Tag: Search Warrant

  • MUDA Case | ಮುಡಾ ಬ್ರಹ್ಮಾಂಡ ಭ್ರಷ್ಟಾಚಾರಕ್ಕಿತ್ತಾ ಐಎಎಸ್ ಅಧಿಕಾರಿಯ ಶ್ರೀರಕ್ಷೆ?

    MUDA Case | ಮುಡಾ ಬ್ರಹ್ಮಾಂಡ ಭ್ರಷ್ಟಾಚಾರಕ್ಕಿತ್ತಾ ಐಎಎಸ್ ಅಧಿಕಾರಿಯ ಶ್ರೀರಕ್ಷೆ?

    – 144 ಫೈಲ್‌ ತೆಗೆದುಕೊಂಡು ಹೋದದ್ದು ನಿಜವೇ?
    – ಲೋಕಾಯುಕ್ತ ಸರ್ಚ್‌ ವಾರೆಂಟ್‌ನಲ್ಲಿ ಸ್ಫೋಟಕ ಮಾಹಿತಿ

    ಮೈಸೂರು: ಮುಡಾ (ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ) ಸೈಟು ಹಂಚಿಕೆ ಅಕ್ರಮದ (MUDA Scam) ತನಿಖೆ ಚುರುಕು ಪಡೆದಿರುವ ಹೊತ್ತಿನಲ್ಲೇ ಮತ್ತೊಂದು ಸ್ಫೋಟಕ ವಿಚಾರ ಬೆಳಕಿಗೆ ಬಂದಿದೆ. ಇದರಿಂದ ಮುಡಾ ಬ್ರಹ್ಮಾಂಡ ಭ್ರಷ್ಟಾಚಾರಕ್ಕೆ ನಗರಾಭಿವೃದ್ಧಿ ಇಲಾಖೆಯ ಐಎಎಸ್ ಅಧಿಕಾರಿಯ ಶ್ರೀರಕ್ಷೆ ಇತ್ತಾ? ಅನ್ನೂ ಅನುಮಾನಕ್ಕೆ ಲೋಕಾಯುಕ್ತದ (Lokayukta) ಅಧಿಕೃತ ದಾಖಲೆ ಎಡೆಮಾಡಿಕೊಟ್ಟಿದೆ.

    ಹೌದು. ಬ್ರಹ್ಮಾಂಡ ಭ್ರಷ್ಟಾಚಾರದ ಹಿನ್ನೆಲೆ ಮುಡಾ ಮೂಡಾದಲ್ಲಿನ ದಾಖಲೆ ಜಪ್ತಿಗೆ ಲೋಕಾಯುಕ್ತ ಸರ್ಚ್ ವಾರೆಂಟ್ (Search Warrant) ಸಿದ್ಧಪಡಿಸಿಕೊಂಡಿತ್ತು. ಜೂನ್ 28ರ ಸಂಜೆ ಸರ್ಚ್ ವಾರೆಂಟ್ ಸಿದ್ಧವಾಗಿತ್ತು. ಸರ್ಚ್ ವಾರೆಂಟ್ ಸಿದ್ಧವಾದ 12 ತಾಸಿನೊಳಗೆ (ಜೂನ್ 29ರ ಬೆಳಗ್ಗೆ ) ಸಿನಿಮೀಯ ರೀತಿಯಲ್ಲಿ ಮೈಸೂರು ಪ್ರಾಧಿಕಾರಕ್ಕೆ ಐಎಎಸ್‌ ಅಧಿಕಾರಿ ಬಂದಿದ್ದರು. ಒಟ್ಟು 144 ಕಡತಗಳನ್ನ ತೆಗೆದುಕೊಂಡು ಹೋಗಿದ್ದರು ಲೋಕಾಯುಕ್ತವೇ ತನ್ನ ರಿಪೋರ್ಟ್‌ನಲ್ಲಿ ಉಲ್ಲೇಖಿಸಿತ್ತು. ಇನ್ನೂ ನಾವು ದಾಳಿ ಮಾಡಿ ಪ್ರಯೋಜನ ಇಲ್ಲ ಎಂದು ಲಿಖಿತವಾಗಿ ಉಲ್ಲೇಖಿಸಿ ಲೋಕಾಯುಕ್ತ ಸರ್ಚ್ ವಾರೆಂಟ್ ರದ್ದು ಪಡಿಸಿಕೊಂಡಿತ್ತು ಎಂದು ದಾಖಲೆಯಲ್ಲಿ ತಿಳಿದುಬಂದಿದೆ. ಇದನ್ನೂ ಓದಿ: MUDA Scam| ನೋಟಿಸ್‌ ಇಲ್ಲದೇ ರಾತ್ರಿ ದಿಢೀರ್‌ ಲೋಕಾ ಎಸ್‌ಪಿ ಕಚೇರಿಗೆ ಭೇಟಿ ನೀಡಿದ ಸಿಎಂ ಬಾಮೈದ!

    ಸರ್ಚ್ ವಾರೆಂಟ್‌ನಲ್ಲಿ ಇದ್ದ ಅಂಶಗಳೇನು?
    ಜೂನ್ 28ರ ಸಂಜೆ ಲೋಕಾಯುಕ್ತ ಸರ್ಚ್‌ ವಾರಂಟ್‌ನಲ್ಲಿ ಹಲವು ಸ್ಫೋಟಕ ಮಾಹಿತಿ ಬೆಳಿಕಿಗೆ ಬಂದಿದೆ. ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ ಸೈಟ್ ಹಂಚಿಕೆಯಲ್ಲಿ ಗೋಲ್ ಮಾಲ್ ಆಗುತ್ತಿದೆ. ಬದಲಿ ನಿವೇಶ ಕೊಡುವ ವಿಚಾರದಲ್ಲಿ ಎಲ್ಲಾ ಕಾನೂನು ಉಲ್ಲಂಘನೆ ಆಗಿದೆ. ಎಲ್ಲಾ ಅಕ್ರಮ ನೀತಿಗಳ ಅನುಸರಿಸಿ ನಿವೇಶನ ಮಂಜೂರು ಮಾಡಲಾಗುತ್ತಿದೆ, ಈ ಬಗ್ಗೆ ಖಚಿತ ಮಾಹಿತಿ ಲಭ್ಯವಾಗಿದೆ. ಇದರ ಬಗ್ಗೆ ನೋಟಿಸ್ ಕೊಟ್ಟು ದಾಖಲೆ ಕೇಳಿದರೆ ಅಧಿಕಾರಿಗಳು ಯಾವ ದಾಖಲೆ ಕೊಡುವುದಿಲ್ಲ. ದಾಖಲೆ ಕೇಳಿದ ಕೂಡಲೇ ದಾಖಲೆ ನಾಶಮಾಡುತ್ತಾರೆ. ಅಲ್ಲದೇ ದಾಖಲೆಗಳನ್ನು ಸುಟ್ಟು ಹಾಕುತ್ತಾರೆ. ಇದಕ್ಕಾಗಿ ದಿಢೀರ್ ದಾಳಿ ಮಾಡಿ ದಾಖಲೆ ಜಪ್ತಿ ಮಾಡುವ ಅವಶ್ಯಕತೆ ಇದೆ. ನಗರ ಯೋಜನಾ ವಿಭಾಗ, ಮುಡಾ ಸೂಪರಿಂಟೆಂಡೆಂಟ್ ಕಚೇರಿಯಲ್ಲಿನ ಮಹತ್ವದ ದಾಖಲೆ ಜಪ್ತಿ ಮಾಡಲೇ ಬೇಕಾಗಿದೆ. ಹೀಗಾಗಿ ದಿಢೀರ್ ದಾಳಿ ಮಾಡಲು ಸರ್ಚ್ ವಾರೆಂಟ್ ಜಾರಿ ಮಾಡಲಾಗಿತ್ತು. ಇದನ್ನೂ ಓದಿ: ಸಿದ್ದರಾಮಯ್ಯಗೆ 120 ಕೋಟಿ ರೂ. ಪರಿಹಾರ ಕೊಡಬೇಕಿತ್ತು: ಸಿಎಂ ಪರ ಮಾಜಿ ಶಾಸಕ ಬ್ಯಾಟಿಂಗ್‌

    ಟೈಂ ಲೈನ್:
    * ಜೂನ್ 28ರ ಸಂಜೆ ಸರ್ಚ್ ವಾರೆಂಟ್ ಸಿದ್ಧ.
    * ಜೂನ್ 29ರ ಬೆಳಗ್ಗೆ ಐಎಎಸ್ ಅಧಿಕಾರಿ ಪ್ರಾಧಿಕಾರಕ್ಕೆ ಎಂಟ್ರಿ.
    * ಜುಲೈ 1ಕ್ಕೆ ನಗರಾಭಿವೃದ್ಧಿ ಸಚಿವ ಬೈರತಿ ಸುರೇಶ್ ಪ್ರಾಧಿಕಾರಕ್ಕೆ ದಿಢೀರ್ ಆಗಮನ ಸಭೆ.
    * ಜುಲೈ 2ಕ್ಕೆ ಮೈಸೂರು ಲೋಕಾಯುಕ್ತರ ವರ್ಗಾವಣೆ
    * ಈ ಎಲ್ಲಾ ಬೆಳವಣಿಗೆಗಳನ್ನು ಲಿಖಿತವಾಗಿ ಉಲ್ಲೇಖಿಸಿ ಸರ್ಚ್ ವಾರೆಂಟ್ ರದ್ದು.
    * ಐಎಎಸ್ ಅಧಿಕಾರಿ ಬಂದು 144 ಫೈಲ್‌ ತೆಗೆದುಕೊಂಡು ಹೋಗಿದ್ದಾರೆ ಎಂದು ಲೋಕಾಯುಕ್ತ ರೀಪೋರ್ಟ್

  • 8 ಕೋಟಿಗೂ ಹೆಚ್ಚು ಮೌಲ್ಯದ ಅಕ್ರಮ ಆಸ್ತಿ- ಅಧಿಕಾರಿ ವಿರುದ್ಧ ಪ್ರಕರಣ ದಾಖಲು

    8 ಕೋಟಿಗೂ ಹೆಚ್ಚು ಮೌಲ್ಯದ ಅಕ್ರಮ ಆಸ್ತಿ- ಅಧಿಕಾರಿ ವಿರುದ್ಧ ಪ್ರಕರಣ ದಾಖಲು

    ಪಾಟ್ನಾ: ಬಿಹಾರ ಸರ್ಕಾರದ ವಿಜಿಲೆನ್ಸ್ ಇನ್ವೆಸ್ಟಿಗೇಶನ್ ಬ್ಯೂರೋ ಬ್ಲಾಕ್ ಮಟ್ಟದ ಅಧಿಕಾರಿಯೊಬ್ಬರ ವಿರುದ್ಧ ತನ್ನ ಆದಾಯಕ್ಕಿಂತ 8 ಕೋಟಿಗೂ ಹೆಚ್ಚು ಮೌಲ್ಯದ ಆಸ್ತಿಯನ್ನು ಗಳಿಸಿದ ಆರೋಪದ ಮೇಲೆ ಪ್ರಕರಣ ದಾಖಲಿಸಿದೆ.

    ಜಾಗೃತ ದಳದ ಸಿಬ್ಬಂದಿ ತಮಗೆ ಸಿಕ್ಕ ಸುಳಿವಿನ ಮೇರೆಗೆ ಪಾಟ್ನಾ ಮತ್ತು ಮೋತಿಹಾರಿಯಲ್ಲಿರುವ ಅಧಿಕಾರಿಯ ಎರಡು ನಿವಾಸಗಳ ಮೇಲೆ ದಾಳಿ ಮಾಡಿದ್ದು, ಶೋಧ ಕಾರ್ಯಾಚರಣೆ ನಡೆಸಿದ್ದಾರೆ. ಈ ವೇಳೆ 1.75 ಕೋಟಿ ನಗದು, 48 ಲಕ್ಷ ಮೌಲ್ಯದ 2.2 ಕೆಜಿ ಚಿನ್ನ ಮತ್ತು ಬೆಳ್ಳಿ ಆಭರಣಗಳು, 42 ರಾಷ್ಟ್ರೀಕೃತ ಬ್ಯಾಂಕುಗಳ ಪಾಸ್‍ಬುಕ್‍ಗಳನ್ನು ವಶಪಡಿಸಿಕೊಂಡಿದ್ದಾರೆ. ಇದನ್ನೂ ಓದಿ: ಲವ್ ಇದ್ಮೇಲೆ ಜಿಹಾದ್ ಯಾಕೆ ಬರುತ್ತೆ – ಇಬ್ರಾಹಿಂ ತಿರುಗೇಟು

    BRIBE

    ಈ ಕುರಿತು ವಿಜಿಲೆನ್ಸ್ ಅಧಿಕಾರಿ ಮಾಧ್ಯಮಗಳೊಂದಿಗೆ ಮಾತನಾಡಿದ್ದು, ಕಾರ್ಮಿಕ ಇಲಾಖೆಯ ಹಾಜಿಪುರದ ಬ್ಲಾಕ್ ಮಟ್ಟದ ಅಧಿಕಾರಿ 8 ಕೋಟಿಗೂ ಹೆಚ್ಚು ಮೊತ್ತದ ಅಕ್ರಮ ಆಸ್ತಿ ಸಂಪಾದನೆ ಮಾಡಿರುವ ಶಂಕೆ ವ್ಯಕ್ತವಾಗಿದ್ದು, ಅವರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ದಾಳಿಯ ವೇಳೆ 14 ಎಲ್‍ಐಸಿ ಪಾಲಿಸಿಗಳು, 17 ಡೆಬಿಟ್ ಮತ್ತು ಕ್ರೆಡಿಟ್ ಕಾರ್ಡ್‍ಗಳು ಮತ್ತು 25 ಭೂಮಿ ಖರೀದಿ ಒಪ್ಪಂದ ಪತ್ರಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ತಿಳಿಸಿದರು.

    ಚರ ಮತ್ತು ಸ್ಥಿರ ಆಸ್ತಿಗಳಿಗೆ ಸಂಬಂಧಿಸಿದ ದಾಖಲೆಗಳನ್ನು ಪರಿಶೀಲಿಸಲಾಗಿದೆ. ವಿಶೇಷ ನ್ಯಾಯಾಧೀಶರು, ವಿಜಿಲೆನ್ಸ್, ಪಾಟ್ನಾ ಅವರು ಸರ್ಚ್ ವಾರೆಂಟ್ ಹೊರಡಿಸಿದ ನಂತರ ಈ ದಾಳಿಗಳನ್ನು ನಡೆಸಲಾಯಿತು. ಕಳೆದ ಎರಡು ವರ್ಷಗಳಲ್ಲಿ ರಾಜ್ಯದಲ್ಲಿ ನಡೆದ ಅಕ್ರಮ ಆಸ್ತಿ ಪ್ರಕರಣಗಳಲ್ಲಿ ಇದು ಅತಿ ದೊಡ್ಡ ಜಪ್ತಿಯಾಗಿದೆ ಎಂದು ಹೇಳಿದರು. ಇದನ್ನೂ ಓದಿ: ಯೋಗಿ ಸರ್ಕಾರದಿಂದ ಇಲ್ಲಿಯವರೆಗೆ 15246 ಕಿ.ಮೀ.ಗೂ ಹೆಚ್ಚು ಗ್ರಾಮೀಣ ರಸ್ತೆಗಳನ್ನು ನಿರ್ಮಾಣ