Tag: seetharama

  • ಆಗೋದೆಲ್ಲಾ ಒಳ್ಳೆಯದಕ್ಕೆ ಭಗವಂತ ನಮ್ಮೊಂದಿಗೆ ಇದ್ದಾನೆ: ಕಹಿ ಘಟನೆ ನೆನೆದ ವೈಷ್ಣವಿ

    ಆಗೋದೆಲ್ಲಾ ಒಳ್ಳೆಯದಕ್ಕೆ ಭಗವಂತ ನಮ್ಮೊಂದಿಗೆ ಇದ್ದಾನೆ: ಕಹಿ ಘಟನೆ ನೆನೆದ ವೈಷ್ಣವಿ

    ‘ಸೀತಾರಾಮ’ ಸೀರಿಯಲ್ ನಟಿ ವೈಷ್ಣವಿ ಗೌಡ (Vaishnavi Gowda) ಅವರು ಅನುಕೂಲ್ ಮಿಶ್ರಾ ಜೊತೆ ಹಸೆಮಣೆ ಏರಲು ಸಜ್ಜಾಗಿದ್ದಾರೆ. ಮದುವೆಯಾಗೋ ಭಾವಿ ಪತಿ ಬಗ್ಗೆ ಓಪನ್ ಆಗಿ ‘ಪಬ್ಲಿಕ್ ಟಿವಿ’ ಜೊತೆ ನಟಿ ಹಂಚಿಕೊಂಡಿದ್ದಾರೆ. ಈ ವೇಳೆ, ಈ ಹಿಂದೆ ಮುರಿದುಬಿದ್ದ ಸಂಬಂಧದ ಬಗ್ಗೆ ನಟಿ ಮೌನ ಮುರಿದಿದ್ದಾರೆ. ಜೀವನದಲ್ಲಿ ಆಗೋದೆಲ್ಲಾ ಒಳ್ಳೆಯದಕ್ಕೆ ಎಂದು ನಟಿ ವೈಷ್ಣವಿ ರಿಯಾಕ್ಟ್ ಮಾಡಿದ್ದಾರೆ. ಇದನ್ನೂ ಓದಿ:ನಮ್ದು ಅರೇಂಜ್ ಮ್ಯಾರೇಜ್ – ನಾವು ಬೆಂಗಳೂರಿನಲ್ಲೇ ಇರ‍್ತೀವಿ: ವೈಷ್ಣವಿ ಗೌಡ

    ನನ್ನ ಜೀವನದಲ್ಲಿ ಒಂದನ್ನೇ ನಂಬಿರೋದು. ಆಗೋದೆಲ್ಲಾ ಒಳ್ಳೆಯದಕ್ಕೆ ಭಗವಂತ ನಮ್ಮ ಜೊತೆ ಇದ್ದಾನೆ. ಅವರು ಯಾವತ್ತೂ ನನ್ನ ಕೈಬಿಡೋದಿಲ್ಲ. ಅದನ್ನು ಅಷ್ಟೇ ನಂಬಿದ್ದೀನಿ. ಒಳ್ಳೆಯ ಮನಸ್ಸಿದ್ದರೆ ಒಳ್ಳೆಯದು ಆಗುತ್ತದೆ ಎಂದಿದ್ದಾರೆ. ಈ ಹಿಂದೆ ನಟ ವಿದ್ಯಾಭರಣ (Vidyabharan) ಜೊತೆ ಮುರಿದುಬಿದ್ದ ಮದುವೆ ವಿಚಾರಕ್ಕೆ ನಟಿ ಕ್ಲ್ಯಾರಿಟಿ ನೀಡಿದ್ದಾರೆ. ಕಹಿ ಘಟನೆ ಮರೆತು ಈಗ ಅನುಕೂಲ್ ಜೊತೆ ಹೊಸ ಅದ್ಯಾಯಕ್ಕೆ ಮುನ್ನುಡಿ ಬರೆಯಲು ವೈಷ್ಣವಿ ರೆಡಿಯಾಗಿದ್ದಾರೆ. ಇದನ್ನೂ ಓದಿ:ಇಬ್ರು ಹುಡ್ಗೀರು ನನ್ನ ಮಗಳ ಜೀವನ ಸರಿ ಮಾಡಿದ್ದಾರೆ: ವೈಷ್ಣವಿ ಗೌಡ ತಾಯಿ

    ಕಳೆದ ಸೋಮವಾರವಷ್ಟೇ ಏರ್‌ಫೋರ್ಸ್ ಲೆಫ್ಟಿನೆಂಟ್ ಆಗಿರುವ ಛತ್ತೀಸ್‌ಗಢ ಮೂಲದ ಅನುಕೂಲ್ (Anukool Mishra) ಜೊತೆ ವೈಷ್ಣವಿ ಗೌಡ ನಿಶ್ಚಿತಾರ್ಥ ಮಾಡಿಕೊಂಡಿದ್ದರು. ಒಂದು ವರ್ಷದಿಂದ ಅನುಕೂಲ್ ಪರಿಚಯವಿದೆ. ಇದು ಲವ್ ಮ್ಯಾರೇಜ್ ಎಂದು ಎಲ್ಲರೂ ಅಂದುಕೊಂಡಿದ್ದಾರೆ. ಆದರೆ ಇದು ಅರೇಂಜ್ ಮ್ಯಾರೇಜ್. ಇದು ಹಿರಿಯರು ನೋಡಿ ನಿಶ್ಚಯಿಸಿದ ಮದುವೆ ಎಂದು ಸ್ಪಷ್ಟನೆ ನೀಡಿದ್ದಾರೆ.

    ಮ್ಯಾಟ್ರಿಮೋನಿ ಮೂಲಕ ಜಾತಕ ಶೇರ್ ಆದ ಬಳಿಕ ಅಪ್ಪ ಅಮ್ಮ ಈ ಮದುವೆ ನಿಶ್ಚಯಿಸಿದ್ದಾರೆ. ನಾವಿಬ್ಬರೂ ಒಬ್ಬರಿಗೊಬ್ಬರು ಅರ್ಥ ಮಾಡಿಕೊಳ್ಳಲು 1 ವರ್ಷ ಸಮಯ ತೆಗೆದುಕೊಂಡಿದ್ದೆವು. ಮದುವೆ ತಯಾರಿ ನಡೀತಿದೆ. ಶೀಘ್ರದಲ್ಲೇ ಮದುವೆ ಆಗುತ್ತೇನೆ ಎಂದರು.

    ಈಗ ಎಲ್ಲರಿಗೂ ಉತ್ತರ ಸಿಕ್ಕಿದೆ. ನನಗೆ ಯಾವ ಥರದ ಹುಡುಗ ಬೇಕಿತ್ತು ಎಂದು. ಅನುಕೂಲ್ ಅವರು ಏರ್‌ಫೋರ್ಸ್‌ನಲ್ಲಿ ಇರೋದ್ರಿಂದ ಎತ್ತರವಾಗಿದ್ದಾರೆ. ಹೈಟ್ ಮ್ಯಾಚ್ ಆಗದೇ ಇದ್ದರೂ ಹಾರ್ಟ್ ಮ್ಯಾಚ್ ಆಗಿದೆ ಎನ್ನುತ್ತಾ ಭಾವಿ ಪತಿ ನೆನೆದು ವೈಷ್ಣವಿ ನಾಚಿನೀರಾಗಿದ್ದಾರೆ.

  • ಭಾವಿ ಪತಿಯನ್ನು ಪರಿಚಯಿಸಿದ ‘ಸೀತಾ ರಾಮ’ ನಟಿ ಮೇಘನಾ

    ಭಾವಿ ಪತಿಯನ್ನು ಪರಿಚಯಿಸಿದ ‘ಸೀತಾ ರಾಮ’ ನಟಿ ಮೇಘನಾ

    ‘ಸೀತಾ ರಾಮ’, ‘ಡ್ಯಾನ್ಸ್ ಕರ್ನಾಟಕ ಡ್ಯಾನ್ಸ್’ ಶೋ ಮೂಲಕ ಮನಗೆದ್ದಿರುವ ನಟಿ ಮೇಘನಾ ಶಂಕರಪ್ಪ (Meghana Shankarappa) ಅವರು ಅಭಿಮಾನಿಗಳಿಗೆ ಗುಡ್ ನ್ಯೂಸ್ ಕೊಟ್ಟಿದ್ದಾರೆ. ಭಾವಿ ಪತಿ ಜಯಂತ್ (Jayanth) ಜೊತೆಗಿನ ಫೋಟೋ ಹಂಚಿಕೊಂಡು ಎಂಗೇಜ್ ಆಗಿರೋದಾಗಿ ತಿಳಿಸಿದ್ದಾರೆ. ಇದನ್ನೂ ಓದಿ:ಡಿವೋರ್ಸ್ ವದಂತಿಗೆ ಫುಲ್ ಸ್ಟಾಪ್- ಜೊತೆಯಾಗಿ ಕಾಣಿಸಿಕೊಂಡ ಅಭಿಷೇಕ್, ಐಶ್ವರ್ಯಾ ರೈ

    ಸದ್ಯದಲ್ಲೇ ನಟಿ ಹಸೆಮಣೆ ಏರೋದಕ್ಕೆ ರೆಡಿಯಾಗಿದ್ದಾರೆ. ಭಾವಿ ಪತಿ ಜೊತೆಗಿನ ವಿಶೇಷ ವಿಡಿಯೋ ಹಂಚಿಕೊಂಡು ಫ್ಯಾನ್ಸ್‌ಗೆ ಪರಿಚಯಿಸಿದ್ದಾರೆ. ಹೊಸ ಜೋಡಿಗೆ ಅಭಿಮಾನಿಗಳು ಶುಭಕೋರುತ್ತಿದ್ದಾರೆ. ಸಿನಿಮಾ ಸ್ಟೈಲಿನಲ್ಲಿ ಭಾವಿ ಪತಿಯನ್ನು ನಟಿ ಪರಿಚಯಿಸಿದ್ದಾರೆ. ರೆಸ್ಟೋರೆಂಟ್‌ವೊಂದರಲ್ಲಿ ಕಾಫಿ ಕುಡಿಯಲು ಬಂದು ಆ ನಂತರ ಪಾರ್ಟ್ನರ್‌ ಮುಖವನ್ನು ನಟಿ ರಿವೀಲ್‌ ಮಾಡಿದ್ದಾರೆ.

    ಇನ್ನೂ ಈ ಹಿಂದೆ ನಮ್ಮನೆ ಯುವರಾಣಿ, ಕಿನ್ನರಿ, ರತ್ನಗಿರಿ ರಹಸ್ಯ, ಸಿಂಧೂರ, ಕೃಷ್ಣ ತುಳಸಿ ಸೇರಿದಂತೆ ಹಲವು ಸೀರಿಯಲ್‌ಗಳಲ್ಲಿ ಅವರು ನಟಿಸಿದ್ದಾರೆ. ಪ್ರಸ್ತುತ ಸೀತಾ ರಾಮ ಧಾರಾವಾಹಿಯಲ್ಲಿ ನಾಯಕಿ ಸೀತಾ ಫ್ರೆಂಡ್ ಪ್ರಿಯಾ ಪಾತ್ರದ ಮೂಲಕ ಮೇಘನಾ ಎಲ್ಲರ ಮನ ಗೆದ್ದಿದ್ದಾರೆ.

  • ವರಮಹಾಲಕ್ಷ್ಮಿ ಹಬ್ಬದಂದು ವೈಷ್ಣವಿ ಗೌಡ ಫ್ಯಾನ್ಸ್‌ಗೆ ಸಿಹಿಸುದ್ದಿ

    ವರಮಹಾಲಕ್ಷ್ಮಿ ಹಬ್ಬದಂದು ವೈಷ್ಣವಿ ಗೌಡ ಫ್ಯಾನ್ಸ್‌ಗೆ ಸಿಹಿಸುದ್ದಿ

    ಬಿಗ್ ಬಾಸ್ (Bigg Boss Kannada) ಖ್ಯಾತಿಯ ವೈಷ್ಣವಿ ಗೌಡ (Vaishnavi Gowda) ಇದೀಗ ‘ಬಿಳಿ ಚುಕ್ಕಿ ಹಳ್ಳಿ ಹಕ್ಕಿ’ (Bili Chukki Halli Hakki) ಕಥೆ ಹೇಳೋದಕ್ಕೆ ಸಜ್ಜಾಗಿದ್ದಾರೆ. ಸದ್ಯ ಸೀತಾರಾಮ ಸೀರಿಯಲ್ ಮೂಲಕ ಮೋಡಿ ಮಾಡಿರೋ ಡಿಂಪಲ್ ಚೆಲುವೆ ವೈಷ್ಣವಿ ನಟನೆಯ ಹೊಸ ಸಿನಿಮಾ ಸೆಟ್ಟೇರಿದೆ. ‘ಮಹಿರ’ (Mahira) ಖ್ಯಾತಿಯ ನಿರ್ದೇಶಕ ಮಹೇಶ್ ಗೌಡ ಆ್ಯಕ್ಷನ್ ಕಟ್ ಹೇಳ್ತಿದ್ದಾರೆ. ಇದನ್ನೂ ಓದಿ:ಹಾಸ್ಯ ಅರ್ಥವಾಗದ ಹಾಸ್ಯಾಸ್ಪದರೇ… : ಪ್ರಕಾಶ್‌ ರಾಜ್‌ ಮತ್ತೊಂದು ಟ್ವೀಟ್‌

    ‘ಮಹಿರ’ ಸಿನಿಮಾ ಮೂಲಕ ಮೊದಲ ಹೆಜ್ಜೆಯಲ್ಲಿಯೇ ಗಮನ ಸೆಳೆದವರು ಮಹೇಶ್ ಗೌಡ. ಸಸ್ಪೆನ್ಸ್ ಥ್ರಿಲ್ಲರ್ ಶೈಲಿಯ ಸಿನಿಮಾ ಮಾಡಿ ಪ್ರೇಕ್ಷಕರನ್ನ ರಂಜಿಸಿದ್ದ ಮಹೇಶ್ ಈ ಬಾರಿ ವಿಭಿನ್ನ ಬಗೆಯ ಕಥಾಹಂದರದೊಂದಿಗೆ ಪ್ರತ್ಯಕ್ಷರಾಗಿದ್ದಾರೆ. ತೊನ್ನು (ವಿಟಿಲಿಗೋ) ಸಮಸ್ಯೆಯನ್ನು ಪ್ರಧಾನವಾಗಿಟ್ಟುಕೊಂಡು ‘ಬಿಳಿ ಚುಕ್ಕಿ ಹಳ್ಳಿ ಹಕ್ಕಿ’ ಎಂಬ ಚಿತ್ರ ನಿರ್ದೇಶಿಸಿ, ನಟಿಸುತ್ತಿದ್ದಾರೆ. ಈ ಸಿನಿಮಾದ ಮುಹೂರ್ತ ಸಮಾರಂಭ ಬೆಂಗಳೂರಿನ ಸಿದ್ದಿ ವಿನಾಯಕ ದೇಗುಲದಲ್ಲಿ ನೆರವೇರಿದೆ. ಇದನ್ನೂ ಓದಿ:ಹಾಸ್ಯ ಅರ್ಥವಾಗದ ಹಾಸ್ಯಾಸ್ಪದರೇ… : ಪ್ರಕಾಶ್‌ ರಾಜ್‌ ಮತ್ತೊಂದು ಟ್ವೀಟ್‌

    ನಿರ್ದೇಶಕ ಮಹೇಶ್ ಗೌಡ (Mahesh Gowda) ತಮ್ಮಲ್ಲಿರುವ ವಿಟಿಲಿಗೋ ಸಮಸ್ಯೆಗೆ ಕಾಮಿಡಿ ಹಾಗೂ ರೊಮ್ಯಾಂಟಿಕ್ ಟಚ್ ಕೊಟ್ಟು ‘ಬಿಳಿ ಚುಕ್ಕಿ ಹಳ್ಳಿ ಹಕ್ಕಿ’ ಕಥೆ ರೂಪಿಸಿದ್ದಾರೆ. ಹೊನ್ನುಡಿ ಪ್ರೊಡಕ್ಷನ್ ಅಡಿಯಲ್ಲಿ ಈ ಸಿನಿಮಾ ನಿರ್ಮಾಣ ಮಾಡ್ತಿದ್ದಾರೆ. ‘ಬಿಳಿ ಚುಕ್ಕಿ ಹಳ್ಳಿ ಹಕ್ಕಿ’ ಚಿತ್ರಕ್ಕೆ ಚಿತ್ರಕಥೆ ಬರೆದು ನಿರ್ದೇಶನ ಮಾಡುವುದರ ಜೊತೆಗೆ ಶಿವ ಎಂಬ ಪಾತ್ರಕ್ಕೆ ಮಹೇಶ್ ಗೌಡ ನಾಯಕನಾಗಿ ಜೀವ ತುಂಬಿದ್ದಾರೆ.  ಮಹೇಶ್‌ಗೆ ಜೋಡಿಯಾಗಿ ನಟಿ ವೈಷ್ಣವಿ, ಹಳ್ಳಿ ಹುಡುಗಿಯಾಗಿ ಕವಿತಾ ಪಾತ್ರದಲ್ಲಿ ನಟಿಸಿದ್ದಾರೆ.

    ಶಿವನ ಸಮಸ್ಯೆ ಗೊತ್ತಿದ್ರು ಬಾಳ ಸಂಗಾತಿಯಾಗಿ ಕವಿತಾ ಬರುತ್ತಾಳೆ. ಸಮಸ್ಯೆ ಗೊತ್ತಿದ್ರು ಕವಿತಾ ತನ್ನನ್ನ ಯಾಕೆ ಮದುವೆ ಆಗಿದ್ದಾಳೆ ಅನ್ನೋ ಗೊಂದಲದಲ್ಲಿರೋ ನಾಯಕನ ಕಥೆ. ಈ ಗೊಂದಲದ ಮಧ್ಯೆಯೇ ಸಾಗುವ ಒಂದು ಮುದ್ದಾದ ಲವ್ ಸ್ಟೋರಿ ಬಿಳಿ ಚುಕ್ಕಿ ಹಳ್ಳಿ ಹಕ್ಕಿ. ವರಮಹಾಲಕ್ಷ್ಮಿ ಆಶೀರ್ವಾದದೊಂದಿಗೆ ಇಂದಿನಿಂದ ಚಿತ್ರತಂಡ ಶೂಟಿಂಗ್ ಶುರು ಮಾಡಿದೆ. ಕಿರಣ್ ಸಿಎಚ್‌ಎಂ ಕ್ಯಾಮೆರಾ, ರಿಯೋ ಆಂಟೋನಿ ಸಂಗೀತ ಸಿನಿಮಾಕ್ಕಿದೆ. ಕೊಪ್ಪ, ಶೃಂಗೇರಿ ಸುತ್ತಮುತ್ತ ಚಿತ್ರೀಕರಣ ನಡೆಯಲಿದೆ.

    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • 90ರ ದಶಕದ ಬಾಲನಟಿ ಸಿಂಧು ರಾವ್ ಮತ್ತೆ ಕಿರುತೆರೆಗೆ ಕಮ್‌ಬ್ಯಾಕ್

    90ರ ದಶಕದ ಬಾಲನಟಿ ಸಿಂಧು ರಾವ್ ಮತ್ತೆ ಕಿರುತೆರೆಗೆ ಕಮ್‌ಬ್ಯಾಕ್

    ವಿಷ್ಣುವರ್ಧನ್, ಅಂಬರೀಶ್, ದೇವರಾಜ್, ರವಿಚಂದ್ರನ್, ಶಿವಣ್ಣ ಜೊತೆ ತೆರೆಹಂಚಿಕೊಂಡಿದ್ದ ನಟಿ ಸಿಂಧು ರಾಮ್ ಮತ್ತೆ ಬಣ್ಣ ಹಚ್ಚಲು ಸಜ್ಜಾಗಿದ್ದಾರೆ. ವಿದ್ಯಾಭ್ಯಾಸದತ್ತ ಗಮನ ಹರಿಸಲು ಕೆಲವು ವರ್ಷಗಳ ಕಾಲ ನಟನೆಯಿಂದ ದೂರ ಉಳಿದಿದ್ದ ಸಿಂಧು ವೈವಾಹಿಕ ಬದುಕಿನ ಜಂಜಾಟದಲ್ಲಿ ಆಕ್ಟಿಂಗ್‌ಗೆ ಗುಡ್ ಬೈ ಹೇಳಿದ್ದರು. 90ರ ದಶಕದಲ್ಲಿ ಬಾಲನಟಿಯಾಗಿ ಮಿಂಚಿದ್ದ ಸಿಂಧು ರಾವ್ (Sindhu Rao) ಮತ್ತೆ ಟಿವಿ ಪರದೆಗೆ ಮರಳಿದ್ದಾರೆ. ಇದನ್ನೂ ಓದಿ:ಡಾಲಿ ಟೆಂಪಲ್ ರನ್, ಹುಟ್ಟೂರಿನ ದೇವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ

    ಒಂದು ಕಾಲದಲ್ಲಿ ಚಿತ್ರರಂಗದಲ್ಲಿ ಹೆಸರು ಮಾಡಿದ್ದ ಅನೇಕ ಕಲಾವಿದರು ಮದುವೆ ಹಾಗೂ ಇನ್ನಿತರ ಕಾರಣಗಳಿಂದ ನಟನೆಯಿಂದ ದೂರ ಉಳಿಯುತ್ತಾರೆ. ವೈಯಕ್ತಿಕ ಸಮಸ್ಯೆಗಳಿಂದಲೋ, ನಟನೆಯ ಮೇಲಿನ ಸೆಳೆತದಿಂದಲೋ ಮತ್ತೆ ಕ್ಯಾಮರಾ ಮುಂದೆ ಬರುತ್ತಾರೆ. ಇದೀಗ ಸಿಂಧು ರಾವ್ ವಿಚಾರದಲ್ಲಿ ಕೂಡಾ ಇದೇ ಆಗಿದೆ. ಡಾ. ವಿಷ್ಣುವರ್ಧನ್(Vishnuvardhan)  ಜೊತೆ ‘ನಾನೆಂದು ನಿಮ್ಮವನೇ’ ಸಿನಿಮಾ ಬಳಿಕ ಸಿಂಧು ರಾವ್, ರಾಯರು ಬಂದರು ಮಾವನ ಮನೆಗೆ, ಮದರ್ ಇಂಡಿಯಾ, ಕಲಾವಿದ, ಆಯುಧ, ಮೌನರಾಗ, ಒಂದಾಗೋಣ ಬಾ, ಪುಟ್ಮಲ್ಲಿ ಸೇರಿದಂತೆ ಅನೇಕ ಸಿನಿಮಾಗಳಲ್ಲಿ ನಟಿಸಿದರು. ವರ್ಷ ಚಿತ್ರದಲ್ಲಿ ಡಾ. ವಿಷ್ಣುವರ್ಧನ್ ಕೊನೆಯ ತಂಗಿಯಾಗಿ ನಟಿಸಿದ್ದರು. ಮೌನರಾಗ ಚಿತ್ರದ ನಟನೆಗಾಗಿ ಸಿಂಧುಗೆ ಕರ್ನಾಟಕ ರಾಜ್ಯ ಪ್ರಶಸ್ತಿ ಕೂಡಾ ದೊರೆತಿತ್ತು.

    ವಿದ್ಯಾಭ್ಯಾಸದತ್ತ ಗಮನ ಹರಿಸಲು ಕೆಲವು ವರ್ಷಗಳ ಕಾಲ ನಟನೆಯಿಂದ ದೂರ ಉಳಿದಿದ್ದ ಸಿಂಧು ನಾಯಕಿಯಾಗಿ ಅವಕಾಶಗಳಿಗೆ ಎದುರು ನೋಡಿದರೂ ಅದು ಸಾಧ್ಯವಾಗಲಿಲ್ಲ. ಮತ್ತೆ ಕೆಲವೊಂದು ಧಾರಾವಾಹಿಗಳಲ್ಲಿ ನಟಿಸಿ, ವೈವಾಹಿಕ ಬದುಕಿನ ಜಂಜಾಟದಲ್ಲಿ ಆಕ್ಟಿಂಗ್‌ಗೆ ಗುಡ್ ಬೈ ಹೇಳಿದ್ದರು. ಕೋವಿಡ್ ಸಮಯದಲ್ಲಿ ಅವರು ಗುಬ್ಬಿಮರಿ ಸಿನಿಮಾ, ಸಿಲ್ಲಿ ಲಲ್ಲಿ ಎರಡನೇ ಭಾಗದಲ್ಲಿ ನಟಿಸಿ ಮತ್ತೆ ಮರೆಯಾಗಿದ್ದರು.

    ವೈಷ್ಣವಿ ಗೌಡ(Vaishnavi Gowda) , ಗಗನ್ ನಟನೆಯ ‘ಸೀತಾರಾಮ’ (Seetharama) ಧಾರಾವಾಹಿಯಲ್ಲಿ ನಾಯಕನ ಚಿಕ್ಕಮ್ಮನ ಪಾತ್ರದಲ್ಲಿ ಸಿಂಧು ನಟಿಸುತ್ತಿದ್ದಾರೆ. ಸಿಂಧು ಮತ್ತೆ ನಟನೆಗೆ ವಾಪಸಾಗಿದ್ದನ್ನು ನೋಡಿ ಕಿರುತೆರೆಪ್ರಿಯರು ಸಂತೋಷ ವ್ಯಕ್ತಪಡಿಸಿದ್ದಾರೆ. ಈ ಚೆಲುವೆ ಈಗ ಅಪ್ಪಟ ಗೃಹಿಣಿ. ಇಬ್ಬರು ಗಂಡು ಮಕ್ಕಳಿದ್ಧಾರೆ. ಪತಿ ಮಹೇಶ್, ಸಿಂಧು ನಟನೆಗೆ ಬೆಂಬಲ ನೀಡುತ್ತಿದ್ದಾರೆ.

    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ವೆಕೇಷನ್ ಮೂಡ್‌ನಲ್ಲಿ ಅಮೂಲ್ಯ ಫ್ಯಾಮಿಲಿ- ಗೋಲ್ಡನ್‌ ಕ್ವೀನ್‌ ಜೊತೆ ವೈಷ್ಣವಿ

    ವೆಕೇಷನ್ ಮೂಡ್‌ನಲ್ಲಿ ಅಮೂಲ್ಯ ಫ್ಯಾಮಿಲಿ- ಗೋಲ್ಡನ್‌ ಕ್ವೀನ್‌ ಜೊತೆ ವೈಷ್ಣವಿ

    ಸ್ಯಾಂಡಲ್‌ವುಡ್‌ನ (Sandalwood) ಗೋಲ್ಡನ್ ಬ್ಯೂಟಿ ಅಮೂಲ್ಯ (Amulya) ಅವರು ವೆಕೇಷನ್ ಫೋಟೋವನ್ನ ಹಂಚಿಕೊಂಡಿದ್ದಾರೆ. ಮಲೆನಾಡು ಚಿಕ್ಕಮಗಳೂರಿನಲ್ಲಿ ಅಮೂಲ್ಯ ಕುಟುಂಬ ತೆರಳಿದ್ದು, ಪತಿ ಮತ್ತು ಮಕ್ಕಳ ಜೊತೆಗಿನ ಸುಂದರ ಫೋಟೋವನ್ನ ಶೇರ್ ಮಾಡಿದ್ದಾರೆ. ಇದನ್ನೂ ಓದಿ:ಎಲ್ಲವೂ ಗಾಸಿಪ್ : ಐಶ್ವರ್ಯ 2ನೇ ಮದುವೆ, ಅಪ್ಪನೊಂದಿಗೆ ಮುನಿಸು

    ‘ಚೆಲುವಿನ ಚಿತ್ತಾರ’ (Chevina Chittara) ಸಿನಿಮಾ ಮೂಲಕ ಸ್ಯಾಂಡಲ್‌ವುಡ್‌ಗೆ ಪರಿಚಿತರಾದ ಅಮೂಲ್ಯ ಅವರು ಮಳೆ, ಗಜಕೇಸರಿ, ರಾಮ್ ಲೀಲಾ, ಕೃಷ್ಣ ರುಕ್ಕು ಸೇರಿದಂತೆ ಹಲವು ಸಿನಿಮಾಗಳಲ್ಲಿ ನಟಿಸಿ ಗಮನ ಸೆಳೆದಿದ್ದಾರೆ. ಅಮೂಲ್ಯಗೆ ಡಿಮ್ಯಾಂಡ್ ಇರುವಾಗಲೇ ಜಗದೀಶ್ ಅವರನ್ನು ನಟಿ ಮದುವೆಯಾದರು. ಈಗ ಇಬ್ಬರು ಅವಳಿ ಮಕ್ಕಳ ಆರೈಕೆಯಲ್ಲಿ ನಟಿ ಬ್ಯುಸಿಯಿದ್ದಾರೆ.

    ಇತ್ತೀಚಿಗೆ ನಟಿ ಅಮೂಲ್ಯ ಫ್ಯಾಮಿಲಿ ಮತ್ತು ತನ್ನ ಬೆಸ್ಟ್ ಫ್ರೆಂಡ್ ಜೊತೆ ಚಿಕ್ಕಮಗಳೂರಿಗೆ ಹೋಗಿ ಬಂದಿದ್ದಾರೆ. ಸುಂದರ ತಾಣಗಳಿಗೆ ಭೇಟಿ ಕೊಟ್ಟಿದ್ದಾರೆ. ಚಿಕ್ಕಮಗಳೂರಿನ ಬ್ಯೂಟಿಫುಲ್ ಜಾಗವೊಂದರಲ್ಲಿ ಅಮ್ಮು ಫ್ಯಾಮಿಲಿ ಚೆಂದದ ಫೋಟೋ ಕ್ಲಿಕ್ಕಿಸಿಕೊಂಡಿದ್ದಾರೆ. ಪತಿ ಜಗದೀಶ್ ಮತ್ತು ಮಕ್ಕಳು ಜೊತೆಗಿದ್ದು, ‘ಸೀತಾರಾಮ’ (Seetharama) ನಟಿ ವೈಷ್ಣವಿ ಗೌಡ (Vaishnavi Gowda) ಕೂಡ ಅಮೂಲ್ಯ ಜೊತೆ ಫೋಟೋ ಪೋಸ್ ಕೊಟ್ಟಿದ್ದಾರೆ.

    ಅಮೂಲ್ಯ ಪಿಂಕ್ ಬಣ್ಣದ ಡ್ರೆಸ್‌ನಲ್ಲಿ ಮಿಂಚಿದ್ರೆ, ವೈಷ್ಣವಿ ಲೈಟ್ ಬಣ್ಣದ ಉಡುಗೆಯಲ್ಲಿ ಕಾಣಿಸಿಕೊಂಡಿದ್ದಾರೆ. ವೈಷ್ಣವಿ ಗೌಡ ಅವರು ‘ಸೀತಾರಾಮ’ ಸೀರಿಯಲ್ ಮೂಲಕ ಮೋಡಿ ಮಾಡ್ತಿದ್ದಾರೆ. ಅಮೂಲ್ಯ ಕಮ್‌ಬ್ಯಾಕ್ ಅಭಿಮಾನಿಗಳು ಎದುರು ನೋಡ್ತಿದ್ದಾರೆ.

    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]