Tag: security breach

  • ಅಶಿಸ್ತಿನ ವರ್ತನೆ – ಲೋಕಸಭೆಯ 14 ಸಂಸದರು ಸಸ್ಪೆಂಡ್‌

    ಅಶಿಸ್ತಿನ ವರ್ತನೆ – ಲೋಕಸಭೆಯ 14 ಸಂಸದರು ಸಸ್ಪೆಂಡ್‌

    ನವದೆಹಲಿ: ಸಂಸತ್ತಿನಲ್ಲಿ ಅಶಿಸ್ತಿನ ವರ್ತನೆ ತೋರಿದ್ದಕ್ಕಾಗಿ ರಾಜ್ಯಸಭೆಯ ಒಬ್ಬರು ಹಾಗೂ ಲೋಕಸಭೆಯ (Lok Sabha) 14 ಸಂಸದರನ್ನು ಅಮಾನತುಗೊಳಿಸಲಾಗಿದೆ.

    ಮಾಣಿಕಂ ಠಾಗೋರ್ (Manickam Tagore), ಕನಿಮೋಳಿ, ಪಿ.ಆರ್ ನಟರಾಜನ್, ವಿ.ಕೆ ಶ್ರೀಕಾಂತಂ, ಬೇನಿ ಬಹನ್, ಕೆ ಸುಬ್ರಹ್ಮಣ್ಯಂ, ಎಸ್‌.ಆರ್ ಪ್ರತಿಬನ್, ಎಸ್ ವೆಂಕಟೇಶನ್ ಮತ್ತು ಮೊಹಮ್ಮದ್ ಜಾವೇದ್, ಟಿ.ಎನ್ ಪ್ರತಾಪನ್ (TN Prathapan), ಹೈಬಿ ಈಡನ್, ಜ್ಯೋತಿಮಣಿ, ರಮ್ಯಾ ಹರಿದಾಸ್ ಮತ್ತು ಡೀನ್ ಕುರಿಯಾಕೋಸ್ ಕುರ್ಯಾಕಸ್ ಅಮಾನತುಗೊಂಡ ಸಂಸದರು.

    ಇದಕ್ಕೂ ಮುನ್ನವೇ ಲೋಕಸಭೆಯು ಐವರು ಕಾಂಗ್ರೆಸ್‌ ಸಂಸದರನ್ನು (Congress MPs) ಉಳಿದ ಅವಧಿಗೆ ಅಮಾನತುಗೊಳಿಸುವ ನಿರ್ಣಯ ಅಂಗೀಕರಿಸಿತ್ತು. ಸಂಸದೀಯ ವ್ಯವಹಾರಗಳ ಸಚಿವ ಪ್ರಹ್ಲಾದ್ ಜೋಶಿ ಅವರು ಐವರನ್ನು ಅಮಾನತುಗೊಳಿಸುವ ನಿರ್ಣಯ ಮಂಡಿಸಿದರು. ಇದನ್ನೂ ಓದಿ: ಸಿಕ್ಕಿಂನಲ್ಲಿ ಹಿಮಪಾತ – ಸಿಲುಕಿಕೊಂಡಿದ್ದ 800 ಪ್ರವಾಸಿಗರನ್ನು ರಕ್ಷಿಸಿದ ಸೇನೆ

    ಸದನದಲ್ಲಿ ಕಲಾಪಕ್ಕೆ ಅಡ್ಡಿಪಡಿಸಿದ ಕಾರಣಕ್ಕಾಗಿ ಪ್ರತಿಪಕ್ಷಗಳ 15 ಸದಸ್ಯರನ್ನು ಅಧಿವೇಶನದ ಉಳಿದ ಅವಧಿಯಿಂದ ಅಮಾನತುಗೊಳಿಸುವ ನಿರ್ಣಯ ತೆಗೆದುಕೊಳ್ಳಲಾಯಿತು. 15 ಸದಸ್ಯರ ಪೈಕಿ ಐವರು ಕಾಂಗ್ರೆಸ್‌ ಸಂಸದರಾಗಿದ್ದಾರೆ.

    ಸಂಸತ್ತಿನಲ್ಲಿ ಆದ ಭದ್ರತಾ ಲೋಪವನ್ನು (Security Breach in LokSabha) ಖಂಡಿಸಿ ಪ್ರತಿಪಕ್ಷದ ಸದಸ್ಯರು ಗದ್ದಲ ಎಬ್ಬಿಸಿದ್ದರು. ಇದರಿಂದ ಶಿಸ್ತು ಕ್ರಮ ಕೈಗೊಳ್ಳಲಾಗಿದೆ ಎಂದು ಮೂಲಗಳು ತಿಳಿಸಿವೆ. ಇದನ್ನೂ ಓದಿ: ಟಿಎಂಸಿ ಸಂಸದ ಡೆರೆಕ್ ಒಬ್ರಿಯಾನ್ ರಾಜ್ಯಸಭೆಯಿಂದ ಅಮಾನತು

  • ಸಂಸತ್ತಿನಲ್ಲಿ ಭದ್ರತಾ ಲೋಪ – 8 ಲೋಕಸಭಾ ಸಿಬ್ಬಂದಿಯ ಅಮಾನತು

    ಸಂಸತ್ತಿನಲ್ಲಿ ಭದ್ರತಾ ಲೋಪ – 8 ಲೋಕಸಭಾ ಸಿಬ್ಬಂದಿಯ ಅಮಾನತು

    ನವದೆಹಲಿ: ಲೋಕಸಭೆಯ ವೀಕ್ಷಕರ ಗ್ಯಾಲರಿಯಿಂದ ಇಬ್ಬರು ದುಷ್ಕರ್ಮಿಗಳು ಏಕಾಏಕಿ ಜಿಗಿದು ಸ್ಮೋಕ್ ಬಾಂಬ್ (Smoke Bomb) ದಾಳಿ ನಡೆಸಿದ ಪ್ರಕರಣದ ಕುರಿತು ಭದ್ರತಾ ಲೋಪಕ್ಕೆ (Security Breach) ಸಂಬಂಧಿಸಿದಂತೆ ಕನಿಷ್ಠ ಎಂಟು ಲೋಕಸಭಾ ಸಿಬ್ಬಂದಿಯನ್ನು (Lok Sabha Personnel) ಅಮಾನತುಗೊಳಿಸಲಾಗಿದೆ.

    ರಾಂಪಾಲ್, ಅರವಿಂದ್, ವೀರ್ ದಾಸ್, ಗಣೇಶ್, ಅನಿಲ್, ಪ್ರದೀಪ್, ವಿಮಿತ್ ಮತ್ತು ನರೇಂದ್ರ ಸೇರಿದಂತೆ ಒಟ್ಟು ಎಂಟು ಸಿಬ್ಬಂದಿಯನ್ನು ಅಮಾನತುಗೊಳಿಸಲಾಗಿದೆ. ಸಂಸತ್ (Parliament) ಭವನದಲ್ಲಿ ಲೋಕಸಭಾ ಕಲಾಪ ನಡೆಯುತ್ತಿದ್ದ ವೇಳೆ ಪಾಸ್ ಪಡೆದು ಬಂದಿದ್ದ ಇಬ್ಬರು ದುಷ್ಕರ್ಮಿಗಳು ಏಕಾಏಕಿ ಸಂದರ್ಶಕರ ಗ್ಯಾಲರಿಯಿಂದ ಹಾರಿಬಂದು ಸ್ಮೋಕ್ ಬಾಂಬ್ ಸಿಡಿಸಿದ್ದಾರೆ. ಇನ್ನಿಬ್ಬರು ಸಂಸತ್ತಿನ ಹೊರಗೆ ಸ್ಮೋಕ್ ಬಾಂಬ್ ಸಿಡಿಸಿದ್ದಾರೆ. ಪ್ರಕರಣದಲ್ಲಿ ಒಟ್ಟು ಆರು ಮಂದಿ ಭಾಗಿಯಾಗಿದ್ದು, ಐವರನ್ನು ಪೊಲೀಸರು ಬಂಧಿಸಿ ತನಿಖೆ ನಡೆಸುತ್ತಿದ್ದಾರೆ. ಇನ್ನೋರ್ವ ಆರೋಪಿ ಸದ್ಯ ತಲೆಮರೆಸಿಕೊಂಡಿದ್ದು, ಆತನ ಪತ್ತೆಗಾಗಿ ಶೋಧ ಮುಂದುವರಿದಿದೆ. ಇದನ್ನೂ ಓದಿ: ಸಂಸತ್‌ನಲ್ಲಿ ಸ್ಮೋಕ್ ಬಾಂಬ್- ಆರೋಪಿಗಳ ಮೇಲೆ ಯುಎಪಿಎ ಅಡಿ ಕೇಸ್ ದಾಖಲು

    ಬಂಧಿತ ಆರೋಪಿಗಳನ್ನು ಸಾಗರ್ ಶರ್ಮಾ, ಮನೋರಂಜನ್, ನೀಲಂ ಆಜಾದ್, ವಿಕ್ಕಿ ಶರ್ಮಾ ಮತ್ತು ಅಮೋಲ್ ಶಿಂಧೆ ಎಂದು ಗುರುತಿಸಲಾಗಿದೆ. ಆರೋಪಿಗಳ ವಿರುದ್ಧ ಭಯೋತ್ಪಾದನಾ ವಿರೋಧಿ ಕಾನೂನು, ಕಾನೂನುಬಾಹಿರ ಚಟುವಟಿಕೆಗಳ (ತಡೆಗಟ್ಟುವಿಕೆ) ಕಾಯ್ದೆ (ಯುಎಪಿಎ) ಮತ್ತು ಭಾರತೀಯ ದಂಡ ಸಂಹಿತೆಯ ಸೆಕ್ಷನ್‌ಗಳ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಮತ್ತೋರ್ವ ಆರೋಪಿ ಲಲಿತ್ ಝಾ ನೀಲಂ ಮತ್ತು ಅಮೋಲ್ ಶಿಂಧೆ ಸಂಸತ್ತಿನ ಹೊರಗೆ ಸ್ಮೋಕ್ ಬಾಂಬ್ ಸಿಡಿಸಿದ ವೀಡಿಯೊಗಳನ್ನು ಚಿತ್ರೀಕರಿಸಿದ್ದು, ಮೊಬೈಲ್‌ನೊಂದಿಗೆ ಸ್ಥಳದಿಂದ ಪರಾರಿಯಾಗಿದ್ದಾನೆ. ಇನ್ನೋರ್ವ ಆರೋಪಿಯಾಗಿರುವ ವಿಕ್ಕಿ ಶರ್ಮಾ ಎಲ್ಲಾ ಆರೋಪಿಗಳಿಗೆ ಗುರ್ಗೋನ್‌ನಲ್ಲಿರುವ ತನ್ನ ಮನೆಯಲ್ಲಿ ತಂಗಲು ಅವಕಾಶ ಕಲ್ಪಿಸಿದ್ದ ಎಂದು ತಿಳಿದುಬಂದಿದೆ. ಇದನ್ನೂ ಓದಿ: ಒಂದಲ್ಲ ಮೂರು ಬಾರಿ ಮನೋರಂಜನ್‌ಗೆ ಪ್ರತಾಪ್‌ ಸಿಂಹ ಕಚೇರಿಯಿಂದ ಸಿಕ್ಕಿತ್ತು ಪಾಸ್‌!

    ಘಟನೆಯ ಬಳಿಕ ಸಂಸತ್ತಿನ ಒಳಗೆ ಸಂಸದರು ಸ್ಮೋಕ್ ಬಾಂಬ್ ದಾಳಿ ಮಾಡಿದ ಆರೋಪಿಯನ್ನು ಹಿಡಿದು ಥಳಿಸಿದ್ದಾರೆ. ಇನ್ನು ಈ ಎಲ್ಲಾ ಆರೋಪಿಗಳು ವಿವಿಧ ರಾಜ್ಯದವರಾಗಿದ್ದು, ಭಗತ್ ಸಿಂಗ್ ಫ್ಯಾನ್ಸ್ ಕ್ಲಬ್ ಎಂಬ ಹೆಸರಿನ ಗ್ರೂಪ್‌ನಲ್ಲಿ ಪರಸ್ಪರ ಸಂಪರ್ಕ ಹೊಂದಿದ್ದರು ಎನ್ನಲಾಗಿದೆ. ಅಲ್ಲದೇ ಒಂದೂವರೆ ವರ್ಷದ ಹಿಂದೆಯೇ ಮೈಸೂರಿನಲ್ಲಿ ಭೇಟಿಯಾಗಿ ಕೃತ್ಯದ ಬಗ್ಗೆ ಯೋಜನೆ ರೂಪಿಸಿದ್ದರು ಎಂದು ತನಿಖೆಯಿಂದ ತಿಳಿದುಬಂದಿದೆ. ಇದನ್ನೂ ಓದಿ: ಅಲಹಾಬಾದ್ ವಿವಿ ಹಾಸ್ಟೆಲ್ ಕೊಠಡಿಯಲ್ಲಿ ಬಾಂಬ್ ತಯಾರಿಸುತ್ತಿದ್ದಾಗ ಸ್ಫೋಟಗೊಂಡು ವಿದ್ಯಾರ್ಥಿಗೆ ಗಾಯ

  • ಸಂಸತ್‌ನಲ್ಲಿ ಸ್ಮೋಕ್ ಬಾಂಬ್- ಆರೋಪಿಗಳ ಮೇಲೆ ಯುಎಪಿಎ ಅಡಿ ಕೇಸ್ ದಾಖಲು

    ಸಂಸತ್‌ನಲ್ಲಿ ಸ್ಮೋಕ್ ಬಾಂಬ್- ಆರೋಪಿಗಳ ಮೇಲೆ ಯುಎಪಿಎ ಅಡಿ ಕೇಸ್ ದಾಖಲು

    ನವದೆಹಲಿ: ಸಂಸತ್‌ನಲ್ಲಿ (Parliament) ಬುಧವಾರ ನಡೆದ ಭದ್ರತಾ ಉಲ್ಲಂಘನೆಗೆ (Security Breach) ಸಂಬಂಧಿಸಿಂತೆ ಒಟ್ಟು 5 ಜನರನ್ನು ಬಂಧಿಸಿ ವಿಚಾರಣೆ ನಡೆಸುತ್ತಿದ್ದು, ಆರೋಪಿಗಳ ವಿರುದ್ಧ ಭಯೋತ್ಪಾದನಾ ವಿರೋಧಿ ಕಾನೂನು, ಕಾನೂನುಬಾಹಿರ ಚಟುವಟಿಕೆಗಳು (ತಡೆಗಟ್ಟುವಿಕೆ) ಕಾಯ್ದೆ (UAPA) ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಅಲ್ಲದೇ ಆರೋಪಿಗಳನ್ನು ಇಂದು ನ್ಯಾಯಾಲಯದ ಮುಂದೆ ಹಾಜರುಪಡಿಸಲಾಗುವುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

    ಲೋಕಸಭೆಯಲ್ಲಿ (Lok Sabha) ನಡೆದ ಸ್ಮೋಕ್ ಬಾಂಬ್ ಪ್ರಕರಣದಲ್ಲಿ ಒಟ್ಟು 6 ಮಂದಿ ಭಾಗಿಯಾಗಿದ್ದು, ಮೈಸೂರಿನ ನಿವಾಸಿ ಮನೋರಂಜನ್ ಸೇರಿದಂತೆ ಐವರನ್ನು ಬಂಧಿಸಲಾಗಿದೆ. ಅವರೆಲ್ಲರೂ ಸಾಮಾಜಿಕ ಜಾಲತಾಣದಲ್ಲಿ ಪರಸ್ಪರ ಸಂಪರ್ಕ ಹೊಂದಿದ್ದರು ಎಂದು ತಿಳಿದುಬಂದಿದೆ. ಮೈಸೂರಿನ ವಿಜಯನಗರ ನಿವಾಸಿ ಎಂಜಿನಿಯರಿಂಗ್ ಪದವೀಧರ ಮನೋರಂಜನ್, ಲಕ್ನೋದ ಸಾಗರ್ ಶರ್ಮಾ, ಹರಿಯಾಣದ ಹಿಸಾರ್‌ನ ನೀಲಂ, ಮಹಾರಾಷ್ಟ್ರದ ಲಾತೂರ್‌ನ ಅಮೋಲ್ ಶಿಂಧೆ ಹಾಗೂ ವಿಶಾಲ್ ಎಂಬವರನ್ನು ಪೊಲೀಸರು ಬಂಧಿಸಿದ್ದು, ಇನ್ನೋರ್ವ ಆರೋಪಿಗಾಗಿ ಶೋಧ ಮುಂದುವರೆದಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಉನ್ನತ ಮಟ್ಟದ ತನಿಖೆಗೆ ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಆದೇಶಿಸಿದ್ದಾರೆ. ಇದನ್ನೂ ಓದಿ: ಅಲಹಾಬಾದ್ ವಿವಿ ಹಾಸ್ಟೆಲ್ ಕೊಠಡಿಯಲ್ಲಿ ಬಾಂಬ್ ತಯಾರಿಸುತ್ತಿದ್ದಾಗ ಸ್ಫೋಟಗೊಂಡು ವಿದ್ಯಾರ್ಥಿಗೆ ಗಾಯ

    ಘಟನೆಯಲ್ಲಿ ಸಾಗರ್ ಶರ್ಮಾ ಮತ್ತು ಮನೋರಂಜನ್ ಸಂಸತ್‌ನ ಒಳಗೆ ಹಳದಿ ಸ್ಮೋಕ್ ಬಾಂಬ್ ಸಿಡಿಸಿದರೆ ಸಂಸತ್ತಿನ ಹೊರಗೆ ನೀಲಂ ಮತ್ತು ಅಮೋಲ್ ಶಿಂಧೆ ಕೆಂಪು ಮತ್ತು ಹಳದಿ ಸ್ಮೋಕ್ ಬಾಂಬ್ ಸಿಡಿಸಿದ್ದಾರೆ. ಇನ್ನಿಬ್ಬರು ಆರೋಪಿಗಳಾದ ವಿಶಾಲ್ ಮತ್ತು ಲಲಿತ್ ಝಾ ಗುರ್ಗಾಂವ್ ಮೂಲದವರು. ಲಲಿತ್ ಝಾ ತಮ್ಮ ಮೊಬೈಲ್‌ನಲ್ಲಿ ಘಟನೆಯ ದೃಶ್ಯಾವಳಿಗಳನ್ನು ಸೆರೆಹಿಡಿದು ಮೊಬೈಲ್ ಜೊತೆಗೆ ಅಲ್ಲಿಂದ ಪರಾರಿಯಾಗಿದ್ದಾನೆ. ಇನ್ನು ವಿಶಾಲ್ ಇತರೆ ಆರೋಪಿಗಳಿಗೆ ಆಶ್ರಯ ನೀಡಿದ್ದ ಎಂದು ತಿಳಿದುಬಂದಿದೆ. ಇದನ್ನೂ ಓದಿ: 45 ನಿಮಿಷಗಳ ಪಾಸ್‌ ಪಡೆದು 2 ಗಂಟೆ ಗ್ಯಾಲರಿಯಲ್ಲಿ ಕುಳಿತಿದ್ರು!

    ದೆಹಲಿ ಪೊಲೀಸರ ಈವರೆಗಿನ ತನಿಖೆಯಲ್ಲಿ ಎಲ್ಲಾ ಆರೋಪಿಗಳು ಭಗತ್ ಸಿಂಗ್ ಫ್ಯಾನ್ಸ್ ಕ್ಲಬ್ ಎಂಬ ಗ್ರೂಪ್‌ನಲ್ಲಿ ಸಂಪರ್ಕ ಹೊಂದಿದ್ದು, ಒಂದೂವರೆ ವರ್ಷಗಳ ಹಿಂದೆಯೇ ಮೈಸೂರಿನಲ್ಲಿ ಭೇಟಿಯಾಗಿ ಯೋಜನೆ ಬಗ್ಗೆ ಚರ್ಚೆ ನಡೆಸಿದ್ದರು ಎನ್ನಲಾಗುತ್ತಿದೆ. ಇದನ್ನೂ ಓದಿ: ಸೋಶಿಯಲ್ ಮೀಡಿಯಾ ಖಾತೆ ಇಲ್ಲ – ಮನೋರಂಜನ್ ಬೆಂಗಳೂರು ನೆಟ್‌ವರ್ಕ್ ಯಾವುದು?

    ರೈತರ ಪ್ರತಿಭಟನೆ, ಮಣಿಪುರ ಬಿಕ್ಕಟ್ಟು ಮತ್ತು ನಿರುದ್ಯೋಗದಂತಹ ಸಮಸ್ಯೆಯಿಂದ ನಾವು ಬೇಸತ್ತಿದ್ದೇವೆ. ಈ ಕಾರಣಕ್ಕೆ ಕೃತ್ಯವನ್ನು ನಡೆಸಿದ್ದೇವೆ ಎಂದು ಆರೋಪಿ ಅಮೋಲ್ ಶಿಂಧೆ ವಿಚಾರಣಾ ಸಮಯದಲ್ಲಿ ತನಿಖಾಧಿಕಾರಿಗಳಿಗೆ ತಿಳಿಸಿದ್ದಾನೆ. ಇನ್ನೋರ್ವ ಆರೋಪಿ ಮಹಿಳೆ ನೀಲಂ ಮಾಧ್ಯಮದವರೊಂದಿಗೆ ಮಾತನಾಡಿದ್ದು, ಭಾರತ ಸರ್ಕಾರ ದಬ್ಬಾಳಿಕೆ ನಡೆಸುತ್ತಿದೆ. ನಾವು ನಮ್ಮ ಹಕ್ಕುಗಳಿಗೆ ಧ್ವನಿ ಎತ್ತಿದಾಗ ನಮ್ಮನ್ನು ಜೈಲಿಗೆ ಹಾಕುತ್ತಾರೆ. ಹೀಗೆ ನಮ್ಮ ಧ್ವನಿಯನ್ನು ಹತ್ತಿಕ್ಕುವ ಪ್ರಯತ್ನ ಮಾಡುತ್ತಿದ್ದಾರೆ. ನಾವು ಯಾವುದೇ ಸಂಸ್ಥೆಗೆ ಸೇರಿಲ್ಲ. ನಾವು ನಿರುದ್ಯೋಗಿಗಳು ಎಂದು ತಿಳಿಸಿದ್ದಾಳೆ. ಇದನ್ನೂ ಓದಿ: ಒಂದಲ್ಲ ಮೂರು ಬಾರಿ ಮನೋರಂಜನ್‌ಗೆ ಪ್ರತಾಪ್‌ ಸಿಂಹ ಕಚೇರಿಯಿಂದ ಸಿಕ್ಕಿತ್ತು ಪಾಸ್‌!

  • ಸೋಶಿಯಲ್ ಮೀಡಿಯಾ ಖಾತೆ ಇಲ್ಲ – ಮನೋರಂಜನ್ ಬೆಂಗಳೂರು ನೆಟ್‌ವರ್ಕ್ ಯಾವುದು?

    ಸೋಶಿಯಲ್ ಮೀಡಿಯಾ ಖಾತೆ ಇಲ್ಲ – ಮನೋರಂಜನ್ ಬೆಂಗಳೂರು ನೆಟ್‌ವರ್ಕ್ ಯಾವುದು?

    ಮೈಸೂರ: ಲೋಕಸಭೆಯ ಕಲಾಪದ ನಡೆಯುವಾಗಲೇ ಸ್ಮೋಕ್ ಬಾಂಬ್ (Smoke Bomb) ಎಸೆದಿದ್ದ ಮನೋರಂಜನ್ (Manoranjan) ಮೈಸೂರು (Mysuru)  ಮೂಲದವನಾಗಿದ್ದರೂ ಹಲವು ವರ್ಷಗಳಿಂದ ಮೈಸೂರಿನಲ್ಲಿ ತನ್ನ ಸ್ನೇಹಿತರ ಸಂಪರ್ಕವನ್ನೇ ಕಳೆದುಕೊಂಡಿದ್ದ ಎಂಬುದು ಬೆಳಕಿಗೆ ಬಂದಿದೆ.

    ಮನೋರಂಜನ್ ಮೈಸೂರಿನ ಎಲ್ಲಾ ಸ್ನೇಹಿತರ ಸಂಪರ್ಕ ಕಳೆದುಕೊಂಡಿದ್ದ. ಬೆಂಗಳೂರಿನಲ್ಲೇ (Bengaluru) ತನ್ನ ಸ್ನೇಹಿತರ ನೆಟ್‌ವರ್ಕ್ ಇಟ್ಟುಕೊಂಡಿದ್ದ. ಮೈಸೂರಿನಲ್ಲಿ ಕಳೆದ 5-6 ವರ್ಷಗಳಿಂದ ಯಾವುದೇ ಸ್ನೇಹಿತರ ಸಂಪರ್ಕದಲ್ಲಿ ಇರಲಿಲ್ಲ. ಈ ಹಿನ್ನೆಲೆ ಪೊಲೀಸರು ಬೆಂಗಳೂರಿನಲ್ಲಿ ಅವನ ವಾಸಸ್ಥಳದ ಪರಿಶೀಲನೆಗೆ ತೆರಳಿದ್ದಾರೆ. ಜೊತೆಗೆ ಮನೋರಂಜನ್‌ನ ಬೆಂಗಳೂರಿನಲ್ಲಿರುವ ಸ್ನೇಹಿತರ ಹುಡುಕಾಟ ನಡೆಸಲಾಗುತ್ತಿದೆ. ಇದನ್ನೂ ಓದಿ: ಒಂದಲ್ಲ ಮೂರು ಬಾರಿ ಮನೋರಂಜನ್‌ಗೆ ಪ್ರತಾಪ್‌ ಸಿಂಹ ಕಚೇರಿಯಿಂದ ಸಿಕ್ಕಿತ್ತು ಪಾಸ್‌!

    ಇಷ್ಟು ಮಾತ್ರವಲ್ಲದೇ ಮನೋರಂಜನ್ ಹೆಸರಿನಲ್ಲಿ ಯಾವುದೇ ಅಧಿಕೃತವಾಧ ಸೋಷಿಯಲ್ ಮೀಡಿಯಾ ಖಾತೆ ಇಲ್ಲ ಎಂಬುದು ತಿಳಿದು ಬಂದಿದೆ. ಆದರೆ ಸೋಷಿಯಲ್ ಮೀಡಿಯಾದಲ್ಲಿ ಇರದ ಮನೋರಂಜನ್‌ಗೆ ಉತ್ತರ ಭಾರತದವರ ಪರಿಚಯ ಹೇಗಾಯಿತು ಎಂಬುದೇ ದೊಡ್ಡ ಯಕ್ಷ ಪ್ರಶ್ನೆಯಾಗಿದೆ. ಆದರೆ ಆತ ನಕಲಿ ಅಕೌಂಟ್ ಹೊಂದಿರುವ ಸಾಧ್ಯತೆ ಇದ್ದು, ವ್ಯವಸ್ಥಿತ ಪ್ಲ್ಯಾನ್ ಮಾಡಿಯೇ ಸಂಸತ್ ಭವನಕ್ಕೆ ನುಗ್ಗಿರುವ ಶಂಕೆ ವ್ಯಕ್ತವಾಗಿದೆ. ಇದನ್ನೂ ಓದಿ: ಸಂಸತ್‍ನಲ್ಲಿ ಸ್ಮೋಕ್ ಬಾಂಬ್ ಎಸೆದಿದ್ದ ಮನೋರಂಜನ್ ಯಾರು?, ಈತನ ಹಿನ್ನೆಲೆಯೇನು?

  • ವಾಕಿಂಗ್ ಹೋಗಿದ್ದಾಗ ಭದ್ರತಾ ಲೋಪ – ಬೈಕ್ ಡಿಕ್ಕಿಯಿಂದ ಸ್ವಲ್ಪದರಲ್ಲೇ ಪಾರಾದ ನಿತೀಶ್ ಕುಮಾರ್

    ವಾಕಿಂಗ್ ಹೋಗಿದ್ದಾಗ ಭದ್ರತಾ ಲೋಪ – ಬೈಕ್ ಡಿಕ್ಕಿಯಿಂದ ಸ್ವಲ್ಪದರಲ್ಲೇ ಪಾರಾದ ನಿತೀಶ್ ಕುಮಾರ್

    – ಅಪಘಾತದಿಂದ ತಪ್ಪಿಸಿಕೊಳ್ಳಲು ಫುಟ್‌ಪಾತ್‌ಗೆ ಜಿಗಿದ ಬಿಹಾರ ಸಿಎಂ

    ಪಾಟ್ನಾ: ಬಿಹಾರದ ಮುಖ್ಯಮಂತ್ರಿ (Bihar CM) ನಿತೀಶ್ ಕುಮಾರ್ (Nitish Kumar) ಅವರು ಬೆಳಗ್ಗೆ ವಾಕಿಂಗ್ ಹೋಗಿದ್ದಾಗ ಭದ್ರತಾ ಲೋಪ (Security Breach) ಸಂಭವಿಸಿದೆ. ವೇಗವಾಗಿ ಬಂದ ಬೈಕ್‌ಗೆ (Bike) ಡಿಕ್ಕಿ ಹೊಡೆಯುವುದರಿಂದ ಬಿಹಾರದ ಸಿಎಂ ಸ್ವಲ್ಪದರಲ್ಲೇ ತಪ್ಪಿಸಿಕೊಂಡಿದ್ದಾರೆ.

    ನಿತೀಶ್ ಕುಮಾರ್ ಅವರು ಪಾಟ್ನಾದ ತಮ್ಮ ನಿವಾಸದ ಬಳಿ ಬೆಳಗ್ಗೆ ವಾಕಿಂಗ್ ತೆರಳಿದ್ದಾಗ ಬೈಕ್ ಸವಾರನೊಬ್ಬ ಅವರ ಭದ್ರತಾ ಕವಚವನ್ನು ಬೇಧಿಸಿದ್ದಾನೆ. ಮಾತ್ರವಲ್ಲದೇ ನಿತೀಶ್ ಕುಮಾರ್ ಇದ್ದೆಡೆಗೆ ಬೈಕ್ ಅನ್ನು ನುಗ್ಗಿಸಿದ್ದಾನೆ. ಈ ವೇಳೆ ನಿತೀಶ್ ಕುಮಾರ್ ಅವರು ಬೈಕ್ ಡಿಕ್ಕಿಯಿಂದ ತಪ್ಪಿಸಿಕೊಳ್ಳಲು ಫುಟ್‌ಪಾತ್‌ಗೆ ಜಿಗಿದಿದ್ದಾರೆ. ಇದನ್ನೂ ಓದಿ: ದೆಹಲಿಯ ಕೋಚಿಂಗ್ ಸೆಂಟರ್‌ನಲ್ಲಿ ಭಾರೀ ಬೆಂಕಿ – ಕಿಟಕಿಯಿಂದ ಹಾರಿ ಜೀವ ಉಳಿಸಿಕೊಂಡ ವಿದ್ಯಾರ್ಥಿಗಳು

    ಘಟನೆ ನಡೆದ ತಕ್ಷಣ ಸ್ಪೆಷಲ್ ಸೆಕ್ಯುರಿಟಿ ಗ್ರೂಪ್ (SSG) ಕಮಾಂಡೋಗಳು ಹಾಗೂ ಪಾಟ್ನಾ ಪೊಲೀಸರು ಸೇರಿದಂತೆ ಭದ್ರತಾ ಅಧಿಕಾರಿಗಳು ಬೈಕ್ ಸವಾರನನ್ನು ಬಂಧಿಸಿ, ತೀವ್ರ ವಿಚಾರಣೆಗೆ ಒಳಪಡಿಸಿದ್ದಾರೆ. ಬೈಕ್ ಸವಾರನ ಅನುಮಾನಾಸ್ಪದ ವರ್ತನೆಗೆ ಆತನ ಹಿಂದಿನ ಚಟುವಟಿಕೆಗಳನ್ನು ಪತ್ತೆ ಹಚ್ಚಲು ಸ್ಥಳೀಯ ಸಿಸಿಟಿವಿ ದೃಶ್ಯಗಳನ್ನು ಪರಿಶೀಲಿಸಲಾಗುತ್ತಿದೆ.

    2018ರಲ್ಲಿ ನಿತೀಶ್ ಕುಮಾರ್ ಅವರಿಗೆ ಝಡ್ ಪ್ಲಸ್ ಭದ್ರತೆಯನ್ನು ನೀಡಲಾಯಿತು. ಘಟನೆಯ ಬಳಿಕ ಎಸ್‌ಎಸ್‌ಜಿ ಕಮಾಂಡೆಂಟ್ ಹಾಗೂ ಪಾಟ್ನಾ ಹಿರಿಯ ಪೊಲೀಸ್ ವರಿಷ್ಠಾಧಿಕಾರಿ (SSP) ಅವರನ್ನು ಮುಖ್ಯಮಂತ್ರಿ ನಿವಾಸಕ್ಕೆ ಕರೆಸಲಾಗಿದೆ. ಘಟನೆ ಕುರಿತು ಹೆಚ್ಚಿನ ತನಿಖೆಗಳು ನಡೆಯುತ್ತಿವೆ. ಇದನ್ನೂ ಓದಿ: ಬ್ರಿಜ್ ಭೂಷಣ್ ವಿರುದ್ಧ 1,000 ಪುಟಗಳ ಚಾರ್ಜ್‌ಶೀಟ್ ಸಲ್ಲಿಕೆ – ಪೋಕ್ಸೊ ಕೇಸ್‌ ರದ್ದಿಗೆ ದೆಹಲಿ ಪೊಲೀಸರ ಶಿಫಾರಸ್ಸು

  • ಮೋದಿಗೆ ಹಾರ ನೀಡಲು ಬಂದಿದ್ದು 10ರ ಬಾಲಕ – ಭದ್ರತೆಯಲ್ಲಿ ಲೋಪ ಆಗಿಲ್ಲ

    ಮೋದಿಗೆ ಹಾರ ನೀಡಲು ಬಂದಿದ್ದು 10ರ ಬಾಲಕ – ಭದ್ರತೆಯಲ್ಲಿ ಲೋಪ ಆಗಿಲ್ಲ

    ಹುಬ್ಬಳ್ಳಿ: ನಗರದಲ್ಲಿ ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು ರೋಡ್ ಶೋ (Road Show) ನಡೆಸಿದ್ದು, ಈ ವೇಳೆ ಭದ್ರತಾ ಲೋಪವಾಗಿರುವ (Security Breach) ವರದಿ ಕೇಳಿಬಂದಿತ್ತು. ಪ್ರಧಾನಿಯೆಡೆಗೆ ಹೂ ಹಿಡಿದುಕೊಂಡು ಬಂದಿದ್ದು 10 ವರ್ಷದ ಬಾಲಕನಾಗಿದ್ದ (Boy). ಆದರೆ ಇಲ್ಲಿ ಯಾವುದೇ ರೀತಿಯ ಭದ್ರತಾ ಲೋಪ ಆಗಿಲ್ಲ ಎಂದು ನಗರ ಪೊಲೀಸ್ ಆಯುಕ್ತರು ಸ್ಪಷ್ಟಪಡಿಸಿದ್ದಾರೆ.

    ಈ ಬಗ್ಗೆ ಮಾಹಿತಿ ನೀಡಿರುವ ನಗರ ಪೊಲೀಸ್ ಆಯುಕ್ತ ರಮಣ್ ಗುಪ್ತಾ, ಬ್ಯಾರಿಕೇಡ್ ಹಾರಿದ್ದ ಬಾಲಕ ಮೋದಿಯನ್ನು ನೋಡಿದ ಉತ್ಸಾಹದಲ್ಲಿ ಈ ರೀತಿ ಮಾಡಿದ್ದಾನೆ. ಈ ರೀತಿ ಲಕ್ಷಾಂತರ ಜನರು ಸೇರುವ ಸಂದರ್ಭ ಬ್ಯಾರಿಕೇಡ್ ಹಾರುವಂತಹ ಘಟನೆ ಸಾಮಾನ್ಯ. ಆತ ಸಣ್ಣ ಬಾಲಕನಾಗಿದ್ದರಿಂದ ಬಹುಶಃ ಆತನ ತಿಳುವಳಿಕೆ ತಪ್ಪಿ ಈ ರೀತಿ ಮಾಡಿದ್ದಾನೆ. ಇಲ್ಲಿ ಯಾವುದೇ ಭದ್ರತಾ ಲೋಪ ಆಗಿಲ್ಲ. ಈ ಬಗ್ಗೆ ಸೂಕ್ತ ಪರಿಶೀಲನೆ ನಡೆಯುತ್ತಿದೆ ಎಂದು ತಿಳಿಸಿದ್ದಾರೆ.

    ಘಟನೆಯೇನು?
    ಪ್ರಧಾನಿ ಮೋದಿ ರೋಡ್ ಶೋ ವೇಳೆ ಒಂದು ಕ್ಷಣ ಆತಂಕದ ಪರಿಸ್ಥಿತಿ ನಿರ್ಮಾಣ ಆಗಿತ್ತು. ಹುಬ್ಬಳ್ಳಿಯ ಗೋಕುಲ್ ರಸ್ತೆಯಲ್ಲಿ ಮೋದಿ ರೋಡ್ ಶೋ ನಡೆಯುವಾಗ ಇದ್ದಕ್ಕಿದ್ದಂತೆ ಬ್ಯಾರಿಕೇಡ್ ಹಾರಿದ ಬಾಲಕನೊಬ್ಬ ಮೋದಿಗೆ ಹೂವಿನ ಹಾರ ಹಾಕಲು ಮುಂದಾಗಿದ್ದ. ಆದರೆ ಇದರಿಂದ ಏನೂ ಗಾಬರಿಗೊಳ್ಳದ ಮೋದಿ, ನಗುನಗುತ್ತಲೇ ಹೂವಿನ ಹಾರವನ್ನು ತೆಗೆದುಕೊಂಡಿದ್ದಾರೆ. ಬಳಿಕ ಭದ್ರತಾ ಸಿಬ್ಬಂದಿಗೆ ಹಸ್ತಾಂತರ ಮಾಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಇದನ್ನೂ ಓದಿ: ರನ್‌ವೇ ಸಿದ್ದವಾಗಿದೆ, ಕೌಶಲ್ಯಗಳನ್ನು ಕಲಿತು ಟೇಕಾಫ್‌ ಆಗಿ – ಯುವ ಜನತೆಗೆ ಮೋದಿ ಕರೆ

    ಘಟನೆ ನಡೆದ ತಕ್ಷಣವೇ ಬಾಲಕನನ್ನು ಎಸ್‌ಪಿಜಿ ಸಿಬ್ಬಂದಿ ಹುಬ್ಬಳ್ಳಿ ಪೊಲೀಸರ ಕೈಗೆ ಒಪ್ಪಿಸಿದ್ದರು. ಈ ಘಟನೆಯನ್ನು ಗೃಹ ಇಲಾಖೆ ಗಂಭಿರವಾಗಿ ಪರಿಗಣಿಸಿದೆ ಹಾಗೂ ಸಮಗ್ರ ವರದಿ ಕೇಳಿದೆ. ಇತ್ತ ಗೋಕುಲ ಠಾಣೆ ಪೊಲೀಸರು, ತೊರವಿಹಕ್ಕಲದ 10 ವರ್ಷದ ಬಾಲಕ ಕುನಾಲ್ ಸುರೇಶ್‌ನನ್ನು ಅವರ ಪೋಷಕರ ಸಮ್ಮುಖದಲ್ಲಿ ವಿಚಾರಣೆಗೆ ಒಳಪಡಿಸಿದ್ದಾರೆ ಎಂದು ವರದಿಯಾಗಿದೆ. ಇದನ್ನೂ ಓದಿ: ಮೋದಿ ರೋಡ್ ಶೋ ವೇಳೆ ಭದ್ರತಾ ಲೋಪ – ಬ್ಯಾರಿಕೇಡ್ ಹಾರಿ ಕಾರಿನತ್ತ ನುಗ್ಗಿದ ಯುವಕ

    Live Tv
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k

  • ಮೋದಿ ರೋಡ್ ಶೋ ವೇಳೆ ಭದ್ರತಾ ಲೋಪ – ಬ್ಯಾರಿಕೇಡ್ ಹಾರಿ ಕಾರಿನತ್ತ ನುಗ್ಗಿದ ಬಾಲಕ

    ಮೋದಿ ರೋಡ್ ಶೋ ವೇಳೆ ಭದ್ರತಾ ಲೋಪ – ಬ್ಯಾರಿಕೇಡ್ ಹಾರಿ ಕಾರಿನತ್ತ ನುಗ್ಗಿದ ಬಾಲಕ

    ಹುಬ್ಬಳ್ಳಿ: ಪ್ರಧಾನಿ ನರೇಂದ್ರ ಮೋದಿ (Narendra Modi) ಅವರ ಹುಬ್ಬಳ್ಳಿಯಲ್ಲಿ (Hubballi) ರೋಡ್ ಶೋ (Road Show) ವೇಳೆ ಭದ್ರತಾ ಲೋಪ (Security Breach) ನಡೆದಿದೆ.

    ಹುಬ್ಬಳ್ಳಿಯಲ್ಲಿ ಮೋದಿ ರೋಡ್ ಶೋ ನಡೆಸುತ್ತಿದ್ದ ವೇಳೆ ಬಾಲಕನೊಬ್ಬ ಬ್ಯಾರಿಕೇಡ್ ಹಾರಿ ಮೋದಿ ಕಾರಿನತ್ತ ನುಗ್ಗಿದ್ದಾನೆ. ಮೋದಿ ಭದ್ರತೆಗೆಂದು ಹಾಕಲಾಗಿದ್ದ ಬ್ಯಾರಿಕೇಡ್ ಅನ್ನು ಹಾರಿದ ಬಾಲಕ ಹೂವಿನ ಹಾರವನ್ನು ಹಿಡಿದುಕೊಂಡು ಮೋದಿಯತ್ತ ಓಡಿದ್ದಾನೆ. ಇದನ್ನೂ ಓದಿ: ವೇದಿಕೆಯಲ್ಲಿ ಒಂದೇ ಹಣ್ಣು ಹಂಚಿಕೊಂಡು ತಿಂದ ಸಿದ್ದರಾಮಯ್ಯ, ಹೆಚ್.ವಿಶ್ವನಾಥ್

    ತನ್ನ ಕೈಯಾರೇ ಹಾರವನ್ನು ಮೋದಿಗೆ ಕೊಡಲು ಆತ ಪ್ರಯತ್ನಿಸಿದ್ದು, ತಕ್ಷಣವೇ ಪೊಲೀಸರು ಆತನನ್ನು ತಡೆದಿದ್ದಾರೆ. ಮಾಧ್ಯಮಗಳ ಕ್ಯಾಮೆರಾದಲ್ಲಿ ಸೆರೆಯಾಗಿರುವ ದೃಶ್ಯದಲ್ಲಿ ಬಾಲಕ ಹೂವಿನ ಹಾರವನ್ನು ಮೋದಿ ಕಾರಿನ ಬಾನೆಟ್ ಮೇಲೆ ಇರಿಸಲು ಪ್ರಯತ್ನಿಸಿದ್ದಾನೆ. ಆದರೆ ತಕ್ಷಣವೇ ಭದ್ರತಾ ತಂಡ ಆತನನ್ನು ತಡೆದಿದೆ. ಇದನ್ನೂ ಓದಿ: ಮೆಟ್ರೋ ಸುರಂಗ ಕಾಮಗಾರಿ – ಬೈಕಿನಲ್ಲಿ ತೆರಳುತ್ತಿದ್ದಾಗ ದಿಢೀರ್ ಕುಸಿದ ರಸ್ತೆ

    Live Tv
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k

  • ಪ್ರಧಾನಿ ಮೋದಿ ಪ್ರಯಾಣದ ಮಾಹಿತಿಯನ್ನು ಸಂರಕ್ಷಿಸಲು ಸುಪ್ರೀಂಕೋರ್ಟ್ ಸೂಚನೆ

    ಪ್ರಧಾನಿ ಮೋದಿ ಪ್ರಯಾಣದ ಮಾಹಿತಿಯನ್ನು ಸಂರಕ್ಷಿಸಲು ಸುಪ್ರೀಂಕೋರ್ಟ್ ಸೂಚನೆ

    – ಪ್ರಧಾನಿ ಭದ್ರತೆ ರಾಷ್ಟ್ರೀಯ ಭದ್ರತೆಯ ವಿಚಾರ
    – ಅಂತರಾಷ್ಟ್ರೀಯ ಮಟ್ಟದಲ್ಲಿ ಮುಜುಗರಕ್ಕೆ ಕಾರಣವಾದ ವಿಶೇಷ ಪ್ರಕರಣ

    ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರ ಪಂಜಾಬ್ ಪ್ರಯಾಣ ಮಾಹಿತಿಯನ್ನು ಸಂರಕ್ಷಿಸಿಡುವಂತೆ ಪಂಜಾಬ್ ಮತ್ತು ಹರಿಯಾಣ ಹೈಕೋರ್ಟ್ ರಿಜಿಸ್ಟರ್ ಜನರಲ್‍ಗೆ ಸುಪ್ರೀಂಕೋರ್ಟ್ ಸೂಚನೆ ನೀಡಿದೆ. ಮೋದಿ ಪ್ರಯಾಣದ ವೇಳೆಯಲ್ಲಾದ ಭದ್ರತಾ ವೈಫಲ್ಯ ವಿಚಾರಕ್ಕೆ ಸಂಬಂಧಿಸಿದಂತೆ ಸೂಕ್ತ ತನಿಖೆಗೆ ಆಗ್ರಹಿಸಿ ಲಾಯರ್ಸ್ ವಾಯ್ಸ್ ಅಸೊಶಿಯೇಶನ್ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಎನ್.ವಿ ರಮಣ ನೇತೃತ್ವದ ತ್ರಿ ಸದಸ್ಯ ಪೀಠ ಈ ಸೂಚನೆ ನೀಡಿದೆ.

    ಇಂದು ನಡೆದ ವಿಚಾರಣೆ ವೇಳೆ ಅರ್ಜಿದಾರರ ಪರ ವಾದ ಮಂಡಿಸಿದ ಮಣಿಂದರ್ ಸಿಂಗ್, ಎಸ್‍ಪಿಜಿ ನಿಯಮಗಳ ಪ್ರಕಾರ ಪಿಎಂ ಭದ್ರತೆ ನಿರಾಕರಿಸುವಂತಿಲ್ಲ, ಪ್ರಧಾನಿ ಭದ್ರತೆ ಎನ್ನುವುದು ಕೇಂದ್ರ ಅಥವಾ ರಾಜ್ಯದ ವಿಚಾರವಲ್ಲ, ಇದು ರಾಷ್ಟ್ರೀಯ ಭದ್ರತೆಯ ವಿಚಾರ ಇದು ಸಂಸದೀಯ ವ್ಯಾಪ್ತಿಗೆ ಬರಲಿದೆ. ಪಿಎಂ ಕಾನ್ವೆ ನಡು ದಾರಿಯಲ್ಲಿ ನಿಂತಿದ್ದು ರಾಜ್ಯವೊಂದರ ಕಾನೂನು ಸುವ್ಯವಸ್ಥೆಯ ಸಮಸ್ಯೆಯಲ್ಲ, ಇದು ಬಹುದೊಡ್ಡ ಭದ್ರತಾ ವೈಫಲ್ಯವಾಗಿದೆ. ಈ ವೈಫಲ್ಯವನ್ನು ವೃತ್ತಿಪರವಾಗಿ ತನಿಖೆ ನಡೆಸಬೇಕಾಗಿದೆ. ಹೀಗಾಗಿ ರಾಜ್ಯ ಸರ್ಕಾರದಿಂದ ಈ ತನಿಖೆ ಸಾಧ್ಯವಿಲ್ಲ ಅಲ್ಲದೇ ಇದನ್ನು ತನಿಖೆ ನಡೆಸಲು ರಾಜ್ಯಕ್ಕೆ ಯಾವುದೇ ವಿಶೇಷ ಅಧಿಕಾರವಿಲ್ಲ ಎಂದರು. ಇದನ್ನೂ ಓದಿ: ಚರಣ್‍ಜಿತ್ ಸಿಂಗ್ ಚನ್ನಿ ದಲಿತ ಎಂಬ ಕಾರಣಕ್ಕೆ ಬಿಜೆಪಿ ಟಾರ್ಗೆಟ್ ಮಾಡ್ತಿದೆ: ಅಶೋಕ್ ಗೆಹ್ಲೋಟ್

    ರಾಜ್ಯ ಸರ್ಕಾರ ಈಗಾಗಲೇ ಸಮಿತಿಯೊಂದನ್ನು ರಚಿಸಿದೆ. ಸರ್ಕಾರದಿಂದ ಸಮಿತಿಗೆ ನೇಮಕಗೊಂಡ ಸಮಿತಿಯ ಅಧ್ಯಕ್ಷರು ಈ ಹಿಂದೆ ಭಾರಿ ಸೇವಾ ಸಂಬಂಧಿತ ಹಗರಣದ ಭಾಗವಾಗಿದ್ದರು. ಈ ನ್ಯಾಯಾಧೀಶರ ನಡತೆಯ ಬಗ್ಗೆಯೂ ಪೊಲೀಸ್ ಅಧಿಕಾರಿಗಳು ತನಿಖೆ ನಡೆಸಿದ್ದರು. ಹೀಗಾಗಿ ಇವರಿಂದ ನಿಷ್ಪಕ್ಷಪಾತ ತನಿಖೆ ಸಾಧ್ಯವಿಲ್ಲ ಎಂದು ಆಕ್ಷೇಪ ವ್ಯಕ್ತಪಡಿಸಿದರು. ಅಲ್ಲದೇ ಈ ಸಮಿತಿಯ ತನಿಖೆ ಬದಲು ಪ್ರಕರಣವನ್ನು ಭಟಿಂಡಾ ಜಿಲ್ಲಾ ನ್ಯಾಯಾಧೀಶರು ಮತ್ತು ಎನ್‍ಐಎ ಅಧಿಕಾರಿಗಳು ಪರಿಶೀಲಿಸಬಹುದು ಮತ್ತು ಪ್ರಧಾನಿ ಪ್ರಯಾಣದ ಸಾಕ್ಷ್ಯಗಳನ್ನು ಎನ್‍ಐಎ ಸಂರಕ್ಷಿಸಿ ಇಡಬೇಕು ಎಂದು ಸಲಹೆ ನೀಡಿದರು. ಇದನ್ನೂ ಓದಿ: ಮೋದಿ ಮೇಲೆ ಅಲ್ಲ ಇದು ಪ್ರತಿಯೊಬ್ಬ ಭಾರತೀಯನ ಮೇಲೆ ನಡೆದ ದಾಳಿ: ಕಂಗನಾ

    ಮಣಿಂದರ್ ಸಿಂಗ್ ಬಳಿಕ ಕೇಂದ್ರ ಸರ್ಕಾರದ ಪರ ವಾದ ಮಂಡಿಸಿದ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ, ಅಂತರಾಷ್ಟ್ರೀಯ ಮಟ್ಟದಲ್ಲಿ ಮುಜುಗರಕ್ಕೆ ಕಾರಣವಾದ ವಿಶೇಷ ಪ್ರಕರಣವನ್ನು ವಿಚಾರಣೆಗೆ ಪರಿಗಣಿಸಿದಕ್ಕೆ ಸುಪ್ರೀಂಕೋರ್ಟ್ ಧನ್ಯವಾದ ಹೇಳಿದರು. ಪ್ರಧಾನ ಮಂತ್ರಿ ರಸ್ತೆ ಮಾರ್ಗವಾಗಿ ತೆರಳಲು ಸಂಬಂಧಿಸಿದ ರಾಜ್ಯದ ಡಿಜಿ ಅನುಮತಿ ನೀಡಬೇಕು. ಈ ಪ್ರಕರಣದಲ್ಲಿ ಡಿಜಿ ಅನುಮತಿ ನೀಡಿದ್ದಾರೆ, ಅನುಮತಿ ನೀಡದ ಬಳಿಕವಷ್ಟೆ ಪ್ರಧಾನಿ ರಸ್ತೆ ಮೂಲಕ ಹೊರಟಿದ್ದಾರೆ. ಇದನ್ನೂ ಓದಿ: ಪ್ರಧಾನಿಗೆ ಭದ್ರತಾ ವೈಫಲ್ಯ – ಸುಪ್ರೀಂ ಮೇಲ್ವಿಚಾರಣೆಯಲ್ಲಿ ತನಿಖೆಗೆ ಮನವಿ 

    ಪ್ರತಿಭಟನೆ ನಡೆಯುತ್ತಿದ್ದ ಪ್ರದೇಶದಲ್ಲಿ ಸ್ಥಳೀಯ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪ್ರತಿಭಟನಾಕಾರರ ಜೊತೆಗೆ ಚಹಾ ಹೀರುತ್ತಿದ್ದರು. ಭದ್ರತಾ ಸಮಸ್ಯೆ ಬಗ್ಗೆ ಪಿಎಂ ಸೆಕ್ಯುರಿಟಿ ಅಲರ್ಟ್ ವಾಹನಕ್ಕೆ ಕನಿಷ್ಠ ಮಾಹಿತಿಯನ್ನು ನೀಡಿಲ್ಲ. ಪಿಎಂ ಕಾನ್ವೆ ಪ್ಲೈವೋರ್ ಮೇಲಿದ್ದಾಗ ಪ್ರತಿಭಟನಾಕಾರರು ಹಿಂದೆ ದೊಡ್ಡ ಪ್ರಮಾಣದಲ್ಲಿ ಘೋಷಣೆ ಕೂಗುತ್ತಿದ್ದರು. ಪರಿಸ್ಥಿತಿ ಏನಾಗಬಹುದಿತ್ತು ಯೋಚಿಸಿ ಎಂದು ಆತಂಕ ವ್ಯಕ್ತಪಡಿಸಿದರು. ಇದಲ್ಲದೇ ಸಿಖ್ಸ್ ಫಾರ್ ಜಸ್ಟಿಸ್ ಸಂಘಟನೆಯ ಜನರು XYZ (ವಿವಾದಿತ ಪದಗಳನ್ನು ಬಳಸದೇ) ಕೆಲಸವನ್ನು ಮಾಡಲು ಕರೆ ನೀಡಿದ್ದರು. ಇದು ಗಡಿಯಾಚೆಗಿನ ಭಯೋತ್ಪಾದನೆಯ ಸಮಸ್ಯೆಯಾಗಿರಬಹುದು. ಆದ್ದರಿಂದ ಈ ಪ್ರಕರಣ ಜಿಲ್ಲಾ ನ್ಯಾಯಾಧೀಶರು ಮತ್ತು NIA ಅಧಿಕಾರಿಗಳ ಬಳಿ ಇರಲಿ ಎಂದು ಮನವಿ ಮಾಡಿದರು. ಇದನ್ನೂ ಓದಿ: ಮೋದಿ ಭದ್ರತಾ ಲೋಪಕ್ಕೆ ಪಂಜಾಬ್ ಪೊಲೀಸ್ ಇಲಾಖೆ ಕಾರಣ – ಕೇಂದ್ರ ಗೃಹ ಸಚಿವಾಲಯ

    ಬಳಿಕ ಪಂಜಾಬ್ ಸರ್ಕಾರದ ಪರ ವಾದ ಮಂಡಿಸಿದ ಅಡಿಷನಲ್ ಜನರಲ್, ಪಂಜಾಬ್ ಸರ್ಕಾರ ಈ ಪ್ರಕರಣವನ್ನು ಲಘುವಾಗಿ ಪರಿಗಣಿಸುತ್ತಿಲ್ಲ. ಜನವರಿ 5 ರಂದು ಘಟನೆ ಸಂಭವಿಸಿದಾಗ ಅದೇ ದಿನ ಸಮಿತಿಯನ್ನು ರಚಿಸಲಾಯಿತು. ನಿವೃತ್ತ ಹೈಕೋರ್ಟ್ ನ್ಯಾಯಾಧೀಶರನ್ನು ನೇಮಿಸಲಾಗಿದೆ, ನಿನ್ನೆ ಎಫ್‍ಐಆರ್ ಕೂಡ ದಾಖಲಿಸಿದ್ದೇವೆ. ಕೇಂದ್ರವು ಈ ವಿಷಯವನ್ನು ತನಿಖೆ ಮಾಡಲು ಸಮಿತಿಯನ್ನು ಸಹ ರಚಿಸಿದೆ. ಪ್ರಕರಣದ ತನಿಖೆಗೆ ಯಾವುದೇ ವ್ಯಕ್ತಿಯನ್ನು ನೇಮಿಸಬಹುದು ಒಂದು ವೇಳೆ ಲೋಪವಿದ್ದರೆ ತನಿಖೆಯ ಅಗತ್ಯವಿದೆ. ಮೋದಿ ನಮ್ಮ ಪ್ರಧಾನಿ ಎಂದು ಪಂಜಾಬ್ ಸಿಎಂ ಹೇಳಿದ್ದಾರೆ. ನಾವು ಪ್ರಕರಣವನ್ನು ರಾಜಕೀಯಗೊಳಿಸಿಲ್ಲ ಎಂದು ಸಮರ್ಥಿಸಿಕೊಂಡರು. ಇದನ್ನೂ ಓದಿ: ಭದ್ರತಾ ಲೋಪವಾಗಿಲ್ಲ, ಜನರಿಲ್ಲದೇ ಖಾಲಿ ಕುರ್ಚಿಗಳಿದ್ದ ಕಾರಣ ಪಿಎಂ ರ‍್ಯಾಲಿ ರದ್ದು: ಪಂಜಾಬ್‌ ಸಿಎಂ

    ವಾದ ಮಂಡನೆಯ ಬಳಿಕ ತುಷಾರ್ ಮೆಹ್ತಾರನ್ನು ಪ್ರಶ್ನಿಸಿದ ಸಿಜೆಐ ಎನ್‍ವಿ ರಮಣ, ನೀವೂ ಸ್ವತಂತ್ರ ತನಿಖೆಯನ್ನು ಬಯಸುತ್ತಿದ್ದಿರಾ ಎಂದು ಕೇಳಿದರು. ಇದಕ್ಕೆ ಉತ್ತರಿಸಿದ ತುಷಾರ್ ಮೆಹ್ತಾ, ದಾಖಲೆಗಳ ಸಂಗ್ರಹದೊಂದಿಗೆ ನಾಳೆ ನಮ್ಮ ವೈಯಕ್ತಿಕ ಕನಿಮ್ಮ ಮುಂದೆ ಇಡಲಿದ್ದೇವೆ. ಅದನ್ನು ಪರಿಶೀಲಿಸಿ ತಿರ್ಮಾನ ತೆಗೆದುಕೊಳ್ಳಿ ಎಂದು ಎಂದರು. ಇದನ್ನೂ ಓದಿ: ಭಾರೀ ಭದ್ರತಾ ಲೋಪ – ಪಂಜಾಬ್ ಫ್ಲೈ ಓವರ್‌ನಲ್ಲಿ 20 ನಿಮಿಷ ಸಿಲುಕಿದ ಮೋದಿ

    ಬಳಿಕ ಮಧ್ಯಂತರ ಆದೇಶ ನೀಡಿದ ನ್ಯಾ.ಎನ್.ವಿ ರಮಣ, ದೇಶದ ಪ್ರಧಾನಿಯ ಭದ್ರತೆಗೆ ಸಂಬಂಧಿಸಿದ ಸಮಸ್ಯೆಯ ದೃಷ್ಟಿಯಿಂದ ಪಂಜಾಬ್ ಮತ್ತು ಹರಿಯಾಣ ಹೈಕೋರ್ಟ್‍ನ ರಿಜಿಸ್ಟ್ರಾರ್ ಜನರಲ್ ಸಾಕ್ಷ್ಯಗಳನ್ನು (PM ಪ್ರಯಾಣ ದಾಖಲೆಗಳು) ಸುರಕ್ಷಿತವಾಗಿರಿಸಲು ಮತ್ತು ಸಂರಕ್ಷಿಸಲು ನಿರ್ದೇಶಿಸುವುದು ಸೂಕ್ತವೆಂದು ನಾವು ಭಾವಿಸುತ್ತೇವೆ. ತಕ್ಷಣವೇ ಪಂಜಾಬ್ ಪೊಲೀಸ್ ಅಧಿಕಾರಿಗಳು ಮತ್ತು ಎಸ್‍ಪಿಜಿ ಮತ್ತು ಇತರ ಕೇಂದ್ರ ಮತ್ತು ರಾಜ್ಯ ಏಜೆನ್ಸಿಗಳಿಗೆ ಸಹಕರಿಸಲು ಮತ್ತು ರಿಜಿಸ್ಟ್ರಾರ್ ಜನರಲ್‍ಗೆ ಅಗತ್ಯ ನೆರವು ನೀಡಲು ನಿರ್ದೇಶಿಸುತ್ತೇವೆ. ಎಲ್ಲಾ ದಾಖಲೆಗಳನ್ನು ಅವರ ಸುರಕ್ಷಿತ ಕಸ್ಟಡಿಯಲ್ಲಿ ಇರಿಸಿಕೊಳ್ಳಲು ನಾವು ರಿಜಿಸ್ಟ್ರಾರ್ ಜನರಲ್ ಅವರಿಗೆ ನಿರ್ದೇಶಿಸುತ್ತೇವೆ ಎಂದು ಮೌಕಿಕವಾಗಿ ಹೇಳಿದರು. ಅಲ್ಲದೇ ಸೋಮವಾರದವರೆಗೂ ಕೇಂದ್ರ ಮತ್ತು ರಾಜ್ಯದಿಂದ ರಚನೆಯಾದ ಸಮಿತಿಗಳು ತನಿಖೆ ನಡೆಸದಂತೆ ಸೂಚನೆ ನೀಡಿದರು. ಸೋಮವಾರಕ್ಕೆ ವಿಚಾರಣೆ ಮುಂದೂಡಿಕೆಯಾಗಿದ್ದು ಸೋಮವಾರ ಸುಪ್ರೀಂಕೋರ್ಟ್ ಮೇಲ್ವಿಚಾರಣೆಯಲ್ಲಿ ಸ್ವತಂತ್ರ ಸಮಿತಿ ರಚನೆ ಮಾಡುವ ಸಾಧ್ಯತೆಗಳಿದೆ.

  • ಚರಣ್‍ಜಿತ್ ಸಿಂಗ್ ಚನ್ನಿ ದಲಿತ ಎಂಬ ಕಾರಣಕ್ಕೆ ಬಿಜೆಪಿ ಟಾರ್ಗೆಟ್ ಮಾಡ್ತಿದೆ: ಅಶೋಕ್ ಗೆಹ್ಲೋಟ್

    ಚರಣ್‍ಜಿತ್ ಸಿಂಗ್ ಚನ್ನಿ ದಲಿತ ಎಂಬ ಕಾರಣಕ್ಕೆ ಬಿಜೆಪಿ ಟಾರ್ಗೆಟ್ ಮಾಡ್ತಿದೆ: ಅಶೋಕ್ ಗೆಹ್ಲೋಟ್

    ಜೈಪುರ: ಪಂಜಾಬ್ ಮುಖ್ಯಮಂತ್ರಿ ಚರಣ್‍ಜಿತ್ ಸಿಂಗ್ ಚನ್ನಿ ಅವರು ದಲಿತ ಎಂಬ ಕಾರಣಕ್ಕೆ ಪ್ರಧಾನಿ ಮೋದಿ ಅವರು ರಾಜ್ಯದಲ್ಲಿ ಭದ್ರತಾ ಲೋಪವಾಗಿರುವುದಾಗಿ ಆರೋಪಿಸಿದ್ದಾರೆ ಎಂದು ರಾಜಸ್ಥಾನದ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ವಾಗ್ದಾಳಿ ನಡೆಸಿದ್ದಾರೆ.

    ಈ ಕುರಿತಂತೆ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಸ್ವತಂತ್ರ ಭಾರತದಲ್ಲಿ ಪಂಜಾಬ್ ಇತಿಹಾಸದಲ್ಲಿ ಮೊದಲ ಬಾರಿಗೆ ದಲಿತ ಅಭ್ಯರ್ಥಿಯನ್ನು ಮುಖ್ಯಮಂತ್ರಿಯಾಗಿ ನೇಮಿಸಲಾಗಿದೆ ಮತ್ತು ಅವರನ್ನು ಇಡೀ ರಾಷ್ಟ್ರವು ಸ್ವಾಗತಿಸಿದೆ. ಆದರೆ ಪಂಜಾಬ್‍ನಿಂದ ನಾನು ಜೀವಂತವಾಗಿ ಬಂದಿದ್ದೇನೆ ಎಂಬ ಹೇಳಿಕೆಯನ್ನು ಮೋದಿ ಅವರು ನೀಡಬಾರದಿತ್ತು. ಕೆಲವರು ರಾಜಕೀಯ ಲಾಭ ಪಡೆಯಲು ಪ್ರಧಾನಿ ರಾಜ್ಯಕ್ಕೆ ಭೇಟಿ ನೀಡಿದ ವೇಳೆ ಭದ್ರತಾ ಲೋಪವಾಗಿದೆ ಎಂದು ಆರೋಪಿಸುವ ಮೂಲಕ ಕಾಂಗ್ರೆಸ್‍ನೆ ಮಾನಹಾನಿ ಮಾಡುತ್ತಿದ್ದಾರೆ ಎಂದು ಹರಿಹಾಯ್ದಿದ್ದಾರೆ. ಇದನ್ನೂ ಓದಿ: ನಾನು ಜೀವಂತವಾಗಿ ಬಂದಿದ್ದೇನೆ, ನಿಮ್ಮ ಸಿಎಂಗೆ ಧನ್ಯವಾದ ಹೇಳಿ ಎಂದ ಮೋದಿ

    ಕಾಂಗ್ರೆಸ್ ನಾಯಕರು ಮತ್ತು ಪ್ರಧಾನಿಗಳು ಈ ದೇಶಕ್ಕಾಗಿ ತಮ್ಮ ಪ್ರಾಣವನ್ನೇ ತ್ಯಾಗ ಮಾಡಿದ್ದಾರೆ. ಕಾಂಗ್ರೆಸ್ ಪಕ್ಷ ಅಹಿಂಸೆಯನ್ನು ತನ್ನ ಸಿದ್ಧಾಂತವಾಗಿ ಅನುಸರಿಸುತ್ತದೆ. ಆದರೆ ಬಿಜೆಪಿ ಮತ್ತು ಆರ್‌ಎಸ್‌ಎಸ್‌ ಅವರ ಮನಸ್ಸಿನಲ್ಲಿ ಹಿಂಸಾಚಾರವಿದೆ. ಅವರು ಹೇಗೆ ನಮಗೆ ಅಹಿಂಸೆಯನ್ನು ಕಲಿಸುತ್ತಾರೆ ಎಂದು ಕಿಡಿಕಾರಿದ್ದಾರೆ.

    ಬುಧವಾರ ಬಟಿಂಡಾದಲ್ಲಿ ಆಯೋಜನೆಗೊಂಡಿದ್ದ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ನರೇಂದ್ರ ಮೋದಿ ಪಂಜಾಬ್‍ಗೆ ಆಗಮಿಸಿದ್ದರು. ಮಧ್ಯಾಹ್ನ ಹುಸೇನಿವಾಲಾದಲ್ಲಿ ರಾಷ್ಟ್ರೀಯ ಹುತಾತ್ಮರ ಸ್ಮಾರಕ ಸ್ಥಳಕ್ಕೆ ತೆರಳಲು ಹೋಗುತ್ತಿದ್ದಾಗ ಭದ್ರತಾ ಲೋಪವಾಗಿದೆ. ಇದನ್ನೂ ಓದಿ: ಪಂಜಾಬ್ ಫ್ಲೈ ಓವರ್‌ನಲ್ಲಿ 20 ನಿಮಿಷ ಸಿಲುಕಿದ ಮೋದಿ – ಕಾರ್ಯಕ್ರಮ ರದ್ದು

    ಕಾರ್ಯಕ್ರಮಕ್ಕೆ ಕಾರಿನಲ್ಲಿ ಭದ್ರತಾ ಸಿಬ್ಬಂದಿ ಜೊತೆ ಫ್ಲೈ  ಫ್ಲೈ ಓವರ್‌ನಲ್ಲಿ ತೆರಳುತ್ತಿದ್ದಾಗ ರೈತರು ಪ್ರತಿಭಟನೆ ಮಾಡುತ್ತಿರುವುದು ಗೊತ್ತಾಗಿದೆ. ಭದ್ರತಾ ಲೋಪದಿಂದಾಗಿ ಪ್ರಧಾನಿ ನರೇಂದ್ರ ಮೋದಿ ಅವರು ಪಂಜಾಬ್‍ನ ಫ್ಲೈ ಓವರ್‍ನಲ್ಲಿ ಸುಮಾರು 20 ನಿಮಿಷಗಳ ಕಾಲ ಸಿಲುಕಿಕೊಂಡಿದ್ದರು. ಬಳಿಕ ಬಟಿಂಡಾಕ್ಕೆ ಮರಳಿದ್ದಾರೆ.