Tag: seal down

  • ಗ್ರೀನ್ ಝೋನ್‍ನಲ್ಲಿದ್ದರೂ ರಾಯಚೂರಿನ ಬಡಾವಣೆಗಳೆಲ್ಲ ಸೀಲ್‍ಡೌನ್

    ಗ್ರೀನ್ ಝೋನ್‍ನಲ್ಲಿದ್ದರೂ ರಾಯಚೂರಿನ ಬಡಾವಣೆಗಳೆಲ್ಲ ಸೀಲ್‍ಡೌನ್

    -ಅನಾವಶ್ಯಕವಾಗಿ ಜನ ರಸ್ತೆಗಿಳಿಯುತ್ತಿರುವುದರಿಂದ ಕ್ರಮ

    ರಾಯಚೂರು: ಕೊರೊನಾ ವೈರಸ್ ಸೋಂಕು ತಡೆಗಟ್ಟುವ ಹಿನ್ನೆಲೆ ರಾಯಚೂರು ಜಿಲ್ಲೆಯಾದ್ಯಂತ ಲಾಕ್‍ಡೌನ್ ಬಿಗಿಗೊಳಿಸಲಾಗಿದೆ. ಒಂದು ಬಡಾವಣೆಯಿಂದ ಇನ್ನೊಂದು ಬಡಾವಣೆಗೆ ಹೋಗದಂತೆ ಜಿಲ್ಲೆಯ ನಗರ, ಪಟ್ಟಣ ಪ್ರದೇಶಗಳಲ್ಲಿ ಒಟ್ಟು 4000 ಕಡೆ ಬ್ಯಾರಿಕೇಡ್ ಗಳನ್ನು ಅಳವಡಿಸಲಾಗಿದೆ. ಈ ಮೂಲಕ ಅನಾವಶ್ಯಕವಾಗಿ ಜನ ಒಂದೆಡೆಯಿಂದ ಇನ್ನೊಂದೆಡೆಗೆ ತಿರುಗಾಡದಂತೆ ಕಟ್ಟು ನಿಟ್ಟಿನ ಕ್ರಮ ಕೈಗೊಳ್ಳಲಾಗಿದೆ.

    ಆಸ್ಪತ್ರೆಗಳಿಗೆ ಮತ್ತು ಸರ್ಕಾರಿ ಕೆಲಸಕ್ಕೆ ಹೋಗುವವರು ಪಾಸ್ ತೋರಿಸಿದಲ್ಲಿ ಮಾತ್ರ ಬಿಡಲಾಗುತ್ತಿದೆ. ಈಗಾಗಲೇ ಜಿಲ್ಲೆಯಲ್ಲಿ ಅನೇಕ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಂಡಿದ್ದರೂ ಜನ ಓಡಾಡುವುದನ್ನ ಕಡಿಮೆ ಮಾಡಿರಲಿಲ್ಲ. ನಗರಸಭೆ, ಪಟ್ಟಣ ಪಂಚಾಯಿತಿಯಿಂದ ಆಯಾ ಸ್ಥಳಗಳಲ್ಲೇ ಸೌಕರ್ಯ ಕಲ್ಪಿಸುವ ವ್ಯವಸ್ಥೆಯನ್ನು ಮಾಡಿದರೂ ಸಾರ್ವಜನಿಕರು ಹಾಲು, ತರಕಾರಿ, ಔಷಧ ಇನ್ನಿತರೆ ವಸ್ತುಗಳನ್ನು ತರುವ ನೆಪದಲ್ಲಿ ಓಡಾಡುತ್ತಿದ್ದರು. ಹೀಗಾಗಿ ಜಿಲ್ಲೆ ಗ್ರೀನ್ ಝೋನ್ ನಲ್ಲಿದ್ದರೂ ಲಾಕ್‍ಡೌನ್ ಬಿಗಿಗೊಳಿಸಲಾಗಿದೆ.

    ಮಾನವಿ, ಸಿಂಧನೂರು, ಮಸ್ಕಿ, ಲಿಂಗಸೂಗೂರು, ಮುದಗಲ್, ಕವಿತಾಳ, ಸಿರವಾರ ಸೇರಿ ಒಟ್ಟು ಹತ್ತು ಪಟ್ಟಣಗಳಲ್ಲಿ ಒಂದು ಬಡಾವಣೆಯಿಂದ ಇನ್ನೊಂದು ಬಡಾವಣೆಗೆ ಹೋಗದಂತೆ ಬ್ಯಾರಿಕೇಡ್ ಗಳನ್ನು ಅಳವಡಿಸುವ ಮೂಲಕ ಅನಾವಶ್ಯಕವಾಗಿ ಒಂದೆಡೆಯಿಂದ ಇನ್ನೊಂದೆಡೆಗೆ ಓಡಾಡದಂತೆ ಕ್ರಮ ಕೈಗೊಳ್ಳಲಾಗಿದೆ. ಅಲ್ಲದೆ ಕೊರೊನಾ ಸೋಂಕು ಜಿಲ್ಲೆಯಲ್ಲಿ ವ್ಯಾಪಿಸದಂತೆ ಸಾರ್ವಜನಿಕರು ನಮ್ಮೊಂದಿಗೆ ಸಹಕರಿಸುವಂತೆ ಪೊಲೀಸ್ ಅಧಿಕಾರಿಗಳು ಸಾರ್ವಜನಿಕರಲ್ಲಿ ಮನವಿ ಮಾಡಿದ್ದಾರೆ.

    ಇನ್ನೂ ಮಾನವಿಯಲ್ಲಿ ಊಟಕ್ಕಾಗಿ ತೊಂದರೆ ಅನುಭವಿಸುತ್ತಿದ್ದ ಅಲೆಮಾರಿ ಜನಾಂಗದವರು ಹಾಗೂ ಇತರೆ ರಾಜ್ಯದಿಂದ ಬಂದ ಕೂಲಿ ಕಾರ್ಮಿಕರಿಗೆ ನಗರದ ಸರ್ಕಾರಿ ಶಾಲೆಯಲ್ಲಿ ಉಳಿದುಕೊಳ್ಳಲು ವ್ಯವಸ್ಥೆ ಮಾಡಲಾಗಿದ್ದು ಬೇರೆಡೆ ಓಡಾಡದಂತೆ ಎಚ್ಚರಿಕೆ ನೀಡಲಾಗಿದೆ. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸಿ.ಬಿ.ವೇದಮೂರ್ತಿ ಸ್ಥಳಕ್ಕೆ ಭೇಟಿ ನೀಡಿ ಮೂಲಭೂತ ಸೌಕರ್ಯಗಳ ವ್ಯವಸ್ಥೆ ಮಾಡಿದ್ದಾರೆ.

  • ರಾಜ್ಯದಲ್ಲಿ ಕೊರೊನಾ ಕರಾಳತೆ – ನಿಯಂತ್ರಿತ ವಲಯದಲ್ಲಿ ಒಂದೇ ಪ್ರವೇಶ ದ್ವಾರ, ಒಂದು ಎಕ್ಸಿಟ್ ಅಷ್ಟೇ

    ರಾಜ್ಯದಲ್ಲಿ ಕೊರೊನಾ ಕರಾಳತೆ – ನಿಯಂತ್ರಿತ ವಲಯದಲ್ಲಿ ಒಂದೇ ಪ್ರವೇಶ ದ್ವಾರ, ಒಂದು ಎಕ್ಸಿಟ್ ಅಷ್ಟೇ

    – ಲಾಕ್‍ಡೌನ್ ನಿಯಮಾವಳಿ ಕಂಪ್ಲೀಟ್ ಬದಲು.!
    – ನಿಯಂತ್ರಿತ ವಲಯದಲ್ಲಿ ಸೀಲ್‍ಡೌನ್ ರೂಲ್ಸ್

    ಬೆಂಗಳೂರು: ರಾಜ್ಯದಲ್ಲಿ ಹೆಮ್ಮಾರಿ ಕೊರೊನಾ ವೈರಸ್ ದಿನದಿಂದ ದಿನಕ್ಕೆ ಹೆಚ್ಚುತ್ತಲೇ ಇದ್ದು, ಮತ್ತಷ್ಟು ಆತಂಕ ಹೆಚ್ಚಿಸಿದೆ. ಈ ಹಿನ್ನೆಯಲ್ಲಿ ಲಾಕ್‍ಡೌನ್ ನಿಯಮಾವಳಿ ಕಂಪ್ಲೀಟ್ ಬದಲು ಮಾಡಿ ರಾಜ್ಯ ಸರ್ಕಾರ ನಿಯಮಗಳ ಆದೇಶ ಹೊರಡಿಸಿದೆ.

    ಕೊರೊನಾ ಹಾಟ್‍ಸ್ಪಾಟ್‍ನಲ್ಲಿ ಲಾಕ್‍ಡೌನ್ ಟಫ್ ರೂಲ್ಸ್ ಜಾರಿಗೆ ಬರಲಿದೆ. ರಾಜ್ಯ ಸರ್ಕಾರವು ಹಾಟ್‍ಸ್ಪಾಟ್ ಝೋನ್‍ನಲ್ಲಿಯೇ ಮೂರು ವಲಯಗಳನ್ನು ಮಾಡಿದೆ. ನಿಯಂತ್ರಿತ ವಲಯ, ಬಫರ್ ಝೋನ್ ಹಾಗೂ ವಲಯ ಎಂದು ವಿಂಗಡಿಸಲಾಗಿದ್ದು, ಈ ಮೂಲಕ ಕಠಿಣ ಕ್ರಮಕೈಗೊಳ್ಳಲು ಸರ್ಕಾರ ಮುಂದಾಗಿದೆ.

    ನಿಯಂತ್ರಿಯ ವಲಯ:
    28 ದಿನಗಳಲ್ಲಿ ಒಂದು ಪಾಸಿಟಿವ್ ಪ್ರಕರಣ ಕಂಡು ಬಂದರೂ ಅಂತಹ ಪ್ರದೇಶವನ್ನು ನಿಯಂತ್ರಿಯ ವಲಯ ಎಂದು ಗುರುತಿಸಲಾಗುತ್ತದೆ. ಪಾಸಿಟಿವ್ ಇರುವ ವ್ಯಕ್ತಿಯ ನಿವಾಸದ ಮುಂದೆ ತೀವ್ರ ಕ್ರಮ ಕೈಗೊಳ್ಳಲಾಗುತ್ತದೆ. ಅಪಾರ್ಟ್‍ಮೆಂಟ್, ಸಂಕೀರ್ಣದಲ್ಲಿ ಒಬ್ಬರಿಗೆ ಕಂಡು ಬಂದ್ರೆ ಇಡೀ ಬ್ಲಾಕ್‍ಗೆ ಗೃಹಬಂಧನ ಹಾಕಲಾಗುತ್ತದೆ. ಪಾಸಿಟಿವ್ ವ್ಯಕ್ತಿಯ ಮನೆ, ಅಪಾರ್ಟ್‍ಮೆಂಟ್ ರಸ್ತೆಯ ನೂರು ಮೀಟರ್‍ಗೆ ದಿಗ್ಭಂದನ ಹೇರಲಾಗುತ್ತದೆ. ಸ್ಲಂ ಆದ್ರೆ ಇಡೀ ಸ್ಲಂಗೆ ಗೃಹಬಂಧನ ಹಾಕಲಾಗುವುದು. ಹಳ್ಳಿಯಲ್ಲಿ ಕೊರೊನಾ ಸೋಂಕು ಕಂಡು ಬಂದ್ರೆ ಸೋಂಕಿತನ ವಾಸ ವ್ಯಾಪ್ತಿಯು ಕಂಪ್ಲೀಟ್ ಸೀಲ್‍ಡೌನ್ ಆಗಲಿದೆ.

    ಬಫರ್ ಝೋನ್:
    27 ದಿನಗಳಲ್ಲಿ ಹೊಸ ಪ್ರಕರಣ ವರದಿಯಾಗದೇ ಇದ್ದರೆ ಅಥವಾ ಈ ನಿಯಂತ್ರಿತ ವಲಯದಲ್ಲಿ ಹತ್ತಕ್ಕಿಂತ ಕಡಿಮೆ ಸಂಪರ್ಕ ವ್ಯಕ್ತಿಗಳು ಇದ್ದರೆ ಇದನ್ನು ಬಫರ್ ಝೋನ್ ಆಗಿ ಮಾರ್ಪಾಡು ಮಾಡಲಾಗುತ್ತದೆ. ನಗರ ಪ್ರದೇಶದ ಐದು ಕಿ.ಮೀ ವ್ಯಾಪ್ತಿ, ಗ್ರಾಮೀಣ ಭಾಗದ ಏಳು ಕಿ.ಮೀ ವ್ಯಾಪ್ತಿಗೆ ಕಣ್ಗಾವಲು ಇಡಲಾಗುತ್ತದೆ. ಈ ವ್ಯಾಪ್ತಿಯ ಪ್ರತಿ ಮನೆ ಮನೆಗೂ ತಪಾಸಣೆ ನಡೆಸಲಾಗುತ್ತದೆ.

    ವಲಯ: ಗುಂಪು ಗುಂಪಾಗಿ ಪ್ರಕರಣ ಕಂಡುಬಂದರೆ ಅದನ್ನು ವಲಯ ಅಂತ ವಿಭಾಗಿಸಿ ಕಣ್ಗಾವಲು ಇಡಲಾಗುತ್ತದೆ.

    ಬೆಂಗ್ಳೂರಿನಲ್ಲಿ ಸೀಲ್‍ಡೌನ್ ರೂಲ್ಸ್:
    ಕೊರೊನಾ ಸೋಂಕಿತರ ಸಂಖ್ಯೆ ರೆಡ್ ಝೋನ್‍ನಲ್ಲಿ ಬೆಂಗಳೂರಿನಲ್ಲಿ ಹೆಚ್ಚಾಗುತ್ತಿದೆ. ಬೆಂಗಳೂರಿಗರ ಮೇಲೆ ಮೂರು ಕಣ್ಣು ಕಾಯಲಿದೆ. ಬಿಬಿಎಂಪಿಯಿಂದ ಬಿಕ್ಕಟ್ಟು ನಿರ್ವಹಣಾ ಟೀಂ, ಖಡಕ್ ಪೊಲೀಸರಿಂದ ಲಾಕ್‍ಡೌನ್ ಉಲ್ಲಂಘಿಸಿದರೆ ಮಾರಿ ಹಬ್ಬ ಹಾಗೂ ಆರೋಗ್ಯ ಇಲಾಖೆ ಅಧಿಕಾರಿಗಳು ಬೆಂಗಳೂರಿನಲ್ಲಿ ಹೈ ಅಲರ್ಟ್ ಆಗಲಿದ್ದಾರೆ. ಈ ಮೂಲಕ ಮೂರು ಟೀಂ ರಚಿಸಿ ಬೆಂಗಳೂರಿನ ಹಾಟ್‍ಸ್ಪಾಟ್ ಮೇಲೆ ಹದ್ದಿನ ಕಣ್ಣು ಇಡಲಾಗುತ್ತದೆ.

    ಬೆಂಗ್ಳೂರು ಹಾಟ್‍ಸ್ಪಾಟ್ ಸೀಲ್‍ಡೌನ್ ಹೇಗಿರುತ್ತೆ?
    ಬೆಂಗಳೂರಿಗರು ಊಹಿಸಲು ಸಾಧ್ಯವೇ ಇಲ್ಲದ ಪರಿಸ್ಥಿತಿ ನಿರ್ಮಾಣವಾಗಲಿದೆ. ದೇಶದಲ್ಲಿ ಎಲ್ಲೂ ಇರದ ಟಫ್ ರೂಲ್ಸ್ ಬೆಂಗಳೂರಲ್ಲಿ ಜಾರಿಗೆ ಬರಲಿದೆ. ನಿಯಂತ್ರಿತ ವಲಯದಲ್ಲಿ ಒಂದು ಪ್ರವೇಶ ದ್ವಾರ ಒಂದು ಎಕ್ಸಿಟ್ ಅಷ್ಟೇ ಇರಲಿದೆ. ಪ್ರತಿಯೊಂದು ಖಾಕಿ ಕಣ್ಣಲ್ಲಿ ರಿಜಿಸ್ಟಾರ್ ನೀಡಲಾಗುತ್ತದೆ. ತುರ್ತು ಪರಿಸ್ಥಿತಿ ಹೊರತುಪಡಿಸಿ ಮನೆಯಿಂದ ಹೊರಗೆ ಕಾಲಿಡುವ ಹಾಗಿಲ್ಲ. ದಿನಸಿ, ಸಿಲಿಂಡರ್, ಔಷಧಿಗೆ ಮಾತ್ರ ಮನೆಯಿಂದ ಹೊರಗೆ ಬರಬಹುದು. ಬೇರೆ ವಾರ್ಡ್‍ನ ಖಾಸಗಿ ವಾಹನಕ್ಕೆ ಮತ್ತೊಂದು ವಾರ್ಡ್‍ನಲ್ಲಿ ಎಂಟ್ರಿ ಇರುವುದಿಲ್ಲ.

    ಪೊಲೀಸ್ ಪಾತ್ರ:
    ರಾಜ್ಯ ಸರ್ಕಾರವು ಬೆಂಗಳೂರನ್ನು ಸಂಪೂರ್ಣ ಸೀಲ್‍ಡೌನ್ ಮಾಡಲಿದ್ದು, ಪೊಲೀಸ್ ನಾಕಾಬಂದಿ ಹಾಕಲಿದೆ. ಎಲ್ಲಾ ಪ್ರವೇಶ ದ್ವಾರಗಳಲ್ಲೂ ಶಾಶ್ವತವಾಗಿ ತಡೆಗೊಡೆ ಹಾಕಿ, ಪೊಲೀಸ್ ನಾಕಾಬಂದಿ ರೂಪಿಸಲಾಗುತ್ತದೆ. ಯಾವುದೇ ವ್ಯಕ್ತಿ ಯಾವುದೇ ಉದ್ದೇಶದಿಂದ ಮನೆಯಿಂದ ಹೊರಬರುವಂತಿಲ್ಲ. ನಿಯಂತ್ರಿತ ವಲಯದಲ್ಲಿ ಒಂದೇ ಒಂದು ನಿರ್ಗಮನ, ಪ್ರವೇಶದ್ವಾರ ಇಲಿದೆ. ನಿಯಂತ್ರಿತ ವಲಯದ ಒಳಗೆ ಖಾಸಗಿ ವಾಹನ ಸಂಚಾರಕ್ಕೆ ಅವಕಾಶ ಇರುವುದಿಲ್ಲ. ಅಗತ್ಯ ಸೇವೆಗಳು, ವೈದ್ಯಕೀಯ ತುರ್ತು ಸಂದರ್ಭಗಳಲ್ಲಿ ಪೊಲೀಸರಿಂದ ಎಮರ್ಜೆನ್ಸಿ ಪಾಸ್ ನೀಡಲಾಗುತ್ತದೆ. ಸೀಲ್‍ಡೌನ್ ಏರಿಯಾದಲ್ಲಿ ಡ್ರೋಣ್ ಪರಿಣಾಮಕಾರಿಯಾಗಿ ಬಳಕೆ ಮಾಡಲಾಗುತ್ತದೆ.

    ಆರೋಗ್ಯ ಇಲಾಖೆ:
    ಆರೋಗ್ಯ ಇಲಾಖೆ ಔಟ್-ಪೋಸ್ಟ್ ಆರಂಭಿಸಬೇಕು. ದಿನಕ್ಕೆ ಎರಡು ಬಾರಿ ಜನಸಂಪರ್ಕಗಳ ಪತ್ತೆ ಕಾರ್ಯ ನಡೆಸಬೇಕು. ಜನ ಸಂಪರ್ಕ ನಿಗಾ ಮತ್ತು ಪತ್ತೆ ಕಾರ್ಯವನ್ನ ಶಿಷ್ಟಾಚಾರದ ನಿಯಮದ ಪ್ರಕಾರ ಮಾಡಬೇಕು ಎಂದು ರಾಜ್ಯ ಸರ್ಕಾರ ಸೂಚನೆ ನೀಡಿದೆ.

    ನಗರಸಭೆ ಅಧಿಕಾರಿಗಳು:
    ಸೀಲ್‍ಡೌನ್ ಪ್ರದೇಶದಲ್ಲಿ ಪ್ರತಿನಿತ್ಯ ಸೋಂಕು ನಿವಾರಣೆ ಸ್ಟ್ರೇ ಮಾಡಬೇಕು. ನಗರಸಭೆ ಅಧಿಕಾರಿಗಳು ಸಿಂಪಡಣೆ ಮಾಡಬೇಕು. ಸೀಲ್‍ಡೌನ್ ಏರಿಯಾದಲ್ಲಿ ಅಗತ್ಯ ವಸ್ತುಗಳನ್ನು ಮನೆಗಳಿಗೆ ಸರಬರಾಜು ಮಾಡಬೇಕು. ದಿನಸಿ ಪದಾರ್ಥ, ಮಾಂಸ, ಹಾಲು, ಎಲ್‍ಪಿಜಿ, ಅನಿಲ ಮತ್ತು ಔಷಧಿ ಮನೆ ಮನೆಗೆ ಸರಬರಾಜು ಮಾಡಬೇಕು ಎಂದು ರಾಜ್ಯ ಸರ್ಕಾರ ಆದೇಶ ನೀಡಿದೆ.

  • ಹೊರಗೆ ಬಿಗಿ ಪೊಲೀಸ್ ಬಂದೋಬಸ್ತ್, ಒಳಗೆ ಜನರ ಬಿಂದಾಸ್ ಓಡಾಟ- ಬಾಪೂಜಿನಗರದಲ್ಲಿ ನಿರ್ಲಕ್ಷ್ಯ

    ಹೊರಗೆ ಬಿಗಿ ಪೊಲೀಸ್ ಬಂದೋಬಸ್ತ್, ಒಳಗೆ ಜನರ ಬಿಂದಾಸ್ ಓಡಾಟ- ಬಾಪೂಜಿನಗರದಲ್ಲಿ ನಿರ್ಲಕ್ಷ್ಯ

    – ಕಾರ್ಪೋರೇಟರ್ ಗಂಭೀರ ಆರೋಪ

    ಬೆಂಗಳೂರು: ಕೊರೊನಾ ವೈರಸ್ ಭೀತಿಯಿಂದ ಮಾಡಲಾಗಿದ್ದ ಲಾಕ್ ಡೌನ್ ಅನ್ನು ಮೇ.3ರವರೆಗೆ  ವಿಸ್ತರಿಸಿದ್ದು, ಬೆಂಗಳೂರಿನ ಎರಡು ಏರಿಯಾಗಳನ್ನು ಸೀಲ್ ಡೌನ್ ಮಾಡಲಾಗಿದೆ. ಆದರೂ ಜನ ನಿರ್ಲಕ್ಷ್ಯಿಸುತ್ತಿರುವುದು ಬೆಳಕಿಗೆ ಬಂದಿದೆ.

    ಹೌದು. ಬೆಂಗಳೂರಿನ ಬಾಪೂಜಿನಗರ ಹಾಗೂ ಪಾದರಾಯನಪುರ ಈ ಎರಡು ಏರಿಯಾಗಳನ್ನು ಈಗಾಗಲೇ ಸೀಲ್ ಡೌನ್ ಮಾಡಲಾಗಿದೆ. ಆದರೆ ಬಾಪೂಜಿನಗರದಲ್ಲಿ ಮಾತ್ರ ಹೊರಗೆ ಬಿಗಿ ಪೊಲೀಸ್ ಬಂದೊಬಸ್ತ್ ಆಗಿದ್ದು, ಒಳಗಡೆ ಜನ ಬಿಂದಾಸ್ ಆಗಿ ಓಡಾಡುತ್ತಿದ್ದಾರೆ.

    ಬಾಪೂಜಿನಗರಕ್ಕೆ ಸಂಪರ್ಕ ಮಾಡೋ ಮೂರು ಪ್ರಮುಖ ರಸ್ತೆಯಲ್ಲಿ ಬ್ಯಾರಿಕೇಡ್ ಹಾಕಿ ಪೊಲೀಸರು ವಾಹನಗಳಿಗೆ ನಿರ್ಬಂಧ ಹೇರಿದ್ದಾರೆ. ಪಾಸ್ ಇದ್ದವರಿಗಷ್ಟೇ ಒಳಗೆ-ಹೊರಗೆ ಹೋಗಲು ಬಿಡುತ್ತಿದ್ದಾರೆ. ಆದರೆ ಏರಿಯಾ ಒಳಗೆ ಜನ ಎಂದಿನಂತೆ ಆರಾಮಾಗಿ ಓಡಾಡುತ್ತಿದ್ದಾರೆ. ಪೊಲೀಸರು ಕೂಡ ಸ್ಥಳೀಯರನ್ನು ಕಂಟ್ರೋಲ್ ಮಾಡಲು ಸಾಧ್ಯವಾಗದೇ ಬೇಸತ್ತಿದ್ದಾರೆ. ನಮ್ ಏರಿಯಾಗೆ ಹಾಲು ಬಂದಿಲ್ಲ, ನಮ್ ಏರಿಯಾ ದಿನಸಿ ಬಂದಿಲ್ಲ ಎಂದು ನೆಪ ಹೇಳಿಕೊಂಡು ಹೊರಗೆ ಓಡಾಡುತ್ತಿದ್ದಾರೆ.

    ಇತ್ತ ಬಾಪೂಜಿ ನಗರ ಕಾರ್ಪೋರೇಟರ್ ಅಜ್ಮಲ್ ಬೇಗ್ ಮಾಧ್ಯಮದೊಂದಿಗೆ ಮಾತನಾಡಿ ಗಂಭೀರ ಆರೋಪ ಮಾಡಿದ್ದಾರೆ. ಬಾಪೂಜಿ ನಗರ ವಾರ್ಡ್ ನಲ್ಲಿ ಸುಮಾರು 80 ಸಾವಿರ ನಿವಾಸಿಗಳಿದ್ದಾರೆ. ಆದರೆ ಕೇವಲ ಎರಡು ಸಾವಿರ ಕಿಟ್ ಗಳನ್ನು ಮಾತ್ರ ಬಿಬಿಎಂಪಿಯಿಂದ ನೀಡಲಾಗಿದೆ. 8 ಸಾವಿರ ಲೀಟರ್ ಹಾಲು ಅವಶ್ಯಕತೆ ಇದೆ. ಆದರೆ ನಮ್ಮ ವಾರ್ಡಿಗೆ ಬಿಬಿಎಂಪಿ ನೀಡ್ತಿರೋದು ಕೇವಲ 900 ಲೀಟರ್ ಹಾಲು ಮಾತ್ರ. ಈ ಬಗ್ಗೆ ಬಿಬಿಎಂಪಿ ಆಯುಕ್ತರಿಗೆ ಹಾಗೂ ಜಂಟಿ ಆಯುಕ್ತರಿಗೆ ಪತ್ರ ಬರೆದಿದ್ದೇನೆ. ಆದರೂ ಯಾವುದೇ ಪ್ರಯೋಜನವಾಗಿಲ್ಲ. ನಾನು ಕಾಂಗ್ರೆಸ್ ಕಾರ್ಪೊರೇಟರ್ ಅಂತ ನಮ್ಮ ವಾರ್ಡಿಗೆ ತಾರತಮ್ಯ ಮಾಡಲಾಗ್ತಿದೆ ಎಂದು ಆರೋಪಿಸಿದ್ದಾರೆ.

  • ಬಾಪೂಜಿ ನಗರದಲ್ಲಿ ಹೆಸರಿಗೆ ಮಾತ್ರ ಸೀಲ್‍ಡೌನ್-ಉಚಿತ ಹಾಲಿಗಾಗಿ ಗುಂಪು ಸೇರಿದ ಜನ

    ಬಾಪೂಜಿ ನಗರದಲ್ಲಿ ಹೆಸರಿಗೆ ಮಾತ್ರ ಸೀಲ್‍ಡೌನ್-ಉಚಿತ ಹಾಲಿಗಾಗಿ ಗುಂಪು ಸೇರಿದ ಜನ

    ಬೆಂಗಳೂರು: ರಾಜಧಾನಿಯ ಪಾದರಾಯನಪುರ ಮತ್ತು ಬಾಪೂಜಿ ನಗರದಲ್ಲಿ ಸೀಲ್‍ಡೌನ್ ಮಾಡಲಾಗಿದೆ. ಆದ್ರೆ ಈ ಎರಡೂ ಪ್ರದೇಶದಲ್ಲಿ ಹೆಸರಿಗೆ ಮಾತ್ರ ಸೀಲ್ ಆಯ್ತಾ ಪ್ರಶ್ನೆ ಹುಟ್ಟಿಕೊಂಡಿದೆ. ಸೀಲ್‍ಡೌನ್ ಆಗಿದ್ದರೂ ಜನರು ಮಾತ್ರ ಎಂದಿನಂತೆ ಕುಂಟು ನೆಪಗಳನ್ನು ಹೇಳುತ್ತಾ ಬಡವಾಣೆಗಳಲ್ಲಿ ತಿರುಗಾಡುತ್ತಿದ್ದರೆ, ಕೆಲವರು ಉಚಿತ ಹಾಲು ಪಡೆಯಲು ಮುಗಿಬೀಳುತ್ತಿದ್ದಾರೆ.

    ಪಾದರಾಯನಪುರದ ವಾರ್ಡ್ ನಂಬರ್ 134, 135, 136 ಜನರು ಎಂದಿನಂತೆ ಮನೆಯಿಂದ ಹೊರ ಬರುತ್ತಿದ್ದಾರೆ. ಸೀಲ್‍ಡೌನ್ ಆಗಿದ್ರೂ ಜನರು ಮಾತ್ರ ಹೊರಗೆ ಓಡಾಡುವುದನ್ನು ಕಡಿಮೆ ಮಾಡಿಲ್ಲ. ವಾಹನಗಳಲ್ಲಿ ಜನ ಹೊರಗೆ ಬಂದು ಬೆಂಗಳೂರಿನ ಬೇರೆ ಏರಿಯಾಗಳತ್ತ ಹೊರಟ್ಟಿದ್ದಾರೆ. ಇನ್ನು ಖಾಸಗಿ ವಾಹನಗಳು ಮತ್ತು ಆಟೋ ಚಾಲಕರು ಲಾಕ್‍ಡೌನ್ ಲಾಭ ಪಡೆಯಲು ಮುಂದಾಗಿದ್ದು, ಹೆಚ್ಚಿನ ಸಂಖ್ಯೆಯಲ್ಲಿ ಜನರನ್ನು ತುಂಬಿಕೊಂಡು ಹೋಗುತ್ತಿದ್ದಾರೆ.

    ಇನ್ನು ಬಾಪೂಜಿ ನಗರದಲ್ಲಿ ಜನರು ಉಚಿತ ಹಾಲು ಪಡೆಯಲು ಬಂದು ಕ್ಯೂ ನಿಂತಿರುವ ದೃಶ್ಯಗಳು ಇಂದು ಬೆಳಗ್ಗೆ ಕಂಡುಬಂದವು. ಹಾಲು ಪಡೆಯಬೇಕೆಂದು ಸಾಮಾಜಿಕ ಅಂತರವನ್ನು ಜನರು ಕಾಯ್ದುಕೊಳ್ಳುತ್ತಿಲ್ಲ. ಬಾಪೂಜಿ ನಗರದ ಬಹುತೇಕರಿಗೆ ಉಚಿತ ಹಾಲು ಸಿಗದ ಹಿನ್ನೆಲೆಯಲ್ಲಿ ಸಾರ್ವಜನಿಕರು ಸ್ಥಳೀಯ ಕಾರ್ಪೋರೇಟರ್ ಅಜ್ಮಲ್ ಬೇಗ್ ವಿರುದ್ಧ ಆಕ್ರೋಶ ಹೊರ ಹಾಕಿದರು.

    ಉಚಿತ ಹಾಲು ಕೊಡದೇ ಪ್ರತಿನಿತ್ಯ ಕಾರ್ಪೋರೇಟರ್ ಮೋಸ ಮಾಡುತ್ತಿದ್ದಾರೆ. ಉಚಿತ ಹಾಲು ಕಾರ್ಪೋರೇಟರ್ ಬೆಂಬಲಿಗರ ಪಾಲಾಗುತ್ತಿದೆ. ನಿನ್ನೆಯೂ ಇದೇ ರೀತಿ ಹಾಲು ನೀಡಲಿಲ್ಲ. ಇವತ್ತು ಇಷ್ಟು ಸಮಯ ಸರತಿಯಲ್ಲಿ ನಿಂತ್ರೂ ಹಾಲು ಸಿಗಲಿಲ್ಲ ಎಂದು ಸಾರ್ವಜನಿಕರು ಕಿಡಿಕಾರಿದರು.

  • ಬೆಂಗ್ಳೂರಿನ 2 ವಾರ್ಡ್ ಹೊರತುಪಡಿಸಿ ಬೇರೆಲ್ಲೂ ಸೀಲ್‍ಡೌನ್ ಇಲ್ಲ: ಭಾಸ್ಕರ್ ರಾವ್

    ಬೆಂಗ್ಳೂರಿನ 2 ವಾರ್ಡ್ ಹೊರತುಪಡಿಸಿ ಬೇರೆಲ್ಲೂ ಸೀಲ್‍ಡೌನ್ ಇಲ್ಲ: ಭಾಸ್ಕರ್ ರಾವ್

    ಬೆಂಗಳೂರು: ಕೊರೊನಾ ವೈರಸ್ ವೈರಸ್ ಹರಡುವುದನ್ನು ತಡೆಯುವ ನಿಟ್ಟಿನಲ್ಲಿ ಬೆಂಗಳೂರಿನ ಎರಡು ವಾರ್ಡ್ ಗಳನ್ನು ಮಾತ್ರ ಸೀಲ್‍ಡೌನ್ ಮಾಡಲಾಗುತ್ತಿದೆ.

    ಈ ಕುರಿತು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಬೆಂಗಳೂರು ನಗರ ಪೊಲೀಸ್ ಆಯುಕ್ತ ಭಾಸ್ಕರ್ ರಾವ್, ಇಡೀ ಬೆಂಗಳೂರು ನಗರವನ್ನೇ ಸೀಲ್‍ಡೌನ್ ಮಾಡಲಾಗುತ್ತಿದೆ ಅಂತ ಸುದ್ದಿ ಬರುತ್ತಿದೆ. ಆದರೆ ಸರ್ಕಾರದ ಮುಂದೆ ಇಂತಹ ಯಾವುದೇ ಆಲೋಚನೆಗಳಿಲ್ಲ. ಸುಳ್ಳು ಸುದ್ದಿಯಿಂದಾಗಿ ಜನರು ಆತಂಕಕ್ಕೆ ಒಳಗಾಗುತ್ತಿದ್ದಾರೆ ಎಂದು ತಿಳಿಸಿದರು.

    ಬೆಂಗಳೂರಿನ ಪಾದರಾಯನಪುರ ಮತ್ತು ಬಾಪೂಜಿ ನಗರ ವಾರ್ಡ್ ಗಳನ್ನು ಮಾತ್ರ ಸೀಲ್‍ಡೌನ್ ಮಾಡಲಾಗುತ್ತಿದೆ. ಈ ಎರಡು ವಾರ್ಡ್ ಹೊರತುಪಡಿಸಿ ಬೇರೆ ಎಲ್ಲೂ ಸೀಲ್‍ಡೌನ್ ಇಲ್ಲ. ಈ ಬಗ್ಗೆ ಮುಖ್ಯ ಕಾರ್ಯದರ್ಶಿಗಳು ಮತ್ತು ಡಿಜಿ ಅಂಡ್ ಐಜಿಪಿಯವರ ಜೊತೆ ಮಾತನಾಡಲಾಗಿದೆ. ಎರಡು ವಾರ್ಡ್ ನಲ್ಲಿ ಮುಂಜಾಗ್ರತೆ ಕ್ರಮ ಕೈಗೊಳ್ಳಲಾಗುತ್ತದೆ. ಅಲ್ಲಿನ ಜನಕ್ಕೆ ಅಗತ್ಯ ವಸ್ತುಗಳ ಪೂರೈಕೆಗಾಗಿ ವ್ಯವಸ್ಥೆ ಮಾಡಲಾಗುತ್ತದೆ ಎಂದು ಸ್ಪಷ್ಟನೆ ನೀಡಿದರು.

    ಈ ವಿಚಾರವನ್ನು ಸಾಮಾಜಿಕ ಜಾಲತಾಣದ ಮೂಲಕ ಜನರಿಗೆ ತಲುಪಿಸುವಂತೆ ಕೆಲಸ ಮಾಡಿ ಅಂತ ಕೇಳಿಕೊಳ್ಳುತ್ತಿದ್ದೇವೆ. ಜನರಿಗೆ ಧೈರ್ಯ ಕೊಡಿ ನಿಮ್ಮಲ್ಲಿ ಮನವಿ ಮಾಡಿಕೊಳ್ಳುತ್ತೇನೆ ಎಂದು ಭಾಸ್ಕರ್ ರಾವ್ ಕೇಳಿಕೊಂಡರು.

    ದಿನನಿತ್ಯದ ಅವಶ್ಯಕ ವಸ್ತುಗಳು ಸಿಗುತ್ತಿವೆ. ಹಾಲು, ದಿನಸಿ, ಔಷಧಿಗಳಿಗೆ ತೊಂದರೆಯಾಗಿಲ್ಲ. ಯಾರು ಕೂಡ ಆತಂಕಕ್ಕೆ ಒಳಗಾಗಬೇಕಿಲ್ಲ. ಮೆಡಿಕಲ್ ಎಮರ್ಜೆನ್ಸಿ ಇದ್ದವರಿಗೆ ಓಡಾಡಲು ಬಿಡಲಾಗುತ್ತಿದೆ. ಆದರೆ ಇಲ್ಲಿಯವರೆಗೂ ಅನಾವಶ್ಯಕವಾಗಿ ತಿರುಗಾಡುತ್ತಿದ್ದವರ 21,700 ವಾಹಕಗಳನ್ನು ಸೀಜ್ ಮಾಡಲಾಗಿದೆ. ಕೆಲವರು ಸುಳ್ಳು ದಾಖಲೆ ನೀಡಿ ಪಾಸ್ ಪಡೆದಿರುವುದು ಗೊತ್ತಗಿದೆ ಎಂದು ಮಾಹಿತಿ ನೀಡಿದರು.

    ಶುಕ್ರವಾರ ಮತ್ತೆ 10 ಹೊಸ ಕೊರೊನಾ ಪ್ರಕರಣಗಳ ಪತ್ತೆಯಾಗಿದ್ದು, ಸೋಂಕಿತರ ಸಂಖ್ಯೆ 207ಕ್ಕೆ ಏರಿಕೆಯಾಗಿದೆ. ಗುರುವಾರ ಒಟ್ಟು 16 ಮಂದಿಯಲ್ಲಿ ಕೊರೊನಾ ಸೋಂಕು ಕಾಣಿಸಿಕೊಂಡಿತ್ತು. ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 200ರ ಗಡಿ ದಾಟಿದೆ.

    ಮೈಸೂರು 5, ಬೆಂಗಳೂರು 2 ಮತ್ತು ಕಲಬುರಗಿಯಲ್ಲಿ 1 ಕೊರೊನಾ ಪ್ರಕರಣ ಪತ್ತೆಯಾಗಿದೆ. ಮೈಸೂರಿನಲ್ಲಿ ತಂದೆಯಿಂದ 8 ವರ್ಷದ ಬಾಲಕನಿಗೆ ಕೊರೊನಾ ಸೋಂಕು ತಗುಲಿದೆ. ಬೆಂಗಳೂರು ಗ್ರಾಮಾಂತರದ 11 ವರ್ಷದ ಬಾಲಕಿಗೂ ಕೊರೊನಾ ತಗುಲಿದೆ. ಈಕೆ ರೋಗಿ ನಂಬರ್ 206ರ ಪುತ್ರಿಯಾಗಿದ್ದಾಳೆ. ಗುರುವಾರ ಬಾಗಲಕೋಟೆಯ ಮೂರು ಮಕ್ಕಳಲ್ಲಿ ಕೊರೊನಾ ಸೋಂಕು ಕಾಣಿಸಿಕೊಂಡಿತ್ತು.

    ರೋಗಿ ನಂಬರ್ 198: 48 ವರ್ಷದ ಪುರುಷನಾಗಿದ್ದು, ರೋಗಿ ನಂಬರ್ 167 ಮತ್ತು 168ರ ಜೊತೆ ಸಂಪರ್ಕದಲ್ಲಿದ್ದರು. ಬೆಂಗಳೂರಿನ ಆಸ್ಪತ್ರೆಯಲ್ಲಿ ಪ್ರತ್ಯೇಕಗೊಳಿಸಿ ಚಿಕಿತ್ಸೆ ನೀಡಲಾಗುತ್ತಿದೆ.

    ರೋಗಿ ನಂಬರ್ 199: 57 ವರ್ಷದ ಪುರುಷನಾಗಿದ್ದು, ರೋಗಿ ನಂಬರ್ 167 ಮತ್ತು 168ರ ಜೊತೆ ಸಂಪರ್ಕದಲ್ಲಿದ್ದರು. ಬೆಂಗಳೂರಿನ ಆಸ್ಪತ್ರೆಯಲ್ಲಿ ಪ್ರತ್ಯೇಕಗೊಳಿಸಿ ಚಿಕಿತ್ಸೆ ನೀಡಲಾಗುತ್ತಿದೆ.