Tag: Secondary PUC

  • ಹುಟ್ಟಿದಾಗಿನಿಂದಲೂ ಶಾಲಾ-ಕಾಲೇಜು ಮೆಟ್ಟಿಲು ಹತ್ತದ ಯುವತಿ ಪಿಯುಸಿ ಪಾಸ್

    ಹುಟ್ಟಿದಾಗಿನಿಂದಲೂ ಶಾಲಾ-ಕಾಲೇಜು ಮೆಟ್ಟಿಲು ಹತ್ತದ ಯುವತಿ ಪಿಯುಸಿ ಪಾಸ್

    – ಕೋಟಿ ಜನರಲ್ಲಿ ಒಬ್ಬರಿಗೆ ಬರುವ ಕಾಯಿಲೆಯಿಂದ ಬಳಲುತ್ತಿರುವ ಯುವತಿ

    ಚಿಕ್ಕಮಗಳೂರು: ಹುಟ್ಟಿದಾಗಿನಿಂದ ಶಾಲಾ-ಕಾಲೇಜು ಮೆಟ್ಟಿಲು ಹತ್ತದ ಜಿಲ್ಲೆಯ ಎನ್.ಆರ್.ಪುರ ತಾಲೂಕಿನ ಬಾಳೆಹೊನ್ನೂರು ಸಮೀಪದ ಅರಳಿಕೊಪ್ಪ ಗ್ರಾಮದ ಯುವತಿ ಮೊದಲ ಬಾರಿಗೆ ದ್ವಿತೀಯ ಪಿಯುಸಿ ಪರೀಕ್ಷೆ ಪಾಸ್ ಮಾಡಿ ಎಲ್ಲರಿಗೂ ಮಾದರಿಯಾಗಿದ್ದಾಳೆ.

    ಶಾಲಾ-ಕಾಲೇಜಿಗೆ ಹೋಗದೆ, ಮನೆಯಲ್ಲೇ ಓದಿ ದೀಪಿಕಾ ಮೊದಲ ಬಾರಿಗೆ ದ್ವಿತೀಯ ಪಿಯುಸಿ ಪಾಸ್ ಮಾಡಿದ್ದಾಳೆ. ಕೋಟಿ ಜನರಲ್ಲಿ ಒಬ್ಬರಿಗೆ ಬರುವ ಕಾಯಿಲೆಯಿಂದ ಈಕೆ ಬಳಲುತ್ತಿದ್ದಾಳೆ. ಶಾಲಾ-ಕಾಲೇಜು ಸೇರಿದಂತೆ ಮನೆಯಿಂದ ಹೊರ ಹೋಗುವಂತಿಲ್ಲ. ಈಕೆಯದ್ದು ಮನೆಯೊಳಗಿನ ಜೀವನ. ಆದರೂ ಬಾಳೆಹೊನ್ನೂರು ಸಮೀಪದ ಅರಳಿಕೊಪ್ಪ ಗ್ರಾಮದ ಸುಧಾಕರ್-ಪ್ರತಿಮಾ ದಂಪತಿಯ ಪುತ್ರಿ ದೀಪಕಾ ಮೊದಲ ಸಲವೇ ಪಿಯುಸಿ ಪಾಸ್ ಮಾಡಿ ಮಾದರಿಯಾಗಿದ್ದಾಳೆ. ಇದನ್ನೂ ಓದಿ: ರಾಜ್ಯ ಸರ್ಕಾರಗಳು ಜಿಎಸ್‍ಟಿಗೆ ಸೇರಿಸಲು ಒಪ್ಪದ ಹೊರತು ಪೆಟ್ರೋಲ್ ಬೆಲೆ ಇಳಿಯಲ್ಲ: ಹರ್ದೀಪ್ ಸಿಂಗ್ ಪುರಿ

    ಈಕೆ ಹುಟ್ಟಿದಾಗಿನಿಂದ ಯಾವುದೇ ಶಾಲಾ-ಕಾಲೇಜಿಗೆ ಹೋಗಿಲ್ಲ. ಯಾವ ಶಿಕ್ಷಕರ ಪಾಠವನ್ನೂ ಕೇಳಿಲ್ಲ. ಯಾವ ಟ್ಯೂಷನ್‍ಗೂ ಹೋಗಿಲ್ಲ. ತಾನೇ ಓದಿ, ತನ್ನ ಗ್ರಹಿಕಾ ಶಕ್ತಿಯಿಂದ ಮೊದಲ ಸಲ ಪರೀಕ್ಷೆ ಎದುರಿಸಿ ಪಿಯುಸಿ ಪಾಸ್ ಮಾಡಿದ್ದಾಳೆ. ಕಳೆದ ಎರಡು ವರ್ಷದ ಹಿಂದೆ ಸರ್ಕಾರ ಖಾಸಗಿಯಾಗಿ ನಡೆಸಿದ್ದ ಎಸ್.ಎಸ್.ಎಲ್.ಸಿ. ಪರೀಕ್ಷೆಯನ್ನೂ ಕೂಡ ಪಾಸ್ ಮಾಡಿದ್ದಳು. ಓದಿನ ಜೊತೆಗೆ ಚಿತ್ರಕಲೆ, ಎಂಬ್ರಾಯ್ಡಿಂಗ್, ಕಂಪ್ಯೂಟರ್, ಟೈಲರಿಂಗ್ ಕೂಡ ಮಾಡಿದ್ದಾಳೆ.

    ತನ್ನಂತೆ ಅಪರೂಪದ ಕಾಯಿಲೆಯಿಂದ ಬಳಲುತ್ತಿರುವ ತನ್ನ ತಂಗಿಗೂ ತಾನೇ ಪಾಠ ಮಾಡುತ್ತಿದ್ದಾಳೆ. ಹೆತ್ತವರು ಕೂಡ ಕಳೆದ 20 ವರ್ಷಗಳಿಂದ ಲಕ್ಷಾಂತರ ರೂಪಾಯಿ ಖರ್ಚು ಮಾಡಿ, ಮಕ್ಕಳನ್ನು ಯಾವುದೇ ಕೀಳಿರಿಮೆ ಬಾರದಂತೆ ಕಣ್ಣಲ್ಲಿ ಕಣ್ಣಿಟ್ಟು ನೋಡಿಕೊಳುತ್ತಿದ್ದಾರೆ. ಓದಿ ದೊಡ್ಡವಳಾಗಿ ತನ್ನಂತೆ ಅಪರೂಪದ ಕಾಯಿಲೆಯಿಂದ ಬಳಲುವವರ ಸೇವೆ ಮಾಡಬೇಕೆಂಬ ಆಸೆ ದೀಪಿಕಾಳದ್ದಾಗಿದೆ. ಹೆತ್ತವರು ಕೂಡ ಮಗಳಿಗೆ ಯಾವುದಾದರೂ ಒಂದು ಕೆಲಸ ಸಿಕ್ಕರೆ ಅವಳ ಜೀವನಕ್ಕೂ ಸಹಕಾರಿಯಾಗಲಿದೆ. ಜೊತೆಗೆ ನಮಗೂ ತುಸು ನೆಮ್ಮದಿ ಸಿಗಲಿದೆ ಎಂದಿದ್ದಾರೆ.

  • ಕೇಂದ್ರ ಸರ್ಕಾರದ ವಿದ್ಯಾರ್ಥಿ ಸ್ನೇಹಿ ದೀಕ್ಷಾ ಆ್ಯಪ್ ಲೋಕಾರ್ಪಣೆ

    ಕೇಂದ್ರ ಸರ್ಕಾರದ ವಿದ್ಯಾರ್ಥಿ ಸ್ನೇಹಿ ದೀಕ್ಷಾ ಆ್ಯಪ್ ಲೋಕಾರ್ಪಣೆ

    – ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗಾಗಿ `ಪರೀಕ್ಷಾ ಅಭ್ಯಾಸ’
    – ಕಾರ್ಯಕ್ರಮಕ್ಕೆ ಸುರೇಶ್ ಕುಮಾರ್ ಚಾಲನೆ

    ಬೆಂಗಳೂರು: ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಕೇಂದ್ರ ಸರ್ಕಾರವು ಪ್ರಸ್ತುತ ಪಡಿಸಿದ `ದೀಕ್ಷಾ’-ಆಪ್‍ನನ್ನು (ದೀಕ್ಷಾ-ಆ್ಯಪ್) ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ಬುಧವಾರ ಚಾಲನೆ ನೀಡಿದರು.

    ಮಂಗಳವಾರ ಪದವಿ ಪೂರ್ವ ಶಿಕ್ಷಣ ಇಲಾಖೆಯಲ್ಲಿ ರಾಜ್ಯದ ದ್ವಿತೀಯ ಪಿಯು ವಿದ್ಯಾರ್ಥಿಗಳಿಗಾಗಿ ಪದವಿ ಪೂರ್ವ ಶಿಕ್ಷಣ ಇಲಾಖೆ `ಪರೀಕ್ಷಾ ಅಭ್ಯಾಸ’ ಎಂಬ ವಿನೂತನ ಕಾರ್ಯಕ್ರಮವನ್ನು ಅಳವಡಿಸಿ ದೀಕ್ಷಾ ವೇದಿಕೆಯ ಮೂಲಕ ಲೋಕಾರ್ಪಣೆ ಮಾಡಲಾಯಿತು. ಈ ಸಂದರ್ಭದಲ್ಲಿ ಮಾತನಾಡಿದ ಸಚಿವ ಸುರೇಶ್ ಕುಮಾರ್‍ರವರು, ಪಿಯುಸಿ ವಿದ್ಯಾರ್ಥಿಗಳಿಗೆ ಮುಂಬರಲಿರುವ ಪರೀಕ್ಷೆ ಮತ್ತು ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಸ್ಪರ್ಧಾತ್ಮಕ ಪರೀಕ್ಷೆಗೆ ಉತ್ತಮ ರೀತಿಯಲ್ಲಿ ಆತ್ಮವಿಶ್ವಾಸದಿಂದ ಸಿದ್ಧರಾಗುವುದಕ್ಕೆ ಈ ಆ್ಯಪ್ ಸಹಕಾರಿಯಾಗಲಿದೆ ಎಂದರು.

    ಅದೇ ರೀತಿಯಾಗಿ ಡಿ.ಎಸ್.ಇ.ಆರ್.ಟಿ.ಯು 10ನೇ ತರಗತಿ ಪರೀಕ್ಷೆ ಬರೆಯುವ ಮಕ್ಕಳಿಗೆ ಸಿದ್ಧತೆ ಮಾಡುವುದಕ್ಕಾಗಿ “ಫೋಕಸ್” ಎಂಬ ಪುನರ್ಮನನ ಕಾರ್ಯಕ್ರಮವನ್ನು ದೀಕ್ಷಾದಲ್ಲಿ ಪ್ರಸ್ತುತಪಡಿಸಿದೆ. ಪ್ರತಿಯೊಂದು ವಿಷಯಕ್ಕೆ ಇ-ಪಠ್ಯಪುಸ್ತಕ, ಕನಿಷ್ಠ 2 ಮಾಡೆಲ್ ಪ್ರಶ್ನೆ ಪತ್ರಿಕೆಗಳು, ವಿವರಾಣಾತ್ಮಕ ವಿಡಿಯೋಗಳು, ಅಧ್ಯಾಯವಾರು ಅಭ್ಯಾಸ ಪ್ರಶ್ನೋತ್ತರಗಳು ಅದರಲ್ಲಿ ದೊರೆಯಲಿವೆ ಎಂದು ಹೇಳಿದರು.

    ವಿದ್ಯಾರ್ಥಿಗಳಿಗೆ ಮಂಬರಲಿರುವ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಸಿದ್ಧರಾಗುವುದಕ್ಕೆ ಸಹಾಯ ಮಾಡಲು ಪಿಸಿಎಂಬಿ ವಿಷಯಕ್ಕೆ ಸುಮಾರು 9,000 ಬಹು ಆಯ್ಕೆ ಪ್ರಶ್ನೆಗಳನ್ನು (ಎಂಸಿಕ್ಯು) ಅಧ್ಯಾಯವಾರು ಒದಗಿಸಲಾಗಿದೆ. ದೇಶದಲ್ಲಿಯೇ ಇದೊಂದು ವಿನೂತನ ಪ್ರಯೋಗವಾಗಿದ್ದು, ನಮ್ಮ ಕರ್ನಾಟಕದ ಪದವಿ ಪೂರ್ವ ಶಿಕ್ಷಣ ಇಲಾಖೆಯು ಇದನ್ನು ಪ್ರಪ್ರಥಮವಾಗಿ ಜಾರಿಗೊಳಿಸುತ್ತಿದೆ ಎಂದು ಪ್ರಶಂಸೆ ವ್ಯಕ್ತಪಡಿಸಿದರು. ಈ ಎಲ್ಲ ಪಠ್ಯಾಂಶಗಳನ್ನು ‘ದೀಕ್ಷಾ-ಆ್ಯಪ್’ದಲ್ಲಿ ಪಡೆದುಕೊಳ್ಳಬಹುದಾಗಿದ್ದು, ಎಲ್ಲ ವಿದ್ಯಾರ್ಥಿಗಳು ಇದರ ಸದುಪಯೋಗ ಮಾಡಿಕೊಳ್ಳಬೇಕೆಂದು ಸಚಿವರು ಕೋರಿದರು.

    ಏನಿದು ದೀಕ್ಷಾ-ಆಪ್ ಪ್ರೋಗ್ರಾಂ: ದೀಕ್ಷಾ ಪೋರ್ಟಲ್ ಅನ್ನು www.diksha.gov.in ಇಲ್ಲಿ ನೋಡಬಹುದಾಗಿದೆ. ಆಂಡ್ರಾಯಿಡ್ ಫೋನ್ ಗಳಲ್ಲಿ ದೀಕ್ಷಾ ಆ್ಯಪ್ ಅನ್ನು ಗೂಗಲ್ ಪ್ಲೇಸ್ಟೋರ್ ನಿಂದ ಡೌನ್ಲೋಡ್ ಮಾಡಿಕೊಳ್ಳಬಹುದು ಅಥವಾ ಈ ಲಿಂಕ್ ಒತ್ತಿ ದೀಕ್ಷಾ ಆಪ್ ಡೌನ್ಲೋಡ್ ಮಾಡಿಕೊಳ್ಳಬಹುದು. DIKSHA – Platform for School Education

    ದೀಕ್ಷಾ ಆ್ಯಪ್ ಅಥವಾ ಪೋರ್ಟಲ್ ನಲ್ಲಿ ನಿಮಗೆ ಬೇಕಿರುವ ಬೋರ್ಡ್, ಮಾಧ್ಯಮ, ಭಾಷೆ ಮತ್ತು ತರಗತಿಗಳನ್ನು ಆಯ್ಕೆ ಮಾಡಿಕೊಂಡು, ವಿವಿಧ ಬಗೆಯ ಪಠ್ಯಾಂಶಗಳನ್ನು ಪಡೆದುಕೊಳ್ಳಬಹುದು.

    ದೀಕ್ಷಾ-ಆಪ್ ಉದ್ದೇಶ: ವಿದ್ಯಾರ್ಥಿಗಳಿಗೆ ಹೆಚ್ಚುವರಿ ಕಲಿಕಾ ಸಂಪನ್ಮೂಲಗಳನ್ನು ಒದಗಿಸಿ, ಅವರ ಕಲಿಕೆಯನ್ನು ಇನ್ನಷ್ಟು ಉತ್ತಮಗೊಳಿಸುವ ಉದ್ದೇಶದಿಂದ ಈ ಪ್ರೋಗ್ರಾಂ ರೂಪಿಸಲಾಗಿದೆ. ಕೋವಿಡ್ ಪಿಡುಗಿನ ಈ ಕಷ್ಟಕರ ಸನ್ನಿವೇಶದಲ್ಲಿ ವಿದ್ಯಾರ್ಥಿಗಳಿಗೆ ಶಾಲೆ, ಕಾಲೇಜುಗಳಿಗೆ ನಿಯಮಿತವಾಗಿ ಹೋಗುವುದಕ್ಕೆ ಸಾಧ್ಯವಾಗಿಲ್ಲ. ಶಿಕ್ಷಣ ಇಲಾಖೆಯು ಚಂದನ ಟಿವಿಯ ಮೂಲಕ ಆನ್‍ಲೈನ್ ಪಾಠಗಳನ್ನು ನಡೆಸುತ್ತಿದೆ. ಆದಾಗ್ಯೂ ಎಲ್ಲ ವಿದ್ಯಾರ್ಥಿಗಳಿಗೆ ಎಲ್ಲಾ ಪಾಠಗಳನ್ನು ವೀಕ್ಷಿಸುವುದು ಸಾಧ್ಯವಾಗಿರುವುದಿಲ್ಲ. ದೀಕ್ಷಾ ಪೋರ್ಟಲ್‍ನಲ್ಲಿ ಅಳವಡಿಸಲಾಗಿರುವ ಈ ಎಲ್ಲಾ ಇ-ಕಲಿಕಾ ಸಂಪನ್ಮೂಲಗಳನ್ನು ವಿದ್ಯಾರ್ಥಿಗಳು ತಮಗೆ ಸಾಧ್ಯವಾದಾಗ ಮತ್ತು ಅಗತ್ಯವಿದ್ದಾಗ ನೋಡಿಕೊಳ್ಳಬಹುದು.

    ಕಾರ್ಯಕ್ರಮದ ವ್ಯಾಪ್ತಿ: 1 ರಿಂದ 12ನೇ ತರಗತಿಗಳಿಗೆ ಎಲ್ಲ ಬಗೆಯ ಪಠ್ಯಾಂಶಗಳು ಅಂದರೆ ಇ-ಪಠ್ಯಪುಸ್ತಕಗಳು (ಇಟಿಬಿ), ವಿವರಣಾತ್ಮಕ ಪಠ್ಯಾಂಶಗಳು, ಕಲಿಕಾ ಸಂಪನ್ಮೂಲಗಳು, ಅಭ್ಯಾಸ ಪ್ರಶ್ನೆಗಳು, ಪ್ರಶ್ನೆ ಕೋಶ (ಕ್ವಶ್ಚನ್ ಬ್ಯಾಂಕ್) ಮತ್ತು ಶಿಕ್ಷಕರಿಗೆ ಪಾಠ ಯೋಜನೆ ಇನ್ನಿತರ ಸಂಪನ್ಮೂಲಗಳನ್ನು ದೀಕ್ಷಾ ಪೋರ್ಟಲ್ ನಲ್ಲಿ ಅಳವಡಿಸಲಾಗಿದೆ.

    ಕ್ವಶ್ಚನ್ ಬ್ಯಾಂಕಿನಲ್ಲಿ ಅಧ್ಯಾಯವಾರು ಬಹು ಆಯ್ಕೆ ಪ್ರಶ್ನೆಗಳು (ಎಂಸಿಕ್ಯು), ಕಿರು ಉತ್ತರಗಳು (ವೆರಿ ಶಾರ್ಟ್ ಅನ್ಸರ್), ಸಂಕ್ಷೀಪ್ತ ಉತ್ತರಗಳು (ಶಾರ್ಟ್ ಅನ್ಸರ್), ದೀರ್ಘ ಉತ್ತರಗಳು (ಲಾಂಗ್ ಅನ್ಸರ್); ಹೀಗೆ ನಾಲ್ಕು ರೀತಿಯ ಪ್ರಶ್ನೆಗಳು ಸೇರಿವೆ.

    ಫೋಕಸ್ ಪ್ರೋಗ್ರಾಂ: 10ನೇ ತರಗತಿಯ ವಿದ್ಯಾರ್ಥಿಗಳು ಮಂಡಳಿಯ ಪರೀಕ್ಷೆಗೆ ಸಿದ್ಧರಾಗುವುದಕ್ಕೆ ಸಹಾಯವಾಗಲೆಂದು ವಿಜ್ಞಾನ, ಗಣಿತ ಮತ್ತು ಇಂಗ್ಲಿಷ್ ವಿಷಯಗಳ ಪ್ರತಿ ಅಧ್ಯಾಯಕ್ಕೆ ಸುಮಾರು 30 ಪ್ರಶ್ನೆಗಳನ್ನು ಸೇರಿಸಲಾಗಿದೆ. ಇದು ವಿದ್ಯಾರ್ಥಿಗಳಿಗೆ ಹಲವಾರು ಕ್ಲಿಷ್ಟಕರ ಪರಿಕಲ್ಪನೆಗಳನ್ನು ಪುನರ್ಮನನ ಮಾಡುತ್ತ, ಪರೀಕ್ಷೆಗೆ ಆತ್ಮವಿಶ್ವಾಸದಿಂದ ಸಿದ್ಧರಾಗುವುದಕ್ಕೆ ಸಾಧ್ಯಗೊಳಿಸುತ್ತದೆ.

    ದ್ವಿತೀಯ ಪಿಯುಸಿಗೆ: ಪಿಸಿಎಂಬಿ ವಿಷಯಗಳಿಗೆ, ಪ್ರತಿ ಅಧ್ಯಾಯಕ್ಕೂ ಸಮಾರು 80-100 ಪ್ರಶ್ನೆಗಳನ್ನು ಅಪ್ಲೋಡ್ ಮಾಡಲಾಗಿದೆ. ಇದು ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಕೆಸಿಇಟಿ, ಸಿಓಎಂಇಡಿಕೆ, ಜೆಇಇ, ನೀಟ್, ಹೀಗೆ ವಿವಿಧ ರೀತಿಯ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಉತ್ತಮ ರೀತಿಯಲ್ಲಿ ಸಿದ್ಧತೆ ಮಾಡುವುದಕ್ಕೆ ಸಹಾಯವಾಗುತ್ತದೆ.

    ಇದು ವಿದ್ಯಾರ್ಥಿಗಳಿಗೆ ಹೇಗೆ ಉಪಯುಕ್ತ?
    ಈ ಎಲ್ಲಾ ಪಠ್ಯಾಂಶಗಳು ದೀಕ್ಷಾ ಪೋರ್ಟಲ್ ಮತ್ತು ದೀಕ್ಷಾ ಆ್ಯಪ್ ನಲ್ಲಿ ಲಭ್ಯವಿರುತ್ತವೆ. ವಿದ್ಯಾರ್ಥಿಗಳು ತಮಗೆ ಅರ್ಥವಾಗದ ಪಾಠ ಅಥವಾ ಅಧ್ಯಾಯಗಳನ್ನು ರಿಪ್ಲೇ ಮಾಡಿ ನೋಡಲು ಸಾಧ್ಯವಿರುತ್ತವೆ. ಜೊತೆಗೆ ವಿಡಿಯೋ, ಪಿಡಿಎಫ್ ರೂಪದಲ್ಲಿರುವ ವಿವರಣಾತ್ಮಕ ಪಠ್ಯಾಂಶಗಳನ್ನು ಆ್ಯಪ್‍ನಲ್ಲಿ ಡೌನ್ಲೋಡ್ ಮಾಡಿಟ್ಟುಕೊಂಡರೆ, ಇಂಟರ್ನೆಟ್ ಇಲ್ಲದಿದ್ದಾಗಲೂ ನೋಡಿಕೊಂಡು, ಅಭ್ಯಾಸ ಮಾಡುವುದಕ್ಕೆ ಸಾಧ್ಯವಿದೆ. ಶಿಕ್ಷಣ ಇಲಾಖೆಯ ತಜ್ಞ ಶಿಕ್ಷಕರು ಮತ್ತು ಉಪನ್ಯಾಸಕರು ವಿದ್ಯಾರ್ಥಿಗಳ ಅಗತ್ಯ, ಪರೀಕ್ಷೆಯ ಸ್ವರೂಪ ಇವುಗಳನ್ನು ಗಮನದಲ್ಲಿಟ್ಟುಕೊಂಡು ಈ ಪಠ್ಯಾಂಶಗಳನ್ನು ಸಿದ್ಧಪಡಿಸಿರುವುದರಿಂದ, ವಿದ್ಯಾರ್ಥಿಗಳಿಗೆ ಪರೀಕ್ಷೆಗಳಿಗೆ ಸಿದ್ಧರಾಗಲು ಅತ್ಯಂತ ಉಪಯುಕ್ತವಾಗಿವೆ.

    10ನೇ ತರಗತಿಯ ಸುಮಾರು 9 ಲಕ್ಷ ವಿದ್ಯಾರ್ಥಿಗಳು, 1ರಿಂದ – 10ನೇ ತರಗತಿ: ಸುಮಾರು 85 ಲಕ್ಷ ವಿದ್ಯಾರ್ಥಿಗಳು, ಪಿಯುಸಿ (ಪ್ರಥಮ & ದ್ವಿತೀಯ): ಸುಮಾರು 13 ಲಕ್ಷ ವಿದ್ಯಾರ್ಥಿಗಳು ದೀಕ್ಷಾ-ಆಪ್ ನ ಪ್ರಯೋಜನ ಪಡೆಯಲಿದ್ದಾರೆ. ಇಲಾಖೆಯು ಒದಗಿಸಿದ ಎಲ್ಲ ಪಠ್ಯಾಂಶಗಳನ್ನು `ದೀಕ್ಷಾ’ ವೇದಿಕೆಗೆ ಅಪ್ಲೋಡ್ ಮಾಡುವುದಕ್ಕೆ ಆರ್. ವಿ. ಎಂಜಿನಿಯರಿಂಗ್ ಕಾಲೇಜಿನ ಇನ್ನೂರಕ್ಕೂ ಹೆಚ್ಚು ವಿದ್ಯಾರ್ಥಿಗಳು ಸಹಾಯ ಮಾಡಿದ್ದಾರೆ.

    ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಇಲಾಖೆ ಪ್ರಧಾನ ಕಾರ್ಯದರ್ಶಿ ಎಸ್. ಆರ್. ಉಮಾಶಂಕರ್, ಪದವಿ ಪೂರ್ವ ಶಿಕ್ಷಣ ಇಲಾಖೆ ನಿರ್ದೇಶಕಿ ಆರ್. ಸ್ನೇಹಲ್ ಸೇರಿದಂತೆ ಶಿಕ್ಷಣ ಇಲಾಖೆ ಅಧಿಕಾರಿಗಳು ಭಾಗವಹಿಸಿದ್ದರು.

  • ‘ಮೌಲ್ಯಮಾಪನ ಮಾಡಲ್ಲ’ – ಪಿಯು ವಿಜ್ಞಾನ ಉಪನ್ಯಾಸಕರು

    ‘ಮೌಲ್ಯಮಾಪನ ಮಾಡಲ್ಲ’ – ಪಿಯು ವಿಜ್ಞಾನ ಉಪನ್ಯಾಸಕರು

    ಬೆಂಗಳೂರು: ಪಿಯುಸಿ ಮೌಲ್ಯಮಾಪನಕ್ಕೂ ಕೊರೊನಾ ಭೀತಿ ತಟ್ಟಿದ್ದು, ದ್ವಿತೀಯ ಪಿಯುಸಿ ವಿಜ್ಞಾನ ಉತ್ತರ ಪತ್ರಿಕೆ ಮೌಲ್ಯಮಾಪನ ಮಾಡದಿರಲು ಉಪನ್ಯಾಸಕರು ನಿರ್ಧಾರ ಮಾಡಿದ್ದಾರೆ.

    ಕೊರೊನಾ ಹಿನ್ನೆಲೆಯಲ್ಲಿ ಮೌಲ್ಯಮಾಪನ ಕೇಂದ್ರಗಳನ್ನು ಆಯಾ ಜಿಲ್ಲೆಗಳಲ್ಲಿ ವಿಕೇಂದ್ರಿಕರಣಗೊಳಿಸುವಂತೆ ಉಪನ್ಯಾಸಕರ ಸಂಘ ಮನವಿ ಮಾಡಿತ್ತು. ಕೊರೊನಾ ಸಮುದಾಯಕ್ಕೆ ಹರಡುತ್ತಿದೆ ಎಂದು ಈ ಮನವಿ ಮಾಡಲಾಗಿತ್ತು. ಆದರೆ ಸರ್ಕಾರ ಉಪನ್ಯಾಸಕರ ಬೇಡಿಕೆಗೆ ಈಡೇರಿಸದ ಕಾರಣ ನಾಳೆಯಿಂದ ಪ್ರಾರಂಭವಾಗಬೇಕಿದ್ದ ವಿಜ್ಞಾನ ವಿಷಯದ ಮೌಲ್ಯಮಾಪನ ಮಾಡದೇ ಇರಲು ಉಪನ್ಯಾಸಕರ ಸಂಘದಿಂದ ನಿರ್ಧಾರ ಮಾಡಿದೆ.

    ಬೆಂಗಳೂರಿಗೆ ಬಂದು ಮೌಲ್ಯಮಾಪನ ಮಾಡುವ ಉಪನ್ಯಾಸಕರಿಗೆ ಸರ್ಕಾರ ಸರಿಯಾದ ವ್ಯವಸ್ಥೆ ಮಾಡಿಲ್ಲ. ಹೀಗಾಗಿ ಕೊರೊನಾ ಸಮಯದಲ್ಲಿ ಸರ್ಕಾರದ ಈ ನಡೆಗೆ ಉಪನ್ಯಾಸಕರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಜೊತೆಗೆ ಜಿಲ್ಲಾ ಕೇಂದ್ರಗಳಲ್ಲಿ ಮೌಲ್ಯಮಾಪನಕ್ಕೆ ಅವಕಾಶ ಕೊಡಿ. ಇಲ್ಲವೇ ಕೊರೊನಾ ಕಡಿಮೆ ಆಗುವವರೆಗೂ ಮೌಲ್ಯಮಾಪನ ಸ್ಥಗಿತ ಮಾಡಿ ಎಂದು ಸರ್ಕಾರಕ್ಕೆ ಉಪನ್ಯಾಸಕರ ಸಂಘದ ಅಧ್ಯಕ್ಷ ನಿಂಗೇಗೌಡ ಆಗ್ರಹಿಸಿದ್ದಾರೆ.

  • ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯ ತಾತ್ಕಾಲಿಕ ವೇಳಾಪಟ್ಟಿ ಪ್ರಕಟ

    ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯ ತಾತ್ಕಾಲಿಕ ವೇಳಾಪಟ್ಟಿ ಪ್ರಕಟ

    ಬೆಂಗಳೂರು: ಪ್ರಸಕ್ತ ವರ್ಷದ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯ ತಾತ್ಕಾಲಿಕ ವೇಳಾಪಟ್ಟಿ ಕರ್ನಾಟಕ ಪಿಯುಸಿ ಬೋರ್ಡ್‌ನಿಂದ ಅಧಿಕೃತವಾಗಿ ಪ್ರಕಟವಾಗಿದೆ.

    ಆಕ್ಷೇಪಣೆ ಸಲ್ಲಿಸಲು ಪಿಯುಸಿ ಬೋರ್ಡ್ ಸೂಚನೆ ನೀಡಿದ್ದು, ಅಕ್ಟೋಬರ್ 31ರ ಒಳಗೆ ಆಕ್ಷೇಪಣೆ ಸಲ್ಲಿಸಲು ಅವಕಾಶವಿದೆ. 2020ರ ಮಾರ್ಚ್ 4ರಿಂದ ಮಾರ್ಚ್ 19ವರೆಗೆ ಪಿಯುಸಿ ಪರೀಕ್ಷೆ ನಡೆಯಲಿದೆ ಎಂದು ತಾತ್ಕಾಲಿಕ ವೇಳಾಪಟ್ಟಿ ಪ್ರಕಟಿಸಲಾಗಿದೆ.

    ಪಿಯುಸಿ ತಾತ್ಕಾಲಿಕಾ ವೇಳಾಪಟ್ಟಿ:
    ಮಾರ್ಚ್ 4 – ಇತಿಹಾಸ, ಭೌತಶಾಸ್ತ್ರ, ಬೇಸಿಕ್ ಗಣಿತ
    ಮಾರ್ಚ್ 5 – ತಮಿಳು, ತೆಲುಗು, ಮಲೆಯಾಳಂ, ಮರಾಠಿ, ಅರೇಬಿಕ್, ಫ್ರೆಂಚ್
    ಮಾರ್ಚ್ 6 – ಉರ್ದು, ಸಂಸ್ಕೃತ
    ಮಾರ್ಚ್ 7 – ತರ್ಕಶಾಸ್ತ್ರ, ಭೂಗರ್ಭಶಾಸ್ತ್ರ, ಶಿಕ್ಷಣ, ಗೃಹ ವಿಜ್ಞಾನ

    ಮಾರ್ಚ್ 9 – ಐಚ್ಛಿಕ ಕನ್ನಡ, ಲೆಕ್ಕಶಾಸ್ತ್ರ, ಗಣಿತ
    ಮಾರ್ಚ್ 10 – ಎನ್.ಎಸ್.ಕ್ಯೂ.ಎಫ್(NSQF)
    ಮಾರ್ಚ್ 11 – ರಾಜ್ಯಶಾಸ್ತ್ರ, ಸಂಖ್ಯಾಶಾಸ್ತ್ರ

    ಮಾರ್ಚ್ 12 – ವ್ಯವಹಾರ ಅಧ್ಯಯನ, ಸಮಾಜಶಾಸ್ತ್ರ, ರಸಾಯನಶಾಸ್ತ್ರ
    ಮಾರ್ಚ್ 13 – ಭೂಗೋಳಶಾಸ್ತ್ರ, ಕರ್ನಾಟಿಕ್ ಸಂಗೀತ, ಹಿಂದೂಸ್ಥಾನಿ ಸಂಗೀತ
    ಮಾರ್ಚ್ 14 – ಮನಃಶಾಸ್ತ್ರ, ಎಲೆಕ್ಟ್ರಾನಿಕ್ಸ್, ಗಣಕ ವಿಜ್ಞಾನ
    ಮಾರ್ಚ್ 16 – ಅರ್ಥಶಾಸ್ತ್ರ, ಜೀವಶಾಸ್ತ್ರ

    ಮಾರ್ಚ್ 17 – ಹಿಂದಿ
    ಮಾರ್ಚ್ 18 – ಕನ್ನಡ
    ಮಾರ್ಚ್ 19 – ಇಂಗ್ಲಿಷ್