Tag: seal down

  • ದಕ್ಷಿಣ ಕನ್ನಡ ಜಿಲ್ಲೆಯ 17 ಗ್ರಾಮ ಪಂಚಾಯತ್ ಒಂದು ವಾರ ಸೀಲ್‍ಡೌನ್

    ದಕ್ಷಿಣ ಕನ್ನಡ ಜಿಲ್ಲೆಯ 17 ಗ್ರಾಮ ಪಂಚಾಯತ್ ಒಂದು ವಾರ ಸೀಲ್‍ಡೌನ್

    ಮಂಗಳೂರು: ಕೊರೊನಾ ಪ್ರಕರಣಗಳನ್ನು ಕಡಿಮೆ ಮಾಡುವ ನಿಟ್ಟಿನಲ್ಲಿ, ದಕ್ಷಿಣ ಕನ್ನಡ ಜಿಲ್ಲೆಯ 17 ಗ್ರಾಮ ಪಂಚಾಯತ್‍ನ್ನು ಒಂದು ವಾರಗಳ ಕಾಲ ಸಂಪೂರ್ಣ ಸೀಲ್‍ಡೌನ್ ಮಾಡಿ ದ.ಕ ಜಿಲ್ಲಾಧಿಕಾರಿ ಡಾ.ಕೆ.ವಿ ರಾಜೇಂದ್ರ ಆದೇಶ ಹೊರಡಿಸಿದ್ದಾರೆ.

     

    ಜಿಲ್ಲೆಯ ಮಂಗಳೂರು, ಬೆಳ್ತಂಗಡಿ, ಸುಳ್ಯ ಮತ್ತು ಕಡಬ ತಾಲೂಕಿನ 17 ಗ್ರಾಮ ಪಂಚಾಯತ್‍ಗಳಲ್ಲಿ 50ಕ್ಕಿಂತ ಹೆಚ್ಚು ಕೋವಿಡ್ ಸಕ್ರಿಯ ಪ್ರಕರಣಗಳಿರುವ ಹಿನ್ನೆಲೆಯಲ್ಲಿ ಈ ಕಠಿಣ ಕ್ರಮ ಕೈಗೊಳ್ಳಲಾಗಿದೆ. ಮಂಗಳೂರು ತಾಲೂಕಿನ ನೀರುಮಾರ್ಗ ಹಾಗೂ ಕೊಣಾಜೆ, ಬೆಳ್ತಂಗಡಿ ತಾಲೂಕಿನ ನಾರಾವಿ, ಕೊಯ್ಯುರು, ಮಿತ್ತಬಾಗಿಲು, ಮಾಲಾಡಿ, ನೆರಿಯಾ, ಲಾಯಿಲಾ, ಚಾರ್ಮಾಡಿ, ಸುಳ್ಯ ತಾಲೂಕಿನ ಐವರ್ನಾಡು, ಅಮರಮುಡ್ನೂರು, ಕೊಲ್ಲಮೊಗರು, ಗುತ್ತಿಗಾರು, ಅರಂತೋಡು. ಕಡಬ ತಾಲೂಕಿನ ಸುಬ್ರಹ್ಮಣ್ಯ, ಸವಣೂರು ಗ್ರಾಮ ಪಂಚಾಯತ್ ವ್ಯಾಪ್ತಿಯನ್ನು ಸೀಲ್‍ಡೌನ್ ಮಾಡಲಾಗಿದೆ. ಇದನ್ನೂ ಓದಿ: 8ನೇ ಪರಿಚ್ಛೇದಕ್ಕೆ ತುಳು – ಸರ್ಕಾರದ ಜೊತೆ ಮಾತುಕತೆ ನಡೆಯುತ್ತಿದೆ ಎಂದ ಕಟೀಲ್

    ಜೂ.14ರ ಬೆಳಗ್ಗೆ 9 ಗಂಟೆಯಿಂದ ಜೂ. 21 ರ ಬೆಳಗ್ಗೆ 9 ಗಂಟೆವರೆಗೆ ಸೀಲ್‍ಡೌನ್ ಮಾಡಿ ಆದೇಶ ಮಾಡಲಾಗಿದ್ದು, ತುರ್ತು ವೈದ್ಯಕೀಯ ಸೇವೆ ಹೊರತುಪಡಿಸಿ ಗ್ರಾಮಕ್ಕೆ ಒಳ ಪ್ರವೇಶ ಮತ್ತು ನಿರ್ಗಮನ ಸಂಪೂರ್ಣ ಬಂದ್ ಆಗಲಿದೆ. ಈ ಗ್ರಾಮ ಪಂಚಾಯತ್‍ನ ಜನರಿಗೆ ಅಗತ್ಯ ವಸ್ತು ಪೂರೈಸಲು ಪಾವತಿ ಆಧಾರದ ಮೇಲೆ ಕಾರ್ಯಪಡೆ ರಚಿಸಲು ಜಿಲ್ಲಾಧಿಕಾರಿ ಸೂಚನೆ ನೀಡಿದ್ದಾರೆ.

  • ಕೊರೊನಾಗೆ ತಾಯಿ, ಮಗ ಬಲಿ- ಇಡೀ ಗ್ರಾಮ ಸೀಲ್‍ಡೌನ್

    ಕೊರೊನಾಗೆ ತಾಯಿ, ಮಗ ಬಲಿ- ಇಡೀ ಗ್ರಾಮ ಸೀಲ್‍ಡೌನ್

    ಶಿವಮೊಗ್ಗ: ಕೊರೊನಾ ಸೋಂಕಿಗೆ ತುತ್ತಾಗಿ ಒಂದೇ ವಾರದ ಅಂತರದಲ್ಲಿ ತಾಯಿ ಮತ್ತು ಮಗ ಬಲಿಯಾದ ಘಟನೆ ಶಿವಮೊಗ್ಗ ಜಿಲ್ಲೆ ಹೊಸನಗರ ತಾಲೂಕಿನ ಪೂಜಾರುದಿಂಬ ಗ್ರಾಮದಲ್ಲಿ ವರದಿಯಾಗಿದೆ.

    ಜಿಲ್ಲೆಯ ಹೊಸನಗರ ತಾಲೂಕಿನ ಪೂಜಾರುದಿಂಬ ಗ್ರಾಮದ ರತ್ನಮ್ಮ (86) ಕಳೆದ ವಾರ ಕೊರೊನಾ ಸೋಂಕಿನಿಂದ ಮೃತಪಟ್ಟಿದ್ದರು. ಬಳಿಕ ಅವರ ಮಗ ಯುವರಾಜ್ (46) ಅವರಿಗೂ ಕೊರೊನಾ ಸೋಂಕು ತಗುಲಿತ್ತು. ಅವರು ಮೆಗ್ಗಾನ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಬಳಿಕ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.

    ಪರಿಣಾಮ ತಾಯಿ, ಮಗ ಮೃತಪಟ್ಟ ನಂತರ ಕೊರೊನಾ ಸೋಂಕಿಗೆ ಇಡೀ ಕುಟುಂಬ ತುತ್ತಾಗಿದೆ. ಹಾಗಾಗಿ ಮುಂಜಾಗ್ರತಾ ಕ್ರಮವಾಗಿ ಪೂಜಾರುದಿಂಬ ಗ್ರಾಮವನ್ನೇ ತಾಲೂಕು ಆಡಳಿತ ಸೀಲ್ ಡೌನ್ ಮಾಡಿದೆ. ಆರೋಗ್ಯ ಸಿಬ್ಬಂದಿ ಗ್ರಾಮಕ್ಕೆ ಆಗಮಿಸಿ ಸ್ಯಾನಿಟೈಸರ್ ಸಿಂಪಡಿಸಿದ್ದಾರೆ.

  • ಕೋಲಾರದಲ್ಲಿ ಎರಡು ಹಳ್ಳಿಗಳು ಸೀಲ್ ಡೌನ್ – ಒಂದೇ ವಾರದಲ್ಲಿ ಕೊರೊನಾಗೆ 5 ಬಲಿ

    ಕೋಲಾರದಲ್ಲಿ ಎರಡು ಹಳ್ಳಿಗಳು ಸೀಲ್ ಡೌನ್ – ಒಂದೇ ವಾರದಲ್ಲಿ ಕೊರೊನಾಗೆ 5 ಬಲಿ

    – 1 ವಾರದಲ್ಲಿ 20 ಮಂದಿಗರ ಸೋಂಕು
    – ಸೋಂಕಿತರಿಗಾಗಿ ತೀವ್ರ ಶೋಧ

    ಕೋಲಾರ: ಗಡಿ ಜಿಲ್ಲೆ ಕೋಲಾರದಲ್ಲಿ ದಿನದಿಂದ ದಿನಕ್ಕೆ ಕೊರೊನಾ ಸೋಂಕು ತನ್ನ ಅಟ್ಟಹಾಸ ಮೆರೆಯುತ್ತಿದೆ. ಪರಿಣಾಮ ಕೋಲಾರ ಜಿಲ್ಲೆಯ ಎರಡು ಗ್ರಾಮಗಳು ಸಂಪೂರ್ಣವಾಗಿ ಸೀಲ್ ಡೌನ್ ಆಗಿವೆ.

    ಗ್ರಾಮಕ್ಕೆ ಗ್ರಾಮವನ್ನ ಸೀಲ್ ಡೌನ್ ಮಾಡಿರುವ ಅಧಿಕಾರಿಗಳು, ಮತ್ತೊಂದೆಡೆ ಗ್ರಾಮದಲ್ಲಿ ಸೋಂಕಿತರ ಹುಡುಕಾಟದಲ್ಲಿರುವ ಅಧಿಕಾರಿಗಳು, ಇದೆಲ್ಲಾ ದೃಶ್ಯಗಳು ಕಂಡು ಬಂದಿದ್ದು ಕೋಲಾರ ಜಿಲ್ಲೆಯಲ್ಲಿ. ಕೋಲಾರ ತಾಲ್ಲೂಕಿನ ಲಕ್ಷ್ಮೀ ಸಾಗರ ಹಾಗೂ ಬಂಗಾರಪೇಟೆ ತಾಲ್ಲೂಕಿನ ಪಾಕರಹಳ್ಳಿಯಲ್ಲಿ ಕೊರೊನಾ ರೌದ್ರ ನರ್ತನ ನಡೆಯುತ್ತಿದೆ.

    ಕಳೆದೊಂದು ವಾರದಿಂದ ಗ್ರಾಮದಲ್ಲಿ 20 ಕ್ಕೂ ಹೆಚ್ಚು ಜನರಲ್ಲಿ ಕೊರೊನಾ ಕಾಣಿಸಿಕೊಂಡಿದ್ರೆ, 5 ಜನರು ಕೊರೊನಾ ಸೋಂಕಿಗೆ ಮೃತಪಟ್ಟಿದ್ದಾರೆ. ಇದರಿಂದ ಎಚ್ಚೆತ್ತ ಗ್ರಾಮ ಪಂಚಾಯತ್ ಅಧಿಕಾರಿಗಳು ಗ್ರಾಮವನ್ನು ಸಂಪೂರ್ಣವಾಗಿ ಸೀಲ್ ಡೌನ್ ಮಾಡಿದ್ದಾರೆ.

    ಕಳೆದ 2 ದಿನಗಳಿಂದ ಗ್ರಾಮದಲ್ಲಿ ಬೀಡು ಬಿಟ್ಟಿರುವ ಆರೋಗ್ಯ ಕಾರ್ಯಕರ್ತರು ಗ್ರಾಮದಲ್ಲಿ ಕೊರೊನಾ ಪರೀಕ್ಷೆಗೆ ಮುಂದಾಗಿದ್ದಾರೆ. ಗ್ರಾಮದಲ್ಲಿ ಮತ್ತಷ್ಟು ಜನರು ಸೋಂಕಿತರಿದ್ದರೂ ಚಿಕಿತ್ಸೆಗೆ ಹಾಗೂ ಅಧಿಕಾರಿಗಳಿಗೆ ಸ್ಪಂದಿಸುತ್ತಿಲ್ಲ. ಹೀಗಾಗಿ ಗ್ರಾಮದಲ್ಲಿ ಆರೋಗ್ಯ ಇಲಾಖೆ, ಕಂದಾಯ ಇಲಾಖೆ ಹಾಗೂ ಪೊಲೀಸ್ ಇಲಾಖೆ ಅಧಿಕಾರಿಗಳು ಮೊಕ್ಕಾಂ ಹೂಡಿದ್ದಾರೆ.

    ಕೋಲಾರದ ಕಾಲೇಜಿನಲ್ಲಿ ವಿದ್ಯಾಬ್ಯಾಸ ಮಾಡುವ ಯುವಕನಿಂದ ಗ್ರಾಮಕ್ಕೆ ಕೊರೊನಾ ಕಂಟಕ ಎದುರಾಗಿದ್ದು, ಇದುವರೆಗೂ 20ಕ್ಕೂ ಹೆಚ್ಚು ಜನರಲ್ಲಿ ಕಾಣಿಸಿಕೊಂಡಿದೆ. ಮಾತ್ರವಲ್ಲದೆ ಜಿಲ್ಲೆಯಲ್ಲಿ ಮತ್ತಷ್ಟು ಸೋಂಕು ಹೆಚ್ಚಾಗುವ ಸಾಧ್ಯತೆ ಇದೆ.

    ಅರೋಗ್ಯ ಇಲಾಖೆ ಅಧಿಕಾರಿಗಳು ಮನೆಮನೆಗೆ ಭೇಟಿ ನೀಡಿ ಗ್ರಾಮದ ಜನರ ಗಂಟಲು ಮಾದರಿ ಸಂಗ್ರಹ ಮಾಡಲಾಗುತ್ತಿದೆ. ಅಲ್ಲದೆ ಲಕ್ಷ್ಮೀ ಸಾಗರ ಗ್ರಾಮದಲ್ಲಿ 30 ಇದ್ದ ಸೋಂಕಿತರ ಸಂಖ್ಯೆ 41ಕ್ಕೆ ಏರಿಕೆಯಾಗಿದೆ. ಪಾಕರಹಳ್ಳಿ ಹಾಗೂ ಲಕ್ಷ್ಮೀ ಸಾಗರದಲ್ಲಿ ಗ್ರಾಮಗಳನ್ನ ಸೀಲ್ ಡೌನ್ ಮಾಡಲಾಗಿದ್ದು ಆರೋಗ್ಯಾಧಿಕಾರಿ ಸೇರಿದಂತೆ ವೈದ್ಯರು ಗ್ರಾಮದಲ್ಲಿ ಮೊಕ್ಕಾಂ ಹೂಡಿದ್ದಾರೆ.

  • ಮ್ಯಾನೇಜರ್ ಸೇರಿ ಐವರಿಗೆ ಕೊರೊನಾ, ಬ್ಯಾಂಕ್ ಸೀಲ್‍ಡೌನ್

    ಮ್ಯಾನೇಜರ್ ಸೇರಿ ಐವರಿಗೆ ಕೊರೊನಾ, ಬ್ಯಾಂಕ್ ಸೀಲ್‍ಡೌನ್

    ಚಿಕ್ಕಮಗಳೂರು: ರಾಜ್ಯದಲ್ಲಿ ದಿನದಿಂದ ದಿನಕ್ಕೆ ಕೊರೊನಾ ಸೋಂಕಿತರ ಸಂಖ್ಯೆ ಇಳಿಮುಖ ಆಗ್ತಿದೆ. ಇನ್ನೇನು ನಾಳೆ-ನಾಡಿದ್ದು ಅನ್ನುವಷ್ಟರಲ್ಲಿ ಲಸಿಕೆಯೂ ಸಿಗುತ್ತೆ, ಅಬ್ಬಾ… ಈ ಹೆಮ್ಮಾರಿ ತೊಲಗಿತು ಎಂದು ಜನಸಾಮಾನ್ಯರು ನಿಟ್ಟುಸಿರು ಬಿಡುವ ಹೊತ್ತಿಗೆ ಮತ್ತೆ ಕೊರೊನಾದಿಂದ ಕಳಸ ಪಟ್ಟಣದ ಬ್ಯಾಂಕ್‍ವೊಂದು ಸೀಲ್‍ಡೌನ್

    ಕರ್ನಾಟಕ ಬ್ಯಾಂಕ್ ಎರಡು ದಿನಗಳ ಕಾಲ ಕೊರೊನಾ ಆತಂಕದಿಂದ ಸೀಲ್‍ಡೌನ್ ಆಗಿದೆ. ಬ್ಯಾಂಕ್‍ನಲ್ಲಿ ಕೆಲಸ ಮಾಡುತ್ತಿದ್ದ ಬ್ಯಾಂಕ್ ಮ್ಯಾನೇಜರ್ ಸೇರಿದಂತೆ ಐವರು ಸಿಬ್ಬಂದಿಗೆ ಕೊರೋನಾ ಪಾಸಿಟಿವ್ ಬಂದ ಹಿನ್ನೆಲೆ ಶುಕ್ರವಾರ ಹಾಗೂ ಶನಿವಾರ ಎರಡು ದಿನಗಳ ಕಾಲ ಬ್ಯಾಂಕನ್ನು ಸೀಲ್‍ಡೌನ್ ಮಾಡಲಾಗಿತ್ತು.

    ಶುಕ್ರವಾರ, ಶನಿವಾರ ಹಾಗೂ ಇಂದು ಭಾನುವಾರವಾದ್ದರಿಂದ ಜನರಿಗೆ ಬ್ಯಾಂಕ್ ಇಲ್ಲದೆ ತೀವ್ರ ಸಮಸ್ಯೆ ಎದುರಾಗಿತ್ತು. ಕಳಸ ಪಟ್ಟಣ ಸುತ್ತಮುತ್ತ ಅಡಿಕೆ, ಕಾಫಿ ತೋಟವೇ ಹೆಚ್ಚಿದ್ದು, ಈ ಭಾಗದಲ್ಲಿ ಕೂಲಿ ಕಾರ್ಮಿಕರ ಸಂಖ್ಯೆಯೂ ಹೆಚಾಗಿದೆ. ಗ್ರಾಮೀಣ ಭಾಗವಾದ್ದರಿಂದ ಬಹುತೇಕ ಕೂಲಿ ಕಾರ್ಮಿಕರು ಕರ್ನಾಟಕ ಬ್ಯಾಂಕಲ್ಲಿ ಅಕೌಂಟ್ ಮಾಡಿಸಿದ್ದು ಕಳೆದ ಮೂರು ದಿನಗಳಿಂದ ಹಣ ಬಿಡಿಸಲಾಗದೇ ಒದ್ದಾಡಿದ್ದಾರೆ.

    ಕೆಲವರು ಕೂಲಿ ಕಾರ್ಮಿಕರು ಮಾಡಿದ ಕೆಲಸಕ್ಕೆ ಕೂಲಿ ನೀಡಲು ಹಣ ಬಿಡಿಸಲಾಗದಂತಹಾ ಸ್ಥಿತಿ ನಿರ್ಮಾಣವಾಗಿದೆ. ಬ್ಯಾಂಕ್ ಸೀಲ್‍ಡೌನ್‍ನಿಂದ ಪಟ್ಟಣ ಹಾಗೂ ಗ್ರಾಮೀಣ ಭಾಗದ ಜನಸಾಮಾನ್ಯರು ತೀವ್ರ ಸಂಕಷ್ಟ ಎದುರಿಸಿದ್ದಾರೆ. ಈ ಬ್ಯಾಂಕಿನಲ್ಲಿ ಏಳು ಜನ ಕೆಲಸ ಮಾಡುತ್ತಿದ್ದು, ಐದು  ಸಿಬ್ಬಂದಿಗೆ ಕೊರೊನಾ ಪಾಸಿಟಿವ್ ಬಂದಿತ್ತು.

  • ಕೋವಿಡ್ ಆಸ್ಪತ್ರೆಯಲ್ಲೇ ಡೆಡ್ಲಿ ತಾಂಡವ- ಕೆ.ಸಿ ಜನರಲ್‍ನಲ್ಲಿ 20 ಪಾಸಿಟಿವ್ ಪ್ರಕರಣ

    ಕೋವಿಡ್ ಆಸ್ಪತ್ರೆಯಲ್ಲೇ ಡೆಡ್ಲಿ ತಾಂಡವ- ಕೆ.ಸಿ ಜನರಲ್‍ನಲ್ಲಿ 20 ಪಾಸಿಟಿವ್ ಪ್ರಕರಣ

    – ಒಂದೇ ದಿನ 72 ಪೊಲೀಸರಿಗೆ ಸೋಂಕು

    ಬೆಂಗಳೂರು: ಚೀನಾ ವೈರಸ್ ರಾಜ್ಯದಲ್ಲಿ ರಣರಣಿಸುತ್ತಿದೆ. ದಿನದಿನವೂ ಉಗ್ರರೂಪ ತಾಳಿ ಅಬ್ಬರಿಸಿ ಬೊಬ್ಬಿರಿಯುತ್ತಿದೆ. ರಾಜ್ಯದಲ್ಲಿ ಶುಕ್ರವಾರ ದಾಖಲೆಯ 2300ಕ್ಕೂ ಹೆಚ್ಚು ಪ್ರಕರಣಗಳು ವರದಿಯಾಗಿವೆ. ಬೆಂಗಳೂರಲ್ಲಂತೂ ಪರಿಸ್ಥಿತಿ ತುಂಬಾ ಕೆಟ್ಟದಾಗಿದೆ. ಕೇವಲ ರಾಜಧಾನಿಯೊಂದರಲ್ಲೇ 1400ಕ್ಕೂ ಹೆಚ್ಚು ಸೋಂಕು ಪ್ರಕರಣಗಳು ಬೆಳಕಿಗೆ ಬಂದಿವೆ.

    ರಾಜ್ಯದಲ್ಲಿ ಎರಡನೇ ಬಾರಿಗೆ ದಿನದಲ್ಲಿ 50ಕ್ಕೂ ಹೆಚ್ಚು ಸಾವುಗಳು ಸಂಭವಿಸಿವೆ. ಇದರಲ್ಲಿ ಬೆಂಗಳೂರಿನಲ್ಲೇ 29 ಮಂದಿ ಮೃತಪಟ್ಟಿದ್ದಾರೆ. ದಕ್ಷಿಣ ಕನ್ನಡದಲ್ಲಿ 8 ಮಂದಿ, ಮೈಸೂರಲ್ಲಿ ನಾಲ್ವರು, ಬೀದರ್‍ನಲ್ಲಿ ಮೂವರು, ಕಲಬುರಗಿ, ಮೈಸೂರು, ಚಿಕ್ಕಬಳ್ಳಾಪುರ, ಗದಗದಲ್ಲಿ ತಲಾ ಇಬ್ಬರು, ಬಳ್ಳಾರಿ, ರಾಯಚೂರು, ಉತ್ತರ ಕನ್ನಡ, ಹಾವೇರಿಯಲ್ಲಿ ತಲಾ ಒಬ್ಬರು ಬಲಿ ಆಗಿದ್ದಾರೆ. ಇದರೊಂದಿಗೆ ಮೃತರ ಸಂಖ್ಯೆ 500 ದಾಟಿದೆ. ಇನ್ನೂ ಚೇತರಿಕೆ ಪ್ರಮಾಣದಲ್ಲಿಯೂ ಇವತ್ತು ದಾಖಲೆ ಸೃಷ್ಟಿಯಾಗಿದೆ.

    25ಕ್ಕೂ ಹೆಚ್ಚು ವಾರಿಯರ್ಸ್‌ಗೆ ಸೋಂಕು ದೃಢ
    ಬೆಂಗಳೂರಿನ ಕೆಸಿ ಜನರಲ್‍ನಲ್ಲಿ ಕೊರೊನಾ ಬ್ಲಾಸ್ಟ್ ಆಗಿದೆ. ಕೊರೊನಾ ವಾರಿಯರ್ಸ್‌ಗೆ ಹೆಮ್ಮಾರಿ ಡೆಡ್ಲಿ ಅಟ್ಯಾಕ್ ಮಾಡಿದೆ. ಆಸ್ಪತ್ರೆಯ 20 ಮಂದಿ ಸಿಬ್ಬಂದಿಗೆ ಕೊರೊನಾ ಪಾಸಿಟಿವ್ ಬಂದಿದೆ. ಮೂರು ಜನ ಡಾಕ್ಟರ್, 13 ಮಂದಿ ನರ್ಸ್, ಒಬ್ಬ ಲ್ಯಾಬ್ ಟೆಕ್ನಿಶಿಯನ್, ಮೂವರು ವಾರ್ಡ್ ಬಾಯ್ಸ್, ಒಬ್ಬ ಕಂಪ್ಯೂಟರ್ ಆಪರೇಟರ್‌ಗೆ ಸೋಂಕು ವಕ್ಕರಿಸಿದೆ. ಮತ್ತಷ್ಟು ಮಂದಿಗೆ ಸೋಂಕು ತಗುಲಿರುವ ಆತಂಕ ಕೂಡ ಇದೆ.

    ಪೊಲೀಸರನ್ನ ಬಿಟ್ಟು ಬಿಡದೇ ಕಾಡ್ತಿದೆ ಕಿಲ್ಲರ್
    ಒಂದೇ ದಿನ 26 ಜನ ಪೊಲೀಸರಿಗೆ ಪಾಸಿಟಿವ್ ಕಂಡು ಬಂದಿದ್ದು, ಸೋಂಕಿತ ಪೊಲೀಸರ ಸಂಖೆ 470ಕ್ಕೆ ಏರಿದೆ. ಪೊಲೀಸ್ ಕಮಿಷನರ್ ಕಚೇರಿಯ 12 ಮಂದಿ ಸಿಬ್ಬಂದಿಗೆ ಸೋಂಕು ತಗುಲಿದ್ದು, ಮತ್ತೊಮ್ಮೆ ಪೊಲೀಸ್ ಕಮಿಷನರ್ ಕಚೇರಿ ಸೀಲ್‍ಡೌನ್ ಆಗಿದೆ. ವಿಧಾನಸೌಧ ಪೊಲೀಸ್ ಠಾಣೆ ಕೂಡ ಸೀಲ್ ಆಗಿದೆ.

    ಕೊರೊನಾ ಸುಳಿಯಲ್ಲಿ ನಲುಗುತ್ತಿರುವ ಕರುನಾಡಿಗೆ ಬಿಗ್ ರಿಲೀಫ್ ಸಿಗುತ್ತಿದೆ. ಫಟಾಫಟ್ ಟೆಸ್ಟ್, ಫಟಾಫಟ್ ರಿಸಲ್ಟ್ ಕೊಡುವ ಆಂಟಿಜೆನ್ ಟೆಸ್ಟ್ ಕಿಟ್ ಬೆಂಗಳೂರಿಗೆ ಬಂದಿದೆ. 1 ಲಕ್ಷ ಟೆಸ್ಟ್ ಕಿಟ್‍ಗಳು ಈಗಾಗಲೇ ರೆಡಿಯಿದ್ದು, ಸೋಮವಾರದಿಂದ ಇದರಿಂದಲೇ ಪರೀಕ್ಷೆ ನಡೆಯಲಿದೆ. ಬೆಂಗಳೂರಿನಲ್ಲಿ 20 ಸಾವಿರ ಹಾಗೂ ರಾಜ್ಯದ ಇತರೆಡೆ 80 ಸಾವಿರ ಕಿಟ್‍ಗಳ ಬಳಕೆಗೆ ಸರ್ಕಾರ ತೀರ್ಮಾನಿಸಿದೆ.

  • ಎರಡು ದಿನ ಮೈಸೂರಿನ ನ್ಯಾಯಾಲಯ ಸೀಲ್‍ಡೌನ್

    ಎರಡು ದಿನ ಮೈಸೂರಿನ ನ್ಯಾಯಾಲಯ ಸೀಲ್‍ಡೌನ್

    ಮೈಸೂರು: ವಕೀಲರೊಬ್ಬರಿಗೆ ಕೊರೊನಾ ಸೋಂಕು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಮೈಸೂರಿನ ಜಿಲ್ಲಾ ನ್ಯಾಯಾಲಯ ಎರಡು ದಿನ ಸೀಲ್‍ಡೌನ್ ಮಾಡಲಾಗಿದೆ.

    ಇಂದು ಮತ್ತು ನಾಳೆ ಎರಡು ದಿನ ನ್ಯಾಯಾಲಯ ಕಾರ್ಯ ಕಲಾಪಕ್ಕೆ ಬ್ರೇಕ್ ಹಾಕಲಾಗಿದೆ. ಎರಡು ದಿನ ನ್ಯಾಯಾಲಯದಲ್ಲಿ ಸ್ಯಾನಿಟೈಸ್ ಮಾಡುವ ಹಿನ್ನೆಲೆಯಲ್ಲಿ ಯಾರು ನ್ಯಾಯಾಲಯಕ್ಕೆ ಬರದಂತೆ ಮನವಿ ಮಾಡಲಾಗಿದೆ. ಸಂಬಂಧಪಟ್ಟ ಪ್ರಕರಣಗಳನ್ನು ಮುಂದಿನ ದಿನಾಂಕಕ್ಕೆ ಮುಂದೂಡಲಾಗಿದೆ.

    ಮೈಸೂರು ಮಹಾನಗರ ಪಾಲಿಕೆ ನ್ಯಾಯಾಲಯ ಸ್ಯಾನಿಟೈಸ್ ಮಾಡುವ ಕಾರ್ಯದಲ್ಲಿ ತೊಡಗಿಕೊಂಡಿದೆ. ಮೈಸೂರಿನಲ್ಲಿ ಕೊರೊನಾ ಪ್ರಕರಣಗಳು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ನಿನ್ನೆ ಒಂದೇ ದಿನ ಮೈಸೂರಿನಲ್ಲಿ 49 ಮಂದಿಗೆ ಸೋಂಕು ಕಾಣಿಸಿಕೊಂಡಿದ್ದು, ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 528ಕ್ಕೆ ಏರಿಕೆಯಾಗಿದೆ. 528ರಲ್ಲಿ 210 ಸಕ್ರಿಯ ಪ್ರಕರಣಗಳಿದ್ದು , 306 ಮಂದಿ ಡಿಸ್ಚಾರ್ಜ್ ಆಗಿದ್ದಾರೆ.

  • ಬಿಜೆಪಿ ಮುಖಂಡರಿಗೂ ಕೊರೊನಾ – ನಗರಾಭಿವೃದ್ಧಿ ಪ್ರಾಧಿಕಾರ ಸೀಲ್‍ಡೌನ್

    ಬಿಜೆಪಿ ಮುಖಂಡರಿಗೂ ಕೊರೊನಾ – ನಗರಾಭಿವೃದ್ಧಿ ಪ್ರಾಧಿಕಾರ ಸೀಲ್‍ಡೌನ್

    ಚಿಕ್ಕಮಗಳೂರು: ಜಿಲ್ಲೆಯಲ್ಲಿ ಕೊರೊನಾ ಪಾಸಿಟಿವ್ ಬಂದಿರುವ ವಿಧಾನ ಪರಿಷತ್ ಸದಸ್ಯ ಎಂ.ಕೆ.ಪ್ರಾಣೇಶ್ ಅವರ ಜೊತೆ ಸಂಪರ್ಕದಲ್ಲಿದ್ದ ಚಿಕ್ಕಮಗಳೂರು ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಆನಂದ್ ಹಾಗೂ ನಗರಸಭೆ ಮಾಜಿ ಸದಸ್ಯ, ಬಿಜೆಪಿ ಮುಖಂಡ ಎಚ್.ಡಿ.ತಮ್ಮಯ್ಯ ಅವರಿಗೂ ಕೊರೊನಾ ಪಾಸಿಟಿವ್ ಇರುವುದು ದೃಢವಾಗಿದೆ.

    ತಮ್ಮಯ್ಯ ಅವರ ಪತ್ನಿಗೂ ಪಾಸಿಟಿವ್ ದೃಢವಾಗಿದೆ. ಈಗಾಗಲೇ ಮೂವರನ್ನು ಜಿಲ್ಲೆಯ ಕೋವಿಡ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಮುಂದುವರಿಸಲಾಗಿದೆ. ವಿಧಾನ ಪರಿಷತ್ ಸದಸ್ಯ ಪ್ರಾಣೇಶ್ ಸಂಪರ್ಕಿತ ಅಧ್ಯಕ್ಷ ಆನಂದ್ ಹಾಗೂ ನಗರಸಭೆ ಮಾಜಿ ಸದಸ್ಯ ತಮ್ಮಯ್ಯ ಅವರಲ್ಲಿ ಪಾಸಿಟಿವ್ ಪತ್ತೆಯಾಗಿರುವುದರಿಂದ ಇನ್ನುಳಿದ ಬಿಜೆಪಿ ಮುಖಂಡರು ಹಾಗೂ ಕಾರ್ಯಕರ್ತರಿಗೂ ಕೊರೊನಾ ಆತಂಕ ಎದುರಾಗಿದೆ.

    ಇದೀಗ ಜಿಲ್ಲಾ ಬಿಜೆಪಿ ವಲಯದಲ್ಲಿ ತೀವ್ರ ಆತಂಕ ಎದುರಾಗಿದ್ದು, ಮೂಡಿಗೆರೆ ತಾಲೂಕಿನ ಬಿಜೆಪಿ ಮುಖಂಡರು ಹಾಗೂ ಕಾರ್ಯಕರ್ತರು ಸ್ವಯಂ ಪ್ರೇರಿತರಾಗಿ ಕೊರೊನಾ ಪರೀಕ್ಷೆಗೆ ಮುಂದಾಗಿದ್ದಾರೆ. ಸಾಲದಕ್ಕೆ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಆನಂದ್ ಹಾಗೂ ನಗರಸಭೆ ಸದಸ್ಯ ತಮ್ಮಯ್ಯ ಸಂಪರ್ಕದಲ್ಲಿದ್ದ ಜನಸಾಮಾನ್ಯರು ತೀವ್ರ ಆತಂಕಕ್ಕೀಡಾಗಿದ್ದಾರೆ. ಅಷ್ಟೇ ಅಲ್ಲದೇ ಇವರಿಬ್ಬರು ಸಚಿವ ಸಿಟಿ ರವಿ ಅವರ ಜೊತೆ ಸಂಪರ್ಕದಲ್ಲಿದ್ದ ಹಿನ್ನೆಲೆ ಅವರು ಕೂಡ ಕ್ವಾರಂಟೈನ್‍ಗೆ ಒಳಗಾಗುವ ಸಾಧ್ಯತೆ ಇದೆ.

    ಈಗಾಗಲೇ ನಗರಸಭೆ ಮಾಜಿ ಸದಸ್ಯ ತಮ್ಮಯ್ಯ ಅವರ ಏರಿಯಾವನ್ನು ಸೀಲ್‍ಡೌನ್ ಮಾಡಲಾಗಿದೆ. ಜೊತೆಗೆ ಚಿಕ್ಕಮಗಳೂರು ನಗರಾಭಿವೃದ್ಧಿ ಪ್ರಾಧಿಕಾರವನ್ನು ಕೂಡ ಅಧಿಕಾರಿಗಳು ಸೀಲ್‍ಡೌನ್ ಮಾಡಿದ್ದಾರೆ. ಇಷ್ಟು ದಿನಗಳ ಕಾಲ ಜನಸಾಮಾನ್ಯರಲ್ಲಿ ಮಾತ್ರ ಕೊರೊನಾ ಪತ್ತೆಯಾಗುತ್ತಿತ್ತು. ಇದೀಗ ರಾಜಕಾರಣಿಗಳಲ್ಲೂ ಕೊರೊನಾ ಪತ್ತೆಯಾಗಿರುವುದರಿಂದ ಜನಸಾಮಾನ್ಯರು ಭಯಭೀತರಾಗಿದ್ದಾರೆ.

  • ಬೆಂಗಳೂರಿನ ರಾಜಾಜಿನಗರ ಪೊಲೀಸ್ ಠಾಣೆ ಸೀಲ್‍ಡೌನ್!

    ಬೆಂಗಳೂರಿನ ರಾಜಾಜಿನಗರ ಪೊಲೀಸ್ ಠಾಣೆ ಸೀಲ್‍ಡೌನ್!

    ಬೆಂಗಳೂರು: ಮಹಾಮಾರಿ ಕೊರೊನಾ ವೈರಸ್ ಹರಡುವದನ್ನು ತಡೆಗಟ್ಟಲು ಹಗಲು-ರಾತ್ರಿ ದುಡಿಯುತ್ತಿರುವ ಕೊರೊನಾ ವಾರಿಯರ್ಸ್‍ಗಳಿಗೂ ಇದೀಗ ಭೀತಿ ಶುರುವಾಗಿದೆ. ರಾಜಾಜಿನಗರ ಪೊಲೀಸ್ ಠಾಣೆಯ ಸಿಬ್ಬಂದಿಗೆ ಕೊರೊನಾ ಪಾಸಿಟಿವ್ ಬಂದಿರುವ ಹಿನ್ನೆಲೆಯಲ್ಲಿ ಇದೀಗ ಠಾಣೆಯನ್ನು ಸೀಲ್ ಡೌನ್ ಮಾಡಲಾಗಿದೆ.

    ಹೌದು. ರಾಜಾಜಿನಗರ ಪೊಲೀಸ್ ಠಾಣೆಯನ್ನು ಮೂರು ದಿನಗಳ ಕಾಲ ಸೀಲ್ ಡೌನ್ ಮಾಡಲಾಗಿದೆ. ಹೋಮ್ ಕ್ವಾರಂಟೈನ್ ನಲ್ಲಿದ್ದ ಸಿಬ್ಬಂದಿಗೆ ಕೊರೊನಾ ಪಾಸಿಟಿವ್ ಬಂದಿತ್ತು. ಈ ಹಿನ್ನೆಲೆಯಲ್ಲಿ ಮೂರು ದಿನ ಪೊಲೀಸ್ ಠಾಣೆಯನ್ನು ಸೀಲ್ ಡೌನ್ ಮಾಡಲಾಗಿದೆ.

    ಪಶ್ಚಿಮ ವಿಭಾಗದ ಚಿಕ್ಕಪೇಟೆ ಎಸಿಪಿ ಕಳೆದ ನಾಲ್ಕು ದಿನಗಳಿಂದ ಜ್ವರದಿಂದ ಬಳಲುತ್ತಿದ್ದರು. ಈ ಹಿನ್ನೆಲೆಯಲ್ಲಿ ಎಸಿಪಿ ಕೊರೊನಾ ಟೆಸ್ಟ್ ಮಾಡಿಸಿ ರಜೆಯಲ್ಲಿದ್ದರು. ಆದರೆ ಇಂದು ಪಾಸಿಟಿವ್ ರಿಪೋರ್ಟ್ ಬಂದಿದ್ದು, ಪರಿಣಾಮ 10ಕ್ಕೂ ಹೆಚ್ಚು ಸಿಬ್ಬಂದಿಯನ್ನು ಕ್ವಾರಂಟೈನ್ ಮಾಡಲಾಗಿದೆ.

    ಇತ್ತ ಹೋಮ್ ಕ್ವಾರಂಟೈನ್ ಉಲ್ಲಂಘನೆ ಆರೋಪ ಎದುರಿಸುತ್ತಿದ್ದ ಮೂವರು ಪೊಲೀಸರ ವಿರುದ್ಧವೇ ಎಫ್‍ಐಆರ್ ದಾಖಲು ಮಾಡಲಾಗಿದೆ. ಪ್ರತ್ಯೇಕ ಎರಡು ಠಾಣೆಗಳಲ್ಲಿ ಮೂವರ ಮೇಲೆ ಪ್ರಕರಣ ದಾಖಲಾಗಿದೆ. ಬಂಡೆಪಾಳ್ಯ ಪೊಲೀಸ್ ಠಾಣೆಯಲ್ಲಿ ಇಬ್ಬರು ಮತ್ತು ಬೆಗೂರು ಪೊಲೀಸ್ ಠಾಣೆ ಒಬ್ಬರ ಮೇಲೆ ಪಾಲಿಕೆ ಆರೋಗ್ಯ ಅಧಿಕಾರಿಗಳ ದೂರು ಆಧರಿಸಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ.

  • ಬೆಂಗ್ಳೂರು ನಗರ ಪೊಲೀಸ್‌ ಆಯುಕ್ತರ ಕಚೇರಿ 3 ದಿನ ಸೀಲ್‌ಡೌನ್‌

    ಬೆಂಗ್ಳೂರು ನಗರ ಪೊಲೀಸ್‌ ಆಯುಕ್ತರ ಕಚೇರಿ 3 ದಿನ ಸೀಲ್‌ಡೌನ್‌

    ಬೆಂಗಳೂರು: ನಗರ ಪೊಲೀಸ್‌ ಆಯುಕ್ತರ ಕಚೇರಿಯನ್ನು ಸೀಲ್‌ಡೌನ್‌ ಮಾಡಲಾಗಿದೆ.

    ಪೊಲೀಸ್ ಕಮಿಷನರ್ ಕಚೇರಿಯಲ್ಲಿ ಕರ್ತವ್ಯದಲ್ಲಿದ್ದ ಸಿಬ್ಬಂದಿಗೆ ಸೋಂಕು ಬಂದ ಹಿನ್ನೆಲೆಯಲ್ಲಿ ಮೂರು ದಿನ ಸೀಲ್‌ಡೌನ್‌ ಮಾಡಲಾಗಿದೆ.

    ಇಲ್ಲಿಯವರೆಗೆ 92ಕ್ಕೂ ಹೆಚ್ಚು ಪೊಲೀಸರಿಗೆ ಕೊರೊನಾ ಮಹಾಮಾರಿ ಆವರಿಸಿದ್ದು, 15 ಪೊಲೀಸ್ ಠಾಣೆಗಳನ್ನು ಸೀಲ್ ಡೌನ್ ಮಾಡಲಾಗಿದೆ. ಸುಮಾರು 870 ಮಂದಿ ಪೊಲೀಸರನ್ನು ಕ್ವಾರಂಟೈನ್ ಮಾಡಲಾಗಿದೆ. ಹೀಗಾಗಿ ಹಿಂಜರಿಕೆ, ಭಯದಿಂದಲೇ ಪೊಲೀಸರು ಕರ್ತವ್ಯಕ್ಕೆ ಹಾಜರಾಗುತ್ತಿದ್ದಾರೆ. ಅಲ್ಲದೆ ಕೆಲಸ ಮಾಡಲು ಹಿಂದೇಟು ಹಾಕುತ್ತಿದ್ದಾರೆ.

    ಪದೇ ಪದೇ ಆರೋಪಿಗಳಿಗೆ ಪಾಸಿಟಿವ್ ಬರುತ್ತಿರುವ ಹಿನ್ನೆಲೆಯಲ್ಲಿ ಪೊಲೀಸರೇ ಸ್ವಯಂ ಪ್ರೇರಿತವಾಗಿ ಸಣ್ಣ ಪುಟ್ಟ ಪ್ರಕರಣಗಳಲ್ಲಿ ಆರೋಪಿಗಳನ್ನು ಬಂಧಿಸಲು ಹಿಂದೇಟು ಹಾಕುತ್ತಿದ್ದಾರೆ.

    7 ವರ್ಷ ಮೇಲ್ಪಟ್ಟ ಶಿಕ್ಷೆಯ ಆರೋಪಿಗಳ ಬಂಧನಕ್ಕೆ ಮಾತ್ರ ಪೊಲೀಸರು ಒಲವು ವ್ಯಕ್ತಪಡಿಸುತ್ತಿದ್ದಾರೆ. ದೊಡ್ಡ ಪ್ರಕರಣಗಳಲ್ಲಿ ಬಂಧಿಸಿದ್ರೆ ಅವರನ್ನು ಪೊಲೀಸ್ ಠಾಣೆಯಲ್ಲಿ ಪ್ರತ್ಯೇಕವಾಗಿ ಇರಿಸಲಾಗುತ್ತದೆ. ಕೊಲೆ, ಕೊಲೆ ಯತ್ನ, ರಾಬರಿ, ಇಂತಹ ದೊಡ್ಡ ಪ್ರಕರಣಗಳಲ್ಲಿ ಮಾತ್ರ ಈಗ ಆರೋಪಿಗಳ ಬಂಧನವಾಗುತ್ತಿದೆ.

    ಈ ಹಿಂದೆ ಮೊಬೈಲ್ ಆ್ಯಪ್ ಮೂಲಕ ನಕಲಿ ಜಿಪಿಎಸ್ ಸೃಷ್ಟಿಸಿ ಗ್ರಾಹಕರ ಸೋಗಿನಲ್ಲಿ ಕ್ಯಾಬ್ ಬುಕ್ಕಿಂಗ್ ಮಾಡಿ ಓಲಾ ಕಂಪನಿಯನ್ನು ವಂಚಿಸುತ್ತಿದ್ದ ನಾಲ್ವರು ಆರೋಪಿಗಳನ್ನು ಸಿಸಿಬಿ ಪೊಲೀಸರು ಬಂಧಿಸಿದ್ದರು. ಈ ಪೈಕಿ ಒಬ್ಬನಿಗೆ ಕೊರೊನಾ ಇರುವುದು ದೃಢಪಟ್ಟಿತ್ತು. ಹೀಗಾಗಿ ಸಿಸಿಬಿ ಕಚೇರಿಯನ್ನು ತಾತ್ಕಾಲಿಕವಾಗಿ ಸೀಲ್‌ಡೌನ್‌ ಮಾಡಲಾಗಿತ್ತು.

  • ಕೊರೊನಾ ಆತಂಕ: ಮಂಗಳೂರು ಮೀನುಗಾರಿಕಾ ಬಂದರು ಸೀಲ್‍ ಡೌನ್

    ಕೊರೊನಾ ಆತಂಕ: ಮಂಗಳೂರು ಮೀನುಗಾರಿಕಾ ಬಂದರು ಸೀಲ್‍ ಡೌನ್

    ಮಂಗಳೂರು: ಕೊರೊನಾದಿಂದ ಮುಕ್ತರಾಗುತ್ತಿದ್ದೇವೆ ಎಂದು ನಿಟ್ಟುಸಿರು ಬಿಡುತ್ತಿದ್ದ ಮಂಗಳೂರಿಗರಿಗೆ ಇದೀಗ ಮೀನುಗಾರಿಕೆಯೇ ದೊಡ್ಡ ಆತಂಕ ತಂದೊಡ್ಡಿದೆ. ಕೇವಲ ವಿದೇಶದಿಂದ, ಮಹಾರಾಷ್ಟ್ರದಿಂದ ಮಂಗಳೂರಿಗೆ ಕೊರೊನಾ ಆತಂಕ ಇದ್ದು ಇದೀಗ ಮಹಾರಾಷ್ಟ್ರ, ಆಂಧ್ರ, ತಮಿಳುನಾಡು ಮೀನುಗಾರಿಕಾ ವಹಿವಾಟು ಭಾರೀ ಆತಂಕ ತಂದಿದೆ.

    ಹೊರ ರಾಜ್ಯದ ಮೀನು ಲಾರಿಗಳ ಎಂಟ್ರಿಯಿಂದ ಮಂಗಳೂರಿನಲ್ಲಿ ಸೋಂಕು ಹರಡಿದೆ. ಕೊರೊನಾ ಸೋಂಕು ಹರಡಿದ ಬೆನ್ನಲ್ಲೇ ಮಂಗಳೂರು ಮೀನುಗಾರಿಕಾ ಬಂದರು ಸೀಲ್ ಡೌನ್ ಮಾಡಲಾಗಿದೆ. ಬಂದರಿನ ಗೇಟುಗಳಿಗೆ ಬೀಗ ಜಡಿದು ಜನರ ಓಡಾಟ, ವಾಹನ ಸಂಚಾರ ಬಂದ್ ಮಾಡಲಾಗಿದೆ. ಅಲ್ಲದೆ ಎಲ್ಲಾ ರೀತಿಯ ಮೀನುಗಾರಿಕಾ ವ್ಯವಹಾರ ಸಂಪೂರ್ಣ ಬಂದ್ ಆಗಿದೆ.

    ಓರ್ವ ಮೀನುಗಾರನಲ್ಲಿ ಕೊರೊನಾ ಸೋಂಕು ದೃಢಪಟ್ಟಿದ್ದು, ಬಂದರಿನಲ್ಲಿದ್ದ ಹಲವಾರು ಮೀನುಗಾರರಲ್ಲಿ ಕೊರೋನಾ ಲಕ್ಷಣ ಕಂಡುಬಂದಿದೆ. ಪ್ರತಿ ನಿತ್ಯ ಮಹಾರಾಷ್ಟ್ರ, ಆಂಧ್ರ, ತಮಿಳುನಾಡು ಭಾಗದಿಂದ ಬರುತ್ತಿದ್ದ ಮೀನಿನ ಲಾರಿಗಳಿಂದ ವ್ಯಾಪಾರಿಗಳು ಜಿಲ್ಲೆಯ ಹಲವೆಡೆ ತೆಗೆದುಕೊಂಡು ಹೋಗಿ ಮೀನು ಮಾರಾಟ ಮಾಡುತ್ತಿದ್ದರು. ಸದ್ಯ ಈ ಆತಂಕ ದುಪ್ಪಟ್ಟಾಗಿದೆ.