ರಾಂಚಿ: ಮನೆ ಕೆಲಸದಾಕೆಗೆ ಚಿತ್ರಹಿಂಸೆ ನೀಡಿದ ಆರೋಪದಲ್ಲಿ ಅಮಾನತುಗೊಂಡಿರುವ ಬಿಜೆಪಿ ನಾಯಕಿ ಸೀಮಾ ಪಾತ್ರಾ ಅವರನ್ನು ಬಂಧಿಸಲಾಗಿದೆ. ಸೀಮಾ ಪತ್ರಾ ತನ್ನ ಮನೆಯ ಕೆಲಸದಾಕೆಯನ್ನು ಒತ್ತೆಯಾಳಾಗಿ ಇಟ್ಟುಕೊಂಡು ಚಿತ್ರಹಿಂಸೆ ನೀಡಿದ ಪ್ರಕರಣ ಬಯಲಿಗೆ ಬಂದ ಬಳಿಕ ಜಾರ್ಖಂಡ್ ಬಿಜೆಪಿ ಅವರನ್ನು ಅಮಾನತುಗೊಳಿಸಿದೆ.
ಸೀಮಾ ಪತ್ರಾ ತನ್ನ ಮನೆಯಲ್ಲಿ ಕೆಲಸಕ್ಕಿದ್ದ ಬುಡಕಟ್ಟು ಮಹಿಳೆಗೆ ಚಿತ್ರಹಿಂಸೆ ನೀಡಿದ ಆರೋಪದಲ್ಲಿ ಪ್ರಕರಣ ದಾಖಲಿಸಲಾಗಿದೆ. ಪತ್ರಾ ಅವರು ಮಾಜಿ ಐಎಎಸ್ ಅಧಿಕಾರಿ ಮಹೇಶ್ವರ್ ಪಾತ್ರಾ ಅವರ ಪತ್ನಿ. ಸುನೀತಾ ಎಂದು ಗುರುತಿಸಲಾದ ಕೆಲಸದಾಳುವಿಗೆ ಸೀಮಾ ಟಾಯ್ಲೆಟ್ ಅನ್ನು ನಾಲಿಗೆಯಿಂದ ಸ್ವಚ್ಛಗೊಳಿಸುವಂತೆ ಒತ್ತಾಯಿಸಿ ಚಿತ್ರಹಿಂಸೆ ನೀಡುತ್ತಿದ್ದರು ಎಂದು ಆರೋಪಿಸಲಾಗಿದೆ. ಇದನ್ನೂ ಓದಿ: ಮನೆಕೆಲಸದಾಕೆಗೆ ಮೂತ್ರ ಕುಡಿಸಿ ಚಿತ್ರಹಿಂಸೆ ನೀಡಿದ ನಾಯಕಿ – ಬಿಜೆಪಿಯಿಂದ ಅಮಾನತು
ಸೀಮಾ ಪಾತ್ರಾ ತನ್ನ ಮನೆ ಕೆಲಸದಾಕೆಗೆ ಕಿರುಕುಳ ನೀಡಿದ ವರದಿಯನ್ನು ರಾಷ್ಟ್ರೀಯ ಮಹಿಳಾ ಆಯೋಗ ತನ್ನ ಗಮನಕ್ಕೆ ತೆಗೆದುಕೊಂಡಿದೆ. ಎನ್ಸಿಡಬ್ಲ್ಯು ಅಧ್ಯಕ್ಷೆ ರೇಖಾ ಶರ್ಮಾ, ಸಮಿತಿ ಜಾರ್ಖಂಡ್ನ ಡಿಜಿಪಿಗೆ ಪತ್ರ ಬರೆದಿದ್ದು, ಈ ಆರೋಪಗಳು ನಿಜವೆಂದು ಕಂಡುಬಂದಲ್ಲಿ ಆರೋಪಿಯನ್ನು ಬಂಧಿಸುವಂತೆ ತಿಳಿಸಿದ್ದಾರೆ. ಇದನ್ನೂ ಓದಿ: ದತ್ತು ಪುತ್ರನ ಶವದೊಂದಿಗೆ 4 ದಿನ ಕಳೆದ 82ರ ವೃದ್ಧ
Live Tv
[brid partner=56869869 player=32851 video=960834 autoplay=true]
ರಾಂಚಿ: ಮನೆ ಕೆಲಸದಾಕೆಗೆ ಕ್ರೂರವಾಗಿ ಚಿತ್ರಹಿಂಸೆ ನೀಡಿದ ಆರೋಪದ ಮೇರೆಗೆ ಜಾರ್ಖಂಡ್ನ ಬಿಜೆಪಿ ನಾಯಕಿ ಸೀಮಾ ಪಾತ್ರಾ ಅವರನ್ನು ಬಿಜೆಪಿ ಇಂದು ಅಮಾನತುಗೊಳಿಸಿದೆ.
ಸೀಮಾ ಪಾತ್ರಾ ಅವರು ಬಿಜೆಪಿ ಮಹಿಳಾ ವಿಭಾಗದ ರಾಷ್ಟ್ರೀಯ ಕಾರ್ಯಕಾರಿ ಸಮಿತಿ ಸದಸ್ಯರಾಗಿದ್ದರು. ಜೊತೆಗೆ ಅವರ ಪತಿ ಮಹೇಶ್ವರ್ ಪಾತ್ರಾ ನಿವೃತ್ತ ಐಎಎಸ್ ಅಧಿಕಾರಿಯಾಗಿದ್ದಾರೆ. ಮನೆಕೆಲಸದಾಕೆಗೆ ಸೀಮಾ ಪಾತ್ರಾ ಚಿತ್ರಹಿಂಸೆ ನೀಡುತ್ತಿರುವ ವೀಡಿಯೋ ವೈರಲ್ ಆಗಿತ್ತು. ಈ ಹಿನ್ನೆಲೆಯಲ್ಲಿ ಸೀಮಾ ಪಾತ್ರಾ ಅವರನ್ನು ಜಾರ್ಖಂಡ್ ಬಿಜೆಪಿ ಮುಖ್ಯಸ್ಥ ದೀಪಕ್ ಪ್ರಕಾಶ್ ಅಮಾನತುಗೊಳಿಸಿದ್ದಾರೆ.
ವೀಡಿಯೋದಲ್ಲಿ ಏನಿದೆ?: ವೈರಲ್ ಆದ ವೀಡಿಯೋದಲ್ಲಿ ಸುನೀತಾ ಎಂಬಾಕೆ ಆಸ್ಪತ್ರೆಯ ಹಾಸಿಗೆಯ ಮೇಲೆ ಕಾಣಿಸಿಕೊಂಡಿದ್ದಾರೆ. ಅಷ್ಟೇ ಅಲ್ಲದೇ ಅವರು ಕುಳಿತುಕೊಳ್ಳಲು ಅಸಮರ್ಥರಾಗಿದ್ದು, ಅವರ ಬಾಯಲ್ಲಿ ಅನೇಕ ಹಲ್ಲುಗಳು ಇಲ್ಲದಿರುವುದನ್ನು ನೋಡಬಹುದಾಗಿದೆ. ಅಷ್ಟೇ ಅಲ್ಲದೇ ಅವರ ದೇಹದ ಮೇಲೆ ಅನೇಕ ಗಾಯದ ಗುರುತುಗಳಿದ್ದು, ಇವೆಲ್ಲವೂ ಸುನೀತಾಗೆ ಚಿತ್ರಹಿಂಸೆ ನೀಡಿರುವುದು ಸೂಚಿಸುತ್ತದೆ. ಘಟನೆ ಸಂಬಂಧಿಸಿ ವೀಡಿಯೋ ವೈರಲ್ ಆಗುತ್ತಿದ್ದಂತೆ ಸಾಮಾಜಿಕ ಜಾಲತಾಣದಲ್ಲಿ ತೀವ್ರ ವಿರೋಧ ವ್ಯಕ್ತವಾಗುತ್ತಿದ್ದು, ಕೂಡಲೇ ಸೀಮಾ ಪಾತ್ರಾ ಅವರನ್ನು ಬಂಧಿಸಲು ಒತ್ತಾಯಿಸಿದ್ದಾರೆ.
रांची में रिटायर्ड IAS महेश्वर पात्रा की पत्नी भाजपा नेता सीमा पात्रा ने आदिवासी महिला सुनीता खाखा को 8 साल तक अपने घर में कैद कर सूरज भी नहीं देखने दिया। सुनीता से जीभ से फर्श साफ करवाया। पेशाब चटाया। रॉड से दांत तोड़ डाले। गर्म तबे से चेहरा जला डाला। शर्मनाक। #ArrestSeemaPatrapic.twitter.com/oTdJXMINJ1
ಘಟನೆಯೇನು?: ಸುನೀತಾ ಜಾರ್ಖಂಡ್ನ ಗುಮ್ಲಾ ಮೂಲದವರಾಗಿದ್ದು, ಸುಮಾರು 10 ವರ್ಷಗಳ ಹಿಂದೆ ಪತ್ರಾಸ್ನಲ್ಲಿ ಮನೆ ಕೆಲಸ ಮಾಡುತ್ತಿದ್ದರು. ಇದಾದ ನಂತರ ಸ್ವಲ್ಪ ಸಮಯ ದೆಹಲಿಗೆ ಕೆಲಸಕ್ಕೆಂದು ತೆರಳಿದ್ದರು. ಇದಾದ ನಂತರ 6 ವರ್ಷದ ಹಿಂದ ಮತ್ತೆ ರಾಂಚಿಗೆ ಮರಳಿದ್ದರು.
ಬಿಜೆಪಿ ನಾಯಕಿ ಆಗಿರುವ ಸೀಮಾಪಾತ್ರ, ಬಿಸಿ ತವಾ ಹಾಗೂ ರಾಡ್ಗಳಿಂದ ನನ್ನ ಹಲ್ಲುಗಳನ್ನೆಲ್ಲಾ ಒಡೆದು ಹಾಕಿದ್ದಾಳೆ. ಅದಾದ ನಂತರ ಮೂತ್ರ ಸೇವನೆ ಮಾಡುವಂತೆ ಆದೇಶಿಸುತ್ತಿದ್ದಳು. ಆದರೆ ನಾನೇನು ತಪ್ಪು ಮಾಡಿದೆ ಎಂದೇ ಹೇಳದೆಯೇ ನಿರಂತರವಾಗಿ ಚಿತ್ರಹಿಂಸೆ ನೀಡುತ್ತಿದ್ದಳು. ಆದರೆ ಸೀಮಾಪಾತ್ರಾ ಮಗ ಆಯುಷ್ಮಾನ್ ಮಾತ್ರ ನನಗೆ ಸಹಾಯ ಮಾಡುತ್ತಿದ್ದ, ಅತನಿಂದಲೇ ನಾನು ಬದುಕಿದ್ದೇನೆ ಎಂದು ಸುನೀತಾ ಅಳಲು ತೋಡಿಕೊಂಡಿದ್ದಾರೆ.