆ ನಮ್ಮೆಲ್ಲರ ಹೊಣೆ: ಗೆಹ್ಲೋಟ್‌

    ಕಾರವಾರ: (Karwar) ಸಾಗರವಿಲ್ಲದೆ ಪ್ರಪಂಚದ ನೈಸರ್ಗಿಕ ಸೌಂದರ್ಯವು ಅಪೂರ್ಣ. ಆದ್ದರಿಂದ ಸಾಗರವನ್ನು ರಕ್ಷಿಸುವುದು ನಮ್ಮ ಜವಾಬ್ದಾರಿಯಾಗಿದೆ. ನಾವೆಲ್ಲರೂ ಒಗ್ಗೂಡಿ ಶುದ್ಧ ಸಾಗರ, ಸುರಕ್ಷಿತ ಸಾಗರ ಎಂಬ ಸಂಕಲ್ಪದೊಂದಿಗೆ ಮುನ್ನಡೆಯಬೇಕಾಗಿದೆ ಎಂದು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ (Thawarchand Gehlot) ಹೇಳಿದರು.

    ಕಾರವಾರದಲ್ಲಿ ರವೀಂದ್ರನಾಥ್ ಟ್ಯಾಗೂರ್‌ ಬೀಚ್ ಬಳಿ ಅಂತಾರಾಷ್ಟ್ರೀಯ ಕರಾವಳಿ ಸ್ವಚ್ಛತಾ ದಿನದ ನಿಮಿತ್ತ ಉತ್ತರ ಕನ್ನಡ ಜಿಲ್ಲಾಡಳಿತ ಆಯೋಜಿಸಿದ್ದ ಕ್ಲೀನ್ ಸಾಗರ್ – ಸೇಫ್ ಸಾಗರ್ ಕಾರ್ಯಕ್ರಮದಲ್ಲಿ ಭಾಗಿಯಾಗಿ ಅವರು ಮಾತನಾಡಿದರು. ಭಾರತದ 75ನೇ ಸ್ವಾತಂತ್ರ್ಯೋತ್ಸವದ ನೆನಪಿಗಾಗಿ ಆಚರಿಸಲಾದ ಅಮೃತ ಮಹೋತ್ಸವದ ಅಂಗವಾಗಿ, ದೇಶಾದ್ಯಂತ 75 ದಿನಗಳ ಕಾಲ 75 ಬೀಚ್‌ಗಳನ್ನು ಸ್ವಚ್ಛಗೊಳಿಸಲಾಗುತ್ತಿದೆ. ಕರಾವಳಿ ಸ್ವಚ್ಛತಾ ಅಭಿಯಾನವನ್ನು ಜುಲೈ 3ರಿಂದ ಸೆಪ್ಟೆಂಬರ್‌ 17ರವರೆಗೆ ಅಂದರೆ 75 ದಿನಗಳ ಕಾಲ ದೇಶದ 75 ಸಮುದ್ರ ತೀರಗಳಲ್ಲಿ ನಡೆಸಲಾಗುತ್ತಿದೆ. ಇದು ಈ ರೀತಿಯ ಮೊದಲನೆ ಮತ್ತು ದೀರ್ಘಾವಧಿಯ ಕರಾವಳಿ ಸ್ವಚ್ಛತಾ ಅಭಿಯಾನವಾಗಿದೆ. ಇದರಲ್ಲಿ ಹೆಚ್ಚಿನ ಸಂಖ್ಯೆಯ ಜನರು ಭಾಗವಹಿಸಿರುವುದು ಶ್ಲಾಘನೀಯ ಎಂದರು.  ಇದನ್ನೂ ಓದಿ: ಶಕ್ತಿ, ಸ್ಫೂರ್ತಿ ಸದಾ ನಿಮ್ಮೊಂದಿಗರಲಿ: ಮೋದಿ ಹುಟ್ಟುಹಬ್ಬಕ್ಕೆ ರಮ್ಯಾ ವಿಶ್

    ಕರಾವಳಿ ಪ್ರದೇಶಗಳು ಸೇರಿದಂತೆ ದೇಶದ ಇತರ ಭಾಗಗಳ ಏಳಿಗೆಗಾಗಿ ʼಸ್ವಚ್ಛ ಸಾಗರ, ಸುರಕ್ಷಿತ ಸಾಗರʼ ಎಂಬ ಸಂದೇಶವನ್ನು ನೀಡಲು, ಜನಸಾಮಾನ್ಯರ ಭಾಗವಹಿಸುವಿಕೆ ಅತ್ಯಗತ್ಯವಾಗಿದೆ. ಭಾರತವು ಶ್ರೀಮಂತ ಕಡಲ ಇತಿಹಾಸವನ್ನು ಹೊಂದಿದೆ. ಸಮುದ್ರ ಚಟುವಟಿಕೆಗಳನ್ನು ಋಗ್ವೇದದಲ್ಲಿ ಮತ್ತು ಸಾಗರಗಳು, ಸಮುದ್ರಗಳು ಮತ್ತು ನದಿಗಳ ಪರಸ್ಪರ ಸಂಬಂಧಗಳ ಉಲ್ಲೇಖಗಳು ಭಾರತೀಯ ಪುರಾಣಗಳಲ್ಲಿವೆ. ಭಾರತೀಯ ಸಾಮಾಜಿಕ-ಆಧ್ಯಾತ್ಮಿಕ ಸಂಪ್ರದಾಯಗಳು, ಸಾಹಿತ್ಯ, ಕಾವ್ಯ, ಶಿಲ್ಪಕಲೆ, ಚಿತ್ರಕಲೆ ಮತ್ತು ಪುರಾತತ್ವ ಶಾಸ್ತ್ರದ ವೈವಿಧ್ಯಮಯ ಪುರಾವೆಗಳು ಭಾರತದ ಮಹಾನ್ ಕಡಲ ಸಂಪ್ರದಾಯಗಳನ್ನು ದೃಢೀಕರಿಸುತ್ತವೆ ಎಂದು ಮಾಹಿತಿ ನೀಡಿದರು.

    7,500 ಕಿ.ಮೀ.ಗಿಂತಲೂ ಹೆಚ್ಚು ಭಾರತದ ಕರಾವಳಿಯು ನಮ್ಮ ವಿಶಾಲವಾದ ಸಾಗರ ಸಂಪನ್ಮೂಲಗಳನ್ನು ಪ್ರತಿಬಿಂಬಿಸುತ್ತದೆ. ಎಲ್ಲಕ್ಕಿಂತ ಮುಖ್ಯವಾಗಿ ಹಿಂದೂ ಮಹಾಸಾಗರವು ಒಂದು ದೇಶದ ಹೆಸರಿನ ಏಕೈಕ ಸಾಗರವಾಗಿದೆ. ಈ ನೈಸರ್ಗಿಕ ಸಂಪನ್ಮೂಲವನ್ನು ಕಾಪಾಡಿಕೊಳ್ಳುವುದು ನಮ್ಮೆಲ್ಲರ ಜವಾಬ್ದಾರಿಯಾಗಿದೆ. ಹಾಗಾಗಿ ಪ್ರತಿಯೊಬ್ಬ ನಾಗರಿಕರೂ ಸ್ವಚ್ಛತಾ ಅಭಿಯಾನದಲ್ಲಿ ಭಾಗವಹಿಸಿ ಪ್ರಕೃತಿ ರಕ್ಷಣೆಗೆ ಕೈಜೋಡಿಸಬೇಕು ಎಂದು ಕರೆನೀಡಿದರು. ಇದನ್ನೂ ಓದಿ: ದಿವಂಗತ ಉಮೇಶ್ ಕತ್ತಿ ನಿವಾಸಕ್ಕೆ ಈಶ್ವರ ಖಂಡ್ರೆ ಭೇಟಿ – ಕುಟುಂಬಸ್ಥರಿಗೆ ಸಾಂತ್ವನ

    ಕ್ಲೀನ್ ಸಾಗರ್ – ಸೇಫ್ ಸಾಗರ್ ಸ್ವಚ್ಛತಾ ಅಭಿಯಾನದಲ್ಲಿ ರಾಜ್ಯಪಾಲರು ಭಾಗವಹಿಸಿ ಸಮುದ್ರದಲ್ಲಿ ವಿಶೇಷ ಪೂಜೆ ಸಲ್ಲಿಸಿದರು. ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ, ಶಾಸಕಿ ರೂಪಾಲಿ ನಾಯ್ಕ್ ಸೇರಿದಂತೆ ಅನೇಕ ಗಣ್ಯರು ಉಪಸ್ಥಿತರಿದ್ದರು.

    Live Tv
    [brid partner=56869869 player=32851 video=960834 autoplay=true]

  • ತೇಲುವ ಫ್ರೀಜರ್ ಸಹಾಯದಿಂದ 11 ದಿನ ಸಮುದ್ರದಲ್ಲೇ ಜೀವ ಉಳಿಸಿಕೊಂಡ

    ತೇಲುವ ಫ್ರೀಜರ್ ಸಹಾಯದಿಂದ 11 ದಿನ ಸಮುದ್ರದಲ್ಲೇ ಜೀವ ಉಳಿಸಿಕೊಂಡ

    ಬ್ರೆಸಿಲಿಯಾ: 3 ದಿನದಲ್ಲಿ ಮುಗಿಯಬೇಕಿದ್ದ ಮೀನುಗಾರಿಕೆ ಈ ರೀತಿ ಕಷ್ಟಕ್ಕೆ ಸಿಲುಕಿಸುತ್ತದೆ ಎಂದು ಆ ವ್ಯಕ್ತಿಗೆ ತಿಳಿದಿರಲಿಲ್ಲವೇನೋ. ಈಜು ಬರದ ಬ್ರೆಜಿಲ್‌ನ ವ್ಯಕ್ತಿ ಅಟ್ಲಾಂಟಿಕ್ ಮಹಾಸಾಗರದಲ್ಲಿ 11 ದಿನಗಳ ಕಾಲ ಕೇವಲ ಒಂದು ತೇಲುವ ಫ್ರೀಜರ್ ಮೂಲಕ ತನ್ನ ಜೀವವನ್ನು ಉಳಿಸಿಕೊಂಡಿದ್ದಾನೆ. ಕೊನೆಗೂ ಆತನನ್ನು ಬೇರೊಂದು ಮೀನುಗಾರರ ಗುಂಪು ರಕ್ಷಿಸಿದೆ.

    11 ದಿನ ಸಮುದ್ರದಲ್ಲಿ ಈ ರೀತಿಯ ಕಷ್ಟದಲ್ಲೂ ಬದುಕಿ ಬಂದ ವ್ಯಕ್ತಿ ರೊಮಾಲ್ಡೋ ಮ್ಯಾಸೆಡೊ ರಾಡ್ರಿಗಸ್ ಈ ಬಗ್ಗೆ ಮಾಧ್ಯಮದವರೊಂದಿಗೆ ವಿವರಿಸುತ್ತಾ, ನಾನು ಆಗಸ್ಟ್‌ನಲ್ಲಿ ಮೀನುಗಾರಿಕೆಗೆ ತೆರಳಿದ್ದೆ. ಮೀನುಗಾರಿಕೆಯ ಮಧ್ಯದಲ್ಲಿ ನಾನಿದ್ದ ದೋಣಿ ಸಮುದ್ರದಲ್ಲಿ ಮುಳುಗಲಾರಂಭಿಸಿತ್ತು. ಆದರೂ ನಾನು ನನ್ನ ಆತ್ಮವನ್ನು ಮುಳುಗಲು ಬಿಡಲಿಲ್ಲ. ಅದರಂತೆಯೇ ದೇವರು ನನಗೆ ಒಂದು ಅವಕಾಶ ಕೊಟ್ಟ ಎಂದು ಹೇಳಿದರು.

    ನನ್ನ ದೋಣಿ ಮುಳುಗಲಾರಂಭಿಸಿದರೂ ಅದರಲ್ಲಿದ್ದ ತೇಲುವ ಫ್ರೀಜರ್ ಮುಳುಗುತ್ತಿರಲಿಲ್ಲ. ಒಂದು ಬಾರಿ ನನಗೆ ದೇವರೇ ಅದನ್ನು ವರವಾಗಿ ನೀಡಿದ್ದ ಎನಿಸಿತು. ನಾನು ಫ್ರೀಜರ್‌ನಲ್ಲಿದ್ದ 11 ದಿನ ಹಲವು ಅಗ್ನಿ ಪರೀಕ್ಷೆಗಳನ್ನು ಎದುರಿಸಿದ್ದೇನೆ. ಒಂದು ಬಾರಿ ಫ್ರೀಜರ್‌ನಲ್ಲೂ ನೀರು ಹೊಕ್ಕಿತ್ತು. ಅದನ್ನು ನಾನು ತನ್ನ ಕೈಯಿಂದಲೇ ತೆಗೆದು ಹೊರ ಹಾಕಿದ್ದೆ. ಇನ್ನೊಂದು ಬಾರಿ ದೊಡ್ಡ ದೊಡ್ಡ ಶಾರ್ಕ್ ಮೀನುಗಳು ನನ್ನನ್ನು ಸುತ್ತುವರಿದಿದ್ದವು. ಆದರೂ ನಾನು ನನ್ನ ಕುಟುಂಬದವರನ್ನು ನೆನೆಸಿಕೊಂಡು, ಆ ಪರಿಸ್ಥಿತಿಯನ್ನು ಎದುರಿಸಿದೆ. ಅನ್ನ, ನೀರಿಲ್ಲದಿದ್ದರೂ 11 ದಿನ ನಾನು ಜೀವಂತವಾಗಿದ್ದೆ ಎಂದು ವಿವರಿಸಿದ್ದಾರೆ.

    11 ದಿನಗಳ ಸಾವು ಬದುಕಿನ ಹೋರಾಟದ ಬಳಿಕ ಕೊನೆಗೂ ನಾನಿದ್ದ ಸ್ಥಳಕ್ಕೆ ಒಂದು ದೋಣಿ ಬಂದೇ ಬಿಟ್ಟಿತು. ಆ ದೋಣಿಯಲ್ಲಿದ್ದವರು ಫ್ರೀಜರ್‌ನಲ್ಲಿ ಯಾರೂ ಇಲ್ಲ ಎಂದು ಊಹಿಸುವುದು ಬೇಡವೆಂದು ನಾನು ನನ್ನ ಕೈ, ಕಾಲುಗಳನ್ನು ಮೇಲೆತ್ತಿ, ಸಹಾಯಕ್ಕಾಗಿ ಕರೆದೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಅಕ್ರಮ ಮರಳು ಸಾಗಣೆ- ಟೋಲ್ ಗೇಟನ್ನು ಮುರಿದ 13 ಟ್ರ್ಯಾಕ್ಟರ್‌ಗಳು

    ಕೊನೆಗೂ ತನ್ನ ಜೀವವನ್ನು ಉಳಿಸಿಕೊಂಡ ರಾಡ್ರಿಗಸ್‌ನನ್ನು ಆ ದೋಣಿಯಲ್ಲಿದ್ದವರು ಸುರಿನಾಮ್ ದೇಶದ ದಡಕ್ಕೆ ಕರೆದುಕೊಂಡು ಹೋಗಿ, ಪ್ರಥಮ ಚಿಕಿತ್ಸೆ ಕೊಡಿಸಿದ್ದಾರೆ. ಆತನ ಬಳಿ ಯಾವುದೇ ವಲಸೆಯ ದಾಖಲೆಗಳಿಲ್ಲದಿದ್ದರಿಂದ ಅಲ್ಲಿನ ಪೊಲೀಸರು ಬಳಿಕ ಆತನನ್ನು 2 ವಾರಗಳ ಕಾಲ ವಶಕ್ಕೆ ಪಡೆದಿದ್ದರು ಎಂದು ವರದಿಗಳು ತಿಳಿಸಿವೆ. ಇದನ್ನೂ ಓದಿ: ಗಣೇಶಮೂರ್ತಿ ಸ್ಥಾಪಿಸಿದ ಬಿಜೆಪಿ ನಾಯಕಿ ರೂಬಿಖಾನ್‌ಗೆ ಮುಸ್ಲಿಂ ಧರ್ಮಗುರುಗಳಿಂದ ಕೊಲೆ ಬೆದರಿಕೆ

    Live Tv
    [brid partner=56869869 player=32851 video=960834 autoplay=true]

  • ದೋಣಿ ದುರಂತ- ಮಕ್ಕಳು ಸೇರಿ 22 ಮಂದಿ ದುರ್ಮರಣ

    ದೋಣಿ ದುರಂತ- ಮಕ್ಕಳು ಸೇರಿ 22 ಮಂದಿ ದುರ್ಮರಣ

    ಟ್ರಿಪೋಲಿ: ಲಿಬಿಯಾ ಕರಾವಳಿಯಲ್ಲಿ ನಡೆದ ದೋಣಿ ದುರಂತದಲ್ಲಿ ಮೂವರು ಮಕ್ಕಳು ಸೇರಿದಂತೆ 22 ಜನರು ಸಾವನ್ನಪ್ಪಿದ ಘಟನೆ ನಡೆದಿದೆ.

    ಜೂನ್ 22ರಂದು 83 ವಲಸಿಗರು ಲಿಬಿಯಾದ ಝುವರಾ ನಗರದಿಂದ ರಬ್ಬರ್ ಬೋಟ್‍ನಲ್ಲಿ ಪ್ರಯಾಣ ಬೆಳೆಸಿದ್ದರು. ಈ ವೇಳೆ ದೋಣಿ ದುರಂತ ಉಂಟಾಗಿದೆ. ಘಟನೆ ನಡೆದ 9 ದಿನಗಳ ಬಳಿಕ 61 ಜನರನ್ನು ಲಿಬಿಯಾ ಕರಾವಳಿ ಪಡೆ ರಕ್ಷಿಸಿದೆ. ಇದರಲ್ಲಿ ಹೆಚ್ಚಿನವರು ಮಾಲಿಯನ್ ಪ್ರಜೆಗಳಾಗಿದ್ದರು ಎಂದು ವಿಶ್ವಸಂಸ್ಥೆಯ ವಲಸಿಗರ ಅಂತಾರಾಷ್ಟ್ರೀಯ ಸಂಸ್ಥೆ ತಿಳಿಸಿದೆ. ಇದನ್ನೂ ಓದಿ: ನೋಡಲ್ಲ ಅಂದ್ರೆ ಮುಖ ನೋಡಲ್ಲ, ಮಾತಾಡಲ್ಲ ಅಂದ್ರೆ ಮಾತಾಡಲ್ಲ ಅಷ್ಟೇ – ಇದು ಸಿದ್ದು ವರಸೆ

    ನೀರಿನಲ್ಲಿ ಮುಳುಗಿ ಮತ್ತು ನಿರ್ಜಲೀಕರಣದಿಂದ 22 ಮಂದಿ ವಲಸಿಗರು ಮೃತಪಟ್ಟಿದ್ದಾರೆ ಎಂದು ಬದಕುಳಿದವರು ತಿಳಿಸಿದ್ದಾರೆ. ಅಷ್ಟೇ ಅಲ್ಲದೇ ಬದುಕುಳಿದವರ ಆರೋಗ್ಯ ಪರಿಸ್ಥಿತಿ ತೀರಾ ಹದಗೆಟ್ಟಿದ್ದರಿಂದ ಅವರೆಲ್ಲರನ್ನು ಹೆಚ್ಚಿನ ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಇದನ್ನೂ ಓದಿ: ಚಾಮುಂಡಿ ಬೆಟ್ಟ ರೋಪ್ ವೇ ನಿರ್ಧಾರ ಕೈ ಬಿಟ್ಟ ಜಿಲ್ಲಾಡಳಿತ

    Live Tv
    [brid partner=56869869 player=32851 video=960834 autoplay=true]

  • ಮರವಂತೆ ಸಮುದ್ರಕ್ಕೆ ಉರುಳಿದ ಕಾರು- ಓರ್ವ ಸಾವು, ಇನ್ನೋರ್ವನಿಗಾಗಿ ಹುಡುಕಾಟ

    ಮರವಂತೆ ಸಮುದ್ರಕ್ಕೆ ಉರುಳಿದ ಕಾರು- ಓರ್ವ ಸಾವು, ಇನ್ನೋರ್ವನಿಗಾಗಿ ಹುಡುಕಾಟ

    ಉಡುಪಿ: ಜಿಲ್ಲೆಯ ಬೈಂದೂರು ತಾಲೂಕಿನ ಮರವಂತೆ ಸಮುದ್ರಕ್ಕೆ ಕಾರೊಂದು ಉರುಳಿ ಬಿದ್ದು, ಓರ್ವ ಮೃತಪಟ್ಟಿದ್ದು, ಇನ್ನೋರ್ವನಿಗಾಗಿ ಹುಡುಕಾಟ ನಡೆಯುತ್ತಿರುವ ಘಟನೆ ನಡೆದಿದೆ.

    ಮರವಂತೆಯ ಮಾರಸ್ವಾಮಿ ದೇವಸ್ಥಾನದ ಬಳಿ ಹೆದ್ದಾರಿ ಮೇಲಿನಿಂದ ಕಳೆದ ರಾತ್ರಿ ಕಾರು ಸಮುದ್ರಕ್ಕೆ ಬಿದ್ದಿದೆ. ಆ ಕಾರಿನಲ್ಲಿ ನಾಲ್ವರಿದ್ದರು. ಓರ್ವ ಕಾರಿನೊಳಗೆ ಸಾವನ್ನಪ್ಪಿದ್ದು, ಮತ್ತೊಬ್ಬರು ನೀರಲ್ಲಿ ಮುಳುಗಿ ನಾಪತ್ತೆಯಾಗಿದ್ದಾರೆ. ಆತನಿಗಾಗಿ ಅಗ್ನಿಶಾಮಕದಳ, ಮೀನುಗಾರರು ಹುಡುಕಾಟ ನಡೆಸುತ್ತಿದ್ದಾರೆ. ಘಟನೆಯಲ್ಲಿ ಇಬ್ಬರು ಪ್ರಾಣಾಪಾಯದಿಂದ ಪಾರಾಗಿದ್ದು, ಅವರಿಬ್ಬರು ಚಿಕಿತ್ಸೆ ಪಡೆಯುತ್ತಿದ್ದಾರೆ. ಇದನ್ನೂ ಓದಿ: ಬಕ್ರೀದ್ ಹಬ್ಬಕ್ಕೆ ತರಲಾಗಿದ್ದ 18 ಒಂಟೆಗಳ ರಕ್ಷಣೆ

    ಕುಂದಾಪುರದ ಕೋಟೇಶ್ವರ ಬಳಿಯಿಂದ ಬೈಂದೂರು ಕಡೆಗೆ ಕಾರು ತೆರಳುತ್ತಿತ್ತು. ಕಾರಿನೊಳಗೆ ವೀರಜ್ ಆಚಾರ್ಯ ಮೃತದೇಹ ಪತ್ತೆಯಾಗಿದೆ. ಅಗ್ನಿಶಾಮಕ ದಳ ಆಗಮಿಸಿ, ಕಾರನ್ನು ಮೇಲಕ್ಕೆತ್ತುವ ಕಾರ್ಯಚರಣೆ ಕೈಗೊಂಡಿದ್ದಾರೆ. ಗಂಗೊಳ್ಳಿ ಪೊಲೀಸರು ಘಟನಾ ಸ್ಥಳಕ್ಕೆ ಭೇಟಿ ನೀಡಿದ್ದಾರೆ. ಗಾಳಿ ಮಳೆಗೆ ರಸ್ತೆ ಕಾಣದೆ ಕಾರು ಸಮುದ್ರಕ್ಕೆ ಇಳಿದಿರಬಹುದು ಎಂದು ಶಂಕಿಸಲಾಗಿದೆ. ಸ್ಥಳೀಯ ಮೀನುಗಾರರ ಸಹಾಯದಿಂದ ಕಣ್ಮರೆಯಾದ ಯುವಕನನ್ನು ಹುಡುಕುವ ಪ್ರಯತ್ನ ಮಾಡಲಾಗುತ್ತಿದೆ. ಇದನ್ನೂ ಓದಿ: ಏಕೆ ಗುರಾಯಿಸ್ತಿದ್ಯಾ ಅಂದಿದ್ದಕ್ಕೆ ಯುವಕನಿಗೆ ಚಾಕು ಇರಿತ

    Live Tv