Tag: security staff

  • ಉಕ್ರೇನ್ ಯುದ್ಧದ ಸಂದರ್ಭದಲ್ಲಿ ಭದ್ರತಾ ಮುಖ್ಯಸ್ಥನಿಗೆ ಕರೆ ಮಾಡಿದ್ದರಂತೆ ರಾಮ್ ಚರಣ್

    ಉಕ್ರೇನ್ ಯುದ್ಧದ ಸಂದರ್ಭದಲ್ಲಿ ಭದ್ರತಾ ಮುಖ್ಯಸ್ಥನಿಗೆ ಕರೆ ಮಾಡಿದ್ದರಂತೆ ರಾಮ್ ಚರಣ್

    ಹೈದರಾಬಾದ್: ಮೆಗಾ ಪವರ್ ಸ್ಟಾರ್ ರಾಮ್ ಚರಣ್ ತೇಜ್ ನಟನೆಯ, ರಾಜಮೌಳಿ ನಿರ್ದೇಶನದ ಆರ್.ಆರ್.ಆರ್ ಸಿನಿಮಾದ ಕೆಲ ದೃಶ್ಯಗಳು ಉಕ್ರೇನ್ ನಲ್ಲಿ ಚಿತ್ರೀಕರಣವಾಗಿದೆ. ಕೆಲ ದಿನಗಳ ಕಾಲ ಇಡೀ ಚಿತ್ರತಂಡ ಉಕ್ರೇನ್ ನಲ್ಲಿಯೇ ಬೀಡುಬಿಟ್ಟು, ಅಲ್ಲಿನ ಸುಂದರ ತಾಣಗಳನ್ನು ಸೆರೆ ಹಿಡಿದಿತ್ತು. ಅದಾದ ಕೆಲವೇ ತಿಂಗಳ ಬಳಿಕೆ ಉಕ್ರೇನ್ ಮತ್ತು ರಷ್ಯಾ ಯುದ್ಧ ಶುರುವಾಯಿತು. ಇಡೀ ದೇಶಕ್ಕೆ ದೇಶವೇ ಯುದ್ಧದ ಭಯದಲ್ಲಿ ಬದುಕಿತ್ತು. ಈ ಸಂದರ್ಭದಲ್ಲಿ ನಟ ರಾಮ್ ಚರಣ್ ತೇಜ್, ತಮಗೆ ಪರಿಚಯ ಇರುವ ಭದ್ರತಾ ಸಿಬ್ಬಂದಿಯ ಮುಖ್ಯಸ್ಥರಿಗೆ ಕರೆ ಮಾಡಿ, ಅಲ್ಲಿನ ಪರಿಸ್ಥಿತಿಯ ಬಗ್ಗೆ ತಿಳಿದುಕೊಂಡಿದ್ದಾರೆ.

    ಭದ್ರತಾ ಸಿಬ್ಬಂದಿಯು ನೀಡಿದ ಮಾಹಿತಿ ರಾಮ್ ಚರಣ್ ಅವರಲ್ಲೂ ಆತಂಕ ಮೂಡಿಸಿತ್ತಂತೆ. “ನನ್ನ ತಂದೆ ಬಂದೂಕಿನೊಂದಿಗೆ ರಸ್ತೆಯಲ್ಲಿದ್ದಾರೆ. ಯಾವ ಕಡೆಯಿಂದ ಏನು ಬರುತ್ತದೋ ಗೊತ್ತಿಲ್ಲವೆಂದು’ ಭದ್ರತಾ ಸಿಬ್ಬಂದಿಯ ಮುಖ್ಯಸ್ಥರು ತಿಳಿಸಿದ್ದಾರೆ. “ನನ್ನ ಕೈಲಾದ ಸಹಾಯವನ್ನು ನಾನೂ ಮಾಡುತ್ತೇನೆ. ನಿಮ್ಮ ದೇಶಕ್ಕೆ ಬರಲು ಆಗದೇ ಇರಬಹುದು. ಇಲ್ಲಿಂದಲೇ ನಾನು ಶಾಂತಿಗಾಗಿ ಪ್ರಾರ್ಥಿಸುವೆ” ಎಂದು ಮರು ಉತ್ತರ ಕೊಟ್ಟಿದ್ದರಂತೆ ರಾಮ್ ಚರಣ್ ತೇಜ್. ಈ ಘಟನೆಯನ್ನು ಅವರು ಆರ್.ಆರ್.ಆರ್ ಸಿನಿಮಾದ ಪ್ರಚಾರದ ಸಂದರ್ಭದಲ್ಲಿ ನೆನಪಿಸಿಕೊಂಡಿದ್ದಾರೆ ಮೆಗಾ ಪವರ್ ಸ್ಟಾರ್. ಅಲ್ಲದೇ, ಉಕ್ರೇನ್ ಬಿಕ್ಕಟ್ಟಿನ ಬಗ್ಗೆ ಪ್ರತಿಕ್ರಿಯಿಸುತ್ತಾ, ‘ನಾನು ಇಲ್ಲಿಯವರೆಗೆ ಚಿತ್ರೀಕರಿಸಿದ ಅತ್ಯುತ್ತಮ ದೇಶಗಳಲ್ಲಿ ಉಕ್ರೇನ್ ದೇಶವು ಕೂಡ ಒಂದಾಗಿದೆ’ ಎಂದು ಉಕ್ರೇನ್ ಬಗ್ಗೆ ಬಣ್ಣಿಸಿದ್ದಾರೆ. ಇದನ್ನೂ ಓದಿ: ಫ್ಯಾನ್ಸ್ ಒತ್ತಾಯದ ಮೇರೆಗೆ ವಿಷ್ಣುದಾದ ಇತಿಹಾಸ ಬರೆದ ಮೂವೀ ರೀ-ರಿಲೀಸ್ 

    ದೇಶದ ಜನತೆ ಮತ್ತು ವಿಶ್ವದಾದ್ಯಂತ ಇರುವ ಅವರು ತಮ್ಮ ಅಭಿಮಾನಿಗಳ ಜತೆ ತಾವು ಸದಾ ಇರುವುದನ್ನು ಅವರು ಮತ್ತೆ ಮತ್ತೆ ಸಾಬೀತು ಪಡಿಸುತ್ತಲೇ ಇದ್ದಾರೆ. ಕೋವಿಡ್-19 ಸಮಯದಲ್ಲೂ ಅವರು ಹತ್ತಾರು ಕೆಲಸಗಳನ್ನು ಮಾಡಿದ್ದರು. ಸಾಕಷ್ಟು ಕುಟುಂಬಗಳಿಗೆ ಸಹಾಯಹಸ್ತ ಚಾಚಿದ್ದರು. ಇದನ್ನೂ ಓದಿ: ಅಪ್ಪು ಹುಟ್ಟು ಹಬ್ಬಕ್ಕೆ ನೇತ್ರದಾನದ ವಾಗ್ದಾನ

    ‘ಆರ್‍ಆರ್‍ಆರ್’ ಕುರಿತು ಹೇಳುವುದಾದರೆ, ಉಕ್ರೇನ್ ಮತ್ತು ಬಲ್ಗೇರಿಯಾದಲ್ಲಿ ಈ ಚಿತ್ರದ ಕೆಲ ದೃಶ್ಯಗಳನ್ನು ಚಿತ್ರೀಕರಿಸಲಾಗಿದೆ. 400 ಕೋಟಿ ರೂಪಾಯಿ ಬಜೆಟ್‍ನಲ್ಲಿ ನಿರ್ಮಿಸಲಾದ ಈ ಚಿತ್ರವನ್ನು ಆರಂಭದಲ್ಲಿ ಜುಲೈ 30, 2020 ರಂದು ಬಿಡುಗಡೆ ಮಾಡುವುದಾಗಿ ಚಿತ್ರತಂಡ ಹೇಳಿಕೊಂಡಿತ್ತು. ಕೋವಿಡ್-19 ಸಾಂಕ್ರಾಮಿಕ ರೋಗದಿಂದಾಗಿ ಅಂತಿಮವಾಗಿ, ಚಿತ್ರವನ್ನು ಮಾರ್ಚ್ 25, 2022 ರಂದು ಬಿಡುಗಡೆ ಮಾಡಲು ನಿರ್ಧರಿಸಲಾಗಿದೆ.

  • ಮೇಡಂ ರಾಜೀನಾಮೆ ನೀಡಬೇಡಿ ಎಂದು ಶಿಲ್ಪಾ ನಾಗ್ ಕಾಲು ಹಿಡಿದ ಭದ್ರತಾ ಸಿಬ್ಬಂದಿ

    ಮೇಡಂ ರಾಜೀನಾಮೆ ನೀಡಬೇಡಿ ಎಂದು ಶಿಲ್ಪಾ ನಾಗ್ ಕಾಲು ಹಿಡಿದ ಭದ್ರತಾ ಸಿಬ್ಬಂದಿ

    ಮೈಸೂರು: ಇದ್ದಕ್ಕಿದ್ದಂತೆ ಮುಖ್ಯ ಕಾರ್ಯದರ್ಶಿ ಸ್ಥಾನಕ್ಕೆ ಮೈಸೂರು ಮಹಾನಗರ ಪಾಲಿಕೆ ಆಯುಕ್ತೆ ಶಿಲ್ಪಾ ನಾಗ್ ರಾಜೀನಾಮೆ ನೀಡುವ ಕುರಿತು ಘೋಷಿಸಿದ್ದಕ್ಕೆ ಅಧಿಕಾರಿಗಳು ಹಾಗೂ ಸಿಬ್ಬಂದಿ ತೀವ್ರ ಬೇಸರ ವ್ಯಕ್ತಪಡಿಸುತ್ತಿದ್ದಾರೆ. ಅಲ್ಲದೆ ಸುದ್ದಿಗೋಷ್ಠಿ ಮುಗಿಸಿ ಹೊರಗೆ ಬರುತ್ತಿದ್ದಾಗ ಮೇಡಂ ರಾಜೀನಾಮೆ ನೀಡಬೇಡಿ ಎಂದು ಭದ್ರತಾ ಸಿಬ್ಬಂದಿ ಶಿಲ್ಪಾ ನಾಗ್ ಅವರ ಕಾಲು ಹಿಡಿದಿದ್ದಾರೆ.

    ಶಿಲ್ಪಾ ನಾಗ್ ಅವರು ಇದ್ದಕ್ಕಿದ್ದಂತೆ ರಾಜೀನಾಮೆ ನೀಡಿರುವುದು ಶಾಕ್ ನೀಡಿದ್ದು, ಅಧಿಕಾರಿಗಳು ಹಾಗೂ ಸಿಬ್ಬಂದಿ ಬೇಸರ ವ್ಯಕ್ತಪಡಿಸುತ್ತಿದ್ದಾರೆ. ಅದೇ ರೀತಿ ಭದ್ರತಾ ಸಿಬ್ಬಂದಿ ಸಹ ಶಿಲ್ಪಾ ನಾಗ್ ಅವರು ಹೊರಗಡೆ ಬರುತ್ತಿದ್ದಂತೆ ಅವರ ಕಾಲು ಹಿಡಿದು ಮೇಡಂ ಹೋಗಬೇಡಿ ಎಂದು ಕೇಳಿಕೊಂಡಿದ್ದಾರೆ. ಶಿಲ್ಪಾ ನಾಗ್ ಅವರು ಅವರಿಂದ ಕಾಲು ಮುಟ್ಟಿಸಿಕೊಳ್ಳದೆ ಸಮಾಧಾನಪಡಿಸಿ, ತೆರಳಿದ್ದಾರೆ. ಮಾತ್ರವಲ್ಲದೆ ಗೇಟ್ ಬಳಿ ಬಂದು ಸಹ ಕೈ ಮುಗಿದಿದ್ದು, ಗೇಟ್ ನಿಂದ ನಿರ್ಗಮಿಸುವಾಗ ಮೇಡಂ ದಯವಿಟ್ಟು ರಾಜೀನಾಮೆ ಕೊಡಬೇಡಿ ಎಂದು ಕೇಳಿಕೊಂಡಿದ್ದಾರೆ. ಇದನ್ನೂ ಓದಿ: ರೋಹಿಣಿ ಸಿಂಧೂರಿ ನನ್ನನ್ನ ಟಾರ್ಗೆಟ್ ಮಾಡ್ತಿದ್ದಾರೆ: ರಾಜೀನಾಮೆ ನೀಡಿ ಕಣ್ಣೀರಿಟ್ಟ ಶಿಲ್ಪಾನಾಗ್

    ಮತ್ತೊಬ್ಬ ವ್ಯಕ್ತಿ ಸಹ ಮೇಡಂ ನೀವು ತುಂಬಾ ಚೆನ್ನಾಗಿ ಕೆಲಸ ಮಾಡುತ್ತಿದ್ದೀರಿ, ನಿಮ್ಮದು ಏನೂ ತಪ್ಪಿಲ್ಲ. ನೀವು ಕೆಲಸ ಮಾಡುತ್ತಿದೀರಿ, ನೀವ್ಯಾಕೆ ಈ ರೀತಿ ರಾಜೀನಾಮೆ ನೀಡುತ್ತೀರಿ, ಮಾಡದಿದ್ದವರೇ ಆರಾಮಾಗಿ ಇರುತ್ತಾರೆ. ಬೇಡ ಮೇಡಂ ನಾವೆಲ್ಲ ನಿಮಗೆ ಸಪೋರ್ಟ್ ಮಾಡುತ್ತೇವೆ. ನಿಮ್ಮ ನಿರ್ಧಾರವನ್ನು ದಯವಿಟ್ಟು ಹಿಂಪಡೆಯಿರಿ ಎಂದು ಗೋಗರೆದಿದ್ದಾರೆ, ಈ ವೇಳೆ ಶಿಲ್ಪಾ ನಾಗ್ ಅವರು ಭಾವುಕರಾಗಿ ಕಣ್ಣೀರು ಹಾಕಿದ್ದಾರೆ.

    ಶಿಲ್ಪಾ ನಾಗ್ ರಾಜೀನಾಮೆ ನೀಡಿದ್ಯಾಕೆ?
    ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ನನ್ನನ್ನು ಟಾರ್ಗೆಟ್ ಮಾಡುತ್ತಿದ್ದಾರೆ ಎಂದು ಆರೋಪಿಸಿ ಮೈಸೂರು ಮಹಾನಗರ ಪಾಲಿಕೆ ಆಯುಕ್ತೆ ಶಿಲ್ಪಾನಾಗ್ ಮುಖ್ಯ ಕಾರ್ಯದರ್ಶಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.

    ಇಂದು ತುರ್ತು ಸುದ್ದಿಗೋಷ್ಠಿ ನಡೆಸಿದ ಶಿಲ್ಪಾನಾಗ್, ಜಿಲ್ಲಾಧಿಕಾರಿಗಳು ನಗರಕ್ಕೆ ಒಂದು ಮಾನದಂಡ, ಗ್ರಾಮಾಂತರಕ್ಕೆ ಒಂದು ಮಾನದಂಡ ಮಾಡಿದ್ದಾರೆ. ಸಿಟಿಯಲ್ಲಿ ಕಮಿಷನರ್ ವಿಫಲವಾಗಿದ್ದಾರೆ ಎಂದು ಬಣ್ಣ ಹಚ್ಚುವ ಕೆಲಸ ಮಾಡುತ್ತಿದ್ದಾರೆ. ಜಿಲ್ಲಾಡಳಿತದಿಂದ ನಮಗೆ ಯಾವುದೇ ಸಹಕಾರ ದೊರೆತಿಲ್ಲ. ಸಿಎಸ್‍ಆರ್ ಫಂಡ್‍ನಿಂದ ನಾವು ಕೆಲಸ ಮಾಡುತ್ತಿದ್ದೇವೆ. ಎಲ್ಲರಿಗೂ ಒಂದು ಸಹನೆ ಇರುತ್ತೆ, ಸಹನೆ ಕಟ್ಟೆ ಒಡೆದಾಗ ಏನು ಮಾಡಬೇಕು. ಒಬ್ಬರು ಐಎಎಸ್ ಅಧಿಕಾರಿಯಾಗಿ ಮತ್ತೊಬ್ಬ ಅಧಿಕಾರಿ ಮೇಲೆ ದಬ್ಬಾಳಿಕೆ ಮಾಡೋದು ಎಷ್ಟು ಸರಿ ಎಂದು ಪ್ರಶ್ನೆ ಮಾಡಿದರು.

    ಮಾಧ್ಯಮಗಳಲ್ಲಿ ಪಾಲಿಕೆ ಚೆನ್ನಾಗಿ ಕೆಲಸ ಮಾಡುತ್ತಿದೆ ಎಂಬ ವರದಿ ಬಂದ ಹಿನ್ನೆಲೆಯಲ್ಲಿ ನನ್ನನ್ನ ಟಾರ್ಗೆಟ್ ಮಾಡಲಾಗಿದೆ. ನನ್ನನ್ನ ತುಳಿಯುವ ವ್ಯವಸ್ಥಿತ ಪಿತೂರಿ ನಡೆದಿದ್ದು, ಅವರ ಇಗೋಯಿಂದ ನಮ್ಮ ಕೆಲಸಕ್ಕೆ ಮನ್ನಣೆ ಸಿಗುತ್ತಿಲ್ಲ ಎಂದು ರೋಹಿಣಿ ಸಿಂಧೂರಿ ವಿರುದ್ಧ ಗಂಭೀರ ಆರೋಪಗಳನ್ನ ಮಾಡಿದರು. ನನಗೆ ಕೆಲಸ ಮಾಡುವ ಆಸಕ್ತಿಯೇ ಇಲ್ಲದಂತಾಗಿದ್ದು, ಚೀಫ್ ಸೆಕ್ರಟರಿ ಸ್ಥಾನಕ್ಕೆ ರಾಜೀನಾಮೆ ನೀಡುತ್ತಿರುವ ವಿಷಯವನ್ನ ತಿಳಿಸಿ ಭಾವುಕರಾದರು.

    ಈ ರೀತಿಯ ಜಿಲ್ಲಾಧಿಕಾರಿ ಯಾವುದೇ ಜಿಲ್ಲೆಗೂ ಸಿಗಬಾರದು. ಟಾರ್ಗೆಟ್ ಮಾಡಿ ಮಾನಸಿಕ ಹಿಂಸೆ ನೀಡುತ್ತಿದ್ದಾರೆ. ಮೈಸೂರು ಜಿಲ್ಲೆ ಬಿಟ್ಟು ತೊಲಗಿ, ತುಂಬಾ ಚೀಪ್ ಮೆಂಟಾಲಿಟಿ ಅಧಿಕಾರಿ ಅವರು. ಒಳ್ಳೆಯ ಜನರು ಇರೋ ಮೈಸೂರು ನಗರದಲ್ಲಿ ಜಿಲ್ಲಾಧಿಕಾರಿಗಳು ಈ ರೀತಿ ಗಲೀಜು ಎಬ್ಬಿಸುತ್ತಿದ್ದಾರೆ. ಯಾಕೆ ಈ ರೀತಿ ಹಠ ಮಾಡುತ್ತಿದ್ದಾರೋ ಗೊತ್ತಿಲ್ಲ. ನಾನು 2014ನೇ ಬ್ಯಾಚ್ ಅಧಿಕಾರಿ, ಅವರು 2009 ನೇ ಬ್ಯಾಚ್ ಅಧಿಕಾರಿ. ನನ್ನ ಮೇಲಿನ ಅವರ ದ್ವೇಷ ಮೈಸೂರು ಜನರ ಮೇಲೆ ಪರಿಣಾಮ ಆಗೋದು ಬೇಡ. ನಾನೇ ಸುಪ್ರೀಂ ಅಂತಾ ಅಧಿಕಾರಿಗಳ ಸಭೆಯಲ್ಲಿ ವರ್ತನೆ ಮಾಡುತ್ತಿದ್ದಾರೆ. ಹಿರಿಯ ಅಧಿಕಾರಿಗಳಿಗೆ ಗೌರವ ಕೊಡದೆ ಅಧಿಕಾರಿಗಳನ್ನ ಟಾರ್ಗೆಟ್ ಮಾಡುತ್ತಿದ್ದಾರೆ ಎಂದು ಆರೋಪಿಸಿದರು.

  • ವಿಮಾನಯಾನದ ವೇಳೆ ಬೆತ್ತಲಾದ ಪ್ರಯಾಣಿಕ..!- ನೋಡಿ ದಂಗಾದ್ರು ಸಹಪ್ರಯಾಣಿಕರು

    ವಿಮಾನಯಾನದ ವೇಳೆ ಬೆತ್ತಲಾದ ಪ್ರಯಾಣಿಕ..!- ನೋಡಿ ದಂಗಾದ್ರು ಸಹಪ್ರಯಾಣಿಕರು

    ಲಕ್ನೋ: ವಿಮಾನದಲ್ಲಿ ದುಬೈನಿಂದ ಲಕ್ನೋಗೆ ತೆರಳುತ್ತಿದ್ದ ಪ್ರಯಾಣಿಕನೊಬ್ಬ ಇದ್ದಕ್ಕಿದ್ದಂತೆ ತನ್ನ ಬಟ್ಟೆ ಬಿಚ್ಚಿ ವಿಮಾನದಲ್ಲಿ ಓಡಾಡಿರುವ ವಿಚಿತ್ರ ಘಟನೆ ಏರ್ ಇಂಡಿಯಾ ಎಕ್ಸ್‌ಪ್ರೆಸ್‌ ವಿಮಾನದಲ್ಲಿ ಶನಿವಾರದಂದು ನಡೆದಿದೆ.

    ದುಬೈನಿಂದ ಲಕ್ನೋಗೆ ತೆರಳುತ್ತಿದ್ದ ಐಎಕ್ಸ್-194 ವಿಮಾನದಲ್ಲಿ ಈ ಘಟನೆ ನಡೆದಿದೆ. ಪ್ರಯಾಣಿಕನೊಬ್ಬ ವಿಮಾನಯಾನದ ವೇಳೆ ಇದ್ದಕ್ಕಿದ್ದ ಹಾಗೆ ಬಟ್ಟೆ ಬಿಚ್ಚಿ ಬೆತ್ತಲಾಗಿ ವಿಮಾನದ ಉದ್ದಕ್ಕೂ ಓಡಾಡಿದ್ದಾನೆ. ಆತನ ವಿಚಿತ್ರ ವರ್ತನೆಯನ್ನು ಕಂಡ ಇತರೇ ಪ್ರಯಾಣಿಕರು ಒಂದು ಕ್ಷಣ ದಂಗಾಗಿದ್ದಾರೆ. ತಕ್ಷಣ ವಿಮಾನದಲ್ಲಿದ್ದ ಸಿಬ್ಬಂದಿ ಆತನಿಗೆ ಕಂಬಳಿ ಹೊದಿಸಿದ್ದಾರೆ. ಈ ಒಬ್ಬ ಪ್ರಯಾಣಿಕನಿಂದ ವಿಮಾನದಲ್ಲಿ ಕೆಲ ಕಾಲ ಆತಂಕದ ವಾತಾವರಣ ಸೃಷ್ಟಿಯಾಗಿತ್ತು.

    ಒಟ್ಟು 150 ಮಂದಿ ಪ್ರಯಾಣಿಸುತ್ತಿದ್ದ ವಿಮಾನದಲ್ಲಿ ಈ ಘಟನೆ ನಡೆದಿದ್ದು, ಲಕ್ನೋದಲ್ಲಿ ವಿಮಾನ ಲ್ಯಾಂಡ್ ಆಗುತ್ತಿದಂತೆ ದುರ್ವರ್ತನೆ ತೋರಿದ್ದ ವ್ಯಕ್ತಿಯನ್ನು ಏರ್‌ಲೈನ್‌ ಭದ್ರತಾ ಸಿಬ್ಬಂದಿ ವಶಕ್ಕೆ ಪಡೆದಿದ್ದಾರೆ. ಆದ್ರೆ ಆತ ಯಾಕೆ ಹಾಗೆ ವರ್ತಿಸಿದ ಎಂಬ ಕಾರಣ ತಿಳಿದು ಬಂದಿಲ್ಲ.

    ವಿಮಾನದ ಕ್ಯಾಪ್ಟನ್‍ನ ಮಾಹಿತಿ ಮೇರೆಗೆ ಪ್ರಯಾಣಿಕನನ್ನು ವಶಕ್ಕೆ ಪಡೆದ ಏರ್‌ಲೈನ್‌ ಭದ್ರತಾ ಸಿಬ್ಬಂದಿ ಆತನನ್ನು ವಿಚಾರಣೆ ನಡೆಸುತ್ತಿದ್ದಾರೆ ಎಂದು ಏರ್ ಇಂಡಿಯಾ ಎಕ್ಸ್‌ಪ್ರೆಸ್‌ ವಕ್ತಾರರು ಮಾಹಿತಿ ನೀಡಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv, ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv