Tag: seized

  • Bengaluru | ಬಿಡಿಎ ಭರ್ಜರಿ ಕಾರ್ಯಾಚರಣೆ – 8.20 ಕೋಟಿ ಮೌಲ್ಯದ ಆಸ್ತಿ ಜಪ್ತಿ

    Bengaluru | ಬಿಡಿಎ ಭರ್ಜರಿ ಕಾರ್ಯಾಚರಣೆ – 8.20 ಕೋಟಿ ಮೌಲ್ಯದ ಆಸ್ತಿ ಜಪ್ತಿ

    ಬೆಂಗಳೂರು: ಬಿಡಿಎ (ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ) ಅನಧಿಕೃತ ನಿರ್ಮಾಣಗಳನ್ನು ತೆರವುಗೊಳಿಸುವ ಕಾರ್ಯಾಚರಣೆ ಮುಂದುವರಿಸಿದೆ. ಬುಧವಾರ ನಡೆದ ಕಾರ್ಯಾಚರಣೆಯಲ್ಲಿ ಜೆ.ಪಿ ನಗರದ 9ನೇ ಫೇಸ್, 2ನೇ ಬ್ಲಾಕ್‌ನಲ್ಲಿ 8.20 ಕೋಟಿ ಮೌಲ್ಯದ ಆಸ್ತಿಯನ್ನು ವಶಪಡಿಸಿಕೊಂಡಿದೆ.

    ಬೆಂಗಳೂರು ದಕ್ಷಿಣ ತಾಲ್ಲೂಕು, ಉತ್ತರಹಳ್ಳಿ ಹೋಬಳಿ, ಆಲಹಳ್ಳಿ ಗ್ರಾಮದ ಸರ್ವೆ ನಂ. 84/1ರಲ್ಲಿನ ನಿವೇಶನ ಸಂಖ್ಯೆ 34, 73, 74, 114 ರಲ್ಲಿ ಅನಧಿಕೃ ನಿರ್ಮಾಣಗಳನ್ನು ತೆರವುಗೊಳಿಸಿ, 7340 ಚದರ ಅಡಿ ವಿಸ್ತೀರ್ಣದ ಸುಮಾರು 8.20 ಕೋಟಿ ಬೆಲೆ ಬಾಳುವ ಪ್ರದೇಶವನ್ನು ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರವು ವಶಪಡಿಸಿಕೊಂಡಿದೆ. ಇದನ್ನೂ ಓದಿ: ಅವಧಿಗೂ ಮುನ್ನ ಅರ್ಧದಷ್ಟು ಭರ್ತಿಯಾದ ಟಿಬಿ ಡ್ಯಾಂ – ಜು.1ಕ್ಕೆ ಕಾಲುವೆಗೆ ನೀರು ಬಿಡುಗಡೆ ಸಾಧ್ಯತೆ

    ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ಕಾರ್ಯನಿರತ ಪಡೆಯ ಆರಕ್ಷಕ ಅಧೀಕ್ಷಕರು, ದಕ್ಷಿಣ ವಿಭಾಗದ ಕಾರ್ಯಪಾಲಕ ಅಭಿಯಂತರರು, ಸಹಾಯಕ ಕಾರ್ಯಪಾಲಕ ಅಭಿಯಂತರರು ಹಾಗೂ ಸ್ಥಳೀಯ ಪೊಲೀಸ್‌ ಇಲಾಖೆ ಸಹಯೋಗದೊಂದಿಗೆ ಕಾರ್ಯಾಚರಣೆ ನಡೆಸಲಾಯಿತು. ಇದನ್ನೂ ಓದಿ:  ಸೈಬರ್‌ ಪೊಲೀಸರ ಸೋಗಿನಲ್ಲಿ ಬ್ಲ್ಯಾಕ್‌ಮೇಲ್‌ – ಖರ್ತನಾಕ್‌ ಲೇಡಿ ಸೇರಿ 7 ಲಕ್ಷ ಸುಲಿಗೆ ಮಾಡಿದ್ದ ಐವರು ಅರೆಸ್ಟ್‌

  • ಗುಜರಾತ್‌ನಲ್ಲಿ 5,000 ಕೋಟಿ ಮೌಲ್ಯದ ಕೊಕೇನ್ ಸೀಜ್

    ಗುಜರಾತ್‌ನಲ್ಲಿ 5,000 ಕೋಟಿ ಮೌಲ್ಯದ ಕೊಕೇನ್ ಸೀಜ್

    – 2 ವಾರದಲ್ಲಿ ಒಟ್ಟು 13,000 ಕೋಟಿ ಮೌಲ್ಯದ ಕೊಕೇನ್ ಜಪ್ತಿ

    ಗುಜರಾತ್: 5,000 ಕೋಟಿ ರೂ. ಮೌಲ್ಯದ 514 ಕೆ.ಜಿ ಕೊಕೇನ್ (Cocaine) ವಶಕ್ಕೆ ಪಡೆಯಲಾಗಿದ್ದು, ದೆಹಲಿ ಹಾಗೂ ಗುಜರಾತ್ ಪೊಲೀಸರ ವಿಶೇಷ ತಂಡವು ಭರ್ಜರಿ ಬೇಟೆಯಾಡಿ, ಐವರನ್ನು ಬಂಧಿಸಿದ್ದಾರೆ.

    ಇತ್ತೀಚಿಗೆ ದೆಹಲಿ ಪೊಲೀಸರು 5,000 ಸಾವಿರ ಕೋಟಿ ರೂ.ಗೂ ಹೆಚ್ಚಿನ ಮೌಲ್ಯದ ಕೊಕೇನ್ ವಶಪಡಿಸಿಕೊಂಡಿದ್ದರು. ಅದರ ಬೆನ್ನಲ್ಲೇ ಭಾನುವಾರ ಗುಜರಾತ್‌ನಲ್ಲಿ 5,000 ಕೋಟಿ ರೂ. ಮೂಲ್ಯದ 518 ಕೆ.ಜಿ ಮೌಲ್ಯದ ಕೊಕೇನ್ ವಶಪಡಿಸಿಕೊಂಡಿದೆ. ಗುಜರಾತ್ ಹಾಗೂ ದೆಹಲಿ ಪೊಲೀಸರ ಜಂಟಿ ಕಾರ್ಯಾಚರಣೆಯಲ್ಲಿ ಅಂಕಲೇಶ್ವರ ಔಷಧ ಕೇಂದ್ರದಲ್ಲಿ ಮಾದಕ ವಸ್ತು ಪತ್ತೆಯಾಗಿದೆ.ಇದನ್ನೂ ಓದಿ:ಟ್ರಂಪ್‌ಗಿಂತಲೂ ಕಮಲಾ ಹ್ಯಾರಿಸ್‌ಗೆ ಹೆಚ್ಚಿನ ಕೋಟ್ಯಧಿಪತಿಗಳ ಬೆಂಬಲ – ಇಲ್ಲಿದೆ ಬಿಲಿಯನೇರ್ಸ್‌ ಲಿಸ್ಟ್‌

    ಈ ಮೂಲಕ ಒಟ್ಟು 2 ವಾರದಲ್ಲಿ ಗುಜರಾತ್ ಹಾಗೂ ದೆಹಲಿಯಲ್ಲಿ ಜಾರಿ ನಿದೇಶನಾಯಲಯ (ED-Enforcement Directorate) ಒಟ್ಟು 13,000 ಕೋಟಿ ರೂ.ಮೌಲ್ಯದ 1289 ಕೆ.ಜಿ ಕೊಕೇನ್ ಹಾಗೂ 40 ಕೆ.ಜಿಯಷ್ಟು ಥಾಯ್ಲೆಂಡ್‌ನ ಹೈಡ್ರೋಪೋನಿಕ್ ಎಂಬ ಮಾದಕ ವಸುವನ್ನು ವಶಕ್ಕೆ ಪಡೆದುಕೊಂಡಿವೆ.

    ಇದಕ್ಕೂ ಮುನ್ನವೇ ಅ.1 ರಂದು ದೆಹಲಿ ಪೊಲೀಸರ ವಿಶೇಷ ತಂಡವು ಮಹಿಪಾಲ್‌ಪುರದಲ್ಲಿರುವ ತುಷಾರ್ ಗೋಯಲ್ ಅವರ ಗೋದಾಮಿನ ಮೇಲೆ ದಾಳಿ ನಡೆಸಿತ್ತು. ಆ ವೇಳೆ 562 ಕೆ.ಜಿ. ಕೊಕೇನ್ ಮತ್ತು 40 ಕೆ.ಜಿ. ಹೈಡ್ರೋಪೋನಿಕ್ ಮಾದಕ ವಸ್ತುವನ್ನು ವಶಪಡಿಸಿಕೊಂಡಿದ್ದರು. ಅದಾದ ಬಳಿಕ ಹಿಚ್ಚಿನ ತನಿಖೆಗಾಗಿ ಅ.11ರಂದು ದೆಹಲಿಯ ರಮೇಶ್ ನಗರದಲ್ಲಿ 208 ಕೆ.ಜಿ. ಕೊಕೇನ್‌ನ್ನು ವಶಪಡಿಸಿಕೊಳ್ಳಲಾಗಿದ್ದು, ನಮಕೀನ್ ಪ್ಯಾಕೆಟ್‌ನಲ್ಲಿ ಮಾದಕವಸ್ತು ಲಭ್ಯವಾಗಿತ್ತು.

    ಈ ಪ್ರಕರಣಗಳ ಬೆನ್ನಲ್ಲೇ ದೆಹಲಿ ಹಾಗೂ ಗುಜರಾತ್ ಪೊಲೀಸರ ವಿಶೇಷ ತಂಡವು ಭರ್ಜರಿ ದಾಳಿ ನಡೆಸಿದ್ದು, 5000 ಕೋಟಿ ರೂ. ಮೌಲ್ಯದ 514 ಕೆ.ಜಿ ಕೊಕೇನ್ ವಶಕ್ಕೆ ಪಡೆದು ಐವರನ್ನು ಬಂಧಿಸಿದ್ದಾರೆ. ಸದ್ಯ ಈ ಪ್ರಕರಣ ಸಂಬಂಧ ತನಿಖೆ ನಡೆಯುತ್ತಿದೆ.ಇದನ್ನೂ ಓದಿ: ಬಾಬಾ ಸಿದ್ದಿಕಿ ಹತ್ಯೆ ಕೇಸ್‌ – ಕೃತ್ಯದ ಬಳಿಕ ಭದ್ರತಾ ಸಿಬ್ಬಂದಿ ಮೇಲೆ ಖಾರದ ಪುಡಿ ಎರಚಿ ಪರಾರಿಯಾಗಿದ್ದ ಆರೋಪಿಗಳು

  • ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ 34 ಲಕ್ಷ ಮೌಲ್ಯದ ಗಾಂಜಾ ಜಪ್ತಿ

    ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ 34 ಲಕ್ಷ ಮೌಲ್ಯದ ಗಾಂಜಾ ಜಪ್ತಿ

    ಬೀದರ್: ಖಚಿತ ಮಾಹಿತಿ ಮೇರೆಗೆ ಸಿನಿಮಿಯಾ ರೀತಿಯಲ್ಲಿ ಕಾರು ಅಡ್ಡಗಟ್ಟಿ, ಬೀದರ್ ಪೊಲೀಸರು ಭರ್ಜರಿ ಕಾರ್ಯಾಚರಣೆ ಮಾಡಿದ್ದಾರೆ. 34 ಲಕ್ಷ ಮೌಲ್ಯದ ಗಾಂಜಾ ಜಪ್ತಿ ಮಾಡಿದ ಘಟನೆ ಬೀದರ್ ಜಿಲ್ಲೆಯ ಹುಮ್ನಾಬಾದ್ ತಾಲೂಕಿನ ದುಬಲಗುಂಡಿ ಕ್ರಾಸ್ ಬಳಿ ನಡೆದಿದೆ.

    ಬೀದರ್ ಕಡೆಯಿಂದ ಮಹಾರಾಷ್ಟ್ರಕ್ಕೆ ಕಾರಿನಲ್ಲಿ ಅಕ್ರಮವಾಗಿ ಗಾಂಜಾ ಸಾಗಾಟ ಮಾಡಲಗುತ್ತಿತ್ತು. ಈ ವೇಳೆ 34 ಲಕ್ಷ ಮೌಲ್ಯದ ಬರೋಬ್ಬರಿ 342 ಕೆಜಿ ಗಾಂಜಾವನ್ನು ಬೀದರ್ ಪೊಲೀಸರು ಜಪ್ತಿ ಮಾಡಿಕೊಂಡಿದ್ದಾರೆ. ಇದನ್ನೂ ಓದಿ: ಪುರುಷರ ಟಾಯ್ಲೆಟ್‍ಗೆ ನುಗ್ಗಿದ್ದ ದೀಪಿಕಾ ಪಡುಕೋಣೆ, ಆಲಿಯಾ ಭಟ್!

    ಒಂದು ಕಾರಿನಲ್ಲಿ ನಾಲ್ಕು ಜನ ಅಕ್ರಮವಾಗಿ ಗಾಂಜಾ ಸಾಗಾಟ ಮಾಡುತ್ತಿದ್ದ ಖಚಿತ ಮಾಹಿತಿ ಮೇರೆಗೆ ಪೊಲೀಸರು ದಾಳಿ ಮಾಡಿದ್ದು, ಈ ವೇಳೆ ಮೂರು ಜನ ಆರೋಪಿ ಪರಾರಿಯಾಗಿದ್ದು ಒಬ್ಬ ಆರೋಪಿಯನ್ನು ಮಾತ್ರ ಬಂಧಿಸುವಲ್ಲಿ ಬೀದರ್ ಪೊಲೀಸರು ಯಶಸ್ವಿಯಾಗಿದ್ದಾರೆ. ಎಸ್‍ಪಿ ಡೆಕ್ಕಾ ಕಿಶೋರ್ ಬಾಬು ಮಾರ್ಗದರ್ಶನದಲ್ಲಿ ಪೊಲೀಸರು ಭರ್ಜರಿ ಕಾರ್ಯಾಚರಣೆ ಮಾಡಿದ್ದಾರೆ. ಈ  ಬಗ್ಗೆ ಹುಮ್ನಾಬಾದ್ ಪೊಲೀಸರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇದನ್ನೂ ಓದಿ: ಬಾಲಕಿಗೆ ಲವ್ ಲೆಟರ್ ಕೊಟ್ಟ 6ನೇ ತರಗತಿ ವಿದ್ಯಾರ್ಥಿ- ಬಾಸುಂಡೆ ಬರುವಂತೆ ಬಾರಿಸಿದ ಶಿಕ್ಷಕಿ!

  • 80 ಲಕ್ಷ ಮೌಲ್ಯದ ಚಂದನ ಮರದ ತುಂಡುಗಳು ವಶ

    80 ಲಕ್ಷ ಮೌಲ್ಯದ ಚಂದನ ಮರದ ತುಂಡುಗಳು ವಶ

    – ಸಿಸಿಬಿ ಪೊಲೀಸರ ಕಾರ್ಯಾಚರಣೆ

    ಮೈಸೂರು: ಅಕ್ರಮವಾಗಿ ಶೇಖರಿಸಿಟ್ಟಿದ್ದ ಚಂದನ ಮರದ ತುಂಡುಗಳನ್ನು ಮೈಸೂರು ಸಿಸಿಬಿ ಪೊಲೀಸರು ವಶಪಡಿಸಿಕೊಂಡಿದ್ದಾರೆ.

    ಬರೋಬ್ಬರಿ 80 ಲಕ್ಷ ಮೌಲ್ಯದ ಚಂದನದ ಮರ ಇದ್ದಾಗಿದ್ದು, 750 ಕೆಜಿ ತೂಕದ 80 ಮರದ ತುಂಡುಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಈ ಸಂಬಂಧ ಓರ್ವನನ್ನು ಬಂಧಿಸಿದ್ದಾರೆ.

    ಲಷ್ಕರ್ ಮೊಹಲ್ಲಾದ ಫೈರೋಜ್ ಬಂಧಿತ ಆರೋಪಿ. ಸಿಸಿಬಿ, ಎಸಿಪಿ ಮರಿಯಪ್ಪ ಮಾರ್ಗದರ್ಶನದಲ್ಲಿ ಇನ್ಸಪೆಕ್ಟರ್ ಕಿರಣ್ ಕುಮಾರ್ ತಂಡ ಈ ಕಾರ್ಯಾಚರಣೆ ನಡೆಸಿದೆ. ಮಂಡಿ ಮೊಹಲ್ಲಾದ ಪುಲಿಕೇಶಿ ರಸ್ತೆಯ ಮನೆಯಲ್ಲಿ ಆರೋಪಿ ಮರಗಳನ್ನು ಶೇಖರಿಸಿಟ್ಟಿದ್ದನು. ಜೊತೆಗೆ ಅಂತರಾಷ್ಟ್ರೀಯ ಮಾರುಕಟ್ಟೆಯಲ್ಲಿ ಮಾರಾಟ ಮಾಡಲು ಹಡಗಿನ ಮೂಲಕ ಸಾಗಿಸಲು ಪ್ಲ್ಯಾನ್ ಮಾಡಿಕೊಂಡಿದ್ದನು.

    ರಾಜ್ಯ ಹೊರ ರಾಜ್ಯಗಳಿಂದ ಅಕ್ರಮವಾಗಿ ಇದನ್ನು ಖರೀದಿಸಿ ತನ್ನ ಮನೆಯಲ್ಲಿ ಶೇಖರಿಸಿಟ್ಟುಕೊಂಡಿದ್ದನು. ಖಚಿತ ಮಾಹಿತಿ ಮೇರೆಗೆ ಸಿಸಿಬಿ ಪೊಲೀಸರು ಕಾರ್ಯಾಚರಣೆ ಮಾಡಿ ಆರೋಪಿಯನ್ನು ಬಂಧಿಸಿ, ಮರದ ತುಂಡುಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ.

  • ಚಿಕ್ಕಬಳ್ಳಾಪುರದಲ್ಲಿ ದಾಖಲೆಗಳಿಲ್ಲದ 8.50 ಲಕ್ಷ ನಗದು ವಶ

    ಚಿಕ್ಕಬಳ್ಳಾಪುರದಲ್ಲಿ ದಾಖಲೆಗಳಿಲ್ಲದ 8.50 ಲಕ್ಷ ನಗದು ವಶ

    ಚಿಕ್ಕಬಳ್ಳಾಪುರ: ಉಪಚುನಾವಣೆ ಘೋಷಣೆಯಾದ ಬೆನ್ನಲ್ಲೇ, ರಾಜ್ಯದಲ್ಲಿ ಚುನಾವಣಾ ಪ್ರಚಾರ ಗರಿಗೆದರಿದ್ದು, ಇಂದು ದಾಖಲೆಗಳಿಲ್ಲದ 8.50 ಲಕ್ಷ ರೂ. ನಗದನ್ನು ಚುನಾವಣಾಧಿಕಾರಿಗಳು ವಶ ಪಡಿಸಿಕೊಂಡಿದ್ದಾರೆ.

    ಇಂದು ಎರಡು ಕಡೆ ವಾಹನ ತಪಾಸಣೆ ಮಾಡುತ್ತಿದ್ದ ಚುನಾವಣಾಧಿಕಾರಿಗಳಿಗೆ, ಬಾಗೇಪಲ್ಲಿ ಟೋಲ್ ಗೇಟ್ ಬಳಿ 5 ಲಕ್ಷ ರೂ. ಮತ್ತು ನಂದಿ ಚೆಕ್ ಪೋಸ್ಟ್ ಬಳಿ 3.50 ಲಕ್ಷ ರೂ. ದಾಖಲೆಯಿಲ್ಲದ ಹಣವನ್ನು ಚುನಾವಣಾ ಅಧಿಕಾರಿಗಳು ವಶಕ್ಕೆ ಪಡೆದುಕೊಂಡಿದ್ದಾರೆ.

    ಸೀರೆ ವಶ: ಇಂದು ಬೆಳಗ್ಗೆ ಮೈಸೂರಿನಲ್ಲಿ ಉಪಚುನಾವಣೆ ಹಿನ್ನೆಲೆಯಲ್ಲಿ ಮತದಾರರಿಗೆ ಹಂಚಲು ಅಕ್ರಮವಾಗಿ ಸಂಗ್ರಹಿದ್ದ 30 ಸಾವಿರ ಸೀರೆಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದರು.

    ಮೈಸೂರಿನ ವಿಜಯನಗರ ಬಡಾವಣೆಯ ಮನೆಯಲ್ಲಿ ಈ ಸೀರೆಗಳನ್ನು ಸಂಗ್ರಹಿಸಲಾಗಿತ್ತು. ಬರೋಬ್ಬರಿ 30 ಸಾವಿರ ಸೀರೆಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಪ್ರತಿ ಸೀರೆಯ ಜೊತೆ ಸಿ.ಪಿ ಯೋಗೇಶ್ವರ್ ಗೆ ಮತ ನೀಡಿ ಎನ್ನುವ ಕರಪತ್ರಗಳಿವೆ.

    ಈ ಕುರಿತು ಸಿ.ಪಿ.ಯೋಗೇಶ್ವರ್ ಚುನಾವಣೆ ಮೊದಲೇ ಸಭೆ ನಡೆಸಿದ್ದರು ಎಂದು ಹೇಳಲಾಗುತ್ತಿದೆ. ಚೀಲಗಳಲ್ಲಿ ತುಂಬಿಸಿಡಲಾಗಿದ್ದ ಸೀರೆಗಳ ಜೊತೆಗೆ ಅಪಾರ ಪ್ರಮಾಣದ ಕರಪತ್ರಗಳನ್ನು ವಶಪಡಿಸಿಕೊಳ್ಳಲಾಗಿದೆ. ವಿಜಯನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

    ಅನರ್ಹ ಶಾಸಕ ಎಚ್.ವಿಶ್ವನಾಥ್ ಅವರು ಹುಣಸೂರು ಕ್ಷೇತ್ರದಲ್ಲಿ ಬಿಜೆಪಿಯಿಂದ ಕಣಕ್ಕಿಳಿಯುತ್ತಿದ್ದಾರೆ. ಆದರೆ ಅನರ್ಹರ ಕುರಿತು ಫಲಿತಾಂಶ ಸುಪ್ರೀಂ ಕೋರ್ಟ್ ಫಲಿತಾಂಶಕ್ಕೂ ಮುನ್ನ ಬಿಜೆಪಿಯಿಂದ ಯೋಗೇಶ್ವರ್ ಸ್ಪರ್ಧಿಸಲು ಎಂದು ಹೇಳಲಾಗಿತ್ತು. ಹೀಗಾಗಿ ಯೋಗೇಶ್ವರ್ ಅವರೇ ಚುನಾವಣೆಗಾಗಿ ಈ ಎಲ್ಲ ಸಿದ್ಧತೆ ನಡೆಸಿದ್ದರಾ ಎಂಬ ಪ್ರಶ್ನೆ ಇದೀಗ ಮೂಡಿದೆ.

  • ವಾಹನ ತಪಾಸಣೆ ವೇಳೆ ಕಾರಿನಲ್ಲಿ 1.5 ಕೋಟಿ ಹಣ ಪತ್ತೆ

    ವಾಹನ ತಪಾಸಣೆ ವೇಳೆ ಕಾರಿನಲ್ಲಿ 1.5 ಕೋಟಿ ಹಣ ಪತ್ತೆ

    ಚಾಮರಾಜನಗರ: ದಾಖಲೆ ಇಲ್ಲದೆ ಹಣ ಸಾಗಾಟ ಮಾಡುತ್ತಿದ್ದವ ವಾಹನ ತಪಾಸಣೆ ವೇಳೆ ಪೊಲೀಸರ ಬಲೆಗೆ ಸಿಕ್ಕಿ ಬಿದ್ದಿದ್ದು, ಕೋಟ್ಯಂತರ ರೂಪಾಯಿ ನಗದನ್ನು ವಶಪಡಿಸಿಕೊಂಡಿರುವ ಘಟನೆ ಹಾಸನೂರು ಚೆಕ್ ಪೋಸ್ಟ್ ಬಳಿ ನಡೆದಿದೆ.

    ಚಾಮರಾಜನಗರದ ಬಾರ್ಡರ್ ತಮಿಳುನಾಡಿನ ಹಾಸನೂರು ಚೆಕ್ ಪೋಸ್ಟ್ ನಲ್ಲಿ ಹಾಸನೂರು ಪೊಲೀಸರು ವಾಹನಗಳ ತಪಾಸಣೆ ನಡೆಸುತ್ತಿದ್ದರು. ಈ ವೇಳೆ ಮಹಾರಾಷ್ಟ್ರದಿಂದ ತಮಿಳುನಾಡಿನ ಕಡೆ ಹೋಗುತ್ತಿದ್ದ ಕಾರೊಂದನ್ನು ತಪಾಸಣೆ ಮಾಡಿದ್ದಾರೆ. ಆ ಕಾರಿನಲ್ಲಿ ದಾಖಲೆ ಇಲ್ಲದ ಬರೋಬ್ಬರಿ 1.5 ಕೋಟಿ ರೂ. ಹಣ ಪತ್ತೆಯಾಗಿದೆ.

    ಮಹಾರಾಷ್ಟ್ರ ಮೂಲದ ಎಂಎಚ್-14- ಇಎಚ್9189 ವಾಹನದ ಮೂಲಕ ಹಣ ಸಾಗಣೆ ಮಾಡುತ್ತಿದ್ದನು ಎಂದು ತಿಳಿದು ಬಂದಿದೆ. ತಕ್ಷಣ ಹಾಸನೂರು ಪೊಲೀಸರು ಕಾರು ಮತ್ತು ಹಣವನ್ನು ವಶಪಡಿಸಿಕೊಂಡಿದ್ದಾರೆ.

    ಈ ಕುರಿತು ಹಾಸನೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ವಿಚಾರಣೆಯನ್ನು ಮುಂದುವರಿಸಿದ್ದಾರೆ. ಇತ್ತೀಚೆಗಷ್ಟೆ ಅಕ್ರಮ ಖೋಟಾ ನೋಟು ಸಾಗಾಟದ ಪ್ರಕರಣದಲ್ಲಿ 3.16 ಕೋಟಿ ಪತ್ತೆಯಾಗಿತ್ತು. ಇದೀಗ ಅಸಲಿ ನೋಟು ಸಾಗಾಟ ಪ್ರಕರಣ ಪತ್ತೆಯಾಗಿದೆ.

  • ವಯನಾಡಿನಿಂದ ಮೂರು ಟ್ರಕ್‍ಗಳಲ್ಲಿ ಸಾಗಿಸುತ್ತಿದ್ದ ಗೋವುಗಳು ಪೊಲೀಸರ ವಶಕ್ಕೆ

    ವಯನಾಡಿನಿಂದ ಮೂರು ಟ್ರಕ್‍ಗಳಲ್ಲಿ ಸಾಗಿಸುತ್ತಿದ್ದ ಗೋವುಗಳು ಪೊಲೀಸರ ವಶಕ್ಕೆ

    ಉಡುಪಿ: ಮೂರು ಟ್ರಕ್‍ಗಳಲ್ಲಿ ಕೇರಳದ ವಯನಾಡಿನಿಂದ ಗೋಶಾಲೆಗೆ ಸಾಗಿಸುತ್ತಿದ್ದ ಜಾನುವಾರುಗಳನ್ನು ಉಡುಪಿ ಜಿಲ್ಲೆ ಕಾಪುವಿನಲ್ಲಿ ಪೊಲೀಸರು ವಶಪಡಿಸಿಕೊಂಡಿದ್ದಾರೆ.

    ದಾಖಲೆ ಯಾವುದೂ ಇಲ್ಲದೆ ಅಕ್ರಮ ಗೋವು ಸಾಗಾಟದ ಶಂಕೆಯಲ್ಲಿ ಬೆನ್ನು ಹತ್ತಿದ್ದ ಮಂಗಳೂರು ಪೊಲೀಸರು ಕಾಪು ಠಾಣಾ ವ್ಯಾಪ್ತಿಯಲ್ಲಿ 3 ಟ್ರಕ್‍ನಲ್ಲಿದ್ದ ಜಾನುವಾರುಗಳನ್ನು ವಶ ಪಡಿಸಿಕೊಂಡಿದ್ದಾರೆ.

    ಶಿರ್ವದಲ್ಲಿ ಹೊಸದಾಗಿ ಆರಂಭಿಸಿದ ಗೋ ಶಾಲೆಗೆ ಗೋವುಗಳನ್ನು ತರಲಾಗಿದೆ ಎಂದು ಗೋಶಾಲೆ ಮ್ಯಾನೇಜರ್ ಗಿರೀಶ ಅವರು ತಿಳಿಸಿದ್ದಾರೆ. ಪೊಲೀಸರು ಈ ಬಗ್ಗೆ ತನಿಖೆ ನಡೆಸುತ್ತಿದ್ದಾರೆ. ಮೇಲ್ನೋಟಕ್ಕೆ ಅಕ್ರಮ ಸಾಗಾಟದ ರೀತಿ ಕಂಡು ಬಂದಿದ್ದು ಆರ್‍.ಟಿ.ಓ ನಿಯಮ ಉಲ್ಲಂಘನೆ, ಅಕ್ರಮ ಸಾಗಾಟ ಕೇಸ್ ದಾಖಲಿಸಿ ತನಿಖೆ ನಡೆಸುತ್ತಿದ್ದಾರೆ.

    ಕೇರಳದಿಂದ ತಂದ ಜಾನುವಾರುಗಳನ್ನು ಗೋವು ಶಾಲೆಗೆ ರವಾನಿಸಲಾಗಿದೆ. ಸಾಗಾಟದ ಸಂದರ್ಭದಲ್ಲಿ ಒಂದು ಗೋವು ಸಾವನಪ್ಪಿರುವುದು ಕೂಡಾ ಪತ್ತೆಯಾಗಿದೆ. ವಿಷಯ ತಿಳಿಯುತ್ತಿದ್ದಂತೆ ಹಿಂದೂಪರ ಸಂಘಟನೆಯ ಕಾರ್ಯಕರ್ತರು ಜಮಾವಣೆಗೊಂಡಿದ್ದರು.

  • ಏರ್‌ಪೋರ್ಟ್‌ನಲ್ಲಿ ಬರೋಬ್ಬರಿ 39.57 ಲಕ್ಷ ಮೌಲ್ಯದ ಚಿನ್ನ ಸೀಜ್!

    ಏರ್‌ಪೋರ್ಟ್‌ನಲ್ಲಿ ಬರೋಬ್ಬರಿ 39.57 ಲಕ್ಷ ಮೌಲ್ಯದ ಚಿನ್ನ ಸೀಜ್!

    ಬೆಂಗಳೂರು: ಅಕ್ರಮವಾಗಿ ಸಾಗಿಸುತ್ತಿದ್ದ ಬರೋಬ್ಬರಿ 39.57 ಲಕ್ಷ ರೂ. ಬೆಲೆ ಬಾಳುವ ಚಿನ್ನವನ್ನು ಕಸ್ಟಮ್ಸ್ ಅಧಿಕಾರಿಗಳ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ವಶಕ್ಕೆ ಪಡೆದುಕೊಂಡಿದ್ದಾರೆ.

    ಶ್ರೀಲಂಕಾ ಮೂಲದ ಮೂವರು ಹಾಗೂ ಭಾರತದ ಓರ್ವ ಅಕ್ರಮವಾಗಿ ಚಿನ್ನವನ್ನು ವಿಮಾನದಲ್ಲಿ ಸಾಗಿಸಲು ಮುಂದಾಗಿದ್ದರು. ಆದರೆ ಆರೋಪಿಗಳು ಎಷ್ಟೇ ಚಾಣಾಕ್ಷ್ಯತನ ಮಾಡಿದರು ಅಧಿಕಾರಿಗಳಿಂದ ತಪ್ಪಿಸಿಕೊಳ್ಳಲು ಆಗಲಿಲ್ಲ. ಇಂದು ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ನಾಲ್ಕು ಮಂದಿ ಬೇರೆ ಬೇರೆಯಾಗಿ ಸುಮಾರು 1.2 ಕೆ.ಜಿ ಚಿನ್ನವನ್ನು ಸಾಗಿಸುತ್ತಿದ್ದರು. ಈ ಬಗ್ಗೆ ಮಾಹಿತಿ ಲಭ್ಯವಾದ ಹಿನ್ನೆಲೆ ಕಸ್ಟಮ್ಸ್ ಅಧಿಕಾರಿಗಳು ಕಾರ್ಯಾಚರಣೆ ನಡೆಸಿ ಚಿನ್ನವನ್ನು ವಶಪಡಿಸಿಕೊಂಡಿದ್ದಾರೆ.

    ಪ್ರತ್ಯೇಕ ನಾಲ್ಕು ಪ್ರಕರಣಗಳಲ್ಲಿ 39.57 ಲಕ್ಷ ಮೌಲ್ಯದ 1.2 ಕೆಜಿ ಚಿನ್ನವನ್ನ ಅಧಿಕಾರಿಗಳು ಸೀಜ್ ಮಾಡಿದ್ದಾರೆ. ಹಾಗೆಯೇ ಅಕ್ರಮವಾಗಿ ಚಿನ್ನ ಸಾಗಿಸ್ತಿದ್ದ ನಾಲ್ವರನ್ನೂ ಕೂಡ ಬಂಧಿಸಲಾಗಿದೆ.

  • ಅಕ್ರಮವಾಗಿ ಸಂಗ್ರಹಿಸಿಟ್ಟಿದ್ದ 31 ಕ್ವಿಂಟಾಲ್ ಅಕ್ಕಿ ವಶ – ಆರೋಪಿ ಪರಾರಿ

    ಅಕ್ರಮವಾಗಿ ಸಂಗ್ರಹಿಸಿಟ್ಟಿದ್ದ 31 ಕ್ವಿಂಟಾಲ್ ಅಕ್ಕಿ ವಶ – ಆರೋಪಿ ಪರಾರಿ

    ಕಾರವಾರ: ಅಕ್ರಮವಾಗಿ ಸಂಗ್ರಹಿಸಿಟ್ಟಿದ್ದ ಅಕ್ಕಿಯನ್ನು ಉತ್ತರ ಕನ್ನಡ ಜಿಲ್ಲೆಯ ಭಟ್ಕಳದಲ್ಲಿ ಆಹಾರ ಇಲಾಖೆ ವಶಪಡಿಸಿಕೊಂಡಿದೆ.

    ಇಲ್ಲಿನ ಪರವರ್ಗ ಗ್ರಾಮದ ಗಣೇಶ ನಗರ ವ್ಯಾಪ್ತಿಯಲ್ಲಿ ವ್ಯಕ್ತಿಯೊಬ್ಬ ಮನೆಯಲ್ಲಿ ಸಂಗ್ರಹಿಸಿಟ್ಟಿದ್ದ ಅಕ್ಕಿಯನ್ನು ಬೊಲೆರೊ ಪಿಕಪ್ ವಾಹನಕ್ಕೆ ತುಂಬುತ್ತಿದ್ದನು. ಈತನ ಬಗ್ಗೆ ಅನುಮಾನ ಬಂದ ಹಿನ್ನೆಲೆಯಲ್ಲಿ ಸಾರ್ವಜನಿಕರ ದೂರಿನ್ವಯ ಆಹಾರ ನಿರೀಕ್ಷಕರು ಹಾಗೂ ಕಂದಾಯ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ದಾಳಿ ನಡೆಸಿದ ವೇಳೆ ಚಾಲಕ ಪರಾರಿಯಾಗಿದ್ದು, ವಾಹನ ಸಮೇತ ಅಕ್ಕಿಯನ್ನು ವಶಕ್ಕೆ ಪಡೆಯಲಾಗಿದೆ.

    ಮೊಹ್ಮದ್ ಯುಸೂಬ್ ಹಮ್ಮಿದ್ ಎಂಬವರ ಮನೆಯ ಶೆಡ್‍ನಲ್ಲಿ ಅಕ್ರಮವಾಗಿ ಸಂಗ್ರಹಿಸಿಡಲಾಗಿದ್ದ ಅಕ್ಕಿಯನ್ನು ಪಿಕಪ್ ಗೆ ತುಂಬುತ್ತಿದ್ದ ವೇಳೆ ಅಲ್ಲಿನ ಸಾರ್ವಜನಿಕರು ತಹಸೀಲ್ದಾರ್ ಕಛೇರಿಗೆ ಕರೆ ಮಾಡಿ ದೂರು ನೀಡಿದ್ದರು.

    ತಹಸೀಲ್ದಾರ್ ಎನ್.ಬಿ ಪಾಟೀಲ್ ಅವರ ಆದೇಶದ ಮೇರೆಗೆ ಕಾರ್ಯಪ್ರವೃತ್ತರಾದ ಆಹಾರ ನಿರೀಕ್ಷಕರು ಹಾಗೂ ಕಂದಾಯ ಅಧಿಕಾರಿಗಳು ದಿಢೀರ್ ದಾಳಿ ನಡೆಸಿದ್ದಾರೆ. 50 ಕೆಜಿಯ ತೂಕದ 60 ಚೀಲಗಳಲ್ಲಿದ್ದ ಒಟ್ಟು 31 ಕ್ವಿಂಟಾಲ್ ಅಕ್ಕಿಯನ್ನು ವಶಕ್ಕೆ ಪಡೆಯಲಾಗಿದೆ. ವಶಕ್ಕೆ ಪಡೆದ ಅಕ್ಕಿಯನ್ನು ಬಂದರ್ ರಸ್ತೆಯಲ್ಲಿ ಕೃಷಿ ಹುಟ್ಟುವಳಿ ಮಾರಾಟ ಸಹಕಾರಿ ಸಂಘದ ದಾಸ್ತಾನು ಮಳಿಗೆಯಲ್ಲಿ ಶೇಖರಿಸಿಡಲಾಗಿದೆ.

    ಅಕ್ಕಿ ಸಾಗಾಟಕ್ಕೆ ಬಳಸಲಾದ ಬೊಲೆರೊ ಪಿಕಪ್ ವಾಹನವನ್ನು ವಶಕ್ಕೆ ಪಡೆದ ಅಧಿಕಾರಿಗಳು ನಗರ ಠಾಣೆಗೆ ಪೊಲೀಸರಿಗೆ ಒಪ್ಪಿಸಿದ್ದಾರೆ. ಈ ಕುರಿತು ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಈ ಕಾರ್ಯಾಚರಣೆಯಲ್ಲಿ ಆಹಾರ ಇಲಾಖೆ ನಿರೀಕ್ಷಕ ಪ್ರವೀಣ, ಕಂದಾಯ ನಿರೀಕ್ಷಕ ಗಣಪತಿ ಮೇತ್ರಿ, ಮುಠ್ಠಳ್ಳಿ ಗ್ರಾಮ ಲೆಕ್ಕಾದಿಕಾರಿ ಸಲ್ಮಾನ್ ಖಾನ್ ಹಾಗೂ ಇತರ ಸಿಬ್ಬಂದಿಗಳು ಇದ್ದರು.

  • ಬಸ್ಸಿನಲ್ಲಿ ಸುಮಾರು 40 ಕೆ.ಜಿಯ 700 ಬೆಳ್ಳಿ ದೀಪಗಳು ವಶ

    ಬಸ್ಸಿನಲ್ಲಿ ಸುಮಾರು 40 ಕೆ.ಜಿಯ 700 ಬೆಳ್ಳಿ ದೀಪಗಳು ವಶ

    ಬೆಂಗಳೂರು: ಐರಾವತ ಕ್ಲಬ್ ಕ್ಲಾಸ್ ಬಸ್ಸಿನಲ್ಲಿ ದಾಖಲೆ ಇಲ್ಲದೆ ಸಾಗಾಟ ಮಾಡುತ್ತಿದ್ದ ಬರೋಬ್ಬರಿ 15 ಲಕ್ಷ ಮೌಲ್ಯದ ಬೆಳ್ಳಿ ದೀಪಗಳನ್ನು ವಶಕ್ಕೆ ಪಡೆಯಲಾಗಿದೆ.

    ಕೆಎಸ್‍ಆರ್ ಟಿಸಿ ವಿಶೇಷ ತನಿಖಾ ದಳ ಬೆಳ್ಳಿ ದೀಪಗಳನ್ನ ವಶಕ್ಕೆ ಪಡಿಸಿಕೊಂಡಿದೆ. ಬಸ್ ಡ್ರೈವರ್ ಮತ್ತು ಕಂಡಕ್ಟರ್ ಐರಾವತ ಕ್ಲಬ್ ಕ್ಲಾಸ್ ಬಸ್ಸಿನಲ್ಲಿ ಕರ್ನಾಟಕದಿಂದ ಆಂಧ್ರಗೆ ಸಾಗಾಟ ಮಾಡುತ್ತಿದ್ದರು ಎಂದು ತಿಳಿದು ಬಂದಿದೆ.

    ಕೆಎಸ್‍ಆರ್ ಟಿಸಿ ತನಿಖಾ ಸಿಬ್ಬಂದಿ ಬಸ್ ಚಾಲಕ ಮತ್ತು ನಿರ್ವಾಹಕರ ಮೇಲೆ ಅನುಮಾನ ಬಂದ ಹಿನ್ನೆಲೆಯಲ್ಲಿ ಹೊಸಕೋಟೆ ಬಳಿಯ ಟೋಲ್‍ನಲ್ಲಿ ತಪಾಸಣೆ ನಡೆಸಿದ್ದಾರೆ. ಈ ವೇಳೆ ಬಸ್ಸಿನ ಡಿಕ್ಕಿಯಲ್ಲಿ ನಾಲ್ಕು ಬ್ಯಾಗ್ ನಲ್ಲಿ ಸುಮಾರು 40 ಕೆ.ಜಿ ತೂಕದ 700 ಬೆಳ್ಳಿ ದೀಪಗಳು ಪತ್ತೆಯಾಗಿವೆ. ಇವುಗಳ ಒಟ್ಟು ಮೌಲ್ಯ ಬರೋಬ್ಬರಿ 15 ಲಕ್ಷ ರೂಪಾಯಿ ಎಂದು ವರದಿಯಾಗಿದೆ.

    ಈ ಘಟನೆ ಸಂಬಂಧ ಕೆಎಸ್‍ಆರ್ ಟಿಸಿಯ ಐರಾವತ ಕ್ಲಬ್ ಕ್ಲಾಸ್ ಬಸ್ ಚಾಲಕ, ನಿರ್ವಾಹಕನನ್ನು ಅಮಾನತು ಮಾಡಲಾಗಿದ್ದು, ಈ ಕುರಿತು ಪ್ರಕರಣ ದಾಖಲಿಸಿಕೊಳ್ಳಲಾಗಿದೆ. ಅಲ್ಲದೇ ಈ ಸಂಬಂಧ ತನಿಖೆಯನ್ನ ಮುಂದುವರಿಸಿದ್ದಾರೆ. ಸದ್ಯ ವಶಪಡಿಸಿಕೊಂಡಿದ್ದ ದೀಪಗಳನ್ನು ವಾಣಿಜ್ಯ ತೆರಿಗೆ ಇಲಾಖೆಗೆ ಹಸ್ತಾಂತರಿಸಲಾಗಿದೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv, ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv