Tag: seize

  • 100 ಲಾಕರ್‌ನಲ್ಲಿತ್ತು 25 ಕೋಟಿ ರೂ. ಹಣ!

    100 ಲಾಕರ್‌ನಲ್ಲಿತ್ತು 25 ಕೋಟಿ ರೂ. ಹಣ!

    ನವದೆಹಲಿ: ಇಂದು ಬೆಳ್ಳಂಬೆಳಗ್ಗೆ ಆದಾಯ ತೆರಿಗೆ ಇಲಾಖೆಯು ಖಾಸಗಿ ವ್ಯಕ್ತಿಗಳಿಗೆ ಸಂಬಂಧಿಸಿದ ಕಟ್ಟಡಗಳ ಮೇಲೆ ದಾಳಿ ನಡೆಸಿ 100 ಲಾಕರ್ ಗಳಲ್ಲಿದ್ದ ಬರೋಬ್ಬರಿ 25 ಕೋಟಿ ರೂ. ಹಣವನ್ನು ವಶಪಡಿಸಿಕೊಂಡಿದೆ.

    ದೆಹಲಿಯ ಚಾಂದನಿಚೌಕ್ ಪ್ರದೇಶದಲ್ಲಿ ಈ ದಾಳಿ ನಡೆದಿದೆ. ಒಟ್ಟು 8 ಕಡೆ ಐಟಿ ಅಧಿಕಾರಿಗಳು ದಾಳಿ ನಡೆಸಿ ಬೃಹತ್ ಪ್ರಮಾಣದ ಹಣವನ್ನು ವಶಪಡಿಸಿಕೊಂಡಿದ್ದಾರೆ.

    ಹವಾಲಾ ವ್ಯಾಪಾರಿಗಳು ತಮ್ಮ ಹಣವನ್ನು ಭದ್ರವಾಗಿ ಕಾಪಾಡಿಕೊಳ್ಳಲು ಈ ರೀತಿ ಖಾಸಗಿ ಲಾಕರ್ ಗಳನ್ನು ಬಳಸುತ್ತಿದ್ದರು. ಖಚಿತ ಮಾಹಿತಿ ಮೇರೆಗೆ ದಾಳಿ ಮಾಡಲಾಗಿದ್ದು, 100 ಲಾಕರ್ ಗಳಲ್ಲಿ 25 ಕೋಟಿ ರೂ. ನಗದನ್ನು ಐಟಿ ಇಲಾಖೆ ವಶಪಡಿಸಿಕೊಂಡಿದೆ.

    ತಂಬಾಕು ವ್ಯಾಪಾರಿಗಳು, ರಾಸಾಯನಿಕ ವ್ಯಾಪಾರಿಗಳು ಮತ್ತು ಒಣ ಹಣ್ಣಿನ ವಿತರಕರು ಸೇರಿದಂತೆ ದೆಹಲಿ ಪ್ರಮುಖ ವ್ಯಕ್ತಿಗಳಿಗೆ ಸಂಬಂಧಿಸಿದ ಹಣ ಎನ್ನುವ ವಿಚಾರ ಪ್ರಾಥಮಿಕ ತನಿಖೆಯ ವೇಳೆ ಬೆಳಕಿಗೆ ಬಂದಿದೆ. ಈ ಉದ್ಯಮಿಗಳು ಹವಾಲಾ ವ್ಯವಹಾರ ನಡೆಸುತ್ತಿದ್ದರು ಎನ್ನುವ ಶಂಕೆ ವ್ಯಕ್ತವಾಗಿದೆ.

    ಸದ್ಯಕ್ಕೆ ಐಟಿ ಅಧಿಕಾರಿಗಳು ಹಣವನ್ನು ವಶಪಡಿಸಿಕೊಂಡಿದ್ದು, ತನಿಖೆ ಶುರುಮಾಡಿದ್ದಾರೆ. ಈ ವರ್ಷದಲ್ಲಿ ತನಿಖಾ ಸಂಸ್ಥೆಗಳು ನಡೆಸಿದ ಮೂರನೇ ಪ್ರಮುಖವಾದ ‘ಲಾಕರ್ ಕಾರ್ಯಾಚರಣೆ’ ಇದಾಗಿದೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ರಾಜ್ಯದ ಹಲವೆಡೆ ಬೈಕ್ ಕಳ್ಳತನ ಮಾಡ್ತಿದ್ದವ ಅರೆಸ್ಟ್ – 15 ವಾಹನಗಳು ವಶಕ್ಕೆ

    ರಾಜ್ಯದ ಹಲವೆಡೆ ಬೈಕ್ ಕಳ್ಳತನ ಮಾಡ್ತಿದ್ದವ ಅರೆಸ್ಟ್ – 15 ವಾಹನಗಳು ವಶಕ್ಕೆ

    ಕೋಲಾರ: ನಗರ ಠಾಣೆ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿ ರಾಜ್ಯದ ಹಲವೆಡೆ ದ್ವಿಚಕ್ರ ವಾಹನ ಕದಿಯುತ್ತಿದ್ದ ಬೈಕ್ ಕಳ್ಳನನ್ನ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

    ಶ್ರೀನಿವಾಸಪುರದ ಶೇಖ್ ಯಾಸೀನ್ ಅರ್ಪತ್ ಬಂಧಿತ ಆರೋಪಿ. ಈತ ಮೆಕ್ಯಾನಿಕ್ ಆಗಿದ್ದು, ನಕಲಿ ಕೀಲಿಗಳನ್ನ ಬಳಸಿಕೊಂಡು ಬೈಕ್‍ ಗಳನ್ನ ಕದಿಯುತ್ತಿದ್ದ ಎನ್ನಲಾಗಿದೆ. ಜೊತೆಗೆ ಹಲವು ಜಿಲ್ಲೆಗಳಲ್ಲಿ ಕದ್ದ ಬೈಕ್ ಗಳನ್ನ ಬೆಂಗಳೂರು ಸೇರಿದಂತೆ ವಿವಿಧೆಡೆ ಮಾರಾಟ ಮಾಡುತ್ತಿದ್ದ ಎಂದು ವಿಚಾರಣೆ ವೇಳೆ ಆರೋಪಿ ತಪ್ಪೊಪ್ಪಿಕೊಂಡಿದ್ದಾನೆ.

    ಸದ್ಯ ಬಂಧಿತನಿಂದ 10 ಲಕ್ಷ ರೂಪಾಯಿ ಮೌಲ್ಯದ 15 ದ್ವಿಚಕ್ರ ವಾಹನಗಳನ್ನ ನಗರ ಠಾಣೆ ಪೊಲೀಸರು ಜಪ್ತಿ ಮಾಡಿದ್ದಾರೆ. ವಶದಲ್ಲಿರುವ ಆರೋಪಿಯನ್ನ ಪೊಲೀಸರು ಮತ್ತಷ್ಟು ವಿಚಾರಣೆ ನಡೆಸುತ್ತಿದ್ದಾರೆ.

    ಬಂಧಿತನಿಂದ ವಶಪಡಿಸಿಕೊಂಡ ಬೈಕ್‍ ಗಳನ್ನ ಕೋಲಾರ, ಬೆಂಗಳೂರು ನಗರ, ಗ್ರಾಮಾಂತರ ಜಿಲ್ಲೆಗಳಲ್ಲಿ ಕಳವು ಮಾಡಿದ್ದ ಆರೋಪಿಯಿಂದ ವಶಪಡಿಸಿಕೊಳ್ಳಲಾಗಿದೆ ಎಂದು ಕೋಲಾರ ಎಸ್.ಪಿ ರೋಹಿಣಿ ಕಟೋಜ್  ಹೇಳಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv ಮತ್ತು Live  ವೀಕ್ಷಿಸಲು  ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್  ಮಾಡಿ: play.google.com/publictv

  • 289 ಮದ್ಯದ ಬಾಕ್ಸ್ ವಶಕ್ಕೆ ಪಡೆದ ಅಬಕಾರಿ ಅಧಿಕಾರಿಗಳು

    289 ಮದ್ಯದ ಬಾಕ್ಸ್ ವಶಕ್ಕೆ ಪಡೆದ ಅಬಕಾರಿ ಅಧಿಕಾರಿಗಳು

    ಕಾರವಾರ: ಮನೆಯ ನೆಲಮಾಳಿಗೆಯಲ್ಲಿ ಅಡಗಿಸಿಟ್ಟು ಮಾರಾಟ ಮಾಡುತಿದ್ದ ಗೋವಾ ಮದ್ಯವನ್ನು ಬೆಂಗಳೂರು ಮೂಲದ ಅಬಕಾರಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ದಾಳಿ ನಡೆಸಿ 20 ಲಕ್ಷ ರೂ. ಮೌಲ್ಯದ 289 ಮದ್ಯದ ಬಾಕ್ಸ್ ಅನ್ನು ವಶಕ್ಕೆ ಪಡೆದಿದ್ದಾರೆ.

    ಉತ್ತರ ಕನ್ನಡ ಜಿಲ್ಲೆಯ ರಾಮನಗರದ ನಾಗನಾಥ ಗಲ್ಲಿ ಹಾಗೂ ಗಣೇಶ್ ಗಲ್ಲಿಯ ಎರಡು ಮನೆಗಳ ಮೇಲೆ ದಾಳಿ ನಡೆಸಿದ ಬೆಂಗಳೂರಿನಿಂದ ಆಗಮಿಸಿದ ವಿಶೇಷ ತಂಡ ನೆಲ ಮಾಳಿಗೆಯಲ್ಲಿ ಹುದುಗಿಸಿಟ್ಟಿದ್ದ ಗೋವಾ ಮದ್ಯವನ್ನು ವಶಪಡಿಸಿಕೊಂಡಿದೆ. ನಾಗನಾಥ ಗಲ್ಲಿಯ ಚಂದ್ರಕಾಂತ್ ಹಾಗೂ ಗಣೇಶ್ ಗಲ್ಲಿಯ ಹರ್ಷ ಗಾಂವ್ಕರ್, ಪರುಶುರಾಮ್ ಎಂಬವರನ್ನು ಅಕ್ರಮ ಮದ್ಯ ಸಂಗ್ರಹಣೆ ಆರೋಪದಡಿ ವಶಕ್ಕೆ ಪಡೆಯಲಾಗಿದೆ.

    ರಾಮನಗರದಲ್ಲಿ ಅಕ್ರಮವಾಗಿ ಮದ್ಯ ಮಾರಾಟ ಜಾಲ ಹಬ್ಬಿದ್ದು ಸ್ಥಳೀಯ ಅಧಿಕಾರಿಗಳಿಗೆ ಮಾಹಿತಿ ನೀಡಿದರೂ ಯಾವುದೇ ಕ್ರಮ ಜರುಗಿಸಿರಲಿಲ್ಲ. ಈ ಹಿನ್ನಲೆಯಲ್ಲಿ ಸ್ಥಳೀಯರು ಬೆಂಗಳೂರಿನ ಅಬಕಾರಿ ಅಧಿಕಾರಿಗಳಿಗೆ ದೂರು ನೀಡಿದ್ದರು. ಬೆಂಗಳೂರಿನಿಂದ ಆಗಮಿಸಿದ ಅಬಕಾರಿ ಅಧಿಕಾರಿ ರವಿ ಕುಮಾರ್ ನೇತ್ರತ್ವದ ತಂಡ ದಾಳಿ ನಡೆಸಿ ದೊಡ್ಡ ಮೊತ್ತದ ಗೋವಾ ಮದ್ಯ ವಶಪಡಿಸಿಕೊಂಡಿದೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv
    ಪಬ್ಲಿಕ್ ಟಿವಿ ಆಪ್ ಡೌನ್ ಲೋಡ್ ಮಾಡಿ: play.google.com/publictv
    ಯೂ ಟ್ಯೂಬ್‍ನಲ್ಲಿ ಪಬ್ಲಿಕ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿ: youtube.com/publictvnewskannada
    ಫೇಸ್‍ಬುಕ್‍ನಲ್ಲಿ ಪಬ್ಲಿಕ್ ಟಿವಿಯನ್ನು ಲೈಕ್ ಮಾಡಿ: facebook.com/publictv
    ಟ್ವಿಟ್ಟರ್‌ನಲ್ಲಿ ಪಬ್ಲಿಕ್ ಟಿವಿಯನ್ನು ಫಾಲೋ ಮಾಡಿ: twitter.com/publictvnews

  • ಯುವಕರ ಬೈಕ್ ವೀಲಿಂಗ್‍ಗೆ ಬ್ರೇಕ್- 37 ಬೈಕ್ ಗಳನ್ನು ಸೀಜ್ ಮಾಡಿದ ಪೊಲೀಸರು

    ಯುವಕರ ಬೈಕ್ ವೀಲಿಂಗ್‍ಗೆ ಬ್ರೇಕ್- 37 ಬೈಕ್ ಗಳನ್ನು ಸೀಜ್ ಮಾಡಿದ ಪೊಲೀಸರು

    ತುಮಕೂರು: ಜಿಲ್ಲೆಯ ಶಿರಾದಲ್ಲಿ ಯುವಕರ ಬೈಕ್ ವೀಲಿಂಗ್ ಕ್ರೇಜ್ ಸಾರ್ವಜನಿಕರಿಗೆ ತಲೆನೋವಾಗಿ ಪರಿಣಮಿಸಿತ್ತು. ವೀಲಿಂಗ್ ಪರಿಣಾಮ ಪ್ರತಿದಿನ ಒಂದಲ್ಲಾ ಒಂದು ಅಪಘಾತಗಳು ನಡೆಯುತ್ತಿತ್ತು ಈಗ ವೀಲಿಂಗ್ ಪುಂಡರಿಗೆ ಪೊಲೀಸರು ಬ್ರೇಕ್ ಹಾಕಿದ್ದಾರೆ. ಬೈಕ್ ವೀಲಿಂಗ್ ಮಾಡುತ್ತಿದ್ದ ಯುವಕರ ಸಹಿತ 37 ಬೈಕ್ ಗಳನ್ನ ಪೊಲೀಸರು ಸೀಜ್ ಮಾಡಿದ್ದಾರೆ.

    ಶಿರಾನಗರ ಹಾಗೂ ರಾಷ್ಟ್ರೀಯ ಹೆದ್ದಾರಿ 04ರಲ್ಲಿ ವ್ರೂಂ… ವ್ರೂಂ… ಅಂತಾ ಕ್ರೇಜಿ ಬಾಯ್ಸ್ ಪಡೆ ಬೈಕ್ ವೀಲಿಂಗ್ ನಡೆಸಿ ಹಲವರ ಪ್ರಾಣಕ್ಕೆ ಸಂಚಕಾರ ತಂದಿದ್ದರು. ವೀಲಿಂಗ್ ಮಾಡುವ ಭರದಲ್ಲಿ ಚಿಗುರು ಮೀಸೆಯ ಯುವಕರು ಹೈವೇ ಎನ್ನದೇ, ಜನನಿಬಿಡ ರಸ್ತೆ ಎನ್ನದೇ ಅಡ್ಡಾದಿಡ್ಡಿಯಾಗಿ ವೀಲಿಂಗ್ ಮಾಡುತ್ತಾ ಶೋ ಕೊಡುತ್ತಿದ್ದರು. ಇವರ ವೀಲಿಂಗ್ ಕಾಟಕ್ಕೆ ಹಲವಾರು ಅಪಘಾತಗಳು ನಡೆದು ಕೆಲ ಜೀವಗಳೂ ಬಲಿಯಾಗಿವೆ. ಇದರಿಂದ ಎಚ್ಚೆತ್ತುಕೊಂಡ ಶಿರಾನಗರ ಪೊಲೀಸರು ಬೈಕ್ ವೀಲಿಂಗ್‍ಗೆ ಬ್ರೇಕ್ ಹಾಕಿದ್ದಾರೆ. ವೀಲಿಂಗ್ ಮಾಡುತ್ತಿದ್ದ 37 ಬೈಕ್ ಗಳನ್ನು ವಶಪಡಿಸಿಕೊಂಡಿದ್ದಾರೆ. 37 ಯುವಕರ ಮೇಲೂ ಕೇಸ್ ಹಾಕಲಾಗಿದೆ.

    ಕೇವಲ ಬೈಕ್ ವೀಲಿಂಗ್ ಶೂರರಿಗೆ ಮಾತ್ರ ಬ್ರೇಕ್ ಬಿದ್ದಿಲ್ಲ. ಅಪ್ರಾಪ್ತ ಬೈಕ್ ಸವಾರರ ಮೇಲೂ ಶಿರಾ ಪೊಲಿಸರು ಕಣ್ಣಿಟ್ಟು ಕೆಲವರಿಗೆ ದಂಡ ಹಾಕಲಾಗಿದೆ. ಅಪ್ರಾಪ್ತರ ಪೋಷಕರಿಗೆ ಕರೆದು ಸಭೆ ನಡೆಸಿ ಮಕ್ಕಳಿಗೆ ತಿಳಿ ಹೇಳುವಂತೆ ತಾಕೀತು ಮಾಡಲಾಗಿದೆ. ಬೈಕ್ ವೀಲಿಂಗ್‍ಗೆ ಕಟ್ಟುನಿಟ್ಟಿನ ಕ್ರಮಕೈಗೊಂಡಿದ್ದರಿಂದ ಶಿರಾನಗರದ ಜನತೆ ಹಾಗೂ ಹೆದ್ದಾರಿ ಸವಾರರು ಪೊಲೀಸರ ಕಾರ್ಯಕ್ಕೆ ಶ್ಲಾಘನೆ ವ್ಯಕ್ತಪಡಿಸಿದ್ದಾರೆ.

    ಶಿರಾ ಪೊಲೀಸರ ಬೈಕ್ ವೀಲಿಂಗ್ ವಿರುದ್ಧ ಕಾರ್ಯಾಚರಣೆಯಿಂದಾಗಿ ನಗರದಲ್ಲಿ ಸುಗಮ ಸಂಚಾರಕ್ಕೆ ಅನುಕೂಲವಾಗಿದೆ. ಅಲ್ಲದೆ ಜನತೆ ನೆಮ್ಮದಿಯ ನಿಟ್ಟುಸಿರು ಬಿಟ್ಟಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

  • ಎಸ್‍ಬಿಐನಿಂದ 963 ಕೋಟಿ ರೂ. ಮೌಲ್ಯದ ವಿಜಯ್‍ಮಲ್ಯ ಆಸ್ತಿ ವಶ!

    ಎಸ್‍ಬಿಐನಿಂದ 963 ಕೋಟಿ ರೂ. ಮೌಲ್ಯದ ವಿಜಯ್‍ಮಲ್ಯ ಆಸ್ತಿ ವಶ!

    ಲಂಡನ್: ಮದ್ಯ ದೊರೆ ವಿಜಯ್ ಮಲ್ಯರವರ ಇಂಗ್ಲೆಂಡ್ ನಲ್ಲಿರುವ ಒಟ್ಟು 963 ಕೋಟಿ ಮೌಲ್ಯದ ಆಸ್ತಿಯನ್ನು ಎಸ್‍ಬಿಐ ವಶಪಡಿಸಿಕೊಂಡಿದೆ.

    ಎಸ್‍ಬಿಐ ಮುಖ್ಯಸ್ಥ ಅರ್ಜಿತ್ ಬಸು ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ್ದು, ಇಂಗ್ಲೆಂಡಿನಲ್ಲಿರುವ ಒಟ್ಟಾರೆ 963 ರೂ. ಮೌಲ್ಯದ ಆಸ್ತಿಯನ್ನು ವಶಪಡಿಸಿಕೊಂಡಿದ್ದೇವೆ. ಇದು ಬ್ಯಾಂಕುಗಳಿಗೆ ಸಿಕ್ಕ ಜಯವಾಗಿದೆ. ಅಲ್ಲದೇ ಇನ್ನೂ ಹೆಚ್ಚಿನ ರೀತಿಯಲ್ಲಿ ಆಸ್ತಿ ಮುಟ್ಟುಗೋಲು ಹಾಕಿಕೊಳ್ಳುವುದಾಗಿ ತಿಳಿಸಿದ್ದಾರೆ.

    ಸರಿಯಾದ ಮಾಹಿತಿಯನ್ನು ನೀಡಿದ್ದರಿಂದ ಲಂಡನ್‍ನಲ್ಲಿರುವ ವಿಜಯ್ ಮಲ್ಯರವರ ಆಸ್ತಿಗಳನ್ನು ಮುಟ್ಟುಗೋಲು ಹಾಕಿಕೊಳ್ಳುವ ಕುರಿತು ನ್ಯಾಯಾಲಯ ಆದೇಶ ನೀಡಿತ್ತು. ಈ ಹಿನ್ನೆಲೆಯಲ್ಲಿ ದಾಳಿ ನಡೆಸಿ ವಶಪಡಿಸಿಕೊಂಡಿದ್ದೇವೆ ಎಂದು ತಿಳಿಸಿದ್ದಾರೆ.

    ಟೆವಿನ್, ವೆಲ್ವಿಯನ್ ಬಳಿ ಇರುವ ಲೇಡಿವಾಕ್ ಹಾಗೂ ಬ್ರಾಂಬಲ್ ವಸತಿನಿಲಯಗಳನ್ನು ಸಹ ಮುಟ್ಟುಗೋಲನ್ನು ಹಾಕಿಕೊಂಡು ಸುಮಾರು 9 ಸಾವಿರ ಕೋಟಿ ರೂಪಾಯಿ ವಶಪಡಿಸಿಕೊಳ್ಳುವ ನಿರೀಕ್ಷೆಯಲ್ಲಿದ್ದೇವೆ ಎಂದು ತಿಳಿಸಿದರು. ಅಲ್ಲದೇ ವಿಶ್ವವ್ಯಾಪಿ ಮಲ್ಯರವರ ಆಸ್ತಿಮುಟ್ಟಿಗೋಲು ಕುರಿತು ಇಂಗ್ಲೆಂಡ್ ನ್ಯಾಯಾಲಯದ ಆದೇಶಕ್ಕಾಗಿ ಕಾಯುತ್ತಿದ್ದೇವೆ ಎಂದು ಹೇಳಿದ್ದಾರೆ.

    ಈ ವೇಳೆ ಮಾತನಾಡಿದ ಎಸ್‍ಬಿಐ ಉಪ ವ್ಯವಸ್ಥಾಪಕ ನಿರ್ದೇಶಕ ಪಲ್ಲವ್ ಮೊಹಪತ್ರಾ, ಮಲ್ಯ ಹೊಂದಿರುವ ಆಸ್ತಿಯ ಮಾಲೀಕತ್ವ ವಿಚಾರದಲ್ಲಿ ಗೊಂದಲದಲ್ಲಿರುವ ಕಾರಣ ವಶ ಪಡಿಸುಕೊಳ್ಳುವ ಪ್ರಕ್ರಿಯೆ ಕಠಿಣವಾಗಿದೆ. ಭಾರತೀಯ ಬ್ಯಾಂಕುಗಳಿಗೆ ಮಲ್ಯ ಸುಮಾರು 6,500 ಕೋಟಿ ರೂ. ನೀಡಬೇಕಿದೆ. ಭಾರತೀಯ ಬ್ಯಾಂಕ್ ಗಳ ಒಕ್ಕೂಟ ಮಲ್ಯನನ್ನು ದಿವಾಳಿ ಎಂದು ಘೋಷಿಸಲು ಮನವಿ ಮಾಡಿಕೊಂಡಿದೆ ಎಂದು ತಿಳಿಸಿದೆ.

    9 ಸಾವಿರ ಕೋಟಿ ರೂಪಾಯಿ ಬ್ಯಾಂಕ್ ಗಳಿಗೆ ಬಾಕಿ ಹಣ ನೀಡಬೇಕಿರುವ ವಿಜಯ್ ಮಲ್ಯ ಅವರ ಲಂಡನ್ ನಲ್ಲಿರುವ ಆಸ್ತಿಯನ್ನು ವಶಪಡಿಸಿಕೊಳ್ಳುವುದಕ್ಕೆ ಸಂಬಂಧಿಸಿದಂತೆ ಇಂಗ್ಲೆಂಡ್ ನ್ಯಾಯಾಲಯದಲ್ಲಿ 13 ಭಾರತೀಯ ಬ್ಯಾಂಕ್ ಗಳ ಒಕ್ಕೂಟ ಕಾನೂನು ಸಮರ ನಡೆಸುತಿತ್ತು. ಗುರುವಾರ ಕೋರ್ಟ್ ಆಸ್ತಿ ವಶಪಡಿಸಿಕೊಳ್ಳಲು ಆದೇಶ ನೀಡಿತ್ತು.

    ಬ್ಯಾಂಕ್ ಸಾಲವನ್ನು ಮರುಪಾವತಿ ಮಾಡಲು ಸಿದ್ಧರಾಗಿರುವ ಉದ್ದೇಶಪೂರ್ವಕ ಸುಸ್ತಿದಾರ ವಿಜಯ್ ಮಲ್ಯ ಅವರಿಗೆ ಸೇರಿದ 159 ಆಸ್ತಿಗಳನ್ನು ಬೆಂಗಳೂರು ನಗರ ಪೊಲೀಸರು ಗುರುವಾರ ಪತ್ತೆ ಹಚ್ಚಿದ್ದಾರೆ.

  • ಸೀಜ್ ಮಾಡಿದ್ದ ಬೈಕ್ ಪೊಲೀಸ್ ಠಾಣೆಯಿಂದ ಮಾಯ- ದಾಖಲೆ ಇದ್ರು ಏನೂ ಮಾಡಲಾಗದೇ ಕಂಗಾಲಾದ ವ್ಯಕ್ತಿ

    ಸೀಜ್ ಮಾಡಿದ್ದ ಬೈಕ್ ಪೊಲೀಸ್ ಠಾಣೆಯಿಂದ ಮಾಯ- ದಾಖಲೆ ಇದ್ರು ಏನೂ ಮಾಡಲಾಗದೇ ಕಂಗಾಲಾದ ವ್ಯಕ್ತಿ

    ಮೈಸೂರು: ತಪಾಸಣೆ ವೇಳೆ ದಾಖಲೆ ಇಲ್ಲದ ವಾಹನ ಸಿಕ್ಕಿಬಿದ್ರೆ ಪೊಲೀಸ್ರು ಏನು ಮಾಡ್ತಾರೆ? ಸೀಜ್ ಮಾಡಿ ಸ್ಟೇಷನ್ ನಲ್ಲಿ ಇಡ್ತಾರೆ. ಹಾಗೆ ಸೀಜ್ ಆದ ಬೈಕೊಂದು ಪೊಲೀಸ್ ಸ್ಟೇಷನ್ ನಿಂದ ಗಾಯಬ್ ಆಗಿದೆ.

    ಮೈಸೂರು ಜಿಲ್ಲೆಯ ನೂತನ ತಾಲೂಕಿನ ಸರಗೂರು ಪೊಲೀಸ್ ಠಾಣೆಯಲ್ಲಿ ಇಂತಹದ್ದೊಂದು ಪ್ರಕರಣ ನಡೆದಿದೆ. ನಂಜನಗೂಡಿನ ಹೆಡಿಯಾಲ ಗ್ರಾಮದ ಕೂಲಿ ಕಾರ್ಮಿಕ ಸಿದ್ದು ಅವರಿಗೆ ಎರಡು ತಿಂಗಳ ಹಿಂದೆ ಪೊಲೀಸರ ತಪಾಸಣೆ ವೇಳೆ ಸಂಚಾರ ನಿಯಮ ಉಲ್ಲಂಘನೆಯ ಹಲವು ಕೇಸ್ ಗಳು ಬೈಕ್ ಮೇಲೆ ಇರುವುದು ಗೊತ್ತಾಗಿದೆ. ಅದರ ದಂಡದ ಮೊತ್ತ 2 ಸಾವಿರ ರೂಪಾಯಿ. ಆಗ ದಂಡ ಕಟ್ಟಲು ಹಣ ಇಲ್ಲ ಅಂತಾ ಸಿದ್ದು ಹೇಳಿದ ಕಾರಣ ಪೊಲೀಸರು ಬೈಕ್ ಸೀಜ್ ಮಾಡಿ ಪೊಲೀಸ್ ಠಾಣೆಗೆ ತೆಗೆದುಕೊಂಡು ಹೋಗಿದ್ದಾರೆ.

    ಹಲವು ದಿನಗಳ ಬಳಿಕ ದಂಡದ ಹಣ ಹೊಂದಿಸಿಕೊಂಡ ಸಿದ್ದು, ಬೈಕ್ ಬಿಡಿಸಿಕೊಳ್ಳಲು ಪೊಲೀಸ್ ಠಾಣೆಗೆ ಹೋಗಿದ್ದಾರೆ. ಅಲ್ಲಿಂದ ಪೊಲೀಸರ ಡ್ರಾಮಾ ಶುರುವಾಗಿದೆ. ನಾವು ಬೈಕನ್ನು ವಶಕ್ಕೇ ಪಡೆದಿಲ್ಲ ಅಂತ ಪೊಲೀಸರು ಸಬೂಬು ಹೇಳಿ ಸಿದ್ದು ಅವರನ್ನು ಅಲ್ಲಿಂದ ಸಾಗುಹಾಕುವ ಪ್ರಯತ್ನ ನಡೆದಿದೆ. ಹೀಗಾಗಿ ಸಿದ್ದು ತನ್ನ ಬೈಕ್ ಗಾಗಿ ಪ್ರತಿನಿತ್ಯ ದಾಖಲೆ ಸಮೇತ ಪೊಲೀಸ್ ಠಾಣೆಗೆ ಅಲೆಯುತ್ತಿದ್ದಾರೆ.

    ಪೊಲೀಸರ ಈ ವರ್ತನೆಗೆ ಕಾರಣ ಸ್ಟೇಷನ್ ನಲ್ಲಿದ್ದ ಬೈಕ್ ನಾಪತ್ತೆಯಾಗಿರುವುದು. ಸಿದ್ದು ಜೊತೆ ಸಿಕ್ಕಿಬಿದ್ದ ಇತರೆ ಬೈಕ್ ಗಳು ಸ್ಟೇಷನ್ ನಲ್ಲಿ ಇವೆ. ಆದ್ರೆ ಸಿದ್ದು ಬೈಕ್ ಮಾತ್ರ ಕಾಣಿಸ್ತಿಲ್ಲ. ಅದಕ್ಕಾಗಿ ಈಗ ಬಾ… ಆಗ ಬಾ.. ಅಂತ ಸಬೂಬು ಹೇಳ್ತಿದ್ದಾರೆ. ಈಗ ವರಸೆ ಚೇಂಜ್ ಮಾಡಿರೋ ಪೊಲೀಸರು ನಾವು ಬೈಕ್ ಸೀಜ್ ಮಾಡಿಲ್ಲ ಅನ್ನೋ ಕಾರಣ ಕೊಡುತ್ತಿದ್ದಾರೆ. ಆದರೆ ಸಿದ್ದು ಬಳಿ ಪೊಲೀಸರು ಬೈಕ್ ಸೀಜ್ ಮಾಡಿರೋ ದಾಖಲೆ ಪತ್ರ ಇದೆ.

  • ಬ್ಯಾನ್ ಆದ ನೋಟುಗಳ ಹಾಸಿಗೆ- 100 ಕೋಟಿ ರೂ. ಹಳೇ ನೋಟು ಜಪ್ತಿ!

    ಬ್ಯಾನ್ ಆದ ನೋಟುಗಳ ಹಾಸಿಗೆ- 100 ಕೋಟಿ ರೂ. ಹಳೇ ನೋಟು ಜಪ್ತಿ!

    ಕಾನ್ಪುರ: ಅಂದಾಜು 100 ಕೋಟಿ ರೂ. ಮೊತ್ತದ ಬ್ಯಾನ್ ಆದ ನೋಟುಗಳನ್ನ ಉತ್ತರಪ್ರದೇಶ ಪೊಲೀಸರು ಬುಧವಾರದಂದು ಕಾನ್ಪುರದಲ್ಲಿ ಜಪ್ತಿ ಮಾಡಿದ್ದಾರೆ.

    ಜಪ್ತಿ ಮಾಡಲಾಗಿರೋ ಹಣದ ನಿರ್ದಿಷ್ಟ ಮೊತ್ತವನ್ನು ತಿಳಿಯಲು ಎಣಿಕಾ ಕಾರ್ಯ ನಡೆಯುತ್ತಿದೆ. ಜಪ್ತಿಯಾಗಿರೋ ಹಣ ಹಳೇ 500 ಹಾಗೂ 1000 ರೂ. ಮುಖಬೆಲೆಯ ನೋಟುಗಳಲ್ಲಿವೆ. ಕಾನ್ಪುರದ ಸೇಸಾಮೌ ಪಾಕೆಟ್‍ನಲ್ಲಿ ಈ ದಾಳಿ ನಡೆದಿದೆ.

    ಕೋಟಿಗಟ್ಟಲೆ ಬ್ಯಾನ್ ಆದ ನೋಟುಗಳು ಕಾನ್ಪುರ ನಿವಾಸಿಯೊಬ್ಬರ ಮನೆಯಲ್ಲಿದೆ ಎಂದು ನಮಗೆ ಮಾಹಿತಿ ಬಂದಿತ್ತು. ಆರ್‍ಬಿಐ ಹಾಗೂ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳನ್ನೊಳಗೊಂಡ ತಂಡ ದಾಳಿ ನಡೆಸಿತ್ತು. ಇನ್ನೂ ಶೋಧ ಕಾರ್ಯ ಹಾಗೂ ಎಣಿಕಾ ಕಾರ್ಯ ನಡೆಯುತ್ತಿರುವುದರಿಂದ ನಿಗದಿತ ಮೊತ್ತ ಎಷ್ಟು ಎಂಬುದು ಇನ್ನೂ ಸ್ಪಷ್ಟವಾಗಿಲ್ಲ ಎಂದು ಎಸ್‍ಎಸ್‍ಪಿ ಎಕೆ ಮೀನಾ ಹೇಳಿದ್ದಾರೆ.

    ಕಂತೆ ಕಂತೆ ನೋಟುಗಳನ್ನ ಹಾಸಿಗೆಯಂತೆ ಜೋಡಿಸಿರುವ ಫೋಟೋ ಹಾಗೂ ವಿಡಿಯೋವನ್ನ ಸುದ್ದಿ ಸಂಸ್ಥೆ ಹಂಚಿಕೊಂಡಿದೆ. ನೋಟುಗಳ ಆರೋಪಿಯ ಬಗ್ಗೆ ಮಾಹಿತಿ ಬಹಿರಂಗಪಡಿಸಲು ಪೊಲೀಸರು ನಿರಾಕರಿಸಿದ್ದಾರೆ. ಐಟಿ ಇಲಾಖೆ ಅಧಿಕಾರಿಗಳು ಈ ಬಗ್ಗೆ ವಿಚಾರಣೆ ನಡೆಸುತ್ತಿದ್ದಾರೆ.

    2016ರ ನವೆಂಬರ್ 8ರಂದು ಕೇಂದ್ರ ಸರ್ಕಾರ ಹಳೇ 500 ಹಾಗೂ 1000 ರೂ. ಮುಖಬೆಲೆಯ ನೋಟುಗಳನ್ನ ಬ್ಯಾನ್ ಮಾಡಿತ್ತು.