Tag: seize

  • ಬೆಂಗಳೂರಿನಲ್ಲಿ ಇದುವರೆಗೆ ಸೀಜ್ ಆಗಿರೋ ಹಣ, ಚಿನ್ನ, ಬೆಳ್ಳಿ ಎಷ್ಟು?

    ಬೆಂಗಳೂರಿನಲ್ಲಿ ಇದುವರೆಗೆ ಸೀಜ್ ಆಗಿರೋ ಹಣ, ಚಿನ್ನ, ಬೆಳ್ಳಿ ಎಷ್ಟು?

    ಬೆಂಗಳೂರು: ಕರ್ನಾಟಕದಲ್ಲಿ ಮೊದಲ ಹಂತದ ಲೋಕಸಭಾ ಚುನಾವಣೆ (Loksabha Elections 2024) ಮತದಾನ ಶುಕ್ರವಾರವಷ್ಟೇ ಮುಕ್ತಾಯ ಆಗಿದೆ. ಚುನಾವಣೆ ಘೋಷಣೆ ಆದಾಗಿಂದ ಬೆಂಗಳೂರಿನಲ್ಲಿ ಕುರುಡು ಕಾಂಚಾಣದ ಸದ್ದು ಜೋರಾಗಿದೆ. ಬೆಂಗಳೂರಿನಲ್ಲಿ ಇದುವರೆಗೂ ಸೀಜ್ ಆಗಿರೋ ಚಿನ್ನ, ಬೆಳ್ಳಿ ಹಾಗೂ ಹಣದ ಕಂಪ್ಲೀಟ್ ರಿಪೋರ್ಟ್ ಇಲ್ಲಿದೆ.

    ಲೋಕಸಭಾ ಚುನಾವಣೆ ಘೋಷಣೆ ಆದ ಬಳಿಕ ಬೆಂಗಳೂರಿನಲ್ಲಿ ಚುನಾವಣಾ ಅಕ್ರಮ ಚಟುವಟಿಕೆಗಳು ಎಗ್ಗಿಲ್ಲದೇ ನಡೆದಿದೆ. ಅಕ್ರಮವಾಗಿ, ಹಣ, ಚಿನ್ನ, ಡ್ರಗ್ಸ್ ಸಾಗಾಟ ಜೋರಾಗಿ ನಡೆದಿದೆ. ಮೊದಲ ಹಂತದಲ್ಲಿ ಬೆಂಗಳೂರಿನಲ್ಲೂ ಚುನಾವಣೆ ಮುಕ್ತಾಯ ಆಗಿದ್ದು, ಕೋಟಿ ಕೋಟಿ ಮೌಲ್ಯದ ಚಿನ್ನ, ಬೆಳ್ಳಿಯನ್ನ ವಶಪಡಿಸಿಕೊಳ್ಳಲಾಗಿದೆ

    ಬೆಂಗಳೂರಿನಲ್ಲಿ ಕುರುಡು ಕಾಂಚಣ:
    * 11.85 ಕೋಟಿ ಹಣ ಸೀಜ್
    * 19.22 ಕೋಟಿ ಮೌಲ್ಯದ ಮದ್ಯ ವಶ
    * 7.15 ಕೋಟಿ ಮೌಲ್ಯದ ಡ್ರಗ್ಸ್ ವಶಕ್ಕೆ
    * 53.71 ಕೋಟಿ ಮೌಲ್ಯದ ಚಿನ್ನ, ಬೆಳ್ಳಿ ವಶಕ್ಕೆ
    * 1.14 ಕೋಟಿ ಮೌಲ್ಯದ ಗಿಷ್ಟ್ ವಶಕ್ಕೆ
    * 46.37 ಕೋಟಿ ಮೌಲ್ಯದ ವಸ್ತುಗಳು ಜಪ್ತಿ

    ಹಣ ಸೀಜ್ ಅಷ್ಟೇ ಅಲ್ಲದೇ ದ್ವೇಷದ ಭಾಷಣ ಸೇರಿದಂತೆ ನೀತಿ ಸಂಹಿತೆ ಉಲ್ಲಂಘನೆಯಿಂದ ಪ್ರಕರಣಗಳು ಕೂಡ ದಾಖಲಾಗಿದೆ. ಬೆಂಗಳೂರು ಸೆಂಟ್ರಲ್- 513, ಬೆಂಗಳೂರು ಉತ್ತರ- 303, ಬೆಂಗಳೂರು ದಕ್ಷಿಣ- 373, ಬೆಂಗಳೂರು ನಗರ- 2929 ಹೀಗೆ ಒಟ್ಟು 4,118 ಪ್ರಕರಣಗಳು ದಾಖಲಾಗಿವೆ. ಇದನ್ನೂ ಓದಿ: ಏ. 28, 29ಕ್ಕೆ ಕರ್ನಾಟಕಕ್ಕೆ ಪ್ರಧಾನಿ- 2 ದಿನ ಉತ್ತರ ಕರ್ನಾಟಕದಲ್ಲಿ ಮತಯಾಚನೆ

    ಒಟ್ಟಾರೆ ಮೊದಲ ಹಂತದ ಮತದಾನ ಮುಕ್ತಾಯ ಆಗಿದ್ದು, ಈ ಚುನಾವಣೆ ಕುರುಡು ಕಾಂಚಾಣ, ಹೆಂಡ, ಆಮಿಷಗಳಿಂದ ನಡೆದಿದೆ. ಕೇಸ್ ದಾಖಲಾಗಿ ಕೋಟಿ ಕೋಟಿ ಹಣ ಸೀಜ್ ಮಾಡಿದ್ದು, ಈ ರೀತಿ ಅಕ್ರಮದಿಂದ ಚುನಾವಣೆ ನಡೆಯುತ್ತಿದೆ. ಬೆಂಗಳೂರಿಗೆ ಕೆಟ್ಟು ಹೆಸರು ಅಂದರೆ ತಪ್ಪಿಲ್ಲ ಫಲಿತಾಂಶ ಹೇಗಿರಲಿದೆ ಕಾದು ನೋಡಬೇಕಿದೆ.

  • ತಂಬಾಕು ಚೀಲಗಳಲ್ಲಿ ತುಂಬಿ ದಾಖಲೆ ಇಲ್ಲದೆ ಸಾಗಿಸ್ತಿದ್ದ 8 ಕೋಟಿ ಹಣ ಜಪ್ತಿ

    ತಂಬಾಕು ಚೀಲಗಳಲ್ಲಿ ತುಂಬಿ ದಾಖಲೆ ಇಲ್ಲದೆ ಸಾಗಿಸ್ತಿದ್ದ 8 ಕೋಟಿ ಹಣ ಜಪ್ತಿ

    ಚಿತ್ರದುರ್ಗ: ದಾಖಲೆ ಇಲ್ಲದೆ ಚಿತ್ರದುರ್ಗದಿಂದ (Chitradurga) ಶಿವಮೊಗ್ಗಕ್ಕೆ ಸಾಗಿಸುತ್ತಿದ್ದ ಬರೋಬ್ಬರಿ 8 ಕೋಟಿ ರೂ. ಹಣವನ್ನು (Money)  ಹೊಳಲ್ಕೆರೆ ಪೊಲೀಸರು (Holalkere Police) ಜಪ್ತಿ ಮಾಡಿದ್ದಾರೆ.

    ಚಿತ್ರದುರ್ಗ ಜಿಲ್ಲೆ ಹೊಳಲ್ಕೆರೆ ತಾಲೂಕಿನ ಮಲ್ಲಾಡಿಹಳ್ಳಿ ಬಳಿ ಇನೋವಾ ಕಾರಿನಲ್ಲಿ ತೆರಳುತಿದ್ದ ಚಾಲಕ ಸಚಿನ್‌ನನ್ನು ವಶಕ್ಕೆ ಪಡೆದಿರುವ ಪೊಲೀಸರು ಕಾರಿನಲ್ಲಿ ತಂಬಾಕು ಚೀಲಗಳಲ್ಲಿ ತುಂಬಲಾಗಿದ್ದ 8 ಕೋಟಿ ರೂ. ಹಣವನ್ನು ಜಪ್ತಿ ಮಾಡಿದ್ದಾರೆ.

    ಈ ಹಣ ಚಿತ್ರದುರ್ಗದ ಅಡಿಕೆ ವರ್ತಕರಿಗೆ ಸೇರಿದ್ದು ಎಂಬ ಅನುಮಾನವಿದ್ದು, ಖಚಿತ ಮಾಹಿತಿಗಾಗಿ ಆದಾಯ ತೆರಿಗೆ ಅಧಿಕಾರಿಗಳಿಗೆ ಈ ಮಾಹಿತಿಯನ್ನು ನೀಡಲಾಗಿದೆ. ವಿಚಾರಣೆ ಬಳಿಕ ಈ ಹಣ ಯಾರಿಗೆ ಸೇರಿದ್ದು ಹಾಗೂ ಯಾವ ಕಾರಣಕ್ಕೆ ಸಾಗಿಸಲಾಗುತ್ತಿತ್ತು ಎಂಬುದು ತಿಳಿಯಲಿದೆ ಎಂದು ಎಸ್‌ಪಿ ಧರ್ಮೇಂದರ್ ಕುಮಾರ್ ಮೀನಾ ಮಾಹಿತಿ ನೀಡಿದ್ದಾರೆ. ಇದನ್ನೂ ಓದಿ: ಪ್ಯಾರಾಗ್ಲೈಡಿಂಗ್ ಮೂಲಕ ಆದಿಯೋಗಿಯ ದರ್ಶನಕ್ಕೆ ಪ್ರಾಯೋಗಿಕ ಹಾರಾಟ

    ಜಪ್ತಿಯಾಗಿರುವ ಭಾರೀ ಮೊತ್ತದ ಹಣ ಎಣಿಕೆ ಕಾರ್ಯವನ್ನು ಹೊಳಲ್ಕೆರೆ ಪೊಲೀಸರು ಕೈಗೊಂಡಿದ್ದಾರೆ. ಈ ಪ್ರಕರಣ ಹೊಳಲ್ಕೆರೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಇದನ್ನೂ ಓದಿ: ಗೆಳೆಯನನ್ನು ಮದುವೆಯಾಗಲು ಪಾಕಿಸ್ತಾನಕ್ಕೆ ಹೋಗಿದ್ದ ಅಂಜು ತವರಿಗೆ ವಾಪಸ್

  • ಬಾಗಲಕೋಟೆಯಲ್ಲಿ ದಾಖಲೆಯಿಲ್ಲದ 5 ಕೋಟಿ ರೂ. ಹಣ ಜಪ್ತಿ

    ಬಾಗಲಕೋಟೆಯಲ್ಲಿ ದಾಖಲೆಯಿಲ್ಲದ 5 ಕೋಟಿ ರೂ. ಹಣ ಜಪ್ತಿ

    ಬಾಗಲಕೋಟೆ: ದಾಖಲೆಯಿಲ್ಲದೆ ಹುಬ್ಬಳ್ಳಿಯಿಂದ ಮುಧೋಳ ಮಾರ್ಗವಾಗಿ ಸಾಗಿಸುತ್ತಿದ್ದ 5 ಕೋಟಿ ರೂ. ಹಣವನ್ನು ಚುನಾವಣಾಧಿಕಾರಿಗಳು, ಫ್ಲೈಯಿಂಗ್‌ ಸ್ಕ್ವಾಡ್‌ (Flying Squad) ಹಾಗೂ ಲೋಕಾಪುರ ಪೊಲೀಸರು ಜಪ್ತಿ ಮಾಡಿದ್ದಾರೆ.

    ಹಣ ಸಾಗಿಸುವ ಬೊಲೆರೋ (Bolero) ವಾಹನದಲ್ಲಿ ಶುಕ್ರವಾರ ರಾತ್ರಿ ಹುಬ್ಬಳ್ಳಿ ಯೂನಿಯನ್ ಬ್ಯಾಂಕಿನಿಂದ (Union Bank) ಮುಧೋಳ ಯೂನಿಯನ್ ಬ್ಯಾಂಕ್‌ಗೆ 5 ಕೋಟಿ ರೂ. ಹಣವನ್ನು ಸಾಗಿಸಲಾಗುತ್ತಿತ್ತು. ಲೋಕಾಪುರ ಬಳಿಯಿರುವ ಲಕ್ಷಾನಟ್ಟಿ ಚೆಕ್‌ಪೋಸ್ಟ್‌ನಲ್ಲಿ ವಾಹನ ತಪಾಸಣೆ ವೇಳೆ ಹಣ ಸಾಗಾಟ ಕಂಡುಬಂದಿದೆ. ಇದನ್ನೂ ಓದಿ: ಸಿಎಂ ಮನೆ ಮುಂದಿನ ರಸ್ತೆಯಲ್ಲೇ 10 ಲಕ್ಷ ನಗದು ಹಣ ಪತ್ತೆ..!

    ಈ ಹಣ ಯೂನಿಯನ್ ಬ್ಯಾಂಕ್‌ಗೆ ಸೇರಿದ್ದು ಎಂಬ ಮಾಹಿತಿ ನೀಡಿದರೂ ಸಹ ಸಮರ್ಪಕ ದಾಖಲೆಯಿಲ್ಲದ ಹಿನ್ನೆಲೆ ಹಣವನ್ನು ಜಪ್ತಿಪಡಿಸಿಕೊಂಡು ಕಾರಿನಲ್ಲಿದ್ದ ಐವರನ್ನು ವಶಕ್ಕೆ ಪಡೆಯಲಾಗಿದೆ. ಈ ಕುರಿತು ಅಧಿಕಾರಿಗಳು ಹೆಚ್ಚಿನ ಪರಿಶೀಲನೆ ನಡೆಸುತ್ತಿದ್ದಾರೆ. ಇದನ್ನೂ ಓದಿ: ನಕಲಿ ಪಾಸ್‌ಪೋರ್ಟ್‌ ಬಳಸಿ ವಿದೇಶಕ್ಕೆ ಹಾರಲು ಸಂಚು ರೂಪಿಸಿದ್ದ ಆರೋಪಿ ಅಂದರ್‌

  • ದಾಖಲೆ ಇಲ್ಲದ 18 ಲಕ್ಷ ರೂ. ಹಣ, 6 ಲಕ್ಷ ರೂ. ಮೌಲ್ಯದ ಬೆಳ್ಳಿ ನಾಣ್ಯಗಳು ಜಪ್ತಿ

    ದಾಖಲೆ ಇಲ್ಲದ 18 ಲಕ್ಷ ರೂ. ಹಣ, 6 ಲಕ್ಷ ರೂ. ಮೌಲ್ಯದ ಬೆಳ್ಳಿ ನಾಣ್ಯಗಳು ಜಪ್ತಿ

    ಬೀದರ್: ಹೈದರಾಬಾದ್‌ನಿಂದ (Hyderabad) ಬೀದರ್‌ಗೆ (Bidar) ದಾಖಲೆ ಇಲ್ಲದೆ ಸಾಗಿಸುತ್ತಿದ್ದ 18 ಲಕ್ಷ ರೂ. ಹಣ ಹಾಗೂ 6 ಲಕ್ಷ ರೂ. ಮೌಲ್ಯದ ಬೆಳ್ಳಿ ನಾಣ್ಯಗಳನ್ನು (Silver Coin) ಬೀದರ್ ಪೊಲೀಸರು ಜಪ್ತಿ ಮಾಡಿದ್ದಾರೆ.

    ಬೀದರ್  ಮತ್ತು ತೆಲಂಗಾಣ (Telangana) ಗಡಿಯ ಶಾಪೂರ್ ಗ್ರಾಮದ ಬಳಿಯ ಚೆಕ್ ಪೋಸ್ಟ್‌ನಲ್ಲಿ ಪೊಲೀಸರು ತಪಾಸಣೆ ನಡೆಸುತ್ತಿದ್ದ ವೇಳೆ ಕಾರಿನಲ್ಲಿ 18 ಲಕ್ಷ ರೂ. ಹಣ, 5 ಗ್ರಾಂನ 1,250 ನಾಣ್ಯಗಳು ಮತ್ತು 1 ಗ್ರಾಂನ 1,000 ಬೆಳ್ಳಿ ನಾಣ್ಯಗಳು ಪತ್ತೆಯಾಗಿವೆ. ಇದನ್ನೂ ಓದಿ: ಏರಿಯಾ ಆಂಟಿಗಳಿಗೆ ಮೆಸೇಜ್‌ ಮಾಡ್ತೀಯಾ ಎಂದು ಬೆಂಗಳೂರಲ್ಲಿ ವ್ಯಕ್ತಿ ಮೇಲೆ ಹಲ್ಲೆ 

    ಈ ಕುರಿತು ಪೊಲೀಸರು ಅಕ್ರಮ ಸಾಗಾಟ ಮಾಡುತ್ತಿದ್ದ ಕಾರು, ಹಣ ಹಾಗೂ ಬೆಳ್ಳಿಯ ನಾಣ್ಯಗಳನ್ನು ವಶಕ್ಕೆ ಪಡೆದುಕೊಂಡು ಹೆಚ್ಚಿನ ತನಿಖೆ ಕೈಗೊಂಡಿದ್ದಾರೆ. ಇದನ್ನೂ ಓದಿ: ಚುನಾವಣೆ ಹೊತ್ತಲ್ಲೇ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಏಕಕಾಲಕ್ಕೆ ಲೋಕಾಯುಕ್ತ ರೇಡ್

  • ಬಿಜೆಪಿ ಅಭ್ಯರ್ಥಿಯಿಂದ ಮತದಾರರಿಗೆ ಹಣ ಹಂಚಿಕೆ ಆರೋಪ – 1.54 ಕೋಟಿ ರೂ. ಜಪ್ತಿ

    ಬಿಜೆಪಿ ಅಭ್ಯರ್ಥಿಯಿಂದ ಮತದಾರರಿಗೆ ಹಣ ಹಂಚಿಕೆ ಆರೋಪ – 1.54 ಕೋಟಿ ರೂ. ಜಪ್ತಿ

    ಬೆಳಗಾವಿ: ಮತದಾರರಿಗೆ ಹಂಚುವ ಸಲುವಾಗಿ ಕಾರಿನಲ್ಲಿ ಸಾಗಿಸುತ್ತಿದ್ದ 1.54 ಕೋಟಿ ರೂ. ಹಣವನ್ನು ಚುನಾವಣಾ ಅಧಿಕಾರಿಗಳು (Election Officers) ಜಪ್ತಿಪಡಿಸಿದ ಘಟನೆ ಬೆಳಗಾವಿ (Belagavi) ಜಿಲ್ಲೆಯ ರಾಮದುರ್ಗ (Ramadurga) ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

    ರಾಮದುರ್ಗ ಬಿಜೆಪಿ (BJP) ಅಭ್ಯರ್ಥಿ ಚಿಕ್ಕರೇವಣ್ಣ ಬುಧವಾರ ಅಪಾರ ಬೆಂಬಲಿಗರೊಂದಿಗೆ ನಾಮಪತ್ರ (Nomination Papers) ಸಲ್ಲಿಸಿದ್ದಾರೆ. ಅವರ ಬೆಂಬಲಿಗರು ಮತದಾರರಿಗೆ ಹಣ ಹಂಚುತ್ತಿದ್ದಾರೆ ಎಂದು ಆರೋಪ ಹೊರಿಸಲಾಗಿತ್ತು. ರಾಮದುರ್ಗ ತುರನೂರು ಬಳಿ ಹಣ ಹಂಚಿಕೆ ಮಾಡುತ್ತಿದ್ದು, ಹಣ ಹಂಚುತ್ತಿರುವ ದೃಶ್ಯ ಮೊಬೈಲ್‌ನಲ್ಲಿ ಸೆರೆಯಾಗಿದೆ. ಇದನ್ನೂ ಓದಿ: ದಿಢೀರ್‌ ಬೆಳವಣಿಗೆ – ಕನಕಪುರದಿಂದ ಡಿಕೆ ಸುರೇಶ್‌ ನಾಮಪತ್ರ ಸಲ್ಲಿಕೆ 

    ಈ ಖಚಿತ ಮಾಹಿತಿಯ ಮೇರೆಗೆ ಚುನಾವಣಾ ಅಧಿಕಾರಿಗಳು ದಾಳಿ ನಡೆಸಿದ್ದು, ಸೂಕ್ತ ದಾಖಲೆ ಇಲ್ಲದೆ ಕಾರಿನಲ್ಲಿ ಸಾಗಿಸುತ್ತಿದ್ದ 1.54 ಕೋಟಿ ರೂ. ಹಣವನ್ನು ಜಪ್ತಿ ಮಾಡಿದ್ದಾರೆ. ಅಲ್ಲದೇ ಕಾರು ಚಾಲಕನನ್ನು ಬಂಧಿಸಿದ್ದಾರೆ. ಹಣವನ್ನು (Money) ವಶಕ್ಕೆ ಪಡೆದುಕೊಂಡ ಬಳಿಕ ಈ ಪ್ರಕರಣವನ್ನು ಆದಾಯ ತೆರಿಗೆ (Income Tax) ಇಲಾಖೆಗೆ ಒಪ್ಪಿಸಿದ್ದಾರೆ. ಇದನ್ನೂ ಓದಿ: ಲಿಂಗಾಯತರನ್ನು ಸಿಎಂ ಮಾಡುತ್ತೇವೆ ಎಂದು ಕಾಂಗ್ರೆಸ್ ಘೋಷಣೆ ಮಾಡಲಿ : ಸೋಮಣ್ಣ ಸವಾಲು

  • ಮತದಾರರಿಗೆ ಹಂಚಲು ಸಂಗ್ರಹಿಸಿಟ್ಟಿದ್ದ ಲಕ್ಷಾಂತರ ಮೌಲ್ಯದ ಟಿಫಿನ್ ಬಾಕ್ಸ್, ಹೊಲಿಗೆ ಯಂತ್ರ ಜಪ್ತಿ

    ಮತದಾರರಿಗೆ ಹಂಚಲು ಸಂಗ್ರಹಿಸಿಟ್ಟಿದ್ದ ಲಕ್ಷಾಂತರ ಮೌಲ್ಯದ ಟಿಫಿನ್ ಬಾಕ್ಸ್, ಹೊಲಿಗೆ ಯಂತ್ರ ಜಪ್ತಿ

    ಬೆಳಗಾವಿ: ಮತದಾರರಿಗೆ ಹಂಚಲು ಸಂಗ್ರಹಿಸಿಟ್ಟಿದ್ದ ಹೊಲಿಗೆ ಯಂತ್ರಗಳು (Sewing Machine) ಮತ್ತು ಟಿಫಿನ್ ಬಾಕ್ಸ್‌ಗಳನ್ನು (Tiffin Box) ಪೊಲೀಸರು ಜಪ್ತಿ ಮಾಡಿರುವ ಘಟನೆ ಬೆಳಗಾವಿ‌ (Belagavi) ಜಿಲ್ಲೆಯ ಸವದತ್ತಿ (Savadatti) ಪಟ್ಟಣದಲ್ಲಿ ನಡೆದಿದೆ.

    ನಗರದ ಸಂಭವ ಟಿಂಬರ್ ಯಾರ್ಡ್ ಗೋದಾಮು ಮೇಲೆ ಚುನಾವಣಾಧಿಕಾರಿಗಳು ದಾಳಿ ನಡೆಸಿ ಸವದತ್ತಿ ಕೇತ್ರದ ಜೆಡಿಎಸ್ (JDS) ಅಭ್ಯರ್ಥಿ ಸೌರಭ್ ಛೋಪ್ರಾ (Sourabh Chopra) ಭಾವಚಿತ್ರವಿರುವ ಟಿಫಿನ್ ಬಾಕ್ಸ್ ಜೊತೆಗೆ ಹೊಲಿಗೆ ಯಂತ್ರಗಳನ್ನು ಜಪ್ತಿ ಪಡಿಸಿಕೊಂಡಿದ್ದಾರೆ. ಇದನ್ನೂ ಓದಿ: ಶೆಟ್ಟರ್ ನಿರ್ಧಾರದಿಂದ ಉಂಟಾದ ಡ್ಯಾಮೇಜ್ ಕಂಟ್ರೋಲ್‍ಗೆ ಮುಂದಾದ ಜೆ.ಪಿ ನಡ್ಡಾ 

    ಲಕ್ಷಾಂತರ ಮೌಲ್ಯದ 2300ಕ್ಕೂ ಅಧಿಕ ಹೊಲಿಗೆ ಯಂತ್ರಗಳನ್ನು ವಶಕ್ಕೆ ಪಡೆದುಕೊಳ್ಳಲಾಗಿದೆ. ಖಚಿತ ಮಾಹಿತಿ ಆಧಾರದ ಮೇಲೆ ಸರಕು ಮತ್ತು ಸೇವಾ ತೆರಿಗೆ (GST) ಅಧಿಕಾರಿಗಳು ಹಾಗೂ ಸ್ಥಳೀಯ ಚುನಾವಣೆ ಅಧಿಕಾರಿಗಳ ನೇತೃತ್ವದಲ್ಲಿ ದಾಳಿ ನಡೆಸಲಾಗಿದ್ದು, ಸೌರಭ್ ಛೋಪ್ರಾ ಹೊಲಿಗೆ ಯಂತ್ರ ಇರುವ ಕುರಿತಾಗಿ ಬಿಲ್ ಹಾಗೂ ಅದಕ್ಕೆ ಬೇಕಾದ ದಾಖಲೆಗಳನ್ನು ಒದಗಿಸಿದ್ದಾರೆ. ನೀತಿ ಸಂಹಿತೆ ಬರುವ ಮುಂಚೆಯೇ ಇವುಗಳನ್ನು ತರಲಾಗಿದೆ. ಆದರೆ ಎಲ್ಲಿಯೂ ಹಂಚಿಲ್ಲ ಎಂದು ಅಧಿಕಾರಿಗಳಿಗೆ ಮನವರಿಕೆ ಮಾಡಿಕೊಟ್ಟಿದ್ದಾರೆ. ಇದನ್ನೂ ಓದಿ: ಜಾತಿ ರಾಜಕಾರಣಕ್ಕೆ ಮಾನ್ಯತೆಯಿಲ್ಲ, ನೀತಿ ರಾಜಕಾರಣಕ್ಕೆ ಬೆಲೆ: ಸಿ.ಟಿ.ರವಿ 

    ಅಭ್ಯರ್ಥಿ ಕಡೆಯವರು ಪೋಲಿಸರ ನೇತೃತ್ವದಲ್ಲಿ ಗೋದಾಮು ಸೀಜ್ (Seize) ಮಾಡಿದ್ದು, ನಂತರ ಗೋದಾಮಿನಲ್ಲಿರುವ ಹೊಲಿಗೆ ಯಂತ್ರ ಹಾಗೂ ಟಿಫಿನ್ ಬಾಕ್ಸ್‌ಗಳನ್ನು ವಶಕ್ಕೆ ಪಡೆದು ಬೇರೆಡೆ ಸ್ಥಳಾಂತರಿಸಿದ್ದಾರೆ. ಈ ಕುರಿತು ಪ್ರಕರಣ ದಾಖಲಿಸಲಾಗಿದೆ. ಇದನ್ನೂ ಓದಿ: 10 ಸಾವಿರ ಮನೆಗಳಲ್ಲಿ ಭಿಕ್ಷೆ ಬೇಡಿ ನಾಮಪತ್ರ ಸಲ್ಲಿಕೆ – ನಾಣ್ಯ ಎಣಿಸಿ ಸುಸ್ತಾದ ಅಧಿಕಾರಿಗಳು

  • ಪೊಲೀಸರ ಭರ್ಜರಿ ಕಾರ್ಯಾಚರಣೆ – 1 ಕೋಟಿ 65 ಲಕ್ಷ ರೂ. ಮೌಲ್ಯದ ಗಾಂಜಾ ಜಪ್ತಿ

    ಪೊಲೀಸರ ಭರ್ಜರಿ ಕಾರ್ಯಾಚರಣೆ – 1 ಕೋಟಿ 65 ಲಕ್ಷ ರೂ. ಮೌಲ್ಯದ ಗಾಂಜಾ ಜಪ್ತಿ

    ಬೀದರ್: ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ 1 ಕೋಟಿ 65 ಲಕ್ಷ ಮೌಲ್ಯದ 165 ಕೆಜಿ ಗಾಂಜಾವನ್ನು (Marijuana) ಪೊಲೀಸರು ಜಪ್ತಿ ಮಾಡಿರುವ ಘಟನೆ ಬೀದರ್‌ನಲ್ಲಿ (Bidar) ನಡೆದಿದೆ.

    ಆಂದ್ರಪ್ರದೇಶದ (Andhra Pradesh) ವಿಜಯವಾಡದಲ್ಲಿ ಗಾಂಜಾದ ಮೂಲ ಕಿಂಗ್‌ಪಿನ್ ಓರ್ವನನ್ನು ಬಂಧಿಸಲಾಗಿತ್ತು. ಆತ ನೀಡಿದ ಖಚಿತ ಮಾಹಿತಿಯ ಮೇರೆಗೆ ಹೈದರಾಬಾದ್‌ನಿಂದ (Hyderabad) ಮಹಾರಾಷ್ಟ್ರಕ್ಕೆ (Maharashtra) ಕಾರಿನಲ್ಲಿ ಸಾಗಿಸುತ್ತಿದ್ದ 156 ಕೆಜಿ ಗಾಂಜಾವನ್ನು ಬೀದರ್ ಪೊಲೀಸರು ಜಪ್ತಿ ಮಾಡಿದ್ದಾರೆ. ಜಿಲ್ಲೆಯ ಚಿಟ್ಟಗುಪ್ಪ (Chittaguppa) ತಾಲೂಕಿನ ಬೆಳಕೇರಾ ಗ್ರಾಮದ ಬಳಿ 1 ಕೋಟಿ 56 ಲಕ್ಷ ಮೌಲ್ಯದ ಗಾಂಜಾವನ್ನು ವಶಪಡಿಸಿಕೊಳ್ಳಲಾಗಿದೆ. ಇದನ್ನೂ ಓದಿ: BWSSB ಅರೆಬರೆ ಕಾಮಗಾರಿ – ಗುಂಡಿಗೆ ಬಿದ್ದ ಬಾಲಕ ಬಲಿ 

    ಅದೇ ರೀತಿ ಬೀದರ್ ನಗರದ ರೈಲ್ವೇ ಟ್ರ್ಯಾಕ್‌ (Railway Track) ಬಳಿ ಪ್ರತ್ಯೇಕ ಎರಡು ಪ್ರಕರಣಗಳಲ್ಲಿ ತಲಾ 5 ಕೆಜಿಯಂತೆ ಒಟ್ಟು 10 ಕೆಜಿ ಗಾಂಜಾವನ್ನು ಜಪ್ತಿ ಮಾಡಿದ್ದಾರೆ. ಇದನ್ನೂ ಓದಿ: ರೈಸ್ ಪುಲ್ಲಿಂಗ್ ದಂಧೆ – ನಿವೃತ್ತ ಕಾನ್ಸ್‌ಟೇಬಲ್ ಸಹಿತ ಮೂವರ ಬಂಧನ 

    ಒಟ್ಟು ಮೂರು ಪ್ರಕರಣದಲ್ಲಿ 165 ಕೆಜಿ ಗಾಂಜಾ ಜಪ್ತಿ ಮಾಡಿದ ಬೀದರ್ ಪೊಲೀಸರು ಆರು ಜನ ಆರೋಪಿಗಳನ್ನು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ. ಎಸ್ಪಿ ಚನ್ನಬಸವಣ್ಣ ಲಂಗೋಟಿಯವರ ಮಾರ್ಗದರ್ಶನದಲ್ಲಿ ಭರ್ಜರಿ ಕಾರ್ಯಾಚರಣೆ ಮಾಡಿದ್ದು, ಕಾರ್ಯಾಚರಣೆ ಮಾಡಿದ ಪೊಲೀಸರಿಗೆ ಎಸ್ಪಿ ಪ್ರಶಂಸಾ ಪತ್ರ ಹಾಗೂ 1 ಲಕ್ಷ ಬಹುಮಾನ ನೀಡಿ ಗೌರವಿಸಿದ್ದಾರೆ. ಇದನ್ನೂ ಓದಿ: ಗ್ಯಾಂಗ್‌ಸ್ಟರ್‌ ಅತೀಕ್‌ ಅಹ್ಮದ್‌ ಹಂತಕರು ಜೈಲಿಗೆ

  • ನೂರು ಕೋಟಿ ಕ್ಲಬ್ ಸೇರಿದ ಚುನಾವಣೆ ಅಕ್ರಮ- ಹಣಕ್ಕಿಂತ ಕುಕ್ಕರ್, ತವಾಗಳದ್ದೇ ಮೇಲುಗೈ

    ನೂರು ಕೋಟಿ ಕ್ಲಬ್ ಸೇರಿದ ಚುನಾವಣೆ ಅಕ್ರಮ- ಹಣಕ್ಕಿಂತ ಕುಕ್ಕರ್, ತವಾಗಳದ್ದೇ ಮೇಲುಗೈ

    ಬೆಂಗಳೂರು: ಕಳೆದ ಹನ್ನೆರಡು ದಿನಗಳಲ್ಲಿ ಚುನಾವಣೆ ಅಧಿಕಾರಿಗಳು (Election Officer) ಹಾಗೂ ಪೊಲೀಸರು ಚುನಾವಣಾ (Election) ಅಕ್ರಮಗಳ ಮೇಲೆ ದಾಳಿ ನಡೆಸಿ ಬರೋಬ್ಬರಿ ನೂರು ಕೋಟಿಯಷ್ಟು ಹಣ, ವಸ್ತುಗಳನ್ನು ವಶಕ್ಕೆ ಪಡೆದಿದ್ದಾರೆ. ಅಚ್ಚರಿಯ ವಿಚಾರ ಎಂದರೆ ಇದರಲ್ಲಿ ಹಣಕ್ಕಿಂತ ಕುಕ್ಕರ್, ತವಾ ಮತ್ತು ಸೀರೆಗಳೇ ಮೇಲುಗೈ ಸಾಧಿಸಿದೆ.

    ವಿಧಾನಸಭೆ ಚುನಾವಣೆಗೆ ಕಾಂಗ್ರೆಸ್ (Congress), ಬಿಜೆಪಿ (BJP), ಜೆಡಿಎಸ್ (JDS) ಪಕ್ಷಗಳು ಇನ್ನಿಲ್ಲದಂತೆ ಕಸರತ್ತು ನಡೆಸಿದ್ದಾರೆ. ಒಂದು ಕಡೆ ಟಿಕೆಟ್ ಗೊಂದಲ, ಮತ್ತೊಂದು ಕಡೆ ಮತದಾರರನ್ನು ಓಲೈಸಿಕೊಳ್ಳಲು ಆಮಿಷಗಳು. ಇದನ್ನು ಮನಗಂಡ ಚುನಾವಣಾ ಆಯೋಗ ಮಾರ್ಚ್ 29 ರಂದು ನೀತಿ ಸಂಹಿತೆ (Code Of Conduct) ಜಾರಿ ಮಾಡಿ ಆದೇಶ ಹೊರಡಿಸಿತ್ತು. ಅಂದಿನಿಂದಲೇ ಅಲರ್ಟ್ ಆದ ಚುನಾವಣಾಧಿಕಾರಿಗಳು ಹಾಗೂ ಸ್ಥಳೀಯ ಪೊಲೀಸರು ಆಯಾ ವಿಭಾಗದಲ್ಲಿ ಚೆಕ್ ಪೋಸ್ಟ್‌ಗಳನ್ನು (Check Post) ಹಾಕಿ ವಾಹನಗಳ ಪರಿಶೀಲನೆ ಶುರುಮಾಡಿದರು. ಇದನ್ನೂ ಓದಿ: ನಂದಿನಿ ಬೇಕು; ಅಮುಲ್ ಬೇಡ- ಕನ್ನಡ ಪರ ಸಂಘಟನೆಗಳಿಂದ ಭುಗಿಲೆದ್ದ ಆಕ್ರೋಶ 

    ಮತ್ತೊಂದು ಕಡೆ ರಾಜಕೀಯ ನಾಯಕರು ಮತ್ತು ಬೆಂಬಲಿಗರ ಮನೆಗಳಲ್ಲಿ ಅಕ್ರಮವಾಗಿ ಮತದಾರರಿಗೆ ಹಂಚಲು ಹಣ, ದಿನಸಿ ವಸ್ತುಗಳು, ಗಿಫ್ಟ್‌ಗಳ ಶೇಖರಣೆ ಬಗ್ಗೆ ಕಣ್ಣಿಟ್ಟು ದಾಳಿ ನಡೆಸಿ ವಶಕ್ಕೆ ಪಡೆದು ಕೇಸ್ ದಾಖಲಿಸುತ್ತಿದ್ದಾರೆ. ಬಹುತೇಕ ಪತ್ತೆಯಾದ ಕಡೆಗಳಲ್ಲೆಲ್ಲಾ ಸಾವಿರಾರು ಸಂಖ್ಯೆಯಲ್ಲಿ ಕುಕ್ಕರ್‌ಗಳು ಮತ್ತು ತವಾಗಳು ಪತ್ತೆಯಾಗುತ್ತಿವೆ. ಇದನ್ನೂ ಓದಿ: ಅಭ್ಯರ್ಥಿಗಳ ಪಟ್ಟಿ ಬಿಡುಗಡೆಗೂ ಮೊದಲೇ ಬಿಜೆಪಿ ಕಚೇರಿಗೆ ಬಿಗಿ ಭದ್ರತೆ 

    ನಾಮಿನೇಷನ್ ಹಾಕಿದ ನಂತರವಷ್ಟೇ ಹಣ, ಮದ್ಯ, ಗೃಹಬಳಕೆ ವಸ್ತುಗಳು ಹೆಚ್ಚಾಗಿ ಸಿಗುತ್ತವೆ. ಆ ನಿಟ್ಟಿನಲ್ಲಿ ಅಧಿಕಾರಿಗಳು ಕೂಡ ಸೂಕ್ತ ತಯಾರಿ ನಡೆಸಿದ್ದಾರೆ. ಆದರೆ ನಾಮೀನೇಷನ್ ಹಾಕುವ ಮುನ್ನವೇ ರಾಜ್ಯಾದ್ಯಂತ ಮೂರು ಪಕ್ಷಗಳಿಗೆ ಸೇರಿದ ಅಭ್ಯರ್ಥಿಗಳಿಗೆ ಸೇರಿದ ಬರೋಬ್ಬರಿ ನೂರು ಕೋಟಿ ಅಕ್ರಮ ಹಣ, ವಸ್ತುಗಳು ಪತ್ತೆಯಾಗಿದ್ದು, ಸ್ವತಃ ಅಧಿಕಾರಿಗಳೇ ಶಾಕ್ ಆಗಿದ್ದಾರೆ. ಇದನ್ನೂ ಓದಿ: 20ಕ್ಕೂ ಹೆಚ್ಚು ಬಿಜೆಪಿ ಶಾಸಕರಿಗೆ ಕೊಕ್‌ – ಲಿಸ್ಟ್‌ನಲ್ಲಿ ಯಾರಿದ್ದಾರೆ?

  • ಬೀದರ್‌ನಲ್ಲಿ 1 ಕೋಟಿ 50 ಲಕ್ಷ ರೂ. ಮೌಲ್ಯದ ಗಾಂಜಾ ಜಪ್ತಿ

    ಬೀದರ್‌ನಲ್ಲಿ 1 ಕೋಟಿ 50 ಲಕ್ಷ ರೂ. ಮೌಲ್ಯದ ಗಾಂಜಾ ಜಪ್ತಿ

    ಬೀದರ್: ತೆಲಂಗಾಣದಿಂದ (Telangana) ಮಹಾರಾಷ್ಟ್ರಕ್ಕೆ (Maharashtra) ಕಾನೂನು ಬಾಹಿರವಾಗಿ ಸಾಗಾಟ ಮಾಡುತ್ತಿದ್ದ 150 ಕೆಜಿ ಗಾಂಜಾ (Ganja) ಜಪ್ತಿ ಮಾಡಿ ಮೂವರು ಗಾಂಜಾಕೋರರನ್ನು ಬಂಧಿಸುವಲ್ಲಿ ಬೀದರ್ ಪೊಲೀಸರು ಯಶಸ್ವಿಯಾಗಿದ್ದಾರೆ.

    ಬೀದರ್ (Bidar) ಜಿಲ್ಲೆಯ ಔರಾದ್ ತಾಲೂಕಿನ ಎಕಂಬಾ ಚೆಕ್ ಪೋಸ್ಟ್‌ನಲ್ಲಿ 1 ಕೋಟಿ 50 ಲಕ್ಷ ರೂ. ಬೆಲೆ ಬಾಳುವ 130 ಕೆಜಿ ಗಾಂಜಾ ಜಪ್ತಿ ಮಾಡಲಾಗಿದೆ. ಬೊಲೆರೋ (Bolero) ಕಾರಿನ ಸೀಕ್ರೆಟ್ ಲಾಕರ್ ಮೂಲಕ ಗಾಂಜಾ ಸಾಗಾಟ ಮಾಡುತ್ತಿದ್ದ ಬೀದರ್ ಮೂಲದ ಇಬ್ಬರು ಆರೋಪಿಗಳನ್ನು ಬಂಧಿಸಿದ್ದು, ಔರಾದ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಇದನ್ನೂ ಓದಿ: ಪೊಲೀಸರ ಭರ್ಜರಿ ಭೇಟೆ – ಅಕ್ರಮವಾಗಿ ಸಾಗಿಸುತ್ತಿದ್ದ 1 ಕೋಟಿ ರೂ. ಮೌಲ್ಯದ ಗಾಂಜಾ ಜಪ್ತಿ 

    ಅಷ್ಟೇ ಅಲ್ಲದೇ ತೆಲಂಗಾಣದಿಂದ ಬಸ್‌ನಲ್ಲಿ ಅಕ್ರಮ ಗಾಂಜಾ ಸಾಗಾಟ ಮಾಡುತ್ತಿದ್ದಾಗ ಬೀದರ್ ಜಿಲ್ಲೆಯ ಹುಮ್ನಾಬಾದ್ (Humnabad) ಪಟ್ಟಣದಲ್ಲಿ ಪೊಲೀಸರು 20 ಕೆಜಿ ಗಾಂಜಾವನ್ನು ಜಪ್ತಿ ಮಾಡಿದ್ದಾರೆ. ತೆಲಂಗಾಣದಿಂದ ಬೀದರ್‌ಗೆ ಅಕ್ರಮವಾಗಿ ಗಾಂಜಾ ಸಾಗಾಟ ಮಾಡುತ್ತಿದ್ದ ಓರ್ವ ಆರೋಪಿಯನ್ನು ಬಂಧಿಸಿ (Arrest) ಹುಮ್ನಾಬಾದ್ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಹೆಚ್ಚಿನ ತನಿಖೆ ಕೈಗೊಂಡಿದ್ದಾರೆ. ಇದನ್ನೂ ಓದಿ: 100 ವರ್ಷದ ಹಳೆಯ ಮರ ಶೆಡ್ ಮೇಲೆ ಬಿದ್ದು 7 ಮಂದಿ ದಾರುಣ ಸಾವು

    ಕಳೆದ ಮೂರು ದಿನಗಳಲ್ಲಿ ಒಟ್ಟು 2 ಕೋಟಿ 55 ಲಕ್ಷ ರೂ. ಮೌಲ್ಯದ ಗಾಂಜಾ ಜಪ್ತಿ ಮಾಡಿ ಬೀದರ್ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿ ರಾಜ್ಯದ ಗಮನ ಸೆಳೆದಿದ್ದಾರೆ. ಇದನ್ನೂ ಓದಿ: ಪೊಲೀಸರ ಬಂಧನದಿಂದ ಎಸ್ಕೇಪ್ ಆಗಿದ್ದ ಅಮೃತ್‌ಪಾಲ್ ಸಿಂಗ್‌ನ ಆಪ್ತ ಸಹಾಯಕ ಅರೆಸ್ಟ್

  • ಬೆಳಗಾವಿಯಲ್ಲಿ ದಾಖಲೆ ಇಲ್ಲದ 2 ಕೋಟಿ ರೂ. ಹಣ ಜಪ್ತಿ

    ಬೆಳಗಾವಿಯಲ್ಲಿ ದಾಖಲೆ ಇಲ್ಲದ 2 ಕೋಟಿ ರೂ. ಹಣ ಜಪ್ತಿ

    ಬೆಳಗಾವಿ: ಬೆಳ್ಳಂಬೆಳಗ್ಗೆ ಬೆಳಗಾವಿ (Belagavi) ಚುನಾವಣಾ ಅಧಿಕಾರಿಗಳು ಭರ್ಜರಿ ಬೇಟೆಯಾಡಿದ್ದು, ಸೂಕ್ತ ದಾಖಲೆಗಳಿಲ್ಲದೆ ಸಾಗಿಸುತ್ತಿದ್ದ ಎರಡು ಕೋಟಿ ರೂ. ನಗದು ಹಣವನ್ನು ಜಪ್ತಿ ಮಾಡಿಕೊಂಡಿದ್ದಾರೆ.

    ತಾಲೂಕಿನ ರಾಷ್ಟ್ರೀಯ ಹೆದ್ದಾರಿ ಹಿರೇಬಾಗೇವಾಡಿ (Hirebagewadi) ಟೋಲ್ (Toll) ಬಳಿ ಖಾಸಗಿ ಬಸ್‌ನಲ್ಲಿ ಸಾಗಿಸುತ್ತಿದ್ದ ಕಂತೆ ಕಂತೆ ಹಣವನ್ನು ಚುನಾವಣಾ ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ. ಮುಂಬೈನಿಂದ (Mumbai) ಮಂಗಳೂರು (Mangaluru) ಕಡೆಗೆ ಹೊರಟಿದ್ದ ವ್ಯಕ್ತಿಯನ್ನು ಪೊಲೀಸರು ಬಂಧಿಸಿದ್ದಾರೆ. ತಪಾಸಣೆ ನಡೆಸುವ ಸಂದರ್ಭದಲ್ಲಿ ಹಣದ (Money) ಬ್ಯಾಗ್ ಪತ್ತೆಯಾಗಿದೆ. ಇದನ್ನೂ ಓದಿ: ಹತ್ತು ವರ್ಷದಿಂದ ನಾಪತ್ತೆಯಾಗಿದ್ದ ನಟೋರಿಯಸ್ ರೌಡಿಶೀಟರ್‌ಗಳ ಬಂಧನ 

    ಈ ಕುರಿತು ಹಿರೇಬಾಗೇವಾಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸ್ಥಳಕ್ಕೆ ಬೆಳಗಾವಿ ಜಿಲ್ಲಾಧಿಕಾರಿ ನಿತೇಶ್ ಪಾಟೀಲ್, ಆದಾಯ ತೆರಿಗೆ (Income Tax) ಅಧಿಕಾರಿಗಳು ಹಾಗೂ ಚುನಾವಣಾ ಅಧಿಕಾರಿಗಳು (Election Officer) ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಇದನ್ನೂ ಓದಿ: ವರುಣಾದಲ್ಲಿ ಸಿದ್ದು-ಬಿಎಸ್‌ವೈ ಹೊಂದಾಣಿಕೆ ಮಾಡ್ಕೊಂಡಿದ್ದಾರೆ: ಹೆಚ್‌ಡಿಡಿ ಹೊಸ ಬಾಂಬ್‌