Tag: Sedition Case

  • ಬಿಡದಿಯ ಪ್ರತಿಷ್ಠಿತ ಕಾರ್ಖಾನೆಯ ಶೌಚಾಲಯದಲ್ಲಿ ಪಾಕಿಸ್ತಾನ ಪರ ಬರಹ ಪತ್ತೆ

    ಬಿಡದಿಯ ಪ್ರತಿಷ್ಠಿತ ಕಾರ್ಖಾನೆಯ ಶೌಚಾಲಯದಲ್ಲಿ ಪಾಕಿಸ್ತಾನ ಪರ ಬರಹ ಪತ್ತೆ

    – ದೇಶದ್ರೋಹದ ಬರಹದಲ್ಲಿ ಕನ್ನಡಿಗರ ಬಗ್ಗೆಯೂ ಅವಾಚ್ಯ ಪದ ಬಳಕೆ
    – ಕಿಡಿಗೇಡಿಗಳ ಬಂಧನಕ್ಕೆ ಆಗ್ರಹಿಸಿ ಕನ್ನಡಪರ ಸಂಘಟನೆಗಳ ಪ್ರತಿಭಟನೆ

    ರಾಮನಗರ: ಇಲ್ಲಿನ ಬಿಡದಿಯ ಇಂಡಸ್ಟ್ರಿಯಲ್‌ ಏರಿಯಾದಲ್ಲಿರುವ ಪ್ರತಿಷ್ಠಿತ ಕಾರ್ಖಾನೆಯ ಶೌಚಾಲಯದಲ್ಲಿ ಪಾಕಿಸ್ತಾನ ಪರ ಬರಹ ಪತ್ತೆಯಾಗಿದೆ.

    ಶೌಚಾಲಯದ ಗೋಡೆ ಮೇಲೆ `ಪಾಕಿಸ್ತಾನಕ್ಕೆ ಜೈ, ಪಾಕಿಸ್ತಾನಕ್ಕೆ ಜಯವಾಗಲಿ’ ಎಂಬ ಬರಹ ಪತ್ತೆಯಾಗಿದೆ. ದೇಶದ್ರೋಹದ ಬರಹದ ಜೊತೆಗೆ ಕಿಡಿಗೇಡಿಗಳು ಕನ್ನಡಿಗರ ಬಗ್ಗೆಯೂ ಅವಾಚ್ಯ ಬರಹ ಬರೆದಿದ್ದಾರೆ. ಕಾರ್ಖಾನೆಯಲ್ಲಿ ಕೆಲಸ ಮಾಡುವ ಕಿಡಿಗೇಡಿಗಳೇ ಈ ಆಕ್ಷೇಪಾರ್ಹ ಬರಹ ಬರೆದಿರುವ ಅನುಮಾನ ವ್ಯಕ್ತವಾಗಿದೆ. ಇದನ್ನೂ ಓದಿ: ಬಟ್ಟೆ ಹಾಕೊಂಡು ಬಂದ್ರೆ ಈ ಬೀಚ್‌ಗೆ ನೋ ಎಂಟ್ರಿ – ಎಲ್ಲಿದೆ ‘ನ್ಯೂಡಿಸ್ಟ್‌ ಬೀಚ್‌’; ಯಾಕೆ ಈ ರೂಲ್ಸ್‌?

    ಕಿಡಿಗೇಡಿಗಳ ಕೃತ್ಯವನ್ನ ಕಾರ್ಖಾನೆಯ ಆಡಳಿತ ಮಂಡಳಿ ನೋಟಿಸ್ ಬೋರ್ಡ್‌ನಲ್ಲಿ ಹಾಕಿದ್ದು, ಈ ರೀತಿಯ ಬರವಣಿಗೆ ಉದ್ಯೋಗಿಗಳ ಮನಸ್ಸಿನಲ್ಲಿ ಅಶಾಂತಿ ಸೃಷ್ಟಿಸುವುದಲ್ಲದೇ ಸಂಸ್ಥೆಯಲ್ಲಿ ತೀವ್ರ ರೀತಿಯ ಅಶಿಸ್ತಿನ ಬೆಳವಣಿಗೆಗೆ ಕಾರಣವಾಗುತ್ತದೆ. ಇದು ಮುಂದುವರೆದು ದೇಶದ ಕಾನೂನಿನ ಚೌಕಟ್ಟಿನಲ್ಲಿ ದೇಶದ್ರೋಹಿ ಅಪರಾಧವಾಗುತ್ತದೆ. ಅಂತಹ ಕಾರ್ಮಿಕರನ್ನ ಪೊಲೀಸರಿಗೆ ಒಪ್ಪಿಸಿ, ಜೈಲು ವಾಸವಾಗುವಂತೆ ಕ್ರಮವಹಿಸುತ್ತೇವೆ ಎಂದು ಎಚ್ಚರಿಕೆ ನೀಡಿ ಕೈತೊಳೆದುಕೊಂಡಿದೆ. ಅಲ್ಲದೇ ಈ ಬಗ್ಗೆ ಪೊಲೀಸರಿಗೆ ಮಾಹಿತಿ ನೀಡದೆ ಸುಮ್ಮನಾಗಿದೆ. ಇದನ್ನೂ ಓದಿ: IPL 2025 | 10 ತಂಡಗಳ ನಾಯಕರ ಹೆಸರು ಫೈನಲ್‌ – 9 ಮಂದಿ ಭಾರತೀಯರದ್ದೇ ಆರ್ಭಟ

    ವಿಚಾರ ತಿಳಿಯುತ್ತಿದ್ದಂತೆಯೇ ಶುಕ್ರವಾರ ರಾತ್ರಿ ಕಾರ್ಖಾನೆಗೆ ದೌಡಾಯಿಸಿದ ಪೊಲೀಸರು, ಬರಹ ಬರೆದ ಶೌಚಾಲಯದ ಸ್ಥಳ ಪರಿಶೀಲನೆ ಮಾಡಿದರು. ಬಳಿಕ ಕಾರ್ಖಾನೆಯ ಆಡಳಿತ ಮಂಡಳಿ ಹಾಗೂ ಕಾರ್ಮಿಕರಿಂದ ಮಾಹಿತಿ ಪಡೆದು, ಕಾರ್ಖಾನೆಯ ಸಿಸಿಟಿವಿ ಕ್ಯಾಮೆರಾವನ್ನು ಪರಿಶೀಲನೆ ಮಾಡಿದರು. ಕಾರ್‌ನ ಸೀಟ್‌ಗಳನ್ನ ತಯಾರು ಮಾಡುವ ಕಾರ್ಖಾನೆಯಲ್ಲಿ ಸುಮಾರು 400 ಜನ ಕಾರ್ಮಿಕರು ಕೆಲಸ ಮಾಡುತ್ತಿದ್ದಾರೆ. ಇದನ್ನೂ ಓದಿ: ಉಡುಪಿ ಶ್ರೀಕೃಷ್ಣನ ರಥೋತ್ಸವ ಸೇವೆಯಲ್ಲಿ ಭಾಗಿಯಾದ ತೇಜಸ್ವಿ ಸೂರ್ಯ ದಂಪತಿ

    ಈ ಬಗ್ಗೆ ಬಿಡದಿ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ. ಅನಾಮಧೇಯ ವ್ಯಕ್ತಿ ವಿರುದ್ಧ ಪ್ರಕರಣ ದಾಖಲಿಸಿಕೊಂಡು ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

    ಶೌಚಾಲಯದಲ್ಲಿ ಪಾಕಿಸ್ತಾನದ ಪರ ಕನ್ನಡಿಗರ ವಿರುದ್ಧವೂ ಅವಹೇಳನ ಬರಹ ಹಿನ್ನೆಲೆ ಕಿಡಿಗೇಡಿಗಳ ಬಂಧನಕ್ಕೆ ಕನ್ನಡಪರ ಸಂಘಟನೆಗಳು ಒತ್ತಾಯಿಸಿ ಕಾರ್ಖಾನೆ ಎದುರು ಪ್ರತಿಭಟನೆ ನಡೆಸಿದರು. ಇದು ದೇಶದ್ರೋಹದ ಕೆಲಸ, ಇಂತಹ ಕೃತ್ಯ ಎಸಗಿರುವವರನ್ನ ಗಡಿಪಾರು ಮಾಡುವಂತೆ ಒತ್ತಾಯಿಸಿದರು. ಇದನ್ನೂ ಓದಿ: ಕೈಗಾದಲ್ಲಿ ಉದ್ಯೋಗ ಮಾಹಿತಿ ನೀಡದೇ ಕನ್ನಡಿಗರಿಗೆ ವಂಚನೆ!

    ಕಾರ್ಖಾನೆ ಆಡಳಿತ ಮಂಡಳಿ ಕೇವಲ ನೋಟಿಸ್ ಬೋರ್ಡ್‌ನಲ್ಲಿ ಎಚ್ಚರಿಕೆ ನೀಡಿ ಸುಮ್ಮನಾಗಿದೆ. ಈ ಬಗ್ಗೆ ಪೊಲೀಸರಿಗೆ ದೂರು ಕೊಡಲು ವಿಳಂಬ ಮಾಡಿದೆ ಎಂದು ಕಿಡಿಕಾರಿದರು. ಅಲ್ಲದೇ ಕಾರ್ಖಾನೆ ಆಡಳಿತ ಮಂಡಳಿ ನಿರ್ಲಕ್ಷ್ಯದ ವಿರುದ್ಧವೂ ಆಕ್ರೋಶ ಹೊರಹಾಕಿದರು. ಇದನ್ನೂ ಓದಿ: ಇಂದು ಸುಮಲತಾ ಅಂಬರೀಶ್ ಮೊಮ್ಮಗನ ನಾಮಕರಣ – ಸಮಾರಂಭಕ್ಕೆ ಮನೆಮಗ ದರ್ಶನ್ ಬರ್ತಾರಾ?

    ಬಿಡದಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಪ್ರಕರಣ ನಡೆದಿದೆ.

  • ಬಂಧನಕ್ಕೂ 10 ದಿನ ಮೊದಲೇ ರಶೀದ್‍ಗೆ ನೋಟಿಸ್ ನೀಡ್ಬೇಕು: ದೆಹಲಿ ಕೋರ್ಟ್

    ಬಂಧನಕ್ಕೂ 10 ದಿನ ಮೊದಲೇ ರಶೀದ್‍ಗೆ ನೋಟಿಸ್ ನೀಡ್ಬೇಕು: ದೆಹಲಿ ಕೋರ್ಟ್

    – ದೇಶದ್ರೋಹ ಪ್ರಕರಣದ ಆರೋಪಿ ಶೆಹ್ಲಾ

    ನವದೆಹಲಿ: ಸಾಮಾಜಿಕ ಹೋರಾಟಗಾರ್ತಿ, ಜವಾಹರಲಾಲ್ ನೆಹರೂ ವಿಶ್ವವಿದ್ಯಾಲಯ (ಜೆಎನ್‍ಯು) ವಿದ್ಯಾರ್ಥಿ ಸಂಘಟನೆಯ ಮಾಜಿ ಉಪಾಧ್ಯಕ್ಷೆ ಶೆಹ್ಲಾ ರಶೀದ್ ಬಂಧನಕ್ಕೂ 10 ದಿನಗಳ ಮುನ್ನ ನೋಟಿಸ್ ನೀಡಬೇಕು ಎಂದು ದೆಹಲಿ ಕೋರ್ಟ್ ಆದೇಶಿಸಿದೆ.

    ಶೆಹ್ಲಾ ರಶೀದ್ ಸಾಮಾಜಿಕ ಜಾಲತಾಣದಲ್ಲಿ ಭಾರತೀಯ ಸೈನ್ಯವನ್ನು ದೂಷಿಸಿದ್ದರು. ಈ ಪ್ರಕರಣದ ಸಂಬಂಧ ವಿಚಾರಣೆ ನಡೆಸಿದ ದೆಹಲಿ ಕೋರ್ಟ್, ಶೆಹ್ಲಾ ರಶೀದ್ ಅವರನ್ನು ಬಂಧಿಸುವ ಅಗತ್ಯವಿದ್ದಲ್ಲಿ 10 ದಿನಗಳ ಮೊದಲೇ ಬಂಧನ ನೋಟಿಸ್ ನೀಡಬೇಕು ಎಂದು ಪೊಲೀಸರಿಗೆ ನಿರ್ದೇಶನ ನೀಡಿದೆ. ಇದನ್ನೂ ಓದಿ: RSS, ನಿತಿನ್ ಗಡ್ಕರಿ ಸೇರಿ ಮೋದಿ ಹತ್ಯೆಗೆ ಪ್ಲಾನ್ – ಜೆಎನ್‍ಯು ವಿದ್ಯಾರ್ಥಿನಿ ಆರೋಪ

    ಜಮ್ಮು ಮತ್ತು ಕಾಶ್ಮೀರ ಪೊಲೀಸರಿಗೆ ಕಾನೂನು ಸುವ್ಯವಸ್ಥೆ ಕಾಪಾಡುವ ಯಾವುದೇ ಅಧಿಕಾರವಿಲ್ಲ ಎಂದು ಜನರು ಹೇಳುತ್ತಿದ್ದಾರೆ. ಅವರನ್ನು ಶಕ್ತಿ ಹೀನರನ್ನಾಗಿ ಮಾಡಲಾಗಿದೆ. ಎಲ್ಲವೂ ಅರೆ ಸೈನಿಕರ ಕೈಯಲ್ಲಿದೆ. ಸಿಆರ್‍ಪಿಎಫ್ ಸಿಬ್ಬಂದಿ ಸೂಚನೆ ಮೇರೆಗೆ ಪೊಲೀಸ್ ಠಾಣೆಯ ಅಧಿಕಾರಿಯೊಬ್ಬರನ್ನು ವರ್ಗಾವಣೆ ಮಾಡಲಾಗಿದೆ. ಅಲ್ಲದೆ ಸಶಸ್ತ್ರ ಪಡೆಗಳು ರಾತ್ರಿ ಮನೆಗೆ ನುಗ್ಗಿ ದರೋಡೆ ಮಾಡುತ್ತಿವೆ ಎಂದು ಶೆಹ್ಲಾ ರಶೀದ್ ಟ್ವೀಟ್ ಮೂಲಕ ಆರೋಪ ಮಾಡಿದ್ದರು.

    ಈ ಸಂಬಂಧ ಸುಪ್ರೀಂ ಕೋರ್ಟ್ ವಕೀಲ ಅಲೋಕ್ ಶ್ರೀವಾಸ್ತವ್ ಅವರು ದೂರು ನೀಡಿದ್ದರು. ಈ ದೂರಿನ ಅನ್ವಯ ದೆಹಲಿ ಪೊಲೀಸರು ಶೆಹ್ಲಾ ರಶೀದ್ ವಿರುದ್ಧ ಐಪಿಸಿ ಸೆಕ್ಷನ್ 124-ಎ (ದೇಶದ್ರೋಹ), 153 (ದೊಂಬಿ ಎಬ್ಬಿಸುವ ಸಲುವಾಗಿ ಹೊಣೆಗಾರಿಕೆ ಮರೆತು ಪ್ರಚೋದನೆ ಹೇಳಿಕೆ ನೀಡುವುದು), 153-ಎ (ಧರ್ಮ, ಜನಾಂಗ, ಜನ್ಮಸ್ಥಳ, ನಿವಾಸ, ಭಾಷೆ ಇತ್ಯಾದಿಗಳ ಆಧಾರದ ಮೇಲೆ ವಿವಿಧ ಗುಂಪುಗಳ ನಡುವೆ ವೈಷಮ್ಯವನ್ನು ಉತ್ತೇಜಿಸುವುದು) ಸೇರಿದಂತೆ ವಿವಿಧ ಸೆಕ್ಷನ್ ಅಡಿಯಲ್ಲಿ ಪ್ರಕರಣ ದಾಖಲಾಗಿತ್ತು.

    ಈ ಕುರಿತು ಪ್ರತಿಕ್ರಿಯಿಸಿದ್ದ ವಕೀಲ ಅಲೋಕ್ ಶಿವಾಸ್ತವ್, ಭಾರತೀಯ ಸೇನೆಯ ಕುರಿತಾಗಿ ಶೆಹ್ಲಾ ರಶೀದ್ ಮಾಡಿದ ಆರೋಪ ಸಂಪೂರ್ಣ ಸುಳ್ಳು. ಅವರು ತಮ್ಮ ಆರೋಪಕ್ಕೆ ಯಾವುದೇ ಸಾಕ್ಷಿಯನ್ನು ಒದಗಿಸಿಲ್ಲ. ಈ ಮಾಹಿತಿಯನ್ನು ಆಧರಿಸಿ ಅಂತರಾಷ್ಟ್ರೀಯ ಮಾಧ್ಯಮಗಳು ಸುದ್ದಿ ಪ್ರಕಟಿಸಿವೆ. ಈ ಮೂಲಕ ಭಾರತದ ಹೆಸರಿಗೆ ಕಳಂಕ ತರಲಾಗಿದೆ ಎಂದು ದೂರಿದ್ದರು.